Tag: ನೈತಿಕ ಪೊಲೀಸ್ ಗಿರಿ

  • ಅನ್ಯಕೋಮಿನ ಯುವತಿ ತನ್ನ ಗೆಳೆಯನ ಜೊತೆ ಕುಳಿತಿದ್ದಕ್ಕೆ ಕಿರಿಕ್!

    ಅನ್ಯಕೋಮಿನ ಯುವತಿ ತನ್ನ ಗೆಳೆಯನ ಜೊತೆ ಕುಳಿತಿದ್ದಕ್ಕೆ ಕಿರಿಕ್!

    ಬೆಂಗಳೂರು: ಮುಸ್ಲಿಂ ಯುವತಿ (Muslim Girl) ತನ್ನ ಗೆಳೆಯನ ಜೊತೆ ಬೈಕ್‌ ಮೇಲೆ ಕುಳಿತಿದ್ದಕ್ಕೆ ಪುಂಡರ ಗ್ಯಾಂಗ್‌ವೊಂದು ಕಿರಿಕ್‌ ಮಾಡಿ, ಯುವಕನ ಮೇಲೂ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಕಾಲೇಜು ಯುವತಿ (College Girl) ಬೈಕ್‌ ಮೇಲೆ ತನ್ನ ಗೆಳೆಯನ ಬಳಿ ಕುಳಿತಿದ್ದಳು. ಈ ವೇಳೆ ಅಲ್ಲಿಗೆ ಬಂದ ಪುಂಡರ ಗ್ಯಾಂಗ್‌ ಕಿರಿಕ್‌ ಮಾಡಿದೆ. ಕಾಲೇಜಿಗೆ ಹೋಗೋದು ಬಿಟ್ಟು ಇಲ್ಲಿ ಕೂತಿದ್ಯಾ..? ನಿಮ್ಮ ಅಪ್ಪ ಅಮ್ಮನ ನಂಬರ್ ಕೊಡು.. ಮುಸ್ಲಿಂ ಆಗಿ ಈ ರೀತಿ ಮಾಡ್ತಿದ್ಯಾ..? ಇದೇನಾ ನಿಮ್ಮ ಮನೆಯಲ್ಲಿ ಹೇಳಿಕೊಟ್ಟಿದ್ದು ಅಂತ ಪುಂಡರು ಕಿರಿಕ್‌ ಮಾಡಿದ್ದಾರೆ.

    ಅಲ್ಲದೇ ಆ ಯುತಿಯ ಗೆಳೆಯನಿಗೂ ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ʻನಮ್ಮ ಮೋದಿʼ ಎನ್ನುವ ಪೇಜ್‌ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸಾರ್ವಜನಿಕರಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದೆ.

    ಇದು ನೈತಿಕ ಪೊಲೀಸ್ ಗಿರಿ ಅಲ್ವಾ ಸಿಎಂ ಸಿದ್ದರಾಮಯ್ಯನವರೇ? ರಾಜ್ಯದಲ್ಲಿ ಷರಿಯಾ ಕಾನೂನಿ ಜಾರಿ ಮಾಡಲಾಗಿದೆಯೇ? ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಸದ್ಯ ಪೊಲೀಸರು ವಿಡಿಯೋ ಮೂಲದ ಬೆನ್ನುಹತ್ತಿದ್ದು, ಕಿರಿಕ್‌ ಮಾಡಿದ ಪುಂಡರಿಗಾಗಿ ಶೋಧ ನಡೆಸಿದ್ದಾರೆ.

  • ಹಾವೇರಿಯ ಬ್ಯಾಡಗಿ ಪಟ್ಟಣದಲ್ಲಿ ನೈತಿಕ ಪೊಲೀಸ್‌ ಗಿರಿ – 7 ಮಂದಿ ಮುಸ್ಲಿಂ ಯುವಕರು ಅರೆಸ್ಟ್‌

    ಹಾವೇರಿಯ ಬ್ಯಾಡಗಿ ಪಟ್ಟಣದಲ್ಲಿ ನೈತಿಕ ಪೊಲೀಸ್‌ ಗಿರಿ – 7 ಮಂದಿ ಮುಸ್ಲಿಂ ಯುವಕರು ಅರೆಸ್ಟ್‌

    – ಹಿಂದೂ ವ್ಯಕ್ತಿಯೊಂದಿಗೆ ಬೈಕ್‌ನಲ್ಲಿ ಬಂದಿದ್ದಕ್ಕೆ ಮುಸ್ಲಿಂ ಯುವತಿ ಮೇಲೆ ಹಲ್ಲೆ

    ಹಾವೇರಿ: ಹಾನಗಲ್ ನೈತಿಕ ಪೊಲೀಸ್ ಗಿರಿ (Moral Policing) ಹಾಗೂ ಗ್ಯಾಂಗ್ ರೇಪ್ ಪ್ರಕರಣ ಮುನ್ನೆಲೆಯಲ್ಲಿರುವಾಗಲೇ ಬ್ಯಾಡಗಿ ಪಟ್ಟಣದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ‌.

    ಹಿಂದೂ ವ್ಯಕ್ತಿಯೊಬ್ಬನ ಜೊತೆ ಕಾಣಿಸಿಕೊಂಡಿದ್ದರು ಎಂಬ ಕಾರಣಕ್ಕೆ ಮುಸ್ಲಿಂ ಯುವತಿಯ (Muslim Women) ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ಮುಸ್ಲಿಂ ಯುವತಿ ಬ್ಯಾಡಗಿ ತಾಲೂಕು ಅಗಸನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದರು. ತಮ್ಮ ಜೊತೆ ಕೆಲಸ ಮಾಡ್ತಿದ್ದ ಜಗದೀಶ್ ಎಂಬ ವ್ಯಕ್ತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ರಾಮಮಂದಿರದ ಮಂಡಲೋತ್ಸವ ಪೂಜೆಗೆ ರಾಯಚೂರಿನ ವೈದಿಕರಿಬ್ಬರು ಆಯ್ಕೆ

    ಬ್ಯಾಡಗಿ ಪಟ್ಟಣದ ಪುರಸಭೆಯ ಬಳಿಯ ಶಿವನ ದೇವಸ್ಥಾನದ ಬಳಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ. ನೀನು ಯಾಕೆ ಇವನ ಜೊತೆ ಬೈಕ್ ನಲ್ಲಿ ಬಂದೆ? ಎಂದು ಪ್ರಶ್ನಿಸಿ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ‌. ಯುವತಿಯನ್ನ ಎಳೆದಾಡಿ ಕಪಾಳಕ್ಕೆ ಹೊಡೆದು ಸಾರ್ವಜನಿಕ ಸ್ಥಳದಲ್ಲಿ ಅವಮಾನ ಮಾಡಿದ್ದಾರೆ. ಜೀವ ಬೆದರಿಕೆಯನ್ನೂ ಹಾಕಿದ್ದಾರೆಂದು ಆಕೆ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿಗಳೇ ಹೀಗೆಲ್ಲ ಆಗ್ತಿರುತ್ತೆ- ಸಿಎಂಗೆ ಟಾಂಗ್‌ ಕೊಟ್ಟ ಮೋದಿ ವೀಡಿಯೋ ವೈರಲ್‌

    ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ, 7 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ಅಬ್ದುಲ್ ಖಾದರ್ ಮುದಗಲ್, ಮನ್ಸೂರ್ ತಾಂಡೂರು, ಮೆಹಬೂಬಖಾನ್ ಬಡಿಗೇರ, ರೀಯಾಜ್,ಅಲ್ಪಾಜ್ ಬಳಿಗಾರ, ಅಬ್ದುಲ್ ದೇಸೂರ, ಖಾದರ್ ಕಣಕೆ, ಸಲೀಂ ಸಾಬ್ ಖಾಜಿ, ಮಹಬೂಬ್ ಅಲಿ ಹಲಗೇರಿ ಆರೋಪಿಗಳು ಎಂದು ಗುರುತಿಸಲಾಗಿದೆ. ಡಿವೈಎಸ್ಪಿ ಪಾಟೀಲ ನೇತೃತ್ವದಲ್ಲಿ ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠಾಪನಾ ಸಮಾರಂಭಕ್ಕೆ ಕ್ರಿಕೆಟಿಗ ಆರ್.ಅಶ್ವಿನ್‍ಗೆ ಆಹ್ವಾನ 

  • ಮುಸ್ಲಿಂ ಯುವತಿಯೊಂದಿಗೆ ಆಟೋದಲ್ಲಿ ತೆರಳಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಮುಸ್ಲಿಂ ಯುವತಿಯೊಂದಿಗೆ ಆಟೋದಲ್ಲಿ ತೆರಳಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ (Belagavi) ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮುಸ್ಲಿಂ (Muslim) ಯುವತಿಯೊಂದಿಗೆ ಆಟೋದಲ್ಲಿ (Auto) ಹೊರಟಿದ್ದ ಯುವಕನ ಮೇಲೆ ಅನ್ಯಕೋಮಿನ ಗುಂಪೊಂದು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಗರದ ಖಂಜರ್ ಗಲ್ಲಿಯಲ್ಲಿ ನಡೆದಿದೆ.

    ಬೆಳಗಾವಿ ಜಿಲ್ಲೆಯ ಗೋಕಾಕ್ (Gokak) ತಾಲೂಕಿನ ಮಲ್ಲಾಪುರ ಪಿ.ಜಿ ಗ್ರಾಮದ ಜ್ಞಾನೇಶ್ವರ ಎಂಬ ಯುವಕನ ಮೇಲೆ ಅನ್ಯಕೋಮಿನ ಕೆಲ ಯುವಕರು ಹಲ್ಲೆ ನಡೆಸಿದ್ದಾರೆ. ಪೊಲೀಸರ ಎದುರೇ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಬೆಳಗಾವಿಯ ಖಡೇಬಜಾರ್‌ನಲ್ಲಿ ಘಟನೆ ನಡೆದಿದ್ದು, ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕುಕ್ಕರ್‌ನಿಂದ ಹೊಡೆದು ಪ್ರಿಯತಮೆಯ ಕೊಲೆಗೈದ ಪ್ರಿಯಕರ

    ಹಲ್ಲೆಗೊಳಗಾದ ಜ್ಞಾನೇಶ್ವರ ಚಪ್ಪಲಿ ವ್ಯಾಪಾರಿ ಆಗಿದ್ದು, ತನ್ನೂರಿನ ಪರಿಚಯಸ್ಥ ಅನ್ಯಕೋಮಿನ ಯುವತಿಯ ಜೊತೆಗೆ ಬೆಳಗಾವಿ ಬಸ್ ನಿಲ್ದಾಣದಿಂದ ಖಡೇಬಜಾರ್ ಕಡೆಗೆ ಆಟೋದಲ್ಲಿ ತೆರಳುತ್ತಿದ್ದ. ಇದನ್ನು ಗಮನಿಸಿ ಆಟೋ ಹಿಂಬಾಲಿಸಿದ 10ಕ್ಕೂ ಅಧಿಕ ಯುವಕರು, ಅವರಿಬ್ಬರು ಖಡೇಬಜಾರ್‌ಗೆ ಬರುತ್ತಿದ್ದಂತೆ ರಿಕ್ಷಾವನ್ನು ತಡೆದು ನಿಲ್ಲಿಸಿ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇದನ್ನೂ ಓದಿ: ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ ಸರ ಕಳ್ಳತನ

    ಬಳಿಕ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿ ಯುವಕರಿಂದ ಗೂಂಡಾಗಿರಿ ಪ್ರದರ್ಶನ ಮಾಡಲಾಗಿದೆ. ಹಿಂದೂ ಯುವಕನ ಮೇಲೆ ಹಲ್ಲೆಗೈಯುತ್ತಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದ್ದು, ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರಿಂದ ಕೆಲವು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ವಿಮಾನದಲ್ಲಿ ಬಂದು ದುಬಾರಿ ಸೀರೆ ಕದ್ದು ಪರಾರಿಯಾಗ್ತಿದ್ದ ಖತರ್ನಾಕ್ ಲೇಡಿ ಗ್ಯಾಂಗ್ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೈತಿಕ ಪೊಲೀಸ್‍ಗಿರಿ- ಮೂವರು ಆರೋಪಿಗಳ ಬಂಧನ

    ನೈತಿಕ ಪೊಲೀಸ್‍ಗಿರಿ- ಮೂವರು ಆರೋಪಿಗಳ ಬಂಧನ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ (Moodabidire) ಮತ್ತೆ ನೈತಿಕ ಪೊಲೀಸ್ ಗಿರಿ (Moral Policing) ನಡೆದಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಅನ್ಯಕೋಮಿನ ವಿದ್ಯಾರ್ಥಿಯೋರ್ವ ಹಿಂದೂ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದನ್ನು ಪ್ರಶ್ನಿಸಿ ಮೂವರು ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ. ಕಳೆದ ಆಗಸ್ಟ್ 22 ರಂದು ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಈ ಘಟನೆ ನಡೆದಿದೆ. ಅಂದು ರಾತ್ರಿ ಬೆಂಗಳೂರಿಗೆ ತೆರಳಲು ಹಿಂದೂ ವಿದ್ಯಾರ್ಥಿನಿಯೋರ್ವಳು ಮೂಡಬಿದ್ರೆಯ ಕೋಟೆಬಾಗಿಲು ಸಮೀಪ ಇದ್ದು ಆ ವೇಳೆ ಮುಸ್ಲಿಂ ವಿದ್ಯಾರ್ಥಿಯೋರ್ವ ಆಕೆಯೊಂದಿಗೆ ಮಾತನಾಡಿದ್ದ. ಬಳಿಕ ಯುವತಿ ಬಸ್ ಹತ್ತಿ ಬೆಂಗಳೂರಿಗೆ ತೆರಳಿದ್ದಾಳೆ. ಇದನ್ನೂ ಓದಿ: ಮುಂದಿನ ಪ್ರಾಜೆಕ್ಟ್‌ ಗಗನಯಾನಕ್ಕೂ ನಮ್ಮ ಕಂಪನಿಯಲ್ಲಿ ಬಿಡಿಭಾಗ ತಯಾರಿ: ಚಂದ್ರಯಾನ-3 ರಾಕೆಟ್‌ಗೆ ಬಿಡಿಭಾಗ ಪೂರೈಸಿದ್ದ ಬೆಳಗಾವಿ ದೀಪಕ್‌ ಮಾತು

    ಈ ವೇಳೆ ಮುಸ್ಲಿಂ ವಿದ್ಯಾರ್ಥಿಯನ್ನು ಹಿಂಬಾಲಿಸಿಕೊಂಡು ಬಂದ ಮೂವರು ಯುವಕರು ಮೂಡಬಿದ್ರೆಯ ರಾಜೀವ್ ಗಾಂಧಿ ಸಂಕೀರ್ಣದ ಬಳಿ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದಾರೆ. ಇದೀಗ ಮೂವರು ಆರೋಪಿಗಳಾದ ಅಭಿಲಾಷ್, ಪ್ರೇಮ್ ಭಂಡಾರಿ ಹಾಗೂ ಸಂಜಯ್ ನನ್ನು ಪ್ರಕರಣ ದಾಖಲಿಸಿಕೊಂಡ ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಗಳೂರಿನ ಬೀಚ್‌ನಲ್ಲಿ ನೈತಿಕ ಪೊಲೀಸ್‌ಗಿರಿ – ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ಹಲ್ಲೆ

    ಮಂಗಳೂರಿನ ಬೀಚ್‌ನಲ್ಲಿ ನೈತಿಕ ಪೊಲೀಸ್‌ಗಿರಿ – ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ಹಲ್ಲೆ

    ಮಂಗಳೂರು: ನಗರದ ಹೊರವಲಯದ ಸೋಮೇಶ್ವರ ಬೀಚ್‌ನಲ್ಲಿ (Someshwar Beach) ನೈತಿಕ ಪೊಲೀಸ್‌ಗಿರಿ (Moral Policing) ನಡೆದಿದೆ. ಕೇರಳ ಮೂಲದ ವಿದ್ಯಾರ್ಥಿಗಳ (Kerala Students) ಮೇಲೆ ಹಲ್ಲೆ ನಡೆಸಲಾಗಿದೆ.

    ನಗರದ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಕೇರಳದ ಕಣ್ಣೂರಿನ ಯುವಕರು ಹಾಗೂ ಕಾಸರಗೋಡಿನ ಯುವತಿಯರ ಮೇಲೆ ಹಲ್ಲೆ ನಡೆಸಲಾಗಿದೆ.

