Tag: ನೌಕಾಪಡೆ ಬೋಟ್

  • Mumbai Boat Accident | 7 ವರ್ಷದ ಬಾಲಕನ ಮೃತದೇಹ ಪತ್ತೆ – ಮೃತರ ಸಂಖ್ಯೆ 15ಕ್ಕೆ ಏರಿಕೆ

    Mumbai Boat Accident | 7 ವರ್ಷದ ಬಾಲಕನ ಮೃತದೇಹ ಪತ್ತೆ – ಮೃತರ ಸಂಖ್ಯೆ 15ಕ್ಕೆ ಏರಿಕೆ

    ಮುಂಬೈ: ಇತ್ತೀಚಿಗೆ ಮುಂಬೈ ಕರಾವಳಿಯಲ್ಲಿ (Mumbai) ನಡೆದ ಬೋಟ್ ಅಪಘಾತದಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆಯಾಗಿದೆ.

    ಡಿ.18 ರಂದು ನೀಲಕಮಲ್ ಎಂಬ ಪ್ರಯಾಣಿಕ ಹಡಗಿಗೆ ನೌಕಾಪಡೆಯ ಬೋಟ್ ಡಿಕ್ಕಿ ಹೊಡೆದಿತ್ತು. ಪರಿಣಾಮ 13 ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಈ ವೇಳೆ ನಾಪತ್ತೆಯಾಗಿದ್ದ 7 ವರ್ಷದ ಮೊಹಮ್ಮದ್ ನಿಸಾರ್ ಅಹ್ಮದ್ ಪಠಾಣ್ ಎಂಬ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿತ್ತು.ಇದನ್ನೂ ಓದಿ: ಮುಂಬೈ ಪಾಲಿಕೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಶಿವಸೇನೆ ಉದ್ಧವ್ ಬಣ – ಸಂಜಯ್ ರಾವತ್ ಸುಳಿವು

    ನೌಕಾಪಡೆಯ ಹೆಲಿಕಾಪ್ಟರ್ ಹಾಗೂ ಗಾರ್ಡ್ ದೋಣಿಗಳ ಮೂಲಕ ಕಳೆದ ಮೂರು ದಿನಗಳಿಂದ ಮೃತದೇಹಕ್ಕಾಗಿ ಶೋಧ ನಡೆಸಲಾಗಿತ್ತು. ಮೂರು ದಿನಗಳ ಸುದೀರ್ಘ ಕಾರ್ಯಾಚರಣೆಯ ನಂತರ ಡಿ.21 ರಂದು ಬೆಳಿಗ್ಗೆ ಬಾಲಕನ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    (Maharashtra Maritime Board) ಮಹಾರಾಷ್ಟ್ರ ಮಾರಿಟೈಮ್ ಬೋರ್ಡ್ ದಾಖಲೆಗಳ ಪ್ರಕಾರ, ಪ್ರಯಾಣಿಕ ಹಡಗಿನಲ್ಲಿ 84 ಪ್ರಯಾಣಿಕರು ಹಾಗೂ ಆರು ಸಿಬ್ಬಂದಿ ಪ್ರಯಾಣಕ್ಕೆ ಮಾತ್ರ ಅವಕಾಶವಿದೆ. ಆದರೆ ಹಡಗು ಓವರ್‌ಲೋಡ್ ಆಗಿತ್ತು. ಹೀಗಾಗಿ ಇನ್‌ಲ್ಯಾಂಡ್ ವೆಸೆಲ್ ಕಾಯ್ದೆಯನ್ನು ಉಲ್ಲಂಘಿಸಿದ ಹಡಗಿನ ಪರವಾನಗಿಯನ್ನು ರದ್ದುಗೊಳಿಸಿಲಾಗಿದೆ. ಎರಡು ಹಡಗುಗಳಲ್ಲಿ ಒಟ್ಟು 113 ಜನರಿದ್ದರು. ಆ ಪೈಕಿ 15 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದರು. ಇನ್ನುಳಿದಂತೆ 98 ಜನರನ್ನು ರಕ್ಷಿಸಲಾಗಿದೆ ಎಂದು ತಿಳಿಸಿದೆ.

    ಘಟನೆ ಏನು?
    ಡಿ.18 ರಂದು ಮುಂಬೈ ಕರಾವಳಿಯಲ್ಲಿ ಇಂಜಿನ್ ಪ್ರಯೋಗಕ್ಕೆ ಒಳಗಾಗಿದ್ದ ನೌಕಾಪಡೆಯ ಬೋಟ್ `ನೀಲ್ ಕಮಲ್’ ಎಂಬ ಪ್ರಯಾಣಿಕ ಹಡಗಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿತ್ತು. 100ಕ್ಕೂ ಹೆಚ್ಚು ಪ್ರಯಾಣಿಕರನ್ನು ಒಳಗೊಂಡಿದ್ದ ನೀಲ್ ಕಮಲ್ ಹಡಗು ಗೇಟ್‌ವೇ ಆಫ್ ಇಂಡಿಯಾದಿAದ ಎಲಿಫೆಂಟಾ ದ್ವೀಪಕ್ಕೆ ತೆರಳುತ್ತಿತ್ತು, ಈ ವೇಳೆ ಸಂಜೆ 4 ಗಂಟೆ ಸುಮಾರಿಗೆ ಡಿಕ್ಕಿ ಹೊಡೆದಿದೆ. ಈಗಾಗಲೇ ನೌಕಾಪಡೆಯ ಚಾಲಕನ ವಿರುದ್ಧ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಅಪಾರ್ಟ್‌ಮೆಂಟ್‌ನಲ್ಲಿ ನಿರಂತರ ಕಳ್ಳತನ – 18 ವರ್ಷದಿಂದ ಸೆಕ್ಯೂರಿಟಿಯಾಗಿದ್ದ ಕಳ್ಳ ಅರೆಸ್ಟ್‌

     

  • Mumbai Boat Accident | ಪ್ರಯಾಣಿಕ ಹಡಗಿಗೆ ನೌಕಾಪಡೆಯ ಬೋಟ್‌ ಡಿಕ್ಕಿ; 13 ಮಂದಿ ದಾರುಣ ಸಾವು

    Mumbai Boat Accident | ಪ್ರಯಾಣಿಕ ಹಡಗಿಗೆ ನೌಕಾಪಡೆಯ ಬೋಟ್‌ ಡಿಕ್ಕಿ; 13 ಮಂದಿ ದಾರುಣ ಸಾವು

    ಮುಂಬೈ: ನೀಲಕಮಲ್ ಎಂಬ ಪ್ರಯಾಣಿಕ ಹಡಗಿಗೆ ನೌಕಾಪಡೆಯ ಬೋಟ್‌ ಡಿಕ್ಕಿ ಹೊಡೆದು 13 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಮುಂಬೈ (Mumbai Boat Accident) ಕರಾವಳಿಯಲ್ಲಿ ನಡೆದಿದೆ.

    ಅವಘಡದಲ್ಲಿ 101 ಜನರನ್ನು ರಕ್ಷಿಸಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ತಿಳಿಸಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದನ್ನೂ ಓದಿ: ವಿಜಯ್ ಮಲ್ಯ, ನೀರವ್ ಮೋದಿ ಅವರ 15,000 ಕೋಟಿ ಆಸ್ತಿ ಬ್ಯಾಂಕ್‌ಗಳಿಗೆ ವಾಪಸ್‌: ಕೇಂದ್ರ ಸರ್ಕಾರ

    ಮೃತರಲ್ಲಿ 10 ನಾಗರಿಕರು ಮತ್ತು ಮೂವರು ನೌಕಾಪಡೆ ಸಿಬ್ಬಂದಿ ಸೇರಿದ್ದಾರೆ ಎಂದು ಫಡ್ನವಿಸ್ ನಾಗ್ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ನೌಕಾಪಡೆಯ ಮಾಹಿತಿಯ ಪ್ರಕಾರ, ಬುಧವಾರ ರಾತ್ರಿ 7:30 ರ ಹೊತ್ತಿಗೆ ಸಾವಿನ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.

    ನೀಲಕಮಲ್ ಹಡಗು ಮುಂಬೈ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಎಲಿಫೆಂಟಾ ದ್ವೀಪಗಳಿಗೆ ತೆರಳುತ್ತಿದ್ದಾಗ ಸ್ಪೀಡ್ ಬೋಟ್ ಸಂಜೆ 4 ಗಂಟೆ ಸುಮಾರಿಗೆ ಡಿಕ್ಕಿ ಹೊಡೆದಿದೆ ಎಂದು ಫಡ್ನವಿಸ್ ಹೇಳಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ಕಥುವಾದಲ್ಲಿ ಮನೆಗೆ ಬೆಂಕಿ – ಮಾಜಿ ಡಿಎಸ್‌ಪಿ ಸೇರಿ 6 ಮಂದಿ ಸಾವು

    ಸ್ಪೀಡ್ ಬೋಟ್ ನೌಕಾಪಡೆಗೆ ಸೇರಿದ್ದು ಎಂದು ಸ್ಥಳೀಯ ಮುಖಂಡರೊಬ್ಬರು ಹೇಳಿಕೊಂಡಿದ್ದು, ಈ ಬಗ್ಗೆ ನೌಕಾಪಡೆಯಿಂದ ಯಾವುದೇ ದೃಢೀಕರಣವಿಲ್ಲ. 4 ನೌಕಾ ಹೆಲಿಕಾಪ್ಟರ್‌ಗಳು, 11 ನೌಕಾ ಕ್ರಾಫ್ಟ್‌ಗಳು, ಒಂದು ಕೋಸ್ಟ್ ಗಾರ್ಡ್ ಬೋಟ್ ಮತ್ತು ಮೂರು ಮೆರೈನ್ ಪೊಲೀಸ್ ಕ್ರಾಫ್ಟ್‌ಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

    ಜೆಎನ್‌ಪಿಟಿ ಆಸ್ಪತ್ರೆಗೆ 56, ನೇವಿ ಡಕ್‌ಯಾರ್ಡ್‌ ಆಸ್ಪತ್ರೆಗೆ 21, ಅಶ್ವಿನಿ ಆಸ್ಪತ್ರೆ-1, ಸೇಂಟ್‌ ಜಾರ್ಜ್‌ ಆಸ್ಪತ್ರೆ-9, ಕಾರಂಜೆ ಆಸ್ಪತ್ರೆಗೆ -12, ಎನ್‌ಡಿಕೆ ಆಸ್ಪತ್ರೆಗೆ 10 ಗಾಯಾಳುಗಳನ್ನು ದಾಖಲಿಸಲಾಗಿದೆ. ಇದನ್ನೂ ಓದಿ: ವಕ್ಫ್ ವಿಚಾರದಲ್ಲಿ ರಕ್ಷಿಸಲು ಕಾಂಗ್ರೆಸ್ ನಾಯಕರು ವಿಜಯೇಂದ್ರ ಸಂಬಂಧಿಗಳೇ?: ಎಂಪಿ ರೇಣುಕಾಚಾರ್ಯ