Tag: ಪಟಾಕಿ ಗೋದಾಮು

  • ಹಾವೇರಿಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ – ಮೂವರು ಕಾರ್ಮಿಕರು ಸಜೀವ ದಹನ

    ಹಾವೇರಿಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ – ಮೂವರು ಕಾರ್ಮಿಕರು ಸಜೀವ ದಹನ

    ಹಾವೇರಿ: ಹಾವೇರಿ (Haveri) ಹೊರವಲಯದ ಆಲದಕಟ್ಟಿ ಗ್ರಾಮದ ಬಳಿ ಪಟಾಕಿ ಗೋದಾಮಿಗೆ (Firecracker Godown) ಬೆಂಕಿ ತಗುಲಿದ ಪರಿಣಾಮ ಮೂವರು ಕಾರ್ಮಿಕರು ಸಜೀವ ದಹನ ಆಗಿರುವ ದುರ್ಘಟನೆ ನಡೆದಿದೆ.

    ದ್ಯಾಮಪ್ಪ ಓಲೇಕಾರ, ರಮೇಶ್ ಬಾರ್ಕಿ ಹಾಗೂ ಶಿವಲಿಂಗ ಅಕ್ಕಿ ಎಂಬವರ ಮೃತದೇಹ ಪತ್ತೆಯಾಗಿದೆ. ಮೃತರು ತಾಲೂಕಿನ ಕಾಟೇನಹಳ್ಳಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಇವರು ಪಟಾಕಿ ಅಂಗಡಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಪಟಾಕಿ ಸಂಗ್ರಹ ಘಟಕಕ್ಕೆ ಬೆಂಕಿ – 1.5 ಕೋಟಿ ರೂ. ಮೌಲ್ಯದ ಪಟಾಕಿ ಭಸ್ಮ

    ಗಣೇಶ ಹಬ್ಬದ ನಿಮಿತ್ತವಾಗಿ ಪಟಾಕಿ ಸಾಮಾಗ್ರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದವು. ಹೀಗಾಗಿ ಮಾಲೀಕರು ಕೆಲಸಕ್ಕೆಂದು ಆಳುಗಳನ್ನು ಕರೆತಂದಿದ್ದರು. ಬೆಳಗ್ಗೆ 11 ಗಂಟೆಯಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೆ 3 ಮೃತದೇಹಗಳನ್ನು ಶವಗಾರಕ್ಕೆ ಸಾಗಿಸಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

    ಗಣೇಶನ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ, ಪ್ರತಿ ವರ್ಷದಂತೆ ಈ ವರ್ಷವೂ ಕೋಟ್ಯಂತರ ರೂಪಾಯಿ ಮೌಲ್ಯದ ಪಟಾಕಿ ತರಲಾಗಿತ್ತು. ಆದರೆ ಒಂದೇ ಒಂದು ಸಣ್ಣ ಬೆಂಕಿಯ ಕಿಡಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಇಡೀ ಗೋದಾಮು ಬೆಂಕಿಗೆ ಆಹುತಿ ಆಗಿದೆ. ಭೂಮಿಕಾ ಪಟಾಕಿ ಅಂಗಡಿಯ ಗೋದಾಮಿನಲ್ಲಿ ಸುಮಾರು 1.5 ಕೋಟಿ ರೂ. ಮೌಲ್ಯದ ಪಟಾಕಿ ಇದ್ದವು. ಹಾವೇರಿ ನಿವಾಸಿ ಕುಮಾರ ಸಾತೇನಹಳ್ಳಿ ಎಂಬವರಿಗೆ ಸೇರಿದ ಪಟಾಕಿ ಅಂಗಡಿಯಾಗಿದೆ. ಇದನ್ನೂ ಓದಿ: ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಟಾಕಿ ಗೋದಾಮಿನಲ್ಲಿ ಸ್ಫೋಟ – ಒಂದೇ ಕುಟುಂಬದ ನಾಲ್ವರು ಸೇರಿ 9 ಮಂದಿ ಸಾವು

    ಪಟಾಕಿ ಗೋದಾಮಿನಲ್ಲಿ ಸ್ಫೋಟ – ಒಂದೇ ಕುಟುಂಬದ ನಾಲ್ವರು ಸೇರಿ 9 ಮಂದಿ ಸಾವು

    ಚೆನ್ನೈ: ತಮಿಳುನಾಡಿನ (Tamil Nadu) ಕೃಷ್ಣಗಿರಿ ಜಿಲ್ಲೆಯಲ್ಲಿ ಪಟಾಕಿ ಗೋದಾಮಿನಲ್ಲಿ (Firecracker Godown) ಸ್ಫೋಟ ಸಂಭವಿಸಿದ ಪರಿಣಾಮ ಕಟ್ಟಡ ಕುಸಿದು 9 ಮಂದಿ ದುರ್ಮರಣಕ್ಕೀಡಾಗಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

    ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ದಾರುಣ ಘಟನೆ ನಡೆದಿದೆ. ಮೃತರನ್ನು ಪಟಾಕಿ ಗೋದಾಮಿನ ಮಾಲೀಕ ರವಿ, ಅವರ ಪತ್ನಿ ಜಯಶ್ರೀ, ಪುತ್ರಿ ರುತಿಕ್ಕ ಮತ್ತು ಮಗ ರುತೀಶ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ CBI

    ಗೋದಾಮಿನ ಬಳಿ ರೆಸ್ಟೋರೆಂಟ್ ನಡೆಸುತ್ತಿದ್ದ ರಾಜೇಶ್ವರಿ, ವೆಲ್ಡಿಂಗ್ ಶಾಪ್ ಹೊಂದಿದ್ದ ಇಬ್ರಾಹಿಂ ಮತ್ತು ಇಬ್ರಾಹಿಂ, ವಾಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸರಸು ಮತ್ತು ಜೇಮ್ಸ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

    ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಇದೀಗ ಕುಸಿದ ಕಟ್ಟಡದೊಳಗೆ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಲ್ಲದೇ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ಉದ್ಯೋಗಕ್ಕೆ ತರಬೇತಿ ನಡೆಸಿದ್ದ ಯುವತಿ -‌ ಕೊಲೆಗೆ 3 ದಿನಗಳ ಹಿಂದೆಯೇ ಸ್ಕೆಚ್‌ ಹಾಕಿದ್ದ ಪಾಪಿ ಪ್ರೇಮಿ!

    ರಕ್ಷಣಾ ಕ್ರಮವನ್ನು ಪರಿಶೀಲಿಸುತ್ತಿರುವ ಜಿಲ್ಲಾಧಿಕಾರಿ ಕೆ.ಎಂ.ಸರಯೂ ಅವರು, ಅವಘಡದಲ್ಲಿ ಗಾಯಗೊಂಡ 15 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು 5 ಮಂದಿ ಅವಶೇಷಗಳೊಳಗೆ ಸಿಲುಕಿದ್ದು, ಓರ್ವ ವ್ಯಕ್ತಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]