Tag: ಪಟ್ನಾ

  • ಮಾಜಿ ಪ್ರಿಯಕರನ ಕತ್ತು ಹಿಸುಕಿ ಕೊಂದ ಮಹಿಳೆ

    ಮಾಜಿ ಪ್ರಿಯಕರನ ಕತ್ತು ಹಿಸುಕಿ ಕೊಂದ ಮಹಿಳೆ

    ಪಾಟ್ನಾ: 34 ವರ್ಷದ ಮಹಿಳೆಯೊಬ್ಬಳು 21 ವರ್ಷದ ತನ್ನ ಮಾಜಿ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾಗಿರುವ ಘಟನೆ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದಿದೆ.

    ಆರೋಪಿ ಮಹಿಳೆಯನ್ನು ಖುದೈಜಾ ಬೇಗಂ ಎಂದು ಗುರುತಿಸಲಾಗಿದ್ದು, ಗರಿಬ್ ಗಂಜ್ ಗ್ರಾಮದ ನಿವಾಸಿಯಾಗಿದ್ದಾಳೆ. ಆಕೆಯ ಪತಿ ಅಸ್ಸಾಂನಲ್ಲಿ ವಾಸವಾಗಿದ್ದು, ಈ ದಂಪತಿ ಎರಡು ಗಂಡು ಮಕ್ಕಳಿವೆ. ಇಬ್ಬರು ಮಕ್ಕಳು ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದಾರೆ ಎಂದು ತಿಳಿಸಲಾಗಿದೆ.

    ಬೇಗಂ ಮಾಜಿ ಪ್ರಿಯಕರ ಮೊಹಮ್ಮದ್ ರಂಜಾನ್ ಮದ್ಯಪಾನ ಮಾಡಿ ಆಕೆಯ ಮನೆಗೆ ಬಂದಿದ್ದಾನೆ. ಈ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ಕೋಪಗೊಂಡ ಬೇಗಂ ಮದ್ಯ ರಾತ್ರಿ ಮಲಗಿರುವ ವೇಳೆ ಸ್ಕ್ರಾಫ್‍ನಿಂದ ಆತನ ಕತ್ತು ಹಿಸುಕಿ ಕೊಂದಿದ್ದಾಳೆ.

    ಬಳಿಕ ಮುಂಜಾನೆ ಗೌತಮ್ ಬುದ್ಧ ಪೊಲೀಸ್ ಠಾಣೆಗೆ ಹೋಗಿ ನಡೆದ ವಿಚಾರವನ್ನೆಲ್ಲಾ ಪೊಲೀಸರಿಗೆ ವಿವರಿಸಿದ್ದಾಳೆ. ಹಾಗಾಗಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡರು. ಇದೀಗ ಮೃತನ ತಂದೆ ನವಿಜಾನ್(60) ಮಹಿಳೆ ವಿರುದ್ಧ ದೂರು ದಾಖಲಿಸಿದ್ದು, ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಲ್ಲದೆ ಮೃತನ ತಂದೆ, ಬೇಗಂ ತನ್ನ ಮಗನನ್ನು ಕೊಲ್ಲಲೆಂದು ಮನೆಗೆ ಕರೆಸಿಕೊಂಡಿದ್ದಾಳೆ. ಜೊತೆಗೆ ಆರು ತಿಂಗಳ ಹಿಂದೆ ತನ್ನ ಮಗನೊಂದಿಗೆ ಓಡಿಹೋಗಿದ್ದಳು. ಆದರೆ ಕುಟುಂಬದ ಒತ್ತಡದಿಂದ 5 ದಿನಗಳ ನಂತರ ಮನೆಗೆ ಮತ್ತೆ ಹಿಂದಿರುಗಿದ್ದಳು. ತನ್ನ ಮಗನೊಂದಿಗಿನ ಸಂಬಂಧವನ್ನು ಕಳೆದುಕೊಳ್ಳುವ ಸಲುವಾಗಿ ಆಕೆ ಆತನನ್ನು ಕೊಲೆ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ.

  • ಮದುವೆಯಾದ 2 ದಿನಕ್ಕೆ ಕೊರೊನಾ ಸೋಂಕಿನಿಂದ ಟೆಕ್ಕಿ ಸಾವು

    ಮದುವೆಯಾದ 2 ದಿನಕ್ಕೆ ಕೊರೊನಾ ಸೋಂಕಿನಿಂದ ಟೆಕ್ಕಿ ಸಾವು

    – ಸಮಾರಂಭಕ್ಕೆ ಹಾಜರಾಗಿದ್ದ 95 ಮಂದಿಗೆ ಪಾಸಿಟಿವ್
    – ಸೋಂಕಿನ ಲಕ್ಷಣ ಕಂಡು ಬಂದರೂ ನಿರ್ಲಕ್ಷ್ಯ

    ಪಾಟ್ನಾ: ಕೊರೊನಾ ವೈರಸ್ ಮದುವೆ ಮಾಡಿಕೊಳ್ಳುತ್ತಿರುವ ಕುಟುಂಬಗಳಲ್ಲಿ ತೀವ್ರ ದುಃಖಕ್ಕೆ ಕಾರಣವಾಗುತ್ತಿದೆ. ಮದುವೆ ಸಮಾರಂಭದಲ್ಲಿ ಭಾಗವಹಿಸಲು 50 ಮಂದಿಗೆ ಮಾತ್ರ ಅವಕಾಶ ನೀಡಿದ್ದರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವೆಯೇ ಮದುವೆಯಾದ ಎರಡು ದಿನದಲ್ಲೇ ವರ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಘಟನೆ ಬಿಹಾರದ ಪಾಟ್ನಾ ಗ್ರಾಮಾಂತರ ಪ್ರದೇಶದ ಪಾಲಿಗಂಜ್ ಗ್ರಾಮದಲ್ಲಿ ನಡೆದಿದೆ.

    ಪಾಲಿಗಂಜ್ ಗ್ರಾಮದ 30 ವರ್ಷದ ಟೆಕ್ಕಿ ಸಾವನ್ನಪ್ಪಿದ್ದು, ಮದುವೆ ಹಿನ್ನೆಲೆಯಲ್ಲಿ ಗುರುಗ್ರಾಮದಿಂದ ಜೂನ್ 12 ರಂದು ತನ್ನ ಸ್ವಗ್ರಾಮಕ್ಕೆ ವಾಪಸ್ ಆಗಿದ್ದ. ಜೂನ್ 15 ರಂದು ಟೆಕ್ಕಿ ವಿವಾಹ ಕುಟುಂಬಸ್ಥರು ನಿಗದಿ ಪಡಿಸಿದ್ದ ಯುವತಿಯೊಂದಿಗೆ ಜರುಗಿತ್ತು. ಆದರೆ ಮದುವೆಯಾದ 2 ದಿನಕ್ಕೆ (ಜೂನ್ 17) ಆತನ ಆರೋಗ್ಯದಲ್ಲಿ ಏರುಪೇರು ಕಂಡಬಂದ ಹಿನ್ನೆಲೆಯಲ್ಲಿ ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಲಾಗಿತ್ತು. ಆದರೆ ಆಸ್ಪತ್ರೆಗೆ ಕರೆಕೊಂಡು ಹೋಗುವ ಮಾರ್ಗ ನಡುವೆ ಆತ ಸಾವನ್ನಪ್ಪಿದ್ದ.

    ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಕೇವಲ 50 ಮಂದಿಗೆ ಮಾತ್ರ ಅವಕಾಶ ಎಂದು ಸರ್ಕಾರ ನಿಯಂತ್ರಣ ವಿಧಿಸಿದ್ದರು ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚು ಮಂದಿ ಹಾಜರಾಗಿದ್ದರು. ಯುವಕ ಸಾವನ್ನಪ್ಪಿದ ಕಾರಣ ಸಮಾರಂಭಕ್ಕೆ ಹಾಜರಾಗಿದ್ದ ಅಷ್ಟು ಮಂದಿಗೆ ಕೊರೊನಾ ಟೆಸ್ಟ್ ನಡೆಸಿದ ಪರಿಣಾಮ 95 ಜನರಿಗೆ ಸೋಂಕು ದೃಢವಾಗಿತ್ತು. ಆದರೆ ವಧುವಿನ ವರದಿ ಮಾತ್ರ ನೆಗೆಟಿವ್ ಬಂದಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಎಲ್ಲರನ್ನು ಕ್ವಾರಂಟೈನ್ ಮಾಡಿದ್ದ ಪರಿಣಾಮ ಹೆಚ್ಚು ಜನರಿಗೆ ಸೋಂಕು ಹರಡುವುದನ್ನು ತಪ್ಪಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಘಟನೆ ಕುರಿತು ಮಾಹಿತಿ ನೀಡಿರುವ ಪಟ್ನಾ ಡಿಎಂ ಕುಮಾರ್ ರವಿ, ಟೆಕ್ಕಿ ಸಾವನ್ನಪ್ಪಿದ ಬಳಿಕ ಘಟನೆ ಕುರಿತು ಸ್ಥಳೀಯರು ಕರೆ ಮಾಡಿ ಮಾಹಿತಿ ನೀಡಿದ್ದರು. ಗುರುಗ್ರಾಮದಿಂದ ವಾಪಸ್ ಆಗಿದ್ದ ಆತನಿಗೆ ಕೊರೊನಾ ಲಕ್ಷಣಗಳಿದ್ದರೂ ಕೂಡ ಕುಟುಂಬ ಸದಸ್ಯರು ನಿರ್ಲಕ್ಷ್ಯ ವಹಿಸಿ ಮದುವೆ ಕಾರ್ಯ ಮಾಡಿದ್ದರು. ಆದರೆ ಆತ ತೀರ ಅಸ್ವಸ್ತನಾದ ಸಮಯದಲ್ಲಿ ಪಾಟ್ನಾ ಏಮ್ಸ್ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಆಸ್ಪತ್ರೆ ಕರೆತರುವ ಮುನ್ನವೇ ಆತ ಸಾವನ್ನಪ್ಪಿದ. ಆತನ ಕುಟುಂಬಸ್ಥರು ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದೆ ಅಂತ್ಯ ಕ್ರಿಯೆಯನ್ನು ನಡೆದಿದ್ದರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

