Tag: ಪಡಿತರ ಕಿಟ್

  • ಪ್ರತಿ ತಾಲೂಕಿನಲ್ಲಿ ಮುಜರಾಯಿ ಅರ್ಚಕರಿಗೆ ಪಡಿತರ ವಿತರಣೆ: ಜೆ. ಮಂಜುನಾಥ್

    ಪ್ರತಿ ತಾಲೂಕಿನಲ್ಲಿ ಮುಜರಾಯಿ ಅರ್ಚಕರಿಗೆ ಪಡಿತರ ವಿತರಣೆ: ಜೆ. ಮಂಜುನಾಥ್

    ಬೆಂಗಳೂರು: ಕೋವಿಡ್ ಲಾಕ್‍ಡೌನ್ ನಿರ್ಬಂಧಗಳಿಂದಾಗಿ ಮುಜರಾಯಿ ಇಲಾಖೆ ಸೇರಿದ ದೇವಾಲಯಗಳಿಗೆ ಪೂಜಾ ಕೈಂಕರ್ಯಗಳನ್ನು ನಡೆಸುತ್ತಿದ್ದ ಅರ್ಚಕರ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಆದ್ದರಿಂದ ಜಿಲ್ಲಾಡಳಿತದಿಂದ ಪ್ರತಿ ತಾಲೂಕಿನಲ್ಲಿ ಅರ್ಚಕ ಕುಟುಂಬದವರಿಗೆ ಆಹಾರ ಧಾನ್ಯಗಳ ಪಡಿತರ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ತಿಳಿಸಿದರು

    ಬೆಂಗಳೂರು ನಗರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಅರ್ಚಕರ ಕುಟುಂಬಗಳಿಗೆ ಜಿಲ್ಲಾಡಳಿತದ ವತಿಯಿಂದ ಪಡಿತರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಅರ್ಚಕರನ್ನು ಉದ್ದೇಶಿಸಿ ಮಾತನಾಡಿದರು.

    ಮುಜರಾಯಿ ಇಲಾಖೆಗೆ ಸೇರಿದ 82 ಮಂದಿ ಅರ್ಚಕರಿಗೆ ಪಡಿತರ ಕಿಟ್ ಗಳನ್ನು ಜಿಲ್ಲಾಧಿಕಾರಿಗಳು ವಿತರಿಸಿದರು. ಕೊರೊನಾ ಸಾಂಕ್ರಾಮಿಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಮನೆಯಲ್ಲೇ ಇದ್ದು ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವುದರ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ರಂಗನಾಥ್, ತಹಶೀಲ್ದಾರ್ ನರಸಿಂಹಮೂರ್ತಿ, ಉಪ ತಹಶೀಲ್ದಾರ್ ಆದ ಅಶೋಕ್, ನಿರೀಕ್ಷಕರಾದ ಬಾಲಮುರಳಿಕೃಷ್ಣ, ಆಡಳಿತಾಧಿಕಾರಿ ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು.

  • ಮಂಗಳಮುಖಿಯರಿಗೆ ಪಡಿತರ, ಮೆಡಿಕಲ್ ಕಿಟ್ ವಿತರಣೆ

    ಮಂಗಳಮುಖಿಯರಿಗೆ ಪಡಿತರ, ಮೆಡಿಕಲ್ ಕಿಟ್ ವಿತರಣೆ

    ಬೆಂಗಳೂರು: ಕೋವಿಡ್-19 ಸಂಕಷ್ಟದಲ್ಲಿರುವ 150ಕ್ಕೂ ಹೆಚ್ಚು ಮಂಗಳಮುಖಿಯರಿಗೆ ದಿನಸಿ ಸಾಮಾಗ್ರಿಗಳ ಪಡಿತರ ಕಿಟ್ ಹಾಗೂ ಮೆಡಿಕಲ್ ಕಿಟ್‍ಗಳನ್ನು ಅಗರವಾಲ್ ಸಮಾಜ (ಕರ್ನಾಟಕ)ದ ಅಧ್ಯಕ್ಷ ಸಂಜಯ್ ಗರ್ಗ್ ವಿತರಿಸಿದರು.

    ಬೆಂಗಳೂರು ಪ್ರೆಸ್‍ಕ್ಲಬ್‍ನಲ್ಲಿಂದು ಫೋಟೋ ಜರ್ನಲಿಸ್ಟ್ ಅಸೋಸಿಯೇಷಯನ್ ಆಫ್ ಬೆಂಗಳೂರು ಮತ್ತು ಅಗರವಾಲ್ ಸಮಾಜ (ಕರ್ನಾಟಕ) ಜಂಟಿಯಾಗಿ ಕಾರ್ಯಕ್ರಮ ಆಯೋಜಿಸುವ ಮೂಲಕ ಫುಡ್ ಕಿಟ್ ವಿತರಿಸಲಾಯಿತು.

    ಈ ವೇಳೆ ಮಾತನಾಡಿದ ಸಂಜಯ್ ಗರ್ಗ್ ಅವರು, ಮಂಗಳಮುಖಿಯರಿಗೆ ಪಡಿತರ ಕಿಟ್ ನೀಡುತ್ತಿರುವುದು ಸಂತಸ ಉಂಟುಮಾಡಿದೆ. ಸಮಾಜದಿಂದ ನಿರ್ಲಕ್ಷ್ಯಕ್ಕೆ ಒಳಗಾಗದ ಈ ವರ್ಗದವರ ಬಗ್ಗೆ ಕಾಳಜಿ ಹೊಂದಿರುವ ಬೆಂಗಳೂರು ಛಾಯಾಚಿತ್ರ ಸಂಸ್ಥೆ ಅವರ ಮುಂದಾಳತ್ವ ಪ್ರಶಂಸನೀಯ. ಕೊರೊನಾ ವಾರಿಯರ್ಸ್ ಆಗಿ, ಕೊರೊನಾ ಜಾಗೃತಿ ಮೂಡಿಸುವಲ್ಲಿ ಇವರ ಕಾರ್ಯ ಶ್ಲಾಘನೀಯ. ಇವರ ಆರೋಗ್ಯದ ಬಗ್ಗೆಯೂ ಹೆಚ್ಚು ಕಾಳಜಿ ವಹಿಸುವಂತೆ ಮನವಿ ಮಾಡಿಕೊಂಡರು.

    ಫೋಟೋ ಜರ್ನಲಿಸ್ಟ್ ಅಸೋಸಿಯೇಷಯನ್ ಅಧ್ಯಕ್ಷ ಬಿ.ಎನ್.ಮೋಹನ್ ಕುಮಾರ್ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಅಗರವಾಲ್ ಸಮಾಜ ಹೆಚ್ಚು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ. ನಮ್ಮ ಸಂಘದ ಜೊತೆ ಕೈ ಜೋಡಿಸಿ ಪಡಿತರ ಕಿಟ್ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

    ಅಗರವಾಲ್ ಸಮಾಜ (ಕರ್ನಾಟಕ)ದ ಕಾರ್ಯದರ್ಶಿ ವಿಜಯ್ ಸರಫ್, ಜಂಟಿ ಕಾರ್ಯದರ್ಶಿ ಸಂಜಯ್ ಮೊಹತ್, ಫೋಟೋ ಜರ್ನಲಿಸ್ಟ್ ಅಸೋಸಿಯೇಷಯನ್ ಆಫ್ ಬೆಂಗಳೂರು ಅಧ್ಯಕ್ಷ ಬಿ.ಎನ್.ಮೋಹನ್ ಕುಮಾರ್, ಉಪಾಧ್ಯಕ್ಷ ಶೈಲೆಂದ್ರ ಭೋಜಕ್, ಕಾರ್ಯದರ್ಶಿ ಕೆ.ಎಸ್.ಗಣೇಶ್ ಉಪಸ್ಥಿತಿರಿದ್ದರು.