Tag: ಪಂಚಮಿ

  • ‘ನಾಗರಪಂಚಮಿ’ ವಿಶೇಷತೆ ಏನು?

    ‘ನಾಗರಪಂಚಮಿ’ ವಿಶೇಷತೆ ಏನು?

    ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸುವ ಹಬ್ಬವೇ ‘ನಾಗರಪಂಚಮಿ’. ನಾಗರ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿರುವ ಜಾಗಕ್ಕೆ ಹೋಗಿ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ. ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಸಹ ಇದೆ.

    ಪಂಚಮಿಯ ವೈಶಿಷ್ಟ್ಯ
    ಸಾತ್ತ್ವಿಕತೆ ಗ್ರಹಿಸಲು ನಾಗರಪಂಚಮಿ ಉಪಯುಕ್ತ ಕಾಲ. ಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಿದರೆ ಒಳ್ಳೆಯದು.

    ಪ್ರಾರ್ಥನೆಯ ವೇಳೆ, ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣದ ಶುದ್ಧಿಯಾಗಲಿ. ನಾಗದೇವತೆಯು ಸಂಪೂರ್ಣ ಬ್ರಹ್ಮಾಂಡದ ಕುಂಡಲಿನಿಯಾಗಿದ್ದಾನೆ. ಪಂಚಪ್ರಾಣವೆಂದರೆ ಪಂಚಭೌತಿಕ ತತ್ತ್ವದಿಂದ ಉಂಟಾದ ಶರೀರದ ಸೂಕ್ಷ್ಮರೂಪವಾಗಿದೆ ಎಂದು ಪುರಾಣಗಳಲ್ಲಿ ನಂಬಲಾಗಿದೆ.

    ಹೆಣ್ಣುಮಕ್ಕಳ ಹಬ್ಬ
    ನಾಗರಪಂಚಮಿ ಮಾಂಗಲ್ಯಪ್ರದ ಹಾಗೂ ಸಂತಾನಪ್ರದ ಎಂಬ ನಂಬಿಕೆ. ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ವಿಶೇಷತೆಗಳಿಂದ ಕೂಡಿರುತ್ತದೆ. `ನಾಗರ ಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಕರಿ ಸೀರೆ ಉಡಿಸಾಕ’ ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆ ಸಾರುತ್ತದೆ. ತವರಿಗೆ ಹೆಣ್ಣುಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸಲಾಗುತ್ತದೆ.

    ಉಪವಾಸದ ಮಹತ್ವ
    ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವವೆಂದರೆ ಈ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ ಹೊಂದಿದನು. ಆಗ ಸಹೋದರನ ಸಾವಿನಿಂದ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಅದಕ್ಕೆ ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಅದಕ್ಕೆ ಆ ದಿನ ಮಹಿಳೆಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ.

    ಸಹೋದರನಿಗೆ ಅಖಂಡ ಆಯುಷ್ಯ ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟಗಳಿಂದ ಪಾರಾಗಲಿ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ. ನಾಗರಪಂಚಮಿಯ ಹಿಂದಿನ ದಿನ ಪ್ರತಿಯೊಬ್ಬ ಸಹೋದರಿಯು ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ ಲಾಭವಾಗುತ್ತದೆ. ಅವನ ರಕ್ಷಣೆಯಾಗುತ್ತದೆ.

    ಪೂಜೆ
    ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರತೆಯ ಒಂಬತ್ತು ಪ್ರಮುಖ ಗುಂಪುಗಳಾಗಿವೆ.

    ನಾಗ ಪಂಚಮಿ ಜಾನಪದ ಕಥೆ
    ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು. ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ನಾಗರಹಾವೊಂದು ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು.

    ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು. ನಾನು ಯಾರನ್ನು ಅಣ್ಣ ಎಂದು ಕರೆಯಲಿ ಎಂದು ಕಣ್ಣೀರಿಟ್ಟಳು. ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ – ತಂಗಿ ಇಬ್ಬರು ಸೇರಿ ನಾಗರಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

    Live Tv
    [brid partner=56869869 player=32851 video=960834 autoplay=true]

  • ಪಂಚಮಿಯನ್ನ ಸಂಪ್ರದಾಯಬದ್ಧವಾಗೇ ಮದ್ವೆಯಾಗಿದ್ದಾರೆ- ಇಕ್ಬಾಲ್ ಅನ್ಸಾರಿ ತಾಯಿ

    ಪಂಚಮಿಯನ್ನ ಸಂಪ್ರದಾಯಬದ್ಧವಾಗೇ ಮದ್ವೆಯಾಗಿದ್ದಾರೆ- ಇಕ್ಬಾಲ್ ಅನ್ಸಾರಿ ತಾಯಿ

    ಕೊಪ್ಪಳ: ಇದು ಅಣ್ಣತಮ್ಮಂದಿರ ಜಗಳ. ಅವನು ಎರಡು ಮದುವೆನೂ ಆಗ್ತಾನೆ, ನಾಲ್ಕೂ ಆಗ್ತಾನೆ. ಯಾರು ಕೇಳ್ತಾರೆ? ಅವನು ಸಂಪಾದನೆ ಮಾಡಿ ಹೆಂಡತಿ- ಮಕ್ಕಳನ್ನ ಸಾಕ್ತಾನೆ. ಹೀಗಾಗಿ ಆ ಹುಡ್ಗಿಯನ್ನು ಮದ್ವೆ ಆಗಿರೋದು ತಪ್ಪೇನಿಲ್ಲ. ಪಂಚಮಿಯನ್ನು ಅನ್ಸಾರಿ ಸಂಪ್ರದಾಯಸ್ಥವಾಗಿ ಮದ್ವೆಯಾಗಿದ್ದಾರೆ ಅಂತಾ ಗಂಗಾವತಿ ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ತಾಯಿ ಅಹಮದಿ ಬೇಗಂ ಮಗನ ಪರವಾಗಿ ಹೇಳಿಕೆ ನೀಡಿದ್ದಾರೆ.

    ಶಾಸಕ ಇಕ್ಬಾಲ್ ಅನ್ಸಾರಿ ನಟಿ ಪಂಚಮಿಯೊಂದಿಗಿನ 2ನೇ ಸಂಬಂಧದ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಎರಡೂ ಕುಟುಂಬ ಒಪ್ಪಿಗೆ ಸೂಚಿಸಿ ಮದ್ವೆ ಮಾಡ್ಕೊಂಡಿದ್ದಾರೆ. ಪಂಚಮಿ ಒಪ್ಪಿಗೆಯಂತೆಯೇ ಮದ್ವೆ ಮಾಡಿಕೊಂಡು ಜೀವನ ನಡೆಸ್ತಾ ಇದ್ದಾರೆ. ತಾವು ಸಂಪಾದನೆ ಮಾಡಿದ ಆಸ್ತಿಯನ್ನು ಕೊಟ್ಟಿದ್ದಾರೆ. ಪಿತ್ರಾರ್ಜಿತ ಆಸ್ತಿಯನ್ನು ಕೊಟ್ಟಿಲ್ಲ ಅಂತಾ ಹೇಳಿದ್ದಾರೆ.

    ಅನ್ಸಾರಿಯವರನ್ನು ರಾಜಕೀಯವಾಗಿ ತುಳಿಯಲು ಯತ್ನ ಮಾಡ್ತಿದ್ದಾರೆ. ಬೇರೆ ಬೇರೆ ಚಟುವಟಿಕೆಗೆ ಬಿದ್ದು ಆಸ್ತಿ ಹಾಳು ಮಾಡಿಕೊಂಡು ಬಳಿಕ ಈಗ ಹಣ ಕೇಳ್ತಿದ್ದಾರೆ. ನ್ಯಾಯಾಲಯದ ಮುಂದೆ ಹೋಗಿ ಪದೇ ಪದೇ ಗಲಾಟೆ ಮಾಡ್ತಾರೆ. ತಂದೆಯವರು ಜೀವಂತವಾಗಿದ್ದಾಗ ಸಮಾನವಾಗಿ ಹಂಚಿಕೆ ಮಾಡಿದ್ರು. ಆದ್ರೂ ಕೂಡ ಅನ್ಸಾರಿ ಅವರಿಗೆಲ್ಲ ಹಣವನ್ನು ನೀಡಿ ಆಸ್ತಿ ಮಾಡಿಕೊಟ್ಟಿದ್ರು. ಸಹೋದರರು ದಾರಿ ತಪ್ಪಿ ತಮ್ಮ ಆಸ್ತಿಯನ್ನು ಕಳೆದುಕೊಂಡು ಆರೋಪ ಮಾಡ್ತಾ ಇದ್ದಾರೆ. ಆದ್ರೂ ಅನ್ಸಾರಿ ತಿಂಗಳಿಗೆ 75 ಸಾವಿರ ಜೀವನಾಂಶ ಕೊಡ್ತಾ ಇದ್ರು. ತಮ್ಮಂದಿರ ಕುಟುಂಬಕ್ಕೆ ಅನ್ಯಾಯ ಆಗದೇ ಇರಲಿ ಅಂತ ಹಣ ಕೊಡ್ತಿದ್ದಾರೆ. ರಾಜಕೀಯ ಪ್ರೇರಿತವಾಗಿ ಈ ಆರೋಪ ಮಾಡ್ತಿದ್ದಾರೆ ಅಂತಾ ಹೇಳಿದ್ರು.

    https://www.youtube.com/watch?v=OKRdXeGYwnk

    ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಮನೆಯಲ್ಲಿದ್ದುಕೊಂಡೇ ಮಾಧ್ಯಮದ ಮುಂದೆ ಬರಲ್ಲ. ನನ್ನ ಪರವಾಗಿ ತನ್ನ ತಾಯಿ ಹೇಳಿಕೆ ನೀಡುತ್ತಾರೆ ಅಂತಾ ಮನೆಯ ಕೋಣೆಯಲ್ಲಿಯೇ ಕುಳಿತು ತಾಯಿಯನ್ನು ಮಾಧ್ಯಮಗಳಿಗೆ ಹೇಳಿಕೆ ಕೊಡಲು ಕಳುಹಿಸಿದ್ದಾರೆ ಎನ್ನಲಾಗಿದೆ.

    ಎರಡನೇ ಮದುವೆ ಬಯಲಾಗಿದ್ದು ಹೇಗೆ?: ಶಾಸಕ ಇಕ್ಬಾಲ್ ಅನ್ಸಾರಿ ಮೊದಲ ಹೆಂಡತಿಗೆ ಗೊತ್ತಿಲ್ಲದಂತೆ ನಟಿ ಜೊತೆ ಸಂಸಾರ ನಡೆಸಿದ್ದು, ಅಣ್ಣ-ತಮ್ಮಂದಿರ ಆಸ್ತಿ ಜಗಳದಲ್ಲಿ ಶಾಸಕರ ಎರಡನೇ ಮದುವೆ ಬಯಲಾಗಿದೆ. ಇಕ್ಬಾಲ್ ಅನ್ಸಾರಿಗೆ ಇಡೀ ಜಿಲ್ಲೆಯಾದ್ಯಂತ 30ಕ್ಕೂ ಹೆಚ್ಚು ಬಾರ್‍ಗಳು ಹಾಗೂ ವೈನ್ ಶಾಪ್‍ಗಳಿವೆ. ಆಸ್ತಿಯನ್ನ ಸಹೋದರರಿಗೆ ಹಂಚದೆ ಇಬ್ಬರು ಹೆಂಡತಿಯ ಹೆಸರಿಗೆ ರಿಜಿಸ್ಟ್ರೇಷನ್ ಮಾಡಿದಾಗ 2ನೇ ಸಂಬಂಧ ಬಯಲಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ವಿರುದ್ಧ ಇಬ್ಬರು ಸಹೋದರರು ಸಿಟ್ಟಿಗೆದ್ದಿದ್ದಾರೆ.

    ಮೊನ್ನೆ ಮೊನ್ನೆಯಷ್ಟೇ ಇಕ್ಬಾಲ್ ಅನ್ಸಾರಿಯವರ ಬಾರ್‍ಗಳಲ್ಲಿ ಡಬಲ್ ರೇಟ್ ತೆಗೆದುಕೊಳ್ತಾರೆ. ಎಂಆರ್‍ಪಿಗಿಂತ ಡಬಲ್ ವಸೂಲಿ ಮಾಡ್ತಾರೆ ಅಂತ ಪಬ್ಲಿಕ್ ಟಿವಿ ಸುದ್ದಿ ಬಿತ್ತರಿಸಿತ್ತು. ಆ ಸಮಯದಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತು ಪತ್ನಿ ತಬಸುಮಾ ಅವರ ಒಡೆತನದ ಬಾರ್‍ಗಳ ಪಟ್ಟಿ ಮಾಡ್ತಿದ್ದಾಗಲೇ ಪಂಚಮಿಗೂ ಬಾರ್ ಲೈಸೆನ್ಸ್ ವರ್ಗಾಯಿಸಿರೋದು ಬೆಳಕಿಗೆ ಬಂತು. ಇದರ ಜಾಡು ಹಿಡಿದಾಗ ಶಾಸಕ ಇಕ್ಬಾಲ್ ಅನ್ಸಾರಿ ಅವರ ಅಸಲಿ ಬಣ್ಣ ಬಯಲಾಗಿದೆ. 2016 ಅಂದ್ರೆ ಕಳೆದ ವರ್ಷ ಜೂನ್ 27ರಂದು ಶ್ರೀಮತಿ ಪಂಚಮಿ, ದಿವಂಗತ ತಂದೆ ಗುರುಸ್ವಾಮಿ ಅನ್ನೋರಿಗೆ ಬಾರ್ ಮಾಲಿಕತ್ವವನ್ನ ಕೊಟ್ಟಿರೋ ದಾಖಲೆ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    https://www.youtube.com/watch?v=GVuQKk9L0VA

    2013ರ ಚುನಾವಣಾ ಪ್ರಚಾರದಲ್ಲೇ ಅನ್ಸಾರಿ ಬಣ್ಣ ಬಯಲಾಗಿ ಈಗ ಮೊದಲ ಪತ್ನಿ ಸಿಟ್ಟಿಗೆದ್ದಿದ್ದಾರೆ. ನಟಿ ಪಂಚಮಿ ಶಾಸಕ ಇಕ್ಬಾಲ್ ಅನ್ಸಾರಿ ಪರವಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿದ್ರು. ಗಂಡನ ಎರಡನೇ ಸಂಬಂಧದ ಬಗ್ಗೆ ಗೊತ್ತಾಗಿ ನಟಿಗೆ ಅನ್ಸಾರಿ ಪತ್ನಿ ತಬಸುಮಾ ಮನೆಯಲ್ಲೇ ಥಳಿಸಿದ್ರು ಎನ್ನಲಾಗಿದೆ. ಮೊದಲ ಹೆಂಡತಿ ಹಲ್ಲೆ ಬಳಿಕ 2ನೇ ಹೆಂಡತಿ ಪಂಚಮಿಗೆ ಇಕ್ಬಾಲ್ ಅನ್ಸಾರಿ ಬಾರ್ ಬರೆದುಕೊಟ್ಟಿದ್ದಾರೆ.

  • ಕನ್ನಡದ ನಟಿ ಜೊತೆ ಶಾಸಕ ಇಕ್ಬಾಲ್ ಅನ್ಸಾರಿ 2ನೇ ಸಂಬಂಧ ಬಯಲು

    ಕನ್ನಡದ ನಟಿ ಜೊತೆ ಶಾಸಕ ಇಕ್ಬಾಲ್ ಅನ್ಸಾರಿ 2ನೇ ಸಂಬಂಧ ಬಯಲು

    ಕೊಪ್ಪಳ: ರಾಜ್ಯದ ಪ್ರಭಾವಿ ಶಾಸಕರೊಬ್ಬರ 2ನೇ ಸಂಬಂಧ ಬಯಲಾಗಿದೆ. ಸ್ಯಾಂಡಲ್‍ವುಡ್ ನಟಿ ಜೊತೆಗೆ ಸಂಬಂಧ ಬೆಳೆಸಿದ ಶಾಸಕ ಆ ನಟಿಮಣಿಗೆ ಎರಡು ಮಕ್ಕಳನ್ನೂ ಕರುಣಿಸಿದ್ದಾರೆ.

    ಹೌದು. ಕೊಪ್ಪಳದ ಗಂಗಾವತಿ ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಮೊದಲ ಹೆಂಡತಿಗೆ ಗೊತ್ತಿಲ್ಲದಂತೆ ನಟಿ ಜೊತೆ ಸಂಸಾರ ನಡೆಸಿದ್ದು, ಅಣ್ಣ-ತಮ್ಮಂದಿರ ಆಸ್ತಿ ಜಗಳದಲ್ಲಿ ಶಾಸಕರ ರಾಸಲೀಲೆ ಬಯಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಮಿಂಚಿದ ನಟಿ ಶಾಸಕರ ಜೊತೆ ಸಂಬಂಧ ಹೊಂದಿದ್ದು, ಆಸ್ತಿಯನ್ನು ಆಕೆಗೆ ಕೊಟ್ಟಾಗ ಈ ಸಂಗತಿ ಬಯಲಾಗಿದೆ.

    ಶಾಸಕ ಇಕ್ಬಾಲ್ ಅನ್ಸಾರಿಗೆ ಇಡೀ ಜಿಲ್ಲೆಯಾದ್ಯಂತ 30ಕ್ಕೂ ಹೆಚ್ಚು ಬಾರ್‍ಗಳು ಹಾಗೂ ವೈನ್ ಶಾಪ್‍ಗಳಿವೆ. ಅಪ್ಪ ಮಾಡಿದ್ದ ಆಸ್ತಿಯನ್ನ ಸಹೋದರರಿಗೆ ಹಂಚದೆ ಇಬ್ಬರು ಹೆಂಡತಿಯ ಹೆಸರಿಗೆ ರಿಜಿಸ್ಟ್ರೇಷನ್ ಮಾಡಿದಾಗ 2ನೇ ಸಂಬಂಧ ಬಯಲಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ವಿರುದ್ಧ ಇಬ್ಬರು ಸಹೋದರರು ಸಿಟ್ಟಿಗೆದ್ದಿದ್ದಾರೆ.

    ಯಾರು ಆ ನಟಿ?: ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಪ್ರೀತಿಗೆ ಪಾತ್ರರಾಗಿದ್ದು ಗುಬ್ಬಿ ವೀರಣ್ಣ ಕುಟುಂಬದ ಹೆಣ್ಣು. ಆ ನಟಿ ಬೇರೆ ಯಾರು ಅಲ್ಲ. ಒಂದು ಕಾಲದ ಬ್ಯೂಟಿಕ್ವೀನ್, ಚೆಂದದ ನಟಿ ಪಂಚಮಿ. ಸಿನಿಮಾ, ಧಾರವಾಹಿಗಳಲ್ಲಿ ಮನೆಮಾತಾಗಿದ್ದ ನಟಿ ಪಂಚಮಿ ಜೊತೆ ಶಾಸಕ ಇಕ್ಬಾಲ್ ಅನ್ಸಾರಿ ಎರಡನೇ ಸಂಬಂಧ ಹೊಂದಿದ್ದಾರೆ. ನಾಟಕ ಆಡಲು ಬಂದುವರು ಕಷ್ಟ ಅಂದಾಗ ನಟಿ ಪಂಚಮಿಯನ್ನ ಮದುವೆಯಾಗಿ ಸದ್ದಿಲ್ಲದೇ ಸಂಸಾರ ಮಾಡ್ತಿದ್ದು, ಬಳ್ಳಾರಿಯ ಹೊಸಪೇಟೆಯಲ್ಲಿ ನಟಿ ಪಂಚಮಿಗೆ ಇಕ್ಬಾಲ್ ಅನ್ಸಾರಿ ಮನೆ ಮಾಡಿಕೊಟ್ಟಿದ್ದಾರೆ.

    ಮೊನ್ನೆ ಮೊನ್ನೆಯಷ್ಟೇ ಇಕ್ಬಾಲ್ ಅನ್ಸಾರಿಯವರ ಬಾರ್‍ಗಳಲ್ಲಿ ಡಬಲ್ ರೇಟ್ ತೆಗೆದುಕೊಳ್ತಾರೆ. ಎಂಆರ್‍ಪಿಗಿಂತ ಡಬಲ್ ವಸೂಲಿ ಮಾಡ್ತಾರೆ ಅಂತ ಪಬ್ಲಿಕ್ ಟಿವಿ ಸುದ್ದಿ ಬಿತ್ತರಿಸಿತ್ತು. ಆ ಸಮಯದಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತು ಪತ್ನಿ ತಬಸುಮಾ ಅವರ ಒಡೆತನದ ಬಾರ್‍ಗಳ ಪಟ್ಟಿ ಮಾಡ್ತಿದ್ದಾಗಲೇ ಪಂಚಮಿಗೂ ಬಾರ್ ಲೈಸೆನ್ಸ್ ವರ್ಗಾಯಿಸಿರೋದು ಬೆಳಕಿಗೆ ಬಂತು. ಇದರ ಜಾಡು ಹಿಡಿದಾಗ ಶಾಸಕ ಇಕ್ಬಾಲ್ ಅನ್ಸಾರಿ ಅವರ ಅಸಲಿ ಬಣ್ಣ ಬಯಲಾಗಿದೆ. 2016 ಅಂದ್ರೆ ಕಳೆದ ವರ್ಷ ಜೂನ್ 27ರಂದು ಶ್ರೀಮತಿ ಪಂಚಮಿ, ದಿವಂಗತ ತಂದೆ ಗುರುಸ್ವಾಮಿ ಅನ್ನೋರಿಗೆ ಬಾರ್ ಮಾಲಿಕತ್ವವನ್ನ ಕೊಟ್ಟಿರೋ ದಾಖಲೆ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    2013ರ ಚುನಾವಣಾ ಪ್ರಚಾರದಲ್ಲೇ ಅನ್ಸಾರಿ ಬಣ್ಣ ಬಯಲಾಗಿ ಈಗ ಮೊದಲ ಪತ್ನಿ ಸಿಟ್ಟಿಗೆದ್ದಿದ್ದಾರೆ. ನಟಿ ಪಂಚಮಿ ಶಾಸಕ ಇಕ್ಬಾಲ್ ಅನ್ಸಾರಿ ಪರವಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿದ್ರು. ಗಂಡನ ಎರಡನೇ ಸಂಬಂಧದ ಬಗ್ಗೆ ಗೊತ್ತಾಗಿ ನಟಿಗೆ ಅನ್ಸಾರಿ ಪತ್ನಿ ತಬಸುಮಾ ಮನೆಯಲ್ಲೇ ಥಳಿಸಿದ್ರು ಎನ್ನಲಾಗಿದೆ. ಮೊದಲ ಹೆಂಡತಿ ಹಲ್ಲೆ ಬಳಿಕ 2ನೇ ಹೆಂಡತಿ ಪಂಚಮಿಗೆ ಇಕ್ಬಾಲ್ ಅನ್ಸಾರಿ ಬಾರ್ ಬರೆದುಕೊಟ್ಟಿದ್ದಾರೆ.

    https://www.youtube.com/watch?v=GVuQKk9L0VA&feature=youtu.be