Tag: ನ್ಯಾಯಲಯ

  • ಡ್ಯಾನ್ಸ್ ಬಾರ್ ಮೇಲೆ ರೇಡ್ – ಕಾರ್ಪೋರೇಷನ್ ಹಿರಿಯ ಅಧಿಕಾರಿಗಳು ಸೇರಿದಂತೆ 15 ಮಂದಿ ಬಂಧನ

    ಡ್ಯಾನ್ಸ್ ಬಾರ್ ಮೇಲೆ ರೇಡ್ – ಕಾರ್ಪೋರೇಷನ್ ಹಿರಿಯ ಅಧಿಕಾರಿಗಳು ಸೇರಿದಂತೆ 15 ಮಂದಿ ಬಂಧನ

    ಮುಂಬೈ: ದಕ್ಷಿಣ ಮುಂಬೈನ ಕೋಲಾಬಾದ ಡ್ಯಾನ್ಸ್ ಬಾರಿನಲ್ಲಿ ರೇಡ್ ಮಾಡಿ ಬ್ರಿಹನ್ಮುಂಬೈ ಮುನಿಸಿಪಲ್ ಕಾರ್ಪೋರೇಷನ್ (ಬಿಎಂಸಿ) ಹಿರಿಯ ಅಧಿಕಾರಿಯೂ ಸೇರಿದಂತೆ ಸುಮಾರು 15 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬುಧವಾರ ರಾತ್ರಿ ಖಚಿತ ಮಾಹಿತಿ ಮೇರೆಗೆ ಕೋಲಾಬಾದ ಡ್ಯಾನ್ಸ್ ಬಾರ್ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ಸಮಯದಲ್ಲಿ ಹೋಟೆಲ್ ಮ್ಯಾನೇಜ್ ಮೆಂಟ್ ಸಿಬ್ಬಂದಿ ಮತ್ತು ಆರು ಗ್ರಾಹಕರನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಡೆಪ್ಯುಟಿ ಪುರಸಭೆಯ ಆಯುಕ್ತ ಅಧಿಕಾರಿಗಳು ಸೇರಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

    ಅಷ್ಟೇ ಅಲ್ಲದೇ ಬಂಧಿತರಲ್ಲಿ ಒಬ್ಬ ಉದ್ಯಮಿ, ಸರ್ಕಾರಿ ಅಧಿಕಾರಿ ಮತ್ತು ಕೆಲವು ಉನ್ನತ ವ್ಯಕ್ತಿಗಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಐಪಿಸಿ ಸೆಕ್ಷನ್ ವಿವಿಧ ವಿಭಾಗಗಳ ಅಡಿಯಲ್ಲಿ ಮತ್ತು ಮಹಾರಾಷ್ಟ್ರ ಹೋಟೆಲ್ ಕಾಯ್ದೆಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಪೊಲೀಸರು ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಬಂಧನಕ್ಕೊಳಗಾಗಿದ್ದ ಎಲ್ಲರಿಗೂ ಜಾಮೀನು ನೀಡಿದೆ.

  • ಭೂ ಕಬಳಿಕೆ ರೈತರಿಗೆ ಕುಣಿಕೆ – ಮಲೆನಾಡಿನಲ್ಲಿ ಜೈಲು ಸೇರ್ತಾರಾ ಒತ್ತುವರಿದಾರರು?

    ಭೂ ಕಬಳಿಕೆ ರೈತರಿಗೆ ಕುಣಿಕೆ – ಮಲೆನಾಡಿನಲ್ಲಿ ಜೈಲು ಸೇರ್ತಾರಾ ಒತ್ತುವರಿದಾರರು?

    ಶಿವಮೊಗ್ಗ: ಅರಣ್ಯ ಭೂಮಿ ಒತ್ತುವರಿ ಪ್ರಕರಣದಲ್ಲಿ ಕರ್ನಾಟಕ ಭೂ ಒತ್ತುವರಿ ನಿಷೇಧ ವಿಶೇಷ ನ್ಯಾಯಾಲಯವೂ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011 ಅನ್ವಯ ಮಲೆನಾಡಿನ ಇಬ್ಬರು ರೈತರಿಗೆ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ವಿಶೇಷ ನ್ಯಾಯಾಲಯ ರಚನೆ ಆದ ಮೇಲೆ ಇದು ಜೈಲು ಶಿಕ್ಷೆಗೆ ಗುರಿಯಾದ ಜಿಲ್ಲೆಯ ಮೊದಲ ಪ್ರಕರಣವಾಗಿದೆ.

    ಸಾಗರ ತಾಲೂಕು ಆವಿನಹಳ್ಳಿ ಗ್ರಾಮದಲ್ಲಿ ಮೂರು ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದ ವಾಸು, ಹಾಗೂ ಎರಡು ಎಕರೆ ಒತ್ತುವರಿ ಮಾಡಿದ್ದ ಗಣಪತಿ ಶಿಕ್ಷೆಗೆ ಒಳಗಾದ ರೈತರು. ಈ ಅರಣ್ಯ ಒತ್ತುವರಿ ಬಗ್ಗೆ ಸಾಗರ ವಲಯ ಅರಣ್ಯಾಧಿಕಾರಿ ದೂರು ಸಲ್ಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಬಳಿಕ, ಇವರಿಬ್ಬರಿಗೂ ಒಂದು ವರ್ಷ ಜೈಲು, 10 ಸಾವಿರ ರೂಪಾಯಿ ದಂಡ ವಿಧಿಸಿ ಬೆಂಗಳೂರಿನ ಕರ್ನಾಟಕ ಭೂಒತ್ತುವರಿ ನಿಷೇಧ ವಿಶೇಷ ನ್ಯಾಯಲಯದ ತೀರ್ಪು ನೀಡಿದೆ.

    ಮಲೆನಾಡಿನಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಐನೂರಕ್ಕೂ ಹೆಚ್ಚು ಪ್ರಕರಣಗಳು ವಿಲೇವಾರಿ ಹಂತದಲ್ಲಿದ್ದು, ಇಷ್ಟೂ ಜನ ತಮ್ಮ ಬದುಕು ಕಟ್ಟಿಕೊಂಡ ತೋಟ, ಗದ್ದೆ, ಮನೆಗಳನ್ನು ತೆರವು ಮಾಡಬೇಕಾಗಿದೆ. ಇಷ್ಟೇ ಅಲ್ಲದೆ, ಇವರೆಲ್ಲರೂ ಜೈಲು ಶಿಕ್ಷೆ ಅಥವಾ ದಂಡ ಪಾವತಿಸಿ, ಬೀದಿಗೆ ಬೀಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

    ಇದೇ ಪ್ರಕರಣ ಮಾದರಿಯಲ್ಲಿ ವಿಚಾರಣೆಗಳು ನಡೆದಲ್ಲಿ ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಸರಿ ಸುಮಾರು ಒಂದು ಲಕ್ಷ ಜನ ಜೈಲು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ. ಬಗರ್ ಹುಕುಂ, ಅರಣ್ಯ ಹಕ್ಕು ಇನ್ನಿತರ ಕಾಯ್ದೆಗಳ ಅಡಿ ಭೂ ಮಂಜೂರಾತಿಗೆ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದರು. ಇವುಗಳಲ್ಲಿ ತಿರಸ್ಕೃತ ಅರ್ಜಿಗಳನ್ನು ಸಾರಾಸಗಟಾಗಿ ಅಕ್ರಮ ಎಂದು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಪರಿಗಣಿಸಿ, ಪ್ರಕರಣ ದಾಖಲಿಸಲು ಆರಂಭಿಸಿವೆ.

    ಇಡೀ ಮಲೆನಾಡು ಈ ತೀರ್ಪಿನಿಂದಾಗಿ ಬೆಚ್ಚಿ ಬಿದ್ದಿದೆ. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಈ ಘಟನೆ ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ. ಅಲ್ಲದೆ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಮಲೆನಾಡಿನ ಲಕ್ಷಾಂತರ ಕೃಷಿಕರು ಭೂಮಿ ಕಳೆದುಕೊಳ್ಳಲಿದ್ದಾರೆ. ಇದೂವರೆಗೆ ಬಂದ ಎಲ್ಲಾ ಸರ್ಕಾರಗಳೂ, ರಾಜಕೀಯ ಪಕ್ಷಗಳೂ ಈ ಕಾಯ್ದೆ ರದ್ದು ಮಾಡುತ್ತೇವೆ ಎಂದು ಮೊಸಳೆ ಕಣ್ಣೀರು ಸುರಿಸಿವೆ. ಆದರೆ, ಮಲೆನಾಡಿನ ರೈತರು ಭೂಗಳ್ಳರು ಎಂಬ ಹಣೆಪಟ್ಟೆ ಕಟ್ಟಿಕೊಳ್ಳುವುದು ತಪ್ಪಿಲ್ಲ. ಚುನಾವಣೆ ಮುಗಿಯುತ್ತಿದ್ದಂತೆ ಇಂಥ ಪ್ರಕರಣಗಳು ಮಲೆನಾಡಿನಾದ್ಯಂತ ತಲ್ಲಣ ಮೂಡಿಸಲಿವೆ.

    ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011 ಯ ಸೆಕ್ಷನ್ 7ರ ಪ್ರಕಾರ ಭೂಕಬಳಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಬಹುದು. ಇದರ ಅನ್ವಯ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗ ವಿಶೇಷ ನ್ಯಾಯಾಲಯ ಸ್ಥಾಪನೆಯಾಯಿತು. ಇಡೀ ರಾಜ್ಯದ ಯಾವುದೇ ಭಾಗದಲ್ಲಿ ಕಂದಾಯ, ಅರಣ್ಯ, ನಗರಸಭೆ, ಗ್ರಾಪಂ ಸೇರಿದಂತೆ ಯಾವುದೇ ರೀತಿಯ ಸರ್ಕಾರಿ ಭೂಮಿ ಕಬಳಿಕೆ ವ್ಯಾಜ್ಯಗಳು ಇದೊಂದೇ ನ್ಯಾಯಾಲಯದಲ್ಲಿ ನಡೆಯುತ್ತವೆ.

    ಮಲೆನಾಡಿನ ಯಾವುದೋ ಮೂಲೆಯಲ್ಲಿ ಒಂದು ಎಕರೆ ಭೂಮಿಯನ್ನು ಜೀವನಕ್ಕಾಗಿ ಸಾಗುವಳಿ ಮಾಡಿದ್ದರೆ, ಆ ರೈತ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಓಡಾಡಬೇಕು. ಮಲೆನಾಡಿನ ರೈತರಿಗೆ ಈ ಬಿಸಿ ತಟ್ಟತೊಡಗಿದೆ.

  • ಕೆಲಸ ಜ್ಯೂ. ವಾರ್ಡನ್ ಆದ್ರೆ 250 ಕೋಟಿ ರೂ. ಆಸ್ತಿ!

    ಕೆಲಸ ಜ್ಯೂ. ವಾರ್ಡನ್ ಆದ್ರೆ 250 ಕೋಟಿ ರೂ. ಆಸ್ತಿ!

    ರಾಮನಗರ: 250 ಕೋಟಿಗೂ ಅಧಿಕ ಆಸ್ತಿಯನ್ನ ಅಕ್ರಮವಾಗಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ರಾಮನಗರ ಎಸಿಬಿ ಪೊಲೀಸರು ನ್ಯಾಯಾಲಯದ ಆದೇಶದ ಮೇರೆಗೆ ಜೂನಿಯರ್ ವಾರ್ಡನ್ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ.

    ಕನಕಪುರ ತಾಲೂಕು ಹುಣಸನಹಳ್ಳಿಯ ಹಾಸ್ಟೆಲ್ ನ ಜೂನಿಯರ್ ವಾರ್ಡನ್ ಬಿ.ನಟರಾಜ್ ವಿರುದ್ಧ ಎಸಿಬಿ ಎಫ್‍ಐಆರ್ ದಾಖಲಿಸಿಕೊಂಡಿದೆ. ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಜೂನಿಯರ್ ವಾರ್ಡನ್ ಆಗಿರುವ ನಟರಾಜ್ ಅಕ್ರಮವಾಗಿ 250 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದಾಗಿ ಆರ್ ಟಿಐ ಕಾರ್ಯಕರ್ತ ರವಿಕುಮಾರ್ ಆರೋಪಿಸಿ ದಾಖಲೆಗಳ ಸಹಿತವಾಗಿ ಕನಕಪುರದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪಿಸಿಆರ್ ಸಲ್ಲಿಸಿದ್ದರು.

    ದೂರಿನ ಅನ್ವಯ ಪಿಸಿ ಕಾಯ್ದೆ 1988ರ ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆಗೆ ನ್ಯಾಯಾಲಯದ ಆದೇಶ ಮಾಡಿದ್ದು ಎಸಿಬಿ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಕನಕಪುರ, ಬೆಂಗಳೂರು, ಹಾರೋಹಳ್ಳಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಕ್ರಮ ಎಸಗಿ ಸಂಪಾದಿಸಿದ್ದು ತನಿಖೆ ನಡೆಸುವಂತೆ ಆರ್ ಟಿ ಐ ಕಾರ್ಯಕರ್ತ ರವಿಕುಮಾರ್ ದೂರು ನೀಡಿದ್ದರು.

    ಯಾರು ಈ ನಟರಾಜ್?
    ನಟರಾಜ್ ಕನಕಪುರದ ನಿವಾಸಿಯಾಗಿದ್ದು, ಗುತ್ತಿಗೆ ಆಧಾರದ ಮೇರೆಗೆ ವಾರ್ಡನ್ ಆಗಿ ಸೇರಿಕೊಂಡಿದ್ದನು. ಮೊದಲಿಗೆ ಈತನಿಗೆ 7,200 ರೂ. ಸಂಬಳ ಬರುತ್ತಿತ್ತು. ಈಗ ಸದ್ಯಕ್ಕೆ 24 ಸಾವಿರ ಸಂಬಳ ಬರುತ್ತಿದೆ. ಆದರೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವಾರು ಟೆಂಡರ್‍ಗಳನ್ನು ಅಕ್ರಮವಾಗಿ ಪಡೆದು ಕಾಮಗಾರಿ ಕೆಲಸವನ್ನು ಮಾಡುತ್ತಿದ್ದಾನೆ. ಜೊತೆಗೆ ಅಕ್ರಮವಾಗಿ ಆಸ್ತಿಯನ್ನು ಸಂಪಾದನೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

    ಸಾಕ್ಷಿ ಸಮೇತ ವಾರ್ಡನ್ ಬಿ.ನಟರಾಜ್ ಅಕ್ರಮ ಆಸ್ತಿ ಬಗ್ಗೆ ಮಾಹಿತಿ ನೀಡಿದ್ದಾರೆ. ಎಫ್‍ಐಆರ್ ದಾಖಲಾಗಿ 3-4 ದಿನಗಳಾಗಿದ್ದರೂ ಇದುವರೆಗೂ ಸೂಕ್ತ ಕ್ರಮವನ್ನು ಜರುಗಿಸಿಲ್ಲ. ಹೀಗಾಗಿ ಅವರಿಗೆ ರಾಜಕೀಯ ನಾಯಕರು ಬೆಂಬಲವಿದೆ ಎಂಬುವುದು ತಿಳಿಯುತ್ತದೆ. ನಟರಾಜ್ ಗೆ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಸುರೇಶ್ ಬೆಂಬಲವಿದೆ. ಅವರ ಬೆಂಬಲ ಇಲ್ಲದೇ ಇಷ್ಟೊಂದು ಅಕ್ರಮ ಆಸ್ತಿ ಸಂಪಾದನೆ ಮಾಡಲು ಸಾಧ್ಯವಿಲ್ಲ. ಈಗಲೂ ರಾಜಕೀಯ ಶಕ್ತಿಯಿಂದ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿಲ್ಲ ಎಂದು ಆರ್ ಟಿಐ ಕಾರ್ಯಕರ್ತ ರವಿಕುಮಾರ್ ಆರೋಪಿಸಿದ್ದಾರೆ.

    https://www.youtube.com/watch?v=3YO0lbkgxeY

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜ

    ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜ

    ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜ ತಾಯಿಯ ಆರೋಗ್ಯ ವಿಚಾರಿಸಲು ಉಡುಪಿಗೆ ಆಗಮಿಸಿದ್ದಾನೆ.

    ವಿಚಾರಣಾಧೀನ ಖೈದಿಯಾಗಿರುವ ಬನ್ನಂಜೆ ರಾಜ ಬೆಳಗಾವಿಯ ಹಿಂಡೆಲಗ ಜೈಲಿನಲ್ಲಿದ್ದಾನೆ. ಜೈಲಿನಲ್ಲಿರುವ ಬನ್ನಂಜೆ ರಾಜನಿಗೆ ನ್ಯಾಯಾಲಯ ಮಾನವೀಯ ನೆಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ನೋಡಲು ಅವಕಾಶ ನೀಡಿದೆ. ಇದನ್ನೂ ಓದಿ: ಅಮ್ಮನನ್ನು ನೋಡಲು ಬರ್ತಿದ್ದಾನೆ ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾ

    ಪೊಲೀಸ್ ಬಿಗಿ ಭದ್ರತೆಯಲ್ಲಿ ಉಡುಪಿಗೆ ಆಗಮಿಸಿದ ಬನ್ನಂಜೆ ರಾಜನನ್ನು ನಗರ ಠಾಣೆಗೆ ಕರೆದೊಯ್ಯಲಾಯ್ತು. ಭಾನುವಾರ ರಾತ್ರಿ ಬನ್ನಂಜೆ ರಾಜ ಉಡುಪಿ ನಗರ ಪೊಲೀಸ್ ಠಾಣೆಯಲ್ಲೇ ಇದ್ದು, ಇಂದು ಉಡುಪಿಯ ಮಲ್ಪೆ ಸಮೀಪವಿರುವ ಕಲ್ಮಾಡಿಯಲ್ಲಿರುವ ಮನೆಗೆ ತೆರಳಲಿದ್ದಾನೆ.

    ಬನ್ನಂಜೆ ರಾಜಾ ಮೊರಾಕ್ಕೋದಲ್ಲಿ 2015ರಲ್ಲಿ ಬಂಧನಕ್ಕೊಳಗಾಗಿದ್ದನು. ಇದೀಗ ಈತನ ಭೇಟಿ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶೂಟೌಟ್, ದರೋಡೆ, ಕೊಲೆ ಪ್ರಕರಣ ಸಹಿತ 16 ಕ್ರಿಮಿನಲ್ ಪ್ರಕರಣಗಳು ಹೀಗೆ ಒಟ್ಟು 45ಕ್ಕೂ ಹೆಚ್ಚು ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ.