Tag: ನೋಬಾಲ್

  • ವಿಪಕ್ಷಗಳ ನೋ ಬಾಲ್‌ಗೆ ನಮ್ಮವರಿಂದ ಸಿಕ್ಸರ್‌, ಬೌಂಡರಿ, ಕೊನೆಗೆ ಸೆಂಚುರಿ:  ನರೇಂದ್ರ ಮೋದಿ

    ವಿಪಕ್ಷಗಳ ನೋ ಬಾಲ್‌ಗೆ ನಮ್ಮವರಿಂದ ಸಿಕ್ಸರ್‌, ಬೌಂಡರಿ, ಕೊನೆಗೆ ಸೆಂಚುರಿ: ನರೇಂದ್ರ ಮೋದಿ

    ನವದೆಹಲಿ: ವಿಪಕ್ಷಗಳಿಗೆ ಐದು ವರ್ಷ ಸಮಯ ನೀಡಿದ್ದೆ,  ಆದರೆ ಅವರು ಸರಿಯಾಗಿ ತಯಾರಿ ಮಾಡಿಕೊಂಡು ಬಂದಿರಲಿಲ್ಲ. ವಿಪಕ್ಷಗಳು ಫೀಲ್ಡ್‌ ಸೆಟ್‌ ಮಾಡಿದ್ದರು. ಆದರೆ ನಮ್ಮ ಸಂಸದರು ಸಿಕ್ಸರ್‌, ಬೌಂಡರಿ ಸಿಡಿಸಿದರು. ಅವರು ನೋ ಬಾಲ್‌ ಎಸೆಯುತ್ತಲೇ ಇದ್ದರು. ನಾವು ಸೆಂಚುರಿ ಸಿಡಿಸಿದೆವು. ಇದು ವಿಪಕ್ಷಗಳ ಅವಿಶ್ವಾಸ ನಿರ್ಣಯ ಭಾಷಣಕ್ಕೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚಾಟಿ ಬೀಸಿದ ಪರಿ.

    ಅವಿಶ್ವಾಸ ನಿರ್ಣಯದ (No Confidence Motion) ಮೇಲೆ ನೀವು ಹೇಗೆ ಚರ್ಚೆ ಮಾಡುತ್ತಿದ್ದೀರಿ? ನೀವು ಮತ್ತೆ ಬರಲಿದ್ದೀರಿ ಎಂದು ಮೊದಲೇ ಹೇಳಿದ್ದೆ. ಅವಿಶ್ವಾಸ ನಿರ್ಣಯದಲ್ಲಿ ಹಲವು ವಿಚಿತ್ರಗಳಿದ್ದವು. ಹಿಂದೆ ನಾನು ಎಂದೂ ಈ ರೀತಿ ಕಂಡಿರಲಿಲ್ಲ. ವಿಪಕ್ಷಗಳ ಪೈಕಿ ಅತಿದೊಡ್ಡ ಪಕ್ಷದ ನಾಯಕರ ಹೆಸರು ಭಾಷಣಕಾರರಲ್ಲಿ ಇರಲಿಲ್ಲ ಎಂದು ಕುಟುಕಿದರು.

    ಈ ಬಾರಿ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಅವರಿಗೆ ಏನಾಯಿತು? ಅವರಿಗೆ ಅವರ ಪಕ್ಷ ಮಾತನಾಡಲು ಅವಕಾಶ ನೀಡಲಿಲ್ಲ. ಇಂದು ಅವರಿಗೆ ಅವಕಾಶ ನೀಡಲಾಯಿತು. ಕಾಂಗ್ರೆಸ್ ಪದೇ ಪದೇ ನಾಯಕರಿಗೆ ಅವಮಾನ ಮಾಡುತ್ತಿದೆ. ನಾವು ಅಧೀರ್ ರಂಜನ್ ಚೌಧರಿ ಅವರಿಗೆ ಕರುಣೆ ವ್ಯಕ್ತಪಡಿಸುತ್ತೇವೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ಗೆ ಟಾಂಗ್‌ ನೀಡಿದರು.

    ವಿಪಕ್ಷಗಳ ಕಪ್ಪು ಕಾಡಿಗೆಯಂತೆ ಕಪ್ಪು ಬಟ್ಟೆ ಧರಿಸಿ ಸನದಕ್ಕೆ ಬಂದು ಭಾರತಕ್ಕೆ ದೃಷ್ಟಿಯಾಗದಂತೆ ಮಾಡಿವೆ. ಅದಕ್ಕಾಗಿ ನಾನು ಅವರಿಗೆ ಧನ್ಯವಾದ ತಿಳಿಸುತ್ತೇನೆ. ವಿಪಕ್ಷಗಳ ಬೈಗುಳವನ್ನು ನಾನು ಟಾನಿಕ್ ಮಾಡಿಕೊಂಡಿದ್ದೇನೆ. ವಿಪಕ್ಷಗಳ ನಾಯಕರಿಗೆ ಗೌಪ್ಯ ವರದಾನ ಸಿಕ್ಕಿದೆ. ಅವರು ಯಾರಿಗೆ ಕೆಟ್ಟದ್ದನ್ನು ಬಯಸುತ್ತಾರೋ ಅವರಿಗೆ ಒಳ್ಳೆದಾಗುತ್ತದೆ. ಒಂದು ಉದಾಹರಣೆ ನಾನೇ. ನನ್ನ ಬಗ್ಗೆ ಬಹಳಷ್ಟು ಹೇಳಿದರು. ಆದರೆ ನನಗೆ ಏನು ಆಗಲಿಲ್ಲ ಎಂದು ಹೇಳಿ ಕುಟುಕಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Umpire killed: ʼನೋಬಾಲ್‌ʼ ನೀಡಿದ್ದಕ್ಕೆ ಅಂಪೈರ್‌ನನ್ನೇ ಇರಿದು ಕೊಂದ ಆಟಗಾರ

    Umpire killed: ʼನೋಬಾಲ್‌ʼ ನೀಡಿದ್ದಕ್ಕೆ ಅಂಪೈರ್‌ನನ್ನೇ ಇರಿದು ಕೊಂದ ಆಟಗಾರ

    ಭುವನೇಶ್ವರ್: ಕ್ರಿಕೆಟ್‌ (Cricket) ಪಂದ್ಯ ನಡೆಯುತ್ತಿದ್ದ ವೇಳೆ ʼನೋಬಾಲ್‌ʼ (No Ball) ನೀಡಿದ ಅಂಪೈರ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಒಡಿಶಾದ (Odisha) ಕಟಕ್‌ನಲ್ಲಿ ನಡೆದಿದೆ.

