Tag: ಪಂಚಾಬ್

  • ಪಂಜಾಬ್ ನಿಯೋಜಿತ ಸಿಎಂ ಭಗವಂತ್ ಮಾನ್ ನಟ ಹಾಗೂ ಕಾಮಿಡಿ ಕಲಾವಿದ

    ಪಂಜಾಬ್ ನಿಯೋಜಿತ ಸಿಎಂ ಭಗವಂತ್ ಮಾನ್ ನಟ ಹಾಗೂ ಕಾಮಿಡಿ ಕಲಾವಿದ

    ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ ಕೆಲ ಕಡೆ ಅಚ್ಚರಿ ಮೂಡಿಸಿದ್ದರೆ, ಕೆಲ ರಾಜ್ಯಗಳಲ್ಲಿ ನಿರೀಕ್ಷಿತ ಫಲದಂತಿದೆ. ಫಲಿತಾಂಶ ಪೂರ್ವ ಬಂದ ಸಮೀಕ್ಷೆಗಳು ಬಹುತೇಕ ಖಚಿತವಾಗಿವೆ. ಅದರಂತೆ ಪಂಜಾಬ್ ನಲ್ಲಿ ಆಮ್ ಆದ್ಮಿ ಪಾರ್ಟಿಯೇ ಅತೀ ಹೆಚ್ಚು ಅಂತರದಿಂದ ಗೆಲುವು ಸಾಧಿಸಿ, ಅಧಿಕಾರ ಚುಕ್ಕಾಣೆ ಹಿಡಿಯಲು ದಿನಗಣನೆ ಶುರುವಾಗಿದೆ. ಇದನ್ನೂ ಓದಿ : ಕಿಕ್ ಏರಿಸಲು ಹೊರಟಿದ್ದ ಸಮಂತಾಗೆ ‘ನೋ ನೋ’ ಅಂದ ಟ್ರೋಲಿಗರು

    ಚುನಾವಣೆ ಮುನ್ನವೇ ಪಂಜಾಬ್ ನ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಎಂದು ಕೇಜ್ರಿವಾಲಾ ಘೋಷಣೆ ಮಾಡಿದ್ದರು. ಅವರ ಮೇಲಿನ ನಂಬಿಕೆ ಸುಳ್ಳಾಗಿಲ್ಲ. ನಿರೀಕ್ಷೆಗಿಂತ ಹೆಚ್ಚೆ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹಾಗಾಗಿ ಭಗವಂತ್ ಮಾನ್ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತ.  ಹಾಗಾದರೆ, ಯಾರು ಈ ಭಗವಂತ್ ಖಾನ್? ಇದನ್ನೂ ಓದಿ : ಮೆಗಾಸ್ಟಾರ್ ಚಿರಂಜೀವಿ ಹೊಸ ಚಿತ್ರದಲ್ಲಿ ಕಮಲ್ ಹಾಸನ್ ಪುತ್ರಿ ಶ್ರುತಿ

    ಸಿನಿಮಾ ಮತ್ತು ಮ್ಯೂಸಿಕ್ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ಭಗವಂತ್. ತೊಂಬತ್ತರ ದಶಕದಿಂದಲೂ ಅವರು ಕಾಮಿಡಿ ಶೋಗಳನ್ನು ಮಾಡುತ್ತಲೇ, ಸಾವಿರಾರು ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದಾರೆ. ಈ ವೇಳೆಯಲ್ಲಿ ಭಗವಂತ್ ಜತೆ ಕಾಣಿಸಿಕೊಳ್ಳುತ್ತಿದ್ದ ಮತ್ತೊಂದು ಹೆಸರು ಖ್ಯಾತ ಕಾಮಿಡಿಯನ್ ಜಗ್ತರ್ ಜಗ್ಗಿ ಅವರದ್ದು. ಭಗವಂತ್ ಮತ್ತು ಜಗ್ತರ್ ಜಗ್ಗಿ ಕಾಮಿಡಿ ಇದ್ದರೆ ಸಾಕು, ನಗೆಹಬ್ಬ ಗ್ಯಾರಂಟಿ ಆಗಿರುತ್ತಿತ್ತು. ಈ ಜೋಡಿ ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ  ಅಮೆರಿಕಾ, ಇಂಗ್ಲೆಂಡ್, ಅರಬ್ ದೇಶಗಳು, ಕೆನಡಾ ಸೇರಿದಂತೆ ವಿದೇಶಗಳಲ್ಲೂ ಇವರು ಸಾಕಷ್ಟು ಕಾಮಿಡಿ ಶೋಗಳನ್ನು ನೀಡಿದ್ದಾರೆ. ಇದನ್ನೂ ಓದಿ : ಇಂದು ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವರ್ಣರಂಜಿತ ತೆರೆ

