Tag: ನ್ಯೂಯಾರ್ಕ್ ಟೈಮ್ಸ್

  • ಉಗ್ರರು ದಾಳಿ ಮಾಡಿಲ್ಲ ಎಂದ ನ್ಯೂಯಾರ್ಕ್‌ ಟೈಮ್ಸ್‌ – ವರದಿಯನ್ನು ಸರಿ ಮಾಡಿದ ಅಮೆರಿಕ ಸರ್ಕಾರ

    ಉಗ್ರರು ದಾಳಿ ಮಾಡಿಲ್ಲ ಎಂದ ನ್ಯೂಯಾರ್ಕ್‌ ಟೈಮ್ಸ್‌ – ವರದಿಯನ್ನು ಸರಿ ಮಾಡಿದ ಅಮೆರಿಕ ಸರ್ಕಾರ

    ವಾಷಿಂಗ್ಟನ್‌: ಕಾಶ್ಮೀರದ ಪಹಲ್ಗಾಮ್‌ ದಾಳಿಯನ್ನು (Pahalgam Terror Attack) ಉಗ್ರರ ದಾಳಿ ಎಂದು ಬರೆಯದ ಅಮೆರಿಕ ನ್ಯೂಯಾರ್ಕ್‌ ಟೈಮ್ಸ್‌ (The New York Times) ವರದಿಯನ್ನು ಅಮೆರಿಕ ಸರ್ಕಾರ (US Government) ಟೀಕಿಸಿದೆ.

    ನ್ಯೂಯಾರ್ಕ್‌ ಟೈಮ್ಸ್‌ ತನ್ನ ವರದಿಯಲ್ಲಿ ʼMilitantsʼ ಎಂದು ಹೆಡ್‌ಲೈನ್‌ ಹಾಕಿ ವರದಿ ಮಾಡಿತ್ತು. ಆದರೆ ಅಮೆರಿಕದ House Foreign Affairs Committee Majority ಸಾಮಾಜಿಕ ಜಾಲತಾಣದಲ್ಲಿ Militants ಇರುವ ಜಾಗದಲ್ಲಿ ʼTerroristʼ ಎಂದು ಹಾಕಿ ಪೋಸ್ಟ್‌ ಮಾಡಿದೆ. ಇದನ್ನೂ ಓದಿ: Pahalgam Terror Attack – ಅಗತ್ಯ ಬಿದ್ರೆ ಭಾರತದೊಂದಿಗೆ ನಿಲ್ಲುತ್ತೇವೆ: ಇಸ್ರೇಲ್

    ತನ್ನ ಪೋಸ್ಟ್‌ನಲ್ಲಿ ನಾನು ನ್ಯೂಯಾರ್ಕ್‌ ಟೈಮ್ಸ್‌ ವರದಿಯನ್ನು ಸರಿ ಮಾಡಿದ್ದೇವೆ. ಭಾರತವಾಗಲಿ ಅಥವಾ ಇಸ್ರೇಲ್‌ನಲ್ಲಿ ನಡೆಯಲಿ ಇದು ಭಯೋತ್ಪಾದಕ ದಾಳಿ ಎಂದು ಬರೆದುಕೊಂಡಿದೆ.

    ಮೊದಲಿನಿಂದಲೂ ಜಮ್ಮು ಕಾಶ್ಮೀರದಲ್ಲಿ ಉಗ್ರರು ದಾಳಿ ಮಾಡಿದಾಗ ಪಾಶ್ಚಿಮಾತ್ಯ, ಅಮೆರಿಕ, ಮಧ್ಯಪ್ರಾಚ್ಯದಲ್ಲಿರುವ ಮಾಧ್ಯಮಗಳು ಅವರನ್ನು ಉಗ್ರರು ಎಂದು ಕರೆಯುವುದಿಲ್ಲ. ಪ್ರತ್ಯೇಕವಾದಿಗಳು, ಬಂಡುಕೋರರು, ಸ್ವತಂತ್ರ ಹೋರಾಟಗಾರರು ಎಂಬ ಬಣ್ಣ ಬಣ್ಣದ ಪದಗಳನ್ನು ಬಳಸಿ ಅವರ ಮೇಲೆ ವಿಶ್ವದ ಜನರು ಅನುಕಂಪ ಬರುವಂತಹ ವರದಿಗಳನ್ನು ಪ್ರಕಟಿಸುತ್ತಿದ್ದವು, ಈಗಲೂ ಪ್ರಕಟಿಸುತ್ತಲೇ ಇದೆ. ಇದನ್ನೂ ಓದಿ: ಗಡಿಯಲ್ಲಿ ಭಾರತ ಪಾಕ್‌ ಮಧ್ಯೆ ಗುಂಡಿನ ಚಕಮಕಿ

