Tag: ಪತಿ

  • ಪತ್ನಿ ಮೇಲೆ ಡೌಟ್- ತನ್ನ ಮಕ್ಕಳನ್ನೇ ಕತ್ತು ಹಿಸುಕಿ ಕೊಂದ ತಂದೆ

    ಪತ್ನಿ ಮೇಲೆ ಡೌಟ್- ತನ್ನ ಮಕ್ಕಳನ್ನೇ ಕತ್ತು ಹಿಸುಕಿ ಕೊಂದ ತಂದೆ

    ರಾಯಚೂರು: ಪತ್ನಿಯ ಅನೈತಿಕ ಸಂಬಂಧ (Illicit Relationship) ಆರೋಪ ಹಿನ್ನೆಲೆ ತಂದೆಯೇ ತನ್ನ ಎರಡು ಮಕ್ಕಳನ್ನ ಕೊಂದಿರುವ ಘಟನೆ ರಾಯಚೂರಿನ ದೇವದುರ್ಗದ ಜಕ್ಲೇರದೊಡ್ಡಿಯಲ್ಲಿ ನಡೆದಿದೆ.

    5 ವರ್ಷದ ಶಿವರಾಜ್ ಮತ್ತು 3 ವರ್ಷದ ರಾಘವೇಂದ್ರ ತಂದೆಯಿಂದಲೇ ಕೊಲೆಯಾದ ಮಕ್ಕಳು. ಆರೋಪಿ ತಂದೆ ಲಿಂಗಣ್ಣನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪತಿಯನ್ನ ಅರೆಸ್ಟ್ ಮಾಡ್ತಾರೆ ಅಂತಾ ಹೆದರಿ ನವ ವಿವಾಹಿತೆ ಆತ್ಮಹತ್ಯೆ

    ಪತ್ನಿಯೊಂದಿಗೆ ಜಗಳವಾಡಿ ಪತ್ನಿ ತವರು ಮನೆಯಿಂದ ಮಕ್ಕಳನ್ನ ಕರೆದುಕೊಂಡು ಬಂದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಅಂತ ನಿತ್ಯ ಜಗಳವಾಡುತ್ತಿದ್ದ ಹಿನ್ನೆಲೆ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದರು. ಶನಿವಾರ ಸಹ ಪತ್ನಿಯೊಂದಿಗೆ ಜಗಳವಾಡಿ ಮಕ್ಕಳನ್ನ ಮನೆಗೆ ಕರೆತಂದು ಕೊಲೆ ಮಾಡಿದ್ದಾನೆ.

    ಅಕ್ಕಪಕ್ಕದ ಮನೆಯವರು ಅನುಮಾನದ ಮೇಲೆ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನ ಹಿಡಿದುಕೊಟ್ಟಿದ್ದಾರೆ. ದೇವದುರ್ಗ ಪೊಲೀಸ್ ಠಾಣೆ (Devadurga Police Station) ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಿಯಾರಾ ಅಡ್ವಾಣಿಗೆ ಹೋಲಿಸಿದ ಪತಿಗೆ ಊಟ ನೀಡಲು ನಿರಾಕರಿಸಿದ ಪತ್ನಿ

    ಕಿಯಾರಾ ಅಡ್ವಾಣಿಗೆ ಹೋಲಿಸಿದ ಪತಿಗೆ ಊಟ ನೀಡಲು ನಿರಾಕರಿಸಿದ ಪತ್ನಿ

    ನವದೆಹಲಿ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು (Wife) ಖುಷಿ ಪಡಿಸಲು ಹೋಗಿ ಪಜೀತಿಗೆ ಒಳಗಾದ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿರುವ ವೀಡಿಯೋದಲ್ಲಿ ಪ್ರೀತಿಯಿಂದ ವ್ಯಕ್ತಿಯು ತನ್ನ ಪತ್ನಿಯನ್ನು ಕಿಯಾರಾ ಅಡ್ವಾನಿಗೆ (Kiara Advani) ಹೋಲಿಸುತ್ತಾರೆ. ಇದಕ್ಕೆ ಪತ್ನಿ ಕೋಪಗೊಂಡು ಊಟ ನಿರಾಕರಿಸಿದ್ದಾಳೆ.

    ಈ ಸಂಪೂರ್ಣ ವೀಡಿಯೋವನ್ನು ಪ್ರವೀಣ್ ಎಂಬ ಟ್ವಿಟ್ಟರ್ ಬಳಕೆದಾರ ಹಂಚಿಕೊಂಡಿದ್ದಾನೆ. 52 ಸೆಕೆಂಡುಗಳ ವೀಡಿಯೋ ಇದಾಗಿದ್ದು, ಕೋಪಗೊಂಡ ಪತ್ನಿ ಅಡುಗೆಮನೆಯಲ್ಲಿ ಅಡುಗೆ ಮಾಡುತ್ತಿರುತ್ತಾಳೆ.

