Tag: ಪಡ್ಡೆ ಹುಲಿ

  • ಗೆಲ್ಲುವ ಛಲಕ್ಕೆ ಮಾಸ್ಟರ್ ಪೀಸ್ ಈ ಪಡ್ಡೆಹುಲಿ!

    ಗೆಲ್ಲುವ ಛಲಕ್ಕೆ ಮಾಸ್ಟರ್ ಪೀಸ್ ಈ ಪಡ್ಡೆಹುಲಿ!

    ಹೆಜ್ಜೆ ಹೆಜ್ಜೆಗೂ ಅಬ್ಬರಿಸುತ್ತಾ ಸಾಗಿ ಬಂದಿದ್ದ ಪಡ್ಡೆಹುಲಿಯೀಗ ಪ್ರೇಕ್ಷಕರನ್ನು ಮುಖಾಮುಖಿಯಾಗಿದೆ. ಈ ಚಿತ್ರ ನೆಲದ ಸೊಗಡಿನ ಯುವ ಸಮುದಾಯದ ಕಥೆಯೊಂದಿಗೆ, ಎಲ್ಲವನ್ನೂ ದಾಟಿಕೊಂಡು ಗುರಿಯತ್ತ ಮುನ್ನುಗ್ಗೋ ಛಲಕ್ಕೆ ಕಸುವು ತುಂಬುವಂತೆ ಮತ್ತು ಕೇವಲ ಯುವ ಸಮೂಹ ಮಾತ್ರವಲ್ಲದೇ ಒಂದಿಡೀ ಫ್ಯಾಮಿಲಿ ಒಟ್ಟಾಗಿ ನೋಡಿ ಎಂಜಾಯ್ ಮಾಡುವ ರೀತಿಯಲ್ಲಿ ಮೂಡಿ ಬಂದಿದೆ. ಉಳಿದೆಲ್ಲ ಭಾವಗಳ ಜೊತೆಗೆ ಕನ್ನಡತನ, ಸಂಗೀತ ಪ್ರೇಮವನ್ನೂ ಉಸಿರಾಗಿಸಿಕೊಂಡಿರೋ ಮಾಸ್ ಗೆಟಪ್ಪಿನ ಪಡ್ಡೆಹುಲಿ ಒಂದೇ ಸಲಕ್ಕೆ ಎಲ್ಲ ವರ್ಗದ ಪ್ರೇಕ್ಷಕರನ್ನೂ ಸೆಳೆದುಕೊಂಡಿದೆ.

    ಗುರುದೇಶಪಾಂಡೆ ನಿರ್ದೇಶನದ ಚಿತ್ರಗಳೆಂದರೇನೇ ನೆಲದ ಘಮಲಿನ ಕಥೆಯ ನಿರೀಕ್ಷೆಗಳೇಳುತ್ತವೆ. ಆದರೆ ಕಾಲೇಜು ಸ್ಟೋರಿ ಎಂಬಂತೆ ಬಿಂಬಿತವಾಗಿದ್ದ ಪಡ್ಡೆಹುಲಿಯೂ ಅಂಥಾದ್ದೇ ಸಾರ ಹೊಂದಿರುತ್ತದಾ ಎಂಬ ಬಗ್ಗೆ ಅನೇಕರಿಗೆ ಅನುಮಾನಗಳಿದ್ದವು. ಆದರೆ, ಪಡ್ಡೆಹುಲಿಯ ಕಥೆ ಕಾಲೇಜು ಕಾರಿಡಾರಿನಾಚೆಗೂ ಬಳಸಿ ಬಂದು, ಅಪ್ಪಟ ನೆಲದ ಸೊಗಡಿನ ಘಮಲನ್ನು ಪ್ರೇಕ್ಷಕರೆದೆಗೂ ಮೊಗೆದು ತಂದು ಸುರುವಿದೆ. ಅಂಥಾ ಪುಳಕ, ಥ್ರಿಲ್ಲಿಂಗ್, ಮೈನವಿರೇಳಿಸೋ ಸಾಹಸ, ಹನಿಗಣ್ಣಾಗುವಂಥಾ ತಿರುವುಗಳು, ಗಾಢ ಪ್ರೇಮ ಮತ್ತು ಸಂಗೀತಮಯ ಪಯಣ… ಇದಿಷ್ಟೂ ಭಾವಗಳೊಂದಿಗೆ ಪಡ್ಡೆಹುಲಿ ಅಪರೂಪದ ಚಿತ್ರ ನೋಡಿದ ಅನುಭವವೊಂದಕ್ಕೆ ಪ್ರೇಕ್ಷಕರನ್ನೆಲ್ಲ ವಾರಸುದಾರರನ್ನಾಗಿಸುತ್ತದೆ.

    ಶಾಲಾ ಆವರಣದಲ್ಲಿ ಕನ್ನಡ ಪ್ರೇಮದ ಹಿಮ್ಮೇಳದೊಂದಿಗೇ ಪಡ್ಡೆಹುಲಿಯ ಕಥೆ ಅನಾವರಣಗೊಳ್ಳುತ್ತಾ ಸಾಗುತ್ತದೆ. ಕನ್ನಡಕ್ಕೆ ಅವಮಾನಿಸಿದರೆ ಶಾಲೆಯ ಮುಖ್ಯಸ್ಥರ ಕಪಾಳಕ್ಕೆ ಬಾರಿಸಲೂ ಹಿಂದೆ ಮುಂದೆ ನೋಡದ ತಂದೆಯಾಗಿ ಕ್ರೇಜಿóಸ್ಟಾರ್ ರವಿಚಂದ್ರನ್ ನಟಿಸಿದ್ದಾರೆ. ಕಥೆಯೆಂಬುದು ಕಾಲೇಜಿನೊಳಗೇ ನಡೆದರೂ ಕೂಡಾ ಅದರ ಭಾವಗಳು ಬದುಕಿನ ನಾನಾ ಮುಖಗಳಿಗೆ ಕನ್ನಡಿ ಹಿಡಿಯುತ್ತವೆ. ಕಾಲೇಜೊಂದರ ಭಾವಲೋಕವನ್ನು ಹಸಿ ಹಸಿಯಾಗಿ ಹಿಡಿದಿಡೋ ಚಿತ್ರಗಳು ಸಾಕಷ್ಟು ಬಂದಿರಬಹುದು. ಆದರೆ ಪಡ್ಡೆಹುಲಿಯಷ್ಟು ಪರಿಣಾಮಕಾರಿಯಾದ ಎನರ್ಜಿಟಿಕ್ ಕಥೆಗಳು ತುಂಬಾನೇ ವಿರಳ. ಅದನ್ನು ಪರಿಣಾಮಕಾರಿಯಾಗಿಸುವಲ್ಲಿ ನಿರ್ದೇಶಕ ಗುರು ದೇಶಪಾಂಡೆಯವರು ಹಾಕಿರುವ ಶ್ರಮ ನಿಜಕ್ಕೂ ಸಾರ್ಥಕವಾಗಿದೆ.

    ಇಲ್ಲಿ ಕಷ್ಟದಿಂದಲೇ ಕಾಲೇಜು ಕಾರಿಡಾರಿಗೆ ಕಾಲಿಟ್ಟು ಆ ಬಳಿಕ ತಾನೇ ತಾನಾಗಿ ಆ ಲೋಕದ ನಾನಾ ಪಲ್ಲಟಗಳಿಗೆ ಪಕ್ಕಾಗುವ ಮಧ್ಯಮ ವರ್ಗದ ಹುಡುಗನ ಕಥೆಯಿದೆ. ಈ ಹಾದಿಯಲ್ಲೆದುರಾಗೋ ಎಲ್ಲ ಸವಾಲುಗಳನ್ನೂ ಎದುರಿಸುತ್ತಾ ತಾನಂದುಕೊಂಡಿದ್ದನ್ನು ಸಾಧಿಸಲು ಮುಂದಾಗುವ ಪಕ್ಕಾ ಮಾಸ್ ಪಾತ್ರಕ್ಕೆ ನಾಯಕ ಶ್ರೇಯಸ್ ಜೀವ ತುಂಬಿದ್ದಾರೆ. ಪ್ರತೀ ಫ್ರೇಮಿನಲ್ಲಿಯೂ ಪಳಗಿದ ನಟನಂಥಾ ಪ್ರೌಢ ನಟನೆಯನ್ನೂ ಅವರು ನೀಡಿದ್ದಾರೆ. ನಾಯಕಿ ನಿಶ್ವಿಕಾ ನಾಯ್ಡು ಕೂಡಾ ಅದಕ್ಕೆ ಭರ್ಜರಿಯಾಗಿಯೇ ಸಾಥ್ ಕೊಟ್ಟಿದ್ದಾರೆ. ರವಿಚಂದ್ರನ್, ಸುಧಾ ರಾಣಿ, ರಕ್ಷಿತ್ ಶೆಟ್ಟಿ ಸೇರಿದಂತೆ ಎಲ್ಲರೂ ಪಡ್ಡೆಹುಲಿಯ ಆವೇಗಕ್ಕೆ ಕಸುವು ತುಂಬಿದ್ದಾರೆ.

    ಪಡ್ಡೆಹುಲಿಯ ಕಥೆ ತೆರೆದುಕೊಳ್ಳೋದೇ ಚಿತ್ರದುರ್ಗದ ನೆಲದಿಂದ. ಇಲ್ಲಿನ ಮಧ್ಯಮವರ್ಗದ ಕನ್ನಡ ಮೇಷ್ಟರ ಕುಟುಂಬದ ಕೂಸಾದ ನಾಯಕ ಸಂಪತ್ ರಾಜ್ ಪಾಲಿಗೆ ಸಂಗೀತವೆಂದರೆ ಬಾಲ್ಯದಿಂದಲೂ ಪ್ರಾಣ. ತಾನು ಜಗತ್ತೇ ಬೆರಗಾಗಿ ನೋಡುವಂಥಾ ಸಂಗೀತಗಾರನಾಗಬೇಕೆಂಬ ಕನಸು ಆತನ ಮನಸಲ್ಲಿ ಎಳವೆಯಿಂದಲೇ ಮೊಳಕೆಯೊಡೆದು ಬಿಟ್ಟಿರುತ್ತೆ. ಆದರೆ ಹೆತ್ತವರಿಗೆ ಮಗ ಚೆನ್ನಾಗಿ ಓದಿಕೊಂಡು ಒಳ್ಳೆ ಕೆಲಸ ಪಡೆಯಬೇಕೆಂಬ ಆಸೆ. ಅತ್ತ ಜೀವದಂತೆ ಪ್ರೀತಿಸೋ ಹೆತ್ತವರ ಆಸೆಯನ್ನೂ ಹೊಸಕುವಂತಿಲ್ಲ. ತನ್ನ ಕನಸನ್ನೂ ಕೈ ಬಿಡುವಂತಿಲ್ಲ. ಕಡೆಗೂ ಹೆತ್ತವರ ಆಸೆಯಂತೆಯೇ ದುರ್ಗದಿಂದ ಬೆಂಗಳೂರಿಗೆ ಬಂದು ಇಂಜಿನಿಯರಿಂಗ್ ಕಾಲೇಜಿಗೆ ಅಡಿಯಿರಿಸೋ ದುರ್ಗದ ಪಡ್ಡೆ ಹುಲಿಗೆ ನಾನಾ ಸವಾಲುಗಳೆದುರಾಗುತ್ತವೆ. ಅವಮಾನಗಳು ಎದೆಗಿರಿಯುತ್ತವೆ. ಇದೆಲ್ಲದರಾಚೆಗೆ ಪಡ್ಡೆಹುಲಿ ಸಂಗೀತಗಾರನಾಗೋ ಕನಸನ್ನು ನನಸು ಮಾಡಿಕೊಳ್ತಾನಾ ಎಂಬುದೇ ಅಸಲೀ ಕುತೂಹಲ. ಇದನ್ನಿಟ್ಟುಕೊಂಡು ಯಾರೇ ಚಿತ್ರಮಂದಿರಕ್ಕೆ ತೆರಳಿದರೂ ಪಡ್ಡೆ ಹುಲಿಯ ಕಡೆಯಿಂದ ಅಪೂರ್ವ ಅನುಭವವಾಗೋದು ಗ್ಯಾರೆಂಟಿ!

    ದುರ್ಗದಿಂದ ಆರಂಭವಾಗಿ ಕಾಲೇಜು ಕಾರಿಡಾರಿನಲ್ಲಿ ಹರಿದಾಡೋ ಈ ಕಥೆ ಅಪರೂಪದ್ದು. ಫ್ಯಾಮಿಲಿ, ಪ್ರೀತಿ, ಸಾಹಸ, ಸೆಂಟಿಮೆಂಟ್ ಸೇರಿದಂತೆ ನಾನಾ ಭಾವ ಹೊಂದಿರೋ ಈ ಕಥೆಯಲ್ಲಿ ಆಪ್ತವಾಗೋದು ಪಡ್ಡೆಹುಲಿಯ ಗೆಲ್ಲುವ ಛಲ. ಈ ಚಿತ್ರವನ್ನು ಯಾರೇ ನೋಡಿದರೂ ಪಡ್ಡೆಹುಲಿಯಾಗಿ ಅಬ್ಬರಿಸಿರೋ ಶ್ರೇಯಸ್ ಪಾತ್ರ ಮನಸೊಳಗೆ ಪ್ರತಿಷ್ಠಾಪಿತವಾಗುತ್ತೆ. ಶ್ರೇಯಸ್ ಅವರಂತೂ ಇದು ಮೊದಲ ಚಿತ್ರವೆಂಬ ಸುಳಿವೇ ಬಿಟ್ಟುಕೊಡದಂತೆ ಅಬ್ಬರಿಸಿದ್ದಾರೆ. ಡ್ಯಾನ್ಸ್, ಫೈಟ್ ಸೇರಿದಂತೆ ಎಲ್ಲದರಲ್ಲಿಯೂ ಗಮನ ಸೆಳೆಯುತ್ತಾರೆ. ಥರ ಥರದ ಗೆಟಪ್ಪುಗಳಲ್ಲಿ ಅದಕ್ಕೆ ತಕ್ಕುದಾಗಿ ಅಭಿನಯಿಸೋ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ. ಈ ಮೂಲಕವೇ ಮಾಸ್ ಹೀರೋ ಆಗಿ ನೆಲೆಗೊಳ್ಳುವ ಸೂಚನೆಯನ್ನೂ ನೀಡಿದ್ದಾರೆ. ಇನ್ನುಳಿದಂತೆ ಈ ಚಿತ್ರದ ಅಖಂಡ ಹನ್ನೊಂದು ಹಾಡುಗಳು ಹೊರ ಬಂದಿದ್ದಕ್ಕೂ ಕಥೆಗೂ ನೇರಾ ನೇರ ಕನೆಕ್ಷನ್ನುಗಳಿವೆ. ಅದೇನೆಂಬುದೂ ಕೂಡಾ ಈ ಕಥೆಯ ಪ್ರಧಾನ ಸಾರ.

