Tag: ಪಂಜಾಬಿ ಗಾಯಕ

  • ಸಿಧು ಮೂಸೆವಾಲಾ ಹತ್ಯೆ ಕೇಸ್ – ಅಜರ್‌ಬೈಜಾನ್‌ನಿಂದ ಆರೋಪಿ ಸಚಿನ್ ಬಿಷ್ಣೋಯ್ ಭಾರತಕ್ಕೆ ಹಸ್ತಾಂತರ

    ಸಿಧು ಮೂಸೆವಾಲಾ ಹತ್ಯೆ ಕೇಸ್ – ಅಜರ್‌ಬೈಜಾನ್‌ನಿಂದ ಆರೋಪಿ ಸಚಿನ್ ಬಿಷ್ಣೋಯ್ ಭಾರತಕ್ಕೆ ಹಸ್ತಾಂತರ

    ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ (Sidhu Moose Wala) ಹತ್ಯೆಯ ಆರೋಪಿಗಳಲ್ಲಿ ಒಬ್ಬನಾದ ಸಚಿನ್ ಬಿಷ್ಣೋಯ್‌ನನ್ನು (Sachin Bishnoi) ಅಜರ್‌ಬೈಜಾನ್‌ನ (Azerbaijan) ಬಾಕುದಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ದೆಹಲಿಯ ವಿಶೇಷ ಪೊಲೀಸ್ ಆಯುಕ್ತ ಹರಗೋಬಿಂದರ್ ಸಿಂಗ್ ಧಲಿವಾಲ್ ಹೇಳಿದ್ದಾರೆ.

    ಹತ್ಯೆಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ದರೋಡೆಕೋರ ಸಚಿನ್ ಬಿಷ್ಣೋಯ್‌ನನ್ನು ಬಂಧಿಸಲು ಭದ್ರತಾ ಏಜೆನ್ಸಿಗಳ ತಂಡವನ್ನು ಅಜೆರ್ಬೈಜಾನ್‌ಗೆ ಕಳುಹಿಸಲಾಗಿತ್ತು. ಎರಡು ದೇಶಗಳ ಮಾತುಕತೆ ಬಳಿಕ ಆರೋಪಿಯನ್ನು ದೆಹಲಿ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ.

    ಕುಖ್ಯಾತ ಕ್ರಿಮಿನಲ್ ಲಾರೆನ್ಸ್ ಬಿಷ್ಣೋಯ್ ಸೋದರಳಿಯನಾಗಿರುವ ಸಚಿನ್ ಬಿಷ್ಣೋಯ್ ಕಳೆದ ವರ್ಷ ಮೇನಲ್ಲಿ ಸಿಧು ಮೂಸೆವಾಲಾ ಹತ್ಯೆಯ ಬಳಿಕ ನಕಲಿ ಪಾಸ್‌ಪೋರ್ಟ್ ಬಳಸಿ ಭಾರತದಿಂದ ಪರಾರಿಯಾಗಿ, ತಲೆಮರೆಸಿಕೊಂಡಿದ್ದ. ಇದನ್ನೂ ಓದಿ: ಹರಿಯಾಣದಲ್ಲಿ ನಿಲ್ಲದ ಕೋಮು ಘರ್ಷಣೆ – ನಾಲ್ವರು ಸಾವು; 30 ಕ್ಕೂ ಹೆಚ್ಚು ಮಂದಿಗೆ ಗಾಯ

    ಸಚಿನ್ ಬಿಷ್ಣೋಯ್ ಬಂಧನಕ್ಕೆ ದೆಹಲಿ ಪೊಲೀಸ್ ವಿಶೇಷ ದಳ ಸೋಮವಾರ ರಾತ್ರಿ ಅಜೆರ್ಬೈಜಾನ್ ತಲುಪಿತ್ತು. ಸಹಾಯಕ ಪೊಲೀಸ್ ಕಮಿಷನರ್ ಮತ್ತು ಕೌಂಟರ್ ಇಂಟೆಲಿಜೆನ್ಸ್ ಘಟಕದ ಇಬ್ಬರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಸುಮಾರು ನಾಲ್ವರು ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡಕ್ಕೆ ಬಿಷ್ಣೋಯ್ ಹಸ್ತಾಂತರಿಸುವ ಜವಾಬ್ದಾರಿಯನ್ನು ವಹಿಸಲಾಗಿತ್ತು.

    ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು 2022ರ ಮೇ 29 ರಂದು ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಒಂದು ದಿನದ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಸದಸ್ಯ ಗೋಲ್ಡಿ ಬ್ರಾರ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಸೇಡು ತೀರಿಸಿಕೊಳ್ಳಲು ಕೊಲೆಯನ್ನು ಯೋಜಿಸಿದ್ದಾಗಿ ಒಪ್ಪಿಕೊಂಡಿದ್ದ. ಇದನ್ನೂ ಓದಿ: ಸಿನಿಮಾ ಪೈರಸಿ ಮಾಡಿದರೆ 3 ವರ್ಷ ಜೈಲೂಟ ಫಿಕ್ಸ್: ಸಚಿವ ಠಾಕೂರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಧು ಹತ್ಯೆಯ ಮಾಸ್ಟರ್ ಮೈಂಡ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ

    ಸಿಧು ಹತ್ಯೆಯ ಮಾಸ್ಟರ್ ಮೈಂಡ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ

    ನವದೆಹಲಿ: ಪಂಜಾಬಿ ಖ್ಯಾತ ಗಾಯಕ (Punjabi Singer) ಹಾಗೂ ರಾಜಕಾರಣಿ ಸಿಧು ಮೂಸೆವಾಲಾ (Sidhu Moose Wala) ಹತ್ಯೆಯ ಮಾಸ್ಟರ್ ಮೈಂಡ್ (Mastermind) ಗೋಲ್ಡಿ ಬ್ರಾರ್‌ನನ್ನು (Goldy Brar) ಕ್ಯಾಲಿಫೋರ್ನಿಯಾದಲ್ಲಿ (California) ಬಂಧಿಸಲಾಗಿದೆ. ಸಿಧು ಹತ್ಯೆಯ ಜವಾಬ್ದಾರಿ ಹೊತ್ತಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ ಎಂದು ಭಾರತದ ಗುಪ್ತಚರ ಸಂಸ್ಥೆಯ ಮೂಲಗಳು ತಿಳಿಸಿವೆ.

    ಭಾರತದ ಗುಪ್ತಚರ ಸಂಸ್ಥೆಗಳು ಅಂತಾರಾಷ್ಟ್ರೀಯ ಮೂಲಗಳಿಂದ ಈ ಮಾಹಿತಿಯನ್ನು ಪಡೆದಿವೆ. ಆದರೆ ಗೋಲ್ಡಿ ಬ್ರಾರ್ ಬಂಧನದ ಬಗ್ಗೆ ಕ್ಯಾಲಿಫೋರ್ನಿಯಾ ಸರ್ಕಾರ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

    ಆದರೆ ಭಾರತದ ಗುಪ್ತಚರ ಇಲಾಖೆಗಳಾದ ಆರ್‌ಎಡಬ್ಲ್ಯೂ, ಐಬಿ, ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಮತ್ತು ಪಂಜಾಬ್ ಗುಪ್ತಚರ ಸಂಸ್ಥೆ ಈ ಮಾಹಿತಿಯನ್ನು ಪಡೆದಿರುವುದಾಗಿ ತಿಳಿಸಿವೆ. ಗೋಲ್ಡಿ ಬ್ರಾರ್‌ನನ್ನು ಕ್ಯಾಲಿಫೋರ್ನಿಯಾದಲ್ಲಿ ಪತ್ತೆಹಚ್ಚಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ತಿಳಿಸಿವೆ. ಇದನ್ನೂ ಓದಿ: ಪಾರಿವಾಳ ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ಕರೆಂಟ್ ಶಾಕ್ – ಸ್ಥಿತಿ ಚಿಂತಾಜನಕ

    ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಕೆನಡಾ ಮೂಲದವನಾಗಿದ್ದಾನೆ. ಸಿಧು ಮೂಸೆವಾಲಾ ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದರು. ಈ ಹತ್ಯೆಯ ಮಾಸ್ಟರ್ ಮೈಂಡ್ ಇದೇ ಬ್ರಾರ್ ಎನ್ನಲಾಗಿದೆ.

    ಸಿಧು ಸಾವಿನ ಕೆಲ ದಿನಗಳ ಬಳಿಕ ಬ್ರಾರ್ ಸಿಧು ಹತ್ಯೆಗೆ ತಾನೇ ಕಾರಣ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಿದ್ದ. ಸಿಧು ಬ್ರಾರ್‌ನ ವಿರೋಧಿ ಗ್ಯಾಂಗ್‌ನೊಂದಿಗೆ ಭಾಗಿಯಾಗಿದ್ದರು ಎನ್ನಲಾಗಿದ್ದು, ಈ ಕಾರಣಕ್ಕೆ ಮೂಸೆವಾಲಾ ವಿರುದ್ಧ ಸೇಡು ತೀರಿಸಿಕೊಳ್ಳಲು ಕೊಲೆಯ ಯೋಜನೆ ಹಾಕಿದ್ದಾಗಿ ತಿಳಿಸಿದ್ದ. ಇದನ್ನೂ ಓದಿ: ಪಾಕಿಸ್ತಾನಕ್ಕೆ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಕೊಡಲ್ಲ – ರಷ್ಯಾ

    Live Tv
    [brid partner=56869869 player=32851 video=960834 autoplay=true]

  • ಸಿಧು ಮೂಸೆವಾಲಾ ಹತ್ಯೆ ಹಿಂದೆ ಆಪ್ತ ಸ್ನೇಹಿತರೂ ಸೇರಿದ್ದಾರೆ: ತಂದೆ ಆರೋಪ

    ಸಿಧು ಮೂಸೆವಾಲಾ ಹತ್ಯೆ ಹಿಂದೆ ಆಪ್ತ ಸ್ನೇಹಿತರೂ ಸೇರಿದ್ದಾರೆ: ತಂದೆ ಆರೋಪ

    ಚಂಡೀಗಢ: ಪಂಜಾಬಿ ಖ್ಯಾತ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆಯಾಗಿ 80 ದಿನಗಳು ಕಳೆದಿವೆ. ಅವರ ಹತ್ಯೆಯ ಹಿಂದೆ ಆಪ್ತ ಸ್ನೇಹಿತರು ಹಾಗೂ ರಾಜಕಾರಣಿಗಳ ಕೈವಾಡ ಇದೆ ಎಂದು ಸಿಧು ತಂದೆ ಬಾಲ್ಕರ್ ಸಿಂಗ್ ಭಾನುವಾರ ಆರೋಪಿಸಿದ್ದಾರೆ.

    ಸಿಧು ಮೂಸೆವಾಲಾ ಅತ್ಯಂತ ಕಡಿಮೆ ಸಮಯದಲ್ಲಿ ಜನಪ್ರಿಯತೆ ಗಳಿಸಿದ್ದ. ಇದನ್ನು ಕೆಲವರು ಸಹಿಸಲಾಗದೇ ಕೊಲೆ ಮಾಡಿದ್ದಾರೆ. ಸಿಧು ಹತ್ಯೆ ಹಿಂದೆ ಇರುವ ಆರೋಪಿಗಳ ಹೆಸರನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ ಎಂದು ಬಾಲ್ಕರ್ ಸಿಂಗ್ ತಿಳಿಸಿದ್ದಾರೆ.

    ಹತ್ಯೆ ಹಿನ್ನೆಲೆ ಸರ್ಕಾರವನ್ನು ಸಹ ದಾರಿ ತಪ್ಪಿಸಲಾಗಿತ್ತು. ಕೆಲವರು ತಮ್ಮ ವೃತ್ತಿಜೀವನದ ಎಲ್ಲಾ ವ್ಯವಹಾರಗಳನ್ನು ಅವರ ಮೂಲಕ ಮಾಡಬೇಕೆಂದು ಬಯಸಿದ್ದರು. ಆದರೆ ಸಿಧು ಸ್ವತಂತ್ರರಾಗಿದ್ದರಿಂದ ಇದನ್ನು ಅವರು ಒಪ್ಪಿರಲಿಲ್ಲ. ಇದಕ್ಕಾಗಿ ಸಿಧು ಅವರನ್ನು ಕೊಲ್ಲಲಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ; ಗಡಿಯಲ್ಲಿ ಸಿಹಿ ಹಂಚಿಕೊಂಡು ಶುಭಕೋರಿದ ಭಾರತ-ಪಾಕ್‌ ಸೇನೆ

    ಸಿಧು ಮೂಸೆವಾಲಾ ಅವರ ಭದ್ರತೆಯನ್ನು ರಾಜ್ಯ ಸರ್ಕಾರ ಮೊಟಕುಗೊಳಿಸಿದ ಮರುದಿನ ಎಂದರೆ ಮೇ 29ರಂದು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂಡಿದ್ದರು. ಸಿಧು ಜೊತೆ ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಅವರ ಸೋದರ ಸಂಬಂಧಿ ಹಾಗೂ ಸ್ನೇಹಿತರು ಕೂಡಾ ದಾಳಿಯಲ್ಲಿ ಗಾಯಗೊಂಡಿದ್ದರು.

    ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಅಂಕಿತ್ ಸಿರ್ಸಾ ಜವಾಹರ್ಕೆ ಗ್ರಾಮದಲ್ಲಿ ಸಿಧು ಅವರನ್ನು ಗುಂಡಿಕ್ಕಿ ಕೊಂದಿದ್ದ ಎಂಬುದು ಬಳಿಕ ತಿಳಿದುಬಂದಿತ್ತು. ಸುಮಾರು 19 ಗುಂಡುಗಳನ್ನು ದೇಹಕ್ಕೆ ತಗುಲಿಸಿಕೊಂಡಿದ್ದ ಸಿಧು 15 ನಿಮಿಷಗಳಲ್ಲಿ ಮೃತಪಟ್ಟಿದ್ದರು. ಇದನ್ನೂ ಓದಿ: ಟಿಪ್ಪು ಫ್ಲೆಕ್ಸ್ ಹರಿದ ಪ್ರಕರಣ – ಪುನೀತ್ ಕೆರೆಹಳ್ಳಿ ಬಂಧನ

    Live Tv
    [brid partner=56869869 player=32851 video=960834 autoplay=true]

  • ಸಿಧು ಮೂಸೆವಾಲಾ ಹಂತಕರು ಕಾರಿನಲ್ಲಿ ಗನ್ ಹಿಡಿದು ಸಂಭ್ರಮಿಸಿದ ವೀಡಿಯೋ ವೈರಲ್

    ಸಿಧು ಮೂಸೆವಾಲಾ ಹಂತಕರು ಕಾರಿನಲ್ಲಿ ಗನ್ ಹಿಡಿದು ಸಂಭ್ರಮಿಸಿದ ವೀಡಿಯೋ ವೈರಲ್

    ನವದೆಹಲಿ: ಪಂಜಾಬ್‍ನ ಖ್ಯಾತ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಕೊಂದ ಆರೋಪಿಗಳ ಗ್ಯಾಂಗ್ ಕಾರಿನಲ್ಲಿ ಗನ್‍ಗಳನ್ನು ತೋರಿಸುತ್ತ ಸಂಭ್ರಮಿಸುತ್ತಿರುವ ವೀಡಿಯೋ ಒಂದು ವೈರಲ್ ಆಗುತ್ತಿದೆ.

    ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇಂದು ದೆಹಲಿ ಪೊಲೀಸರ ತಂಡ ಲಾರೆನ್ಸ್ ಬಿಷ್ಣೋಯ್ ಗೋಲ್ಡಿ ಬ್ರಾರ್ ಗ್ಯಾಂಗ್‍ಗೆ ಸೇರಿದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ನಾಲ್ವರ ಪೈಕಿ ಅಂಕಿತ್ ಸಿರ್ಸಾ, ಸಿಧು ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಶೂಟರ್‌ಗಳಲ್ಲಿ ಒಬ್ಬ ಎಂದು ತಿಳಿಸಿದ್ದಾರೆ. ಅಂಕಿತ್ ಸಿರ್ಸಾನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆತನ ಮೊಬೈಲ್‍ನಲ್ಲಿ ಈ ವೀಡಿಯೋ ಕಂಡುಬಂದಿದೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ- ಸಶಸ್ತ್ರಪಡೆಗಳಿಗೆ ಸೇರಲು 10 ಸಾವಿರ ಮಹಿಳಾ ಅಭ್ಯರ್ಥಿಗಳು ನೋಂದಣಿ

    ವೀಡಿಯೋದಲ್ಲಿ ಐವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದು ಪಂಜಾಬಿ ಹಾಡು ಕಾರ್‍ನಲ್ಲಿ ಕೇಳಿಬರುತ್ತಿದ್ದು ಹಾಡಿಗೆ ತಕ್ಕಂತೆ ಕೈನಲ್ಲಿ ಗನ್ ಹಿಡಿದು ಆರೋಪಿಗಳು ಸಂಭ್ರಮಿಸಿದ್ದಾರೆ. ಈ ವೀಡಿಯೋದಲ್ಲಿ ಬಂಧಿತ ಆರೋಪಿ ಅಂಕಿತ್ ಸಿರ್ಸಾ ಕೂಡ ಕಾಣಿಸಿಕೊಂಡಿದ್ದಾನೆ. 18ರ ಹರೆಯದ ಅಂಕಿತ್ ಸಿರ್ಸಾ ಕಳೆದ ರಾತ್ರಿ ದೆಹಲಿಯಬಸ್ ಟರ್ಮಿನಲ್‌ನಲ್ಲಿ ಪೊಲೀಸರಿಗೆ ಸೆರೆ ಸಿಕ್ಕಿದ್ದ.

    ಪಂಜಾಬಿ ಗಾಯಕನ ಹತ್ಯೆಯಲ್ಲಿ ಭಾಗಿಯಾಗಿದ್ದಲ್ಲದೇ, ಅಂಕಿತ್ ಸಿರ್ಸಾ ರಾಜಸ್ಥಾನದಲ್ಲಿ ನಡೆದ 2 ಕೊಲೆ ಯತ್ನ ಪ್ರಕರಣಗಳಲ್ಲೂ ಭಾಗಿಯಾಗಿದ್ದ. ಬಂಧಿತ ಇನ್ನೋರ್ವ ಆರೋಪಿ ಸಚಿನ್ ಭಿವಾನಿ, ಸಿಧು ಮೂಸೆವಾಲಾ ಹತ್ಯಾ ಪ್ರಕರಣದಲ್ಲಿ 4 ಜನ ಶೂಟರ್‌ಗಳಿಗೆ ಆಶ್ರಯ ನೀಡಿದ್ದ ಹಾಗಾಗಿ ಇವರಿಬ್ಬರೊಂದಿಗೆ ಮತ್ತಿಬ್ಬರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯಾ ಪ್ರಕರಣ – ದೆಹಲಿಯಲ್ಲಿ ಗುಂಡು ಹಾರಿಸಿದವನ ಬಂಧನ

    ಮೇ 29ರಂದು ಸಿಧು ಮೂಸೆವಾಲಾ ಅವರನ್ನು ಪಂಜಾಬ್‍ನಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಹತ್ಯೆಗೂ ಹಿಂದಿನ ದಿನ ಮೂಸೆವಾಲಾ ಅವರ ಭದ್ರತೆಯನ್ನು ಪಂಜಾಬ್ ಸರ್ಕಾರ ಹಿಂಪಡೆದುಕೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಸಿಧು ಮೂಸೆವಾಲಾ ಹತ್ಯಾ ಪ್ರಕರಣ – ದೆಹಲಿಯಲ್ಲಿ ಗುಂಡು ಹಾರಿಸಿದವನ ಬಂಧನ

    ಸಿಧು ಮೂಸೆವಾಲಾ ಹತ್ಯಾ ಪ್ರಕರಣ – ದೆಹಲಿಯಲ್ಲಿ ಗುಂಡು ಹಾರಿಸಿದವನ ಬಂಧನ

    ನವದೆಹಲಿ: ಪಂಜಾಬ್‌ನ ಖ್ಯಾತ ಗಾಯಕ ಹಾಗೂ ರಾಜಕಾರಣಿ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಕೊಂದ ಆರೋಪಿಯನ್ನು ದೆಹಲಿ ಪೊಲೀಸರ ವಿಶೇಷ ತಂಡ ಬಂಧಿಸಿದೆ.

    ಸೋಮವಾರ ದೆಹಲಿ ಪೊಲೀಸರ ತಂಡ ಲಾರೆನ್ಸ್ ಬಿಷ್ಣೋಯ್ ಗೋಲ್ಡಿ ಬ್ರಾರ್ ಗ್ಯಾಂಗ್‌ಗೆ ಸೇರಿದ ಇಬ್ಬರು ದರೋಡೆಕೋರರನ್ನು ಬಂಧಿಸಿದ್ದು, ಇಬ್ಬರ ಪೈಕಿ ಅಂಕಿತ್ ಸಿರ್ಸಾ, ಸಿಧು ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಶೂಟರ್‌ಗಳಲ್ಲಿ ಒಬ್ಬ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಿಗ್ 29 ಬದಲಿಸಲು ಮಲೇಷ್ಯಾದ ಮೊದಲ ಆಯ್ಕೆ ಭಾರತದ ತೇಜಸ್

    ಪಂಜಾಬಿ ಗಾಯಕನ ಹತ್ಯೆಯಲ್ಲಿ ಭಾಗಿಯಾಗಿದ್ದಲ್ಲದೇ, ಆರೋಪಿ ಅಂಕಿತ್ ರಾಜಸ್ಥಾನದಲ್ಲಿ ನಡೆದ 2 ಕೊಲೆ ಯತ್ನ ಪ್ರಕರಣಗಳಲ್ಲೂ ಭಾಗಿಯಾಗಿದ್ದ. ಬಂಧಿತ ಇನ್ನೋರ್ವ ಆರೋಪಿ ಸಚಿನ್ ಭಿವಾನಿ, ಸಿಧು ಮೂಸೆವಾಲಾ ಹತ್ಯಾ ಪ್ರಕರಣದಲ್ಲಿ 4 ಜನ ಶೂಟರ್‌ಗಳಿಗೆ ಆಶ್ರಯ ನೀಡಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಿಎಸ್‌ಐ ಅಕ್ರಮ -ADGP ಅಮೃತ್‌ ಪೌಲ್ ಅರೆಸ್ಟ್‌

    ಮೇ 29ರಂದು ಸಿಧು ಮೂಸೆವಾಲಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಹತ್ಯೆಗೂ ಹಿಂದಿನ ದಿನ ಮೂಸೆವಾಲಾ ಅವರ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಸಿಧು ಅವರೊಂದಿಗೆ ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಸೋದರ ಸಂಬಂಧಿ ಹಾಗೂ ಸ್ನೇಹಿತರು ಕೂಡಾ ದಾಳಿಯ ವೇಳೆ ಗಾಯಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮೂಸೆ ವಾಲಾ ಹತ್ಯೆಗೆ ಬಳಸಿದ್ದು ನಿಮಿಷಕ್ಕೆ 1,800 ಬುಲೆಟ್ ಹಾರಿಸುವ ಭಯಾನಕ ರೈಫಲ್- ಇಲ್ಲಿದೆ ಡಿಟೇಲ್ಸ್

    ಮೂಸೆ ವಾಲಾ ಹತ್ಯೆಗೆ ಬಳಸಿದ್ದು ನಿಮಿಷಕ್ಕೆ 1,800 ಬುಲೆಟ್ ಹಾರಿಸುವ ಭಯಾನಕ ರೈಫಲ್- ಇಲ್ಲಿದೆ ಡಿಟೇಲ್ಸ್

    ನವದೆಹಲಿ: ಪಂಜಾಬಿ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಅವರನ್ನು ಭಾನುವಾರ ಮಾನ್ಸಾ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಆದರೆ ಹತ್ಯೆಯಾದ ಒಂದು ದಿನದ ಬಳಿಕ ಮತ್ತೊಂದು ಸ್ಫೋಟಕ ಸತ್ಯ ಬಯಲಾಗಿದೆ.

    ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮೂಸೆವಾಲಾ ಹತ್ಯೆಗೆ 3 ಎಎನ್-94 ರಷ್ಯಾದ ಸೈನ್ಯದಲ್ಲಿ ಬಳಸುವ ಮಾರಣಾಂತಿಕ ರೈಫಲ್ ಅನ್ನು ಬಳಸಲಾಗಿದೆ. ಕೇವಲ 2 ಸುತ್ತಿನಲ್ಲಿ 30 ಗುಂಡುಗಳನ್ನು ಹಾರಿಸಲಾಗಿದೆ. ಮುಖ್ಯವಾಗಿ ಪಂಜಾಬ್‌ನಲ್ಲಿ ನಡೆದ ಗ್ಯಾಂಗ್‌ವಾರ್‌ನಲ್ಲಿ ಇದೇ ಮೊದಲ ಬಾರಿಗೆ ಎಎನ್-94 ಭಯಾನಕ ರೈಫಲ್ ಬಳಕೆಯಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: ಭದ್ರತೆ ವಾಪಸ್: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಗುಂಡಿಕ್ಕಿ ಹತ್ಯೆ

    ಹಂತಕರು ಮೂಸೆ ವಾಲಾ ಅವರನ್ನು ಹತ್ಯೆ ಮಾಡಲು ಮುಂದಾಗಿದ್ದರು. ಆಗ ಅವರ ಭದ್ರತೆಯಲ್ಲಿ ನಿಯೋಜಿಸಲಾದ ಎಕೆ-47 ರೈಫಲ್‌ಗಳೊಂದಿಗೆ ಶಸ್ತ್ರ ಸಜ್ಜಿತ ಕಮಾಂಡೋಗಳನ್ನು ಕಂಡು ಹಿಂದಿರುಗಿದ್ದರು. ನಂತರ ಕೆನಡಾದ ದರೋಡೆಕೋರ ಗೋಲ್ಡಿ ಬ್ರಾರ್‌ನಿಂದ ಎಎನ್-94 ರೈಫಲ್ ಅನ್ನು ತಂದಿದ್ದಾರೆ. ಅದರಿಂದಲೇ ಗುಂಡುಹಾರಿಸಿ ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ಜೂನ್‌ನಲ್ಲಿ ಸಿಧು ಮೂಸೆವಾಲಾ ಕೊನೆಯ ಹಾಡು ಬಿಡುಗಡೆಯಾಗುವ ನಿರೀಕ್ಷೆಯಿದೆ: ಸಲೀಮ್ ಮರ್ಚೆಂಟ್

    AK-47 ಗಿಂತಲೂ ಭಯಾನಕ ರೈಫಲ್: AN-94 ರಷ್ಯಾದ ಆಕ್ರಮಣಕಾರಿ ರೈಫಲ್ ಆಗಿದೆ. ಎಎನ್ ಎಂಬ ಸಂಕ್ಷಿಪ್ತ ರೂಪವು `ಅವ್ಟೊಮತ್ ನಿಕೊನೊವಾ’ ಮಾಡೆಲ್ 1994 ಅನ್ನು ಸೂಚಿಸುತ್ತದೆ. ಎಎನ್-94 ಅನ್ನು ಅದರ ಮುಖ್ಯ ವಿನ್ಯಾಸಕ ಗೆನ್ನಡಿ ನಿಕೊನೊವ್ ಹೆಸರಿಡಲಾಗಿದೆ. ಅವರು ಈ ಹಿಂದೆ ನಿಕೊನೊವ್ ಮೆಷಿನ್ ಗನ್ ಅನ್ನು ವಿನ್ಯಾಸಗೊಳಿಸಿದ್ದರು. 1980 ರಲ್ಲಿ ಎಎನ್-94 ತಯಾರಿಸುವ ಕಾರ್ಯ ಪ್ರಾರಂಭವಾಗಿ 1994 ರಲ್ಲಿ ಪೂರ್ಣಗೊಂಡಿತು. ನಂತರ 1997ರಲ್ಲಿ ರಷ್ಯಾ ಸೈನ್ಯಕ್ಕೆ ಎಎನ್-47 ರೈಫಲ್ ಅನ್ನು ಸೇರಿಸಲಾಯಿತು. ಈಗಲೂ ರಷ್ಯಾ ಸೈನ್ಯ ಇದನ್ನು ಬಳಸುತ್ತಿದೆ. ಕೆಲವು ಶಸ್ತ್ರಾಸ್ತ್ರಗಳ ಅವಶ್ಯಕತೆಗಳನ್ನು ಪೂರೈಸಲು ಇದನ್ನು ಬಳಸಲಾಗುತ್ತಿದೆ ಎಂದು ಸುದ್ದಿ ಮಾಧ್ಯಮಗಳು ವರದಿಮಾಡಿವೆ.

    ಎಎನ್-94 ರೈಫಲ್‌ನ ವಿಶೇಷತೆಗಳೇನು?

    • ಎಎನ್-94 ಒಂದು ಸುತ್ತಿನ ಮೋಡ್‌ನಲ್ಲಿ ನಿಮಿಷಕ್ಕೆ 600 ಗುಂಡುಗಳು ಪೂರ್ಣ ಮೋಡ್‌ನಲ್ಲಿದ್ದರೆ 1,800 ಬುಲೆಟ್‌ಗಳನ್ನು ಹಾರಿಸಬಲ್ಲದು.
    • ಎಕೆ-47 ರೈಫಲ್ 715 ಮೀಟರ್ ವೇಗದಲ್ಲಿ ಗುಂಡು ಹಾರಿದರೆ ಎಎನ್-94 900 ಮೀಟರ್ ವೇಗದಲ್ಲಿ ಅಂದರೆ ಪ್ರತಿ ಸೆಕೆಂಡಿಗೆ 3 ಸಾವಿರ ಅಡಿ ವೇಗದಲ್ಲಿ ಬುಲೆಟ್ ಹಾರುತ್ತದೆ.
    • ಮಾರಣಾಂತಿಕ ರೈಫಲ್ ಆಗಿರುವ ಎಎನ್-94 30 ರಿಂದ 45 ಕಾರ್ಟ್ರಿಡ್ಜ್ ಮ್ಯಾಗಜೀನ್ ಸಾಮರ್ಥ್ಯ ಹೊಂದಿದೆ.
    • ಎಎನ್-94 ಅಸಾಲ್ಟ್ ರೈಫಲ್ 3.85 ಕೆಜಿ ತೂಕವಿದ್ದು, 37.1 ಇಂಚಿನಷ್ಟು ಸ್ಟಾಕ್‌ಬಟ್ ಹಾಗೂ 28.7 ಇಂಚಿನಷ್ಟು ಅಗಲವಿರಲಿದೆ, 15.9 ಇಂಚು ಉದ್ದವಿದೆ.

  • ಕಾಂಗ್ರೆಸ್ ಸೇರ್ಪಡೆ ನಂತ್ರ ರಾಹುಲ್ ಗಾಂಧಿ ಭೇಟಿಯಾದ ಸಿಧು ಮೂಸೆವಾಲಾ

    ಕಾಂಗ್ರೆಸ್ ಸೇರ್ಪಡೆ ನಂತ್ರ ರಾಹುಲ್ ಗಾಂಧಿ ಭೇಟಿಯಾದ ಸಿಧು ಮೂಸೆವಾಲಾ

    ಚಂಡೀಗಢ: ಪಂಜಾಬಿ ಜನಪ್ರಿಯ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಂತೆಯೇ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾದರು.

    ಈ ವೇಳೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಎಐಸಿಸಿ ಪಂಜಾಬ್ ಉಸ್ತುವಾರಿ ಹರೀಶ್ ಚೌಧರಿ ಮತ್ತು ರಾಜ್ಯ ಸಾರಿಗೆ ಸಚಿವ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಉಪಸ್ಥಿತರಿದ್ದರು.

    ನವಜೋತ್ ಸಿಂಗ್ ಸಿಧು ಅವರು ರಾಹುಲ್ ಗಾಂಧಿ ಅವರೊಂದಿಗೆ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಅಣ್ಣನ ತೋಳಿನಲ್ಲಿ ಸಹೋದರರು ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ

    ಗುರುವಾರ ಸಿಧು ಮೂಸೆವಾಲಾ ಅವರು ಚಂಡೀಗಢದಲ್ಲಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ನವಜೋತ್ ಸಿಂಗ್ ಸಿಧು ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಸಿಧು ಮೂಸೆವಾಲಾ ಅವರು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಉದ್ಘಾಟನೆ ವೇಳೆ ಒಡೆದ ತೆಂಗಿನಕಾಯಿಂದ ಬಿರುಕು ಬಿಟ್ಟ 1.16ಕೋಟಿ ರೂ. ವೆಚ್ಚದ ರಸ್ತೆ!

    ಚರಂಜಿತ್ ಸಿಂಗ್ ಚನ್ನಿ ಅವರು ಕೂಡ ತಮ್ಮ ಟ್ವಿಟ್ಟರ್‌ನಲ್ಲಿ ಪ್ರತಿಭಾವಂತ ಸಿಧು ಮೂಸೆವಾಲಾ ಅವರನ್ನು ಕಾಂಗ್ರೆಸ್ ಕುಟುಂಬಕ್ಕೆ ಸ್ವಾಗತಿಸುತ್ತೇನೆ. ಅವರು ತಮ್ಮ ಸಾಮರ್ಥ್ಯದಷ್ಟು ಜನರಿಗೆ ಸೇವೆ ಸಲ್ಲಿಸುತ್ತಾರೆ ಮತ್ತು ಕಾಂಗ್ರೆಸ್ ಬಗ್ಗೆ ಸಂದೇಶವನ್ನು ಸಾರುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಟ್ವೀಟ್ ಮಾಡಿದ್ದಾರೆ.