Tag: ಪತಿ

  • ಇಂಟರ್ನೆಟ್‍ನಿಂದ ಟ್ರೈನಿಂಗ್ ಪಡೆದು ಹೆಂಡತಿಯನ್ನು ಮರ್ಡರ್ ಮಾಡ್ದ

    ಇಂಟರ್ನೆಟ್‍ನಿಂದ ಟ್ರೈನಿಂಗ್ ಪಡೆದು ಹೆಂಡತಿಯನ್ನು ಮರ್ಡರ್ ಮಾಡ್ದ

    ಭೋಪಾಲ್: ಪತ್ನಿ ಹೆಸರಿನಲ್ಲಿರುವ ವಿಮೆಯ ಹಣ ಕಬಳಿಸಲು ವ್ಯಕ್ತಿಯೋರ್ವ ಇಂಟರ್ನೆಟ್‍ನಲ್ಲಿರುವ ವೀಡಿಯೋಗಳನ್ನು ನೋಡಿ ಟ್ರೈನಿಂಗ್ ಪಡೆದು ಹೆಂಡತಿಯನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಮಧ್ಯಪ್ರದೇಶದ ರಾಜ್‍ಗಢ ಜಿಲ್ಲೆಯಲ್ಲಿ ನಡೆದಿದೆ.

    ಆರೋಪಿ ಪತಿಯನ್ನು ಬದ್ರಿಪ್ರಸಾದ್ ಮೀನಾ ಎಂದು ಗುರುತಿಸಲಾಗಿದ್ದು, ತಾನು ಮಾಡಿದ್ದ ಸಾಲವನ್ನು ತೀರಿಸಲು ಹೆಂಡತಿಯ ವಿಮೆಯ ಹಣವನ್ನು ಕ್ಲೈಮ್ ಮಾಡಲು ಆಕೆಯನ್ನೇ ಕೊಲೆ ಮಾಡಿದ್ದಾನೆ.  ಇದನ್ನೂ ಓದಿ: ಕೆಲ್ಸ ಮಾಡಿ, ಇಲ್ದೇ ಇದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ : ಅಶ್ವಿನಿ ವೈಷ್ಣವ್‌ ಲಾಸ್ಟ್‌ ವಾರ್ನಿಂಗ್‌

    ಈ ಕೃತ್ಯವೆಸಗಲು ಆರೋಪಿ ಇಂಟರ್ನೆಟ್‍ನಿಂದ ಸಹಾಯ ಪಡೆದಿದ್ದಾನೆ. ತನ್ನ ಸಾಲವನ್ನು ತೀರಿಸುವುದು ಹೇಗೆಂದು ತಲೆಕೆಡಿಸಿಕೊಂಡಿದ್ದ ಆರೋಪಿ ಇಂಟರ್ನೆಟ್‍ನಲ್ಲಿ ಹಲವಾರು ವೀಡಿಯೋಗಳನ್ನು ವೀಕ್ಷಿಸಿದ್ದಾನೆ. ಕೆಲವು ವೀಡಿಯೋಗಳನ್ನು ನೋಡಿದ ಬಳಿಕ ತನ್ನ ಹೆಂಡತಿ ಹೆಸರಿಗೆ ವಿಮೆ ಮಾಡಿಸಿರುವುದು ನೆನಪಾಗಿ, ಹಣಕ್ಕಾಗಿ ಆಕೆಯನ್ನು ಕೊಲ್ಲುವ ನಿರ್ಧಾರ ಮಾಡಿದನು.

    CRIME 2

    ಮೃತ ಮಹಿಳೆಯನ್ನು ಪೂಜಾ ಎಂದು ಗುರುತಿಸಲಾಗಿದ್ದು, ಜುಲೈ 26 ರಂದು ರಾತ್ರಿ 9 ಗಂಟೆ ಸುಮಾರಿಗೆ ಭೋಪಾಲ್ ರಸ್ತೆಯ ಮನಾ ಜೋಡ್ ಬಳಿ ಪೂಜಾ ಗುಂಡಿನಿಂದ ಗಾಯ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದೇವಭಾಗ್ ಕಡಲ ತೀರದಲ್ಲಿ ಸಣ್ಣ ಕರುಳಿನ ಅನಾರೋಗ್ಯದಿಂದ ಮೃತಪಟ್ಟ ಗ್ರೀನ್ ಸೀ ಕಡಲಾಮೆ

    crime

    ಆರಂಭದಲ್ಲಿ ಆರೋಪಿ ಪೊಲೀಸರ ದಾರಿತಪ್ಪಿಸಲು ಪ್ರಯತ್ನಿಸಿದನು. ಪತ್ನಿ ಮೃತಪಟ್ಟ ನಂತರ ಆಕೆಯನ್ನು ಕೊಲ್ಲಲಾಗಿದೆ ಎಂದು ನಾಲ್ವರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದನು. ಆದರೆ ತನಿಖೆ ತೀವ್ರಗೊಳಿಸಿದ ಪೊಲೀಸರಿಗೆ ಕೊಲೆಯಾದ ಸಮಯದಲ್ಲಿ ಆ ನಾಲ್ವರು ಘಟನಾ ಸ್ಥಳದಲ್ಲಿಯೇ ಇರಲಿಲ್ಲ ಎಂದು ತಿಳಿದುಬಂದಿದ್ದು, ನಿಜವಾದ ಆರೋಪಿ ಮೃತ ಮಹಿಳೆಯ ಪತಿಯೇ ಎಂಬ ಸತ್ಯ ಬಹಿರಂಗಗೊಂಡಿದೆ.

    ಇದೀಗ ಪೊಲೀಸರು ಆರೋಪಿ ಬದರಿಪ್ರಸಾದ್ ಮೀನಾ ಮತ್ತು ಆತನ ಸಹಚರನೊಬ್ಬನನ್ನು ಬಂಧಿಸಿದ್ದಾರೆ. ಅಲ್ಲದೇ ತಲೆಮರೆಸಿಕೊಂಡಿರುವ ಮತ್ತಿಬ್ಬರು ಸಹಚರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 12 ವರ್ಷದ ದಾಂಪತ್ಯದಲ್ಲಿ ಕಿರಾತಕನ ಎಂಟ್ರಿ – ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕತ್ತು ಹಿಸುಕಿ ಕೊಂದ್ಲು

    12 ವರ್ಷದ ದಾಂಪತ್ಯದಲ್ಲಿ ಕಿರಾತಕನ ಎಂಟ್ರಿ – ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕತ್ತು ಹಿಸುಕಿ ಕೊಂದ್ಲು

    ಕಲಬುರಗಿ: ಪ್ರಿಯಕರನ ಜೊತೆ ಸೇರಿ ತಾಳಿ ಕಟ್ಟಿದ ಗಂಡನನ್ನೇ ಹೆತ್ತ ಮಕ್ಕಳ ಕಣ್ಣೆದುರೆ ಕತ್ತು ಹಿಸುಕಿ ಪತ್ನಿಯೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಡ್ಡಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಕೊಲೆಯಾದ ವ್ಯಕ್ತಿಯನ್ನು ರಾಮಣ್ಣ ಎಂದು ಗುರುತಿಸಲಾಗಿದೆ. ಕುಡ್ಡಹಳ್ಳಿ ಗ್ರಾಮದ ನಿವಾಸಿಯಾಗಿರುವ ರಾಮಣ್ಣ ನಿನ್ನೆ ರಾತ್ರಿ ಮನೆಯಿಂದ ಹೊರಗಡೆ ಬಂದು ಮೂತ್ರವಿಸರ್ಜನೆ ಮಾಡಿ ಮನೆಯೊಳಗೆ ಬಂದಿದ್ದಾನೆ. ರಾಮಣ್ಣ ಮನೆಗೆ ಬರುತ್ತಿದ್ದಂತೆಯೇ ಆತನ ಹಿಂದೆಯೇ ಮಲ್ಲಪ್ಪ ಮತ್ತು ಆತನ ಇಬ್ಬರು ಸ್ನೇಹಿತರು ಕೂಡ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ತಕ್ಷಣ ರಾಮಣ್ಣನ ಜೊತೆ ಗಲಾಟೆ ತೆಗೆದು ಕತ್ತು ಹಿಸುಕಿ ಕೊಲೆ ಮಾಡುವುದಕ್ಕೆ ಮುಂದಾಗಿದ್ದಾರೆ. ಆಗ ಮನೆಯಲ್ಲಿಯೇ ಇದ್ದ ರಾಮಣ್ಣನ ಪತ್ನಿ ಸುನೀತಾ ಕೂಡ ಹಂತಕರ ಜೊತೆ ಕೈ ಜೋಡಿಸಿ  ಚಮಚವನ್ನು ಗಂಡನ ಬಾಯಿಗೆ ಚುಚ್ಚಿ ಕೊನೆಗೆ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

    ಇದೇ ವೇಳೆ ತಂದೆಯನ್ನು ಉಳಿಸಲು ಅಡ್ಡ ಬಂದ ಎರಡು ಮಕ್ಕಳನ್ನು ಕೋಣೆಯಲ್ಲಿ ಕೂಡಿ ಹಾಕಿ ರಾಮಪ್ಪನನ್ನು ಕೊಲೆ ಮಾಡಿದ್ದಾರೆ. ಕೊಲೆಯ ನಂತರ ಸುನೀತಾ, ಮಲ್ಲಪ್ಪ ಮತ್ತು ಆತನ ಇಬ್ಬರು ಸ್ನೇಹಿತರು ಸೇರಿಕೊಂಡು ರಾಮಪ್ಪನ ಕೈ, ಕಾಲು ಕಟ್ಟಿ ಹಾಕಿ ಗೋಣಿ ಚೀಲದಲ್ಲಿ ಶವವನ್ನು ಸಾಗಾಟ ಮಾಡುವುದಕ್ಕೆ ಮುಂದಾಗಿದ್ದಾರೆ. ಮನೆಯಿಂದ ಹೊರ ಬಂದು ಶವ ಸಾಗಾಟ ಮಾಡುವಾಗ ಗ್ರಾಮಸ್ಥರು ಬೈಕ್‍ನಲ್ಲಿ ಬರುವುದನ್ನು ಕಂಡು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಸ್ಪಾ ಮ್ಯಾನೇಜರ್, ಗ್ರಾಹಕರು ಸೇರಿ ಯುವತಿ ಮೇಲೆ ಅತ್ಯಾಚಾರ – ಪೊಲೀಸರಿಗೆ ನೋಟಿಸ್

    CRIME 2

    ಅಷ್ಟಕ್ಕೂ ಕೊಲೆಗೆ ಅಸಲಿ ಕಾರಣ ಅಂದರೆ ಹೆಂಡತಿಯ ಅಕ್ರಮ ಸಂಬಂಧ. ರಾಮಪ್ಪನ ಪತ್ನಿ ಸುನೀತಾ ಅದೇ ಗ್ರಾಮದ ಮಲ್ಲಪ್ಪನ ಜೊತೆ ಕಳೆದ ಮೂರು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದಳು. ಅನೈತಿಕ ಸಂಬಂಧದ ವಿಚಾರ ತಿಳಿದ ಗಂಡ, ಮಲ್ಲಪ್ಪನಿಂದ ದೂರ ಇರುವಂತೆ ಸೂಚಿಸಿದ್ದಾನೆ. ಆದರೆ ಗಂಡನ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳದ ಸುನೀತಾ ತನ್ನ ಲವ್ವಿ-ಡವ್ವಿಯನ್ನು ಮುಂದುವರಿಸಿದ್ದರು.

    ರಾಮಪ್ಪ ಒಕ್ಕಲುತನ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಹಗಲು ಹೊತ್ತಲ್ಲಿ ಜಮೀನಿಗೆ ಕೆಲಸಕ್ಕೆ ಹೋದಾಗ, ಸುನೀತಾ ಮಲ್ಲಪ್ಪನಿಗೆ ಫೋನ್ ಮಾಡಿ ಕರೆಯಿಸಿಕೊಳ್ಳುತ್ತಿದ್ದಳು. ಬಳಿಕ ಮನೆಯಲ್ಲಿದ್ದ ಸುನೀತಾಳ ಮಕ್ಕಳಿಗೆ ಈ ಮಲ್ಲಪ್ಪ ಹಣ ಕೊಟ್ಟು ಹೊರಗಡೆ ಕಳುಹಿಸಿ ಮನೆಯಲ್ಲಿ ಸುನೀತಾ ಜೊತೆ ಚಕ್ಕಂದ ಆಡುವುದಕ್ಕೆ ಮುಂದಾಗುತ್ತಿದ್ದರು. ಇದೇ ರೀತಿಯಾಗಿ ಕಳೆದ ಮೂರು ವರ್ಷಗಳಿಂದ ಇವರಿಬ್ಬರು ಚಕ್ಕಂದ ಮುಂದುವರಿಸಿಕೊಂಡು ಬಂದಿದ್ದರು. ಇದನ್ನೂ ಓದಿ: ಐವರ ಪ್ರಾಣ ಉಳಿಸಿದೆ ಅಂಗಾಂಗ ದಾನ – ಮಗನ ಸಾವಿನಲ್ಲಿ ಸಾರ್ಥಕತೆ ಕಂಡ ಕುಟುಂಬ

    ಅಕ್ರಮ ಸಂಬಂಧ ಗೊತ್ತಾದ ಹಿನ್ನೆಲೆಯಲ್ಲಿ ರಾಮಪ್ಪ ತನ್ನ ತಾಯಿ ಮತ್ತು ಅಣ್ಣನನ್ನು ಮನೆಯಿಂದ ಆಚೆ ಕಳುಹಿಸಿ ಗಂಡ, ಹೆಂಡತಿ ಇಬ್ಬರು ಮಕ್ಕಳು ಮನೆಯಲ್ಲಿ ವಾಸ ಮಾಡುವುದಕ್ಕೆ ಮುಂದಾಗಿದ್ದರು. ಇದನ್ನೇ ಬಂಡವಾಳವಾಗಿಸಿಕೊಂಡ ಸುನೀತಾ ತನ್ನ ಅಕ್ರಮ ಸಂಬಂಧವನ್ನು ಗಂಡನ ಭಯವಿಲ್ಲದೇ ಮುಂದುವರಿಸಿದ್ದಳು. ಇದರಿಂದ ಕೆರಳಿದ ಗಂಡ ಆತನ ಜೊತೆ ಸೇರ ಬೇಡ ಅಂತಾ ಹೇಳಿದಕ್ಕೆ ಗಂಡ ಹೆಂಡತಿಯ ಮಧ್ಯೆ ಗಲಾಟೆ ಆಗುತ್ತಿತ್ತು. ನಿನ್ನೆಯು ಸಹ ಗಲಾಟೆ ಜೋರಾದ ಹಿನ್ನೆಲೆ ಪ್ರಿಯಕರನಿಗೆ ಹೇಳಿ ಕೊಲೆ ಮಾಡುವ ನಿರ್ಧಾರಕ್ಕೆ ಬಂದು ರಾತ್ರಿ ಕೊಲೆ ಮಾಡಿದ್ದಾರೆ.

    ಇದೀಗ ಈ ಸಂಬಂಧ ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ನಿ ಸುನೀತಾ, ಮಲ್ಲಪ್ಪ ಮತ್ತು ಆತನ ಇಬ್ಬರು ಸ್ನೇಹಿತರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅದೇನೆ ಆಗಲಿ ಕಳೆದ 12 ವರ್ಷಗಳ ಸುಖ ಸಂಸಾರದಲ್ಲಿ ಬಿರುಗಾಳಿ ಎದ್ದು ಗಂಡ ಕೊಲೆಯಾದರೆ, ಹೆಂಡತಿ ಸೆರೆಮನೆ ಸೇರಿದ್ದಾಳೆ. ಇದರ ಮಧ್ಯೆ ತಂದೆ, ತಾಯಿ ಕಳೆದುಕೊಂಡ ಎರಡು ಮಕ್ಕಳು ಅನಾಥರಾಗಿ ಬಿಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನನ್ನ ಪತ್ನಿ ಜೊತೆ ಮಾತನಾಡಬೇಡ ಅಂದಿದ್ದಕ್ಕೆ ಕ್ರಿಕೆಟ್ ಬ್ಯಾಟ್,  ವಿಕೆಟ್‌ನಿಂದ ಹೊಡೆದು ಕೊಲೆಗೈದ್ರು

    ನನ್ನ ಪತ್ನಿ ಜೊತೆ ಮಾತನಾಡಬೇಡ ಅಂದಿದ್ದಕ್ಕೆ ಕ್ರಿಕೆಟ್ ಬ್ಯಾಟ್, ವಿಕೆಟ್‌ನಿಂದ ಹೊಡೆದು ಕೊಲೆಗೈದ್ರು

    ಚಿಕ್ಕಬಳ್ಳಾಪುರ: ‘ನನ್ನ ಪತ್ನಿ ಜೊತೆ ಮಾತನಾಡಬೇಡ’ ಅಂದಿದ್ದಕ್ಕೆ ಕ್ರಿಕೆಟ್ ಬ್ಯಾಟ್, ವಿಕೆಟ್‌ನಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಬಳಿ ನಡೆದಿದೆ.

    ಶ್ರೀನಿವಾಸ್(38) ಕೊಲೆಯಾದ ವ್ಯಕ್ತಿ. ಈತನನ್ನು ಇಬ್ಬರು ಸಂಬಂಧಿಗಳೇ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಇಬ್ಬರು ಆರೋಪಿಗಳನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನವೀನ್ ಹಾಗೂ ವೆಂಕಟರಾಮು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಡಿಸೆಂಬರ್ ಒಳಗಾಗಿ ಮಹದಾಯಿ ಯೋಜನೆಗೆ ಚಾಲನೆ ಸಿಗಲಿದೆ: ಕಾರಜೋಳ 

    ಹಿನ್ನೆಲೆ ಏನು?
    ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಗ್ರಾಮ ಶ್ರೀನಿವಾಸ್, ಆಗಸ್ಟ್ 3 ರಂದು ಬೆಳಗ್ಗೆ ಗ್ರಾಮ ಹೊರಹೊಲಯದಲ್ಲಿ ಹತ್ಯೆಯಾಗಿದ್ದ. ಈ ಹಿನ್ನೆಲೆ ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೊಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ. ಈಗ ಕೊಲೆಯ ರಹಸ್ಯ ಬಯಲಾಗಿದೆ. ಸ್ವತಃ ಶ್ರೀನಿವಾಸ್‍ನ ಸಹೋದರ ಸಂಬಂಧಿ ನವೀನ್ ಹಾಗೂ ಶ್ರೀನಿವಾಸ್‍ನ ಅಕ್ಕನ ಮಗ ವೆಂಕಟರಾಮುನೇ ಕೊಲೆ ಮಾಡಿದ್ದಾರೆ ಎಂಬ ಆಘಾತಕಾರಿ ವಿಷಯ ಬಯಲಾಗಿದೆ.

    ಅನೈತಿಕ ಸಂಬಂಧದ ಸಂಶಯ
    ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೃತನ ತಾಯಿ ಗಂಗಮ್ಮ ಬಾಗೇಪಲ್ಲಿ ಪೊಲೀಸರಿಗೆ ದೂರು ನೀಡಿ, ನನ್ನ ಸೊಸೆಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿದ್ದಾರೆ. ನನ್ನ ಮಗ ಶ್ರೀನಿವಾಸ್ ತನ್ನ ಪತ್ನಿ ಅಶ್ವಿನಿಯ ಮೇಲೆ ಅನುಮಾನ ಪಟ್ಟು, ಆಕೆಯ ಜೊತೆ ಸಲುಗೆಯಿಂದ ಇದ್ದ ನವೀನ್‍ಗೆ ಬೈಯ್ದು ಬುದ್ಧಿವಾದ ಹೇಳಿದ್ದ. ಅದೇ ಈ ಕೊಲೆಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

    ಇದ್ರಿಂದ ಎಚ್ಚೆತ್ತ ಪೆÇಲೀಸರು, ಆದಿಗಾನಹಳ್ಳಿ ಗ್ರಾಮದ ನವೀನ್‍ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಶ್ರೀನಿವಾಸ್‍ನ ಅಕ್ಕನ ಮಗ ವೆಂಕಟರಾಮ ಕೆಲಸ ಕಾರ್ಯಗಳಿಗೆ ಹೋಗದೆ ಮನೆಯಲ್ಲಿ ಇರುವ ಕಾರಣ ಆತನಿಗೂ ಶ್ರೀನಿವಾಸ್ ಬುದ್ಧಿ ಹೇಳಿದ್ದ. ಇದ್ರಿಂದ ಇಬ್ಬರು ಸೇರಿ ಕೆಲಸಕ್ಕೆ ಹೊಗ್ತಿದ್ದ ಶ್ರೀನಿವಾಸ್‍ನನ್ನು ಅಡ್ಡಗಟ್ಟಿ, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‍ಗಳಿಂದ ತಲೆಗೆ ಹೊಡೆದು ಹತ್ಯೆ ಮಾಡಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪೈಪ್‍ಲೈನ್ ಅಡುಗೆ ಅನಿಲದ ಬೆಲೆ ಪ್ರತಿ ಯೂನಿಟ್‍ಗೆ 2.63 ರೂ. ಏರಿಕೆ 

    ಪತ್ನಿ ಕೈವಾಡ
    ಶ್ರೀನಿವಾಸ್ ಕೊಲೆ ಪ್ರಕರಣದಲ್ಲಿ ಆತನ ಪತ್ನಿ ಅಶ್ವಿನಿಯ ಕೈವಾಡದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಸದ್ಯ ಯಾವುದೇ ಸಾಕ್ಷ್ಯಾಧರಗಳು ಲಭ್ಯವಾಗಿಲ್ಲ. ಇದ್ರಿಂದ ಆರೋಪಿಗಳಾದ ನವೀನ್ ಹಾಗೂ ವೆಂಕಟರಾಮುನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 4 ವರ್ಷದ ಮಗಳನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದ ಪಾಪಿ ತಾಯಿ!

    4 ವರ್ಷದ ಮಗಳನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದ ಪಾಪಿ ತಾಯಿ!

    ಬೆಂಗಳೂರು: ಪಾಪಿ ತಾಯಿಯೊಬ್ಬಳು ತನ್ನ 4 ವರ್ಷದ ಪುತ್ರಿಯನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಸಂಪಂಗಿ ರಾಮನಗರದ ಅದ್ವೈತ್‌ ಅಪಾರ್ಟ್‌ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಜೀತಿ ಎಂದು ಗುರುತಿಸಲಾಗಿದೆ. ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ತಾಯಿಯ ಈ ಅಮಾನವೀಯ ಕೃತ್ಯಕ್ಕೆ ಜನ ಕೆಂಡಾಮಂಡಲರಾಗಿದ್ದಾರೆ.

    ಕೊಲೆ ಮಾಡಿದ್ದು ಯಾಕೆ..?:  ಮಗಳು ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾಳೆ ಎಂದು ಸುಷ್ಮಾ ಈ ಕೃತ್ಯ ಎಸಗಿದ್ದಾಳೆ. ಮೇಲಿಂದ ಬಿದ್ದ ರಭಸಕ್ಕೆ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ.

    ಮಗುವನ್ನು ಮೇಲಿಂದ ಬಿಸಾಕಿದ ಬಳಿಕ ಸುಷ್ಮಾ ತಾನೂ ಆತ್ಮಹತ್ಯೆ ಮಡಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಅಕ್ಕಪಕ್ಕದ ಮನೆಯವರು ಬಂದು ಆಕೆಯನು ರಕ್ಷಣೆ ಮಾಡಿರುವುದನ್ನು ಸಿಸಿಟಿವಿ ದೃಶ್ಯದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ತೆಲುಗಿನ ಹಾಸ್ಯನಟ ರಘು ಕರುಮಂಚಿ ತಂದೆ ವಿಧಿವಶ

    ಸುಷ್ಮಾ ಕಳೆದ ಮೂರು ತಿಂಗಳ ಹಿಂದೆಯೇ ರೈಲ್ವೆ ಸ್ಟೇಷನ್ ನಲ್ಲಿ ಮಗುವನ್ನು ಬಿಟ್ಟು ಬಂದಿದ್ದಳು. ಈ ವೇಳೆ ಪತಿ ಮಗುವನ್ನು ಹುಡುಕಿ ಕರೆದುಕೊಂಡು ಬಂದಿದ್ದರು. ಇದೀಗ ಮತ್ತೆ ಮಗುವನ್ನು ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಸ್ಥಳೀಯರ ಸಮಯ ಪ್ರಜ್ಞೆಯಿಂದ ಆಕೆ ಬಚಾವ್ ಆಗಿದ್ದಾಳೆ.

    ದಂತ ವೈದ್ಯೆಯಾಗಿ ಪ್ರಾಕ್ಟೀಸ್ ಮಾಡುತ್ತಿದ್ದ ಸುಷ್ಮಾ ಪತಿ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.  ಸದ್ಯ ಪ್ರಕರಣ ಸಂಬಂಧ ತಾಯಿ ಸುಷ್ಮಾ ವಿರುದ್ದ ಸಂಪಂಗಿರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸ್ನೇಹಿತನ ಜೊತೆ ಪತ್ನಿಯನ್ನು ನೋಡಿದ ಪತಿ- 7 ಗಂಟೆ ಮರಕ್ಕೆ ಕಟ್ಟಿ ಥಳಿಸಿದ

    ಸ್ನೇಹಿತನ ಜೊತೆ ಪತ್ನಿಯನ್ನು ನೋಡಿದ ಪತಿ- 7 ಗಂಟೆ ಮರಕ್ಕೆ ಕಟ್ಟಿ ಥಳಿಸಿದ

    ಜೈಪುರ: ಸ್ನೇಹಿತನೊಂದಿಗೆ ಪತ್ನಿಯನ್ನು ನೋಡಿದ್ದ ಪತಿ ಹಾಗೂ ಇತರ ಸಂಬಂಧಿಕರು ಸೇರಿ ಆಕೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಘಟನೆ ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ನಡೆದಿದೆ.

    ಬನ್ಸ್ವಾರಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ತನ್ನ ಪತಿಯ ಸ್ನೇಹಿತನೊಂದಿಗೆ ಇದ್ದಳು. ಈ ಸಂದರ್ಭದಲ್ಲಿ ಆಕೆಯ ಪತಿ ನೋಡಿದ್ದಾನೆ. ಇದರಿಂದಾಗಿ ಕೋಪಗೊಂಡ ಆತ ಹಾಗೂ ಆತನ ಸಂಬಂಧಿಕರು ಆಕೆಯನ್ನು 7 ಗಂಟೆಗಳ ಕಾಲ ಒಂದು ಮರಕ್ಕೆ ಕಟ್ಟಿ ಕೋಲಿನಿಂದ ಹೊಡೆದಿದ್ದಾರೆ. ಅಷ್ಟೇ ಅಲ್ಲದೇ ಆಕೆಯ ಜೊತೆಗಿದ್ದವನಿಗೂ ಇದೇ ರೀತಿ ಥಳಿಸಿದ್ದಾರೆ.

    ಈ ವೀಡಿಯೋವನ್ನು ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಅದರಲ್ಲಿ ಆಕೆ ಕಿರುಚಾಡುತ್ತಿರುವುದನ್ನು ಗಮನಿಸಬಹುದಾಗಿದೆ. ಈ ಸಂಬಂಧ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಘಟನೆ ಕುರಿತು ಆಕೆಯ ಪತಿ, ಸೋದರ ಮಾವ ಇಬ್ಬರು ಅಪ್ರಾಪ್ತರು ಸೇರಿದಂತೆ 6 ಜನರನ್ನು ಬಂಧಿಸಲಾಗಿದೆ.

    ಘಟನೆ ಸಂಬಂಧ ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಈ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದು, ರಾಜಸ್ಥಾನದ ಗೃಹ ಇಲಾಖೆಯು ಗೂಂಡಾಗಳನ್ನು ಮುಕ್ತಗೊಳಿಸಿದೆ, ಅವರು ಹಸಿದ ತೋಳಗಳಂತೆ ಕಾಡುಗಳಲ್ಲಿ ಅಲೆದಾಡುತ್ತಿದ್ದಾರೆ. ಈ ವೀಡಿಯೋವನ್ನು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವರದಕ್ಷಿಣೆ ನೀಡದ್ದಕ್ಕೆ ಸ್ನೇಹಿತರೊಂದಿಗೆ ಪತ್ನಿಯನ್ನೇ ಗ್ಯಾಂಗ್‌ರೇಪ್‌ಗೈದ

    ವರದಕ್ಷಿಣೆ ನೀಡದ್ದಕ್ಕೆ ಸ್ನೇಹಿತರೊಂದಿಗೆ ಪತ್ನಿಯನ್ನೇ ಗ್ಯಾಂಗ್‌ರೇಪ್‌ಗೈದ

    ಲಕ್ನೋ: ಪತ್ನಿ ವರದಕ್ಷಿಣೆ ತಂದು ಕೊಡಲಿಲ್ಲವೆಂದು ಪತಿಯೊಬ್ಬ ಸ್ನೇಹಿತರ ಜೊತೆ ಸೇರಿ ಪತಿಯನ್ನು ಅತ್ಯಾಚಾರ ಮಾಡಿರುವ ಘಟನೆಯೊಂದು ಕಾನ್ಪುರದಲ್ಲಿ ನಡೆದಿದೆ.

