Tag: ಪಟಾಕಿ ನಿಷೇಧ

  • ಭಾರತ-ಪಾಕ್ ಯುದ್ಧ ಭೀತಿ; ಚಂಡೀಗಢ ಸರ್ಕಾರದಿಂದ 2 ತಿಂಗಳು ಪಟಾಕಿ ಬ್ಯಾನ್

    ಭಾರತ-ಪಾಕ್ ಯುದ್ಧ ಭೀತಿ; ಚಂಡೀಗಢ ಸರ್ಕಾರದಿಂದ 2 ತಿಂಗಳು ಪಟಾಕಿ ಬ್ಯಾನ್

    -ರಾಜಸ್ಥಾನದ ಜೈಸಲ್ಮೇರ್‌ನಲ್ಲೂ ಪಟಾಕಿ ಮಾರಾಟ, ಖರೀದಿ ನಿಷೇಧ

    ಚಂಡೀಗಢ: ಭಾರತ ಮತ್ತು ಪಾಕಿಸ್ತಾನದ (India-Pakistan) ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಚಂಡೀಗಢ ಸರ್ಕಾರ (Chandigarh Government) 2 ತಿಂಗಳುಗಳ ಕಾಲ ಪಟಾಕಿ ನಿಷೇಧಿಸಿದೆ.

    ಪಹಲ್ಗಾಮ್ ದಾಳಿಯ (Pahalgam Terrorist Attack) ಬಳಿಕ ಭಾರತ ಹಾಗೂ ಪಾಕ್ ನಡುವಿನ ಕಾದಾಟ ಹೆಚ್ಚಾಗುತ್ತಿದೆ. ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ `ಆಪರೇಷನ್ ಸಿಂಧೂರ’ದಡಿಯಲ್ಲಿ (Operation Sindoor) ಭಾರತೀಯ ಸೇನೆ ಪಾಕ್ ಮೇಲೆ ವಾಯುದಾಳಿ ನಡೆಸಿತ್ತು. ಬಳಿಕ ಗುರುವಾರ ರಾತ್ರಿ ಪಾಕಿಸ್ತಾನ ನಡೆಸಿದ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತವು ತಕ್ಕ ಉತ್ತರ ನೀಡಿದೆ.ಇದನ್ನೂ ಓದಿ: ನಮ್ಮ ನಾಯಕ ಹೇಡಿ.. ಮೋದಿ ಹೆಸರು ಹೇಳುವುದಕ್ಕೂ ಹೆದರುತ್ತಿದ್ದಾರೆ: ತಮ್ಮ ಪ್ರಧಾನಿ ವಿರುದ್ಧವೇ ಗುಡುಗಿದ ಪಾಕ್ ಸಂಸದ

    ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಯುದ್ಧ ಭೀತಿ ಹಿನ್ನೆಲೆ ಇದೀಗ ಚಂಡೀಗಢ ಸರ್ಕಾರ ಎರಡು ತಿಂಗಳುಗಳ ಪಟಾಕಿ ನಿಷೇಧಿಸಿದೆ. ಮದುವೆ, ಶುಭ ಸಮಾರಂಭಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ. ಇನ್ನೂ ರಾಜಸ್ಥಾನದ ಜೈಸಲ್ಮೇರ್‌ನಲ್ಲಿಯೂ (Jaisalmer) ಪಟಾಕಿ ಸಿಡಿಸುವುದರ ಜೊತೆಗೆ ಮಾರಾಟ ಹಾಗೂ ಖರೀದಿಯನ್ನು ನಿಷೇಧಿಸಿಲಾಗಿದೆ.

    ಈ ಕುರಿತು ಚಂಡೀಗಢ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಶಾಂತ್ ಕುಮಾರ್ ಯಾದವ್ ಮಾತನಾಡಿ, 2023ರ ಬಿಎನ್‌ಎಸ್ (BNS) ಸೆಕ್ಷನ್ 163ರ ಅಡಿಯಲ್ಲಿ 2025ರ ಮೇ 09 ರಿಂದ ಜುಲೈ 7ರವರೆಗೆ ಪಟಾಕಿ ನಿಷೇಧಿಸಲಾಗಿದೆ ಎಂದು ಆದೇಶಿಸಿದ್ದಾರೆ.

    ಮದುವೆ, ಶುಭ ಸಮಾರಂಭ ಹಾಗೂ ಧಾರ್ಮಿಕ ಹಬ್ಬಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಕಾರಣ ಯುದ್ಧ ಭೀತಿಯ ಸಂದರ್ಭದಲ್ಲಿ ಈ ರೀತಿ ಪಟಾಕಿ ಶಬ್ದವು ಡ್ರೋನ್ ಹಾಗೂ ಕ್ಷಿಪಣೆ ದಾಳಿಯ ಭ್ರಮೆಯನ್ನು ಸೃಷ್ಟಿಸಿ, ಸಾರ್ವಜನಿಕರಲ್ಲಿ ಭಯ ಉಂಟು ಮಾಡುತ್ತದೆ. ಹೀಗಾಗಿ ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

  • ದೀಪಾವಳಿ ಹೊಸ್ತಿಲಲ್ಲೇ ಪಟಾಕಿ ಬ್ಯಾನ್ ಮಾಡಿದ ದೆಹಲಿ ಸರ್ಕಾರ

    ದೀಪಾವಳಿ ಹೊಸ್ತಿಲಲ್ಲೇ ಪಟಾಕಿ ಬ್ಯಾನ್ ಮಾಡಿದ ದೆಹಲಿ ಸರ್ಕಾರ

    – ಜ.1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ, ಬಳಕೆಗೆ ಬ್ರೇಕ್

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆ ಪಟಾಕಿ ಮಾರಾಟ ಹಾಗೂ ಬಳಕೆಯನ್ನು 2025ರ ಜನವರಿ 1 ರ ವರೆಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ (Delhi Government) ತಿಳಿಸಿದೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿಯ ಪರಿಸರ ಸಚಿವ ಗೋಪಾಲ್ ರೈ (Gopal Rai), ಕೇಜ್ರಿವಾಲ್ ಸರ್ಕಾರವು ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲೆ ಸಂಪೂರ್ಣ ನಿಷೇಧವನ್ನು ವಿಧಿಸಿದೆ. 2025ರ ಜನವರಿ 1ರ ವರೆಗೆ ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯ ಮೊದಲ ಹಂತ ಉದ್ಘಾಟನೆ ಬೆನ್ನಲ್ಲೆ ಕೇಂದ್ರ ಸರ್ಕಾರ ಆಕ್ಷೇಪ

    ಚಳಿಗಾಲದ ಅಧಿವೇಶನದಲ್ಲಿ ವಾಯುಮಾಲಿನ್ಯವನ್ನು ತಡೆಯುವ 21 ಅಂಶಗಳ ಯೋಜನೆಯ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪರಿಸರ ಇಲಾಖೆಯು ಮಾಲಿನ್ಯದ ಹಾಟ್‌ಸ್ಪಾಟ್‌ಗಳಲ್ಲಿ ಗಾಳಿಯ ಗುಣಮಟ್ಟ ಮೇಲ್ವಿಚಾರಣೆ ಮಾಡಲು ಡ್ರೋನ್‌ಗಳನ್ನು ಬಳಸುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ದರ್ಶನ್‌ ಜೊತೆಗೆ ಸಂಪರ್ಕ ಬೆಳೆದಿದ್ದು ಹೇಗೆ? – ಎಳೆಎಳೆಯಾಗಿ ಬಿಚ್ಚಿಟ್ಟ ಪವಿತ್ರಾಗೌಡ

    ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejrival) ಅವರ ನೇತೃತ್ವದಲ್ಲಿ, ಚಳಿಗಾಲದಲ್ಲಿ ಉಂಟಾಗುವ ಮಾಲಿನ್ಯ ಸಮಸ್ಯೆ ಎದುರಿಸಲು ಸರ್ಕಾರ ತೀವ್ರ ಸಿದ್ಧತೆಗಳನ್ನು ನಡೆಸಿದೆ. ನಮ್ಮ ಸರ್ಕಾರವು ದೆಹಲಿಯಲ್ಲಿ ವಾಯುಮಾಲಿನ್ಯವನ್ನು ಕಡಿಮೆ ಮಾಡಲು ನಿರಂತರವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇದರ ಪರಿಣಾಮವಾಗಿ ಕಳೆದ 9 ವರ್ಷಗಳಲ್ಲಿ ಸುಮಾರು 30 ಪ್ರತಿಶತದಷ್ಟು ಮಾಲಿನ್ಯವನ್ನು ಕಡಿಮೆ ಮಾಡಲಾಗಿದೆ ಎಂದರು.

  • ದೆಹಲಿಗೆ ಸಮೀಪವಿರುವ 14 ಜಿಲ್ಲೆಗಳಲ್ಲಿ ಪಟಾಕಿ ನಿಷೇಧಿಸಿದ ಹರಿಯಾಣ

    ದೆಹಲಿಗೆ ಸಮೀಪವಿರುವ 14 ಜಿಲ್ಲೆಗಳಲ್ಲಿ ಪಟಾಕಿ ನಿಷೇಧಿಸಿದ ಹರಿಯಾಣ

    ಚಂಡೀಗಢ: ದೀಪಾವಳಿ ಹಿನ್ನೆಲೆಯಲ್ಲಿ ದೆಹಲಿಗೆ ಸಮೀಪವಿರುವ ತನ್ನ 14 ಜಿಲ್ಲೆಗಳಲ್ಲಿ ಪಟಾಕಿ ಮಾರಾಟ ಹಾಗೂ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ಹರಿಯಾಣ ಸರ್ಕಾರ ಆದೇಶ ಹೊರಡಿಸಿದೆ. ಆನ್‌ಲೈನ್‌ ಶಾಪಿಂಗ್‌ನಲ್ಲೂ ಪಟಾಕಿ ಮಾರಾಟ ಮಾಡುವಂತಿಲ್ಲ ಎಂದು ಸ್ಪಷ್ಟ ಸೂಚನೆ ನೀಡಿದೆ.

    FIREWORKS

    ಪಟಾಕಿ ಸಿಡಿಸುವುದರಿಂದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸಮಸ್ಯೆ ಆಗಲಿದೆ. ಕೋವಿಡ್‌-19ಕ್ಕೆ ಒಳಗಾಗಿ ಹೋಂ ಐಸೊಲೇಷನ್‌ ಆಗಿರುವವರಿಗೆ ಇದರಿಂದ ಮತ್ತಷ್ಟು ಅಪಾಯ ಎದುರಾಗಬಹುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ಮೋದಿ ಪ್ರಧಾನಿ ಆಗಲು ಕಾಂಗ್ರೆಸ್ ಕಾರಣ: ಸಿದ್ದರಾಮಯ್ಯ

    ಭಿವಾನಿ, ಛಾರ್ಖಿ ದಾದ್ರಿ, ಫರೀದಾಬಾದ್‌, ಗುರುಗ್ರಾಮ, ಝಜ್ಜರ್‌, ಜಿಂದ್‌, ಕರ್ನಾಲ್‌, ಮಹೇಂದ್ರಘರ್‌, ನಹ್‌, ಪಲ್ವಾಲ್‌, ಪಾಣಿಪತ್‌, ರೆವಾರಿ, ರೋಹ್ಟಕ್‌, ಸೋನಿಪತ್‌ ಜಿಲ್ಲೆಗಳಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿದೆ.

    DEEPAVALI

    ಉಳಿದಂತೆ ನಗರ ಹಾಗೂ ಪಟ್ಟಣಗಳಿಗೂ ಈ ಆದೇಶ ಅನ್ವಯವಾಗಲಿದೆ. ವಾಯು ಗುಣಮಟ್ಟವನ್ನು ಆಧರಿಸಿ ಪಟಾಕಿ ಸಿಡಿಸಲು ಅನುಮತಿ ನೀಡಲಾಗಿದೆ. ಹಸಿರು ಪಟಾಕಿ ಸಿಡಿಸಲು ಯಾವುದೇ ನಿರ್ಬಂಧವಿಲ್ಲ. ಇದನ್ನೂ ಓದಿ: ನೀರಜ್ ಚೋಪ್ರಾಗೆ XUV 700 ಕಾರ್ ಗಿಫ್ಟ್ ನೀಡಿದ ಮಹೀಂದ್ರಾ

    ಮದುವೆ ಮತ್ತು ಇನ್ನಿತರ ಸಮಾರಂಭಗಳಲ್ಲಿ ಹಸಿರು ಪಟಾಕಿ ಮಾತ್ರ ಸಿಡಿಸಬಹುದು. ಇತರೆ ಹಬ್ಬಗಳಲ್ಲಿ ಪ್ರಕಟಣೆಯಲ್ಲಿ ಸೂಚಿಸಿರುವ ಸಮಯದಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

  • ಪಟಾಕಿ ನಿಷೇಧಿಸಿದರೆ ನಿರ್ದಿಷ್ಟ ಸಮುದಾಯ ವಿರೋಧಿ ಎಂದರ್ಥವಲ್ಲ- ಸುಪ್ರೀಂ ಕೋರ್ಟ್‌

    ಪಟಾಕಿ ನಿಷೇಧಿಸಿದರೆ ನಿರ್ದಿಷ್ಟ ಸಮುದಾಯ ವಿರೋಧಿ ಎಂದರ್ಥವಲ್ಲ- ಸುಪ್ರೀಂ ಕೋರ್ಟ್‌

    ನವದೆಹಲಿ: ಪಟಾಕಿಯನ್ನು ನಿಷೇಧಿಸುವುದು ನಿರ್ದಿಷ್ಟ ಗುಂಪು ಅಥವಾ ಸಮುದಾಯಕ್ಕೆ ವಿರುದ್ಧವಾದದ್ದು ಎಂಬ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ. ಸಂಭ್ರಮದ ನೆಪದಲ್ಲಿ ನಾಗರಿಕರ ಹಕ್ಕುಗಳ ಉಲ್ಲಂಘನೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ.

    fireworks

    ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್‌.ಷಾ ಮತ್ತು ಎ.ಎಸ್‌.ಬೋಪಣ್ಣ ಅವರಿದ್ದ ಪೀಠವು, ತನ್ನ ಆದೇಶಗಳ ಸಂಪೂರ್ಣ ಅನುಷ್ಠಾನವನ್ನು ಬಯಸುತ್ತದೆ ಎಂದು ಸ್ಪಷ್ಟಪಡಿಸಿತು. ಇದನ್ನೂ ಓದಿ: ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜಾಮೀನು ಮಂಜೂರು

    ಸಂಭ್ರಮದ ನೆಪವನ್ನು ಮುಂದಿಟ್ಟು ನೀವು (ತಯಾರಕರು) ನಾಗರಿಕರ ಜೀವನದಲ್ಲಿ ಆಟವಾಡುವುದು ಸರಿಯಲ್ಲ. ನಾವು ಯಾವುದೇ ಸಮುದಾಯದ ವಿರುದ್ಧವಿಲ್ಲ. ನಾಗರಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ನಾವಿದ್ದೇವೆ ಎಂಬ ಸ್ಪಷ್ಟ ಸಂದೇಶ ನೀಡುತ್ತಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

    ಈ ಹಿಂದೆ ಪಟಾಕಿ ನಿಷೇಧ ಆದೇಶವನ್ನು ವಿಸ್ತೃತ ಕಾರಣಗಳನ್ನು ನೀಡಿದ ನಂತರ ಜಾರಿಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

    FIREWORKS

    ಎಲ್ಲ ಪಟಾಕಿಗಳನ್ನು ನಿಷೇಧಿಸಿಲ್ಲ. ಸಾರ್ವಜನಿಕ ಹಿತದೃಷ್ಟಿಯಿಂದ ಅನಿಸಿಕೆ ವ್ಯಕ್ತವಾಗಿದೆ. ಇದನ್ನು ನಿರ್ದಿಷ್ಟ ಉದ್ದೇಶಕ್ಕಾಗಿ ನಿಷೇಧಿಸಲಾಗಿದೆ ಎಂದು ಬಿಂಬಿಸಬಾರದು ಎಂದು ಕೋರ್ಟ್‌ ಹೇಳಿದೆ.

    ಇಂದಿಗೂ ಪಟಾಕಿಗಳು ಮಾರುಕಟ್ಟೆಯಲ್ಲಿ ಮುಕ್ತವಾಗಿ ಲಭ್ಯವಿವೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಬಿಸಿಲಿಗೆ ತಲೆ ಸುತ್ತಿ ಬಿದ್ದ ವಿದ್ಯಾರ್ಥಿಗಳು – ಹಾಡಿಗೆ ನೃತ್ಯ ಮಾಡಿದ ಅಧಿಕಾರಿಗಳು

    ಜನರ ಹಕ್ಕುಗಳ ರಕ್ಷಣೆಗೆ ನಾವಿದ್ದೇವೆಂಬ ಸಂದೇಶವನ್ನು ನೀಡುತ್ತಿದ್ದೇವೆ. ಶೇ. 100 ಪಟಾಕಿಗಳನ್ನು ನಿಷೇಧಿಸಲು ಸಾಧ್ಯವಿಲ್ಲ. ಆದರೆ ದೆಹಲಿಯಲ್ಲಿ ವಾಯುಮಾಲಿನ್ಯದಿಂದಾಗಿ ಜನರು ಎಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆಂಬುದು ಎಲ್ಲರಿಗೂ ತಿಳಿದಿದೆ ಎಂದು ಪೀಠ ಎಚ್ಚರಿಸಿತು.

    ಪೀಠವು  ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ

    ಪಟಾಕಿ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲು ಈ ಹಿಂದೆ ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಪರವಾನಗಿ ಹೊಂದಿರುವ ವ್ಯಾಪಾರಿಗಳು ಮಾತ್ರ ಮಾರಾಟ ಮಾಡಬಹುದು, ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬಹುದು ಎಂದು ಈಗ ತಿಳಿಸಿದೆ. ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

  • ಬ್ಲಡ್‍ಲೆಸ್ ಬಕ್ರಿದ್, ನಾಯ್ಸ್ ಲೆಸ್ ಫ್ರೈಡೇನೂ ಮಾಡೋಣ – ಪಟಾಕಿ ನಿಷೇಧಕ್ಕೆ ಯತ್ನಾಳ್ ಗರಂ

    ಬ್ಲಡ್‍ಲೆಸ್ ಬಕ್ರಿದ್, ನಾಯ್ಸ್ ಲೆಸ್ ಫ್ರೈಡೇನೂ ಮಾಡೋಣ – ಪಟಾಕಿ ನಿಷೇಧಕ್ಕೆ ಯತ್ನಾಳ್ ಗರಂ

    ಬೆಂಗಳೂರು: ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿರುವುದಕ್ಕೆ ಅಡಳಿತ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ತಮ್ಮದೇ ಸರ್ಕಾರವನ್ನು ಕುಟುಕಿರುವ ಯತ್ನಾಳ್, ಇಕೋ ಫ್ರೆಂಡ್ಲಿ ಗಣೇಶ ಹಬ್ಬ ಮತ್ತು ನಾಯ್ಸ್ ಲೆಸ್ ದೀಪಾವಳಿ ರೀತಿಯಲ್ಲೇ ಬ್ಲಡ್‍ಲೆಸ್ ಬಕ್ರೀದ್, ನಾಯ್ಸ್ ಲೆಸ್ ಫ್ರೈಡೇನೂ ಮಡೋಣ ಎಂದು ಪೋಸ್ಟ್ ಹಾಕಿದ್ದಾರೆ.

    ಈ ವಿಚಾರವಾಗಿ ಫೇಸ್‍ಬುಕ್ ಪೋಸ್ಟ್ ಹಾಕಿರುವ ಅವರು, ಹಿಂದೂಗಳು ಸಾಮೂಹಿಕವಾಗಿ ಸೇರುವುದೇ ವರ್ಷಕ್ಕೊಮ್ಮೆ ಬರುವ ಗಣೇಶ ಹಬ್ಬ, ದಸರಾ-ದುರ್ಗಪೂಜೆ ಮತ್ತು ದೀಪವಾಳಿ ಸಮಯದಲ್ಲಿ. ಆದರೆ ಗಣೇಶ ಹಬ್ಬ ಬಂದ್ರೆ ಇಕೋ ಫ್ರೆಂಡ್ಲಿ ಗಣೇಶ ಹಬ್ಬ, ದೀಪಾವಳಿ ಬಂದ್ರೆ ನಾಯ್ಸ್ ಲೆಸ್ ದೀಪಾವಳಿ ಮಾಡಿ ಎಂದು ಭೋದನೆ ಮಾಡುತ್ತಾರೆ ಎಂದು ತಮ್ಮದೇ ಪಕ್ಷದ ತೀರ್ಮಾನಕ್ಕೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

    ಇದರ ಜೊತೆಗೆ ಇಕೋ ಫ್ರೆಂಡ್ಲಿ ಗಣೇಶ ಹಬ್ಬ ಮತ್ತು ನಾಯ್ಸ್ ಲೆಸ್ ದೀಪಾವಳಿ ಇವುಗಳ ಜೊತೆಗೆ ನಾಯ್ಸ್ ಲೆಸ್ ಫ್ರೈಡೇ, ಬ್ಲಡ್‍ಲೆಸ್ ಬಕ್ರಿದ್ ನತ್ತು ಕ್ರ್ಯಾಕರ್ಲೆಸ್ ಡಿಸೆಂಬರ್ 31 ನೈಟ್ ಇವೆಲ್ಲವುಗಳನ್ನು ಮಡೋಣ. ಬಕ್ರಿದ್‍ನಲ್ಲಿ ರಕ್ತ ಹರಿಸುವುದು ಬೇಡ. ಡಿಸೆಂಬರ್ 31ರಂದು ಪಟಾಕಿ ಹೊಡೆಯುವುದು ಬೇಡ. ಫ್ರೈಡೇ ಸ್ಪೀಕರಿನಲ್ಲಿ ಕೂಗುವುದು ಬೇಡ. ರಸ್ತೆ ಮೇಲೆ ನಮಾಜು ಮಾಡುವುದು ಬೇಡ. ಬೀದಿಲಿ ಪಟಾಕಿ ಹೊಡೆಯೋದು ಬೇಡ. ನಾವೆಲ್ಲ ಮನೆಯಲ್ಲಿ ದೀಪ ಹಚ್ಚುತ್ತೇವೆ, ಅವರು ಸ್ಪೀಕರ್ ಹಚ್ಚದೇ ನಾಮಜು ಮಾಡಲಿ ರಸ್ತೆ ಮೇಲೆ ಬೇಡ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ.

  • ಕದ್ದು ಮುಚ್ಚಿ ಪಟಾಕಿ ಸಿಡಿಸುವವರ ಮೇಲೂ ನಿಗಾ: ಸುಧಾಕರ್

    ಕದ್ದು ಮುಚ್ಚಿ ಪಟಾಕಿ ಸಿಡಿಸುವವರ ಮೇಲೂ ನಿಗಾ: ಸುಧಾಕರ್

    ಬೆಂಗಳೂರು: ಸರಳ ದೀಪಾಳಿ ಆಚರಣೆ ಮೂಲಕ ಕತ್ತಲೆಯಂತೆ ಇರುವ ಕೊರೊನಾ ದುಸ್ಥಿತಿಯಿಂದ ಬೆಳಕಿನ ಕಡೆಗೆ ಹೋಗಬೇಕಿದೆ. ನಿಯಮಗಳನ್ನು ಮೀರಿ ಕದ್ದು ಮುಚ್ಚಿ ಪಟಾಕಿ ಸಿಡಿಸುವವರ ಮೇಲೆ ನಿಗಾ ವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಪಟಾಕಿ ನಿಷೇಧ ಬಗ್ಗೆ ಸಿಎಂ ಅವರು ಘೋಷಿಸಿದ್ದಾರೆ. ಈ ಬಾರಿ ಸರಳ ದೀಪಾವಳಿ ಮಾಡಿ ಎಂದು ನಾಡಿನ ಜನರಿಗೆ ಕರೆ ನೀಡಿದ್ದಾರೆ. ಈ ವರ್ಷ ಯಾರೂ ಪಟಾಕಿ ಸಿಡಿಸದೆ ಅರ್ಥ ಪೂರ್ಣವಾಗಿ ಹಬ್ಬವನ್ನು ಆಚರಣೆ ಮಾಡಬೇಕಿದೆ. ಆರೋಗ್ಯದ ದೃಷ್ಟಿಯಿಂದ ಪಟಾಕಿ ನಿಷೇಧ ಮಾಡಲಾಗಿದೆ. ಜನರ ಸಂತೋಷವನ್ನು ದೂರ ಮಾಡಲು ನಾವು ಈ ಕ್ರಮಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಆರೋಗ್ಯ ಇಲಾಖೆಯ ತಾಂತ್ರಿಕ ಸಮಿತಿಯಿಂದ ನೀಡಿರುವ ವರದಿ ಅನ್ವಯ ದೀಪಾಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡಲಾಗಿದೆ. ಕದ್ದು ಮುಚ್ಚಿ ಪಟಾಕಿ ಸಿಡಿಸುವವರ ಮೇಲೂ ನಿಗಾ ವಹಿಸಲಾಗುವುದು. ಪಟಾಕಿ ಸಿಡಿಸುವುದನ್ನು ತಡೆಯಲು ನಿಯಮ ರೂಪಿಸುತ್ತೇವೆ. ಇಂದು ಅಥವಾ ನಾಳೆ ಪಟಾಕಿ ನಿಷೇಧದ ರೂಪುರೇಷೆಗಳನ್ನು ಅಂತಿಮಗೊಳಿಸುತ್ತೇವೆ. ಜನರು ಕೂಡ ಪಟಾಕಿ ನಿಷೇಧಕ್ಕೆ ಸಹಕರಿಸಬೇಕು ಎಂದು  ಮನವಿ ಮಾಡಿದರು.

  • ದೀಪಾವಳಿ ಸಂದರ್ಭದಲ್ಲಿ ಪಟಾಕಿ ಬ್ಯಾನ್ ಮಾಡೋದು ಸರಿಯಲ್ಲ: ಮುತಾಲಿಕ್

    ದೀಪಾವಳಿ ಸಂದರ್ಭದಲ್ಲಿ ಪಟಾಕಿ ಬ್ಯಾನ್ ಮಾಡೋದು ಸರಿಯಲ್ಲ: ಮುತಾಲಿಕ್

    ಬೆಳಗಾವಿ/ಚಿಕ್ಕೋಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಬ್ಯಾನ್ ಮಾಡುವುದು ಸರಿಯಲ್ಲ. ಪಟಾಕಿಯಿಂದಲೇ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ವಿಧಿ ವಿಧಾನದಿಂದ ಆಚರಣೆಗಳು ನಡೆಯುವ ಕಾರಣ ಪಟಾಕಿಯನ್ನು ಬ್ಯಾನ್ ಮಾಡಬಾರದು. ಪಟಾಕಿಯಿಂದ ಮಾತ್ರ ಭಾರೀ ದೊಡ್ಡ ಪ್ರಮಾಣದಲ್ಲಿ ಪರಿಸರ ಮಾಲಿನ್ಯ ಆಗುತ್ತಿದೆ ಎಂಬುದು ಸುಳ್ಳು. ಇವತ್ತು ವಾಹನಗಳಿಂದ ಎಷ್ಟು ಪರಿಸರ ಮಾಲಿನ್ಯ ಆಗುತ್ತಿದೆ ಅದನ್ನು ಯಾರು ತಡೆಯುವ ಪ್ರಯತ್ನ ಮಾಡುತ್ತಿಲ್ಲ. ಈಗ ಕಾನೂನು ಜಾರಿಗೆ ಮಾಡಲು ಮುಂದಾಗಿರುವವರು ಒಮ್ಮೆ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿದರೆ ಉತ್ತಮ. ಏಕೆಂದರೆ ಅಭಿವೃದ್ಧಿಯ ಹೆಸರಿನಲ್ಲಿ ನೀವು ಎಷ್ಟು ಪರಿಸರವನ್ನು ನಾಶ ಮಾಡುತ್ತಿದ್ದೀರಿ ಎಂಬುವುದು ಅರಿವಾಗುತ್ತದೆ. ಆದರೆ ವರ್ಷಕ್ಕೊಮ್ಮೆ ನಡೆಯುವ ಗಣೇಶ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

    ಇದೇ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ಬಂಧನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮುತಾಲಿಕ್, ಕೊಲೆ ಆರೋಪದಲ್ಲಿ ಜೈಲಿಗೆ ಹೋದರೆ ಆ ಜಾತಿ ಅವರು ನಮ್ಮವರು ಅನ್ನೋದು ಸರಿಯಲ್ಲ. ಕಾನೂನು ಪ್ರಕಾರ ಅಪರಾಧಿ ನಿರಪರಾಧಿ ಅನ್ನೋದು ಸಾಬೀತಾಗಲಿ. ಪ್ರಾರಂಭದಲ್ಲಿ ಆರೋಪಿಗಳು ನಮ್ಮವರು ಅನ್ನೋದು ಅನೈತಿಕತೆ. ಭ್ರಷ್ಟಾಚಾರಕ್ಕೆ ಬೆಂಬಲ ಸೂಚಿಸದಂತಾಗುತ್ತದೆ. ಈ ಬಗ್ಗೆ ಪಂಚಮಸಾಲಿ ಸ್ವಾಮೀಜಿ ಗಂಭೀರವಾಗಿ ಯೋಚಿಸಬೇಕು. ಖಾವಿ ಬಟ್ಟೆ ಹಾಕಿರುವ ನೀವು ಒಂದು ಜಾತಿಗೆ ಸಿಮೀತ ಅಲ್ಲ. ಬಂಧನವಾದ ಕೂಡಲೇ ಬೆಂಬಲ ಕೊಡುವುದರಿಂದ ತಪ್ಪು ಸಂದೇಶ ರವಾನೆ ಆಗುತ್ತದೆ. ಆಧಾರ ಇರುವ ಕಾರಣ ಸಂಶಯದಿಂದ ವಿನಯ ಕುಲಕರ್ಣಿ ಬಂಧಿಸಿದ್ದಾರೆ. ವಿನಯ್ ಕುಲಕರ್ಣಿ ಅವರ ಪರವಾಗಿ ನಿಂತಿದ್ದು ನಿಮ್ಮ ಮಠದ ಶೋಭೆ ಅಲ್ಲ ಎಂದು ಪಂಚಮಸಾಲಿ ಪೀಠದ ಸ್ವಾಮೀಜಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ನಾಡದ್ರೋಹಿ ಎಂಇಎಸ್ ಮಾಜಿ ಶಾಸಕರ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಬಿಜೆಪಿ ಪಕ್ಷದಲ್ಲಿ ನೈತಿಕತೆ ಅನ್ನೋದು ಇಲ್ಲ. ಸೋನಿಯಾ ಗಾಂಧಿ, ಸಿದ್ದರಾಮಯ್ಯ ಬಂದರೂ ಬಿಜೆಪಿ ಸೇರ್ಪಡೆ ಮಾಡಿಕೊಳ್ಳುತ್ತಾರೆ. ಬಿಜೆಪಿ ಅವರಿಗೆ ಅಧಿಕಾರ ಮಾತ್ರ ಬೇಕಾಗಿದೆ. ಪ್ರಮಾಣಿಕರಿಗೆ, ಹೋರಾಟಗಾರರಿಗೆ ಬಿಜೆಪಿ ಪಕ್ಷದಲ್ಲಿ ಬೆಲೆ ಇಲ್ಲ ಎಂದು ಬಿಜೆಪಿ ವಿರುದ್ಧ ಕೆಂಡ ಕಾರಿದರು.

  • ದೇಶಾದ್ಯಂತ ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ

    ದೇಶಾದ್ಯಂತ ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ

    ನವದೆಹಲಿ: ದೇಶಾದ್ಯಂತ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

    ಸುರಕ್ಷಿತ ಹಾಗೂ ಗ್ರೀನ್ ಪಟಾಕಿಗಳ ಉತ್ಪಾದನೆ ಹಾಗೂ ಮಾರಾಟ ಮುಂದುವರಿಸುವಂತೆ ನ್ಯಾ. ಎ. ಕೆ ಸಿಕ್ರಿ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ. ತೀರ್ಪಿನಲ್ಲಿ ಬೆಳಗ್ಗೆ 8 ರಿಂದ 10 ವರೆಗೂ ಪಟಾಕಿ ಹೊಡೆಯಬಹುದು. ಹೊಸ ವರ್ಷ ಮತ್ತು ಕ್ರಿಸ್ಮಸ್ ಸಂದರ್ಭದಲ್ಲಿ ರಾತ್ರಿ 12:30 ವರೆಗೂ ಪಟಾಕಿ ಹೊಡೆಯಲು ಅವಕಾಶ ಕಲ್ಪಿಸಲಾಗಿದೆ.

    ಇನ್ಮುಂದೆ ಕೇವಲ ಲೈಸನ್ಸ್ ಹೊಂದಿರುವ ಮಾರಾಟಗಾರರಷ್ಟೇ ಪಟಾಕಿ ಮಾರಾಟ ಮಾಡಬೇಕು ಎಂದಿರುವ ಸುಪ್ರೀಂ, ಆನ್ ಲೈನಲ್ಲಿ ಪಟಾಕಿ ಮಾರಾಟವನ್ನು ಸಂಪೂರ್ಣ ನಿಷೇಧಿಸಿದೆ. ಈ ತೀರ್ಪಿನ ಬಳಿಕವೂ ಪಟಾಕಿಗಳನ್ನು ಆನ್‍ಲೈನಲ್ಲಿ ಮಾರಾಟ ನಡೆಸಿದರೆ ಅವರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

    ಏನಿದು ಪ್ರಕರಣ?
    ಕಳೆದ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ನಿಷೇಧಿಸಿ ಸುಪ್ರೀಂಕೋರ್ಟ್ ಆದೇಶಿಸಿತ್ತು. ಅದರ ಬೆನ್ನಲ್ಲೇ ಇಡೀ ದೇಶಾದ್ಯಂತ ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ನಿಷೇಧ ಹೇರಬೇಕೆಂದು ಅರ್ಜಿ ಸಲ್ಲಿಕೆಯಾಗಿತ್ತು.

    ವಿಚಾರಣೆ ವೇಳೆ ದೇಶಾದ್ಯಂತ ಸಂಪೂರ್ಣ ಪಟಾಕಿ ನಿಷೇಧಕ್ಕೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿ, ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಅವಕಾಶ ನೀಡಬೇಕೆಂದು ಸಲಹೆ ನೀಡಿತ್ತು. ಈ ಉದ್ಯಮವನ್ನೇ ನಂಬಿಕೊಂಡಿರುವ ಅದೆಷ್ಟೋ ಕುಟುಂಬಗಳು ಬೀದಿಗೆ ಬರಲಿವೆ ಎಂದು ಪಟಾಕಿ ಉತ್ಪಾದಕರು ವಾದಿಸಿದ್ದರು.

     

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೆಹಲಿಯಲ್ಲಿ ದೀಪಾವಳಿಗೆ ಪಟಾಕಿ ನಿಷೇಧ- ಹಿಂದೂ ಧಾರ್ಮಿಕ ಆಚರಣೆ ಮೇಲೆ ಮಾತ್ರ ನಿಷೇಧ ಏಕೆ: ಚೇತನ್ ಭಗತ್ ಪ್ರಶ್ನೆ

    ದೆಹಲಿಯಲ್ಲಿ ದೀಪಾವಳಿಗೆ ಪಟಾಕಿ ನಿಷೇಧ- ಹಿಂದೂ ಧಾರ್ಮಿಕ ಆಚರಣೆ ಮೇಲೆ ಮಾತ್ರ ನಿಷೇಧ ಏಕೆ: ಚೇತನ್ ಭಗತ್ ಪ್ರಶ್ನೆ

    ನವದೆಹಲಿ: ದೀಪಾಳಿಗೆ ಪಟಾಕಿ ನೀಷೆಧಿಸುವುದು ಕ್ರಿಸ್‍ಮಸ್ ಹಬ್ಬಕ್ಕೆ ಕ್ರಿಸ್‍ಮಸ್ ಟ್ರೀ ನಿಷೇಧ ಮಾಡಿದ ಹಾಗೆ ಎಂದು ಲೇಖಕ ಚೇತನ್ ಭಗತ್ ಟ್ವೀಟ್ ಮಾಡಿದ್ದಾರೆ.

    ರಾಷ್ಟ್ರ ರಾಜಧಾನಿಯಲ್ಲಿ ನವೆಂಬರ್ 1 ರವರೆಗೆ ಪಟಾಕಿಗಳನ್ನು ಮಾರಾಟವನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರೋ ಹಿನ್ನೆಲೆಯಲ್ಲಿ ಲೇಖಕ ಚೇತನ್ ಭಗತ್ ಟ್ವೀಟ್ ಮಾಡಿದ್ದು, ಹಿಂದೂ ಧಾರ್ಮಿಕ ಆಚರಣೆಗಳ ಮೇಲೆ ಮಾತ್ರ ಏಕೆ ಈ ನಿಷೇಧ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ತೀರ್ಪಿನ ಕುರಿತು ಬಾಲಿವುಡ್ ಹಾಗೂ ಕ್ರಿಕೆಟ್‍ನ ಹಲವು ತಾರೆಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

    ಲೇಖಕ ಚೇತನ್ ಭಗತ್ ಅವರು ಈ ಕುರಿತು ಟ್ವಿಟ್ಟರ್‍ನಲ್ಲಿ ಸರಣಿ ಟ್ವೀಟ್‍ಗಳನ್ನು ಮಾಡಿದ್ದಾರೆ. ಸುಪ್ರೀಂ ಕೋರ್ಟ್ ದೀಪಾಳಿ ಸಂದರ್ಭದಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿದ್ದು ಯಾಕೆ? ಇದು ಸಂಪೂರ್ಣ ನಿಷೇಧವೇ? ಪಟಾಕಿ ಇಲ್ಲದ ದೀಪಾಳಿಯನ್ನು ಮಕ್ಕಳು ಹೇಗೆ ಆಚರಿಸುತ್ತಾರೆ? ಕೇವಲ ಹಿಂದೂ ಧಾರ್ಮಿಕ ಆಚರಣೆಗಳ ಮೇಲೆ ಮಾತ್ರ ಹೀಗೆ ಮಾಡಲು ಧೈರ್ಯ ಹೇಗೆ? ಶೀಘ್ರದಲ್ಲೇ ಮೇಕೆಗಳ ಬಲಿ ಹಾಗೂ ಮೊಹರಂ ರಕ್ತಪಾತವನ್ನೂ ನಿಷೇಧಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.

    ದೀಪಾಳಿಗೆ ಪಟಾಕಿಯನ್ನು ನೀಷೆಧ ಮಾಡುವುದು ಕ್ರಿಸ್‍ಮಸ್ ಹಬ್ಬಕ್ಕೆ ಕ್ರಿಸ್‍ಮಸ್ ಟ್ರೀ ನಿಷೇಧ ಮಾಡಿದ ಹಾಗೆ. ಬಕ್ರೀದ್‍ಗೆ ಮೇಕೆಗಳನ್ನ ನಿಷೇಧಿಸಿದ ಹಾಗೆ. ನಿಯಂತ್ರಣ ಮಾಡಿ. ಆದ್ರೆ ನಿಷೇಧ ಬೇಡ. ಸಂಪ್ರದಾಯಗಳನ್ನ ಗೌರವಿಸಿ ಎಂದಿದ್ದಾರೆ.

    ಇದು ಕೇವಲ ವರ್ಷದಲ್ಲಿ ಒಂದು ಸಲ ಬರುವಂತದ್ದು. ನಮ್ಮ ಬಹುದೊಡ್ಡ ಹಬ್ಬವಿದು. ಯಾವುದೇ ನಿಷೇಧಕ್ಕಿಂತ ಊಬರ್ ಹೆಚ್ಚಿನ ಮಾಲಿನ್ಯವನ್ನ ಉಳಿಸಿದೆ. ಹೊಸ ಪರಿಹಾರಗಳೊಂದಿಗೆ ಬನ್ನಿ. ನಿಷೇಧವಲ್ಲ ಎಂದು ಟ್ವೀಟ್ ಮಾಡಿದ್ದಾರೆ.

    ಭಗತ್ ಅವರ ಟ್ವೀಟ್‍ಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರತಿಕ್ರಿಯೆ ನೀಡಿದ್ದು, ನೀವು ಹೇಳಿರುವ ಆಚರಣೆಗಳ ಉದಾಹರಣೆಗಳನ್ನ ನೋಡುವುದಾದ್ರೆ ಅವೆಲ್ಲಾ ಅಚರಣೆಗಳ ಅವಿಭಾಜ್ಯ ಅಂಗ. ಅವುಗಳನ್ನ ಬ್ಯಾನ್ ಮಾಡುವುದೆಂದರೆ ದೀಪಾವಳಿಗೆ ದೀಪಗಳನ್ನ ಬ್ಯಾನ್ ಮಾಡಿದಂತೆ. ಪಟಾಕಿಗಳು ಹೆಚ್ಚುವರಿಯಾಗಿ ಸೇರಿಸಲಾಗಿರುವಂತದ್ದು ಎಂದಿದ್ದಾರೆ.

    ಕ್ರಿಕೆಟರ್ ಯುವರಾಜ್ ಸಿಂಗ್ ತಮ್ಮ ಟ್ವಿಟ್ಟರ್‍ನಲ್ಲಿ `ಸೇ ನೋ ಟು ಕ್ರ್ಯಾಕರ್ಸ್’ ಎಂದು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಮಾಲಿನ್ಯರಹಿತ ದೀಪಾವಳಿ ಆಚರಿಸೋಣ ಎಂದಿದ್ದಾರೆ.

    ಇನ್ನುಳಿದಂತೆ ನಿರೂಪಕರಾದ ರಾಕಿ ಮತ್ತು ಮಯೂರ್ ಪಟಾಕಿಯನ್ನ ವಿರೋಧಿಸಿದ್ದಾರೆ. ಪಟಾಕಿಯ ಹೊಗೆ ಅಂದ್ರೆ ಕಾನ್ಸರ್‍ಕಾರಕ ಅಂಶಗಳು. ಜೊತೆಗೆ ತೀವ್ರ ಉಸಿರಾಟದ ತೊಂದರೆಗಳನ್ನ ಉಂಟು ಮಾಡಬಹುದಾದ ಮಾಲಿನ್ಯ. ಇದರಿಂದ ಮಕ್ಕಳು ಹಾಗೂ ಹಿರಿಯರಿಗೆ ಹೆಚ್ಚಾಗಿ ಸಮಸ್ಯೆಯಾಗುತ್ತದೆ ಎಂದಿದ್ದಾರೆ.

    ದೀಪಾವಳಿ ಸಂದರ್ಭದಲ್ಲಿ ವಾಯುಮಾಲಿನ್ಯ ಹೆಚ್ಚಾಗುವ ಕಾರಣ 2016 ನವೆಂಬರ್ ನಲ್ಲಿಯೇ ಸುಪ್ರೀಂ ಕೋರ್ಟ್ ರಾಷ್ಟ್ರ ರಾಜಧಾನಿ ವ್ಯಾಪ್ತಿಯ ಪ್ರದೇಶದಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿತ್ತು. ಕಳೆದ ತಿಂಗಳು ಕೋರ್ಟ್ ತಾತ್ಕಾಲಿಕವಾಗಿ ಪಟಾಕಿ ಮಾರಾಟವನ್ನು ನಿಷೇಧಿಸಿತ್ತು.

    2015 ರಲ್ಲಿ ದೀಪಾವಳಿ ಹಬ್ಬದಂದು ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದರಿಂದ ಜನರಿಗೆ ಹಲವಾರು ಆರೋಗ್ಯ ಸಮಸ್ಯೆಗಳು ಕಂಡುಬಂದಿತ್ತು. ಹೀಗಾಗಿ 2015 ರಲ್ಲಿ ಮೂವರು ಬಾಲಕರು ದೆಹಲಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿ ಎಂದು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆರೋಗ್ಯವಂತರಾಗಿ ಜೀವನ ನಡೆಸಬೇಕೆಂದು ಸಂವಿಧಾನ ನಮಗೆ ಬದುಕುವ ಹಕ್ಕು ನೀಡಿದೆ. ಆದರೆ ಪಟಾಕಿಯಲ್ಲಿರುವ ರಾಸಾಯನಿಕ ಅಂಶಗಳಿಂದಾಗಿ ವಾಯುಮಾಲಿನ್ಯ ಆಗುವುದಲ್ಲದೇ ನಮಗೆ ಅಸ್ತಮಾ, ಕೆಮ್ಮು, ಇತ್ಯಾದಿ ಆರೋಗ್ಯ ಸಮಸ್ಯೆಗಳು ಬರುತ್ತಿದೆ. ಹೀಗಾಗಿ ಪಟಾಕಿ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಬಾಲಕರು ಅರ್ಜಿಯಲ್ಲಿ ಮನವಿ ಮಾಡಿದ್ದರು.

    ಆದರೆ ಪಟಾಕಿ ಅಂಗಡಿಯ ಮಾಲೀಕರು, ದೆಹಲಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿದರೆ ಜೀವನೋಪಾಯಕ್ಕೆ ಸಮಸ್ಯೆಯಾಗುತ್ತದೆ. ಹೀಗಾಗಿ ನಿಷೇಧ ಮಾಡಬಾರದು ಎಂದು ವಾದಿಸಿದ್ದರು. ಕೋರ್ಟ್ ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ನವೆಂಬರ್ 1ರ ರವರೆಗೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿ ಆದೇಶ ಪ್ರಕಟಿಸಿದೆ.

    https://twitter.com/Crimson_Bud/status/917343745552478209?

    https://twitter.com/autumnrainwish/status/917272332032282624?

    https://twitter.com/YUVSTRONG12/status/917045683126902784?

  • ದೆಹಲಿಯಲ್ಲಿ ಅಕ್ಟೋಬರ್ 31 ರವರೆಗೆ ಪಟಾಕಿ ಮಾರಾಟಕ್ಕೆ ಬ್ರೇಕ್

    ದೆಹಲಿಯಲ್ಲಿ ಅಕ್ಟೋಬರ್ 31 ರವರೆಗೆ ಪಟಾಕಿ ಮಾರಾಟಕ್ಕೆ ಬ್ರೇಕ್

    ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶ (ಎನ್‍ಸಿಆರ್) ದಲ್ಲಿ ಅಕ್ಟೋಬರ್ 31 ರವರೆಗೆ ಪಟಾಕಿಗಳನ್ನು ಮಾರಾಟವನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

    ದೀಪಾವಳಿ ಸಂದರ್ಭದಲ್ಲಿ ವಾಯುಮಾಲಿನ್ಯ ಹೆಚ್ಚಾಗುವ ಕಾರಣ 2016 ನವೆಂಬರ್ ನಲ್ಲಿಯೇ ಸುಪ್ರೀಂ ಕೋರ್ಟ್ ಎನ್‍ಸಿಆರ್ ವ್ಯಾಪ್ತಿಯ ಪ್ರದೇಶದಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿತ್ತು. ಕಳೆದ ತಿಂಗಳು ಕೋರ್ಟ್ ತಾತ್ಕಾಲಿಕವಾಗಿ ಪಟಾಕಿ ಮಾರಾಟವನ್ನು ನಿಷೇಧಿಸಿತ್ತು.

    2015 ರಲ್ಲಿ ದೀಪಾವಳಿ ಹಬ್ಬದಂದು ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದರಿಂದ ಜನರಿಗೆ ಹಲವಾರು ಆರೋಗ್ಯ ಸಮಸ್ಯೆಗಳು ಕಂಡುಬಂದಿತ್ತು. ಹೀಗಾಗಿ 2015 ರಲ್ಲಿ ಮೂವರು ಬಾಲಕರು ದೆಹಲಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿ ಎಂದು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

    ಆರೋಗ್ಯ ಪೂರ್ಣವಾಗಿ ಜೀವನ ನಡೆಸಬೇಕೆಂದು ಸಂವಿಧಾನ ನಮಗೆ ಬದುಕುವ ಹಕ್ಕು ನೀಡಿದೆ. ಆದರೆ ಪಟಾಕಿಯಲ್ಲಿರುವ ರಾಸಾಯನಿಕ ಅಂಶಗಳಿಂದಾಗಿ ವಾಯುಮಾಲಿನ್ಯ ಆಗುವುದಲ್ಲದೇ ನಮಗೆ ಅಸ್ತಮಾ, ಕೆಮ್ಮು, ಇತ್ಯಾದಿ ಆರೋಗ್ಯ ಸಮಸ್ಯೆಗಳು ಬರುತ್ತಿದೆ. ಹೀಗಾಗಿ ಪಟಾಕಿ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಬಾಲಕರು ಅರ್ಜಿಯಲ್ಲಿ ಮನವಿ ಮಾಡಿದ್ದರು.

    ಆದರೆ ಪಟಾಕಿ ಅಂಗಡಿಯ ಮಾಲೀಕರು, ದೆಹಲಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿದರೆ ಜೀವನದ ಉದ್ಯೋಗಕ್ಕೆ ಸಮಸ್ಯೆಯಾಗುತ್ತದೆ. ಹೀಗಾಗಿ ನಿಷೇಧಗೊಳ್ಳಬಾರದು ಎಂದು ವಾದಿಸಿದ್ದರು.

    ಬಾಲಕರು ಮತ್ತೆ ಕೋರ್ಟ್‍ಗೆ ಮನವಿ ಮಾಡಿಕೊಂಡಿದ್ದರಿಂದ ಏಕಸದಸ್ಯ ಪೀಠದ ನ್ಯಾ.ಎ.ಕೆ ಸಿಕ್ರಿ ಅವರು ಅರ್ಜಿ ವಿಚಾರಣೆ ನಡೆಸಿ ಪರಿಸರದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಅಕ್ಟೋಬರ್ 31ರ ರವರೆಗೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿ ಆದೇಶ ಪ್ರಕಟಿಸಿದರು.