Tag: ನೌಕಾ ಪಡೆ

  • ನೌಕಾಪಡೆಯ MiG-29K ಪತನ – ಪೈಲಟ್‌ ಅಪಾಯದಿಂದ ಪಾರು

    ನೌಕಾಪಡೆಯ MiG-29K ಪತನ – ಪೈಲಟ್‌ ಅಪಾಯದಿಂದ ಪಾರು

    ಪಣಜಿ: ನೌಕಾಪಡೆಯ ಮಿಗ್‌ 29ಕೆ(MiG-29K) ವಿಮಾನವು ತಾಂತ್ರಿಕ ದೋಷದಿಂದ ಇಂದು ಗೋವಾ ಕರಾವಳಿಯಲ್ಲಿ ದಿನನಿತ್ಯದ ಹಾರಾಟದ ಸಮಯದಲ್ಲಿ ಪತನಗೊಂಡಿದೆ.

    ಪತನಗೊಳ್ಳುತ್ತಿದ್ದಂತೆ ಪೈಲಟ್‌ ಸುರಕ್ಷಿತವಾಗಿ ಎಜೆಕ್ಟ್‌ ಆಗಿದ್ದು ರಕ್ಷಣೆ ಮಾಡಲಾಗಿದೆ ಎಂದು ನೌಕಾಪಡೆ( Indian Navy) ತನ್ನ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ (BoI) ಆದೇಶಿಸಲಾಗಿದೆ.

     

    2019 ರಿಂದ ಲೆಕ್ಕ ಹಾಕಿದರೆ MiG-29K ನಾಲ್ಕನೇ ಅಪಘಾತ ಪ್ರಕರಣ ಇದಾಗಿದೆ. ವಿಮಾನವು ಹಾರಾಟ ನಡೆಸಿ ವಾಯುನೆಲೆಗೆ ಮರಳುತ್ತಿದ್ದಾಗ ಪತನಗೊಂಡಿದೆ. ಇದನ್ನೂ ಓದಿ: 44 ವರ್ಷ ಹಳೆಯ ಕಾರನ್ನು ಯಾರೂ ಬಳಸಲಾರರು – ಮಿಗ್ ಬಳಕೆ ಕುರಿತು ಧನೋವಾ ಮಾತು

    MiG-29K ವಿಮಾನಕ್ಕೆ ರಷ್ಯಾ ನಿರ್ಮಿತ K-36D-3.5 ಎಜೆಕ್ಷನ್‌ ಸೀಟ್‌ ಅಳವಡಿಸಲಾಗಿದೆ. ಎಜೆಕ್ಷನ್‌ ಹ್ಯಾಂಡಲ್‌ ಎಳೆದ ಕೂಡಲೇ ಹಿಂದುಗಡೆ ಪೈಲಟ್‌ ಅನ್ನು ಹೊರಹಾಕಿ ನಂತ ಮುಂದಿರುವ ಪೈಲಟ್‌ ಅನ್ನು ಹೊರಕ್ಕೆ ಎಸೆಯುತ್ತದೆ.

    ಹಾರುವ ಶವಪೆಟ್ಟಿಗೆ:
    ರಷ್ಯಾದ ಮಿಕೋಯಾನ್ ಗುರೇವಿಚ್(ಮಿಗ್) 21 ಬೈಸನ್ 1959 ರಲ್ಲಿ ತಯಾರಾಗಿದ್ದು, 1963 ರಲ್ಲಿ ಮಿಗ್ 21 ವಿವಿಧ ಆವೃತ್ತಿಯ ಒಟ್ಟು 874 ವಿಮಾನಗಳು ಭಾರತದ ವಾಯುಸೇನೆಗೆ ಸೇರ್ಪಡೆಯಾಗಿತ್ತು. 1971 ರಲ್ಲಿ ಬಾಂಗ್ಲಾ ಕದನದ ವೇಳೆ ಪ್ರಮುಖ ಪಾತ್ರವಾಹಿಸಿದ್ದ ಮಿಗ್ ಪಾಕಿಸ್ತಾನ 9 ವಿಮಾನಗಳನ್ನು ಹೊಡೆದು ಹಾಕಿತ್ತು. ಉಳಿದ ಯುದ್ಧ ವಿಮಾನಗಳಿಗೆ ಹೋಲಿಸಿದರೆ ಈ ವಿಮಾನಗಳ ಸಾಮರ್ಥ್ಯ ಕಡಿಮೆ ಎಂದು ಗೊತ್ತಾದ ಬಳಿಕ 1990 ರಲ್ಲಿ ಇವುಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಸದ್ಯ ಭಾರತದಲ್ಲಿ 100ಕ್ಕೂ ಅಧಿಕ ಮಿಗ್ ವಿಮಾನಗಳು ಕಾರ್ಯಾಚರಣೆ ನಡೆಸುತ್ತಿವೆ. ಖರೀದಿಸಿದ ಪೈಕಿ 500ಕ್ಕೂ ಹೆಚ್ಚು ವಿಮಾನಗಳು ಪತನಗೊಂಡಿದೆ. ಹೀಗಾಗಿ ವಾಯುಪಡೆಯಲ್ಲಿ ಈ ವಿಮಾನಗಳು ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿವೆ. ಇದನ್ನೂ ಓದಿ: ಆರ್ 73 ಸೆಲೆಕ್ಟ್ ಮಾಡಿದ್ದೇನೆ : ಅಭಿನಂದನ್ ಕೊನೆಯ ರೇಡಿಯೋ ಸಂದೇಶ – ಡಾಗ್ ಫೈಟ್ ಹೇಗೆ ನಡೆಯಿತು?

    2016 ರಲ್ಲಿ 110 ಮಿಗ್ 21 ಜೆಟ್ ವಿಮಾನಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಈ ಸಂದರ್ಭದಲ್ಲಿ ಮಲ್ಟಿ ಮೋಡ್ ರೇಡಾರ್, ಉತ್ತಮ ಏವಿಯಾನಿಕ್ಸ್, ಸಂವಹನ ವ್ಯವಸ್ಥೆಯನ್ನು ನೀಡಲಾಗಿತ್ತು.  ಹಾರುವ ಶವಪೆಟ್ಟಿಗೆ ಎಂಬ ಕುಖ್ಯಾತಿ, ಎಫ್ 16 ಮುಂದೆ ಏನು ಅಲ್ಲ ಎಂದು ಭಾವಿಸಿದ್ದರೂ ಅಭಿನಂದನ್ ಈ ವಿಮಾನ ಮೂಲಕವೇ ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿ ಒಂದು ವಿಮಾನವನ್ನು ಉರುಳಿಸುವ ಮೂಲಕ ಸಾಧನೆ ನಿರ್ಮಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ನೌಕಾನೆಲೆ ನಿರ್ಬಂಧಿತ ಅಂಜುದೀವ್ ದ್ವೀಪದಲ್ಲಿ ಹಾರಿದ ತ್ರಿವರ್ಣ ಧ್ವಜ

    ನೌಕಾನೆಲೆ ನಿರ್ಬಂಧಿತ ಅಂಜುದೀವ್ ದ್ವೀಪದಲ್ಲಿ ಹಾರಿದ ತ್ರಿವರ್ಣ ಧ್ವಜ

    ಕಾರವಾರ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಚರಿಸಲಾಗುತ್ತಿರುವ ‘ಆಜಾದಿ ಕಾ ಅಮೃತ್ ಮಹೋತ್ಸವ’ದಲ್ಲಿ ದೇಶದಾದ್ಯಂತ ಭಾರತೀಯ ನೌಕಾಪಡೆಯಿಂದ 75 ದ್ವೀಪಗಳಲ್ಲಿ ಧ್ವಜಾರೋಹಣ ನಡೆಸಲಾಗಿದೆ. ಅದರಂತೆ ಕಾರವಾರದ ನೌಕಾನೆಲೆ ನಿರ್ಬಂಧಿತ ಅಂಜುದೀವ್ ದ್ವೀಪದಲ್ಲಿಯೂ ಕೂಡ ತ್ರಿವರ್ಣ ಧ್ವಜವನ್ನು ಹಾರಿಸಿ ಗೌರವ ಸಲ್ಲಿಸಲಾಯಿತು.

    75ನೇ ವರ್ಷದ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ‘ಆಜಾದಿ ಕಾ ಅಮೃತ್ ಮಹೋತ್ಸವ’ ಎಂದು ಆಚರಿಸಲು ಕರೆ ನೀಡಲಾಗಿದೆ. ಭಾರತೀಯ ಸಶಸ್ತ್ರ ಪಡೆಗಳು ಮತ್ತು ಅರೆಸೇನಾ ಪಡೆಗಳು ದೇಶಾದ್ಯಂತ ‘ಅಜಾದಿ ಕಾ ಅಮೃತ್ ಮಹೋತ್ಸವ’ ಸರಣಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ನವದೆಹಲಿಯ ಕೊಠಾರಿ ಕ್ರೀಡಾಂಗಣದಲ್ಲಿ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ಈ ಕಾರ್ಯಕ್ರಮಗಳಿಗೆ ಶುಕ್ರವಾರ ಚಾಲನೆ ನೀಡಿದರು.

