Tag: ನೇಮಕಾತಿ ಪತ್ರ

  • 71,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

    71,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

    ನವದೆಹಲಿ: ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳು/ಇಲಾಖೆಗಳಿಗೆ ನೇಮಕಗೊಂಡ 71,000 ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ನೇಮಕಾತಿ ಪತ್ರ (Appointment Letter) ವಿತರಿಸಿದರು.

    ಉದ್ಯೋಗ ಮೇಳದ ಭಾಗವಾಗಿ ದೇಶದ 41 ಭಾಗಗಳಿಂದ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಭಾಗಿಯಾದ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಿಸಿ ಶುಭ ಹಾರೈಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಸರಣಿ ಅಪಘಾತ – KSRTC ಬಸ್‌, ಆಟೋ ಸಂಪೂರ್ಣ ಜಖಂ!

    ಕಾರ್ಯಕ್ರಮದಲ್ಲಿ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಮಾತನಾಡಿ, 71 ಸಾವಿರ ನೇಮಕಾತಿಗಳಲ್ಲಿ 20,901 (29.21%) ಒಬಿಸಿ ಸಮುದಾಯದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲಾಗುತ್ತಿದೆ. 11,355 (15.8%) ಪರಿಶಿಷ್ಟ ಜಾತಿ ಮತ್ತು 6,862 (9.59%) ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ನೇಮಕವಾಗಿದ್ದಾರೆ. 2004ರಿಂದ 2014ಕ್ಕೆ ಹೋಲಿಸಿದರೆ ಕಳೆದ 10 ವರ್ಷಗಳಲ್ಲಿ ಉದ್ಯೋಗದ ಅಂಕಿಅAಶಗಳು 60% ರಿಂದ 70% ರಷ್ಟು ಹೆಚ್ಚಾಗಿದೆ. 2004ರಿಂದ 2014ರವರೆಗೆ 7,22,161 ನೇಮಕಾತಿ ನಡೆದಿದೆ. ಕಳೆದ 10 ವರ್ಷಗಳ ಮೋದಿ ಸರ್ಕಾರದ ಅವಧಿಯಲ್ಲಿ ನೇಮಕಾತಿ ಸಂಖ್ಯೆ ಸುಮಾರು 11 ಲಕ್ಷಕ್ಕೆ ತಲುಪಿದೆ ಎಂದರು. ಇದನ್ನೂ ಓದಿ: Pune | ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ – ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ

    ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಸರ್ಕಾರದ ಎಲ್ಲಾ ನೀತಿಗಳನ್ನು ರೂಪಿಸುವಾಗ ಯುವಕರಿಗೆ ವಿಶೇಷ ಗಮನ ನೀಡಲಾಗುತ್ತದೆ. ಸರ್ಕಾರವು ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನ ನೀತಿಗಳನ್ನು ಬದಲಿಸಿದೆ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಉತ್ತೇಜಿಸಿದೆ. ಇಂದು ನಾವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಮಾರ್ಪಟ್ಟಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Uttar Pradesh | ಖಾಲಿಸ್ತಾನ್‌ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್‌

    ಇಂದು ಭಾರತವು ಮೊಬೈಲ್ ಉತ್ಪಾದನೆಯಲ್ಲಿ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರವಾಗಿದೆ. ನವೀಕರಿಸಬಹುದಾದ ಇಂಧನದಿAದ ಸಾವಯವ ಕೃಷಿಗೆ, ಬಾಹ್ಯಾಕಾಶದಿಂದ ರಕ್ಷಣಾ ಕ್ಷೇತ್ರಕ್ಕೆ, ಪ್ರವಾಸೋದ್ಯಮದಿಂದ ಸ್ವಾಸ್ಥ್ಯ ಕ್ಷೇತ್ರ ಸೇರಿ ಪ್ರತಿಯೊಂದು ಕ್ಷೇತ್ರದಲ್ಲೂ ಅನುಕೂಲವಾಗಿದೆ. ದೇಶವನ್ನು ಮುನ್ನಡೆಸಲು ಯುವ ಪ್ರತಿಭೆಗಳನ್ನು ಬೆಳೆಸುವ ಅಗತ್ಯವಿದೆ ಎಂದರು. ಇದನ್ನೂ ಓದಿ: ಹೊರರಾಜ್ಯದ ಯುವತಿಯರನ್ನ ಕರೆಸಿ ಬೆಂಗ್ಳೂರಲ್ಲಿ ಹೈಟೆಕ್ ವೇಶ್ಯವಾಟಿಕೆ ದಂಧೆ – ಆರೋಪಿ ಅಂದರ್‌

    ನವ ಭಾರತವನ್ನು ನಿರ್ಮಿಸಲು ಆಧುನಿಕ ಶಿಕ್ಷಣ ವ್ಯವಸ್ಥೆಯ ಅಗತ್ಯವಿತ್ತು. ಎನ್‌ಇಪಿ ಮೂಲಕ ದೇಶವು ಈಗ ಆ ದಿಕ್ಕಿನತ್ತ ಸಾಗಿದೆ. ಅಧ್ಯಯನದ ಸಮಯದಲ್ಲಿ ಗ್ರಾಮೀಣ, ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಯುವಕರಿಗೆ ಭಾಷೆ ತಡೆಗೋಡೆಯಾಗುತ್ತಿತ್ತು. ಈಗ ಮಾತೃಭಾಷೆಯಲ್ಲಿ ಶಿಕ್ಷಣ ಮತ್ತು ಪರೀಕ್ಷೆಯ ನೀತಿಯನ್ನು ಮಾಡಿದೆ. ಸರ್ಕಾರವು ಯುವಕರಿಗೆ 13 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಒದಗಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹೆಣ್ಣು ಮಗಳು ಊಹಿಸಿಕೊಂಡು ಈ ರೀತಿಯ ಆರೋಪ ಮಾಡೋಕೆ ಸಾಧ್ಯನಾ? – ಎಂ.ಬಿ ಪಾಟೀಲ್

  • ಜಿ.ಪಂ ಸಿಇಓ ಸಹಿ ನಕಲು ಮಾಡಿ ಎಂಜಿನಿಯರ್‌ಗೆ ನೇಮಕಾತಿ ಪತ್ರ – ಎಫ್‌ಡಿಎ ಮೇಲೆ ಎಫ್‌ಐಆರ್

    ಜಿ.ಪಂ ಸಿಇಓ ಸಹಿ ನಕಲು ಮಾಡಿ ಎಂಜಿನಿಯರ್‌ಗೆ ನೇಮಕಾತಿ ಪತ್ರ – ಎಫ್‌ಡಿಎ ಮೇಲೆ ಎಫ್‌ಐಆರ್

    ರಾಮನಗರ: ಜಿಲ್ಲಾ ಪಂಚಾಯತ್ (Zilla Panchayat) ಎಫ್‌ಡಿಎ (FDA) ಸುಳ್ಳು ಆದೇಶ ಪತ್ರ ಸೃಷ್ಟಿಸಿ ಗುತ್ತಿಗೆ ಆಧಾರದ ಮೇಲೆ ನರೇಗಾ ಎಂಜಿನಿಯರ್ ನೇಮಕ ಮಾಡಿಕೊಂಡಿರುವ ಘಟನೆ ರಾಮನಗರ (Ramanagara) ಜಿಲ್ಲಾ ಪಂಚಾಯತ್‌ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ರಾಮನಗರ ಜಿ.ಪಂ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿರುವ ಅಭಿಷೇಕ್ ಎಂಬಾತ ಮಧು ಎಂಬ ವ್ಯಕ್ತಿಯನ್ನು ಗುತ್ತಿಗೆ ಆಧಾರದಲ್ಲಿ ಎಂಜಿನಿಯರ್ ಕೆಲಸಕ್ಕೆ ನೇಮಕ ಮಾಡುಕೊಳ್ಳುವ ವಿಷಯವಾಗಿ ಜಿ.ಪಂ ಸಿಇಓ ದಿಗ್ವಿಜಯ್ ಬೋಡ್ಕೆರವರ ನಕಲಿ ಸಹಿ ಮಾಡಿ ನಕಲಿ ಆದೇಶ ಪತ್ರ ನೀಡಿರೋದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

    ಕಳೆದ ಮೂರು ತಿಂಗಳಿನಿಂದ ಮಧು ನರೇಗಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಈ ಕುರಿತು ಮಧು ನೇಮಕಾತಿ ಮೇಲೆ ಅನುಮಾನ ವ್ಯಕ್ತಪಡಿಸಿ, ಪರಿಶೀಲನೆ ನಡೆಸಿದ ವೇಳೆ ನಕಲಿ ಆದೇಶದ ಮೂಲಕ ನೇಮಕಾತಿ ಮಾಡಿಕೊಂಡಿರೋದು ಬಯಲಾಗಿದೆ. ಈ ಸಂಬಂಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಡಿಎ ಅಭಿಷೇಕ್ ಹಾಗೂ ಮಧು ಮೇಲೆ ಎಫ್‌ಐಆರ್ ದಾಖಲಾಗಿದೆ. ಇತ್ತ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಅಭಿಷೇಕ್ ತಲೆಮರೆಸಿಕೊಂಡಿದ್ದಾನೆ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬಾಣಂತಿಯರ ಸರಣಿ ಸಾವು ಕೇಸ್ – ಬಳ್ಳಾರಿ ಜಿಲ್ಲಾಸ್ಪತ್ರೆ ಮೇಲೆ ‘ಲೋಕಾ’ ದಾಳಿ

  • ಬ್ಯಾಂಕಿಂಗ್ ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಭಾರತವೂ ಒಂದು- ರೋಜ್‌ಗಾರ್ ಮೇಳದಲ್ಲಿ ಮೋದಿ ಮಾತು

    ಬ್ಯಾಂಕಿಂಗ್ ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಭಾರತವೂ ಒಂದು- ರೋಜ್‌ಗಾರ್ ಮೇಳದಲ್ಲಿ ಮೋದಿ ಮಾತು

    -70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳ ವಿತರಣೆ

    ನವದೆಹಲಿ: ಮುಂದಿನ 25 ವರ್ಷಗಳು ಭಾರತಕ್ಕೆ (India) ಅತ್ಯಂತ ಮಹತ್ವದ್ದಾಗಿದೆ. ಭಾರತವು ಬ್ಯಾಂಕಿಂಗ್ (Banking) ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    ರೋಜ್‌ಗಾರ್ ಮೇಳದ (Rozgar Mela) ಅಡಿಯಲ್ಲಿ 70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳನ್ನು (Appointment Letter) ಪ್ರಧಾನಿ ನರೇಂದ್ರ ಮೋದಿ ವಿತರಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿ ನೇಮಕಾತಿ ಪತ್ರಗಳನ್ನು ನೀಡಿದರು. ಬಳಿಕ ಮಾತನಾಡಿದ ಅವರು, 9 ವರ್ಷಗಳ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನಮ್ಮ ಬ್ಯಾಂಕಿಂಗ್ ಕ್ಷೇತ್ರವು ನಾಶವಾಗಿತ್ತು. ಇಂದು ನಾವು ಡಿಜಿಟಲ್ ವಹಿವಾಟು ಮಾಡಲು ಸಮರ್ಥರಾಗಿದ್ದೇವೆ ಎಂದರು. ಇದನ್ನೂ ಓದಿ: 5 ವರ್ಷಗಳಲ್ಲಿ ಕಾನೂನು ಹೋರಾಟಕ್ಕೆ ಕೇಂದ್ರ ಖರ್ಚು ಮಾಡಿದ್ದೆಷ್ಟು?

    ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಿ ನೌಕರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪವನ್ನು ದೇಶದ ಜನತೆ ಕೈಗೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಎರಡು ಪ್ರಮುಖ ಮಸೀದಿಗಳ ತೆರವಿಗೆ ರೈಲ್ವೆ ಇಲಾಖೆ ನೋಟೀಸ್

    9 ವರ್ಷಗಳ ಹಿಂದೆ 140 ಕೋಟಿ ಜನರಿಗೆ ಫೋನ್ ಬ್ಯಾಂಕಿಂಗ್ ಇರಲಿಲ್ಲ. 2014ರಿಂದ ನಾವು ನಮ್ಮ ಬ್ಯಾಂಕಿಂಗ್ ಕ್ಷೇತ್ರವನ್ನು ಪುನರುಜ್ಜೀವನಗೊಳಿಸಿದ್ದೇವೆ. ದೇಶದಲ್ಲಿ ಸರ್ಕಾರಿ ಬ್ಯಾಂಕ್‌ಗಳ ನಿರ್ವಹಣೆಯನ್ನು ನಾವು ಬಲಪಡಿಸಿದ್ದೇವೆ. ನಾವು ಹಲವಾರು ಸಣ್ಣ ಬ್ಯಾಂಕ್‌ಗಳನ್ನು ಸಂಯೋಜಿಸಿ ದೊಡ್ಡ ಬ್ಯಾಂಕ್‌ಗಳನ್ನು ರಚಿಸಿದ್ದೇವೆ. ಸರ್ಕಾರವು ‘ದಿವಾಳಿ ಸಂಹಿತೆ’ ಕಾನೂನನ್ನು ಮಾಡಿದೆ. ಇದರಿಂದ ಯಾವುದೇ ಬ್ಯಾಂಕ್ ಕನಿಷ್ಠ ನಷ್ಟವನ್ನು ಮಾತ್ರ ಅನುಭವಿಸಬಹುದು ಎಂದರು. ಇದನ್ನೂ ಓದಿ: ಪ.ಬಂಗಾಳದಲ್ಲಿಯೂ ನಡೆದಿತ್ತು ಮಹಿಳೆಯರಿಬ್ಬರ ಅರೆಬೆತ್ತಲೆ ಮೆರವಣಿಗೆ- ವೀಡಿಯೋ ವೈರಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 71 ಸಾವಿರ ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಮೋದಿ

    71 ಸಾವಿರ ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಮೋದಿ

    ನವದೆಹಲಿ: ಕೇಂದ್ರ ಸರ್ಕಾರದ (Government Of India) ರೋಜ್‌ಗಾರ್ ಮೇಳದ (Rozgar Mela) ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕವಾದ 71 ಸಾವಿರ ಉದ್ಯೋಗಿಗಳಿಗೆ ವರ್ಚುವಲ್ ಆಗಿ ಪ್ರಧಾನಿ ಮೋದಿ (Narendra Modi) ನೇಮಕಾತಿ ಪತ್ರಗಳನ್ನ ವಿತರಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನೇಮಕಾತಿ ವ್ಯವಸ್ಥೆಯ ಬದಲಾವಣೆಗಳು ಭ್ರಷ್ಟಾಚಾರಗಳನ್ನು ಕೊನೆಗೊಳಿಸಿವೆ ಎಂದು ವ್ಯಾಖ್ಯಾನಿಸಿದ್ದಾರೆ. ಇದನ್ನೂ ಓದಿ: ರಷ್ಯಾ ಪಡೆ ಹಾರಿಸಿದ 18 ಕ್ಷಿಪಣಿಗಳನ್ನು ಉಡೀಸ್ ಮಾಡಿದ ಉಕ್ರೇನ್

    ದೇಶಾದ್ಯಂತ ಒಟ್ಟು 45 ಕಡೆ ಉದ್ಯೋಗ ಮೇಳ ನಡೆದಿದೆ. ರಾಜ್ಯದಲ್ಲಿ ಹುಬ್ಬಳ್ಳಿ, ಮೈಸೂರು ಹಾಗೂ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆದಿದೆ.

    ಬೆಂಗಳೂರು ಕಾರ್ಯಕ್ರಮದ ನೇತೃತ್ವವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮೈಸೂರು ಕಾರ್ಯಕ್ರಮದ ನೇತೃತ್ವವನ್ನು ಸಚಿವೆ ಶೋಭಾ ಕರಂದ್ಲಾಜೆ ವಹಿಸಿಕೊಂಡಿದ್ದರು. ಮೋದಿ ಭಾಷಣದ ವೇಳೆ ಸಂಸದ ತೇಜಸ್ವಿ ಸೂರ್ಯ ನಿದ್ದೆಗೆ ಜಾರಿದ್ದು ಕಂಡುಬಂದಿತು. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕತಾವಾದಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಮುಜಾಹಿದ್ದೀನ್‌ ಉಗ್ರರು 33 ವರ್ಷಗಳ ಬಳಿಕ ಅರೆಸ್ಟ್‌