Tag: ಪತಿ

  • ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ್ಳು!

    ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ್ಳು!

    ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಯಲಹಂಕದಲ್ಲಿ ನಡೆದಿದೆ.

    ಮೃತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಚಂದ್ರಶೇಖರ್ ಪತ್ನಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಹಿಂದೂಪುರ (Hindupura) ದ ಸುರೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ.

    ಚಂದ್ರಶೇಖರ್ (Chandrashekhar) ಮತ್ತು ಶ್ವೇತಾ (Shwetha) ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆ (Marriage) ಯಾಗಿದ್ದರು. ಇಬ್ಬರ ನಡುವೆ ಹದಿನಾರು ವರ್ಷದ ಅಂತರ ಇತ್ತು. ಆದರೂ ಅಕ್ಕನ ಮಗಳು ಅನ್ನೋ ಕಾರಣಕ್ಕೆ ಮನೆಯವರು ಬಲವಂತದಿಂದ ಮದುವೆ ಮಾಡಿಸಿದ್ದರು. ಇದನ್ನೂ ಓದಿ: ಪ್ಲ್ಯಾನ್ ಮಾಡಿಯೇ ಮಳವಳ್ಳಿಯ ಬಾಲಕಿಯನ್ನು ರೇಪ್ ಮಾಡಿದ್ದ ಆರೋಪಿ ಕಾಂತರಾಜು

    ಮದುವೆಯಾದ ಬಳಿಕ ಇಬ್ಬರ ಸಂಸಾರ ಸರಿ ಇರಲಿಲ್ಲ. ಶ್ವೇತಾಗೆ ಕಾಲೇಜು ಗೆಳೆಯರು ಹಾಗೂ ಬೇರೆ ಸ್ನೇಹಿತರ ವಿಚಾರಕ್ಕೆ ಹಲವಾರು ಬಾರಿ ಜಗಳ ಆಗಿದೆ. ಇತ್ತ ಸುರೇಶ್ ಎಂಬಾತನ ಜೊತೆಗೂ ಶ್ವೇತಾ ಸಂಪರ್ಕದಲ್ಲಿದ್ದಳು. ಇಷ್ಟು ಮಾತ್ರವಲ್ಲದೇ ಪತಿ ಇಲ್ಲದ ಸಮಯದಲ್ಲಿ ಇಬ್ಬರು ಸೇರುತ್ತಿದ್ದರು. ಈ ನಡುವೆ ಪತಿ ಇದ್ದರೆ ಇದೆಲ್ಲಾ ಕಷ್ಟ ಅಂದುಕೊಂಡ ಶ್ವೇತಾಳಿಗೆ ಆತನನ್ನೆ ಇಲ್ಲದಂತೆ ಮಾಡು ಎಂದು ಸುರೇಶ್ ಐಡಿಯಾ ಕೊಟ್ಟಿದ್ದಾನೆ.

    ಐಡಿಯಾದಂತೆ ಚಂದ್ರಶೇಖರ್ ನನ್ನು ಕೊಲ್ಲುವ ಪ್ಲಾನ್ ಮಾಡಿಕೊಂಡು ಸುರೇಶ್ ಬೆಂಗಳೂರಿಗೆ ಬಂದಿದ್ದ. ಚಂದ್ರಶೇಖರ್ ವಾಸ ಮಾಡ್ತಿದ್ದ ಮನೆಯ ಮೇಲೆಯೇ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಬಳಿಕ ಅಂದರೆ ಅಕ್ಟೋಬರ್ 22ರ ರಾತ್ರಿ ಎಸ್ಕೇಪ್ ಆಗಿದ್ದ. ಆದರೆ ಯಾರು ಕೊಲೆ ಮಾಡಿದ್ದಾರೆ ಎಂದು ಗೊತ್ತೇ ಇಲ್ಲ ಎಂದು ಪೊಲೀಸರ ಮುಂದೆ ಹೇಳಿದ್ದ. ಇದೀಗ ವಿಚಾರಣೆ ಬಳಿಕ ಶ್ವೇತಾ ಹಾಗೂ ಸುರೇಶ್ ಸೇರಿ ಕೊಲೆ ಮಾಡಿರುವುದು ಬಯಲಿಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಮದ್ಯದ ಅಮಲಿನಲ್ಲಿ ವಿಷ ಸೇವಿಸಿದ ಪತಿ- ಮನನೊಂದು ಕಂದನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ

    ಮದ್ಯದ ಅಮಲಿನಲ್ಲಿ ವಿಷ ಸೇವಿಸಿದ ಪತಿ- ಮನನೊಂದು ಕಂದನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ

    ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ (Husband), ಪತ್ನಿ (Wife) ಹಾಗೂ ಪುಟ್ಟ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿ (Belagavi) ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

    ಹೊಳೆಪ್ಪ ಮಾರುತಿ ಮಸ್ತಿ (25), ಈತನ ಪತ್ನಿ ವಾಸಂತಿ (22) ಹಾಗೂ ಒಂದೂವರೆ ವರ್ಷದ ಮಗು ಮೃತ ದುರ್ದೈವಿ. ಮದ್ಯದ ಅಮಲಿನಲ್ಲಿ ಹೊಳೆಪ್ಪ ಪತ್ನಿಯೊಂದಿಗೆ ಜಗಳವಾಡಿದ್ದನು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸುವ ಉದ್ದೇಶದಿಂದ ವಿಷ ಕುಡಿದಿದ್ದನು.

    crime

    ತಕ್ಷಣ ಸ್ನೇಹಿತರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆತ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ. ಇದರಿಂದ ಮನನೊಂದ ಪತ್ನಿ ವಾಸಂತಿ ಕೂಡ ತಮ್ಮ ಒಂದೂವರೆ ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ – ಟ್ರಕ್‍ಗೆ ಗುದ್ದಿದ ಬಸ್ 14 ಸಾವು, 40 ಮಂದಿಗೆ ಗಾಯ

    ಮಗುವನ್ನು ಎತ್ತಿಕೊಂಡು ಊರ ಹೊರಗಿನ ಹೊಲಕ್ಕೆ ಹೋಗಿದ್ದ ವಾಸಂತಿ ಮರಳಿ ಮನೆಗೆ ಬಂದಿರಲಿಲ್ಲ. ಇದರಿಂದ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಾಸಂತಿಯ ಶವ ಕಂಡುಬಂದಿದೆ. ವಾಸಂತಿ ಕಾಲಿನಡಿ ಪುಟ್ಟ ಮಗುವಿನ ಮೃತದೇಹ ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇವರಿಗೆ ಮೂರು ವರ್ಷದ ಮತ್ತೊಬ್ಬಳು ಪುತ್ರಿ ಇದ್ದು, ಆಟವಾಡಲು ಹೊರಗೆ ಹೋಗಿದ್ದರಿಂದ ಬದುಕುಳಿದಿದ್ದಾಳೆ. ಘಟನೆ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ:ಕಳ್ಳತನಕ್ಕೆ ಬಂದ ಮನೆಯಲ್ಲೇ ಖದೀಮ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]

  • ಆಮೆ ಕರಿ ಸರಿಯಾಗಿ ಮಾಡಿಲ್ಲವೆಂದು ಪತ್ನಿಯನ್ನೇ ಕೊಂದು ಹಿತ್ತಲಲ್ಲಿ ಹೂತು ಹಾಕಿದ

    ಆಮೆ ಕರಿ ಸರಿಯಾಗಿ ಮಾಡಿಲ್ಲವೆಂದು ಪತ್ನಿಯನ್ನೇ ಕೊಂದು ಹಿತ್ತಲಲ್ಲಿ ಹೂತು ಹಾಕಿದ

    ಭುವನೇಶ್ವರ್: ಸುಟ್ಟು ಹೊಗಿದ್ದ ಹೋಗಿದ್ದ ಆಮೆ (Turtle) ಕರಿಯನ್ನು ಹಾಕಿದ್ದಕ್ಕೆ ಮದ್ಯವ್ಯಸನಿಯೊಬ್ಬ ಪತ್ನಿಯೊಂದಿಗೆ (Wife) ಜಗಳವಾಡಿ ಆಕೆಯನ್ನು ಕೊಂದು ಮನೆಯ ಹಿತ್ತಲಿನಲ್ಲಿ ಹೂತಿಟ್ಟ ಘಟನೆ ಪಶ್ಚಿಮ ಓಡಿಶಾದ (Odisha) ಸಂಬಲ್‍ಪುರ ಜಿಲ್ಲೆಯಲ್ಲಿ ನಡೆದಿದೆ.

    ರಂಜನ್ ಬಡಿಂಗ್ (36) ಎಂಬಾತ ಪತ್ನಿ ಸಾಬಿತ್ರಿ (35)ಯನ್ನು ಕೊಲೆ ಮಾಡಿದ್ದಾನೆ. ಈತ ಬದ್ಮಾಲ್ ಪಂಚಾಯತ್‍ನ ರೌತ್‍ಪಾರಾ ಗ್ರಾಮದ ತನ್ನ ಮನೆಗೆ ಆಮೆಯನ್ನು ತಂದಿದ್ದನು. ಇದಾದ ಬಳಿಕ ಸಾಬಿತ್ರಿ ಬಳಿ ಕರಿ ಮಾಡಿಕೊಡಲು ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ಸಾಬಿತ್ರಿ ಕರಿ ಮಾಡುವಾಗ ಆಮೆಯ ಮಾಂಸ ಸ್ವಲ್ಪ ಸುಟ್ಟು ಹೋಗಿತ್ತು. ಈ ಹಿನ್ನೆಲೆಯಲ್ಲಿ ವಾಗ್ವಾದ ನಡೆದಿದೆ.

    crime

    ಘಟನೆಗೆ ಸಂಬಂಧಿಸಿ ಆಕೆಯನ್ನು ರಂಜನ್ ತೀವ್ರವಾಗಿ ಥಳಿಸಿದ್ದಾನೆ. ಇದರಿಂದಾಗಿ ಆಕೆ ಪ್ರಜ್ಞಾ ಹೀನಸ್ಥಿತಿಗೆ ತಲುಪಿದ್ದಾಳೆ. ಇದಾದ ಬಳಿಕ ಆತ ಮನೆಯಿಂದ ಹೊರಬಂದಿದ್ದಾನೆ. ಸ್ವಲ್ಪ ಸಮಯದ ನಂತರ ಮನೆಗೆ ಬಂದಾಗ ಆಕೆ ಮೃತ ಪಟ್ಟಿರುವುದನ್ನು ರಂಜನ್ ಗಮನಿಸಿದ್ದಾನೆ. ಇದಾದ ಬಳಿಕ ಯಾರಿಗೂ ತಿಳಿಯದಂತೆ ರಂಜನ್ ಶವವನ್ನು ಹಿತ್ತಲಿನಲ್ಲಿ ಹೂತು ಹಾಕಿದ್ದಾನೆ. ನಂತರ ಸಾಬಿತ್ರಿ ಕೋಪದಿಂದ ಹೊರಟು ಹೋಗಿದ್ದಾಳೆ ಎಂದು ಪ್ರಚಾರ ಮಾಡಿದ್ದಾನೆ. ಇದನ್ನೂ ಓದಿ: ಕಳ್ಳತನಕ್ಕೆ ಬಂದ ಮನೆಯಲ್ಲೇ ಖದೀಮ ಆತ್ಮಹತ್ಯೆ

    ಘಟನೆಗೆ ಸಂಬಂಧಿಸಿ ಸಾಬಿತ್ರಿ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಂಜನ್‍ನ್ನು ವಿಚಾರಣೆ ನಡೆಸಿದಾಗ ಆತ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಗ್ರಾಮಸ್ಥರು ಆತನನ್ನು ಹಿಡಿದು ಪೊಲೀಸರಿಗೆ ಕೊಟ್ಟಿದ್ದಾರೆ. ಈ ವೇಳೆ ರಂಜನ್ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ – ಟ್ರಕ್‍ಗೆ ಗುದ್ದಿದ ಬಸ್ 14 ಸಾವು, 40 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಕೆಲಸ ಬಿಡಲು ನಿರಾಕರಿಸಿದ ಪತ್ನಿಯನ್ನು ಕ್ರೂರವಾಗಿ ಥಳಿಸಿದ

    ಕೆಲಸ ಬಿಡಲು ನಿರಾಕರಿಸಿದ ಪತ್ನಿಯನ್ನು ಕ್ರೂರವಾಗಿ ಥಳಿಸಿದ

    ತಿರುವನಂತಪುರಂ: ಕೆಲಸ (Job) ಬಿಡಲು ನಿರಾಕರಿಸಿದ ಪತ್ನಿಯನ್ನು(Wife) ಪತಿಯೇ ಕ್ರೂರವಾಗಿ ಥಳಿಸಿದ ಘಟನೆ ಕೇರಳದ (Kerala) ತಿರುವನಂತಪುರಂನಲ್ಲಿ ನಡೆದಿದೆ.

    ತಿರುವನಂತಪುರಂ ಮೂಲದ ದಿಲೀಪ್ (27) ಬಂಧಿತ (Arrest) ವ್ಯಕ್ತಿ. ಈತನ ಪತ್ನಿ ಸೂಪರ್ ಮಾರ್ಕೆಟ್‍ನಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ದಿಲೀಪ್‍ಗೆ ಆಕೆ ಅಲ್ಲಿ ಕೆಲಸ ಮಾಡುವುದು ಇಷ್ಟವಿರಲಿಲ್ಲ. ಇದರಿಂದಾಗಿ ಆತ ಪತ್ನಿಗೆ ಕೆಲಸವನ್ನು ಬಿಡಲು ತಿಳಿಸಿದ್ದಾನೆ. ಆದರೆ ಆಕೆ ಒಪ್ಪದಿದ್ದಾಗ ಕ್ರೂರವಾಗಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೇ ದಿಲೀಪ್ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.

    ವೀಡಿಯೋದಲ್ಲಿ ದಿಲೀಪ್ ಪತ್ನಿ ಸಾಲ ತೀರಿಸಲು ಕೆಲಸ ಮಾಡುತ್ತಿದ್ದೇನೆ ಎಂದು ಹೇಳುತ್ತಾಳೆ. ಆದರೆ ದಿಲೀಪ್ ಅದನ್ನು ಅರ್ಥ ಮಾಡಿಕೊಳ್ಳದೆ ಪತ್ನಿಯನ್ನು ಕ್ರೂರವಾಗಿ ಥಳಿಸಿದ್ದಾನೆ. ಇದರಿಂದಾಗಿ ಪತ್ನಿಯ ಮುಖವೆಲ್ಲವೂ ರಕ್ತ ಸಿಕ್ತವಾಗಿದೆ. ಇದನ್ನೂ ಓದಿ: ಇಎಂಐಯಲ್ಲಿ ಸ್ಮಾರ್ಟ್ ಫೋನ್ ಕೊಡಿಸಿದ ಪತಿ- ವಿಷಯ ತಿಳಿದ ಪತ್ನಿ ಆತ್ಮಹತ್ಯೆ

    ಘಟನೆಗೆ ಸಂಬಂಧಿಸಿ ದಿಲೀಪ್ ವಿರುದ್ಧ ಆತನ ಪತ್ನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಮಲಂಕಿಝ ಪೊಲೀಸರು ದಿಲೀಪ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ- ಕೋಟ್ಯಾಂತರ ರೂ. ಕಾಣಿಕೆ ಸಂಗ್ರಹ

    Live Tv
    [brid partner=56869869 player=32851 video=960834 autoplay=true]

  • ಇಎಂಐಯಲ್ಲಿ ಸ್ಮಾರ್ಟ್ ಫೋನ್ ಕೊಡಿಸಿದ ಪತಿ- ವಿಷಯ ತಿಳಿದ ಪತ್ನಿ ಆತ್ಮಹತ್ಯೆ

    ಇಎಂಐಯಲ್ಲಿ ಸ್ಮಾರ್ಟ್ ಫೋನ್ ಕೊಡಿಸಿದ ಪತಿ- ವಿಷಯ ತಿಳಿದ ಪತ್ನಿ ಆತ್ಮಹತ್ಯೆ

    ಭುವನೇಶ್ವರ: ಸ್ಮಾರ್ಟ್ ಫೋನ್‍ಗಾಗಿ (Smart Phone) ಪತಿಯೊಂದಿಗೆ (Husband) ಜಗಳವಾಡಿದ (Conflict) ನಂತರ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಓಡಿಶಾದ (Odisha) ಮಲ್ಕಾನ್‍ಗಿರಿ ಜಿಲ್ಲೆಯ ಕಲಿಮೇಲಾ ಬ್ಲಾಕ್‍ನಲ್ಲಿ ನಡೆದಿದೆ.

    ಜ್ಯೋತಿ ಮೃತ ಮಹಿಳೆ. ಈಕೆ ಒಂದು ವರ್ಷದ ಹಿಂದೆ ಕನ್ನಯ್ಯ ಎಂಬಾತನನ್ನು ಮದುವೆಯಾಗಿದ್ದಳು. ಆ ವೇಳೆ ಆಕೆ ಪತಿ ಕನ್ನಯ್ಯ ಬಳಿ ಸ್ಮಾರ್ಟ್‌ ಫೋನ್ ಕೊಡಿಸಲು ಬೇಡಿಕೆ ಇಟ್ಟಿದ್ದಾಳೆ. ಈ ಹಿನ್ನೆಲೆಯಲ್ಲಿ EMI ಆಧಾರದ ಮೇಲೆ ಜ್ಯೋತಿಗೆ ಕನ್ನಯ್ಯ ಸ್ಮಾರ್ಟ್‍ಫೋನ್ ಖರೀದಿಸಿ ಕೊಟ್ಟಿದ್ದ. ಆದರೆ ಜ್ಯೋತಿಗೆ ಹಣಕಾಸಿನ ವಿಚಾರವನ್ನು ತಿಳಿಸಿರಲಿಲ್ಲ.

    ಆದರೆ ಫೈನಾನ್ಸ್ ಕಂಪನಿಯವರು ಎಲ್ಲಾ ಕಂತನ್ನು ಪಾವತಿಸಿದ ನಂತರ ಡಾಕ್ಯುಮೆಂಟ್‍ ಸಹಿಗಾಗಿ ಕನ್ನಯ್ಯ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಕನ್ನಯ್ಯ ಮನೆಯಲ್ಲಿ ಇರಲಿಲ್ಲ. ಬದಲಿಗೆ ಜ್ಯೋತಿ ಮನೆಯಲ್ಲಿದ್ದಳು. ಇದರಿಂದಾಗಿ ಜ್ಯೋತಿ ಇಎಂಐನಲ್ಲಿ ಮೊಬೈಲ್ ಖರೀದಿಸಿದ ಬಗ್ಗೆ ತಿಳಿದುಕೊಂಡಿದ್ದಾಳೆ. ಪಾಕಿಸ್ತಾನದ ಮಗುವಿಗೆ ಮರುಜೀವ ಕೊಟ್ಟ ಬೆಂಗಳೂರಿನ ವೈದ್ಯರು

    ನಂತರ ಕನ್ನಯ್ಯ ಮನೆಗೆ ಹಿಂದಿರುಗಿದಾಗ ಜ್ಯೋತಿ ಆತನೊಂದಿಗೆ ಜಗಳವಾಡಿ ವಿಷ ಸೇವಿಸಿದ್ದಾಳೆ. ಆಕೆಯ ಕೃತ್ಯದಿಂದಾಗಿ ವಿಚಲಿತನಾದ ಕನ್ನಯ್ಯ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ. ಘಟನೆಗೆ ಸಂಬಂಧಿಸಿ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಜ್ಯೋತಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಇದನ್ನೂ ಓದಿ: ಚಿನ್ನದ ವ್ಯಾಪಾರಿ ಕಣ್ಣಿಗೆ ಖಾರದಪುಡಿ ಎರಚಿ ಚಿನ್ನಾಭರಣ ಕಳ್ಳತನ

    ಘಟನೆಗೆ ಸಂಬಂಧಿಸಿ ಕನ್ನಯ್ಯ ಮಾತನಾಡಿ, ನನ್ನ ಹೆಂಡತಿ ದುಬಾರಿ ಫೋನ್ ಖರೀದಿಸುವಂತೆ ಕೇಳಿದಳು. ಆದರೆ ನನ್ನ ಬಳಿ ಹಣವಿರಲಿಲ್ಲ. ಇದರಿಂದಾಗಿ ನಾನು ಅವಳಿಗೆ ಹೇಳದೆ ಇಎಂಐ ಮೂಲಕ ಫೋನ್ ಖರೀದಿಸಿದ್ದೆ. ಆದರೆ ಆಕೆಗೆ ವಿಷಯ ತಿಳಿದ ನಂತರ ನಮ್ಮ ನಡುವೆ ಜಗಳವಾಗಿತ್ತು. ನಂತರ ಅವಳು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಹಾಸನಾಂಬೆಯ ದರ್ಶನಕ್ಕೆ ಪತ್ನಿಯನ್ನು ಹೊತ್ತು ತಂದ ಪತಿ!

    ಹಾಸನಾಂಬೆಯ ದರ್ಶನಕ್ಕೆ ಪತ್ನಿಯನ್ನು ಹೊತ್ತು ತಂದ ಪತಿ!

    ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ (Hasanamba) ದೇವಿ ದರ್ಶನಕ್ಕೆ ಇಂದು ಭಕ್ತಸಾಗರವೇ ಹರಿದು ಬಂದಿದೆ. ಬೆಳಗ್ಗೆ 6 ಗಂಟೆಯಿಂದಲೂ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ.

    ಒಂದು ಸಾವಿರ ಹಾಗೂ ಮುನ್ನೂರು ರೂ.ನ ವಿಶೇಷ ದರ್ಶನದ ಪಾಸ್ ಪಡೆದವರು ದರ್ಶನಕ್ಕೆ ಹೋಗಲು ಗಂಟೆಗಟ್ಟಲೆ ಕಾಯಬೇಕಾಯಿತು. ವಿಶೇಷ ಚೇತನ ಪತ್ನಿಯ ಆಸೆ ಈಡೇರಿಸಲು ಪತಿಯೊಬ್ಬರು ತನ್ನ ಪತ್ನಿಯನ್ನು ಎತ್ತಿಕೊಂಡು ಬಂದು ದರ್ಶನ ಮಾಡಿಸಿದರು. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಬೀಚೇನಹಳ್ಳಿಯ ನಾಗರಾಜ್ ತಮ್ಮ ಪತ್ನಿ ಗೌರಮ್ಮರನ್ನು ಎತ್ತಿಕೊಂಡು ಬಂದು ದರ್ಶನ ಮಾಡಿಸಿದರು.

    ಕಳೆದ ವರ್ಷ ಕೂಡ ನಾಗರಾಜ್ ಪತ್ನಿಗೆ ದೇವಿ ದರ್ಶನ ಮಾಡಿಸಿದರು. ಭಾರೀ ಭಕ್ತರು ಸರತಿ ಸಾಲಿನಲ್ಲಿ ನಿಂತಿರುವ ನಡುವೆ ವಿಶೇಷ ಚೇತನೆಯನ್ನು ಹೊತ್ತು ದರ್ಶನಕ್ಕೆ ಬಂದ ನಾಗರಾಜ್‍ಗೆ ಪೊಲೀಸರು ಆದ್ಯತೆ ನೀಡಿ, ನೇರವಾಗಿ ಗರ್ಭಗುಡಿ ಸಮೀಪ ಕರೆದೊಯ್ದು ಮಾನವೀಯತೆ ಮೆರೆದರು.

    ಇಂದು ಸರ್ಕಾರಿ ನೌಕರರು ಹಾಗೂ ನ್ಯಾಯಾಂಗ ಇಲಾಖೆಯವರ ಕುಟುಂಬಕ್ಕೆ ದರ್ಶನದ ವ್ಯವಸ್ಥೆ ಮಾಡಿದ್ದರಿಂದ ನೂಕುನುಗ್ಗಲು ಉಂಟಾಗಿ ಪೊಲೀಸರು ಹರಸಾಹಸ ಪಡಬೇಕಾಯಿತು. ಇದನ್ನೂ ಓದಿ: ಹಾಸನಾಂಬ ಜಾತ್ರಾ ಮಹೋತ್ಸವ – ಭಕ್ತರಿಗೆ ದರ್ಶನ ಕೊಟ್ಟ ಹಾಸನಾಂಬೆ

    Live Tv
    [brid partner=56869869 player=32851 video=960834 autoplay=true]

  • ಮದ್ಯದ ಅಮಲಿನಲ್ಲಿ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

    ಮದ್ಯದ ಅಮಲಿನಲ್ಲಿ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

    ರಾಯಚೂರು: ಕೌಟುಂಬಿಕ ಕಲಹದಿಂದಾಗಿ ಪತಿ (Husband) ಯೇ ಪತ್ನಿ (wife)ಯನ್ನು ಕೊಚ್ಚಿ ಕೊಲೆಗೈದಿರುವ ಘಟನೆ ರಾಯಚೂರು ತಾಲೂಕಿನ ಏಗನೂರು ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಶಿಕ್ಷಕಿಯಾಗಿದ್ದ 27 ವರ್ಷದ ನಾಗರತ್ನ ಕೊಲೆಯಾದ ಮಹಿಳೆ.

    ಆರೋಪಿ ಪತಿ ಶಶಿಕುಮಾರ ಕೊಲೆ ಮಾಡಿ ಬಳಿಕ ಪೊಲೀಸರಿಗೆ ಸೆರೆಯಾಗಿದ್ದಾನೆ. ಸದ್ಯ ತಾಯಿಯನ್ನ ಕಳೆದುಕೊಂಡು ಇಬ್ಬರು ಮಕ್ಕಳು ತಬ್ಬಲಿಗಳಾಗಿದ್ದಾರೆ. ನಿತ್ಯ ಕುಡಿದು ಗಲಾಟೆ ಮಾಡುತ್ತಿದ್ದ ಪತಿಯ ಕಾಟಕ್ಕೆ ನಾಗರತ್ನ ಬೇಸತ್ತಿದ್ದಳು. ಗಂಡನ ಕಾಟದಿಂದ ಬೇಸತ್ತು ಕಳೆದ ಎರಡು ದಿನಗಳಿಂದ ಅತ್ತೆಯ ಜೊತೆ ಬೇರೆ ಮನೆಯಲ್ಲಿದ್ದಳು.

    ಗಂಡನ ಕಿರುಕುಳದ ಕುರಿತು ಪೊಲೀಸರಿಗೆ ಮೌಖಿಕ ದೂರು ಕೂಡ ನೀಡಿದ್ದಳು, ಗಂಡನನ್ನ ಠಾಣೆಗೆ ಕರೆಯಿಸಿ ಬುದ್ಧಿ ಹೇಳುವುದಾಗಿ ಪೊಲೀಸರು ಧೈರ್ಯ ನೀಡಿದ್ದರು. ಆದರೆ ಪಾಪಿ ಪತಿ ಶಶಿಕುಮಾರ್ ಮದ್ಯದ ಅಮಲಿನಲ್ಲಿ ಮತ್ತೆ ಜಗಳ ತೆಗೆದು ಕೊಡಲಿಯಿಂದ ಕುತ್ತಿಗೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.

    POLICE JEEP

    ಘಟನೆ ಹಿನ್ನೆಲೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯ ವಿಚಾರಣೆ ಮುಂದುವರಿದಿದೆ. ಇದನ್ನೂ ಓದಿ: ಜೈಲಿನಲ್ಲಿ ಬೆಂಕಿ ಅವಘಡ- ಮಹ್ಸಾ ಅಮಿನಿ ಬೆಂಬಲಿಗರು ಸಾವು, 61 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಮಗಳು ಬೆಡ್‍ಶೀಟ್ ತರಲು ನಿರಾಕರಿಸಿದ ಕೋಪಕ್ಕೆ ಪತ್ನಿಯನ್ನೇ ಕೊಂದ ಭೂಪ!

    ಮಗಳು ಬೆಡ್‍ಶೀಟ್ ತರಲು ನಿರಾಕರಿಸಿದ ಕೋಪಕ್ಕೆ ಪತ್ನಿಯನ್ನೇ ಕೊಂದ ಭೂಪ!

