Tag: ಪಕಿಸ್ತಾನ

  • ಕರ್ತಾರ್‍ಪುರ್ ಕಾರಿಡಾರ್ ಉದ್ಘಾಟನೆ – ಕನ್ನಡವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ

    ಕರ್ತಾರ್‍ಪುರ್ ಕಾರಿಡಾರ್ ಉದ್ಘಾಟನೆ – ಕನ್ನಡವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ

    ನವದೆಹಲಿ: ಕರ್ತಾರ್‍ಪುರ್ ಕಾರಿಡಾರ್‍ಗೆ ತೆರಳುವಾಗ ನಿಮಗೆ ಯಾವ ರೀತಿ ಭಾವನೆಗಳು ಮೂಡುತ್ತವೆಯೋ ಅದೇ ರೀತಿ ನನಗೂ ಆಗುತ್ತದೆ. ಈ ಪುರಸ್ಕಾರ, ಈ ಸನ್ಮಾನ ನಮ್ಮ ಸಂತ ಪರಂಪರೆಯ ಪ್ರಸಾದವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾವನಾತ್ಮಕವಾಗಿ ನುಡಿದಿದ್ದಾರೆ.

    ಕರ್ತಾರ್‍ಪುರ್ ಕಾರಿಡಾರ್ ಉದ್ಘಾಟಿಸಿ ಮಾತನಾಡಿದ ಅವರು, ಈ ಸನ್ಮಾನವನ್ನು ಗುರುನಾನಕ್ ಅವರ ಚರಣಗಳಿಗೆ ಸಮರ್ಪಿಸುತ್ತೇನೆ. ಸೇವಾ ಭಾವವನ್ನು ಇನ್ನೂ ಹೆಚ್ಚು ದಿನಗಳ ಕಾಲ ನೀಡು ಎಂದು ಬೇಡುತ್ತೇನೆ. ನೀವು ಸಹ ಸೇವೆಯನ್ನು ಮಾಡಲು ಅನುಮತಿ ನೀಡಿ. ಕರ್ತಾರ್‍ಪುರ್ ಚೆಕ್‍ಪೋಸ್ಟ್ ಕಾರ್ತಿಕ ಪೂರ್ಣಿಮೆಯ ಪರ್ವದಲ್ಲಿ ತೆರೆಯುತ್ತಿದೆ. ಇದರಿಂದ ದೀಪಾವಳಿ ಇನ್ನೂ ಜಗಮಗಿಸುವಂತಾಗಿದೆ ಎಂದರು.

    ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಭಾರತದ ಯಾತ್ರಾರ್ಥಿಗಳ ಭಾವನೆಯನ್ನು ಗೌರವಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸುತ್ತೇನೆ. ಅಲ್ಲದೆ ಪಾಕಿಸ್ತಾನದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

    ಸಣ್ಣ, ದೊಡ್ಡ ಎಂಬ ಬೇಧವಿಲ್ಲದೆ, ಎಲ್ಲರೂ ಒಂದಾಗಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಗುರುನಾನಕ್ ಅವರು ಹೇಳಿದ್ದಾರೆ. ಗುರುನಾನಕ್ ಅವರ ಜನನ ಕೇವಲ ಮಾನವರ ಉದ್ದಾರಕ್ಕಾಗಿ ಮಾತ್ರವಲ್ಲ, ಕರ್ತಾರ್‍ಪುದಲ್ಲಿ ಜೀವನ ಕಳೆಯುವ ಮೂಲಕ ಪ್ರಕೃತಿಯೊಂದಿಗೆ ಜೀವನ ಸಾಗಿಸಿದ್ದಾರೆ. ಪ್ರಕೃತಿ, ಪರ್ಯಾವರಣ್, ಪ್ರದೂಶಣದ ಮೂಲಕ ಗುರುನಾನಕ್ ಅವರು ಬದುಕಿದ್ದಾರೆ ಎಂದರು.

    ಪ್ರಕೃತಿ ಪರ್ಯಾವರಣವನ್ನು ನಾವು ಇಂದು ಮರೆತಿದ್ದೇವೆ. ಈ ಸಂದರ್ಭದಲ್ಲಿ ಗುರುನಾನಕ್ ಅವರ ಮಾರ್ಗದರ್ಶನಗಳನ್ನು ನೆನೆಯಬೇಕಿದೆ. ಪಂಜಾಬ್ ಪಂಚ ನದಿಗಳ ತಾಣವಾಗಿದೆ. ನೀರು, ಪ್ರಕೃತಿ ವಿಚಾರದಲ್ಲಿ ಗುರುನಾನಕ್ ಅವರನ್ನು ಮಾದರಿಯಾಗಿಸಿಕೊಳ್ಳಬೇಕಿದೆ. ದೇಶ, ವಿದೇಶಗಳಲ್ಲಿ ಕೀರ್ತನೆ, ಪ್ರಾರ್ಥನೆಗಳನ್ನು ನಡೆಸುವ ಮೂಲಕ ಸಿಖ್ ಧರ್ಮದ ಕುರಿತು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಯುನೆಸ್ಕೊಗೆ ಧನ್ಯವಾದ ಸಲ್ಲಿಸುತ್ತೇನೆ. ಗುರುನಾನಕ್ ಅವರ ಪುಸ್ತಕಗಳನ್ನು ವಿವಿಧ ಭಾಷೆಗಳಲ್ಲಿ ಭಾಷಾಂತರವಾಗುತ್ತಿದೆ. ಕನ್ನಡದಲ್ಲಿಯೂ ಅನುವಾದವಾಗುತ್ತಿವೆ. ಇದರಿಂದ ಅವರ ವಿಚಾರಗಳನ್ನು ತಿಳಿಯಲು ಇನ್ನೂ ಪ್ರೋತ್ಸಾಹ ಸಿಕ್ಕಂತಾಗಿದೆ ಎಂದರು.

    ಹೆರಿಟೇಜ್ ಕಾಂಪ್ಲೆಕ್ಸ್, ಮ್ಯೂಸಿಯಂ ನಿರ್ಮಾಣ ಹಾಗೂ ವಿಶೇಷ ರೈಲನ್ನು ಬಿಡುವ ಕುರಿತು ಸಹ ನಿರ್ಧರಿಸಲಾಗುತ್ತಿದೆ. ಇನ್ನೂ ಅನೇಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

    ಕರ್ತಾರ್‍ಪುರ್ ಕಾರಿಡಾರ್‍ಗೆ ಮೊದಲ ಹಂತದ ಯಾತ್ರಾರ್ಥಿಗಳು ಪಾಕಿಸ್ತಾನ ತಲುಪುತ್ತಿದ್ದು, ಮೊದಲ ಹಂತದಲ್ಲಿ 5,000 ಜನರು ಪವಿತ್ರ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.

    ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ್ ಜಿಲ್ಲೆಯಲ್ಲಿನ ಅಂತರಾಷ್ಟ್ರೀಯ ಗಡಿಯಿಂದ ಕೇವಲ ನಾಲ್ಕು ಕಿ.ಮೀ.ದೂರದಲ್ಲಿ ಕರ್ತಾರ್‍ಪುರದ ದರ್ಬಾರ್ ಸಾಹಿಬ್ ಇದೆ. ಈ ಕಾರಿಡಾರ್ ಪಂಜಾಬ್‍ನ ಡೇರಾ ಬಾಬಾ ನಾನಕ್ ದೇಗುಲವನ್ನು ಸಂಪರ್ಕಿಸುತ್ತದೆ. ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ ಜೀವನದ ಕೊನೆಯ 18 ವರ್ಷಗಳನ್ನು ಈ ಸ್ಥಳದಲ್ಲಿ ಕಳೆದಿದ್ದಾರೆ ಎಂಬ ನಂಬಿಕೆ ಇದೆ.

  • ಪಾಕಿಗೆ ವಿಶ್ವಸಂಸ್ಥೆಯಲ್ಲಿ ಮತ್ತೆ ಮುಖಭಂಗ – ‘ಉಗ್ರರು ಚಂದ್ರಲೋಕದಿಂದ ಬರಲ್ಲ, ಪಾಕಿಸ್ತಾನದಿಂದ ಇಳಿಯುತ್ತಾರೆ’

    ಪಾಕಿಗೆ ವಿಶ್ವಸಂಸ್ಥೆಯಲ್ಲಿ ಮತ್ತೆ ಮುಖಭಂಗ – ‘ಉಗ್ರರು ಚಂದ್ರಲೋಕದಿಂದ ಬರಲ್ಲ, ಪಾಕಿಸ್ತಾನದಿಂದ ಇಳಿಯುತ್ತಾರೆ’

    – ಭಾರತದ ನಿರ್ಧಾರ ಸರಿ ಎಂದ ಯುರೋಪಿಯನ್ ಸಂಸತ್
    – ಜಮ್ಮು ಕಾಶ್ಮೀರ ಭಾರತದ ಆಂತರಿಕ ವಿಚಾರ

    ನವದೆಹಲಿ: ಜಮ್ಮು ಕಾಶ್ಮೀರದ ಸಮಸ್ಯೆ ದ್ವಿಪಕ್ಷೀಯವಾದದ್ದು ಎಂದು ವಿಶ್ವಸಂಸ್ಥೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

    ಬುಧವಾರ ಪಾಕಿಸ್ತಾನಿ ಮಾಧ್ಯಮವೊಂದು ಜಮ್ಮು ಕಾಶ್ಮೀರದ ಬಿಕ್ಕಟ್ಟಿನ ಕುರಿತು ಪ್ರಶ್ನಿಸಿದ್ದು, ಇದಕ್ಕೆ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಉತ್ತರಿಸಿ, ಜಮ್ಮು ಕಾಶ್ಮೀರದ ಸಮಸ್ಯೆ ದ್ವಿಪಕ್ಷೀಯವಾದದ್ದು. ಅಲ್ಲದೆ, ಭಾರತ ಪಾಕಿಸ್ತಾನದ ನಡುವಿನ ಸಂವಾದವು ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಅಗತ್ಯ ಅಂಶವಾಗಿದೆ ಎಂದು ತಿಳಿಸಿದ್ದಾರೆ.

    ಕಳೆದವಾರ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಜಮ್ಮು ಕಾಶ್ಮೀರದ ಬಗ್ಗೆ ಭಾರತ ತನ್ನ ನಿಲುವನ್ನು ಪುನರುಚ್ಚರಿಸಿತ್ತು. ಪಾಕಿಸ್ತಾನ ಸುಳ್ಳು ಹಾಗೂ ಉನ್ಮಾದದ ಹೇಳಿಕೆಗಳೊಂದಿಗೆ ಈ ವೇದಿಕೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ತಿಳಿಸಿತ್ತು.

    ನಮ್ಮ ಸಾಮರ್ಥ್ಯವು ಉತ್ತಮ ಆಡಳಿತಕ್ಕೆ ಸಂಬಂಧಿಸಿದೆ. ಉತ್ತಮ ಸಲಹೆಗಳನ್ನು ಸ್ವೀಕರಿಸಿದಾಗ ಮಾತ್ರ ಉತ್ತಮ ಆಡಳಿತವನ್ನು ಕಾರ್ಯಗತಗೊಳಿಸಬಹುದು. ಮತ್ತೊಂದೆಡೆ ವಕಾಲತ್ತು ವಹಿಸುವುದು ಹಾಗೂ ಅದನ್ನು ಕಾಪಾಡಿಕೊಳ್ಳುವುದು ಸಹ ಪ್ರಮುಖ ಅಂಶವಾಗಿದೆ ಎಂದು ಆಂಟೋನಿಯೊ ಗುಟೆರೆಸ್ ತಿಳಿಸಿದ್ದಾರೆ.

    ಭೂಪ್ರದೇಶದಲ್ಲಿ ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಗೌರವಿಸಬೇಕು. ಭಾರತ ಪಾಕಿಸ್ತಾನದ ನಡುವಿನ ಸಂವಾದವು ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಅಗತ್ಯ ಅಂಶವಾಗಿದೆ ಎಂದು ತಿಳಿಸಿದ್ದಾರೆ.

    ಕಳೆದ ವಾರ, ಮಾನವ ಹಕ್ಕುಗಳ ಮಂಡಳಿ ಸಭೆಯಲ್ಲಿ ಕಾಶ್ಮೀರದಲ್ಲಿ ಧ್ವಜಾರೋಹಣ ಮಾಡಲು ಪಾಕಿಸ್ತಾನ ನಡೆಸಿದ ಮತ್ತೊಂದು ಪ್ರಯತ್ನದ ಕುರಿತು ಪ್ರಸ್ತಾಪಿಸಲಾಗಿತ್ತು. ಆಗ ಭಾರತ ಪ್ರತಿಕ್ರಿಯಿಸಿ, ಮಾನವ ಹಕ್ಕುಗಳ ಹೆಸರಿನಲ್ಲಿ ರಾಜಕೀಯ ದುರುದ್ದೇಶಕ್ಕಾಗಿ ಈ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಇದನ್ನು ನಾವು ಏನೆಂದು ಕರೆಯಬೇಕು ಎಂದು ಪ್ರಶ್ನಿಸಿ ಭಾರತ ತಿರುಗೇಟು ನೀಡಿತ್ತು.

    ಇತ್ತೀಚೆಗೆ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ, ಜಮ್ಮು ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿದ್ದರು. ಅಲ್ಲದೆ ಭವಿಷ್ಯದಲ್ಲಿ ‘ನರಮೇಧ’ ಸಂಭವಿಸುವ ಕುರಿತು ಅಭಿಪ್ರಾಯಪಟ್ಟಿದ್ದರು.

    ಖುರೇಷಿ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದ ಭಾರತದ ವಿದೇಶಾಂಗ ಸಚಿವಾಲಯ, ಜಮ್ಮು ಕಾಶ್ಮೀರದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ಕೆಲವು ಪಾಕಿಸ್ತಾನಿ ನಾಯಕರು ಜಿಹಾದಿಗಳ ಮೊರೆ ಹೋಗಿದ್ದಾರೆ. ‘ನರಮೇಧ’ವನ್ನು ಸೃಷ್ಟಿಸುವ ಸಲುವಾಗಿ ವಾಸ್ತವದಿಂದ ದೂರ ಉಳಿದಿದ್ದಾರೆ ಎಂದು ತಕ್ಕ ಉತ್ತರ ನೀಡಿತ್ತು.

    ಆಗಸ್ಟ್ ನಲ್ಲಿ ಭಾರತದ ಜಮ್ಮು ಕಾಶ್ಮೀರಕ್ಕೆ ನಿಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಪಾಕಿಸ್ತಾನ ತೀವ್ರ ಆತಂಕಕ್ಕೊಳಗಾಗಿದೆ. ಈ ಕುರಿತು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲು ಮುಂದಾಗುತ್ತಿದ್ದು ವಿವಿಧ ದೇಶಗಳ ನೆರವು ಕೇಳುತ್ತಿದೆ.

    ಮಂಗಳವಾರ ಯುರೋಪಿಯನ್ ಸಂಸತ್ತಿನ ವಿಶೇಷ ಚರ್ಚೆ ಸಂದರ್ಭದಲ್ಲಿಯೂ ಸಹ ಜಮ್ಮು ಕಾಶ್ಮೀರದ ವಿಚಾರ ಪ್ರಸ್ತಾಪವಾಗಿದ್ದು, ಸಂಸತ್ ಸದಸ್ಯರಾದ ರಿಸ್ಜಾರ್ಡ್ ಜಾರ್ನೆಕಿ ಹಾಗೂ ಫುಲ್ವಿಯೊ ಮಾರ್ಟುಸ್ಸಿಯೆಲ್ಲೊ ಅವರು ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಕರೆಯುವ ಮೂಲಕ ಭಾರತದ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಅಲ್ಲದೆ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪೋಲೆಂಡ್‍ನ ಯುರೋಪಿಯನ್ ಕನ್ಸರ್ವೇಟಿವ್ ಮತ್ತು ರಿಫಾರ್ಮಿಸ್ಟ್ಸ್ ಗ್ರೂಪ್‍ನ ಸದಸ್ಯ ಜಾರ್ನೆಕಿ ಭಾರತವನ್ನು ‘ವಿಶ್ವದ ಶ್ರೇಷ್ಠ ಪ್ರಜಾಪ್ರಭುತ್ವ’ ಎಂದು ಕರೆದಿದ್ದಾರೆ. ಅಲ್ಲದೆ ಭಾರತದ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯಗಳನ್ನು ನಾವು ನೋಡಬೇಕಿದೆ. ಈ ಭಯೋತ್ಪಾದಕರು ಚಂದ್ರ ಲೋಕದಿಂದ ಇಳಿದಿದ್ದಲ್ಲ. ಬದಲಿಗೆ ನೆರೆಯ ದೇಶ ಪಾಕಿಸ್ತಾನದಿಂದ ಬರುತ್ತಿರುವುದು. ಹೀಗಾಗಿ ನಾವು ಭಾರತವನ್ನು ಬೆಂಬಲಿಸಬೇಕು ಎಂದು ಹೇಳಿ ಜಾರ್ನೆಕಿ ಗಮನಸೆಳೆದಿದ್ದಾರೆ.

  • ಪಾಕ್ ದುಷ್ಕೃತ್ಯಕ್ಕೆ ಶಿಕ್ಷೆಯ ಮೂಲಕವೇ ಉತ್ತರ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

    ಪಾಕ್ ದುಷ್ಕೃತ್ಯಕ್ಕೆ ಶಿಕ್ಷೆಯ ಮೂಲಕವೇ ಉತ್ತರ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

    ನವದೆಹಲಿ: ಪಾಕಿಸ್ತಾನ ಸೇನೆ ಯಾವುದೇ ರೀತಿಯ ದುಷ್ಕೃತ್ಯ ನಡೆಸಿದಲ್ಲಿ ತಕ್ಕ ಶಿಕ್ಷೆ ನೀಡುವ ಮೂಲಕವೇ ಪ್ರತ್ಯುತ್ತರ ನೀಡಲಾಗುವುದು. ಭಯೋತ್ಪಾದನೆಯ ವಿರುದ್ಧದ ಹೋರಾಟದಿಂದ ಯಾವುದೇ ರೀತಿಯ ನಷ್ಟವಾಗುವುದಿಲ್ಲ ಎಂದು ಭಾರತೀಯ ಸೇನೆ ಮುಖ್ಯಸ್ಥ ಬಿಪಿನ್ ರಾವತ್ ಎಚ್ಚರಿಸಿದ್ದಾರೆ.

    ಕಾರ್ಗಿಲ್ ಯುದ್ಧದ 20ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಸೇನೆ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದು, ಒಳ ನುಸುಳುವಿಕೆಗೆ ಅವಕಾಶ ನೀಡುವ ಕುರಿತು ಆಲೋಚಿಸುತಿದ್ದು, ಇದಕ್ಕೆ ಭಾರತ ತಕ್ಕ ಉತ್ತರ ನೀಡಲಿದೆ. ಭಯೋತ್ಪಾದಕರಿಗೆ ಶಿಕ್ಷೆ ನೀಡಿದರೆ, ಯಾವುದೇ ನಷ್ಟವಿಲ್ಲ ಹಾಗೂ ಯಾವುದೇ ದೇಶ ವಿರೋಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

    ನಮ್ಮ ಸೇನೆ ಶಸ್ತ್ರ ಸಜ್ಜಿತವಾಗಿ ನಮ್ಮ ಗಡಿ ರಕ್ಷಿಸಲು ಸನ್ನದ್ಧವಾಗಿದೆ. ಎದುರೇಟು ಹಾಗೂ ಶಿಕ್ಷೆಯ ಮೂಲಕ ಪ್ರತಿಕ್ರಿಯೆ ನೀಡಿ ದುಷ್ಕೃತ್ಯಗಳನ್ನು ಹತ್ತಿಕ್ಕುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

    ವಿದೇಶಿಗರ ಆಕ್ರಮಣ ಹಾಗೂ ಭಯೋತ್ಪಾದನೆ ವಿರುದ್ಧ ಹೋರಾಡುವ ವಿಧಾನಗಳು ಬದಲಾಗಿವೆ. ಹೊಸ ವಿಧಾನಗಳನ್ನು ಅನುಸರಿಸಬೇಕಿದೆ. ಅಲ್ಲದೆ, ಸೈಬರ್ ಹಾಗೂ ಬಾಹ್ಯಾಕಾಶ ಕ್ಷೇತ್ರಗಳು ಇದೀಗ ಯುದ್ಧದ ಹೊಸ ರಣಾಂಗಣಗಳಾಗಿ ಮಾರ್ಪಟ್ಟಿದ್ದು, ಈ ಬಗ್ಗೆಯು ಅಧುನಿಕ ತಂತ್ರಜ್ಞಾನಗಳ ಮೂಲಕ ನಿಗಾ ವಹಿಸಬೇಕಿದೆ ಎಂದು ಬಿಪಿನ್ ರಾವತ್ ಅಭಿಪ್ರಾಯಪಟ್ಟಿದ್ದಾರೆ.

    ಯಾವುದೇ ಭಯೋತ್ಪಾದಕ ಕೃತ್ಯದ ವಿರುದ್ಧದ ಹೋರಾಟಕ್ಕೆ ಶಿಕ್ಷೆಯಾಗುವುದಿಲ್ಲ. ಉರಿ ಮತ್ತು ಬಾಲಾಕೋಟ್‍ನಂತಹ ಸರ್ಜಿಕಲ್ ಸ್ಟ್ರೈಕ್‍ಗಳ ಮೂಲಕ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದ ಜಯವೇ ರಾಜಕೀಯ ಮತ್ತು ಸೈನ್ಯದ ಸಂಕಲ್ಪಕ್ಕೆ ಸಾಕ್ಷಿ ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ.