Tag: ನ್ಯೂ ಇಯರ್

  • ರೆಸ್ಟೋರೆಂಟ್ ಮಾಲೀಕನ ಪುತ್ರ, ಸಿಬ್ಬಂದಿಯಿಂದ ಹಲ್ಲೆ – ನ್ಯೂ ಇಯರ್‌ಗೆ ಗೋವಾಗೆ ತೆರಳಿದ್ದ ಆಂಧ್ರದ ಯುವಕ ಸಾವು

    ರೆಸ್ಟೋರೆಂಟ್ ಮಾಲೀಕನ ಪುತ್ರ, ಸಿಬ್ಬಂದಿಯಿಂದ ಹಲ್ಲೆ – ನ್ಯೂ ಇಯರ್‌ಗೆ ಗೋವಾಗೆ ತೆರಳಿದ್ದ ಆಂಧ್ರದ ಯುವಕ ಸಾವು

    – ಯುವತಿಯ ವಿಚಾರವಾಗಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯ

    ಅಮರಾವತಿ: ನ್ಯೂ ಇಯರ್ ಪಾರ್ಟಿಗೆಂದು (New Year Party) ಗೋವಾಗೆ (Goa) ತೆರಳಿದ್ದ ಆಂಧ್ರ (Andhra Pradesh) ಮೂಲದ ಯುವಕನಿಗೆ ರೆಸ್ಟೋರೆಂಟ್ ಮಾಲೀಕನ ಪುತ್ರ ಹಾಗೂ ಸಿಬ್ಬಂದಿ ಹಲ್ಲೆ ನಡೆಸಿದ ಪರಿಣಾಮ ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ.

    ರವಿತೇಜ ಮೃತ ಯುವಕ. ರವಿತೇಜ ಸೇರಿದಂತೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ತಾಡೆಪಲ್ಲಿಗುಡೆಮ್‌ನ ಸ್ನೇಹಿತರ ಗುಂಪು ಹೊಸ ವರ್ಷದ ಸಂಭ್ರಮಾಚಾರಣೆಯ ಸಲುವಾಗಿ ಗೋವಾಗೆ ತೆರಳಿತ್ತು. ಸ್ನೇಹಿತರ ಗುಂಪಿನಲ್ಲಿದ್ದ ಮಹಿಳೆಯೊಬ್ಬರ ಜೊತೆ ರೆಸ್ಟೋರೆಂಟ್ ಮಾಲೀಕನ ಪುತ್ರ ಅನುಚಿತವಾಗಿ ವರ್ತಿಸಿದ್ದನ್ನು ರವಿತೇಜ ಪ್ರಶ್ನಿಸಿದ್ದಾನೆ. ಈ ವೇಳೆ ಜಗಳ ಶುರುವಾಗಿದೆ. ಬಳಿಕ ಜಗಳ ತಾರಕಕ್ಕೇರಿ ರೆಸ್ಟೋರೆಂಟ್ ಮಾಲೀಕನ ಪುತ್ರ ಹಾಗೂ ಸಿಬ್ಬಂದಿ ರವಿತೇಜನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ರವಿತೇಜಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ರವಿತೇಜ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಕಾಂಗ್ರೆಸ್‌ನ ಪಾಪದ ಕೊಡ ತುಂಬಿದೆ, ದೇವರೇ ಶಿಕ್ಷೆ ಕೊಡ್ತಾನೆ: ಕುಮಾರಸ್ವಾಮಿ

    ಘಟನೆಯ ಬಳಿಕ ತಾಡೆಪಲ್ಲಿಗುಡೆಂ ಶಾಸಕ ಬೋಳಿಸೆಟ್ಟಿ ಶ್ರೀನಿವಾಸ್ ಗೋವಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಬಳಿಕ ವಿಶೇಷ ವಿಮಾನದ ಮೂಲಕ ಮೃತದೇಹವನ್ನು ಹುಟ್ಟೂರಿಗೆ ಸಾಗಿಸಲು ಅನುಕೂಲ ಮಾಡಿಕೊಟ್ಟರು. ತಾಡೆಪಲ್ಲಿಗುಡೆಂನಲ್ಲಿ ರವಿತೇಜ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗಿದೆ.  ಇದನ್ನೂ ಓದಿ: ಡಿಕೆಶಿಗೂ ಶಾಕ್, ಪವರ್ ಶೇರ್ ಕುತೂಹಲಿಗಳಿಗೂ ಶಾಕ್ – ಸಿಎಂ ಡಿನ್ನರ್‌ ಸಭೆ ಇನ್‌ಸೈಡ್‌ ಸ್ಟೋರಿ

  • ಹೊಸ ವರ್ಷ ಆಚರಣೆಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರ ದಂಡು

    ಹೊಸ ವರ್ಷ ಆಚರಣೆಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರ ದಂಡು

    ಮಂಗಳೂರು: ಹೊಸ ವರ್ಷ ಆಚರಣೆ ಹಿನ್ನೆಲೆ ಕರಾವಳಿಯ ಪ್ರಸಿದ್ಧ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರ ದಂಡೇ ಆಗಮಿಸಿದೆ.

    ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆದರು. ಈ ವರ್ಷದ ಕೊನೆಯ ದಿನವಾದ ಇಂದು ಭಕ್ತರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲೇ ವಾಸ್ತವ್ಯ ಹೂಡಲಿದ್ದು, ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲೇ ಹೊಸ ವರ್ಷವನ್ನ ಸ್ವಾಗತಿಸಲಿದ್ದಾರೆ.

    ಬೆಂಗಳೂರು, ಮೈಸೂರು, ಹುಬ್ಬಳಿ ಸೇರಿ ಉತ್ತರ ಕರ್ನಾಟಕ ಹಾಗೂ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿನಿಂದಲೂ ಆಗಮಿಸಿದ ಭಕ್ತರ ದಂಡು ಆಗಮಿಸಿದೆ.

  • ನಕಲಿ ಅಡ್ರೆಸ್ ಕೊಟ್ಟು ಮಾದಕ ವಸ್ತು ಕೊರಿಯರ್ – 2 ತಿಂಗಳಾದ್ರೂ ಪತ್ತೆಯಾಗಿಲ್ಲ ವಿಳಾಸ

    ನಕಲಿ ಅಡ್ರೆಸ್ ಕೊಟ್ಟು ಮಾದಕ ವಸ್ತು ಕೊರಿಯರ್ – 2 ತಿಂಗಳಾದ್ರೂ ಪತ್ತೆಯಾಗಿಲ್ಲ ವಿಳಾಸ

    ಬೆಂಗಳೂರು: ನ್ಯೂ ಇಯರ್ (New Year) ಹತ್ತಿರವಾಗುತ್ತಿದ್ದಂತೆ ಮಾದಕ ವಸ್ತುಗಳ ಮೂಲಗಳ ಬಗ್ಗೆ ಹಲವು ಕುತೂಹಲಕಾರಿ ವಿಚಾರಗಳು ಬೆಳಕಿಗೆ ಬರುತ್ತಿವೆ.

    ವಿದೇಶಗಳಿಂದ ವಿವಿಧ ಬಗೆಯ ಡ್ರಗ್ಸ್ ಬೆಂಗಳೂರಿಗೆ ಕೊರಿಯರ್‌ಗಳ ಮೂಲಕ ಬರುತ್ತಿವೆ ಎಂಬ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಆಧರಿಸಿದ ಸಿಸಿಬಿ ಪೊಲೀಸರು (CCB Police) ಕಳೆದ ಅಕ್ಟೋಬರ್ 20ರಂದು ಬೆಂಗಳೂರಿನ (Bengaluru) ಚಾಮರಾಜಪೇಟೆಯ (Chamarajpet) ಫಾರಿನ್ ಪೋಸ್ಟ್ ಆಫೀಸ್ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಅನುಮಾನಾಸ್ಪದ 3,500 ಕೊರಿಯರ್‌ಗಳನ್ನು ಪರಿಶೀಲಿಸಿದ ವೇಳೆ 606 ಕೊರಿಯರ್‌ಗಳಲ್ಲಿ ಬರೋಬ್ಬರಿ 21 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಇದನ್ನೂ ಓದಿ: ಸಿರಿಯಾದಲ್ಲಿ ಭಾರತೀಯ ಪ್ರಜೆಗಳು ಸೇಫ್‌ – ರಾಯಭಾರ ಕಚೇರಿಯಿಂದ ಮಾಹಿತಿ

    ಡ್ರಗ್ಸ್ ಪತ್ತೆಯಾದ 606 ಕೊರಿಯರ್‌ಗಳ ಬೆನ್ನತ್ತಿದ ಪೊಲೀಸರಿಗೆ ಶಾಕ್ ಕಾದಿತ್ತು. ಯಾಕಂದರೆ ಅಷ್ಟೂ ಕೊರಿಯರ್‌ಗಳ ಅಡ್ರೆಸ್‌ಗಳು ನಕಲಿಯಾಗಿದ್ದವು. ಕಳೆದ ಎರಡು ತಿಂಗಳಲ್ಲಿ ಒಂದೇ ಒಂದು ಅಡ್ರೆಸ್ ಕೂಡ ಪೊಲೀಸರಿಗೆ ಪತ್ತೆಯಾಗಿಲ್ಲ. ಈ ನಡುವೆ ನ್ಯೂ ಇಯರ್ ಕೂಡ ಹತ್ತಿರ ವಾಗುತ್ತಿದ್ದು, ಶನಿವಾರವಷ್ಟೇ ಪೋಸ್ಟ್ ಆಫೀಸ್‌ಗಳು, ಖಾಸಗಿ ಕೋರಿಯರ್ ಆಫೀಸ್‌ಗಳು, ಟ್ರಾವೆಲ್ ಏಜೆನ್ಸಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ.  ಇದನ್ನೂ ಓದಿ: ಸರ್ಕಾರದ ಬೊಕ್ಕಸ ಬರಿದಾಗಿ ಕಳಪೆ ಔಷಧ ಖರೀದಿ, ಬಾಣಂತಿಯರ ಸಾವಿಗೆ ಇದೇ ಕಾರಣ: ಜೋಶಿ

    ತಪ್ಪು ಅಡ್ರೆಸ್ ಇರುವ ಕೊರಿಯರ್‌ಗಳು ಅಡ್ರೆಸ್‌ಗೆ ಹೋಗಿ ವಾಪಸ್ ಬರುತ್ತವೆ. ನಂತರ ಕೊರಿಯರ್ ಆಫೀಸ್‌ಗಳಿಗೆ ಬಂದು ಬಳಕೆದಾರರು, ಅಥವಾ ಪೆಡ್ಲರ್‌ಗಳು ಡ್ರಗ್ಸ್ ಇರುವ ಕೋರಿಯರ್ ತೆಗೆದುಕೊಂಡು ಹೋಗುತ್ತಿದ್ದಾರೆ. ಇನ್ನೂ ಕೆಲ ಕಡೆಗಳಲ್ಲಿ ಅಲ್ಲಿನ ಸಿಬ್ಬಂದಿಗಳೇ ಈ ದಂಧೆಯಲ್ಲಿ ಭಾಗಿಯಾಗಿದ್ದು, ತಲುಪಿಸಬೇಕಾದ ಕಡೆಗೆ ತಲುಪಿಸುತ್ತಿದ್ದಾರೆ. ಸದ್ಯ ಇನ್ನೂ ತನಿಖೆ ಮುಂದುವರೆದಿದ್ದು, ಇನ್ನೂ ಯಾವೆಲ್ಲಾ ರೀತಿಯ ಪೆಡ್ಲಿಂಗ್ ನಡೆಯುತ್ತಿದೆ ಎಂಬುದು ತನಿಖೆ ನಂತರವೇ ಗೊತ್ತಾಗಬೇಕಿದೆ. ಇದನ್ನೂ ಓದಿ: ಬಳ್ಳಾರಿ ಬಳಿಕ ಬೆಳಗಾವಿಯಲ್ಲೂ ಬಾಣಂತಿಯರು, ಶಿಶುಗಳ ಸಾವು!

  • ನ್ಯೂ ಇಯರ್ ಮುಗಿಸಿ ವಾಪಸ್ಸಾಗ್ತಿದ್ದಾಗ KSRTC ಬಸ್‌ಗೆ ಕಾರು ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

    ನ್ಯೂ ಇಯರ್ ಮುಗಿಸಿ ವಾಪಸ್ಸಾಗ್ತಿದ್ದಾಗ KSRTC ಬಸ್‌ಗೆ ಕಾರು ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

    ಕಾರವಾರ: ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಕಾರೊಂದು (Car) ಕೆಎಸ್‌ಆರ್‌ಟಿಸಿ (KSRTC Bus) ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ ತಾಲೂಕಿನ ಬಾಳೆಗುಳಿ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ಮೃತಪಟ್ಟವರು ತಮಿಳುನಾಡು (Tamil Nadu) ಮೂಲದವರು. ಅರುಣ್ ಪಾಂಡ್ಯನ್, ನಿಫುಲ್, ಮಹ್ಮದ್ ಬಿಲ್ಲಾಲ್, ಶ್ರೇಕರನ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: KSRTC ಎಲೆಕ್ಟ್ರಿಕ್‌ ಬಸ್‌ ಸೇವೆಗೆ ಚಾಲನೆ – ಒಂದು ಬಾರಿ ಚಾರ್ಜ್‌ ಮಾಡಿದ್ರೆ 300 ಕಿ.ಮೀ ಸಂಚಾರ

    ಹೊಸ ವರ್ಷಾಚರಣೆ (New Year) ಮುಗಿಸಿ ಗೋವಾದಿಂದ (Goa) ಕಾರಿನಲ್ಲಿ ಐವರು ವಾಪಸ್ಸಾಗುತ್ತಿದ್ದರು. ಅತಿ ವೇಗವಾಗಿ ಚಾಲನೆ ಮಾಡಿದ್ದರಿಂದ ಕಾರು ನಿಯಂತ್ರಣ ಕಳೆದುಕೊಂಡಿದೆ. ಈ ವೇಳೆ ತದಡಿಯಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಸ್‌ಗೆ ಗುಡ್ಡಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

    ಘಟನೆ ಸಂಬಂಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬೈಕ್‌ಟ್ಯಾಂಕ್ ಮೇಲೆ ಕುಳಿತು ಪ್ರಿಯಕರನೊಂದಿಗೆ ರೊಮ್ಯಾನ್ಸ್ – ಪೊಲೀಸರು ಕೊಟ್ರು ಶಾಕ್

    Live Tv
    [brid partner=56869869 player=32851 video=960834 autoplay=true]

  • ಬಂತು ನ್ಯೂ ಇಯರ್‌; ಈ ವರ್ಷ ಹ್ಯಾಪಿಯಾಗಿರಲು ಹೀಗೆ ಮಾಡಿ..

    ಬಂತು ನ್ಯೂ ಇಯರ್‌; ಈ ವರ್ಷ ಹ್ಯಾಪಿಯಾಗಿರಲು ಹೀಗೆ ಮಾಡಿ..

    ನ್ಯೂ ಇಯರ್‌ 2023ನ್ನು (New Year 2023) ಎಲ್ಲರೂ ಬಿಂದಾಸ್‌ ಆಗಿ ವೆಲ್‌ಕಮ್‌ ಮಾಡಿದ್ದಾರೆ. ಹೊಸ ಕನಸು, ಆಸೆ, ಗುರಿಗಳೊಂದಿಗೆ ಹೊಸ ವರ್ಷವನ್ನು ಸಂಭ್ರಮಿಸಿದ್ದಾರೆ. ಕುಟುಂಬದವರು, ಸ್ನೇಹಿತರೊಟ್ಟಿಗೆ ಪ್ರವಾಸ, ಮೋಜು-ಮಸ್ತಿ ಮಾಡುತ್ತಿದ್ದಾರೆ. ಇದು ನ್ಯೂ ಇಯರ್‌ ಆಚರಣೆಯ ಮೊದಲ ದಿನಕ್ಕಷ್ಟೇ ಸೀಮಿತವಾಗಿರುತ್ತೆ. ಮತ್ತೆ ಎಲ್ಲರೂ ಎಂದಿನಂತೆ ಕೆಲಸ ಕಾರ್ಯಗಳಲ್ಲಿ ತೊಡಗುತ್ತಾರೆ.

    ಹೊಸ ವರ್ಷ ಸಂಭ್ರಮ ಕೇವಲ ಒಂದು ದಿನಕ್ಕಷ್ಟೇ ಸೀಮಿತ ಆಗಬಾರದು. ಸಂಭ್ರಮ, ಖುಷಿ, ಆನಂದವನ್ನು ವರ್ಷಪೂರ್ತಿ ಇರುವಂತೆ ನೋಡಿಕೊಳ್ಳಬೇಕು. ಹ್ಯಾಪಿಯಾಗಿ ಈ ವರ್ಷವನ್ನು ಕಳೆಯಲು ನಿಮ್ಮ ಲೈಫ್‌ಸ್ಟೈಲ್‌ನಲ್ಲಿ ಒಂದಷ್ಟು ನಿಯಮಗಳನ್ನು ಅಳವಡಿಸಿಕೊಳ್ಳಿ. ನಾವು ಒಂದಷ್ಟು ಟಿಪ್ಸ್‌ ಕೊಡ್ತೀವಿ. ಪ್ರತಿದಿನ ಹೀಗೆ ಮಾಡಿ ಸದಾ ಹ್ಯಾಪಿಯಾಗಿ ಜೀವನ ನಡೆಸಿ. ಇದನ್ನೂ ಓದಿ: ಹಾಯ್‌ 2023.. ಹೊಸ ವರ್ಷ ನಿನಗೆ ಸುಸ್ವಾಗತ

    ನಿದ್ರೆ ಮತ್ತು ಏಳುವ ಸಮಯ ಸರಿ ಮಾಡ್ಕೊಳ್ಳಿ
    ಇಲ್ಲಿಯವರೆಗೆ ನೀವು ಸೋಂಬೇರಿಯಂತೆ ಯಾವಾಗಲೋ ಮಲಗುವುದು, ಎಷ್ಟೊತ್ತಿಗೋ ಏಳುವುದು ಮಾಡುತ್ತಿದ್ದರೆ ಇನ್ಮುಂದೆ ಅದನ್ನು ಸರಿಪಡಿಸಿಕೊಳ್ಳಿ. ಹೊಸ ವರ್ಷದಲ್ಲಿ ನಾನು ದಿನಚರಿಯನ್ನು ಸರಿಯಾಗಿ ಮ್ಯಾನೇಜ್‌ ಮಾಡ್ತೀನಿ ಅಂತಾ ಸಂಕಲ್ಪ ಮಾಡಿ. ಆದಷ್ಟು ಬೇಗ ಅಂದರೆ ನಿಗದಿತ ಸಮಯಕ್ಕೆ ಮಲಗಿ ಮತ್ತು ಬೆಳಗ್ಗೆ ಬೇಗನೆ ಏಳುವ ಪ್ರವೃತ್ತಿ ಬೆಳೆಸಿಕೊಳ್ಳಿ. ಇದು ಒಂದು ದಿನಕ್ಕಷ್ಟೇ ಸೀಮಿತ ಆಗಬಾರದು. ನಿತ್ಯ ಇದನ್ನು ಚಾಚೂ ತಪ್ಪದೇ ಪಾಲಿಸಬೇಕು.

    ಈ ದಿನ ಏನೇನು ಮಾಡ್ಬೇಕು ಅಂತಾ ಪ್ಲ್ಯಾನ್‌ ಮಾಡಿ
    ಈ ದಿನ ನಾನು ಇಂತಿಂಥ ಕೆಲಸ ಮಾಡಬೇಕು ಅಂತಾ ಪ್ಲ್ಯಾನ್‌ ಮಾಡಿಕೊಳ್ಳಿ. ಇದನ್ನು ಕನಿಷ್ಠ 2 ವಾರಗಳವರೆಗೆ ತಪ್ಪದೇ ಪಾಲಿಸಿ. ಆಗ ನೀವೇ ಎಲ್ಲದಕ್ಕೂ ಹೊಂದಿಕೊಳ್ಳುತ್ತೀರಾ. ಆಗ ಪ್ರತಿ ಕೆಲಸವೂ ನಿಮಗೆ ಇನ್ನಷ್ಟು ಸುಲಭ ಹಾಗೂ ಕಡಿಮೆ ಸಮಯದಲ್ಲಿ ಆಗುತ್ತೆ. ಇನ್ಮುಂದೆ ನೀವು ಯಾವುದೇ ಕೆಲಸ ಮಾಡ್ಬೇಕಾದ್ರೂ ಅದಕ್ಕೊಂದು ಯೋಜನೆ ರೂಪಿಸಿಕೊಳ್ಳಿ. ಅದು ನಿಮ್ಮ ಯಶಸ್ಸಿಗೆ ದಾರಿದೀಪವಾಗುತ್ತೆ.

    ಮನೆಯಲ್ಲೇ ಮಾಡಿದ ಆಹಾರ ಸೇವಿಸಿ
    ಹೊಸ ವರ್ಷ ಕೇವಲ ಸಂಭ್ರಮಕ್ಕಷ್ಟೇ ಅಲ್ಲ. ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವ ವರ್ಷ ಆಗಬೇಕು. ಈ ವರ್ಷ ನಾನು ಮನೆಯಲ್ಲೇ ಮಾಡಿದ ಆಹಾರ ಸೇವಿಸುತ್ತೇನೆ. ಸ್ಟ್ರೀಟ್‌ ಫುಡ್‌, ಜಂಕ್‌ ಫುಡ್‌ನ್ನು ಆದಷ್ಟು ಕಡಿಮೆ ಮಾಡುತ್ತೇನೆ ಎಂದು ಶಪಥ ಮಾಡಿ. ಆರೋಗ್ಯದ ಕಡೆಗೂ ಹೆಚ್ಚಿನ ಆದ್ಯತೆ ಕೊಡಿ. ಇದನ್ನೂ ಓದಿ: ಸದಾ ಹ್ಯಾಪಿಯಾಗಿರುವವರ ಸೀಕ್ರೆಟ್‌ ಗುಣಗಳೇನು ಗೊತ್ತಾ?

    ವ್ಯಾಯಾಮ, ಧ್ಯಾನ ಮಾಡಿ
    ವ್ಯಾಯಾಮ ಮಾಡಲು ಹಣ ಕೊಟ್ಟು ಜಿಮ್‌ ಕ್ಲಾಸ್‌ಗೆ ಹೋಗಬೇಕು ಅಂತೇನು ಇಲ್ಲ. ನಿಮ್ಮ ಮನೆಯಲ್ಲೇ ವ್ಯಾಯಾಮ ಮಾಡಿ. ವರ್ಕೌಟ್‌ಗೆ ಮನೆಯಲ್ಲೇ ಸೂಕ್ತ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಿ. ಕಿರಿಕಿರಿ ಎನಿಸದ, ಪ್ರಶಾಂತವಾದ ಜಾಗ ಅದಾಗಿರಬೇಕು. ದೇಹವನ್ನು ದಂಡಿಸಿದರೆ ಆರೋಗ್ಯ ಚೆನ್ನಾಗಿರುತ್ತೆ. ಹಾಗೆ ಮನಸ್ಸು ಉಲ್ಲಾಸಭರಿತವಾಗಿರುತ್ತೆ. ಧ್ಯಾನ ಮಾಡಿದರೆ ಮನಸ್ಸು ಸದೃಢವಾಗುತ್ತದೆ. ನೀವು ಮಾಡುವ ಕೆಲಸಗಳ ಕಡೆ ಆಸಕ್ತಿ, ಶ್ರದ್ಧೆ ಮೂಡುತ್ತದೆ.

    ಎನ್‌ಜಿಒ ಮೂಲಕ ಸಹಾಯ ಮಾಡಿ
    ಜೀವನದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಭಾವ ಪ್ರತಿಯೊಬ್ಬರಿಗೂ ಇರಬೇಕು. ಎನ್‌ಜಿಒ ಮೂಲಕ ಸ್ವಯಂಸೇವಕರಾಗಿ ಇತರರಿಗೆ ನೆರವಾಗಬೇಕು. ನಿಜಕ್ಕೂ ಅದು ನಮ್ಮ ಬದುಕಿನ ಸಾರ್ಥಕ ಕ್ಷಣವಾಗುತ್ತೆ.

    ಚೆನ್ನಾಗಿ ನೀರು ಕುಡಿಯಿರಿ
    ಈ ವರ್ಷ ನಿಮ್ಮ ದೇಹ ನಿರ್ಜಲೀಕರಣದಿಂದ ಅನಾರೋಗ್ಯ ಸಮಸ್ಯೆ ಎದುರಿಸಬಾರದು. ಇದರ ಬಗ್ಗೆಯೂ ನೀವು ಎಚ್ಚರ ವಹಿಸಬೇಕು. ಅದಕ್ಕಾಗಿ ನಿತ್ಯ ನಿಗದಿತ ಪ್ರಮಾಣದಲ್ಲಿ ನೀರನ್ನು ಸೇವಿಸಿ. ಸರಿಯಾಗಿ ನೀರನ್ನು ಸೇವಿಸದೇ ಆರೋಗ್ಯ ಹಾಳುಮಾಡಿಕೊಳ್ಳಬೇಡಿ.

    ಪುಸ್ತಕ ಓದಿ
    ಆಸಕ್ತಿ ಕ್ಷೇತ್ರದ ಬಗ್ಗೆ ಜ್ಞಾನ ಹೆಚ್ಚಿಸಿಕೊಳ್ಳಲು ಪುಸ್ತಕ ಓದುವುದು ಬಹಳ ಮುಖ್ಯ. ಎಷ್ಟೋ ಜನರಿಗೆ ಪುಸ್ತಕ ಓದಲು ಆಸಕ್ತಿಯೇ ಇರುವುದಿಲ್ಲ. ಅಂತಹವರು ನಿತ್ಯ ಒಂದು ಪುಟವನ್ನಷ್ಟೇ ಓದಿ. ಹಾಗೆಯೇ ನಿಧಾನವಾಗಿ ಪುಸ್ತಕ ಓದಿನ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಿ. ಇದನ್ನೂ ಓದಿ: ಮಕ್ಕಳೊಂದಿಗೆ ಜಗಳವಾಡುವ ಮುನ್ನ ಪೋಷಕರು ಈ ಅಂಶಗಳನ್ನು ನೆನಪಿಡಿ..

    ಮನೆ, ನಿಮ್ಮ ಕೊಠಡಿಯನ್ನು ಶುಚಿಯಾಗಿಡಿ
    ಮನೆ ಯಾವಾಗಲು ಶುಚಿಯಾಗಿರಬೇಕು. ಆಗ ಮನಸ್ಸು ಪ್ರಫುಲ್ಲವಾಗಿರುತ್ತೆ. ಸಂಸಾರಿಗಳ ಮನೆ ಯಾವಾಗಲೂ ಅಚ್ಚುಕಟ್ಟಾಗಿರುತ್ತೆ. ಆದರೆ ಬ್ಯಾಚುಲರ್‌ಗಳ ಮನೆಯ ವಸ್ತುಗಳು ಎಲ್ಲೆಂದರಲ್ಲಿ ಬಿದ್ದಿರುತ್ತವೆ. ಅವುಗಳನ್ನು ನಿಗದಿತ ಸ್ಥಳಗಳಲ್ಲಿ ಇಡಿ. ಕೊಠಡಿಗಳನ್ನು ಶುಚಿಯಾಗಿಟ್ಟುಕೊಳ್ಳಿ.

    ಕುಟುಂಬ ಸದಸ್ಯರು, ಸ್ನೇಹಿತರನ್ನು ಭೇಟಿಯಾಗಿ
    ಕುಟುಂಬದ ಸದಸ್ಯರು, ಸ್ನೇಹಿತರನ್ನು ಭೇಟಿಯಾಗಿ ಅವರೊಟ್ಟಿಗೆ ಹೊಸ ವರ್ಷದ ಸಂಭ್ರಮ ಆಚರಿಸಿ. ಎಷ್ಟೋ ಮಂದಿ ಕೆಲಸದ ನಿಮಿತ್ತ ದೂರದ ಊರುಗಳಿಗೆ ಕೆಲಸಕ್ಕೆ ಹೋಗಿರುತ್ತಾರೆ. ಕುಟುಂಬದವರನ್ನು ಮಿಸ್‌ ಮಾಡಿಕೊಂಡಿರುವವರು ತಿಂಗಳಿಗೆ ಒಮ್ಮೆಯಾದರೂ ಭೇಟಿಯಾಗಿ. ಸ್ನೇಹಿತರೊಟ್ಟಿಗೆ ಕಾಲ ಕಳೆಯಿರಿ. ಈ ವರ್ಷವನ್ನು ಎಂಜಾಯ್‌ ಮಾಡಿ.

    ಹೊರಗಡೆ ಸುತ್ತಾಡಿ
    ನಿಮ್ಮ ದಿನಚರಿ ಮನೆಗಷ್ಟೇ ಸೀಮಿತ ಆಗಬಾರದು. ಹೊರಗಡೆ ಸುತ್ತಾಡಿ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ. ಬುಕ್‌ಸ್ಟಾಲ್‌ಗಳು ಭೇಟಿ ನೀಡಿ. ಥಿಯೇಟರ್‌ಗೆ ಹೋಗಿ ಒಳ್ಳೆಯ ಸಿನಿಮಾ ವೀಕ್ಷಿಸಿ. ಮ್ಯೂಸಿಯಂಗಳಿಗೆ ಹೋಗಿ. ಆ ದಿನವನ್ನು ಎಂಜಾಯ್‌ ಮಾಡಿ. ಇದನ್ನೂ ಓದಿ: ಪ್ರೀತಿ ಪ್ರಬುದ್ಧವಾಗಿರಬೇಕು.. ಅಪ್ರಬುದ್ಧರ ಪ್ರೀತಿ ಹೇಗಿರುತ್ತೆ ಗೊತ್ತಾ?

    ನಿಮ್ಮನ್ನು ನೀವು ಪ್ರೀತಿ
    ಯಾರು ತನ್ನನ್ನು ತಾನು ಹೆಚ್ಚು ಪ್ರೀತಿಸುತ್ತಾರೋ ಅವರು ಇತರರ ಬಗ್ಗೆಯೂ ಪ್ರೀತಿ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯ. ಮೊದಲು ನಿಮ್ಮನ್ನು ನೀವು ಪ್ರೀತಿಸಿ. ನಿಮ್ಮ ಬಗ್ಗೆಯೇ ಕೇರ್‌ ಮಾಡಿ. ನಿಮ್ಮ ಬಗ್ಗೆ ನಿಮಗೆ ಪ್ರೀತಿ, ಕಾಳಜಿ ಇಲ್ಲ ಅನ್ನೋದಾದ್ರೆ ಬೇರೆಯವರ ಬಗ್ಗೆಯೂ ಅದೇ ಭಾವನೆ ಇರುತ್ತೆ.

    Live Tv
    [brid partner=56869869 player=32851 video=960834 autoplay=true]

  • ನ್ಯೂ ಇಯರ್ ಪಾರ್ಟಿ ವೇಳೆ ಕಿರಿಕ್ – ಸ್ನೇಹಿತರಿಂದಲೇ ಯುವಕನ ಕೊಲೆ

    ನ್ಯೂ ಇಯರ್ ಪಾರ್ಟಿ ವೇಳೆ ಕಿರಿಕ್ – ಸ್ನೇಹಿತರಿಂದಲೇ ಯುವಕನ ಕೊಲೆ

    ಚಿಕ್ಕಬಳ್ಳಾಪುರ:  ನ್ಯೂ ಇಯರ್ ಸೆಲೆಬ್ರೇಷನ್ (New Year) ಪಾರ್ಟಿ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿ ತಾಲೂಕು ಐಮರೆಡ್ಡಿಹಳ್ಳಿ ಬಳಿ ನಡೆದಿದೆ.

    ದೊಡ್ಡ ಗಂಜೂರು ಗ್ರಾಮದ ನವೀನ್ (30) ಕೊಲೆಯಾದ ಯುವಕ. ಸ್ನೇಹಿತರೆಲ್ಲಾ ಸೇರಿ ಕಳೆದ ರಾತ್ರಿ ದೊಡ್ಡ ಗಂಜೂರು ಗ್ರಾಮದ ಬಳಿ ನ್ಯೂ ಇಯರ್ ಸೆಲೆಬ್ರೇಷನ್ ಸಂಬಂಧ ಕೇಕ್ ಕಟ್ ಮಾಡಿ ಕಂಠಪೂರ್ತಿ ಕುಡಿದು ಮೋಜಿ ಮಸ್ತಿ ಮಾಡಿದ್ದಾರೆ. ಕೇಕ್ ಕಟ್ ಮಾಡಿದ ನಂತರ ಐಮರೆಡ್ಡಿಹಳ್ಳಿ ಗ್ರಾಮದ ಬಳಿ ಇರುವ ಡಾಬಾ ಒಂದರಲ್ಲಿ ಮತ್ತೆ ಮದ್ಯಪಾನ ಮಾಡಿ ಪಾರ್ಟಿ (Party) ಮಾಡಿಕೊಂಡಿದ್ದಾರೆ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದ್ದು ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪುನೀತ್ ಬಿಯರ್ ಬಾಟಲಿಯಿಂದ ನವೀನ್ ತಲೆಗೆ ಹಲ್ಲೆ ಮಾಡಿದ್ದು ತೀವ್ರ ರಕ್ತಸ್ರಾವವಾಗಿ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಹೊಸ ವರ್ಷ ಪಾರ್ಟಿ – ಕಟ್ಟಡದಿಂದ ಬಿದ್ದು ಯುವಕ ಸಾವು

    ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಮೂವರು ಆರೋಪಿಗಳಾದ ದೊಡ್ಡ ಗಂಜೂರು ಗ್ರಾಮದ ಅರ್ಜುನ್, ಚೇತನ್, ಹಾಗೂ ಪುನೀತ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಹೊಸ ವರ್ಷಾಚರಣೆ ನಡುವೆ ಮೈಮರೆತ ಪ್ರೇಮಿಗಳು – ರಸ್ತೆ ಬ್ಲಾಕ್‍ಮಾಡಿ ನೋಡ್ಕೊಂಡು ನಿಂತಿದ್ದವರ ಮೇಲೆ ಲಾಠಿಚಾರ್ಜ್

    Live Tv
    [brid partner=56869869 player=32851 video=960834 autoplay=true]

  • ಹಾಯ್‌ 2023.. ಹೊಸ ವರ್ಷ ನಿನಗೆ ಸುಸ್ವಾಗತ

    ಹಾಯ್‌ 2023.. ಹೊಸ ವರ್ಷ ನಿನಗೆ ಸುಸ್ವಾಗತ

    ಹೋಯ್ತು ಹಳೆ ವರ್ಷ.. ಬಂತು ಹೊಸ ವರ್ಷ.. ಬನ್ನಿ ಎಂಜಾಯ್‌ ಮಾಡೋಣ. ʼನಿನ್ನೆ ನಿನ್ನೆಗೆ.. ನಾಳೆ ನಾಳೆಗೆ.. ಇಂದು ನಮ್ಮದೇ, ಚಿಂತೆ ಏತಕೆ..ʼ ಎಂಬ ಹಾಡು ಎಷ್ಟು ಸೊಗಸಾಗಿದೆ ಅಲ್ವಾ. ಸವಿನೆನಪುಗಳು ಮನದ ಚಿತ್ರಪಟ ಸೇರಲಿ. ಕಹಿ ನೆನಪುಗಳು ಹಳೆ ಕ್ಯಾಲೆಂಡರ್‌ನಂತೆ ಕಸದ ಬುಟ್ಟಿಗೆ ಹೋಗಲಿ. ಹೊಸ ಹುರುಪು, ಭರವಸೆ, ಆಸೆ, ಗುರಿಗಳೊಂದಿಗೆ ಹೆಜ್ಜೆ ಇಡೋಣ ಅಂತಾ ಸಂಕಲ್ಪ ಮಾಡುವ ಸಮಯವಿದು.

    ಹೊಸ ವರ್ಷವನ್ನು (New Year 2023) ಖುಷಿ, ಸಂಭ್ರಮಾಚರಣೆ ಮೂಲಕ ಸ್ವಾಗತಿಸುವುದು ಸಾಮಾನ್ಯ. 2022ಕ್ಕೆ ಗುಡ್‌ಬೈ.. 2023 ಹಾಯ್‌ ಹಾಯ್‌ ಹೇಳೋದಕ್ಕೊಂದು ಜೋಶ್‌ ಅಂತು ಇದ್ದೇ ಇರುತ್ತೆ. ನ್ಯೂ ಇಯರ್‌ ಅನ್ನು ಆರಂಭದ ದಿನ ಎಲ್ಲರೂ ಖುಷಿಯಿಂದ ಬರಮಾಡಿಕೊಳ್ಳುತ್ತಾರೆ. ಮನೆ ಹಾಗೂ ಸುತ್ತಮುತ್ತಲ ವಾತಾವರಣ ಕಲರ್‌ಫುಲ್‌ ಆಗಿರುತ್ತೆ. ಕುಟುಂಬದವರು, ನೆರೆಹೊರೆಯವರಿಗೆ ಸಿಹಿ ಹಂಚಿ ಸಂಭ್ರಮಿಸುವುದು, ಪ್ರೀತಿ ಪಾತ್ರರಿಗೆ ಶುಭ ಸಂದೇಶ ಕಳುಹಿಸುವುದು, ಕ್ಲಬ್‌-ಪಬ್‌ನಲ್ಲಿ ಕುಣಿದು ಕುಪ್ಪಳಿಸುವುದು, ಬಿಯರ್‌ ಚಿಯರ್ಸ್‌ ಹೇಳುವುದು, ಇಷ್ಟದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು.. ಎಲ್ಲ ಕೂಡ ಪ್ರತಿ ವರ್ಷದಂತೆಯೇ. ಆದರೆ ವರ್ಷ ವರ್ಷ ಅದಕ್ಕೊಂದು ಹೊಸ ರೂಪ ಇರುತ್ತೆ. ಪ್ರವಾಸಿ ತಾಣಗಳು ಬದಲಾಗಿರುತ್ತವೆ, ಕೆಲವರಿಗೆ ಸ್ನೇಹಿತರು ಹಾಗೂ ಸಂಭ್ರಮದ ತಾಣಗಳಲ್ಲಿ ಚೇಂಜ್‌ ಆಗಿರುತ್ತೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಬಿಂದಾಸ್‌ ವೆಲ್‌ಕಮ್‌ – ಎಲ್ಲೆಲ್ಲೂ ಸಂಭ್ರಮ, ಸಡಗರ

    ಒಂದೆಡೆ ನಮ್ಮಲ್ಲೇ ಚಿಂತನ-ಮಂಥನ ಕೂಡ ನಡೆಯುತ್ತೆ. ಹೊಸ ವರ್ಷದ ಹೊಸ್ತಿಲಲ್ಲಿ ಕುಳಿತು ನಾವು ಗಂಭೀರವಾಗಿ ಯೋಚಿಸುತ್ತೇವೆ. ವರ್ಷಗಳು ಎಷ್ಟು ಬೇಗ ಉರುಳುತ್ತಿವೆ? ಹೊಸ ವರ್ಷವನ್ನಂತು ಸಂಭ್ರಮದಿಂದಲೇ ಸ್ವಾಗತಿಸುತ್ತೇವೆ. ಆದರೆ ವರ್ಷಗಳು ಬದಲಾದಂತೆ ನಾವು ಕೂಡ ಬದಲಾಗಿದ್ದೀವಾ? ಹಿಂದೆ ಅಂದುಕೊಂಡಿದ್ದನ್ನು ಸಾಧಿಸಿದ್ದೀವಾ? ಇಟ್ಟಿದ್ದ ಗುರಿ ಮುಟ್ಟಿದ್ದೀವಾ ಎಂಬ ಪ್ರಶ್ನೆಗಳು ಎದುರಾಗುತ್ತವೆ. ಅದಕ್ಕೆ ಉತ್ತರವೂ ಸಿಕ್ಕಿರುತ್ತದೆ. ಒಂದು ವೇಳೆ ನಾವು ಅಂದುಕೊಂಡಿದ್ದು, ಇಟ್ಟಿದ್ದ ಗುರಿಯನ್ನು ಸಾಧಿಸಿಲ್ಲ ಎಂದಾದರೆ ಈ ಬಾರಿ ಅದು ಸಾಧ್ಯವಾಗಬೇಕು ಎಂಬ ಸಂಕಲ್ಪ ತೊಡಬೇಕು.

    ಸಮುದ್ರದ ಅಲೆಯಂತೆ ಮನುಷ್ಯನ ಬದುಕಿನಲ್ಲೂ ಏರಿಳಿತ ಇರುತ್ತದೆ. ರುಚಿಯಂತೆ ಸಿಹಿ-ಕಹಿಯೂ ಇರುತ್ತದೆ. ಆದರೆ ಕಠಿಣ ಪರಿಶ್ರಮ, ಇಚ್ಛಾಶಕ್ತಿ ಮಾತ್ರ ನಾವು ಸಾಧನೆ ಶಿಖರವೇರಲು ಸಾಧ್ಯ ಎಂಬ ಭಾವನೆ ಬರಬೇಕು. ಆ ಸಂಕಲ್ಪದೊಂದಿಗೆ ಹೊಸ ವರ್ಷವನ್ನು ಎಲ್ಲರೂ ಸ್ವಾಗತಿಸಿದರೆ ಅದಕ್ಕೊಂದು ಅರ್ಥ, ಸಾರ್ಥಕತೆ ಇರುತ್ತೆ. ಹಿಂದಿನ ನನ್ನ ಸೋಲಿಗೆ ಕಾರಣವೇನು? ಯಶಸ್ಸಿಗೆ ಇನ್ನೆಷ್ಟು ಪರಿಶ್ರಮ ಹಾಕಬೇಕು ಅಂತಾ ನಮ್ಮನ್ನು ನಾವೇ ವಿಮರ್ಶೆಗೆ ಒಡ್ಡಿಕೊಳ್ಳುತ್ತಾ ಮುಂದೆ ಸಾಗುವುದು ಬುದ್ಧಿವಂತರ ಲಕ್ಷಣ. ಇದನ್ನೂ ಓದಿ: ಹೊಸ ವರ್ಷವನ್ನು ಯಾವ ದೇಶ ಮೊದಲು ಆಚರಿಸುತ್ತೆ ಗೊತ್ತಾ?

    ಒಂದು ವರ್ಷದಲ್ಲಿ ಏನೆಲ್ಲಾ ಘಟಿಸಿ ಹೋಯಿತು? ಇಷ್ಟದವರನ್ನು ಕಳೆದುಕೊಂಡೆವು, ಅಂದುಕೊಂಡಿದ್ದು ಆಗಲಿಲ್ಲ ಎಂಬ ಚಿಂತೆ ಕೆಲವರಲ್ಲಿ ಬರಬಹುದು. ಅಬ್ಬಾ.. ಈ ವರ್ಷವನ್ನು ನಾನೆಂದೂ ಮರೆಯಲ್ಲ. ಗುರಿ ತಲುಪಿದೆ. ಇಷ್ಟಪಟ್ಟವರು ಸಿಕ್ಕರು. ಹೊಸ ವರ್ಷವೂ ಹೀಗೆ ಇರಲಿ ಅಂತಾ ಥ್ರಿಲ್‌ ಆಗುವವರೂ ಇರಬಹುದು. ಇಲ್ಲಿ ವ್ಯಕ್ತಿಗಳು, ಸನ್ನಿವೇಶಗಳು ಬೇರೆಯಾಗಿರಬಹುದು. ಆದರೆ ಈ ಎರಡೂ ಒಂದೇ ವರ್ಷ ಆಗಿದ್ದಲ್ಲವೇ. ಕಾಲಚಕ್ರ ಉರುತ್ತಿರುತ್ತದೆ. ಸೋತವರು ಮುಂದೆ ಗೆಲ್ಲಬಹುದು. ಗೆದ್ದವರು ಮತ್ತೆ ಸೋಲಬಹುದು. ಗೆದ್ದಾಗ ಹಿಗ್ಗದೇ, ಸೋತಾಗ ಕುಗ್ಗದೇ ಹೊಸತನಕ್ಕೆ ತುಡಿಯುವುದೇ ಜೀವನ ಅಲ್ಲವೇ?

    ಹೊಸ ವರ್ಷಕ್ಕೆ ಕ್ಯಾಲೆಂಡರ್‌ ಬದಲಾಯಿಸಿದ್ದು ಆಯ್ತು. ಈಗ ಸಂಭ್ರಮಿಸುವ, ಕುಣಿದು ಕುಪ್ಪಳಿಸುವ ಘಳಿಗೆ. ಎಲ್ಲರೂ ಸಂಭ್ರಮಿಸೋಣ. ಆದರೆ ಮಾರಕ ಕೊರೊನಾ ವೈರಸ್‌ ಬಗ್ಗೆ ಜಾಗೃತರಾಗಿರೋಣ. ಮನುಕುಲವನ್ನು 2 ವರ್ಷ ಕೋವಿಡ್‌ ಕಾಡಿದ್ದು ಹೇಗೆ ಎಂಬುದು ಎಲ್ಲರಿಗೂ ಗೊತ್ತು. ವೈರಸ್‌ ಬಗ್ಗೆ ಎಚ್ಚರಿಕೆಯಿಂದಿದ್ದು, ಸಂಭ್ರಮಾಚರಣೆ ಮಾಡುವುದು ಒಳಿತು. ಹೊಸ ವರ್ಷದಲ್ಲಿ ಹೊಸ ತುಡಿತವಿರಲಿ. ಪಾಸಿಟಿವ್‌ ಆಲೋಚನೆಗಳಿರಲಿ. ಯಶಸ್ಸು ಕಡೆಗೆ ದಿಟ್ಟ ನಿಲುವಿರಲಿ. ಎಲ್ಲರೊಟ್ಟಿಗೆ ಪ್ರೀತಿ-ವಿಶ್ವಾಸದಿಂದ ಸಾಗುವ ಭಾವನೆ ಇರಲಿ. ಧರ್ಮ, ಭಾಷೆ ಭೇದವನ್ನು ಮರೆತು ಎಲ್ಲರೂ ಒಟ್ಟಾಗಿ ಹೊಸ ವರ್ಷವನ್ನು ಸ್ವಾಗತಿಸೋಣ. ಇದನ್ನೂ ಓದಿ: ಹೊಸವರ್ಷ ಸಂಭ್ರಮಾಚರಣೆಗೆ ರಂಗೇರಿದ ಬೆಂಗಳೂರು

    Live Tv
    [brid partner=56869869 player=32851 video=960834 autoplay=true]

  • ಹೊಸ ವರ್ಷಕ್ಕೆ ಬೆಂಗ್ಳೂರಲ್ಲಿ ಪೊಲೀಸ್ ರೂಲ್ಸ್ ಜಾರಿ- ಕಿರಿಕ್, ಕಿತಾಪತಿ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ

    ಹೊಸ ವರ್ಷಕ್ಕೆ ಬೆಂಗ್ಳೂರಲ್ಲಿ ಪೊಲೀಸ್ ರೂಲ್ಸ್ ಜಾರಿ- ಕಿರಿಕ್, ಕಿತಾಪತಿ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ

    ಬೆಂಗಳೂರು: ಇನ್ನೇನು ಎರಡು ದಿನದಲ್ಲಿ ನಾವು ಮತ್ತೆ ಹೊಸ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಈ ಬಾರಿಯ ನ್ಯೂ ಇಯರ್ (New Year Celebration) ಆಚರಣೆಗೆ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲವೊಂದು ಪೊಲೀಸ್ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಈ ರೂಲ್ಸ್ ಗಳನ್ನು ಅನುಸರಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

    ಹೊಸ ವರ್ಷ ಆಚರಣೆ ಹಿನ್ನೆಲೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿರುವ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (Pratap Reddy), ಈಗ ವೀಡಿಯೋ ಕಾನ್ಫರೆನ್ಸ್ ಮೂಲಕ ಬಂದೋಬಸ್ತ್ ಗೆ ಸೂಚನೆ ನೀಡಲಾಗಿದೆ. 8 ಸಾವಿರದ 500 ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಟ್ರಾಫಿಕ್ ನ ಎಲ್ಲಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಹಿಳೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ಕ್ರಮಕೈಗೊಳ್ಳಲಾಗಿದೆ ಎಂದರು.

     

     

    ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಮಧ್ಯರಾತ್ರಿ 1 ಗಂಟೆಯ ತನಕ ಮಾತ್ರ ಅವಕಾಶ ನೀಡಲಾಗುತ್ತಿದೆ. ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ. ಜನಸಂದಣಿಯ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. 4,000 ಕ್ಯಾಮರಾ ಸಿಸಿ ಟಿವಿ ಕ್ಯಾಮೆರಾ (CCTV Camera) ಗಳನ್ನು ಹಾಕಲಾಗುತ್ತೆ. ಬೆಂಗಳೂರು ಎಲ್ಲಾ ಕಡೆಯೂ ಹೈಕ್ವಾಲಿಟಿ ಕ್ಯಾಮೆರಾಗಳು ಇವೆ. ಮಹಿಳೆಯರಿಗೆ ಐ ಲ್ಯಾಂಡ್ಸ್ ಗಳು ಇರುತ್ತೆ, ಟವರ್ ವಾಚ್ ಗಳು ಇರುತ್ತೆ ಎಂದು ವಿವರಿಸಿದರು.

    ವೈದ್ಯ ಇಲಾಖೆಯ ಜೊತೆ ಮಾತನಾಡಲಾಗಿದೆ. ಕೆಲವೊಂದು ಬೆಡ್ ಗಳನ್ನು ಮೀಸಲು ಮಾಡಲಾಗಿದೆ. ಅಂಬುಲೆನ್ಸ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಡ್ರಗ್ಸ್ ಬಗ್ಗೆಯೂ ಎಚ್ಚರಿಕೆಯನ್ನು ವಹಿಸಲಾಗಿದೆ. ಪರವಾನಿಗೆ ಇರುವ ಪಿಸ್ತೂಲ್, ರಿವಾಲ್ವರ್ ಗಳನ್ನು ಸಂಭ್ರಮಾಚರಣೆ ಸ್ಥಳಕ್ಕೆ ತರುವಂತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ನಾಳೆ ಮಂಡ್ಯಗೆ ಅಮಿತ್ ಶಾ- ಹಳೆ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು

    ಜನರಲ್ಲಿ ನಮ್ಮದೊಂದು ಮನವಿ ಮಾಡುತ್ತೇವೆ. ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗುತ್ತಾರೆ. ಅನುಮಾನಸ್ಪದ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಇದೇ ವೇಳೆ ಅವರು ವಿನಂತಿಸಿಕೊಂಡರು.

    ಸಾರ್ವಜನಿಕರು ಹೆಚ್ಚಾಗಿ ಪಬ್ಲಿಕ್ ವೆಹಿಕಲ್ ಬಳಸಿ. ಬಿಎಂಟಿಸಿ, ಮೆಟ್ರೋ ಎರಡು ಕೂಡ ಕಾರ್ಯ ನಿರ್ವಹಿಸುತ್ತವೆ. ರಾತ್ರಿ 9 ಗಂಟೆಯ ಬಳಿಕ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಪ್ಲೈಓವರ್ ಹೊರತು ಪಡಿಸಿ ಎಲ್ಲಾ ಪ್ಲೈ ಓವರ್ ಬಂದ್ ಮಾಡಲಾಗುವುದು. ಎಲಿವೇಟೆಡ್ ರಸ್ತೆಯಲ್ಲಿ 9 ಗಂಟೆಯ ನಂತರ ಸಂಚಾರಕ್ಕೆ ಅವಕಾಶ ಇಲ್ಲ. ರಾತ್ರಿ 9 ಗಂಟೆಯ ನಂತರ ನೈಸ್ ರೋಡ್ ದ್ವಿಚಕ್ರ ವಾಹನ ಇಲ್ಲ. ಡ್ರ್ಯಾಗ್ ರೈಸಿಂಗ್ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಲಾಗುತ್ತೆ ಎಂದು ತಿಳಿಸಿದರು.

    ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಂದೀಪ್ ಪಾಟೀಲ್, ಸಂಚಾರಿ ಮುಖ್ಯಸ್ಥ ಸಲೀಂ, ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ನ್ಯೂ ಇಯರ್ ಪಾರ್ಟಿಗೆ ಹೋಗಲು ಅಪ್ರಾಪ್ತರಿಂದ ನಕಲಿ ಆಧಾರ್ ಕಾರ್ಡ್

    ನ್ಯೂ ಇಯರ್ ಪಾರ್ಟಿಗೆ ಹೋಗಲು ಅಪ್ರಾಪ್ತರಿಂದ ನಕಲಿ ಆಧಾರ್ ಕಾರ್ಡ್

    ಬೆಂಗಳೂರು: ನ್ಯೂ ಇಯರ್ (New Year) ಸೆಲೆಬ್ರೇಶನ್‍ಗೆ ಈಗಾಗಲೇ ತಯಾರಿ ಶುರುವಾಗಿದ್ದು, ಪಬ್‍ಗಳು ಸಹ ತಯಾರಿ ನಡೆಸಿದೆ. ಈ ಮಧ್ಯೆ 18 ವರ್ಷ ತುಂಬದ ಅಪ್ರಾಪ್ತರು ಪಾರ್ಟಿ ಎಂಜಾಯ್ ಮಾಡಲು ಕಳ್ಳದಾರಿ ಹಿಡಿದಿದ್ದು, ಕಲರ್ ಝೆರಾಕ್ಸ್‌ನ ಫೇಕ್ ಆಧಾರ್ ಕಾರ್ಡ್‍ಗಳನ್ನು (Aadhar Card) ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

    ಬೆಂಗಳೂರಿನಲ್ಲಿ (Bengaluru) ನ್ಯೂ ಇಯರ್ ಸೆಲೆಬ್ರೇಶನ್ ಎಂದ್ರೆ ಎಣ್ಣೆ, ಎಣ್ಣೆ ಜೊತೆಗೆ ಡಿಜೆ ಬೇಕೇ ಬೇಕು. ಇದಕ್ಕಂತಲೇ ಸಿಲಿಕಾನ್ ಸಿಟಿಯ ಪಬ್‍ಗಳು ಈ ವರ್ಷ ಹೊಸ ಹೊಸ ಡಿಜೆ ಪಾರ್ಟಿಗಳನ್ನು ಆಯೋಜನೆ ಮಾಡಿದೆ. ಆದರೆ ಕಳೆದೆರಡು ವರ್ಷದಿಂದ ನ್ಯೂ ಇಯರ್ ಸೆಲೆಬ್ರೇಶನ್ ಮಾಡದ ಕಾರಣ ಈ ವರ್ಷ ನ್ಯೂ ಇಯರ್‌ಗೆ ಯಾವುದೇ ಅಡೆ ತಡೆಗಳು ಇಲ್ಲ. ಹೀಗಾಗಿ ಎಲ್ಲರೂ ಪಾರ್ಟಿ ಮೂಡ್‍ನಲ್ಲಿದ್ದಾರೆ. ಹೀಗೆ ಪಾರ್ಟಿ ಮೂಡ್‍ನಲ್ಲಿ ಇರೋರ ಪೈಕಿ 20 ವರ್ಷದೊಳಗಿನವರು ಕೂಡಾ ಇದ್ದಾರೆ. ಸರ್ಕಾರದ ರೂಲ್ಸ್ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ಪಬ್ ಹಾಗೂ ಬಾರ್‌ನೊಳಗೆ ಪ್ರವೇಶ ಇಲ್ಲ. ಒಂದೊಮ್ಮೆ ಪ್ರವೇಶ ನೀಡಿದರೆ ಪಬ್ ಮಾಲೀಕರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ.

    20 ವರ್ಷದ ಮೇಲ್ಪಟ್ಟವರು ಅಂತಾ ಖಾತರಿ ಪಡಿಸಿಕೊಳ್ಳಲು ಪಬ್ ಮಾಲೀಕರು ಆಧಾರ್ ಕಾರ್ಡ್ ಪರಿಶೀಲನೆ ಮಾಡಬೇಕು. ಇದೇ ಕಾರಣಕ್ಕೆ ಈ ಬಾರಿ ನ್ಯೂ ಇಯರ್ ಸೆಲೆಬ್ರೆಶನ್ ಮಾಡಲು ಪಬ್‍ನೊಳಗೆ ಎಂಟ್ರಿ ನೀಡಲು ಬೆಂಗಳೂರಿನ ಮಕ್ಕಳು ಫೇಕ್ ಆಧಾರ್ ಕಾರ್ಡ್‍ಗಳನ್ನು ಮಾಡಿಕೊಂಡಿದ್ದಾರೆ. ಅದನ್ನೇ ಕಲರ್ ಝೆರಾಕ್ಸ್ ಮಾಡಿಸಿಕೊಂಡು ಪಬ್‍ನೊಳಗೆ ಎಂಟ್ರಿ ನೀಡುತ್ತಿದ್ದಾರಂತೆ. ಇದಕ್ಕೆ ಸಂಬಂಧಿಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ಬಂದಿದ್ದು, ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆಗೆ ಎಚ್ಚರ ವಹಿಸಲು ಸೂಚನೆ ನೀಡಿದೆ.

    ಚರ್ಚ್ ಸ್ಟ್ರೀಟ್ ಹಾಗೂ ಕೋರಮಂಗಲ, ಇಂದಿರಾ ನಗರ ಸೇರಿದಂತೆ ಹಲವೆಡೆ ಸ್ಕೂಲ್ ಹಾಗೂ ಕಾಲೇಜು ಮಕ್ಕಳು ಸ್ಕೂಲ್ ಮುಗಿಸಿಕೊಂಡು ಪಬ್‍ಗಳತ್ತ ಮುಖ ಮಾಡುತ್ತಿದ್ದಾರೆ. ಪಬ್‍ನೊಳಗೆ ಎಂಟ್ರಿ ಕೊಡಲು ಆಧಾರ್ ಕಾರ್ಡ್ ಫೇಕ್ ಮಾಡಿಕೊಂಡು 22-23 ವಯಸ್ಸಿನವರು ಎಂದು ಹೇಳಿಕೊಂಡು ಎಂಟ್ರಿ ಕೊಡುತ್ತಿದ್ದಾರೆ. ಅದರಲ್ಲೂ ನ್ಯೂ ಇಯರ್ ಪಾರ್ಟಿಯೊಳಗೆ ಎಂಟ್ರಿ ಕೊಡುವುದಕ್ಕೆ ಹೆಚ್ಚು ಮಕ್ಕಳು ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ ಹಲವು ಪಬ್‍ಗಳ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಇತ್ತ ಅಬಕಾರಿ ಇಲಾಖೆಯ ಅಧಿಕಾರಿಗಳು ಕೂಡಾ 18 ವರ್ಷದೊಳಗಿನ ಮಕ್ಕಳಿಗೆ ಪಬ್‍ನೊಳಗೆ ಎಂಟ್ರಿ ಕೊಟ್ಟರೇ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಹೆಚ್ಚಾಗ್ತಿದೆ ನಕಲಿ ವೈದ್ಯರ ಹಾವಳಿ – ಸಾವಿರಕ್ಕೂ ಹೆಚ್ಚು ಡೂಪ್ಲಿಕೇಟ್ ಡಾಕ್ಟರ್ಸ್!

    ಸ್ಕೂಲ್‍ಗೆ ಹೋಗಿ ಮನೆಗೆ ಬರುವ ಮಕ್ಕಳು ಎಣ್ಣೆ ಹೊಡೆದುಕೊಂಡು ಬರುತ್ತಿರುವ ಬಗ್ಗೆ ಪೋಷಕರ ಗಮನಕ್ಕೆ ಬಂದಿದ್ದು, ಈ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ಕೂಡಾ ಬಂದಿದೆ. ಹೀಗಾಗಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆಗೆ ಪಬ್ ಹಾಗೂ ಬಾರ್‌ಗಳ ಮೇಲೆ ಹದ್ದಿನಕಣ್ಣಿಡಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬಸ್ ನಿಲ್ದಾಣದಲ್ಲಿ ಅಧಿಕಾರಿಗಳಿಗೆ ಮಚ್ಚು ತೋರಿಸಿದ ಪ್ರಕರಣ – ದಂಪತಿ ವಿರುದ್ಧ ರೌಡಿಶೀಟರ್ ಕೇಸ್ ಹಾಕಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಹೊಸ ವರ್ಷವನ್ನು ಅದ್ದೂರಿಯಾಗಿ ಆಚರಿಸಿದ ದಕ್ಷಿಣ ಭಾರತದ ಸಿನಿ ತಾರೆಯರು

    ಹೊಸ ವರ್ಷವನ್ನು ಅದ್ದೂರಿಯಾಗಿ ಆಚರಿಸಿದ ದಕ್ಷಿಣ ಭಾರತದ ಸಿನಿ ತಾರೆಯರು

    ಹೈದರಬಾದ್: ದಕ್ಷಿಣ ಭಾರತದ ಸಿನಿ ತಾರೆಯರು ಈ ಬಾರಿ ಹೊಸ ವರ್ಷವನ್ನು ತುಂಬು ಹೃದಯದಿಂದ ಬರಮಾಡಿಕೊಂಡಿದ್ದಾರೆ. ಕೆಲವು ಕಲಾವಿದರು ಭಾರತದಿಂದ ವಿದೇಶಕ್ಕೆ ತೆರಳಿ ಹೊಸ ವರ್ಷವನ್ನು ಆಚರಿಸಿದರೆ, ಮತ್ತೆ ಕೆಲವರು ಭಾರತದಲ್ಲಿಯೇ ಸೆಲೆಬ್ರೆಟ್ ಮಾಡಿದ್ದಾರೆ. ಜೊತೆಗೆ ನ್ಯೂ ಇಯರ್ ಸೆಲೆಬ್ರೇಶನ್ ವೀಡಿಯೋ ಹಾಗೂ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಬಾಯ್ ಫ್ರೆಂಡ್ ವಿಫ್ನೇಶ್ ಶಿವನ್ ಜೊತೆಗೆ ಈ ಬಾರಿ ದುಬೈನ ಬುರ್ಜ್‌ ಖಲೀಫಾದಲ್ಲಿ ಹೊಸವರ್ಷವನ್ನು ಆಚರಿಸಿದ್ದಾರೆ. ಇದರ ವೀಡಿಯೋವನ್ನು ವಿಘ್ನೇಶ್ ಶಿವನ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದು, ವೀಡಿಯೋದಲ್ಲಿ 2022 ಅಂತ ಬುರ್ಜ್‌ ಖಲೀಫಾದಲ್ಲಿ ಬರುತ್ತಿದ್ದಂತೆಯೇ ಇಬ್ಬರು ಒಬ್ಬರನ್ನೊಬ್ಬರು ತಬ್ಬಿಕೊಂಡು 2022ಕ್ಕೆ ವೆಲ್‍ಕಮ್ ಮಾಡಿದ್ದಾರೆ. ಜೊತೆಗೆ ಕ್ಯಾಪ್ಷನ್‍ನಲ್ಲಿ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

     

    View this post on Instagram

     

    A post shared by Vignesh Shivan (@wikkiofficial)

    ಟಾಲಿವುಡ್ ಮಿಲ್ಕಿ ಬ್ಯೂಟಿ ನಟಿ ತಮನ್ನಾ ಬಾಟಿಯಾ ಕುಟುಂಬ ಸಮೇತ ಗೋವಾಗೆ ತೆರಳಿ ಗೋವಾದ ಕಡಲ ತೀರದಲ್ಲಿ ನ್ಯೂ ಇಯರ್ ಸೆಲೆಬ್ರೆಟ್ ಮಾಡಿದ್ದಾರೆ.  ಈ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿ ಅಭಿಮಾನಿಗಳಿಗೆ ವಿಶ್‌ ಮಾಡಿದ್ದಾರೆ. ಇದನ್ನೂ ಓದಿ: ಬೋಲ್ಡ್ ಲುಕ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ ದಿಶಾ ಪಟಾನಿ

     

    View this post on Instagram

     

    A post shared by Tamannaah Bhatia (@tamannaahspeaks)

    ಮತ್ತೊಂದೆಡೆ ಟಾಲಿವುಡ್ ಸೂಪರ್ ಸ್ಟಾರ್ ನಟ ಮಹೇಶ್ ಬಾಬು ಅವರು ಸಹ ಕುಟುಂಬ ಸಮೇತ ದುಬೈಗೆ ಹಾರಿ ಹೊಸವರ್ಷ ಆಚರಿಸಿದ್ದಾರೆ. ಇನ್ನು ಸೆಲೆಬ್ರೆಶನ್ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡು, ಹೊಸ ವರ್ಷ ಆರಂಭವಾಗಿದೆ. ಎಲ್ಲರೂ ಸಂತೋಷದಿಂದಿ ಇರಿ. ಕೃತಜ್ಞರಾಗಿರಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Mahesh Babu (@urstrulymahesh)

    ನಟಿ ಕಾಜಲ್ ಅಗರ್ ವಾಲ್, ಗೌತಮ್ ಕಿಚ್ಲು ಮತ್ತು ಕುಟುಂಬದವರೊಂದಿಗೆ ಹೊಸ ವರ್ಷವನ್ನು ಆಚರಿಸಿದ್ದು, ಪತಿ ಜೊತೆಗಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಹಳೆಯದನ್ನು ಮರೆತು ಹೋಗಲು ನನ್ನ ಕಣ್ಣಗಳನ್ನು ಮುಚ್ಚುತ್ತೇನೆ. ಹೊಸ ಆರಂಭಗಳಿಗೆ ನನ್ನ ಕಣ್ಣನ್ನು ತೆರೆಯುತ್ತೇನೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಲೈಂಗಿಕತೆ ವಿಚಾರದಲ್ಲಿ ಮಗಳಿಗೆ ಬುದ್ಧಿ ಹೇಳಿಕೊಡ್ಬೇಡಿ, ಮಗನಿಗೆ ಕಲಿಸಿಕೊಡಿ: ಸಮಂತಾ

    ಅಷ್ಟೇ ಅಲ್ಲದೇ ನಟ ಚಿರಂಜೀವಿ, ಮಲಯಾಳಂ ನಟ ಮೋಹನ್‍ಲಾಲ್, ಪ್ರಭುದೇವ್, ಕಾಲಿವುಡ್ ನಟ ಕಾರ್ತಿಕ್, ನಟಿ ಸಮಂತಾ, ರಶ್ಮಿಕಾ ಮಂದಣ್ಣ ಹೀಗೆ ಹಲವಾರು ತಾರೆಯರು ಹೊಸ ವರ್ಷವನ್ನು ಆಚರಿಸಿದ್ದಾರೆ. ಒಟ್ಟಾರೆ ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಹೊಸ ವರ್ಷ ಆಚರಿಸದಿದ್ದ ದಕ್ಷಿಣ ಭಾರತದ ಕಲಾವಿದರೂ ಇದೀಗ ಅದ್ದೂರಿಯಾಗಿ 2022 ನ್ಯೂ ಇಯರ್ ಸೆಲೆಬ್ರೆಟ್ ಮಾಡಿದ್ದಾರೆ.