    ಮೃತ ವ್ಯಕ್ತಿ ಲಕ್ಕಿ ರಾವುತ್ (22) ಎಂದು ಗುರುತಿಸಲಾಗಿದೆ. ಪಂದ್ಯದ ವೇಳೆ ‘ನೋಬಾಲ್’ ನೀಡಿದ ವಿಚಾರಕ್ಕೆ ಸ್ಮೃತಿ ರಂಜನ್ ರೌತ್ ಎಂಬಾತ ಜಗಳ ತೆಗೆದಿದ್ದಾರೆ. ನಂತರ ಹರಿತವಾದ ಚಾಕುವಿನಿಂದ ಇರಿದಿದ್ದಾನೆ. ಇದನ್ನೂ ಓದಿ: ಮಾನಹಾನಿ ಪ್ರಕರಣ – ಏಪ್ರಿಲ್ 13 ರವರೆಗೂ ರಾಗಾಗೆ ರಿಲೀಫ್

    ಬ್ರಹ್ಮಪುರ ಮತ್ತು ಶಂಕರಪುರ ಎಂಬ ಎರಡು ತಂಡಗಳ ನಡುವೆ ಕ್ರಿಕೆಟ್‌ ಪಂದ್ಯ ನಡೆಯುತ್ತಿತ್ತು. ಈ ವೇಳೆ ಅಂಪೈರ್‌ ನೋಬಾಲ್‌ ನೀಡಿದ್ದರು. ಈ ಸಂಬಂಧ ಅಂಪೈರ್‌ ಹಾಗೂ ಆಟಗಾರನ ನಡುವೆ ವಾಗ್ವಾದ ನಡೆದಿದೆ. ನಂತರ ಅಂಪೈರ್‌ಗೆ ಆಟಗಾರ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನು ಮೈದಾನದಲ್ಲಿ ಇದ್ದವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದ ಅಂಪೈರ್‌ನನ್ನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ಗಿಲ್ ಯುದ್ಧದ ಹೀರೋ ರಸ್ತೆ ಅಪಘಾತದಲ್ಲಿ ದುರ್ಮರಣ

    ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದಾರೆ. ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ.

  • ನೋಬಾಲ್ ಎಸೆಯುವುದು ಅಪರಾಧ – ಅರ್ಶ್‍ದೀಪ್ ಸಿಂಗ್ ತಪ್ಪಿಗೆ ಚಾಟಿ ಬೀಸಿದ ಪಾಂಡ್ಯ

    ನೋಬಾಲ್ ಎಸೆಯುವುದು ಅಪರಾಧ – ಅರ್ಶ್‍ದೀಪ್ ಸಿಂಗ್ ತಪ್ಪಿಗೆ ಚಾಟಿ ಬೀಸಿದ ಪಾಂಡ್ಯ

    ಪುಣೆ: ಕ್ರಿಕೆಟ್‍ನಲ್ಲಿ ನೋಬಾಲ್ (No-Ball) ಎಸೆಯುವುದು ಅಪರಾಧ. ಆದರೆ ಅರ್ಶ್‍ದೀಪ್ ಸಿಂಗ್ (Arshdeep Singh) ಮಾಡಿದ ತಪ್ಪನ್ನು ತಿದ್ದಿಕೊಂಡು ಮುಂದುವರಿಯಬೇಕು ಎಂದು ಟೀಂ ಇಂಡಿಯಾ (Team India) ನಾಯಕ ಹಾರ್ದಿಕ್ ಪಾಂಡ್ಯ (Hardik Pandya) 2ನೇ ಟಿ20 ಪಂದ್ಯದಲ್ಲಿ 5 ನೋ ಬಾಲ್ ಎಸೆದ ವೇಗಿ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

    ಶ್ರೀಲಂಕಾ (Sri Lanka) ವಿರುದ್ಧ ಗುರುವಾರ ಪುಣೆಯಲ್ಲಿ ನಡೆದ 2ನೇ ಟಿ20 (T20I) ಪಂದ್ಯದಲ್ಲಿ ಕೇವಲ 2 ಓವರ್ ಎಸೆದ ವೇಗಿ ಅರ್ಶ್‍ದೀಪ್ ಸಿಂಗ್ ಬರೋಬ್ಬರಿ 37 ರನ್ ನೀಡಿ ದುಬಾರಿ ಎನಿಸಿಕೊಂಡರು. ಜೊತೆಗೆ 5 ನೋಬಾಲ್ ಎಸೆದು ಟೀಕೆಗೆ ಗುರಿಯಾಗಿದ್ದಾರೆ. ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿದ ಪಾಂಡ್ಯ, ನಮಗೆ ಒಳ್ಳೆಯ ದಿನ, ಕೆಟ್ಟ ದಿನ ಇರಬಹುದು ಆದರೆ ನಾವು ಅದನ್ನು ಸಹಿಸಿಕೊಂಡು ಮುಂದುವರಿಯಬೇಕು. ಅರ್ಶ್‍ದೀಪ್ ಎಸೆದ ನೋಬಾಲ್ ಫಲಿತಾಂಶದ ಮೇಲೆ ಹೊಡೆತ ನೀಡಿದೆ. ನೋಬಾಲ್ ಯಾವುದೇ ಮಾದರಿ ಕ್ರಿಕೆಟ್‍ನಲ್ಲೂ ಅಪರಾಧ. ನಾವು ಪವರ್‌ಪ್ಲೇನಲ್ಲಿ ಮಾಡಿದ ತಪ್ಪಿನಿಂದ ಪಂದ್ಯ ಸೋತಿದ್ದೇವೆ. ಇದನ್ನು ಸರಿಪಡಿಸಿಕೊಂಡು ಮುಂದಿನ ಪಂದ್ಯವಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಸಿಕ್ಸರ್‌, ಬೌಂಡರಿಗಳ ಸುರಿಮಳೆ ಆಟ – ಆರಂಭದಲ್ಲಿ ಹಿನ್ನಡೆಯಾದ್ರೂ ಹೋರಾಡಿ ಸೋತ ಭಾರತ

    ಅನಗತ್ಯ ದಾಖಲೆ ಬರೆದ ಅರ್ಶ್‌ದೀಪ್‌:
    ಗಾಯದ ಸಮಸ್ಯೆಯಿಂದಾಗಿ ಮೊದಲ ಟಿ20 ಪಂದ್ಯದಿಂದ ಹೊರಗುಳಿದಿದ್ದ ಅರ್ಶ್‍ದೀಪ್ ಸಿಂಗ್ 2ನೇ ಪಂದ್ಯದಲ್ಲಿ ಭಾರೀ ನಿರಾಸೆ ಅನುಭವಿಸಿದ್ದಾರೆ. ಕೇವಲ 2 ಓವರ್‌ಗಳ ಬೌಲಿಂಗ್ ಮಾಡಿದ ಅರ್ಶ್‍ದೀಪ್ ಬರೊಬ್ಬರಿ 37 ರನ್ ಚಚ್ಚಿಸಿಕೊಂಡರು. 18.50 ಎಕಾನಮಿಯಲ್ಲಿ ಬೌಲಿಂಗ್ ನಡೆಸಿ ಹಿನ್ನಡೆ ಅನುಭವಿಸಿದ್ದು ಮಾತ್ರವಲ್ಲದೇ ಒಂದೇ ಪಂದ್ಯದಲ್ಲಿ 5 ನೋಬಾಲ್ ಎಸೆದು ಕೆಟ್ಟದಾಖಲೆ ಬರೆದರು. ಇದನ್ನೂ ಓದಿ: ಏಕದಿನ ಮಾದರಿಯಲ್ಲಿ ಏಷ್ಯಾಕಪ್ 2023 – ಒಂದೇ ಗುಂಪಿನಲ್ಲಿ ಸ್ಥಾನ ಪಡೆದ ಭಾರತ-ಪಾಕ್

    207 ರನ್ ಗಳ ಬೃಹತ್ ಗುರಿ ಪಡೆದ ಭಾರತ ಸೂರ್ಯಕುಮಾರ್ ಯಾದವ್ ಮತ್ತು ಅಕ್ಷರ್ ಪಟೇಲ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ನಡುವೆಯೂ ಸೋಲನುಭವಿಸಿದೆ. ಪ್ರಮುಖ ವಿಕೆಟ್‍ಗಳನ್ನು ಕಳೆದುಕೊಂಡು ಕಂಗೆಟ್ಟಿದ್ದ ವೇಳೆ ಒಂದಾದ ಸೂರ್ಯ-ಅಕ್ಷರ್ ಜೋಡಿ 6ನೇ ವಿಕೆಟ್‍ಗೆ 91 ರನ್ (40 ಎಸೆತ) ಜೊತೆಯಾಟವಾಡಿ ಗೆಲುವಿನ ಆಸೆ ಚಿಗುರಿಸಿದರು. ಆ ಬಳಿಕ ವಿಕೆಟ್ ಕೈಚೆಲ್ಲಿಕೊಂಡು ಅಂತಿಮವಾಗಿ ಭಾರತ ಸೋಲು ಕಂಡಿತು. ಶ್ರೀಲಂಕಾ 16 ರನ್‍ಗಳ ಅಂತರದ ಜಯದೊಂದಿಗೆ ಸರಣಿಯನ್ನು 1-1 ಸಮಬಲಗೊಳಿಸಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಐಪಿಎಲ್‍ನಲ್ಲಿ ಡ್ಯಾನಿಯಲ್ ಸ್ಯಾಮ್ಸ್ ವಿಶೇಷ ನೋಬಾಲ್ – ಫ್ರೀ ಹಿಟ್ ಕೊಟ್ಟಿದ್ದು ಯಾಕೆ?

    ಐಪಿಎಲ್‍ನಲ್ಲಿ ಡ್ಯಾನಿಯಲ್ ಸ್ಯಾಮ್ಸ್ ವಿಶೇಷ ನೋಬಾಲ್ – ಫ್ರೀ ಹಿಟ್ ಕೊಟ್ಟಿದ್ದು ಯಾಕೆ?

    ಅಬುಧಾಬಿ: ಮಂಗಳವಾರ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಬೌಲರ್ ಡ್ಯಾನಿಯಲ್ ಸ್ಯಾಮ್ಸ್ ಎಸೆದ ವಿಶೇಷ ನೋ ಬಾಲ್ ನೆಟ್ಟಿಗರ ಗಮನ ಸೆಳೆದಿದೆ.

    ಡ್ಯಾನಿಯಲ್ ಸ್ಯಾಮ್ಸ್ ಮಂಗಳವಾರ ಐಪಿಎಲ್‍ಗೆ ಪಾದಾರ್ಪಣೆ ಮಾಡಿದರು. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮೊದಲನೇ ಓವರ್ ಬೌಲ್ ಮಾಡಿದ ಅವರು ಆ ಓವರಿನ ಮೂರನೇ ಬಾಲಿನಲ್ಲಿ ಬೌಲಿಂಗ್ ಮಾಡುವ ಮುನ್ನ ಆ್ಯಕ್ಷನ್ ವೇಳೆ ಕೈ ತಾಗಿ ಸ್ಟಂಪ್ ಕೆಳಗೆ ಬೀಳಿಸಿದರು. ಇದನ್ನು ಗಮನಿಸಿದ ಅಂಪೈರ್ ಅದನ್ನು ನೋಬಾಲ್ ನೀಡಿದ್ದರು. ನಂತರ ಬಾಲ್ ಫ್ರೀಹಿಟ್ ಆಗಿತ್ತು. ಅದನ್ನು ಕೆಎಲ್ ರಾಹುಲ್ ಅವರು ಸಿಕ್ಸರ್ ಹೊಡೆದರು.

    ಫ್ರೀಹಿಟ್ ಕೊಟ್ಟಿದ್ದು, ಯಾಕೆ?
    2015ರ ಹಿಂದಿನ ಏಕದಿನ ಮತ್ತು ಟಿ-20 ಪಂದ್ಯಗಳಲ್ಲಿ ಕೇವಲ ಬೌಲರ್ ನೋಬಾಲ್ ಗೆರೆಯನ್ನು ದಾಟಿ ಮಾಡಿದ ನೋಬಾಲ್ ಎಸೆತಕ್ಕೆ ಮಾತ್ರ ಫ್ರೀಹಿಟ್ ನೀಡಿಲಾಗಿತ್ತು. ಆದರೆ 2015ರ ಜುಲೈ 5ರಂದು ಐಸಿಸಿಯೂ ಏಕದಿನ ಮತ್ತು ಟಿ-20 ಪಂದ್ಯಗಳಲ್ಲಿ ಫ್ರೀಹಿಟ್ ಕೊಡುವ ನಿಯಮವನ್ನು ಬದಲಿಸಿತು. ಈ ನಿಯಮದ ಪ್ರಕಾರ ಬೌಲರ್ ಯಾವುದೇ ರೀತಿಯ ನೋಬಾಲ್ ಮಾಡಿದರೂ ನಂತರದ ಬಾಲ್ ಫ್ರೀಹಿಟ್ ಆಗಿರುತ್ತೆ.

    https://twitter.com/faceplatter49/status/1318590656219000834

    ಹೀಗಾಗಿ ಬೌಲರ್ ಬೌಲ್ ಮಾಡುವ ಮುಂಚೆ ನಾನ್ ಸ್ಟೈಕ್‍ನಲ್ಲಿರುವ ವಿಕೆಟ್ ಸ್ಟಂಪ್ ಅನ್ನು ಬೀಳಿಸಿದರೆ, ನಿಯಮದ ಪ್ರಕಾರ ಅದು ಕೂಡ ನೋಬಾಲ್ ಎಂದು ಪರಿಗಣಿಸಲಾಗುತ್ತದೆ. ಇದರಿಂದ ಹೊಸ ನಿಯಮದಂತೆ ಅಂಪೈರ್ ಡ್ಯಾನಿಯಲ್ ಸ್ಯಾಮ್ಸ್ ಮಾಡಿದ ಬಾಲನ್ನು ನೋಬಾಲ್ ಎಂದು ಸೂಚಿಸಿ, ನಂತರದ ಬಾಲನ್ನು ಫ್ರೀಹಿಟ್ ಎಂದು ಘೋಷಿಸಿದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಯಾಗಿ ಅಂಪೈರ್ ನಿರ್ಧಾರದ ವಿರುದ್ಧ ಪರ, ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ‌.

    ನಿನ್ನೆಯ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಶಿಖರ್ ಧವನ್ ಶತಕ ಸಿಡಿಸಿ ತಂಡ ಬೃಹತ್ ಮೊತ್ತ ಗಳಿಸಲು ಕಾರಣವಾದರು. ಟೂರ್ನಿಯಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಗಳಿಸಿದ ಧವನ್ ಪಂದ್ಯದಲ್ಲಿ 61 ಎಸೆತಗಳಲ್ಲಿ 12 ಬೌಂಡರಿ, 3 ಸಿಕ್ಸರ್ ಗಳೊಂದಿಗೆ 106 ರನ್ ಗಳಿಸಿ ಅಜೇಯರಾಗಿ ಉಳಿದರು. ಡೆಲ್ಲಿ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತ್ತು.

    165 ರನ್ ಗಳ ಮೊತ್ತವನ್ನು ಬೆನ್ನಟ್ಟಿದ್ದ ಕಿಂಗ್ಸ್ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಪೊರನ್ ಅರ್ಧ ಶತಕ ಗಳಿಸಿ ಮಿಂಚಿಸಿದರೆ, 13 ಎಸೆತಗಳಲ್ಲಿ 29 ಗಳಿಸಿದ ಗೇಲ್ ತಂಡದ ಗೆಲುವಿಗೆ ಕಾಣಿಕೆ ನೀಡಿದ್ದರು. ಇದರೊಂದಿಗೆ 19 ಓವರ್ ಗಳಲ್ಲೇ 5 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿದ ಪಂಜಾಬ್ ತಂಡ ಗೆಲುವು ಪಡೆಯಿತು. ಈ ಗೆಲುವಿನ ಮೂಲಕ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿ ಉಳಿಸಿಕೊಂಡಿದೆ.

  • ಇಂಡೋ-ವಿಂಡೀಸ್ ಸರಣಿಗೆ ನೋಬಾಲ್ ಗಮನಿಸಲಿದ್ದಾರೆ ಥರ್ಡ್ ಅಂಪೈರ್

    ಇಂಡೋ-ವಿಂಡೀಸ್ ಸರಣಿಗೆ ನೋಬಾಲ್ ಗಮನಿಸಲಿದ್ದಾರೆ ಥರ್ಡ್ ಅಂಪೈರ್

    ನವದೆಹಲಿ: ನಾಳೆಯಿಂದ ಆರಂಭವಾಗಲಿರುವ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ-20 ಮತ್ತು ಏಕದಿನ ಸರಣಿಗೆ ಮೂರನೇ ಅಂಪೈರ್ ನೋಬಾಲ್ ಗುರುತಿಸಲಿದ್ದಾರೆ.

    ಈ ಹಿಂದಿನಿಂದಲೂ ಕ್ರಿಕೆಟ್ ಪಂದ್ಯಗಳಲ್ಲಿ ನೋಬಾಲ್ ವಿಚಾರದಲ್ಲಿ ಗೊಂದಲಗಳು ಆಗುತ್ತಿವೆ. ಈ ಗೊಂದಲಗಳಿಗೆ ತೆರೆಎಳೆಯಲು ಐಸಿಸಿ ಪ್ರಯತ್ನ ಮಾಡುತ್ತಿದ್ದು, ಇನ್ನು ಮುಂದೆ ನೋಬಾಲ್ ಮಾಡಿದರೆ ಅದನ್ನು ಮೈದಾನದಲ್ಲಿರುವ ಆಂಪೈರ್ ಹೇಳುವುದಿಲ್ಲ. ಬದಲಾಗಿ ಅ ಪಂದ್ಯದಲ್ಲಿ ಮೂರನೇ ಆಂಪೈರ್ ಆಗಿ ಕಾರ್ಯನಿರ್ವಹಿಸುವವರು ನೋಬಾಲ್ ಎಂದು ತೀರ್ಮಾನ ಮಾಡಬೇಕು ಎಂದು ಐಸಿಸಿ ಹೇಳಿದೆ.

    ನಾಳೆಯಿಂದ ಹೈದರಾಬಾದ್‍ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮೊದಲ ಟಿ-20 ಪಂದ್ಯವನ್ನು ಆಡಲಿದ್ದು, ನಂತರ ಡಿಸೆಂಬರ್ 15 ರಿಂದ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಈ ಪಂದ್ಯಗಳಲ್ಲಿ ಈ ಹೊಸ ನಿಯಮವನ್ನು ಪ್ರಯೋಗ ಮಾಡಿ ನೋಡಲು ಐಸಿಸಿ ತೀರ್ಮಾನ ಮಾಡಿದ್ದು ಈ ಪಂದ್ಯಗಳಲ್ಲಿ ಫ್ರಂಟ್‍ಫುಟ್ ನೋಬಾಲ್ ಮಾಡಿದರೆ ಅದನ್ನು ಆನ್‍ಫೀಲ್ಡ್ ಆಂಪೈರ್ ಬದಲಿಗೆ ಮೂರನೇ ಆಂಪೈರ್ ನೀಡಲಿದ್ದಾರೆ.

    ಪಂದ್ಯಗಳಲ್ಲಿ ಬೌಲರ್ ನೋಬಾಲ್ ಎಸೆದರೆ ಅದನ್ನು ಮೂರನೇ ಆಂಪೈರ್ ನೋಡಿ ನಂತರ ಅವರ ಸಹಾಯದಿಂದ ಆನ್‍ಫೀಲ್ಡ್ ಆಂಪೈರ್ ನೋಬಾಲ್ ಎಂದು ಘೋಷಣೆ ಮಾಡಬೇಕು. ಮೂರನೇ ಆಂಪೈರ್ ನೋಬಾಲ್ ಎಂದು ಹೇಳದೆ ಇದ್ದರೆ ಆನ್‍ಫೀಲ್ಡ್ ಆಂಪೈರ್ ಅ ಎಸೆತವನ್ನು ನೋಬಾಲ್ ಎಂದು ಹೇಳುವಂತಿಲ್ಲ ಎಂದು ಇಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಒಂದು ವೇಳೆ ಮೂರನೇ ಆಂಪೈರ್ ಕಡೆಯಿಂದ ನೋಬಾಲ್ ನಿರ್ಧಾರ ತಡವಾಗಿ ಬಂದರೆ ಈ ಬಾಲ್ ಅಲ್ಲಿ ಬ್ಯಾಟ್ಸ್ ಮ್ಯಾನ್ ಔಟ್ ಆಗಿದ್ದರೆ ಆ ತೀರ್ಮಾವನ್ನು ಮೈದಾನದ ಆಂಪೈರ್ ವಾಪಸ್ ಪಡೆದು ಅದನ್ನು ನೋಬಾಲ್ ಎಂದು ಘೋಷಣೆ ಮಾಡಬಹುದು. ಇದನ್ನು ಬಿಟ್ಟರೆ ಉಳಿದ ಎಲ್ಲಾ ನಿಯಮಗಳ ಜವಾಬ್ದಾರಿಯನ್ನು ಆನ್‍ಫೀಲ್ಡ್ ಆಂಪೈರ್ ಎಂದಿನಂತೆ ನಿರ್ವಹಿಸುತ್ತಾರೆ ಎಂದು ಐಸಿಸಿ ತಿಳಿಸಿದೆ.

    ಈ ನಿಯಮವನ್ನು 2016 ರಲ್ಲಿ ನಡೆದ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಏಕದಿನ ಸರಣಿಯಲ್ಲಿ ಪ್ರಯೋಗ ಮಾಡಲಾಗಿತ್ತು. ಆದರೆ ಯಾವುದೇ ನಿರ್ಧಾರವನ್ನು ಕೈಗೊಂಡಿರಲಿಲ್ಲ. ಈಗ ಕ್ರಿಕೆಟ್ ಸಮಿತಿಯೊಂದು ಈ ನಿಯಮವನ್ನು ಬಳಸುವುದು ಸೂಕ್ತ ಎಂದು ಶಿಫಾರಸು ಮಾಡಿದ ಕಾರಣ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಫ್ರಂಟ್‍ಫುಟ್ ನೋಬಾಲ್ ತೀರ್ಮಾನವನ್ನು ಮೂರನೇ ಆಂಪೈರ್ ತೆಗೆದುಕೊಳ್ಳಬೇಕು ಎಂದು ಐಸಿಸಿ ಹೊಸ ನಿಯಮ ಮಾಡಿತ್ತು. ಈ ನಿಯಮವನ್ನು ಇಂಡೋ-ವಿಂಡೀಸ್ ಸರಣಿಯಲ್ಲಿ ಮತ್ತೆ ಪ್ರಯೋಗ ಮಾಡಲು ಐಸಿಸಿ ತೀರ್ಮಾನಿಸಿದೆ.

    ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಅಂಪೈರ್ ಅಲ್ಲದೇ ನೋಬಾಲ್ ಗಮನಿಸಲೆಂದೇ ಅಂಪೈರ್ ಇರಲಿದ್ದಾರೆ. ಈ ಸಂಬಂಧ ಐಪಿಎಲ್ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಕಲ್ಪನೆ ನಿಮಗೆ ಸ್ವಲ್ಪ ವಿಚಿತ್ರ ಎನಿಸಬಹುದು. ಈ ವಿಚಾರದ ಬಗ್ಗೆ ಮೊದಲ ಐಪಿಎಲ್ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ನೋಬಾಲ್ ಗಮನಿಸಲು ನಾವು ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತೇವೆ. ಈ ಅಂಪೈರ್ ಮೂರು ಅಥವಾ ನಾಲ್ಕನೇಯ ಅಂಪೈರ್ ಅಲ್ಲ ಎಂದು ಅಧಿಕಾರಿ ಈ ಹಿಂದೆ ತಿಳಿಸಿದ್ದರು.

    ಕಳೆದ ವರ್ಷದ ಐಪಿಎಲ್‍ನಲ್ಲಿ ಮಾರ್ಚ್ 28 ರಂದು ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಮತ್ತು ಮುಂಬೈ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 8 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ್ದ ಬೆಂಗಳೂರು ತಂಡಕ್ಕೆ ಕೊನೆಯ ಓವರಿನಲ್ಲಿ 17 ರನ್ ಬೇಕಿತ್ತು. ಕ್ರೀಸಿನಲ್ಲಿ ಎಬಿಡಿ ವಿಲಿಯರ್ಸ್ 68 (39 ಎಸೆತ) ರನ್ ಗಳಿಸಿದ್ದರೆ ಶಿವಂ ದುಬೆ 1 ರನ್ ಗಳಿಸಿದ್ದರು. ಮಾಲಿಂಗ ಎಸೆದ ಕೊನೆಯ ಓವರಿನ ಮೊದಲ ಎಸೆತವನ್ನು ದುಬೆ ಸಿಕ್ಸರ್‍ಗೆ ಅಟ್ಟಿದ್ದರು. ಒಟ್ಟು ಐದು ಎಸೆತಗಳಲ್ಲಿ 10 ರನ್ ಬಂದಿತ್ತು. ಕೊನೆಯ ಎಸೆತದಲ್ಲಿ ಜಯಗಳಿಸಲು 7 ರನ್ ಬೇಕಿತ್ತು. ಮಾಲಿಂಗ ಎಸೆದ ಕೊನೆಯ ಎಸೆತದಲ್ಲಿ ದುಬೆ ಬಲವಾಗಿ ಹೊಡೆದರೂ ಬಾಲ್ ಬ್ಯಾಟಿಗೆ ತಾಗದ ಕಾರಣ ಯಾವುದೇ ರನ್ ಬಂದಿರಲಿಲ್ಲ. ಆದರೆ ಟಿವಿ ರಿಪ್ಲೇಯಲ್ಲಿ ಮಾಲಿಂಗ ನೋಬಾಲ್ ಎಸೆದಿದ್ದು ಸ್ಪಷ್ಟವಾಗಿತ್ತು. ಹೀಗಾಗಿ ಮುಂದಿನ ಎಸೆತ ಫ್ರೀ ಹಿಟ್ ಆಗಬೇಕಿತ್ತು. ಆದರೆ ಅಂಪೈರ್ ರವಿ ನೋಬಾಲ್ ನೀಡದ ಪರಿಣಾಮ ಮುಂಬೈ ತಂಡ 6 ರನ್‍ಗಳಿಂದ ಪಂದ್ಯವನ್ನು ಗೆದ್ದುಕೊಂಡಿತ್ತು.

    ಈ ಪಂದ್ಯದ ಬಳಿಕ ಕೊಹ್ಲಿ ಮಾತನಾಡಿ, ನಾವು ಐಪಿಎಲ್ ಪಂದ್ಯ ಆಡುತ್ತಿದ್ದೇವೆ ಹೊರತು ಕ್ಲಬ್ ಕ್ರಿಕೆಟ್ ಆಡುತ್ತಿಲ್ಲ. ಅಂಪೈರ್ ಗಳು ಕಣ್ಣನ್ನು ತೆರೆದು ಗಮನಿಸುತ್ತಿರಬೇಕು. ಅಂಪೈರ್ ನೋಬಾಲ್ ನೀಡುತ್ತಿದ್ದರೆ ಪಂದ್ಯದ ಫಲಿತಾಂಶವೇ ಬದಲಾಗುವ ಸಾಧ್ಯತೆ ಇತ್ತು. ನೋಬಾಲ್ ಮತ್ತು ಫ್ರೀ ಹಿಟ್ ನೀಡಿದ್ದರೆ ನಾವು ಗೆಲ್ಲುವ ಸಾಧ್ಯತೆ ಇತ್ತು. ಅಂಪೈರ್ ನಿರ್ಲಕ್ಷ್ಯದಿಂದ ಎಲ್ಲ ಹಾಳಾಯಿತು. ಅಂಪೈರ್ ಗಳು ಮೈದಾನದಲ್ಲಿ ಜಾಗೃತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಆಕ್ರೋಶ ಹೊರಹಾಕಿದ್ದರು.

    ಮೈದಾನ ಪ್ರವೇಶಿಸಿದ್ದ ಧೋನಿ:
    ರಾಜಸ್ಥಾನ ಮತ್ತು ಚೆನ್ನೈ ತಂಡದ ವೇಳೆಯೂ ಅಂಪೈರ್ ನೋಬಾಲ್ ನೀಡಿರಲಿಲ್ಲ. ಈ ವೇಳೆ ನಾಯಕ ಧೋನಿ ಮೈದಾನ ಪ್ರವೇಶಿಸಿ ಅಂಪೈರ್ ಜೊತೆ ಜಗಳವಾಡಿದ್ದರು. ಅಂಪೈರ್ ಎಡವಟ್ಟುಗಳಿಂದ ಪದೇ ಪದೇ ಮುಜುಗರಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಮಾದ ಆಗದಂತೆ ತಡೆಯಲು ನೋಬಾಲ್ ಗಮನಿಸಲೆಂದೇ ಪ್ರತ್ಯೇಕ ಅಂಪೈರ್ ನಿಯೋಜಿಸಲು ಐಪಿಎಲ್ ಆಡಳಿತ ಮಂಡಳಿ ಮುಂದಾಗಿದೆ.

  • ಕೊಹ್ಲಿ ಎಫೆಕ್ಟ್ – ಐಪಿಎಲ್‌ನಲ್ಲಿ ಇನ್ಮುಂದೆ ನೋಬಾಲ್ ಅಂಪೈರ್

    ಕೊಹ್ಲಿ ಎಫೆಕ್ಟ್ – ಐಪಿಎಲ್‌ನಲ್ಲಿ ಇನ್ಮುಂದೆ ನೋಬಾಲ್ ಅಂಪೈರ್

    ಮುಂಬೈ: ರಾಯಲ್ಸ್ ಚಾಲೆಂಜರ್ಸ್ ತಂಡದ ನಾಯಕ ವಿರಾಟ್ ಕೊಹ್ಲಿ ಅಂಪೈರ್ ಲೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ನೋಬಾಲ್ ಗುರುತಿಸಲೆಂದೇ ಪ್ರತ್ಯೇಕ ಅಂಪೈರ್ ನೇಮಕವಾಗಲಿದ್ದಾರೆ.

    ಮಂಗಳವಾರ ಮುಂಬೈನಲ್ಲಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ನೇತೃತ್ವದಲ್ಲಿ ನಡೆದ ಐಪಿಎಲ್ ಆಡಳಿತ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು, ಈ ಸಭೆಯಲ್ಲಿ ನೋಬಾಲ್ ಗಮನಿಸಲೆಂದೇ ಪ್ರತ್ಯೇಕ ಅಂಪೈರ್ ನಿಯೋಜಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು.

    ನೋಬಾಲ್ ಗಮನಿಸಲು ಪ್ರತ್ಯೇಕ ಅಂಪೈರ್ ನೇಮಕಕ್ಕೆ ಐಪಿಎಲ್ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಅಧಿಕೃತ ಕಾರಣ ಸಿಗದೇ ಇದ್ದರೂ ಕಳೆದ ಬಾರಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಅಂಪೈರ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಐಪಿಎಲ್ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ.

    ಸಭೆಯ ಬಳಿಕ ಮಾತನಾಡಿದ ಅಧಿಕಾರಿಯೊಬ್ಬರು, ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಅಂಪೈರ್ ಅಲ್ಲದೇ ನೋಬಾಲ್ ಗಮನಿಸಲೆಂದೇ ಅಂಪೈರ್ ಇರಲಿದ್ದಾರೆ. ಈ ಕಲ್ಪನೆ ನಿಮಗೆ ಸ್ವಲ್ಪ ವಿಚಿತ್ರ ಎನಿಸಬಹುದು. ಈ ವಿಚಾರದ ಬಗ್ಗೆ ಮೊದಲ ಐಪಿಎಲ್ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

    ನೋಬಾಲ್ ಗಮನಿಸಲು ನಾವು ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತೇವೆ. ಈ ಅಂಪೈರ್ ಮೂರು ಅಥವಾ ನಾಲ್ಕನೇಯ ಅಂಪೈರ್ ಅಲ್ಲ ಎಂದು ಅಧಿಕಾರಿ ವಿವರಿಸಿದರು.

    ಪವರ್ ಪ್ಲೇಯರ್ ಕಲ್ಪನೆಗೆ ತಡೆ:
    2020ರ ಐಪಿಎಲ್‌ನಲ್ಲಿ ಪವರ್ ಪ್ಲೇಯರ್ ಕಲ್ಪನೆ ಜಾರಿಗೆ ಬರಲಿದೆ ಎನ್ನುವ ಸುದ್ದಿ ಹಬ್ಬಿತ್ತು. ಆದರೆ ಸಮಯದ ಅಭಾವದಿಂದಾಗಿ ಈ ಕಲ್ಪನೆಯನ್ನು ಕೈಬಿಡಲಾಗಿದೆ. ಇದನ್ನೂ ಓದಿ: ಐಪಿಎಲ್‌ನಲ್ಲಿ ಪವರ್ ಪ್ಲೇಯರ್ – ಕೊನೆಯ ಓವರಿನಲ್ಲಿ ಪಂದ್ಯದ ಫಲಿತಾಂಶವೇ ಬದಲಾಗುತ್ತೆ

    ಅಂದು ಏನಾಗಿತ್ತು?
    ಮಾರ್ಚ್ 28 ರಂದು ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 8 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ್ದ ಬೆಂಗಳೂರು ತಂಡಕ್ಕೆ ಕೊನೆಯ ಓವರಿನಲ್ಲಿ 17 ರನ್ ಬೇಕಿತ್ತು. ಕ್ರೀಸಿನಲ್ಲಿ ಎಬಿಡಿ ವಿಲಿಯರ್ಸ್ 68 (39 ಎಸೆತ) ರನ್ ಗಳಿಸಿದ್ದರೆ ಶಿವಂ ದುಬೆ 1 ರನ್ ಗಳಿಸಿದ್ದರು. ಮಾಲಿಂಗ ಎಸೆದ ಕೊನೆಯ ಓವರಿನ ಮೊದಲ ಎಸೆತವನ್ನು ದುಬೆ ಸಿಕ್ಸರ್‌ಗೆ ಅಟ್ಟಿದ್ದರು. ಒಟ್ಟು ಐದು ಎಸೆತಗಳಲ್ಲಿ 10 ರನ್ ಬಂದಿತ್ತು. ಕೊನೆಯ ಎಸೆತದಲ್ಲಿ ಜಯಗಳಿಸಲು 7 ರನ್ ಬೇಕಿತ್ತು. ಮಾಲಿಂಗ ಎಸೆದ ಕೊನೆಯ ಎಸೆತದಲ್ಲಿ ದುಬೆ ಬಲವಾಗಿ ಹೊಡೆದರೂ ಬಾಲ್ ಬ್ಯಾಟಿಗೆ ತಾಗದ ಕಾರಣ ಯಾವುದೇ ರನ್ ಬಂದಿರಲಿಲ್ಲ. ಆದರೆ ಟಿವಿ ರಿಪ್ಲೇಯಲ್ಲಿ ಮಾಲಿಂಗ ನೋಬಾಲ್ ಎಸೆದಿದ್ದು ಸ್ಪಷ್ಟವಾಗಿತ್ತು. ಹೀಗಾಗಿ ಮುಂದಿನ ಎಸೆತ ಫ್ರೀ ಹಿಟ್ ಆಗಬೇಕಿತ್ತು. ಆದರೆ ಅಂಪೈರ್ ರವಿ ನೋಬಾಲ್ ನೀಡದ ಪರಿಣಾಮ ಮುಂಬೈ ತಂಡ 6 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತ್ತು.

    ಕೊಹ್ಲಿ ಹೇಳಿದ್ದು ಏನು?
    ಪಂದ್ಯದ ಬಳಿಕ ಕೊಹ್ಲಿ ಮಾತನಾಡಿ, ನಾವು ಐಪಿಎಲ್ ಪಂದ್ಯ ಆಡುತ್ತಿದ್ದೇವೆ ಹೊರತು ಕ್ಲಬ್ ಕ್ರಿಕೆಟ್ ಆಡುತ್ತಿಲ್ಲ. ಅಂಪೈರ್ ಗಳು ಕಣ್ಣನ್ನು ತೆರೆದು ಗಮನಿಸುತ್ತಿರಬೇಕು. ಅಂಪೈರ್ ನೋಬಾಲ್ ನೀಡುತ್ತಿದ್ದರೆ ಪಂದ್ಯದ ಫಲಿತಾಂಶವೇ ಬದಲಾಗುವ ಸಾಧ್ಯತೆ ಇತ್ತು. ನೋಬಾಲ್ ಮತ್ತು ಫ್ರೀ ಹಿಟ್ ನೀಡಿದ್ದರೆ ನಾವು ಗೆಲ್ಲುವ ಸಾಧ್ಯತೆ ಇತ್ತು. ಅಂಪೈರ್ ನಿರ್ಲಕ್ಷ್ಯದಿಂದ ಎಲ್ಲ ಹಾಳಾಯಿತು. ಅಂಪೈರ್ ಗಳು ಮೈದಾನದಲ್ಲಿ ಜಾಗೃತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಆಕ್ರೋಶ ಹೊರಹಾಕಿದ್ದರು.

    ಮೈದಾನ ಪ್ರವೇಶಿಸಿದ್ದ ಧೋನಿ:
    ರಾಜಸ್ಥಾನ ಮತ್ತು ಚೆನ್ನೈ ತಂಡದ ವೇಳೆಯೂ ಅಂಪೈರ್ ನೋಬಾಲ್ ನೀಡಿರಲಿಲ್ಲ. ಈ ವೇಳೆ ನಾಯಕ ಧೋನಿ ಮೈದಾನ ಪ್ರವೇಶಿಸಿ ಅಂಪೈರ್ ಜೊತೆ ಜಗಳವಾಡಿದ್ದರು. ಅಂಪೈರ್ ಎಡವಟ್ಟುಗಳಿಂದ ಪದೇ ಪದೇ ಮುಜುಗರಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಮಾದ ಆಗದಂತೆ ತಡೆಯಲು ನೋಬಾಲ್ ಗಮನಿಸಲೆಂದೇ ಪ್ರತ್ಯೇಕ ಅಂಪೈರ್ ನಿಯೋಜಿಸಲು ಐಪಿಎಲ್ ಆಡಳಿತ ಮಂಡಳಿ ಮುಂದಾಗಿದೆ.

  • ಗೆಲುವು ತಂದುಕೊಟ್ಟ ನೋಬಾಲ್ – ರೋಹಿತ್ ಹೇಳಿದ್ದೇನು?

    ಗೆಲುವು ತಂದುಕೊಟ್ಟ ನೋಬಾಲ್ – ರೋಹಿತ್ ಹೇಳಿದ್ದೇನು?

    ಬೆಂಗಳೂರು: ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಅವುಗಳನ್ನು ಪಕ್ಕಕಿಟ್ಟು ನೋಡುವುದಾದರೆ ಅಂಪೈರ್ ನಿರ್ಧಾರ ಕ್ರೀಡಾಸ್ಫೂರ್ತಿಯ ಮೇಲೆ ಪರಿಣಾಮ ಉಂಟು ಮಾಡುತ್ತದೆ ಎಂದು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

    ಪಂದ್ಯದ ಬಳಿಕ ಮಾತನಾಡಿದ ರೋಹಿತ್, ಅಂಪೈರ್ ತೀರ್ಮಾನ ಪಂದ್ಯದ ಗತಿಯನ್ನೇ ಬದಲಿಸುವ ನಿರ್ಧಾರ ಆಗುತ್ತಿತ್ತು. ಅಭಿಮಾನಿಗಳಲ್ಲಿ ಕ್ರಿಕೆಟ್ ಬಗ್ಗೆ ಮತ್ತಷ್ಟು ಅಸಕ್ತಿ ಮೂಡಿಸಲು ಇಂತಹ ತಪ್ಪುಗಳನ್ನು ಕಡಿಮೆ ಮಾಡಬೇಕು. ನಾವು ಮೈದಾನದಲ್ಲಿ ತಪ್ಪು ಮಾಡಿದರೆ ಅಲ್ಲೆ ಬೆಲೆ ನೀಡಬೇಕಾಗುತ್ತದೆ. ಇಂತಹ ತಪ್ಪುಗಳು ಕೇವಲ ಪಂದ್ಯದ ಮೇಲಷ್ಟೇ ಅಲ್ಲದೇ, ಇಡೀ ಟೂರ್ನಿಯ ಫಲಿತಾಂಶದ ಮೇಲೆ ಪರಿಣಾಮ ಉಂಟು ಮಾಡುತ್ತದೆ. ಅಂಪೈರ್ ಇಂತಹ ತಪ್ಪು ಮಾಡಿದರೆ ಏನಾಗುತ್ತದೆ? ಈ ಬಗ್ಗೆ ಬಿಸಿಸಿಐ ನಿರ್ಧಾರ ಮಾಡಬೇಕಿದೆ ಎಂದರು.

    ಟೂರ್ನಿಯಲ್ಲಿ ನಾವು ಮೊದಲ ಗೆಲುವು ಪಡೆದಿದ್ದು ಸಂತಸ ತಂದಿದ್ದು, ಬುಮ್ರಾ ಉತ್ತಮ ಬೌಲಿಂಗ್ ದಾಳಿ ನಡೆಸಿದರು. ಪಂದ್ಯದ ಮುಖ್ಯ ಹಂತದಲ್ಲಿ ಕೊಹ್ಲಿ ವಿಕೆಟ್ ಪಡೆದದ್ದು ತಿರುವು ನೀಡಿತ್ತು. ಅಲ್ಲದೇ ಲಸಿತ್ ಮಾಲಿಂಗ ಬೌಲಿಂಗ್ ಕೂಡ ಉತ್ತಮವಾಗಿತ್ತು. ವಿಶ್ವಕಪ್ ದೃಷ್ಟಿಯಿಂದಲೂ ಟೂರ್ನಿ ಅವರಿಗೆ ಪ್ರಮುಖವಾಗಿದೆ ಎಂದರು. ಪಂದ್ಯದಲ್ಲಿ ಉತ್ತಮ ಬೌಲಿಂಗ್ ದಾಳಿ ನಡೆಸಿದ ಬುಮ್ರಾ ಅಂತಿಮ ಎರಡು ಓವರಿನಲ್ಲಿ ನೀಡಿದ್ದು ಕೇವಲ 6 ರನ್ ಮಾತ್ರ. ಒಟ್ಟಾರೆ 4 ಓವರ್ ಬೌಲ್ ಮಾಡಿದ ಬುಮ್ರಾ 20 ರನ್ ಬಿಟ್ಟುಕೊಟ್ಟು 3 ವಿಕೆಟ್ ಪಡೆದು ಮಿಂಚಿದರು.

    ಕೊನೆಯ ಎಸೆತದಲ್ಲಿ ಆರ್ ಸಿಬಿಗೆ 7 ರನ್‍ಗಳ ಅವಶ್ಯಕತೆ ಇತ್ತು. ಕೊನೆಯ ಓವರನ್ನು ಮುಂಬೈ ತಂಡದ ಆಟಗಾರ ಲಸಿತ್ ಮಾಲಿಂಗ ಬೌಲಿಂಗ್ ಮಾಡಿದ್ದಾಗ ಶಿವಂ ದುಬೆ ಕ್ರೀಸ್ ನಲ್ಲಿದ್ದರು. ಕೊನೆಯ ಎಸೆತದಲ್ಲಿ ಶಿವಂ ದುಬೆ ಯಾವುದೇ ರನ್ ಪಡೆಯಲಿಲ್ಲ. ಆದರೆ ರಿಪ್ಲೈ ನೋಡಿದ್ದಾಗ ಲಸಿತ್ ಅವರ ಕಾಲು ಕ್ರೀಸ್‍ಗಿಂತ ಮುಂದೆ ಇತ್ತು. ಅಂದರೆ ನೋ ಬಾಲ್ ಆಗಿತ್ತು. ಆದರೆ ಅದನ್ನು ಅಂಪೈರ್ ಗಮನಿಸಲಿಲ್ಲ. ಅಂಪೈರ್ ನೋ ಬಾಲ್ ಎಂದು ಪರಿಗಣಿಸಿದ್ದರೆ ಕೊನೆಯ ಎಸೆತದಲ್ಲಿ 6 ರನ್ ಬೇಕಿತ್ತು. ಕೊನೆಯ ಎಸೆತವನ್ನು ಸಿಕ್ಸರ್ ಗೆ ಅಟ್ಟಿದ್ದರೆ ಪಂದ್ಯವನ್ನು ಆರ್ ಸಿಬಿ ಗೆದ್ದುಕೊಳ್ಳುತಿತ್ತು.