Tag: ಪತನ

  • ರಾಕ್ಷಸ ರಾಜಕಾರಣ ಇತಿಶ್ರೀಯಾಗಿದೆ, ಸಾತ್ವಿಕ ರಾಜಕಾರಣ ಪ್ರಾರಂಭವಾಗಬೇಕಿದೆ – ವಿಶ್ವನಾಥ್

    ರಾಕ್ಷಸ ರಾಜಕಾರಣ ಇತಿಶ್ರೀಯಾಗಿದೆ, ಸಾತ್ವಿಕ ರಾಜಕಾರಣ ಪ್ರಾರಂಭವಾಗಬೇಕಿದೆ – ವಿಶ್ವನಾಥ್

    ಬೆಂಗಳೂರು: ರಾಜ್ಯದಲ್ಲಿನ ರಾಕ್ಷಸ ರಾಜಕಾರಣ ಇತಿಶ್ರೀಯಾಗಿದ್ದು, ಸಾತ್ವಿಕ ರಾಜಕಾರಣ ಪ್ರಾರಂಭವಾಗಬೇಕಿದೆ ಎಂದು ಎಚ್.ವಿಶ್ವನಾಥ್ ತಿಳಿಸಿದ್ದಾರೆ.

    ವಿಶ್ವಾಸ ಮತಯಾಚನೆ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸರ್ಕಾರ ಪತನವಾಗಿದೆ. ಸದ್ಯ ಪುಣೆಯಲ್ಲಿದ್ದೇವೆ, ನಮ್ಮ ಜೊತೆ ಬಂದಿರುವ ಎಲ್ಲ ಶಾಸಕರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಬಿಜೆಪಿ ಜೊತೆ ಸಾತ್ವಿಕ ರಾಜಕಾರಣ ಮಾಡುವ ಕುರಿತು ಹಾಗೂ ಸಾತ್ವಿಕ ವಾತಾವರಣ ಸೃಷ್ಟಿಸುವ ಕುರಿತು ಸಹ ಚರ್ಚಿಸಲಾಗುವುದು ತಿಳಿಸಿದರು.

    ನಮಗೆ ಕೈ ಕೊಟ್ಟು ಹೋದವರು ನಿಮಗೂ ಕೈ ಕೊಡುವುದಿಲ್ಲವೇ ಎಂದು ಸಿಎಂ ಸದನದಲ್ಲಿ ಬಿಜೆಪಿಗೆ ಕೇಳಿದ ಪ್ರಶ್ನೆ ಕುರಿತು ಉತ್ತರಿಸಿದ ಅವರು, ಹೇಳಿದವರೂ ಸಹ ಎಲ್ಲರಿಗೂ ಉದ್ದಕ್ಕೂ ಕೈ ಕೊಟ್ಟೇ ಬಂದವರು. ಸುಮ್ಮನೆ ಬಂದವರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನೀವು ಪಕ್ಷ ದ್ರೋಹದ ರೂವಾರಿ ಎನ್ನಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಪಕ್ಷ ದ್ರೋಹ ಮಾಡಿಲ್ಲ. ಶಾಸಕಾಂಗ ಪಕ್ಷದ ನಾಯಕರಿಗೆ ಹಾಗೂ ಸಿಎಂಗೆ ಈ ಹಿಂದೆಯೇ ತಿಳಿಸಿದ್ದೆ. ನಾನು ಡೀಸೆಂಟ್ ಹಾಕಿದ್ದೇನೆ ಡಿಫೆಕ್ಟ್ ಹಾಕಿಲ್ಲ. ನಾನು ಯಾವತ್ತೂ ಡಿಫೆಕ್ಟ್ ಮಾಡಿಲ್ಲ ಎಂದು ತಿಳಿಸಿದರು.

    ಇಷ್ಟು ವರ್ಷಗಳ ಕಾಲ ಪಕ್ಷದಲ್ಲಿದ್ದುಕೊಂಡು ಇಂತಹ ಪರಿಸ್ಥಿತಿಗೆ ತಂದರಲ್ಲ ಎಂಬ ಕೊರಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೊರಗುವವರು ನಾವಲ್ಲ. ಕುರ್ಚಿಗೆ ಅಂಟಿಕೊಂಡವರು. ನಾವು ಕುರ್ಚಿಗೆ ಅಂಟಿಕೊಂಡಿಲ್ಲ. ನಮಗೆ ಆ ರೀತಿ ಅನಿಸಿಲ್ಲ ಎಂದು ಸ್ಪಷ್ಟಪಡಿಸಿದರು.

    ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ನೋವು ಆಗಿತ್ತು. ಕ್ಷೇತ್ರದ ಅಭಿವೃದ್ಧಿ ಮತ್ತು ಜನತೆಯ ಹಿತಕ್ಕಾಗಿ ಅನಿವಾರ್ಯವಾಗಿ ರಾಜೀನಾಮೆ ನೀಡಿದ್ದೇನೆ ಎಂದು ಅತೃಪ್ತ ಶಾಸಕ ಬಿ.ಸಿ.ಪಾಟೀಲ್ ಪಬ್ಲಿಕ್ ಟಿವಿಗೆ ತಿಳಿಸಿದರು.

