Tag: ಪತಿ

  • ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಅಂತ ಗಂಡ ಟಾರ್ಚರ್ – ಪೆಟ್ರೋಲ್ ಸುರಿದುಕೊಂಡು ಮಹಿಳೆ ಆತ್ಮಹತ್ಯೆ

    ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಅಂತ ಗಂಡ ಟಾರ್ಚರ್ – ಪೆಟ್ರೋಲ್ ಸುರಿದುಕೊಂಡು ಮಹಿಳೆ ಆತ್ಮಹತ್ಯೆ

    – ಹೆಂಡ್ತಿ ಮುಂದೆಯೇ ಇನ್ನೊಂದು ಹುಡುಗಿ ಜೊತೆ ಸಲುಗೆ

    ಬೆಂಗಳೂರು: ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ನಡೆಗೆ ಬೇಸತ್ತು ಮಹಿಳೆ (Woman) ಪೆಟ್ರೋಲ್ (Petrol) ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಹುಳಿಮಾವು (Hulimavu) ಅಕ್ಷಯನಗರದಲ್ಲಿ ನಡೆದಿದೆ.

    ಅನುಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆಯ ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿಯ ಜೊತೆ ಸಲುಗೆ ಬೆಳೆಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡು ತಿಂಗಳಿಂದ ಡೈವರ್ಸ್ ಕೊಡುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತು ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೊಲೆಗೂ ಮುನ್ನ ರೇಣುಕಾಸ್ವಾಮಿಯನ್ನು ದರೋಡೆ ಮಾಡಿತ್ತು ‘ಡಿ’ಗ್ಯಾಂಗ್!

    ಶ್ರೀಹರಿ ಹಾಗೂ ಅನುಷಾಗೆ ಮದುವೆಯಾಗಿ 5 ವರ್ಷ ಆಗಿತ್ತು. ಒಂದು ಮಗು ಕೂಡ ಇತ್ತು. ಹಾಗಿದ್ದರೂ ಪತಿ ಶ್ರೀಹರಿ ಇತರೆ ಹುಡುಗಿಯರ ಜೊತೆ ಸಹವಾಸ ಮಾಡಿದ್ದ. ಮನೆಯ ವಾಶ್ ರೂಂನಿಂದ ಗಂಡನಿಗೆ ವೀಡಿಯೋ ಕಾಲ್ ಮಾಡಿ ಪೆಟ್ರೋಲ್ ಸುರಿದುಕೊಳ್ಳುತ್ತೇನೆ ಎಂದು ಹೆಂಡತಿ ಹೇಳಿದ್ದಳು. ಈ ವೇಳೆ ರಕ್ಷಣೆ ಮಾಡದೇ ನಿರ್ಲಕ್ಷ್ಯ ಮಾಡಿರುವುದಾಗಿ ಮೃತ ಅನುಷಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಬಲಮುರಿ ಹಾಗೂ ಎಡಮುರಿ ಗಣಪತಿಗೆ ಇರುವ ವ್ಯತ್ಯಾಸವೇನು?

  • ದುಂದುವೆಚ್ಚಕ್ಕೆ ಬೇಸತ್ತ ಗಂಡ – ಗೆಳೆಯರಿಗೆ ಸುಪಾರಿ ಕೊಟ್ಟು ಪತ್ನಿಯ ಕೊಲೆ

    ದುಂದುವೆಚ್ಚಕ್ಕೆ ಬೇಸತ್ತ ಗಂಡ – ಗೆಳೆಯರಿಗೆ ಸುಪಾರಿ ಕೊಟ್ಟು ಪತ್ನಿಯ ಕೊಲೆ

    ಭೋಪಾಲ್: ಪತ್ನಿಯ ದುಂದುವೆಚ್ಚಕ್ಕೆ ಬೇಸತ್ತ ಪತಿಯು ತನ್ನ ಗೆಳೆಯರಿಗೆ ಸುಪಾರಿ ನೀಡಿ ಪತ್ನಿಯನ್ನು ಕೊಲೆ ಮಾಡಿಸಿರುವ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ ನಡೆದಿದೆ.

    ದುರ್ಗಾವತಿ ಕೊಲೆಯಾದ ಮಹಿಳೆ. ಮಧ್ಯಪ್ರದೇಶದ ಗ್ವಾಲಿಯರ್ ಮೂಲದ ಹೇಮಂತ್ ಶರ್ಮಾ ಎಂಬಾತ ತನ್ನ ಪತ್ನಿಯು ದುಂದುವೆಚ್ಚ ಮಾಡುತ್ತಿರುವುದಕ್ಕೆ ಬೇಸತ್ತಿದ್ದ. ಗೆಳೆಯರಿಗೆ 2.5 ಲಕ್ಷ ರೂ. ಗೆ ಪತ್ನಿಯ ಕೊಲೆ ಮಾಡಲು ಸುಪಾರಿ ನೀಡಿದ್ದ. ಇದನ್ನೂ ಓದಿ: ಎಸ್‌ಸಿಒ ಸಭೆಗೆ ಮೋದಿಗೆ ಆಹ್ವಾನ ನೀಡಿದ ಪಾಕ್‌ – ಪ್ರಧಾನಿ ಭಾಗವಹಿಸೋದು ಡೌಟ್‌

    ಆ.13 ರಂದು ದುರ್ಗಾವತಿ ತನ್ನ ಸಹೋದರ ಸಂದೇಶನ ಜೊತೆಗೆ ಬೈಕ್ ಮೇಲೆ ದೇವಸ್ಥಾನಕ್ಕೆ ಹೋಗಿದ್ದಳು. ದೇವಸ್ಥಾನದಿಂದ ವಾಪಸ್ ಬರುವ ಸಮಯದಲ್ಲಿ ಹೇಮಂತ್ ಶರ್ಮಾನಿಗೆ ಪರಿಚಯವಿದ್ದವರು ಕಾರಿನಲ್ಲಿ ಬಂದು ಉದ್ದೇಶಪೂರ್ವಕವಾಗಿ ದುರ್ಗಾವತಿ ಚಲಿಸುತ್ತಿದ್ದ ಬೈಕ್‌ಗೆ ಗುದ್ದಿದ್ದಾರೆ.

