Tag: ನ್ಯಾಟೋ

  • ಇಂಧನಕ್ಕೆ ಪ್ರಮುಖ ಆದ್ಯತೆ – ನ್ಯಾಟೋ ಮುಖ್ಯಸ್ಥನ ನಿರ್ಬಂಧಗಳ ಬೆದರಿಕೆಗೆ ಭಾರತ ತಿರುಗೇಟು

    ಇಂಧನಕ್ಕೆ ಪ್ರಮುಖ ಆದ್ಯತೆ – ನ್ಯಾಟೋ ಮುಖ್ಯಸ್ಥನ ನಿರ್ಬಂಧಗಳ ಬೆದರಿಕೆಗೆ ಭಾರತ ತಿರುಗೇಟು

    ನವದೆಹಲಿ: ರಷ್ಯಾದಿಂದ ತೈಲ, ಅನಿಲ ಅಥವಾ ಯುರೇನಿಯಂನಂತಹ ಇಂಧನ ಉತ್ಪನ್ನಗಳನ್ನ ಖರೀದಿಸುವುದನ್ನು ಮುಂದುವರಿಸಿದ್ರೆ ಶೇ.100 ರಷ್ಟು ದ್ವಿತೀಯ ಸುಂಕ ವಿಧಿಸುವ ಸಾಧ್ಯತೆಯಿದೆ ಎಂಬ ನ್ಯಾಟೋ ಮುಖ್ಯಸ್ಥ ಮಾರ್ಕ್ ರುಟ್ಟೆ ಅವರ ಬೆದರಿಕೆಯನ್ನು ಭಾರತ ತಳ್ಳಿಹಾಕಿದೆ. ಜೊತೆಗೆ ದೇಶದ ಇಂಧನ ಅಗತ್ಯತೆಗಳನ್ನು ಭದ್ರಪಡಿಸಿಕೊಳ್ಳುವ ಕಡೆಗೆ ಆದ್ಯತೆ ನೀಡಿರುವುದಾಗಿಯೂ ತಿಳಿಸಿದೆ.

    ರಷ್ಯಾದಿಂದ ತೈಲ, ಅನಿಲ ಅಥವಾ ಯುರೇನಿಯಂ ನಂತಹ ಇಂಧನ ಉತ್ಪನ್ನಗಳನ್ನ ಖರೀದಿಸುವುದನ್ನು ಮುಂದುವರಿಸುವ ದೇಶಗಳ ಮೇಲೆ 500% ಸುಂಕ (Tariff) ವಿಧಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ವರದಿಯಾಗಿತ್ತು. ಈ ಬೆನ್ನಲ್ಲೇ 100% ದ್ವಿತೀಯ ಸುಂಕ ವಿಧಿಸುವುದಾಗಿ ರುಟ್ಟೆ ಬೆದರಿಕೆಹಾಕಿದ್ದರು.

    ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ (Randhir Jaiswal) ಪ್ರತಿಕ್ರಿಯಿಸಿದ್ದಾರೆ. ತೈಲ ಪೂರೈಕೆಯ ಅಗತ್ಯತೆಗಳನ್ನು ಭದ್ರಪಡಿಸಿಕೊಳ್ಳುವುದು ರಾಷ್ಟ್ರ ರಾಜಧಾನಿಗೆ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರಲ್ಲದೇ ದ್ವಿಮುಖ ಮಾನದಂಡ ಅಳವಡಿಸಿಕೊಳ್ಳದಂತೆಯೂ ಎಚ್ಚರಿಕೆ ನೀಡಿದ್ದಾರೆ. ಮಾರುಕಟ್ಟೆಗಳಲ್ಲಿ ಏನು ಲಭ್ಯವಾಗುತ್ತಿದೆ, ಜಾಗತಿಕ ಪರಿಸ್ಥಿತಿ ಹೇಗಿದೆ? ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಈ ವಿಷಯದ ಕುರಿತು ಅನೇಕ ವರದಿಗಳನ್ನು ನಾವು ನೋಡಿದ್ದೇವೆ. ಅಂತಾರಾಷ್ಟ್ರೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿಯೂ ಗಮನಿಸಿದ್ದೇವೆ. ನಮ್ಮ ಜನಕ್ಕೆ ಬೇಕಾದ ಇಂಧನದ ಅಗತ್ಯತೆಗಳನ್ನ ಭದ್ರಪಡಿಸಿಕೊಳ್ಳುವುದು ಪ್ರಮುಖ ಆದ್ಯತೆಯಾಗಿದೆ. ಜಾಗತಿಕ ಪರಿಸ್ಥಿತಿಗಳು ನಮ್ಮನ್ನ ಗೈಡ್‌ ಮಾಡುತ್ತಿವೆ ಎಂದು ತಿಳಿಸಿದ್ದಾರೆ.

    ರುಟ್ಟೆ ಹೇಳಿದ್ದೇನು?
    50 ದಿನಗಳಲ್ಲಿ ಶಾಂತಿ ಒಪ್ಪಂದದ ಹೊರತು ರಷ್ಯಾದಿಂದ ರಫ್ತು ಮಾಡಿಕೊಳ್ಳುವ ದೇಶಗಳ ಮೇಲೆ ಶೇ. 100ರಷ್ಟು ದ್ವಿತೀಯ ಸುಂಕದ ಬೆದರಿಕೆಯನ್ನು ಟ್ರಂಪ್ ಹಾಕಿದ್ದರು. 2022 ರಲ್ಲಿ ಉಕ್ರೇನ್‌ ವಿರುದ್ಧ ಯುದ್ಧ ಪ್ರಾರಂಭವಾದಾಗಿನಿಂದ ರಷ್ಯಾದ ಪ್ರಮುಖ ವ್ಯಾಪಾರ ಪಾಲುದಾರನಾದ ಭಾರತ, ಬ್ರೆಜಿಲ್ ಮತ್ತು ಚೀನಾಗಳಿಗೆ ರುಟ್ಟೆ ಎಚ್ಚರಿಕೆ ನೀಡಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿ, ಚೀನಾ, ಭಾರತ ಮತ್ತು ಬ್ರೆಜಿಲ್ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಇದರಿಂದ ನಿಮಗೆ ತೀವ್ರ ತೊಂದರೆಯಾಗಬಹುದು. ವ್ಲಾಡಿಮಿರ್ ಪುಟಿನ್ ಅವರಿಗೆ ಫೋನ್ ಮಾಡಿ, ಉಕ್ರೇನ್ ವಿರುದ್ಧದ ಶಾಂತಿ ಮಾತುಕತೆಯನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಹೇಳಿ, ಇಲ್ಲದಿದ್ದರೆ ಇದು ಬ್ರೆಜಿಲ್, ಭಾರತ ಮತ್ತು ಚೀನಾದ ಮೇಲೆ ತೀವ್ರ ಪರಿಣಾಮವನ್ನುಂಟು ಮಾಡಲಿದೆ ಎಂದು ಹೇಳಿದ್ದರು.

  • ಉಕ್ರೇನ್‍ನ ನಾಲ್ಕು ಪ್ರದೇಶಗಳು ರಷ್ಯಾ ವಶ – ನ್ಯಾಟೋ ಸದಸ್ಯತ್ವಕ್ಕಾಗಿ ಝೆಲೆನ್ಸ್ಕಿ ಪಟ್ಟು

    ಉಕ್ರೇನ್‍ನ ನಾಲ್ಕು ಪ್ರದೇಶಗಳು ರಷ್ಯಾ ವಶ – ನ್ಯಾಟೋ ಸದಸ್ಯತ್ವಕ್ಕಾಗಿ ಝೆಲೆನ್ಸ್ಕಿ ಪಟ್ಟು

    ‌ಮಾಸ್ಕೋ: ಉಕ್ರೇನ್‍ನ (Ukraine) ನಾಲ್ಕು ಪ್ರದೇಶಗಳನ್ನು ರಷ್ಯಾ (Russia) ವಶಪಡಿಸಿಕೊಂಡ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಸದಸ್ಯತ್ವವವನ್ನು ಆದಷ್ಟೂ ಬೇಗ ಕೊಡಿ ಎಂದು ನ್ಯಾಟೋಗೆ (Nato) ಮನವಿ ಸಲ್ಲಿಸಿದ್ದಾರೆ.

    ಉಕ್ರೇನ್‍ನ ನಾಲ್ಕು ಪ್ರದೇಶಗಳಾದ ಡಾನೆಸ್ಕ್, ಖೇರ್ಸಾನ್, ಲುಹಾಂಸ್ಕ್ ಮತ್ತು ಝೆಪೋರ್‌ಝಿಯಾ ಪ್ರದೇಶಗಳನ್ನು ರಷ್ಯಾ ವಶಕ್ಕೆ ಪಡೆದಿದೆ. ಈ ನಾಲ್ಕು ಪ್ರದೇಶಗಳನ್ನು ರಷ್ಯಾದೊಂದಿಗೆ ವಿಲೀನ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ – ಪುಟಿನ್‌ ಘೋಷಣೆ

    ಕ್ರೆಮ್ಲಿನ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿಲೀನ ಪ್ರಕ್ರಿಯೆ ನಡೆಯಿತು. ಬಳಿಕ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin), ಉಕ್ರೇನ್‍ನ ಸುಮಾರು ಶೇ.15 ರಷ್ಟು ಭೂಭಾಗವಿರುವ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಪ್ರದೇಶಗಳು ಶಾಶ್ವತವಾಗಿ ರಷ್ಯಾ ಪಾಲಾಗಲಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೂಕ್ತ ಒಳಉಡುಪು ಧರಿಸಲೇಬೇಕು – ಪಾಕ್ ವಿಮಾನಯಾನ ಸಂಸ್ಥೆ ಆದೇಶ

    ಇತ್ತ ರಷ್ಯಾ ಈ ನಡೆಯ ಬೆನ್ನಲ್ಲೇ ಝೆಲೆನ್ಸ್ಕಿ, ನ್ಯಾಟೋ ಸದಸ್ಯತ್ವ ತ್ವರಿತವಾಗಿ ಕೊಡಬೇಕೆಂದು ಪಟ್ಟುಹಿಡಿದಿದ್ದಾರೆ. ನಾವು ಮಿತ್ರಪಕ್ಷಗಳೊಂದಿಗೆ ಮೈತ್ರಿಗೆ ಸಂಬಂಧಿಸಿದ ಎಲ್ಲ ನಿಯಮಗಳನ್ನೂ ಪಾಲಿಸಿದ್ದೇವೆ. ಹಾಗಾಗಿ ನಮಗೆ ಆದಷ್ಟೂ ಬೇಗ ಸದಸ್ಯತ್ವ ನೀಡುವಂತೆ ಕೋರಿರುವ ಅರ್ಜಿಗೆ ಸಹಿ ಹಾಕಿ ನ್ಯಾಟೋಗೆ ನೀಡಿದ್ದಾರೆ. ಈ ಮೂಲಕ ನಾವು ನಿರ್ಣಾಯಕ ಹೆಜ್ಜೆ ಇಡುತ್ತಿದ್ದೇವೆ ಎಂದು ಝೆಲೆನ್ಸ್ಕಿ ರಷ್ಯಾ ವಿರುದ್ಧ ನ್ಯಾಟೋ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ.

    ಈ ಎಲ್ಲಾ ಬೆಳವಣಿಗೆಯ ನಡುವೆಯೇ ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿದಿದೆ. ಝೆಪೋರ್‌ಝಿಯಾ ಪ್ರದೇಶಗಳಲ್ಲಿ ರಷ್ಯಾ ತನ್ನ ಹಿಡಿತವನ್ನು ಸಾಧಿಸಲು ರಾಕೆಟ್ ದಾಳಿ ನಡೆಸಿ ಅನೇಕ ಸಾವು, ನೋವಿಗೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಷ್ಯಾ, ಉಕ್ರೇನ್ ಘರ್ಷನೆಯಿಂದ 3ನೇ ವಿಶ್ವ ಯುದ್ಧವಾಗದಂತೆ ತಡೆಯಲು ನಾವು ಶ್ರಮಿಸಬೇಕು: ಜೋ ಬೈಡೆನ್

    ರಷ್ಯಾ, ಉಕ್ರೇನ್ ಘರ್ಷನೆಯಿಂದ 3ನೇ ವಿಶ್ವ ಯುದ್ಧವಾಗದಂತೆ ತಡೆಯಲು ನಾವು ಶ್ರಮಿಸಬೇಕು: ಜೋ ಬೈಡೆನ್

    ನ್ಯೂಯಾರ್ಕ್: ಅಮೆರಿಕಾದ ಅಧ್ಯಕ್ಷ ಜೋ ಬೈಡೆನ್ ಶುಕ್ರವಾರ ನ್ಯಾಟೋ ಮತ್ತು ರಷ್ಯಾ ನಡುವಿನ ಮೊದಲ ಘರ್ಷಣೆಯು ಮೂರನೇ ಮಹಾಯುದ್ಧಕ್ಕೆ ಕಾರಣವಾಗಬಹುದು ಹೀಗಾಗಿ ನಾವು ಅದನ್ನು ತಡೆಯಲು ಶ್ರಮಿಸಬೇಕು ಎಂದು ಹೇಳಿದ್ದಾರೆ.

    ನ್ಯಾಟೋ ತನ್ನ ಭೂಪ್ರದೇಶದ ಪ್ರತಿಯೊಂದು ಇಂಚನ್ನು ರಕ್ಷಿಸುತ್ತದೆ. ಆದರೆ ಅದು ಉಕ್ರೇನ್‍ನಲ್ಲಿ ರಷ್ಯಾದ ವಿರುದ್ಧ ಯುದ್ಧ ಮಾಡುವುದಿಲ್ಲ ಎಂದು ಹೇಳಿದ್ದಾರೆ. ನ್ಯಾಟೋ ಉಕ್ರೇನ್‍ನಲ್ಲಿ ರಷ್ಯಾದ ವಿರುದ್ಧ ಯುದ್ಧ ಮಾಡುವುದಿಲ್ಲ ಎಂದು ಯುಎಸ್ ಅಧ್ಯಕ್ಷ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಏಕೆಂದರೆ ಅದು ಮೂರನೇ ಮಹಾಯುದ್ಧಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ನಾನು ಸ್ಪಷ್ಟವಾಗಿರಲು ಬಯಸುತ್ತೇನೆ. ನಾವು ನ್ಯಾಟೋದ ಪ್ರತಿಯೊಂದು ಇಂಚನ್ನು ಒಂದು ಏಕೀಕೃತ ಮತ್ತು ಕಲಾಯಿ ನ್ಯಾಟೋದ ಸಂಪೂರ್ಣ ಶಕ್ತಿಯೊಂದಿಗೆ ರಕ್ಷಿಸುತ್ತೇವೆ. ಆದರೆ ನಾವು ಉಕ್ರೇನ್‍ನಲ್ಲಿ ರಷ್ಯಾದ ವಿರುದ್ಧ ಯುದ್ಧ ಮಾಡುವುದಿಲ್ಲ. ನ್ಯಾಟೋ ಮತ್ತು ರಷ್ಯಾದ ನಡುವಿನ ನೇರ ಮುಖಾಮುಖಿ 3ನೇ ವಿಶ್ವ ಯುದ್ಧವಾಗದಂತೆ ನಾವು ತಡೆಯಲು ಶ್ರಮಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

    ಆದಾಗ್ಯೂ, ಬಿಡೆನ್ ಅವರು ಲಾಟ್ವಿಯಾ, ಎಸ್ಟೋನಿಯಾ, ಲಿಥುವೇನಿಯಾ ಮತ್ತು ರೊಮೇನಿಯಾದಂತಹ ರಷ್ಯಾದ ಗಡಿಯಲ್ಲಿ 12,000 ಸೈನಿಕರನ್ನು ಸ್ಥಳಾಂತರಿಸಿದ್ದಾರೆ. ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ವಿರುದ್ಧ ನಡೆಸಿದ ಯುದ್ಧದಲ್ಲಿ ವಿಜಯಶಾಲಿಯಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಮಹಿಳೆ ನಾಮನಿರ್ದೇಶನ

    ಯುಎಸ್ ನೇತೃತ್ವದ ನಿರ್ಬಂಧಗಳು ರಷ್ಯಾದ ಆರ್ಥಿಕತೆಯ ಮೇಲೆ ಕೆಟ್ಟದಾಗಿ ಪರಿಣಾಮ ಬೀರುತ್ತಿದೆ. ಇದರ ಮಧ್ಯೆ, ಜಿ7 ರಾಷ್ಟ್ರಗಳು ಪ್ರಮುಖ ಉತ್ಪನ್ನಗಳಿಗೆ ಸಂಬಂಧಿಸಿದಂತೆ ರಷ್ಯಾಕ್ಕೆ ಅತ್ಯಂತ ಒಲವುಳ್ಳ ರಾಷ್ಟ್ರದ ಸ್ಥಾನಮಾನವನ್ನು ನೀಡಲು ನಿರಾಕರಿಸಲು ಒಪ್ಪಿಕೊಂಡಿವೆ. ಇದರಿಂದ ವಿಶ್ವ ವ್ಯಾಪಾರ ಸಂಸ್ಥೆಯಲ್ಲಿ ರಷ್ಯಾದ ಸದಸ್ಯತ್ವದ ಪ್ರಯೋಜನಗಳನ್ನು ಹಿಂತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

  • ನ್ಯಾಟೋ ಸದಸ್ಯತ್ವಕ್ಕೆ ಪಟ್ಟು ಹಿಡಿಯಲ್ಲ ಎಂದ ಉಕ್ರೇನ್‌:  ರಷ್ಯಾದ 2 ಷರತ್ತಿಗೆ ಒಪ್ಪಿಗೆ

    ನ್ಯಾಟೋ ಸದಸ್ಯತ್ವಕ್ಕೆ ಪಟ್ಟು ಹಿಡಿಯಲ್ಲ ಎಂದ ಉಕ್ರೇನ್‌: ರಷ್ಯಾದ 2 ಷರತ್ತಿಗೆ ಒಪ್ಪಿಗೆ

    ಕಿವ್‌: ಮಹತ್ವದ ಬೆಳವಣಿಗೆಯಲ್ಲಿ ನ್ಯಾಟೋ(NATO) ಸದಸ್ಯತ್ವಕ್ಕೆ ನಾವು ಪಟ್ಟು ಹಿಡಿಯುವುದಿಲ್ಲ ಎಂದು ಉಕ್ರೇನ್‌ ಅಧ್ಯಕ್ಷ ವೊಲೊದಿಮಿರ್‌ ಜೆಲೆನ್‌ಸ್ಕಿ ಹೇಳಿದ್ದಾರೆ.

    ಉಕ್ರೇನ್‌ನಿಂದ ಸ್ವಾಯತ್ತೆ ಬಯಸುತ್ತಿರುವ ಎರಡು ರಷ್ಯಾ-ಪರ ಪ್ರದೇಶಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳಲು ನಾನು ಸಿದ್ಧನಿದ್ದೇನೆ ಎಂದು ಮಂಗಳವಾರ ರಾತ್ರಿ ಪ್ರಕಟಿಸಿದ್ದಾರೆ.

    ರಷ್ಯಾ ವಿಧಿಸಿದ್ದ 4 ಪ್ರಮುಖ ಷರತ್ತುಗಳಲ್ಲಿ ಎರಡನ್ನು ಉಕ್ರೇನ್‌ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಈಗ ಯುದ್ಧ ಅಂತ್ಯವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

    ನಮ್ಮನ್ನು ನ್ಯಾಟೋ ಒಪ್ಪಿಕೊಳ್ಳಲು ತಯಾರಿಲ್ಲ. ರಷ್ಯಾ ವಿರುದ್ಧ ಯುದ್ಧ ಮಾಡಿ ಅಪಾಯ ತಂದುಕೊಳ್ಳಲು ನ್ಯಾಟೋಗೆ ಇಷ್ಟವಿಲ್ಲ. ರಷ್ಯಾ ವಿರುದ್ಧ ಯುದ್ಧ ಮಾಡಲು ನ್ಯಾಟೋ ಹೆದರುತ್ತದೆ. ಹೀಗಾಗಿ ನ್ಯಾಟೋ ಕುರಿತ ನಮ್ಮ ನಿಲುವಿನಿಂದ ನಾವು ಹಿಂದಕ್ಕೆ ಸರಿದಿದ್ದೇವೆ ಎಂದು ಎಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಜೆಲೆನ್‌ಸ್ಕಿ ತಿಳಿಸಿದ್ದಾರೆ.‌ ಇದನ್ನೂ ಓದಿ: ಕಚ್ಚಾ ತೈಲ ಬೆಲೆ ಏರಿಕೆ ಬೆನ್ನಲ್ಲೇ ಭಾರತಕ್ಕೆ ರಷ್ಯಾದಿಂದ ಭಾರೀ ಆಫರ್

    ಉಕ್ರೇನ್‌ನಿಂದ ಸ್ವಾಯತ್ತೆ ಬಯಸುತ್ತಿರುವ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಿದ್ಧನಿದ್ದೇನೆ ಎಂದೂ ಜೆಲೆನ್‌ಸ್ಕಿ ತಿಳಿಸಿದ್ದು ಯುದ್ಧ ಅಂತ್ಯವಾಗುವ ಸಾಧ್ಯತೆಯಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

    ಯುದ್ಧ ನಿಲ್ಲಿಸಬೇಕಾದರೆ ರಷ್ಯಾ 4 ಷರತ್ತನ್ನು ಉಕ್ರೇನ್‌ಗೆ ವಿಧಿಸಿತ್ತು. ಈ 4 ಷರತ್ತನ್ನು ಒಪ್ಪಿಕೊಳ್ಳುವವರೆಗೂ ಯುದ್ಧ ನಿಲ್ಲಿಸುವುದೇ ಇಲ್ಲ ಎಂದು ರಷ್ಯಾ ಸಂಧಾನ ಸಭೆಯಲ್ಲಿ ಖಡಕ್‌ ಆಗಿ ಹೇಳಿತ್ತು.

    ರಷ್ಯಾದ ಷರತ್ತು ಏನಿತ್ತು?
    1. ನ್ಯಾಟೋ ಸೇರಬಾರದು:
    ಅಮೆರಿಕ ನೇತೃತ್ವದ 30 ಪಾಶ್ಚಾತ್ಯ ದೇಶಗಳ ‘ನ್ಯಾಟೋ’ ಸಂಘಟನೆ ಸೇರಿದಂತೆ ಯಾವುದೇ ಗುಂಪುಗಳನ್ನು ಉಕ್ರೇನ್‌ ಸೇರಬಾರದು. ಉಕ್ರೇನ್‌ ತಟಸ್ಥವಾಗಿ ಉಳಿಯುವ ನಿರ್ಧಾರ ತೆಗೆದುಕೊಳ್ಳಬೇಕು. ಮುಂದೆ ಯಾವುದೇ ಕಾರಣಕ್ಕೂ ಹೊಸ ಸಂಘಟನೆಯನ್ನು ನಾನು ಸೇರುವುದಿಲ್ಲ ಎಂದು ಸಂವಿಧಾನಕ್ಕೆ ತಿದ್ದುಪಡಿ ತರಬೇಕು.

    2. ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಬೇಕು:
    ನಾವು ಉಕ್ರೇನ್‌ ಅನ್ನು ಸಂಪೂರ್ಣ ನಿಶ್ಶಸ್ತ್ರೀಕರಣ ಮಾಡುತ್ತಿದ್ದೇವೆ. ಒಂದು ವೇಳೆ ಉಕ್ರೇನ್‌ ತನ್ನ ಸೇನಾ ಕಾರ್ಯಚರಣೆ ಸ್ಥಗಿತಗೊಳಿಸಿದರೆ ನಾವು ಒಂದೇ ಒಂದು ಗುಂಡನ್ನೂ ಹಾರಿಸುವುದಿಲ್ಲ.

    3. ರಾಜ್ಯಗಳಿಗೆ ಮಾನ್ಯತೆ ಬೇಕು:
    ಬಂಡುಕೋರರ ವಶದಲ್ಲಿರುವ ಪ್ರಾಂತ್ಯಗಳಾದ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ಸ್ವತಂತ್ರ್ಯ ರಾಜ್ಯಗಳೆಂದು ಘೋಷಿಸಿ ಅವುಗಳಿಗೆ ಮಾನ್ಯತೆ ನೀಡಬೇಕು.

    4.ಕ್ರೆಮಿಯಾಕ್ಕೆ ಮಾನ್ಯತೆ:
    ಉಕ್ರೇನ್‌ ಮೇಲೆ ದಾಳಿ ನಡೆಸಿ 2014ರಲ್ಲಿ ವಶಪಡಿಸಿಕೊಂಡ ಕ್ರೆಮಿಯಾವನ್ನು ರಷ್ಯಾದ ಭಾಗವೆಂದು ಒಪ್ಪಬೇಕು. ಇವುಗಳಿಗೆ ಒಪ್ಪಿದರೆ ತಕ್ಷಣವೇ ನಾವು ಯುದ್ಧ ನಿಲ್ಲಿಸಲಿದ್ದೇವೆ. ಇದನ್ನೂ ಓದಿ: ರಷ್ಯಾದ ತೈಲ, ಅನಿಲ ಆಮದಿಗೆ ಅಮೆರಿಕ ನಿರ್ಬಂಧ

    ರಷ್ಯಾ ಆತಂಕ ಏನು?
    ನ್ಯಾಟೋ ಸಂಕ್ಷಿಪ್ತ ರೂಪ ಉತ್ತರ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ (ನ್ಯಾಟೋ). ಪ್ರಸ್ತುತ ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧಕ್ಕೆ ಮೂಲ ಕಾರಣವೇ ಈ ನ್ಯಾಟೋ.

    ಉಕ್ರೇನ್ ನ್ಯಾಟೋದ ಭಾಗವಾಗಲು ಬಯಸುತ್ತಿತ್ತು. ಆದರೆ ರಷ್ಯಾ ನ್ಯಾಟೋವನ್ನು ಬಲವಾಗಿ ವಿರೋಧಿಸುತ್ತಿದೆ. ತನ್ನ ವಿರುದ್ಧ ಹಣಿಯಲಾದ ದೇಶಗಳ ಒಕ್ಕೂಟ ಎಂದೇ ರಷ್ಯಾ ನ್ಯಾಟೋವನ್ನು ಕರೆಯುತ್ತಿದೆ. ಉಕ್ರೇನ್ ನ್ಯಾಟೋಗೆ ಸೇರಿದರೆ ಉಕ್ರೇನ್‌ ಮೂಲಕ ನ್ಯಾಟೋದ ಸೈನ್ಯ ತನ್ನ ಗಡಿಗೆ ಬರುತ್ತದೆ ಎಂಬ ಆತಂಕವನ್ನು ರಷ್ಯಾ ವ್ಯಕ್ತಪಡಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಸುತ್ತಿನ ಮಾತುಕತೆ ನಡೆದರೂ ಯಾವುದೇ ನಿರ್ಧಾರಕ್ಕೆ ಬಾರದ ಹಿನ್ನೆಲೆಯಲ್ಲಿ ರಷ್ಯಾ ಉಕ್ರೇನ್‌ ಮೇಲೆ ದಾಳಿ ಮಾಡಿತ್ತು.

    ನ್ಯಾಟೋ ರಚನೆಯಾದ ಆರಂಭದಲ್ಲಿ 12 ಸದಸ್ಯ ರಾಷ್ಟ್ರಗಳನ್ನು ಹೊಂದಿತ್ತು. ಇದು ಅಮೆರಿಕ, ಬ್ರಿಟನ್, ಫ್ರಾನ್ಸ್, ಕೆನಡಾ, ಇಟಲಿ, ನೆದರ್ಲ್ಯಾಂಡ್ಸ್, ಐಸ್‌ಲ್ಯಾಂಡ್‌, ಬೆಲ್ಜಿಯಂ, ಲಕ್ಸೆಂಬರ್ಗ್, ನಾರ್ವೆ, ಪೋರ್ಚುಗಲ್ ಮತ್ತು ಡೆನ್ಮಾರ್ಕ್ ಅನ್ನು ಒಳಗೊಂಡಿತ್ತು. ಇಂದು, ನ್ಯಾಟೋ ಅಡಿಯಲ್ಲಿ 30 ಸದಸ್ಯ ರಾಷ್ಟ್ರಗಳಿವೆ

    ನ್ಯಾಟೋ ಸಾಮಾನ್ಯ ಭದ್ರತಾ ನೀತಿಯ ಮೇಲೆ ಕಾರ್ಯನಿರ್ವಹಿಸುವ ಮಿಲಿಟರಿ ಮೈತ್ರಿಯಾಗಿದೆ. ನ್ಯಾಟೋ ಸದಸ್ಯ ರಾಷ್ಟ್ರವನ್ನು ಆಕ್ರಮಿಸಿದರೆ, ಇದನ್ನು ಎಲ್ಲಾ ನ್ಯಾಟೋ ಸದಸ್ಯ ರಾಷ್ಟ್ರಗಳ ಆಕ್ರಮಣ ಎಂದು ಪರಿಗಣಿಸಲಾಗುತ್ತದೆ. ಎಲ್ಲಾ ನ್ಯಾಟೋ ಸದಸ್ಯ ರಾಷ್ಟ್ರಗಳು ಆಕ್ರಮಣದ ವಿರುದ್ಧ ಒಗ್ಗಟ್ಟಾಗಿ ಕೆಲಸ ಮಾಡುತ್ತದೆ.

  • ಉಕ್ರೇನ್‌ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್‌ ನೇರ ಎಚ್ಚರಿಕೆ

    ಉಕ್ರೇನ್‌ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್‌ ನೇರ ಎಚ್ಚರಿಕೆ

    ಮಾಸ್ಕೋ: ಉಕ್ರೇನ್‌ ರಾಜ್ಯತ್ವ(ಸ್ಟೇಟ್‌ಹುಡ್‌) ಅಪಾಯದಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನೇರವಾದ ಎಚ್ಚರಿಕೆ ನೀಡಿದ್ದಾರೆ.

    ಉಕ್ರೇನ್‌ ದೇಶದವರು ಈಗ ಏನು ಮಾಡುತ್ತಿದ್ದಾರೋ ಅದನ್ನು ಮುಂದುವರಿಸಿದರೆ ದೇಶವಾಗಿ ಉಳಿಯವುದು ಅನುಮಾನ. ಹಾಗೆ ಏನಾದರೂ ಆದರೆ ಉಕ್ರೇನಿಗರೇ ಕಾರಣ ಎಂದು ಪುಟಿನ್‌ ಹೇಳಿಕೆ ನೀಡಿದ್ದಾರೆ.

    ಈ ಮೊದಲು ಈಗಿರುವ ಉಕ್ರೇನ್‌ ಸರ್ಕಾರವನ್ನು ಪತನಗೊಳಿಸಿ ತನ್ನ ಕೈಗೊಂಬೆ ವ್ಯಕ್ತಿಯನ್ನು ನೇಮಿಸುವ ಮೂಲಕ ಹೊಸ ಸರ್ಕಾರ ಸ್ಥಾಪನೆಗೆ ಪುಟಿನ್‌ ಮುಂದಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಈ ಹೊಸ ಹೇಳಿಕೆಯಿಂದ ಉಕ್ರೇನ್‌ ದೇಶವನ್ನೇ ಪುಟಿನ್‌ ಸಂಪೂರ್ಣವಾಗಿ ಕೈವಶ ಮಾಡುವ ಭೀತಿ ಎದುರಾಗಿದೆ.

    ಈಗಾಗಲೇ ಶಸ್ತ್ರಾಸ್ತ್ರ ಗೋದಾಮುಗಳು, ಯುದ್ಧಸಾಮಗ್ರಿ ಡಿಪೋಗಳು, ವಾಯುಯಾನ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳು ಸೇರಿದಂತೆ ಉಕ್ರೇನ್‌ನ ಪ್ರಮುಖ ಮಿಲಿಟರಿ ಮೂಲಸೌಕರ್ಯವನ್ನು ನಾಶಪಡಿಸುವ ಕಾರ್ಯಾಚರಣೆಯನ್ನು ರಷ್ಯಾ ಪ್ರಾಯೋಗಿಕವಾಗಿ ಪೂರ್ಣಗೊಳಿಸಿದೆ ಎಂದು ಪುಟಿನ್‌ ಹೇಳಿದರು. ಇದನ್ನೂ ಓದಿ: ಉಕ್ರೇನ್ ಮೇಲೆ ಮುಗಿಬಿದ್ದ ರಷ್ಯಾ – ಬಾಂಬ್, ಕ್ಷಿಪಣಿ ದಾಳಿಗೆ ಕೀವ್ ನಗರ ತತ್ತರ

    ಉಕ್ರೇನ್‌ ದೇಶದ ಈ ಸ್ಥಿತಿಗೆ ಅಲ್ಲಿನ ನಾಯಕತ್ವವೇ ಕಾರಣ. ಪಾಶ್ಚಾತ್ಯ ದೇಶಗಳು ನಿರ್ಬಂಧ ನಮ್ಮ ಮೇಲೆ ಯುದ್ಧ ಸಾರಿದಂತೆ. ರಷ್ಯಾದ ಪಡೆಗಳು ತಮಗೆ ನಿಯೋಜಿಸಲಾದ ಕಾರ್ಯಗಳನ್ನು ಪೂರೈಸುತ್ತವೆ ಮತ್ತು ಉಕ್ರೇನ್‌ನಲ್ಲಿ ಕಾರ್ಯಾಚರಣೆಯು ಯೋಜನೆ ಮತ್ತು ವೇಳಾಪಟ್ಟಿಗೆ ಅನುಗುಣವಾಗಿ ಮುಂದುವರಿಯುತ್ತದೆ ಎಂದು ಅವರು ತಿಳಿಸಿದರು.ಇದನ್ನೂ ಓದಿ: ಭಾರತಕ್ಕೆ ಗಟ್ಸ್ ಇಲ್ಲ ಅನ್ನೋರು ಮೊದಲು ಉಕ್ರೇನ್ ಗಡಿವರೆಗೆ ತಲುಪಿ ಧಮ್ ತೋರಿಸಬೇಕಿತ್ತು: ಸುಜಯ್

    ರಷ್ಯಾದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಅಗತ್ಯವಿಲ್ಲ. ಉಕ್ರೇನ್‌ನಲ್ಲಿ ವಿಶೇಷ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸುವ ನಿರ್ಧಾರ ಕಷ್ಟವಾಗಿತ್ತು ಎಂದರು.

  • ನೇರವಾಗಿ ರಷ್ಯಾವನ್ನು ಎದುರಿಸಲು ಮತ್ತೆ ಹಿಂದೇಟು ಹಾಕಿದ ನ್ಯಾಟೋ

    ನೇರವಾಗಿ ರಷ್ಯಾವನ್ನು ಎದುರಿಸಲು ಮತ್ತೆ ಹಿಂದೇಟು ಹಾಕಿದ ನ್ಯಾಟೋ

    ಕೀವ್/ಲಂಡನ್: ಶಸ್ತ್ರಾಸ್ತ್ರ ಪೂರೈಸುವ ಮೂಲಕ ಹಿಂದಿನಿಂದ ಉಕ್ರೇನ್ ಬೆಂಬಲಕೊಂಡುತ್ತಿರುವ ನ್ಯಾಟೋ ಪಡೆಗಳು, ನೇರವಾಗಿ ರಷ್ಯಾವನ್ನು ಎದಿರುಹಾಕಿಕೊಳ್ಳಲು ಮತ್ತೆ ಹಿಂದೇಟು ಹಾಕಿದೆ.

    ರಷ್ಯಾ ಮತ್ತು ಉಕ್ರೇನ್ ದಾಳಿ ಇಂದಿಗೆ 10ನೇ ದಿನಕ್ಕೆ ಮುಟ್ಟಿದ್ದು, ಇಂದು 6 ಗಂಟೆಗಳ ಕಾಲ ರಷ್ಯಾ ಕದನ ವಿರಾಮವನ್ನು ಘೋಷಿಸಿತ್ತು. ಇಂದು ರಷ್ಯಾ ದಾಳಿ ತಡೆಯಲು ನೋ ಫ್ಲೈ ಜೋನ್ ಘೋಷಣೆ ಮಾಡುವಂತೆ ಉಕ್ರೇನ್ ಅಧ್ಯಕ್ಷ ಝೆಲೆನ್‍ಸ್ಕಿ ಮಾಡಿದ ಮನವಿಯನ್ನು ನ್ಯಾಟೋ ಪುರಸ್ಕರಿಸಿಲ್ಲ. ಇದನ್ನೂ ಓದಿ: ಭಾರತದ ಮೇಲೆ ಯುದ್ಧದ ಎಫೆಕ್ಟ್: ಖಾದ್ಯತೈಲ, ಗೋಧಿ, ಸಿಮೆಂಟ್, ಕಬ್ಬಿಣ ದುಬಾರಿ

    ನಾವು ನೋ ಫ್ಲೈ ಜೋನ್ ಎಂದು ಘೋಷಿಸಿದರೆ ಉಕ್ರೇನ್‍ಗೆ ನ್ಯಾಟೋ ಯುದ್ಧ ವಿಮಾನ ಕಳಿಸಿ ರಷ್ಯಾದ ವಿಮಾನ ತಡೆಯಬೇಕಾಗುತ್ತದೆ. ಇದು ನೇರವಾಗಿ ಯುದ್ಧಕ್ಕೆ ಧುಮುಕಿದಂತೆ. ಇದು ಮೂರನೇ ಮಹಾಯುದ್ಧಕ್ಕೂ ನಾಂದಿ ಹಾಡಬಹುದು. ನಾವಿದಕ್ಕೆ ತಯಾರಿಲ್ಲ. ನಾವು ನೋ ಫ್ಲೈ ಜೋನ್ ಎಂದು ಘೋಷಿಸಲ್ಲ ಎಂದು ನ್ಯಾಟೋ ದೇಶಗಳು ಪ್ರಕಟಿಸಿವೆ.

    Vladimir Putin

    ಈ ಪ್ರಕಟನೆ ಕೇಳಿ ಝೆಲೆನ್‍ಸ್ಕಿ ಗರಂ ಆಗಿದ್ದಾರೆ. ನ್ಯಾಟೋ ತೀರ್ಮಾನ ರಷ್ಯಾಗೆ ಇನ್ನಷ್ಟು ದಾಳಿ ಮಾಡಲು ಗ್ರೀನ್ ಸಿಗ್ನಲ್ ನೀಡಿದಂತಾಗಿದೆ. ಇದನ್ನು ನ್ಯಾಟೋದಿಂದ ನಿರೀಕ್ಷೆ ಮಾಡಿರಲಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ನಾನೇಲ್ಲೂ ಓಡಿಹೋಗಿಲ್ಲ. ಕೀವ್‍ನಲ್ಲೇ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

    ರಷ್ಯಾದ ಮೇಲಿನ ದಿಗ್ಬಂಧನ ಯುದ್ಧಕ್ಕೆ ಸಮ. ಇದಕ್ಕೆ ತಕ್ಕ ಮೌಲ್ಯ ತೆರುತ್ತೀರಿ ಎಂದು ರಷ್ಯಾ ಅಧ್ಯಕ್ಷ ಪುಟಿನ್ ಎಚ್ಚರಿಸಿದ್ದಾರೆ. ಈ ಯುದ್ಧದಲ್ಲಿ ಗೆಲ್ಲೋದು ಉಕ್ರೇನ್ ದೇಶ ಎಂದು ಅಮೆರಿಕ ಭವಿಷ್ಯ ಹೇಳಿದೆ. ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಮುಂದಿನ ವಾರ ಪೋಲೆಂಡ್, ರೋಮೇನಿಯಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದನ್ನೂ ಓದಿ: ರಾಜವಂಶಗಳು ತಮ್ಮ ಸ್ವಾರ್ಥಕ್ಕೆ ಉಕ್ರೇನ್ ಸಮಸ್ಯೆಯನ್ನ ಬಳಸಿಕೊಳ್ಳುತ್ತೀವೆ: ಮೋದಿ ಕಿಡಿ

  • ಕೈಕೊಟ್ಟಿತೆ ನ್ಯಾಟೋ- ರಷ್ಯಾ ಬಾಂಬ್‌ ದಾಳಿ ತಡೆಗೆ ಉಕ್ರೇನ್‌ ಮನವಿ ತಿರಸ್ಕಾರ

    ಕೈಕೊಟ್ಟಿತೆ ನ್ಯಾಟೋ- ರಷ್ಯಾ ಬಾಂಬ್‌ ದಾಳಿ ತಡೆಗೆ ಉಕ್ರೇನ್‌ ಮನವಿ ತಿರಸ್ಕಾರ

    ಕೀವ್: ರಷ್ಯಾದ ಬಾಂಬ್‌ ದಾಳಿಯನ್ನು ತಡೆಗಟ್ಟಲು ಉಕ್ರೇನ್‌ನಲ್ಲಿ ಹಾರಾಟ ನಿಷೇಧ ವಲಯ ರೂಪಿಸುವಂತೆ ಮಾಡಿದ್ದ ಮನವಿಯನ್ನು ನ್ಯಾಟೋ ತಿರಸ್ಕರಿಸಿದ್ದು, ನ್ಯಾಟೋ ನಿಲುವನ್ನು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಖಂಡಿಸಿದ್ದಾರೆ.

