Tag: ಪಟ್ಟಣ ಪಂಚಾಯಿತಿ

  • ಇಂದಿನ ಚುನಾವಣಾ ಫಲಿತಾಂಶ- ಯಾವ ಪಕ್ಷಕ್ಕೆ ಏನು ಎಫೆಕ್ಟ್?

    ಇಂದಿನ ಚುನಾವಣಾ ಫಲಿತಾಂಶ- ಯಾವ ಪಕ್ಷಕ್ಕೆ ಏನು ಎಫೆಕ್ಟ್?

    ಬೆಂಗಳೂರು: ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದ ಲೋಕಲ್ ರಿಸಲ್ಟ್ ಕ್ಷಣ ಬಂದೇ ಬಿಟ್ಟಿದೆ. ಆಗಸ್ಟ್ 31ರಂದು 102 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಸಮ್ಮಿಶ್ರ ಸರ್ಕಾರದ ಮೇಲೆ ಪರಣಾಮ ಬೀಳುವ ಸಾಧ್ಯತೆಗಳಿವೆ.

    ಫಲಿತಾಂಶದಿಂದ ಸಮ್ಮಿಶ್ರ ಸರ್ಕಾರದ ಮೇಲಿನ ಜನಾಭಿಪ್ರಾಯ ಬಹಿರಂಗವಾಗುತ್ತದೆ. ಕಾಂಗ್ರೆಸ್, ಜೆಡಿಎಸ್ ಹೆಚ್ಚು ಸ್ಥಾನ ಗೆದ್ದರೆ ಮೈತ್ರಿ ಗಟ್ಟಿ ಸಾಧ್ಯತೆಗಳಿದ್ದು, ಕಡಿಮೆ ಸ್ಥಾನ ಗೆದ್ದರೆ ಮೈತ್ರಿ ಪಕ್ಷಗಳಲ್ಲಿ ಭಿನ್ನಮತ ಹೆಚ್ಚುವ ಸಾಧ್ಯತೆ ಹೆಚ್ಚಿದೆ. ಫಲಿತಾಂಶಗಳನ್ನು ನೋಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಂ ಗೇಮ್ ಪ್ಲ್ಯಾನ್ ಚೇಂಜ್ ಮಾಡಬಹುದು. ಹಳೇ ಮೈಸೂರು ಭಾಗದಲ್ಲಿ ಕೈ, ಜೆಡಿಎಸ್ ಮೈತ್ರಿ ಅಗತ್ಯತೆ ನಿರ್ಧಾರ ಕೈಗೋಳ್ಳುವಂತಹ ಸಾಧ್ಯತೆಗಳು ಕೂಡ ಇದೆ. ಈ ಮಧ್ಯೆ ಆಪರೇಷನ್ ಕಮಲಕ್ಕೆ ದಾರಿ ಮಾಡಿಕೊಳ್ಳಲು ಪ್ಲ್ಯಾ ನ್ ಮಾಡಬಹುದಾದ ಸಾಧ್ಯತೆಗಳೂ ಇವೆ.

    ಸ್ಥಳೀಯ ಚುನಾವಣಾ ಫಲಿತಾಂಶದಿಂದ ಲೋಕಸಭಾ ಚುನಾವಣೆಯ ಮೇಲೂ ಪರಿಣಾಮ ಬೀರಬಹುದು. ಲೋಕಸಭಾ ಚುನಾವಣೆ ಮೈತ್ರಿಗೆ ಈ ರಿಸಲ್ಟ್ ಮಾನದಂಡವಾಗಬಹುದು. ಕಾಂಗ್ರೆಸ್, ಜೆಡಿಎಸ್‍ಗೆ ಹಿನ್ನಡೆಯಾದ್ರೆ ಲೋಕ ಮೈತ್ರಿಗೆ ಕಂಟಕವಾಗಬಹುದು. ಫಲಿತಾಂಶವನ್ನೇ ಮುಂದಿಟ್ಟುಕೊಂಡು ಸೀಟು ಹಂಚಿಕೆ ಚೌಕಾಸಿ ನಡೆಸಬಹುದು. ಲೋಕ ಎಲೆಕ್ಷನ್‍ಗೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವದ ನಿರ್ಧಾರವಾಗಬಹುದಾದ ಸಾಧ್ಯತೆಗಳು ಇದೆ.

    ಫಲಿತಾಂಶದಲ್ಲಿ ಜೆಡಿಎಸ್ ಪ್ರಾಬಲ್ಯ ಮೆರೆದರೆ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರ ಹಿಡಿತ ಜಾಸ್ತಿಯಾಗಬಹುದು. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡರೆ ಲೋಕಸಭೆ ಹೆಚ್ಚು ಸೀಟು ಕೇಳಬಹುದು. ಅಲ್ಲದೇ ಕಾಂಗ್ರೆಸ್ ಹಸ್ತಕ್ಷೇಪಕ್ಕೆ ಕಡಿವಾಣ ಬೀಳಬಹುದು.

    ಕಾಂಗ್ರೆಸ್ ಪ್ರಾಬಲ್ಯ ಮೆರೆದರೆ ಸಮ್ಮಿಶ್ರ ಸರ್ಕಾರದ ಮೇಲೆ ಹಿಡಿತ ಮುಂದುವರಿಸಬಹುದು. ಸಿದ್ದರಾಮಯ್ಯ ಹಸ್ತಕ್ಷೇಪ ಜಾಸ್ತಿ ಆಗಬಹುದು. ಹಾಗೂ ಮೇಲ್ಮನೆ ನಾಮ ನಿರ್ದೇಶನ, ನಿಗಮ ಮಂಡಳಿ ನೇಮಕದ ಮೇಲುಗೈ ಸಾಧಿಸಬಹುದು.

    ಚುನಾವಣಾ ಫಲಿತಾಂಶದಲ್ಲಿ ಬಿಜೆಪಿಗೆ ಹಿನ್ನಡೆಯಾದ್ರೆ ಬಿಜೆಪಿ ನಾಯಕರು ಕರ್ನಾಟಕದ ಮೇಲೆ ಹೆಚ್ಚು ಗಮನ ಕೊಡಬಹುದು. ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಂತ್ರಗಾರಿಕೆ ಬದಲಿಸಬಹುದು. ರಾಜ್ಯ ನಾಯಕತ್ವದಲ್ಲಿ ಭಾರೀ ಪ್ರಮಾಣದ ಬದಲಾವಣೆ ಆಗಬಹುದು. ಮತ್ತು ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರ ಕೆಡವಲು ಬಿಜೆಪಿ ಮುಂದಾಗಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಿಂಚಲಿ ಪಟ್ಟಣ ಪಂಚಾಯಿತಿಯಲ್ಲಿ ಪಕ್ಷಭೇದ ಮರೆತು ಒಂದಾದ ಕಾಂಗ್ರೆಸ್-ಬಿಜೆಪಿ ಸದಸ್ಯರು

    ಚಿಂಚಲಿ ಪಟ್ಟಣ ಪಂಚಾಯಿತಿಯಲ್ಲಿ ಪಕ್ಷಭೇದ ಮರೆತು ಒಂದಾದ ಕಾಂಗ್ರೆಸ್-ಬಿಜೆಪಿ ಸದಸ್ಯರು

    ಬೆಳಗಾವಿ: ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರುಗಳು ಪಕ್ಷಭೇದ ಮರೆತು ಒಂದಾದ ಅಪರೂಪದ ಘಟನೆಗೆ ಕುಂದಾ ನಗರಿ ಸಾಕ್ಷಿಯಾಗಿದೆ.

    ಹೌದು. ಒಂದು ಕಡೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಬದ್ಧ ವೈರಿಗಳಾಗಿ ಕಾದಾಡುತ್ತಿದ್ದರೆ. ಚಿಂಚಲಿ ಪಟ್ಟಣ ಪಂಚಾಯಿತಿಯಲ್ಲಿ ಮಾತ್ರ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರು ಒಂದಾಗಿ ಪಟ್ಟಣ ಪಂಚಾಯತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ ಅಧ್ಯಕ್ಷ್ಯರನ್ನ ಕುರ್ಚಿಯಿಂದ ಕೆಳೆಗಿಳಿಸಲು ಯಶಸ್ವಿಯಾಗಿದ್ದಾರೆ.

    ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳ ಸದಸ್ಯರು ಹೊಂದಾಣಿಕೆ ಮಾಡಿಕೊಂಡು ಬಿಜೆಪಿಯ ಅಧ್ಯಕ್ಷರನ್ನೆ ಅವಿಶ್ವಾಸ ನಿರ್ಣಯ ಮಂಡನೆ ಮಾಡಿ ಕೆಳಗಿಳಿಸಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ನಡೆದ ಚಿಂಚಲಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ನಾಗರತ್ನ ಪೋಳ ಪಕ್ಷೇತರರಾಗಿ ಗೆದ್ದು, ಬಿಜೆಪಿಗೆ ಸೇರ್ಪಡೆಯಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

    ಅಧ್ಯಕ್ಷೆ ನಾಗರತ್ನ ಪ್ರತಿಯೊಂದು ನಿರ್ಣಯವನ್ನು ತಮ್ಮ ಪತಿಯನ್ನೆ ಕೇಳಿ ತೆಗೆದುಕೊಳ್ಳುತ್ತಿದ್ದರು. ಅಲ್ಲದೇ ಪ್ರತಿ ಕೆಲಸದಲ್ಲೂ ಅಧ್ಯಕ್ಷೆಯ ಪತಿ ಹಸ್ತಕ್ಷೇಪ ಮಾಡುತ್ತಿದ್ದರು ಎಂದು ಸದಸ್ಯರು ಆರೋಪಿಸಿದ್ದಾರೆ. ಅವಿಶ್ವಾಸ ಮಂಡನೆ ಹಿನ್ನೆಲೆಯಲ್ಲಿ ಚಿಂಚಲಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಸಹ ಕಲ್ಪಿಸಲಾಗಿತ್ತು.

    ಒಟ್ಟು 19 ಜನ ಸದಸ್ಯರ ಬಲದ ಚಿಂಚಲಿ ಪಟ್ಟಣ ಪಂಚಾಯತ ನಲ್ಲಿ ಬಿಜೆಪಿಯಿಂದ 7 ಕಾಂಗ್ರೆಸ್ ನಿಂದ 6 ಹಾಗೂ ಪಕ್ಷೇತರ 6 ಜನ ಆಯ್ಕೆಯಾಗಿದ್ದರು. ಸದ್ಯ ಬಿಜೆಪಿ ಕಾಂಗ್ರೆಸ್ ಮತ್ತು ಪಕ್ಷೇತರರು ಸೇರಿ ಹಾಲಿ ಅಧ್ಯಕ್ಷೆ ನಾಗರತ್ನ ಪೋಳ ವಿರುದ್ಧವಾಗಿ 14 ಜನ ಸದ್ಯರು ಅವಿಶ್ವಾಸ ಮಂಡಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews