Tag: ಪಠ್ಯಪುಸ್ತಕ ಪರಿಷ್ಕರಣೆ

  • ಚಕ್ರವರ್ತಿ ಸೂಲಿಬೆಲೆ ಪಠ್ಯ ಕೈಬಿಟ್ಟ ಸರ್ಕಾರ – ಶಾಲೆಗಳಿಗೆ ಪರಿಷ್ಕೃತಗೊಂಡ ಪಠ್ಯಪುಸ್ತಕ

    ಚಕ್ರವರ್ತಿ ಸೂಲಿಬೆಲೆ ಪಠ್ಯ ಕೈಬಿಟ್ಟ ಸರ್ಕಾರ – ಶಾಲೆಗಳಿಗೆ ಪರಿಷ್ಕೃತಗೊಂಡ ಪಠ್ಯಪುಸ್ತಕ

    ಬೆಂಗಳೂರು: ಕಾಂಗ್ರೆಸ್‌ (Congress) ನೇತೃತ್ವದ ಸರ್ಕಾರವು ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಣೆ (Textbook Revision) ಮಾಡಿದ್ದು, ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಅವರ ‘ತಾಯಿ ಭಾರತೀಯ ಅಮರಪುತ್ರರು’ ಪಠ್ಯವನ್ನು ಸಂಪೂರ್ಣವಾಗಿ ಕೈಬಿಟ್ಟಿದೆ.

    ಪರಿಷ್ಕೃತ ಪಠ್ಯ ಪುಸ್ತಕದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್‌ ಸರ್ಕಾರ, 2022-23 ನೇ ಸಾಲಿನಲ್ಲಿ 1 ರಿಂದ 10ನೇ ತರಗತಿ ಕನ್ನಡ ಭಾಷಾ ಮತ್ತು 6 ರಿಂದ 10ನೇ ತರಗತಿಗಳ ಸಮಾಜ ವಿಜ್ಞಾನ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ, 2023-24ನೇ ಶೈಕ್ಷಣಿಕ ಸಾಲಿಗೆ ಮುದ್ರಿಸಿ ಎಲ್ಲಾ ಶಾಲೆಗಳಿಗೆ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬಿಜೆಪಿ ಅವಧಿಯ ಪಠ್ಯಗಳಿಗೆ ಸರ್ಕಾರ ಕತ್ತರಿ- ಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಠ್ಯಕ್ಕೆ ಬ್ರೇಕ್

    ಬಿಜೆಪಿ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿತ್ತು. ಅದನ್ನು ಕಾಂಗ್ರೆಸ್‌ ಸರ್ಕಾರ ಮತ್ತೆ ಪರಿಷ್ಕರಿಸಿದೆ. 10 ನೇ ತರಗತಿಯ ಕನ್ನಡ ಭಾಷಾ ವಿಷಯದಲ್ಲಿದ್ದ ಚಕ್ರವರ್ತಿ ಸೂಲಿಬೆಲೆ ಪಠ್ಯ ಕೈಬಿಟ್ಟಿದೆ. ಜೊತೆಗೆ ಕನ್ನಡದಲ್ಲಿ 9 ಹೊಸ ಪಠ್ಯಗಳನ್ನು ಸೇರ್ಪಡೆ ಮಾಡಿದೆ. ಸಮಾಜ ವಿಜ್ಞಾನದಲ್ಲಿ 9 ಪಠ್ಯಗಳ ಪರಿಷ್ಕರಣೆ ಮತ್ತು ತಿದ್ದುಪಡಿ ಮಾಡಲಾಗಿದೆ.

    ಈ ಹಿಂದೆ ಇದ್ದ ಬಿಜೆಪಿ ನೇತೃತ್ವದ ಸರ್ಕಾರ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ ತನಗೆ ಬೇಕಾದ ಕೆಲವು ಪಾಠಗಳನ್ನು ಸೇರಿಸಿತ್ತು. ತನ್ನ ಸಿದ್ಧಾಂತಕ್ಕೆ ಒಗ್ಗದ ಕೆಲವು ಪಾಠಗಳನ್ನು ಆಗಿನ ಸರ್ಕಾರ ಕೈಬಿಟ್ಟಿತ್ತು. ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ: ಪ್ರಿಯಾಂಕ್ ಖರ್ಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ಪಠ್ಯದಿಂದ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ

    ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ಪಠ್ಯದಿಂದ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ

    ನವದೆಹಲಿ: ಡಾ.ಹೆಡ್ಗೆವಾರ್ (Dr.Hedgewar) ಮತ್ತು ಸ್ವತಂತ್ರ ವೀರ ಸಾವರ್ಕರ್ (Veer Savarkar) ಅವರ ಅಧ್ಯಾಯಗಳನ್ನು ಪಠ್ಯಪುಸ್ತಕಗಳಿಂದ (Textbook) ತೆಗೆದು ಹಾಕಿರುವುದು ದುರದೃಷ್ಟಕರ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿಕೆ ನೀಡಿದ್ದಾರೆ.

    ಶನಿವಾರ ನಡೆದ ವಿಡಿ ಸಾವರ್ಕರ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಸಭೆಯನ್ನುದ್ದೇಶಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ (Textbook Revise) ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಟೀಕಿಸಿದರು. ಅಲ್ಲದೇ ಇದಕ್ಕಿಂತ ನೋವಿನ ಸಂಗತಿ ಇನ್ನೊಂದಿಲ್ಲ ಎಂದರು. ಇದನ್ನೂ ಓದಿ: ಬಿಜೆಪಿ ಅವಧಿಯ ಪಠ್ಯಗಳಿಗೆ ಸರ್ಕಾರ ಕತ್ತರಿ- ಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಠ್ಯಕ್ಕೆ ಬ್ರೇಕ್

    TEXTBOOK

    ಕರ್ನಾಟಕ ಸರ್ಕಾರ 6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಮತ್ತು ಕನ್ನಡ ಪಠ್ಯಪುಸ್ತಕಗಳ ಪರಿಷ್ಕರಣೆಯಲ್ಲಿ ಆರ್‌ಎಸ್‌ಎಸ್ (RSS) ಸಂಸ್ಥಾಪಕ ಹೆಡ್ಗೆವಾರ್ ಮತ್ತು ಹಿಂದುತ್ವದ ಸಿದ್ಧಾಂತವನ್ನು ಹೊಂದಿದ್ದ ವಿಡಿ ಸಾವರ್ಕರ್ ಅವರ ಅಧ್ಯಾಯಗಳನ್ನು ಕೈಬಿಡಲು ಕರ್ನಾಟಕ ಕ್ಯಾಬಿನೆಟ್ ಗುರುವಾರ ಅನುಮೋದನೆ ನೀಡಿದ ಬಳಿಕ ನಿತಿನ್ ಗಡ್ಕರಿ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ 2 ರಾಜ್ಯಗಳು – ಸರ್ಕಾರಕ್ಕೆ ಮತ್ತಷ್ಟು ತಲೆನೋವು

    ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಶಾಲಾ ಪಠ್ಯಕ್ರಮದಿಂದ ಆರ್‌ಎಸ್‌ಎಸ್ ಸಂಸ್ಥಾಪಕ ಹೆಡ್ಗೆವಾರ್ ಮತ್ತು ವಿಡಿ ಸಾವರ್ಕರ್ ಅವರ ಪಠ್ಯಗಳನ್ನು ಕೈಬಿಡುವುದಾಗಿ ಜೂನ್ 15ರಂದು ಘೋಷಣೆ ಮಾಡಿದ್ದರು. ಕೆಬಿ ಹೆಡ್ಗೆವಾರ್ ಅವರ ಪಠ್ಯಕ್ರಮವನ್ನು ಕೈಬಿಡಲಾಗಿದೆ. ಕಳೆದ ವರ್ಷ ಬಿಜೆಪಿ (BJP) ಸರ್ಕಾರ ಏನೇ ಬದಲಾವಣೆಗಳನ್ನು ತಂದಿದ್ದರೂ ಸಹಿತ ನಾವು ಅದನ್ನು ಬದಲಾಯಿಸಿ ಮರುಪರಿಚಯಿಸಿದ್ದೇವೆ. ಎಲ್ಲಾ ವಿವರಗಳು ಶೀಘ್ರವೇ ಲಭ್ಯವಾಗಲಿದೆ ಎಂದರು. ಇದನ್ನೂ ಓದಿ: PublicTV Explainer: ಗೃಹಜ್ಯೋತಿ ಗ್ಯಾರಂಟಿ- ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ ಶಾಲಾ ಪಠ್ಯಪುಸ್ತಕಗಳ ಪಠ್ಯಕ್ರಮಗಳನ್ನು ಪರಿಷ್ಕರಣೆ ಮಾಡುವ ಸಲುವಾಗಿ ಸಂಪುಟ ಸಭೆ ನಡೆಸಿದ್ದು, 10ನೇ ತರಗತಿ ಕನ್ನಡ ಪಠ್ಯಪುಸ್ತಕದಿಂದ ಹೆಡ್ಗೆವಾರ್ ಮತ್ತು ಸಾವರ್ಕರ್ ಅಧ್ಯಾಯಗಳನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಸೇರುವುದಕ್ಕಿಂತ ಬಾವಿಗೆ ಹಾರೋದೇ ಲೇಸು ಎಂದಿದ್ದೆ: ನಿತಿನ್ ಗಡ್ಕರಿ

  • ದೇಶಭಕ್ತರ ಪಠ್ಯ ತೆಗೆದು ಕುಕ್ಕರ್ ಬ್ಲಾಸ್ಟ್ ಆರೋಪಿ ಪಾಠ ಸೇರಿಸ್ತೀರಾ?- ಕಾಂಗ್ರೆಸ್ ವಿರುದ್ಧ ಸುನೀಲ್ ಕುಮಾರ್ ಕಿಡಿ

    ದೇಶಭಕ್ತರ ಪಠ್ಯ ತೆಗೆದು ಕುಕ್ಕರ್ ಬ್ಲಾಸ್ಟ್ ಆರೋಪಿ ಪಾಠ ಸೇರಿಸ್ತೀರಾ?- ಕಾಂಗ್ರೆಸ್ ವಿರುದ್ಧ ಸುನೀಲ್ ಕುಮಾರ್ ಕಿಡಿ

    ಬೆಂಗಳೂರು: ರಾಷ್ಟ್ರಭಕ್ತರಾದ ವೀರ ಸಾರ್ವರ್ಕರ್ ಮತ್ತು ಹೆಡ್ಗೇವಾರ್ ಅವರುಗಳ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ (Congress) ಸರ್ಕಾರ ಲೋಕಸಭಾ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ಎಂದು ಬಿಜೆಪಿ (BJP) ಶಾಸಕ ಸುನೀಲ್ ಕುಮಾರ್ (Sunil Kumar) ಪ್ರಶ್ನಿಸಿದ್ದಾರೆ.

    ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಫ್‌ಸಿಐ ನೀತಿ ಬದಲಾವಣೆ ಹಿನ್ನೆಲೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಒದಗಿಸಲು ಸಾಧ್ಯವಿಲ್ಲ: ಅಶೋಕ್ ಕುಮಾರ್ ಮೀನಾ ಸ್ಪಷ್ಟನೆ

    ದೇಶಭಕ್ತ ಸ್ವಾತಂತ್ರ‍್ಯ ಹೋರಾಟಗಾರರ ಪಠ್ಯ ತೆಗೆಯಿರಿ ಎಂದು ನಕಲಿ ಗಾಂಧಿ ಪಾರಿವಾರ ನೀಡಿದ ಆದೇಶವನ್ನು ಪಾಲನೆ ಮಾಡುತ್ತಿದ್ದೀರಾ? ಮತಾಂಧ ಟಿಪ್ಪು, ದೇಶದ್ರೋಹಿ ಔರಂಗಜೇಬ್, ಅಧಿನಾಯಕಿ ಇಟಲಿ ಮೇಡಂ ಪಠ್ಯವನ್ನು ಸೇರಿಸಿ ಹೊಸ ಇತಿಹಾಸ ಬರೆಯುತ್ತೀರಾ ಎಂದು ಪ್ರಶ್ನಿಸಿ ಸಂಪುಟದಲ್ಲಿ ತೆಗೆದುಕೊಂಡ ಎರಡು ನಿರ್ಣಯದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ವೇದವ್ಯಾಸ ಕಾಮತ್ ಎಚ್ಚರಿಕೆ

    ಕನ್ನಡಿಗರು ಸುಮ್ಮನೆ ಕುಳಿತರೆ ಬೆಂಗಳೂರಿನಲ್ಲಿ (Bengaluru) ‘ಲೂಲು ಮಾಲ್’ ಕಟ್ಟಿದವರ ಇತಿಹಾಸವನ್ನೂ ಮುಂದಿನ ಪೀಳಿಗೆಯ ಜನಕ್ಕೆ ಕಾಂಗ್ರೆಸ್ಸಿಗರು ಹೇಳಿಕೊಡಬಹುದು. ಮಂಗಳೂರು (Mangaluru) ಕುಕ್ಕರ್ ಸ್ಫೋಟದ ಆರೋಪಿಗೂ ದೇಶಭಕ್ತರ ಪಠ್ಯದ ಸಾಲಿನಲ್ಲಿ ಅವಕಾಶ ನೀಡಬಹುದು. ವಿದ್ಯಾರ್ಥಿಗಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರದ ಈ ನೀತಿಯ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಾಪಸ್ – ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂಧರ ನಿಷೇಧ ಕಾಯ್ದೆ (Anti Conversion Law) ವಾಪಸ್ ತೆಗದುಕೊಳ್ಳುತ್ತದೆ ಎಂದು ನಾವು ಮೊದಲೇ ಎಚ್ಚರಿಸಿದ್ದೆವು. ಈಗ ಅದನ್ನು ನಿಜ ಮಾಡುತ್ತಿದೆ. ಸಮವಸ್ತ್ರ ಸಂಹಿತೆಯನ್ನು ಬದಿಗಿಟ್ಟಿದೆ. ಇಡೀ ರಾಜ್ಯಕ್ಕೆ ಹಿಜಬ್ ತೊಡಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ

  • ಪಠ್ಯ ಪರಿಷ್ಕರಣೆಯಿಂದಲೇ ಎಳೆ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ: ರಮೇಶ್ ಕುಮಾರ್

    ಪಠ್ಯ ಪರಿಷ್ಕರಣೆಯಿಂದಲೇ ಎಳೆ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ: ರಮೇಶ್ ಕುಮಾರ್

    ಚಿತ್ರದುರ್ಗ: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯಿಂದಲೇ ಬಿಜೆಪಿಯವರು ಎಳೆ ವಯಸ್ಸಿನ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.

    ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ದಾರ್ಶನಿಕರಿಗೆ ಬಿಜೆಪಿ ಅಪಮಾನ ಮಾಡುತ್ತಿದೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ವಿಚಾರ ಬೇಡ ಅಂದ್ರೆ ಮಕ್ಕಳಿಗೆ ಇನ್ನೇನು ಹೇಳುವುದು. ಜನರೇ ಮೌನವಾಗಿದ್ದಾಗ ಏನು ಮಾಡಲು ಸಾಧ್ಯವಿಲ್ಲ. ಆದ್ರೆ ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಜನರು ಪ್ರತಿಭಟಿಸಿದಾಗ ಸರ್ಕಾರಕ್ಕೆ ಭಯ ಬರುತ್ತದೆ ಎಂದರು. ಇದನ್ನೂ ಓದಿ: ಪ್ರವಾಹ ಪೀಡಿತ ಅಸ್ಸಾಂ, ಮೇಘಾಲಯದ 253 ಜನರನ್ನ ರಕ್ಷಿಸಿದ IAF – ಮುಂದುವರಿದ ಶೋಧ ಕಾರ್ಯ

    TEXTBOOK

    ಇದೇ ವೇಳೆ ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರ ಇರುವ ಕಡೆಗಳಲ್ಲಿ ಬಿಜೆಪಿ ವಾಮಮಾರ್ಗದಿಂದ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಕರ್ನಾಟಕ ಆಯ್ತು, ಮಧ್ಯಪ್ರದೇಶ ಆಯ್ತು ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ವಾಮಮಾರ್ಗ ಹಿಡಿದು ಸರ್ಕಾರ ರಚಿಸಲು ಕಾರ್ಯಪ್ರವೃತವಾಗಿದೆ. ಸಮ್ಮಿಶ್ರ ಸರ್ಕಾರ ಇರುವ ಕಡೆಯೆಲ್ಲ ಆಪರೇಷನ್ ಕಮಲ ಮಾಡಿ ಸರ್ಕಾರ ನಡೆಸಲು ಮುಂದಾಗುತ್ತಿದೆ ಎಂದು ಆರೋಪಿಸಿದರು.

    ನಾವೇನು ಹೊಸದಾಗಿ ಹೇಳುವುದು ಬೇಕಾಗಿಲ್ಲ. ಜನರೇ ಸುಮ್ಮನಿರುವಾಗ ನಾವೇನು ಹೇಳುವುದು. ಜನ ಹೇಳಬೇಕು. ಜನರು ಪ್ರತಿಕ್ರಿಯೆ ನೀಡಬೇಕು. ನಾವು ಹೇಳಿದರೆ ಪಕ್ಷದ ಅಭಿಪ್ರಾಯವಾಗುತ್ತದೆ. ಸಹಜವಾಗಿ ನಾವು ಬೇರೆ ಪಕ್ಷದವರು ಸರಿಯಿಲ್ಲ ಎಂದು ಹೇಳಬಹುದು. ಆದರೆ ಜನರೇ ಇದಕ್ಕೆ ಪ್ರತಿಕ್ರಿಯೆ ನೀಡದೆ ಇದ್ದಾಗ ಏನು ಮಾಡುವುದು. ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯವೇ ಅಂತಿಮವಾಗಿದ್ದಾಗ ಎಲ್ಲವನ್ನೂ ಜನರೇ ಹೇಳಬೇಕಾಗುತ್ತದೆ ಎಂದು ಕರೆ ನೀಡಿದರು. ಇದನ್ನೂ ಓದಿ: ಎಮರ್ಜೆನ್ಸಿ ವಿರೋಧಿಸಿ ಪ್ರತಿಭಟನೆ ಮಾಡ್ತಿದ್ದಾಗ ಪೊಲೀಸರನ್ನ ನೋಡಿ ಓಡಿ ಹೋಗಿದ್ವಿ: ಬೊಮ್ಮಾಯಿ

    Live Tv

  • ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು: ದೇವೇಗೌಡರ ಪತ್ರ

    ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು: ದೇವೇಗೌಡರ ಪತ್ರ

    ಬೆಂಗಳೂರು: ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು ಎಂದು ಮಾಜಿ ಪ್ರಧಾನಿ ದೇವೇಗೌಡರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

    ಪತ್ರದಲ್ಲಿ ಏನಿದೆ?
    ಪಠ್ಯಪುಸ್ತಕಗಳ ಮರು ಪರಿಷ್ಕರಣೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ 2022ರ ಜೂನ್‌ 18 ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ನಾನು ಭಾಗವಹಿಸಿದ್ದಾಗ, ನನ್ನ ಮೂಲಕ ತಮಗೆ ಮನವರಿಕೆ ಮಾಡಲು ನೀಡಿದ ಮನವಿ ಪತ್ರವನ್ನು ಇದಕ್ಕೆ ಲಗತ್ತಿಸಿರುತ್ತೇನೆ. ಇದನ್ನೂ ಓದಿ: ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ 

    ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ಕುವೆಂಪು ನೀಡುತ್ತೇನೆಂದು ಹೇಳಿದ್ದು ಕೂಡ ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ. ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದು, ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜೊತೆಗೆ ಡಾ.ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ.

    TEXTBOOK

    ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು. ಇನ್ನು ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ. ಸಮಾಜ ವಿಜ್ಞಾನ ಪಠ್ಯಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ.

    ಸಿದ್ಧಗಂಗೆ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆಯಲಾಗಿದೆ. ಅಂಬೇಡ್ಕರ್ ಅವರಿಗೆ ‘ಸಂವಿಧಾನ ಶಿಲ್ಪಿ’ ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ, ಕನಕ, ಪುರಂದರ, ಶರೀಫರಂತಹ ಮಹಾನ್ ದಾರ್ಶನಿಕ ಸಂತರ ಪಠ್ಯಗಳನ್ನೇ ತೆಗೆಯಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಲಾಗಿದೆ. ಡಾ.ಅಂಬೇಡ್ಕರ್ ಮತ್ತು ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ವಿಶ್ವಮಾನವತ್ವದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪುನರ್ ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ. ಇದನ್ನೂ ಓದಿ: ಚಿಟ್ ಫಂಡ್ ಮಾಡಿ ಜನರಿಗೆ ಚೀಟಿಂಗ್ ಮಾಡಿದ್ದ ಲೇಡಿ ಅರೆಸ್ಟ್

    ಪಠ್ಯಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಮ್ಮೇಲೆ ಅಥವಾ ಪ್ರತ್ಯೇಕ ಪಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪುನರ್ ಪರಿಷ್ಕರಣೆಯ ಪಠ್ಯಪುಸ್ತಕಗಳನ್ನು ವಾಪಸ್ ಪಡೆದು, ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವುದು ಸೂಕ್ತವೆಂದು ನಾನು ಕೂಡ ಅಭಿಪ್ರಾಯ ಪಡುತ್ತೇನೆ.

    ಈಗ ತಮಗೆ ಕಳುಹಿಸುತ್ತಿರುವ ವಿಶ್ವಮಾನವ ಕುವೆಂಪು ಹೋರಾಟ ಸಮಿತಿಯ ಹಕ್ಕೊತ್ತಾಯ ಪತ್ರದ ಅಂಶಗಳನ್ನು ನಾನು ಕೂಡ ಬೆಂಬಲಿಸುತ್ತಾ, ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಶಿಸುತ್ತೇನೆ.

    Live Tv

  • ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಾದಯಾತ್ರೆ

    ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಾದಯಾತ್ರೆ

    ಶಿವಮೊಗ್ಗ: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ.

    ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಕನ್ನಡ ಸಾಹಿತಿಗಳಿಗೆ ಆದ ಅಪಮಾನವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಮಾಡುತ್ತಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕವಿಶೈಲದಿಂದ ಪಾದಯಾತ್ರೆ ಪ್ರಾರಂಭವಾಗಿದ್ದು, ಇದರ ನೇತೃತ್ವವನ್ನು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಹಿಸಿದ್ದಾರೆ.

    ಈ ಪಾದಯಾತ್ರೆಯಲ್ಲಿ ಸಾಹಿತಿಗಳು, ಪ್ರಗತಿಪರರು, ವಿವಿಧ ಸಂಘ ಸಂಸ್ಥೆ ಮುಖಂಡರು ಭಾಗಿಯಾಗಿದ್ದಾರೆ.

    ಏನಿದು ವಿವಾದ?
    ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿತ್ತು. ಅಲ್ಲದೇ ಅನೇಕ ಪಠ್ಯಗಳನ್ನು ಕೈಬಿಡಲಾಗಿದ್ದು, ಹಿಂದೂಪರ ಧೋರಣೆಗಳನ್ನು ಪಠ್ಯದಲ್ಲಿ ಬಿಂಬಿಸಲಾಗುತ್ತಿದೆ ಎಂದು ದೂರಲಾಗಿತ್ತು. ಇದನ್ನೂ ಓದಿ: 2 ಶಿಕ್ಷಕ, 2 ಪದವೀಧರ ಕ್ಷೇತ್ರಗಳ ಫಲಿತಾಂಶ ಇಂದು- 3 ಪಕ್ಷಗಳ ಭವಿಷ್ಯ ನಿರ್ಧಾರ

    ವಿವಾದದ ಬಳಿಕ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲಾಯಿತು. ಆದರೂ ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಸಾಕಷ್ಟು ಲೋಪಗಳಾಗಿವೆ. ಹೀಗಾಗಿ ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಪಠ್ಯವನ್ನೇ ಈ ಶೈಕ್ಷಣಿಕ ಸಾಲಿನಲ್ಲೂ ಮುಂದುವರಿಸಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ.

  • ಟಿಪ್ಪು, ಮೊಘಲ್ ದೊರೆಗಳ ಬಗ್ಗೆ ಪುಟಗಟ್ಟಲೆ ಉಲ್ಲೇಖ, ನಮ್ಮ ರಾಜರ ಶೌರ್ಯದ ಮಾಹಿತಿ ಇರಲಿಲ್ಲ- ಶಿಕ್ಷಣ ಇಲಾಖೆಯ ವರದಿಯಲ್ಲಿ ಏನಿದೆ?

    ಟಿಪ್ಪು, ಮೊಘಲ್ ದೊರೆಗಳ ಬಗ್ಗೆ ಪುಟಗಟ್ಟಲೆ ಉಲ್ಲೇಖ, ನಮ್ಮ ರಾಜರ ಶೌರ್ಯದ ಮಾಹಿತಿ ಇರಲಿಲ್ಲ- ಶಿಕ್ಷಣ ಇಲಾಖೆಯ ವರದಿಯಲ್ಲಿ ಏನಿದೆ?

    – ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ
    – ಇಂದು ಅಥವಾ ನಾಳೆ ಸಿಎಂಗೆ ನಾಗೇಶ್ ವರದಿ ಸಲ್ಲಿಕೆ ಸಾಧ್ಯತೆ

    ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಇಂದು ಸಂಜೆ ಅಥವಾ ನಾಳೆ ಸಿಎಂಗೆ ವರದಿ ಸಲ್ಲಿಸುವ ಸಾಧ್ಯತೆಯಿದೆ.

    ಗುರುವಾರ ರಾತ್ರಿ ಗುಜರಾತ್‍ನಿಂದ ವಾಪಸ್ ಆಗಿರುವ ಸಚಿವರು, ಪಠ್ಯ ಪುಸ್ತಕ ಗೊಂದಲಕ್ಕೆ ತೆರೆ ಎಳೆಯುವ ಸಾಧ್ಯತೆಯಿದೆ. ಈಗಾಗಲೇ ಪಠ್ಯಪುಸ್ತಕ ಗೊಂದಲದ ಬಗ್ಗೆ ಶಿಕ್ಷಣ ಇಲಾಖೆ ವರದಿ ಸಿದ್ಧ ಮಾಡಿದ್ದು, ಇದನ್ನು ನೋಡಿದ ಬಳಿಕ ಸಿಎಂಗೆ ಆ ವರದಿಯನ್ನು ಸಲ್ಲಿಸುತ್ತಾರೆ. ಸಾಹಿತಿಗಳ ಆರೋಪಕ್ಕೆ ಶಿಕ್ಷಣ ಇಲಾಖೆ ದಾಖಲಾತಿ ಸಮೇತ ವರದಿ ಸಿದ್ಧ ಮಾಡಿದೆ. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಏನಾಗಿದೆ? ಯಾವ ಪಠ್ಯ ಸೇರ್ಪಡೆ ಮಾಡಲಾಗಿದೆ? ಯಾವ ಪಠ್ಯ ಕೈಬಿಡಲಾಗಿದೆ ಎಂಬ ಸಂಪೂರ್ಣ ಮಾಹಿತಿ ವರದಿಯಲ್ಲಿ ಉಲ್ಲೇಖ ಮಾಡಿದ್ದು, ಈಗ ಕೇಳಿ ಬಂದಿರುವ ಆರೋಪಗಳ ಬಗ್ಗೆ ದಾಖಲಾತಿ ಸಮೇತ ವಿವರಣೆ ನೀಡಲಿದೆ.

    bc nagesh

    ಪರಿಷ್ಕರಣೆ ಸಮಿತಿ ಅಧ್ಯಕ್ಷರ ವಿವರ ಒಳಗೊಂಡು, ಟಿಪ್ಪು, ಭಗತ್ ಸಿಂಗ್, ನಾರಾಯಣ ಗುರು, ಕುವೆಂಪು, ಬಸವಣ್ಣ, ಅಂಬೇಡ್ಕರ್ ಸೇರಿದಂತೆ ವಿವಾದಿತ ಪಠ್ಯಗಳ ಬಗ್ಗೆ ಸಂಪೂರ್ಣ ದಾಖಲಾತಿ ಸಮೇತ ವಿವರಣೆ ನೀಡಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ವರದಿಯಲ್ಲಿ ಏನಿದೆ?:
    ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕನ್ನಡ ಕಾವ್ಯ, ಇತಿಹಾಸವನ್ನು ಅಳವಾಗಿ ಅಭ್ಯಾಸ ಮಾಡಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ಅವರು ಅರ್ಹರಾಗಿದ್ದಾರೆ ಎನ್ನುವ ಬಗ್ಗೆ ಮಾಹಿತಿ ನೀಡಿದೆ. ಇದರ ಜೊತೆಗೆ ನಾಡಿಗೀತೆಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಮತ್ತು ಆರೋಪದ ವಿಚಾರವಾಗಿ 2017ರಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಆಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ.

    ಕುವೆಂಪು ಪಠ್ಯದ ಬಗ್ಗೆ ಗೊಂದಲ ಬಗ್ಗೆ ದಾಖಲಾತಿ ಸಮೇತ ವಿವರ ನೀಡಿದ್ದು, 2015-16 ಡಾ. ಮುಡಂಬಡಿತ್ತಾಯ ಸಮಿತಿ ಕುವೆಂಪು ಅವರ 8 ಪಠ್ಯವನ್ನು ಇಟ್ಟಿದ್ದರು. ಆದರೆ ಬರಗೂರು ಸಮಿತಿ ಕುವೆಂಪು ಅವರು ಒಂದು ಪಠ್ಯ ಕಡಿತ ಮಾಡಿ 7 ಪಠ್ಯ ಅಳವಡಿಕೆ ಮಾಡಿತ್ತು. ರೋಹಿತ್ ಚಕ್ರತೀರ್ಥ ಸಮಿತಿ ಹೊಸದಾಗಿ ಮತ್ತೆ ಕುವೆಂಪು ಅವರ 3 ಪಠ್ಯ ಸೇರ್ಪಡೆ ಮಾಡಿದೆ ಎಂಬುದರ ಬಗ್ಗೆ ಪಠ್ಯದ ಸಮೇತ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

    4ನೇ ತರಗತಿಯಲ್ಲಿ ಪರಿಸರ ಅಧ್ಯಯನದಲ್ಲಿ ಕುವೆಂಪುರಿಗೆ ಅಪಮಾನ ಮಾಡಿದೆ ಎಂಬ ಆರೋಪ ಮಾಡಲಾಗಿದೆ. ಆದರೆ ರೋಹಿತ್ ಸಮಿತಿ 6ರಿಂದ 10ನೇ ತರಗತಿ ಪಠ್ಯ ಮಾತ್ರ ಪರಿಷ್ಕರಣೆ ಮಾಡಿದೆ. 4ನೇ ತರಗತಿ ಪಠ್ಯ ಬರಗೂರು ರಾಮಚಂದ್ರಪ್ಪ ಸಮಿತಿಯದ್ದೇ ಉಳಿಸಿಕೊಳ್ಳಲಾಗಿದೆ. ಇದರ ಜೊತೆಗೆ ಮೈಸೂರು ಒಡೆಯರ್ ಪಠ್ಯಕ್ಕೆ ಬರಗೂರು ಸಮಿತಿ ಕತ್ತರಿ ಹಾಕಿತ್ತು. ಈಗ ಅದನ್ನು ಸರಿ ಮಾಡಲಾಗಿದೆ. ಮೈಸೂರು ಒಡೆಯರ್ ಪೂರ್ಣ ಇತಿಹಾಸ ಅಳವಡಿಕೆ ಮಾಡಲಾಗಿದೆ.

    BaraguruRamachandrappa

    ಬರಗೂರು ಸಮಿತಿಯೂ 6ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ಒಡೆಯರ್ ಪಠ್ಯವನ್ನು ಸಂಕ್ಷಿಪ್ತ ಮಾಡಿ ಟಿಪ್ಪು ಪಠ್ಯವನ್ನು ಹೆಚ್ಚಾಗಿ ಸೇರ್ಪಡೆ ಮಾಡಿತ್ತು. ಈಗ ಇದನ್ನು ಸರಿ ಮಾಡಲಾಗಿದೆ. ಅದರ ಜೊತೆಗೆ ಬರಗೂರು ಸಮಿತಿಯೂ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಲಾಗಿತ್ತು. ಅದನ್ನು ಪರಿಷ್ಕರಣೆ ಮಾಡಿ ಟಿಪ್ಪುವಿನ ಇತಿಹಾಸ ಸಂಪೂರ್ಣವಾಗಿ ಸೇರ್ಪಡೆ ಮಾಡಲಾಗಿದೆ. ಆದರೆ ಟಿಪ್ಪು ಪಠ್ಯವನ್ನು ಕೈಬಿಟ್ಟಿದ್ದಾರೆ ಅನ್ನೋದು ಶುದ್ಧ ಸುಳ್ಳಾಗಿದೆ.

    ರೋಹಿತ್ ಚಕ್ರತೀರ್ಥ ಸಮಿತಿಯೂ ಎಲ್ಲಾ ಪಠ್ಯವನ್ನು ಪರಿಷ್ಕರಣೆ ಮಾಡಿಲ್ಲ. 1 ರಿಂದ 10 ಕನ್ನಡ ಭಾಷಾ ಪುಸ್ತಕ ಮತ್ತು 6 ರಿಂದ 10ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಮಾತ್ರ ಪರಿಷ್ಕರಣೆ ಮಾಡಿದೆ. ಈಗಾಗಲೇ 76.87% ಪಠ್ಯ ಮುದ್ರಣ ಆಗಿದೆ. ಇದರಲ್ಲಿ 63.01% ಪಠ್ಯ ಶಾಲೆಗಳಿಗೆ ಸರಬರಾಜು ಆಗಿದೆ. ಬರಗೂರು ಸಮಿತಿ ಪರಿಷ್ಕರಣೆಯಲ್ಲಿ ಹೆಚ್ಚು ಲೋಪಗಳು ಇದ್ದವು. ಇದನ್ನು ಸರಿ ಮಾಡಲಾಗಿದೆ. ಇದನ್ನೂ ಓದಿ: ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕಬೇಕಿಲ್ಲ, ಇನ್ಮುಂದೆ ಮಂದಿರ ಹೋರಾಟದಲ್ಲಿ ನಾವಿಲ್ಲ: ಮೋಹನ್‌ ಭಾಗವತ್‌

    ಹೊಸ ಧರ್ಮಗಳ ಉದಯ ಪಠ್ಯದಲ್ಲಿ ವೈದಿಕ ಧರ್ಮ ಹಾಗೂ ಬ್ರಾಹ್ಮಣರನ್ನು ನಿಂದಿಸಲಾಗಿತ್ತು. ಇಂದ್ರ ದೇವನು ವಿಪರೀತ ಸೋಮ ರಸ ಕುಡಿಯುತ್ತಿದ್ದನು ಅಂತ ಸೇರಿಸಲಾಗಿತ್ತು. ಅಷ್ಟೇ ಅಲ್ಲದೇ 1857 ಸ್ವಾತಂತ್ರ್ಯ ಸಂಗ್ರಾಮವನ್ನ ದಂಗೆ ಅಂತ ಕರೆಯಲಾಗಿತ್ತು. ಹಿಂದೂ ಮಹಾಸಾಗರವನ್ನ ಹಿಂದು ಅಂತ ಹೆಸರು ಇತ್ತು ಅಂತ ಇಂಡಿಯನ್ ಓಷನ್ ಅಂತ ಬದಲಾವಣೆ ಮಾಡಲಾಗಿತ್ತು. ಇದನ್ನ ಪರಿಷ್ಕರಣೆ ಮಾಡಿದ್ದೇವೆ.

    ಬರಗೂರು ಸಮಿತಿಯು 6ನೇ ತರಗತಿಯಲ್ಲಿ ಇತಿಹಾಸ ಪರಿಚಯ ಪಾಠ ಸೇರಿಸಿತ್ತು. ಇದು 6ನೇ ತರಗತಿ ವಯೋಮಾನದ ಮಕ್ಕಳಿಗೆ ಮೀರಿದ ಪಠ್ಯ ಆಗಿತ್ತು. ಇದರಲ್ಲಿ ಪಾಶ್ಚಾತ್ಯ ಇತಿಹಾಸಕಾರರ ಬಗ್ಗೆ ಮಾತ್ರ ಉಲ್ಲೇಖ ಇತ್ತು. ಈಗ ಅದನ್ನು ಬಿಟ್ಟು ಭಾರತ ನಮ್ಮ ಹೆಮ್ಮೆ ಎಂಬ ಪಾಠ ಸೇರ್ಪಡೆ ಮಾಡಲಾಗಿದೆ.

    tippu

    ಟಿಪ್ಪು, ತುಘಲಕ್, ಮೊಘಲ್ ದೊರೆಗಳ ಬಗ್ಗೆ ಪುಟಗಟ್ಟಲೆ ಉಲ್ಲೇಖ ಬರಗೂರು ಸಮಿತಿ ಮಾಡಿತ್ತು. ಭಾರತೀಯ ರಾಜರ ಸಾಹಸ, ಶೌರ್ಯದ ಪಠ್ಯ ಇರಲಿಲ್ಲ. ಇದನ್ನು ಸರಿ ಮಾಡಲಾಗಿದೆ. ಟಿಪ್ಪುವಿನ ವೈಭವೀಕರಣಕ್ಕೆ ಕಡಿವಾಣ ಹಾಕಲಾಗಿದೆ. ಟಿಪ್ಪು ಬಗ್ಗೆ ಸತ್ಯದ ಮಾಹಿತಿ ನೀಡಲಾಗಿದೆ. ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಮದಕರಿ ನಾಯಕರ ಪಠ್ಯ ಇರಲಿಲ್ಲ. ಸಮಿತಿ ಈಗ ಅವರ ಪಠ್ಯ ಸೇರ್ಪಡೆ ಮಾಡಿದೆ. ಬರಗೂರು ಸಮಿತಿ 10ನೇ ತರಗತಿ ಪಠ್ಯದಲ್ಲಿ ಅಂಬೇಡ್ಕರ್, ಗಾಂಧಿಯವರ ಕುರಿತು ಮಾಹಿತಿ ಹೊಂದಿದ ಉದಾತ್ತ ಚಿಂತನೆಗಳು ಪಾಠ ತೆಗೆಯಲಾಗಿತ್ತು. ಈಗ ಅದನ್ನು ಮರು ಸೇರ್ಪಡೆ ಮಾಡಲಾಗಿದೆ.

    ಭಗತ್ ಸಿಂಗ್, ನಾರಾಯಣ ಗುರು, ಪೆರಿಯಾರ್ ಪಠ್ಯವನ್ನು ಹೊಸ ಸಮಿತಿ ಕೈಬಿಟ್ಟಿಲ್ಲ. ಸುಮ್ಮನೆ ವಿವಾದ ಮಾಡಿದ್ದಾರೆ. ಭಗತ್ ಸಿಂಗ್‍ರ ಒಂದು ಹೆಚ್ಚುವರಿ ಪಠ್ಯ ತಾಯಿ ಭಾರತೀಯ ಅಮರ ಯೋಧರು ಎನ್ನುವ ಪಠ್ಯ ಸೇರ್ಪಡೆ ಮಾಡಲಾಗಿದೆ. ನಾರಾಯಣ ಗುರುಗಳ ಪಠ್ಯವನ್ನು 10ನೇ ತರಗತಿ ಕನ್ನಡ ಪಠ್ಯದಲ್ಲಿ ಸೇರ್ಪಡೆ ಮಾಡಿದ್ದೇವೆ.

    ಬರಗೂರು ಸಮಿತಿ 8ನೇ ತರಗತಿಯಲ್ಲಿ ಸಿಂಧೂ ಸಂಸ್ಕೃತಿ ಪಾಠ ತೆಗೆದು ನೆಹರು ಅವರ ಪತ್ರಗಳ ಪಾಠ ಸೇರಿಸಿದ್ದರು. ಹೊಸ ಸಮಿತಿಯೂ ಸಿಂಧೂ ಸಂಸ್ಕೃತಿಯ ನಾಗರೀಕತೆ ಪಠ್ಯ ಸೇರ್ಪಡೆ ಮಾಡಿದೆ. ಬರಗೂರು ಸಮಿತಿ ಚರ್ಚ್, ಮಸೀದಿಗಳ ಫೋಟೋವನ್ನು ಪಠ್ಯದಲ್ಲಿ ಬಳಸಿ ದೇವಾಲಯ ಫೋಟೋವನ್ನು ಕೈಬಿಟ್ಟಿತ್ತು. ಇದನ್ನ ಈಗ ಸರಿ ಮಾಡಲಾಗಿದೆ.

    ಮೊಘಲರ ದಾಳಿ ತಡೆದ ಭಾರತೀಯ ಅಹೋಮ್ ರಾಜಯ ಪರಿಚಯ ಮಾಡಿಕೊಡಲಾಗಿದೆ. ಕಾಶ್ಮೀರದ ಕಾರ್ಕೋಟ ರಾಜರ ಪಠ್ಯ ಸೇರ್ಪಡೆ ಮಾಡಲಾಗಿದೆ. ಮೈಸೂರಿನ ಲ್ಯಾನ್ಸರ್ ರೆಜಿಮೆಂಟ್ ಕುರಿತು ಮಾಹಿತಿ ಸೇರಿಸಲಾಗಿದೆ. ಭಾರತದ ನಾಗಬುಡಕಟ್ಟು ಮಹಿಳೆಯ ಸಾಹಸ ಕಥೆ ಗಾಯಿಡಿನ್ ಲೂ ಅವರ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ತಿಂಗಳ ಅಂತ್ಯದಲ್ಲಿ ಸೌದಿಗೆ ಭೇಟಿ ನೀಡಲಿದ್ದಾರೆ ಬೈಡನ್

    ಕ್ರೈಸ್ತ, ಇಸ್ಲಾಂ, ಜೈನ, ಮತಗಳ ಬಗ್ಗೆ ಉಲ್ಲೇಖ ಇತ್ತು. ಆದರೆ ಸನಾತನ ಧರ್ಮದ ಪಠ್ಯ ಇರಲಿಲ್ಲ. ಈಗ ಸನಾತನ ಧರ್ಮದ ಪಠ್ಯ ಸೇರ್ಪಡೆ ಮಾಡಲಾಗಿದೆ. ಕೇರಳ ರಾಜ ಮಾರ್ತಾಂಡ ವರ್ಮನ ವಿವರ ನೀಡಲಾಗಿದೆ. ತಮಿಳುನಾಡಿನ ವೀರ ಪಾಂಡೆ ಕಟ್ಟಾ ಬೊಮ್ಮರವರ ಮಾಹಿತಿ ಕನ್ನಡದಲ್ಲಿ ಸೇರ್ಪಡೆ ಮಾಡಲಾಗಿದೆ.

    TET EXAM 2

    ಸಮಾಜ ವಿಜ್ಞಾನ ಹೊರ ಇಳಿಸಲು 6 ಮತ್ತು 7ನೇ ತರಗತಿಯಲ್ಲಿ 1 ಅಧ್ಯಾಯ, 8ನೇ ತರಗತಿಯಲ್ಲಿ 2 ಅಧ್ಯಾಯ, 9ನೇ ತರಗತಿಯಲ್ಲಿ 4 ಮತ್ತು 10ನೇ ತರಗತಿಯಲ್ಲಿ 4 ಅಧ್ಯಾಯ ಕೈಬಿಟ್ಟು ಪಠ್ಯದ ಹೊರೆ ಇಳಿಸಲಾಗಿದೆ. ವಿವೇಕಾನಂದರ ಜನ್ಮದಿನ ಕುರಿತು ಪಠ್ಯ ಸೇರ್ಪಡೆ ಮಾಡಲಾಗಿದ್ದು, ನೇತಾಜಿ ಸುಭಾಷ್ ಚಂದ್ರ ಬೋಸ್‍ರ ಇಂಡಿಯನ್ ನ್ಯಾಷನಲ್ ಆರ್ಮಿ ಕಟ್ಟಿದ ಬಗ್ಗೆ ಮಾಹಿತಿ ನೀಡಲಾಗಿದೆ.

