Tag: ಪತಿ

  • ಪತ್ನಿಯನ್ನ ಸರ್ಜಿಕಲ್ ಬ್ಲೇಡ್‍ನಿಂದ ಕೊಯ್ದು ಪತಿ ಆತ್ಮಹತ್ಯೆಗೆ ಶರಣು!

    ಪತ್ನಿಯನ್ನ ಸರ್ಜಿಕಲ್ ಬ್ಲೇಡ್‍ನಿಂದ ಕೊಯ್ದು ಪತಿ ಆತ್ಮಹತ್ಯೆಗೆ ಶರಣು!

    ನವದೆಹಲಿ: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಸರ್ಜಿಕಲ್ ಬ್ಲೇಡ್‍ನಿಂದ ಕೊಯ್ದ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

    ದೆಹಲಿಯ ಖ್ಯಾಲಾದ ನಿವಾಸಿ 32 ವರ್ಷದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಸರ್ಜಿಕಲ್ ಬ್ಲೇಡ್‍ನಿಂದ ಹಲ್ಲೆ ಮಾಡಿದ್ದು, ಕುತ್ತಿಗೆ ಮತ್ತು ಮುಖಕ್ಕೆ ತೀವ್ರವಾಗಿ ಗಾಯ ಮಾಡಿದ್ದಾನೆ. ನಂತರ ಭಯಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಸ್ತುತ ಗಾಯಾಳು ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇನ್ನೂ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇದನ್ನೂ ಓದಿ: ನೇತಾಜಿ ಕಾರ್ಯಕ್ರಮದಲ್ಲಿ TMC, BJP ಬೆಂಬಲಿಗರ ನಡುವೆ ಘರ್ಷಣೆ – ಕಲ್ಲು ತೂರಾಟ, 2 ಕಾರು ಧ್ವಂಸ

    ಏನಿದು ಘಟನೆ?
    ದಂಪತಿ ಇತ್ತೀಚೆಗೆ ಮದುವೆಯಾಗಿದ್ದು, ಮಹಿಳೆಯು ಪತಿ ರಾಮ್‍ಕುಮಾರ್ ಕಿರುಕುಳ ತಡೆಯಲಾಗದೆ ರಘುಬೀರ್ ನಗರ ಪ್ರದೇಶದಲ್ಲಿದ್ದ ತನ್ನ ತಾಯಿಯ ಮನೆಗೆ ತೆರಳಿದ್ದಾಳೆ. ಮಾದಕ ವ್ಯಸನಿಯಾಗಿದ್ದ ರಾಮ್‍ಕುಮಾರ್ ಅಲ್ಲಿಗೂ ಹೋಗಿ ಪತ್ನಿಗೆ ತನ್ನೊಂದಿಗೆ ಮನೆಗೆ ಬರುವಂತೆ ವಿನಂತಿಸಿಕೊಂಡಿದ್ದಾನೆ. ಆದರೆ ಅವಳು ನಿರಾಕರಿಸಿದ್ದು, ಈ ವೇಳೆ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.

    ಹಲ್ಲೆಯ ನಂತರ ರಾಮ್‍ಕುಮಾರ್, ತನ್ನ ಹೆಂಡತಿ ಸತ್ತಿದ್ದಾಳೆ ಎಂದು ಭಾವಿಸಿ ಆಕೆಯ ಮೇಲೆ ಹಲ್ಲೆ ನಡೆಸಿ ಮನೆಯಿಂದ ಓಡಿಹೋಗಿದ್ದಾನೆ. ಆದರೆ ನಂತರ ಉತ್ತರ ಪ್ರದೇಶದ ಗಾಜಿಯಾಬಾದ್‍ನ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇದನ್ನೂ ಓದಿ: ಅವಧಿ ಮೀರಿ ವಾಸಗೃಹದಿಂದ ಕುಟುಂಬ ಹೊರಹಾಕಿದ್ದ ಪ್ರಕರಣ ಸುಖಾಂತ್ಯ – ಮೃತ ನೌಕರನ ಪುತ್ರನಿಗೆ ಗುತ್ತಿಗೆ ನೌಕರಿ

    ಗುರುವಾರ ಪಶ್ಚಿಮ ವಿಹಾರ್‌ನ ಆಸ್ಪತ್ರೆಯಿಂದ ಖ್ಯಾಲಾ ಪೊಲೀಸ್ ಠಾಣೆಗೆ ಕರೆ ಬಂದಿದ್ದು, ಮಹಿಳೆಯೊಬ್ಬರು ಪತಿಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವುದನ್ನು ತಿಳಿಸಲಾಗಿದೆ. ಪೊಲೀಸರು ತನಿಖೆ ಮಾಡಿದ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರುವುದು ಕಂಡುಬಂದಿದೆ.

  • ಗಲಾಟೆ ಮಾಡಿದ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಂದ್ಳು!

    ಗಲಾಟೆ ಮಾಡಿದ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಂದ್ಳು!

    ಮೈಸೂರು: ಗಲಾಟೆ ಮಾಡಿದನೆಂದು ಸಿಟ್ಟಿನಿಂದ ಪತ್ನಿಯೊಬ್ಬಳು ತನ್ನ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಲೆಗೈದ ವಿಲಕ್ಷಣ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ.

    ಈ ಘಟನೆ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಬಸವರಾಜಪ್ಪ (42) ಕೊಲೆಯಾದ ವ್ಯಕ್ತಿಯಾಗಿದ್ದು, ಈತನನ್ನು ಪತ್ನಿ ನೇತ್ರಾವತಿ ಕೊಲೆ ಮಾಡಿದ್ದಾಳೆ.