    ತಕ್ಷಣವೇ ದುರ್ಗಾವತಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಆಕೆ ಮೃತಪಟ್ಟಿದ್ದಾಳೆ. ಆಕೆಯ ಸಹೋದರ ಸಂದೇಶ ಗಂಭೀರವಾಗಿ ಗಾಯಗೊಂಡಿದ್ದಾನೆ. ನಂತರ ಶರ್ಮಾ, ಭಾರೀ ವಾಹನವೊಂದು ವೇಗವಾಗಿ ಬಂದು ಅಪಘಾತ ಮಾಡಿದೆ ಎಂದು ತಿಳಿಸಿ ಸುಮ್ಮನಾಗಿದ್ದ. ಇದನ್ನೂ ಓದಿ: ಬಾಂಗ್ಲಾದಿಂದ ಭಾರತಕ್ಕೆ ಹಿಂದೂಗಳೇ ಬರ್ತಿಲ್ಲ, ಆದ್ರೆ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ: ಅಸ್ಸಾಂ ಸಿಎಂ

    ಘಟನೆಯಾದ 10 ದಿನದ ನಂತರ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಹೇಮಂತ್ ಶರ್ಮಾನಿಗೆ ಪರಿಚಯವಿದ್ದ ವ್ಯಕ್ತಿಯ ಕಾರು ಬೈಕಿಗೆ ಉದ್ದೇಶಪೂರ್ವಕವಾಗಿ ಗುದ್ದಿದ್ದು ಗೊತ್ತಾಗಿದೆ.

    ತನಿಖೆ ವೇಳೆ ದುರ್ಗಾವತಿಯು ಹೇಮಂತ್ ಶರ್ಮಾನ ಎರಡನೇ ಹೆಂಡತಿ ಎಂದು ಗೊತ್ತಾಗಿದ್ದು, ಅವರಿಬ್ಬರು 2021 ರಿಂದ ಸಂಪರ್ಕದಲ್ಲಿದ್ದರು. ನಂತರ ಅವರು 2023ರಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು ಎಂದು ತಿಳಿದು ಬಂದಿದೆ.

    ಕೊಲೆ ಮಾಡುವಾಗ ಮೂವರು ಆರೋಪಿಗಳು ಭಾಗಿಯಾಗಿರುವುದು ಖಚಿತವಾಗಿದೆ. ಸದ್ಯಕ್ಕೆ ಹೇಮಂತ್ ಶರ್ಮಾ ಮತ್ತು ಕಾರು ಚಾಲಕನನ್ನು ಬಂಧಿಸಲಾಗಿದೆ. ಇನ್ನಿಬ್ಬರ ಬಂಧನಕ್ಕೆ ಹುಡುಕಾಟ ನಡೆದಿದೆ ಎಂದು ಪೊಲೀಸ್ ಅಧಿಕಾರಿ ನಿರಂಜನ್ ಶರ್ಮಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಬರೋಬ್ಬರಿ 2,100 ಕೋಟಿ ರೂ. ಚೆಕ್‌ ಕೊಟ್ಟ ದಾನಿ

  • ಮಂಡ್ಯದಲ್ಲಿ ಪತಿ-ಪತ್ನಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಹೆಂಡತಿ ಶವ ಪತ್ತೆ – ಕೆರೆಗೆ ಹಾರಿ ಗಂಡ ಆತ್ಮಹತ್ಯೆ

    ಮಂಡ್ಯದಲ್ಲಿ ಪತಿ-ಪತ್ನಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಹೆಂಡತಿ ಶವ ಪತ್ತೆ – ಕೆರೆಗೆ ಹಾರಿ ಗಂಡ ಆತ್ಮಹತ್ಯೆ

    – ಗಂಡನ ಮನೆಗೆ ಬೆಂಕಿ ಇಟ್ಟು ಮೃತ ಮಹಿಳೆ ಸಂಬಂಧಿಕರು ಆಕ್ರೋಶ

    ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗದ್ದೆಹೊಸೂರು ಗ್ರಾಮದಲ್ಲಿ ಪತಿ, ಪತ್ನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ.

    ಸ್ವಾತಿ (21), ಮೋಹನ್ ಮೃತ ದುರ್ದೈವಿಗಳು. ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ ಮೃತದೇಹ ಪತ್ತೆಯಾಗಿದೆ. ಮಹಿಳೆ ಸಾವಿನ ಬೆನ್ನಲ್ಲೇ ಸ್ವಾತಿ ಪತಿ ಹಾಗೂ ಆತನ ಪೋಷಕರು ಪರಾರಿಯಾಗಿದ್ದರು. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಮಹಿಳೆ ಸಾವಿನಿಂದ ಆಕ್ರೋಶಿತರಾದರ ಸಂಬಂಧಿಗಳು ಮನೆಗೆ ಬೆಂಕಿ ಇಟ್ಟು, ಪೀಠೋಪಕರಣ ಧ್ವಂಸ ಮಾಡಿ ದಾಂಧಲೆ ಸೃಷ್ಟಿಸಿದ್ದಾರೆ.

    ಮರಣೋತ್ತರ ಪರೀಕ್ಷೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಪೊಲೀಸರು ನಾಪತ್ತೆಯಾಗಿರುವ ಗಂಡ ಹಾಗೂ ಅವನ ಮನೆಯವರಿಗಾಗಿ ಶೋಧಕ್ಕೆ ಮುಂದಾದರು.