     

    ಕನ್ನಡದಲ್ಲಿ Militants ಪದಕ್ಕೆ ಅರ್ಥ ಹುಡುಕಿದರೆ ʼಉಗ್ರರುʼ ಎಂದೇ ಗೂಗಲ್‌ ತೋರಿಸುತ್ತದೆ. ಆದರೆ ಇಂಗ್ಲಿಷ್‌ನಲ್ಲಿ Militants ಅಂದರೆ ಉಗ್ರರು ಎಂಬ ಅರ್ಥ ಬರುವುದಿಲ್ಲ. ಸಶಸ್ತ್ರ ಪ್ರತಿರೋಧ, ದಂಗೆಗಳು ಅಥವಾ ಗೆರಿಲ್ಲಾ ಯುದ್ಧದಲ್ಲಿ ತೊಡಗಿರುವ ವ್ಯಕ್ತಿಗಳು ಅಥವಾ ಗುಂಪುಗಳನ್ನು ವಿವರಿಸಲು ಸಾಮಾನ್ಯವಾಗಿ ಈ ಪದವನ್ನು ಬಳಸಲಾಗುತ್ತದೆ. ಸರ್ಕಾರದ ವಿರುದ್ಧ ವಿಮೋಚನಾ ಹೋರಾಟ ಮಾಡುತ್ತಿರುವ ವಿಮೋಚನಾ ಹೋರಾಟಗಾರರು, ಪ್ರತ್ಯೇಕವಾದಿಗಳು ಎಂಬ ಅರ್ಥ ಕೊಡುತ್ತದೆ.

  • 2017ರಲ್ಲಿ ಭಾರತ-ಇಸ್ರೇಲ್‌ ರಕ್ಷಣಾ ಒಪ್ಪಂದದ ವೇಳೆ ಪೆಗಾಸಸ್‌ ಖರೀದಿ – ನ್ಯೂಯಾರ್ಕ್‌ ಟೈಮ್ಸ್‌ ವರದಿ

    2017ರಲ್ಲಿ ಭಾರತ-ಇಸ್ರೇಲ್‌ ರಕ್ಷಣಾ ಒಪ್ಪಂದದ ವೇಳೆ ಪೆಗಾಸಸ್‌ ಖರೀದಿ – ನ್ಯೂಯಾರ್ಕ್‌ ಟೈಮ್ಸ್‌ ವರದಿ

    ನ್ಯೂಯಾರ್ಕ್‌: ಭಾರತ ಮತ್ತು ಇಸ್ರೇಲ್‌ ನಡುವೆ 2017ರಲ್ಲಿ ನಡೆದ ರಕ್ಷಣಾ ಒಪ್ಪಂದದ ಸಂದರ್ಭದಲ್ಲಿ ಇಸ್ರೇಲಿ ಪೆಗಾಸಸ್‌ ತಂತ್ರಾಂಶವನ್ನೂ ಖರೀದಿಸಲಾಗಿತ್ತು ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಮಾಡಿದೆ. ಆಗ ಭಾರತ 2 ಶತಕೋಟಿ ಡಾಲರ್‌ ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಗುಪ್ತಚರ ಸಾಧನಗಳ ಒಪ್ಪಂದ ಮಾಡಿಕೊಂಡಿತ್ತು.

    ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರು, ರಾಜಕಾರಣಿಗಳು ಮತ್ತು ಇತರರ ಮೇಲೆ ಕಣ್ಣಿಡಲು ಸರ್ಕಾರಗಳು ಪೆಗಾಸಸ್‌ ಸಾಫ್ಟ್‌ವೇರ್‌ ಅನ್ನು ಬಳಸುತ್ತಿವೆ ಎಂಬ ಸುದ್ದಿ ಕಳೆದ ವರ್ಷ ಭಾರಿ ಸದ್ದು ಮಾಡಿತ್ತು. ಇದನ್ನೂ ಓದಿ: ಇನ್ನು ಮುಂದೆ ಮಾಸ್ಕ್ ಹಾಕಿಕೊಂಡೇ ಐಫೋನ್ ಫೇಸ್ ಐಡಿ ಅನ್‍ಲಾಕ್ ಮಾಡ್ಬೋದು!

    ʼದಿ ಬ್ಯಾಟಲ್‌ ಫಾರ್‌ ದಿ ವರ್ಲ್ದ್ಸ್‌ ಮೋಸ್ಟ್‌ ಪವರ್‌ಫುಲ್‌ ಸೈಬರ್‌ವೆಪನ್‌ʼ ಶೀರ್ಷಿಕೆಯಡಿ ವರದಿ ಮಾಡಿರುವ ನ್ಯೂಯಾರ್ಕ್‌ ಟೈಮ್ಸ್‌, ಇಸ್ರೇಲಿ ಸಂಸ್ಥೆ ಎನ್‌ಎಸ್‌ಒ ಗ್ರೂಪ್‌ ಸುಮಾರು ಒಂದು ದಶಕದಿಂದ ತನ್ನ ಕಣ್ಗಾವಲು ಸಾಫ್ಟ್‌ವೇರ್‌ ಅನ್ನು ಚಂದಾದಾರಿಕೆಯ ಆಧಾರದ ಮೇಲೆ ಪ್ರಪಂಚದಾದ್ಯಂತ ಕಾನೂನು ಜಾರಿ ಮತ್ತು ಗುಪ್ತಚರ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿದೆ ಎಂದು ಹೇಳಿದೆ.

    ಖಾಸಗಿ ಕಂಪನಿಗಳು, ಗುಪ್ತಚರ ಸಂಸ್ಥೆಗಳೂ ಮಾಡಲಾಗದ ಕೆಲಸವನ್ನು ಅದು ಮಾಡಬಹುದೆಂದು ಭರವಸೆ ನೀಡಿದೆ. ಐಫೋನ್‌, ಆ್ಯಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನ ಎನ್‌ಕ್ರಿಪ್ಟ್‌ ಮಾಡಲಾದ ಸಂವಹನಗಳನ್ನು ಯಶಸ್ವಿಯಾಗಿ ಭೇದಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಏರ್‌ಟೆಲ್‌ನಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಗೂಗಲ್

    2017ರಲ್ಲಿ ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದನ್ನೂ ವರದಿ ಉಲ್ಲೇಖಿಸಿದೆ. ಅಲ್ಲದೇ ಇಸ್ರೇಲ್‌ಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂದು ಕೂಡ ಬರೆಯಲಾಗಿದೆ. ಮೋದಿ ಭೇಟಿಯ ತಿಂಗಳ ನಂತರ ನೆತನ್ಯಾಹು ಭಾರತಕ್ಕೆ ಅಪರೂಪದ ಭೇಟಿ ನೀಡಿದ್ದರು.

    ಪೆಗಾಸಸ್‌ ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ನಮ್ಮ ಮೇಲೆ ಕಣ್ಗಾವಲು ಇರಿಸಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಆದರೆ ನಿರ್ದಿಷ್ಟ ಜನರ ಮೇಲೆ ತನ್ನಿಂದ ಯಾವುದೇ ಕಣ್ಗಾವಲು ಇಲ್ಲ ಎಂದು ಕೇಂದ್ರ ಆರೋಪಗಳನ್ನು ತಳ್ಳಿ ಹಾಕಿತ್ತು.

  • ಆತ್ಮಚರಿತ್ರೆಯಲ್ಲಿ ರಾಹುಲ್ ಗಾಂಧಿ ವ್ಯಕ್ತಿತ್ವ ಬಣ್ಣಿಸಿದ ಒಬಾಮಾ

    ಆತ್ಮಚರಿತ್ರೆಯಲ್ಲಿ ರಾಹುಲ್ ಗಾಂಧಿ ವ್ಯಕ್ತಿತ್ವ ಬಣ್ಣಿಸಿದ ಒಬಾಮಾ

    – ಶಿಕ್ಷಕರನ್ನು ಮೆಚ್ಚಿಸಲು ನೋಡೋ ವಿದ್ಯಾರ್ಥಿಯಂತೆ

    ವಾರ್ಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ತಮ್ಮ ರಾಜಕೀಯ ಅನುಭವ ಹಾಗೂ ಜೀವನದ ಕೆಲ ಸ್ಮರಣೀಯ ನೆನಪುಗಳನ್ನು ‘ಎ ಪ್ರಾಮಿಸ್ಡ್‌ ಲ್ಯಾಂಡ್’ ಪುಸ್ತಕದ ರೂಪದಲ್ಲಿ ಹೊರ ತರುತ್ತಿದ್ದು, ನವೆಂಬರ್ 17 ರಂದು ಪುಸ್ತಕ ಬಿಡುಗಡೆಯಾಗಲಿದೆ.

