ಲಕ್ನೋ: ಮೂಗಿ ಎಂದು ಹೀಯಾಳಿಸುತ್ತಿದ್ದ ಪತಿಯ ನಾಲಿಗೆಯನ್ನೇ ಮಹಿಳೆಯೊಬ್ಬಳು ಹಲ್ಲಿನಿಂದ ಕಚ್ಚಿ ಕತ್ತರಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಶ್ರೀಪಾಲ್ ಮೌರ್ಯ ನಾಲಿಗೆ ಕಳೆದುಕೊಂಡ ವ್ಯಕ್ತಿ. ದಂಪತಿ ಒಂದು ವರ್ಷದ ಹಿಂದೆ ಬಿಹಾರದಲ್ಲಿ ಮದುವೆಯಾಗಿದ್ದರು. ಈತನ ಪತ್ನಿ ಮೂಗಿಯಾಗಿದ್ದಳು. ನಿನಗೆ ಮಾತನಾಡಲು ಬರುವುದಿಲ್ಲ ಎಂದು ಪತ್ನಿಯನ್ನು ಶ್ರೀಪಾಲ್ ಆಗಾಗ್ಗೆ ಹೀಯಾಳಿಸುತ್ತಿದ್ದ. ಇದನ್ನೂ ಓದಿ: 5 ವರ್ಷಗಳಿಂದ ತಾಯಿಯಾಗಲು ಪ್ರಯತ್ನಿಸಿ 4 ಬಾರಿ ಐವಿಎಫ್ ಚುಚ್ಚುಮದ್ದು ಪಡೆದ ನಟಿ
ಬುಧವಾರ ಸಂಜೆ ಶ್ರೀಪಾಲ್ ಕೂಲಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಸುಸ್ತಾಗಿ ಬೇಗ ಮಲಗಿದ್ದ. ಈ ವೇಳೆ ಪತ್ನಿ ಆತನ ನಾಲಿಗೆಯನ್ನು ಹಲ್ಲುಗಳಿಂದ ಕತ್ತರಿಸಿದ್ದಾಳೆ. ನಾಲಿಗೆ ಕಳೆದುಕೊಂಡು ನೋವಿನಿಂದ ಶ್ರೀಪಾಲ್ ಚೀರಾಡಿದ್ದಾನೆ. ನಂತರ ಮನೆಯವರು ಜಮಾಯಿಸಿ ಬರೇಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಬಗ್ಗೆ ಇಲ್ಲಿಯವರೆಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಇದನ್ನೂ ಓದಿ: 70 ವಯಸ್ಸಿನ ಬುದ್ಧಿಮಾಂದ್ಯ ವೃದ್ಧೆಯನ್ನು ಅಪಹರಿಸಿ ಅತ್ಯಾಚಾರ
ಈ ಪ್ರಕರಣ ಶೀಶ್ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಬಲ್ಲಿ ಗ್ರಾಮದಲ್ಲಿ ನಡೆದಿದೆ.
ಪಾಟ್ನಾ: ಇಬ್ಬರು ದುಷ್ಕರ್ಮಿಗಳು ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದ ಘಟನೆ ಗುರುಗ್ರಾಮದ ಡಿಎಲ್ಎಫ್ 3ನೇ ಹಂತದ ಪ್ರದೇಶವೊಂದರಲ್ಲಿ ಸೋಮವಾರ ನಡೆದಿದೆ.
ಗುರುಗ್ರಾಮದ ಡಿಎಲ್ಎಫ್ 3ನೇ ಹಂತದ ಪ್ರದೇಶದ ನಾಥುಪುರದಲ್ಲಿ 23 ವರ್ಷದ ಮಹಿಳೆಯೊಬ್ಬಳ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ. ಆರೋಪಿಯನ್ನು ಬಿಹಾರ ನಿವಾಸಿ ಅನಿಲ್ ಠಾಕೂರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರೇಪ್ ಕೇಸ್ ದಾಖಲಿಸಲು ಠಾಣೆಗೆ ಹೋದ ಬಾಲಕಿ ಮೇಲೆ ಪೊಲೀಸ್ನಿಂದಲೂ ಅತ್ಯಾಚಾರ!
ಗಂಭೀರ ಗಾಯಗೊಂಡ ಮಹಿಳೆಯನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಾಗಿರುವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಸಂತ್ರಸ್ತೆಯ ಪತಿ, ಆಟೋರಿಕ್ಷಾ ಚಾಲಕನಾಗಿದ್ದು, ಪೊಲೀಸ್ ದೂರಿನಲ್ಲಿ ತಮ್ಮ ಹೆಂಡತಿಯಿಂದ ಕರೆ ಬಂದಿತ್ತು. ಇಬ್ಬರು ಪುರುಷರು ನನ್ನ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಿದಳು. ನಾನು ಸ್ಥಳದ ಬಗ್ಗೆ ಅವಳನ್ನು ಕೇಳಿದಾಗ, ಅವಳು ಅದನ್ನು ಬಹಿರಂಗಪಡಿಸಲು ಸಾಧ್ಯವಾಗಲಿಲ್ಲ. ಆದರೆ ಹೇಗಾದರೂ ಅವಳು ಮನೆಗೆ ತಲುಪಿದಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗಾಂಧಿನಗರ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಲಕ್ಷ್ಮೀಕಾಂತ್ ನೇಮಕ
ಮಹಿಳೆಯ ಹೇಳಿಕೆಯನ್ನು ಇನ್ನೂ ದಾಖಲಿಸಿಕೊಳ್ಳಬೇಕಾಗಿದೆ. ಈಗಾಗಲೇ ಪತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಪತಿಯ ದೂರಿನ ಆಧಾರದ ಮೇಲೆ ಇಬ್ಬರ ವಿರುದ್ಧವು ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜೈಪುರ: ಒಂದೂವರೆ ಲಕ್ಷ ರೂಪಾಯಿ ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಸಂಬಂಧಿಕರಿಂದಲೇ ಪತಿಯೊಬ್ಬ ಸಾಮೂಹಿಕ ಅತ್ಯಾಚಾರ ಎಸಗಿಸಿರುವ ಘಟನೆ ರಾಜಸ್ಥಾನದ ಭರತ್ಪುರದಲ್ಲಿ ನಡೆದಿದೆ. ಅಲ್ಲದೇ ಗ್ಯಾಂಗ್ ರೇಪ್ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ.
ಯೂಟ್ಯೂಬ್ನಲ್ಲಿ ಲೈಂಗಿಕ ದೌರ್ಜನ್ಯದ ವೀಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಬರಬೇಕಾಗಿರುವ ವರದಕ್ಷಿಣೆ ಹಣವನ್ನು ಪಡೆಯುತ್ತೇನೆ ಎಂದು ಪತಿ ತನ್ನ ಹೆಂಡತಿಗೆ ಹೇಳಿದ್ದಾನೆ. ಇದೀಗ ಸಂತ್ರಸ್ತೆ ಪತಿ ಮತ್ತು ಆತನ ಸಂಬಂಧಿಕರಿಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾಳೆ. ಇದನ್ನೂ ಓದಿ: ಮದುವೆ ಮನೆಯಲ್ಲಿ ಗುಂಡಿನ ದಾಳಿ – ಮಹಿಳೆಗೆ ಗಾಯ
ಭರತ್ಪುರದ ಕಮಾನ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ದೌಲತ್ ಸಾಹು ಅವರು, ಮಹಿಳೆಯೊಬ್ಬಳು ತನ್ನ ಪತಿ ಮತ್ತು ಇಬ್ಬರು ಸಂಬಂಧಿಕರು ಅತ್ಯಾಚಾರ ಎಸಗಿರುವುದಾಗಿ ದೂರು ದಾಖಲಿಸಿದ್ದಾಳೆ. ಅಲ್ಲದೇ ಯೂಟ್ಯೂಬ್ಗೆ ಅಶ್ಲೀಲ ವೀಡಿಯೋ ಅಪ್ಲೋಡ್ ಮಾಡಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ದೂರಿನಲ್ಲಿ ಸಂತ್ರಸ್ತೆ, ನನ್ನ ಅತ್ತೆಯಂದಿರು ವರದಕ್ಷಿಣೆಗಾಗಿ ನನಗೆ ಕಿರುಕುಳ ನೀಡುತ್ತಿದ್ದರು. ಅವರಿಗೆ ವರದಕ್ಷಿಣೆ ನೀಡದಿದ್ದಾಗ, ಅವರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಪತಿಯ ಸಂಬಂಧಿಕರು ನನ್ನ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ ಮತ್ತು ಘಟನೆಯನ್ನು ಮೊಬೈಲ್ನಲ್ಲಿ ಸೆರೆ ಹಿಡಿದು, ಆ ವೀಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾಳೆ. ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯನ್ನು ಭೇಟಿಯಾದ ಶರದ್ ಪವಾರ್
2019ರಲ್ಲಿ ದಂಪತಿ ಹರಿಯಾಣದಲ್ಲಿ ಮದುವೆಯಾಗಿದ್ದು, ಅಂದಿನಿಂದ ಮಹಿಳೆಗೆ ಅತ್ತೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಈ ಕಾರಣದಿಂದ ಆಕೆ ತನ್ನ ಪೋಷಕರ ಮನೆಗೆ ಮರಳಿದ್ದಳು. ಆದರೆ ಪತಿ ಮತ್ತೆ ಆಕೆಯನ್ನು ಮನೆಗೆ ಕರೆದುಕೊಂಡು ಬಂದಿದ್ದನು. ನಂತರ ಪತಿ ತನ್ನ ಇಬ್ಬರು ಸಂಬಂಧಿಕರನ್ನು ಮನೆಗೆ ಕರೆದುಕೊಂಡು ಬಂದು ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸುವಂತೆ ಸಂಬಂಧಿಕರಿಗೆ ಹೇಳಿ, ಘಟನೆಯನ್ನು ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ ಮತ್ತು ನಿಮ್ಮ ಕುಟುಂಬಸ್ಥರು ನನಗೆ ವರದಕ್ಷಿಣೆ ನೀಡಲು ಸಾಧ್ಯವಾಗಲಿಲ್ಲ. ಹಾಗಾಗಿ ನಾನು ಈ ವೀಡಿಯೋವನ್ನು ಯೂಟ್ಯೂಬ್ನಲ್ಲಿ ಹಾಕುವ ಮೂಲಕ ಅದೇ ಮೊತ್ತವನ್ನು ಗಳಿಸುತ್ತೇನೆ ಎಂದು ಹೇಳಿ ಅಶ್ಲೀಲ ವೀಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.
ಮೃತ ದುರ್ದೈವಿಯನ್ನು ಕಲ್ಯಾಣಿ ಎಂದು ಗುರುತಿಸಲಾಗಿದ್ದು, ಆರೋಪಿ ತರುಣ್ ಹಾಗೂ ಕಲ್ಯಾಣಿ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮೂರು ತಿಂಗಳ ಹಿಂದೆ ಕಲ್ಯಾಣಿ ಗರ್ಭಿಣಿಯಾದ ಬಳಿಕ ತರುಣ್ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದನು. ನೀನು ನೋಡಲು ಚೆನ್ನಾಗಿಲ್ಲ, ಕುಟುಂಬಸ್ಥರಿಂದ ವರದಕ್ಷಿಣೆ ತೆಗೆದುಕೊಂಡು ಬರುವಂತೆ ಸದಾ ಪೀಡಿಸುತ್ತಿದ್ದನು.
ಇದೇ ರೀತಿ ಮಂಗಳವಾರ ಇಬ್ಬರ ನಡುವೆ ವಾಗ್ವಾದ ನಡೆದಿದೆ. ನಂತರ ತರುಣ್ ಕಲ್ಯಾಣಿಗೆ ಶೌಚಾಲಯ ಕ್ಲೀನಿಂಗ್ ಲಿಕ್ವಿಡ್ ಬಲವಂತವಾಗಿ ಕುಡಿಸಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ತೀವ್ರ ಅಸ್ವಸ್ಥಳಾಗಿದ್ದ ಕಲ್ಯಾಣಿಯನ್ನು, ಆಕೆಯ ಕುಟುಂಬಸ್ಥರು ಚಿಕಿತ್ಸೆಗಾಗಿ ನಿಜಾಮಾಬಾದ್ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಕಲ್ಯಾಣಿ ಬುಧವಾರ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಕೆಕೆಆರ್ಗೆ ಪಂಚ್ ಕೊಟ್ಟ ಪೋವೆಲ್- ಡೆಲ್ಲಿ ತಂಡಕ್ಕೆ 4 ವಿಕೆಟ್ಗಳ ಜಯ
ಇದೀಗ ಕಲ್ಯಾಣಿ ಕುಟುಂಬಸ್ಥರು ತರುಣ್ ವರದಕ್ಷಿಣೆಗಾಗಿ ಕಿರುಕುಳ ನೀಡಿ, ಶೌಚಾಲಯ ಸ್ವಚ್ಛಗೊಳಿಸುವ ದ್ರವ ಕುಡಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ತರುಣ್ ಮತ್ತು ಆತನ ಕುಟುಂಬದ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302, 304-ಬಿ ಮತ್ತು 498-ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು: ಗಾಂಜಾ ಮತ್ತಿನಲ್ಲಿ ಪತಿ ಮಹಾಶಯನೊಬ್ಬ ತಾನು ಪ್ರೀತಿಸಿ ಮದುವೆಯಾದ ಪತ್ನಿ ಮೇಲೆಯೇ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಮಹಿಳೆಯನ್ನು ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಈಕೆ ಜಗದೀಶ್ನನ್ನು ಪ್ರೀತಿಸಿ ಕೈಹಿಡಿದಿದ್ದಳು. ಆದರೆ ಇದೀಗ ಗಾಂಜಾ ಮತ್ತಿನಲ್ಲಿ ಪತ್ನಿ ಮೇಲೆ ಸಂಶಯಗೊಂಡು ಚಿತ್ರಹಿಂಸೆ ನೀಡಿದ್ದಾನೆ. ನೀನು ಚೆನ್ನಾಗಿದ್ರೆ ತಾನೇ ಬೇರೆಯವರು ನೋಡೋದು ಎಂದು ಚಾಕುವಿನಿಂದ ಮನಬಂದಂತೆ ಹಲ್ಲೆ ನಡೆಸಿದ್ದಾನೆ.
ಕಳೆದ ಒಂದೂವರೆ ವರ್ಷದ ಹಿಂದೆ ಇವರಿಬ್ಬರು ಮದುವೆಯಾಗಿದ್ದಾರೆ. ಜಯಲಕ್ಷ್ಮಿ ಖಾಸಗಿ ಆಸ್ಪತ್ರೆಯೊಂದ್ರಲ್ಲಿ ಕೆಲಸ ಮಾಡುತ್ತಿದ್ದಾರೆ. ಪತಿ ಜಗದೀಶ್ ಗಾಂಜಾ ವ್ಯಸನಿಯಾಗಿದ್ದು, ಇದೀಗ ಆಕೆಯ ಶೀಲ ಶಂಕಿಸಿ ಪ್ರತಿನಿತ್ಯ ಹಲ್ಲೆ ಮಾಡುತ್ತಿದ್ದಾನೆ. ಬರಿಗೈಲಿ ಮಾತ್ರವಲ್ಲದೇ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದಾಗಿ ಜಯಲಕ್ಷ್ಮಿ ಕಿವಿ, ಕುತ್ತಿಗೆ, ತಲೆಗೆ ಗಂಭೀರ ಗಾಯಗಳಾಗಿವೆ.
ಭುವನೇಶ್ವರ: ಕಳೆದ ನಾಲ್ಕು ವರ್ಷಗಳಿಂದ ಸಂಬಳ ನೀಡದೇ ಕೆಲಸ ಮಾಡಿಸುತ್ತಿದ್ದ ಶಿಕ್ಷಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಶಾಲಾ ಶಿಕ್ಷಕಿಯ ಪತಿ ಹಲ್ಲೆ ನಡೆಸಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಇದೀಗ ದೂರಿನ ಆಧಾರದ ಮೇಲೆ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.
ಬೆಳ್ಳಗುಂಟಾದ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಿಲತಾ ಸಾಹು ಅವರು ತಮ್ಮ ವೇತನ ನೀಡುವಂತೆ ಒತ್ತಾಯಿಸಿ ನಾಲ್ಕು ತಿಂಗಳಿಂದ ಜಿಲ್ಲಾ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತಿದ್ದರು. ಮಂಗಳವಾರ ಮಧ್ಯಾಹ್ನ ಊಟಕ್ಕೆ ಹೋಗುತ್ತಿದ್ದ ಡಿಇಒ ಅವರನ್ನು ದಂಪತಿ ಅಡ್ಡಗಟ್ಟಿ ಸಂಬಳ ಕೇಳಿದ್ದಾರೆ. ಇದನ್ನೂ ಓದಿ:ರಥೋತ್ಸವದಲ್ಲಿ ವಿದ್ಯುತ್ ತಗುಲಿ ಇಬ್ಬರು ಮಕ್ಕಳು ಸೇರಿ 11 ಮಂದಿ ದುರ್ಮರಣ
ಡಿಇಒ ಅವರೊಂದಿಗೆ ಶಾಂತಿಲತಾ ಸಾಹು ಅವರು ಮಾತನಾಡುತ್ತಿದ್ದಂತೆಯೇ, ಅವರ ಪತಿ ಅಧಿಕಾರಿಯ ಮುಖಕ್ಕೆ ಹೊಡೆದಿದ್ದಾರೆ. ನಂತರ ಈ ಕುರಿತಂತೆ ಡಿಇಒ ಅವರು ದೂರು ನೀಡಿದ್ದು, ಇಬ್ಬರನ್ನು ವ್ಯಾನ್ಗೆ ಕರೆದೊಯ್ಯುವಾಗ ಶಾಂತಿಲತಾ ಸಾಹು ತಮಗೆ ಸಂಬಳ ನೀಡುವುದನ್ನು ನಿಲ್ಲಿಸಿದ್ದಾರೆ. ಅಧಿಕಾರಿಗಳು ನನಗೆ ಯಾವುದೇ ನೋಟಿಸ್ ನೀಡಲ್ಲ ಮತ್ತು ಕೆಲಸದಿಂದಲೂ ಅಮಾನತುಗೊಳಿಸಿಲ್ಲ ಎಂದು ಆರೋಪಿಸಿ ಗಳಗಳ ಅತ್ತಿದ್ದಾರೆ. ಇದನ್ನೂ ಓದಿ:ಮೊಮ್ಮಗಳು ಜನಿಸಿದ ಖುಷಿಯಲ್ಲಿ ಕರೆತರಲು ಹೆಲಿಕಾಪ್ಟರ್ ಬುಕ್ ಮಾಡಿದ ರೈತ
ಈ ವಿಚಾರವಾಗಿ ಡಿಇಒ ಕಚೇರಿಯ ಅಧಿಕಾರಿಯೊಬ್ಬರು ಸಂಬಳ ಕೇಳಿದಾಗಲಿಂದಲೂ ಶಾಂತಿಲತಾ ಸಾಹು ಕೆಲಸಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದೀಗ ಈ ಸಂಬಂದ ತನಿಖೆ ನಡೆಸಲಾಗುತ್ತಿದೆ ಎಂದು ಬೆರ್ಹಾಂಪುರ ಉಪವಿಭಾಗದ ಪೊಲೀಸ್ ಅಧಿಕಾರಿ ಬಿಷ್ಣು ಪ್ರಸಾದ್ ಪತಿ ತಿಳಿಸಿದ್ದಾರೆ.
ಬೆಂಗಳೂರು: ಹೆಂಡತಿಯ ಐಷಾರಾಮಿ ಬಯಕೆ ಪೂರೈಸಲು ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ ಮೂಲದ ವಿನೋದ್ ಕುಮಾರ್ ಕೆಲಸ ಹರಿಸಿ ಕೋಲ್ಕತ್ತಾಕ್ಕೆ ಹೋಗಿ ಕ್ಯಾಬ್ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಇದೇ ವೇಳೆ ಬಾಂಗ್ಲಾ ಮೂಲದ ಸೋನು ಅವರ ಪರಿಚಯವಾಗಿ, ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿ ಬೆಂಗಳೂರಿಗೆ ಶಿಫ್ಟ್ ಆಗಿದ್ದರು. ಮದುವೆಯಾದ ಆರಂಭದಲ್ಲಿ ಬಿಂದಾಸ್ ಆಗಿದ್ದ ಈ ಜೋಡಿ ಲೈಫ್ ನಂತರದ ದಿನಗಳಲ್ಲಿ ಕಷ್ಟಕರವಾಗಿತ್ತು. ಇದನ್ನೂ ಓದಿ: ಮಸೀದಿ, ಮಂದಿರಗಳು ನಿಯಮ ಉಲ್ಲಂಘನೆ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆ: ಪ್ರವೀಣ್ ಸೂದ್
ಪತಿ ವಿನೋದ್ ತರುತ್ತಿದ್ದ ಅಲ್ಪ, ಸ್ವಲ್ಪ ಹಣದಿಂದ ಜೀವನ ನಡೆಸಲು ಕಷ್ಟಕರವಾಗಿತ್ತು. ಇದರಿಂದ ಬೇಸರಗೊಂಡ ಸೋನು, ವಿನೋದ್ಗೆ ನೀನು ತರುವ ಬಿಡಿಗಾಸು ಯಾವುದಕ್ಕೂ ಸಾಲುತ್ತಿಲ್ಲ ಎಂದು ಚುಚ್ಚಿ, ಚುಚ್ಚಿ ಮಾತನಾಡಲು ಆರಂಭಿಸಿದಳು. ಇದರಿಂದ ಕೋಪಗೊಂಡ ವಿನೋದ್ ಡ್ರೈವಿಂಗ್ ಜೊತೆಗೆ ಮನೆಗಳ್ಳತನ ಮಾಡಲಿ ಶುರುಮಾಡಿದ. ಬೆಳಗಿನ ಸಮಯದಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಾ ಮನೆಗಳನ್ನು ಗುರುತಿಸಿ ರಾತ್ರಿ ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ಮನೆಗಳಿಗೆ ನುಗ್ಗಿ ಕೈಗೆ ಸಿಕ್ಕಿದ್ದನ್ನು ದೋಚಿ ಪರಾರಿಯಾಗುತ್ತಿದ್ದನು. ಇದನ್ನೂ ಓದಿ: ಕಾಂಗ್ರೆಸ್ಗೆ ಅಡ್ರೆಸ್ ಎಲ್ಲಿದೆ, ಅದರ ನಾಯಕರು ಯಾರು?: ಯಡಿಯೂರಪ್ಪ ವ್ಯಂಗ್ಯ
ಕಳ್ಳತನ ಮಾಡುವ ವೇಳೆ ವಿನೋದ್ ಮೊಬೈಲ್ವೊಂದನ್ನು ಕದ್ದಿದ್ದ. ಅಲ್ಲದೇ ಇದೇ ಮೊಬೈಲ್ನನ್ನೇ ಬಳಸುತ್ತಿದ್ದ ಮತ್ತು ಸಿಸಿಟಿವಿ ದೃಶ್ಯ ಆಧಾರಿಸಿ ಸಂಜಯನಗರ ಪೊಲೀಸರು ಇದೀಗ ವಿನೋದ್ನನ್ನು ಸಾಕ್ಷಿ ಸಮೇತ ಬಂಧಿಸಿದ್ದಾರೆ. ಸಂಜಯನಗರ ಒಂದೇ ಠಾಣಾ ವ್ಯಾಪ್ತಿಯಲ್ಲಿ ಬರೋಬ್ಬರಿ ಏಳು ಮನೆಗಳಲ್ಲಿ ವಿನೋದ್ ಕಳ್ಳತನ ಮಾಡಿರುವುದು ಪತ್ತೆಯಾಗಿದ್ದು ತನಿಖೆ ಮುಂದುವರೆಸಲಾಗಿದೆ.
ರಾಯಚೂರು: ಅಪಘಾತದಲ್ಲಿ ಗಾಯಗೊಂಡು ಪತಿ ಸಾವನ್ನಪ್ಪಿದ ಸುದ್ದಿ ತಿಳಿದು ಪತ್ನಿ ಐದು ತಿಂಗಳ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಶೃತಿ(30) ಮತ್ತು 5 ತಿಂಗಳ ಮಗು ಅಭಿರಾಮ್ ಎಂದು ಗುರುತಿಸಲಾಗಿದೆ. ಮಂಗಳೂರು ಜಿಲ್ಲೆಯ ಅಗ್ನಿಶಾಮಕ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪತಿ ಗಂಗಾಧರ್ ಶನಿವಾರ ರಸ್ತೆ ಅಪಘಾತದಲ್ಲಿ ಸಾವನ್ನಪಿದ್ದರು. ಈ ಸುದ್ದಿ ತಿಳಿದು ಪತ್ನಿ ಶೃತಿ ದಿಕ್ಕು ಕಾಣದಂತೆ ಆಗಿ ಮನನೊಂದು ಮನೆಯ ಕಿಟಕಿಗೆ ಐದು ತಿಂಗಳ ಮಗುವಿಗೆ ನೇಣು ಹಾಕಿ ಕೊಂದು ಆ ಬಳಿಕ ಮನೆಯಲ್ಲಿನ ಫ್ಯಾನ್ಗೆ ತಾನು ಕೂಡ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯನ್ನು ಕೆಜಿ ಹಳ್ಳಿ, ಡಿಜೆಹಳ್ಳಿ ಘಟನೆಗೆ ಹೋಲಿಸಿದ ಗೃಹಸಚಿವ
ಮಾಹಿತಿ ತಿಳಿದು ಸ್ಥಳಕ್ಕೆ ಲಿಂಗಸೂಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಿಂಗಸೂಗೂರು ಡಿವೈಎಸ್ಪಿ ಎಸ್.ಎಸ್. ಹೂಲ್ಲೂರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಗಳು ಮತ್ತು ಮೊಮ್ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಮೃತರ ಶವಗಳನ್ನು ಲಿಂಗಸೂಗೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು
ಮುಂಬೈ: ಬೆಳಗ್ಗೆ ನೀಡಿದ್ದ ಟಿಫನ್ನಲ್ಲಿ ಉಪ್ಪು, ಖಾರ ಅಧಿಕವಾಗಿದೆ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ 40 ವರ್ಷದ ಪತ್ನಿಯ ಕತ್ತು ಹಿಸುಕಿ ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ಬೆಳಗ್ಗೆ ಭಾಯಂದರ್ ಪೂರ್ವದ ಫಟಕ್ ರಸ್ತೆ ಪ್ರದೇಶದಲ್ಲಿ ಈ ಘಟನೆ ಜರುಗಿದ್ದು, ಮೃತ ದುರ್ದೈವಿಯನ್ನು ನಿರ್ಮಲಾ ಎಂದು ಗುರುತಿಸಲಾಗಿದೆ. 46 ವರ್ಷದ ಆರೋಪಿ ನಿಲೇಶ್ ಘಾಘ್ ಪತ್ನಿ ಕಿಚಡಿ ಮಾಡಿ ಬೆಳಗಿನ ಉಪಹಾರವಾಗಿ ನೀಡಿದ್ದರು. ಕಿಚಡಿಯಲ್ಲಿ ಹೆಚ್ಚು ಉಪ್ಪು ಇದ್ದಿದ್ದರಿಂದ ಕೋಪಗೊಂಡ ನಿಲೇಶ್ ಘಾಘ್ ಉದ್ದನೆಯ ಬಟ್ಟೆಯಿಂದ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಘಟನೆ ಸಂಬಂಧ ಮಾಹಿತಿ ದೊರೆತ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಪೊಲೀಸ್ ಕಮಿಷನರೇಟ್ನ ಅಧಿಕಾರಿ ಮೀರಾ ಭಯಂದರ್-ವಸಾಯಿ ವಿರಾರ್ ತಿಳಿಸಿದ್ದಾರೆ. ಇದನ್ನೂ ಓದಿ: 4ರ ಬಾಲಕಿ ಮೇಲೆ 9 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ
ಗುರುವಾರ ಕೂಡ ಇದೇ ರೀತಿ ಮಹಿಳೆಯೊಬ್ಬಳು ಚಹಾದ ಜೊತೆಗೆ ಟಿಫನ್ ನೀಡಲಿಲ್ಲ ಎಂಬ ಕಾರಣಕ್ಕೆ ಆಕೆಯ ಮಾವ ಮಹಿಳೆ ಮೇಲೆ ಪಿಸ್ತೂಲ್ನಿಂದ ಗುಂಡು ಹಾರಿಸಿ ಹತ್ಯೆಗೈದಿದ್ದನು. ರಾಬೋಡಿ ಪ್ರದೇಶದ ನಿವಾಸಿಯಾಗಿದ್ದ 42 ವರ್ಷದ ಮಹಿಳೆಯ ಹೊಟ್ಟೆಗೆ ಗುಂಡು ತಗುಲಿ ಶುಕ್ರವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.