    ನನ್ನ ಸ್ವಕ್ಷೇತ್ರವನ್ನು ತೊರೆದು ಒಂದು ತಿಂಗಳಾಗಿದೆ. ಎಂದೂ ನಾನು ಇಷ್ಟು ದಿನ ಕ್ಷೇತ್ರದ ಜನತೆಯೊಂದಿಗೆ ದೂರವಿಲ್ಲ. ಕೂಡಲೇ ಎಲ್ಲರೊಂದಿಗೆ ಚರ್ಚಿಸಿ ಬರುವ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

  • ರಾಜ್ಯದಲ್ಲಿ ಸರ್ಕಾರವಿದೆ ಅನ್ನೋದು ಜನರಿಗೆ ಗೊತ್ತಿಲ್ಲ: ಶೆಟ್ಟರ್

    ರಾಜ್ಯದಲ್ಲಿ ಸರ್ಕಾರವಿದೆ ಅನ್ನೋದು ಜನರಿಗೆ ಗೊತ್ತಿಲ್ಲ: ಶೆಟ್ಟರ್

    ಬೆಂಗಳೂರು: ರಾಜ್ಯದಲ್ಲಿ ಸರ್ಕಾರವಿದೆ ಎನ್ನುವುದು ಜನರಿಗೆ ಗೊತ್ತಿಲ್ಲ, ಇದು ಅಪವಿತ್ರ ಮೈತ್ರಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾಗ್ದಾಳಿ ಮಾಡಿದ್ದಾರೆ.

    ನಗರದ ಡಾಲರ್ಸ್ ಕಾಲೋನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಮೈತ್ರಿ ಸರ್ಕಾರ ರಾಜ್ಯದಲ್ಲಿ ಆಡಳಿತ ಮಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಗುಡುಗಿದ್ದಾರೆ.

    ಮೈತ್ರಿ ಸರ್ಕಾರ ಪತನವಾಗುವುದು ಖಚಿತ. ಮೈತ್ರಿ ನಾಯಕರು ಏನೇ ಸ್ಟಂಟ್ ಮಾಡಿದರೂ ಮೈತ್ರಿ ಸರ್ಕಾರದಲ್ಲಿ ಅಸಮಾಧಾನ ಭಾರೀ ದೊಡ್ಡ ಪ್ರಮಾಣದಲ್ಲಿದೆ. ಈಗ ಸಚಿವ ಸಂಪುಟ ಪುನಾರಚನೆ ಮಾಡುತ್ತೇವೆ ಎಂದು ಹೇಳುತ್ತಾರೆ. ಈಗ ಮಾಡಿದರೆ ನಾಲ್ಕು ಮಂದಿ ಸಂಪುಟದಿಂದ ಹೊರಗೆ ಹೋಗುವುದು ಒಳಗೆ ಬರುವುದು ಇದೇ ಆಗುತ್ತದೆ. ಯಾರೇ ಏನೇ ಕಸರತ್ತು ಮಾಡಿದರೂ ಈಗ ತೆರೆ ಎಳೆಯಲಾಗುತ್ತದೆ. ಮೈತ್ರಿಯಲ್ಲಿರುವ ಭಿನ್ನಮತೀಯರೇ ಸರ್ಕಾರಕ್ಕೆ ಗಡುವು ಕೊಟ್ಟಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25+1 ಸ್ಥಾನ ಗೆದ್ದಿದೆ. ಈ ಫಲಿತಾಂಶವನ್ನು ನೋಡಿ ಇವರಿಗೆ ನೈತಿಕತೆ ಇದ್ದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕಿತ್ತು ಎಂದು ಹೇಳಿದರು.

    ಮೈತ್ರಿ ಸರ್ಕಾರದಿಂದ ಜಿಂದಾಲ್ ಕಂಪನಿಗೆ 3,600 ಎಕರೆ ಜಮೀನು ಮಾರಾಟ ಕ್ರಯಪತ್ರ ಹಸ್ತಾಂತರ ವಿಚಾರದ ಬಗ್ಗೆ ಕೇಳಿದಾಗ, ಈ ಸರ್ಕಾರ ಯಾವಾಗ ಹೋಗುತ್ತದೋ ಗೊತ್ತಿಲ್ಲ. ಸರ್ಕಾರದ ಪತನಕ್ಕೆ ಅಂತಿಮ ಕ್ಷಣ ಬಂದಿದೆ. ಹೀಗಾಗಿ ಕೊನೆ ಕ್ಷಣದಲ್ಲಿ ಲೂಟಿ ಹೊಡೆಯುತ್ತಿದ್ದಾರೆ. ಮೈತ್ರಿ ಸರ್ಕಾರ ಸರ್ಕಾರದ ಜಮೀನು ಲೂಟಿ ಮಾಡುತ್ತಿದೆ. ಇದೊಂದು ಹಗರಣ ಆಗುತ್ತದೆ ಎಂದು ಜಗದೀಶ್ ಶೆಟ್ಟರ್ ಆರೋಪ ಮಾಡಿದರು.

  • ಸಮ್ಮಿಟ್ ಏರ್‌ಫ್ಲೈಟ್ ಪತನ- ಇಬ್ಬರ ದುರ್ಮರಣ, ಐವರಿಗೆ ಗಾಯ!

    ಸಮ್ಮಿಟ್ ಏರ್‌ಫ್ಲೈಟ್ ಪತನ- ಇಬ್ಬರ ದುರ್ಮರಣ, ಐವರಿಗೆ ಗಾಯ!

    ನವದೆಹಲಿ: ನೇಪಾಳದ ಟೆನ್ಜಿಂಗ್-ಹಿಲರಿ ವಿಮಾನ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ಸಮ್ಮಿಟ್ ಏರ್ ಫ್ಲೈಟ್ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.

    ಟೆನ್ಜಿಂಗ್-ಹಿಲರಿ ವಿಮಾನ ನಿಲ್ದಾಣದಲ್ಲಿ ನಿಲುಗಡೆ ಮಾಡಲ್ಪಟ್ಟ ಚಾಪರ್ ವಿಮಾನದೊಂದಿಗೆ ಸಮ್ಮಿಟ್ ಏರ್ ಫ್ಲೈಟ್ ಘರ್ಷಣೆಯಾಗಿತ್ತು. ಆದ್ದರಿಂದ ವಿಮಾನ ಪತನವಾಗಿರಬಹುದು ಎಂದು ಶಂಕಿಸಲಾಗಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಆದ್ರೆ ವಿಮಾನದಲ್ಲಿ ಎಷ್ಟು ಮಂದಿ ಪ್ರಯಾಣಿಸುತ್ತಿದ್ದರು ಹಾಗೂ ವಿಮಾನ ಪತನವಾಗಲು ಕಾರಣವೇನು ಎಂಬ ನಿಖರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

  • ರಾಜಸ್ಥಾನದಲ್ಲಿ ಮಿಗ್-27 ವಿಮಾನ ಪತನ: ಪೈಲಟ್ ಪಾರು

    ರಾಜಸ್ಥಾನದಲ್ಲಿ ಮಿಗ್-27 ವಿಮಾನ ಪತನ: ಪೈಲಟ್ ಪಾರು

    ಜೈಪುರ್: ಭಾರತೀಯ ವಾಯುಪಡೆಯ ಮಿಗ್ 27 ಯುದ್ಧ ವಿಮಾನವೊಂದು ಇಂದು ಬೆಳಗ್ಗೆ ರಾಜಸ್ಥಾನದ ಸಿರೋಹಿ ಎಂಬಲ್ಲಿ ಪತನಗೊಂಡಿದೆ. ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಬಾರ್ಮರ್ ವಾಯು ಪಡೆ ನೆಲೆಯಿಂದ ಮಿಗ್ 27 ಯುಪಿಜಿ ವಿಮಾನವು ಹಾರಾಟ ಆರಂಭಿಸಿತ್ತು. ಜೋಧ್‍ಪುರದಿಂದ 120 ಕಿ.ಮೀ. ದೂರದಲ್ಲಿರುವ ಸಿರೋಹಿ ಹೊರ ವಲಯದಲ್ಲಿ 11.45 ಗಂಟೆಗೆ ಪತನಗೊಂಡಿದೆ.

    ಎಂಜಿನ್ ವೈಫಲ್ಯದಿಂದ ವಿಮಾನ ಪತನಗೊಂಡಿದೆ ತಕ್ಷಣವೇ ಪೈಲಟ್ ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಹಾರಿದ್ದು, ಸುರಕ್ಷಿತವಾಗಿ ಭೂಮಿಯನ್ನು ತಲುಪಿದ್ದಾರೆ ಎಂದು ವರದಿಯಾಗಿದೆ. ಈ ತ್ರೈಮಾಸಿಕದಲ್ಲಿ ವಾಯುಸೇನೆಯ ಒಟ್ಟು 9 ಮಿಗ್ ವಿಮಾನಗಳು ಪತನಗೊಂಡಿವೆ.

    ರಾಜಸ್ಥಾನದ ಬಿಕಾನೇರ್ ಪ್ರದೇಶದಲ್ಲಿ ಇದೇ ತಿಂಗಳ 3ರಂದು ಮಿಗ್-21 ಯುದ್ಧ ವಿಮಾನ ಪತನಗೊಂಡಿತ್ತು. ಪ್ಯಾರಾಚೂಟ್ ಸಹಾಯದಿಂದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದರು.

    1963 ರಿಂದ ಇಲ್ಲಿಯವರೆಗೆ ಒಟ್ಟು ರಷ್ಯಾದಿಂದ 1200 ಮಿಗ್ ವಿಮಾನವನ್ನು ಭಾರತ ಖರೀದಿಸಿದ್ದು, ಇದರಲ್ಲಿ 500 ಕ್ಕೂ ಹೆಚ್ಚು ವಿಮಾನಗಳು ಹಾರಾಟದ ಸಮಯದಲ್ಲೇ ಪತನ ಹೊಂದಿದೆ. ಹಾರಾಟದ ಸಮಯದಲ್ಲಿ ಎಂಜಿನ್ ವೈಫಲ್ಯಗೊಂಡು ಪತನದ ಸೂಚನೆ ಸಿಕ್ಕಿದ ಕೂಡಲೇ ಹಲವು ಪೈಲಟ್ ಗಳು ಎಜೆಕ್ಟ್ ಆಗದೇ ವಿಮಾನವನ್ನು ಜನವಸತಿ ಇಲ್ಲದ ಕಡೆಗೆ ತಿರುಗಿಸಿ ಪ್ರಾಣಬಿಟ್ಟಿದ್ದಾರೆ. ಸದ್ಯ ವಾಯುಸೇನೆಯಲ್ಲಿ ಒಟ್ಟು 112 ಮಿಗ್ ವಿಮಾನಗಳು ಕಾರ್ಯಾಚರಣೆ ಮಾಡುತ್ತಿವೆ.

