Tag: ಪಟ್ಟಣ ಪಂಚಾಯತ್

  • ಕೊಡಗಿನ ಪಟ್ಟಣ ಪಂಚಾಯತ್ ಅಧ್ಯಕ್ಷೆ ಕೊರೊನಾಗೆ ಬಲಿ

    ಕೊಡಗಿನ ಪಟ್ಟಣ ಪಂಚಾಯತ್ ಅಧ್ಯಕ್ಷೆ ಕೊರೊನಾಗೆ ಬಲಿ

    ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪಟ್ಟಣ ಪಂಚಾಯತಿ ಅಧ್ಯಕ್ಷೆ ನಳಿನಿ ಗಣೇಶ್ ಕೊರೊನಾ ಮಾಹಾಮಾರಿಗೆ ಬಲಿಯಾಗಿದ್ದಾರೆ.

    2020ರ ನವೆಂಬರ್‍ ನಲ್ಲಿ ಸೋಮವಾರಪೇಟೆ ಪಟ್ಟಣ ಪಂಚಾಯತ್ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ನಳಿನಿ ಗಣೇಶ್ ಅವರು. ಸೋಮವಾರಪೇಟೆ ತಾಲೂಕು ಜಾನಪದ ಪರಿಷತ್‍ನ ನಿರ್ದೇಶಕಿ ಕೂಡ ಆಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಬಳಿಕ ಮಡಿಕೇರಿಯ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಳಿನಿ ಗಣೇಶ್ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಡುತ್ತಿತ್ತು. ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

    ಅಪ್ಪಚ್ಚು ರಂಜನ್ ಸಂತಾಪ
    ನಳಿನಿ ಗಣೇಶ್ ಅವರ ಅಕಾಲಿಕ ನಿಧನಕ್ಕೆ ಮಡಿಕೇರಿ ಶಾಸಕ ಎಂ.ಪಿ ಅಪ್ಪಚ್ಚುರಂಜನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲಿಕೆಯ ಶೋಕವನ್ನು ತಡೆದುಕೊಳ್ಳುವ ಶಕ್ತಿ ಕುಟುಂಬವರ್ಗಕ್ಕೆ ದೊರಕಲಿ ಎಂದು ಅಪ್ಪಚ್ಚು ರಂಜನ್ ಹಾಗೂ ಬಿಜೆಪಿ ಕಾರ್ಯಕರ್ತರು ಸೋಮವಾರಪೇಟೆ ಪಟ್ಟಣ ಪಂಚಾಯತಿ ಸದಸ್ಯರು ಸಂತಾಪ ಸೂಚಿಸಿದ್ದಾರೆ.

  • ಲೋಕಲ್ ವಾರ್‌ಗೆ ಮುಹೂರ್ತ ಫಿಕ್ಸ್ – ಯಾವೆಲ್ಲ ನಗರಸಭೆ? ಪಟ್ಟಣ ಪಂಚಾಯತ್‍ಗೆ ಚುನಾವಣೆ?

    ಲೋಕಲ್ ವಾರ್‌ಗೆ ಮುಹೂರ್ತ ಫಿಕ್ಸ್ – ಯಾವೆಲ್ಲ ನಗರಸಭೆ? ಪಟ್ಟಣ ಪಂಚಾಯತ್‍ಗೆ ಚುನಾವಣೆ?

    ಬೆಂಗಳೂರು: ಲೋಕಸಭಾ ಚುನಾವಣಾ ಸಮರದ ಬೆನ್ನಲ್ಲೇ ರಾಜ್ಯದಲ್ಲಿ ಲೋಕಲ್ ವಾರ್‌ಗೆ ಮುಹೂರ್ತ ಫಿಕ್ಸ್ ಆಗಿದೆ.

    ಸುದ್ದಿಗೋಷ್ಠಿ ನಡೆಸಿ ರಾಜ್ಯ ಚುನಾವಣಾಧಿಕಾರಿ ಶ್ರೀನಿವಾಸಚಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮಾಹಿತಿಯನ್ನು ನೀಡಿದರು. ರಾಜ್ಯದ 8 ನಗರ ಸಭೆ, 33 ಪುರಸಭೆ, 22 ಪಟ್ಟಣ ಪಂಚಾಯತಿ, 63 ಸ್ಥಳೀಯ ಸಂಸ್ಥೆಗಳಿಗೆ ಹಾಗೂ 1,361 ವಾರ್ಡ್ ಗಳಿಗೆ ಚುನಾವಣೆ ಘೋಷಣೆಯಾಗಿದೆ.

    ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ನಾಮಪತ್ರ ಸಲ್ಲಿಕೆಯು ಮೇ 9 ರಿಂದ ಶುರುವಾಗಲಿದೆ. ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 29 ರಂದು ಮತದಾನ ನಡೆಯಲಿದ್ದು, ಮೇ 31ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಈ ಚುನಾವಣೆಗೆ ಮತಪತ್ರ ಬದಲು, ಮತಯಂತ್ರ ಬಳಸಲಾಗುತ್ತದೆ. 8 ಜಿಲ್ಲೆಯ 8 ತಾಲೂಕು ಪಂಚಾಯತ್‍ಗಳ 10 ಕ್ಷೇತ್ರಗಳ ಸದಸ್ಯ ಸ್ಥಾನಗಳಿಗೆ ಹಾಗೂ ಗ್ರಾಮ ಪಂಚಾಯತ್‍ಗಳಲ್ಲಿ ತೆರವಾಗಿರುವ 202 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಆದರೆ ಕುಂದಗೋಳದಲ್ಲಿ ವಿಧಾನಸಭೆ ಉಪ ಚುನಾವಣೆ ಇರುವುದರಿಂದ ಅಲ್ಲಿನ ನಗರಸಭೆ ಚುನಾವಣೆ ನಡೆಸುವುದಿಲ್ಲ. ಹೀಗಾಗಿ ಎಲ್ಲೆಲ್ಲಿ ಚುನಾವಣೆ ಇರುತ್ತದೆಯೋ ಅಲ್ಲಿ ಮಾತ್ರ ನೀತಿ ಸಂಹಿತೆ ಜಾರಿ ಅನ್ವಯವಾಗಲಿದೆ.

    ನಗರ ಸಭೆ:
    ಹಿರಿಯೂರು, ಹರಿಹರ, ಶಿಡ್ಲಘಟ್ಟ, ಸಾಗರ, ತಿಪಟೂರು, ನಂಜನಗೂಡು, ಬಸವಕಲ್ಯಾಣ, ಶಹಾಪುರ,

    ಪಟ್ಟಣ ಪಂಚಾಯತ್:
    ಹೊಳಲ್ಕೆರೆ, ಶಿರಾಳಕೊಪ್ಪ, ಸೊರಬ, ಹೊಸನಗರ, ತುರುವೇಕೆರೆ, ಕೊಪ್ಪ, ಶೃಂಗೇರಿ, ಮೂಡಿಗೆರೆ, ನರಸಿಂಹರಾಜಪುರ, ಮೂಲ್ಕಿ, ಸುಳ್ಯ, ಆಲೂರು, ಅರಕಲಗೂಡು, ಎಳಂದೂರು, ಹನೂರು, ಅಳ್ನಾವರ, ಹೊನ್ನಾವರ, ಸಿದ್ದಾಪುರ, ಔರದ್, ಕಮಲಾಪುರ, ಆನೇಕಲ್, ದೇವನಹಳ್ಳಿ, ನೆಲಮಂಗಲ, ಮೊಳಕಾಲ್ಮೂರು, ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಬಾಗೇಪಲ್ಲಿ, ಶಿಕಾರಿಪುರ, ಪಾವಗಡ, ಕುಣಿಗಲ್, ಕೆ.ಆರ್. ನಗರ, ಬನ್ನೂರ್, ಕಡೂರು, ಮೂಡಬಿದ್ರೆ, ಮಳವಳ್ಳಿ, ಶ್ರೀರಂಗಪಟ್ಟಣ, ಕೆ.ಆರ್ ಪೇಟೆ, ಗುಂಡ್ಲುಪೇಟೆ, ಬಸವನ ಬಾಗೇವಾಡಿ, ಇಂಡಿ, ತಾಳಿಕೋಟೆ, ನವಲಗುಂದ, ಮುಂಡರಗಿ, ನರಗುಂದ, ಶಿಗ್ಗಾಂವ್, ಭಟ್ಕಳ, ಬಸವಕಲ್ಯಾಣ, ಬಾಲ್ಕಿ, ಹುಮ್ನಾಬಾದ್, ಚಿಟಗುಪ್ಪ, ಸಂಡೂರು, ಹರಪನಹಳ್ಳಿ ಹಾಗೂ ಹೆಚ್ ಹಡಗಲಿಯಲ್ಲಿ ಚುನಾವಣೆ ನಡೆಯಲಿದೆ.