    ಚನ್ನಭೈರಾದೇವಿ, ನಿಟ್ಟೂರು ಶ್ರೀನಿವಾಸರಾಯರು, ಕೆ.ಟಿ.ಗಟ್ಟಿಯವರ ಪಾಠ ಸೇರ್ಪಡೆ ಮಾಡಲಾಗಿದೆ. ಬರಗೂರು ಸಮಿತಿ ಏಣಗಿ ಬಾಳಪ್ಪ ಜೀವನ ಪರಿಚಯ ಕೈಬಿಟ್ಟಿತ್ತು. ಕೆ.ಎಸ್. ನರಸಿಂಹಸ್ವಾಮಿಯವರ ಭಾರತೀಯತೆ ಕವನ ಕೈ ಬಿಡಲಾಗಿತ್ತು. ಅದನ್ನ ಸೇರ್ಪಡೆ ಮಾಡಲಾಗಿದೆ. ಇದರ ಜೊತೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ ಬರಗೂರು ಸಮಿತಿ ಕೈ ಬಿಟ್ಟಿತ್ತು ಜೊತೆಗೆ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಮಾಹಿತಿಯನ್ನು ತೆಗೆದಿತ್ತು. ಹೊಸ ಸಮಿತಿ ಕೆಂಪೇಗೌಡರ ಪಠ್ಯ ಸೇರ್ಪಡೆ ಮಾಡಿದೆ.

    ಹುಬ್ಬಳ್ಳಿಯ ಸಿದ್ದರೂಢ ಜಾತ್ರೆ, ಮಂಜೇಶ್ವರ ಗೋವಿಂದ್ ಪೈ, ಪಂಜೆ ಮಂಗೇಶರಾಯರು ಪಠ್ಯ ಸೇರ್ಪಡೆ ಮಾಡಲಾಗಿದೆ. ಬಸವಣ್ಣನವರ ಪಠ್ಯವನ್ನು ರೋಹಿತ್ ಸಮಿತಿ ಪರಿಷ್ಕರಣೆ ಮಾಡಿಲ್ಲ. 2015-16ರಲ್ಲಿ ಡಾ. ಮುಡಂಬಡಿತ್ತಾಯ ಸಮಿತಿ ನೀಡಿದ್ದ ಪಠ್ಯವನ್ನು ಯಥಾವತ್ತಾಗಿ ಉಳಿಸಿಕೊಳ್ಳಲಾಗಿದೆ.

    EXAM

    ಬರಗೂರು ಸಮಿತಿ ಪರಿಷ್ಕರಣೆ ವಿವಾದ ಆಗಿದ್ದರಿಂದ ಬರಗೂರು ಸಮಿತಿ ಪರಿಷ್ಕರಣೆ ಕೈಬಿಡಲಾಗಿದೆ. ಚಿಂತಕ ಹೆಡ್ಗೆವಾರ್ ಅವರ ಭಾಷಣದ ಒಂದು ಭಾಗವನ್ನು ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿದೆ. ಇದರಲ್ಲಿ ಆರ್‍ಎಸ್‍ಎಸ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಕೇವಲ ರಾಷ್ಟ್ರೀಯ ಭಾವನೆಯ ಪಠ್ಯ ಇದಾಗಿದೆ. ಬರಗೂರು ರಾಮಚಂದ್ರಪ್ಪ ಸಮಿತಿಯ 107 ಪಾಠಗಳನ್ನು ಹಾಗೇ ಉಳಿಸಿಕೊಳ್ಳಲಾಗಿದೆ.

    ಕನ್ನಡ ಪ್ರಥಮ ಭಾಷೆಯಲ್ಲಿ 2021-22ರಲ್ಲಿ 195 ಪಾಠ ಇತ್ತು. 2022-23ರಲ್ಲಿ 198 ಪಠ್ಯ ಆಗಿದೆ. ಇದರಲ್ಲಿ 33 ಪಠ್ಯ ಮಾತ್ರ ಬದಲಾವಣೆ ಆಗಿದೆ. ಹೊಸದಾಗಿ 3 ಪಾಠ ಮಾತ್ರ ಸೇರಿಸಲಾಗಿದೆ. 165 ಪಾಠ ಹಾಗೇ ಉಳಿಸಿಕೊಳ್ಳಲಾಗಿದೆ. ಕನ್ನಡ ದ್ವೀತಿಯ ಭಾಷೆಯಲ್ಲಿ 170 ಪಾಠಗಳ ಪೈಕಿ 8 ಪಾಠ ಮಾತ್ರ ಬದಲಾವಣೆ ಮಾಡಲಾಗಿದೆ. 162 ಪಾಠ ಹಳೆ ಸಮಿತಿಯದ್ದೇ ಉಳಿಸಿಕೊಳ್ಳಲಾಗಿದೆ ಎಂಬ ಸಂಪೂರ್ಣ ದಾಖಲಾತಿಗಳ ಸಮೇತ ಇಲಾಖೆ ವರದಿ ಸಿದ್ಧ ಮಾಡಿದೆ.

  • ವಿಚಾರ ನಪುಂಸಕರು ಪಠ್ಯ ಪರಿಷ್ಕರಣಾ ವಿವಾದ ಸೃಷ್ಟಿಸಿ ಮೈಕಾಸುರರಾಗಿದ್ದಾರೆ: ಪ್ರತಾಪ್ ಸಿಂಹ

    ವಿಚಾರ ನಪುಂಸಕರು ಪಠ್ಯ ಪರಿಷ್ಕರಣಾ ವಿವಾದ ಸೃಷ್ಟಿಸಿ ಮೈಕಾಸುರರಾಗಿದ್ದಾರೆ: ಪ್ರತಾಪ್ ಸಿಂಹ

    ಉಡುಪಿ: ಅನಗತ್ಯ ತಕರಾರು ಎತ್ತುವವರು ವಿಚಾರ ನಪುಂಸಕರು. ಇವರಲ್ಲಿ ವಿಚಾರ ಇಲ್ಲ ಬರೀ ಉಗುಳು ಮಾತ್ರ. ವಿಚಾರ ನಪುಂಸಕತೆ ಇರುವುದರಿಂದ ಬರವಣಿಗೆ ಬಿಟ್ಟು ಎಷ್ಟೋ ವರ್ಷಗಳಾದ್ದು, ಇದೀಗ ಇವರು ಮೈಕ್ ಮುಂದೆ ನಿಲ್ಲುವ ಮೈಕಾಸುರರಾಗಿದ್ದಾರೆ ಎಂದು ಪಠ್ಯಪುಸ್ತಕ ಪರಿಷ್ಕರಣೆ ಕುರಿತಾಗಿ ಎದ್ದಿರುವ ಚರ್ಚೆ ಕುರಿತಾಗಿ ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

    TEXTBOOK

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರೊಂದಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಚರ್ಚೆಗೆ ಬನ್ನಿ ಚರ್ಚೆಯಿಂದ ಯಾಕೆ ಪಲಾಯನ ಮಾಡಿತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ

    ಸಮಾಜ ಮತ್ತು ಕನ್ನಡ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದೇವೆ. ಡಿಕೆಶಿ, ಸಿದ್ದರಾಮಯ್ಯ ಇಲ್ಲದ ಸಲ್ಲದ ಊಹಾಪೋಹ ಸೃಷ್ಟಿ ಮಾಡಿದ್ದಾರೆ. ಬರಗೂರು ರಾಮಚಂದ್ರಪ್ಪ, ದೇವನೂರು ಮಹಾದೇವ ಊಹಾಪೋಹ ಸೃಷ್ಟಿ ಮಾಡಿ ಸುದ್ದಿ ಹಬ್ಬಿಸಿದ್ದಾರೆ. ಅನುಮಾನ ಸೃಷ್ಟಿ ಮಾಡುವುದು, ಊಹಾಪೋಹ ಹಬ್ಬಿಸುವುದು ಇವರ ಉದ್ದೇಶ. ವಿಚಾರ ನಪುಂಸಕತೆ ಇಲ್ಲದಿದ್ದರೆ ಬಹಿರಂಗವಾಗಿ ಚರ್ಚೆಗೆ ಬನ್ನಿ. ಭಗತ್ ಸಿಂಗ್ ಪಠ್ಯ ಕೈಬಿಟ್ಟಿದ್ದಕ್ಕೆ ಸಾಕ್ಷ ತೋರಿಸಿ. ನಾರಾಯಣ ಗುರು ಪಠ್ಯವನ್ನು ಸಮಾಜದಿಂದ ಕನ್ನಡ ಪಾಠಕ್ಕೆ ವರ್ಗಾಯಿಸಲಾಗಿದೆ. ಏಳನೇ ತರಗತಿಯ ಪಠ್ಯದಲ್ಲೂ ನಾರಾಯಣ ಗುರುಗಳ ಪಾಠ ಇದೆ ಎಂದರು.

    ದೇವನೂರು ಮಹಾದೇವ ವಿರುದ್ಧ ಗುಡುಗು
    ದೇವನೂರು ಮಹಾದೇವ 2014, 2019ರಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಪರ ನನ್ನ ವಿರುದ್ಧ ಚುನಾವಣಾ ಪ್ರಚಾರ ಭಾಷಣ ಮಾಡಿದ್ದರು. ಆ ಭಾಗದಲ್ಲಿ ಜನ ಏನು ತೀರ್ಪು ಕೊಟ್ಟಿದ್ದಾರೆ ಎಂದು ಗೊತ್ತಿದೆ. ದೇವನೂರು ಮಹಾದೇವ ಅವರ ಬಗ್ಗೆ ವೈಯಕ್ತಿಕವಾಗಿ ಅಪಾರ ಗೌರವವಿದೆ. ದೇವನೂರು ಕುಸುಮಬಾಲೆ ಎಂಬ ಅದ್ಭುತ ಕೃತಿಯನ್ನು ಬರೆದವರು. ಕಾಂಗ್ರೆಸ್ ಪ್ರಚಾರ ಊಹಾಪೋಹಗಳನ್ನು ಬಿಟ್ಟು ಹಿಂದಿನ ಮಹಾದೇವರಾಗಿ, ಮತ್ತೆ ಪೆನ್ನನ್ನು ಕೈಗೆತ್ತಿಕೊಂಡು ಒಂದು ಅದ್ಭುತ ಕೃತಿಯನ್ನು ರಚನೆ ಮಾಡಿ. ನಾವು ಕೂಡ ದೇವನೂರು ಮಹಾದೇವರನ್ನು ಇಷ್ಟಪಡುತ್ತೇವೆ ಗೌರವಿಸುತ್ತೇವೆ. ಪೆನ್ನಿಗೆ ನಿವೃತ್ತಿ ಕೊಟ್ಟು ನೀವು ಮೈಕ್ ಮುಂದೆ ನಿಂತಿದ್ದೀರಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಾಟಕ್ಕೆ ಒಳಗಾದ ಮಹಿಳೆಗೆ ಚಾಟಿಯಿಂದ ಹೊಡೆದ ಪೂಜಾರಿ

    ನಾಡಗೀತೆಗೆ ರೋಹಿತ್ ಚಕ್ರತೀರ್ಥ ಅಪಮಾನ ಮಾಡಿದ್ದಾರೆ ಎಂಬ ಆರೋಪವನ್ನು ನಾನು ಕೂಡ ಗಮನಿಸಿದ್ದೇನೆ. ವಾಟ್ಸಪ್‍ನಲ್ಲಿ ಬಂದ ಸಂದೇಶ ಎಂದು ಫೇಸ್‍ಬುಕ್‍ನಲ್ಲಿ ಹಾಕಿದ್ದರು. ಅದನ್ನು ಯಾರೋ ವ್ಯಂಗ್ಯ ಮಾಡಿದ್ದರು, ಅದು ತಪ್ಪು. ಅದನ್ನು ರೋಹಿತ್ ಚಕ್ರತೀರ್ಥ ರಚನೆ ಮಾಡಿದ್ದಲ್ಲ. ಸಿದ್ದರಾಮಯ್ಯ ಸಿಎಂ ಆಗಿರುವಾಗ ಈ ಕುರಿತು ಕೇಸುದಾಖಲಾಗಿದೆ ಬಿ ರಿಪೋರ್ಟ್ ಆಗಿದೆ, ಅನಗತ್ಯವಾಗಿ ಒಬ್ಬ ವ್ಯಕ್ತಿಯನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕುವೆಂಪು ಮೈಸೂರಿನಲ್ಲಿ ನೆಲೆ ಇದ್ದಂತಹವರು, ನಾನು ಕುವೆಂಪು ಅಭಿಮಾನಿ ಅವರ ಮೇಲೆ ಅಪಾರ ಗೌರವವಿದೆ. ರೋಹಿತ್ ಚಕ್ರತೀರ್ಥ ಅವರನ್ನು ತುಳಿಯುವ, ತೇಜೋವಧೆ ಮಾಡುವ ಪ್ರಯತ್ನ ನಡೆಯುತ್ತಿದೆ. ವೈಯಕ್ತಿಕವಾಗಿ ಟಾರ್ಗೆಟ್ ಮಾಡುವುದು ಸರಿಯಲ್ಲ. ಬಹಿರಂಗ ಚರ್ಚೆಗೆ ಅವಕಾಶ ನೀಡಿದರೂ ಅವರು ಬರುತ್ತಿಲ್ಲ ಎಂದರು.

    ಹಿಜಬ್ ವಿವಾದ ಸಾಮಾನ್ಯ
    ಮಂಗಳೂರಿನ ಯೂನಿವರ್ಸಿಟಿ ಕಾಲೇಜ್‍ನಲ್ಲಿ ಹಿಜಬ್ ವಿವಾದಕ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಜಗತ್ತಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಸಮವಸ್ತ್ರ ಸಂಹಿತೆ ಜಾರಿ ಆಗಬೇಕು ಎಂಬ ಶಾಸಕ ರಘುಪತಿ ಭಟ್ ಹೋರಾಟ ಸರಿ ಇದೆ. ಸಮೂಹ ಸಂಹಿತೆ ಪಾಲಿಸಿ ಎಂದು ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಕೋರ್ಟ್ ತೀರ್ಪಿಗೆ ಗೌರವ ಕೊಡಿ, ಕೋರ್ಟ್ ತೀರ್ಪನ್ನು ಗೌರವಿಸುವ ಮನೋಭಾವನೆ ಬೆಳೆಸಿಕೊಳ್ಳಿ. ತಕರಾರು ಎತ್ತುವ ಕೋರ್ಟ್ ತೀರ್ಪು ಏನು ಎಂಬುದನ್ನು ತಿಳಿದುಕೊಳ್ಳಿ, ದೇಶ ಸಂವಿಧಾನಕ್ಕಿಂತ ನಮ್ಮ ಧರ್ಮವೇ ದೊಡ್ಡದು ಎಂದರೆ ಸಮಸ್ಯೆ ಇರುತ್ತದೆ ಎಂದು ಅಭಿಪ್ರಾಯಪಟ್ಟರು.