  • ಇಥಿಯೋಪಿಯಾ ವಿಮಾನ ಪತನ: ಆರು ಭಾರತೀಯರ ಸಾವು

    ಇಥಿಯೋಪಿಯಾ ವಿಮಾನ ಪತನ: ಆರು ಭಾರತೀಯರ ಸಾವು

    ನವದೆಹಲಿ: ಇಥಿಯೋಪಿಯನ್ ವಿಮಾನ ಪತನಗೊಂಡ ದುರಂತದಲ್ಲಿ ಭಾರತದ 6 ಜನರು ಸಾವನ್ನಪ್ಪಿದ್ದಾರೆ ಎಂಬುದನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಖಚಿತಪಡಿಸಿದ್ದಾರೆ. ಮೃತರಲ್ಲಿ ವಿಶ್ವಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ(ಯುಎನ್‍ಡಿಪಿ) ಸಲಹೆಗಾರ್ತಿ ಶಿಖಾ ಗರ್ಗ್ ಸಹ ಪತನಗೊಂಡ ವಿಮಾನದಲ್ಲಿದ್ದರು ಎಂದು ಕೇಂದ್ರ ಸಚಿವ ಹರ್ಷವರ್ಧನ್ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

    ಸುಷ್ಮಾ ಸ್ವರಾಜ್ ಟ್ವೀಟ್ ಮೂಲಕ ಸಂತಾಪ ಸೂಚಿಸಿ, ನಾನು ಮೃತ ಪನ್ನಗೇಶ್ ವೈದ್ಯರ ಪುತ್ರನೊಂದಿಗೆ ಮಾತನಾಡಿದ್ದೇನೆ. ಇಥಿಯೋಪಿಯನ್ ವಿಮಾನ ದುರಂತದ ಭಾರತೀಯ ಕುಟುಂಬದ ಆರು ಜನರನ್ನು ಕಳೆದುಕೊಂಡ ವಿಷಯ ಕೇಳಿ ಶಾಕ್ ಆಯ್ತು. ಈಗಾಗಲೇ ಕೀನ್ಯಾ ಮತ್ತು ಇಥಿಯೋಪಿಯಾದಲ್ಲಿರುವ ಭಾರತದ ರಾಯಭಾರಿಯ ಕಚೇರಿಯ ಸಿಬ್ಬಂದಿಗೆ ಘಟನಾ ಸ್ಥಳಕ್ಕೆ ಹೋಗುವಂತೆ ಸೂಚನೆ ನೀಡಿದ್ದೇನೆ. ಅಲ್ಲಿಯ ನಮ್ಮ ಸಿಬ್ಬಂದಿ ಮೃತ ಕುಟುಂಬಸ್ಥರಿಗೆ ಸಹಾಯ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

    ಈ ಮೊದಲು ಸುಷ್ಮಾ ಸ್ವರಾಜ್ ವಿಮಾನ ದುರಂತದಲ್ಲಿ ಭಾರತ ಮೂಲದ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಮತ್ತೊಮ್ಮೆ ಇಂದು ಬೆಳಗ್ಗೆ ಟ್ವೀಟ್ ಮಾಡಿ ಆರು ಜನರು ಎಂದು ತಿಳಿಸಿದ್ದಾರೆ. ಮೃತರನ್ನು ವೈದ್ಯ ಪನ್ನಗೇಶ್ ಭಾಸ್ಕರ್, ವೈದ್ಯ ಹಂಸಿನಿ ಅನ್ನಗೇಶ್, ನುಕುವಾರಾಪೂ ಮನೀಷಾ ಮತ್ತು ಶಿಖಾ ಗಾರ್ಗ್ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರ ಹೆಸರು ತಿಳಿದು ಬಂದಿಲ್ಲ.

    ಶಿಖಾ ಗರ್ಗ್ ಸಾವಿಗೆ ಕೇಂದ್ರ ಸಚಿವರ ಸಂತಾಪ:
    ಶಿಖಾ ಗರ್ಗ್ ನೌರೊಬಿಯಲ್ಲಿ ನಡೆಯುತ್ತಿರುವ ಸಂಯುಕ್ತ ರಾಷ್ಟ್ರಗಳ ಪರಿಸರ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದರು. ಶಿಖಾ ಅವರು ಪರಿಸರ ಸಚಿವಾಲಯದ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿಸುತ್ತಿದ್ದರು. ಶಿಖಾರ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವರಾದ ಹರ್ಷವರ್ಧನ್ ಸಂತಾಪ ಸೂಚಿಸಿದ್ದಾರೆ.

    ಇಥಿಯೋಪಿಯನ್ ಕಾಲಮಾನದ ಪ್ರಕಾರ ಭಾನುವಾರ ಬೆಳಗ್ಗೆ 8:38ಕ್ಕೆ ಟೇಕಾಫ್ ಆಗಿದ್ದ ವಿಮಾನ 8:44ಕ್ಕೆ ಸಂಪರ್ಕ ಕಳೆದುಕೊಂಡು ಅಪಘಾತಕ್ಕಿಡಾಗಿತ್ತು. ಒಟ್ಟು 33 ದೇಶದ ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಆಡಿಸ್ ಅಬಬಾದಿಂದ 62 ಕಿ.ಮೀ ದೂರದಲ್ಲಿರುವ ಬಿಷೊಫ್ಟು ಬಳಿ ವಿಮಾನ ಪತನಗೊಂಡಿದ್ದು, ಒಟ್ಟು 157 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಇಥಿಯೋಪಿಯಾ ವಿಮಾನ ದುರಂತ – ಭಾರತ ಮೂಲದ ನಾಲ್ವರ ಸಾವು

    ಇಥಿಯೋಪಿಯಾ ವಿಮಾನ ದುರಂತ – ಭಾರತ ಮೂಲದ ನಾಲ್ವರ ಸಾವು

    ಆಡಿಸ್ ಅಬಬಾ: ಇಥಿಯೋಪಿಯನ್ ಏರ್ ಲೈನ್ಸ್ ವಿಮಾನ ಪತನಗೊಂಡು 157 ಮಂದಿ ಮೃತಪಟ್ಟಿದ್ದು, ಇದರಲ್ಲಿ ನಾಲ್ವರು ಭಾರತೀಯರು ಕೂಡ ಸೇರಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಇಥಿಯೋಪಿಯದ ರಾಜಧಾನಿ ಆಡಿಸ್ ಅಬಬಾದಿಂದ ಕೀನ್ಯಾದ ರಾಜಧಾನಿ ನೈರೋಬಿಯಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ವಿಮಾನ ಪತನ ಆಗಿತ್ತು. ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ 32 ದೇಶಗಳ ಪ್ರಯಾಣಿಕರಿದ್ದರು.

    ಇದರಲ್ಲಿ ಅತಿ ಹೆಚ್ಚು ಅಂದರೆ 32 ಮಂದಿ ಕೀನ್ಯಾ, ಕೆನಡಾ 18, ಇಥಿಯೋಪಿಯಾ 9, ಇಟಲಿ, ಅಮೆರಿಕ, ಚೀನಾ ದೇಶಗಳ ತಲಾ 8 ಮಂದಿ ಸೇರಿದ್ದಾರೆ ಎಂದು ಮಾಧ್ಯಮವೊಂದು ಮಾಹಿತಿ ವರದಿ ಮಾಡಿದೆ.

    ಉಳಿದಂತೆ ಇಂಗ್ಲೆಂಡ್‍ನ ಮತ್ತು ಫ್ರಾನ್ಸಿನ ತಲಾ 7 ಮಂದಿ ಹಾಗೂ ಈಜಿಪ್ಟ್ 6, ನೆದಲ್ರ್ಯಾಂಡ್ಸ್‍ನ 5, ಭಾರತ 4 ಮಂದಿ ಪ್ರಯಾಣಿಸುತ್ತಿದ್ದರು. ಇಥಿಯೋಪಿಯನ್ ಕಾಲಮಾನದ ಪ್ರಕಾರ ಬೆಳಗ್ಗೆ 8:38ಕ್ಕೆ ಟೇಕಾಫ್ ಆಗಿದ್ದ ವಿಮಾನ 8:44ಕ್ಕೆ ಸಂಪರ್ಕ ಕಳೆದುಕೊಂಡು ಅಪಘಾತಕ್ಕಿಡಾಗಿತ್ತು. 10:05 ಗಂಟೆಗೆ ವಿಮಾನ ನೈರೋಬಿಯಗೆ ತಲುಪಬೇಕಾಗಿತ್ತು. ಸದ್ಯ ಪ್ರಯಾಣಿಕರ ಸ್ನೇಹಿತರು, ಪೊಲೀಸರು ನೈರೋಬಿ ವಿಮಾನ ನಿಲ್ದಾಣದಲ್ಲೇ ಕಾದುಕುಳಿತ್ತಿದ್ದಾರೆ.

    ವಿಮಾನ ಅವಘಡದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಇಥಿಯೋಪಿಯನ್ ಪ್ರಧಾನಿ ಕಚೇರಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ. ಅಲ್ಲದೇ ರಕ್ಷಣಾ ಕಾರ್ಯ ಮುಂದುವರಿದಿದೆ ಎಂಬ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಉಂಟಾಗಿರುವ ಸಾವು ನೋವಿನ ಬಗ್ಗೆ ಖಚಿತ ಮಾಹಿತಿ ಲಭಿಸಿಲ್ಲ. ಇಥಿಯೋಪಿಯಾ ಪೂರ್ವ ಆಫ್ರಿಕಾದ ಪ್ರಮುಖ ರಾಷ್ಟ್ರವಾಗಿದೆ. ವಿಮಾನ ಪತನಕ್ಕೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಟೇಕಾಫ್ ಆದ 6 ನಿಮಿಷಕ್ಕೆ ಪತನ : ವಿಮಾನ ದುರಂತಕ್ಕೆ 157 ಮಂದಿ ಬಲಿ

    ಟೇಕಾಫ್ ಆದ 6 ನಿಮಿಷಕ್ಕೆ ಪತನ : ವಿಮಾನ ದುರಂತಕ್ಕೆ 157 ಮಂದಿ ಬಲಿ

    ಆಡಿಸ್ ಅಬಬಾ: ಇಥಿಯೋಪಿಯನ್ ಏರ್ ಲೈನ್ಸ್ ವಿಮಾನ ಪತನಗೊಂಡು 157 ಮಂದಿ ಮೃತಪಟ್ಟಿದ್ದಾರೆ. ಇಥಿಯೋಪಿಯದ ರಾಜಧಾನಿ ಆಡಿಸ್ ಅಬಬಾದಿಂದ ಕೀನ್ಯಾದ ರಾಜಧಾನಿ ನೈರೋಬಿಯಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅವಘಡ ಸಂಭವಿಸಿದೆ.

    ಆಡಿಸ್ ಅಬಬಾದಿಂದ 62 ಕಿ.ಮೀ ದೂರದಲ್ಲಿರುವ ಬಿಷೊಫ್ಟು ಬಳಿ ವಿಮಾನ ಪತನಗೊಂಡಿದೆ. ಇಥಿಯೋಪಿಯನ್ ಕಾಲಮಾನದ ಪ್ರಕಾರ ಬೆಳಗ್ಗೆ 8:38ಕ್ಕೆ ಟೇಕಾಫ್ ಆಗಿದ್ದ ವಿಮಾನ 8:44ಕ್ಕೆ ಸಂಪರ್ಕ ಕಳೆದುಕೊಂಡು ಅಪಘಾತಕ್ಕಿಡಾಗಿದೆ. ಒಟ್ಟು 33 ದೇಶದ ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

    ಈ ಬಗ್ಗೆ ಏರ್ ಲೈನ್ಸ್ ವಕ್ತಾರರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 8 ಮಂದಿ ಸಿಬ್ಬಂದಿ 147 ಮಂದಿ ಪ್ರಯಾಣಿಕರಿದ್ದ ಬೋಯಿಂಗ್ 737-8 ಮ್ಯಾಕ್ಸ್ ಹೆಸರಿನ ವಿಮಾನ ಪತನವಾಗಿದೆ. ಬೆಳಗ್ಗೆ 8.40ರ ವೇಳೆಗೆ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

    ವಿಮಾನ ಅವಘದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಇಥಿಯೋಪಿಯನ್ ಪ್ರಧಾನಿ ಕಚೇರಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ. ಅಲ್ಲದೇ ರಕ್ಷಣಾ ಕಾರ್ಯ ಮುಂದುವರಿದಿದೆ ಎಂಬ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಉಂಟಾಗಿರುವ ಸಾವು ನೋವಿನ ಬಗ್ಗೆ ಖಚಿತ ಮಾಹಿತಿ ಲಭಿಸಿಲ್ಲ. ಇಥಿಯೋಪಿಯಾ ಪೂರ್ವ ಆಫ್ರಿಕಾದ ಪ್ರಮುಖ ರಾಷ್ಟ್ರವಾಗಿದೆ. ವಿಮಾನ ಪತನಕ್ಕೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

    ಇತ್ತ ಶನಿವಾರ ಕೊಲಂಬಿಯಾದ ಮೆಟಾ ಪ್ರದೇಶದಲ್ಲಿ ಶನಿವಾರ ಸಂಭವಿಸಿದ್ದ ವಿಮಾನ ಅವಘಡದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಕೊಲಂಬಿಯಾ ಸಿವಿಲ್ ಎರೋನಾಟಿಕ್ಸ್ ವಿಶೇಷ ಆಡಳಿತ ಮಂಡಳಿ ವಿಭಾಗ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರೊಪೆಲ್ಲರ್ ಪ್ಲೇನ್ ಡೌಗ್ಲಾನ್ ಡಿಸಿ-3 ವಿಮಾನವು ಸ್ಯಾನ್ ಜೋಸ್ ಡೆಲ್ ಗುವಿಯಾರೆ ಮತ್ತು ವಿಲ್ಲವಿಸೆನ್ಸಿಯೊ ನಗರಗಳ ನಡುವಿನ ಮೆಟಾ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ. ವಿಮಾನ ಹಾರಾಟ ವೇಳೆ ಎಂಜಿನ್ ಫೇಲ್ ಆದ ಪರಿಣಾಮ ದುರ್ಘಟನೆ ನಡೆದಿದೆ ಎಂಬ ಮಾಹಿತಿ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರಾಜಸ್ತಾನದಲ್ಲಿ ಐಎಎಫ್‍ನ ಮಿಗ್-21 ಯುದ್ಧ ವಿಮಾನ ಪತನ- ಪೈಲಟ್ ಪಾರು

    ರಾಜಸ್ತಾನದಲ್ಲಿ ಐಎಎಫ್‍ನ ಮಿಗ್-21 ಯುದ್ಧ ವಿಮಾನ ಪತನ- ಪೈಲಟ್ ಪಾರು

    ಬಿಕಾನೇರ್: ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನವೊಂದು ಇಂದು ರಾಜಸ್ಥಾನದ ಬಿಕಾನೇರ್ ಪ್ರದೇಶದ ಬಳಿ ಪತನವಾಗಿದ್ದು, ಪ್ಯಾರಾಚ್ಯೂಟ್ ಸಹಾಯದಿಂದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಬಿಕಾನೇರ್ ಪಟ್ಟಣದಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಶೋಭಾಸರ್ ಕಿ ಧನಿ ಎಂಬ ಪ್ರದೇಶದಲ್ಲಿ ಮಿಗ್-21 ಯುದ್ಧ ವಿಮಾನ ಪತನಗೊಂಡಿದೆ. ಮಿಗ್-21 ಟೇಕ್ ಆಫ್ ಆಗುವ ಸಂದರ್ಭದಲ್ಲಿ ಪಕ್ಷಿಯೊಂದು ವಿಮಾನಕ್ಕೆ ಡಿಕ್ಕಿ ಹೊಡೆದಿತ್ತು. ಬಹುಶಃ ಇದರಿಂದಲೇ ವಿಮಾನದ ತಾಂತ್ರಿಕ ವ್ಯವಸ್ಥೆಯಲ್ಲಿ ಏರುಪೇರಾಗಿ ವಿಮಾನ ಪತನವಾಗಿದೆ ಎಂದು ಐಎಎಫ್ ಅಧಿಕಾರಿಗಳು ಶಂಕಿಸಿದ್ದಾರೆ. ಈ ವಿಮಾನವನ್ನು ರಾಜಸ್ತಾನದಲ್ಲಿರುವ ಐಎಎಫ್‍ನ ನಾಲ್ ವಿಮಾನ ನಿಲ್ದಾಣದಿಂದ ಗಸ್ತು ಕಾರ್ಯಚರಣೆಗೆಂದು ತೆಗೆದುಕೊಂಡು ಹೋಗಲಾಗಿತ್ತು.

    ವಿಮಾನ ಪತನಗೊಳ್ಳುವ ವಿಷಯ ಅರಿವಿಗೆ ಬರುತ್ತಿದಂತೆ ಮೊದಲು ಪೈಲಟ್ ಪ್ಯಾರಾಚ್ಯೂಟ್ ನೆರವಿನಿಂದ ಸುರಕ್ಷಿತವಾಗಿ ಕೆಳಗೆ ಇಳಿದಿದ್ದಾರೆ. ಶೋಭಾಸರ್ ಕಿ ಧನಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ ಎಂದು ಬಿಕಾನೇರ್‍ನ ಎಸ್‍ಪಿ ಪ್ರದೀಪ್ ಮೋಹನ್ ಶರ್ಮಾ ಅವರು ತಿಳಿಸಿದ್ದಾರೆ.

    ಈ ಬಗ್ಗೆ ಐಎಎಫ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಇಂದು ರಾಜಸ್ತಾನದ ಬಿಕಾನೇರ್ ಬಳಿ ಮಿಗ್-21 ಯುದ್ಧ ವಿಮಾನ ಗಸ್ತು ತಿರುಗುತ್ತಿತ್ತು. ವಿಮಾನ ಟೇಕ್ ಆಫ್ ಆಗುತ್ತಿದ್ದ ವೇಳೆ ಪಕ್ಷಿಯೊಂದು ವಿಮಾನಕ್ಕೆ ಡಿಕ್ಕಿ ಹೊಡೆದಿತ್ತು. ಇದರಿಂದ ತಾಂತ್ರಿಕ ದೋಷ ಉಂಟಾಗಿ ವಿಮಾನ ಪತನವಾಗಿರಬಹುದು. ಈ ಬಗ್ಗೆ ಕೋರ್ಟ್ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

    ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ರಾಷ್ಟ್ರಗಳು ಗಡಿಯಲ್ಲಿ ಒಬ್ಬರ ಮೇಲೊಬ್ಬರು ದಾಳಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲೇ ಮಿಗ್-21 ಯುದ್ಧ ವಿಮಾನ ಪತನವಾಗಿದೆ. ಅಲ್ಲದೆ ಕಳೆದ ಫೆ. 27 ರಂದು ಪಾಕ್ ಹಾಗೂ ಭಾರತದ ಜೆಟ್‍ಗಳ ನಡುವೆ ಜಮ್ಮು-ಕಾಶ್ಮೀರಕ್ಕಾಗಿ ಡಾಗ್‍ಫೈಟ್ ಕೂಡ ನಡೆದಿತ್ತು. ಈ ಸಂದರ್ಭದಲ್ಲಿ ಮಿಗ್-21 ಚಲಾಯಿಸುತ್ತಿದ್ದ ಐಎಎಫ್ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕ್ ವಶಕ್ಕೆ ಪಡೆದುಕೊಂಡು ಬಿಡುಗಡೆ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯುದ್ಧ ವಿಮಾನ ಪತನ- ಭಾರೀ ದುರಂತವನ್ನೇ ತಡೆದು ಅಮರರಾದ ಪೈಲಟ್‍ಗಳು..!

    ಯುದ್ಧ ವಿಮಾನ ಪತನ- ಭಾರೀ ದುರಂತವನ್ನೇ ತಡೆದು ಅಮರರಾದ ಪೈಲಟ್‍ಗಳು..!

    ಬೆಂಗಳೂರು: ತಾಂತ್ರಿಕ ದೋಷದಿಂದ ವಾಯುಪಡೆಯ ಮಿರಾಜ್-2000 ನಂಬರ್‍ನ ಯುದ್ಧ ವಿಮಾನ ಬೆಂಗಳೂರಿನ ಎಚ್‍ಎಎಲ್‍ನ ಯಮಲೂರು ಬಳಿ ಪತನಗೊಂಡು ಇಬ್ಬರು ಪೈಲಟ್‍ಗಳು ಶುಕ್ರವಾರ ಸಾವನ್ನಪ್ಪಿದ್ದರು. ಆದರೆ ಪೈಲಟ್ ಗಳು ತಮ್ಮ ಜೀವತೆತ್ತು ಸಂಭವಿಸಬಹುದಾದ ಭಾರೀ ಅವಘಡವನ್ನು ತಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಪ್ರಾಯೋಗಿಕ ಹಾರಾಟ ವೇಳೆ ಈ ಅವಘಡ ಸಂಭವಿಸಿದ್ದು, ರನ್‍ವೇಯಲ್ಲಿ ಹಾರಾಟ ನಡೆಸಿದ್ದ ವಿಮಾನ ಟೇಕಾಫ್ ಆಗಿದ್ದರೆ ವಸತಿ ಹೆಚ್ಚಾಗಿರುವ ಪ್ರದೇಶದಲ್ಲಿ ಬೀಳುವ ಸಾಧ್ಯತೆ ಇತ್ತು. ಆದರೆ ಇದನ್ನು ಮನಗಂಡ ಫೈಲಟ್‍ಗಳು ವಿಮಾನ ಎತ್ತರಕ್ಕೆ ಟೇಕಾಫ್ ಮಾಡದಿರಲು ನಿರ್ಧರಿಸಿ ಹೊರ ಬರಲು ಪ್ರಯತ್ನಿಸಿದ್ದರು.

    ಅಂತಿಮ ಕ್ಷಣದಲ್ಲಿ ತಮ್ಮ ಪ್ರಾಣ ಉಳಿಸಿಕೊಳ್ಳುವ ಪ್ರಯತ್ನ ನಡೆಸಿದ್ದ ಪೈಲಟ್ ಗಳು ಪ್ಯಾರಚೂಟ್ ಬಳಸಿ ಹಾರಲು ಯತ್ನಿಸಿದ್ದರು. ಆದರೆ ಆ ವೇಳೆಗೆ ವಿಮಾನ ಸ್ಫೋಟಗೊಂಡಿತ್ತು. ಪರಿಣಾಮ ಸಿದ್ದಾರ್ಥ್ ನೇಗಿ (31), ಸಮೀರ್ ಅಬ್ರೋಲ್(33) ಜೀವ ಕಳೆದುಕೊಂಡಿದ್ದಾರೆ. ಸಮೀರ್ ಬೆಂಕಿ ಹೊತ್ತಿಕೊಂಡಿದ್ದ ಪ್ಯಾರಚೂಟ್ ಮೇಲೆಯೇ ಬಿದ್ದ ಪರಿಣಾಮ ಸುಟ್ಟು ಕರಕಲಾದರೆ, ತೀವ್ರ ಗಾಯಗೊಂಡಿದ್ದ ನೇಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು.

    ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದು, ಒಂದೊಮ್ಮೆ ವಿಮಾನ ಜನ ವಸತಿ ಪ್ರದೇಶದಲ್ಲಿ ಪತನವಾಗಿದ್ದರೆ ಭಾರೀ ಅವಘಡ ಸಂಭವಿಸುತ್ತಿತ್ತು ಎಂದು ತಿಳಿಸಿದ್ದಾರೆ. ಅಲ್ಲದೇ ಈ ಕುರಿತು ಮಾಹಿತಿ ನೀಡಿರುವ ಎಚ್‍ಎಎಲ್ ಅಧಿಕಾರಿಯೊಬ್ಬರು ರನ್‍ವೇಯಲ್ಲಿಯೇ ವಿಮಾನದ ಟೈರ್ ಕಳಚಿ ಬಿದ್ದ ಪರಿಣಾಮ ಮುಂಭಾಗ ರನ್ ವೇಗೆ ಉಜ್ಜಿ ಬೆಂಕಿ ಕಿಡಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿತ್ತು ಎಂದು ವಿವರಿಸಿದ್ದಾರೆ.

    ವಿಮಾನ ಸ್ಫೋಟಗೊಂಡ ಅಲ್ಪ ದೂರದಲ್ಲೇ ಜನ ವಸತಿ ಪ್ರದೇಶಗಳಿದ್ದು, ಶಾಲೆ, ಟೆಕ್ ಪಾರ್ಕ್, ರಸ್ತೆ ಸೇರಿದಂತೆ ಹಲವು ಪ್ರದೇಶಗಳಿದೆ. ಒಂದೊಮ್ಮೆ ಪೈಟಲ್‍ಗಳು ವಿಮಾನವನ್ನು ರನ್ ವೇಯಿಂದ ಟೇಕಾಫ್ ಆಗಿದ್ದರೆ ವಸತಿ ಪ್ರದೇಶದಲ್ಲಿ ಉರುಳುವ ಸಾಧ್ಯತೆ ಇತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಎಚ್‍ಎಎಲ್ ಬಳಿ ಯುದ್ಧವಿಮಾನ ಪತನ- ಪೈಲಟ್ ದುರ್ಮರಣ

    ಎಚ್‍ಎಎಲ್ ಬಳಿ ಯುದ್ಧವಿಮಾನ ಪತನ- ಪೈಲಟ್ ದುರ್ಮರಣ

    ಬೆಂಗಳೂರು: ಇಲ್ಲಿ ಎಚ್‍ಎಎಲ್ ಏರ್ ಪೋರ್ಟ್  ಬಳಿ ಯುದ್ಧ ವಿಮಾನವೊಂದು ಪತನವಾಗಿದ್ದು, ಪೈಲಟ್ ಮೃತಪಟ್ಟಿರುವ ಘಟನೆ  ಇಂದು ನಡೆದಿದೆ.

    ಸಿದ್ದಾರ್ಥ್ ಮೃತ ದುರ್ದೈವಿ ಪೈಲಟ್ ಆಗಿದ್ದು, ಮಿರಾಜ್ ಎನ್ನುವ ಯುದ್ಧ ವಿಮಾನ ಪತನವಾಗಿದೆ. ಮಿರಾಜ್ ಭಾರೀ ಸ್ಫೋಟಗೊಂಡ ಪರಿಣಾಮ ದಟ್ಟವಾದ ಹೊಗೆ ಅಲ್ಲಿ ಆವರಿಸಿದೆ. ಇದರಿಂದ ಸ್ಥಳೀಯರು ಗಾಬರಿಗೊಂಡಿದ್ದಾರೆ.

    ಎಚ್ ಎ ಎಲ್ ನಿಂದ ಹೊರಭಾಗದಲ್ಲಿ ಮನೆಗಳ ಮೇಲೆ ಪತನವಾಗುವ ಸಾಧ್ಯತೆ ಇತ್ತು. ಪೈಲಟ್ ಗಳ ಸಮಯ ಪ್ರಜ್ಞೆಯಿಂದ ಎಚ್ ಎ ಎಲ್ ಕಂಪೌಂಡ್ ಒಳಗೆ ಬಿದ್ದಿದೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv