Tag: ಪಡಿತರ ಕಾರ್ಡ್

  • ಕರಾವಳಿಗರಿಗೆ ಪಡಿತರ ಕಾರ್ಡ್ ಮೂಲಕ ಕುಚ್ಚಿಲಕ್ಕಿ ವಿತರಣೆ: ಸಚಿವ ಕೋಟ

    ಕರಾವಳಿಗರಿಗೆ ಪಡಿತರ ಕಾರ್ಡ್ ಮೂಲಕ ಕುಚ್ಚಿಲಕ್ಕಿ ವಿತರಣೆ: ಸಚಿವ ಕೋಟ

    ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಕಾರ್ಡ್ ಮೂಲಕ ಕುಚ್ಚಿಲಕ್ಕಿ ವಿತರಣೆ ಮಾಡುವುದಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಘೋಷಣೆ ಮಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ತಿಂಗಳು ಪಡಿತರ ಕಾರ್ಡ್ ಮೂಲಕ ಬಡವರಿಗೆ ಕುಚ್ಚಿಲಕ್ಕಿ ವಿತರಣೆ ಮಾಡಲು ಕೇಂದ್ರ ಅನುಮತಿ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ತಿಂಗಳಿಗೆ 1 ಲಕ್ಷ ಕ್ವಿಂಟಾಲ್ ಅಕ್ಕಿ ಬಿಡುಗಡೆಯಾಗುತ್ತದೆ. ಇದಕ್ಕೆ ಸಹಕರಿಸಿದ ಸಂಸದರು ಹಾಗೂ ಎರಡು ಜಿಲ್ಲೆಯ ಶಾಸಕರು ಅಭಿನಂದನಾರ್ಹರು. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಹೋರಾಟವನ್ನು ಮಾತುಕತೆಯನ್ನು ಮಾಡಿದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದರು.

    ನಾನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ಈ ಪ್ರಯತ್ನ ಮಾಡಿದ್ದೆ. ಕುಚ್ಚಿಲಕ್ಕಿ ವಿತರಿಸಲು ಶಿಫಾರಸು ಮಾಡಿದ ಮುಖ್ಯಮಂತ್ರಿ, ಆಹಾರ ಸಚಿವ ಉಮೇಶ್ ಕತ್ತಿ, ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿಗೆ ಧನ್ಯವಾದ ಸಲ್ಲಿಕೆ ಮಾಡುತ್ತೇನೆ. ಎಂ4, ಜಯಾ ತಳಿಯ ಅಕ್ಕಿಯನ್ನು ಖರೀದಿ ಮಾಡಿ ವಿನಿಯೋಗಿಸುತ್ತೇವೆ ಎಂದರು. ಇದನ್ನೂ ಓದಿ: ಕಟೀಲ್, ಸಿದ್ದರಾಮಯ್ಯಗೆ ಕಂಟಕವಾಗ್ತಾರೆ: ಕೋಟ ಶ್ರೀನಿವಾಸ ಪೂಜಾರಿ

    ಈಗಾಗಲೇ ಕೆಲವೆಡೆಯಿಂದ ಭತ್ತ ಖರೀದಿಯಾಗಿದೆ. ಖರೀದಿ ಮಾಡಿದ ಭತ್ತವನ್ನು ಮೊದಲು ವಿತರಣೆ ಮಾಡುತ್ತೇವೆ. ಹೊಸ ಖರೀದಿಯ ಸಂದರ್ಭ ಕುಚ್ಚಿಲಕ್ಕಿಯನ್ನು ಖರೀದಿ ಮಾಡುತ್ತೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್‍ನವ್ರು ರೈಲು, ಬಸ್ ಯಾವುದಲ್ಲಾದ್ರೂ ಹೋಗ್ಲಿ, ಆದ್ರೆ ಸಂದರ್ಭ ನೋಡಿ ಪ್ರತಿಭಟನೆ ಮಾಡ್ಲಿ: ಸುಧಾಕರ್

  • ಕಾರ್ಡ್ ಇಲ್ಲದ ಮಂದಿಗೂ ಪಡಿತರ ಕಿಟ್ – ಯಾವುದೇ ತರಕಾರಿ ತಗೆದುಕೊಂಡ್ರು ಕೆಜಿಗೆ 10 ರೂ. ಮಾತ್ರ

    ಕಾರ್ಡ್ ಇಲ್ಲದ ಮಂದಿಗೂ ಪಡಿತರ ಕಿಟ್ – ಯಾವುದೇ ತರಕಾರಿ ತಗೆದುಕೊಂಡ್ರು ಕೆಜಿಗೆ 10 ರೂ. ಮಾತ್ರ

    ಮೈಸೂರು: ಪಡಿತರ ಕಾರ್ಡ್ ಇರೋರಿಗೆ ಪಡಿತರ ಕೊಡ್ತಾರೆ ಆದರೆ ಕಾರ್ಡ್ ಇಲ್ಲದೆ ಇರೋರ ಗತಿ ಏನೂ ಎಂದು ಬಹಳಷ್ಟು ಜನ ಪ್ರಶ್ನಿಸಿದ್ದರು. ಈಗ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆ ಪ್ರಶ್ನೆಗೆ ಸ್ಥಳೀಯ ಶಾಸಕ ಜಿ.ಟಿ ದೇವೇಗೌಡ ಉತ್ತರ ನೀಡಿದ್ದು, ಡಿಸಿಸಿ ಬ್ಯಾಂಕ್ ಜೊತೆಗೂಡಿ ಪಡಿತರ ಕಾರ್ಡ್ ಇಲ್ಲದವರ ನೆರವಿಗೆ ಧಾವಿಸಿದ್ದಾರೆ.

    ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಟ್ಟು 5 ಸಾವಿರ ಜನರ ಬಳಿ ಯಾವುದೇ ಪಡಿತರ ಕಾರ್ಡ್ ಇಲ್ಲ. ಹೀಗಾಗಿ ಇವರಿಗೆ 10 ಕೆಜಿ ಅಕ್ಕಿ, 1 ಕೆಜಿ ಗೋಧಿ ಹಿಟ್ಟು, 1 ಕೆಜಿ ಉಪ್ಪು, 1 ಕೆಜಿ ಬೇಳೆ ಹಾಗೂ 1 ಲೀಟರ್ ಅಡುಗೆ ಎಣ್ಣೆಯನ್ನು ತಲುಪಿಸುವ ಕಾರ್ಯ ಶುರುವಾಗಿದೆ.

    10 ರೂ.ಗೆ 1 ಕೆಜಿ ತರಕಾರಿ, 20 ರೂ.ಗೆ ಅಕ್ಕಿ :
    ಮೈಸೂರಿನಲ್ಲಿ ಎಸ್‍ಎಂಪಿ ಫೌಂಡೇಶನ್ ಜನರಿಗೆ ಕಡಿಮೆ ಬೆಲೆಗೆ ತರಕಾರಿ ಹಾಗೂ ಅಕ್ಕಿಯನ್ನು ನೀಡುತ್ತಿದೆ. ಯಾವುದೇ ತರಕಾರಿ ಖರೀದಿ ಮಾಡಿ ಕೆಜಿಗೆ 10 ರೂಪಾಯಿ, ಗುಣಮಟ್ಟದ ಅಕ್ಕಿ ಕೆಜಿಗೆ 20 ರೂಪಾಯಿಯಂತೆ ಮಾರಾಟ ಮಾಡುತ್ತಿದೆ. ಅಲ್ಲದೆ ಜನರ ಮನೆ ಬಾಗಿಲಿಗೆ ಇವುಗಳನ್ನು ಸರಬರಾಜು ಮಾಡುತ್ತಿದೆ. ಲಾಕ್‍ಡೌನ್ ಮುಗಿಯೋವರೆಗೆ ಈ ರೀತಿ ಮನೆ ಮನೆಗೆ ಕಡಮೆ ದರದಲ್ಲಿ ತರಕಾರಿ ಹಾಗೂ ಅಕ್ಕಿ ತಲುಪಿಸೋ ಕಾರ್ಯ ನಡೆಸಲಾಗುತ್ತದೆ ಎಂದು ಎಸ್‍ಎಂಪಿ ಫೌಂಡೇಶನ್ ತಿಳಿಸಿದೆ.

    ಸುತ್ತೂರು ಶ್ರೀಗಳಿಂದ ಪಡಿತರ ವಿತರಣೆ:
    ಮೈಸೂರು ನಾಗರೀಕ ವೇದಿಕೆಯಿಂದ 3 ಸಾವಿರ ದಿನಸಿ ಪೊಟ್ಟಣಗಳನ್ನು ವಿತರಿಸಲಾಯಿತು. ಸುತ್ತೂರು ಶ್ರೀ ದೇಶಿಕೇಂದ್ರ ಸ್ವಾಮೀಜಿ ಈ ಪದಾರ್ಥಗಳನ್ನು ಜನರಿಗೆ ವಿತರಿಸಿದರು. 5 ಕೆಜಿ ಅಕ್ಕಿ, 1 ಕೆಜಿ ಸಕ್ಕರೆ, 1 ಕೆಜಿ ಬೆಳೆ, ಕಾಲ್ಕೇಜಿ ಟೀ ಪುಡಿ, ಅರ್ಧ ಲೀಟರ್ ಅಡಿಗೆ ಎಣ್ಣೆ ಪಾಕೇಟ್ ಅನ್ನು ಮೈಸೂರಿನ ಗಿರಿಯಾಭೋವಿಪಾಳ್ಯದ ಜೆಎಸ್‍ಎಸ್ ಪ್ರೌಡ ಶಾಲೆ ಆವರಣದಲ್ಲಿ ವಿತರಿಸಲಾಯಿತು. ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ, ಉದ್ಯಮಿಗಳಾದ ವಾಸುದೇವ ಭಟ್, ಬಾಲಸುಬ್ರಹ್ಮಣ್ಯಂ, ಗಿರಿ ಸೇರಿದಂತೆ ಪ್ರಮುಖರು ಈ ಕಾರ್ಯದಲ್ಲಿ ಭಾಗಿಯಾಗಿದ್ದರು.