    ಪತ್ನಿ ಸಾವಿನ ಬೆನ್ನಲ್ಲೇ ಮೋಹನ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆರೆಯಿಂದ ಮೋಹನ್ ಶವ ಹೊರತೆಗೆಯಲಾಗಿದೆ. ಗ್ರಾಮಸ್ಥರ ಸಹಾಯದೊಂದಿಗೆ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

    ಪತಿ, ಪತ್ನಿ ಸಾವಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನೆಲೆ ಪೊಲೀಸರ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಮೃತ ಸ್ವಾತಿ ಗಂಡನ ಮನೆ, ಕೊಬ್ಬರಿ ಗೋಡೌನ್‌ಗೆ ಬೆಂಕಿ ಬಿದ್ದಿದೆ. ಗೋಡೌನ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದೆ.

    ಎರಡು ವರ್ಷದ ಹಿಂದೆಯಷ್ಟೆ ಸ್ವಾತಿ-ಮೋಹನ್ ಇಬ್ಬರೂ ಮದುವೆಯಾಗಿದ್ದರು. ಮೃತ ದಂಪತಿಗೆ ಒಂದು ವರ್ಷದ ಹೆಣ್ಣು ಮಗುವಿದೆ. ತಂದೆ, ತಾಯಿ, ಪತ್ನಿ ಜೊತೆ ತೋಟದ ಮನೆಯಲ್ಲಿಯೇ ಮೋಹನ್ ವಾಸವಿದ್ದ. ಸಣ್ಣ-ಪುಟ್ಟ ವಿಚಾರಕ್ಕೆ ಆಗಾಗ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ನಿನ್ನೆ ಸಂಜೆ ತವರು ಮನೆಯಿಂದ ಪತ್ನಿ ಸ್ವಾತಿಯನ್ನ ತನ್ನ ಮನೆಗೆ ಕರೆತಂದಿದ್ದ. ಮಗುವನ್ನ ಅತ್ತೆ ಮನೆಯಲ್ಲಿಯೇ ಬಿಟ್ಟು ಬಂದಿದ್ದ. ಮನೆಗೆ ಬಂದ ಕೆಲ ಹೊತ್ತಲ್ಲೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಒಂದು ಗಂಟೆ ಬಳಿಕ ಬಾವನ ಮನೆಗೆ ಮಗು ಕರೆದುಕೊಂಡು ಬಂದಿದ್ದ ಸ್ವಾತಿ ಸಹೋದರನಿಗೆ ಶಾಕ್ ಕಾದಿತ್ತು.

    ಈ ವೇಳೆ ನೇಣುಬಿಗಿದ ಸ್ಥಿತಿಯಲ್ಲಿ ಸ್ವಾತಿ ಮೃತದೇಹವಿತ್ತು. ಅತ್ತ ಪತಿ ಮೋಹನ್ ಪರಾರಿಯಾಗಿದ್ದ. ಮನೆ ಬಳಿಗ ಬಂದ ಸ್ವಾತಿ ಕುಟುಂಸ್ಥರು ದಾಂಧಲೆ ನಡೆಸಿದ್ದಾರೆ. ಮನೆಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಮನೆಯ ಕಿಟಕಿ ಗಾಜು ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಆಕ್ರೋಶಿತ ಗುಂಪಿನಿಂದ ಕೊಬ್ಬರಿ ಶೇಖರಿಸಿದ್ದ ಮನೆಗೆ ಬೆಂಕಿ ಹಚ್ಚಲಾಗಿದೆ. 10 ಲಕ್ಷಕ್ಕೂ ಅಧಿಕ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದೆ. ಈ ನಡುವೆ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿಯೇ ಮೋಹನ್ ಶವ ಪತ್ತೆಯಾಗಿದೆ.

  • ಹೆಂಡತಿಯ ಹತ್ಯೆಗೈದು ಮನೆಯ ಬಾತ್‌ರೂಂನಲ್ಲಿ ಪೆಟ್ರೋಲ್ ಸುರಿದು ಸುಟ್ಟ ಪತಿ

    ಹೆಂಡತಿಯ ಹತ್ಯೆಗೈದು ಮನೆಯ ಬಾತ್‌ರೂಂನಲ್ಲಿ ಪೆಟ್ರೋಲ್ ಸುರಿದು ಸುಟ್ಟ ಪತಿ

    ನೆಲಮಂಗಲ: ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ಪತಿ (Husband) ಕ್ಷುಲ್ಲಕ ವಿಚಾರದಲ್ಲಿ ಪತ್ನಿಯನ್ನ (Wife) ಕೊಲೆ ಮಾಡಿ ಮನೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟಿರುವ ಘಟನೆ ಬೆಂಗಳೂರು (Bengaluru) ಹೊರವಲಯ ನೆಲಮಂಗಲ (Nelamangala) ತಾಲೂಕಿನ ದಾಬಸ್ ಪೇಟೆಯಲ್ಲಿ (Dabaspet) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಈ ಘಟನೆ ಎರಡು ಮೂರು ದಿನಗಳ ಹಿಂದೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾವ್ಯ (27) ಮೃತ ಗೃಹಿಣಿ. ಈಕೆಯ ಶವ ಮನೆಯ ಬಾತ್‌ರೂಂನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಮೊಘಲ್‌ ದೊರೆ ಹುಮಾಯೂನ್-ರಾಣಿ ಕರ್ಣಾವತಿಯಿಂದ ಬಂತಾ ‘ರಾಖಿ ಹಬ್ಬ’; ಚರ್ಚೆ ಹುಟ್ಟುಹಾಕಿದ ಸಂಸದೆ ಸುಧಾಮೂರ್ತಿ ಪೋಸ್ಟ್‌

    ಪತಿ ಶಿವಾನಂದ್ ಅಲಿಯಾಸ್ ದಿಲೀಪ್ ಮೂಲತಃ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಣಿಪುರ ಗ್ರಾಮದವನಾಗಿದ್ದು, ಕೊಲೆಯಾದ ಕಾವ್ಯ ಹೊಳೆನರಸೀಪುರ ತಾಲೂಕು ಮಾವಿನಕೆರೆ ಗ್ರಾಮದವರಾಗಿದ್ದಳು. ಇವರಿಬ್ಬರು ಕಳೆದ ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಮನೆಯಲ್ಲಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಇದನ್ನೂ ಓದಿ: ಹೆತ್ತ ಮಗನ ಮುಂದೆಯೇ ತಾಯಿಯ ಗುಪ್ತಾಂಗಕ್ಕೆ ಖಾರದಪುಡಿ ಹಾಕಿದ ದುರುಳರು!