    ಪುಸ್ತಕದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕುರಿತು ಒಬಾಮಾ ಆಸಕ್ತಿಕರ ಹೇಳಿಕೆಗಳನ್ನು ನೀಡಿದ್ದಾಗಿ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.

    ರಾಹುಲ್ ಗಾಂಧಿಯಲ್ಲಿ ಭಯವೆಂಬ ತಿಳಿಯದ ಗುಣವಿದೆ. ತರಗತಿಯಲ್ಲಿ ಶಿಕ್ಷಕರನ್ನು ಮೆಚ್ಚಿಸುವ ವಿದ್ಯಾರ್ಥಿಯಂತೆ ಅತುರವಾಗಿರುತ್ತಾರೆ. ಆದರೆ ಒಂದು ವಿಷಯದ ಕುರಿತು ಆಳವಾಗಿ ಕಲಿತುಕೊಳ್ಳಬೇಕೆಂಬ ಉತ್ಸಾಹ ಮತ್ತು ಅಭಿರುಚಿಯ ಕೊರತೆ ಇದೆ ಎಂದು ಒಬಾಮಾ ಬರೆದುಕೊಂಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

    ಒಟ್ಟಾರೆ 768 ಪುಟಗಳ ಈ ಪುಸ್ತಕದಲ್ಲಿ ಒಬಾಮಾ ತಮ್ಮ ಬಾಲ್ಯದ ಘಟನೆಗಳು, ನೆನಪು, ರಾಜಕೀಯ ಬದುಕು, 2008ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಗೆಲುವು ಹೀಗೆ ಅನೇಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಆಫ್ರಿಕನ್ ಅಮೆರಿಕನ್ ಎಂಬ ಇತಿಹಾಸ ಸೃಷ್ಟಿ ಮಾಡಿರೋ ಒಬಾಮಾ, 2010 ಮತ್ತು 2015 ರಲ್ಲಿ ಭಾರತದ ಪ್ರವಾಸ ಕೈಗೊಂಡಿದ್ದರು. 2009ರ ಜನವರಿಯಿಂದ 2017ರ ಜನವರಿವರೆಗೂ 2 ಅವಧಿಯಲ್ಲಿ ಅಮೆರಿಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ರು. ಉಳಿದಂತೆ 2017 ರಲ್ಲಿ ಭಾರತಕ್ಕೆ ಒಬಾಮಾ ಆಗಮಿಸಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು.

  • ಅಮೆರಿಕ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯಲ್ಲಿ ಹಂಪಿಗೆ 2ನೇ ಸ್ಥಾನ..!

    ಅಮೆರಿಕ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯಲ್ಲಿ ಹಂಪಿಗೆ 2ನೇ ಸ್ಥಾನ..!

    -ವಿಶ್ವ ಪರಂಪರೆ ತಾಣಕ್ಕೆ ಮತ್ತೊಂದು ಗರಿ..!

    ಬಳ್ಳಾರಿ: ವಿಶ್ವ ಪರಂಪರೆ ತಾಣವಾಗಿರುವ ಹಂಪಿಗೀಗ ಮತ್ತೊಂದು ಗರಿ ಲಭಿಸಿದ್ದು, ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯ ಪ್ರವಾಸಿ ತಾಣಗಳಲ್ಲಿ ವಿಶ್ವ ವಿಖ್ಯಾತ ಹಂಪಿಗೆ 2ನೇ ಸ್ಥಾನ ಲಭಿಸಿದೆ. ಇದೂ ರಾಜ್ಯದ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

    ‘ಕಣ್ಣು ಇದ್ದವರು ಕನಕಗಿರಿ ನೋಡಬೇಕು. ಕಾಲಿದ್ದವರು ಹಂಪಿ ನೋಡಬೇಕು’ ಅನ್ನೋ ಗಾದೆ ಮಾತಿದೆ. ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನ ನೋಡುವುದೇ ಒಂದು ಅಂದವಾಗಿದ್ದು, ಅಂತಹ ಅಂದದ ಸೊಬಗಿನ ಸ್ಮಾರಕಗಳಿಗೆ ಇದೀಗ ಮತ್ತೊಮ್ಮೆ ಹಿರಿಮೆ ಲಭಿಸಿದೆ. ವಿಶ್ವದ 52 ಪ್ರವಾಸಿ ತಾಣಗಳಲ್ಲಿ ವಿಶ್ವ ಪರಂಪರೆಯ ಹಂಪಿಗೆ 2ನೇ ಸ್ಥಾನ ಲಭಿಸಿದೆ. ಅಮೆರಿಕದ ನ್ಯೂಯಾರ್ಕ್ಸ್ ಟೈಮ್ಸ್ ಮಾಡಿರುವ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೆರೆಬಿಯನ್ ದ್ವೀಪವಾದ ಪೋರ್ಟೋ ರಿಕೋಗೆ ಮೊದಲ ಸ್ಥಾನ ಲಭಿಸಿದ್ದರೆ, ವಿಶ್ವ ವಿಖ್ಯಾತ ಹಂಪಿಗೆ 2ನೇ ಸ್ಥಾನ ದೊರೆತಿರುವುದು ರಾಜ್ಯದ ಹೆಮ್ಮೆಯ ಸಂಗತಿಯಾಗಿದೆ ಎಂದು ಬಳ್ಳಾರಿ ಡಿಸಿ ರಾಮಪ್ರಸಾತ್ ಮನೋಹರ್ ಹೇಳಿದ್ದಾರೆ.

    ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನ ನೋಡಲು ಪ್ರತಿನಿತ್ಯ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಕಳೆದ ವರ್ಷ ಬರೋಬ್ಬರಿ 5,35 ಲಕ್ಷ ಪ್ರವಾಸಿಗರು ಹಂಪಿ ವೀಕ್ಷಣೆ ಮಾಡಿದ್ದಾರೆ. ಈ ಪೈಕಿ 38 ಸಾವಿರ ವಿದೇಶಿ ಪ್ರವಾಸಿಗರು ಹಂಪಿ ವೀಕ್ಷಣೆ ಮಾಡಿರುವುದು ಮತ್ತೊಂದು ದಾಖಲೆಯಾಗಿದೆ. ಹೀಗಾಗಿ ಇತಂಹ ವಿಶ್ವ ವಿಖ್ಯಾತ ಹಂಪಿಗೆ ಇದೀಗ ನ್ಯೂಯಾರ್ಕ್ ಟೈಮ್ಸ್ ನಲ್ಲಿ 2ನೇ ಸ್ಥಾನ ದೊರೆತಿರುವುದು ನಿಜಕ್ಕೂ ರಾಜ್ಯದ ಹೆಮ್ಮೆಯ ಸಂಗತಿಯಾಗಿದೆ. ದೇಶದ ಯಾವ ಪ್ರವಾಸಿ ತಾಣಗಳಿಗೂ ಸಿಗದ ಮಾನ್ಯತೆ ವಿಶ್ಯ ವಿಖ್ಯಾತ ಹಂಪಿಗೆ ದೊರೆತಿರುವುದು ಬಳ್ಳಾರಿ ಜನರಲ್ಲಿ ಮತ್ತಷ್ಟೂ ಸಂತಸ ಮೂಡಿಸಿದೆ. ಜೊತೆಗೆ ಹಂಪಿಯನ್ನ ಇನ್ನಷ್ಟು ಅಭಿವೃದ್ಧಿ ಮಾಡಿದರೆ ಒಳಿತೂ ಅಂತ ಪ್ರವಾಸಿಗ ಬಸವರಾಜ್ ಹೇಳಿದ್ದಾರೆ.

    ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯಲ್ಲಿ ಹಂಪಿಗೆ ವಿಶೇಷ ಸ್ಥಾನ ಗೌರವ ಸಿಕ್ಕರೂ ರಾಜ್ಯ ಸರ್ಕಾರ ಇತಂಹ ಹೆಮ್ಮೆಯ ಹಂಪಿ ಉತ್ಸವವನ್ನು ಮಾಡದೇ ನಿರ್ಲಕ್ಷ್ಯ ತೊರಿರುವುದು ನಿಜಕ್ಕೂ ದುರಂತಮಯವಾಗಿದೆ. ಇನ್ನಾದ್ರೂ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಶ್ವ ಪರಂಪರೆಯ ತಾಣವಾಗಿರುವ ಹಂಪಿಯತ್ತ ಚಿತ್ತ ಹರಿಸಲಿ ಅನ್ನೋದೇ ಎಲ್ಲರ ಒತ್ತಾಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕೋದಕ್ಕೆ ಲಾಯಕ್ : ರಾಮಲಿಂಗಾ ರೆಡ್ಡಿ

    ಬಿಜೆಪಿ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕೋದಕ್ಕೆ ಲಾಯಕ್ : ರಾಮಲಿಂಗಾ ರೆಡ್ಡಿ

    ಬೆಂಗಳೂರು: ಬಿಜೆಪಿಯ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕುವುದಕ್ಕೆ ಲಾಯಕ್ಕಾಗಿರೋ ಪೇಪರ್ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

    ಸಿದ್ದರಾಮಯ್ಯ ಕಾಲದಲ್ಲಿ ಬೆಂಗಳೂರಿನ ಕಸದ ಸಮಸ್ಯೆಯ ಸುದ್ದಿ ನ್ಯೂಯಾರ್ಕ್ ಟೈಮ್ಸ್ ನಲ್ಲೂ ಪ್ರಕಟವಾಗಿದೆ ಎಂದು ಬಿಜೆಪಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಚಾರ್ಜ್ ಶೀಟ್ ನಲ್ಲಿನ ಆರೋಪಗಳ ಕುರಿತು ಬಿಜೆಪಿಯವರಿಗೆ ಕ್ಲಾರಿಟಿ ಇಲ್ಲ ಎಂದು ಕಿಡಿಕಾರಿದ್ದಾರೆ.

    ಬೆಂಗಳೂರಿನ ಮಾನ ಮರ್ಯಾದೆ ಕಳೆದಿದ್ದು ಬಿಜೆಪಿಯವರು. 2012ರ ಅಕ್ಟೋಬರ್ ನಲ್ಲಿ ನ್ಯೂಯಾರ್ಕ್ ಟೈಮ್ಸ್ ಗಾರ್ಡನ್ ಸಿಟಿಯನ್ನು ಗಾರ್ಬೆಜ್ ಸಿಟಿ ಅನ್ನೋದಾಗಿ ವರದಿ ಮಾಡಿತ್ತು. ಆಗ ಇದ್ದದ್ದು ಬಿಜೆಪಿ ಸರ್ಕಾರ. ಅಧಿಕಾರಕ್ಕೆ ಬಂದು ಮೂರು ವರ್ಷವಾಗಿದ್ದರೂ ಬಿಜೆಪಿಯವರು ಬೆಂಗಳೂರಿನ ಕಸದ ಸಮಸ್ಯೆಗೆ ಪರಿಹಾರ ಹುಡುಕುವಲ್ಲಿ ಸೋತಿದ್ದರು ಎಂದು ಟೀಕಿಸಿದರು.  ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಮತ್ತೆ ಎಡವಟ್ಟು ಮಾಡಿಕೊಂಡ ಬಿಜೆಪಿ

    ಕಾಂಗ್ರೆಸ್ ಸರ್ಕಾರ ಬಂದ ನಂತರ ಬೆಂಗಳೂರಿನಲ್ಲಿ ಏಳು ತ್ಯಾಜ್ಯ ಸಂಸ್ಕರಣಾ ಘಟಕ ಮಾಡಲಾಗಿದೆ. ತ್ಯಾಜ್ಯ ವಿಂಗಡಣೆ, ಸಂಸ್ಕರಣೆ ಸರಿಯಾಗಿಯೇ ನಡೆದಿದೆ. 2012ರ ಬಿಜೆಪಿಯವರ ಅವಧಿಯಲ್ಲಿ ನಡೆದಿದ್ದನ್ನು ನಮ್ಮ ಸರ್ಕಾರ ಬಂದ ಮೇಲೆ ಅಂತ ತಿರುಗಿಸಿ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.