    ಕೋಪಬೇಡ, ನನ್ನನ್ನು ಕ್ಷಮಿಸು, ಅವಳು ನಟಿ. ನಾನು ಅವಳನ್ನು ಮದುವೆ ಆಗುತ್ತೇನೆ ಎಂದು ನೀನು ಕೋಪಗೊಳ್ಳುತ್ತೀದ್ದೀಯಾ ಎಂದು ಆತ ಕೇಳುತ್ತಾನೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಸಿಎಂ- ಹೆಚ್‍ಡಿಕೆ ಹೊಸ ಬಾಂಬ್

    ಅದಕ್ಕೆ ಆತನ ಪತ್ನಿ ಪ್ರತಿಕ್ರಿಯಿಸಿ, ಹೋಗಿ ಅವಳನ್ನೇ ಮದುವೆಯಾಗು, ನೀನು ಇಲ್ಲಿ ಉಳಿಯಬೇಕಾಗಿಲ್ಲ ಎಂದು ಉತ್ತರಿಸುತ್ತಾಳೆ. ಅದಕ್ಕೆ ಪತಿ, ಹೌದು, ಅವಳು ನನ್ನನ್ನು ಮದುವೆಯಾಗಲು ಸಾಯುತ್ತಿದ್ದಾಳೆ ಎಂದು ವ್ಯಂಗ್ಯವಾಡುತ್ತಾನೆ. ಅದಕ್ಕೆ ಪತ್ನಿ, ಇಲ್ಲ, ಇಲ್ಲ, ಅವಳು ನಿನ್ನನ್ನು ಮದುವೆಯಾಗುತ್ತಾಳೆ. ಎಲ್ಲಾ ಹುಡುಗಿಯರು ನಿನ್ನನ್ನು ಮದುವೆಯಾಗಲು ಸಾಯುತ್ತಿದ್ದಾರೆ ಎಂದು ಉತ್ತರಿಸುತ್ತಾಳೆ.

    ಆಗ ಆತ, ನಟಿಯಾಗಿ ಆಕೆಯನ್ನು ಇಷ್ಟಪಡುತ್ತೇನೆ. ನಾನು ಯಾವುದೇ ನಟಿಯನ್ನು ಇಷ್ಟಪಡಬಾರದೇ ಎಂದು ಕೇಳುತ್ತಾನೆ. ಅದಕ್ಕೆ ಪತ್ನಿಯು, ಹಾಗಾದರೆ ನನ್ನನ್ನು ಕಿಯಾರಾ ಅಡ್ವಾಣಿ ಜೊತೆಗೆ ಯಾಕೆ ಹೋಲಿಸಿದ್ದೀರಿ, ನಾನು ನಟಿಯೇ ಎಂದು ಎಂದು ವ್ಯಂಗ್ಯವಾಡುತ್ತಾಳೆ.

    ಅವಳು ಚೆನ್ನಾಗಿ ನಟಿಸುತ್ತಾಳೆ ಎಂದು ತನ್ನ ಹೇಳಿಕೆಗೆ ಸಮರ್ಥನೆಯನ್ನು ನೀಡಲು ಬಂದ ಪತಿಗೆ ಪತ್ನಿಯು ಇಲ್ಲಿಂದ ಹೊರಡಿ, ಇಂದು ನಿಮಗೆ ಊಟ ಸಿಗುವುದಿಲ್ಲ ಎಂದು ಹೇಳುತ್ತಾಳೆ. ಇದನ್ನೂ ಓದಿ: ಚೀನಾದೊಂದಿಗೆ ಲಿಂಕ್ – 200ಕ್ಕೂ ಅಧಿಕ ಸಾಲ, ಬೆಟ್ಟಿಂಗ್ ಆ್ಯಪ್‌ಗಳನ್ನು ಬ್ಯಾನ್ ಮಾಡಲಿದೆ ಭಾರತ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪತ್ನಿಯನ್ನು ಕೊಂದು ದೇಹದ ಮೇಲೆ ಉಪ್ಪು ಹಾಕಿ ಯಾರಿಗೂ ಅನುಮಾನ ಬರದಂತೆ ತರಕಾರಿ ಬೆಳೆದ!

    ಪತ್ನಿಯನ್ನು ಕೊಂದು ದೇಹದ ಮೇಲೆ ಉಪ್ಪು ಹಾಕಿ ಯಾರಿಗೂ ಅನುಮಾನ ಬರದಂತೆ ತರಕಾರಿ ಬೆಳೆದ!

    ಲಕ್ನೋ: ವ್ಯಕ್ತಿಯೊಬ್ಬ ಹೊಲವೊಂದರಲ್ಲಿ ಪತ್ನಿಯನ್ನು (Wife) ಕೊಂದು ಆಕೆಯ ಶವವನ್ನು ಹೂತಿಟ್ಟ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಪ್ರದೇಶದಲ್ಲಿ ನಡೆದಿದೆ.

    ದಿನೇಶ್ ಬಂಧಿತ ಆರೋಪಿ. ದಿನೇಶ್ ತರಕಾರಿ ಬೆಳೆಗಾರನಾಗಿದ್ದ. ದಿನೇಶ್ ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿದ್ದ. ಈ ಹಿನ್ನೆಲೆಯಲ್ಲಿ ಕೋಪಗೊಂಡ ದಿನೇಶ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಶವವನ್ನು ಒಂದು ದಿನ ಮನೆಯಲ್ಲಿಟ್ಟು ಹೊಲದಲ್ಲಿ ಹೂತಿದ್ದಾನೆ.