    ಪತಿ ವಿಪರೀತವಾಗಿ ಮದ್ಯಪಾನ ಮಾಡುತ್ತಿದ್ದ. ಇದರಿಂದ ಇಬ್ಬರ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದೆ. ಕುಡಿದ ಅಮಲಿನಲ್ಲಿ ಮನೆಯ ಬಾತ್ ರೂಮ್‌ನಲ್ಲಿ ಪತ್ನಿಯನ್ನು ಕೊಲೆ ಮಾಡಿ ನಂತರ ಪೆಟ್ರೋಲ್ ಸುರಿದು ಸುಟ್ಟಿರುವ ಆರೋಪಿ ಪತಿಯನ್ನು ದಾಬಸ್ ಪೇಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಕಾವ್ಯ ಫೋನ್ ತೆಗೆಯದ ಹಿನ್ನೆಲೆ ಮನೆಯವರು ಬಂದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ತಂದೆ ಮಾಡದ ತಪ್ಪಿಗೆ ಈ ರೀತಿ ಆರೋಪಕ್ಕೆ ಗುರಿಯಾಗಿದ್ದು ಬೇಸರ ತರಿಸಿದೆ: ಯತೀಂದ್ರ ಭಾವುಕ

  • ಇಷ್ಟಪಟ್ಟವನನ್ನು ಮದುವೆಯಾಗಿದ್ದಕ್ಕೆ ಕುಟುಂಬಸ್ಥರಿಂದ್ಲೇ ಯುವತಿಯ ಬರ್ಬರ ಹತ್ಯೆ

    ಇಷ್ಟಪಟ್ಟವನನ್ನು ಮದುವೆಯಾಗಿದ್ದಕ್ಕೆ ಕುಟುಂಬಸ್ಥರಿಂದ್ಲೇ ಯುವತಿಯ ಬರ್ಬರ ಹತ್ಯೆ

    ಜೈಪುರ: ರಾಜಸ್ಥಾನದ (Rajastan) ಝಲಾವರ್‌ನಲ್ಲಿ 24 ವರ್ಷದ ಯುವತಿಯೊಬ್ಬಳು ತಾನು ಇಷ್ಟಪಟ್ಟವನನ್ನು ಮದುವೆಯಾದ ಕಾರಣಕ್ಕೆ ಆಕೆಯ ಮನೆಯವರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

    ವಿವರಗಳ ಪ್ರಕಾರ, ಪತಿಯ ಮುಂದೆಯೇ ಯುವತಿಯನ್ನು ಆಕೆಯ ಕುಟುಂಬಸ್ಥರು ಅಪಹರಣ ಮಾಡಿದ್ದಾರೆ. ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅಲ್ಲದೇ ಆಕೆಯ ಮೃತದೇಹವನ್ನು ಸುಡಲಾಗಿದೆ.

    ಈ ಸಂಬಂಧ ಪೊಲೀಸರು ತನಿಖೆ ನಡೆಸಿದಾಗ ಯುವತಿ ತನ್ನ ಕುಟುಂಬದ ವಿರುದ್ಧವಾಗಿ ರವಿ ಭೀಲ್ ಎಂಬಾತನನ್ನು ಮದುವೆಯಾಗಿದ್ದಾಳೆ. ಅಲ್ಲದೇ ವಿಚಾರ ಗೊತ್ತಾಗಿ ಯುವತಿ ಕುಟುಂಬಸ್ಥರು ತಮ್ಮ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದು ದಂಪತಿ ಬೇರೆ ಕಡೆ ನೆಲೆಸಿದ್ದರು.

    ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ದಂಪತಿ ವಾಸವಾಗಿದ್ದು, ಬ್ಯಾಂಕ್‌ಗೆ ಭೇಟಿ ನೀಡುವ ಬಗ್ಗೆ ಖಚಿತ ಮಾಹಿತಿ ಪಡೆದ ಕುಟುಂಬದ ಸದಸ್ಯರು ಆಕೆಯನ್ನು ಅಲ್ಲಿಂದ ಅಪಹರಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ 500ರೂ. ದಂಡ- ಬಿಬಿಎಂಪಿ ಆಯುಕ್ತ ಎಚ್ಚರಿಕೆ

    ಇತ್ತ ಪತ್ನಿ ಕಾಣೆಯಾಗಿರುವ ಕುರಿತು ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಈ ನಡುವೆ ಕುಟುಂಬಸ್ಥರು ಆಕೆಯ ದೇಹವನ್ನು ಸುಟ್ಟು ಹಾಕಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಮಹಿಳೆಯ ದೇಹ 80%ಕ್ಕೂ ಹೆಚ್ಚು ಸುಟ್ಟಿತ್ತು. ಇನ್ನು ಆಕೆಯ ಕುಟುಂಬ ಸದಸ್ಯರು ಸ್ಥಳದಿಂದ ಪರಾರಿಯಾಗಿದ್ದಾರೆ.

    ಸದ್ಯ ಮಹಿಳೆಯ ಸುಟ್ಟ ಅವಶೇಷಗಳನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನಕ್ಕೆ ಕಳುಹಿಸಲಾಗಿದೆ.

  • ಗಂಡ ಬೇಕೆಂದು ಇಬ್ಬರು ಹೆಣ್ಣು ಮಕ್ಕಳೊಂದಿಗೆ ಧರಣಿ ಕುಳಿತ ಪತ್ನಿ!

    ಗಂಡ ಬೇಕೆಂದು ಇಬ್ಬರು ಹೆಣ್ಣು ಮಕ್ಕಳೊಂದಿಗೆ ಧರಣಿ ಕುಳಿತ ಪತ್ನಿ!

    ದಾವಣಗೆರೆ: ಗಂಡ ಬೇಕು ಎಂದು ಮಕ್ಕಳೊಂದಿಗೆ ಪತ್ನಿ ಧರಣಿ ಕುಳಿತ ಘಟನೆ ದಾವಣಗೆರೆ (Davanagere) ಜಿಲ್ಲೆಯಲ್ಲಿ ನಡೆದಿದೆ.

    ನಗರದ ರಾಮನಗರದ ಎಸ್‍ಓಜಿ ಕಾಲೋನಿ ಮನೆ ಮುಂದೆ ಪತ್ನಿ ಸೌಮ್ಯಾ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ರಾತ್ರಿಯಿಂದ ಗಂಡನಿಗಾಗಿ ಕಾಯುತ್ತಿದ್ದಾರೆ. ಕಾನ್ಸ್ ಟೇಬಲ್ ಆಗಿರುವ ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಅಂತ ಸೌಮ್ಯಾ ಗಂಭೀರ ಆರೋಪ ಮಾಡಿದ್ದಾರೆ.

    ಗಂಡ ಗೋಣಿ ಬಸಪ್ಪ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ನಮ್ಮ ಮನೆಗೆ ಬರುತ್ತಿಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೆ ಪತ್ನಿ ಸೌಮ್ಯ ಒಡವೆ ಅಡ ಇಟ್ಟಿದ್ದಾರೆ. ಸದ್ಯ ಅಕ್ರಮ ಸಂಬಂಧ ಹೊಂದಿರುವ ಮಹಿಳೆ ಮನೆ ಮುಂದೆ ರಾತ್ರಿ ಇಡೀ ಇಬ್ಬರು ಮಕ್ಕಳೊಂದಿಗೆ ಗಂಡನಿಗಾಗಿ ಹೆಂಡತಿ ಕಾದು ಕುಳಿತಿದ್ದಾರೆ.

    ಸೌಮ್ಯ ಗೋಣಿ ಬಸಪ್ಪ 2013 ರಲ್ಲಿ ವಿವಾಹವಾಗಿದ್ದರು. ಗಂಡ ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ಮನೆ ಖರೀದಿಸಿ ಕೊಟ್ಟಿದ್ದಾನೆ. ನಮ್ಮ ಮನೆಗೆ ಬರುತ್ತಿಲ್ಲ, ಎರಡು ಮಕ್ಕಳ ನಿರ್ವಹಣೆ ಕಷ್ಟ ಆಗಿದೆ. ಈ ಹಿಂದೆ ಕಂಪ್ಲೆಂಟ್ ಕೊಟ್ಟಿದ್ದೆ ಮನವೊಲಿಸಿ ಕೇಸ್ ವಾಪಸ್ ತೆಗೆಸಲಾಗಿತ್ತು. ಇದೀಗ ನನಗೆ ನನ್ನ ಗಂಡ ಬೇಕು ಎಂದು ಪತ್ನಿ ಸೌಮ್ಯ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಡಿಕೆಶಿ ಮುಖ್ಯಮಂತ್ರಿ ಆಗ್ಲೇಬೇಕು, ಆಗಿಯೇ ಆಗ್ತಾರೆ: ಶಾಸಕ ಶಿವಗಂಗಾ ಬಸವರಾಜ್ ವಿಶ್ವಾಸ

  • ಪತಿ, ಮಾವ ಕೈ,ಕಾಲು ಕಟ್ಟಿ ಥಳಿಸಿದ್ದಲ್ಲದೇ ಬಲವಂತವಾಗಿ ಮಹಿಳೆಯ ಬಾಯಿಗೆ ಕೀಟನಾಶಕ ಸುರಿದ್ರು!

    ಪತಿ, ಮಾವ ಕೈ,ಕಾಲು ಕಟ್ಟಿ ಥಳಿಸಿದ್ದಲ್ಲದೇ ಬಲವಂತವಾಗಿ ಮಹಿಳೆಯ ಬಾಯಿಗೆ ಕೀಟನಾಶಕ ಸುರಿದ್ರು!

    – ತಡೆಯಲು ಹೋದ ಸಹೋದರನ ಮೇಲೆಯೂ ಹಲ್ಲೆ

    ಲಕ್ನೋ: ಪತಿ ಮತ್ತು ಮಾವ ಸೇರಿ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ಥಳಿಸಿದ್ದಲ್ಲದೇ ಆಕೆಯ ಬಾಯಿಗೆ ಕೀಟನಾಶಕವನ್ನು ಸುರಿದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ (Uttarpradesh) ಹಾಪುರ ಜಿಲ್ಲೆಯಲ್ಲಿ ನಡೆದಿದೆ.

    ಪತಿ ಮತ್ತು ಮಾವ ಮಹಿಳೆಗೆ ಥಳಿಸಿದ್ದಲ್ಲದೆ, ಆಕೆಯನ್ನು ಕೊಲ್ಲುವ ಉದ್ದೇಶದಿಂದ ಬೆಳೆಗೆ ಬಳಸುವ ಕೀಟನಾಶಕವನ್ನು ಆಕೆಯ ಬಾಯಿಗೆ ಸುರಿದಿದ್ದಾರೆ. ಈ ವೇಳೆ ಸಹೋದರ ವಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ಆತನಿಗೂ ಥಳಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಘಟನೆ ವಿವರ: ಹಾಪುರ್ ಜಿಲ್ಲೆಯ ಗರ್ಮುಕ್ತೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಗದ್‌ಪುರ ಗ್ರಾಮದ ನಿವಾಸಿ ಶೀಲಾ ಅವರು ಗಜ್ರೌಲಾ ಪೊಲೀಸ್ ಠಾಣಾ ವ್ಯಾಪ್ತಿಯ ಫಿರೋಜ್‌ಪುರ ಗ್ರಾಮದ ಸುರೇಂದ್ರ ಎಂಬಾತನನ್ನು ವಿವಾಹವಾಗಿದ್ದರು. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಪೋಷಕರಿಗೆ ಶೀಲಾಳ ಮೇಲೆ ನಡೆದ ಹಲ್ಲೆಯ ಬಗ್ಗೆ ಮಾಹಿತಿ ಲಭಿಸಿದೆ.

    ವಿಚಾರ ಗೊತ್ತಾಗುತ್ತಿದ್ದಂತೆಯೇ ಶೀಲಾಳ ಸಹೋದರ ಜಯಪ್ರಕಾಶ್ ತನ್ನ ಸ್ನೇಹಿತನ ಜೊತೆ ನೇರವಾಗಿ ಆಕೆಯ ಮನೆಗೆ ಬಂದರು. ಈ ವೇಳೆ ಸಹೋದರನ ಮುಂದೆಯೇ ಪತಿ ಮತ್ತು ಮಾವ ಸೇರಿ ಆಕೆಯ ಕೈಕಾಲು ಕಟ್ಟಿ ಥಳಿಸಿದ್ದಾರೆ. ಇದನ್ನು ಕಣ್ಣಾರೆ ಕಂಡ ಸಹೋದರ ತಡೆಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಆತನ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಸಹೋದರನ ಸಮ್ಮುಖದಲ್ಲಿಯೇ ಆರೋಪಿಗಳಿಬ್ಬರೂ ಬೆಳೆಗೆ ಬಳಸುವ ಕೀಟನಾಶಕವನ್ನು ಆಕೆಯ ಬಾಯಿಗೆ ಬಲವಂತವಾಗಿ ಸುರಿದಿದ್ದಾರೆ. ಪರಿಣಾಮ ಆಕೆಯ ಸ್ಥಿತಿ ಹದಗೆಟ್ಟಿದೆ. ಇದನ್ನೂ ಓದಿ: ಅಧಿಕಾರಿ ಆತ್ಮಹತ್ಯೆ ಪ್ರಕರಣ: ನಾಗೇಂದ್ರ ರಾಜೀನಾಮೆ, ಕೇಂದ್ರ ಏಜೆನ್ಸಿಯಿಂದ ತನಿಖೆಗೆ ಗೋವಿಂದ ಕಾರಜೋಳ ಆಗ್ರಹ

    ಕೂಡಲೇ ಮಹಿಳೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರಿ ಇನ್ಸ್‌ಪೆಕ್ಟರ್ ಹರೀಶ್ ವರ್ಧನ್ ಸಿಂಗ್ ತಿಳಿಸಿದ್ದಾರೆ.

  • ಅತ್ತಿಗೆಯಿಂದ ದೂರ ಇರಿ ಅಂದಿದ್ದಕ್ಕೆ ಮೈದುನನ ಕಲ್ಲಿನಿಂದ ಜಜ್ಜಿ ಕೊಲೆಗೈದ್ರು!

    ಅತ್ತಿಗೆಯಿಂದ ದೂರ ಇರಿ ಅಂದಿದ್ದಕ್ಕೆ ಮೈದುನನ ಕಲ್ಲಿನಿಂದ ಜಜ್ಜಿ ಕೊಲೆಗೈದ್ರು!

    ಕಲಬುರಗಿ: ಅತ್ತಿಗೆಯಿಂದ ದೂರ ಇರುವುದಕ್ಕೆ ಹೇಳಿದಕ್ಕೆ ಮೈದುನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ಮುನ್ನೊಳ್ಳಿ ಗ್ರಾಮದಲ್ಲಿ ನಡೆದಿದೆ.

    ಹೀರಾಲಾಲ್ ಲದಾಫ್ (35) ಕೊಲೆಯಾದವ. ಕೊಲೆಯಾದ ಹೀರಾಲಾಲ್ ಅತ್ತಿಗೆ ಜೊತೆ ರವಿ ಎಂಬಾತ ಅಕ್ರಮ ಸಂಬಂಧ ಹೊಂದಿದ್ದನು. ಈ ವಿಚಾರವನ್ನು ಹೀರಾಲಾಲ್ ತನ್ನ ಅಣ್ಣ ಬಾಬು ಲದಾಫ್ಗೆ ತಿಳಿಸಿದ್ದನು. ಇತ್ತ ಅನೈತಿಕ ಸಂಬಂಧ ತಿಳಿದ ಕೂಡಲೇ ರವಿಯಿಂದ ದೂರ ಇರುವಂತೆ ಬಾಬು ತನ್ನ ಪತ್ನಿಗೆ ಹೇಳಿದ್ದರು. ಆದರೆ ಆಕೆ ತನ್ನ ಪ್ರಿಯಕರನ ಜೊತೆ ಸೇರಿ ಪತಿ ಬಾಬು ಲದಾಫ್ ಮೇಲೆಯೇ ಹಲ್ಲೆ ಮಾಡಿದ್ದಾಳೆ.

    ಪತ್ನಿಯ ಅನೈತಿಕ ಸಂಬಂಧದಿಂದ ಮಾನಸಿಕವಾಗಿ ನೊಂದು ಬಾಬು ಲದಾಫ್ ಊರನ್ನೇ ಬಿಟ್ಟಿದ್ದರು. ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿ ಅನೈತಿಕ ಸಂಬಂಧ ಬಿಟ್ಟು ಬಿಡುವಂತೆ ರವಿಗೆ ಹಿರಾಲಾಲ್ ಹೇಳಿದ್ದರು. ಇದೇ ವಿಚಾರವಾಗಿ ಹೀರಾಲಾಲ್ ರವಿ ಮಧ್ಯೆ ಆಗಾಗ ಗಲಾಟೆ ಕೂಡ ಆಗಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಅಪಘಾತಕ್ಕೆ ಒಂದೇ ದಿನ 51 ಬಲಿ- ಸಂಚಾರಿ ನಿಯಮ ಪಾಲನೆಗೆ ಅಲೋಕ್ ಕುಮಾರ್ ಮನವಿ

    ಮೊನ್ನೆ ಕುಡಿದ ನಶೆಯಲ್ಲಿ ಗಲಾಟೆ ಮಾಡಿಕೊಂಡ ಬಳಿಕ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ್ರು. ಭಾನುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಹೀರಾಲಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪತ್ನಿಯ ಗುಪ್ತಾಂಗದಲ್ಲಿ ರಂಧ್ರ ಮಾಡಿ ಬೀಗ ಜಡಿದು ವಿಕೃತಿ ಮೆರೆದ ಪತಿ!

    ಪತ್ನಿಯ ಗುಪ್ತಾಂಗದಲ್ಲಿ ರಂಧ್ರ ಮಾಡಿ ಬೀಗ ಜಡಿದು ವಿಕೃತಿ ಮೆರೆದ ಪತಿ!

    ಪುಣೆ: ವ್ಯಕ್ತಿಯೊಬ್ಬ ತನ್ನ ಪತ್ನಿಯ ಗುಪ್ತಾಂಗವನ್ನು ಡ್ರಿಲ್‌ ಮಾಡಿ ಬಳಿಕ ಬೀಗ ಹಾಕಿದ ವಿಚಿತ್ರ ಪ್ರಸಂಗವೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಅಚ್ಚರಿ ಎನಿಸಿದರೂ ಸತ್ಯವಾಗಿರುವ ಈ ಘಟನೆ ಮಹಾರಾಷ್ಟ್ರದ (Maharastra) ಪಿಂಪ್ರಿ ಚಿಂಚ್ವಾಡದಲ್ಲಿ ನಡೆದಿದೆ. ವ್ಯಕ್ತಿಯನ್ನು ಉಪೇಂದ್ರ ಹುಡಕೆ ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಈತ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಮನೆಯಲ್ಲಿಯೇ ಇರುತ್ತಿದ್ದಳು. ಸದ್ಯ ಪ್ರಕರಣ ಸಂಬಂಧ ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

    ಪತ್ನಿಗೆ ಬೇರೊಬ್ಬನ ಜೊತೆ ಸಂಬಂಧ ಇರುವ ಬಗ್ಗೆ ಉಪೇಂದ್ರ ಅನುಮಾನಗೊಂಡಿದ್ದನು. ಹೀಗಾಗಿ ಮೇ 11 ರಂದು ಕಂಠಪೂರ್ತಿ ಕುಡಿದು ಬಂದಿದ್ದ ಉಪೇಂದ್ರ, ಪತ್ನಿಗೆ ಮನಬಂದಂತೆ ಥಳಿಸಿ, ಒದ್ದಿದ್ದಾನೆ. ಬಳಿಕ ಆಕೆಯನ್ನು ಚೂಡಿದಾರದ ಶಾಲಿನಿಂದ ಕಟ್ಟಿಹಾಕಿ ಹೇಯ ಕೃತ್ಯ ಎಸಗಿದ್ದಾನೆ.

    ಹರಿತವಾದ ಬ್ಲೇಡ್‌ನಿಂದ ಗುಪ್ತಾಂಗದ ಎರಡೂ ಕಡೆ ರಂಧ್ರಗಳನ್ನು ಮಾಡಿದ್ದಾನೆ. ಕಬ್ಬಿಣದ ಸ್ಕ್ರೂಗಳನ್ನು ಹಾಕಿ ನಂತರ ಆಕೆಯ ಜನನಾಂಗದ ಪ್ರದೇಶಕ್ಕೆ ಬೀಗ ಹಾಕಿದ್ದಾನೆ. ಇತ್ತ ಪತಿಯ ನೀಚ ಕೃತ್ಯದಿಂದ ನೋವು ತಾಳಲಾರದೆ 28 ವರ್ಷದ ಪತ್ನಿ ಜೋರಾಗಿ ಕಿರುಚಾಡಿದ್ದಾಳೆ. ಆದರೂ ಪತಿ ಆಕೆಯ ಮೇಲೆ ಕಿಂಚಿತ್ತೂ ಅನುಕಂಪ ತೋರಿಸಲಿಲ್ಲ. ಇದನ್ನೂ ಓದಿ: ಅಕ್ರಮ ಮರಳು ಅಡ್ಡಾದ ಮೇಲೆ ಅಧಿಕಾರಿಗಳ ದಾಳಿ – 1.58 ಕೋಟಿ ರೂ. ಮೌಲ್ಯದ ಮರಳು ಜಪ್ತಿ

    ಮಹಿಳೆಯ ಕಿರುಚಾಟ ಕೇಳಿಸಿಕೊಂಡ ಅಕ್ಕಪಕ್ಕದ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದ ಒದ್ದಾಡುತ್ತಿರುವುದನ್ನು ಕಂಡು ಗಾಬರಿಗೊಂಡಿದ್ದಾರೆ. ಅಲ್ಲದೇ ಕೂಡಲೇ ಆಕೆಯನ್ನು ಹತ್ತಿರದಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ವೈದ್ಯರು ತುರ್ತು ಸರ್ಜರಿ ಮೂಲಕ ಸ್ಕ್ರೂ ಹಾಗೂ ಲಾಕ್‌ ಅನ್ನು ತೆಗೆಯುವಲ್ಲಿ ಯಶಸ್ವಿಯಾದರು.

    ಪ್ರಕರಣ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

  • ಪತ್ನಿಯನ್ನು ಕಾಡಿಗೆ ಕರೆದೊಯ್ದು ಮೊಣಕಾಲುಗಳಿಗೆ ಸುತ್ತಿಗೆಯಿಂದ ಹಲ್ಲೆಗೈದು, ಮಚ್ಚು ಬೀಸಿದ ಪತಿ!

    ಪತ್ನಿಯನ್ನು ಕಾಡಿಗೆ ಕರೆದೊಯ್ದು ಮೊಣಕಾಲುಗಳಿಗೆ ಸುತ್ತಿಗೆಯಿಂದ ಹಲ್ಲೆಗೈದು, ಮಚ್ಚು ಬೀಸಿದ ಪತಿ!

    ತಿರುವನಂತಪುರಂ: ಪತಿ ಮಹಾಶಯನೊಬ್ಬ ತನ್ನ ಪತ್ನಿಯನ್ನು ಕಾಡಿಗೆ ಕರೆದುಕೊಂಡು ಹೋಗಿ ಗಂಭೀರವಾಗಿ ಗಾಯಗೊಳಿಸಿ ಬಳಿಕ ಆಕೆಯನ್ನು ಅಲ್ಲಿಯೇ ಬಿಟ್ಟು ಎಸ್ಕೇಪ್‌ ಆಗಿರುವ ಅಮಾನುಷ ಘಟನೆಯೊಂದು ಕೆರಳದಲ್ಲಿ (Kerala) ನಡೆದಿದೆ.

    ತಿರುವನಂತಪುರಂನ ಪಲೋಡ್ ಬಳಿ ಪತಿ ತನ್ನ ಪತ್ನಿಯ ಮೇಲೆ ಈ ದುಷ್ಕೃತ್ಯ ಎಸಗಿದ್ದಾನೆ. ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೈಲಮೂಡಿನ ಗಿರಿಜಾ ಶಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಪತಿ ಪಾಳೋಡ್ ಪಾಚ ಮೂಲದ ಸೋಜಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಪ್ರಕರಣದ ವಿವರ: ಕಳೆದ ಒಂದೂವರೆ ವರ್ಷದಿಂದ ಗಿರಿಜಾ ಹಾಗೂ ಸೋಜಿ ಪ್ರತ್ಯೇಕವಾಗಿದ್ದರು. ಇದೀಗ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಆರೋಪಿ ಸೋಜಿ ತನ್ನ ಪತ್ನಿಯನ್ನು ಸಂಪರ್ಕಿಸಿದ್ದಾನೆ. ಅಲ್ಲದೇ ಈ ಬಗ್ಗೆ ಇಬ್ಬರು ಕುಳಿತು ಮಾತಾಡೋಣ ಎಂದು ಪತ್ನಿಯನ್ನು ಕರೆದಿದ್ದಾನೆ. ಪತಿಯ ಮಾತು ನಂಬಿದ್ದ ಗಿರಿಜಾ ಪತಿ ಹೇಳಿದ ಸ್ಥಳಕ್ಕೆ ಬಂದಿದ್ದಾಳೆ. ಇದನ್ನೂ ಓದಿ: ಆಟೋದಲ್ಲಿ ಬಂದು ಅಂಜಲಿ ಕೊಲೆಗೈದು ಹಂತಕ ಎಸ್ಕೇಪ್- ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಈ ವೇಳೆ ಸೋಜಿ ನಿನ್ನ ಜೊತೆ ಮಾತಾಡೋಕೆ ತುಂಬಾ ಇದೆ ಎಂದು ಆಕೆಯನ್ನು ಪಕ್ಕದ ಕಾಡಿಗೆ ಕರೆದುಕೊಂಡು ಹೋಗಿದ್ದಾನೆ. ಹೀಗೆ ಕರೆದೊಯ್ದವನೇ ಬಚ್ಚಿಟ್ಟಿದ್ದ ಸುತ್ತಿಗೆಯನ್ನು ತೆಗೆದುಕೊಂಡು ಬಂದು ಮೊದಲು ಪತ್ನಿಯ ಎರಡೂ ಮೊಣಕಾಲುಗಳಿಗೆ ಹಲ್ಲೆ ಮಾಡಿದ್ದಾನೆ. ಬಳಿಕ ಹರಿತವಾದ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಆಕೆಯನ್ನು ಕಾಡಿನಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

    ಇತ್ತ ಕಾಡಿಗೆ ಕಟ್ಟಿಗೆ ಸಂಗ್ರಹಿಸಲು ಬಂದ ಸ್ಥಳಿಯರಿಗೆ ಗಿರಿಜಾ ಚೀರಾಟ- ಕಿರುಚಾಟ ಕೇಳಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗಿರಿಜಾಳನ್ನು ತಿರುವನಂತಪುರಂ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಿರಿಜಾ ಕಾಲುಗಳು ಮತ್ತು ತಲೆಗೆ ಗಂಭೀರ ಗಾಯಗಳಾಗಿವೆ.

    ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರೋಪಿ ಸೋಜಿಯನ್ನು ಪಾಂಗೋಡು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಪತ್ನಿಯ ಮೇಲಿನ ಈ ಕ್ರೂರ ದಾಳಿಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ವಿಚಾರಣೆ ಬಳಿಕವಷ್ಟೇ ಸ್ಪಷ್ಟನೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.