    ಕಾಮಿಡಿ ಶೋಗಳು ಮಾತ್ರವಲ್ಲ, ತೊಂಬತ್ತರ ದಶಕದಲ್ಲಿ ಭಗವಂತ್ ಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟರು. ಈವರೆಗೂ ಸುಮಾರ 15ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಸಮಾಜ ಸೇವೆಯತ್ತ ಒಲವು ಹೆಚ್ಚಾಗಿದ್ದರಿಂದ ಸಿನಿಮಾ ರಂಗದಿಂದ ದೂರವಾಗಿ ಲೋಕ್ ಲೆಹರ್ ಫೌಂಡೇಷನ್ ಎಂಬ ಎನ್.ಜಿ.ಓ ಸಂಸ್ಥೆಯನ್ನು ಸ್ಥಾಪಿಸಿ ವಿಶೇಷ ಚೇತನ ಮಕ್ಕಳ ಬಾಳಿಗೆ ಬೆಳಕಾದವರು. ಇದನ್ನೂ ಓದಿ : ಮಾ.13ಕ್ಕೆ ಅರಮನೆ ಮೈದಾನದಲ್ಲಿ ಜೇಮ್ಸ್ ಪ್ರೀ ಇವೆಂಟ್, ಹೊಸಪೇಟೆಯಲ್ಲಿ ಸಕ್ಸಸ್ ಸಂಭ್ರಮ

    ಭಗಮಂತ್ ಮಾನ್ ಹುಟ್ಟಿದ್ದು ಪಂಜಾಬ್ ನ ಸಂಗ್ರುರ್ ಜಿಲ್ಲೆಯ ಸತೋಜ್ ಗ್ರಾಮದಲ್ಲಿ. ಹರ್ಪಾಲ್ ಕೌರ್ ಮ್ತು ಮಹಿಂದರ್ ಸಿಂಗ್ ದಂಪತಿಯ ಪುತ್ರ ಇವರು. 17 ಅಕ್ಟೋಬರ್ 1973ರಲ್ಲಿ ಹುಟ್ಟಿರುವ ಭಗವಂತ್, ನಗುತ್ತಲೇ ಭೂಮಿಗೆ ಬಂದರು ಎನ್ನುವ ಮಾತೂ ಜನಜನಿತ. ಇದನ್ನೂ ಓದಿ : ಬೆಂಗಳೂರಿನಿಂದ ಗಡಿಭಾಗಕ್ಕೆ ಆರ್.ಆರ್.ಆರ್ ಅದ್ಧೂರಿ ಕಾರ್ಯಕ್ರಮ ಶಿಫ್ಟ್

    ಕಾಲೇಜು ಶಿಕ್ಷಣ ಮುಗಿಯುತ್ತಿದ್ದಂತೆಯೇ ಕಾಮಿಡಿ ಕ್ಷೇತ್ರಕ್ಕೆ ಕಾಲಿಟ್ಟರು. ಅಲ್ಲಿಂದ ಸಮಾಜ ಸೇವೆಯತ್ತ ಮುಖ ಮಾಡಿದರು. ಅವರು ಮಾಡಿದ ಸಮಾಜ ಸೇವೆಯೇ ಇಂದು ಅವರನ್ನು ಮುಖ್ಯಮಂತ್ರಿ ಸ್ಥಾನದವರೆಗೂ ಕರೆದುಕೊಂಡು ಬಂದಿದೆ.

  • Punjab Election Results 2022: ರಾಷ್ಟ್ರೀಯ ಕಚೇರಿ ಎದುರು ಬ್ಯಾನರ್, ಜಿಲೇಬಿ ರೆಡಿ – ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡ AAP

    Punjab Election Results 2022: ರಾಷ್ಟ್ರೀಯ ಕಚೇರಿ ಎದುರು ಬ್ಯಾನರ್, ಜಿಲೇಬಿ ರೆಡಿ – ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡ AAP

    ಚಂಡೀಗಢ: ಪಂಚರಾಜ್ಯಗಳ ಮತ ಎಣಿಕೆ ಆರಂಭವಾಗಿದೆ. ಇತ್ತ ಪಂಜಾಬ್‍ನಲ್ಲಿ ಗೆಲುವಿನ ವಿಶ್ವಾಸದಲ್ಲಿರುವ ಆಮ್ ಆದ್ಮಿ ಪಕ್ಷ ಗೆಲುವಿನ ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.

    ಪಂಜಾಬ್‍ನಲ್ಲಿ 117 ಕ್ಷೇತ್ರಕ್ಕೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುವ ಮುನ್ನವೇ ಎಎಪಿ ಪಕ್ಷದ ರಾಷ್ಟ್ರೀಯ ಕಚೇರಿಯ ಹೊರಗೆ ಮತದಾರರಿಗೆ ಧನ್ಯವಾದ ಎಂಬ ಬ್ಯಾನರ್ ಅಳವಡಿಸಿಕೊಂಡಿರುವುದು ಕಂಡುಬಂದಿದೆ. ಪಂಜಾಬ್‍ನಲ್ಲಿ ಎಎಪಿಯಿಂದ ಸಿಎಂ ಅಭ್ಯರ್ಥಿಯಾಗಿರುವ ಭಗವಂತ್ ಮಾನ್ ಅವರ ಚಿತ್ರವಿರುವ ಧನ್ಯವಾದಗಳ ಬ್ಯಾನರ್ ಹಾಕಲಾಗಿದ್ದು, ಆದರೆ, ಅದನ್ನು ಬಿಳಿ ಬಟ್ಟೆಯಿಂದ ಮುಚ್ಚಲಾಗಿದೆ. ಇದನ್ನೂ ಓದಿ: ಪಂಜಾಬ್‍ನಲ್ಲಿ ಆಪ್‍ಗೆ ಸಿಗುತ್ತಾ ಅಧಿಕಾರ..?- ಉತ್ತರಾಖಂಡ್, ಮಣಿಪುರ ಕತೆಯೇನು..?

    ಎಕ್ಸಿಟ್ ಪೋಲ್‍ನಲ್ಲಿ ಈ ಬಾರಿ ಎಎಪಿ ಪಂಜಾಬ್‍ನಲ್ಲಿ ಗೆಲುವಿನ ನಗೆ ಬೀರಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಎಎಪಿ ಗೆಲುವಿನ ವಿಶ್ವಾಶದೊಂದಿಗೆ ಕಚೇರಿಯ ಒಳಗೆ ಹೂ, ಬಲೂನ್‍ಗಳಿಂದ ಸಿಂಗರಿಸಲಾಗಿದೆ. ಅಲ್ಲದೆ ಸಂಗ್ರೂರಿನಲ್ಲಿರುವ ಭಗವಂತ್ ಮಾನ್ ಅವರ ನಿವಾಸವನ್ನು ಹೂವುಗಳಿಂದ ಅಲಂಕರಿಸಲಾಗಿದ್ದು, ಬೆಳಗ್ಗೆಯಿಂದಲೇ ಅಲ್ಲಿ ಜಿಲೇಬಿ ತಯಾರಿ ಕೂಡ ನಡೆಯುತ್ತಿದೆ. ಆರಂಭದ ಮತ ಎಣಿಕೆಯಲ್ಲಿ ಎಎಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

  • ಅಭಿನಂದನ್ ಸ್ವಾಗತಿಸಲು ವಾಘಾ ಗಡಿಗೆ ಬನ್ನಿ – ಮೋದಿಗೆ ಪಂಜಾಬ್ ಸಿಎಂ ಮನವಿ

    ಅಭಿನಂದನ್ ಸ್ವಾಗತಿಸಲು ವಾಘಾ ಗಡಿಗೆ ಬನ್ನಿ – ಮೋದಿಗೆ ಪಂಜಾಬ್ ಸಿಎಂ ಮನವಿ

    ನವದೆಹಲಿ: ಪಾಕ್ ವಶದಿಂದ ಮಾತೃ ಭೂಮಿಗೆ ಮರಳುತ್ತಿರುವ ಪೈಲಟ್ ಅಭಿನಂದನ್ ಅವರನ್ನು ಸ್ವಾಗತಿಸಲು ವಾಘಾ ಗಡಿಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

    ಟ್ವೀಟ್ ಮೂಲಕ ಮನವಿ ಸಲ್ಲಿಸಿದ ಅಮರೀಂದರ್ ಸಿಂಗ್ ಅವರು, ಸದ್ಯ ನಾನು ಅಮೃತ್‍ಸರದಲ್ಲಿದ್ದೇನೆ. ಈಗ ಪಂಜಾಬಿನ ಗಡಿ ಪ್ರದೇಶಕ್ಕೆ ಪ್ರಯಾಣ ಬೆಳೆಸುತ್ತಿರುವೆ. ಪೈಲಟ್ ಅಭಿನಂದನ್ ಅವರನ್ನು ವಾಘಾ ಗಡಿಯಿಂದ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಹೇಳಿದೆ. ನಮ್ಮ ರಾಜ್ಯದ ಗಡಿ ಪ್ರದೇಶದಿಂದ ವೀರ ಪೈಲಟ್ ಅಭಿನಂದನ್ ಅವರನ್ನು ಸ್ವಾಗತಿಸಲು ನನಗೆ ಹೆಮ್ಮೆಯಾಗುತ್ತಿದೆ. ನಾನು ಹಾಗೂ ಅಭಿನಂದನ್ ತಂದೆ ಇಬ್ಬರೂ ರಾಷ್ಟ್ರೀಯ ಭದ್ರತಾ ಅಕಾಡೆಮಿಯ (ಎನ್‍ಡಿಎ) ನಿವೃತ್ತ ಉದ್ಯೋಗಿಗಳು ಎಂದು ತಿಳಿಸಿದ್ದಾರೆ.

    ಪೈಲಟ್ ಅಭಿನಂದನ್ ಅವರು ಫೆಬ್ರವರಿ 27ರಂದು ಪಾಕಿಸ್ತಾನ ಸೇನೆಯ ಬಂಧನಕ್ಕೆ ಒಳಗಾಗಿದ್ದರು. ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಗುರುವಾರ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾತನಾಡಿ ಅಭಿನಂದನ್ ಅವರನ್ನು ಶುಕ್ರವಾರ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಹೀಗಾಗಿ ಮಾತೃ ಭೂಮಿಗೆ ಮರಳುತ್ತಿರುವ ಅಭಿನಂದನ್ ಅವರನ್ನು ಸ್ವಾಗತಿಸಲು ಪಂಚಾಬ್‍ನ ವಾಘಾ ಗಡಿಯಲ್ಲಿ ಸಾವಿರಾರು ಜನರು ಸೇರಿದ್ದಾರೆ. ವೀರ ಯೋಧನ ಸ್ವಾಗತಕ್ಕೆ ದೇಶದ ಜನತೆ ಕಾತರದಲ್ಲಿದ್ದಾರೆ.

    ನಮ್ಮ ಬಂಧನದಲ್ಲಿ ಭಾರತೀಯ ಪೈಲಟ್ ಇದ್ದಾರೆ. ಉಭಯ ದೇಶಗಳ ಮಧ್ಯೆ ಶಾಂತಿ ಕಾಪಾಡುವ ಉದ್ದೇಶದಿಂದ ಶುಕ್ರವಾರ ಅವರನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದ ಪಾಕ್ ಸರ್ಕಾರ ಗುರುವಾರ ಸಂಜೆ ಅಧಿಕೃತವಾಗಿ ಮಾಹಿತಿ ನೀಡಿತ್ತು.

    ಪೈಲಟ್ ಅಭಿನಂದನ್ ಅವರ ತಂದೆ ನಿವೃತ್ತ ಏರ್ ಮಾರ್ಷಲ್ ಸಿಂಹಕುಟ್ಟಿ ವರ್ದಮಾನ್ ಸೇರಿದಂತೆ ಸಂಬಂಧಿಕರು ವಾಘಾ ಗಡಿಯಲ್ಲಿ ಅಭಿನಂದನ್ ಅವರ ಆಗಮನಕ್ಕೆ ಕಾಯುತ್ತಿದ್ದಾರೆ. ಹೀಗಾಗಿ ಅಭಿನಂದನ್ ಅವರನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ಅವರು ವಾಘಾ ಗಡಿ ಪ್ರದೇಶಕ್ಕೆ ಬರಬೇಕು ಎಂದು ಪಂಚಾಬ್ ಸಿಎಂ ಅಮರೀಂದರ್ ಸಿಂಗ್ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    https://www.youtube.com/watch?v=V3v7nPlplzo

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪತ್ರಕರ್ತನ ಹತ್ಯೆ ಕೇಸ್- ಗುರ್ಮಿತ್ ಬಾಬಾ ದೋಷಿ

    ಪತ್ರಕರ್ತನ ಹತ್ಯೆ ಕೇಸ್- ಗುರ್ಮಿತ್ ಬಾಬಾ ದೋಷಿ

    ಚಂಡೀಗಢ: ಪತ್ರಕರ್ತರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಛಾ ಸೌಧ ಮುಖ್ಯಸ್ಥ ಗುರ್ಮೀತ್ ಬಾಬಾ ರಹೀಂ ಸಿಂಗ್ ಸೇರಿದಂತೆ ನಾಲ್ವರು ದೋಷಿಗಳೆಂದು ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.

    ದೋಷಿಯಾಗಿರುವ ಅಪರಾಧಿಗಳಿಗೆ ಜನವರಿ 17ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗುತ್ತದೆ ಎಂದು ಸಿಬಿಐ ಕೋರ್ಟ್ ತಿಳಿಸಿದೆ.

    ಪಂಜಾಬ್‍ನ ಸಿರ್ಸಾ ಮೂಲದ ಪತ್ರಕರ್ತ ರಾಮಚಂದ್ರ ಛತ್ರಪತಿ ಅವರನ್ನು 2002ರ ಅಕ್ಟೋಬರ್ ನಲ್ಲಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಒಂದು ವರ್ಷದ ಬಳಿಕ 2003ರಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ 2006ರಲ್ಲಿ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಈ ಮೂಲಕ ತನಿಖೆ ನಡೆಸಿದ ಸಿಬಿಐ ರಾಮಚಂದ್ರ ಛತ್ರಪತಿ ಕೊಲೆಯಾದ 16 ವರ್ಷಗಳ ಬಳಿಕ ನ್ಯಾಯ ದೊರಕಿಸಿಕೊಟ್ಟಿದೆ.

    ಕೊಲೆ ಮಾಡಿದ್ದು ಯಾಕೆ?
    ಪಂಜಾಬ್‍ನ ಸಿರ್ಸಾದಲ್ಲಿರುವ ಡೇರಾ ಸಚ್ಛಾ ಸೌಧದ ಮುಖ್ಯಕಚೇರಿಯಲ್ಲಿ ರಾಮ್ ರಹೀಮ್ ಬಾಬಾ ಮಹಿಳೆಯರನ್ನು ಲೈಂಗಿಕ ಕ್ರಿಯೆಗೆ ಬಳಿಸಿಕೊಳ್ಳುತ್ತಿದ್ದ. ಈ ಕುರಿತು ರಾಮಚಂದ್ರ ಛತ್ರಪತಿ ಅವರು ತಮ್ಮ ಪತ್ರಿಕೆಯಲ್ಲಿ ಸುದ್ದಿಯನ್ನು ಪ್ರಕಟಿಸಿದ್ದರು. ಈ ಸುದ್ದಿಯನ್ನು ನೋಡಿದ್ದ ರಾಮ್ ರಹೀಮ್ ಬಾಬಾ ಹಾಗೂ ಆತನ ಸಹಚರರು 2002ರ ಅಕ್ಟೋಬರ್ ನಲ್ಲಿ ರಾಮಚಂದ್ರ ಛತ್ರಪತಿ ಅವರನ್ನು ಕೊಲೆಗೈದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿತ್ತು.

    ಈಗಾಗಲೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂ 20 ವರ್ಷ ಜೈಲು ಶಿಕ್ಷೆಯಲ್ಲಿದ್ದಾನೆ. ಅತ್ಯಾಚಾರ ಪ್ರಕರಣದ ಕುರಿತು ಆಗಸ್ಟ್ 2017ರಲ್ಲಿ ವಿಚಾರಣೆ ನಡೆಸಿದ ಪಂಚಕುಲಾದ ಸಿಬಿಐ ಕೋರ್ಟ್ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv