Tag: ಪಕ್ಷೇತರ

  • ರಾಜಕೀಯ ಹೈಡ್ರಾಮಕ್ಕೆ ತೆರೆ – 14 ತಿಂಗಳ ದೋಸ್ತಿ ಸರ್ಕಾರ ಪತನ

    ರಾಜಕೀಯ ಹೈಡ್ರಾಮಕ್ಕೆ ತೆರೆ – 14 ತಿಂಗಳ ದೋಸ್ತಿ ಸರ್ಕಾರ ಪತನ

    ಬೆಂಗಳೂರು: ಒಂದು ವರ್ಷದ ಹಿಂದೆ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರ ಪತನಗೊಂಡಿದೆ. ಈ ಮೂಲಕ 18 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಕ್ಕೆ ಪೂರ್ಣವಿರಾಮ ಬಿದ್ದಿದೆ.

    ಇಂದಿನ ವಿಶ್ವಾಸ ಮತಯಾಚನೆಯ ವೇಳೆ ಒಟ್ಟು 20 ಶಾಸಕರು ಗೈರು ಹಾಜರಿ ಹಾಕಿದ್ದರು. ಕಾಂಗ್ರೆಸ್ಸಿನ 14, ಜೆಡಿಎಸ್‍ನ 3 ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರ ಜೊತೆ ಬಿಎಸ್‍ಪಿಯ ಎನ್ ಮಹೇಶ್ ಗೈರಾಗಿದ್ದರು. ಇಂದು ದೋಸ್ತಿ ಪಕ್ಷದ ಒಟ್ಟು 99 ಶಾಸಕರು ಹಾಜರಾಗಿದ್ದರೆ ಬಿಜೆಪಿಯ 105 ಶಾಸಕರು ಹಾಜರಾಗಿದ್ದರು.

    ವಿಶ್ವಾಸಮತಯಾಚನೆ ವೇಳೆ ಸರ್ಕಾರದ ಪರವಾಗಿ 99 ಮತಗಳು ಬಿದ್ದರೆ ವಿರುದ್ಧವಾಗಿ 105 ಮತಗಳು ಬಿದ್ದವು. ಈ ಮೂಲಕ ಸಿಎಂ ಸಲ್ಲಿಸಿದ್ದ  ವಿಶ್ವಾಸ ಮತಯಾಚನೆ ಬಿದ್ದು ಹೋಗಿದೆ.

    ಸದನದಲ್ಲಿ ಮಾತನಾಡಿದ ಸಿಎಂ, ನಾಡಿನ ಜನ ನಮ್ಮನ್ನು ಕ್ಷಮಿಸಲಾರರು. ಹೀಗಾಗಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ತಡವಾಗಿದ್ದಕ್ಕೆ ಕ್ಷಮೆ ಕೋರುತ್ತೇನೆ ಎಂದರು. ಮನುಷ್ಯ ತಪ್ಪು ಮಾಡುವುದು ಸಹಜ. ಹೀಗಾಗಿ ಹೋದವರು ಮರಳಿ ಬರಬಹುದು ಎನ್ನುವ ಕಾರಣಕ್ಕೆ ವಿಳಂಬವಾಯಿತು ಎಂದು ತಿಳಿಸಿದರು.

    ಜೆಡಿಎಸ್‍ನಿಂದ ರಾಜೀನಾಮೆ ಕೊಟ್ಟಿದ್ದ ಹುಣಸೂರು ಶಾಸಕ ಎಚ್ ವಿಶ್ವನಾಥ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಹಾಗೂ ಕೆ. ಆರ್ ಪೇಟೆಯ ನಾರಾಯಣ ಗೌಡ ಸದನಕ್ಕೆ ಬಂದಿರಲಿಲ್ಲ.

    ಕಾಂಗ್ರೆಸ್ಸಿನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಯಶವಂತಪುರದ ಎಸ್.ಟಿ ಸೋಮಶೇಖರ್, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್, ಅಥಣಿಯ ಮಹೇಶ್ ಕುಮಟಳ್ಳಿ, ಕೆ.ಆರ್ ಪುರಂನ ಭೈರತಿ ಬಸವರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ರಾಜರಾಜೇಶ್ವರಿ ನಗರದ ಮುನಿರತ್ನ ಹಾಗೂ ಶಿವಾಜಿನಗರದ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್,  ವಿಜಯನಗರದ ಆನಂದ್ ಸಿಂಗ್  ಗೈರಾಗಿದ್ದರು.

    ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಕಾಗವಾಡದ ಶ್ರೀಮಂತ ಪಾಟೀಲ್, ಬಳ್ಳಾರಿಯ ನಾಗೇಂದ್ರ ಸದನಕ್ಕೆ ಬಂದಿರಲಿಲ್ಲ. ಪಕ್ಷೇತರ ಶಾಸಕರಾದ ಮುಳಬಾಗಿಲು ಶಾಸಕ ಎಚ್ ನಾಗೇಶ್ ಹಾಗೂ ರಾಣೆಬೆನ್ನೂರು ಶಾಸಕ ಆರ್ ಶಂಕರ್ ಕೂಡ ಸದನಕ್ಕೆ ಗೈರು ಹಾಜರಿ ಹಾಕಿದ್ದರು.

  • ವಿಶ್ವಾಸಮತಯಾಚನೆಗೆ 20 ಶಾಸಕರು ಗೈರು

    ವಿಶ್ವಾಸಮತಯಾಚನೆಗೆ 20 ಶಾಸಕರು ಗೈರು

    ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಚರ್ಚೆ ಆರಂಭಗೊಂಡಿದ್ದು ಒಟ್ಟು 20 ಶಾಸಕರು ಗೈರು ಹಾಜರಿ ಹಾಕಿದ್ದಾರೆ.

    ಇಂದು ಸದನದಲ್ಲಿ ನಡೆಯುತ್ತಿರುವ ವಿಶ್ವಾಸ ಮತಯಾಚನೆ ಚರ್ಚೆಗೆ ಕಾಂಗ್ರೆಸ್ಸಿನ 14, ಜೆಡಿಎಸ್‍ನ 3 ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರ ಜೊತೆ ಬಿಎಸ್‍ಪಿಯ ಎನ್ ಮಹೇಶ್ ಗೈರಾಗಿದ್ದಾರೆ.

    ಜೆಡಿಎಸ್‍ನಿಂದ ರಾಜೀನಾಮೆ ಕೊಟ್ಟಿದ್ದ ಹುಣಸೂರು ಶಾಸಕ ಎಚ್ ವಿಶ್ವನಾಥ್, ಮಾಹಾಲಕ್ಷ್ಮಿ ಲೇ ಔಟ್ ಶಾಸಕ ಗೊಪಾಲಯ್ಯ ಹಾಗೂ ಕೆ. ಆರ್ ಪೇಟೆಯ ನಾರಾಯಣ ಗೌಡ ಸದನಕ್ಕೆ ಬಂದಿಲ್ಲ.

    ಇತ್ತ ರಾಜೀನಾಮೆ ಕೊಟ್ಟ ಕೈ ಶಾಸಕರು ಕೂಡ ಸದನಕ್ಕೆ ಎಂಟ್ರಿ ಕೊಟ್ಟಿಲ್ಲ. ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಯಶವಂತಪುರದ ಎಸ್.ಟಿ ಸೋಮಶೇಖರ್, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್, ಅಥಣಿಯ ಮಹೇಶ್ ಕುಮಟಳ್ಳಿ, ಕೆ.ಆರ್ ಪುರಂನ ಭೈರತಿ ಬಸವರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ರಾಜರಾಜೇಶ್ವರಿ ನಗರದ ಮುನಿರತ್ನ ಹಾಗೂ ಶಿವಾಜಿನಗರದ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಕಾಗವಾಡದ ಶ್ರೀಮಂತ ಪಾಟೀಲ್, ಬಳ್ಳಾರಿಯ ನಾಗೇಂದ್ರ ವಿಶ್ವಾಸಮತಯಾಚನೆ ಬಾರದೆ ಕೈ ಕೊಟ್ಟಿದ್ದಾರೆ.

