Tag: ನೇತ್ರಾವತಿ ನದಿ

  • ಧರ್ಮಸ್ಥಳ ಅಲ್ಲ ಈಗ ಕನ್ಯಾಡಿಯ ಕಾಡಿನಲ್ಲೂ ಸಿಗಲಿಲ್ಲ ಯಾವುದೇ ಮೂಳೆ!

    ಧರ್ಮಸ್ಥಳ ಅಲ್ಲ ಈಗ ಕನ್ಯಾಡಿಯ ಕಾಡಿನಲ್ಲೂ ಸಿಗಲಿಲ್ಲ ಯಾವುದೇ ಮೂಳೆ!

    ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ (Dharmasthala Mass Burial) ಇಂದು ಕನ್ಯಾಡಿಯಲ್ಲಿ (Kanyadi) ನಡೆದ ಶೋಧ ಕಾರ್ಯ ಅಂತ್ಯಗೊಂಡಿದ್ದು ಅನಾಮಿಕ ಬರಿಗೈಯಲ್ಲಿ ವಾಪಸ್‌ ಆಗಿದ್ದಾನೆ.

    ಇಲ್ಲಿಯವರೆಗೆ ನೇತ್ರಾವತಿ ನದಿ (Netravathi River) ತಟ, ನದಿ ಪಕ್ಕ ಇರುವ ಅರಣ್ಯ, ಬಾಹುಬಲಿ ಬೆಟ್ಟದಲ್ಲಿ ಶೋಧ ಕಾರ್ಯ ನಡೆದಿತ್ತು. ಆದರೆ ಇಂದು ಧರ್ಮಸ್ಥಳದಿಂದ 5 ಕಿ.ಮೀ ದೂರದಲ್ಲಿರುವ ಕನ್ಯಾಡಿಯಲ್ಲಿ ಶೋಧ ನಡೆಸಲಾಯಿತು.

    ಕನ್ಯಾಡಿಯ ಖಾಸಗಿ ತೋಟದ ಪಕ್ಕದ ಅರಣ್ಯ (Forest) ಭಾಗದಲ್ಲಿ ಅನಾಮಿಕ ಶವ ಹೂತಿದ್ದೇನೆ ಎಂದು ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಎ.ಸಿ ಸ್ಟೆಲ್ಲಾ ವರ್ಗೀಸ್ ಸಮ್ಮುಖದಲ್ಲಿ ಹಿಟಾಚಿ ಮೂಲಕ 6 ಅಡಿಯಷ್ಟು ಆಳಕ್ಕೆ ಅಗೆಯಲಾಯಿತು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಇದೊಂದು ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ

    ಮಳೆಯ ನಡುವೆಯೂ ಎಸ್‌ಐಟಿ ತಂಡ ಅನಾಮಿಕ ಹೇಳಿದಂತೆ ಗುಂಡಿ ತೋಡಿತು. ಯಾವುದೇ ಕುರುಹು ಪತ್ತೆಯಾಗದ ಕಾರಣ ಸಂಜೆ ಉತ್ಕನನ ಕೆಲಸವನ್ನು ಸ್ಥಗಿತಗೊಳಿಸಿ ಎಸ್‌ಐಟಿ ಅಧಿಕಾರಿಗಳು ವಾಪಸ್‌ ಆಗಿದ್ದಾರೆ.

  • ಧರ್ಮಸ್ಥಳ ಫೈಲ್ಸ್‌| ಎರಡನೇ ಜಾಗದಲ್ಲಿ ಸಿಗಲಿಲ್ಲ ಯಾವುದೇ ಕಳೇಬರ

    ಧರ್ಮಸ್ಥಳ ಫೈಲ್ಸ್‌| ಎರಡನೇ ಜಾಗದಲ್ಲಿ ಸಿಗಲಿಲ್ಲ ಯಾವುದೇ ಕಳೇಬರ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ (Dharmasthala Mass Burial Case) ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೇಬರ ಶೋಧ ತೀವ್ರಗೊಂಡಿದೆ.

    ಇಂದು ಬೆಳಗ್ಗೆ 11 ಗಂಟೆಯಿಂದ ಸಾಕ್ಷಿ ದೂರುದಾರ ವ್ಯಕ್ತಿ ತೋರಿಸಿದ ಎರಡನೇ ಜಾಗದಲ್ಲಿ ಶೋಧ ಕಾರ್ಯ ನಡೆಯಿತು. ನೇತ್ರಾವತಿ ನದಿ (Netravati River) ಪಕ್ಕದ ದಟ್ಟ ಕಾಡಿನ ಒಳಗಡೆ ಮಧ್ಯಾಹ್ನ 12:30ರವರೆಗೂ ಶೋಧ ಕಾರ್ಯ ನಡೆದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.  ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ | ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರು ತಳುಕು

    ಅರಣ್ಯ (Forest) ಪ್ರವೇಶದ ಆರಂಭದಲ್ಲೇ ಇರುವ ಎರಡನೇ ಜಾಗವಿದ್ದು ಪಂಚಾಯತ್‌ನ ಇಪ್ಪತ್ತು ಮಂದಿ ಕಾರ್ಮಿಕರಿಂದ ಉತ್ಖನನ ಕಾರ್ಯ ನಡೆಯಿತು. ಆರಂಭದಲ್ಲಿ ಉದ್ದಕ್ಕೆ ಆರು ಅಡಿ, ಅಗಲಕ್ಕೆ ಐದು ಅಡಿ ಜಾಗ ಗುರುತಿಸಿ ಅಗೆಯಲಾಯಿತು.

    ಅರಣ್ಯದ ಒಳಗಡೆ ಉತ್ಕನನ ನಡೆಸಲು ಯಂತ್ರ ಬಳಸಲು ಅನುಮತಿ ಇಲ್ಲದ ಕಾರಣ ಕಾರ್ಮಿಕರಿಂದಲೇ ಶೋಧ ಕಾರ್ಯ ನಡೆಸಲಾಯಿತು. ಪುತ್ತೂರಿನ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹಾಗೂ ಎಸ್ಐಟಿ ಎಸ್.ಪಿ ಜಿತೇಂದ್ರ ಕುಮಾರ್ ದಯಾಮ ಖುದ್ದು ಸ್ಥಳದಲ್ಲಿದ್ದಾರೆ.

     

    ಊಟದ ವಿರಾಮದ ನಂತರ  ದೂರುದಾರ  ವ್ಯಕ್ತಿ ತೋರಿಸಿದ ಮೂರನೇ ಜಾಗದಲ್ಲಿ ಅಗೆಯುವ ಕೆಲಸ ಆರಂಭವಾಗಿದೆ.

  • ಮಗುವಿನ ಹುಟ್ಟುಹಬ್ಬ ಆಚರಿಸಿ ನೇತ್ರಾವತಿ ನದಿಗೆ ಜಿಗಿದು ಮಹಿಳೆ ಆತ್ಮಹತ್ಯೆ

    ಮಗುವಿನ ಹುಟ್ಟುಹಬ್ಬ ಆಚರಿಸಿ ನೇತ್ರಾವತಿ ನದಿಗೆ ಜಿಗಿದು ಮಹಿಳೆ ಆತ್ಮಹತ್ಯೆ

    – ಕೋಲಾರ ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಚಾಲಕ ಆತ್ಮಹತ್ಯೆ

    ಮಂಗಳೂರು: ಮಗುವಿನೊಂದಿಗೆ ನೇತ್ರಾವತಿ ನದಿಗೆ (Netravathi River) ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ (Mangaluru) ಹೊರವಲಯದ ಅಡ್ಯಾರ್ ಡ್ಯಾಂ ಬಳಿ ನಡೆದಿದೆ.

    ಅಡ್ಯಾರ್ ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ದುರ್ದೈವಿಗಳು. ಇಬ್ಬರ ಮೃತದೇಹಗಳು ಹರೇಕಳ ಸೇತುವೆ ಬಳಿ ಪತ್ತೆಯಾಗಿವೆ. ಶುಕ್ರವಾರ ಮಧ್ಯಾಹ್ನದಿಂದ ತಾಯಿ ಮಗುವಿನೊಂದಿಗೆ ನಾಪತ್ತೆಯಾಗಿರುವುದಾಗಿ ತಿಳಿದುಬಂದಿತ್ತು.

    ಗುರುವಾರವಷ್ಟೇ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಚೈತ್ರಾ ಆಚರಿಸಿದ್ದರು. ತಾಂಯಿ ಮಗು ನಾಪತ್ತೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದ ಮೂಲಕ ಸಂಬಂಧಿಕರು ಇಬ್ಬರ ಹುಡುಕಾಟ ನಡೆಸಿದ್ದರು ಎನ್ನಲಾಗಿದೆ.

    ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ.

    ಕೋಲಾರ; ಲಾರಿ ನಿಲ್ಲಿಸಿ ಚಾಲಕ ಆತ್ಮಹತ್ಯೆ:
    ಕೋಲಾರದ (Kolar) ನರಸಾಪುರ ಕಾಫಿಡೇ ಬಳಿಯ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿ ಚಾಲಕ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಶ್ರೀನಿವಾಸಪುರ ಮೂಲದ ಮಂಜುನಾಥ್ ಆತ್ಮಹತ್ಯೆಗೆ ಶರಣಾದ ಲಾರಿ ಚಾಲಕ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

  • ಗುರುಪುರ, ನೇತ್ರಾವತಿಯಲ್ಲಿ ಸಂಚರಿಸಲಿದೆ ಬಾರ್ಜ್ – ಬೈಂದೂರಿನಲ್ಲಿ ಮರೀನಾ ಅಭಿವೃದ್ಧಿ

    ಗುರುಪುರ, ನೇತ್ರಾವತಿಯಲ್ಲಿ ಸಂಚರಿಸಲಿದೆ ಬಾರ್ಜ್ – ಬೈಂದೂರಿನಲ್ಲಿ ಮರೀನಾ ಅಭಿವೃದ್ಧಿ

    ಬೆಂಗಳೂರು: ಗುರುಪುರ ಮತ್ತು ನೇತ್ರಾವತಿ ನದಿಗಳ (Netravati River) ಪಾತ್ರದಲ್ಲಿ ಜಲಸಾರಿಗೆ ಸಂಪರ್ಕವನ್ನು ಕಲ್ಪಿಸಲು ಬಾರ್ಜ್‌ಗಳ ಸೇವೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ (Basavaraj Bommai) ಪ್ರಕಟಿಸಿದರು.

    ತಮ್ಮ ಬಜೆಟ್ ಭಾಷಣದಲ್ಲಿ, ಬಾಗಲಕೋಟೆ- ಕಂಕಣವಾಡಿ- ಕದಮ್‌ಪುರ, ಕಲಬುರಗಿ- ಸನ್ನತಿ, ಶಿವಮೊಗ್ಗ- ಕೊಗರು- ಶಿಗ್ಲು, ಮಂಗಳೂರು- ಹಂಗಾರಕಟ್ಟೆಯಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಹೊಸ ಲೈಟ್ ಕಾರ್ಗೋ ಟ್ರಾನ್ಸ್‌ಪೋರ್ಟ್‌ (LCT) ಬೋಟ್ ಸೇವೆಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

    ಮುಖ್ಯಾಂಶಗಳು:
    ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಮಾಜಾಳಿಯಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರನ್ನು ನಿರ್ಮಿಸಲು 275 ಕೋಟಿಯ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಸಾಗರಮಾಲಾ ಯೋಜನೆಗಳಡಿಯಲ್ಲಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

    ಹಂಗಾರಕಟ್ಟೆ ಮತ್ತು ಉಡುಪಿಯಲ್ಲಿ, ಕೊಚ್ಚಿನ್ ಶಿಪ್‌ಯಾರ್ಡ್ಸ್ ಲಿಮಿಟೆಡ್‌ರವರಿಂದ ದೋಣಿ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಹಳೆ ಮಂಗಳೂರು ಬಂದರಿನಲ್ಲಿ ಹೆಚ್ಚುವರಿ ಶಿಪ್‌ಯಾರ್ಡ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಇದು ಕರಾವಳಿ ಪ್ರದೇಶದಲ್ಲಿ ಕೈಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಲಿದೆ.

    ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು (Tourism) ಉತ್ತೇಜಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮರೀನಾವನ್ನು ಅಭಿವೃದ್ಧಿಪಡಿಸಲಾಗುವುದು. ಇದನ್ನೂ ಓದಿ: Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ

    ಮಾನ್ಯ ಪ್ರಧಾನ ಮಂತ್ರಿಗಳ ಆಶಯದಂತೆ, ಬ್ಲೂ ಎಕೊನಾಮಿಯ ಅಭಿವೃದ್ಧಿಗಾಗಿ ಎಡಿಬಿ ಸಹಯೋಗದೊಂದಿಗೆ ಅಂದಾಜು 1,100 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ಉದ್ದೇಶಿಸಿದೆ.

    ಕರಾವಳಿ ಪ್ರದೇಶದಲ್ಲಿ ಜನರ ಸುಗಮ ಸಂಚಾರಕ್ಕಾಗಿ ಮತ್ತು ವಾಣಿಜ್ಯ ವ್ಯವಹಾರಗಳನ್ನು ಉತ್ತಮಗೊಳಿಸಲು ಮಂಗಳೂರು- ಕಾರವಾರ- ಗೋವಾ- ಮುಂಬಯಿ ವಾಟರ್‌ವೇಸ್ ಅನ್ನು ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಭಜರಂಗದಳ ಮುಖಂಡನ ಶವ ಪತ್ತೆ!

    ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಭಜರಂಗದಳ ಮುಖಂಡನ ಶವ ಪತ್ತೆ!

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಭಜರಂಗದಳ (Bajarangdal) ಮುಖಂಡನ ಶವ ಪತ್ತೆಯಾಗಿದೆ.

    ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ (26)ಯವರ ಮೃತದೇಹ ದೊರೆತಿದೆ. ಪಾಣೆಮಂಗಳೂರು (Panemangaluru) ಹಳೆಯ ಸೇತುವೆಯ ಬಳಿ ಪತ್ತೆಯಾಗಿದೆ.

    ಸೇತುವೆಯಲ್ಲಿ ದ್ವಿಚಕ್ರವಾಹನ ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮೃತದೇಹ ಪತ್ತೆಯಾಗಿದೆ.

    ರಾಜೇಶ್ ಪೂಜಾರಿ ಸಾವಿನ ಬಗ್ಗೆ ಸ್ಥಳೀಯವಾಗಿ ಅನುಮಾನ ಎದ್ದಿದ್ದು, ಆತ್ಮಹತ್ಯೆ ಅಥವಾ ಅಪಘಾತವೋ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಇದನ್ನೂ ಓದಿ: ಪಿಜಿ, ಹಾಸ್ಟೆಲ್ ಬಿಟ್ಟು ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ಹುಡ್ಗೀರು – ಮಂಗಳೂರು ಡ್ರಗ್ಸ್‌ ದಂಧೆಯ ರೋಚಕ ಸತ್ಯ ಬಯಲು

    ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನೇತ್ರಾವತಿ ನದಿಗೆ ಹಾರಿದ ಬಸ್ ಚಾಲಕ- ಸ್ಥಳೀಯ ಯುವಕರಿಂದ ರಕ್ಷಣೆ

    ನೇತ್ರಾವತಿ ನದಿಗೆ ಹಾರಿದ ಬಸ್ ಚಾಲಕ- ಸ್ಥಳೀಯ ಯುವಕರಿಂದ ರಕ್ಷಣೆ

    ಮಂಗಳೂರು: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನ ಬಳಿಯ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿದೆ. ಹಾಸನ ಜಿಲ್ಲೆಯ ಕುಮಾರ್ ಮಂಗಳೂರಿನಲ್ಲಿ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇಂದು ಬಂಟ್ವಾಳದ ಗೂಡಿನ ಬಳಿ ಹಳೆ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿದ್ದಾನೆ.

    ಇದನ್ನು ನೋಡಿದ ಗೂಡಿನ ಬಳಿಯ ಮಹಮ್ಮದ್ ಮತ್ತು ಅವರ ಸ್ನೇಹಿತರ ತಂಡ ದೋಣಿಯ ಮೂಲಕ ತೆರಳಿ ಸೇತುವೆಯ ಕಂಬದಲ್ಲಿ ಸಿಲುಕಿಕೊಂಡಿದ್ದ ಕುಮಾರ್ ನನ್ನು ರಕ್ಷಿಸಿ ಕರೆ ತಂದಿದ್ದಾರೆ. ಸದ್ಯ ಯುವಕನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಂಟ್ವಾಳ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ತಂಡ ಹಿಂದೆಯೂ ಇದೇ ರೀತಿ ಹಲವರನ್ನು ರಕ್ಷಣೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

  • ಎಚ್ಚರಿಕೆ ಇದ್ರೂ ನೇತ್ರಾವತಿ ನದಿಗೆ ಹಾರಿ ಯುವಕರಿಂದ ಮೋಜು ಮಸ್ತಿ

    ಎಚ್ಚರಿಕೆ ಇದ್ರೂ ನೇತ್ರಾವತಿ ನದಿಗೆ ಹಾರಿ ಯುವಕರಿಂದ ಮೋಜು ಮಸ್ತಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನದಿ ನೀರಿನ ಹರಿವು ಕಡಿಮೆಯಾಗಿರುವುದರಿಂದ ಬಂಟ್ವಾಳದ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

    ಬಂಟ್ವಾಳದ ಪಾಣೆ ಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದರು. ಶನಿವಾರ ನೇತ್ರಾವತಿ ನದಿಯಲ್ಲಿ ನೀರಿನ ರಭಸ ಜಾಸ್ತಿಯಾಗಿತ್ತು. ಇಂದು ನದಿ ನೀರಿನ ರಭಸ ಹಾಗೂ ಮಳೆಯೂ ಕಡಿಮೆಯಾಗಿದೆ. ಹೀಗಾಗಿ ಪಾಣೆಮಂಗಳೂರಿನ ಹಳೆಯ ಸೇತುವೆಯಲ್ಲಿ ಯುವಕರು ನದಿಗೆ ಹಾರಿ ಈಜಾಡುತ್ತಿದ್ದಾರೆ.

    ಜಿಲ್ಲೆಯಲ್ಲಿ ಇಂದು ಕೂಡ ರೆಡ್ ಅಲರ್ಟ್ ಇದ್ದು, ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ನದಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚಿಸಿದೆ. ಆದರೂ ಯುವಕರು ಈ ರೀತಿ ಅಪಾಯಕಾರಿ ಸಾಹಸ ನಡೆಸಿ ನದಿಗೆ ಹಾರಿ ಈಜಾಡುತ್ತಿದ್ದಾರೆ. ಅನಾಹುತ ಆಗುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

  • ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಭರ್ತಿ, ಮುಳುಗಡೆ ಭೀತಿ- ಇತ್ತ ತುಂಬಿದ ತುಂಗಾ ನದಿ

    ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಭರ್ತಿ, ಮುಳುಗಡೆ ಭೀತಿ- ಇತ್ತ ತುಂಬಿದ ತುಂಗಾ ನದಿ

    -ತುಂಗಾ ನದಿಗೆ ಈಶ್ವರಪ್ಪ ಬಾಗಿನ

    ಮಂಗಳೂರು/ಶಿವಮೊಗ್ಗ: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ.

    ಕಳೆದ ಎರಡು ದಿನದಿಂದ ಕರಾವಳಿ ಹಾಗೂ ಮಲೆನಾಡು, ಪಶ್ಚಿಮ ಘಟ್ಟದಲ್ಲಿ ಹೆಚ್ಚಿನ ಮಳೆಯಾಗಿದೆ. ಇಂದೂ ಕೂಡಾ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆ ನೀರು ಸಮುದ್ರ ಸೇರಲು ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ಹರಿದು ಬರುತ್ತಿದೆ. ಹೀಗಾಗಿ ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಬಳಿ ಇರುವ ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು ಸ್ನಾನಘಟ್ಟದ ಮೇಲ್ಭಾಗದವರೆಗೂ ನದಿ ನೀರು ಬರುತ್ತಿದೆ.

    ನದಿ ನೀರು ಅಪಾಯದ ಮಟ್ಟಮೀರಿ ಹರಿಯುತ್ತಿರೋದ್ರಿಂದ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಭಕ್ತರಿಗೆ ಸಂಪೂರ್ಷವಾಗಿ ನಿಷೇಧ ಹೇರಲಾಗಿದೆ. ಪಶ್ಚಿಮ ಘಟ್ಟದಲ್ಲಿ ಇದೇ ರೀತಿ ಮಳೆ ಮುಂದುವರೆದರೆ ಸ್ನಾನಘಟ್ಟ ಸಂಪೂರ್ಣವಾಗಿ ಮುಖುಗಡೆಯಾಗುವ ಸಾಧ್ಯತೆ ಇದೆ.

    ಈಶ್ವರಪ್ಪ ಬಾಗಿನ: ಕಳೆದೆರೆಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ತುಂಗಾ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಡ್ಯಾಂ ನಿಂದ ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹರಿಯುವ ತುಂಗಾ ನದಿ ಭರ್ತಿಯಾಗಿ ಹರಿಯುತ್ತಿದ್ದು, ಕೋರ್ಪಲಯ್ಯನ ಛತ್ರದ ಬಳಿಯ ಮಂಟಪ ಮುಳುಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಕುಟುಂಬ ಸಮೇತರಾಗಿ ತುಂಗಾ ನದಿಗೆ ಬಾಗಿನ ಅರ್ಪಿಸಿದರು.

    ಈ ವೇಳೆ ಮಾತನಾಡಿದ ಸಚಿವರು, ತುಂಗಾ ನದಿ ಸಂಪೂರ್ಣವಾಗಿ ತುಂಬಿ ಹರಿಯುತ್ತಿರುವುದು ಸಂತಸ ತಂದಿದೆ. ರೈತರ ಮೊಗದಲ್ಲಿ ಹರ್ಷ ಕಾಣುತ್ತಿದ್ದೇವೆ. ಕಳೆದ ಭಾರಿ ನಿರೀಕ್ಷೆ ಮೀರಿ ನೆರೆ ಬಂದ ಹಿನ್ನೆಲೆಯಲ್ಲಿ, ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರಸ್ತೆ ದುರಸ್ತಿ ಸೇರಿದಂತೆ, ಇತರೇ, ಪರಿಹಾರಕ್ಕಾಗಿ ಸ್ಪಂದಿಸಿ, 1500 ಕೋಟಿ ರೂ. ಬಿಡುಗಡೆ ಮಾಡಿದ್ದು, ತುರ್ತು ಪರಿಹಾರ ಕಾರ್ಯ ಕೈಗೊಳ್ಳಲಾಗಿತ್ತು. ಈ ಬಾರಿ ಯಾವುದೇ ತೊಂದರೆ ಇಲ್ಲದಂತೆ ಮಳೆಯಾಗುತ್ತಿದ್ದು, ಯಾವುದೇ ತೊಂದರೆಯಾಗದಂತೆ ತುಂಗೆಗೆ ಬಾಗಿನ ಅರ್ಪಿಸಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.

  • ಮುಳುಗುವ ಭೀತಿಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ

    ಮುಳುಗುವ ಭೀತಿಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ

    – ಸ್ನಾನಘಟ್ಟದ ಬಳಿ ಭಕ್ತರಿಗೆ ಸಂಪೂರ್ಣ ನಿಷೇಧ

    ಮಂಗಳೂರು: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ.

    ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸ್ನಾನಘಟ್ಟದ ಮೇಲ್ಬಾಗದವರೆಗೂ ನೇತ್ರಾವತಿ ನದಿ ನೀರು ಬರುತ್ತಿದೆ. ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವುದರಿಂದ ನೇತ್ರಾವತಿ ಸ್ನಾನ ಘಟ್ಟದ ಬಳಿ ಭಕ್ತರಿಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಪಶ್ಚಿಮ ಘಟ್ಟದಲ್ಲಿ ಇದೇ ರೀತಿ ಮಳೆ ಮುಂದುವರೆದರೆ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗುವ ಸಾಧ್ಯತೆ ಇದೆ. ಈ ಕುರಿತು ಮೆಚ್ಚೆಚ್ಚರಿಕೆ ವಹಿಸಲಾಗಿದ್ದು, ಸ್ನಾನ ಘಟ್ಟದ ಬಳಿ ಯಾರನ್ನೂ ಬಿಡಲಾಗುತ್ತಿಲ್ಲ.

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ, ಧಾರವಾಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಕಟ್ಟೆಚ್ಚರ ವಹಿಸಲಾಗಿದೆ.

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹಿನ್ನೆಲೆ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಣೆ ಮಾಡಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಹಾಗೂ ಜಲಾಶಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಿಸುವಂತೆ ಸೂಚನೆ ನೀಡಿದ್ದಾರೆ. ಕೊಡಗು, ಧಾರವಾಡ, ಬೆಳಗಾವಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಧ್ಯದಲ್ಲೇ ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ತಂಡಗಳನ್ನು ಕಳುಹಿಸಿ ಕೊಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಮಳೆಯಿಂದ ಹಾನಿಗೊಳಗಾದವರಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

  • ಸಿದ್ಧಾರ್ಥ್ ಆತ್ಮಹತ್ಯೆ ಮಾಡ್ಕೊಂಡಿದ್ದ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ

    ಸಿದ್ಧಾರ್ಥ್ ಆತ್ಮಹತ್ಯೆ ಮಾಡ್ಕೊಂಡಿದ್ದ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ

    – ಕಾಫಿ ಡೇ ಸಂಸ್ಥಾಪಕನ ಬಳಿಕ 14 ಮಂದಿ ಸೂಸೈಡ್
    – 55 ಲಕ್ಷ ರೂ. ವೆಚ್ಚದಲ್ಲಿ ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ

    ಮಂಗಳೂರು: ಕೆಫೆ ಕಾಫಿ ಡೇ ಸಂಸ್ಥಾಪಕ, ಕೋಟಿ ಒಡೆಯ ವಿ.ಜಿ. ಸಿದ್ಧಾರ್ಥ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂದ್ದ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ ಭಾಗ್ಯ ಕರುಣಿಸಲಾಗಿದೆ.

    ಹೌದು. ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಒಂದು ವರ್ಷವೇ ಕಳೆದು ಹೋಗಿದೆ. ಮಂಗಳೂರಿನ ಜಪ್ಪಿನಮೊಗರು ಬಳಿಯ ನೇತ್ರಾವತಿ ಸೇತುವೆಯಿಂದ ಹಾರಿ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿನ ದಿನದಿಂದಲೇ ಈ ಸೇತುವೆಗೆ ತಡೆಬೇಲಿ ನಿರ್ಮಿಸಬೇಕೆಂದು ಸಾಕಷ್ಟು ಒತ್ತಾಯ ಕೇಳಿ ಬಂದಿದ್ದು, ರಾಜಕಾರಣಿಗಳು ಕೂಡ ಒಪ್ಪಿಕೊಂಡಿದ್ರು. ಇದನ್ನೂ ಓದಿ: ನೇತ್ರಾವತಿ ನದಿಗೆ ಮತ್ತೊಂದು ಜೀವ ಆಹುತಿ

    ಅಂದಿನಿಂದ ಇಂದಿನವರೆಗೆ ಈ ಸೇತುವೆಯಿಂದ ನದಿಗೆ ಹಾರಿ ಬರೋಬ್ಬರಿ 14 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು. ಈ ಜಾಗವೊಂದು ಸೂಸೈಡ್ ಪಾಯಿಂಟ್ ಆಗಿತ್ತು. ಇದೀಗ ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಸೇತುವೆಗೆ ಕೊನೆಗೂ ತಡೆಬೇಲಿ ಭಾಗ್ಯ ಒದಗಿ ಬಂದಿದೆ. ಇದನ್ನೂ ಓದಿ: ಸಿದ್ಧಾರ್ಥ್ ಕಾಣೆಯಾಗಿದ್ದ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ

    ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾರ್ಯ ಆರಂಭಗೊಂಡಿದೆ. ಸಿದ್ದಾರ್ಥ್ ಆತ್ಮಹತ್ಯೆಯ ಬಳಿಕ ಈ ಸೇತುವೆ ಬಳಿ ಬಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಅನಾಹುತ ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 55 ಲಕ್ಷ ರೂಪಾಯಿ ವೆಚ್ಚದಲ್ಲಿ ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಸೇತುವೆಯ 8ನೇ ಕಂಬದಿಂದ ವ್ಯಕ್ತಿ ನೀರಿಗೆ ಹಾರಿದ್ದನ್ನು ಕಣ್ಣಾರೆ ಕಂಡ ಮೀನುಗಾರ

    ಸೇತುವೆ 800 ಮೀ.ಉದ್ದವಿದೆ. ಸೇತುವೆಯ ತಡೆಗೋಡೆಯ ಮೇಲೆ ರಕ್ಷಣಾ ಬೇಲಿಯು 5 ಅಡಿ ಎತ್ತರವಿದ್ದು, ಬೇಲಿಯ ಮೇಲ್ಗಡೆಯೂ ಹತ್ತಲು ಸಾಧ್ಯವಾಗದಂತೆ ಮೇಲ್ಭಾಗಕ್ಕೂ ನಾಲ್ಕು ಸಾಲು ಮುಳ್ಳು ತಂತಿಯನ್ನು ರಸ್ತೆಯ ಭಾಗಕ್ಕೆ ಬಗ್ಗಿಸಿ ಜೋಡಣೆ ಮಾಡಲಾಗುತ್ತಿದೆ.