Tag: ನ್ಯಾಯಾಮೂರ್ತಿ

  • ಗಡುವು ಮುಗಿದರೂ ಅರ್ಜಿ ಸಲ್ಲಿಸಲು ವಿಶೇಷ ಚೇತನರಿಗೆ ಅವಕಾಶ ಕಲ್ಪಿಸಿದ ಸುಪ್ರೀಂಕೋರ್ಟ್

    ಗಡುವು ಮುಗಿದರೂ ಅರ್ಜಿ ಸಲ್ಲಿಸಲು ವಿಶೇಷ ಚೇತನರಿಗೆ ಅವಕಾಶ ಕಲ್ಪಿಸಿದ ಸುಪ್ರೀಂಕೋರ್ಟ್

    ನವದೆಹಲಿ: ಭಾರತೀಯ ಪೊಲೀಸ್ ಸೇವೆ (IPS), ಭಾರತೀಯ ರೈಲ್ವೆ ರಕ್ಷಣಾ ಪಡೆ ಸೇವೆ (IRPFS) ಹಾಗೂ ದೆಹಲಿ, ದಮನ್ – ದಿಯು, ದಾದ್ರಾ – ನಗರ್ ಹವೇಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಲಕ್ಷದ್ವೀಪ ಪೊಲೀಸ್ ಸೇವೆಗಳ (DANIPS), ಯುಪಿಎಸ್‌ಸಿ ಪರೀಕ್ಷೆಗಳಿಗೆ ಗಡುವು ಮೀರಿದ್ದರೂ ಅರ್ಜಿ ಸಲ್ಲಿಸಲು ವಿಶೇಷ ಚೇತನ ಅಭ್ಯರ್ಥಿಗಳಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.

    ಈ ಮೇಲಿನ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಅವಧಿ ಗುರುವಾರವೇ ಕೊನೆಗೊಂಡಿದೆ. ಆದರೂ ತಾತ್ಕಾಲಿಕವಾಗಿ ಅರ್ಜಿಗಳನ್ನು ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಅಭಯ್ ಎಸ್. ಓಕಾ ಅವರಿದ್ದ ಪೀಠ ನಿರ್ದೇಶಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಭಾರತದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರ ಸಲಹೆಯಂತೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲು ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ರಾಜಕೀಯ ಪಕ್ಷಗಳಿಂದ ಉಚಿತ ಯೋಜನೆಗಳ ಭರವಸೆ – ಸುಪ್ರೀಂಕೋರ್ಟ್‍ಗೆ ಪಿಐಎಲ್ ಸಲ್ಲಿಕೆ, ಚು.ಆಯೋಗಕ್ಕೆ ನೋಟಿಸ್

    SUPREME COURT

    ಕಾಳಗದ ಹುದ್ದೆಗಳನ್ನು ಮಾತ್ರವಲ್ಲದೆ ಆಡಳಿತಾತ್ಮಕ ಹುದ್ದೆಗಳಿಂದಲೂ ವಿಶೇಷ ಚೇತನರನ್ನು ದೂರ ಇಡಲಾಗಿದೆ ಎಂದು ನ್ಯಾಷನಲ್ ಪ್ಲಾಟ್‌ಫಾರ್ಮ್ ಫಾರ್ ದಿ ರೈಟ್ಸ್ ಆಫ್ ದಿ ಡಿಸೇಬಲ್ಡ್ ಸಂಘಟನೆ ಸಲ್ಲಿಸಿರುವ ಅರ್ಜಿಯಲ್ಲಿ ದೂರಲಾಗಿತ್ತು. ವಿಕಲ ಚೇತನರನ್ನು ಐಪಿಎಸ್ ಮತ್ತಿತರ ಹುದ್ದೆಗಳಿಂದ ದೂರ ಇಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಕಾನೂನು ಬಾಹಿರ ಮತ್ತು ಮನಸೋ ಇಚ್ಛೆಯಿಂದ ಕೂಡಿರುವಂತಹದ್ದು ಎಂದು ಆರೋಪಿಸಿತ್ತು. ಇದನ್ನೂ ಓದಿ: ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಟ್ರಸ್ಟ್‌ಗೆ ಸುಪ್ರೀಂಕೋರ್ಟ್‍ನಲ್ಲಿ ಹಿನ್ನಡೆ

    ಅರ್ಜಿದಾರರ ಪರ ವಾದಮಂಡಿಸಿದ ಹಿರಿಯ ವಕೀಲ ಅರವಿಂದ್ ದಾತಾರ್ ಗುರುವಾರವೇ ಅರ್ಜಿ ಸಲ್ಲಿಸಲು ಕೊನೆಯ ಇದ್ದುದರಿಂದ ಮಧ್ಯಂತರ ಪರಿಹಾರ ನೀಡುವಂತೆ ನ್ಯಾಯಾಲಯವನ್ನು ಕೋರಿದರು. ಹಾಗಾಗಿ, ನ್ಯಾಯಮೂರ್ತಿಗಳ ಪೀಠವು ಕೇಂದ್ರ ಲೋಕಸೇವಾ ಅಯೋಗದ ಪ್ರಧಾನ ಕಾರ್ಯದರ್ಶಿಯವರಿಗೆ ಅರ್ಜಿದಾರರು ಹಾಗೂ ಅಂತಹದ್ದೇ ಸ್ಥಿತಿಯಲ್ಲಿರುವವರು ಏಪ್ರಿಲ್ 1, 2022ರ ಸಂಜೆ 4 ಗಂಟೆವರೆಗೆ ಅರ್ಜಿ ಸ್ವೀಕರಿಸುವಂತೆ ಸೂಚಿಸಿತು.

    ಬಳಿಕ ನ್ಯಾಯಾಲಯವು ಈಗ ನಡೆಯುತ್ತಿರುವ ಪ್ರಕರಣವು ಹಾಲಿ ಪ್ರಕ್ರಿಯೆಗೆ ಯಾವುದೇ ರೀತಿಯಲ್ಲಿ ಅಡ್ಡಿ ಉಂಟುಮಾಡುವುದಿಲ್ಲ. ಏಪ್ರಿಲ್ ೧೮ಕ್ಕೆ ಮುಂದಿನ ವಿಚಾರಣೆ ನಡೆಸಲಾಗುತ್ತದೆ ಎಂದು ಹೇಳಿದೆ.

  • ಸುಪ್ರೀಂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗಕ್ಕೆ ಮನಮೋಹನ್ ಸಿಂಗ್ ಸಹಿ ಮಾಡಿಲ್ಲ ಏಕೆ?

    ಸುಪ್ರೀಂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗಕ್ಕೆ ಮನಮೋಹನ್ ಸಿಂಗ್ ಸಹಿ ಮಾಡಿಲ್ಲ ಏಕೆ?

    ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಮಹಾಭಿಯೋಗಕ್ಕೆ ಅವಕಾಶ ಕಲ್ಪಿಸುವಂತೆ ಸಂಸತ್ ನ ವಿರೋಧ ಪಕ್ಷಗಳ ಸದಸ್ಯರ ನಿಯೋಗ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡ ಅವರಿಗೆ ಮನವಿ ಸಲ್ಲಿಸಿವೆ.

    ಕಾಂಗ್ರೆಸ್ ಸೇರಿದಂತೆ 71 ಸದಸ್ಯರು ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗಕ್ಕೆ ಅವಕಾಶ ನೀಡುವಂತೆ ಪತ್ರ ಬರೆದು ಸಹಿ ಮಾಡಿದ್ದಾರೆ. ಆದರೆ ಈ ಪತ್ರಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಹಿ ಹಾಕಿರಲಿಲ್ಲ. ಮಾಜಿ ಪ್ರಧಾನಿಗಳು ಮಹತ್ವದ ಪತ್ರಕ್ಕೆ ಸಹಿ ಮಾಡಿಲ್ಲ ಯಾಕೆ ಎನ್ನುವುದು ಈಗ ಚರ್ಚೆಗೆ ಗ್ರಾಸವಾಗಿದೆ.

    ಈ ಕುರಿತು ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮನಮೋಹನ್ ಸಿಂಗ್ ದೇಶದ ಮಾಜಿ ಪ್ರಧಾನಿಗಳಾಗಿರುವ ಕಾರಣ ಅವರನ್ನು ಈ ವಿಚಾರದಿಂದ ಅಂತರ ಕಾಯ್ದು ಕೊಳ್ಳಲಾಗಿದೆ ಎಂದು ತಿಳಿಸಿದರು.

    ಉಪರಾಷ್ಟ್ರಪತಿಗಳಿಗೆ ಸಲ್ಲಿಸಿದ ಪತ್ರದಲ್ಲಿ ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳು ಕಳೆದ ಜನವರಿಯಲ್ಲಿ ನಡೆಸಿದ್ದ ಮಾಧ್ಯಮ ಸುದ್ದಿಗೋಷ್ಠಿಯಲ್ಲಿನ ಅಂಶಗಳನ್ನು ಉಲ್ಲೇಖಿಸಿರುವುದಾಗಿ ಸಿಬಲ್ ಹೇಳಿದರು. ಉಪರಾಷ್ಟ್ರ ಪತಿಗಳಿಗೆ ಸಲ್ಲಿಸಲಾಗಿರುವ ಈ ಪತ್ರಕ್ಕೆ ಸಂಸತ್ ನ ವಿರೋಧ ಪಕ್ಷಗಳಾದ ಕಾಂಗ್ರೆಸ್, ಎನ್‍ಸಿಪಿ, ಸಿಪಿಎಂ, ಸಿಪಿಐ, ಎಸ್‍ಪಿ, ಬಿಎಸ್‍ಪಿ ಮತ್ತು ಮುಸ್ಲಿಂ ಲೀಗ್ ಪಕ್ಷಗಳ ಒಟ್ಟು 71 ಸಂಸದರು ಸಹಿ ಮಾಡಿದ್ದಾರೆ.

    ಸುಪ್ರೀಂ ಕೋರ್ಟ್ ಗುರುವಾರ ನ್ಯಾ. ಬಿಎಚ್ ಲೋಯಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಮಾಡಿದ್ದ ಮನವಿಯನ್ನು ನಿರಾಕರಿಸಿದ ಬಳಿಕ ವಿರೋಧ ಪಕ್ಷಗಳು ಸುಪ್ರೀಂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗಕ್ಕೆ ಮನವಿ ಸಲ್ಲಿಸಿದೆ.

    ವಿರೋಧಿ ಪಕ್ಷಗಗಳ ಸದಸ್ಯರು ಸಲ್ಲಿಸಿರುವ ಪತ್ರವನ್ನು ಸ್ವೀಕರಿಸಿರುವ ಉಪರಾಷ್ಟ್ರಪತಿಗಳು ಮುಂದಿನ ಕ್ರಮ ನಡೆಸಲು ಕಾನೂನು ಸಲಹೆಯ ಮೊರೆ ಹೋಗಿದ್ದಾರೆ ಎನ್ನಲಾಗಿದೆ.