    ಪಕ್ಷೇತರ ಶಾಸಕರಾದ ಮುಳಬಾಗಿಲು ಶಾಸಕ ಎಚ್ ನಾಗೇಶ್ ಹಾಗೂ ರಾಣೆಬೆನ್ನೂರು ಶಾಸಕ ಆರ್ ಶಂಕರ್ ಕೂಡ ಸದನಕ್ಕೆ ಗೈರಾಗಿದ್ದಾರೆ.

  • ಈಗಲ್ ಟನ್ ರೆಸಾರ್ಟ್ ನಿಂದ ನೇರವಾಗಿ ಬೆಂಗ್ಳೂರಿನತ್ತ ಬಿಬಿಎಂಪಿ ಪಕ್ಷೇತರ ಸದಸ್ಯರು!

    ಈಗಲ್ ಟನ್ ರೆಸಾರ್ಟ್ ನಿಂದ ನೇರವಾಗಿ ಬೆಂಗ್ಳೂರಿನತ್ತ ಬಿಬಿಎಂಪಿ ಪಕ್ಷೇತರ ಸದಸ್ಯರು!

    ರಾಮನಗರ: ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಪಕ್ಷೇತರ ಸದಸ್ಯರು ಬಿಡದಿಯ ಈಗಲ್ ಟನ್ ರೆಸಾರ್ಟ್ ನಿಂದ ನೇರವಾಗಿ ಚುನಾವಣೆಯಲ್ಲಿ ಭಾಗವಹಿಸಲು ತೆರಳಲಿದ್ದಾರೆ.

    ಬಿಜೆಪಿಯಿಂದ ಹೈಜಾಕ್ ಮಾಡುವ ಭೀತಿಯಿಂದ ಕಾಂಗ್ರೆಸ್‍ನ ಶಾಸಕರು ಐವರು ಬಿಬಿಎಂಪಿ ಪಕ್ಷೇತರ ಸದಸ್ಯರನ್ನ ಈಗಲ್‍ಟನ್‍ಗೆ ರೆಸಾರ್ಟ್ ಗೆ ಗುರುವಾರ ಕರೆತಂದಿದ್ದರು. ಐವರು ಪಕ್ಷೇತರ ಸದಸ್ಯರ ಹೊಣೆ ಹೊತ್ತಿರುವ ಶಾಸಕರಾದ ಮುನಿರತ್ನ, ಎಸ್.ಟಿ ಸೋಮಶೇಖರ್ ಹಾಗೂ ಭೈರತಿ ಬಸವರಾಜ್ ಕೂಡಾ ಈಗಲ್ ಟನ್ ರೆಸಾರ್ಟ್ ನಲ್ಲೇ ಉಳಿದಿದ್ದಾರೆ.

    ಇದೇ ವೇಳೆ ಮಾತನಾಡಿದ ಶಾಸಕ ಭೈರತಿ ಬಸವರಾಜ್ ಪಕ್ಷೇತರ ಸದಸ್ಯರನ್ನು ಬಿಜೆಪಿ ಹಲವು ಆಮಿಷಗಳನ್ನು ಒಡ್ಡುವ ಮೂಲಕ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಅವರನ್ನು ಈಗಲ್ ಟನ್ ರೆಸಾರ್ಟ್ ಗೆ ಕರೆ ತಂದಿದ್ದೇವೆ. ಇಲ್ಲಿಂದಲೇ ನೇರವಾಗಿ ಚುನಾವಣೆಯಲ್ಲಿ ಭಾಗವಹಿಸುತ್ತೇವೆ. ಬಿಜೆಪಿ ಜೊತೆಗೆ ಹೋಗಿರುವ ಇನ್ನಿಬ್ಬರು ಪಕ್ಷೇತರ ಸದಸ್ಯರಾದ ಆನಂದ್ ಹಾಗೂ ರಮೇಶ್‍ರನ್ನ ಸಂಪರ್ಕಿಸಿ ಮಾತನಾಡಿದ್ದೇವೆ. ಅವರು ಕೂಡಾ ನಮ್ಮ ಜೊತೆ ಬರುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೇ ನಾವು ಕೂಡಾ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.

    ಪಕ್ಷೇತರ ಬಿಬಿಎಂಪಿ ಸದಸ್ಯ ಲಕ್ಷ್ಮಿನಾರಾಯಣ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಯಾದಂತೆ, ಬಿಬಿಎಂಪಿಯಲ್ಲೂ ಸಮ್ಮಿಶ್ರ ಸರ್ಕಾರ ರಚನೆಯಾಗುತ್ತೆ. ರಮೇಶ್ ಹಾಗೂ ಆನಂದ್ ಗೆ ಏನಾಗಿದೆ ಎಂಬುದು ಗೊತ್ತಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿದೆ, ಮೊನ್ನೆ ಜೊತೆಗಿದ್ದವರು ಇಂದು ಸಂಪರ್ಕಕ್ಕೆ ಸಿಕ್ಕಿಲ್ಲ. ನಮಗೆ ಸಹಕಾರ ನೀಡಿದಂತೆ ಅವರಿಗೂ ನೀಡಿದ್ದರು. ನಾವು ಮೂರು ವರ್ಷಗಳಿಂದ ಜೊತೆಯಲ್ಲಿದ್ದೇವೆ ಮುಂದೆಯೂ ಇರುತ್ತೇವೆ. ಕಾಂಗ್ರೆಸ್-ಜೆಡಿಎಸ್ ಪಕ್ಷೇತರ ಸದಸ್ಯರೆಲ್ಲಾ ಸೇರಿ ಬಿಬಿಎಂಪಿ ಅಧಿಕಾರ ಚುಕ್ಕಾಣಿ ಹಿಡಿಯುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿಎಂ ಆಪ್ತನ ಸೊಸೆಗೆ ತಪ್ಪಿದ ಟಿಕೆಟ್ – ಪಕ್ಷೇತರವಾಗಿ ನಿಂತ ರೆಬೆಲ್ ಮಹಿಳಾ ಅಭ್ಯರ್ಥಿಗಳು

    ಸಿಎಂ ಆಪ್ತನ ಸೊಸೆಗೆ ತಪ್ಪಿದ ಟಿಕೆಟ್ – ಪಕ್ಷೇತರವಾಗಿ ನಿಂತ ರೆಬೆಲ್ ಮಹಿಳಾ ಅಭ್ಯರ್ಥಿಗಳು

    ರಾಯಚೂರು: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸಾಕಷ್ಟು ಜನ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಟಿಕೆಟ್ ವಂಚಿತರಿದ್ದಾರೆ. ಆದರೆ ಎರಡು ಕ್ಷೇತ್ರಗಳಲ್ಲಿ ಮಾತ್ರ ಜಿದ್ದಿಗೆ ಬಿದ್ದಿರುವ ಮಹಿಳಾ ಟಿಕೆಟ್ ಆಕಾಂಕ್ಷಿಗಳು ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ತಮ್ಮದೇ ಆದ ಓಟ್ ಬ್ಯಾಂಕ್ ಹೊಂದಿರುವ ಈ ಮಹಿಳೆಯರು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ನಿದ್ದೆಗೆಡಿಸಿದ್ದಾರೆ.

    ನಾರಿ ಮುನಿದರೆ ಮಾರಿ ಅನ್ನೋ ಹಾಗೇ ರಾಯಚೂರು ಜಿಲ್ಲೆಯ ದೇವದುರ್ಗ ಹಾಗೂ ಮಾನ್ವಿ ಕ್ಷೇತ್ರಗಳಲ್ಲಿ ಟಿಕೆಟ್ ವಂಚಿತ ಮಹಿಳಾ ಅಭ್ಯರ್ಥಿಗಳೇ ಇಲ್ಲಿ ನಿರ್ಣಾಯಕರಾಗಿದ್ದಾರೆ. ಮಾನ್ವಿ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಡಾ.ಪ್ರೀತಿ ಮೇತ್ರಿ, ಇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಎಂ.ಈರಣ್ಣ ಸೊಸೆ. ತಮ್ಮ ಸೊಸೆಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು ಎಂ.ಈರಣ್ಣ ಎಷ್ಟೇ ಪ್ರಯತ್ನ ಮಾಡಿದರೂ ಟಿಕೆಟ್ ಸಿಗಲಿಲ್ಲ.

    ಸತತ 2 ಬಾರಿ ಶಾಸಕರಾಗಿರುವ ಹಂಪಯ್ಯ ನಾಯಕ್‍ ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ ನಾನು ಪಕ್ಷೇತರರಾಗಿ ಕಣಕ್ಕಿಳಿದಿದ್ದೇನೆ. ಕುರುಬ ಸಮಾಜದ ಬೆಂಬಲ ಜೊತೆಗೆ 2,38,598 ಮತದಾರರಲ್ಲಿ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಾಗಿರುವುದು ನನಗೆ ವರದಾನವಾಗಿದೆ. ಅಲ್ಲದೆ ಕಾಂಗ್ರೆಸ್ ಮತಗಳು ಹೊಡೆಯುವುದರಿಂದ ಕಾಂಗ್ರೆಸ್‍ಗೂ ಹೊಡೆತ ಬೀಳಲಿದೆ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಡಾ.ಪ್ರೀತಿ ಮೇತ್ರಿ ಹೇಳಿದ್ದಾರೆ.

    ಕಳೆದ ಎರಡು ವರ್ಷಗಳಿಂದ ದೇವದುರ್ಗ ಕ್ಷೇತ್ರದಲ್ಲಿ ನಿರಂತರ ಓಡಾಟದಲ್ಲಿರುವ ಕರೆಮ್ಮ ನಾಯಕ್ ಜೆಡಿಎಸ್ ಟಿಕೆಟ್ ವಂಚಿತರು. ಇವರು ಕಳೆದ ದೇವದುರ್ಗ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ 9156 ಮತಗಳನ್ನ ಪಡೆದು ಮೂರನೇ ಸ್ಥಾನ ಪಡೆದಿದ್ದರು. ಆದರೆ ಈಗ ತಮ್ಮದೇ ಆದ ಓಟ್ ಬ್ಯಾಂಕ್ ಹೊಂದಿರುವ ಕರೆಮ್ಮ ನಾಯಕ್‍ಗೆ ಜೆಡಿಎಸ್ ವರಿಷ್ಠರು ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡದೆ ಬಿಜೆಪಿಯಿಂದ ಬಂದ ವೆಂಕಟೇಶ್ ಪೂಜಾರಿಗೆ ಟಿಕೆಟ್ ನೀಡಿದ್ದಾರೆ. ಹೀಗಾಗಿ ಕರೆಮ್ಮ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.

    ಕ್ಷೇತ್ರದ ಜನರ ಜೊತೆ ನಿರಂತರ ಸಂಪರ್ಕದಲ್ಲಿರುವುದು ಕರೆಮ್ಮ ನಾಯಕ್‍ ಗೆ ಪ್ಲಸ್ ಪಾಯಿಂಟ್ ಆಗಬಹುದು. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೆಗೌಡ ಅವರು ಕರೆಮ್ಮ ನಾಯಕ್ ತಮ್ಮ ಉಮೇದುವಾರಿಕೆ ಹಿಂಪಡೆಯಲು ಮನವೊಲಿಸಲು ಜಿಲ್ಲಾ ಮುಖಂಡರಿಗೆ ಸೂಚಿಸಿದ್ದರು. ಆದರೆ ಕರೆಮ್ಮ ಪಕ್ಷ ಸಂಘಟನೆಗೆ ಬೆಲೆ ಸಿಕ್ಕಲ್ಲ ಅಂತ ಪಕ್ಷೇತರರಾಗಿ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ವಿರೂಪಾಕ್ಷಿ ತಿಳಿಸಿದ್ದಾರೆ.

    ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿಯ ಶಿವನಗೌಡ ನಾಯಕ್, ಕಾಂಗ್ರೆಸ್‍ ನ ರಾಜಶೇಕರ್ ನಾಯಕ್‍ ಗೂ ಕರೆಮ್ಮ ನಾಯಕ್ ಸವಾಲಾಗಿದ್ದಾರೆ. ಇನ್ನೂ ಮಾನ್ವಿ ಕ್ಷೇತ್ರದಲ್ಲಿ ಪ್ರೀತಿ ಮೇತ್ರಿ ಪಕ್ಷೇತರರಾದರೂ ಸಾಕಷ್ಟು ಜನ ಬೆಂಬಲ ಹೊಂದಿದ್ದಾರೆ.