Tag: ನೌಕಾ ದಳ

  • ಕೆಟ್ಟ ದೃಷ್ಟಿ ಬೀರಿದರೆ ಬಿಡಲ್ಲ- ಪಾಕಿಗೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

    ಕೆಟ್ಟ ದೃಷ್ಟಿ ಬೀರಿದರೆ ಬಿಡಲ್ಲ- ಪಾಕಿಗೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

    ನವದೆಹಲಿ: ಫಿರಂಗಿ ದಾಳಿ ನಡೆಸುವ ಮೂಲಕ ಪಾಕಿಸ್ತಾನಕ್ಕೆ ಭಾರತ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದು, ದೇಶದ ಮೇಲೆ ದುಷ್ಟ ಕಣ್ಣು ಹಾಕಿದರೆ ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ನೇವಲ್ ಕಮಾಂಡರ್ಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತ ಎಂದಿಗೂ ಆಕ್ರಮಣಕಾರಿಯಾಗಿಲ್ಲ. ವಿಶ್ವದ ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ. ಅಲ್ಲದೆ ಯಾವುದೇ ದೇಶದ ಒಂದು ಇಂಚು ಭೂಮಿಯನ್ನು ಸಹ ಬಲವಂತವಾಗಿ ಸ್ವಾಧೀನಪಡಿಸಿಕೊಂಡಿಲ್ಲ. ಆದರೆ ನಮ್ಮ ದೇಶದ ಮೇಲೆ ಕೆಟ್ಟ ಕಣ್ಣು ಹಾಕಲು ಪ್ರಯತ್ನಿಸುವವರಿಗೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ಸಂಪೂರ್ಣ ಸನ್ನದ್ಧವಾಗಿದೆ ಎಂದರು.

    ನೌಕಾಪಡೆಯು ಜಾಗರೂಕತೆಯನ್ನು ಬಲಪಡಿಸಿದೆ. ಅಲ್ಲದೆ 26/11(ಮುಂಬೈ ದಾಳಿ) ಯಂತಹ ದಾಳಿಗಳು ಮರುಕಳಿಸದಂತೆ ನೋಡಿಕೊಂಡಿದೆ. ಭಾರತೀಯ ನೌಕಾಪಡೆಯ ಕಾವಲಿನಲ್ಲಿ ಸಮುದ್ರ ಮಾರ್ಗ ಸುರಕ್ಷಿತವಾಗಿದೆ. ನೌಕಾಪಡೆಯು ಎಲ್ಲ ಸಮಸ್ಯೆಗಳನ್ನು ಪರಿಹರಿಸಿದ್ದು, 27/11 ನಂತಹ ದಾಳಿಗಳು ಮತ್ತೆ ನಡೆಯದಂತೆ ವಾಯು ಸೇನೆ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

    ಭಾನುವಾರ ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದ ನೀಲಂ ಕಣಿವೆಯಲ್ಲಿ ನಾಲ್ಕು ಭಯೋತ್ಪಾದಕರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿತ್ತು. ಇದರಿಂದಾಗಿ ಸಾವು-ನೋವು ಹಾಗೂ ಅಪಾರ ಹಾನಿ ಸಂಭವಿಸಿತ್ತು. ಇದರ ಬೆನ್ನಲ್ಲೇ ರಾಜನಾಥ್ ಸಿಂಗ್ ಇದೀಗ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಪಿಒಕೆಯ ಒಳಗೆ ತಂಗ್ಧರ್ ಸೆಕ್ಟರ್ ಎದುರಿನಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿತ್ತು. ಭಾರತದೊಳಗೆ ನುಸುಳಲು ಸಕ್ರಿಯವಾಗಿ ಪ್ರಯತ್ನಿಸುತ್ತಿದ್ದ ಭಯೋತ್ಪಾದಕರ ಶಿಬಿರಗಳ ಮೇಲೆ ದಾಳಿ ನಡೆಸಲಾಗಿತ್ತು. ಸೇನೆ ನಡೆಸಿದ ದಾಳಿಯಿಂದಾಗಿ ಪಿಒಕೆಯಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಸೇನೆಯು ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿದೆ ಎನ್ನಲಾಗಿತ್ತು.

    ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ತಂಗ್ಧರ್ ಸೆಕ್ಟರ್‍ನಲ್ಲಿ ಭಾನುವಾರ ಪಾಕಿಸ್ತಾನ ಸೇನೆ ಕದನವಿರಾಮ ಉಲ್ಲಂಘಿಸಿತ್ತು. ಇದರಿಂದಾಗಿ ಇಬ್ಬರು ಭಾರತೀಯ ಸೈನಿಕರು ಹಾಗೂ ಓರ್ವ ನಾಗರಿಕ ಸಾವನ್ನಪ್ಪಿದ್ದರು. ಈ ಘಟನೆ ನಂತರ ಭಾರತೀಯ ಸೇನೆ ಉಗ್ರರ ತರಬೇತಿ ಕೇಂದ್ರಗಳ ಮೇಲೆ ಫಿರಂಗಿ ದಾಳಿ ನಡೆಸಿತ್ತು. ದಾಳಿ ವೇಳೆ ಒಂದು ಮನೆ ಹಾಗೂ ಅಕ್ಕಿ ಗೋಡೌನ್ ಸಂಪೂರ್ಣವಾಗಿ ಹಾನಿಗೊಳಗಾಗಿವೆ. ಎರಡು ಕಾರು, 19 ಹಸು ಹಾಗೂ ಕುರಿಗಳನ್ನು ಹೊಂದಿರುವ ಎರಡು ಹಸು ಶೆಲ್ಟರ್ ಗಳನ್ನೂ ನಾಶಪಡಿಸಲಾಗಿತ್ತು.

  • ಭಾರತೀಯ ನೌಕಾದಳಕ್ಕೆ ಹೊಸ ಕ್ಷಿಪ್ರ ರಕ್ಷಣಾ ನೌಕೆ ಸಮರ್ಪಣೆ

    ಭಾರತೀಯ ನೌಕಾದಳಕ್ಕೆ ಹೊಸ ಕ್ಷಿಪ್ರ ರಕ್ಷಣಾ ನೌಕೆ ಸಮರ್ಪಣೆ

    ಕಾರವಾರ: ಪಶ್ಚಿಮ ಕರಾವಳಿಯ ಮುಂಬೈನಲ್ಲಿ ಸಮುದ್ರ ಮೂಲಕ ಉಗ್ರಗಾಮಿಗಳು ತಾಜ್ ಹೋಟಲ್ ಮೇಲೆ ಆಕ್ರಮಣ ಮಾಡಿದ ನಂತರ ನೌಕಾದಳದವರು ಎಚ್ಚೆತ್ತುಕೊಂಡಿದ್ದಾರೆ. ಇನ್ನು ಇತ್ತೀಚೆಗಷ್ಟೆ ಕೇಂದ್ರ ಗುಪ್ತದಳ ಕಾರವಾರ ಕದಂಬ ನೌಕಾ ನೆಲೆಗೆ ಉಗ್ರಗಾಮಿಗಳು ಟಾರ್ಗೆಟ್ ಮಾಡಿರುವ ಕುರಿತು ವರದಿ ನೀಡಿದ ನಂತರ ಕ್ಷಿಪ್ರ ಕಾರ್ಯಾಚರಣೆಗೆ ಸಜ್ಜಾಗಿದ್ದು ಇಂದು ಹೊಸ ಕ್ಷಿಪ್ರ ಕಾರ್ಯಾಚರಣೆಗಾಗಿ ನೌಕೆಯೊಂದು ಸೇರ್ಪಡೆಯಾಗಿದೆ.

    ಕಾರವಾರ ತಾಲೂಕಿನ ಅರಗ ಗ್ರಾಮದಲ್ಲಿರುವ ಕದಂಬ ನೌಕಾನೆಲೆಯಲ್ಲಿ ಕರ್ನಾಟಕದ ನೌಕಾದಳದ ವೈಸ್ ಅಡ್ಮಿರಲ್ ಗಿರೀಶ್ ಲೂಥ್ರಾ ಅವರು ಹೊಸ ಕ್ಷಿಪ್ರ ರಕ್ಷಣಾ ನೌಕೆ `ಐಎನ್‍ಎಸ್ ತಿಲ್ಲಾಂಚಾಂಗ್’ ಸಮರ್ಪಣೆ ಮಾಡಿದರು.

    ಏನಿದರ ವಿಶೇಷತೆ?:
    ಅರಬ್ಬಿ ಸಮುದ್ರದ ಕರಾವಳಿಯ ಭಾಗದಲ್ಲಿ ಶತ್ರುಗಳನ್ನ ಹಿಮ್ಮೆಟಿಸಲು ಸಜ್ಜಾಗಿರುವ ಐಎನ್‍ಎಸ್ ತಿಲ್ಲಾಂಚಾಂಗ್ ಕೋಲ್ಕತ್ತಾದ ಗಾರ್ಡನ್ ರೀಚ್ ಹಡಗು ನಿರ್ಮಾಣ ಕೇಂದ್ರದಲ್ಲಿ ನಿರ್ಮಾಣವಾಗಿದೆ. 48.9 ಮೀಟರ್ ಉದ್ದವಿರುವ ಈ ನೌಕೆ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಸಂಚರಿಸುತ್ತೆ. ಅಂಡಮಾನ್ ನಿಕೋಬಾರ ಬಳಿ ಇರುವ ತಿಲ್ಲಾಂಚಾಂಗ್ ಎಂಬ ದ್ವೀಪದ ಹೆಸರನ್ನ ಈ ನೌಕೆಗೆ ಇಡಲಾಗಿದೆ.

    ನೌಕೆ ಚಿಕ್ಕದಾಗಿದ್ರೂ 50 ಜನ ಸಿಬ್ಬಂದಿಗಳು ಅರಾಮವಾಗಿ ಕಾರ್ಯನಿರ್ವಹಿಸಬಹುದಾಗಿದೆ. ಒಂದು ಬಾರಿ ಸಮುದ್ರದಲ್ಲಿ ಸಂಚರಿಸಲು ಪ್ರಾರಂಭಿಸಿದ್ರೆ ಒಂದು ವಾರದಷ್ಟು ಕಾಲ ಅಲ್ಲಿಯೇ ಇರುವಷ್ಟು ಸಾಮರ್ಥ್ಯ ಇದಕ್ಕಿದ್ದು ಸುಸಜ್ಜಿತ ಅಡುಗೆ ಮನೆ, ಡೈನಿಂಗ್ ಹಾಲ್, ರೆಸ್ಟ್ ರೂಮ್ ಸೇರಿದಂತೆ ಎರಡು ರಬ್ಬರ್ ಬೋಟ್ ಗಳು ಇದರಲ್ಲಿವೆ.

    ಇನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಲು ಒಳ ಭಾಗದಿಂದ ವೀಕ್ಷಣೆಗಾಗಿ ಸಿ.ಸಿ ಟಿ.ವಿ ಜೊತೆಯಲ್ಲಿ 30 ಎಂ.ಎಂ. ಮೈನ್ ಗನ್, ಸಣ್ಣ ಹಾಗೂ ದೊಡ್ಡ ಮಿಷನ್ ಗನ್‍ಗಳು ಇದರಲ್ಲಿದ್ದು ಕರಾವಳಿ ಭದ್ರತೆಗಳಿಗಲ್ಲದೇ, ಪ್ರಕೃತಿ ವಿಕೋಪ ಮುಂತಾದ ಕಾರ್ಯಗಳಿಗೂ ಈ ನೌಕೆಯನ್ನು ಬಳಸಿಕೊಳ್ಳಬಹುದು. ಈ ಹೊಸ ನೌಕೆಯನ್ನು ಕರ್ನಾಟಕ ನೇವೆಲ್ ಪ್ಲಾಗ್ ಆಫೀಸರ್ ಕಮಾಂಡೆಂಡ್ ನೋಡಿಕೊಳ್ಳಲಿದ್ದು ಇದರ ನೇತೃತ್ವವನ್ನು ಸಿ.ಡಿ.ಆರ್. ಅದಿತ್ ಪಾಟ್ನಾಯಕ್ ವಹಿಸಿದ್ದಾರೆ. ಕಾರವಾರದ ಕದಂಬ ನೌಕಾ ನೆಲೆಯಿಂದಲೇ ಈ ಸ್ಪೀಡ್ ವಾಟರ್ ಜಟ್ ನೌಕೆ ಕಾರ್ಯ ನಿರ್ವಹಿಸಲಿದೆ.