    ಅಷ್ಟೇ ಅಲ್ಲದೇ ಶವ ಬೇಗನೇ ಕೊಳೆಯಲಿ ಎಂದು 30 ಕೆ.ಜಿ ಉಪ್ಪನ್ನು (Salt) ದೇಹದ ಮೇಲೆ ಹಾಕಿದ್ದ. ಅದಾದ ಬಳಿಕ ಕೊಲೆಯನ್ನು ಮುಚ್ಚಿ ಹಾಕಲು, ಶವವನ್ನು ಹೂತು ಹಾಕಿರುವುದು ಯಾರಿಗೂ ಅನುಮಾನ ಬರಬಾರದೆಂದು ಶವವನ್ನು ಹೂತು ಹಾಕಿದ್ದ ಸ್ಥಳದಲ್ಲಿ ತರಕಾರಿಗಳನ್ನು (Vegetable) ಬೆಳೆದಿದ್ದ.

    ಅದಾದ ಕೆಲ ದಿನಗಳ ನಂತರ ದಿನೇಶ್ ತನ್ನ ಪತ್ನಿ ಕಾಣೆ ಆಗಿದ್ದಾಳೆ ಎಂದು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದಾಗ ದಿನೇಶ್ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಕೊಲೆ ಮಾಡಿರುವುದಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದೇವರ ದರ್ಶನ ಪಡೆದುಕೊಂಡ ಮರಳುವಾಗ ಕಂಟೇನರ್, ಕ್ರೂಸರ್ ವಾಹನ ಅಪಘಾತ- ಮಹಿಳೆ ಸಾವು

    ಘಟನೆಗೆ ಸಂಬಂಧಿಸಿ ಪೊಲೀಸರು ದಿನೇಶ್‍ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ – ಕಾರು ಡಿಕ್ಕಿ, ಮೇಲಿಂದ ಹಾರಿದ ಯುವತಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಡವಾಗಿ ಮನೆಗೆ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ಮುಖಕ್ಕೆ ಆ್ಯಸಿಡ್ ಎರಚಿದ ಪತ್ನಿ!

    ತಡವಾಗಿ ಮನೆಗೆ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ಮುಖಕ್ಕೆ ಆ್ಯಸಿಡ್ ಎರಚಿದ ಪತ್ನಿ!

    ಲಕ್ನೋ: ಮನೆಗೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ರೊಚ್ಚಿಗೆದ್ದ ಪತ್ನಿಯೊಬ್ಬಳು ಪತಿ ಮುಖದ ಮೇಲೆ ಆ್ಯಸಿಡ್ ಎರಚಿದ ವಿಲಕ್ಷಣ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದ ಕೂಪರ್ ಗಂಜ್ ಪ್ರದೇಶದಲ್ಲಿ ನಡೆದಿದೆ.

    ಆ್ಯಸಿಡ್ ದಾಳಿ (Acid Attack) ಗೆ ಒಳಗಾದ ವ್ಯಕ್ತಿಯನ್ನು ಡಬ್ಬು ಎಂದು ಗುರುತಿಸಲಾಗಿದ್ದು, ಉರ್ಸಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಒಡಿಶಾ ಆರೋಗ್ಯ ಸಚಿವರ ಹತ್ಯೆ ಕೇಸ್ – ASIಗೆ ಇತ್ತು Bipolar Disorder ಮಾನಸಿಕ ಕಾಯಿಲೆ

    ಡಬ್ಬು ತನ್ನ ಪತ್ನಿ (Wife) ಜೊತೆ ಮನೆಗೆ ಬರಲು ತಡವಾಗಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಅಲ್ಲದೆ ಪತಿಯ ಮಾತಿನಿಂದ ಸಿಟ್ಟಿಗೆದ್ದ ಪತ್ನಿ ಆ್ಯಸಿಡ್ ಬಾಟ್ಲಿ ತೆಗೆದುಕೊಂಡು ಮುಚ್ಚಳ ತೆಗೆದು ಪತಿಯ ಮುಖಕ್ಕೆ ಎರಚಿದ್ದಾಳೆ ಎಂದು ಆತ ನಡೆದ ಘಟನೆಯನ್ನು ವಿವರಿಸಿದ್ದಾನೆ.

    ಪ್ರಕರಣ ಸಂಬಂಧ ಪೊಲೀಸರು ಪತ್ನಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಗಳ ಎದುರೇ ಪತ್ನಿಯನ್ನು ಕೊಂದ ಪತಿ

    ಮಗಳ ಎದುರೇ ಪತ್ನಿಯನ್ನು ಕೊಂದ ಪತಿ

    ಮಂಡ್ಯ: ಕುಡಿದ ಮತ್ತಿನಲ್ಲಿ ಮಗಳ (Daughter) ಕಣ್ಣೆದುರೇ ತಾಯಿಯನ್ನು (Mother) ತಂದೆ (Father) ಕೊಲೆ ಮಾಡಿರುವ ದಾರುಣ ಘಟನೆ ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಜರುಗಿದೆ.

    ಮೃತ ಮಹಿಳೆಯನ್ನು ಅರಳಕುಪ್ಪೆ ಗ್ರಾಮದ ಶೋಭಾ (43) ಗುರುತಿಸಲಾಗಿದೆ. ಮನೋಹರ್ (48) ಪತ್ನಿಯನ್ನೇ (Wife) ಕೊಂದ ಪಾಪಿ ಪತಿಯಾಗಿದ್ದಾನೆ(Husband). 23 ವರ್ಷಗಳ ಹಿಂದೆ ಒಂದೇ ಗ್ರಾಮದ ಶೋಭಾ ಹಾಗೂ ಮನೋಹರ್ ಪ್ರೀತಿಸಿ ಪೋಷಕರ ವಿರೋಧದ ನಡುವೆ ಮದುವೆ ಆಗಿದ್ದರು. ಮನೋಹರ್ ಕೆಲಸಕ್ಕೆ ಹೋಗದೆ ಉಂಡಾಡಿ ಗುಂಡನ ರೀತಿ ಓಡಾಡಿಕೊಂಡಿದ್ದ. ಇಬ್ಬರು ಮಕ್ಕಳಿದ್ದರೂ, ಬೇಜವಾಬ್ದಾರಿಯಿಂದ ಕಂಠಪೂರ್ತಿ ಕುಡಿದು ಪ್ರತಿನಿತ್ಯ ಪತ್ನಿ ಜೊತೆ ಮನೋಹರ್ ಗಲಾಟೆ‌ ಮಾಡುತ್ತಿದ್ದ.

    ಹೀಗೆ ಮಂಗಳವಾರವೂ ಬೈಕ್ ಸಾಲದ ವಿಚಾರಕ್ಕೆ ಮನೆಯಲ್ಲಿ ಕಿರಿಕ್ ಆಗಿದೆ. ಮಗನಿಗೆ ಸಾಲದ ಕಂತಿನಲ್ಲಿ ಶೋಭಾ ಬೈಕ್ ಕೊಡಿಸಿದ್ದರು. ಕಳೆದ 3 ತಿಂಗಳಿನಿಂದ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ. ಮನೋಹರ್‌ಗೆ ಕರೆ ಮಾಡಿ ಕಂತು ಕಟ್ಟುವಂತೆ ಫೈನಾನ್ಸ್ ಕಂಪನಿಯವರು ಕೇಳಿದ್ದರು. ಅಷ್ಟೇ ಅಲ್ಲದೆ ಮನೆ ಬಳಿಗೆ ಬಂದು ಹಣ ಕಟ್ಟುವಂತೆ ಖಾಸಗಿ ಫೈನಾನ್ಸ್ ಸಿಬ್ಬಂದಿ ಒತ್ತಡ ಹಾಕಿದ್ದರು. ಈ ವಿಚಾರಕ್ಕೆ ಕುಪಿತಗೊಂಡ ಮನೋಹರ್‌ನಿಂದ ಜಗಳ ಪ್ರಾರಂಭವಾಗಿದ್ದು, ಕುಡಿದ ಮತ್ತಿನಲ್ಲಿ ಪತ್ನಿಗೆ ಮನಬಂದಂತೆ ಬೈದು ಗಲಾಟೆ ಮಾಡಿದ್ದ. ಪರಸ್ಪರ ಬೈದಾಟದಿಂದ ಪತಿ, ಪತ್ನಿಯರ ಜಗಳ ತಾರಕಕ್ಕೆ ಏರಿದೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮನೋಹರ್ ಪತ್ನಿ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ. ಕುಡುಗೋಲಿನಿಂದ ಮಗಳ ಕಣ್ಣೆದುರೇ ಶೋಭಾಳ ಮೇಲೆ ಮನೋಹರ್ ಹಲ್ಲೆ ನಡೆಸಿದ್ದಾನೆ. ಇದನ್ನೂ ಓದಿ: ರವಿ ಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

    ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಶೋಭಾ ಸಹಾಯಕ್ಕೆ ಸ್ಥಳೀಯರು ಬಂದಿಲ್ಲ, ಮಗಳು ಅನುಷಾ ಕೇಳಿಕೊಂಡರೂ ಯಾರ ಸಹಾಯವೂ ಸಿಗಲಿಲ್ಲ. ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಕೂಡ ಬಾರದ ಕಾರಣ ಶೋಭಾ ಸಾವನ್ನಪ್ಪಿದ್ದಾಳೆ. ಪತ್ನಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಮನೋಹರ್‌ನನ್ನು ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ತಂದೆಗೆ ಕಠಿಣ ಶಿಕ್ಷೆ ನೀಡಿ, ಸಾಯೋವರೆಗೂ ಜೈಲಲ್ಲೇ ಕೊಳೆಯುವ ರೀತಿ ಮಾಡಬೇಕು ಎಂದು ಪುತ್ರಿ ಅನುಷಾ ಮನವಿ ಮಾಡಿದ್ದಾಳೆ. ಸದ್ಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೋಮುವಾದಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮಿಸ್ಟರ್ ಕುಮಾರಸ್ವಾಮಿ ಕಾರಣ – ಸಿದ್ದು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪತ್ನಿಯ ಪ್ರಿಯಕರನನ್ನು ಕೊಂದು ದೇಹದ ಭಾಗಗಳನ್ನು ಕಸದ ರಾಶಿಯಲ್ಲಿ ಎಸೆದ

    ಪತ್ನಿಯ ಪ್ರಿಯಕರನನ್ನು ಕೊಂದು ದೇಹದ ಭಾಗಗಳನ್ನು ಕಸದ ರಾಶಿಯಲ್ಲಿ ಎಸೆದ

    ಲಕ್ನೋ: ವ್ಯಕ್ತಿಯೊಬ್ಬ ತನ್ನ ಪತ್ನಿಯ ಪ್ರಿಯಕರನನ್ನು (Lover) ಕೊಂದು ಆತನ ದೇಹವನ್ನು 12ಕ್ಕಿಂತಲೂ ಹೆಚ್ಚು ಪೀಸ್‍ಗಳನ್ನಾಗಿ ಮಾಡಿದ ಘಟನೆ ಉತ್ತರ ಪ್ರದೇಶದ (Uttara Pradesh) ಗಾಜಿಯಾಬಾದ್‍ನಲ್ಲಿ ನಡೆದಿದೆ.

    ಮೀಲಾಲ್ ಪ್ರಜಾಪತಿ ಬಂಧಿತ ಆರೋಪಿ. ಮೀಲಾಲ್ ಪ್ರಜಾಪತಿಯ ಪತ್ನಿಯು (Wife) ಗಾಜಿಯಾಬಾದ್ ನಿವಾಸಿ ಅಕ್ಷಯ್‍ನೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಳು. ಇದರಿಂದ ಕೋಪಗೊಂಡ ಮೀಲಾಲ್ ಪ್ರಜಾಪತಿಯು ಅಕ್ಷಯನನ್ನು ಹತ್ಯೆ ಮಾಡಿದ್ದಾನೆ.

    ಘಟನೆಯೇನು?: ಮೀಲಾಲ್ ಮನೆಯಲ್ಲಿಲ್ಲದ ಸಂದರ್ಭದಲ್ಲಿ ಅಕ್ಷಯ ಆತನ ಮನೆಗೆ ಭೇಟಿ ನೀಡಿದ್ದ. ಅಷ್ಟೇ ಅಲ್ಲದೇ ಮೀಲಾಲ್ ಪತ್ನಿ ನೀಡಿದ್ದ ಚಹಾವನ್ನು ಕುಡಿಯುತ್ತಿರುವಾಗ, ಮಿಲಾಲ್‍ನ ಮಗಳ ಕಾಲಿಗೆ ಕುದಿಯುತ್ತಿರುವ ಚಹಾ ಬಿದ್ದಿದೆ. ಇದರಿಂದಾಗಿ ಆಕೆಗೆ ಸುಟ್ಟಗಾಯಗಳಾಗಿದ್ದವು.

    ಮಿಲಾಲ್ ಮನೆಗೆ ಹಿಂದಿರುಗಿದಾಗ ಮಗಳಿಗೆ ಸುಟ್ಟ ಗಾಯಗಳಾಗಿರುವುದನ್ನು ಗಮನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆತ ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ ಸುಟ್ಟಗಾಯಗಳು ಗಂಭೀರವಾಗಿದ್ದರಿಂದ ಆಸ್ಪತ್ರೆಯಲ್ಲೇ ಇರಲು ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    crime

    ಪತ್ನಿಯ ಅಕ್ರಮ ಸಂಬಂಧ ಜೊತೆಗೆ ಮಗಳಿಗೆ ತೊಂದರೆ ಆಗಿರುವುದನ್ನು ಗಮನಿಸಿದ ಮಿಲಾಲ್ ಕೋಪಗೊಂಡು ಅಕ್ಷಯ್‍ನನ್ನು ಹತ್ಯೆ ಮಾಡಲು ಯೋಜಿಸಿದ್ದಾನೆ. ಅಷ್ಟೇ ಅಲ್ಲದೇ ತನ್ನ ಯೋಜನೆಯಂತೆ ತನ್ನ ಪತ್ನಿ ಬಳಿ ಅಕ್ಷಯನನ್ನು ಮನೆಗೆಲಸದಲ್ಲಿ ಸಹಾಯ ಮಾಡಲು ಕರೆ ಮಾಡುವಂತೆ ತಿಳಿಸಿದ್ದಾನೆ.

    ಅದಾದ ಬಳಿಕ ಅಕ್ಷಯ್ ಮನೆಗೆ ಬಂದಾಗ ಮೀಲಾಲ್ ಆತನ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ನಂತರ ದೇಹವನ್ನು ಕತ್ತರಿಸಿ, ಆ ಭಾಗಗಳನ್ನು ಗೋಣಿ ಚೀಲಗಳಲ್ಲಿ ತುಂಬಿ ಗಾಜಿಯಾಬಾದ್‍ನ ಕಸದ ರಾಶಿಗೆ ಎಸೆದಿದ್ದಾನೆ. ಇದನ್ನೂ ಓದಿ: ಡ್ಯಾಂ ಆವರಣಕ್ಕೆ ತೆರಳಲು ಅವಕಾಶ ನೀಡಲಿಲ್ಲವೆಂದು ಸೆಕ್ಯೂರಿಟಿಗಾರ್ಡ್‌ಗೆ ಮನಬಂದಂತೆ ಥಳಿಸಿದ ಯುವಕರು

    ಕೆಲವರು ಕಸದ ರಾಶಿಯಲ್ಲಿ ದೇಹದ ಭಾಗಗಳನ್ನು ನೋಡಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಈ ವೇಳೆ ಮೀಲಾಲ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ದ್ವೇಷಕ್ಕೆ 84 ತೆಂಗಿನ ಸಸಿಗಳ ಮಾರಣಹೋಮ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗರ್ಭಿಣಿಯಾಗಲು ಮಹಿಳೆಗೆ ಮಾನವನ ಮೂಳೆ ತಿನ್ನುವಂತೆ ಒತ್ತಾಯಿಸಿದ ಪಾಪಿ ಪತಿ

    ಗರ್ಭಿಣಿಯಾಗಲು ಮಹಿಳೆಗೆ ಮಾನವನ ಮೂಳೆ ತಿನ್ನುವಂತೆ ಒತ್ತಾಯಿಸಿದ ಪಾಪಿ ಪತಿ

    ಪುಣೆ: ಗರ್ಭಿಣಿಯಾಗಲು ಮಹಿಳೆಯೊಬ್ಬಳಿಗೆ (Woman) ಮಾನವನ ಮೂಳೆಯನ್ನು (Human Bones) ತಿನ್ನುವಂತೆ ಆಕೆಯ ಪತಿ ಹಾಗೂ ಅತ್ತೆ ಒತ್ತಾಯಿಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ (Pune) ನಡೆದಿದೆ.

    ಘಟನೆಯು ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ಅತ್ತೆ ಹಾಗೂ ಪತಿ ಸೇರಿ ಮಹಿಳೆಗೆ ಮಕ್ಕಳಾಗುವಂತೆ ಮಾಟಗಾರರ (black magic) ಸಲಹೆ ಮೇರೆಗೆ ಅನೇಕ ಮೂಢನಂಬಿಕೆಗಳನ್ನು ಆಚರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಅತ್ತೆ, ಹಾಗೂ ಪತಿ ಅಮವಾಸ್ಯೆ ಬಂದರೆ ಮಹಿಳೆಗೆ ಮಕ್ಕಳಾಗಲು ಅನೇಕ ಮೂಢ ನಂಬಿಕೆಯ ಆಚರಣೆಗಳನ್ನು ಮಾಡಲು ಒತ್ತಾಯಿಸುತ್ತಿದ್ದರು. ಅಷ್ಟೇ ಅಲ್ಲದೇ ಆಕೆಯಳೊಬ್ಬಳನ್ನೇ ರಾತ್ರಿ ಸ್ಮಶಾನಕ್ಕೆ ಕಳುಹಿಸುವುದು ಜೊತೆಗೆ ಸತ್ತ ಮಾನವರ ಮೂಳೆಗಳನ್ನು ತಿನ್ನಲು ಬಲವಂತ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

    husband forced a woman to eat human bones to get pregnant

    ಘಟನೆಗೆ ಸಂಬಂಧಿಸಿ ಮಹಿಳೆಯು ಪುಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ಮಹಿಳೆ ನೀಡಿದ ದೂರಿನನ್ವಯ ಪತಿ, ಅತ್ತೆ ಹಾಗೂ ಮಾವ ಸೇರಿದಂತೆ 7 ಜನರ ವಿರುದ್ಧ ಮೂಢನಂಬಿಕೆ ವಿರೋಧಿ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಪರ್ಷಿಯನ್ ಬೋಟ್ ಮುಳುಗಡೆ – 17 ಮೀನುಗಾರರ ರಕ್ಷಣೆ

    POLICE

    ಈ ವೇಳೆ ಮಹಿಳೆಯು ಪತಿ ಹಾಗೂ ಅತ್ತೆ ಇಬ್ಬರೂ ಮದುವೆ ಸಮಯದಲ್ಲಿ ನಗದು, ಚಿನ್ನ, ಹಾಗೂ ಬೆಳ್ಳಿ ಆಭರಣಗಳನ್ನು ಒಳಗೊಂಡ ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದರ ಬಗ್ಗೆಯೂ ಆಕೆ ಆರೋಪಿಸಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯರನ್ನ ಹಣಿಯಲು ರಣತಂತ್ರ- ದಲಿತರಿಂದ ಕರಪತ್ರ ಹಂಚಿ ಅಭಿಯಾನ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮತಾಂತರಕ್ಕೆ ಒಪ್ಪದ ಪತ್ನಿಗೆ ಸಿಗರೇಟ್‍ನಿಂದ ಸುಟ್ಟು, ಒತ್ತಾಯದಿಂದ ಮಾಂಸ ತಿನ್ನಿಸಿದ!

    ಮತಾಂತರಕ್ಕೆ ಒಪ್ಪದ ಪತ್ನಿಗೆ ಸಿಗರೇಟ್‍ನಿಂದ ಸುಟ್ಟು, ಒತ್ತಾಯದಿಂದ ಮಾಂಸ ತಿನ್ನಿಸಿದ!

    ಲಕ್ನೋ: ಮತಾಂತರ (Conversion) ಕ್ಕೆ ಒಪ್ಪದ ಪತ್ನಿಯನ್ನು ಪ್ರತಿನಿತ್ಯ ಥಳಿಸಿ, ಸಿಗರೇಟ್‍ (Cigrette) ನಿಂದ ಸುಟ್ಟು ಬಲವಂತವಾಗಿ ಮಾಂಸ ತಿನ್ನಿಸಿದ ಘಟನೆಯೊಂದು ಉತ್ತರಪ್ರದೆಶ (Uttarapradesh) ಲಕ್ನೋದಲ್ಲಿ ನಡೆದಿದೆ.

    ಆರೋಪಿ ಪತಿಯನ್ನು ಚಂದ್ ಮೊಹಮ್ಮದ್ (Chand Mohammad) ಎಂದು ಗುರುತಿಸಲಾಗಿದೆ. ಈತ ತಾನು ಹಿಂದೂ ಅಂತ ಹೇಳಿಕೊಂಡು ಸಂತ್ರಸ್ತೆಯನ್ನು ಮದುವೆಯಾಗಿದ್ದಾನೆ. ಆ ಬಳಿಕ ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಇದನ್ನೂ ಓದಿ: ಹರಿಯಾಣದ ಮಾಜಿ ಸಚಿವರ ಪುತ್ರ ವಿಷ ಸೇವಿಸಿ ಆತ್ಮಹತ್ಯೆ

    ಪತಿ ನನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದೇಹದ ಮೇಲೆಲ್ಲ ಸಿಗರೇಟ್‍ನಿಂದ ಸುಟ್ಟಿದ್ದಾನೆ. ಅಲ್ಲದೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಲು ಒಪ್ಪದಿದ್ದಕ್ಕೆ ನನ್ನ ಮೇಲೆ ಬಿಸಿ ಎಣ್ಣೆ ಎರಚಿದ್ದಾನೆ. ಇಷ್ಟು ಸಾಲದೆಂಬಂತೆ ಒಂದು ವೇಳೆ ನೀನು ಮತಾಂತರಕ್ಕೆ ಒಪ್ಪದಿದ್ದರೆ ನನ್ನ ಸಂಬಂಧಿಕರಿಂದಲೇ ನಿನ್ನ ಮೇಲೆ ಅತ್ಯಾಚಾರ ಮಾಡಿಸುತ್ತೇನೆ. ಅಲ್ಲದೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಪೊಲೀಸರ ಬಳಿ ದೂರಿದ್ದಾಳೆ.

    ಪ್ರತಿ ದಿನ ಪತಿಯ ಹಿಂಸೆ ತಡೆದುಕೊಳ್ಳಲು ಸಾಧ್ಯವಾಗದಿದ್ದಾಗ ದೂರು ನೀಡಲೆಂದು ಹೋದರೆ ಪತಿ ನನ್ನನ್ನು ಕೂಡಿ ಹಾಕಿ ಥಳಿಸುತ್ತಾನೆ. 5 ತಿಂಗಳ ಗರ್ಭಿಣಿ ಇದ್ದಾಗಲೂ ಆತ ನನ್ನ ಹೊಟ್ಟೆಗೆ ಹೊಡೆದಿದ್ದರಿಂದ ಗರ್ಭಪಾತವಾಗಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

    ಸದ್ಯ ಮಹಿಳೆಯ ದೂರನ್ನು ಪೊಲೀಸರು ಸ್ವೀಕರಿಸಿದ್ದು, ಪತಿಯಿಂದ ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಒಂಟಿ ಮನೆ ಕಳ್ಳತನ ಮಾಡಲು ಹೋಗಿದ್ದ ಗ್ಯಾಂಗ್‌ಗೆ ಶಾಕ್ – ಸಿನಿಮೀಯ ರೀತಿಯಲ್ಲಿ ರೋಚಕವಾಗಿ ಸೆರೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಫೇಸ್‍ಬುಕ್ ಸುಂದರಿಗಾಗಿ ಪತ್ನಿಗೆ ವಿಷವಿಟ್ಟ ಪತಿರಾಯ!

    ಫೇಸ್‍ಬುಕ್ ಸುಂದರಿಗಾಗಿ ಪತ್ನಿಗೆ ವಿಷವಿಟ್ಟ ಪತಿರಾಯ!

    ಕೋಲಾರ: ತನ್ನ ಫೇಸ್‍ಬುಕ್ ಸುಂದರಿಗಾಗಿ ಪತಿ (Husband) ಮಹಾಶಯನೊಬ್ಬ ತನ್ನ ಪತ್ನಿಗೆ ವಿಷವಿಟ್ಟ ವಿಲಕ್ಷಣ ಘಟನೆಯೊಂದು ಕೋಲಾರದಲ್ಲಿ ನಡೆದಿದೆ.

    ಈ ಘಟನೆ ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಕಾನಗಮಾಕಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದ ಸದ್ಯ ಪತ್ನಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪತ್ನಿ, ಮಗನ ಸಾವಿಗೆ ಕಾರಣರಾದವ್ರ ವಿರುದ್ಧ ಕ್ರಮಕ್ಕೆ ಲೋಹಿತ್ ದೂರು- ಎಫ್‍ಐಆರ್

    9 ವರ್ಷಗಳ ಹಿಂದೆ ಹಿರಿಯರ ಮುಂದೆ ಸಪ್ತಪದಿ ತುಳಿದ ಪತಿಗೆ ಫೇಸ್‍ಬುಕ್‍ನಲ್ಲಿ ಯುವತಿಯೊಬ್ಬಳ ಪರಿಚಯವಾಗಿದೆ. ಈ ಪರಿಚಯವು ಇದೀಗ ತನ್ನ ಪತ್ನಿಯನ್ನೇ ಮರೆಯುವಂತೆ ಮಾಡಿದೆ.

    ಇತ್ತ ತವರು ಮನೆಗೆ ಪತ್ನಿ ಕಳುಹಿಸಿದ ಭೂಪ ತವರು ಮನೆಯಲ್ಲಿಯೇ ಪತ್ನಿಗೆ ವಿಷವಿಟ್ಟಿದ್ದಾನೆ. ಪರಿಣಾಮ ತೀವ್ರ ಅಸ್ವಸ್ಥತೆಯ ಪತ್ನಿ ಆಶಾರಾಣಿ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದು, ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದುವೆಯಾಗಲು ಹೆಣ್ಣು ಹುಡುಕಿಕೊಡುವಂತೆ ಯುವಕ ಕರೆ- ಡಿಟೇಲ್ಸ್ ಕಳುಹಿಸು ಅಂದ್ರು ಶಾಸಕ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಗಳ ಎದುರೇ ಇಟ್ಟಿಗೆಯಿಂದ ಹೊಡೆದು ಪತ್ನಿ ಕೊಂದ ಪಾಪಿ

    ಮಗಳ ಎದುರೇ ಇಟ್ಟಿಗೆಯಿಂದ ಹೊಡೆದು ಪತ್ನಿ ಕೊಂದ ಪಾಪಿ

    ಪಾಟ್ನಾ: ವ್ಯಕ್ತಿಯೊಬ್ಬ ತನ್ನ ನಾಲ್ಕು ವರ್ಷದ ಮಗಳ ಎದುರೇ ಪತ್ನಿಯ ತಲೆ ಮತ್ತು ಮುಖಕ್ಕೆ ಇಟ್ಟಿಗೆಯಿಂದ ಪದೇ ಪದೇ ಹೊಡೆದು ಕೊಂದಿರುವ ಘಟನೆ ಬಿಹಾರದ (Bihar) ರಾಘೋಪುರ ಟಿಕಾರ್‌ನಲ್ಲಿ ನಡೆದಿದೆ.

    ಮೃತಳನ್ನು ಇಶಾ ದೇವಿ (26) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ತನ್ನ ಪತಿ ಪಂಕಜ್ ಯಾದವ್ ಜೊತೆ ಇಶಾ ದೇವಿಗೆ ಜಗಳವಾಗಿದೆ. ವಾಗ್ವಾದದ ವೇಳೆ ಪಂಕಜ್ ಕೋಪದಿಂದ ಇಟ್ಟಿಗೆಯನ್ನು ಎತ್ತಿಕೊಂಡು ಆಕೆಯ ತಲೆ ಮತ್ತು ಮುಖಕ್ಕೆ ಪದೇ ಪದೇ ಹೊಡೆದು ಸ್ಥಳದಲ್ಲೇ ಆಕೆಯನ್ನು ಕೊಂದಿದ್ದಾನೆ. ಕೊಲೆಯ ನಂತರ ತನ್ನ ಹೆಂಡತಿಯ ಶವವನ್ನು ಹತ್ತಿರದ ತೋಟದಲ್ಲಿ ಎಸೆದಿದ್ದಾನೆ. ಇದನ್ನೂ ಓದಿ: ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದ ಬಿರಿಯಾನಿ ತಿಂದು ಕಾಸರಗೋಡು ಯುವತಿ ಸಾವು

    ಆಕೆಯ ನಾಲ್ಕು ವರ್ಷದ ಮಗಳ ಎದುರೇ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಂಡತಿಯನ್ನು ಕೊಂದು ಆರೋಪಿ ಪರಾರಿಯಾಗಿದ್ದಾನೆ. ಕೊಲೆ ಬಗ್ಗೆ ಆತನ ಮಗಳು ದೂರು ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆಯಾದ ಮರುದಿನ ಬೆಳಗ್ಗೆ ತೋಟಕ್ಕೆ ತೆರಳಿದ ಸ್ಥಳೀಯರು ಶವವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹಿಳೆ ಮುಖವು ಸಂಪೂರ್ಣವಾಗಿ ವಿರೂಪಗೊಂಡಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇದನ್ನೂ ಓದಿ: ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಶಂಕರ್ ಮಿಶ್ರಾ ಬೆಂಗಳೂರಲ್ಲಿ ಬಂಧನ

    ಡಿಎಸ್‌ಪಿ ಅಜಯ್ ಕುಮಾರ್ ಚೌಧರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k