    ಬಳಿಕ ಕಾರವಾರದ ಕದಂಬ ನೌಕಾನೆಲೆ ವ್ಯಾಪ್ತಿಯ ಕರ್ನಾಟಕ ನೌಕಾ ವಲಯದ ಫ್ಲ್ಯಾಗ್ ಆಫೀಸರ್ ಮಹೇಶ್ ಸಿಂಗ್ ಅಂಜುದೀವ್ ದ್ವೀಪದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅಂಜುದೀವ್ ದ್ವೀಪವು ಭಾರತೀಯ ನೌಕಾಪಡೆಗೆ ರಕ್ಷಣೆಯ ದೃಷ್ಟಿಯಲ್ಲಿ ಪ್ರಮುಖವಾಗಿದೆ ಎಂದು ಹೇಳಿದರು.

  • ಆಕಾಶದಲ್ಲಿ ಯೋಗ ಪ್ರದರ್ಶಿಸಿದ ವಾಯುಪಡೆಯ ಸಿಬ್ಬಂದಿ

    ಆಕಾಶದಲ್ಲಿ ಯೋಗ ಪ್ರದರ್ಶಿಸಿದ ವಾಯುಪಡೆಯ ಸಿಬ್ಬಂದಿ

    ನವದೆಹಲಿ: ದೇಶದ ಭೂ, ವಾಯು ಹಾಗೂ ನೌಕಾ ಪಡೆಯಿಂದ ವಿಶ್ವ ಯೋಗದಿನ ಆಚರಿಸಲಾಗಿದ್ದು, ತಾವು ಇರುವ ವಾತಾವರಣದಲ್ಲಿಯೇ ಯೋಗಾಸಗಳನ್ನು ಮಾಡುವ ಮೂಲಕ ಜಗತ್ತಿನ ಜನರ ಗಮನ ಸೆಳೆದಿದ್ದಾರೆ.

    ಭಾರತೀಯ ವಾಯು ಪಡೆಯ ಪ್ಯಾರಾಟ್ರೂಪರ್ಸ್ ಟ್ರೈನಿಂಗ್ ಸ್ಕೂಲ್ ನ ತರಬೇತುದಾರರಾದ ಸ್ಯಾಮಲ್ ಹಾಗೂ ಗಜಾನಂದ್ ಯಾದವ್ ಅವರು ಆಕಾಶಸದಲ್ಲಿ ಯೋಗಾಸ ಪ್ರದರ್ಶಿಸಿದ್ರು. ಅವರ ಫೋಟೋ ಕೆಳಗೆ “ಇದು ಉತ್ತಮ ಆರೋಗ್ಯ, ಸಂತೋಷ, ಸಾಮರಸ್ಯ ಮತ್ತು ಐಎಎಫ್ ಏರ್ ವಾರಿಯರ್ ಶಾಂತಿಯ ಸಂದೇಶ. ಆಕಾಶದಲ್ಲಿ ಯೋಗಾಭ್ಯಾಸ ಮಾಡುತ್ತಿರುವ ಭಾರತೀಯ ವಾಯುಪಡೆಯ ಪ್ಯಾರಾಟ್ರೂಪರ್ಸ್ ಟ್ರೈನಿಂಗ್ ಸ್ಕೂಲ್ ನ ತರಬೇತುದಾರರು” ಎಂದು ಬರೆದು ಐಎಎಫ್ ಟ್ವೀಟ್ ಮಾಡಿದೆ.

    ವಿಶಾಖಪಟ್ಟಣದ ಬಂಗಾಳ ಕೊಲ್ಲಿಯಲ್ಲಿ ಪೂರ್ವ ನೌಕಾದಳದ ಕಮಾಂಡರ್ ಸಿಬ್ಬಂದಿ ಹಾಗೂ ಪೂರ್ವ ನೌಕಾ ಪಡೆಯ ಜಲಾಂತರ್ಗಾಮಿ (ಸಬ್ ಮೆರಿನ್) ಸಿಬ್ಬಂದಿ ಕೂಡ ವಿಶ್ವ ಯೋಗ ಭಾಗವಹಿಸಿದರು. ಪೂರ್ವ ನೌಕಾ ಪಡೆಯ ಜಲಾಂತರ್ಗಾಮಿ ಸಿಬ್ಬಂದಿ ಸಬ್‍ಮೆರಿನ್ ನಲ್ಲಿಯೇ ಯೋಗಾಸನ ಮಾಡಿದರು.