Tag: ನೊಣ

  • ವ್ಯಕ್ತಿಯ ಕರುಳಲ್ಲಿ ನೊಣ ಕಂಡು ದಂಗಾದ ವೈದ್ಯರು!

    ವ್ಯಕ್ತಿಯ ಕರುಳಲ್ಲಿ ನೊಣ ಕಂಡು ದಂಗಾದ ವೈದ್ಯರು!

    ನ್ಯೂಯಾರ್ಕ್: ಅಮೆರಿಕಾದ ಮಿಸೌರಿಯಲ್ಲಿ 63 ವರ್ಷ ವಯಸ್ಸಿನ ರೋಗಿಯ ದೊಡ್ಡ ಕರುಳಿನೊಳಗೆ  (Intestines) ನೊಣ  ಇರುವುದನ್ನು ಕಂಡು ವೈದ್ಯರೇ ದಂಗಾಗಿದ್ದಾರೆ.

    ಈ ನೊಣ (House Fly) ಹೊಟ್ಟೆಯೊಳಗೆ ಹೇಗೆ ಸೇರಿಕೊಂಡಿದೆ ಎಂಬುದೇ ಇದೀಗ ಯಕ್ಷ ಪ್ರಶ್ನೆಯಾಗಿದೆ. ಯಾಕೆಂದರೆ ರೋಗಿಗೆ ನೊಣವನ್ನು ನುಂಗಿರುವಂತಹ ಯಾವುದೇ ಸಂದರ್ಭ ನೆನಪಿಲ್ಲ. ಅಲ್ಲದೇ ಅವರು ಯಾವುದೇ ಅಸ್ವಸ್ಥತೆಯ ಲಕ್ಷಣ ಕಾಣಿಸಿಕೊಂಡಿಲ್ಲ ಎಂದು ಮಿಸೌರಿ ವಿಶ್ವವಿದ್ಯಾನಿಲಯದ ಗ್ಯಾಸ್ಟ್ರೋಎಂಟರಾಲಜಿಯ ಮುಖ್ಯಸ್ಥ ಮ್ಯಾಥ್ಯೂ ಬೆಚ್ಟೋಲ್ಡ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

    ರೋಗಿಯು ಆರೋಗ್ಯ ಪರೀಕ್ಷೆಯ ಎರಡು ದಿನಗಳ ಹಿಂದೆ ಪಿಜ್ಜಾ ಮತ್ತು ಲೆಟಿಸ್ ಅನ್ನು ಸೇವಿಸಿರುವುದಾಗಿ ತಿಳಿಸಿದ್ದಾರೆ. ಆದರೆ ತಾನು ಸೇವಿಸಿದ ಆಹಾರದಲ್ಲಿ ನೊಣ ಕಂಡ ನೆನಪಿಲ್ಲ. ಇದು ಕೊಲೊನೋಸ್ಕೋಪಿ ಸಮಯದಲ್ಲಿ ಅತ್ಯಂತ ಅಪರೂಪದ ಆವಿಷ್ಕಾರ ಎಂದು ವಿವರಿಸುತ್ತದೆ ಎಂದು ಅಮೆರಿಕನ್ ಜರ್ನಲ್ ಆಫ್ ಗ್ಯಾಸ್ಟ್ರೋಎಂಟರಾಲಜಿಯ ಸಂಶೋಧನೆಯಲ್ಲಿ ವರದಿಯಾಗಿದೆ. ಇದನ್ನೂ ಓದಿ: ಶಕುಂತಲೆ ಪ್ರೇಮ ಬಯಸಿ ಹೊರಟ ʻದುಷ್ಯಂತʼನ ಬದಕು ಕೊಲೆಯಲ್ಲಿ ಅಂತ್ಯ – ಡೇಟಿಂಗ್‌ ಆ್ಯಪ್‌ ಪ್ರಿಯತಮೆಗೆ ಜೀವಾವಧಿ ಶಿಕ್ಷೆ

    ರೋಗಿಯು ಆಕಸ್ಮಿಕವಾಗಿ ಅದನ್ನು ನುಂಗಿದ್ದಾನೆಯೋ ಅಥವಾ ಕೆಳಗಿನಿಂದ ನೊಣ ಪ್ರವೇಶಿಸಿದೆಯೋ ಎಂಬ ಪ್ರಶ್ನೆಯೂ ಎದ್ದಿದೆ. ಯಾಕೆಂದರೆ ನೊಣ ಕರುಳು ಸೇರಿಕೊಳ್ಳಲು ಈ ಎರಡು ಸಾಧ್ಯತೆಗಳಿವೆ. ವ್ಯಕ್ತಿಯು ನೊಣವನ್ನು ನುಂಗಿರುವ ಸಾಧ್ಯತೆ ಕಡಿಮೆ ಇದೆ. ಕೆಳಗಿನಿಂದ ಬಂದಿದ್ದರೆ ನೊಣವು ದೊಡ್ಡ ಕರುಳಿನಲ್ಲಿ ಕತ್ತಲೆಯಾದ ಮತ್ತು ಅಂಕುಡೊಂಕಾದ ಮಾರ್ಗವನ್ನು ನ್ಯಾವಿಗೇಟ್ ಮಾಡಬೇಕಾಗಿತ್ತು. ಆದರೆ ಇಲ್ಲಿ ಇದು ಕೂಡ ಅಸಂಭವವೆಂದು ತೋರುತ್ತದೆ ಎಂದು ಡಾ. ಬೆಚ್ಟೋಲ್ಡ್ ಹೇಳಿದರು.

    ಒಟ್ಟಿನಲ್ಲಿ ಜೀರ್ಣಾಂಗವ್ಯೂಹದ ಮೂಲಕ ಈ ನೊಣ ಹೇಗೆ ಜೀವಂತವಾಗಿ ಉಳಿದುಕೊಂಡಿತು ಎಂದು ಇಡೀ ವೈದ್ಯಲೋಕವೇ ತಲೆಕೆಡಿಸಿಕೊಂಡಿದೆ.

  • ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು – ನೊಣಕ್ಕಂಜಿ ಊರು ತೊರೆಯಲಾರಂಭಿಸಿದ ಸಾರ್ವಜನಿಕರು

    ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು – ನೊಣಕ್ಕಂಜಿ ಊರು ತೊರೆಯಲಾರಂಭಿಸಿದ ಸಾರ್ವಜನಿಕರು

    ಗದಗ: ತಾಲೂಕಿನ ಹರ್ತಿ ಗ್ರಾಮದ ಜನರ ಜೀವನ ದುಸ್ತರವಾಗಿದೆ. ಗ್ರಾಮೀಣ ಭಾಷೆಐಲ್ಲಿ ಹೇಳುವುದಾದರೆ, ದಂಡಿನ ಗುಂಡಿಗೆ ಹೆದರಲಿಲ್ಲಾ, ದಾಳಿಗೆ ಹೆದರಲಿಲ್ಲಾ, ಆದರೆ ನೊಣಗಳ ಹಿಂಡಿಗೆ ಹೆದರುವಂತಾಗಿದೆ.

    ಈ ಗ್ರಾಮದ ಜನ ಏನು ತಪ್ಪು ಮಾಡಿರುವರೋ ಗೊತ್ತಿಲ್ಲ. ಈ ಹಳ್ಳಿಗೆ ವೈರಿಗಳ ದಂಡೊಂದು ಲಗ್ಗೆ ಇಟ್ಟು ನಿತ್ಯ ಕಾಟ ಕೊಡುತ್ತಿವೆ. ಆ ವೈರಿಗಳ ಕಾಟಕ್ಕೆ ಇಲ್ಲಿನ ಜನ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಮನೆ ಒಳಗೆ, ಹೊರಗೆ ಎಲ್ಲಿ ಕೂತರು ಸಮಾಧಾನವೇ ಇಲ್ಲದಂತಾಗಿದೆ. ಊಟ, ನಿದ್ರೆ, ವಿಶ್ರಾಂತಿಗೂ ಬಿಡಲ್ಲಾ. ವೈರಿಗಳ ಆಟೋಟಪಕ್ಕೆ ಊರಿನ ಜನ ಬೇಸತ್ತು ಹೋಗಿದ್ದಾರೆ.