    ಲಕ್ನೋ: ವ್ಯಕ್ತಿಯೊಬ್ಬ ಮಗಳ ಮೇಲಿನ ಕೋಪಕ್ಕೆ ಪತ್ನಿಯನ್ನು ಕೊಲೆಗೈದ ವಿಲಕ್ಷಣ ಘಟನೆಯೊಂದು ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ನಡೆದಿದೆ.

    ಆರೋಪಿಯನ್ನು ಶದಾಬ್ (35) ಎಂದು ಗುರುತಿಸಲಾಗಿದೆ. ಈತ ಮಗಳು (Daughter) ತನಗೆ ಬೆಡ್‍ಶೀಟ್ ತರಲಿಲ್ಲವೆಂದು ಸಿಟ್ಟುಗೊಂಡು ತನ್ನ ಪತ್ನಿಯನ್ನೇ ಕೊಲೆಗೈದಿದ್ದಾನೆ.

    ಮಗಳ ಮೇಲೆ ಸಿಟ್ಟುಗೊಂಡಿದ್ದ ಶದಾಬ್ ಪತ್ನಿ(Wife) ಗೆ ಚೂರಿಯಿಂದ ಇರಿದಿದ್ದಾನೆ. ಬುಧವಾರ ರಾತ್ರಿ ತನ್ನ 5 ವರ್ಷದ ಮಗಳ ಜೊತೆ ತನಗೆ ಬೆಡ್ ಶೀಟ್ (BedSheet) ತಂದುಕೊಡುವಂತೆ ಶದಾಬ್ ಕೇಳಿದ್ದಾನೆ. ಆದರೆ ತನ್ನ ಪಾಡಿಗೆ ಆಟವಾಡುತ್ತಿದ್ದ ಪುಟ್ಟ ಕಂದಮ್ಮ ತನ್ನ ತಂದೆಗೆ ಬೆಡ್ ಶೀಟ್ ತಂದುಕೊಡುವ ಗೋಜಿಗೆ ಹೋಗಿಲ್ಲ.

    How clean is your bed? Study reveals one in three wash sheets just once a year - Starts at 60

    ಈ ಹಿನ್ನೆಲೆಯಲ್ಲಿ ಮಗಳ ಮೇಲೆ ಸಿಟ್ಟುಗೊಂಡ ಶದಾಬ್, ಪತ್ನಿಯನ್ನು ಕರೆದು ಆಕೆಗೆ ಚೆನ್ನಾಗಿ ಥಳಿಸಿದ್ದಾನೆ. ಈ ವೇಳೆ ಪತಿಯ ಏಟಿನಿಂದ ತಪ್ಪಿಸಿಕೊಳ್ಳಲು ಪತ್ನಿ ಯತ್ನಿಸಿದ್ದಾಳೆ. ಇದರಿಂದ ಮತ್ತಷ್ಟು ಸಿಟ್ಟುಗೊಂಡ ಆತ ಅಡುಗೆ ಮನೆಯಲ್ಲಿದ್ದ ಚಾಕು ತಂದು ಆಕೆಯ ದೇಹದ ಮೇಲೆಲ್ಲ ಇರಿದಿದ್ದಾನೆ. ಇದನ್ನೂ ಓದಿ: ಉದ್ಯಮಿಗಳು, ನಿರ್ಮಾಪಕರು, ರಾಜಕಾರಣಿಗಳಿಗೆ ಬೆದರಿಕೆ ಒಡ್ಡಿ ಸುಲಿಗೆ- ಮಹಿಳೆ ಅರೆಸ್ಟ್

    ಘಟನೆಯಿಂದ ಗಂಭೀರ ಗಾಯಗೊಂಡ ಮಹಿಳೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಿಸದೇ ಆಸ್ಪತ್ರೆಯಲ್ಲಿಯೇ ಕೊನೆಯಿಸಿರೆಳೆದರು. ಬಳಿಕ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ರವಾನಿಸಲಾಗಿದೆ.

    ಪ್ರಕರಣ ಸಂಬಂಧ ಮೃತ ಮಹಿಳೆಯ ತಂದೆ ಆರೋಪಿ ಪತಿ ವಿರುದ್ಧ ದೂರು ದಾಖಲಿಸಿದ್ದು, ಶದಾಬ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಗರ್ಲ್ ಫ್ರೆಂಡ್ ಜೊತೆಗೆ ಶಾಪಿಂಗ್ – ರೆಡ್ ಹ್ಯಾಂಡ್ ಆಗಿ ಸಿಕ್ಕ ಪತಿಗೆ ಪತ್ನಿಯಿಂದ ಗೂಸಾ

    ಗರ್ಲ್ ಫ್ರೆಂಡ್ ಜೊತೆಗೆ ಶಾಪಿಂಗ್ – ರೆಡ್ ಹ್ಯಾಂಡ್ ಆಗಿ ಸಿಕ್ಕ ಪತಿಗೆ ಪತ್ನಿಯಿಂದ ಗೂಸಾ

    ಲಕ್ನೋ: ಗರ್ಲ್ ಫ್ರೆಂಡ್ ಜೊತೆಗೆ ಶಾಪಿಂಗ್ ಮಾಡುತ್ತಿದ್ದ ಪತಿಯನ್ನು ರೆಡ್ ಹ್ಯಾಂಡ್ ಆಗಿ ನೋಡಿದ ಪತ್ನಿ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಗಾಜಿಯಾಬಾದ್ ಮಾರುಕಟ್ಟೆಯಲ್ಲಿ (Ghaziabad market) ನಡೆದಿದೆ.

    ಸದ್ಯ ಈ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಮಹಿಳೆ ತನ್ನ ಕೆಲವು ಸ್ನೇಹಿತೆಯರ ಜೊತೆ ಸೇರಿ ಗಂಡನ ಕಾಲರ್ ಹಿಡಿದು ಸಾರ್ವಜನಿಕವಾಗಿ ಥಳಿಸಿದ್ದಾಳೆ. ಈ ವೇಳೆ ವ್ಯಕ್ತಿಯನ್ನು ರಕ್ಷಿಸಲು ಪ್ರಯತ್ನಿಸಿದ ಗರ್ಲ್ ಫ್ರೆಂಡ್ ಮೇಲೂ ಮಹಿಳೆ ಹಲ್ಲೆ ನಡೆಸಿದ್ದಾಳೆ. ಇದನ್ನೂ ಓದಿ: ಮಣಿಪಾಲ ಆಸ್ಪತ್ರೆಯಲ್ಲಿ ಹೊಂದಾಣಿಕೆಯಾಗದ ಬ್ಲಡ್ ಗ್ರೂಪ್‍ನ ಕಿಡ್ನಿ ಕಸಿ ಯಶಸ್ವಿ

    ಈ ವೇಳೆ ಅಂಗಡಿಯ ಮಾಲೀಕರೊಬ್ಬರು ಈ ವಿಚಾರವನ್ನು ಹೊರಗಡೆ ಇಟ್ಟುಕೊಳ್ಳಿ, ಹೊರಗೆ ಹೋಗಿ ಎಂದು ಹೇಳುತ್ತಿರುವುದನ್ನು ವೀಡಿಯೋದಲ್ಲಿ ಕೇಳಿಸಿಕೊಳ್ಳಬಹುದಾಗಿದೆ. ಇದೀಗ ಈ ಸಂಬಂಧ ಮಹಿಳೆ ತನ್ನ ಪತಿ ವಿರುದ್ಧ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಪತಿಯೊಂದಿಗೆ ಜಗಳವಾದ ನಂತರ ಮಹಿಳೆ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದಳು. ಕರ್ವಾ ಚೌತ್‍ಗಾಗಿ (Karwa Chauth) ಶಾಪಿಂಗ್ ಮಾಡಲು ತನ್ನ ತಾಯಿಯೊಂದಿಗೆ ಬಂದಿದ್ದಳು. ಈ ವೇಳೆ ತನ್ನ ಪತಿ ಮತ್ತೊಬ್ಬಳೊಂದಿಗೆ ಓಡಾಡುತ್ತಿರುವುದನ್ನು ನೋಡಿರುವುದಾಗಿ ಮಹಿಳೆ ತಿಳಿಸಿದ್ದಾಳೆ. ಇದನ್ನೂ ಓದಿ: ಮುರುಘಾ ಶ್ರೀಗೆ ಮತ್ತೆ ಸಂಕಷ್ಟ – ಮೈಸೂರಿನಲ್ಲಿ ಮತ್ತೊಂದು FIR ದಾಖಲು

    ಕರ್ವಾ ಚೌತ್ ಹಿಂದೂ ಹಬ್ಬವಾಗಿದ್ದು, ಈ ಹಬ್ಬವನ್ನು ದೇಶದಲ್ಲಿ ಹೆಚ್ಚಾಗಿ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಆಚರಿಸಲಾಗುತ್ತದೆ. ಈ ಹಬ್ಬದ ದಿನ ವಿವಾಹಿತ ಮಹಿಳೆಯರು ಉಪವಾಸ ಮಾಡುತ್ತಾರೆ ಮತ್ತು ತಮ್ಮ ಗಂಡನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಕರ್ವಾ ಚೌತ್ ಅನ್ನು ಕೃಷ್ಣ ಪಕ್ಷದ ನಾಲ್ಕನೇ ದಿನ ಅಥವಾ ಕಾರ್ತಿಕ್ ತಿಂಗಳ ಹಿಂದೂ ಕ್ಯಾಲೆಂಡರ್ ತಿಂಗಳಿನ ಕರಾಳ ಹದಿನೈದು ದಿನದಂದು ಆಚರಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ- ಅಮ್ಮನ ಶವದ ಮುಂದೆ ಪುಟ್ಟ ಮಕ್ಕಳ ಗೋಳಾಟ

    ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ- ಅಮ್ಮನ ಶವದ ಮುಂದೆ ಪುಟ್ಟ ಮಕ್ಕಳ ಗೋಳಾಟ

    ಬೆಂಗಳೂರು: ಅದು ರಾಜಸ್ಥಾನ (Rajasthan) ಮೂಲದ ಪುಟ್ಟ ಕುಟುಂಬ. ಬೆಂಗಳೂರಿನಲ್ಲಿ ನೆಲೆಸಿದ್ದ ಆ ಕುಟುಂಬದಲ್ಲಿ ಪತಿ, ಪತ್ನಿ, ಇಬ್ಬರು ಮುದ್ದಾದ ಮಕ್ಕಳು. ಖುಷಿಗೇನು ಕಡಿಮೆಯಿಲ್ಲದ ಟೈಂನಲ್ಲಿ ಪತಿ ಮಾಡಿದ ಅದೊಂದು ನಂಬಿಕೆ ದ್ರೋಹದಿಂದ ಪತ್ನಿ ನೇಣಿಗೆ ಶರಣಾಗಿದ್ರೆ, ಇಬ್ಬರು ಮಕ್ಕಳು ಅನಾಥವಾಗಿವೆ.

    ರಾಜಸ್ಥಾನ ಮೂಲದ ನರೇಂದ್ರಸಿಂಗ್ ಮತ್ತು ಚಂದಾ ಪುರೋಹಿತ್ 10 ವರ್ಷಗಳ ಹಿಂದೆ ಮದುವೆಯಾಗಿ ಬೆಂಗಳೂರಿಗೆ ಬಂದಿದ್ದರು. ಸ್ಟೀಟ್ ಅಂಗಡಿ ತೆರೆದು ರಾಮಮೂರ್ತಿನಗರದಲ್ಲಿ ಜೀವನ ಕಟ್ಟಿಕೊಂಡಿದ್ರು. ದಂಪತಿಗೆ ಮುದ್ದಾದ ಇಬ್ಬರು ಗಂಡುಮಕ್ಕಳು ಕೂಡ ಇದ್ದಾರೆ. ಪ್ರೀತಿಯಿಂದ ನೋಡ್ಕೊಳ್ಳೋ ಗಂಡ, ಸದಾ ಖುಷಿ ಹಂಚುವ ಮಕ್ಕಳು. ಹೀಗೆ ಖುಷಿಯಾಗಿದ್ದ ವೇಳೆ ಪತಿ ನರೇಂದ್ರಸಿಂಗ್‍ಗೆ ಅವಳೊಬ್ಬಳ ಪರಿಚಯವಾಗಿ, ಆ ಪರಿಚಯ ಅನೈತಿಕ ಸಂಬಂಧವಾಗಿ ಬದಲಾಗಿತ್ತು. ಗಂಡನ ಅಕ್ರಮ ಸಂಬಂಧ ಹೆಂಡತಿ ಚಂದಾಗೆ ಗೊತ್ತಾಗೋಕೆ ಹೆಚ್ಚು ದಿನ ಹಿಡಿಯಲಿಲ್ಲ. ಇದೇ ವಿಚಾರಕ್ಕೆ ಆಗಾಗ ಮನೆಯಲ್ಲಿ ಗಲಾಟೆಯಾಗ್ತಿತ್ತು. ಇದನ್ನೂ ಓದಿ: ಕೇರಳ ನರಬಲಿ ಪ್ರಕರಣ – ನರಭಕ್ಷಕರ ಜಾಡು ಹಿಡಿದಿದ್ದು ಹೀಗೆ

    ಮೊದ ಮೊದಲು, ಆ ಯುವತಿಯ ಜೊತೆಗೆ ಓಡಾಡುತ್ತಿದ್ದ ಗಂಡ ನರೇಂದ್ರಸಿಂಗ್, ನಂತರದ ದಿನಗಳಲ್ಲಿ ಹೆಂಡತಿ ಮಕ್ಕಳನ್ನು ಬಿಟ್ಟು ದೂರದ ಊರುಗಳಿಗೆ ಟ್ರಿಪ್ (Trip) ಹೋಗೋ ಮಟ್ಟಕ್ಕೆ ಬಂದಿದ್ದ. ಈ ಸಂಬಂಧ ಸಾಕಷ್ಟು ಬಾರಿ ರಾಜಿ ಪಂಚಾಯ್ತಿ ಮಾಡಿದ್ರು. ಗಂಡ ಮಾತ್ರ ನಾನು ಇರೋದೇ ಹೀಗೆ ಅನ್ನೋ ರೀತಿ ವರ್ತಿಸಿದ್ದ. ಇದರಿಂದ ಬೇಸತ್ತ ಪತ್ನಿ ಚಂದಾಪುರೋಹಿತ್, ಕಳೆದ ಶನಿವಾರ ಮನೆಯಲ್ಲೇ ನೇಣಿಗೆ ಶರಣಾಗಿದ್ಳು. ಎಂದಿನಂತೆ ಬೆಳಗ್ಗೆ ಎದ್ದ ಮಕ್ಕಳು ಅಮ್ಮನ ಹುಡುಕಾಟ ನಡೆಸಿದರು. ಆದರೆ ಸತ್ತು ಮಲಗಿದ್ದ ಅಮ್ಮನನ್ನು ನೋಡಿದ ಮಕ್ಕಳು, ಸಾವನ್ನಪ್ಪಿದ್ದಾಳೆ ಅನ್ನೋ ಸಣ್ಣ ಅರಿವಿಲ್ಲದಂತೆ ಅಮ್ಮನ ಎದ್ದೇಳಿಸುವ ಪ್ರಯತ್ನದಲ್ಲಿ ಗೋಳಾಡುತ್ತಿದ್ದು, ಅಲ್ಲಿದ್ದವರ ಕಣ್ಣನ್ನು ಒದ್ದೆ ಮಾಡುವಂತೆ ಮಾಡಿದವು.

    ವಿಷಯ ತಿಳಿದು ಸ್ಥಳಕ್ಕೆ ಬಂದ ರಾಮಮೂರ್ತಿನಗರ ಪೊಲೀಸರು, ಪತಿ ನರೇಂದ್ರಸಿಂಗ್‍ನನ್ನು ಬಂಧಿಸಿದ್ದಾರೆ. ಮೃತ ಚಂದಾಪೋರೋಹಿತ್ ಪೋಷಕರು (Parents) ಇದು ಆತ್ಮಹತ್ಯೆ ಅಲ್ಲ, ಕೊಲೆ ಅಂತಾ ಆರೋಪಿಸಿದ್ದಾರೆ. ಅಪ್ಪ ಜೈಲು ಸೇರಿದ್ರೆ, ಅಮ್ಮ ಬಾರದ ಲೋಕಕ್ಕೆ ಪಯಣ ಬೆಳಸಿದ್ದಾಳೆ. ಈ ಮಧ್ಯೆ ಪುಟ್ಟ ಮಕ್ಕಳು ಅನಾಥವಾಗಿದ್ದು ಮಾತ್ರ ದುರಂತ. ಇದನ್ನೂ ಓದಿ: ಪಾಕ್ ಪ್ರವಾಹ ಸಂತ್ರಸ್ತರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ- 18 ಮಂದಿ ದುರ್ಮರಣ

    Live Tv
    [brid partner=56869869 player=32851 video=960834 autoplay=true]