    ಹೊಸಾ ನಾಯಕನ ಆಗಮನಕ್ಕೆ ಏನೇನು ಬೇಕೋ ಅಂಥಾ ಎಲ್ಲ ಅಂಶಗಳೊಂದಿಗೆ ಗುರುದೇಶಪಾಂಡೆ ಅವರು ಪಡ್ಡೆಹುಲಿಯನ್ನು ರೂಪಿಸಿದ್ದಾರೆ. ರವಿಚಂದ್ರನ್ ಸೇರಿದಂತೆ ಎಲ್ಲ ಪಾತ್ರಗಳಲ್ಲಿಯೂ ಹೊಸತನವಿದೆ. ನಿರ್ಮಾಪಕ ರಮೇಶ್ ರೆಡ್ಡಿಯವರ ಧಾರಾಳತನವೆಂಬುದು ಪಡ್ಡೆಹುಲಿಯನ್ನು ಪ್ರತೀ ಹಂತದಲ್ಲಿಯೂ ಲಕ ಲಕಿಸುವಂತೆ ಮಾಡಿದೆ. ಕೊಂಚ ಆಚೀಚೆ ಆಗಿದ್ದರೂ ಸಾಮಾನ್ಯ ಕಥೆಯಾಗಬಹುದಾಗಿದ್ದ ಪಡ್ಡೆಹುಲಿಯ ಚಮತ್ಕಾರವನ್ನು ವಿಶೇಷವಾಗಿಸಿರೋದು ನಿರ್ದೇಶಕರ ಜಾಣ್ಮೆ. ಒಟ್ಟಾರೆಯಾಗಿ ಕನ್ನಡಕ್ಕೆ ಮಾಸ್ ಹೀರೋ ಎಂಟ್ರಿಯಾಗಿದೆ. ಎಲ್ಲ ವರ್ಗದ ಪ್ರೇಕ್ಷಕರಿಗೂ ಶ್ರೇಯಸ್ ಪಡ್ಡೆಹುಲಿಯಾಗಿ ಖಂಡಿತಾ ಇಷ್ಟವಾಗುತ್ತಾರೆ.

    ರೇಟಿಂಗ್: 4/5

  • ‘ಪಡ್ಡೆ ಹುಲಿ’ ಏಪ್ರಿಲ್ 19ರಂದು ರಿಲೀಸ್

    ‘ಪಡ್ಡೆ ಹುಲಿ’ ಏಪ್ರಿಲ್ 19ರಂದು ರಿಲೀಸ್

    ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಜನಪ್ರಿಯ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಪಾದಾರ್ಪಣೆ ಮಾಡುತ್ತಿರುವ ಚಿತ್ರ `ಪಡ್ಡೆ ಹುಲಿ’ ಅನೇಕ ವಿಶೇಷತೆಗಳನ್ನು ತುಂಬಿಕೊಂಡು ಈ ವಾರ ಬಿಡುಗಡೆ ಆಗುತ್ತಿದೆ.

    ‘ಪಡ್ಡೆ ಹುಲಿ’ ಚಿತ್ರದ ನಿರ್ಮಾಪಕ ಎಂ.ರಮೇಶ್ ರೆಡ್ಡಿ (ನಂಗ್ಲಿ). ತೇಜಸ್ವಿನಿ ಎಂಟರ್‍ಪ್ರೈಸಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ದೇಶನ ಮಾಡಿರುವವರು ಗುರು ದೇಶಪಾಂಡೆ. ಶ್ರೇಯಸ್ ಪ್ರಥಮ ಹೆಜ್ಜೆಗೆ ಡಾ.ವಿಷ್ಣುವರ್ಧನ ಅವರ ನೆರಳು ಇದೆ. ಚಿತ್ರವನ್ನು ಚಿತ್ರದುರ್ಗದ ಹಿನ್ನೆಲೆಯಲ್ಲಿ ಡಾ.ವಿಷ್ಣುವರ್ಧನ್ ಅವರನ್ನು ನೆನಪಿಸುವ ಹಾಗೆ ಕಥೆ ಮಾಡಲಾಗಿದೆ. ನಿಶ್ವಿಕ ನಾಯ್ಡು ಚಿತ್ರದ ಕಥಾ ನಾಯಕಿ. ವಿ ರವಿಚಂದ್ರನ್ ನಾಯಕ ಶ್ರೇಯಸ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅತಿಥಿ ಪಾತ್ರಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮತ್ತು ರಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ಪೋಷಕ ಪಾತ್ರಗಳಲ್ಲಿ ಸುಧಾರಾಣಿ, ಮಧುಸೂಧನ್, ರಂಜಿತ್, ಚಿಕ್ಕಣ್ಣ, ಧರ್ಮಣ್ಣ ಹಾಗೂ ಇತರರು ಇದ್ದಾರೆ.

    ಪಡ್ಡೆ ಹುಲಿ ಚಿತ್ರದ ಪ್ರಮುಖ ಅಂಶಗಳೆಂದರೆ ಹಳೆಯ ಹಾಡುಗಳನ್ನು ಮರುಸಂಯೋಜನೆ ಮಾಡಲಾಗಿದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಈ ಚಿತ್ರದಲ್ಲಿ ಬಸವಣ್ಣ ಅವರ ಕಳಬೇಡ…ಕೊಲಬೇಡ…ಹುಸಿಯ ನುಡಿಯಲೂ ಬೇಡ…, ಬಿ.ಆರ್.ಲಕ್ಷ್ಮಣ್ ರಾವ್ ಅವರ `ಹೇಳಿ ಹೋಗು ಕಾರಣ…, ಜಿ ಪಿ ರಾಜರತ್ನಂ ಅವರ `ಹೆಂಡ ಹೆಂಡ್ತಿ ಕನ್ನಡ ಪದಗೊಳ್ ಅಂದ್ರೆ ರತ್ನಂಗ್ ಪ್ರಾಣ…, ಡಿವಿಜಿ ಅವರ `ಬದುಕು ಜಟಕಾ ಬಂಡಿ…ವಿಧಿ ಅದರ ಸಾಹೇಬ…, ಕೆ.ಎಸ್.ನರಸಿಂಹ ಸ್ವಾಮಿ ಅವರ `ನಿನ್ನ ಪ್ರೇಮದ ಪರಿಯ ನಾನಾರಿಯೆ ಕನಕಾಂಗಿ ಹಾಡುಗಳನ್ನು ಮರು ಸಂಯೋಜನೆ ಮಾಡಿ ಹಾಡಿಸಲಾಗಿದೆ. ಇಷ್ಟೇ ಅಲ್ಲದೆ ಇನ್ನೂ ಐದು ಹಾಡುಗಳಿಗೆ ಅಜನಿಷ್ ಲೋಕನಾಥ್ ಸ್ವರ ಸಂಯೋಜನೆ ಮಾಡಿದ್ದಾರೆ. ಡಾ.ವಿ.ನಾಗೇಂದ್ರ ಪ್ರಸಾದ್ ಗೀತ ಸಾಹಿತ್ಯ ಸಹ ಇದೆ. ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಡಿಫರೆಂಟ್ ಡ್ಯಾನಿ ಹಾಗೂ ವಿನೋದ್ ಸಾಹಸ, ಮದನ್ ಹರಿಣಿ, ವಿ.ಮುರಳಿ, ಕಲೈ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕೆ ಇದೆ.

  • ಸಾಹಸಸಿಂಹನ ವೀರಾಭಿಮಾನಿ ಈ ಪಡ್ಡೆಹುಲಿ!

    ಸಾಹಸಸಿಂಹನ ವೀರಾಭಿಮಾನಿ ಈ ಪಡ್ಡೆಹುಲಿ!

    ಸಿನಿಮಾಗಳಲ್ಲಿ ಜನಮೆಚ್ಚಿದ ನಟರ ಪ್ರಭೆಯನ್ನು ಬಳಸಿಕೊಳ್ಳೋದು ಮಾಮೂಲು. ಆದರೆ ಅಂಥಾ ನಟರ ಅಸಲಿ ಅಭಿಮಾನಿಗಳೇ ಥ್ರಿಲ್ ಆಗುವಂತೆ ಚಿತ್ರವೊಂದನ್ನು ರೂಪಿಸೋದು ಸವಾಲಿನ ಸಂಗತಿ. ಈ ವಿಚಾರದಲ್ಲಿ ಗುರುದೇಶಪಾಂಡೆ ನಿರ್ದೇಶನದ ಪಡ್ಡೆಹುಲಿ ಚಿತ್ರ ಗೆದ್ದಿದೆ. ಅದರಿಂದಾಗಿಯೇ ಇಡೀ ಕರ್ನಾಟಕದ ಉದ್ದಗಲಕ್ಕೂ ಹರಡಿಕೊಂಡಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳೆಲ್ಲ ಪಡ್ಡೆಹುಲಿಯತ್ತ ಆಕರ್ಷಿತರಾಗಿದ್ದಾರೆ.

    ಎಂ.ರಮೇಶ್ ರೆಡ್ಡಿಯವರು ತೇಜಸ್ವಿನಿ ಎಂಟರ್ ಪ್ರೈಸಸ್ ಬ್ಯಾನರ್ ಅಡಿ ನಿರ್ಮಾಣ ಮಾಡಿರೋ ಚಿತ್ರ ಪಡ್ಡೆಹುಲಿ. ಈ ಸಿನಿಮಾದೊಳಗಿನ ವಿಷ್ಣು ಅಭಿಮಾನ ಥರ ಥರದಲ್ಲಿ ಅನಾವರಣಗೊಳ್ಳುತ್ತಲೇ ಬಂದಿದೆ. ಈ ಅಭಿಮಾನದ ಹಿಂದೆ ರಿಯಲ್ ಆದ ಕಥಾನಕಗಳೂ ಇವೆ. ಯಾಕಂದ್ರೆ ಈ ಚಿತ್ರದಲ್ಲಿ ವಿಷ್ಣು ಅಭಿಮಾನಿಯಾಗಿ ನಟಿಸಿರೋ ಶ್ರೇಯಸ್ ನಿಜ ಜೀವನದಲ್ಲಿಯೂ ಸಾಹಸ ಸಿಂಹನ ಅಪ್ಪಟ ಅಭಿಮಾನಿ!

    ಅಷ್ಟಕ್ಕೂ ಶ್ರೇಯಸ್ ಅವರ ತಂದೆ ನಿರ್ಮಾಪಕರಾದ ಕೆ.ಮಂಜು ಅವರೂ ವಿಷ್ಣು ಅಭಿಮಾನಿಯೇ. ಮಂಜು ಅವರು ವಿಷ್ಣುವರ್ಧನ್ ಅವರ ನಿಕಟ ಸಂಪರ್ಕ ಹೊಂದಿದ್ದವರು. ವಿಷ್ಣು ಮೇಲೆ ಅಪಾರವಾದ ಪ್ರೀತಿ ಹೊಂದಿರೋ ಮಂಜು ತಮ್ಮ ಮಗನ ಮೊದಲ ಚಿತ್ರದ ಮೂಲಕ ಅದನ್ನು ಹೊರಗೆಡವಿದ್ದಾರೆ. ವಿಷ್ಣು ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ರಾಪ್ ಸಾಂಗ್ ಸೇರಿದಂತೆ ಎಲ್ಲದರಲ್ಲಿಯೂ ಪಡ್ಡೆಹುಲಿ ವಿಷ್ಣು ಅಭಿಮಾನದಿಂದಲೇ ಮಿರುಗುತ್ತಿದೆ!

  • ಪಡ್ಡೆಹುಲಿ ಕೊಬ್ಬಿ ಘರ್ಜಿಸಲು ನಿರ್ಮಾಪಕರು ಕಾರಣ!

    ಪಡ್ಡೆಹುಲಿ ಕೊಬ್ಬಿ ಘರ್ಜಿಸಲು ನಿರ್ಮಾಪಕರು ಕಾರಣ!

    ಬೆಂಗಳೂರು: ಶ್ರೇಯಸ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರೋ ಪಡ್ಡೆಹುಲಿ ಚಿತ್ರ ಇದೇ ಏಪ್ರಿಲ್ ಹತ್ತೊಂಬತ್ತರಂದು ತೆರೆ ಕಾಣುತ್ತಿದೆ. ಗುರುದೇಶಪಾಂಡೆ ನಿರ್ದೇಶನದ ಈ ಚಿತ್ರದ ಅದ್ದೂರಿತನ ಎಂಥಾದ್ದೆಂಬುದಕ್ಕೆ ಹಾಡುಗಳೇ ಸೂಕ್ತ ಉದಾಹರಣೆಯಾಗಿ ಎಲ್ಲೆಡೆ ಹರಿದಾಡುತ್ತಿವೆ. ಬಹುಶಃ ಓರ್ವ ಹೊಸಾ ಹೀರೋನನ್ನು ನಂಬಿಕೊಂಡು ಇಷ್ಟು ದೊಡ್ಡ ಮಟ್ಟದ ಬಜೆಟ್ಟಿನಲ್ಲಿ ತಯಾರಾದ ಕನ್ನಡದ ಮೊದಲ ಸಿನಿಮಾ ಪಡ್ಡೆಹುಲಿಯೇ ಇರಬೇಕು!

    ಹೊಸಾ ಹೀರೋ ಅಂದರೇನೇ ಬೆಚ್ಚಿಬಿದ್ದು ಹಿಂದೆ ಸರಿಯೋರೇ ಹೆಚ್ಚು. ಆದರೆ ಹೊಸಾ ಹುಡುಗ ಶ್ರೇಯಸ್ ನಾಯಕನಾಗಿರೋ ಪಡ್ಡೆಹುಲಿ ಚಿತ್ರಕ್ಕೆ ನಿರ್ಮಾಪಕ ಎಂ.ರಮೇಶ್ ರೆಡ್ಡಿಯವರು ಹಣ ಖರ್ಚು ಮಾಡುತ್ತಿರೋ ಪರಿ ಕಂಡು ಗಾಂಧಿನಗರದ ಮಂದಿಯೇ ಅವಾಕ್ಕಾಗಿದ್ದಾರೆ. ಪ್ರೇಕ್ಷಕರೂ ಅಚ್ಚರಿಗೊಂಡಿದ್ದಾರೆ. ಆದರೆ ನಿರ್ಮಾಪಕ ರಮೇಶ್ ರೆಡ್ಡಿಯವರದ್ದು ಮಾತ್ರ ಹೇಗಾದರೂ ಸರಿ, ಸಿನಿಮಾ ಅಚ್ಚಕಟ್ಟಾಗಿ, ಅದ್ದೂರಿಯಾಗಿ ಮೂಡಿ ಬರಬೇಕೆನ್ನುವುದೊಂದೇ ಅಚಲ ಉದ್ದೇಶ!

    ಚಿತ್ರೀಕರಣಕ್ಕೂ ಮುನ್ನ ಮಾಡಿರೋ ಪ್ಲಾನಿಗಿಂತಲೂ ಕೊಂಚ ಕಾಸು ಖರ್ಚಾದರೂ ಕೊಸರಾಡೋದು ಮಾಮೂಲು. ನಿರ್ಮಾಪಕರ ಬಾಧೆಯೂ ಅಂಥಾದ್ದೇ ಇರುತ್ತೆ. ಆದರೆ ರಮೇಶ್ ರೆಡ್ಡಿಯವರ ಔದಾರ್ಯ ಕಂಡು ನಿರ್ದೇಶಕ ಗುರುದೇಶಪಾಂಡೆ ಸೇರಿದಂತೆ ಇಡೀ ಚಿತ್ರತಂಡವೇ ಅಚ್ಚರಿಗೊಂಡಿದೆ. ಯಾಕೆಂದರೆ ಪಡ್ಡೆಹುಲಿಯನ್ನು ಅಂದಗಾಣಿಸೋ ಯಾವ ಐಡಿಯಾಗಳಿಗೂ ರಮೇಶ್ ರೆಡ್ಡಿಯವರು ಬೇಡ ಅನ್ನಲೇ ಇಲ್ಲ. ಅವರು ಅಷ್ಟೊಂದು ಪ್ರೀತಿ, ಕಾಳಜಿ ತೋರಿಸದೇ ಇದ್ದಿದ್ದರೆ ಬರೋಬ್ಬರಿ ಹನ್ನೊಂದು ಹಾಡುಗಳು ರೂಪುಗೊಳ್ಳೋದೂ ಸಾಧ್ಯವಿರುತ್ತಿರಲಿಲ್ಲ!

    ನಿರ್ಮಾಪಕರು ಹೀಗೆ ಪ್ರೀತಿಯಿಂದ ಆರೈಕೆ ಮಾಡಿ ಮೈ ನೇವರಿಸುತ್ತಾ ಬಂದ ಕಾರಣದಿಂದಲೇ ಪಡ್ಡೆಹುಲಿ ಈವತ್ತು ಕೊಬ್ಬಿ ಘರ್ಜಿಸುತ್ತಿದೆ. ಆದ್ದರಿಂದಲೇ ಪ್ರೇಕ್ಷಕರೆಲ್ಲ ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

  • ದಾಖಲೆ ಮೊತ್ತಕ್ಕೆ ಸೇಲಾಯ್ತು ಪಡ್ಡೆಹುಲಿಯ ಹಿಂದಿ ಡಬ್ಬಿಂಗ್ ಹಕ್ಕು!

    ದಾಖಲೆ ಮೊತ್ತಕ್ಕೆ ಸೇಲಾಯ್ತು ಪಡ್ಡೆಹುಲಿಯ ಹಿಂದಿ ಡಬ್ಬಿಂಗ್ ಹಕ್ಕು!

    ಬೆಂಗಳೂರು: ಹೊಸಾ ಹೀರೋ ಎಂಟ್ರಿ ಕೊಡುತ್ತಿರುವ ಚಿತ್ರವೊಂದು ಈ ಮಟ್ಟಿಗೆ ಸೆನ್ಸೇಷನ್ ಕ್ರಿಯೇಟ್ ಮಾಡಲು ಹೇಗೆ ಸಾಧ್ಯ ಅಂತೊಂದು ಅಚ್ಚರಿಗೆ ಕಾರಣವಾಗಿರೋ ಚಿತ್ರ ಪಡ್ಡೆಹುಲಿ. ಹಾಡುಗಳ ಮೂಲಕ ಭರ್ಜರಿಯಾಗೇ ಸೌಂಡ್ ಮಾಡುತ್ತಿರೋ ಈ ಸಿನಿಮಾ ಡಬ್ಬಿಂಗ್ ರೈಟ್ಸ್ ಸೇಲಾದ ಮೊತ್ತ ನೋಡಿದರೆ ಯಾರಾದರೂ ಬೆರಗಾಗದೆ ಬೇರೆ ದಾರಿಗಳಿಲ್ಲ.

    ಎಂ. ರಮೇಶ್ ರೆಡ್ಡಿ ನಿರ್ಮಾಣ ಮಾಡಿರೋ ಪಡ್ಡೆಹುಲಿ ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್ 2.36 ಕೋಟಿಗೆ ಮಾರಾಟವಾಗಿದೆ. ನಿರ್ಮಾಪಕ ಕೆ ಮಂಜು ಅವರ ಪುತ್ರ ಶ್ರೇಯಸ್ ಅಭಿನಯದ ಈ ಚಿತ್ರವನ್ನು ಇಷ್ಟು ದೊಡ್ಡ ಮಟ್ಟಕ್ಕೆ ಚೆನ್ನೈ ಮೂಲದ ಸಂಸ್ಥೆಯೊಂದು ಖರೀದಿಸಿದೆ. ಎಸ್ಪಿಎಂ ಆಟ್ರ್ಸ್ ಎಲ್ ಎಲ್ ಬಿ ಎಂಬ ಸಂಸ್ಥೆ ಪಡ್ಡೆಹುಲಿ ಬಿಡುಗಡೆಪೂರ್ವದಲ್ಲಿಯೇ ಸೃಷ್ಟಿಸಿರೋ ಹವಾ ಕಂಡು ಇಂಥಾ ಡಬ್ಬಿಂಗ್ ಹಕ್ಕನ್ನು ಖರೀದಿ ಮಾಡಿದೆ.

    ಈ ವಿಚಾರವನ್ನು ಖುದ್ದು ನಿರ್ದೇಶಕ ಗುರು ದೇಶಪಾಂಡೆ ಅವರೇ ಸ್ಪಷ್ಟಪಡಿಸಿದ್ದಾರೆ. ಸಾಮಾನ್ಯವಾಗಿ ಸ್ಟಾರ್ ನಟರ ಚಿತ್ರಗಳು ಹೀಗೆ ಭಾರೀ ಮೊತ್ತಕ್ಕೆ ಸೇಲ್ ಆಗೋದಿದೆ. ಆದರೆ ಹೊಸಾ ನಟರ ಚಿತ್ರಗಳ ಡಬ್ಬಿಂಗ್ ರೈಟ್ಸ್, ಟಿವಿ ರೈಟ್ಸ್ ಗೂ ಅಲೆದಾಡುವ ವಾತಾವರಣವಿದೆ. ಆದರೆ ಪಡ್ಡೆಹುಲಿ ಚಿತ್ರದ ಡಬ್ಬಿಂಗ್ ರೈಟ್ಸ್ ಸ್ಟಾರ್ ನಟರ ಸಿನಿಮಾಗಳಿಗೆ ಸರಿಸಮನಾದ ಮೊತ್ತಕ್ಕೆ ಮಾರಾಟವಾಗಿದೆ.

    ಕನ್ನಡ ಚಿತ್ರರಂಗದಲ್ಲಿ ಹೊಸಾ ಹುಡುಗ ನಾಯಕನಾಗಿರೋ ಚಿತ್ರವೊಂದು ಇಂಥಾ ಬ್ಯುಸಿನೆಸ್ ಮಾಡಿರೋದು ಇದೇ ಮೊದಲು. ಇದು ಪಡ್ಡೆಹುಲಿಯ ಗೆಲುವಿನ ಮುನ್ಸೂಚನೆ. ಈ ಸಿನಿಮಾದ ಪ್ರಭೆ ರಾಜ್ಯದ ಗಡಿ ದಾಟಿ ಎಲ್ಲ ಚಿತ್ರರಂಗಗಳಿಗೂ ತಲುಪಿಕೊಂಡಿರೋ ಸೂಚನೆಯೂ ಹೌದು.

  • ಪಡ್ಡೆಹುಲಿಯ ಭಯ ನಿವಾರಿಸಿದರು ಕ್ರೇಜಿಸ್ಟಾರ್!

    ಪಡ್ಡೆಹುಲಿಯ ಭಯ ನಿವಾರಿಸಿದರು ಕ್ರೇಜಿಸ್ಟಾರ್!

    ಬೆಂಗಳೂರು: ಸದ್ಯ ಕನ್ನಡ ಚಿತ್ರರಂಗದ ಹಿರಿಯ ನಟ ಅನ್ನೋ ಪಟ್ಟವನ್ನು ಅಲಂಕರಿಸಿರುವವರು ಕ್ರೇಜಿಸ್ಟಾರ್ ರವಿಚಂದ್ರನ್. ಈಗೀಗ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿರುವ ಪೀಳಿಗೆಯವರು ರವಿಚಂದ್ರನ್ ಅವರ ಸಿನಿಮಾಗಳನ್ನು ನೋಡುತ್ತಾ, ಅವರ ಬಗ್ಗೆ ತಿಳಿದುಕೊಳ್ಳುತ್ತಾ ಬೆಳೆದ ಕಾರಣಕ್ಕೋ ಏನೋ ಸಾಕಷ್ಟು ಯುವನಟ, ನಟಿಯರು ಅವರ ಬಗ್ಗೆ ಅತಿಯಾದ ಪ್ರೀತಿಯ ಜೊತೆಗೆ ಭಯವನ್ನೂ ಹೊಂದಿರುತ್ತಾರೆ. ಇಷ್ಟು ದೊಡ್ಡ ನಟ, ತಂತ್ರಜ್ಞನ ಜೊತೆ ಹೇಗೆ ಕೆಲಸ ಮಾಡುವುದು ಅನ್ನೋ ಸಹಜ ಆತಂಕ ಅವರದ್ದಾಗಿರುತ್ತದೆ. ಈ ಹಿಂದೆ ಕೂಡಾ ಸಾಕಷ್ಟು ಯುವ ನಟರು ಮೊದಲ ಬಾರಿಗೆ ರವಿ ಸರ್ ಜೊತೆಗೆ ತೆರೆ ಹಂಚಿಕೊಂಡ ಅನುಭವಗಳನ್ನು ಹೇಳಿಕೊಂಡಿದ್ದಾರೆ. ಹಾಗೆಯೇ ಪಡ್ಡೆ ಹುಲಿ ಸಿನಿಮಾದ ನಾಯಕನಟ ಶ್ರೇಯಸ್ ಕೂಡಾ ರವಿಚಂದ್ರನ್ ಅವರ ಜೊತೆಗೆ ಮೊದಮೊದಲು ಸೆಟ್‍ನಲ್ಲಿ ಪಾಲ್ಗೊಂಡ ವಿಚಾರವನ್ನು ಹೇಳುತ್ತಿದ್ದರು.

    ‘ರವಿ ಸರ್ ಮುಂದೆ ಮೊದಮೊದಲು ನಟನೆ ಮಾಡುವುದು ಸಖತ್ ಕಷ್ಟ ಅನ್ನಿಸಿತ್ತು. ಅವರ ಮುಂದೆ ಮೇಕಪ್ ಹಾಕಿಸಿಕೊಳ್ಳೋದೂ ಮುಜುಗರ ಅನಿಸಿತ್ತು. ಅದಕ್ಕಾಗಿ ಟಚಪ್ ಹುಡುಗನನ್ನು ಕರೆದು ರವಿ ಸರ್ ಮುಂದೆ ಬಂದು ಟಚಪ್ ಮಾಡಬೇಡ. ನಾನೇ ಆ ಕಡೆ ಬಂದು ಟಚಪ್ ಮಾಡಿಸಿಕೊಳ್ತೀನಿ ಅಂದಿದ್ದೆ. ನಾನು ಅವರ ಮುಂದೆ ಆ್ಯಕ್ಟ್ ಮಾಡಲು ಕಷ್ಟ ಪಡುತ್ತಿದ್ದೀನಿ ಅನ್ನೋದು ಅವರಿಗೆ ಗೊತ್ತಾಗಲು ತುಂಬಾ ಹೊತ್ತೇನೂ ಬೇಕಾಗಿರಲಿಲ್ಲ. ನನ್ನಂತೆಯೇ ನಟಿಸಲು ಬಂದು ಅವರ ಮುಂದೆ ಒದ್ದಾಡೋರನ್ನು ಅವರು ಕೂಡಾ ಬೇಕಾದಷ್ಟು ಬಾರಿ ನೋಡಿರುತ್ತಾರೆ. ಹೀಗಾಗಿ ನನ್ನ ತಳಮಳವನ್ನು ಅವರೇ ಅರಿತುಕೊಂಡವರಂತೆ, ನನ್ನನ್ನು ಕರೆದುಕೊಂಡು ಹೋಗಿ ದೂರದಲ್ಲಿ ಕೂರಿಸಿಕೊಂಡು ಆತ್ಮೀಯವಾಗಿ ಮಾತಾಡಿಸಿ, ಒಳ್ಳೊಳ್ಳೆ ಟಿಪ್ಸ್ ಕೊಡೋ ಮೂಲಕ ರವಿ ಸರ್ ನನ್ನ ಭಯವನ್ನೆಲ್ಲಾ ಹೋಗಲಾಡಿಸಿದರು. ಆನಂತರ ಡೈರೆಕ್ಟರ್ ಗುರುದೇಶಪಾಂಡೆ ಅವರ ಆಜ್ಞೆಯಂತೆ ದೃಶ್ಯಗಳಿಗೆ ಹೇಗೆ ಬೇಕೋ ಹಾಗೆ ನಟಿಸಲು ಹೆಲ್ಪ್ ಆಯಿತು. ಈ ಸಿನಿಮಾವನ್ನು ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿದ್ದು, ರವಿಚಂದ್ರನ್ ಅವರ ಪ್ರೇಮಲೋಕದ ಥರಾ ಅದ್ಧೂರಿಯಾಗಿ ಮೂಡಿಬರಲು ಎಲ್ಲ ರೀತಿಯ ಸಹಾಯ ಮಾಡಿದ್ದಾರೆ’ ಅನ್ನೋದು ನಾಯಕನಟ ಶ್ರೇಯಸ್ ಮಾತು.

    ಶ್ರೇಯಸ್ ಕನ್ನಡದ ಗಂಡುಗಲಿ ನಿರ್ಮಾಪಕ ಎಂದೇ ಹೆಸರಾದ ಕೆ. ಮಂಜು ಅವರ ಮಗ ಅನ್ನೋದು ನಿಮಗೆಲ್ಲಾ ಗೊತ್ತಿರುತ್ತದೆ. ಈ ಸಿನಿಮಾದಲ್ಲಿ ರವಿಚಂದ್ರನ್ ಶ್ರೇಯಸ್‍ಗೆ ತಂದೆಯಾಗಿ ನಟಿಸಿದ್ದಾರೆ. ಮಗ ದೊಡ್ಡ ಹಾಡುಗಾರನಾಗಬೇಕು ಎಂದು ಕನಸು ಕಂಡು ಅದಕ್ಕೆ ಪೂರಕವಾಗಿ ಸಹಕರಿಸುವ ಪಾತ್ರದಲ್ಲಿ ರವಿಚಂದ್ರನ್ ನಟಿಸಿದ್ದಾರೆ. ತೆರೆ ಹಿಂದೆ ಕೂಡಾ ಯುವ ನಟನನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಉತ್ತಮವಾಗಿ ನಟಿಸುವಂತೆ ಮಾಡಿರುವುದು ಅವರ ದೊಡ್ಡಗುಣ.

  • ಪಡ್ಡೆಹುಲಿ ಟ್ರೈಲರ್ ಲಾಂಚ್ ಮಾಡಲಿದ್ದಾರೆ ದರ್ಶನ್!

    ಪಡ್ಡೆಹುಲಿ ಟ್ರೈಲರ್ ಲಾಂಚ್ ಮಾಡಲಿದ್ದಾರೆ ದರ್ಶನ್!

    ಬೆಂಗಳೂರು: ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋ ಹೊಸಬರ ಬೆನ್ತಟ್ಟಿ ಪ್ರೋತ್ಸಾಹಿಸುತ್ತಾ ಸಹಕಾರ ನೀಡುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ದೊಡ್ಡ ಗುಣ. ಅದೇ ರೀತಿ ಅವರು ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಗೂ ಕೂಡಾ ಆರಂಭದಿಂದಲೂ ಬೆಂಬಲ ಸೂಚಿಸುತ್ತಾ ಬಂದಿದ್ದಾರೆ.

    ಇದೀಗ ಶ್ರೇಯಸ್ ಅಭಿನಯದ ಪಡ್ಡೆಹುಲಿ ಚಿತ್ರದ ಟ್ರೈಲರ್ ಅನ್ನು ಖುದ್ದು ದರ್ಶನ್ ಅವರೇ ಬಿಡುಗಡೆ ಮಾಡಲಿದ್ದಾರೆ!

    ನಾಳೆ ಅಂದರೆ ಫೆಬ್ರವರಿ 26ರಂದು ಸಂಜೆ 6 ಗಂಟೆಗೆ ಈ ಟ್ರೈಲರ್ ಅನಾವರಣಗೊಳ್ಳಲಿದೆ. ಪಿಆರ್‍ಕೆ ಸಂಸ್ಥೆಯ ಯೂಟ್ಯೂಬ್ ಚಾನಲ್ ಮೂಲಕ ದರ್ಶನ್ ಇದನ್ನು ಅನಾವರಣಗೊಳಿಸಲಿದ್ದಾರೆ. ಈ ಹಿಂದೆ ಪಡ್ಡೆಹುಲಿ ಚಿತ್ರದ ಒಂದು ಹಾಡನ್ನು ನೋಡಿ ಮೆಚ್ಚಿಕೊಂಡಿದ್ದ ದರ್ಶನ್ ಮೆಚ್ಚುಗೆಯ ಮಾತಾಡಿದ್ದರು. ಶ್ರೇಯಸ್ ಸಾಕಷ್ಟು ತಯಾರಿ ಮಾಡಿಕೊಂಡೇ ಅಖಾಡಕ್ಕಿಳಿದಿದ್ದರ ಬಗ್ಗೆ ಭೇಷ್ ಅಂದಿದ್ದರು.

    ಇಂಥಾ ಅಗಾಧವಾದ ಪೂರ್ವ ತಯಾರಿಯೊಂದಿಗೇ ಚಿತ್ರೀಕರಣಗೊಂಡು ಭಾರೀ ಸದ್ದು ಮಾಡುತ್ತಿರೋ ಚಿತ್ರ ಪಡ್ಡೆಹುಲಿ. ತೇಜಸ್ವಿನಿ ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಎಮ್. ರಮೇಶ್ ರೆಡ್ಡಿಯವರು ನಿರ್ಮಾಣ ಮಾಡಿರೋ ಈ ಚಿತ್ರ ಈಗಾಗಲೇ ಹಾಡೂ ಸೇರಿದಂತೆ ನಾನಾ ರೀತಿಯಲ್ಲಿ ಸುದ್ದಿ ಕೇಂದ್ರದಲ್ಲಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೇ ಟ್ರೈಲರ್ ಬಿಡುಗಡೆ ಮಾಡಲು ಮುಂದಾಗೋ ಮೂಲಕ ಗುರುದೇಶಪಾಂಡೆ ನಿರ್ದೇಶನದ ಪಡ್ಡೆಹುಲಿಯ ಖದರ್ ಮತ್ತಷ್ಟು ಹೆಚ್ಚಿದಂತಾಗಿದೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರೇಮಧ್ಯಾನಕ್ಕೆ ಸಾಥ್ ನೀಡುವಂತಿದೆ ಪಡ್ಡೆಹುಲಿಯ ಸಾಂಗ್!

    ಪ್ರೇಮಧ್ಯಾನಕ್ಕೆ ಸಾಥ್ ನೀಡುವಂತಿದೆ ಪಡ್ಡೆಹುಲಿಯ ಸಾಂಗ್!

    ಬೆಂಗಳೂರು: ಪ್ರತೀ ಹಾಡುಗಳನ್ನೂ ಕೂಡಾ ವಿಶೇಷವಾಗಿಯೇ ಹೊರ ತರಬೇಕೆಂಬ ಇರಾದೆ ಪಡ್ಡೆಹುಲಿ ಚಿತ್ರದ ನಿರ್ದೇಶಕ ಗುರುದೇಶಪಾಂಡೆ ಅವರದ್ದು. ಇಂಥಾ ಇಂಗಿತ ಮತ್ತು ಶ್ರದ್ಧೆಯ ಕಾರಣದಿಂದಲೇ ಈವರೆಗೆ ಹೊರ ಬಂದಿರೋ ಹಾಡುಗಳೆಲ್ಲವೂ ಹೊಸಾ ಅಲೆಯೊಂದಿಗೆ ಪ್ರೇಕ್ಷಕರ ಮನಸು ತಟ್ಟಿದೆ. ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಇದಂತೂ ಪಕ್ಕಾ ಡಿಫರೆಂಟಾಗಿದೆ!

    ನಿರ್ದೇಶಕ ಗುರುದೇಶಪಾಂಡೆಯವರ ಕನಸಿಗೆ ಸದಾ ಸಾಥ್ ನೀಡುತ್ತಾ ಬಂದಿರುವವರು ಅಜನೀಶ್ ಲೋಕನಾಥ್. ಸಮ್ಮೋಹಕವಾದ ಹಾಡುಗಳನ್ನೇ ನೀಡುತ್ತಾ ಬಂದಿರೋ ಅಜನೀಶ್ ಇದೀಗ ಪ್ರಸಿದ್ಧ ಭಾವಗೀತೆಯೊಂದಕ್ಕೆ ಹೊಸ ಸ್ಪರ್ಶ ನೀಡಿದ್ದಾರೆ. ಬಿ.ಆರ್.ಲಕ್ಷ್ಮಣರಾಯರು ಬರೆದಿರುವ ಹೇಳಿ ಹೋಗು ಕಾರಣ ಎಂಬ ಭಾವ ಗೀತೆಗೆ ಬೆರಗಾಗಿಸುವಂಥಾ ಸಂಗೀತ ನೀಡಿದ್ದಾರೆ.

    ಸಿದ್ಧಾರ್ಥ್ ಮಹಾದೇವನ್ ಮತ್ತು ಗುಬ್ಬಿ ಹಾಡಿರುವ ಈ ಹಾಡೀಗ ಅನಾವರಣಗೊಂಡಿದೆ. ಒಂದು ಕಾಲದಲ್ಲಿ ಹೇಳಿ ಹೋಗು ಕಾರಣ ಎಂಬ ಈ ಹಾಡು ಸಿ.ಅಶ್ವತ್ಥ್ ಅವರ ಕಂಠದಲ್ಲಿ ಮಾಡಿದ್ದ ಮೋಡಿ ಸಣ್ಣದೇನಲ್ಲ. ಅದು ಸಾರ್ವಕಾಲಿಕ. ಇದೀಗ ಅಜನೀಶ್ ಅದೇ ಹಾಡನ್ನು ಈ ತಲೆಮಾರಿನ ಮನಸ್ಥಿತಿಗೆ ಒಪ್ಪುವಂಥಾ ಸಂಗೀತದೊಂದಿಗೆ ಸಿದ್ಧಗೊಳಿಸಿದ್ದಾರೆ. ಈ ಹಾಡೀಗ ಈ ಹಿಂದೆ ಬಿಡುಗಡೆಯಾಗಿದ್ದ ಪಡ್ಡೆ ಹುಲಿ ಹಾಡುಗಳನ್ನೇ ಮೀರಿಸುವಂತೆ ಎಲ್ಲೆಡೆ ಹರಿದಾಡುತ್ತಿದೆ.

    ಈ ಮೂಲಕವೇ ಶ್ರೇಯಸ್ ಅಭಿನಯದ ಪಡ್ಡೆಹುಲಿ ಮತ್ತೊಂದು ಥರದಲ್ಲಿ ಅಬ್ಬರಿಸುತ್ತಿದೆ. ಬಿಡುಗಡೆಯ ಹಾದಿಯಲ್ಲಿರೋ ಈ ಸಿನಿಮಾದ ಬಗೆಗಿರುವ ಕ್ರೇಜ್ ಈಗ ಹಾಡುಗಳ ಮೂಲಕವೇ ಮತ್ತಷ್ಟು ಲಕಲಕಿಸಲಾರಂಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರೇಮಪಾಠ ಹೇಳಲಿದೆ ಪಡ್ಡೆಹುಲಿ ಹಾಡು!

    ಪ್ರೇಮಪಾಠ ಹೇಳಲಿದೆ ಪಡ್ಡೆಹುಲಿ ಹಾಡು!

    ಬೆಂಗಳೂರು: ಇನ್ನೇನು ವಾರ ಕಳೆದರೆ ಪ್ರೇಮಿಗಳ ದಿನ ಬರುತ್ತೆ. ತುಸು ಕಂಪಿಸುತ್ತಲೇ ಅದೆಷ್ಟೋ ಯುವ ಮನಸುಗಳು ಆ ದಿನದ ಪ್ರೇಮ ಪರೀಕ್ಷೆಗೆ ತಯಾರಾಗುತ್ತಿವೆ. ಇಂಥಾ ಯಾವ ಭಯವೂ ಇಲ್ಲದೇ ಯಶಸ್ವಿಯಾಗಿ ಉತ್ತಮ ಶ್ರೇಣಿಯೊಂದಿಗೇ ಈ ಪರೀಕ್ಷೆ ಪಾಸು ಮಾಡಬಹುದಾದ ಸೂತ್ರವೊಂದನ್ನು ಪಡ್ಡೆಹುಲಿ ಹಾಡು ಹೊತ್ತು ತರುತ್ತಿದೆ. ಪ್ರೇಮಿಗಳಿಗೆಂದೇ ತಯಾರಾಗಿರೋ ಈ ಹಾಡಿನ ಮೂಲಕ ಪಡ್ಡೆಹುಲಿಯ ಪ್ರೇಮ ಪಾಂಡಿತ್ಯವೂ ಜಾಹೀರಾಗಲಿದೆ.

    ವ್ಯಾಲೆಂಟೈನ್ಸ್ ಡೇ ಸ್ಪೆಷಲ್ ಎಂಬಂಥಾ ಈ ಹಾಡನ್ನು ಇದೇ ಫೆಬ್ರವರಿ 11ರಂದು ಸಂಜೆ 7 ಘಂಟೆಗೆ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ವೀಡಿಯೋ ಸಾಂಗ್ ಪ್ರೇಮ ಪರೀಕ್ಷೆಯನ್ನ ಯಶಸ್ವಿಯಾಗಿ ಎದುರಿಸೋ ಸೂತ್ರಗಳು, ಅಮೂಲ್ಯವಾದ ಟಿಪ್ಸ್ ಗಳನ್ನೂ ಹೊಂದಿದೆಯಂತೆ.

    ಇದು ನಿರ್ದೇಶಕ ಗುರುದೇಶಪಾಂಡೆಯವರ ಬತ್ತಳಿಕೆಯಿಂದ ಹೊರ ಬರುತ್ತಿರುವ ಮತ್ತೊಂದು ಬಾಣ. ಇದೊಂಥರಾ ಪ್ರತೀ ಯುವ ಮನಸುಗಳನ್ನು ನೇರವಾಗಿ ತಲುಪುವಂಥಾ ಪ್ರೇಮ ಬಾಣವೂ ಹೌದು. ಈಗಾಗಲೇ ಹಾಡುಗಳ ಮೂಲಕ ಪಡ್ಡೆಹುಲಿ ಯುವ ಮನಸುಗಳನ್ನ ಆವರಿಸಿಕೊಂಡಿದೆ. ಈ ಕಾರಣದಿಂದಲೇ ಈ ವರೆಗೆ ಬಿಡುಗಡೆಯಾಗಿರೋ ಎರಡು ಹಾಡುಗಳು ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್‍ನಲ್ಲಿವೆ.

    ಪ್ರೇಮಿಗಳಿಗೆ ಗಿಫ್ಟ್ ಎಂಬಂತೆ ಬಿಡುಗಡೆಗೆ ರೆಡಿಯಾಗಿರೋ ಹಾಡೂ ಕೂಡಾ ಅಂಥಾದ್ದೇ ಕಮಾಲ್ ಸೃಷ್ಟಿಸೋ ಭರವಸೆ ಚಿತ್ರತಂಡದಲ್ಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಪಡ್ಡೆಹುಲಿ: ಬಿಡುಗಡೆಯಾಯ್ತು ಮತ್ತೊಂದು ಜಬರ್ದಸ್ತ್ ಹಾಡು!

    ಪಡ್ಡೆಹುಲಿ: ಬಿಡುಗಡೆಯಾಯ್ತು ಮತ್ತೊಂದು ಜಬರ್ದಸ್ತ್ ಹಾಡು!

    ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ ಮೇಲಿನ ಅತೀವ ಪ್ರೀತಿಯಿಂದ ತಯಾರಾಗಿರೋ ಪಡ್ಡೆ ಹುಲಿಯ ಸಾಂಗು ಹೊರ ಬಂದಿದೆ. ಪಿಆರ್‍ಕೆ ಸಂಸ್ಥೆಯ ಯೂಟ್ಯೂಬ್ ಚಾನೆಲ್ ಮೂಲಕ ಈ ಹಾಡು ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. ಪ್ರೇಕ್ಷಕರು, ವಿಷ್ಣು ಅಭಿಮಾನಿಗಳು ಈ ಹಾಡನ್ನು ಭರ್ಜರಿಯಾಗಿಯೇ ಸ್ವಾಗತಿಸಿದ್ದಾರೆ.

    ನಾ ತುಂಬಾ ಹೊಸಬ ಬಾಸು ಎಂಬ ಈ ಹಾಡನ್ನು ನಿರ್ಮಾಪಕ ಕೆ.ಮಂಜು ವಿಷ್ಣುವರ್ಧನ್ ಅವರಿಗೆ ಅರ್ಪಿಸಿದ್ದಾರೆ. ಮೊನ್ನೆ ತಾನೇ ವಿಷ್ಣು ಅಭಿಮಾನಿಗಳಿಗೆಂದೇ ಈ ಹಾಡಿನ ವಿಶೇಷ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ಇದನ್ನು ಕಂಡು ಅಭಿಮಾನಿಗಳೆಲ್ಲ ಕುಣಿದು ಕುಪ್ಪಳಿಸಿದ್ದರು. ಈ ಹಾಡೀಗ ಪ್ರೇಕ್ಷಕರನ್ನೂ ತಲುಪಿಕೊಂಡಿದೆ.

    ಕೆ.ಮಂಜು ಒಂದು ಕಾಲದಲ್ಲಿ ವಿಷ್ಣು ವರ್ಧನ್ ಅವರ ಆಪ್ತ ವಲಯದಲ್ಲಿದ್ದವರು. ಅಷ್ಟಕ್ಕೂ ಪಡ್ಡೆಹುಲಿಯ ಕಥೆ ಕೂಡಾ ಸ್ವತಃ ವಿಷ್ಣು ಅವರೇ ಹೇಳಿದ್ದ ಒಂದೆಳೆಯನ್ನ ಆಧರಿಸಿದೆ. ನಿರ್ದೇಶಕ ಗುರು ದೇಶಪಾಂಡೆ ಅದನ್ನು ಬಲು ಆಸ್ಥೆಯಿಂದಲೇ ಚಿತ್ರೀಕರಿಸಿದ್ದಾರೆ. ಪಡ್ಡೆಹುಲಿಯ ಪ್ರತಿಯೊಂದು ವಿಚಾರದಲ್ಲಿಯೂ ಕೂಡಾ ಮಂಜು ವಿಷ್ಣು ಮೇಲಿನ ತಮ್ಮ ಪ್ರೀತಿ ಮತ್ತು ಅಭಿಮಾನವನ್ನ ತೋರ್ಪಡಿಸಿಕೊಳ್ಳುತ್ತಿದ್ದಾರೆ.

    ಇಂಥಾ ಗಾಢವಾದ ಪ್ರೀತಿಯಿಂದಲೇ ಈಗ ಹೊರ ಬಂದಿರೋ ಹಾಡು ಕೂಡಾ ರೂಪಿಸಲ್ಪಟ್ಟಿದೆ. ಇದು ಪಡ್ಡೆಹುಲಿ ಚಿತ್ರದಲ್ಲಿ ನಾಯಕನನ್ನು ಪರಿಚಯಿಸೋ ಹಾಡು. ನಿಜಕ್ಕೂ ಇದು ಜಬರ್ದಸ್ತಾಗಿ ಮೂಡಿ ಬಂದಿದೆ. ಬಿಡುಗಡೆಯಾದಾಕ್ಷಣವೇ ಅದ್ಧೂರಿ ಸ್ವಾಗತವೂ ಸಿಕ್ಕಿದೆ.