    ಹರ್ತಿ ಗ್ರಾಮದ ಜನರ ಪರಸ್ಥಿತಿ ನಾಲ್ಕೈದು ತಿಂಗಳು ಹೇಳ ತೀರದಾಗಿದೆ. ಕಾರಣ ಊರ ಪಕ್ಕದ ಕೋಳಿ ಫಾರ್ಮ್ ನಿಂದ ಲಗ್ಗೆ ಇಟ್ಟ ಈಗಗಳ ದಂಡುಪಾಳ್ಯ, ಈ ಜನರ ನೆಮ್ಮದಿ ಹಾಳು ಮಾಡಿದೆ. ಒಂದಡೆ ಕೊರೊನಾ ಹಾವಳಿ, ಮತ್ತೊಂದಡೆ ನೊಣಗಳ ಹಾವಳಿಯಿಂದ ಅನಾರೋಗ್ಯಕ್ಕೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಾರೆ. ಮಾವು, ಬೇವು ಹಣ್ಣಿನ ಸೀಜನ್‍ನಲ್ಲಿ ನೊಣಗಳು ಹೆಚ್ಚು ಇರುತ್ತವೆ. ಆದರೆ ಮಳೆಗಾಲದಲ್ಲೂ ಎಲ್ಲಿ ಕುಂತರೂ ಸಮಾಧಾನ ಆಗುವುದಿಲ್ಲ. ಅಡಿಗೆ ಮಾಡಿ ಊಟ ಮಾಡಲಿಕ್ಕೂ ಆಗುತ್ತಿಲ್ಲಾ, ನೀರು ಕುಡಿಯಲು ಆಗುತ್ತಿಲ್ಲ. ಅಂಗಡಿ, ಹೋಟೆಲ್ ನವರ ಪರಸ್ಥಿತಿ ನೋಣ ಹೊಡೆಯುವುದೇ ಕಾಯಕವಾಗಿದೆ.

    ಮಕ್ಕಳು, ವೃದ್ಧರ ಪರಸ್ಥಿತಿ ಕೇಳತೀರದು. ಜಾನುವಾರುಗಳ ಮೇಲು ಜೇನು ಹುಳುವಿನಂತೆ ಕೂಡಿರುತ್ತವೆ. ಇದರಿಂದ ಗ್ರಾಮದಲ್ಲಿ ಅನೇಕರು ವಾಂತಿ, ಬೇಧಿ, ಜ್ವರ ಹೀಗೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಬೇಸಿಗೆಯಲ್ಲಿ ಗಾಳಿ ಬೀಸಿಕೊಂಡಂತೆ ಮಳೆಗಾಲದಲ್ಲೂ ನೊಣಗಳ ಕಾಟಕ್ಕೆ ಗಾಳಿ ಬೀಸಿಕೊಳ್ಳಬೇಕಾದ ಪರಿಸ್ಥಿತಿ ಇವರದ್ದಾಗಿದೆ. ಕೊರೊನಾ ಸಂದರ್ಭದಲ್ಲಿ ಮಕ್ಕಳನ್ನು ಕಟ್ಟಿಕೊಂಡು ವಾಸಿಸದೇ ಊರು ತೊರೆಯುವ ಸಂದರ್ಭ ಬಂದಿದೆ. ಅಧಿಕಾರಿಗಳು ಇತ್ತಕಡೆ ಗಮನ ಹರಿಸಿ, ಕೋಳಿ ಫಾರ್ಮ್‍ಗಳನ್ನು ಬಂದ್ ಮಾಡಿ, ಜನರ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ತೊಂದರೆಗಳನ್ನು ತಪ್ಪಿಸಬೇಕು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

    ಈ ಕೋಳಿ ಫಾರ್ಮ್ ಆಗಿ ನಾಲ್ಕೈದು ವರ್ಷಗಳಿಂದ ಆಗಾಗ ಇದೇ ಸಮಸ್ಯೆ ಎದುರಿಸುತ್ತಿದೆ. ಆದರೆ ಇತ್ತೀಚಿಗೆ ನೊಣಗಳ ಹಾವಳಿ ತುಂಬಾನೆ ಆಗಿದ್ದು, ನೊಣಗಳ ಕಾಟಕ್ಕೆ ಜನ ಸುಸ್ತಾಗಿದ್ದಾರೆ. ಊರಾಚೆಯ ಆಂಧ್ರ ಪ್ರದೇಶ ಮೂಲದ ಪ್ರಭಾವಿ ಗುತ್ತಿಗೆದಾರ ಸುಬ್ಬಾರೆಡ್ಡಿ ಸಂಬಂಧಿಗಳ ಈ ಕೋಳಿ ಫಾರ್ಮ್ ನಲ್ಲಿ ಸ್ವಚ್ಛತೆ, ಔಷಧ ಸಿಂಪಡಣೆ, ತ್ಯಾಜ್ಯ ವಿಲೇವಾರಿ ಸರಿಯಾದ ನಿರ್ವಹಣೆ ಇಲ್ಲದ ಕಾರಣ ನೊಣಗಳು ಹೆಚ್ಚಾಗಿ ಹರ್ತಿ ಜನರನ್ನು ಕಾಡತೊಡಗಿವೆ. ಸತ್ತ ಕೋಳಿಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ ಎಂಬ ಆರೋಪಿಸಿದ್ದಾರೆ.

    ಇತ್ತೀಚಿಗೆ ಅತೀ ಹೆಚ್ಚು ನೊಣಗಳು ಉದ್ಭವಿಸಿ ಜನರ ನಿದ್ದೆಗೆಡಿಸಿದೆ. ಪಿಡಿಓ, ಅಧ್ಯಕ್ಷರು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಎಲ್ಲರಿಗೂ ಹೇಳಿದರೂ ನೊಣಗಳು ಕಡಿಮೆ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದು ಪ್ರಭಾವಿಯೊಬ್ಬರ ಫಾರ್ಮ್ ಆಗಿದ್ದರಿಂದ ಯಾರು ಇವರ ಗೋಜಿಗೆ ಹೊಗುತ್ತಿಲ್ಲ. ಗ್ರಾಮ ಪಂಚಾಯತ ನಿಂದ ಕೋಳಿ ಫಾರ್ಮ್‍ಗೆ ಕೇವಲ ಸೂಚನೆ ನೀಡ್ತಾರೆ, ಆದ್ರೆ ಯಾವುದೆ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಜನ್ರಿಗೆ ಮಾರಕವಾಗುವ ಈ ಕೋಳಿ ಫಾರ್ಮ್‍ಗಳನ್ನ ಬಂದ್ ಮಾಡಬೇಕು. ಕೊರೊನಾ ಸಂದರ್ಭದಲ್ಲಿ ಜನ-ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂಬುದು ಎಲ್ಲರ ಬೇಡಿಕೆಯಾಗಿದೆ. ಇದನ್ನೂ ಓದಿ: ಸಿಎಂ ಖುರ್ಚಿಗಾಗಿ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಈಗಲೇ ಕುಸ್ತಿ ಶುರುವಾಗಿದೆ: ಕಾರಜೋಳ

  • ಕುಂತ್ರು ನಿಂತ್ರು ಬಿಡಂಗಿಲ್ಲ, ಊಟನೂ ತಿನ್ನಂಗಿಲ್ಲ- ಮುಳಬಾಗಿಲು ಜನತೆಗೆ ಮುಕ್ತಿ ಎಂದು?

    ಕುಂತ್ರು ನಿಂತ್ರು ಬಿಡಂಗಿಲ್ಲ, ಊಟನೂ ತಿನ್ನಂಗಿಲ್ಲ- ಮುಳಬಾಗಿಲು ಜನತೆಗೆ ಮುಕ್ತಿ ಎಂದು?

    ಕೋಲಾರ: `ಈಗ’ ಸಿನಿಮಾದಲ್ಲಿ ನೊಣದ ಕಾಟವನ್ನು ಸುದೀಪ್ ಎದುರಿಸಿದಂತೆ ಸದ್ಯ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಯಳಗೊಂಡಹಳ್ಳಿ ಜನರು ಎದುರಿಸುತ್ತಿದ್ದಾರೆ.

    ಕಳೆದ ಹದಿನೈದು ದಿನಗಳಿಂದ ಜನರು ರಾತ್ರಿ ನಿದ್ದೆ ಮಾಡುತ್ತಿಲ್ಲ, ಕೂತಲ್ಲಿ ಕೂರುತ್ತಿಲ್ಲ, ನಿಂತಲ್ಲಿ ನಿಲ್ಲುತ್ತಿಲ್ಲ. ಮನೆ ಬಾಗಿಲನ್ನು ತಗೆದು ಒಳಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ನೊಣಗಳ ದಾಳಿಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಒಂದು ಕಡೆ ಕುಳಿತು ಊಟ ಮಾಡುವಂತಿಲ್ಲಾ, ನೀರು ಕುಡಿಯುವಂತಿಲ್ಲ. ಮನೆಯಿಂದ ಹೊರಗೆ ಬಂದರೆ ಸಾಕು, ಲಕ್ಷಾಂತರ ನೊಣಗಳು ಜನರ ಮೇಲೆ ದಾಳಿ ಮಾಡುತ್ತವೆ. ಅಡುಗೆ ಮನೆಯಲ್ಲೂ ಸಹ ನೊಣಗಳ ಕಾಟ ಹೆಚ್ಚಾಗಿದೆ.

    ಸಮಯಕ್ಕೆ ಸರಿಯಾಗಿ ಊಟ ನಿದ್ದೆಯಿಲ್ಲದೆ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ನೊಣಗಳ ದಾಳಿಯಿಂದ ಏನೆಲ್ಲಾ ರೋಗ ಬರುತ್ತದೋ ಎನ್ನುವ ಭೀತಿಯನ್ನು ಗ್ರಾಮಸ್ಥರು ಎದುರಿಸುತ್ತಿದ್ದಾರೆ. ಸದ್ಯ ಗ್ರಾಮದ ಕೆಲವರು ವಿವಿಧ ಕಾಯಿಗಳಿಗೆ ತುತ್ತಾಗಿದ್ದು, ಮತ್ತಷ್ಟು ಆತಂಕದ ವಾತಾವರಣ ನಿರ್ಮಾಣವಾಗಿದೆ.

    ನೋಣ ಹೆಚ್ಚಾಗಿದ್ದು ಏಕೆ:
    ನೊಣಗಳ ಕಾಟ ಹೆಚ್ಚಾಗಲು ಕಾರಣ ಗ್ರಾಮದ ಬಳಿಯ ಆರ್.ವಿ.ಬ್ರೀಡಿಂಗ್ ಕೋಳಿ ಫಾರ್ಮ್. ಈ ಕುರಿತು ಕೋಳಿ ಫಾರ್ಮ್ ಮಾಲೀಕರಿಗೆ ತಿಳಿಸಿದ್ದರೂ ಅವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇಷ್ಟೇ ಅಲ್ಲದೇ ಆರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯ್ತಿಗೆ ದೂರು ಕೊಟ್ಟಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಒಂದು ವೇಳೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕೋಳಿ ಫಾರ್ಮ್ ಮಾಲೀಕರು ಕ್ರಮ ಕೈಗೊಳ್ಳದಿದ್ದರೆ, ಬಲವಂತವಾಗಿ ಕೋಳಿ ಫಾರ್ಮ್ ಅನ್ನು ಖಾಲಿ ಮಾಡಿಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.