    ವರದಕ್ಷಿಣೆಗಾಗಿ ಪತಿಯೊಬ್ಬ ಪತ್ನಿಯ ಕುಟುಂಬವನ್ನು ಪೀಡಿಸುತ್ತಿದ್ದ. ಇತ್ತ ಪತ್ನಿಗೂ ಕಿರುಕುಳ ನೀಡುತ್ತಿದ್ದ. ಪತ್ನಿಯ ಕುಟುಂಬ ವರದಕ್ಷಿಣೆಯನ್ನು ನೀಡಲಿಲ್ಲವೆಂದು ತನ್ನ ಸ್ನೇಹಿತರ ಜೊತೆ ಸೇರಿ ಪತ್ನಿಯನ್ನು ಪತಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾನೆ. ಈ ಹಿನ್ನೆಲೆ ಮಹಿಳೆಯ ಕುಟುಂಬ, ಆಕೆಯ ಪತಿ ಮತ್ತು ಆತನ ಸ್ನೇಹಿತರ ವಿರುದ್ಧ ಕಿರುಕುಳ ಮತ್ತು ಅತ್ಯಾಚಾರ ಆರೋಪದ ಮೇಲೆ ಚಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮ್ಯೂಸಿಕ್ ಶೂಟ್ ವೇಳೆ ದಾಳಿ: 8 ಮಹಿಳಾ ರೂಪದರ್ಶಿಗಳ ಮೇಲೆ ಅತ್ಯಾಚಾರ

    ದೂರಿನಲ್ಲಿ ಏನಿದೆ?
    2020 ರ ಮಾರ್ಚ್ 6 ರಂದು ನಾವು ಮದುವೆಯಾಗಿದ್ದು, ಅಂದಿನಿಂದ ನನ್ನ ಪತಿ ವರದಕ್ಷಿಣೆಯಾಗಿ 2 ಲಕ್ಷ ರೂ. ಮತ್ತು ಕಾರಿಗೆ ಬೇಡಿಕೆಯಿಟ್ಟಿದ್ದ. ಅವರ ಬೇಡಿಕೆಗಳನ್ನು ನಾವು ಈಡೇರದಿದ್ದಾಗ ನನ್ನನ್ನು ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು. ಅಷ್ಟೇ ಅಲ್ಲದೇ ನನ್ನ ಪತಿ ತನ್ನ ಮೂವರು ಸ್ನೇಹಿತರನ್ನು ಕರೆದುಕೊಂಡು ಬಂದು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇದಕ್ಕೆ ನಾನು ವಿರೋಧ ವ್ಯಕ್ತಪಡಿಸಿದಾಗ ನನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

    ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ಮೃಗಾಂಕ್ ಪಾಠಕ್ ಮಾತನಾಡಿ, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಫೈನಲ್ ತಲುಪಿದ ಕನ್ನಡಿಗ, ಈಜುಪಟು ಶ್ರೀಹರಿ ನಟರಾಜ್ 

    Live Tv
    [brid partner=56869869 player=32851 video=960834 autoplay=true]

  • ಸಂಬಂಧಿ ಜೊತೆ ಸೇರಿ ಪತ್ನಿ ಮೇಲೆ ಅತ್ಯಾಚಾರ ಎಸಗಿ ತಲಾಖ್‌ ನೀಡಿದ ಪತಿ

    ಸಂಬಂಧಿ ಜೊತೆ ಸೇರಿ ಪತ್ನಿ ಮೇಲೆ ಅತ್ಯಾಚಾರ ಎಸಗಿ ತಲಾಖ್‌ ನೀಡಿದ ಪತಿ

    ಲಕ್ನೋ: ವ್ಯಕ್ತಿಯೊಬ್ಬ ತನ್ನ ಸೋದರ ಸಂಬಂಧಿಯೊಂದಿಗೆ ಸೇರಿ ಪತ್ನಿಯನ್ನು ಅತ್ಯಾಚಾರ ಎಸಗಿದ್ದಲ್ಲದೇ, ವರದಕ್ಷಿಣೆ ನೀಡದಿದ್ದಕ್ಕೆ ತ್ರಿವಳಿ ತಲಾಖ್‌ ನೀಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ.

    ಆರೋಪಿಯಾಗಿರುವ ಸಂತ್ರಸ್ತೆ ಪತಿ ಲಕ್ನೋ ಮೂಲದ ಮೊಹಮ್ಮದ್ ಅದ್ನಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಸೋದರ ಸಂಬಂಧಿ ತಲೆಮರೆಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲಾಗಿದೆ. ಇದನ್ನೂ ಓದಿ: ಸಿಧು ಮೂಸೆ ವಾಲಾ ಮುಖವನ್ನ ಕೈ ಮೇಲೆ ಟ್ಯಾಟೂ ಹಾಕಿಸಿಕೊಂಡ ತಂದೆ

    ನನ್ನ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ವರದಕ್ಷಿಣೆಗಾಗಿ ನನಗೆ ಥಳಿಸುತ್ತಿದ್ದರು ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

    ಪತಿಯ ಕಿರುಕುಳ ತಾಳಲಾರದೇ ಮಹಿಳೆ ತನ್ನ ತಾಯಿಯ ಮನೆಗೆ ಹೋಗಿದ್ದರು. ನಂತರ ಅದ್ನಾನ್ ಮತ್ತು ಆತನ ಸೋದರ ಸಂಬಂಧಿ ಅತ್ತೆಯ ಮನೆಗೆ ಹೋಗಿದ್ದಾರೆ. ಮಹಿಳೆ ಒಬ್ಬಂಟಿಯಾಗಿ ಇರುವುದನ್ನು ಕಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಆಕಾಶ್ ತೋಮರ್ ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಸಿರಿಂಜ್‍ನಿಂದ 39 ವಿದ್ಯಾರ್ಥಿಗಳಿಗೆ ಲಸಿಕೆ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

    ಅದ್ನಾನ್ ನಂತರ ಆಕೆಯನ್ನು ಥಳಿಸಿ, ಕಾನೂನುಬಾಹಿರವಾದ ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಲಿಫ್ಟ್‌ನಲ್ಲಿ ತ್ರಿವಳಿ ತಲಾಖ್ ಹೇಳಿ ಹೊರದಬ್ಬಿದ ಪತಿ ವಿರುದ್ಧ ಪತ್ನಿ ದೂರು

    ಲಿಫ್ಟ್‌ನಲ್ಲಿ ತ್ರಿವಳಿ ತಲಾಖ್ ಹೇಳಿ ಹೊರದಬ್ಬಿದ ಪತಿ ವಿರುದ್ಧ ಪತ್ನಿ ದೂರು

    ಬೆಂಗಳೂರು: ಲಿಫ್ಟ್ ನಲ್ಲಿ ತ್ರಿವಳಿ ತಲಾಖ್ ಹೇಳಿದ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ಮೊಹಮ್ಮದ್ ಅಕ್ರಂ ವಿರುದ್ಧ ಪತ್ನಿ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದಾರೆ. ಮಹಿಳೆ ಮನೆಯವರು ಅಕ್ರಂಗೆ ಒಟ್ಟು 30 ಲಕ್ಷ ವಸ್ತುಗಳನ್ನ ವರದಕ್ಷಿಣೆಯಾಗಿ ನೀಡಿದ್ದರು. ಆದರೆ ಹಣದಾಹಿಯಾಗಿದ್ದ ಅಕ್ರಂ ಇನ್ನೂ ಹೆಚ್ಚು ಹಣ ನೀಡುವಂತೆ ಪೀಡಿಸುತ್ತಿದ್ದ. ಇದರಿಂದ ಬೇರಸಗೊಂಡ ಪತ್ನಿ ತಸ್ಮಿಯಾ ಹುಸೇನಿ ಇದೀಗ ತನ್ನ ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಶಂಕಿತರು ವಶ

    ಪತಿ ಅಕ್ರಂ ರಂಜಾನ್ ಹಬ್ಬಕ್ಕೆ ತೆರಳಿದ ವೇಳೆ 10 ಲಕ್ಷ ಹಣ ತರಲು ಹೇಳಿದ್ದ. ಹಣ ತರದಿದ್ದಲ್ಲಿ ಮನೆಗೆ ಸೇರಿಸೋದಿಲ್ಲ ಎಂದು ಫೋನ್ ಮಾಡಿದ್ದ. ಇದಾದ ಬಳಿಕ ಕೆಲ ದಿನಗಳ ನಂತರ ಅಪಾರ್ಟ್‌ ಮೆಂಟ್ ಗೆ ತನ್ನನ್ನು ಕರೆಸಿಕೊಂಡಿದ್ದ. ಹಣ ನೀಡಿಲ್ಲ ಅಂದ್ರೆ ಮಂಗಳಸೂತ್ರ ಬಿಚ್ಚಿ ಕೊಡುವಂತೆ ಹೇಳಿದ್ದ. ಇದಕ್ಕೆ ಒಪ್ಪದಿದ್ದಾಗ ತಲಾಖ್ ಹೇಳಿದ್ದ. ಅಪಾರ್ಟ್‌ ಮೆಂಟ್ ಲಿಫ್ಟ್ ನಲ್ಲಿ ಹೋಗುತ್ತಿದ್ದಾಗ ಮೂರು ಬಾರಿ ತಲಾಖ್ ಹೇಳಿ ಪತ್ನಿಯನ್ನ ಹೊರ ದಬ್ಬಿದ್ದ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.

    ತ್ರಿಬಲ್ ತಲಾಖ್ ಕಾನೂನು ವಿರೋಧಿಯಾಗಿದ್ರೂ ಷರಿಯತ್ ಕಾನೂನಿನ ಈ ನಿಯಮವನ್ನು ಕೆಲವರು ಈಗಲೂ ಅನುಸರಿಸುತ್ತಿದ್ದಾರೆ. ಷರಿಯತ್ ಕಾನೂನಿನನ್ವಯ ಮೂರು ಬಾರಿ ತಲಾಖ್ ಹೇಳಿದರೆ ವಿಚ್ಛೇದನ ನೀಡಿದಂತೆ. ಈ ರೀತಿ ತ್ರಿವಳಿ ತಲಾಖ್ ನೀಡಿ ಪತಿ ಹೊರಟು ಹೋಗಿದ್ದ. ಸದ್ಯ ಪತಿ ಅಕ್ರಂ ವಿರುದ್ಧ ಸುದ್ಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪತ್ನಿಗೆ ಚಾಕುವಿನಿಂದ ಇರಿದು ಗಂಡನೂ ಆತ್ಮಹತ್ಯೆಗೆ ಶರಣು

    ಪತ್ನಿಗೆ ಚಾಕುವಿನಿಂದ ಇರಿದು ಗಂಡನೂ ಆತ್ಮಹತ್ಯೆಗೆ ಶರಣು

    ಬೆಂಗಳೂರು/ಆನೇಕಲ್: ಪತ್ನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು, ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    crime

    ಸುರೇಶ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಈತ ಮೈಲ ಸಂದ್ರ ಗ್ರಾಮದ ನಿವಾಸಿಯಾಗಿದ್ದನು. ಘಟನೆ ನಡೆದು ಎರಡು ದಿನಗಳಾಗಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿ ನಿತ್ಯ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಸುರೇಶ್ ಮಂಗಳವಾರ ಮತ್ತೆ ಹೆಂಡತಿಯೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಹೆಂಡತಿಗೆ ಚಾಕುವಿನಿಂದ ಇರಿದಿದ್ದಾನೆ.  ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣಕ್ಕೆ ತಿರುವು – ಉಗ್ರ ಸಂಘಟನೆಯೊಂದರ ಕೈವಾಡ: ಎನ್‍ಐಎ

    ಬಳಿಕ ಸ್ಥಳೀಯರು ಆಗಮಿಸಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದರ ಬೆನ್ನಲ್ಲೆ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ – ಶಾಲಾ, ಕಾಲೇಜುಗಳಿಗೆ ರಜೆ

    Live Tv
    [brid partner=56869869 player=32851 video=960834 autoplay=true]

  • ಒಂದಲ್ಲ, ಎರಡಲ್ಲ 6 ಮಂದಿಯ ಜೊತೆ ವಿವಾಹ –  ಪತ್ನಿಯರಿಗೂ ಬಂದಿಲ್ಲ ಅನುಮಾನ, ಕೊನೆಗೆ ಸಿಕ್ಕಿ ಬಿದ್ದ

    ಒಂದಲ್ಲ, ಎರಡಲ್ಲ 6 ಮಂದಿಯ ಜೊತೆ ವಿವಾಹ – ಪತ್ನಿಯರಿಗೂ ಬಂದಿಲ್ಲ ಅನುಮಾನ, ಕೊನೆಗೆ ಸಿಕ್ಕಿ ಬಿದ್ದ

    ಹೈದರಾಬಾದ್: ಒಬ್ಬರಿಗೆ ತಿಳಿಯದೇ ಇನ್ನೊಬ್ಬಳನ್ನು ಮದುವೆಯಾಗುವುದು ಕೇವಲ ಸಿನಿಮಾದಲ್ಲಿ ಮಾತ್ರ ಸಾಧ್ಯ, ನಿಜ ಜೀವನದಲ್ಲಿ ಇದು ಸಾಧ್ಯವೇ ಇಲ್ಲ ಎಂದು ತಿಳಿದುಕೊಂಡಿರುವವರೂ ಈ ಸುದ್ದಿಯನ್ನು ಓದಲೇ ಬೇಕು. ಇಲ್ಲೊಬ್ಬ ಅಸಾಮಿ ಒಂದಲ್ಲ, ಎರಡಲ್ಲ ಆರು ಮದುವೆಯಾಗಿದ್ದು, ಯಾರೊಬ್ಬರಿಗೂ ತಿಳಿಯದಂತೆ ಜೀವನ ನಡೆಸುತ್ತಿದ್ದ ಎಂಬುದನ್ನು ಹೈದರಾಬಾದ್ ಪೊಲೀಸರು ಕಂಡುಹಿಡಿದಿದ್ದಾರೆ.

    ತನ್ನ ಹಣದೊಂದಿಗೆ ಪತಿ ಪರಾರಿಯಾಗಿದ್ದಾನೆ ಎಂದು ಹೈದರಾಬಾದ್‍ನ ಪೊಲೀಸರಿಗೆ ಮಹಿಳೆಯೊಬ್ಬಳು ದೂರು ಕೊಟ್ಟಿದ್ದಾಳೆ. ದೂರು ದಾಖಲಿಸಿಕೊಂಡ ಪೊಲೀಸರು ಆತನ ಬಗ್ಗೆ ತನಿಖೆ ಮಾಡಲು ಪ್ರಾರಂಭ ಮಾಡಿದ್ದಾರೆ. ಈ ವೇಳೆ ಪೊಲೀಸರೇ ಆ ವ್ಯಕ್ತಿ ಬಗ್ಗೆ ತಿಳಿದುಕೊಂಡು ಆಶ್ಚರ್ಯಗೊಂಡಿದ್ದಾರೆ.

    ಆಂಧ್ರಪ್ರದೇಶದ ಮಂಗಳಗಿರಿ ಮೂಲದ ವ್ಯಕ್ತಿ ಕೇವಲ ದೂರುದಾರರನ್ನು ಮಾತ್ರವಲ್ಲದೆ ಐದು ಮಹಿಳೆಯರನ್ನು ಮದುವೆಯಾಗಿದ್ದಾನೆ. ಆದರೆ ಈ ಬಗ್ಗೆ ಯಾವ ಮಹಿಳೆಗೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    MARRIAGE

    ಹೈದರಾಬಾದ್‍ನ ಪೊಲೀಸರು ಗುರುವಾರ ಆರೋಪಿ ಅಡಪ ಶಿವ ಶಂಕರ ಬಾಬು(33)ನನ್ನು ವಿಶಾಖಪಟ್ಟಣಂನಿಂದ ಬಂಧಿಸಿ ನಂತರ ಹೈದರಾಬಾದ್‍ಗೆ ಕರೆತಂದಿದ್ದಾರೆ. ಪ್ರಸ್ತುತ ಬಾಬು ವಿರುದ್ಧ ನಂಬಿಕೆ ದ್ರೋಹ ಮತ್ತು ವಂಚನೆ ಆರೋಪಗಳನ್ನು ಆಧಾರ ಮೇಲೆ ದೂರು ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಬೇರೆ ವ್ಯಕ್ತಿಗಳು ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ:  ಭಾರತೀಯರು, ಸಿಖ್ ದೇಶಬಾಂಧವರು ಆಫ್ಘಾನ್‍ಗೆ ಮರಳಿ: ತಾಲಿಬಾನ್

    MARRIAGE

    ದೂರಿನಲ್ಲಿ ಏನಿತ್ತು?
    ಪೊಲೀಸರನ್ನು ಸಂಪರ್ಕಿಸಿದ ಮಹಿಳೆ 2021ರಲ್ಲಿ ಮ್ಯಾಟ್ರಿಮೋನಿಯಲ್ ಸೈಟ್‍ನಲ್ಲಿ ಅವನ ಪ್ರೊಫೈಲ್ ನೋಡಿದ ನಂತರ ಬಾಬುನನ್ನು ಮದುವೆಯಾಗಲು ನಿರ್ಧಾರಿಸಿದ್ದಾಳೆ. ನಂತರ ಒಪ್ಪಿಗೆ ಮೇರೆಗೆ ಅವರಿಬ್ಬರು ಮದುವೆಯಾಗಿದ್ದಾರೆ. ಮದುವೆಯಾದ ಸ್ವಲ್ಪ ದಿನಗಳ ನಂತರ ಆತ ಆಕೆಯ ಚಿನ್ನಾಭರಣಗಳು ಮತ್ತು 20 ಲಕ್ಷ ರೂಪಾಯಿ ಮೌಲ್ಯದ ನಗದು ಹಣದೊಂದಿಗೆ ಪರಾರಿಯಾಗಿದ್ದಾನೆ ಎಂದು ಆರೋಪಿಸಿದ್ದಳು.

    Live Tv
    [brid partner=56869869 player=32851 video=960834 autoplay=true]