Tag: ಪಂಚರಾಜ್ಯ ಚುನಾವಣೆ

  • ಇನ್ನೊಂದು ತಿಂಗಳಲ್ಲಿ ಬಂಗಲೆ ಖಾಲಿ ಮಾಡ್ಬೇಕು – ವಿಧಾನಸಭೆಯಲ್ಲಿ ಗೆದ್ದ ಸಂಸದರಿಗೆ ಸೂಚನೆ

    ಇನ್ನೊಂದು ತಿಂಗಳಲ್ಲಿ ಬಂಗಲೆ ಖಾಲಿ ಮಾಡ್ಬೇಕು – ವಿಧಾನಸಭೆಯಲ್ಲಿ ಗೆದ್ದ ಸಂಸದರಿಗೆ ಸೂಚನೆ

    – ಶೋಭಾ ಕರಂದ್ಲಾಜೆಗೆ ಹೆಚ್ಚುವರಿ ಖಾತೆಯ ಹೊಣೆ

    ನವದೆಹಲಿ: ಪಂಚರಾಜ್ಯಗಳಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಶಾಸಕರಾಗಿರುವ ಸಂಸದರು ಮತ್ತು ಕೇಂದ್ರ ಸಚಿವರಿಗೆ (Union Ministers) 30 ದಿನದಲ್ಲಿ ಮನೆ ಖಾಲಿ ಮಾಡುವಂತೆ ಲೋಕಸಭೆ ಕಾರ್ಯಲಯ ಹೇಳಿದೆ. ಸಂಸದ (BJP MPs) ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನಲೆ ಮನೆ ಖಾಲಿ ಮಾಡುವಂತೆ ಅದು ಸೂಚಿಸಿದೆ.

    ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್, ಮಧ್ಯಪ್ರದೇಶದ ರಾಕೇಶ್ ಸಿಂಗ್, ಉದ್ಯಾ ಪ್ರತಾಪ್ ಸಿಂಗ್ ಮತ್ತು ರಿತಿ ಪಾಠಕ್, ರಾಜಸ್ಥಾನದಿಂದ ದಿಯಾ ಕುಮಾರಿ ಮತ್ತು ರಾಜ್ಯವರ್ಧನ್ ಸಿಂಗ್ ರಾಥೋಡ್ ಮತ್ತು ಛತ್ತೀಸ್‌ಗಢದಿಂದ ಗೋಮತಿ ಸಾಯಿ ಮತ್ತು ಅರುಣ್ ಸಾವ್. ರಾಜ್ಯಸಭಾ ಸಂಸದ ಕಿರೋಡಿ ಲಾಲ್ ಮೀನಾ ಕೂಡ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅಂಗೀಕರಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಬರ ಪರಿಹಾರಕ್ಕೆ ಇನ್ನೆರಡು ದಿನಗಳಲ್ಲಿ ಮಾನದಂಡ ಬಿಡುಗಡೆ: ಚೆಲುವರಾಯಸ್ವಾಮಿ

    ಕೇಂದ್ರ ಸಚಿವ ಸ್ಥಾನಕ್ಕೆ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರೇಣುಕಾ ಸಿಂಗ್ ಸರೂತಾ ನೀಡಿದ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅಂಗೀಕರಿಸಿದ್ದಾರೆ. ಖಾಲಿಯಾದ ಸಚಿವ ಸ್ಥಾನಗಳ ಪೈಕಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಉಸ್ತುವಾರಿಯನ್ನು ಅರ್ಜುನ್ ಮುಂಡಾ ಅವರಿಗೆ, ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಜವಬ್ದಾರಿಯನ್ನು ಶೋಭಾ ಕರಂದ್ಲಾಜೆ ಅವರಿಗೆ ವಹಿಸಲಾಗಿದೆ. ಇದನ್ನೂ ಓದಿ: ಮೂರು ರಾಜ್ಯಗಳ ಮುಖ್ಯಮಂತ್ರಿ ಆಯ್ಕೆಗೆ ವೀಕ್ಷಕರ ನೇಮಿಸಿದ ಹೈಕಮಾಂಡ್

    ಅಲ್ಲದೇ ಜಲ ಶಕ್ತಿ ಸಚಿವಾಲಯದ ರಾಜ್ಯ ಸಚಿವರ ಉಸ್ತುವಾರಿಯನ್ನು ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ, ಬುಡಕಟ್ಟು ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರ ಉಸ್ತುವಾರಿಯನ್ನು ಡಾ. ಭಾರತಿ ಪ್ರವೀಣ್ ಪವಾರ್ ದ್ರೌಪದಿ ಮುರ್ಮು ವಹಿಸಿದ್ದಾರೆ. ತಮ್ಮ ಖಾತೆಗಳ ಜೊತೆಗೆ ಹೆಚ್ಚುವರಿ ನಿಭಾಯಿಸಲು ನಿರ್ದೇಶಿಸಿದ್ದಾರೆ. ಇದನ್ನೂ ಓದಿ: ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸ್ರಲ್ಲಿ ಕಮಿಷನ್‌ ಹಗರಣ – ಸದನದಲ್ಲಿ ಯತ್ನಾಳ್‌ ಬಾಂಬ್‌

  • ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ

    ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ

    ನವದೆಹಲಿ: ಇತ್ತೀಚಿಗಷ್ಟೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ (Assembly Election) ಫಲಿತಾಂಶ ಹೊರಬಿದ್ದಿದ್ದು, ಅದರಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾದ 10 ಮಂದಿ ಬಿಜೆಪಿ ಸಂಸದರು (MP) ಬುಧವಾರ ತಮ್ಮ ಸಂಸತ್ ಸ್ಥಾನಗಳಿಗೆ ರಾಜೀನಾಮೆ (Resignation) ನೀಡಿದ್ದಾರೆ.

    ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ (JP Nadda) ಅವರ ನೇತೃತ್ವದಲ್ಲಿ ಸಂಸದರು ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದು, ಶಾಸಕರಾಗಿ ಮುಂದುವರೆಯಲಿದ್ದಾರೆ. ಮಧ್ಯಪ್ರದೇಶದಿಂದ (Madhya Pradesh)  ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್, ರಿತಿ ಪಾಠಕ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಸ್ಥಾನದಿಂದ (Rajasthan) ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ ರಾಜೀನಾಮೆ ನೀಡಿದ್ದಾರೆ. ಇನ್ನೂ ಛತ್ತೀಸ್‌ಗಢದಿಂದ (Chattisgarh) ಅರುಣ್ ಸಾವೊ ಮತ್ತು ಗೋಮತಿ ಸಾಯಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ: ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ- ಏಮ್ಸ್ ವೈದ್ಯರಿಂದ ಹೊಸ ವರದಿ

    ಬಾಬಾ ಬಾಲಕನಾಥ್ ಮತ್ತು ರೇಣುಕಾ ಸಿಂಗ್ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ. ಇವರಿಬ್ಬರು ಶೀಘ್ರದಲ್ಲೇ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಧಾನಸಭಾ ಚುನಾವಣೆಯಲ್ಲಿ ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಬಹುಮತಗಳನ್ನು ಪಡೆದು ಕಾಂಗ್ರೆಸ್ ಅನ್ನು ಮಣಿಸಿ ಸರ್ಕಾರ ರಚಿಸಲು ಸಿದ್ಧವಾಗಿದೆ. ಈ ರಾಜ್ಯಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಈ ನಡುವೆಯೇ ಸಂಸದರು ರಾಜೀನಾಮೆ ನೀಡಿದ್ದಾರೆ. ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ (Telangana) ಮುಖ್ಯಮಂತ್ರಿಗಳು ತಮ್ಮ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಇದನ್ನೂ ಓದಿ: ABVPಯಿಂದ ತೆಲಂಗಾಣ ಸಿಎಂ ಹುದ್ದೆಯವರೆಗೆ – ರೇವಂತ್ ರೆಡ್ಡಿ ಹಿನ್ನೆಲೆ ಏನು?

  • ಸಿದ್ಧಾಂತದ ಕದನ ಮುಂದುವರಿಯುತ್ತದೆ: 3 ರಾಜ್ಯಗಳಲ್ಲಿ ಸೋಲಿನ ಬಳಿಕ ರಾಹುಲ್ ಪ್ರತಿಕ್ರಿಯೆ

    ಸಿದ್ಧಾಂತದ ಕದನ ಮುಂದುವರಿಯುತ್ತದೆ: 3 ರಾಜ್ಯಗಳಲ್ಲಿ ಸೋಲಿನ ಬಳಿಕ ರಾಹುಲ್ ಪ್ರತಿಕ್ರಿಯೆ

    ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ (Five State Elections) 4 ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಈ 4 ರಾಜ್ಯಗಳ ಪೈಕಿ 3 ರಾಜ್ಯಗಳಲ್ಲಿ ಕಾಂಗ್ರೆಸ್ (Congress) ಭಾರೀ ಸೋಲನ್ನು ಎದುರಿಸಿದೆ. ಈ ಹಿನ್ನೆಲೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಜನಾದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಆದರೆ ಸಿದ್ಧಾಂತದ ಕದನ ಮುಂದುವರಿಯುತ್ತದೆ ಎಂದಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ರಾಗಾ, ನಾವು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಜನಾದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ಸಿದ್ಧಾಂತದ ಕದನ ಮುಂದುವರಿಯುತ್ತದೆ. ತೆಲಂಗಾಣದ ಜನತೆಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಪ್ರಜಾಳು ತೆಲಂಗಾಣ ಮಾಡುವ ಭರವಸೆಯನ್ನು ನಾವು ಖಂಡಿತ ಈಡೇರಿಸುತ್ತೇವೆ. ಅವರ ಶ್ರಮ ಮತ್ತು ಬೆಂಬಲಕ್ಕಾಗಿ ಎಲ್ಲಾ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೂರು ರಾಜ್ಯಗಳ ಜನಾದೇಶ ಲೋಕಸಭೆಯ ಹ್ಯಾಟ್ರಿಕ್‌ ಗೆಲುವಿನ ಗ್ಯಾರಂಟಿ: ಮೋದಿ ಭರವಸೆ

    ಪಂಚರಾಜ್ಯ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ತೆಲಂಗಾಣದಲ್ಲಿ ಬಿಆರ್‌ಎಸ್ ಪಕ್ಷ ಸತತ 3ನೇ ಬಾರಿ ಅಧಿಕಾರಕ್ಕೇರುವುದನ್ನು ತಡೆದು ಕಾಂಗ್ರೆಸ್ ಗೆದ್ದಿದೆ. ಬಾಕಿ ಉಳಿದಿರುವ ಮಿಜೋರಾಂ ರಾಜ್ಯದ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಇದನ್ನೂ ಓದಿ: ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿದ್ದರಾಮಯ್ಯ

  • ಮಿಜೋರಾಂ ಚುನಾವಣೆ; ಮತ ಎಣಿಕೆ ದಿನಾಂಕ ಮುಂದೂಡಿಕೆ

    ಮಿಜೋರಾಂ ಚುನಾವಣೆ; ಮತ ಎಣಿಕೆ ದಿನಾಂಕ ಮುಂದೂಡಿಕೆ

    – ಡಿ.4 ರಂದು ಫಲಿತಾಂಶ ಪ್ರಕಟ: ಚುನಾವಣಾ ಆಯೋಗ

    ನವದೆಹಲಿ: ಮಿಜೋರಾಂ (Mizoram) ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಡಿಸೆಂಬರ್ 3 (ಭಾನುವಾರ) ರಿಂದ ಡಿಸೆಂಬರ್ 4 (ಸೋಮವಾರ)ಕ್ಕೆ ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ (Election Commission) ಶುಕ್ರವಾರ ಪ್ರಕಟಿಸಿದೆ.

    ಮಿಜೋರಾಂನಲ್ಲಿ ಮತ ಎಣಿಕೆಯ ದಿನದ ಬದಲಾವಣೆಗಾಗಿ ವಿವಿಧ ವಲಯಗಳಿಂದ ಮನವಿ ಸಲ್ಲಿಕೆಯಾಗಿತ್ತು. ಅದನ್ನು ಪರಿಗಣಿಸಿ ಆಯೋಗ ಮತ ಎಣಿಕೆ ದಿನಾಂಕ ಬದಲಾವಣೆಯನ್ನು ಘೋಷಿಸಿತು. ಇದನ್ನೂ ಓದಿ: ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಆಟ

    ಕ್ರಿಶ್ಚಿಯನ್‌ ಸಮುದಾಯದವರೇ ಹೆಚ್ಚಿರುವ ಮಿಜೋರಾಂನ ಜನರಿಗೆ ಡಿಸೆಂಬರ್ 3 ರ ಭಾನುವಾರ ವಿಶೇಷ ದಿನವಾಗಿದೆ. ಈ ಪ್ರಾತಿನಿಧ್ಯ ಪರಿಗಣಿಸಿದ ಆಯೋಗವು ಮತ ಎಣಿಕೆ ದಿನಾಂಕವನ್ನು ಡಿ.4 ಕ್ಕೆ ಬದಲಾಯಿಸಲು ನಿರ್ಧರಿಸಿದೆ.

    ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಮತದಾನ ನಡೆದಿದ್ದು, ಡಿಸೆಂಬರ್ 4 ರಂದು ಮತ ಎಣಿಕೆ ನಡೆಯಲಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ 5 ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಡಿಸೆಂಬರ್ 3 ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗವು ಈ ಹಿಂದೆ ಪ್ರಕಟಿಸಿತ್ತು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲುವು – ಇದು ಟುಡೇಸ್‌ ಚಾಣಕ್ಯ ಭವಿಷ್ಯ

  • ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಆಟ

    ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಆಟ

    ನವದೆಹಲಿ: ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಮೊದಲ ಹಂತದಲ್ಲೇ ಎಂದರೆ ನವೆಂಬರ್ 7 ರಂದೇ ಎಲ್ಲಾ 40 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. 80.66% ರಷ್ಟು ಮತದಾನವಾಗಿತ್ತು. ಇಲ್ಲಿ ಸದ್ಯ ಬಿಜೆಪಿ ಬೆಂಬಲಿತ ಮಿಜೋ ನ್ಯಾಷನಲ್ ಫ್ರಂಟ್ (MNF) ಸರ್ಕಾರವಿದೆ. ಈ ಬಾರಿಯ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಎಂಎನ್‌ಎಫ್, ಅಧಿಕಾರ ಕೈಗೆಟುಕಿಸಿಕೊಳ್ಳಲು ಕಾಂಗ್ರೆಸ್ ಮತ್ತು ಹೊಸ ಪಕ್ಷವಾದ ಜೋರಂ ಪೀಪಲ್ಸ್ ಮೂವ್‌ಮೆಂಟ್ (ZPM) ಪ್ರತ್ಯೇಕವಾಗಿ ಕಸರತ್ತು ಮಾಡಿವೆ.

    ಮಣಿಪುರ ಹಿಂಸಾಚಾರ ಇಲ್ಲಿನ ಚುನಾವಣೆಯಲ್ಲಿ ಪರಿಣಾಮ ಬೀರಿದಂತೆ ಕಾಣಿಸಿಕೊಂಡಿದೆ. ಮತ್ತೆ ಪ್ರಾದೇಶಿಕ ಪಕ್ಷಗಳೇ ಇಲ್ಲಿ ಮೇಲುಗೈ ಸಾಧಿಸಿದಂತೆ ಕಂಡು ಬಂದಿದೆ. ಯಾವುದೇ ಪಕ್ಷಕ್ಕೆ ಬಹುಮತ ಬರೋದು ಅನುಮಾನವಾಗಿದ್ದರೂ ಹೊಸ ಪಕ್ಷವಾದ ಝಡ್‌ಪಿಎಂ ಜೊತೆ ಅಧಿಕಾರದಲ್ಲಿರೋ ಎಂಎನ್‌ಎಫ್‌ಗೆ ಟಫ್ ಸ್ಪರ್ಧೆಯಿದೆ.

    ಯಾವ ಸಮೀಕ್ಷೆ ಏನು ಹೇಳಿದೆ?
    ಒಟ್ಟು 40 ಕ್ಷೇತ್ರಗಳಲ್ಲಿ ಸರಳ ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ.
    ಜನ್‌ಕಿ ಬಾತ್: ಎಂಎನ್‌ಎಫ್ 10-14, ಕಾಂಗ್ರೆಸ್ 05-09, ಬಿಜೆಪಿ 00-02, ಝಡ್‌ಪಿಎಂ 15-25
    ಸಿ-ವೋಟರ್: ಎಂಎನ್‌ಎಫ್ 15-21, ಕಾಂಗ್ರೆಸ್ 02-08, ಬಿಜೆಪಿ 0-5, ಝಡ್‌ಪಿಎಂ 12-18
    ಇಂಡಿಯಾ ಟಿವಿ: ಎಂಎನ್‌ಎಫ್ 14-18, ಕಾಂಗ್ರೆಸ್ 08-10, ಬಿಜೆಪಿ 0-2, ಝಡ್‌ಪಿಎಂ 12-16
    ಪೀಪಲ್ಸ್ ಪಲ್ಸ್: ಎಂಎನ್‌ಎಫ್ 16-20, ಕಾಂಗ್ರೆಸ್ 08-10, ಬಿಜೆಪಿ 0-2, ಝಡ್‌ಪಿಎಂ 12-17
    ಆಕ್ಸಿಸ್ ಮೈ ಇಂಡಿಯಾ: ಎಂಎನ್‌ಎಫ್ 3-7, ಕಾಂಗ್ರೆಸ್ 0-4, ಬಿಜೆಪಿ 0-2, ಝಡ್‌ಪಿಎಂ 28-35 ಇದನ್ನೂ ಓದಿ: ರಾಜಸ್ಥಾನದಲ್ಲಿ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ

    ಮಿಜೋರಾಂನಲ್ಲಿ 2018ರ ಚುನಾವಣೆಯಲ್ಲಿ ಎಂಎನ್‌ಎಫ್ 26 ಸ್ಥಾನಗಳು(37.6% ಮತ), ಕಾಂಗ್ರೆಸ್ 5 ಸ್ಥಾನಗಳು (29.98% ಮತ) ಹಾಗೂ ಬಿಜೆಪಿ 1 ಸ್ಥಾನವನ್ನು (8.1% ಮತ) ಗೆದ್ದಿತ್ತು. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ

  • ಅಲ್ಲಿ ಝೆಲೆನ್ಸ್ಕಿ ಇಲ್ಲಿ ಮಾನ್ – ಒಂದೇ ಹಿನ್ನೆಲೆಯ ರಾಜಕಾರಣಿಗಳು ಟ್ವಿಟ್ಟರ್‌ನಲ್ಲಿ ಟ್ರೆಂಡ್

    ಅಲ್ಲಿ ಝೆಲೆನ್ಸ್ಕಿ ಇಲ್ಲಿ ಮಾನ್ – ಒಂದೇ ಹಿನ್ನೆಲೆಯ ರಾಜಕಾರಣಿಗಳು ಟ್ವಿಟ್ಟರ್‌ನಲ್ಲಿ ಟ್ರೆಂಡ್

    ನವದೆಹಲಿ: ಉಕ್ರೇನ್‌ನಲ್ಲಿ ರಷ್ಯಾ ದಾಳಿ ಮಾಡಿದಂತೆ ಅಲ್ಲಿನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸಾಮಾಜಿಕ ಮಾಧ್ಯಮಗಳಲ್ಲೆಲ್ಲಾ ಹರಿದಾಡಿ ಸುದ್ದಿಯಾದರು. ಇದೀಗ ಪಂಜಾಬ್‌ನಲ್ಲಿ ಚುನಾವಣೆ ಗೆಲ್ಲುತ್ತಿದ್ದಂತೆ ಆಮ್ ಆದ್ಮಿ ಪಾರ್ಟಿ(ಎಎಪಿ) ಅಭ್ಯರ್ಥಿ ಭಗವಂತ್ ಮಾನ್ ಪಂಜಾಬ್‌ನ ಝೆಲೆನ್ಸ್ಕಿ ಎಂದೇ ಟ್ರೆಂಡ್ ಆಗುತ್ತಿದ್ದಾರೆ.

    ಝೆಲೆನ್ಸ್ಕಿಗೂ ಮಾನ್‌ಗೂ ಏನು ಸಂಬಂಧ ಎಂದು ಹಲವರಲ್ಲಿ ಪ್ರಶ್ನೆ ಕಾಡುತ್ತಿದೆ. ಇವರಿಬ್ಬರಿಗೂ ಸಂಬಂಧ ಇಲ್ಲದಿದ್ದರೂ ಒಂದೇ ಹಿನ್ನೆಲೆಯಿಂದ ರಾಜಕೀಯಕ್ಕೆ ಪ್ರವೇಶಿಸಿರುವುದರಿಂದ ಇವರಿಬ್ಬರನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಹೋಲಿಕೆ ಮಾಡಲಾಗುತ್ತಿದೆ. ಇದನ್ನೂ ಓದಿ: ಪಂಜಾಬ್‍ನಲ್ಲಿ `ಆಪ್’ ಸುನಾಮಿಗೆ ಕಾಂಗ್ರೆಸ್ ತತ್ತರ- ಚನ್ನಿ, ಸಿಧು, ಕ್ಯಾಪ್ಟನ್‍ಗೆ ಹೀನಾಯ ಸೋಲು

    ಹೌದು, ರಷ್ಯಾ ಉಕ್ರೇನ್ ಯುದ್ಧಕ್ಕೂ ಮೊದಲು ಝೆಲೆನ್ಸ್ಕಿ ಹೆಸರನ್ನೂ ಕೇಳಿರದವರು ಆತ ಒಬ್ಬ ಹಾಸ್ಯ ನಟನಾಗಿ ಬಳಿಕ ರಾಜಕೀಯಕ್ಕೆ ಪ್ರವೆಶಿಸಿದ್ದ ವಿಷಯ ತಿಳಿದುಕೊಂಡರು. ಈ ವಿಚಾರವಾಗಿ ಭೀಕರ ಯುದ್ಧದ ಮಧ್ಯೆಯೂ ಝೆಲೆನ್ಸ್ಕಿ ಟ್ರೆಂಡ್ ಆಗಿದ್ದರು. ಇದೀಗ ಭಗವಂತ್ ಮಾನ್ ಅವರ ಸರದಿ.

    ಭಗವಂತ್ ಮಾನ್ ಸಹ ರಾಜಕೀಯ ಸೇರುವ ಮೊದಲು ಪಂಜಾಬ್‌ನ ಹಾಗೂ ರಾಷ್ಟ್ರೀಯ ಚ್ಯಾನೆಲ್‌ಗಳಲ್ಲಿ ಹಾಸ್ಯ ಕಾರ್ಯಕ್ರಮವನ್ನು ನೀಡುತ್ತಿದ್ದರು. ಈ ಮೂಲಕ ಜನಪ್ರಿಯತೆ ಗಳಿಸಿ ಮಾನ್ ಬಳಿಕ ರಾಜಕೀಯ ಪ್ರವೇಶಿಸಿದರು. ಇದನ್ನೂ ಓದಿ: ಪಂಜಾಬ್ ನಿಯೋಜಿತ ಸಿಎಂ ಭಗವಂತ್ ಮಾನ್ ನಟ ಹಾಗೂ ಕಾಮಿಡಿ ಕಲಾವಿದ

    ಇದೀಗ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹಾಗೂ ಭಗವಂತ್ ಮಾನ್ ಇಬ್ಬರೂ ಒಂದೇ ಹಿನ್ನೆಲೆಯಿಂದ ರಾಜಕೀಯ ಪ್ರವೆಶಿಸಿರುವುದಾಗಿ ಭಾರೀ ಸುದ್ದಿಯಾಗುತ್ತಿದ್ದಾರೆ. ಪಂಜಾಬ್‌ನ ಚುನಾವಣೆಯಲ್ಲಿ ಭಗವಂತ್ ಮಾನ್ ಭರ್ಜರಿ ಗೆಲುವು ಸಾಧಿಸಿ ಪಂಜಾಬ್‌ನ ಝೆಲೆನ್ಸ್ಕಿ ಎನಿಸಿಕೊಂಡಿದ್ದಾರೆ.

  • BJPಯ ಬಡವರ ಪರ, ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಅನ್ನೋದು ಫಲಿತಾಂಶದಿಂದ ಸಾಬೀತು: ಮೋದಿ

    BJPಯ ಬಡವರ ಪರ, ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಅನ್ನೋದು ಫಲಿತಾಂಶದಿಂದ ಸಾಬೀತು: ಮೋದಿ

    ನವದೆಹಲಿ: ಬಿಜೆಪಿಯ ಬಡವರ ಪರ ಮತ್ತು ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಎಂಬುದನ್ನು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.

    ನಗರದ ಬಿಜೆಪಿ ಹೆಡ್‌ ಕ್ವಾಟ್ರಸ್‌ನಲ್ಲಿ ಮಾತನಾಡಿದ ಅವರು, ಮಾ.10ರಿಂದ ಹೋಳಿ ಆರಂಭವಾಗಲಿದೆ ಎಂದು ನಾವು ಮೊದಲೇ ಹೇಳಿದ್ದೆವು. ಇದು ನಮ್ಮ ಎನ್‌ಡಿಎ ಕಾರ್ಯಕರ್ತರ ʼವಿಜಯ 4′. ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ, ಬಿಜೆಪಿಗೆ ವಿಜಯವನ್ನು ಖಚಿತಪಡಿಸಿದ್ದಕ್ಕಾಗಿ ನಾನು ಎಲ್ಲಾ ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದೇ ಮೊದಲ ಬಾರಿಗೆ ಎರಡನೇ ಅವಧಿಗೆ ಸಿಎಂ ಆಯ್ಕೆಯಾಗಿದ್ದಾರೆ (ಯೋಗಿ ಆದಿತ್ಯನಾಥ್‌) ಎಂದು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: EVMಗಳಲ್ಲಿ ಸಮಸ್ಯೆಯಿಲ್ಲ, ಜನರ ತಲೆಯೊಳಗಿನ ಚಿಪ್ಪಿನಲ್ಲಿ ಸಮಸ್ಯೆಯಿದೆ: ಫಲಿತಾಂಶದ ಬಗ್ಗೆ ಓವೈಸಿ ಪ್ರತಿಕ್ರಿಯೆ

    ಈ ಚುನಾವಣೆಗಳಲ್ಲಿ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ನಮಗೆ ಆಶೀರ್ವಾದ ಮಾಡಿದ್ದಾರೆ. ಮಹಿಳಾ ಮತದಾರರು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ನಾವು ಅದ್ಭುತವಾಗಿ ಗೆದ್ದಿದ್ದೇವೆ. ಈ ವಿಜಯದಲ್ಲಿ ನಮ್ಮ ನಾರಿ ಶಕ್ತಿ ನಮ್ಮ ಪಾಲುದಾರರಾಗಿದ್ದಾರೆ ಎಂದು ಸ್ಮರಿಸಿದ್ದಾರೆ.

    ಗೋವಾದಲ್ಲಿ ಎಲ್ಲಾ ಎಕ್ಸಿಟ್‌ ಪೋಲ್‌ಗಳು ತಪ್ಪು ಎಂಬುದು ಸಾಬೀತಾಗಿದೆ. ಉತ್ತರಾಖಂಡದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಪಕ್ಷವೊಂದು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದೆ ಎಂದು ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತು ಪ್ರಧಾಣಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಜನರು ರಾಷ್ಟ್ರೀಯತೆ, ಅಭಿವೃದ್ಧಿ ಮತ್ತು ಉತ್ತಮ ಆಡಳಿತವನ್ನ ಗೆಲ್ಲಿಸಿದ್ದಾರೆ: ಯೋಗಿ

    ನಾವು 2019ರಲ್ಲಿ (ಕೇಂದ್ರ) ಸರ್ಕಾರವನ್ನು ರಚಿಸಿದಾಗ, 2017ರ (ಯುಪಿ ಗೆಲುವು) ಗೆಲುವಿನಿಂದಾಗಿ ಎಂದು ತಜ್ಞರು ಹೇಳಿದ್ದರು. 2022ರ ಯುಪಿ ಚುನಾವಣಾ ಫಲಿತಾಂಶವೂ 2024ರ ಸಾರ್ವತ್ರಿಕ ಚುನಾವಣೆ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅದೇ ತಜ್ಞರು ಹೇಳುತ್ತಾರೆಂದು ನಾನು ನಂಬುತ್ತೇನೆ ಎಂದು ತಿಳಿಸಿದ್ದಾರೆ.

    ಇಂದು ನಾನು ನನ್ನ ಕೆಲವು ಕಾಳಜಿಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ಸಾಮಾನ್ಯ ಜನರು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಕೆಲವರು ರಾಜಕೀಯದ ಗುಣಮಟ್ಟವನ್ನು ಕುಂಠಿತಗೊಳಿಸುತ್ತಿದ್ದಾರೆ. ನಮ್ಮ ಲಸಿಕಾ ಕಾರ್ಯಕ್ರಮವನ್ನು ಜಗತ್ತು ಹೊಗಳಿತು. ಆದರೆ ಕೆಲವರು ನಮ್ಮ ಲಸಿಕೆಗಳನ್ನೇ ಪ್ರಶ್ನಿಸಿದರು ಎಂದು ಪ್ರತಿಪಕ್ಷಗಳ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್

    ಪಂಜಾಬ್‌ನಲ್ಲಿ ಬಿಜೆಪಿ ಶಕ್ತಿಯಾಗಿ ಹೊರಹೊಮ್ಮುತ್ತಿರುವುದನ್ನು ನಾನು ಈಗಾಗಲೇ ನೋಡುತ್ತಿದ್ದೇನೆ. ನಮ್ಮ ಪಂಜಾಬ್‌ ಕಾರ್ಯಕರ್ತರು ಕಷ್ಟದ ಸಂದರ್ಭಗಳ ನಡುವೆಯೂ ಪಂಜಾಬ್‌ನಲ್ಲಿ ತಮ್ಮ ಕೆಲಸದಿಂದ ಪಕ್ಷ ಹೆಮ್ಮೆಪಡುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

    ಸಾವಿರಾರು ಭಾರತೀಯ ವಿದ್ಯಾರ್ಥಿಗಳು, ಭಾರತೀಯ ಪ್ರಜೆಗಳು ಉಕ್ರೇನ್‌ನಲ್ಲಿ ಸಿಲುಕಿರುವಾಗಲೂ ದೇಶದ ನೈತಿಕ ಸ್ಥೈರ್ಯವನ್ನು ಮುರಿಯುವ ಮಾತುಗಳು ನಡೆದಿರುವುದು ದುರದೃಷ್ಟಕರ. ಈ ಜನರು ಸಹ ʼಆಪರೇಷನ್‌ ಗಂಗಾʼ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದರು. ಇದು ಭಾರತದ ಭವಿಷ್ಯಕ್ಕೆ ದೊಡ್ಡ ಆತಂಕವಾಗಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ, ನಾವು ಕಲಿಯುತ್ತೇವೆ: ರಾಹುಲ್ ಗಾಂಧಿ

    ಯುದ್ಧದಲ್ಲಿ ಹೋರಾಡುತ್ತಿರುವ ರಾಷ್ಟ್ರಗಳೊಂದಿಗೆ (ರಷ್ಯಾ-ಉಕ್ರೇನ್)‌ ಭಾರತವು ಆರ್ಥಿಕ, ರಕ್ಷಣೆ, ಭದ್ರತೆ, ರಾಜಕೀಯ ಸಂಬಂಧಗಳನ್ನು ಹೊಂದಿದೆ. ನಾವು ಸೂರ್ಯಕಾಂತಿ ಎಣ್ಣೆಯಂತಹದ್ದನ್ನೇ ಆಮದು ಮಾಡಿಕೊಳ್ಳುತ್ತೇವೆ. ಕಲ್ಲಿದ್ದಲು, ಅನಿಲ, ಗೊಬ್ಬರಗಳ ಅಂತಾರಾಷ್ಟ್ರೀಯ ಬೆಲೆಗಳು ಪ್ರಪಂಚದಾದ್ಯಂತ ವೇಗವಾಗಿ ಏರುತ್ತಿವೆ ಎಂದು ತಿಳಿಸಿದ್ದಾರೆ.

    ಇದೇ ಮೊದಲ ಬಾರಿಗೆ ಮತದಾರರು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವನ್ನು ಖಚಿತಪಡಿಸಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

  • ಪಂಚರಾಜ್ಯ ಚುನಾವಣೆ ಫಲಿತಾಂಶ ಬಿಜೆಪಿ ಆಡಳಿತಕ್ಕೆ ಸಿಕ್ಕ ಜನಮನ್ನಣೆ: ಜಗದೀಶ್ ಶೆಟ್ಟರ್

    ಪಂಚರಾಜ್ಯ ಚುನಾವಣೆ ಫಲಿತಾಂಶ ಬಿಜೆಪಿ ಆಡಳಿತಕ್ಕೆ ಸಿಕ್ಕ ಜನಮನ್ನಣೆ: ಜಗದೀಶ್ ಶೆಟ್ಟರ್

    ಬೆಂಗಳೂರು: ಪಂಚರಾಜ್ಯ ಚುನಾವಣೆ ಫಲಿತಾಂಶ ಬಿಜೆಪಿ ಆಡಳಿತಕ್ಕೆ ಸಿಕ್ಕ ಜನಮನ್ನಣೆಯಾಗಿದೆ. ಭರ್ಜರಿ ಬಹುಮತದೊಂದಿಗೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂತೋಷ ವ್ಯಕ್ತಪಡಿಸಿದರು.

    ಪಂಚರಾಜ್ಯ ಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ಅವರು, ಸಮಾಜವಾದಿ ಪಕ್ಷವನ್ನು ಜನರು ಸಂಪೂರ್ಣವಾಗಿ ನಂಬಿಲ್ಲ. ಮಣಿಪುರ, ಉತ್ತರಾಖಂಡ ಹಾಗೂ ಗೋವಾ ರಾಜ್ಯಗಳಲ್ಲಿ ಕೂಡ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ. ಕಾಂಗ್ರೆಸ್ ಪಕ್ಷ ಅವನತಿಯ ಘಟ್ಟ ತಲುಪಿದೆ. ಐದು ರಾಜ್ಯಗಳಲ್ಲಿಯೂ ಕೈ ಹೀನಾಯ ಸೋಲು ಕಂಡಿದೆ. ಕಾಂಗ್ರೆಸ್ ಬಿಜೆಪಿಗೆ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲೂ ಕೂಡ ಪರ್ಯಾಯ ಪಕ್ಷವಲ್ಲ ಎಂದು ಸಾಬೀತು ಆಗಿದೆ. ಮತದಾರ ಪ್ರಭುಗಳು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆ, ವಂಶಪಾರಂಪರ್ಯ ರಾಜಕೀಯಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಜನರು ರಾಷ್ಟ್ರೀಯತೆ, ಅಭಿವೃದ್ಧಿ ಮತ್ತು ಉತ್ತಮ ಆಡಳಿತವನ್ನ ಗೆಲ್ಲಿಸಿದ್ದಾರೆ: ಯೋಗಿ 

    ಮಾರ್ಚ್ 10ರ ಬಳಿಕ ದೇಶದ ರಾಜಕೀಯದಲ್ಲಿ ಬದಲಾವಣೆ ಗಾಳಿ ಬೀಸಲಿದೆ ಎಂದು ಬಹಳ ಜನರು ಕನಸು ಕಂಡಿದ್ದರು. ಅವರ ಕನಸು ನುಚ್ಚುನೂರಾಗಿದೆ. ಉತ್ತರ ಪ್ರದೇಶದಲ್ಲಿ ಜನರು ಬಿಜೆಪಿ ಆರ್ಶೀವದಿಸಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ ಆಡಳಿತ ಮುಂದುವರಿಯುವ ಸ್ಪಷ್ಟ ಸೂಚನೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ರಾಜಕೀಯ ಪಕ್ಷಗಳು ಸೇರಿದಂತೆ ಹಲವು ಜನರು, ಬಿಜೆಪಿಯನ್ನು ದಲಿತರ ಅಲ್ಪಸಂಖ್ಯಾತರ ವಿರೋಧಿ ಎಂದು ಬಿಂಬಿಸಲು ಪ್ರಯತ್ನಿಸಿದರು. ಇದನ್ನು ಮತದಾರ ಪ್ರಭುಗಳು ತಿರಸ್ಕರಿಸಿದ್ದಾರೆ. ಯೋಗಿ ಆದಿತ್ಯನಾಥ್ ಆಡಳಿತಕ್ಕೆ ಮನ್ನಣೆ ನೀಡಿದ್ದಾರೆ ಎಂದರು.

    ಕಳೆದ ಬಾರಿಗಿಂತಲೂ ಬಿಜೆಪಿ ಈ ಬಾರಿ ಹೆಚ್ಚಿನ ಸೀಟು ಪಡೆಯಲಿದೆ. ಅಖಿಲೇಶ್ ಯಾಧವ್ ಸಮಾಜವಾದಿ ಪಕ್ಷದ ಸೈಕಲ್ ತುಳಿದು, ತುಳಿದು ಬಸವಳಿದ್ದಾರೆ. ಬಿಜೆಪಿ ವಿರುದ್ಧದ ಸುಳ್ಳು ಆರೋಪ ಹಾಗೂ ಅಪಪ್ರಚಾರ ಸಮಾಜವಾದಿ ಪಕ್ಷದ ಸೈಕಲ್ ಪಂಚರ್ ಮಾಡಿವೆ. ಪ್ರಿಯಾಂಕಾ ಗಾಂಧಿ ರಾಲ್ಯಿಗಳು ನೆಪಮಾತ್ರ. ಜನ ವಂಶಪಾರಂಪರ್ಯ ಆಡಳಿತವನ್ನು ವಿರೋಧಿಸಿ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ಅಧಿಕೃತ ವಿರೋಧ ಪಕ್ಷವಾಗಿ ಉಳಿಯುವ ಸಾಧ್ಯತೆಯು ಇಲ್ಲ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಡಿಕೆಶಿ ವಿಮಾನ ಇಳಿಸಲು ರಾಜ್ಯಗಳೇ ಇಲ್ಲ: ಸುನೀಲ್ ಕುಮಾರ್ 

    ಬಿಜೆಪಿಯ ದಕ್ಷ ಆಡಳಿತ ಹಾಗೂ ಅಭಿವೃದ್ಧಿ ಪರ ಚಿಂತನೆಗೆ ಜನರು ಮತ ಚಲಾಯಿಸಿದ್ದಾರೆ. ಐದು ರಾಜ್ಯಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ. ಪಂಜಾಬ್‍ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಸಂಪೂರ್ಣ ಸೋತು ಸುಣ್ಣವಾಗಿದೆ. ಆಮ್ ಆದ್ಮಿ ಪಕ್ಷ ಅಧಿಕಾರ ಹಿಡಿಯಲಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ಆಸ್ತಿತ್ವ ಕಳೆದುಕೊಳ್ಳಲಿದೆ ಎಂದು ಹೇಳಿದರು.

  • ಬಿಜೆಪಿ ಗೆಲುವನ್ನು ಜೀರ್ಣಿಸಿಕೊಳ್ಳುವುದನ್ನು ಕಲಿಯಬೇಕು: ಸಂಜಯ್ ರಾವತ್

    ಬಿಜೆಪಿ ಗೆಲುವನ್ನು ಜೀರ್ಣಿಸಿಕೊಳ್ಳುವುದನ್ನು ಕಲಿಯಬೇಕು: ಸಂಜಯ್ ರಾವತ್

    ಮುಂಬೈ: ಸೋಲನ್ನು ಒಪ್ಪಿಕೊಳ್ಳುವುದು ಕೆಲವೊಮ್ಮೆ ಸುಲಭವಾಗುತ್ತದೆ ಆದರೆ ಬಿಜೆಪಿ ಗೆಲುವನ್ನು ಜೀರ್ಣಿಸಲು ಕಲಿಯಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್‍ನಲ್ಲಿ ಎಎಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಆದರೆ ಕಾಂಗ್ರೆಸ್ ಪಂಚರಾಜ್ಯ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ನಿರ್ವಹಣೆ ಸಾಕಷ್ಟು ಉತ್ತಮವಾಗಿಲ್ಲ ಎಂದು ತಿಳಿಸಿದರು.

    ಅಖಿಲೇಶ್ ಯಾದವ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಎಸ್‍ಪಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ಉತ್ತರಪ್ರದೇಶದ ಸಂಖ್ಯಾಬಲ ಹೆಚ್ಚಾಗುತ್ತಿತ್ತು ಎಂದರು. ಇದನ್ನೂ ಓದಿ: ಗೋವಾಗೂ ಎಂಟ್ರಿ ಕೊಟ್ಟ AAP

    ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲರಿಗೂ ಅಭಿನಂದನೆಯನ್ನು ಸಲ್ಲಿಸಿದ ಅವರು, ಗೋವಾ ಚುನಾವಣೆಗೂ ಮುನ್ನ ಶಿವಸೇನೆ ಹಾಗೂ ಎನ್‍ಸಿಪಿ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದೆವು. ಆದರೆ ಉತ್ತರಪ್ರದೇಶ ಹಾಗೂ ಗೋವಾದಲ್ಲಿ ಶಿವಸೇನೆ ಸೋತಿದೆ. ಇದು ಕೇವಲ ಆರಂಭ. ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ಮಹಾರಾಷ್ಟ್ರದ ಹೊರಗೆ ಹೋರಾಟವನ್ನು ಮುಂದುವರಿಸುತ್ತೇವೆ. ಇದನ್ನೂ ಓದಿ: 16 ಚಿನ್ನದ ಪದಕ ಪಡೆಯುವ ಮೂಲಕ ಹೊಸ ದಾಖಲೆ ಮಾಡಿದ ಚಿನ್ನದ ಹುಡುಗಿ!

  • ಪಂಚರಾಜ್ಯಗಳ ಚುನಾವಣೆಯಲ್ಲಿ ವಿರೋಧ ಪಕ್ಷ ಧೂಳಿಪಟ: ಬೊಮ್ಮಾಯಿ

    ಪಂಚರಾಜ್ಯಗಳ ಚುನಾವಣೆಯಲ್ಲಿ ವಿರೋಧ ಪಕ್ಷ ಧೂಳಿಪಟ: ಬೊಮ್ಮಾಯಿ

    ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಮತದಾರರು ವಿರೋಧ ಪಕ್ಷವನ್ನು ಧೂಳಿಪಟ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಫಲಿತಾಂಶ ಬಂದಿದೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿ ಸಾಧಿಸಿ ಮತ್ತೊಮ್ಮೆ ಸರ್ಕಾರ ರಚಿಸಲು ಜನರ ಆಶೀರ್ವಾದ ಪಡೆದುಕೊಂಡಿದೆ. ಅದರಲ್ಲೂ ವಿಶೇಷವಾಗಿ ಉತ್ತರಪ್ರದೇಶದಲ್ಲಿ ಅತ್ಯಂತ ಹೆಚ್ಚು ಸ್ಥಾನ ಪಡೆದುಕೊಂಡು ಮತ್ತೊಮ್ಮೆ ಮೋದಿ ಯೋಗಿ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರ ಮುನ್ನಡೆಸುವಂತ ಕಾರ್ಯ ಮಾಡುತ್ತದೆ ಎಂದರು. ಇದನ್ನೂ ಓದಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ಗೆ ಸೋಲು

    ಈ ಹಿನ್ನೆಲೆಯಲ್ಲಿ 4 ರಾಜ್ಯದ ಮತದಾರರಿಗೆ, ಮೋದಿ, ಜೆ.ಪಿ. ನಡ್ಡಾ, ಅಮಿತ್ ಶಾ, ಆಯಾ ರಾಜ್ಯದ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೋದಿ ಅವರ ನಾಯಕತ್ವದಲ್ಲಿರುವ ಯೋಜನೆಗಳಾದ ಬಡವರ, ಹೆಣ್ಣು ಮಕ್ಕಳ ಹಾಗೂ ರೈತರ ಪರವಾಗಿ ಇರುವ ಕಾರ್ಯಕ್ರಮಗಳು ಮತ್ತು ಆರ್ಥಿಕ ಸಬಲೀಕರಣ, ಕೋವಿಡ್ ನಿರ್ವಹಣೆಯ ಕೆಲಸವನ್ನು ಜನರು ಮೆಚ್ಚಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬಿಜೆಪಿಗೆ ಗೆಲುವು – 4 ದಾಖಲೆ ಬರೆದ ಸಿಎಂ ಯೋಗಿ

    ಮುಂದಿನ ದಿನಗಳಲ್ಲಿ ನಮ್ಮ ನಾಯಕರು ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ಅವರ ನವಭಾರತ ನಿರ್ಮಾಣದ ಕನಸು ನನಸಾಗುತ್ತದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಬ್ ಕಾ ಪ್ರಯಾಸ್ ಇದು ಅಕ್ಷರಶಃ ನಮ್ಮ ದೇಶದಲ್ಲಿ ಸಾಕಾರಗೊಳ್ಳುತ್ತಿದೆ. ಆತ್ಮ ನಿರ್ಭರ್ ಕನಸು ನನಸು ಮಾಡುತ್ತೇವೆ ಎಂದರು.