Tag: ಪಕ್ಷಿಗಳು

  • ಸುವ್ವಿ ರಾಗ ಕೇಳಿದಿರಾ, ಕಾಡಿನ ರೈತನ ನೋಡಿದಿರಾ..? – ಈಗ ಕೇಳಿ ಮಧುರಕಂಠದ ʻಐಯೋರʼ ಗಾನ

    ಸುವ್ವಿ ರಾಗ ಕೇಳಿದಿರಾ, ಕಾಡಿನ ರೈತನ ನೋಡಿದಿರಾ..? – ಈಗ ಕೇಳಿ ಮಧುರಕಂಠದ ʻಐಯೋರʼ ಗಾನ

    ಪಕ್ಷಿಗಳ (Birds) ಸಮೂಹ ಕಾಣುತ್ತಿದ್ದರೆ, ಅವುಗಳ ಚಿಲಿಪಿಲಿ ಸದ್ದನು ಕೇಳುತ್ತಿದ್ದರೆ ಮನಸ್ಸು ಪ್ರಫುಲ್ಲಗೊಳ್ಳುತ್ತದೆ. ತಾನೂ ರೆಕ್ಕೆಬಿಚ್ಚಿ ನೀಲಮೇಘಗಳಲ್ಲಿ ಹಾರಬೇಕು ಎಂದೆನಿಸುತ್ತದೆ. ನೆನಪಿದೆಯಾ ಅಂದು ನಾವು ಪುಟ್ಟ ಮಕ್ಕಳಿದ್ದಾಗ ಪಕ್ಷಿಯ ಚಿತ್ರ ಬರೆಯಲು ಹೇಳಿದ್ರೆ ಚೂಪಾದ ಕೊಕ್ಕು, ದುಂಡಗಿನ ಕಣ್ಣು, ಕೆಂಪನೆಯ ಮುಂಗುರುಳು… ಹೀಗೆ ನಮಗೆ ಇಷ್ಟ ಬಂದ ಆಕಾರ ನೀಡುತ್ತಾ ಅವುಗಳನ್ನ ನಮ್ಮ ಪುಟಗಳಲ್ಲಿ ಹಾರಿಸುತ್ತಿದ್ದ ನೆನಪು ನಿನ್ನೆ ಮೊನ್ನೆಯದೋ ಎಂದೇ ಭಾಸವಾಗುತ್ತಿದೆ. ಆದ್ರೆ ನಗರಗಳು ಬೆಳೆದಂತೆ ಪಕ್ಷಿಗಳು ಮಾಯವಾಗುತ್ತಿವೆ. ಮೃಗಾಲಯ, ಕಾಡುಗಳಲ್ಲಿ ಪ್ರವಾಸಕ್ಕೆ ಹೋಗಿ ಹಕ್ಕಿಗಳನ್ನು ಕಣ್ತುಂಬಿಕೊಳ್ಳಬೇಕಿದೆ.

    ಸಾಮಾನ್ಯವಾಗಿ ಪಕ್ಷಿ ವೀಕ್ಷಣೆಗೆ ಮುಂಜಾನೆ 6 ರಿಂದ 10 ಅಥವಾ ಸಂಜೆ 4 ರಿಂದ 6 ಗಂಟೆಯ ಸಮಯ ಸೂಕ್ತವೆಂದು ಪಕ್ಷಿ ತಜ್ಞರು ಹೇಳುತ್ತಾರೆ. ಬನ್ನಿ ಹಾಗಿದ್ರೆ ಪಕ್ಷಿ ತಜ್ಞರು ಏನು ಹೇಳಿದ್ದಾರೆ.. ಅವುಗಳ ಸುತ್ತ ಒಂದು ಸುತ್ತು ಹಾಕೋಣ…

    ಸುಂದರ ಸುವ್ವಿ ಹಕ್ಕಿ:
    ಸುವ್ವಿ ಹಕ್ಕಿ ಗುಬ್ಬಚ್ಚಿಗಿಂತಲೂ ಸಣ್ಣದಾದ ಪಕ್ಷಿ, ಪ್ರಿನಿಯಾ ಸೊಸಿಯಾಲಿಸ್ ಎಂಬುದು ವೈಜ್ಞಾನಿಕ ಹೆಸೆರು. ಗುಬ್ಬಚ್ಚಿಗಿಂತ ಚಿಕ್ಕದಾದ ಹಕ್ಕಿ. ನೆತ್ತಿ, ಕತ್ತಿನ ಹಿಂಭಾಗ, ರೆಕ್ಕೆ, ಬಾಲದ ಮೇಲ್ಬಾಗದಲ್ಲಿ ಕಡು ಬೂದು ಮಿಶ್ರಿತ ಪಾಚಿ ಬಣ್ಣವಿರುತ್ತದೆ. ಉದ್ದ ಬಾಲ ಅದರ ಅಂಚು ಕಪ್ಪು-ಬಿಳಿ; ನೀಳವಾದ ಕಾಲುಗಳು ಹಾಗೂ ಚಿಕ್ಕದಾದ ಕಪ್ಪು ಕೊಕ್ಕು ಇರುತ್ತದೆ.

    ನೀಳವಾದ ಕಾಲುಗಳು ಗುಲಾಬಿ ಬಣ್ಣದಿಂದ ಕಂಡುಬರುತ್ತದೆ. ಇದರ ಚಿಕ್ಕದಾದ ಕೊಕ್ಕು ಕಪ್ಪಾಗಿರುತ್ತದೆ. ಕುರುಚಲು ಕಾಡು, ಹೂದೋಟ ಮುಂತಾದ ಕಡೆ ಪೊದೆ, ಜೊಂಡು, ವಾಟೆಗಳಲ್ಲಿ ವಾಸಿಸುತ್ತವೆ. ಸಂತಾನೋತ್ಪತ್ತಿ ಸಮಯದಲ್ಲಿ ದೊಡ್ದ ಎಲೆಗಳನ್ನ ಹೆಣೆದು ಮಧ್ಯದಲ್ಲಿ ಹತ್ತಿ, ನಾರು ಇತ್ಯಾದಿಗಳಿಂದ ಬಟ್ಟಲಿನಾಕಾರದ ಗೂಡನ್ನು ಕಟ್ಟುತ್ತವೆ. ಮಾರ್ಚ್ ತಿಂಗಳಿಂದ ಸೆಪ್ಟೆಂಬರ್ ತಿಂಗಳೊಳಗೆ 3 ರಿಂದ 4 ಕೆಂಪು ಮೊಟ್ಟೆಗಳಿಗೆ ಕಾವು ಕೊಟ್ಟು ಮರಿ ಮಾಡಡುತ್ತದೆ.

    ಕಾಡಿನ ರೈತ ಮಂಗಟ್ಟೆ (Hornbill):
    ಒಮ್ಮೆ ನೋಡಿದ್ರೆ ಮೆರಯುವುದೇ ಇಲ್ಲ ಅಂತಹ ಹಕ್ಕಿ ಇದು. ಮಂಗಟ್ಟೆ ಹಕ್ಕಿಗಳು ಕೀಟ, ಸಣ್ಣ-ದೊಡ್ಡ ಜೀವಿಗಳನ್ನು ತಿನ್ನುತ್ತದೆಯಾದರೂ ಫಲಾಹಾರಿ ಹಕ್ಕಿಗಳು. ಇವು ಹಣ್ಣುತಿಂದು ಕಾಡಿನ ದೂರದೂರದವರೆಗೂ ಹೋಗಿ ವಿಸರ್ಜಿಸುವುದರಿಂದ ಕಾಡಿನ ಬೆಳವಣಿಗೆಗೆ ಮತ್ತು ಮರಗಳ ಹರವು ವಿಸ್ತಾರವಾಗಲು ನೆರವಾಗುತ್ತದೆ. ಆದ್ದರಿಂದಲೇ ಅನೇಕರು ಇದನ್ನೂ ಕಾಡಿನ ರೈತ ಎಂದೂ ಕರೆಯುತ್ತಾರೆ.

    ಇನ್ನೂ ಇದರ ಸಂತಾನೋತ್ಪತ್ತಿಯ ವಿಶಿಷ್ಟ ಕ್ರಮ ಆಶ್ಚರ್ಯವನ್ನು ತರುತ್ತದೆ. ಹಳೆಯ, ದೊಡ್ಡ ಮರಗಳ ಪೊಟರೆ ಇದರ ಗೂಡು. ಹೆಣ್ಣು ಹಕ್ಕಿ ಇದರ ಒಳಗೆ ಹೋಗಿ ಕೂತ ನಂತರ ಗಂಡು ಹೊರಗಿನಿಂದ ಗೂಡಿನ ಬಾಯನ್ನು ಸಣ್ಣ ಕಿಂಡಿಯೊಂದನ್ನ ಬಿಟ್ಟು ಪೂರ್ತಿ ಮುಚ್ಚಿಬಿಡುತ್ತದೆ. ಒಳಗೆ ಮೊಟ್ಟೆಗಳು ಮರಿಯಾಗಿ ಅವು ತುಸು ಬೆಳೆಯುವವರೆಗೂ ಗಂಡು, ಹೆಣ್ಣು ಹಾಗೂ ಮರಿಗಳಿಗೆ ಆಹಾರವನ್ನ ತಂದು ಒದಗಿಸುತ್ತದೆ. ಮರಿಗಳು ತುಸು ದೊಡ್ಡವಾದನಂತರ ಹೆಣ್ಣು ಗೂಡಿನ ʻಬಾಗಿಲನ್ನುʼ ಒಡೆದುಕೊಂಡು, ಹೊರಬರುತ್ತದೆ. ಮರಿಗಳು ತಮ್ಮ ಮಲದಿಂದ ಮತ್ತೆ ಗೂಡಿನ ಬಾಯಿಯನ್ನು ಒಂದು ಸಣ್ಣ ರಂದ್ರದಷ್ಟು ಬಿಟ್ಟು ಉಳಿದಂತೆ ಮುಚ್ಚಿಬಿಡುತ್ತವೆ. ಆನಂತರ ಗಂಡು ಹೆಣ್ಣು ಎರಡೂ ಸೇರಿ ಮರಿಗಳಿಗೆ ಆಹಾರ ಒದಗಿಸುತ್ತದೆ.

    ದಾಸಮಂಗಟ್ಟೆ: ಇದು ಹದ್ದಿಗಿಂತ ದೊಡ್ಡದಾಗಿದ್ದು, ರಣಹದ್ದಿಗಿಂತ ಚಿಕ್ಕದಾದ ಬೃಹತ್‌ ಪಕ್ಷಿ. ಇದರ ತಲೆ, ಕತ್ತು, ಕೊಕ್ಕು ಹಳದಿ ಬಣ್ಣದಿಂದ ಕೂಡಿರುತ್ತದೆ. ಇದರ ಕಣ್ಣಿನ ಭಾಗದಲ್ಲಿ ಅಗಲವಾದ ಅಡ್ಡ ಕಪ್ಪು ಪಟ್ಟಿಯನ್ನ ಕಾಣಬಹುದು. ನೆತ್ತಿಯಿಂದ ಕೊಕ್ಕಿನ ಮಧ್ಯದವರೆಗೆ ಹಳದಿ ಟೋಪಿ ಕಂಡುಬರುತ್ತದೆ. ಕತ್ತಿನ ತಳಭಾಗ ಮತ್ತು ದೇಹ ಹಾಗೂ ರೆಕ್ಕೆ ಕಪ್ಪು ಬಣ್ಣದ್ದಾಗಿರುತ್ತದೆ. ಇದರ ಹೊಟ್ಟೆ ಮತ್ತು ಬಾಲ ಬಿಳಿಯಾಗಿರುತ್ತದೆ. ಬಾಲದ ಮೇಲೆ ಅಗಲವಾದ ಕಪ್ಪು ಪಟ್ಟಿಯನ್ನ ಕಾಣಬಹುದು. ಅಲ್ಲದೆ ಕಪ್ಪು ರೆಕ್ಕೆಯ ಮೇಲೆ ಅಗಲವಾದ ಬಿಳಿ ಪಟ್ಟಿ ಹಾಗೂ ಬಾಲದ ಮೇಲಿನ ಪಟ್ಟಿಗಳು ಹಾರುವಾಗ ಸ್ಪಷ್ಟವಾಗಿ ಗೋಚರಿಸುತ್ತವೆ. ಇವುಗಳು ಹೆಚ್ಚಾಗಿ ನಿತ್ಯಹರಿದ್ವರ್ಣ, ತೇವ ಪರ್ಣಪಾತಿ ಕಾಡುಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ದಾಂಡೇಲಿ, ಅಣಶಿ, ಕುದುರೆಮುಖ, ಮೂಕಾಂಬಿಕಾ ಅರಣ್ಯಗಳಲ್ಲಿ ಕಾಣಬಹುದು. ಸಂತಾನೋತ್ಪತ್ತಿ ಸಮಯದಲ್ಲಿ ಮರದ ಪೊಟ್ಟರೆಗಳಲ್ಲಿ ಗೂಡು ನಿರ್ಮಿಸಿ ಫೆಬ್ರುವರಿ ತಿಂಗಳಿಂದ ಏಪ್ರಿಲ್ ತಿಂಗಳೊಳಗೆ 2 ಮೊಟ್ಟೆಗಳಿಗೆ ಜನ್ಮ ನೀಡುತ್ತವೆ.

    ಕರ್ನಾಟಕದಲ್ಲಿ ದಾಸ ಮಂಗಟ್ಟೆಹಕ್ಕಿ, ಮಲಬಾರ್ ಮಂಗಟ್ಟೆ ಹಾಗೂ ಸಾಮಾನ್ಯ ಮಂಗಟ್ಟೆ ಹಕ್ಕಿಗಳನ್ನು ನೋಡಬಹುದು. ದುರದೃಷ್ಟವಶಾತ್‌ ಈ ಮಂಗಟ್ಟೆ ಪಕ್ಷಿಗಳಿಂದು ಅಳಿವಿನ ಅಂಚಿನಲ್ಲಿದೆ.

    ಕೆನ್ನೀಲಿ ಬಕ:
    ಸುಮಾರು 90 ಸೆಂ.ಮೀ. ಎತ್ತರದ, ಬೂದು ಬಕ ಪಕ್ಷಿಯಷ್ಟಿರುವ ಈ ಹಕ್ಕಿಯ ಮೇಲ್ಭಾಗದ ಮೈ ನೀಲಿ ಬೂದು ಬಣ್ಣವಾಗಿದ್ದು, ಉದ್ದನೆಯ ಕೊಕ್ಕು, ಕೆನ್ನೆಯಿಂದ ಹೊರಚಾಚುವ ಕರೀಬಣ್ಣದ ಉದ್ದನೆಯ ಪುಕ್ಕ, ಕತ್ತು ಹಾಗೂ ತಲೆಯು ಇಟ್ಟಿಗೆಯ ಬಣ್ಣ ಹೊಂದಿದ್ದು, ಕತ್ತಿನ ಕೆಳಗೆ ಕಪ್ಪು ಹಾಗೂ ತಿಳಿ ಕಂದು ಬಣ್ಣವಿರುತ್ತದೆ. ಸೂರ್ಯನ ಪ್ರಕಾಶದಲ್ಲಿ ನೇರಳೆ ಬಣ್ಣ ಕಾಣುತ್ತದೆ. ಪಕ್ಷಿ ಪ್ರೇಮಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡುತ್ತದೆ.

    ಭಾರತದ ಎಲ್ಲಾ ಭಾಗಗಳಲ್ಲಿ, ಶ್ರೀಲಂಕಾದಲ್ಲಿ ಸ್ಥಳೀಕವಾಗಿಯೂ ಪ್ರಾದೇಶಿಕ ವಲಸೆ ಹಕ್ಕಿಗಳಾಗಿಯೂ ಇವು ಕಂಡುಬರುತ್ತವೆ. ಏಕಾಂಗಿಗಳಾಗಿ ನೀರಿನ ಝರಿಗಳ ಬಳಿ, ನೀರಿನ ಮಡುವುಗಳ ಹತ್ತಿರ ಇವು ಕಾಣಿಸಿಕೊಳ್ಳುತ್ತವೆ. ಮೀನು, ಕಪ್ಪೆ, ಹಾವು ಇದರ ಆಹಾರ. ಜೂನ್-ಮಾರ್ಚ್ ತಿಂಗಳ ಮಧ್ಯೆ ಮರಿ ಮಾಡುತ್ತವೆ. ಈ ಹಕ್ಕಿಗಳು ತಮ್ಮ ಜಾತಿಗೆ ಸೇರಿದ ಹಕ್ಕಿಗಳಿರುವ ಕಾಲೋನಿಗಳಲ್ಲಿಯೇ ಸಾಮಾನ್ಯವಾಗಿ ಮರಿ ಮಾಡುತ್ತವೆ. ಗಿಡಗಳಲ್ಲಿ, ಜೊಂಡು ಹುಲ್ಲಿನ ಹಾಸಿನ ಮೇಲೆ ಕಡ್ಡಿಗಳಿಂದ ಗೂಡನ್ನು ಕಟ್ಟಿ, ನೀಲಿ-ಹಸಿರು ಮಿಶ್ರ ಬಣ್ಣದ 3-5 ಮೊಟ್ಟೆಗಳನ್ನು ಇಡುತ್ತವೆ.

    ಸೌಂದರ್ಯಕ್ಕೆ ಮತ್ತೊಂದು ಹೆಸರು ಬಾಲದಂಡೆಯ ಹಕ್ಕಿ (Asian Paradise):
    ಕಣ್ಣಿಗೆ ಸುಂದರ ನೋಟ ಬೀರುವ ಹಕ್ಕಿಗಳನ್ನು ಪಟ್ಟಿ ಮಾಡುತ್ತಾ ಹೋದ್ರೆ ಅವುಗಳಲ್ಲಿ ಪ್ರಮುಖವಾದುದು ಬಾಲದಂಡೆಯ ಹಕ್ಕಿ. ಅದರ ಬಾಲವೇ ಅದಕ್ಕೇ ಸೌಂದರ್ಯ. ಛಾಯಾಗ್ರಾಹಕನೂ ಇದರ ಫೋಟೋ ಕ್ಲಿಕ್ಕಿಸಬೇಕೆಂದರೆ ಹರಸಾಹಸ ಮಾಡಲೇಬೇಕು. ಏಕೆಂದರೆ ಇದರ ಬಾಲ ಪೂರ್ಣ ನೋಡಿಕೊಂಡು ಫೋಟೋ ಕ್ಲಿಕ್ಕಿಸುವಷ್ಟರಲ್ಲೇ ಸರ್ರನೆ ಹಾರಿಬಿಡುತ್ತೆ.

    ಗಂಡು ರಾಜಹಕ್ಕಿಗೆ ಕಡು ನೀಲಿಗಪ್ಪು ತಲೆ, ಜುಟ್ಟು, ಗಲ್ಲ, ಹೊಳೆಯುವ ಬಿಳಿದೇಹ, ರೆಕ್ಕೆಯಲ್ಲಿ ಅಲ್ಲಲ್ಲಿ ಕಪ್ಪು ಗರಿಗಳು. ಮೊದಲೇ ತಿಳಿಸಿದಂತೆ ಒಂದೂವರೆ ಅಡಿ ಉದ್ದದ ಬಿಳಿ ರಿಬ್ಬನ್ ತರಹದ ಬಾಲ. ಇದರಲ್ಲಿ ಮತ್ತೊಂದು ಒಳಪ್ರಭೇದವಿದೆ. ಈ ಪ್ರಭೇದದಲ್ಲಿ ಬಿಳಿದೇಹದ ಬದಲು ಕೆಂಗಂದು ದೇಹ ಮತ್ತು ಕೆಂಗಂದು ರಿಬ್ಬನ್ ಬಾಲ ಇರುತ್ತದೆ. ವರ್ಷದಿಂದ ವರ್ಷಕ್ಕೆ ಇದರ ಬಾಲ ಬೆಳೆಯುತ್ತಾ ಹೋಗುತ್ತದೆ, 3 ವರ್ಷಗಳ ನಂತರ ಒಂದು ಅಡಿ ಮೀರುತ್ತದೆ. ಜೊತೆಗೆ ಬಾಲ್ಯದ ಕೆಂಪು ಬಿಳಿಯತ್ತ ಹೊರಳುತ್ತದೆ. ಕೆಂಗಂದು ಮತ್ತು ಬಿಳಿ ಮಿಶ್ರಿತ ರಾಜಹಕ್ಕಿಯನ್ನು ನಾವು ಕೆಲವೊಮ್ಮೆ ಕಂಡರೆ ಅದನ್ನು ಟ್ರಾನಿಯೆಂಟ್‌ ಫೇಸ್‌ ಎಂದು ತಿಳಿಯಬೇಕು. ಹೀಗೆ ಅಚ್ಚ ಬಿಳಿದೇಹ ಹೊಂದಿದ ರಾಜಹಕ್ಕಿಯನ್ನು ಹಿಂದಿಯಲ್ಲಿ ದೂದ್‍ರಾಜ ಎಂದು ಹೇಳುತ್ತಾರೆ.

    ಈ ಪಕ್ಷಿ ಬೇಸಿಗೆಯಲ್ಲಿ ಮೇಲುಕೋಟೆ, ಬಂಡೀಪುರ, ನಂದಿಬೆಟ್ಟ, ಸಾವನ ದುರ್ಗ, ದೇವರಾಯನ ದುರ್ಗ, ಬನ್ನೇರುಘಟ್ಟ, ಮುತ್ತತ್ತಿಯಂಥಾ ಕಾಡುಗಳಲ್ಲಿ ಕಾಣಸಿಗುತ್ತವೆ. ಚಳಿಗಾಲದಲ್ಲಿ ದಕ್ಷಿಣಭಾರತದ ಅನೇಕ ಜಾಗಗಳಲ್ಲಿ ಚದುರಿ ಹೋಗುತ್ತವೆ. ಮರಗಳು ದಟ್ಟವಿರುವ, ವಿವಿಧ ಬೆಳೆಗಳಿಂದ ಕೂಡಿದ ತೋಟ, ಬಿದುರು ಕಾಡುಗಳೆಂದರೆ ಇವಕ್ಕೆ ಬಲು ಪ್ರಿಯ.

    ಮಧುರ ಕಂಠ:
    ನಮ್ಮ ಅತಿ ಸುಂದರ ಹಕ್ಕಿಗಳಲ್ಲಿ ಈ ಮಧುರಕಂಠವೂ ಒಂದು. ಹೆಸರಿಗೆ ತಕ್ಕಂತೆ ಇದು ಶ್ರಾವ್ಯವಾಗಿ ಹಾಡುತ್ತದೆ. ಇಂಗ್ಲಿಷಿನಲ್ಲಿ ಇದನ್ನು ಐಯೋರ ಎಂಬ ಇಂಪಾದ ಹೆಸರಿನಿಂದಲೇ ಕರೆಯುತ್ತಾರೆ.

    ದಕ್ಷಿಣ ಏಷ್ಯಾದಲ್ಲಿ ಎರಡು ಜಗತ್ತಿನಲ್ಲಿ 4 ಬಗೆಯ ಮಧುರಕಂಠಗಳು ಕಂಡುಬರುತ್ತವೆ. ಎಲ್ಲವೂ ಹಸಿರು, ಹಳದಿ, ಬಿಳಿ ಹಾಗೂ ಕಪ್ಪು ವರ್ಣಗಳ ಸಂಯೋಜನೆಯ ಹಕ್ಕಿಗಳೇ. ಗಂಡು ಹೆಣ್ಣಿನ ವರ್ಣ ಸಂಯೋಜನೆ ಬೇರೆ ಬೇರೆ. ಮರಿ ಮಾಡುವ ಕಾಲದಲ್ಲಿ ಗಂಡು ಹಕ್ಕಿ ಕಪ್ಪು ಟೋಪಿಯನ್ನು ಮೆರೆಸುತ್ತದೆ. ಇದರ ಪ್ರೇಮಯಾಚನಾ ಪ್ರಸಂಗ ಪ್ರಸಿದ್ಧವಾದದ್ದು. ಎಲೆಗಳ ನಡುವೆ ನುಸುಳಿ ಕೀಟಗಳನ್ನು ಹೆಕ್ಕಿಕೊಳ್ಳುವುದು ಇದರ ಆಹಾರ ಸಂಪಾದನೆಯ ಕ್ರಮ. ಕಂಬಳಿ ಹುಳುಗಳೂ ಇದರ ಆಹಾರ ಕ್ರಮವಾಗಿದೆ.

    ದಕ್ಷಿಣ ಭಾರತದಲ್ಲಿ ಕಂಡುರುವುದು ಸಾಮಾನ್ಯ ಮಧುರಕಂಠ. ಉತ್ತರ-ಪಶ್ಚಿಮ ಭಾರತದಲ್ಲಿ ಮಾರ್ಷಲ್ ಮಧುರಕಂಠ ಕಂಡುಬರುತ್ತದೆ. ದಕ್ಷಿಣ ಭಾರತದಲ್ಲಿಯೂ ಮಾರ್ಷಲ್ಸ್ ಕಂಡುಬರುತ್ತದೆ. ಇದರ ಬಾಲದಿಂದಲೇ ಇದನ್ನು ಗುರುತಿಸಬಹುದು ಎಂದು ಪಕ್ಷಿ ತಜ್ಞರು ಹೇಳುತ್ತಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಹೆದ್ದಾರಿಗಾಗಿ ಧರೆಗುರುಳಿದ ಬೃಹತ್ ಮರ- ನೂರಾರು ಹಕ್ಕಿಗಳ ಮಾರಣಹೋಮ

    ಹೆದ್ದಾರಿಗಾಗಿ ಧರೆಗುರುಳಿದ ಬೃಹತ್ ಮರ- ನೂರಾರು ಹಕ್ಕಿಗಳ ಮಾರಣಹೋಮ

    ತಿರುವನಂತಪುರಂ: ರಾಷ್ಟ್ರೀಯ ಹೆದ್ದಾರಿಗಾಗಿ ಬೃಹತ್ ಮರವೊಂದನ್ನು ಉರುಳಿಸಿದ ಪರಿಣಾಮ ನೂರಾರು ಪಕ್ಷಿಗಳು ಮಾರಣಹೋಮವಾದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತಿರುರಂಗದಿ ನಗರದ ವಿಕೆ ಪಡಿ ಎಂಬಲ್ಲಿ ನಡೆದಿದೆ.

    ಸಾವಿರಾರು ಪಕ್ಷಿಗಳ ಮಾರಣಹೋಮವಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಪಕ್ಷಿಪ್ರಿಯರು ಆಕ್ರೋಶ ಹೊರಹಾಕಿದ್ದಾರೆ. ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಮರ ಉರುಳಿಸಿದ ಜೆಸಿಬಿ ಚಾಲಕನನ್ನು ಬಂಧಿಸಲಾಗಿದೆ. ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಪಡೆಯದೇ ಮರವನ್ನು ಉರುಳಿಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

    ರಾಷ್ಟ್ರೀಯ ಹೆದ್ದಾರಿ 66 ಅನ್ನು ವಿಸ್ತರಣೆ ಮಾಡುವ ಸಲುವಾಗಿ ರಸ್ತೆ ಬದಿಯ ಮರಗಳನ್ನು ಕಡಿಯಲಾಗುತ್ತಿತ್ತು. ಅಂತೆಯೇ ಗುರುವಾರ ಭಾರೀ ಗಾತ್ರದ ಮರವನ್ನು ನೆಲಕ್ಕುರುಳಿಸಿದರಿಂದ ನೂರಾರು ಪಕ್ಷಿಗಳು ಸಾವನ್ನಪ್ಪಿವೆ. ಇದನ್ನೂ ಓದಿ: ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ಸೂಚಿಸುತ್ತದೆ: ಮುಂಬೈ ಕೋರ್ಟ್

    ಮರ ಕಡಿಯುವುದಕ್ಕೂ ಮುನ್ನ ಅವುಗಳಿಗೆ ಹಾರಲು ಅವಕಾಶ ನೀಡಬೇಕಿತ್ತು. ಇಲ್ಲವೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದರೆ ಇದ್ಯಾವುದೂ ಮಾಡದೇ ಏಕಾಏಕಿ ಮರವನ್ನು ಉರುಳಿಸಿರುವ ಪರಿಣಾಮ ಗೂಡು ಸಮೇತ ಹಕ್ಕಿಗಳು ಮರದ ಕೊಂಬೆಗಳಿಗೆ ಸಿಲುಕಿ ಮೃತ ಪಟ್ಟಿವೆ. ಇನ್ನೂ ಕೆಲವು ಮರ ಬಿದ್ದ ರಭಸಕ್ಕೆ ನೆಲಕ್ಕೆ ಅಪ್ಪಳಿಸಿ ಸಾವನ್ನಪ್ಪಿವೆ.

    ಹುಣಸೆ ಮರದಲ್ಲಿ ಶಿಳ್ಳೆ ಹೊಡೆಯುವ ಬಾತುಕೋಳಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಿಗಳು ಗೂಡುಕಟ್ಟಿಕೊಂಡು ಬದುಕು ನಡೆಸುತ್ತಿದ್ದವು. ಈ ಬಡ ಜೀವಿಗಳ ಜೀವನದ ಬಗ್ಗೆ ಹೆಚ್ಚು ಗಮನ ಹರಿಸದ ಜನರ ಮೇಲೆ ಇದೀಗ ನೆಟ್ಟಿಗರು ಗರಂ ಆಗಿದ್ದಾರೆ. ಈ ಪಕ್ಷಿಗಳನ್ನು ಉಳಿಸಲು ಪರ್ಯಾಯ ಮಾರ್ಗವನ್ನು ಕಂಡುಕೊಳ್ಳದೆ ಮರವನ್ನು ಉರುಳಿಸಲು ನಿರ್ಧರಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಲಮಾಲಿನ್ಯದಿಂದ ವಿನಾಶದ ಅಂಚಿಗೆ ತಲುಪಿದ ಪಕ್ಷಿಧಾಮ – ವಿದೇಶಿ ಹಕ್ಕಿಗಳ ಕಲರವ ಮರೀಚಿಕೆ

    ಜಲಮಾಲಿನ್ಯದಿಂದ ವಿನಾಶದ ಅಂಚಿಗೆ ತಲುಪಿದ ಪಕ್ಷಿಧಾಮ – ವಿದೇಶಿ ಹಕ್ಕಿಗಳ ಕಲರವ ಮರೀಚಿಕೆ

    ಚಿತ್ರದುರ್ಗ: ಅದೊಂದು ಬರದನಾಡಿನ ಪಕ್ಷಿಧಾಮ. ಅಲ್ಲಿಗೆ ಪ್ರತಿವರ್ಷ ವಿದೇಶಿ ಹಕ್ಕಿಗಳು ವಲಸೆ ಬರುತ್ತವೆಂಬ ಹೆಗ್ಗಳಿಕೆ ಗಳಿಸಿದ್ದ ಚಿತ್ರದುರ್ಗ ತಾಲೂಕಿನ ಮಲ್ಲಾಪುರದ ಕೆರೆಯಂಗಳದ ಪಕ್ಷಿಧಾಮ ಈ ಬಾರಿ ಖಾಲಿಖಾಲಿಯಾಗಿದೆ.

    ಬೆಳ್ಳಂಬೆಳಗ್ಗೆ ಚಿಲಿಪಿಲಿ ಎನ್ನುತ್ತಿದ್ದ ವಿದೇಶಿ ಹಕ್ಕಿಗಳ ಕಲರವ ನಾಪತ್ತೆಯಾಗಿದೆ. ಈ ಕೆರೆಗೆ ಚಿತ್ರದುರ್ಗ ನಗರದ ಯೂಜಿಡಿನೀರು ಹರಿದು ಬರುವ ಮೂಲಕ ಪ್ಲಾಸ್ಟಿಕ್ ತ್ಯಾಜ್ಯ ಕೆರೆಯಲ್ಲಿ ಭರ್ತಿಯಾಗಿದೆ. ಹೀಗಾಗಿ ದುರ್ನಾಥ ಬೀರುತ್ತಿರುವ ಕೆರೆ ಸಂಪೂರ್ಣ ಮಲೀನವಾಗಿ ನೀರು ಹಚ್ಚ ಹಸುರಾಗಿದೆ. ಇದರಿಂದಾಗಿ ಈ ವರ್ಷ ಪಕ್ಷಿಗಳ ಸದ್ದಿಲ್ಲದೇ ಆಕರ್ಷಕ ಪಕ್ಷಿಧಾಮ ಬಿಕೋ ಎನ್ನುತ್ತಿದೆ.

    ಪ್ರತಿವರ್ಷ ವಿವಿಧೆಡೆಯಿಂದ ವಿದೇಶಿ ಹಕ್ಕಿಗಳು ವಲಸೆ ಬರುತ್ತಿದ್ದವು. ಇಲ್ಲಿನ ನೈಸರ್ಗಿಕ ಸೊಬಗನ್ನು ಹೆಚ್ಚಿಸುತಿದ್ದವು. ಹೀಗಾಗಿ ಈ ದೃಶ್ಯವನ್ನು ಸವಿಯಲು ಪ್ರವಾಸಿಗರು ಧಾವಿಸುತ್ತಿದ್ದರು. ಅಲ್ಲದೆ ಇಲ್ಲಿನ ನಾಗರೀಕರು ಸಹ ವಾಯುವಿಹಾರಕ್ಕೆ ಬರುತ್ತಿದ್ದರು. ಆದರೆ ಈ ಬಾರಿ ಒಂದು ಪಕ್ಷಿಯ ಸಹ ಕೆರೆಯತ್ತ ಸುಳಿದಿಲ್ಲ ಅಂತ ಪಕ್ಷಿ ಪ್ರಿಯರಾದ ಬಸವರಾಜ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ಘಮ ಘಮಿಸುವ ಚಿಕನ್ ಮಸಾಲ ಮಾಡುವ ವಿಧಾನ

    ಈ ಕೆರೆ ತುಂಬಿದಾಗ ಜಮೀನುಗಳಿಗೆ ನುಗ್ಗುವ ನೀರಿನಿಂದಾಗಿ ಬರದನಾಡಿನ ರೈತರ ಬೆಳೆಗಳು ಸಹ ನಾಶವಾಗ್ತಿವೆ. ಹೀಗಾಗಿ ಯೂಜಿಡಿ ನೀರನ್ನು ಶುದ್ಧೀಕರಿಸಿ ಕೆರೆಗೆ ಬಿಡುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ ಅಂತ ಇಲ್ಲಿನ ರೈತ ಹೊರಕೇರಪ್ಪ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆಕರ್ಷಕ ನೈಸರ್ಗಿಕ ಪಕ್ಷಿಧಾಮ ಉಳಿಸಬೇಕು. ಮುಂದಿನ ಪೀಳಿಗೆಗೆ ಈ ಸೊಬಗನ್ನು ವೀಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆದರೆ ಬರದನಾಡಲ್ಲಿ ಸ್ವಯಂ ನಿರ್ಮಾಣವಾದ ನೈಸರ್ಗಿಕ ಪಕ್ಷಿಧಾಮ ವಿನಾಶದ ಅಂಚಿಗೆ ತಲುಪಿರೋದು ಬೇಸರಮೂಡಿಸಿದೆ ಎಂದು ಅಸಮಧಾನ ಹೊರಹಾಕಿದ್ದಾರೆ.

  • ಮೃಗಾಲಯದ ಪ್ರಾಣಿ ಪಕ್ಷಿಗಳಿಗೂ ತಟ್ಟಿದ ಕೊರೊನಾ ಲಾಕ್‍ಡೌನ್ ಬಿಸಿ

    ಮೃಗಾಲಯದ ಪ್ರಾಣಿ ಪಕ್ಷಿಗಳಿಗೂ ತಟ್ಟಿದ ಕೊರೊನಾ ಲಾಕ್‍ಡೌನ್ ಬಿಸಿ

    ಗದಗ: ಮಹಾಮಾರಿ ಕೊರೊನಾ ಇಡೀ ಜಗತ್ತನ್ನೇ ಅಲ್ಲೋಲ ಕಲ್ಲೋಲ ಮಾಡಿಬಿಟ್ಟಿದೆ. ಕೊರೊನಾ ಬಿಸಿ ಈಗ ಉತ್ತರ ಕರ್ನಾಟಕದ ಏಕೈಕ ಮೃಗಾಲಯ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದೆ.

    ಆದಾಯವಿಲ್ಲದೇ ಪ್ರಾಣಿಗಳನ್ನು ಹೇಗೆ ಸಾಕುವುದು ಎಂಬ ಪರಿಸ್ಥಿತಿಯಲ್ಲಿ ಝೂ ಇದೆ. ಮಹಾಮಾರಿ ಕೊರೊನಾದಿಂದ ಮುದ್ರಣಾ ಕಾಶಿಯ ಮಕ್ಕಳ ಉದ್ಯಾನವನ ಹಾಗೂ ಮೃಗಾಲಯ ಈಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದ ಕೊರೊನಾದ ಆರ್ಥಿಕ ಕರಿ ಛಾಯೆಯಿಂದ ಹೊರಬರಲು ಝೂ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆಯುವಂತೆ ಮನವಿ ಮಾಡಲಾಗುತ್ತಿದೆ.

    ಉತ್ತರ ಕರ್ನಾಟಕದ ಏಕೈಕ ಮೃಗಾಲಯವೆಂದೇ ಹೆಸರಾಗಿರುವ ಗದಗದ ಬಿಂಕದಕಟ್ಟಿ ಝೂ ಸಾಕಷ್ಟು ಆಕರ್ಷಣಿಯವಾಗಿದ್ದು, ಲಾಕ್‍ಡೌನ್ ಮೊದಲು ಈ ಮೃಗಾಲಯಕ್ಕೆ ಉತ್ತರ ಕರ್ನಾಟಕದ ನಾನಾ ಜಿಲ್ಲೆಗಳಿಂದ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರಾಣಿ, ಪಕ್ಷಿ ಪ್ರಿಯರು, ಪ್ರವಾಸಿಗರು ಬರುತ್ತಿದ್ದರು. ಆದರೆ, ಈ ಕಿಲ್ಲರ್ ಕೊರೊನಾ ಅಟ್ಟಹಾಸದಿಂದ ಮೃಗಾಲಯಕ್ಕೆ ಬೀಗ ಬಿದ್ದಿದೆ. ಹೀಗಾಗಿ ಬಿಂಕದಕಟ್ಟಿ ಮೃಗಾಲಯಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಇಲ್ಲಿನ ಪ್ರಾಣಿಗಳನ್ನು ಸಾಕುವುದು ಅರಣ್ಯ ಇಲಾಖೆಗೆ ಕಷ್ಟ ಸಾಧ್ಯವಾಗಿದೆ. ಇತ್ತೀಚೆಗೆ ಸ್ಯಾಂಡಲ್‍ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಝೂ ಗಳಲ್ಲಿನ ಪ್ರಾಣಿಗಳನ್ನ ದತ್ತು ಪಡೆಯುವುದಕ್ಕೆ ಕರೆ ನೀಡಿದ್ದರು. ಇದರಿಂದ ಅಭಿಮಾನಿಗಳು ಮುಂದೆ ಬಂದು ಅನೇಕ ಪ್ರಾಣಿಗಳನ್ನು ದತ್ತು ಪಡೆಯುತ್ತಿದ್ದಾರೆ. ನಟ ದರ್ಶನ್ ಕರೆಯಿಂದ ನಮ್ಮ ಬಿಂಕದಕಟ್ಟಿ ಮೃಗಾಲಯಕ್ಕೆ 4 ಲಕ್ಷಕ್ಕೂ ಅಧಿಕ ಹಣ ಹರಿದು ಬರುತ್ತಿದೆ. ಇನ್ನು ಅಭಿಮಾನಿಗಳು ಮುಂದೆ ಬಂದು ದತ್ತು ಪಡೆಯಬಹುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

    ಈ ಮೃಗಾಲಯದಲ್ಲಿ 37 ಜಾತಿಯ 396 ಪ್ರಾಣಿ ಪಕ್ಷಿಗಳಿವೆ. ಗಿಳಿ, ಹದ್ದು, ಕಾಡು ಕೋಳಿ, ಎಮ್ಮೊ ಕೋಳಿ, ಕೋಗಿಲೆ, ನವಿಲು ನಂತಹ ಅನೇಕ ಜಾತಿಯ ಪಕ್ಷಿಗಳಿವೆ. ನರಿ, ಕರಡಿ, ಹುಲಿ, ಚಿರತೆ, ಸಿಂಹಗಳಂತಹ ಕ್ರೂರ ಪ್ರಾಣಿಗಳು ಈ ಮೃಗಾಲಯದಲ್ಲಿ ಕಾಣಬಹುದು. ಇದರ ನಿರ್ವಹಣೆಗೆ ವಾರ್ಷಿಕ 1 ಕೋಟಿ 90 ಲಕ್ಷ ರೂಪಾಯಿ ವ್ಯವವಾಗುತ್ತದೆ. ಡೋನೇಷನ್ ರೂಪದಲ್ಲಿ 45 ಸಾವಿರ ರೂಪಾಯಿ ಬಂದಿದೆ. ಲಾಕ್‍ಡೌನ್‍ಗೂ ಮುನ್ನ ಪ್ರವೇಶ ಫೀಜ್ ನಿಂದಾಗಿ 2 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಉಳಿದ ಸುಮಾರು 1 ಕೋಟಿ 80 ಲಕ್ಷ ರೂಪಾಯಿಯಷ್ಟು ಸರ್ಕಾರಕ್ಕೆ ಹೊರೆಯಾಗುತ್ತದೆ. ಹೀಗಾಗಿ ಝೂಗಳಲ್ಲಿ ಪ್ರಾಣಿ ಪಕ್ಷಿಗಳ ದತ್ತು ಪಡೆಯಲು ಅವಕಾಶ ಮಾಡಲಾಗಿದೆ. ವಾರ್ಷಿಕ 1 ಸಾವಿರ ರೂಪಾಯಿಯಿಂದ 1 ಲಕ್ಷದ ವರೆಗೆ ಹಣ ಪಾವತಿಸಿ ವಿವಿಧ ಪ್ರಾಣಿ, ಪಕ್ಷಿಗಳನ್ನು ದತ್ತು ಪಡೆಯಲು ಅವಕಾಶವಿದೆ. ಈ ವರ್ಷ ವಿವಿಧ ದಾನಿಗಳಿಂದ ಕೇವಲ 4 ಲಕ್ಷ ಮಾತ್ರ ಸಂಗ್ರಹವಾಗಿತ್ತು. ನಟ ದರ್ಶನ್ ಕರೆ ನೀಡಿದ ನಂತರ ಅವರ ಅಭಿಮಾನಿಗಳು ಮತ್ತೆ 4 ಲಕ್ಷ ರೂಪಾಯಿ ಮೊತ್ತ ನೀಡಿ ಜನರು ಪ್ರಾಣಿಗಳ ದತ್ತು ಪಡೆದಿದ್ದಾರೆ. ಜನ ಮುಂದೆ ಬಂದು ಮೂಕ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ನಾನು ದರ್ಶನ್ ಎನ್ನುವ ಮೂಲಕ ನೀವು ಬನ್ನಿ ಪ್ರಾಣಿ ಪಕ್ಷಿ ರಕ್ಷಿಸಿ ಎಂದು ಪ್ರಾಣಿ ಪ್ರಿಯರು ಹೇಳುತ್ತಿದ್ದಾರೆ.

    ಮಾತನಾಡುವ ಮನುಜನನ್ನು ದತ್ತು ತೆಗೆದುಕೊಂಡು ಮಾನವೀಯತೆ ಮೆರೆಯುವುದನ್ನು ನೋಡಿದ್ದೇವೆ. ಆದರೆ ಮಾತು ಬಾರದ ಈ ಮೂಕ ಪ್ರಾಣಿಗಳಿಗೆ ಮನ ಮಿಡಿಯುವ ಹೃದಯವಂತರು ಬೇಕಾಗಿದೆ. ಪ್ರಮುಖವಾಗಿ ಮಾಂಸಾಹಾರಿ ಪ್ರಾಣಿಗಳನ್ನು ದಾನಿಗಳು ದತ್ತು ಪಡೆಯುವಂತೆ ಮೃಗಾಲಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಸರ್ಕಾರ ಕೂಡಾ ಇಂಥಹ ಕಾರ್ಯಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಿ ಅನುದಾನ ಬಿಡುಗಡೆ ಮಾಡಬೇಕಾಗಿದೆ. ಇದನ್ನೂ ಓದಿ: ಉತ್ತರ ಕನ್ನಡದ ಜೋಯಿಡಾದಲ್ಲಿ ಭೂಕುಸಿತ- ಹೆದ್ದಾರಿ ಬಂದ್

  • ಒಂದು ಗಿಡ ಬಿಟ್ಟು ಇಡೀ ಬಾಳೆ ತೋಟ ನಾಶಗೊಳಿಸಿದ ಆನೆಗಳು

    ಒಂದು ಗಿಡ ಬಿಟ್ಟು ಇಡೀ ಬಾಳೆ ತೋಟ ನಾಶಗೊಳಿಸಿದ ಆನೆಗಳು

    – ಅಚ್ಚರಿಯ ವೀಡಿಯೋ ವೈರಲ್

    ಚೆನ್ನೈ: ಸಾಮಾನ್ಯವಾಗಿ ಆನೆಗಳನ್ನು ದೈತ್ಯ ಜೀವಿಗಳು ಎಂದು ಕರೆಯಲಾಗುತ್ತದೆ. ಏಕೆಂದರೆ ಅವುಗಳು ಮರಗಳನ್ನು ಉರುಳಿಸಬಹುದು ಮತ್ತು ಒಂದೇ ಬಾರಿಗೆ ಎಲ್ಲವನ್ನು ವಿನಾಶ ಮಾಡುತ್ತದೆ. ಇತರ ಪ್ರಾಣಿಗಳಿಗೆ ಹೋಲಿಸಿದರೆ ಆನೆಗಳಿಗೆ ಹೆಚ್ಚು ಬುದ್ಧಿ, ಸಮಯಪ್ರಜ್ಞೆ, ಹೃದಯವಂತಿಕೆ ಹೊಂದಿದೆ ಎಂದೇ ಹೇಳಬಹುದು.

    ಸದ್ಯ ಇದಕ್ಕೆ ಸಾಕ್ಷಿ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ವೈರಲ್ ಆಗುತ್ತಿದ್ದು, ತಮಿಳುನಾಡಿನ ಹಳ್ಳಿಯೊಂದರಲ್ಲಿ ಕಾಡು ಆನೆಗಳ ಗುಂಪು ಬಾಳೆ ತೋಟದ ಮೇಲೆ ದಾಳಿ ನಡೆಸಿ 300ಕ್ಕೂ ಅಧಿಕ ಬಾಳೆ ಗಿಡಗಳನ್ನು ನೆಲಕ್ಕುರುಳಿಸಿವೆ. ಇಡೀ ತೋಟವನ್ನು ಸಂಪೂರ್ಣ ನಾಶ ಪಡಿಸಿದ ಆನೆಗಳು ಅಲ್ಲಿಯೇ ಇದ್ದ ಪುಟ್ಟ ಪುಟ್ಟ ಪಕ್ಷಿಗಳ ಗೂಡಿನ ಮರವನ್ನು ಮಾತ್ರ ಹಾಗೆಯೇ ಬಿಟ್ಟು ಹೋಗಿದೆ. ಇದನ್ನು ನೋಡಿ ಗ್ರಾಮಸ್ಥರು ಬೆರಗಾಗಿದ್ದಾರೆ.

    ಈ ವೀಡಿಯೋವನ್ನು ಅರಣ್ಯ ಸೇವೆ(ಐಎಫ್‍ಎಸ್) ಅಧಿಕಾರಿ ಸುಸಂತಾ ನಂದಾರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ವೀಡಿಯೋದಲ್ಲಿ ಕಾಡು ಆನೆಗಳು ಬಾಳೆ ತೋಟವನ್ನು ನಾಶಪಡಿಸಿದ್ದು, ಪುಟ್ಟ ಪುಟ್ಟ ಪಕ್ಷಿಗಳ ಮರಿಗಳಿದ್ದ, ಹಕ್ಕಿಯ ಗೂಡಿಗೆ ಮಾತ್ರ ಯಾವುದೇ ಹಾನಿಗೊಳಿಸದಿರುವುದನ್ನು ಕಾಣಬಹುದಾಗಿದೆ.

    ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅನೇಕ ಮಂದಿ ವೀಕ್ಷಿಸಿದ್ದು, ಲೈಕ್ಸ್ ಹಾಗೂ ಕಾಮೆಂಟ್‍ಗಳ ಸುರಿ ಮಳೆಯೇ ಹರಿದುಬರುತ್ತಿದೆ.

  • ಕೇರಳದಲ್ಲಿ ಹಕ್ಕಿ ಜ್ವರ ಪತ್ತೆ- ಎರಡು ಜಿಲ್ಲೆಗಳಲ್ಲಿ ಹೈ ಅಲರ್ಟ್

    ಕೇರಳದಲ್ಲಿ ಹಕ್ಕಿ ಜ್ವರ ಪತ್ತೆ- ಎರಡು ಜಿಲ್ಲೆಗಳಲ್ಲಿ ಹೈ ಅಲರ್ಟ್

    – ಹಕ್ಕಿ ಜ್ವರವನ್ನು ರಾಜ್ಯ ವಿಪತ್ತು ಎಂದು ಘೋಷಿಸಿದ ಸರ್ಕಾರ
    – 48 ಸಾವಿರ ಪಕ್ಷಿಗಳನ್ನು ಕೊಲ್ಲಲು ನಿರ್ಧಾರ

    ತಿರುವನಂತಪುರಂ: ಹಕ್ಕಿ ಜ್ವರ ರಾಜ್ಯ ವಿಪತ್ತು ಎಂದು ಕೇರಳ ಸರ್ಕಾರ ಘೋಷಿಸಿದೆ. ರಾಜ್ಯದ ಕೊಟ್ಟಯಂ ಹಾಗೂ ಆಲಪ್ಪುಳ ಜಿಲ್ಲೆಗಳಲ್ಲಿ ಈ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಸರ್ಕಾರ ಹೈ ಅಲರ್ಟ್ ಘೋಷಿಸಿದೆ.

    ಎರಡೂ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸತ್ತ ಬಾತುಕೋಳಿಗಳ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ವೇಳೆ ಹಕ್ಕಿ ಜ್ವರ ಇರುವುದು ಪತ್ತೆಯಾಗಿದೆ. ಆದರೆ ಈ ಜ್ವರವೂ ಮನುಷ್ಯರಿಗೆ ಹರಡಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

    ಹಕ್ಕಿ ಜ್ವರದಿಂದಾಗಿ ಕೊಟ್ಟಯಂನ ನೀಂದೂರ್ ಪಂಚಾಯಿತಿ ವ್ಯಾಪ್ತಿಯ ಜಮೀನಿನಲ್ಲಿ ಸುಮಾರು 1,650 ಬಾತುಕೋಳಿಗಳು ಸಾವನ್ನಪ್ಪಿದ್ದು, ಇದು ಪ್ರತ್ಯೇಕ ಪ್ರದೇಶವಾದ್ದರಿಂದ ಜನರಿಗೆ ಹರಡಿಲ್ಲ ಎನ್ನಲಾಗಿದೆ. ಆದರೂ ಕೊಟ್ಟಯಂ ಜಿಲ್ಲೆಯಲ್ಲಿ ತಲಾ 5 ಜನರ 8 ತಂಡಗಳನ್ನು ನೇಮಿಸಲಾಗಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ.

    ಕೇವಲ ಕೊಟ್ಟಯಂ ಮಾತ್ರವಲ್ಲದೆ ಆಲಪ್ಪುಳ ಹಾಗೂ ಕುಟ್ಟನಾಡ್ ಪ್ರದೇಶದಲ್ಲಿ ಸಹ ಈ ಹಕ್ಕಿ ಜ್ವರ ಪತ್ತೆಯಾಗಿರುವುದು ಆತಂಕವನ್ನು ಸೃಷ್ಟಿಸಿದೆ. ತಲವಾಡಿ, ಎಡತ್ವಾ, ಪಲ್ಲಿಪಾಡ್ ಹಾಗೂ ತಜಕ್ಕರ ಪಂಚಾಯಿತಿ ಪ್ರದೇಶಗಳಿಗೂ ಹಬ್ಬಿದೆ. ಅನೇಕ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸಹ ತೆರೆಯಲಾಗಿದೆ. ಅಲ್ಲದೆ ರ್ಯಾಪಿಡ್ ರಿಸ್ಪಾನ್ಸ್ ಫೋರ್ಸ್‍ಗಳನ್ನು ಹಾಕಲಾಗಿದೆ.

    ಅಲ್ಲದೆ ಹಕ್ಕಿ ಜ್ವರದ ಭೀತಿಯಿಂದಾಗಿ ನಿಯಂತ್ರಣಕ್ಕೆ ತರಲು ಒಂದು ಕಿ.ಮೀ.ವ್ಯಾಪ್ತಿಯಲ್ಲಿನ ಎಲ್ಲ ಪಕ್ಷಿಗಳನ್ನು ಕೊಲ್ಲುವ ನಿರ್ಧಾರ ಕೈಗೊಳ್ಳಲಾಗಿದೆ. ಸಾಕು ಪಕ್ಷಿಗಳನ್ನೂ ಸೇರಿದಂತೆ ಸುಮಾರು 48 ಸಾವಿರ ಪಕ್ಷಿಗಳನ್ನು ಕೊಲ್ಲಲಾಗುತ್ತಿದೆ.

    ವನ್ಯಜೀವಿ ಸಚಿವ ಕೆ.ರಾಜು ಅವರು ಈ ಕುರಿತು ಮಾತನಾಡಿ, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಳಿಕ ರೈತರಿಗೆ ಪರಿಹಾರ ನೀಡುವ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

    ಕಳೆದ ವರ್ಷ ಸಹ ಕೋಯಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು. ಈ ವೇಳೆ ಸಹ ಜನರಿಗೆ ಹರಡಬಾರದು ಎಂಬ ಮುನ್ನೆಚ್ಚರಿಕೆ ಉದ್ದೇಶದಿಂದ ಹಕ್ಕಿಗಳನ್ನು ಕೊಲ್ಲಲಾಗಿತ್ತು.

  • ಗದಗಿನ ಮಾಗಡಿ ಕೆರೆಯಲ್ಲಿ ವಿದೇಶಿ ಬಾನಾಡಿಗಳ ಕಲರವ

    ಗದಗಿನ ಮಾಗಡಿ ಕೆರೆಯಲ್ಲಿ ವಿದೇಶಿ ಬಾನಾಡಿಗಳ ಕಲರವ

    ಗದಗ: ಉತ್ತರ ಕರ್ನಾಟಕದ ಗದಗ ಜಿಲ್ಲೆಯಲ್ಲೂ ಪಕ್ಷಿದಾಮವೊಂದು ಪ್ರಸಿದ್ಧಿಯಾಗಿದ್ದು, ಪ್ರತಿವರ್ಷ ಚಳಿಗಾಲದಲ್ಲಿ ವಿದೇಶಿ ಬಾನಾಡಿಗಳ ದಂಡು ಇಲ್ಲಿ ಲಗ್ಗೆ ಇಡುತ್ತವೆ. ಅಲ್ಲಿಯ ವಿದೇಶಿ ಬಾನಾಡಿಗಳ ಚಿಲಿಪಿಲಿ ಕಲರವಗಳ ಚೆಲ್ಲಾಟ ನೋಡಲು ಎರಡು ಕಣ್ಣುಗಳು ಸಾಲದು.

    ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದ ಸುಮಾರು 130 ಎಕರೆ ವಿಸ್ತೀರ್ಣ ಹೊಂದಿರುವ ಐತಿಹಾಸಿಕ ಕೆರೆಯಿದು. ದೇಶ-ವಿದೇಶಿ ಪಕ್ಷಿಗಳ ಆಗಮನದಿಂದ ಪ್ರವಾಸಿಗರನ್ನು ಈ ಕೆರೆ ಆಕರ್ಷಿಸುತ್ತಿದೆ. ಮಂಗೊಲಿಯಾ, ಆಸ್ಟ್ರೇಲಿಯಾ, ಜಪಾನ್, ಪಾಕಿಸ್ತಾನ್, ಟಿಬೇಟ್ ಹೀಗೆ ಅನೇಕ ಕಡೆಯಿಂದ ಸಾವಿರಾರು ಹಕ್ಕಿಗಳು ಪ್ರತಿವರ್ಷ ಚಳಿಗಾಲಕ್ಕೆ ಇಲ್ಲಿಗೆ ಲಗ್ಗೆ ಇಡುತ್ತವೆ. ಆ ದೇಶದ ಹವಾಮಾನವೇ ಈ ಪಕ್ಷಿಗಳು ಇಲ್ಲಿಗೆ ಬರಲು ಕಾರಣ ಎನ್ನಲಾಗುತ್ತಿದೆ.

    ಜಿಲ್ಲೆ ಮಾಗಡಿ ಕೆರೆಗೆ ಬರುವ ಪಕ್ಷಿಗಳಾದ ಬಾರ್ ಹೆಡೆಡ್ ಗೂಸ್, ಬ್ರಾಮಿಣಿ ಡೆಕ್, ಬ್ಲಾಕ್ ಐಬಿಸ್, ಇಟಲ್ ಗಿಬ್ಸ್, ರೆಡ್ ಥಾರ್ಟ್, ಪಾಂಟೆಡ್ ಸ್ಪಾರ್ಕ್ ಸೇರಿದಂತೆ ಅನೇಕ ಜಾತಿಯ ವಿದೇಶಿ ಪಕ್ಷಿಗಳು ಇಲ್ಲಿಗೆ ಆಗಮಿಸುತ್ತವೆ. ಈ ಪಕ್ಷಿಗಳ ಹಾರಾಟ, ಕೂಗಾಟ ಅಂದ-ಚಂದ ಸವಿಯಲು ಎರಡು ಕಣ್ಣುಗಳು ಸಾಲದು. ಗುಂಪು ಗುಂಪಾಗಿ ರಾಕೆಟ್‍ನಂತೆ ಹಾರಿ ಬರುತ್ತವೆ. ಇವುಗಳನ್ನ ನೋಡಲು ಅನೇಕ ಜಿಲ್ಲೆಗಳಿಂದ ಜನರು ಬರುತ್ತಾರೆ. ಕೆಲವು ಪಕ್ಷಿ ಪ್ರೇಮಿಗಳು ಇವುಗಳ ಫೋಟೋ ಶೂಟ್‍ಗಾಗಿ ಅಂತಾನೆ ಬಂದು, ಕೆರೆಯ ದಡದಲ್ಲಿ ಕೂತು ಫೋಟೋ ಕ್ಲಿಕ್ ಮಾಡುವ ಮೂಲಕ ಸಂತೋಷ ಪಡುತ್ತಾರೆ.

    ವಿದೇಶಿ ಪಕ್ಷಿಗಳು ಡಿಸೆಂಬರ್ ತಿಂಗಳಲ್ಲಿ ಈ ಕೆರೆಗೆ ಬರಲು ಪ್ರಾರಂಭಿಸುತ್ತವೆ. ಫೆಬ್ರವರಿವರೆಗೆ ಅಂದರೆ ಸುಮಾರು ಮೂರು-ನಾಲ್ಕು ತಿಂಗಳ ಕಾಲ ಈ ಮಾಗಡಿ ಕೆರೆಯಲ್ಲಿ ಪಕ್ಷಿಗಳು ವಾಸವಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ. ಈ ವಿದೇಶಿ ಪಕ್ಷಿಗಳು ರಾತ್ರಿಯಾಗುತ್ತಿದ್ದಂತೆ ಆಹಾರಕ್ಕಾಗಿ ಸುತ್ತಮುತ್ತಲಿನ ಜಮೀನುಗಳಿಗೆ ಹೊರಡುತ್ತವೆ. ರಾತ್ರಿ ಹೊತ್ತು ಆಹಾರಕ್ಕೆ ಹೋದರೆ ಮತ್ತೆ ಮುಂಜಾನೆ ಕೆರೆಗೆ ಮರಳುತ್ತವೆ.

    ಈ ಪಕ್ಷಿಗಳನ್ನ ನೋಡಲು ನಿತ್ಯವು ರಾಜ್ಯದ ನಾನಾ ಭಾಗದಿಂದಲೂ ಅಷ್ಟೇ ಅಲ್ಲ, ಗೋವಾ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಪ್ರವಾಸಿಗರು ಸಹ ಇಲ್ಲಿಗೆ ಬರುತ್ತಿದ್ದಾರೆ. ಹೀಗಾಗಿ ಕೆರೆ ಸುತ್ತಲು ಫುಟ್ ಪಾತ್, ಕುಡಿಯುವ ನೀರು, ಉದ್ಯಾನವನ, ಕುಳಿತುಕೊಳ್ಳಲು ಬೆಂಚ್ ಅಥವಾ ಆಸನದ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಕ್ಯಾಂಟೀನ್ ಹೀಗೆ ಪ್ರವಾಸಿಗರಿಗೆ ಅನೇಕ ಮೂಲಭೂತ ಸೌಲಭ್ಯಗಳನ್ನ ನೀಡಬೇಕು. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದರತ್ತ ಗಮನ ಹರಿಸಬೇಕು ಎಂಬುದು ಪ್ರವಾಸಿಗರ ಹಾಗೂ ಸ್ಥಳೀಯರ ಬೇಡಿಕೆಯಾಗಿದೆ.

  • ಸಿಲಿಕಾನ್ ಸಿಟಿಯಲ್ಲೊಂದು ವೈಜ್ಞಾನಿಕ ಪಕ್ಷಿಲೋಕ

    ಸಿಲಿಕಾನ್ ಸಿಟಿಯಲ್ಲೊಂದು ವೈಜ್ಞಾನಿಕ ಪಕ್ಷಿಲೋಕ

    ಬೆಂಗಳೂರು: ಸಿಲಿಕಾನ್ ಸಿಟಿ ಅಂದಾಕ್ಷಣ ಕಣ್ಮುಂದೆ ಬರುವುದೇ ಇಲ್ಲಿನ ಟ್ರಾಫಿಕ್ ಕಿರಿಕಿರಿ. ಎತ್ತ ನೋಡಿದರೂ ಜನ ದಟ್ಟಣೆ. ಬೃಹತ್ ಅಪಾರ್ಟ್ ಮೆಂಟ್ ಗಳು, ಐಟಿಬಿಟಿ ಸೆಂಟರ್, ಇದರ ನಡುವೆ ಜಗತ್ತಿನ ನಾನಾ ಭಾಗದ ಪಕ್ಷಿಗಳು, ಕಾಡಿನ ಬುಡಕಟ್ಟು ಜನರು ಕೂಡ ಸಿಲಿಕಾನ್ ಸಿಟಿಗೆ ಎಂಟ್ರಿ ಕೊಟ್ಟಿದ್ದಾರೆ

    ಬೆಂಗಳೂರಿನ ಮಾರತಹಳ್ಳಿಯಲ್ಲಿ ಇಂಟರ್ ನ್ಯಾಷನಲ್ ರೋಬೋಟಿಕ್ ಬರ್ಡ್ಸ್ ವರ್ಲ್ಡ್ ಎಂಬ ವೈಜ್ಞಾನಿಕ ಪಕ್ಷಿಲೋಕವೊಂದು ಅನಾವರಣಗೊಂಡಿದೆ. ಇಲ್ಲಿ ಅಪರೂಪದ ಪಕ್ಷಿಗಳಾದ ಪೆಂಗ್ವಿನ್ ಗಳು, ಅಳಿವಿನಂಚಿನಲ್ಲಿರುವ ಆಸ್ಟ್ರಿಚ್, ಎಲಿಫಟ್ ಹಕ್ಕಿಗಳು, ನವಿಲುಗಳು ಮತ್ತು ಅಪರೂಪದ ಫೈರ್ ಡ್ರ್ಯಾಗನ್ ಇದೆ. ಇವೆಲ್ಲ ರೋಬೋಟಿಕ್ ಬರ್ಡ್ಸ್ ಅನ್ನೋದು ವಿಶೇಷ.

    ಸತತ 2 ತಿಂಗಳ ಕಾಲ 30 ಜನ ಕಲಾವಿದರ ಪರಿಶ್ರಮದಿಂದ ರೋಬೋಟ್ ಪಕ್ಷಿಗಳನ್ನ ನಿರ್ಮಾಣ ಮಾಡಲಾಗಿದೆ. ಕೇವಲ ಪಕ್ಷಿ ವೀಕ್ಷಣೆ ಉದ್ದೇಶವಾಗಿರದೆ, ಜನರಲ್ಲಿ ಪಕ್ಷಿಗಳ ಬಗ್ಗೆ ಆಸಕ್ತಿ ಮೂಡಿಸುವುದು ಇದರ ಗುರಿಯಾಗಿದೆ. ಅಲ್ಲದೆ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು, ಶಿಲಾಯುಗ, ಕಾಡಲ್ಲಿ ವಾಸಿಸೋ ಆದಿವಾಸಿಗಳ ಬದುಕು, ಪ್ರಾಣಿ ಪಕ್ಷಿಗಳ ವೈವಿಧ್ಯಮಯ ಪ್ರದರ್ಶನ ಇದಾಗಿದೆ ಎಂದು ಕಾರ್ಯಕ್ರಮ ಆಯೋಜಕ ಖಾನ್ ಹೇಳ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಪ್ರವಾಸಿಗರಿಗೆ ಎರಡು ದಿನ ಕೆಆರ್ ಎಸ್, ಬೃಂದಾವನ ಪ್ರವೇಶ ನಿಷೇಧ

    ಪ್ರವಾಸಿಗರಿಗೆ ಎರಡು ದಿನ ಕೆಆರ್ ಎಸ್, ಬೃಂದಾವನ ಪ್ರವೇಶ ನಿಷೇಧ

    ಮಂಡ್ಯ: ಮಂಗಳವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಪ್ರಾಣ ಹಾನಿಯಾಗಿದ್ದ ಪರಿಣಾಮ ಎರಡು ದಿನಗಳ ಕಾಲ ಪ್ರವಾಸಿಗರಿಗೆ ಕೆಆರ್‍ಎಸ್, ಬೃಂದಾವನ ಪ್ರವೇಶ ನಿಷೇಧಿಸಲಾಗಿದೆ.

    ಮಂಗಳವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವವಿಖ್ಯಾತ ಕೆಆರ್ ಎಸ್‍ನ ಬೃಂದಾವನದ ಎರಡು ಮರಗಳು ಉರುಳಿಬಿದ್ದಿವೆ. 30 ಕ್ಕೂ ಹೆಚ್ಚು ಮರದ ರೆಂಬೆಕೊಂಬೆಗಳು ಮುರಿದು ಬಿದ್ದಿರುವುದರಿಂದ ಮರದಲ್ಲಿದ್ದ ನೂರಾರು ಪಕ್ಷಿಗಳು ಧರೆಗುರುಳಿ ನರಳಾಡುತ್ತಿವೆ. ತಮಿಳುನಾಡು ಮೂಲದ ಓರ್ವ, ಕೇರಳ ಮೂಲದ ಇಬ್ಬರು ಸೇರಿ ಮೂವರು ಮೃತಪಟ್ಟು, ಹನ್ನೊಂದು ಪ್ರವಾಸಿಗರು ಗಾಯಗೊಂಡಿದ್ದರು. ಈ ಹಿನ್ನೆಲೆ ಬೃಂದಾವನ ಪ್ರವೇಶ ನಿಷೇಧ ಮಾಡಲಾಗಿದೆ. ಮರಗಳ ತೆರವು ಕಾರ್ಯಾಚರಣೆ ನಡೆಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪ್ರವೇಶ ನಿಷೇಧಿಸಲಾಗಿದೆ ಅಂತ ನಿಗಮದ ಇಇ ಬಸವರಾಜೇಗೌಡ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೆಆರ್​ಎಸ್ ಬಳಿ ವರುಣನ ಅವಾಂತರ – ಮರ ಬಿದ್ದು ಮೂವರು ಪ್ರವಾಸಿಗರ ಸಾವು

    ಕೆಲವು ಪಕ್ಷಿಗಳು ಮರದಿಂದ ಬಿದ್ದು ಗಾಯಗೊಂಡು ನರಳಾಡುತ್ತಿವೆ. ಪಕ್ಷಿಗಳ ಸ್ಥಿತಿ ನೋಡಿ ಸಂಕಟಪಡುತ್ತಿರುವ ಸಾರ್ವಜನಿಕರು ಗಾಯಗೊಂಡಿರುವ ಪಕ್ಷಿಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ಅಧಿಕಾರಿಗಳನ್ನು ಆಗ್ರಹಿಸುತ್ತಿದ್ದಾರೆ.

    ವಿಶ್ವವಿಖ್ಯಾತ ಕೆಆರ್ ಎಸ್ ಬೃಂದಾವನದಲ್ಲಿ ಮೊದಲ ಬಾರಿಗೆ ಈ ರೀತಿಯ ಅವಘಡ ನಡೆದಿದ್ದು, ಮುರಿದು ಬಿದ್ದ ಮರಗಳು, ರೆಂಬೆಕೊಂಬೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಹೀಗಾಗಿ ಯಾವುದೇ ರೀತಿಯ ತೊಂದರೆಯಾಗದಂತೆ ಪ್ರವಾಸಿಗರಿಗೆ ಎರಡು ದಿನ ಕೆಆರ್‍ಎಸ್ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.