Tag: ನ್ಯಾನೋ ಕಾರು

  • ನ್ಯಾನೋ ಕಾರು ತಯಾರಿಸಿದ್ದು ಯಾಕೆ? ಪಶ್ಚಿಮ ಬಂಗಾಳದಿಂದ ಗುಜರಾತ್‌ಗೆ ಘಟಕ ಶಿಫ್ಟ್‌ ಆಗಿದ್ದು ಯಾಕೆ?

    ನ್ಯಾನೋ ಕಾರು ತಯಾರಿಸಿದ್ದು ಯಾಕೆ? ಪಶ್ಚಿಮ ಬಂಗಾಳದಿಂದ ಗುಜರಾತ್‌ಗೆ ಘಟಕ ಶಿಫ್ಟ್‌ ಆಗಿದ್ದು ಯಾಕೆ?

    ತನ್‌ ಟಾಟಾ (Ratan Tata) ಅವರಿಗೆ ನ್ಯಾನೋ ಕಾರನ್ನು (Nano Car) ತಯಾರಿಸುವ ಕಲ್ಪನೆ ಹೊಳೆದಿದ್ದೆ ರೋಚಕ. ಮುಂಬೈನಲ್ಲಿ ಭಾರೀ ಮಳೆಗೆ 4 ಮಂದಿ ಬೈಕಿನಲ್ಲಿ ತೆರಳುತ್ತಿದ್ದರು. ಈ ದೃಶ್ಯವನ್ನು ನೋಡಿದ ರತನ್‌ ಟಾಟಾ ಅವರ ಮನಸ್ಸು ಮಿಡಿಯಿತು.

    ತಂದೆ, ತಾಯಿ ಮಧ್ಯೆ ಕುಳಿತಿದ್ದ ಮಕ್ಕಳು ಬೈಕಿನಿಂದ ರಸ್ತೆಗೆ ಬೀಳುವನ್ನು ಕೇಳಿದ್ದ ರತನ್‌ ಟಾಟಾ ಸಾಮಾನ್ಯ ವರ್ಗದವರಿಗೆ ಕಡಿಮೆ ದರದಲ್ಲಿ ಕಾರು ನಿರ್ಮಿಸಿಕೊಡಬೇಕೆಂದು ಪಣ ತೊಟ್ಟರು. ಈ ಕಲ್ಪನೆಯನ್ನು ಸಾಕಾರಗೊಳಿಸಲು ನ್ಯಾನೋ ಕಾರನ್ನು ಉತ್ಪಾದನೆ ಮಾಡಲು ರತನ್‌ ಟಾಟಾ ಮುಂದಾದರು.

    ಜನವರಿ 10, 2008 ರಂದು ನ್ಯಾನೋ ಕಾರನ್ನು ಬಿಡುಗಡೆ ಮಾಡಲಾಯಿತು. ಈ ಕಾರಿಗೆ 1 ಲಕ್ಷ ರೂ. ದರ ನಿಗದಿ ಪಡಿಸಿದ್ದರಿಂದ ವಿಶ್ವದ ಅಗ್ಗದ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಈ ಮೂಲಕ ರತನ್‌ ಟಾಟಾ ಅವರು ಬಡವರು, ಸಾಮಾನ್ಯ ವರ್ಗದವರು ಕಾರು ಖರೀದಿಸಬೇಕೆಂಬ ಕನಸನ್ನು ನನಸು ಮಾಡುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ರತನ್ ಟಾಟಾಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಮಹಾರಾಷ್ಟ್ರ ಸರ್ಕಾರದ ಶಿಫಾರಸು

    ರತನ್‌ ಟಾಟಾ ಅವರು ವಿಶ್ವದ ಅಗ್ಗದ ನ್ಯಾನೋ ಕಾರನ್ನು ಪಶ್ಚಿಮ ಬಂಗಾಳದಲ್ಲಿ (Wet Bengal) ನಿರ್ಮಾಣ ಮಾಡುವ ಕನಸು ಕಂಡಿದ್ದರು. ಆದರೆ ಕಾರು ನಿರ್ಮಾಣದ ವೇಳೆ ಟಾಟಾ ಕಂಪನಿ ಬಹಳ ಸಂಕಷ್ಟ ಎದುರಾಗಿತ್ತು. 2006 ರಲ್ಲಿ ಕಮ್ಯೂನಿಸ್ಟ್‌ ಪಕ್ಷ ಪಶ್ಚಿಮ ಬಂಗಾಳದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿತು. ಮುಖ್ಯಮಂತ್ರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ ಅವರು ವಿಶ್ವದ ಅತ್ಯಂತ ಅಗ್ಗದ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನ್ಯಾನೋ ಉತ್ಪಾದನಾ ಘಟಕ ಸ್ಥಾಪಿಸಲು ಹೂಗ್ಲಿ ಬದಿಯಲ್ಲಿರುವ ಸಿಂಗೂರಿನಲ್ಲಿ ಟಾಟಾಗೆ ಸುಮಾರು 1,000 ಎಕರೆ ಜಾಗ ನೀಡುವುದಾಗಿ ಘೋಷಿಸಿದ್ದರು.

    ಸರ್ಕಾರ ಜಾಗ ನೀಡಲು ಮುಂದಾಗುತ್ತಿದ್ದಂತೆ ಭಾರೀ ಹೋರಾಟ ಆರಂಭವಾಯಿತು. ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತದೆ ಎಂದು ಆರೋಪಿಸಿ ರೈತರು ಪ್ರತಿಭಟನೆ ಆರಂಭಿಸಿದರು. ಪ್ರತಿಭಟನೆ ನಡೆದರೂ ಸ್ವಾಧಿನ ಪ್ರಕ್ರಿಯೆ ಪೂರ್ಣಗೊಂಡು ಕಾರು ನಿರ್ಮಾಣದ ಫ್ಯಾಕ್ಟರಿ ಕೆಲಸ ಆರಂಭವಾಯಿತು. ಇದನ್ನೂ ಓದಿ: ಮಧ್ಯಮ ವರ್ಗದ ಭಾರತೀಯರ ಕನಸು ನನಸು ಮಾಡಿದ್ದ ರತನ್‌ – ಮೊದಲ ದೇಶೀ ಕಾರು ಮಾರುಕಟ್ಟೆಗೆ ಬಂದಿದ್ದು ಯಾವಾಗ?

    ಫ್ಯಾಕ್ಟರಿ ಕೆಲಸ ಆರಂಭವಾಗುತ್ತಿದ್ದಾಗ 2007 ರಲ್ಲಿ ಮಮತಾ ಬ್ಯಾನರ್ಜಿ (Mamata Banerjee) ಪ್ರತಿಭಟನೆಯ ನೇತೃತ್ವ ವಹಿಸಿದರು. ಪೊಲೀಸರು ಮತ್ತು ಟಿಎಂಸಿ ಕಾರ್ಯಕರ್ತರ ಮಧ್ಯೆ ಸಂಘರ್ಷ ನಡೆಯಿತು. ಘಟಕದ ವಿರುದ್ಧ ಮಮತಾ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಈ ಪ್ರತಿಭಟನೆಗೆ ಹಲವು ಪರಿಸರ ಸಂಘಟನೆಗಳು ಸಾಥ್‌ ನೀಡಿದವು.

    ಪ್ರತಿಭಟನೆ ತೀವ್ರ ವಿವಾದವಾಗುತ್ತಿದ್ದಂತೆ ಸರ್ಕಾರ, ರಾಜ್ಯಪಾಲರು ನಡೆಸಿದ ಮಾತುಕತೆ ವಿಫಲವಾಯಿತು. ಉದ್ವಿಗ್ನ ಪರಿಸ್ಥಿತಿ ಹೆಚ್ಚಾಗುತ್ತಿದ್ದಂತೆ ಅಂದಿನ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ (Narendra Modi) ಅವರು ರತನ್‌ ಟಾಟಾ ಅವರಿಗೆ ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು. ರತನ್‌ ಟಾಟಾ ಅವರು ಮೋದಿಯ ಆಫರ್‌ ಒಪ್ಪಿದರು. ಅಂತಿಮವಾಗಿ ಅಕ್ಟೋಬರ್‌ 03, 2008 ರಂದು ಘಟಕವನ್ನು ಅಹಮದಾಬಾದ್‌ನಲ್ಲಿರುವ ಸನಂದಕ್ಕೆ ಸ್ಥಳಾಂತರ ಮಾಡುವುದಾಗಿ ಟಾಟಾ ಮೋಟಾರ್ಸ್‌ ಘೋಷಿಸಿತು.

    ಉತ್ಪಾದನಾ ಘಟಕವನ್ನು ಬಂದ್‌ ಮಾಡಿದ ನಂತರ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ರಾಜಕೀಯವಾಗಿ ಶಕ್ತಿಯುತವಾದರು. ಅಂತಿಮವಾಗಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಆದರೆ ಆರ್ಥಿಕವಾಗಿ ಪಶ್ಚಿಮ ಬಂಗಾಳ ನಷ್ಟ ಅನುಭವಿಸಿತು. ನಂತರದ ವರ್ಷಗಳಲ್ಲಿ ಬೇರೆ ರಾಜ್ಯಗಳು ಕಂಪನಿಗಳನ್ನು ಆಕರ್ಷಿಸಿದರೆ ಪಶ್ಚಿಮ ಬಂಗಾಳ ಹೂಡಿಕೆದಾರರನ್ನು ಸೆಳೆಯುವಲ್ಲಿ ವಿಫಲವಾಯಿತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಎಫ್‌16 ಯುದ್ಧ ವಿಮಾನ ಹಾರಿಸಿದ್ದ ರತನ್‌ ಟಾಟಾ

    ಕಾನೂನು ಸಮರದಲ್ಲಿ ಗೆದ್ದ ಟಾಟಾ ಮೋಟಾರ್ಸ್‌
    ಸಿಂಗೂರಿನಲ್ಲಿ ಟಾಟಾ ಫ್ಯಾಕ್ಟರಿ ಸ್ಥಾಪನೆಗೆ ಜಾಗ ನೀಡಿ ಹೂಡಿಕೆ ಮಾಡಿ ನಷ್ಟ ಉಂಟು ಮಾಡಿದ್ದಕ್ಕೆ ಟಾಟಾ ಕಂಪನಿ ಪಶ್ಚಿಮ ಬಂಗಾಳ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (WBIDC) ವಿರುದ್ಧ ಕೇಸ್‌ ದಾಖಲಿಸಿತ್ತು. ದಶಕಗಳಿಂದ ನಡೆದಿದ್ದ ಕಾನೂನು ಸಮರವನ್ನು ಟಾಟಾ ಮೋಟಾರ್ಸ್‌ ಗೆದ್ದುಕೊಂಡಿತ್ತು. ಟಾಟಾ ಮೋಟಾರ್ಸ್‌ಗೆ ನಷ್ಟ ಉಂಟು ಮಾಡಿದ್ದಕ್ಕೆ WBIDCಗೆ 766 ಕೋಟಿ ರೂ. ಪಾವತಿಸುವಂತೆ ಮಧ್ಯಸ್ಥಿಕೆ ನ್ಯಾಯಾಲಯ ಆದೇಶಿಸಿತ್ತು. ಇದನ್ನೂ ಓದಿ: ನ್ಯಾನೋ ಕೇಸ್‌, ಮಮತಾಗೆ ತೀವ್ರ ಮುಖಭಂಗ – ಕೊನೆಗೂ ಗೆದ್ದ ಟಾಟಾ ಮೋಟಾರ್ಸ್‌

     

  • ನ್ಯಾನೋ ಕೇಸ್‌, ಮಮತಾಗೆ ತೀವ್ರ ಮುಖಭಂಗ – ಕೊನೆಗೂ ಗೆದ್ದ ಟಾಟಾ ಮೋಟಾರ್ಸ್‌

    ನ್ಯಾನೋ ಕೇಸ್‌, ಮಮತಾಗೆ ತೀವ್ರ ಮುಖಭಂಗ – ಕೊನೆಗೂ ಗೆದ್ದ ಟಾಟಾ ಮೋಟಾರ್ಸ್‌

    ನವದೆಹಲಿ: ಭಾರತದ ಪ್ರತಿಷ್ಠಿತ ಅಟೋಮೊಬೈಲ್‌ ಕಂಪನಿ ಟಾಟಾ ಮೋಟಾರ್ಸ್‌ (Tata Motors) ಕೊನೆಗೂ ಪಶ್ಚಿಮ ಬಂಗಾಳ (West Bengal) ಸರ್ಕಾರದ ವಿರುದ್ಧದ ದಾವೆಯನ್ನು ಗೆದ್ದುಕೊಂಡಿದೆ.

    ಸಿಂಗೂರಿನಲ್ಲಿ (Singur) ಟಾಟಾ ಫ್ಯಾಕ್ಟರಿ ಸ್ಥಾಪನೆ ಮಾಡಲು ಹೂಡಿಕೆ ಮಾಡಿ ನಷ್ಟ ಉಂಟು ಮಾಡಿದ್ದಕ್ಕೆ ಟಾಟಾ ಕಂಪನಿ ಪಶ್ಚಿಮ ಬಂಗಾಳ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (WBIDC) ವಿರುದ್ಧ ಕೇಸ್‌ ದಾಖಲಿಸಿತ್ತು.

    ದಶಕಗಳಿಂದ ನಡೆಯುತ್ತಿರುವ ಕಾನೂನು ಸಮರವನ್ನು ಟಾಟಾ ಮೋಟಾರ್ಸ್‌ ಗೆದ್ದುಕೊಂಡಿದೆ. ಟಾಟಾ ಮೋಟಾರ್ಸ್‌ಗೆ ನಷ್ಟ ಉಂಟು ಮಾಡಿದ್ದಕ್ಕೆ WBIDCಗೆ 766 ಕೋಟಿ ರೂ. ಪಾವತಿಸುವಂತೆ ಮಧ್ಯಸ್ಥಿಕೆ ನ್ಯಾಯಾಲಯ ಆದೇಶಿಸಿದೆ. ಟಾಟಾ ಮೋಟಾರ್ಸ್‌ ಮುಂಬೈ ಷೇರು ಮಾರುಕಟ್ಟೆಗೆ ಈ ಪ್ರಕರಣದ  ಮಾಹಿತಿಗಳನ್ನು ಸಲ್ಲಿಸಿದ ನಂತರ ಈ ವಿಚಾರ ಬೆಳಕಿಗೆ ಬಂದಿದೆ.   ಇದನ್ನೂ ಓದಿ: ಅಭಿವೃದ್ಧಿ Vs ಅನುದಾನ: ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡ್ಬೇಡಿ- ಸಿದ್ದರಾಮಯ್ಯ ಸೇಡಿನ ಆರೋಪಕ್ಕೆ ಕೇಂದ್ರ ತಿರುಗೇಟು

    ಏನಿದು ಪ್ರಕರಣ?
    2006ರಲ್ಲಿ ಎಡ ಸರ್ಕಾರ 1 ಸಾವಿರ ಎಕ್ರೆ ಜಾಗವನ್ನು ಹೂಗ್ಲಿ ಬದಿಯಲ್ಲಿರುವ ಸಿಂಗೂರಿನಲ್ಲಿ ಸ್ವಾಧೀನ ಪಡಿಸಿ ನಂತರ ಆ ಭೂಮಿಯನ್ನು ಟಾಟಾ ಕಂಪನಿಗೆ ಹಸ್ತಾಂತರಿಸಿತ್ತು. ಟಾಟಾ ಕಂಪನಿ ಈ ಜಾಗದಲ್ಲಿ ನ್ಯಾನೋ ಕಾರು (Nano Car) ಉತ್ಪಾದನಾ ಘಟಕ ತೆರೆಯಲು ಮುಂದಾಗಿತ್ತು.

    ಟಾಟಾ ಕಂಪನಿಗೆ ಭೂಮಿ ನೀಡಿದ್ದಕ್ಕೆ ಅಂದಿನ ವಿರೋಧ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಬಲವಾಗಿ ವಿರೋಧಿಸಿದ್ದರು. ರಾಜಕೀಯ ಹೈಡ್ರಾಮಾದ ಬಳಿಕ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಟಾಟಾ ಕಂಪನಿಯನ್ನು ರಾಜ್ಯಕ್ಕೆ ಬರುವಂತೆ ಆಹ್ವಾನಿಸಿದ್ದರು. ಈ ಆಹ್ವಾನವನ್ನು ಒಪ್ಪಿ ಟಾಟಾ ಕಂಪನಿ ಗುಜರಾತಿನ ಸನಂದ್‌ಗೆ ಶಿಫ್ಟ್‌ ಆಗಿತ್ತು. ಈ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ  ಹೂಡಿಕೆ ಮಾಡಿ ಆದ ನಷ್ಟವನ್ನು ಭರಿಸಿ ಕೊಡುವಂತೆ ಟಾಟಾ ಮೋಟಾರ್ಸ್‌ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿತ್ತು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನಸನ್ನು ನನಸಾಗಿಸಿಕೊಳ್ಳಲು ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿದ

    ಕನಸನ್ನು ನನಸಾಗಿಸಿಕೊಳ್ಳಲು ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿದ

    – 7 ಲಕ್ಷ ಖರ್ಚು ಮಾಡಿದ ಸಹೋದರರು

    ಪಾಟ್ನಾ: ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.

    ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ.

    ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು ಹಾರದೆ ಇದ್ದರೂ ಕನಿಷ್ಟ ಹೆಲಿಕಾಪ್ಟರ್ ರೀತಿ ಕಾಣುವಂತೆ ಸಿದ್ಧಪಡಿಸುವುದು ಆತನ ಗುರಿಯಾಗಿತ್ತು.

    ಈ ಕಾರು ನೋಡಲು ಹೆಲಿಕಾಪ್ಟರ್ ರೀತಿ ಕಾಣಿಸುತ್ತದೆ ಆದರೆ ಇದು ಹಾರಾಡುವುದಿಲ್ಲ. ಹೆಲಿಕಾಪ್ಟರ್‍ನ ಮೂಲ ವಿನ್ಯಾಸ ಹೇಗೆ ಇರುತ್ತದೋ ಅದೇ ರೀತಿ ಕಾರನ್ನು ಯುವಕ ವಿನ್ಯಾಸಗೊಳಿಸಿದ್ದಾನೆ. ಈ ಅಪರೂಪದ ವಿನ್ಯಾಸವನ್ನು ಪೂರ್ಣಗೊಳಿಸಲು ಮಿಥಿಲೇಶ್ ಮತ್ತು ಅವರ ಸಹೋದರ ಸುಮಾರು ಏಳು ತಿಂಗಳು ತೆಗೆದುಕೊಂಡಿದ್ದಾರೆ. ಅಲ್ಲದೆ ಇದಕ್ಕೆ ಸರಿಸುಮಾರು ಏಳು ಲಕ್ಷ ರೂಪಾಯಿಗಳನ್ನು ಸಹೋದರರು ಖರ್ಚು ಮಾಡಿದ್ದಾರೆ ಎನ್ನಲಾಗಿದೆ.

    ಈ ಹೆಲಿಕಾಪ್ಟರ್ ಕಾರು ವಿನ್ಯಾಸದ ಬಗ್ಗೆ ಮಾತನಾಡಿರುವ ಮಿಥಿಲೇಶ್, ‘ ನಾನು ಹೆಲಿಕಾಪ್ಟರ್ ಅನ್ನು ಸ್ವಂತವಾಗಿ ನಿರ್ಮಿಸಿ ಅದರಲ್ಲಿ ಹಾರಾಟ ನಡೆಸಬೇಕೆಂದು ಬಾಲ್ಯದಿಂದಲೂ ಕನಸು ಕಂಡಿದ್ದೆ. ಆದರೆ ನನಗೆ ಬಲವಾದ ಹಿನ್ನೆಲೆ ಇಲ್ಲ ಆದ್ದರಿಂದ ನನ್ನ ಕಾರನ್ನು ಹೆಲಿಕಾಪ್ಟರ್ ರೀತಿ ಕಾಣುವಂತೆ ಮಾಡಿದೆ’ ಎಂದು ಖುಷಿಯನ್ನು ಹಂಚಿಕೊಂಡಿದ್ದಾನೆ.

    ಈ ಹೆಲಿಕಾಪ್ಟರ್ ಕಾರಿನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿದ ಕೆಲವರು ಯುವಕನ ಪ್ರಯತ್ನವನ್ನು ಮೆಚ್ಚಿದ್ದರೆ, ಇನ್ನು ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ರೀತಿ ಕಾರನ್ನು ವಿನ್ಯಾಸ ಮಾಡಿಕೊಂಡು ರಸ್ತೆಗಿಳಿಸಿದರೆ ಇತರೆ ವಾಹನ ಸವಾರರಿಗೆ ತೊಂದರೆ ಆಗುತ್ತದೆ. ತನ್ನ ಕನಸು ನನಸಾಗಿಸಿಕೊಳ್ಳಲು ಇತರರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಕಿಡಿಕಾರುತ್ತಿದ್ದಾರೆ.