    ಮುಷ್ಕರ, ಸಾವುನೋವುಗಳು ಅನಿವಾರ್ಯವೆಂದು ತಿಳಿದಿದ್ದ ನ್ಯಾಟೋ ಉದ್ದೇಶಪೂರ್ವಕವಾಗಿ ಉಕ್ರೇನ್‌ನ ಆಕಾಶ ವಲಯವನ್ನು ಮುಚ್ಚದಿರಲು ನಿರ್ಧರಿಸಿದೆ ಎಂದು ವೀಡಿಯೋ ಮೂಲಕ ನ್ಯಾಟೋ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಹಿಂತಿರುಗಿದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನುಮತಿ ನೀಡಿ – ಪ್ರಧಾನಿಗೆ ಐಎಂಎ ಪತ್ರ

    ಮೈತ್ರಿಕೂಟದ ನಾಯಕತ್ವವು ಉಕ್ರೇನಿಯನ್‌ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್‌ ದಾಳಿಗೆ ಹಸಿರು ನಿಶಾನೆ ತೋರಿಸಿದೆ. ಹಾರಾಟ ನಿಷೇಧ ವಲಯವನ್ನು ಮಾಡಲು ನಿರಾಕರಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ರಷ್ಯಾದ ಬಾಂಬ್‌ ದಾಳಿ ತಡೆಗಟ್ಟುವ ನಿಟ್ಟಿನಲ್ಲಿ ಉಕ್ರೇನ್‌ನಲ್ಲಿ ಹಾರಾಟ ನಿಷೇಧ ವಲಯ ರೂಪಿಸುವಂತೆ ಉಕ್ರೇನ್‌ ಮನವಿ ಮಾಡಿತ್ತು. ಆದರೆ ನ್ಯಾಟೋ ಇದನ್ನು ತಿರಸ್ಕರಿಸಿತ್ತು. ಆದರೆ ಮತ್ತೊಂದೆಡೆ ರಷ್ಯಾ ತನ್ನ ಯುದ್ಧವನ್ನು ನಿಲ್ಲಿಸದಿದ್ದರೆ ಹೊಸ ನಿರ್ಬಂಧಗಳನ್ನು ವಿಧಿಸುವುದಾಗಿ ಪಾಶ್ಚಿಮಾತ್ಯ ಮಿತ್ರ ರಾಷ್ಟ್ರಗಳು ಎಚ್ಚರಿಕೆ ನೀಡಿವೆ. ಇದನ್ನೂ ಓದಿ: ತಮ್ಮ ಹಡಗನ್ನೇ ಸ್ಫೋಟಿಸಿಕೊಂಡ ಉಕ್ರೇನ್ ಸೇನೆ!

    ಈ ಸಂಘರ್ಷದ ವಿಚಾರವಾಗಿ ಮೈತ್ರಿಕೂಟವು ಮಧ್ಯಪ್ರವೇಶಿಸುವುದಿಲ್ಲ. ಒಂದು ವೇಳೆ ಮಧ್ಯಪ್ರವೇಶಿಸಿದರೆ ವ್ಯಾಪಕ ಸಂಘರ್ಷಕ್ಕೆ ತಿರುಗಬಹುದು ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್‌ ಸ್ಟೋಲ್ಟೆನ್‌ಬರ್ಗ್‌ ಅಭಿಪ್ರಾಯಪಟ್ಟಿದ್ದಾರೆ.

    ನ್ಯಾಟೋ ಯುದ್ಧ ವಿಮಾನಗಳನ್ನು ಉಕ್ರೇನ್‌ನ ವಾಯುಮಾರ್ಗಕ್ಕೆ ಕಳುಹಿಸುವುದು ಮತ್ತು ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ಹಾರಾಟ ನಿಷೇಧ ವಲಯವನ್ನು ಹೇರಬಹುದು. ಹಾರಾಟ ನಿಷೇಧ ವಲಯ ಕಾರ್ಯಗತಗೊಳಿಸುವುದಕ್ಕೆ ಇರುವುದು ಅದೊಂದೇ ಮಾರ್ಗ ಎಂದು ಸ್ಟೋಲ್ಟೆನ್‌ಬರ್ಗ್‌ ತಿಳಿಸಿದ್ದಾರೆ. ಇದನ್ನೂ ಓದಿ: 16 ಗಂಟೆ ಟ್ರಾನ್‍ನಲ್ಲೇ ನಿಂತುಕೊಂಡೆ ಪ್ರಯಾಣ ಮಾಡಿದ್ದೇವೆ: ನೋವು ಹಂಚಿಕೊಂಡ ವಿದ್ಯಾರ್ಥಿಗಳು!

  • Russia Ukraine War – ಯಾವ ರಾಷ್ಟ್ರದ ಬೆಂಬಲ ಯಾರಿಗೆ?

    Russia Ukraine War – ಯಾವ ರಾಷ್ಟ್ರದ ಬೆಂಬಲ ಯಾರಿಗೆ?

    ರಡನೇ ಜಾಗತಿಕ ಯುದ್ಧದ ಬಳಿಕ ನಡೆದ ಶೀತಲ ಸಮರದಲ್ಲಿ ಜಗತ್ತು ಎರಡು ಭಾಗಗಳಾಗಿ ವಿಭಜನೆಗೊಂಡಿತ್ತು. ಒಂದು ಗುಂಪಿಗೆ ಅಮೆರಿಕ ನಾಯಕತ್ವ ವಹಿಸಿದರೆ ಮತ್ತೊಂದಕ್ಕೆ ಸೋವಿಯತ್ ಯೂನಿಯನ್ ನಾಯಕತ್ವ ವಹಿಸಿತ್ತು. ಯುಎಸ್‍ಎಸ್‍ಆರ್‌ನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು 1949ರಲ್ಲಿ ಅಮೆರಿಕ, ಕೆನಡಾ ಸೇರಿ 12 ದೇಶಗಳು ನಾರ್ತ್ ಅಟ್ಲಾಂಟಿಕ್ ಟ್ರೀಟಿ(ನ್ಯಾಟೋ) ಆರಂಭಿಸಿದವು. ಸದ್ಯ ನ್ಯಾಟೋ ಸದಸ್ಯ ರಾಷ್ಟ್ರಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

    ಈ ಪೈಕಿ ಯಾವುದೇ ದೇಶದ ಮೇಲೆ ದಾಳಿ ನಡೆದರೂ ಅದು ನನ್ನ ಸಂಸ್ಥೆ ಮೇಲಿನ ದಾಳಿ ಎಂದು ಭಾವಿಸಲಾಗುತ್ತದೆ ಎಂದು ಆರಂಭದಲ್ಲಿಯೇ ನ್ಯಾಟೋ ಘೋಷಿಸಿತ್ತು. ಆದರೆ 1991ರ ಡಿಸೆಂಬರ್‌ನಲ್ಲಿ ಯುಎಸ್‍ಎಸ್‍ಆರ್ ಛಿದ್ರವಾದಾಗ ಪರಿಸ್ಥಿತಿ ಬದಲಾಯಿತು. ಅಮೆರಿಕ ವಿಶ್ವದ ದೊಡ್ಡಣ್ಣನಾಗಿ ಅವತರಿಸಿತು.

    ರಷ್ಯಾ ಪರ ದೇಶಗಳು
    ಭಾರತ
    ರಷ್ಯಾಗೆ ಬಹಿರಂಗವಾಗಿ ಬೆಂಬಲ ಘೋಷಿಸಿಲ್ಲ. ಆದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಷ್ಯಾದ ನಿಲುವನ್ನು ಖಂಡಿಸಿಲ್ಲ. ಉಕ್ರೇನ್ ಸಾರ್ವಭೌಮತ್ವದ ಬಗ್ಗೆ ಮಾತನಾಡಿಲ್ಲ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎನ್ನುತ್ತಿದೆ. 2014ರಲ್ಲಿ ರಷ್ಯಾ ಕ್ರಿಮಿಯಾವನ್ನು ವಶಕ್ಕೆ ಪಡೆದಾಗಲೂ ಭಾರತ ವಿರೋಧಿಸಿರಲಿಲ್ಲ. ಭಾರತದ ಸ್ಥಿತಿ ಹೇಗಿದೆ ಎಂದರೆ ಅಮೆರಿಕ ಜೊತೆ ನಿಲ್ಲುತ್ತಿಲ್ಲ. ರಷ್ಯಾ ಜೊತೆಗೂ ಬಹಿರಂಗವಾಗಿ ಕೈಜೋಡಿಸುತ್ತಿಲ್ಲ. ಯಾರನ್ನು ಬಿಟ್ಟುಕೊಡುವ ಸ್ಥಿತಿಯಲ್ಲಿ ಭಾರತ ಇಲ್ಲ.  ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!

    ಚೀನಾ
    ನ್ಯಾಟೋ ವಿಸ್ತರಣೆ ಚೀನಾಗೂ ಇಷ್ಟವಿಲ್ಲ. ಇದನ್ನು ಬಹಿರಂಗವಾಗಿ ರಷ್ಯಾ ಜೊತೆ ಸೇರಿ ಘೋಷಿಸಿದೆ. ಈಗ ನಡೆಯುತ್ತಿರುವ ಯುದ್ಧವನ್ನು ಯುದ್ಧ ಎಂದೇ ಚೀನಾ ಪರಿಗಣಿಸಿಲ್ಲ.

    ಪಾಕಿಸ್ತಾನ
    ರಷ್ಯಾ ಪ್ರವಾಸದಲ್ಲಿ ಇಮ್ರಾನ್ ಇದ್ದಾರೆ. ಯುದ್ಧ ಶುರುವಾಗಿದ್ದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ. ಎಂಥಾ ಟೈಮಲ್ಲಿ ಬಂದಿದ್ದೇನೆ.. ಸಿಕ್ಕಾಪಟ್ಟೆ ಎಕ್ಸೈಟ್ ಆಗ್ತಿದೆ ಎಂದು ಇಮ್ರಾನ್ ಹೇಳಿದ್ದಾರೆ.

    ಕ್ರೊವೇಷಿಯಾ
    2009ರಲ್ಲಿಯೇ ನ್ಯಾಟೋವನ್ನು ಸೇರಿದೆ. ಆದರೆ ಗಡಿ ಭದ್ರತೆ ವಿಚಾರದಲ್ಲಿ ಕ್ರೊವೇಷಿಯಾ ರಷ್ಯಾ ಪರವಾಗಿದೆ. ಜೊತೆಗೆ ಮೊನ್ನೆ ವಿಶ್ವಸಂಸ್ಥೆಯಲ್ಲಿ, ಉಕ್ರೇನ್ ದೇಶವನ್ನು ಮೂರು ಭಾಗ ಮಾಡಿದ ರಷ್ಯಾ ನಿಲುವನ್ನು ಖಂಡಿಸಿದೆ.

    ಅಜರ್‌ಬೈಜನ್‌
    ಅಜರ್ ಬೈಜಾನ್ ಅಧ್ಯಕ್ಷರು ರಷ್ಯಾ ಪ್ರವಾಸದಲ್ಲಿದ್ದು, ರಷ್ಯಾದ ಎಲ್ಲಾ ಕ್ರಮಗಳಿಗೆ ಭೇಷರತ್ ಬೆಂಬಲ ನೀಡಿದೆ. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ ಉಕ್ರೇನ್

    ಉಕ್ರೇನ್ ಪರ ದೇಶಗಳು
    ಅಮೆರಿಕ, ಬ್ರಿಟನ್, ಜರ್ಮನಿ, ಆಸ್ಟ್ರೇಲಿಯಾ, ಫ್ರಾನ್ಸ್, ರೋಮೆನಿಯಾ, ಬಲ್ಗೇರಿಯಾ, ಸ್ಲೋವೇಕಿಯಾ, ಲಾಟ್ವೀಯಾ, ಎಸ್ಟೋನಿಯಾ,ಲಿಥುವೇನಿಯಾ, ಆಲ್ಬೇನಿಯಾ

  • ತೈಲ ಬೆಲೆ ಭಾರೀ ಏರಿಕೆ – ಶೀಘ್ರವೇ 100 ಡಾಲರ್‌ನತ್ತ ಕಚ್ಚಾ ತೈಲ?

    ತೈಲ ಬೆಲೆ ಭಾರೀ ಏರಿಕೆ – ಶೀಘ್ರವೇ 100 ಡಾಲರ್‌ನತ್ತ ಕಚ್ಚಾ ತೈಲ?

    ಲಂಡನ್‌/ಕಿವ್‌: ರಷ್ಯಾ-ಉಕ್ರೇನ್‌ ಬಿಕ್ಕಟ್ಟು (Russia Ukraine Crisis) ತೀವ್ರಗೊಂಡಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಏರಿಕೆ ಕಂಡಿದೆ.

    ಕಚ್ಚಾ ತೈಲದ ಬೆಲೆ ಬ್ಯಾರಲ್‌ಗೆ 94.84( 7,165ರೂ.) ಡಾಲರ್‌ಗೆ ಏರಿಕೆಯಾಗಿದ್ದು, ಶೀಘ್ರವೇ 100 ಡಾಲರ್‌ಗೆ ಏರಿಕೆಯಾಗುವ ಸಾಧ್ಯತೆಯಿದೆ. ಸದ್ಯ ಭಾರತದಲ್ಲಿ  ಲೀಟರ್‌ಗೆ 100 ರೂ. ಅಸುಪಾಸಿನಲ್ಲಿರುವ ಪೆಟ್ರೋಲ್‌ ದರ ತೈಲ ಬೆಲೆ 100 ಡಾಲರ್‌ಗೆ ಏರಿಕೆಯಾದರೆ ಭಾರೀ ಏರಿಕೆಯಾಗುವ ಸಾಧ್ಯತೆಯಿದೆ.

    ತಿಂಗಳ ಅಂತ್ಯದ ವೇಳೆ 8 ವರ್ಷದ ಗರಿಷ್ಠವಾದ 100 ಡಾಲರ್‌ ತಲುಪುವ ಸಾಧ್ಯತೆ ಇದೆ. ಕೊರೊನಾ ಹೊಡೆತದಿಂದ ನಲುಗಿದ್ದ ದೇಶಗಳು ಈಗಷ್ಟೇ ಆರ್ಥಿಕತೆ ಚೇತರಿಕೆ ಕಾಣುತ್ತಿವೆ. ದರ ಏರಿಕೆಯಾದಲ್ಲಿ ಹಲವು ರಾಷ್ಟ್ರಗಳ ಆರ್ಥಿಕತೆಯ ಮೇಲೆ ಭಾರೀ ಪೆಟ್ಟು ಬೀಳುವ ಸಾಧ್ಯತೆಯಿದೆ. ಇದನ್ನೂ ಓದಿ: ನಾನು ಮತ್ತೆ ಶಾಸಕನಾದ್ರೆ ಮುಸ್ಲಿಮರು ಟೋಪಿ ತೆಗೆದು ತಿಲಕ ಇಡುವಂತೆ ಮಾಡ್ತೀನಿ: ಬಿಜೆಪಿ ಶಾಸಕ

    2021ರ ನವೆಂಬರ್‌ ಬಳಿಕ ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪಂಚ ರಾಜ್ಯ ಚುನಾವಣೆ ನಡೆಯುತ್ತಿರುವುದರಿಂದ ಸದ್ಯಕ್ಕೆ ಬೆಲೆ ಏರಿಕೆಯಾಗುವುದು ಅನುಮಾನ. ಚುನಾವಣೆ ಬಳಿಕವೂ ತೈಲ ದರ ಏರಿಕೆಯಾದರೆ ಭಾರತದಲ್ಲೂ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾಗಲಿದೆ. ಇದನ್ನೂ ಓದಿ: ಮಲಗಿದ್ದಲ್ಲಿಯೇ ಸಾವನ್ನಪ್ಪಿದ ಅರೆ ವೈದ್ಯಕೀಯ ವಿದ್ಯಾರ್ಥಿ

    ಸೇನಾ ಜಮಾವಣೆ: ಯುದ್ಧದ ಉತ್ಸಾಹದಲ್ಲಿರುವ ರಷ್ಯಾ ಗಡಿಯಲ್ಲಿ ತನ್ನ ಸೇನಾ ಜಮಾವಣೆಯನ್ನು 1.30 ಲಕ್ಷಕ್ಕೆ ಏರಿಸಿದೆ. ಉಕ್ರೆನ್‌ ಅಧ್ಯಕ್ಷ ವ್ಲಾಡಿಮಿರ್‌ ಝೆಲೆನ್ಸ್‌ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಜೊತೆ 1 ಗಂಟೆ ಪ್ರಸ್ತತ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.

    ತನ್ನ ಗಡಿಯಲ್ಲಿ ಭಾರೀ ಸಂಖ್ಯೆಯಲ್ಲಿ ಸೇನೆಯನ್ನು ನಿಯೋಜಿಸಿದನ್ನು ಉಕ್ರೇನ್‌ ಪ್ರಶ್ನಿಸಿದೆ. ಮುಂದಿನ 48 ಗಂಟೆಯ ಒಳಗಡೆ ರಷ್ಯಾಈ ಬಗ್ಗೆ ಕಾರಣ ನೀಡಬೇಕು ಎಂದು ಹೇಳಿದೆ.

  • ಕಂದಹಾರ್‌ಗೆ ನುಗ್ಗಿದ ತಾಲಿಬಾನ್ ಉಗ್ರರು

    ಕಂದಹಾರ್‌ಗೆ ನುಗ್ಗಿದ ತಾಲಿಬಾನ್ ಉಗ್ರರು

    – ಇರಾನ್ ಗಡಿಪೋಸ್ಟ್ ವಶ
    – ಅಫ್ಘಾನ್ ಸೇನೆ, ತಾಲಿಬಾನ್ ಸಂಘರ್ಷ ತೀವ್ರ

    ಕಾಬೂಲ್: ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಮರಳುತ್ತಿದ್ದಂತೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಿದೆ. ಈಗ ದೇಶದ 2ನೇ ಅತಿದೊಡ್ಡ ನಗರವಾಗಿರುವ 6 ಲಕ್ಷ ಜನಸಂಖ್ಯೆಯುಳ್ಳ ಕಂದಹಾರ್ ನಗರವನ್ನು ಪ್ರವೇಶಿಸಿದ್ದಾರೆ.

    ವಿದೇಶಿ ಪಡೆಗಳು ತೆರಳುತ್ತಿದ್ದಂತೆ ಒಂದೊಂದೇ ಪ್ರದೇಶವನ್ನು ವಶಪಡಿಸಿಕೊಳ್ಳುತ್ತಿರುವ ಉಗ್ರರು ಈಗಾಗಲೇ ದೇಶದ ಶೇ.85ರಷ್ಟುಭಾಗವನ್ನು ವಶಪಡಿಸಿಕೊಂಡಿರುವುದಾಗಿ ಪ್ರಕಟಿಸಿದ್ದಾರೆ. ಇಷ್ಟೇ ಅಲ್ಲದೇ ಇರಾನ್ ಜೊತೆಗಿನ ವ್ಯಾಪಾರ ನಡೆಸುವ ಗಡಿ ಚೆಕ್ ಪೋಸ್ಟ್  ವಶಕ್ಕೆ ಪಡೆದಿದ್ದಾರೆ.

    https://twitter.com/TGhazniwal1/status/1414152231973179392

    ಕಂದಹಾರ್ ಗವರ್ನರ್ ವಕ್ತಾರರಾದ ಬಹಿರ್ ಅಹಮದಿ ಅವರು, ದೇಶದ ಎರಡನೇ ಅತಿದೊಡ್ಡ ನಗರ ಕಂದಹಾರ್ ಅನ್ನು ಕಳೆದ ಶುಕ್ರವಾರ ಉಗ್ರರು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದಾರೆ. ಉಗ್ರರು ಮುನ್ನುಗ್ಗುತ್ತಿರುವುದನ್ನು ನೋಡಿದರೆ ಅಫ್ಘಾನಿಸ್ತಾನ ಪೂರ್ಣ ಪ್ರಮಾಣದಲ್ಲಿ ತಾಲಿಬಾನ್ ಕೈವಶವಾಗುವ ಅಪಾಯವಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ. ಇದನ್ನೂ ಓದಿ: ಪಕ್ಷೇತರರಾಗಿ ಅಖಾಡಕ್ಕಿಳೀತಾರಾ ಜಿಟಿಡಿ?

    https://twitter.com/TGhazniwal1/status/1414273311887011843

    7 ಪೊಲೀಸ್ ಜಿಲ್ಲಾ ಪ್ರದೇಶದ ಮೂಲಕ ಕಂದಹಾರ್ ನಗರವನ್ನು ಮೊದಲ ಬಾರಿಗೆ ಪ್ರವೇಶಿಸಿದ್ದು, ಅಫ್ಘಾನ್ ಸೇನೆ ದಾಳಿ ನಡೆಸಿ ತಿರುಗೇಟು ನೀಡುತ್ತಿದೆ. ಇದರಿಂದಾಗಿ ಎರಡೂ ಬಣಗಳ ನಡುವೆ ಸಂಘರ್ಷ ಜೋರಾಗಿದೆ.

    https://twitter.com/TGhazniwal1/status/1414202014301577218

    ಅಮೆರಿಕ ಹಿಂದೆ ಸರಿದಿದ್ದು ಯಾಕೆ?
    2001ರಲ್ಲಿ ವಿಶ್ವ ವಾಣಿಜ್ಯ ಕಟ್ಟಡದ ಮೇಲೆ ಉಗ್ರರ ದಾಳಿಯಿಂದ ಸಿಟ್ಟಾದ ಅಮೆರಿಕ ಅಲ್‍ ಖೈದಾ ಉಗ್ರರನ್ನು ಮಟ್ಟ ಹಾಕಲು ದೊಡ್ಡ ಕಾರ್ಯಾಚರಣೆ ಆರಂಭಿಸಿತು. ಕಳೆದ 20 ವರ್ಷಗಳಿಂದ ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಅಫ್ಘಾನಿಸ್ತಾನದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಆದರೆ ಅಫ್ಘಾನಿಸ್ತಾನದಲ್ಲಿ ಸೈನ್ಯವನ್ನು ಕಳುಹಿಸಿದ್ದರಿಂದ ಅಮೆರಿಕಕ್ಕೆ ಭಾರೀ ಪ್ರಮಾಣದಲ್ಲಿ ನಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಹಿಂದೆ ಸರಿಯುವ ನಿರ್ಧಾರವನ್ನು ಅಮೆರಿಕ ಕೈಗೊಂಡಿದ್ದು, ಮೇ 1ರಿಂದ ಆ ಪ್ರಕ್ರಿಯೆ ಆರಂಭವಾಗಿದೆ.

    https://twitter.com/TGhazniwal1/status/1413837949477732358

    ಭಾರತೀಯರು ವಾಪಸ್:
    ಕಂದಾಹರ್ ನಲ್ಲಿರುವ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಭಾರತೀಯ ರಾಜತಾಂತ್ರಿಕರು, ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯನ್ನು ಕರೆ ತರಲು ವಾಯು ಪಡೆಯ ವಿಶೇಷ ವಿಮಾನವನ್ನು ಭಾರತ ಕಳುಹಿಸಿದೆ. ಸದ್ಯ ಈಗ  ಕಾಬೂಲ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ರಾಜತಾಂತ್ರಿಕರು ಮತ್ತು ಅಫ್ಘಾನ್ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ.