Tag: ನ್ಯೂ ಇಯರ್ ಪಾರ್ಟಿ

  • ಪಬ್‌ನಲ್ಲಿ ಡ್ರಿಂಕ್ಸ್ ಮಾಡುವಂತೆ ಒತ್ತಾಯಿಸಿ ಯುವತಿ ಜೊತೆ ಅಸಭ್ಯ ವರ್ತನೆ – ಕೇಸ್ ದಾಖಲು

    ಪಬ್‌ನಲ್ಲಿ ಡ್ರಿಂಕ್ಸ್ ಮಾಡುವಂತೆ ಒತ್ತಾಯಿಸಿ ಯುವತಿ ಜೊತೆ ಅಸಭ್ಯ ವರ್ತನೆ – ಕೇಸ್ ದಾಖಲು

    ಬೆಂಗಳೂರು: ನ್ಯೂ ಇಯರ್ ಪಾರ್ಟಿ ವೇಳೆ ಯುವತಿ ಜೊತೆ ಅಸಭ್ಯ ವರ್ತನೆ ಮಾಡಿದ ಘಟನೆ ಬೆಳ್ಳಂದೂರಿನ (Bellanduru) ಪಬ್‌ವೊಂದರಲ್ಲಿ ನಡೆದಿದೆ.ಇದನ್ನೂ ಓದಿ: ಕೌಟುಂಬಿಕ ಕಲಹ – ನದಿಗೆ ಹಾರಿ ಪ್ರಾಣ ಬಿಟ್ಟ ಇಂಜಿನಿಯರ್

    ಒಡಿಶಾ (Odisha) ಮೂಲದ ಯುವತಿ ಬಾಯ್‌ಫ್ರೆಂಡ್ ಜೊತೆ ನ್ಯೂ ಇಯರ್ ಪಾರ್ಟಿಗೆ ತೆರಳಿದ್ದರು. ಈ ವೇಳೆ ಪಾರ್ಟಿ ಮಾಡುತ್ತಿದ್ದಾಗ ಕಿಡಿಗೇಡಿಯೊಬ್ಬ ಮದ್ಯ ಸೇವಿಸುವಂತೆ ಆಫರ್ ಮಾಡಿದ್ದ. ಆದರೆ ಯುವತಿ ಮದ್ಯವನ್ನು ನಿರಾಕರಿಸಿದ್ದಳು. ಆಗ ಎಣ್ಣೆ ಸೇವಿಸಲೇಬೇಕೆಂದು ಒತ್ತಾಯ ಮಾಡಿ ಅಸಭ್ಯ ವರ್ತನೆ ಮಾಡಿದ್ದ.

    ರಿಜೆಕ್ಟ್ ಮಾಡಿದಾಗ ಮಾತಿಗೆ ಮಾತು ಬೆಳೆದ ಪರಿಣಾಮ ತಕ್ಷಣ ಪಬ್ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದಾರೆ. ಸಿಬ್ಬಂದಿ ಬರುತ್ತಲೇ ಯುವಕ ಪಬ್‌ನಿಂದ ಎಸ್ಕೇಪ್ ಆಗಿದ್ದ. ಅಸಭ್ಯ ವರ್ತನೆ ಮತ್ತು ಲೈಂಗಿಕ ಕಿರುಕುಳ ಆರೋಪದಡಿ ಯುವತಿ ದೂರು ನೀಡಿದ್ದು, ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಹೊಸ ವರ್ಷದ ಎಣ್ಣೆ ಏಟಲ್ಲಿ ವಾಹನ ಚಾಲನೆ – ಒಂದೇ ರಾತ್ರಿ 513 ಕೇಸ್ ದಾಖಲು

  • ಕ್ಯಾಲಿಫೋರ್ನಿಯಾದಲ್ಲಿ ಚೀನೀಯರ ನ್ಯೂ ಇಯರ್‌ ಪಾರ್ಟಿ ವೇಳೆ ಶೂಟೌಟ್‌ – 10 ಮಂದಿ ಸಾವು

    ಕ್ಯಾಲಿಫೋರ್ನಿಯಾದಲ್ಲಿ ಚೀನೀಯರ ನ್ಯೂ ಇಯರ್‌ ಪಾರ್ಟಿ ವೇಳೆ ಶೂಟೌಟ್‌ – 10 ಮಂದಿ ಸಾವು

    ಕ್ಯಾಲಿಫೋರ್ನಿಯಾ: ದಕ್ಷಿಣ ಕ್ಯಾಲಿಫೋರ್ನಿಯಾದ (California) ಏಷ್ಯಾದ ನಗರದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ (Shooting) ಹತ್ತು ಜನರು ಮೃತಪಟ್ಟಿದ್ದು, ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ.

    ಮಾಂಟೆರಿ ಪಾರ್ಕ್‌ನಲ್ಲಿ ಚೀನೀಯರು ಹೊಸ ವರ್ಷದ ಪಾರ್ಟಿಯಲ್ಲಿ ಸಂಭ್ರಮಿಸುತ್ತಿದ್ದಾಗ ಬಂದೂಕುಧಾರಿ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಂತರದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಶೂಟೌಟ್‌ನಲ್ಲಿ ಗಾಯಗೊಂಡವರನ್ನು ತುರ್ತು ಸಿಬ್ಬಂದಿ ಸ್ಟ್ರೆಚರ್‌ಗಳ ಮೂಲಕ ಅಂಬುಲೆನ್ಸ್‌ಗೆ ಹಾಕಿಕೊಂಡು ಕರೆದೊಯ್ಯುತ್ತಿರುವ ದೃಶ್ಯಗಳು ವೀಡಿಯೋಗಳಲ್ಲಿವೆ. ಇದನ್ನೂ ಓದಿ: ಅಮೆರಿಕ ಮಿಲಿಟರಿ ಪಡೆಯಿಂದ ವೈಮಾನಿಕ ದಾಳಿ – 30 ಉಗ್ರರ ಹತ್ಯೆ

    ದಕ್ಷಿಣ ಕ್ಯಾಲಿಫೋರ್ನಿಯಾದ ಅತಿದೊಡ್ಡ ಹಬ್ಬಗಳಲ್ಲಿ ಒಂದಾದ ಎರಡು ದಿನಗಳ ʼಚಂದ್ರನ ಹೊಸ ವರ್ಷʼದ ಹಬ್ಬಕ್ಕಾಗಿ ಹತ್ತಾರು ಸಾವಿರ ಜನರು ಮುಂಜಾನೆಯೇ ಜಮಾಯಿಸಿದ್ದರು. ರಾತ್ರಿ ಪಾರ್ಟಿ ವೇಳೆ ಬಂದೂಕುಧಾರಿ ಗುಂಡು ಹಾರಿಸಿದ್ದು, ಹಲವರು ಸಾವಿಗೀಡಾಗಿದ್ದಾರೆ.

    “ಮಾಂಟೆರಿ ಪಾರ್ಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಮ್ಮ ಸಂತಾಪಗಳು” ಎಂದು ಲಾಸ್ ಏಂಜಲೀಸ್ ಸಿಟಿ ಕಂಟ್ರೋಲರ್ ಕೆನ್ನೆತ್ ಮೆಜಿಯಾ ಟ್ವೀಟ್‌ನಲ್ಲಿ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಹಾಕದ ರಿಷಿ ಸುನಾಕ್‌ಗೆ ದಂಡ

    ಅಮೆರಿಕದಲ್ಲಿ ಗನ್‌ ಹಿಂಸಾಚಾರವು ದೊಡ್ಡ ಸಮಸ್ಯೆಯಾಗಿದೆ. ಕಳೆದ ವರ್ಷ 647 ಸಾಮೂಹಿಕ ಗುಂಡಿನ ದಾಳಿಗಳು ನಡೆದಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾರ್ಟಿ ಮಾಡ್ತಿದ್ದವರಿಂದ ಪೊಲೀಸರ ಮೇಲೆ ಹಲ್ಲೆ ಪ್ರಕರಣ – ಆರೋಪಿಗಳಿಗೆ ಷರತ್ತು ಬದ್ದ ಜಾಮೀನು ಮಂಜೂರು

    ಪಾರ್ಟಿ ಮಾಡ್ತಿದ್ದವರಿಂದ ಪೊಲೀಸರ ಮೇಲೆ ಹಲ್ಲೆ ಪ್ರಕರಣ – ಆರೋಪಿಗಳಿಗೆ ಷರತ್ತು ಬದ್ದ ಜಾಮೀನು ಮಂಜೂರು

    ಚಿಕ್ಕಬಳ್ಳಾಪುರ: ನೈಟ್ ಕರ್ಫ್ಯೂ ಉಲ್ಲಂಘಿಸಿ ಪಾರ್ಟಿ ಮಾಡುತ್ತಿದ್ದ ಹೋಂ ಸ್ಟೇ ಮೇಲೆ ದಾಳಿ ಮಾಡಿದ್ದ ಪೊಲೀಸರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಬಂಧಿತರಾಗಿದ್ದ 8 ಮಂದಿ ಆರೋಪಿಗಳಿಗೂ ಚಿಕ್ಕಬಳ್ಳಾಪುರ ನ್ಯಾಯಾಲಯದಿಂದ ಷರತ್ತು ಬದ್ದ ಜಾಮೀನು ಮಂಜೂರಾಗಿದೆ.

    ಕಳೆದ ರಾತ್ರಿ ನೈಟ್ ಕರ್ಫ್ಯೂ ಉಲ್ಲಂಘಿಸಿ ಚಿಕ್ಕಬಳ್ಳಾಪುರ ತಾಲೂಕು ಅಗಲಗುರ್ಕಿ ಗ್ರಾಮದ ಬಳಿಯ ವೈಟ್ ನಿರ್ವಾಣ್ ಜೇಡ್ ಹೋಂ ಸ್ಟೇನಲ್ಲಿ ತಡರಾತ್ರಿ ಬೆಂಗಳೂರು ಮೂಲದ ಪ್ರತಿಷ್ಠಿತರ ಮಕ್ಕಳು ಪಾರ್ಟಿ ಮಾಡಿ ಮೋಜು ಮಸ್ತಿ ಮಾಡುತ್ತಿದ್ದರು. ಈ ವೇಳೆ ಚಿಕ್ಕಬಳ್ಳಾಪುರ ಸಿಪಿಐ ಹಾಗೂ ಸಿಬ್ಬಂದಿ ದಾಳಿ ಮಾಡಿ ಪಾರ್ಟಿ ಬಗ್ಗೆ ಪ್ರಶ್ನೆ ಮಾಡಿದ್ದರು. ಈ ಸಮಯದಲ್ಲಿ ಪಾನಮತ್ತರಾಗಿದ್ದ ಆರೋಪಿತರು ಪೊಲೀಸರ ಮೇಲೆಯೇ ದಬ್ಬಾಳಿಕೆ ನಡೆಸಿ ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

    ಪರಸ್ಪರರು ತಳ್ಳಾಟ, ನೂಕಾಟ ನಡೆಸಿ ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬೆಂಗಳೂರು ಮೂಲದ ರಘು ವಂಶ್ ಕನೂಜ್, ಅಕ್ಷಯ್ ಬಜಾಜ್, ತೇಜಸ್, ಆಕಾಶ್, ಆದಿತ್ಯ, ಚಿರಾಗ್, ಸೂರಜ್, ಅರ್ಜುನ್ ಆರೋಪಿತರಾಗಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷೆನ್ 353, 323, 504 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ-188, 269, 272 ಅಡಿ ಪ್ರಕರಣ ದಾಖಲಿಸಿದ್ದರು. ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿಯೇ ಹೊಸ ವರ್ಷ ಆಚರಣೆ

  • ಪಾರ್ಟಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಪ್ರಶ್ನಿಸಿದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

    ಪಾರ್ಟಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಪ್ರಶ್ನಿಸಿದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

    ಬೆಂಗಳೂರು: ಹೊಸ ವರ್ಷಾಚರಣೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ಒಂದೊಂದೇ ಅವಘಡಗಳು ಬೆಳಕಿಗೆ ಬರುತ್ತಿದೆ. ನ್ಯೂ ಇಯರ್ ಪಾರ್ಟಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನ್ನು ಪ್ರಶ್ನೆ ಮಾಡಿದ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ.

    ಕೋರಮಂಗಲದ ಐದನೇ ಹಂತದಲ್ಲಿರುವ ಮ್ಯಾಡ್ ಸೈನಟಿಸ್ಟ್ ಪಬ್ ನಲ್ಲಿ ಈ ಘಟನೆ ನಡೆದಿದ್ದು, ಕೇರಳ ಮೂಲದ ಎಂಜಿನಿಯರ್ ವಿದ್ಯಾರ್ಥಿ ಅರ್ಜುನ್ ಎಂಬುವವರಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದಕ್ಕೆ ಅರ್ಜುನ್ ಸೇರಿದಂತೆ ಇಬ್ಬರು ಯುವಕ ಯುವತಿಯರು ಪಬ್ ಗೆ ಹೋಗಿದ್ದಾರೆ.

    ಈ ವೇಳೆ ಪಾರ್ಟಿಯಲ್ಲಿ ಡಾನ್ಸ್ ಮಾಡುವ ವೇಳೆ ಯುವಕರ ಗುಂಪೊಂದು ಡಾನ್ಸ್ ಮಾಡುವ ನೆಪದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದರು. ಇದನ್ನು ನೋಡಿದ ಅರ್ಜುನ್ ಯುವಕರನ್ನು ಪ್ರಶ್ನೆ ಮಾಡಿದ್ದ, ಇದರಿಂದ ಕೋಪಗೊಂಡ ಯುವಕರ ಗುಂಪು ಪಬ್ ಒಳಗಡೆಯೇ ವಿದ್ಯಾರ್ಥಿ ಅರ್ಜುನ್ ನನ್ನ ಹಿಗ್ಗಾಮುಗ್ಗಾ ಥಳಿಸಿದೆ. ಅರ್ಜುನ್ ಬಲಕಣ್ಣು, ಮುಖ ಸೇರಿದಂತೆ ದೇಹದ ಕೆಲ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನ್ಯೂ ಇಯರ್ ಪಾರ್ಟಿ ಕಿಕ್‍ಗೆ ಅಬಕಾರಿ ಇಲಾಖೆ ಕಿಲ ಕಿಲ

    ನ್ಯೂ ಇಯರ್ ಪಾರ್ಟಿ ಕಿಕ್‍ಗೆ ಅಬಕಾರಿ ಇಲಾಖೆ ಕಿಲ ಕಿಲ

    ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ಕಿಕ್ ಗೆ ಅಬಕಾರಿ ಇಲಾಖೆ ಫುಲ್ ಖುಷಿಯಾಗಿದೆ.

    ಕಳೆದ ಕೆಲವು ದಿನಗಳಿಂದ (ತಿಂಗಳಾಂತ್ಯ) ವ್ಯಾಪಾರ ಇಲ್ಲದೇ ಗೊಣಗುತ್ತಿದ್ದ ಮದ್ಯದ ಅಂಗಡಿಯವರು ಹೊಸ ವರ್ಷಕ್ಕೆ ಫುಲ್ ಕಿಲ ಕಿಲ ಆಗಿದ್ದಾರೆ. ಹೊಸ ವರ್ಷಕ್ಕೆ ನಾವಿದ್ದೇವೆ ಎಂದು ಕುಡುಕರು ಅಬಕಾರಿ ಇಲಾಖೆ ಸಖತ್ ಆದಾಯ ತಂದುಕೊಟ್ಟಿದ್ದಾರೆ. ಈ ಬಾರಿ ಹೊಸ ವರ್ಷದ ಪಾರ್ಟಿ ಮೂಡ್ ಅಬಕಾರಿ ಇಲಾಖೆಯ ಹಳೆ ದಾಖಲೆಗಳನ್ನು ಪೀಸ್ ಪೀಸ್ ಮಾಡಿದೆ. ಖಜಾನೆಯ ಚಿಂತೆಯಲ್ಲಿದ್ದ ಅಬಕಾರಿ ಇಲಾಖೆಯ ಅಧಿಕಾರಿಗಳು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

    ರಾಜ್ಯಾದ್ಯಂತ ಈ ವರ್ಷ ಭರ್ತಿ ಶೇ.10ರಷ್ಟು ಮದ್ಯ ಮಾರಾಟ ಹೆಚ್ಚಳವಾದರೆ, ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಶೇ.15ರಷ್ಟು ಮಾರಾಟವಾಗಿದೆ. ಕಳೆದ ವರ್ಷ (2019) ಡಿಸೆಂಬರ್ 21 ರಿಂದ ಜನವರಿ 31 ರ ಮಧ್ಯರಾತ್ರಿಯವರೆಗೆ 481 ಕೋಟಿ ಆದಾಯ ಬಂದಿತ್ತು. ಈ ವರ್ಷ ಅಂದ್ರೆ ಹೊಸ ವರ್ಷಾಚರಣೆಗೆ ಬರೋಬ್ಬರಿ 597 ಕೋಟಿ ಆದಾಯ ಅಬಕಾರಿ ಖಜಾನೆಗೆ ಸೇರಿದೆ.

    ಕಳೆದ ವರ್ಷ ಶೇ.21.75 ಕೇಸಸ್ ಮದ್ಯ ಮರಾಟಾವಾದರೆ ಈ ವರ್ಷ ಶೇ.23.72 ಮದ್ಯ ಮಾರಾಟವಾಗಿದೆ. ವ್ಯಾಪಾರ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಅಬಕಾರಿ ಅಧಿಕಾರಿಗಳು ಈ ಬಾರಿ ಆದಾಯ ಹೆಚ್ಚಳ ನೋಡಿ ದಿಲ್ ಖುಷ್ ಆಗಿದ್ದಾರೆ.

  • ಹೊಸ ವರ್ಷದ ಮೋಜು ಮಸ್ತಿಗೆ ಬಂದವರು ಲಾಠಿ ಏಟು ತಿಂದು ಎಲ್ಲೆಂದ್ರಲ್ಲಿ ವಾಹನ ಬಿಟ್ಟು ಪರಾರಿಯಾದ್ರು

    ಹೊಸ ವರ್ಷದ ಮೋಜು ಮಸ್ತಿಗೆ ಬಂದವರು ಲಾಠಿ ಏಟು ತಿಂದು ಎಲ್ಲೆಂದ್ರಲ್ಲಿ ವಾಹನ ಬಿಟ್ಟು ಪರಾರಿಯಾದ್ರು

    ಕೋಲಾರ: ಹೊಸ ವರ್ಷದ ಮೂಡ್‍ನಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಯುವಕ-ಯುವತಿಯರನ್ನ ಚದುರಿಸಲು ಕೋಲಾರದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

    ಕೋಲಾರ ತಾಲೂಕಿನ ನರಸಾಪುರ ಬಳಿ ರಾಷ್ಟ್ರೀಯ ಹೆದ್ದಾರಿ-75 ರ ಬಳಿ ಇರುವ ಕಾಫಿ ಡೇ ಸಮೀಪ ರಾತ್ರಿ 2 ಗಂಟೆಯವರೆಗೆ ಪಾರ್ಟಿ ಮಾಡಿ ಮೋಜು ಮಸ್ತಿಯಲ್ಲಿ ಯುವಕ ಯುವತಿಯರು ತೊಡಗಿದ್ರು. ಈ ವೇಳೆ ಪೊಲೀಸರು ಯುವಕ ಮತ್ತು ಯುವತಿಯರಿಗೆ ಸುರಕ್ಷಿತವಾಗಿ ಮನೆಗಳಿಗೆ ತೆರಳುವಂತೆ ಮನವಿ ಮಾಡಿದ್ದಾರೆ. ಪೊಲೀಸರ ಮಾತು ಕೇಳದ ಯುವಕರ ತಂಡ ರಾತ್ರಿ 2 ಗಂಟೆಯ ನಂತರವೂ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿದ್ರು.

    ತಾಳ್ಮೆ ಕಳೆದುಕೊಂಡ ವೇಮಗಲ್ ಪೊಲೀಸರು, ಪಾರ್ಟಿ ಮೂಡ್ ನಲ್ಲಿದ್ದವರ ಮೇಲೆ ಲಾಠಿ ಬೀಸಿದ್ದಾರೆ. ವರ್ಷದ ಮೊದಲ ದಿನವೇ ಲಾಠಿ ಏಟು ತಿಂದು, ಯುವಕರ ಗುಂಪು ಎಲ್ಲೆಂದರಲ್ಲಿ ತಮ್ಮ ವಾಹನಗಳನ್ನ ಬಿಟ್ಟು ಪರಾರಿಯಾಗಿದ್ದಾರೆ. ಒಟ್ನಲ್ಲಿ ವರ್ಷದ ಮೊದಲ ದಿನವೇ ಯುವಕ ಯುವತಿಯರು ಮೋಜು ಮಸ್ತಿ ಮಾಡಲು ಹೋಗಿ ಲಾಠಿ ಏಟು ತಿಂದು ಮನೆಗಳಿಗೆ ತೆರಳಬೇಕಾದ ಸನ್ನಿವೇಶ ಕೋಲಾರದಲ್ಲಿ ನಿರ್ಮಾಣವಾಗಿತ್ತು.