Tag: ಪಠಾಣ್ 2

  • ‘ಪಠಾಣ್ 2’ಗೆ ಸಿದ್ಧತೆ- ಹೊಸ ನಿರ್ದೇಶಕನ ಹುಡುಕಾಟದಲ್ಲಿ ಚಿತ್ರತಂಡ

    ‘ಪಠಾಣ್ 2’ಗೆ ಸಿದ್ಧತೆ- ಹೊಸ ನಿರ್ದೇಶಕನ ಹುಡುಕಾಟದಲ್ಲಿ ಚಿತ್ರತಂಡ

    ಬಾಲಿವುಡ್ ನಟ ಶಾರುಖ್ ಖಾನ್ (Sharukh Khan) ಕೆರಿಯರ್‌ಗೆ ಮರುಜೀವ ಕೊಟ್ಟ ಸಿನಿಮಾ ಪಠಾಣ್. ಗಲ್ಲಾಪೆಟ್ಟಿಗೆ 1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಹಿಸ್ಟರಿ ಕ್ರಿಯೇಟ್ ಮಾಡಿತ್ತು. ಇದೀಗ ಇದರ ಸೀಕ್ವೆಲ್‌ಗಾಗಿ ಸಿದ್ಧತೆ ನಡೆಯುತ್ತಿದೆ. ಈ ಚಿತ್ರಕ್ಕೆ ಸಕ್ಸಸ್ ತಂದು ಕೊಟ್ಟ ಡೈರೆಕ್ಟರ್‌ ಸಿದ್ಧಾರ್ಥ್‌ ಆನಂದ್‌ಗೆ ನಿರ್ಮಾಪಕ ಗೇಟ್ ಪಾಸ್ ನೀಡಿದ್ದಾರೆ.

    ಸಿದ್ಧಾರ್ಥ್ ಆನಂದ್ ನಿರ್ದೇಶನದ ‘ಪಠಾಣ್’ (Pathaan) ಸಿನಿಮಾವನ್ನು ಆದಿತ್ಯಾ ಚೋಪ್ರಾ ನಿರ್ಮಾಣ ಮಾಡಿದ್ದರು. ಶಾರುಖ್ ಖಾನ್- ದೀಪಿಕಾ ಪಡುಕೋಣೆ (Deepika Padukone) ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಇದೀಗ ಪಠಾಣ್ ಪಾರ್ಟ್ 2ಗೆ ಸಿದ್ಧತೆ ಮಾಡಲಾಗುತ್ತಿದೆ. ಈ ವರ್ಷದ ಅಂತ್ಯದಲ್ಲಿ ಶೂಟಿಂಗ್ ಶುರುವಾಗಲಿದ್ದು, ಶಾರುಖ್ ಭಾಗಿಯಾಗಲಿದ್ದಾರೆ.

    ಆದರೆ ಈಗ ‘ಪಠಾಣ್’ ತಂಡ ಸಿನಿಮಾ ಬಗ್ಗೆ ಸುದ್ದಿಯಾಗುವ ಬದಲು ಡೈರೆಕ್ಟರ್ ವಿಚಾರವಾಗಿ ಹೈಲೈಟ್‌ ಆಗುತ್ತಿದೆ. ಸಿದ್ಧಾರ್ಥ್ ಆನಂದ್ ಬದಲು ಬೇರೆ ನಿರ್ದೇಶಕನಿಗೆ ಮಣೆ ಹಾಕಲು ನಿರ್ಮಾಪಕ ಆದಿತ್ಯಾ ಚೋಪ್ರಾ ಯೋಚಿಸಿದ್ದಾರೆ. ಈ ಹಿಂದೆ ತಮ್ಮ ನಿರ್ಮಾಣದ ‘ಟೈಗರ್’ ಮತ್ತು ‘ವಾರ್’ ಸಿನಿಮಾದ ಸೀಕ್ವೆಲ್‌ನಲ್ಲೂ ನಿರ್ದೇಶಕರನ್ನು ಆದಿತ್ಯಾ ಬದಲಿಸಿದ್ದರು. ಅದೇ ಫಾರ್ಮುಲಾ ಇಲ್ಲಿಯೂ ಬಳಸಲು ಮುಂದಾಗಿದ್ದಾರೆ.

    ಇತ್ತ ಪಠಾಣ್ ಸಕ್ಸಸ್ ನಂತರ ‘ಫೈಟರ್’ ಸಿನಿಮಾಗೆ ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡಿದ್ದರು. ಆದರೆ ಆ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿತ್ತು. ಹಾಗಾಗಿ ನಿರ್ಮಾಪಕ ಆದಿತ್ಯಾ ನಿರ್ದೇಶಕರನ್ನು ಬದಲಿಸೋದೇ ಸೂಕ್ತ ಎಂದು ನಿರ್ಧರಿಸಿದ್ದಾರೆ. ಬೇರೇ ನಿರ್ದೇಶಕನ ಕಲ್ಪನೆಯಲ್ಲಿ ‘ಪಠಾಣ್ 2’ ಮೂಡಿ ಬಂದರೆ ಉತ್ತಮ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಅದಕ್ಕಾಗಿ ಆದಿತ್ಯಾ ಹೊಸ ನಿರ್ದೇಶಕನ ಹುಡುಕಾಟಕ್ಕೆ ಇಳಿದಿದ್ದಾರೆ.

  • ‘ಪಠಾಣ್ 2’ಗೆ ನಿರ್ಮಾಪಕ ಆದಿತ್ಯ ಚೋಪ್ರಾ ಚಿಂತನೆ

    ‘ಪಠಾಣ್ 2’ಗೆ ನಿರ್ಮಾಪಕ ಆದಿತ್ಯ ಚೋಪ್ರಾ ಚಿಂತನೆ

    ಶಾರುಖ್ ಖಾನ್ (Shah Rukh Khan) ನಟನೆಯ ಪಠಾಣ್ ಸಿನಿಮಾ ಏನೆಲ್ಲ ಗೊಂದಲಗಳ ನಡುವೆಯೂ ಸೂಪರ್ ಹಿಟ್ ಆಗಿತ್ತು. ಕೇಸರಿ ಬಿಕಿನಿ ವಿಚಾರವಾಗಿ ಹೊತ್ತಿಕೊಂಡಿದ್ದ ವಿವಾದದ ಬೆಂಕಿ, ಸಿನಿಮಾವನ್ನೂ ಮುಗಿಸಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಆದರೆ, ಅದೆಲ್ಲವನ್ನೂ ಮೀರಿ ಸಿನಿಮಾ ಗೆದ್ದಿತ್ತು. ಇದೀಗ ಪಠಾಣ್ ಸಿನಿಮಾ ಸೀಕ್ವೆಲ್ (Pathan 2)ಮಾಡಲು ನಿರ್ಮಾಪಕ ಆದಿತ್ಯ ಚೋಪ್ರಾ (Aditya Chopra) ಚಿಂತನೆ ನಡೆಸಿದ್ದಾರೆ. ಈ ಕುರಿತಂತೆ ಶಾರುಖ್ ಖಾನ್ ಜೊತೆ ಅವರು ಚರ್ಚೆ ಕೂಡ ಮಾಡಿದ್ದಾರಂತೆ.

    ಪಠಾಣ್  ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿತ್ತು. ಸಿನಿಮಾ ರಿಲೀಸ್ ಆಗಿ 27ನೇ ದಿನಕ್ಕೆ ಸಾವಿರ ಕೋಟಿ (Thousand Crore) ಕ್ಲಬ್ (Club) ಸೇರಿತ್ತು. ಆ ವರ್ಷದಲ್ಲಿ ರಿಲೀಸ್ ಆದ ಬಾಲಿವುಡ್ ಸಿನಿಮಾಗಳಲ್ಲಿ ಅತೀ ಹೆಚ್ಚು ಹಣ ಮಾಡಿದ ಚಿತ್ರ ಎನ್ನುವ ಹೆಗ್ಗಳಿಕೆಗೂ ಈ ಸಿನಿಮಾ ಪಾತ್ರವಾಗಿತ್ತು. ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ಗೆ ಅಭಿಮಾನಿಗಳು ಫಿದಾ ಆಗಿದ್ದರು.

    ಪಠಾಣ್ ಸಿನಿಮಾದ ಹಾಡೊಂದು ವಿವಾದಕ್ಕೀಡಾದಾಗ ಈ ಸಿನಿಮಾವನ್ನು ಗೆಲ್ಲಿಸಲೇಬಾರದು ಎಂದು ಹಲವರು ಕರೆ ನೀಡಿದರು. ಪ್ರತಿಭಟನೆಗಳು ನಡೆದವು, ಬಾಯ್ಕಾಟ್ ಪಠಾಣ್ ಅಭಿಯಾನ ಶುರುವಾಯಿತು. ಚಿತ್ರಮಂದಿರಗಳ ಮೇಲೆ ದಾಳಿ ನಡೆದವು. ಸಿನಿಮಾದ ಪೋಸ್ಟರ್ ಹರಿದು ಹಾಕಲಾಯಿತು. ಪೋಸ್ಟರ್ ಸುಡಲಾಯಿತು. ಏನೆಲ್ಲ ಸಂಕಷ್ಟಗಳು ಎದುರಾದರೂ, ಪಠಾಣ್ ಮಾತ್ರ ಗೆಲುವು ಸಾಧಿಸಿತ್ತು.

    ಪಠಾಣ್ ಒಂದೊಳ್ಳೆ ಸಿನಿಮಾ. ಎಲ್ಲರ ಮೆಚ್ಚುಗೆಗೂ ಅದು ಪಾತ್ರವಾಗಲಿದೆ. ದೇಶಭಕ್ತಿ ಸಾರುವಂತಹ ಕಥೆಯನ್ನು ಇದು ಒಳಗೊಂಡಿದೆ ಎಂದು ಶಾರುಖ್ ಹೇಳಿದರೂ, ವಿರೋಧಿಗಳು ಮಾತ್ರ ಕೇಳಲಿಲ್ಲ. ಕೆಲವು ರಾಜ್ಯಗಳಲ್ಲಿ ಸಿನಿಮಾವನ್ನು ನಿಷೇಧ ಮಾಡುವಂತೆ ಒತ್ತಡ ತರಲಾಯಿತು. ಕೊನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಿದರು. ಆದರೂ, ಪ್ರತಿಭಟನೆ ಮಾತ್ರ ನಿಲ್ಲಲಿಲ್ಲ.

     

    ಪಠಾಣ್ ಸಿನಿಮಾಗಾಗಿ ಇಡೀ ಬಾಲಿವುಡ್ ಒಂದಾಯಿತು. ಈ ಸಿನಿಮಾವನ್ನು ಗೆಲ್ಲಿಸುವ ಮೂಲಕ ಬಾಲಿವುಡ್ ಗೆಲ್ಲಿಸೋಣ ಎನ್ನುವ ಮಾತು ಕೇಳಿ ಬಂತು. ಹಾಗಾಗಿ ಶಾರುಖ್ ವಿರೋಧಿಗಳು ಕೂಡ ಈ ಸಿನಿಮಾವನ್ನು ಮೆಚ್ಚಿ ಮಾತನಾಡಿದರು. ಮೊದ ಮೊದಲು ತೆಗಳುತ್ತಿದ್ದವರು, ಆ ಮೇಲೆ ಸಿನಿಮಾ ಬಗ್ಗೆ ಹೊಗಳಿಕೆಯ ಮಾತುಗಳನ್ನು ಆಡಿದರು. ಇದೇ ಸಿನಿಮಾದ ಮುಂದುವರೆದ ಭಾಗವನ್ನು ಮಾಡಲು ಚಿತ್ರತಂಡ ಸಜ್ಜಾಗಿದೆ.