    ವಧು-ವರ ಇಬ್ಬರ ಪೋಷಕರು ಶಿಕ್ಷಕರಾಗಿದ್ದು, ವಧು ಸಿವಿಲ್ ಎಂಜಿನಿಯರ್ ಆಗಿದ್ದಾರೆ. ಮದುವೆ ಕಾರ್ಯಕ್ರಮಗಳು ಜೂನ್ 8 ರಂದು ಆರಂಭವಾಗಿದ್ದು, ವರನಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಬಳಿಕ ಆತನನ್ನು ಆಸ್ಪತ್ರೆಗೆ ಕಳುಹಿಸುವ ಬದಲು ಕ್ವಾರಂಟೈನ್ ಮಾಡಲಾಗಿತ್ತು. ಮದುವೆ ಮುನ್ನ ದಿನವೂ ಆತ ಕುಸಿದು ಬಿದ್ದಿದ್ದ. ವಧು-ವರ ಕುಟುಂಬ ಸದಸ್ಯರು ಶಿಕ್ಷಿತರಾಗಿದ್ದರೂ ಕೊರೊನಾ ಲಕ್ಷಣ ಕುರಿತು ನಿರ್ಲಕ್ಷ್ಯ ವಹಿಸಿದ್ದು ಘಟನೆಗೆ ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

  • ಐಸೋಲೇಷನ್ ವಾರ್ಡಿನಲ್ಲಿದ್ದ ರೋಗಿಯ ಮೇಲೆ ಸತತ 2 ರಾತ್ರಿ ಅತ್ಯಾಚಾರ – ಸಂತ್ರಸ್ತೆ ಸಾವು

    ಐಸೋಲೇಷನ್ ವಾರ್ಡಿನಲ್ಲಿದ್ದ ರೋಗಿಯ ಮೇಲೆ ಸತತ 2 ರಾತ್ರಿ ಅತ್ಯಾಚಾರ – ಸಂತ್ರಸ್ತೆ ಸಾವು

    – ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

    ಪಟ್ನಾ: ಒಂದುಕಡೆ ದೇಶಾದ್ಯಂತ ಕೊರೊನಾ ವೈರಸ್ ಸೋಂಕಿತರನ್ನು ಗುಣಪಡಿಸುವಲ್ಲಿ ವೈದ್ಯಕೀಯ ಇಲಾಖೆ ಹಗಲಿರುಳು ಎನ್ನದೇ ಸೇವೆ ಮಾಡುತ್ತಿದ್ದಾರೆ. ಆದರೆ ಬಿಹಾರದಲ್ಲಿ ವೈದ್ಯರು ಐಸೋಲೇಷನ್ ವಾರ್ಡಿನಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ ನಂತರ ಸಂತ್ರಸ್ತೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಸಂತ್ರಸ್ತೆಯ ಅತ್ತೆ ಅಧಿಕಾರಿಗಳಿಗೆ ದೂರು ನೀಡಿದ ಬಳಿಕ ಮಂಗಳವಾರ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ.

    ಏನಿದು ಪ್ರಕರಣ?
    ಕೊರೊನಾದಿಂದ ಇಡೀ ದೇಶವೇ 21 ದಿನ ಲಾಕ್‍ಡೌನ್ ಆಗಿದೆ. 25 ವರ್ಷದ ಸಂತ್ರಸ್ತೆ ಪಂಜಾಬ್‍ನ ಲೂಧಿಯಾನದಿಂದ ಬಿಹಾರದ ಗಯಾಕ್ಕೆ ಮಾರ್ಚ್ 25ರಂದು ಪತಿಯೊಂದಿಗೆ ಬಂದಿದ್ದರು. ಮೃತ ಸಂತ್ರಸ್ತೆ ಎರಡು ತಿಂಗಳ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವಾಗಿತ್ತು. ಗರ್ಭಪಾತದ ಕಾರಣದಿಂದಾಗಿ ಸಂತ್ರಸ್ತೆಗೆ ಹೆಚ್ಚು ರಕ್ತಸ್ರಾವವಾಗುತ್ತಿತ್ತು. ಹೀಗಾಗಿ ಆಕೆಯನ್ನು ಗಯಾದ ಮಾರ್ಚ್ 27ರಂದು ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಅಲ್ಲಿ ಸಂತ್ರಸ್ತೆಯನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಬಳಿಕ ಏಪ್ರಿಲ್ 1 ರಂದು ಕೊರೊನಾ ವೈರಸ್ ಶಂಕೆ ಇದೆ ಎಂದು ಸಂತ್ರಸ್ತೆಯನ್ನು ಪ್ರತ್ಯೇಕ ವಾರ್ಡಿನಲ್ಲಿ ಇರಿಸಲಾಗಿತ್ತು. ಪ್ರತ್ಯೇಕ ವಾರ್ಡಿನಲ್ಲಿ ಸಂತ್ರಸ್ತೆ ಒಬ್ಬಂಟಿಯಾಗಿದ್ದಳು. ಇದೇ ವೇಳೆ ತಪಾಸಣೆ ಮಾಡಲು ಬರುತ್ತಿದ್ದ ವೈದ್ಯರು ಏಪ್ರಿಲ್ 2 ಮತ್ತು 3ರಂದು ಸತತ ಎರಡು ರಾತ್ರಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬದವರು ಆರೋಪಿಸಿದ್ದಾರೆ.

    ಕೊರೊನಾ ಸೋಂಕು ಇಲ್ಲದಿರುವುದು ದೃಢಪಟ್ಟ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿತ್ತು. ಆದರೆ ಆಕೆ ಮನೆಯಲ್ಲಿ ಒಬ್ಬಳೇ ಮೌನವಾಗಿ ಇರುತ್ತಿದ್ದು, ಭಯಪಡುತ್ತಿದ್ದಳು. ಆಗ ಮನೆಯವರು ಪದೇ ಪದೇ ಕೇಳಿದಾಗ ಆಸ್ಪತ್ರೆಯಲ್ಲಿ ವೈದ್ಯರು ಅತ್ಯಾಚಾರ ಎಸಗಿರುವ ವಿಚಾರವನ್ನು ಹೇಳಿದ್ದಾಳೆ. ಆದರೆ ಚಿಕಿತ್ಸೆ ಪಡೆದರೂ ರಕ್ತಸ್ರಾವ ನಿಂತಿರಲಿಲ್ಲ. ಕೊನೆಗೆ ತೀವ್ರ ರಕ್ತಸ್ರಾವದಿಂದ ಏಪ್ರಿಲ್ 6 ರಂದು ಸೊಸೆ ಮೃತಪಟ್ಟಳು ಎಂದು ಅತ್ತೆ ತಿಳಿಸಿದ್ದಾರೆ.

    ಸಂತ್ರಸ್ತೆಯ ಅತ್ತೆ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಸ್ಪತ್ರೆಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಆದರೆ ಸಂತ್ರಸ್ತೆಯ ಅತ್ತೆಗೆ ಆರೋಪಿಗಳನ್ನು ಗುರುತಿಸಲು ಸಾಧ್ಯವಾಗಿಲ್ಲ. ಸದ್ಯಕ್ಕೆ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

    ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಸ್ಪತ್ರೆಯ ಅಧೀಕ್ಷಕ ಡಾ.ವಿ.ಕೆ.ಪ್ರಸಾದ್ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರಂತೆ ನಟಿಸಿ ಆಸ್ಪತ್ರೆಯ ಪ್ರತ್ಯೇಕವಾದ ವಾರ್ಡಿಗೆ ಹೋಗಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

  • ಮೆದುಳು ಜ್ವರಕ್ಕೆ ಮೃತಪಟ್ಟ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು

    ಮೆದುಳು ಜ್ವರಕ್ಕೆ ಮೃತಪಟ್ಟ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು

    ಪಾಟ್ನಾ: ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.

    ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸೋಮವಾರದಂದು ನಡೆದ ರಾಜ್ಯ ಆರೋಗ್ಯ ಇಲಾಖೆಯ ಸಭೆ ವೇಳೆ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಮಕ್ಕಳು ಮೆದುಳು ಜ್ವರದಿಂದ ಸಾವನ್ನಪ್ಪುತ್ತಿರುವುದರ ಬಗ್ಗೆ ಮಾತನಾಡುವ ಬದಲು ಕ್ರಿಕೆಟ್ ಪಂದ್ಯದ ಕುರಿತು ಪ್ರಶ್ನಿಸುತ್ತಿದ್ದು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುದಕ್ಕೆ ಉದಾಹರಣೆಯಾಗಿದೆ. ‘ಕ್ರಿಕೆಟ್ ಪಂದ್ಯದ ಫಲಿತಾಂಶ ಏನಾಯ್ತು?’ ಎಂದು ಸಚಿವರು ಪ್ರಶ್ನಿಸುತ್ತಿರುವುದು ಮತ್ತು ಮತ್ತೊಬ್ಬ ವ್ಯಕ್ತಿ `4ನೇ ವಿಕೆಟ್ ಹೊಗಿದೆ’ ಎಂದು ಸಭೆಯಲ್ಲಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಕ್ಕಳ ಸಾವಿನ ಕುರಿತು ರಾಜ್ಯದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ್ದು, ಸಚಿವರ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

    ಈ ಹಿಂದೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತೂಕಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಆ ಬಳಿಕ ಈ ಬಗ್ಗೆ ಚೌಬೆ ಅವರು ಸ್ಪಷ್ಟಿಕರಿಸಿ, ‘ನಾನು ನಿದ್ರಿಸುತ್ತಿರಲಿಲ್ಲ, ಪತ್ರಿಕಾಗೋಷ್ಠಿ ಬಗ್ಗೆ ಯೋಚಿಸುತ್ತಿದ್ದೆ’ ಎಂದು ಹೇಳಿದ್ದರು. ಆ ಬಳಿಕ ಸೋಮವಾರ ಸ್ವತಃ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರೇ, ಸಾವಿನ ಬಗ್ಗೆ ಪ್ರತಿದಿನ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದರು.

    ಆಸ್ಪತ್ರೆಗೆ ದಾಖಲಾಗಿರುವವರು, ನೀಡಲಾಗುತ್ತಿರುವ ಚಿಕಿತ್ಸೆ, ಮೃತಪಟ್ಟ ಕುಟುಂಬಕ್ಕೆ ನೀಡುವ ಪರಿಹಾರ, ನೆರವುಗಳ ಕುರಿತು ವರದಿ ಸಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗ ಆರೋಗ್ಯ ಸಚಿವಾಲಯಕ್ಕೆ ಕೇಳಿದೆ. ಹಾಗೆಯೇ ಈ ಬಗ್ಗೆ ನಾಲ್ಕು ವಾರದೊಳಗೆ ಉತ್ತರ ನೀಡುವಂತೆ ತಿಳಿಸಿದೆ.

  • ಗ್ಯಾಂಗ್‍ ರೇಪ್‍ಗೆ ಸಹಕರಿಸದ್ದಕ್ಕೆ ಅಪ್ರಾಪ್ತೆ ಮೇಲೆ ಆ್ಯಸಿಡ್ ಸುರಿದ ಕಾಮುಕರು

    ಗ್ಯಾಂಗ್‍ ರೇಪ್‍ಗೆ ಸಹಕರಿಸದ್ದಕ್ಕೆ ಅಪ್ರಾಪ್ತೆ ಮೇಲೆ ಆ್ಯಸಿಡ್ ಸುರಿದ ಕಾಮುಕರು

    ಪಟ್ನಾ: 16 ವರ್ಷದ ಬಾಲಕಿ ಮೇಲೆ 4 ಮಂದಿ ಕಾಮುಕರು ಗ್ಯಾಂಗ್ ರೇಪ್ ಮಾಡಲು ಯತ್ನಿಸಿ, ಆ್ಯಸಿಡ್ ಸುರಿದ ಅಮಾನವೀಯ ಘಟನೆ ಬಿಹಾರದ ಭಗಲ್‍ಪುರ ಜಿಲ್ಲೆಯಲ್ಲಿ ನಡೆದಿದೆ.

    ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಅಪ್ರಾಪ್ತೆ ಮನೆಗೆ ನುಗ್ಗಿದ್ದ 4 ಮಂದಿ ಯುವಕರು ಬಾಲಕಿಯ ತಾಯಿಗೆ ಗನ್ ತೋರಿಸಿ ಹೆದರಿಸಿದ್ದಾರೆ. ಬಳಿಕ ತಾಯಿಯ ಎದುರೇ ಬಾಲಕಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾರೆ. ಆದ್ರೆ ಈ ವೇಳೆ ಬಾಲಕಿ ಅವರಿಗೆ ಸಹಕರಿಸದ್ದಕ್ಕೆ ಸಿಟ್ಟಿಗೆದ್ದ ಕಾಮುಕರು ಆಕೆಯ ಮೇಲೆ ಆ್ಯಸಿಡ್ ಸುರಿದು ದುಷ್ಟತನವನ್ನು ಮೆರೆದಿದ್ದಾರೆ.

    ಆ್ಯಸಿಡ್ ದಾಳಿಗೆ ತುತ್ತಾದ ಬಾಲಕಿ ಸದ್ಯ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು, ಬಾಲಕಿಯ ತಾಯಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

    ಸದ್ಯ ನಾಲ್ವರು ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೆ ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಭಗಲ್‍ಪುರ ಎಸ್‍ಪಿ ಆಶೀಷ್ ಭಾರ್ತಿ ತಿಳಿಸಿದ್ದಾರೆ.

  • 15ರ ವಿದ್ಯಾರ್ಥಿನಿಯನ್ನೇ ಮದುವೆಯಾದ ಟ್ಯೂಷನ್ ಟೀಚರ್!

    15ರ ವಿದ್ಯಾರ್ಥಿನಿಯನ್ನೇ ಮದುವೆಯಾದ ಟ್ಯೂಷನ್ ಟೀಚರ್!

    – ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಗ್ರಾಮಸ್ಥರ ಹಿಂದೇಟು

    ಪಟ್ನಾ: ಟ್ಯೂಷನ್ ಕಲಿಸುತ್ತಿದ್ದ ಬಿಹಾರದ ಗ್ರಾಮವೊಂದರ ಶಿಕ್ಷಕನೊಬ್ಬ ತನ್ನ ಬಳಿ ಬರುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನೇ ಮದುವೆಯಾಗಿದ್ದಾನೆ.

    ನಾರಾಯಣ್‍ಪುರ ಗ್ರಾಮದಲ್ಲಿ ಶಿಕ್ಷಕ ಚಂದ್ರಪ್ರಕಾಶ್ ಮೆಹ್ತಾ(50) ವಿದ್ಯಾರ್ಥಿಗಳಿಗೆ ಖಾಸಗಿ ಟ್ಯೂಷನ್ ಕೇಂದ್ರವನ್ನು ನಡೆಸುತ್ತಿದ್ದನು. ಆತನ ಬಳಿ ಗ್ರಾಮದ ಹಲವು ಹೆಣ್ಣು ಮಕ್ಕಳು ಟ್ಯೂಷನ್‍ಗೆ ಹೋಗುತ್ತಿದ್ದರು. ಆದ್ರೆ ಕೆಲವು ದಿನಗಳ ಹಿಂದೆ ಚಂದ್ರಪ್ರಕಾಶ್ ಟ್ಯೂಷನ್‍ಗೆ ಬರುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯೊಬ್ಬಳನ್ನು ಯಾರಿಗೂ ತಿಳಿಯದಂತೆ ವಿವಾಹವಾಗಿದ್ದನು. ಅಷ್ಟೇ ಅಲ್ಲದೆ ಅವಳ ಜೊತೆ ದೈಹಿಕ ಸಂಬಂಧವನ್ನು ಕೂಡ ಇಟ್ಟುಕೊಂಡಿದ್ದನು.

    ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಇಡೀ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ತಮ್ಮ ಮಕ್ಕಳಿಗೂ ಯಾರಾದರೂ ಮೋಡಿ ಮಾಡಿ ಮದುವೆಯಾಗಿಬಿಟ್ಟರೆ ಏನು ಗತಿ ಎಂದು ಹೆದರಿ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ.

    ಯಾರೋ ಮಾಡಿದ ತಪ್ಪಿಗೆ ನಮಗೇಕೆ ಶಿಕ್ಷೆ ಅಂತ ಶಿಕ್ಷಣದಿಂದ ವಂಚಿತರಾಗಿರುವ ಹೆಣ್ಣು ಮಕ್ಕಳು ಈಗ ಕಣ್ಣೀರಿಡುತ್ತಿದ್ದಾರೆ. ಘಟನೆ ಕುರಿತು ತಿಳಿಯುತ್ತಿದಂತೆ ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಪರ ಸಂಘಟನೆಯ ಸದಸ್ಯರು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೇ ಗ್ರಾಮಸ್ಥರು ಮಾತ್ರ ಯಾರ ಮೇಲೂ ನಮಗೆ ನಂಬಿಕೆ ಇಲ್ಲ. ನಮ್ಮ ಮಕ್ಕಳ ಭದ್ರತೆ ನಮಗೆ ಮುಖ್ಯ. ನಾವು ಅವರನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರ್‍ಯಾಲಿ ವೇಳೆ ಸೈಕಲ್‍ನಿಂದ ಕೆಳಕ್ಕೆ ಬಿದ್ದ ತೇಜ್ ಪ್ರತಾಪ್ ಯಾದವ್ – ಬೀಳುವುದು ಮೇಲೆಳಲಿಕ್ಕೆ ಎಂದ್ರು

    ರ್‍ಯಾಲಿ ವೇಳೆ ಸೈಕಲ್‍ನಿಂದ ಕೆಳಕ್ಕೆ ಬಿದ್ದ ತೇಜ್ ಪ್ರತಾಪ್ ಯಾದವ್ – ಬೀಳುವುದು ಮೇಲೆಳಲಿಕ್ಕೆ ಎಂದ್ರು

    ಪಟ್ನಾ: ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಇಂದು ಹಮ್ಮಿಕೊಂಡಿದ್ದ ಸೈಕಲ್ ಯಾತ್ರೆಯ ವೇಳೆ ಉರುಳಿಬಿದ್ದು ಎಡವಟ್ಟು ಮಾಡಿಕೊಂಡಿದ್ದಾರೆ. ತೇಜ್ ಪ್ರತಾಪ್ ಯಾದವ್ ಸೈಕಲ್ ಮೇಲಿಂದ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    29 ವರ್ಷದ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಪಕ್ಷದ ಪ್ರಮುಖ ನಾಯಕರಾಗಿರುವ ತೇಜ್ ಪ್ರತಾಪ್, ರಾಜ್ಯ ಸರ್ಕಾರದ ವಿರುದ್ಧ ಪತ್ರಿಭಟನೆ ನಡೆಸಲು ಸೈಕಲ್ ಯಾತ್ರೆಯನ್ನು ಕೈಗೊಂಡಿದ್ದರು. ಯಾತ್ರೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೂ ಸಹ ಅಂತಿಮ ಹಂತದಲ್ಲಿ ಸೈಕಲ್ ಮೇಲಿಂದ ಉರುಳಿ ಬೀಳುವ ಮೂಲಕ ಎಡವಟ್ಟು ಮಾಡಿಕೊಂಡರು. ಈ ವೇಳೆ ಸ್ಥಳದಲ್ಲಿದ್ದ ಬೆಂಬಲಿಗರು ತೇಜ್ ಪ್ರತಾಪ್ ನೆರವಿಗೆ ಬಂದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಈ ದೃಶ್ಯಗಳು ವೈರಲ್ ಆಗುತ್ತಿದಂತೆ ಸ್ಪಷ್ಟನೆ ನೀಡಿರುವ ತೇಜ್ ಪ್ರತಾಪ್, ಜೀವನದಲ್ಲಿ ಜನರು ಬೀಳುವುದು ಮತ್ತೆ ಹೆಚ್ಚಿನ ಶಕ್ತಿಯೊಂದಿದೆ ಮೇಲೆಳಲಿಕ್ಕೆ ಎಂದು ಹೇಳಿದ್ದಾರೆ.

    ಲಾಲು ಪ್ರಸಾದ್ ಯಾದವ್ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ತೇಜ್ ಪ್ರತಾಪ್ ಪಕ್ಷದಲ್ಲಿ ಹೆಚ್ಚು ಸಕ್ರೀಯರಾಗಿದ್ದಾರೆ. ಅಲ್ಲದೇ ಕಳೆದ ಕೆಲ ದಿನಗಳ ಹಿಂದೆ ತೇಜ್ ಪ್ರತಾಪ್ ಯಾದವ್ ಅಭಿನಯದ `ರುದ್ರ ಅವತಾರ’ ಎಂಬ ಸಿನಿಮಾದ ಟೀಸರ್ ಬಿಡುಗಡೆಗೊಳಿಸಿ ಸುದ್ದಿಯಾಗಿದ್ದರು. ಈ ಹಿಂದೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ತೇಜ್ ಪ್ರತಾಪ್ ಯಾದವ್ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

  • ಲಾಲು ಪ್ರಸಾದ್ ಯಾದವ್‍ಗೆ 6 ವಾರ ತಾತ್ಕಾಲಿಕ ಜಾಮೀನು ಮಂಜೂರು

    ಲಾಲು ಪ್ರಸಾದ್ ಯಾದವ್‍ಗೆ 6 ವಾರ ತಾತ್ಕಾಲಿಕ ಜಾಮೀನು ಮಂಜೂರು

    ಪಟ್ನಾ: ರಾಂಚಿಯ ಹೈಕೋರ್ಟ್ ಮೇವು ಹಗರಣದ ಅಪರಾಧಿ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಆರೋಗ್ಯ ಚಿಕಿತ್ಸೆಗಾಗಿ ಆರು ವಾರಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ.

    ಲಾಲು ಪ್ರಸಾದ್ ಪುತ್ರನ ತೇಜ್ ಪ್ರತಾಪ್ ಯಾದವ್ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಶುಕ್ರವಾರ ಪಟ್ನಾಗೆ ಆಗಮಿಸಿದ್ದರು. ಈ ವೇಳೆಯೇ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಶನಿವಾರ ತೇಜ್ ಪ್ರತಾಪ್ ವಿವಾಹ ಸಮಾರಂಭ ನಡೆಯಲಿದೆ.

    ಇದಕ್ಕೂ ಮುನ್ನವೇ ಲಾಲು ಪ್ರಸಾದ್ ಯಾದವ್ ಪುತ್ರನ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಮೂರು ದಿನಗಳ ಪೆರೋಲ್ ಪಡೆದಿದ್ದರು. ತೇಜ್ ಪ್ರತಾಪ್ ಯಾದವ್ ಹಾಗೂ ಐಶ್ವರ್ಯಾ ವಿವಾದ ನಿಶ್ಚಿತಾರ್ಥ ಸಮಾರಂಭವೂ ಏಪ್ರಿಲ್ 18 ರಂದು ಪಟ್ನಾದ ಮಯೂರ ಹೋಟೆಲ್ ನಲ್ಲಿ ನೆರವೇರಿತ್ತು. ಮೇ 12 ರಂದು ವಿವಾಹ ಸಮಾರಂಭ ನಡೆಯಲಿದೆ.

    ಪ್ರತಾಪ್ ನಿಶ್ಚಿತಾರ್ಥ ಸಮಾರಂಭದ ವೇಳೆ ಲಾಲು ಪ್ರಸಾದ್ ಯಾದವ್ ಜೈಲಿನಲ್ಲಿ ಇದ್ದ ಕಾರಣ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಈ ವೇಳೆ ಪ್ರತಾಪ್ ತಮ್ಮ ನೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡು `ಮೀಸ್ ಯೂ ಪಾ’ ಎಂದು ಬರೆದುಕೊಂಡಿದ್ದರು.

    ಸದ್ಯ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ ಅನಾರೋಗ್ಯ ಸಮಸ್ಯೆಯಿಂದ ಜಾರ್ಖಂಡ್ ನ ಆರ್ ಐಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಇದನ್ನು ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ಮೋದಿ ಕಾರಣ: ಲಾಲೂ ಕಿಡಿ

  • ತೇಜ್ ಪ್ರತಾಪ್, ಐಶ್ವರ್ಯ ವಿವಾಹ – ಲಾಲು ಪ್ರಸಾದ್ ಯಾದವ್‍ಗೆ 5 ದಿನ ಪೆರೋಲ್

    ತೇಜ್ ಪ್ರತಾಪ್, ಐಶ್ವರ್ಯ ವಿವಾಹ – ಲಾಲು ಪ್ರಸಾದ್ ಯಾದವ್‍ಗೆ 5 ದಿನ ಪೆರೋಲ್

    ಪಟ್ನಾ : ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರಿಗೆ ನ್ಯಾಯಾಲಯ ಐದು ದಿನ ಪೆರೋಲ್ ಮಂಜೂರು ಮಾಡಿದ್ದು, ಪುತ್ರ ತೇಜ್ ಪಾಲ್ ವಿವಾಹದಲ್ಲಿ ಭಾಗವಹಿಸಲು ಅವಕಾಶ ನೀಡಿದೆ.

    ಬಿಹಾರ ಮಾಜಿ ಆರೋಗ್ಯ ಸಚಿರಾಗಿರುವ ಲಾಲು ಪುತ್ರ ತೇಜ್ ಪ್ರತಾಪ್ ಯಾದವ್ ಹಾಗೂ ಎಂಬಿಎ ಪದವೀಧರೆ ಐಶ್ವರ್ಯ ರೈ ಅವರ ನಿಶ್ಚಿತಾರ್ಥ ಏಪ್ರಿಲ್ 18 ರಂದು ನಡೆದಿದ್ದು, ಮೇ 12ರಂದು ಅದ್ಧೂರಿ ಮದುವೆ ಸಮಾರಂಭ ನಡೆಯಲಿದೆ. ತೇಜ್ ಪ್ರತಾಪ್ ಹಾಗೂ ಐಶ್ವರ್ಯ ನಿಶ್ಚಿತಾರ್ಥ ಸಮಾರಂಭ ಲಾಲು ಜೈಲಿನಲ್ಲಿ ಇರುವ ಸಂದರ್ಭದಲ್ಲಿ ನಡೆದಿತ್ತು.

    ಲಾಲು ಪ್ರಸಾದ್ ಯಾದವ್ 1990 ರಿಂದ 1944 ವರೆಗೂ ಮುಖ್ಯಮಂತ್ರಿ ಆಗಿದ್ದರು. ಈ ವೇಳೆ ನಡೆದ ಮೇವು ಹಗರಣದಲ್ಲಿ ಪ್ರಮುಖ ಅಪರಾಧಿಯಾಗಿದ್ದು, ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರೆ. ಆದ್ರೆ ಅನಾರೋಗ್ಯದ ಕಾರಣ ಮಾರ್ಚ್ 29 ರಂದು ಲಾಲು ಪ್ರಸಾದ್ ಯಾದವ್ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮಗನ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಲಾಲು ಪ್ರಸಾದ್ ಪೆರೋಲ್ ಗೆ ಅರ್ಜಿ ಸಲ್ಲಿಸಿದ್ದದರು.

    ಸದ್ಯ ಲಾಲು ಅವರು ಮೇ 10 ರಿಂದ ಮೇ 14 ರವರೆಗೆ ಹೊರ ಬರುವ ಸಾಧ್ಯತೆ ಇದೆ. ಮೇ 12 ರಂದು ಪಾಟ್ನಾದಲ್ಲಿ ವಿವಾಹ ಸಮಾರಂಭ ನಡೆಯಲಿದೆ.

  • ಪಲ್ಟಿಯಾಗಿ ಹೊತ್ತಿ ಉರಿದ ಬಸ್ – 27 ಮಂದಿ ಸಜೀವ ದಹನ

    ಪಲ್ಟಿಯಾಗಿ ಹೊತ್ತಿ ಉರಿದ ಬಸ್ – 27 ಮಂದಿ ಸಜೀವ ದಹನ

    ಪಟ್ನಾ: ದೆಹಲಿ ಹಾಗೂ ಮುಜಫರ್ ನಗರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಸೊಂದು ಉರುಳಿಬಿದ್ದು 27 ಮಂದಿ ಸಜೀವವಾಗಿ ಸುಟ್ಟು ಸಾವನ್ನಪ್ಪಿರುವ ಘಟನೆ ಬಿಹಾರ ಮೊತಿಹಾರಿಯ ಬಲ್ವಾ ಬಳಿ ನಡೆದಿದೆ.

    ಇಂದು ಮಧ್ಯಾಹ್ನ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬಸ್ ಉರುಳಿಬಿದ್ದಿದ್ದು, ಬಸ್ ಚಾಲಕ ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿದ ವೇಳೆ ದುರ್ಘಟನೆ ನಡೆದಿದೆ. ಬಳಿಕ ಸ್ಥಳೀಯ ನಿವಾಸಿಗಳು ಬಸ್‍ನಲ್ಲಿದ್ದ ಜನರನ್ನುರಕ್ಷಿಸಲು ಯತ್ನಿಸಿದರೂ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾಗಿ ಮಾಧ್ಯಮವೊಂದು ವರದಿ ಮಾಡಿದೆ.

    ಘಟನೆ ಕುರಿತು ಮಾಹಿತಿ ಪಡೆದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿ, ಹಲವರನ್ನು ರಕ್ಷಣೆ ಮಾಡಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಯೊಬ್ಬರು ಬಸ್ ನಲ್ಲಿ 32 ಜನರು ಪ್ರಯಾಣ ನಡೆಸುತ್ತಿದ್ದರು. ಮುಜಫರ್ ನಗರದಿಂದ ಬಸ್ ಹೊರಟಿತ್ತು. ಘಟನೆ ವೇಳೆ ಮಳೆ ಹೆಚ್ಚಾಗಿದ ಪರಿಣಾಮ ರಕ್ಷಣಾ ಕಾರ್ಯಾಚರಣೆ ಅಡ್ಡಿ ಉಂಟಾಗಿತ್ತು ಎಂದು ಮಾಹಿತಿ ನೀಡಿದ್ದಾರೆ. ಬಿಹಾರ ವಿಪತ್ತು ನಿರ್ವಹಣೆ ಮತ್ತು ಪರಿಹಾರ ಸಚಿವರು ಪ್ರತಿಕ್ರಿಯಿಸಿ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತ ವ್ಯಕ್ತಿಗಳಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.