    ವಿದ್ಯಾರ್ಥಿಗಳು ಸಮುದ್ರ ತೀರಕ್ಕೆ ಹೋಗಿದ್ದ ಸಂದರ್ಭ ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಅವರನ್ನು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ನೈತಿಕ ಪೊಲೀಸ್‌ಗಿರಿ ನಡೆದಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ಅತ್ಯಾಚಾರವಾದರೆ ದೇಶದ ಮೇಲೆ ಅತ್ಯಾಚಾರವಾದಂತೆ: ನಟ ಕಿಶೋರ್

    ಹಲ್ಲೆಯ ವೇಳೆ ಜಾಫರ್ ಶರೀಫ್, ಮುಜೀಬ್ , ಆಶಿಕ್‌ಗೆ ಗಾಯಗಳಾಗಿವೆ. ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅವರೊಂದಿಗಿದ್ದ ವಿದ್ಯಾರ್ಥಿನಿಯರು ವಾಪಸ್ ತಮ್ಮ ಊರಿಗೆ ತೆರಳಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ಪಡೆದಿರುವ ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಲ್ಲೆ ನಡೆಸಿದ ಯುವಕರ ತಂಡದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಇದನ್ನೂ ಓದಿ: ಐದರ ಪೈಕಿ 3 ಗ್ಯಾರಂಟಿ ಆರಂಭದಲ್ಲಿ ಜಾರಿ – ಷರತ್ತುಗಳು ಏನಿರಬಹುದು?

  • ಯುವಕನ ಜೊತೆಗೆ ಪಾರ್ಕ್‍ನಲ್ಲಿ ಕೂತಿದ್ದಕ್ಕೆ 1 ಸಾವಿರ ವಸೂಲಿ- ಪೇದೆ ವಿರುದ್ಧ ಯುವತಿ ದೂರು

    ಯುವಕನ ಜೊತೆಗೆ ಪಾರ್ಕ್‍ನಲ್ಲಿ ಕೂತಿದ್ದಕ್ಕೆ 1 ಸಾವಿರ ವಸೂಲಿ- ಪೇದೆ ವಿರುದ್ಧ ಯುವತಿ ದೂರು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರಿಂದಲೇ ನೈತಿಕ ಪೊಲೀಸ್ ಗಿರಿ (Moral Policing) ನಡೆದಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಸಾರ್ವಜನಿಕ ಸ್ಥಳದಲ್ಲಿ ಕೂರಲು ಅನುಮತಿ ಬೇಕಾ ಎಂಬ ಪ್ರಶ್ನೆಯೊಂದು ಎದ್ದಿದೆ.

    https://twitter.com/ArshaLatif/status/1619927669898100736

    ಹೌದು. ಶನಿವಾರ ಮಧ್ಯಾಹ್ನದ ವೇಳೆ ಯುವತಿ ತನ್ನ ಸ್ನೇಹಿತನ ಜೊತೆ ವೈಟ್‍ಫೀಲ್ಡ್ (Whitefield) ಕುಂದಲಹಳ್ಳಿ ಪಾರ್ಕ್ (Kundalahalli Park) ನಲ್ಲಿ ಕುಳಿತಿದ್ದಳು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸ್ ಪೇದೆ, ಇಲ್ಲಿ ಹಾಗೇ ಕುಳಿತುಕೊಳ್ಳುವ ಹಾಗಿಲ್ಲ ಅಂತಾ ಫೊಟೋ ತೆಗೆದುಕೊಂಡಿದ್ದಾರೆ. ಅಲ್ಲದೆ 1 ಸಾವಿರ ದಂಡ ಹಾಕಿದ್ದಾರಂತೆ. ಇದೀಗ ಹಣ ಪಡೆದ ಪೇದೆ ವಿರುದ್ಧ ಹಾಗೂ ಪೇದೆ ಬಂದಿದ್ದ ಬೈಕ್ ಫೋಟೋ ಸಮೇತ ಟ್ಯಾಗ್ ಮಾಡಿ ಯುವತಿ ಟ್ವಿಟ್ಟರ್ ನಲ್ಲಿ ದೂರು ನೀಡಿದ್ದಾರೆ.

    https://twitter.com/ArshaLatif/status/1619927872139055105

    ಯುವತಿ ಟ್ವಿಟ್ಟರ್ (Twitter) ನಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದೇನು..?: ನಾನು ಬೆಂಗಳೂರಿಗೆ ಭೇಟಿ ನೀಡಿದಾಗ ಆಘಾತಕಾರಿ ಅನುಭವ ಆಯ್ತು. ಜನವರಿ 29 ರಂದು ಮಧ್ಯಾಹ್ನ, ನಾನು, ನನ್ನ ಸ್ನೇಹಿತ ವೈಟ್ ಫೀಲ್ಡ್ ಬಳಿಯ ಕುಂದಲಗಳ್ಳಿ ಕೆರೆಗೆ ಭೇಟಿ ನೀಡಿದ್ದವು. ಅಲ್ಲಿ ನೆರಳಿನಲ್ಲಿ ಕುಳಿತು, ಪ್ರಕೃತಿ ವಿಕ್ಷಣೆ ಮಾಡುತ್ತಿದ್ದೆವು. ಈ ವೇಳೆ ಅಲ್ಲಿಗೆ ಬಂದ ಪೊಲೀಸ್ ಒಬ್ಬರು ನಮ್ಮ ಫೋಟೋಗಳನ್ನು ತೆಗೆಯೋದಕ್ಕೆ ಶುರುಮಾಡಿದರು. ಇಲ್ಲಿ ಕುಳಿತುಕೊಳ್ಳಲು ಅನುಮತಿ ಇಲ್ಲ, ಹೇಗೆ ಒಳಗೆ ಬಂದಿದ್ದೀರಿ, ನಡೀರಿ ಪೊಲೀಸ್ ಠಾಣೆಗೆ ಅಂತಾ ಕಿರುಕುಳ ನೀಡಲು ಪ್ರಾರಂಭಿಸಿದರು. ಇದನ್ನೂ ಓದಿ: ಸ್ಕೂಟರ್‌ನಲ್ಲಿ ಬಂದು ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    https://twitter.com/ArshaLatif/status/1619928241099386884

    ಕೊನೆಗೆ ನಮ್ಮ ಬಳಿ ಒಂದು ಸಾವಿರ ಹಣ ತೆಗೆದುಕೊಂಡು ಅಲ್ಲಿಂದ ಕಳುಹಿಸಿದರು. ಈ ಘಟನೆಯಿಂದ ನಮಗೆ ದಿಗ್ಭ್ರಮೆಯಾಗಿದೆ. ಯಾವುದೇ ತಪ್ಪು ಮಾಡದ ನಾವು ಈ ನೈತಿಕ ಪೊಲೀಸ್‍ಗಿರಿಯನ್ನು ಏಕೆ ಸಹಿಸಿಕೊಳ್ಳಬೇಕು..? ಸಾರ್ವಜನಿಕ ಕೆರೆಯೊಂದರಲ್ಲಿ `ಅನುಮತಿ ಇಲ್ಲದೆ ಕುಳಿತಿದ್ದಕ್ಕಾಗಿ’ ಇಬ್ಬರಿಗೆ ಕಿರುಕುಳ ನೀಡುವ ಹಕ್ಕು ಮತ್ತು ಅವರು ಒಂದೇ ಲಿಂಗದವರಲ್ಲ ಎಂಬ ಕಾರಣಕ್ಕಾಗಿ ಹಣವನ್ನು ಪಡೆದುಕೊಳ್ಳುವ ಹಕ್ಕು ತನಗೆ ಇದೆ ಎಂದು ಈ ಪೊಲೀಸರು ಏಕೆ ಭಾವಿಸಿದರು..? ಅವರ ನಂಬರ್ ಪ್ಲೇಟ್‍ನ ಚಿತ್ರವನ್ನು ಲಗತ್ತಿಸಲಾಗಿದೆ. @BIrCityPolice ದಯವಿಟ್ಟು ಕ್ರಮ ತೆಗೆದುಕೊಳ್ಳಿ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಂಗಳೂರಿನ ಸುರತ್ಕಲ್‍ನಲ್ಲಿ ನೈತಿಕ ಪೊಲೀಸ್‍ಗಿರಿ- 6 ಮಂದಿಯನ್ನು ಬಂಧಿಸಿದ ಖಾಕಿ

    ಮಂಗಳೂರಿನ ಸುರತ್ಕಲ್‍ನಲ್ಲಿ ನೈತಿಕ ಪೊಲೀಸ್‍ಗಿರಿ- 6 ಮಂದಿಯನ್ನು ಬಂಧಿಸಿದ ಖಾಕಿ

    ಮಂಗಳೂರು: ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಮಾಡಿದ 6 ಮಂದಿಯನ್ನು ಬಂಧಿಸಲಾಗಿದೆ. ಪ್ರಹ್ಲಾದ್, ಪ್ರಶಾಂತ್, ಗುರು ಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಬಂಧಿತ ಆರೋಪಿಗಳು.

    ಮಧ್ಯರಾತ್ರಿ ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಒಟ್ಟು 6 ಜನ ಅರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣದ ಬೆನ್ನಲ್ಲೆ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

    ಕೇರಳ ಮೂಲದ ಅನ್ಯ ಧರ್ಮದ ಯುವಕ ಹಾಗೂ ಯುವತಿ ಬೈಕಿನಲ್ಲಿ ಹೋಗುತ್ತಿದ್ದಾಗ ಯುವಕರ ತಂಡವೊಂದು ಫಾಲೋ ಮಾಡಿದೆ. ಅಂತೆಯೇ ಜೋಡಿ ಸುರತ್ಕಲ್ ನ ಕಲ್ಯಾಣಿ ಸಿಟಿ ಪರ್ಲ್ ಅಪಾರ್ಟ್ಮೆಂಟ್ ಬಳಿ ಬರುತ್ತಿದ್ದಂತೆಯೇ ತಂಡ ಯುವಕನಿಗೆ ಥಳಿಸಿದೆ. ಇತ್ತ ಅನ್ಯಧರ್ಮಿಯ ಯುವಕನ ಜೊತೆ ಓಡಾಡುತ್ತೀಯ ಅಂತಾ ಯುವತಿಗೂ ಧಮ್ಕಿ ಹಾಕಲಾಗಿದೆ. ಇದನ್ನೂ ಓದಿ: ಪುನೀತ ನಮನ ಕಾರ್ಯಕ್ರಮ – ಯಾರೆಲ್ಲ ಗಣ್ಯರು ಬರುತ್ತಿದ್ದಾರೆ?

    ಯುವತಿ ವಾಸವಿದ್ದ ಅಪಾರ್ಟ್ಮೆಂಟ್ ಖಾಲಿ ಮಾಡಿ ಮತ್ತೊಂದು ಅಪಾರ್ಟ್ ಮೆಂಟ್ ಗೆ ಶಿಫ್ಟಿಂಗ್ ಮಾಡಲಾಗುತ್ತಿತ್ತು. ಶಿಫ್ಟಿಂಗ್ ಗೆ ಸಹಾಯ ಮಾಡಿ ಯುವಕ ತನ್ನ ಬೈಕಿನಲ್ಲಿ ಯುವತಿಯನ್ನು ಡ್ರಾಪ್ ಮಾಡುತ್ತಿದ್ದ. ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಸ್ನೇಹಿತೆಗೆ ಯುವಕ ಸಹಾಯ ಮಾಡಿದ್ದಾನೆ. ಈ ವೇಳೆ ಯುವಕರ ತಂಡ ಫಾಲೋ ಮಾಡಿ ಥಳಿಸಿದೆ.

    ಘಟನೆ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಹೆಚ್ಚಾಗ್ತಿದೆ ನೈತಿಕ ಪೊಲೀಸ್ ಗಿರಿ – ಪುಂಡ ಪೋಕರಿಗಳಿಗೆ ಕಾನೂನಿನ ಭಯನೇ ಇಲ್ವಾ..?

    ರಾಜ್ಯದಲ್ಲಿ ಹೆಚ್ಚಾಗ್ತಿದೆ ನೈತಿಕ ಪೊಲೀಸ್ ಗಿರಿ – ಪುಂಡ ಪೋಕರಿಗಳಿಗೆ ಕಾನೂನಿನ ಭಯನೇ ಇಲ್ವಾ..?

    – ಸಿಎಂ ಹೇಳಿಕೆಯಿಂದಲೇ ಚಿಗುರಿಕೊಂಡ್ರಾ..?

    ಬೆಂಗಳೂರು: ರಾಜ್ಯದಲ್ಲಿ ಪುಂಡ-ಪೋಕರಿಗಳಿಗೆ ಪೊಲೀಸರು, ಕಾನೂನಿನ ಭಯವೇ ಇಲ್ಲದಂತಾಗಿದೆ. 1 ತಿಂಗಳ ಅವಧಿಯಲ್ಲಿ 6 ನೈತಿಕ ಪೊಲೀಸ್‍ಗಿರಿ ಪ್ರಕರಣಗಳು ವರದಿಯಾಗಿದೆ. ಮಂಗಳೂರು, ಮೂಡಬಿದ್ರೆ, ಮಂಡ್ಯ, ಬೆಂಗಳೂರು ಬಳಿಕ ಈಗ ಬೆಳಗಾವಿ ಸರದಿಯಾಗಿದೆ.

    ಇಂದು ತುಮಕೂರು ನಗರದ ಗುಬ್ಬಿ ಗೇಟ್‍ನಲ್ಲಿ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಎಂಬವರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ. ಕಾರು ಅಡ್ಡ ಹಾಕಿ ಜೊತೆಗೆಯಲ್ಲಿದ್ದ ಮತ್ತೊಬ್ಬ ಕಾರ್ಯಕರ್ತ ಕಿರಣ್ ಅನ್ನೋವ್ರ ಮೇಲೂ ರಾಡ್‍ನಿಂದ ಹಲ್ಲೆ ಮಾಡಿದ್ದಾರೆ. ಗಾಯಗೊಂಡಿರುವ ಮಂಜುಭಾರ್ಗವ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ವ್ಹೀಲಿಂಗ್ ಮಾಡುತ್ತಾ ಕಾರಿಗೆ ಅಡ್ಡ ಬಂದಿದ್ದ ಮೂವರು ಯುವಕರು. ಇದನ್ನು ಪ್ರಶ್ನಿಸಿದ್ದಕ್ಕೆ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ ಅಂತ ಶಾಸಕ ಜ್ಯೋತಿ ಗಣೇಶ್ ಹೇಳಿದ್ದಾರೆ.

    ಅಕ್ಟೋಬರ್ 14ರಂದು ಅನ್ಯಕೋಮಿನ ಯುವತಿಯರೊಂದಿಗೆ ಮಾತಾಡ್ತಿದ್ದ ಯುವಕನ ಮೇಲೆ ಪುಂಡರು ಹಲ್ಲೆಗೆ ಯತ್ನಿಸಿದ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. `ನಿನ್ನ ಹೆಸರೇನು, ಅಡ್ರೆಸ್ ಏನೂ’ ಅಂತ ಯುವತಿಯರಿಗೆ ಅವಾಜ್ ಹಾಕಿದ್ದಾರೆ. ಅಕ್ಟೋಬರ್ 14ರಂದು ರಾಯಭಾಗದ ಯುವಕ ಮತ್ತು ಸಂಕೇಶ್ವರದ ಯುವತಿ ಬೆಳಗಾವಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ನಿಲ್ದಾಣದಲ್ಲಿದ್ದ ಆಟೋ ಚಾಲಕನಲ್ಲಿ ಉದ್ಯಾನವನಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದ್ದರು. ಬಳಿಕ ನಿರ್ಜನ ಪ್ರದೇಶದಲ್ಲಿ ಹಲ್ಲೆ ನಡೆಸಿದ್ದಾರೆ. ಯುವತಿ ದೂರಿನ ಮೇರೆಗೆ ನಾಲ್ವರನ್ನು ಬಂಧಿಸಿರೋದು ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

    ಇಷ್ಟೆಲ್ಲ ನೈತಿಕ ಪೊಲೀಸ್‍ಗಿರಿ ಘಟನೆಗಳು ನಡೀತಿದ್ರೂ ಪೊಲೀಸರೂ ಪುಂಡರನ್ನು ಬಂಧಿಸದೇ ರಾಜೀ ಸಂಧಾನ ಮಾಡಿ ಕಳಿಸ್ತಿದ್ದಾರೆ. ಮಂಗಳೂರಲ್ಲಿ ಅಕ್ಟೋಬರ್ 13ರಂದು ಸಿಎಂ ಮಾತನಾಡಿ, ಸಮಾಜದಲ್ಲಿ ಎಲ್ಲಾ ಧರ್ಮದವರು ಇದ್ದಾರೆ. ಭಾವನೆಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು. ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ – ಪ್ರತಿಕ್ರಿಯೆ ಆಗುತ್ತೆ. ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕೋಕೆ ಆಗಲ್ಲ ಅಂತ ಸಿಎಂ ಸಮರ್ಥಿಸಿಕೊಂಡಿದ್ದರು.

    ಇದು ಪುಂಡರಿಗೆ ರೆಕ್ಕೆ-ಪುಕ್ಕ ಬಲಿಯುವಂತಾಗಿದೆ. ಇತ್ತ ಗೃಹ ಸಚಿವ ಆರಗ ಜ್ಞಾನೇಂದ್ರ ಹಳೇ ಡೈಲಾಗ್ ರಿಪೀಟ್ ಮಾಡಿದ್ದಾರೆ. ಈ ರೀತಿಯ ಪ್ರಕರಣಗಳನ್ನ ಸಹಿಸೋದಿಲ್ಲ. ಎಲ್ಲಾ ಘಟನೆಗಳಲ್ಲೂ ಪೋಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಇದ್ರಲ್ಲಿ ಧರ್ಮದ ಪ್ರಶ್ನೆ ಬರಲ್ಲ. ಕೆಲವರು ಮಾನಸಿಕವಾಗಿ ಹೀಗೆ ಇರ್ತಾರೆ ಅಂತ ಹಾರಿಕೆ ಉತ್ತರ ಕೊಟ್ಟರು.

  • ನೈತಿಕ ಪೊಲೀಸ್ ಗಿರಿ ವರದಿ ಬೆನ್ನಲ್ಲೇ ಐವರ ಬಂಧನ, ಬಿಡುಗಡೆ

    ನೈತಿಕ ಪೊಲೀಸ್ ಗಿರಿ ವರದಿ ಬೆನ್ನಲ್ಲೇ ಐವರ ಬಂಧನ, ಬಿಡುಗಡೆ

    ಮಂಗಳೂರು: ಕಳೆದ ವಾರವಷ್ಟೇ ಬೆಂಗಳೂರಿನಲ್ಲಿ ನೈತಿಕ ಪೊಲೀಸ್‍ಗಿರಿ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಇದು ಮಾಸುವ ಮುನ್ನವೇ ಕೋಮು ಸೂಕ್ಷ್ಮ ಪ್ರದೇಶ ದಕ್ಷಿಣ ಕನ್ನಡದಲ್ಲಿ ಮತ್ತೊಂದು ನೈತಿಕ ಪೊಲೀಸ್‍ಗಿರಿ ಪ್ರಕರಣ ವರದಿ ಆಗಿದೆ.

    ಕಳೆದ ಭಾನುವಾರ ಎರಡು ಕೋಮಿನ ಎಂಬಿಬಿಎಸ್ ವಿದ್ಯಾರ್ಥಿಗಳು (ಯುವಕ, ಯುವತಿಯರು) ಮಲ್ಪೆ ಪ್ರವಾಸ ಮುಗಿಸಿ ಮಂಗಳೂರಿಗೆ ವಾಪಸ್ ಆಗುವಾಗ, ಸುರತ್ಕಲ್ ಬಳಿ ಕಾರು ತಡೆದ ಯುವಕರ ಗುಂಪೊಂದು ಹಲ್ಲೆ ನಡೆಸಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಇನ್ಸ್‍ಪೆಕ್ಟರ್ ಮನವಿಗೂ ಕಿಮ್ಮತ್ತು ನೀಡದ ಪುಂಡರು ದಾಳಿ ನಡೆಸಿದ್ರು.

    ಈ ಬಗ್ಗೆ ಪಬ್ಲಿಕ್ ಟಿವಿ ಇಂದು ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ, ಕಾರ್ಯಾಚರಣೆ ನಡೆಸಿದ ಪೊಲೀಸರು ಸಂಘಟನೆಯೊಂದರ ಐವರನ್ನು ಬಂಧಿಸಿ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಮಂಗಳೂರಿನ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ಇಂತಹ ಘಟನೆ ಮರುಕಳಿಸದ ರೀತಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

    ಇತ್ತ ಸಿದ್ದರಾಮಯ್ಯ ಟ್ವೀಟ್ ಮಾಡಿ, ಸನ್ಮಾನ್ಯ ಮುಖ್ಯಮಂತ್ರಿಗಳೇ ಮಂಗಳೂರಲ್ಲಿ ಇರೋದು ಬಿಜೆಪಿ ಸರ್ಕಾರನಾ..? ತಾಲಿಬಾನ್ ಸರ್ಕಾರನಾ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ

  • ಬಾಯಿಗೆ ಬಂದಂತೆ ಬೈದು ಕಿರಿಕ್‌ – ಸಂಯುಕ್ತ ಬಳಿ ಕ್ಷಮೆ ಕೇಳಿದ ಕವಿತಾ ರೆಡ್ಡಿ

    ಬಾಯಿಗೆ ಬಂದಂತೆ ಬೈದು ಕಿರಿಕ್‌ – ಸಂಯುಕ್ತ ಬಳಿ ಕ್ಷಮೆ ಕೇಳಿದ ಕವಿತಾ ರೆಡ್ಡಿ

    ಬೆಂಗಳೂರು: ಪಾರ್ಕ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ನಟಿ ಸಂಯುಕ್ತ ಹೆಗ್ಡೆ ಮತ್ತು ಗೆಳತಿಯರಿಗೆ ಬಾಯಿಗೆ ಬಂದಂತೆ ಬೈದಿದ್ದ ಕಾಂಗ್ರೆಸ್‌ ನಾಯಕಿ ಕವಿತಾ ರೆಡ್ಡಿ ಈಗ ಬಹಿರಂಗ ಕ್ಷಮೆಯಾಚಿಸಿದ್ದಾರೆ.

    ಫೇಸ್‌ಬುಕ್‌ನಲ್ಲಿ ವಿಡಿಯೋ ಪೋಸ್ಟ್‌ ಮಾಡಿದ ಅವರು, ನನಗೆ ನನ್ನ ತಪ್ಪು ಗೊತ್ತಾಗಿದೆ. ನೈತಿಕ ಪೊಲೀಸ್‌ಗಿರಿಯನ್ನು ನಾನು ಯಾವಾಗಲೂ ವಿರೋಧಿಸುತ್ತೇನೆ. ಪ್ರಗತಿಪರ ಮಹಿಳೆಯಾಗಿ ಈ ವಿಷಯದಲ್ಲಿ ಸಂಯುಕ್ತಾ ಹೆಗಡೆ ಮತ್ತು ಇಬ್ಬರು ಸ್ನೇಹಿತರ ಜೊತೆ ನಾನು ಹಾಗೂ ಸಾರ್ವಜನಿಕರು ನಡೆದುಕೊಂಡ ಬಗೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

    ಕವಿತಾ ರೆಡ್ಡಿ ಅವರ ಕ್ಷಮೆಯನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ಸಂಯುಕ್ತ ಹೆಗ್ಡೆ ಟ್ವೀಟ್‌ ಮಾಡಿದ್ದು ಕಿರಿಕ್‌ ಪ್ರಕರಣ ಅಂತ್ಯ ಕಂಡಿದೆ.

    ನಡೆದಿದ್ದೇನು?
    ಬೆಂಗಳೂರಿನ ಅಗರ ಉದ್ಯಾನವನದಲ್ಲಿ ಸಂಯುಕ್ತಾ ಹೆಗಡೆ ಸ್ನೇಹಿತರೊಂದಿಗೆ ಹುಲಾ ಹೂಪ್ ಅಭ್ಯಾಸ ಮಾಡುತ್ತಿದ್ದರು. ಸಾಮಾಜಿಕ ಅಂತರ ಕಾಪಾಡಿಕೊಂಡು ಸಂಯುಕ್ತಾ ಮತ್ತು ಅವರ ಸ್ನೇಹಿತರು ವರ್ಕೌಟ್ ಮಾಡುತ್ತಿದ್ದರೂ ಕೂಡ ಕವಿತಾ ರೆಡ್ಡಿ ಸಂಯುಕ್ತಾಗೆ ಬೈಯ್ಯುತ್ತಿದ್ದರು. ಈ ವಿಚಾರ ನಟಿ ಸಂಯುಕ್ತ ಹೆಗ್ಡೆ ಪ್ರತಿಕ್ರಿಯಿಸಿದ್ದಾಗ ನಿಮ್ಮ ಮೇಲೆ ಡ್ರಗ್‌ ಕೇಸ್‌ ಫಿಟ್‌ ಮಾಡುತ್ತೇನೆ ಎಂದು ಗದರಿದ್ದರು. ಅಷ್ಟೇ ಅಲ್ಲದೇ ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಾರೆ ಎಂದು ಕವಿತಾ ರೆಡ್ಡಿ ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಅಲ್ಲಿದ್ದ ಸ್ಥಳೀಯರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟ್ ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದರು.

    https://twitter.com/ShobhaBJP/status/1302112068565266432

    ನಂತರ ಏನಾಯ್ತು?
    ಸಂಯುಕ್ತ ಹೆಗ್ಡೆ ಲೈವ್‌ ವಿಡಿಯೋ ಮಾಡಿ ನಾವು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದರು. ಅಷ್ಟೇ ಅಲ್ಲದೇ ಕವಿತಾ ರೆಡ್ಡಿ ತನ್ನ ಗೆಳತಿಗೆ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ಅಪ್ಲೋಡ್‌ ಮಾಡಿದ್ದರು. ಈ ಕುರಿತು ಟ್ವಿಟ್ಟರ್ ನಲ್ಲಿ ವಿಡಿಯೋ ಹಾಕಿ ಕಿಡಿ ಕಾರಿದ್ದ ಅವರು ನಮ್ಮ ದೇಶದ ಭವಿಷ್ಯವು ಇಂದು ನಾವು ಏನು ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ. ಅಗರ ಕೆರೆ ಬಳಿಯ ಉದ್ಯಾನವನದಲ್ಲಿ ಕವಿತಾ ರೆಡ್ಡಿ ನಮ್ಮನ್ನು ನಿಂದಿಸಿ, ಅಸಹ್ಯಕರವಾಗಿ ವರ್ತಿಸಿದರು. ಇದಕ್ಕೆ ಹೆಚ್ಚಿನ ವಿಡಿಯೋ ಪುರಾವೆಗಳು ಸಹ ಇವೆ. ಈ ಕುರಿತು ಗಮನಹರಿಸಬೇಕೆಂದು ನಾನು ವಿನಂತಿಸುತ್ತೇನೆ ಎಂದು ಬೆಂಗಳೂರು ಪೊಲೀಸರಿಗೆ ಹಾಗೂ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದರು. ದೂರಿನ ಬಳಿಕ ಎಫ್‌ಐಆರ್‌ ಸಹ ದಾಖಲಾಗಿತ್ತು.

    ನೆಟ್ಟಿಗರಿಂದ ವ್ಯಾಪಕ ಬೆಂಬಲ:
    ಕವಿತಾ ರೆಡ್ಡಿ ಹೊಡೆಯುತ್ತಿರುವ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ನೆಟ್ಟಿಗರು ಸಂಯುಕ್ತ ಹೆಗ್ಡೆ ಪರ ಅಭಿಪ್ರಾಯ ಹಂಚಿಕೊಳ್ಳಲು ಆರಂಭಿಸಿದರು. ಶೋಭಾ ಕರಂದ್ಲಾಜೆ, ನಟಿ ರಮ್ಯಾ, ಕಾಜಲ್‌ ಅಗರ್‌ವಾಲ್‌, ಜಗ್ಗೇಶ್, ಹಿತಾ ಚಂದ್ರಶೇಖರ್, ಮೇಘನಾ, ಸಂತೋಷ್ ಆನಂದರಾಮ್, ಸಿಂಪಲ್ ಸುನಿ ಸೇರಿದಂತೆ ಅನೇಕರು ಕವಿತಾ ರೆಡ್ಡಿ ನಡೆ ವಿರೋಧಿಸಿ ಟ್ವೀಟ್‌ ಮಾಡಿದ್ದರು.