    HUSBAND WIFE FIGHT

    ರಾತ್ರಿ ಮದ್ಯ ಸೇವಿಸಿ ಬಂದ ಬಸವರಾಜಪ್ಪ ಪತ್ನಿ ನೇತ್ರಾವತಿ ಜೊತೆ ಗಲಾಟೆ ಮಾಡಿದ್ದನು. ಈ ವೇಳೆ ಕೋಪಗೊಂಡ ಪತ್ನಿ ಬಸವರಾಜಪ್ಪನ ಮರ್ಮಾಂಗಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಬಸವರಾಜಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಪತ್ನಿ ಜೊತೆ ಸ್ನೇಹಿತನ ವಾಟ್ಸಾಪ್ ಚಾಟಿಂಗ್ – ಪಕ್ಕದ್ಮನೆ ಗೆಳೆಯನ ಕೊಂದು ಸುಟ್ಟಾಕಿದ್ರು!

    POLICE JEEP

    ಘಟನೆ ಸಂಬಂಧ ಪೊಲೀಸರು ಪತ್ನಿ ನೇತ್ರಾವತಿಯನ್ನು ಬಂಧಿಸಿದ್ದಾರೆ. ಈ ಕುರಿತು ಸರಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೊಲ್ಲಲು ಬಂದವ್ರ ಕಣ್ಣಿಗೆ ಖಾರದ ಪುಡಿ ಎರಚಿ ಪತಿಯನ್ನು ಬಚಾವ್ ಮಾಡಿದ್ಲು!

    ಕೊಲ್ಲಲು ಬಂದವ್ರ ಕಣ್ಣಿಗೆ ಖಾರದ ಪುಡಿ ಎರಚಿ ಪತಿಯನ್ನು ಬಚಾವ್ ಮಾಡಿದ್ಲು!

    ಹೈದರಾಬಾದ್: ಪತಿಯನ್ನು ಹತ್ಯೆ ಮಾಡಲು ಬಂದ ಕಿಡಿಗೇಡಿಗಳ ಕಣ್ಣಿಗೆ ಖಾರದ ಪುಡಿ ಎರಚಿದ ಮಹಿಳೆ, ಪತಿಯನ್ನು ಪ್ರಾಣಾಪಾಯದಿಂದ ಬಚಾವ್ ಮಾಡಿಕೊಂಡಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ.

    ನಡೆದಿದ್ದೇನು?: ದಿ ವಾರಂಗಲ್ ಜಿಲ್ಲಾ ಲಾರಿ ಅಸೋಸಿಯೇಶನ್ ಅಧ್ಯಕ್ಷ ವೇಮುಲಾ ಭೂಪಾಲ್ ಅವರ ಮನೆಗೆ ಬುಧವಾರ ಮಧ್ಯರಾತ್ರಿ ನಾಲ್ಕು ಮಂದಿ ದುಷ್ಕರ್ಮಿಗಳು ಬಂದಿದ್ದಾರೆ. ಆಟೋದಲ್ಲಿ ಮೂವರು ವೇಮುಲಾ ಮನೆಗೆ ಒಳಗೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಯತ್ನಿಸಿದ್ದಾರೆ. ಕೂಡಲೇ ಎಚ್ಚೆತ್ತ ವೇಮುಲಾ ಪತ್ನಿ ಕಲ್ಯಾಣಿ ಅಡುಗೆ ಮನೆಗೆ ಓಡಿ ಹೋಗಿ ಖಾರದ ಪುಡಿ ತಂದು ದುಷ್ಕರ್ಮಿಗಳ ಕಣ್ಣಿಗೆ ಎರಚಿದ್ದಾಳೆ. ಇದನ್ನೂ ಓದಿ: ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ

    ನಮ್ಮನ್ನು ಕಾಪಾಡಿ ಎಂದು ಜೋರಾಗಿ ಕೂಗಿದ್ದಾಳೆ. ಈಕೆಯ ಚೀರಾಟ ಕೇಳಿ ನೆರೆ ಹೊರೆಯವರು ಕೂಡಲೇ ಬಂದಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ರಂಜಿತ್ ಕಣ್ಣಿಗೆ ಹೆಚ್ಚು ಖಾರದ ಪುಡಿ ಬಿದ್ದ ಪರಿಣಾಮ ಆತ ಅಲ್ಲಿಂದ ಪರಾರಿಯಾಗಲು ಸಾಧ್ಯವಾಗದೆ ಸಿಕ್ಕಿಬಿದ್ದಿದಾನೆ. ಉಳಿದ ಮೂವರು ಆರೋಪಿಗಳು ಆಟೋದಲ್ಲಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ರಂಜಿತ್‍ನನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಜಾತಿ, ಧರ್ಮ, ದೇಶ ಗಡಿ ದಾಟಿದ ಪ್ರೇಮ ಕಥೆ

  • ಪತಿ ಕೊಂದು ಕತ್ತರಿಸಿದ ತಲೆ ಠಾಣೆಗೆ ತಂದು ಶರಣಾದಳು

    ಪತಿ ಕೊಂದು ಕತ್ತರಿಸಿದ ತಲೆ ಠಾಣೆಗೆ ತಂದು ಶರಣಾದಳು

    ಹೈದರಾಬಾದ್: ಪತಿಯನ್ನು ಕೊಂದು, ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ಮಹಿಳೆ ತಂದಿರುವ ಘಟನೆ ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ತಿರುಪತಿ ಬಳಿಯ ರೇಣಿಗುಂಟದಲ್ಲಿ ನಡೆದಿದೆ.

    POLICE JEEP

    ರವಿಚಂದ್ರನ್ (53) ಮೃತನಾಗಿದ್ದಾನೆ. ರವಿಚಂದ್ರನ್ ಗುಂಟೂರು ಜಿಲ್ಲೆಯ ನರಸರಾವ್‍ಪೇಟೆಯ ಮೂಲದವರು. ವಸುಂಧರಾ ಪತಿಯನ್ನು ಕೊಂದ ಆರೋಪಿ ಪತ್ನಿಯಾಗಿದ್ದಾಳೆ. ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಠಾಣೆಗೆ ಬಂದು ಶರಣಾಗಿದ್ದಾಳೆ. ಇದನ್ನೂ ಓದಿ: 1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ

    ವಸುಂಧರಾ ತಮ್ಮ ಮನೆಯಲ್ಲಿ ನಡೆದ ಜಗಳದಲ್ಲಿ ಪತಿ ರವಿಚಂದ್ರನ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ಆತನ ತಲೆಯನ್ನು ಕತ್ತರಿಸಿ ಬ್ಯಾಗ್‍ನಲ್ಲಿ ಹಾಕಿಕೊಂಡು ಠಾಣೆಗೆ ಬಂದು ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಅಧಿಕಾರಿಗಳು ಆರೋಪಿಯನ್ನು ಅಲ್ಲಿಗೆ ಕರೆತಂದು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಮೃತದೇಹವನ್ನು ಶವ ಪರೀಕ್ಷೆಗಾಗಿ ಎಸ್‍ವಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.

    ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುರುವಾರ ಬೆಳಗ್ಗೆ ಯಾವುದೋ ವಿಚಾರಕ್ಕೆ ದಂಪತಿ ನಡುವೆ ಮತ್ತೆ ಜಗಳ ನಡೆದಿದ್ದು, ಆಕ್ರೋಶಗೊಂಡ ಮಹಿಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಳೆ. ಅಷ್ಟಕ್ಕೆ ಸುಮ್ಮನಾಗದೆ ಆತನ ತಲೆಯನ್ನು ಕತ್ತರಿಸಿ ಠಾಣೆಗೆ ಹೊತ್ತೊಯ್ದಿದ್ದಾಳೆ. ದಂಪತಿಗೆ 20 ವರ್ಷದ ಮಗನಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

  • ಬಾಂಬ್ ಮಾಡುವುದನ್ನ ಕಲಿತು ಪತ್ನಿ ಮೇಲೆ ಅತ್ಯಾಚಾರ ಮಾಡಿದವನನ್ನ ಕೊಂದ!

    ಬಾಂಬ್ ಮಾಡುವುದನ್ನ ಕಲಿತು ಪತ್ನಿ ಮೇಲೆ ಅತ್ಯಾಚಾರ ಮಾಡಿದವನನ್ನ ಕೊಂದ!

    ಭೋಪಾಲ್: ಬಾಂಬ್ ತಯಾರು ಮಾಡುವುದನ್ನು ಕಲಿತು ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದವರ ಮೇಲೆ ಪತಿ ಸೇಡು ತೀರಿಸಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ರತ್ಲಾಮ್ ಜಿಲ್ಲೆಯ ನಿವಾಸಿ 32 ವರ್ಷದ ವ್ಯಕ್ತಿಯ ಪತ್ನಿ ಮೇಲೆ ಅದೇ ಊರಿನ ಜನರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ವಿಷಯ ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಪ್ರಾಣ ಬೆದರಿಕೆಯನ್ನು ಹಾಕಿದ್ದರು. ಅದಕ್ಕೆ ಆ ವ್ಯಕ್ತಿಯೂ ಸಹ ದೂರನ್ನು ನೀಡಿರಲಿಲ್ಲ. ಆದರೆ ಪತ್ನಿಗೆ ಆಗಿದ್ದ ಅನ್ಯಾಯಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಸಂಚನ್ನು ಮಾಡುತ್ತಿದ್ದ. ಇದನ್ನೂ ಓದಿ: ನವೋದಯದಲ್ಲಿ ಕೋವಿಡ್ ಕೇರ್ ಕೇಂದ್ರ ತೆರೆಯಬೇಡಿ – ಕೊಡಗಿನ ಪೋಷಕರಿಂದ ವಿರೋಧ

    POLICE JEEP

    ಈ ಹಿನ್ನೆಲೆ ಆತ ಇಂಟರ್ನೆಟ್‍ನಿಂದ ಬಾಂಬ್ ಅನ್ನು ಹೇಗೆ ತಯಾರಿ ಮಾಡಬಹುದು ಎಂದು ಕಲಿತುಕೊಂಡಿದ್ದಾನೆ. ಬಾಂಬ್ ಮಾಡುವುದನ್ನು ಕಲಿತ ನಂತರ ಜ.4 ರಂದು ಹಳ್ಳಿಯ ಲಾಲ್ ಸಿಂಗ್ ಅವರ ಕೊಳವೆ ಬಾವಿಯ ಬಳಿ ಬಾಂಬ್ ಇಟ್ಟಿದ್ದಾನೆ. ನಂತರ ಆ ಬಾಂಬ್ ಸ್ಫೋಟಗೊಂಡಿದ್ದು, ಸ್ಥಳದಲ್ಲೇ ಇದ್ದ ಲಾಲ್ ಸಿಂಗ್ ಸಾವನ್ನಪ್ಪಿದ್ದ. ಬಳಿಕ ಪೊಲೀಸರು ಸ್ಫೋಟಕ್ಕೆ ಕಾರಣವನ್ನು ತಿಳಿದುಕೊಳ್ಳಲು ಮುಂದಾಗಿದ್ದು, ಜಿಲೆಟಿನ್ ರಾಡ್ ಮತ್ತು ಡಿಟೋನೇಟರ್ ನಿಂದಾಗಿ ಸ್ಫೋಟ ಸಂಭವಿಸಿದೆ ಎಂದು ವಿಧಿವಿಜ್ಞಾನ ತಜ್ಞರು ಮಾಹಿತಿ ನೀಡಿದ್ದಾರೆ.

    ಕಳೆದ ವರ್ಷ ಆಗಸ್ಟ್‍ನಲ್ಲಿಯೂ ಇದೇ ರೀತಿ ಭನ್ವರ್ ಲಾಲ್ ಅವರ ಕೊಳವೆ ಬಾವಿಯಲ್ಲಿ ಸ್ಫೋಟ ಸಂಭವಿಸಿತ್ತು. ಆದರೆ ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಈ ಹಿನ್ನೆಲೆ ಪೊಲೀಸರು ತಮ್ಮ ತನಿಖೆಯನ್ನು ತೀವ್ರಗೊಳಿಸಿದ್ದು, ಈ ಸಾವಿಗೆ ಗ್ರಾಮದವರೆ ಕಾರಣ ಎಂದು ತಿಳಿದುಕೊಂಡಿದ್ದಾರೆ.

    ಗ್ರಾಮದಿಂದ ಕಾಣೆಯಾದ ಕುಟುಂಬವನ್ನು ಪೊಲೀಸರು ಕಂಡುಹಿಡಿಯಲು ಪ್ರಾರಂಭಿಸಿದ್ದಾರೆ. ಜ.7 ರಂದು ಮಂಡ್‌ಸೌರ್‌ನಲ್ಲಿ ಪೊಲೀಸರಿಗೆ ಆರೋಪಿ ಮತ್ತು ಅವರ ಕುಟುಂಬ ಸದಸ್ಯರು ಸಿಕ್ಕಿದ್ದು, ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ವ್ಯಕ್ತಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

    ಆರೋಪಿ, ಕಳೆದ ವರ್ಷ ಜುಲೈನಲ್ಲಿ ಲಾಲ್ ಸಿಂಗ್, ಭವರ್‍ಲಾಲ್ ಮತ್ತು ದಿನೇಶ್ ಅವರು ನಮ್ಮ ಮನೆಗೆ ನುಗ್ಗಿ ನನ್ನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದರು. ಅದನ್ನು ನಾನು ತಡೆಯಲು ಪ್ರಯತ್ನಿಸಿದಾಗ ನನ್ನ ಮೇಲೆಯೂ ಹಲ್ಲೆ ಮಾಡಿದರು. ನಂತರ, ಅವರು ಈ ವಿಚಾರ ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಪರಿಣಾಮ ನಾನು ಪೊಲೀಸರಿಗೆ ವಿಷಯವನ್ನು ತಿಳಿಸಲಿಲ್ಲ. ಆದರೆ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದೆ ಎಂದು ತಿಳಿಸಿದ್ದಾನೆ.

    ಆರೋಪಿಯ ದೂರಿನ ಮೇರೆಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗ್ರಾಮಸ್ಥರಾದ ಭನ್ವರ್ ಲಾಲ್ ಮತ್ತು ದಿನೇಶ್ ಅವರನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಸಮಾರಂಭಕ್ಕೆ ನುಗ್ಗಿ ಯುವಕನನ್ನ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು!

    Meghalaya: Gelatin sticks, detonators seized from Ri-Bhoi, 1 held - India  News

    ಈ ಕುರಿತು ಮಾತನಾಡಿದ ಎಸ್‍ಪಿ ತಿವಾರಿ, ಆರೋಪಿಗಳು ಬಾಂಬ್ ಅನ್ನು ಹೇಗೆ ಜೋಡಿಸುವುದು ಎಂದು ಇಂಟರ್ನೆಟ್‍ನಿಂದ ಕಲಿತುಕೊಂಡಿದ್ದಾರೆ. ಅವರು ಮೊದಲು ಭನ್ವರ್‍ಲಾಲ್ ಅವರ ಕೊಳವೆ ಬಾವಿಯ ಮೇಲೆ ಬಾಂಬ್ ಅನ್ನು ಪ್ರಯೋಗಿಸಿದ್ದಾರೆ. ಆದರೆ ಆತನಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಬಳಿಕ ಹೆಚ್ಚು ಜಿಲೆಟಿನ್ ರಾಡ್ ಹಾಕಿ ಬಾಂಬ್ ತಯಾರಿಸಿ ಲಾಲ್ ಸಿಂಗ್ ಕೊಳವೆ ಬಾವಿಯ ಬಳಿ ಇಟ್ಟಿದ್ದಾರೆ. ಪರಿಣಾಮ ಸ್ಥಳಕ್ಕೆ ಬಂದ ಲಾಲ್ ಸಿಂಗ್ ದೇಹ ಅಲ್ಲೇ ಛಿದ್ರವಾಗಿದೆ ಎಂದು ತಿಳಿಸಿದ್ದಾರೆ.

    ಈ ಅಪರಾಧದಲ್ಲಿ ಸಂತ್ರಸ್ತೆಯ ಪಾತ್ರದ ಬಗ್ಗೆಯೂ ಶಂಕೆಯಿದೆ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ.

  • ಹಾರೆಯಿಂದ ಹೊಡೆದು ಪತ್ನಿಯ ಕೊಲೆ – ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

    ಹಾರೆಯಿಂದ ಹೊಡೆದು ಪತ್ನಿಯ ಕೊಲೆ – ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

    ಕಲಬುರಗಿ: ನಗರದ ಹೀರಾಪುರ ಬಡಾವಣೆಯ ಮನೆಯಲ್ಲಿ ತನ್ನ ಪತ್ನಿಯನ್ನು ಕಬ್ಬಿಣದ ಹಾರೆಯಿಂದ ಹೊಡೆದು ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ನಗರದ 3ನೇಯ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.

    ಶಿಕ್ಷೆಗೆ ಗುರಿಯಾಗಿರುವ ಪತಿಯನ್ನು ಅಫಜಲಪುರ ತಾಲೂಕಿನ ರೇವೂರ್ ಸಂತೋಷ ಅಣ್ಣಾರಾಯ ಪಾಟೀಲ್ ಎಂದು ಗುರುತಿಸಲಾಗಿದೆ. ಆರೋಪಿ ಹೀರಾಪುರ ಬಾಡಿಗೆ ಮನೆಯಲ್ಲಿ ಪತ್ನಿ ಸವಿತಾಳಿಗೆ ಹಾರೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯ ಪಿಐ ವಾಜೀದ್ ಪಟೇಲ್ ತನಿಖೆ ಮಾಡಿ ದೋಷಾರೋಪಣೆ ವರದಿ ಸಲ್ಲಿಸಿದ್ದರು. ಇದನ್ನೂ ಓದಿ: ಪುತ್ತೂರಿನಲ್ಲಿ ಪೈಶಾಚಿಕ ಕೃತ್ಯ – ಮಗನಿಂದಲೇ ತಾಯಿಯ ಮೇಲೆ ರೇಪ್‌

    ಈ ಕುರಿತು ವಿಚಾರಣೆ ಮಾಡಿದ 3ನೇಯ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಗದೀಶ್ ವಿ.ಎನ್ ಅವರು, ಕಲಂ 302, 504ರ ಅಡಿಯಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ, ಮೃತಳ ಮಕ್ಕಳು ಪರಿಹಾರಕ್ಕಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಗುರುಲಿಂಗಪ್ಪ ಶ್ರೀಮಂತ ತೇಲಿ, ವಾದ ಮಂಡಿಸಿದ್ದರು.  ಇದನ್ನೂ ಓದಿ: ಒಳ ಉಡುಪು, ಗುಪ್ತಾಂಗದಲ್ಲಿ ಚಿನ್ನ ಕಳ್ಳಸಾಗಣೆ ಮಾಡ್ತಿದ್ದ ಮೂವರು ಮಹಿಳೆಯರು ಅರೆಸ್ಟ್

  • ಕುಡಿದು ಬಂದ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ!

    ಕುಡಿದು ಬಂದ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ!

    ಹೈದರಾಬಾದ್: ಪತಿಯೊಂದಿಗೆ ಜಗಳವಾಡುತ್ತಾ ಆತನ ಕತ್ತು ಹಿಸುಕು ಕೊಂದಿರುವ ಘಟನೆ ಸೋಮವಾರ ರಾತ್ರಿ ಅಜ್ಜಂಪುರ ಕಾಲೋನಿಯಲ್ಲಿ ನಡೆದಿದೆ.

    ಶೇಖ್ ಅಫ್ರೋಜ್(35) ಮೃತನಾಗಿದ್ದಾನೆ. ಫರ್ಜಾನಾ ಬೇಗಂ ಪತಿಯನ್ನು ಕೊಂದ ಆರೋಪಿ. ಪತಿ ಕುಡಿದ ಮತ್ತಿನಲ್ಲಿ ಮನೆಗೆ ಬರುತ್ತಿದ್ದನು. ಆತನೊಂದಿಗೆ ನಿರಂತರವಾಗಿ ಜಗಳವಾಡುತ್ತಿದ್ದ ಫರ್ಜಾನಾ ಒಂದು ದಿನ ಪತಿಯ ಕತ್ತು ಹಿಸುಕಿ ಕೊಂದಿದ್ದಾಳೆ. ಇದನ್ನೂ ಓದಿ: ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡಿದವನು ಸೇರಿ 5 ಜನ ಅರೆಸ್ಟ್ 

    ಶೇಖ್ ಅಫ್ರೋಜ್ ಸಣ್ಣ ವ್ಯಾಪಾರವನ್ನು ಮಾಡುತ್ತಾ ಜೀವನವನ್ನು ಸಾಗಿಸುತ್ತಿದ್ದರು. ದಂಪತಿಗಳ ನಡುವೆ ಕೆಲವು ವಿಚರಗಳಿಗೆ ಮನಸ್ಥಾಪವಿತ್ತು. ಹೀಗಾಗಿ ಇಬ್ಬರ ನಡುವೆ ಪ್ರತಿನಿತ್ಯ ಜಗಳವಾಗುತ್ತಿತ್ತು. ಶೇಖ್ ಕುಡಿದು ಮನೆಗೆ ಬರುತ್ತಿದ್ದನು. ಇದು ಫರ್ಜಾನಾಗೆ ಇಷ್ಟವಾಗುತ್ತಿರಲಿಲ್ಲ. ಈ ವಿಚಾವಾಗಿ ಇಬ್ಬರ ಮಧ್ಯೆ ಹಲವು ಬಾರಿ ಜಗಳವಾಗಿದೆ. ಶೇಖ್ ಅವರಿಗೆ ಫರ್ಜಾನಾ ಎರಡನೇ ಪತ್ನಿಯಾಗಿದ್ದಾಳೆ. ಈ ದಂತಿಗೆ ಒಂದು ಮಗುವಿದೆ. ಆಕೆ ಬಟ್ಟೆಯಯಲ್ಲಿ ಶೇಖ್ ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಕೊಲೆಗೆ ಸಂಬಂಧಿಸಿದಂತೆ ಶೇಖ್ ಸಹೋದರ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

    ದೂರಿನ ಆಧಾರದ ಮೇಲೆ ಪೊಲೀಸರು ಫರ್ಜಾನಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ.

  • ಪತ್ನಿಯ ಮೇಲೆ ಅತ್ಯಾಚಾರ ಮಾಡಿದವರನ್ನು ಸ್ಕೆಚ್ ಹಾಕಿ ಕೊಂದ

    ಪತ್ನಿಯ ಮೇಲೆ ಅತ್ಯಾಚಾರ ಮಾಡಿದವರನ್ನು ಸ್ಕೆಚ್ ಹಾಕಿ ಕೊಂದ

    ಭೋಪಾಲ್: ಪತ್ನಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗಳ ವಿರುದ್ಧ ಪತಿ ಸಿನಿಮಾ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾನೆ.

    ಪ್ರಕರಣ ಬಹಿರಂಗಗೊಂಡ ಬಳಿಕ ಪತಿಯನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ಸಾಮೂಹಿಕ ಅತ್ಯಾಚಾರ ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗಳ ಮೇಲೆ ಈ ಹಿಂದೆ ಒಮ್ಮೆ ದಾಳಿ ಮಾಡಿದ್ದನು. ಆದರೆ ಅಪರಾದಿಗಳು ಸಾಯದಿದ್ದಾಗ, ಆರು ತಿಂಗಳ ನಂತರ ದಾಳಿ ಮಾಡಿ ತನ್ನ ಸೇಡು ತೀರಿಸಿಕೊಂಡಿದ್ದಾನೆ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರಕ್ಕೆ 400 ಕೆಜಿಯ ಬೀಗ ದೇಣಿಗೆ!

    ಘಟನೆ ನಡೆದ ದಿನದಿಂದ ಗ್ರಾಮದ ವ್ಯಕ್ತಿಯೊಬ್ಬ ಕುಟುಂಬ ಸಮೇತ ನಾಪತ್ತೆಯಾಗಿದ್ದನು. ಆತನ ಫೋನ್ ಟ್ರೇಸಿಂಗ್ ಮೂಲಕ ಪೆÇಲೀಸರು ಆತನನ್ನು ಪತ್ತೆ ಹಚ್ಚಿದ್ದಾರೆ. ವಿಚಾರಣೆಗೆ ಒಳಗಾದ ಅವರು ಸಂಪೂರ್ಣ ಬಹಿರಂಗಪಡಿಸಿದಾಗ ಆಗ ಸತ್ಯ ಹೊರಗೆ ಬಂದಿದೆ. ಇದನ್ನೂ ಓದಿ: ಬರದನಾಡಲ್ಲಿ ಗ್ರಾಮೀಣ ರಸ್ತೆ, ಅಂತರ್ಜಲ ಮಟ್ಟ ಹೆಚ್ಚಿಸಲು ಒತ್ತು: ತಿಪ್ಪಾರೆಡ್ಡಿ

    1 ವರ್ಷದ ಹಿಂದೆ ನನ್ನ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಹೀಗಾಗಿ ನಾನು ಅವರ ಮೇಲೆ ಸೆಡು ತೀರಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ನನ್ನ ಪ್ಲ್ಯಾನ್ ಸರಿಯಾಗಿ ಇರಲಿಲ್ಲ ಹೀಗಾಗಿ ಅವರು ಬದುಕಿ ಉಳಿದರು. ನಂತರ 6 ತಿಂಗಳ ನಂತರ ಅವರನ್ನು ಕೊಲೆ ಮಾಡಲು ಮತ್ತೊಂದು ಸಂಚು ರೂಪಿಸಿದ್ದೆನು. ಸ್ಫೋಟಕವನ್ನು ಮೋಟಾರ್‍ಗೆ ಜೋಡಿಸಿದ್ದೆ. ನಾನು ಬಟನ್ ಒತ್ತಿದ ತಕ್ಷಣ ಅದು ಸ್ಫೋಟಗೊಂಡಿದೆ ಎಂದು ಹೇಳಿದ್ದಾನೆ. ಅದೇ ಪೆÇಲೀಸರು ವಿಚಾರಣೆ ನಡೆಸಿದಾಗ ಪಾತಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಇದೀಗ ಪ್ರಕರಣದ ತನಿಖೆ ನಡೆಯುತ್ತಿದೆ. ಇದನ್ನೂ ಓದಿ:  ಜಿಎಸ್‍ಟಿ ನೋಟಿಸ್‌ನಲ್ಲಿ ಮೊತ್ತ ನೋಡಿ ಶಾಕ್ ಆದ ದಂಪತಿ!

  • ರತಿಕ್ರೀಡೆಗಾಗಿ ಪತ್ನಿಯನ್ನು ಅದಲುಬದಲು ಮಾಡುವ ಪತಿಯರು – 7 ಆರೋಪಿಗಳು ಅರೆಸ್ಟ್

    ರತಿಕ್ರೀಡೆಗಾಗಿ ಪತ್ನಿಯನ್ನು ಅದಲುಬದಲು ಮಾಡುವ ಪತಿಯರು – 7 ಆರೋಪಿಗಳು ಅರೆಸ್ಟ್

    – ವಾಟ್ಸಪ್ ಗ್ರೂಪಿನಲ್ಲಿದ್ದಾರೆ ಪತ್ನಿಯರು

    ಕೊಟ್ಟಾಯಂ: ರತಿಕ್ರೀಡೆಗಾಗಿ ಕೇರಳದಲ್ಲಿ ಪತಿಯರು ತಮ್ಮ ಪತ್ನಿಯರನ್ನೇ ಅದಲುಬದಲು ಮಾಡುವ ಜಾಲ ಈಗ ಪತ್ತೆಯಾಗಿದೆ. ಈ ಜಾಲವನ್ನು ಪೊಲೀಸರು ಬೇದಿಸಿದ್ದು, ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

    ಲೈಂಗಿಕ ಆಸೆಗೆ ತನ್ನ ವಾಂಛೆ ತೀರಿಸಿಕೊಳ್ಳಲು ಪತಿಯರು ಫೇಸ್‍ಬುಕ್, ವಾಟ್ಸಪ್ ಮತ್ತು ಟೆಲಿಗ್ರಾಮ್ ಮೀಡಿಯಾವನ್ನು ಬಳಸಿಕೊಂಡಿದ್ದಾರೆ. ಈ ಮೂಲಕ ತಮ್ಮ ಪತ್ನಿಯರನ್ನು ಪತಿಯರು ಅದಲುಬದಲು ಮಾಡಿಕೊಳ್ಳಲು ಒಪ್ಪಿಕೊಂಡು, ತಮ್ಮ ಪತ್ನಿಯರನ್ನು ಬೇರೆಯವರ ಜೊತೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈ ಕೃತ್ಯಕ್ಕೆ ಎಷ್ಟೋ ಹೆಣ್ಣು ಮಕ್ಕಳನ್ನು ಬಲಿಯಾಗಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

    5 ಸಾವಿರ ಜನ ಸಕ್ರಿಯ:
    ಈ ಜಾಲವನ್ನು ಪೊಲೀಸರು ಮೊದಲು ಹುಡುಕಿಕೊಂಡು ಹೋಗಿದ್ದು, ಮೂಲವನ್ನು ನೋಡಿ ಅವರೇ ಶಾಕ್ ಆಗಿದ್ದಾರೆ. ತನಿಖೆ ಪ್ರಾರಂಭಿಸಿದ ಪೊಲೀಸರು ಈ ಕುರಿತು ಆಳವಾಗಿ ಇಳಿದಿದ್ದು, ಈ ಕಾಮುಕರ ಗುಂಪಿನಲ್ಲಿ 5 ಸಾವುರಕ್ಕೂ ಹೆಚ್ಚು ಜವರು ಇರುವುದು ತಿಳಿದುಬಂದಿದೆ. ಈ ಗುಂಪಿನಲ್ಲಿ ಕೇವಲ ಕೇರಳ ಜನರು ಮಾತ್ರವಲ್ಲ, ಬದಲಾಗಿ ಈ ನೂರಾರು ಗುಂಪುಗಳು ಹಲವು ರಾಜ್ಯಗಳಲ್ಲಿವೆ. ಅದರಲ್ಲಿಯೂ ಕೆಲವು ಗುಂಪುಗಳಲ್ಲಿ 5000ಕ್ಕೂ ಹೆಚ್ಚಿನ ಜನರು ಇದ್ದಾರೆ.

    ಆ ಗುಂಪಿನಲ್ಲಿ ವಕೀಲರು, ವೈದ್ಯರು ಸೇರಿದಂತೆ ಪ್ರತಿಷ್ಠಿತ ವೃತ್ತಿ ಮಾಡುತ್ತಿರುವ ಹಲವು ಜನರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಅದು ಅಲ್ಲದೇ ಈ ಗುಂಪಿನಲ್ಲಿ ಗಂಡು ಮಕ್ಕಳು ಮಾತ್ರವಿಲ್ಲ. ಹೆಣ್ಣು ಮಕ್ಕಳು ಸಹ ಇದ್ದು, ಅವರೇ ಸ್ವಯಂ ಪ್ರೇರಣಿಯಿಂದ ಈ ಗುಂಪಿಗೆ ಬಂದು ಸೇರಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

    POLICE JEEP

    ಈ ಗುಂಪಿಗೆ ಸೇರಿದ ಕೆಲವು ಪತಿಯರು ಪ್ರೇರಣೆಗೊಂಡು ತಮ್ಮ ಪತ್ನಿಯರಿಗೆ ಬಲವಂತ ಮಾಡಿ ಈ ಗುಂಪಿಗೆ ಸೇರಿಸುವವರು ಇದ್ದಾರೆ. ಕೆಲವರ ಕುಟುಂಬ ಈ ಕಾರಣಕ್ಕೆ ಛಿದ್ರವಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

    ಏನಿದು?
    ಅತೀಯಾದ ಲೈಂಗಿಕ ಆಸೆಗೆ ಬಿದ್ದು, ಈ ಗುಂಪಿಗೆ ಜನರು ಸೇರಿಕೊಳ್ಳುತ್ತಾರೆ. ಹೀಗೆ ಸೇರಿಕೊಳ್ಳುವ ಪತಿ-ಪತ್ನಿ ಪರಸ್ಪರ ಒಪ್ಪಿಕೊಂಡು ತಾತ್ಕಾಲಿಕವಾಗಿ ತಮ್ಮ ಸಂಗಾತಿಗಳನ್ನು ಬೇರೆಯವರ ಜೊತೆ ಬದಲು ಮಾಡಿಕೊಳ್ಳುತ್ತಾರೆ. ಆಗ ಅವರಿಗೆ ಸಿಕ್ಕ ಸಂಗಾತಿಯ ಜೊತೆ ಮೋಜು, ಮಸ್ತಿ ಮಾಡುವುದು, ಅನೈಸರ್ಗಿಕವಾಗಿ ಲೈಂಗಿಕ ಸಂಪರ್ಕ ಹೊಂದುವುದು ಈ ಗುಂಪಿನ ಸದಸ್ಯರ ಕೆಲಸವಾಗಿರುತ್ತೆ. ಇದನ್ನೂ ಓದಿ: ಮಕರ ಸಂಕ್ರಾಂತಿಗೆ ಗಾಳಿಪಟ ಹಾರಿಸೋದೇಕೆ? ವಿಶೇಷತೆ ಏನು?

    ಈ ಕುರಿತು ಮಾತನಾಡಿದ ಕೇರಳದ ಹಿರಿಯ ಪೊಲೀಸ್ ಅಧಿಕಾರಿ, ಈ ಕೆಲಸಕ್ಕೆ ಗಂಡಸರು ಸುಲಭವಾಗಿ ಹೊಂದಿಕೊಳ್ಳುತ್ತಾರೆ. ಆದರೆ ಮಹಿಳೆಯರು ಇದನ್ನು ಒಪ್ಪಿಕೊಳ್ಳಲು ಕಷ್ಟವಾಗುತ್ತೆ. ಈ ಕಾರಣದಿಂದ ಶೇ.90 ರಷ್ಟು ಪತ್ನಿಯರು ಇಷ್ಟವಿಲ್ಲದೇ ಈ ಕೃತ್ಯಕ್ಕೆ ಒಪ್ಪಿಕೊಳ್ಳುತ್ತಾರೆ. ಇನ್ನು ಕೆಲವು ಪತಿಯರು ಈ ಕೃತ್ಯಕ್ಕೆ ಬಲವಂತವಾಗಿ ತಮ್ಮ ಪತ್ನಿಯರನ್ನು ಒಪ್ಪಿಸುತ್ತಾರೆ. ಅದಕ್ಕೆ ಕೆಲವು ಮಹಿಳೆಯರು ಈ ಕೃತ್ಯಕ್ಕೆ ಕಟ್ಟುಬಿದ್ದು, ಈ ಜಾಲಕ್ಕೆ ಸೇರುತ್ತಾರೆ. ಅದಕ್ಕೆ ಈ ಬಗ್ಗೆ ಸರಿಯಾಗಿ ತನಿಖೆ ಮಾಡಿ ಗುಂಪನ್ನು ಮಟ್ಟಹಾಕುವ ಅಗತ್ಯವಿದೆ ಎಂದು ತಿಳಿಸಿದರು.

    ಬಯಲಾಗಿದ್ದು ಹೇಗೆ?
    ಇದೇ ರೀತಿ ಒಬ್ಬ ಪತಿ ತನ್ನ ಪತ್ನಿಯನ್ನು ಬೇರೆಯವರ ಜೊತೆ ಹಂಚಿಕೊಳ್ಳಲು ಸಿದ್ಧವಾಗಿದ್ದು, ಈ ಸುದ್ದಿ ತಿಳಿಸಿದ ಪತ್ನಿ ಶಾಕ್ ಆಗಿದ್ದಾಳೆ. ಪರಿಣಾಮ ಆಕೆ ಪೊಲೀಸರಿಗೆ ದೂರು ಕೊಟ್ಟಿದ್ದು, ಪೊಲೀಸರು ಇವರ ಜಾಲ ಬೇಧಿಸಿದ್ದಾರೆ.

  • ಬದುಕಿನ ಪಾಠ ಹೇಳಿದ ಪತ್ನಿಯನ್ನೇ ಕೊಂದು ಮನೆಯಲ್ಲೇ ಹೂತಿದ್ದ ಪತಿರಾಯ ಅರೆಸ್ಟ್

    ಬದುಕಿನ ಪಾಠ ಹೇಳಿದ ಪತ್ನಿಯನ್ನೇ ಕೊಂದು ಮನೆಯಲ್ಲೇ ಹೂತಿದ್ದ ಪತಿರಾಯ ಅರೆಸ್ಟ್

    ಚಿತ್ರದುರ್ಗ: ಜೀವನದಲ್ಲಿ ಚೆನ್ನಾಗಿ ಬದುಕಲು ಹಣ ಸಂಗ್ರಹಿಸಿಡಬೇಕೆಂದು ಬುದ್ಧಿವಾದ ಹೇಳಿದ ಚಿತ್ರದುರ್ಗ ತಾಲೂಕಿನ ಕೋಣನೂರಿನಲ್ಲಿ ಪತ್ನಿಯನ್ನು ಕೊಲೆಗೈದು, ಮನೆಯಲ್ಲೇ ಹೆಣವನ್ನು ಹೂತಿಟ್ಟಿದ್ದ ಆರೋಪಿ ನಾರಪ್ಪ ಅರೆಸ್ಟ್ ಆಗಿದ್ದಾನೆ.

    ಮದ್ಯವ್ಯಸನ ಜೊತೆಗೆ ಜೂಜಾಡೋ ಚಟ ಮೈಗೂಡಿಸಿಕೊಂಡಿದ್ದ ನಾರಪ್ಪ ದುಡಿದ ದುಡ್ಡನ್ನೆಲ್ಲ ಮದ್ಯ, ಇಸ್ಪೀಟು ಅಂತ ಹಾಳು ಮಾಡ್ತಿದ್ದನು. ಈ ದುರಾಭ್ಯಾಸಗಳಿಂದ ಬೇಸತ್ತ ಪತ್ನಿ ಸುಮಾ ಪದೇ ಪದೇ ಬುದ್ಧಿಮಾತು ಹೇಳ್ತಾ ಇದ್ಳು. ಆದರೆ ಪತ್ನಿ ಬುದ್ಧಿಮಾತು ಹೇಳಿದಳು ಅಂತ ಮದುವೆ ವಾರ್ಷಿಕೋತ್ಸವದ ದಿನವೇ ಆಕೆಯನ್ನು ಕೊಂದು ಕಾಣೆಯಾಗಿದ್ದಾಳೆ ಎಂದು ಭರಮಸಾಗರ ಪೊಲೀಸ್ ಠಾಣೆಯಲ್ಲಿ ನಾರಪ್ಪ ದೂರು ಕೊಟ್ಟಿದ್ದನು. ಇದನ್ನೂ ಓದಿ: ಅಧಿಕಾರಿಯನ್ನು ಕೊಲ್ಲಲು ಸಂಚು ಮಾಡಿದ ಆಡಿಯೋ ಕ್ಲಿಪ್ ರಿಲೀಸ್ – ನಟ ದಿಲೀಪ್ ವಿರುದ್ಧ FIR

    ನಾರಪ್ಪನಿಂದ ಪೊಲೀಸರು ದೂರು ದಾಖಲಿಸಿಕೊಂಡು ಸುಮಾಳನ್ನು ಹುಡುಕುತ್ತಿದ್ದರು. ಸುಮಾ ಕಾಣೆಯಾಗಿ 12 ದಿನ ಕಳೆದರೂ ಸಿಗದೇ ಇದ್ದಾಗ ಪೊಲೀಸರು ಅನುಮಾನಗೊಂಡು ನಾರಪ್ಪನ ಮನೆ ಪರಿಶೀಲನೆ ನಡೆಸಿದ್ದರು. ಆಗ ನಾರಪ್ಪನೇ ಪತ್ನಿಯನ್ನು ಕೊಂದು ಮನೆಯೊಳಗೆ ಹೂತಿಟ್ಟಿರುವ ಶಂಕೆ ಬಂದಿದೆ. ಬಳಿಕ ಸುಮಾಳ ತಂದೆ ಬಳಿ ದೂರು ದಾಖಲಿಸಿಕೊಂಡು ಮನೆಯೊಳಗಿನ ಮಂಚದ ಕೆಳಗೆ ಅಗೆದು ನೋಡಿದಾಗ ಅಸಲಿ ಸತ್ಯ ಬಯಲಾಗಿದ್ದು, ಪೊಲೀಸರೇ ಶಾಕ್ ಆಗಿದ್ದಾರೆ.

    ಪತ್ನಿಯಾದ ಸುಮಾಳನ್ನು ಬರ್ಬರವಾಗಿ ಹತ್ಯೆ ಮಾಡಿ ಮನೆಯೊಳಗಿನ ಕಡಪಾ ಬಂಡೆ ಕೆಳಗೆ ಪತ್ನಿ ಶವ ಹೂತಿಟ್ಟಿದ್ದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಖತರ್ನಾಕ್ ಪತಿ ನಾರಪ್ಪ ತಲೆ ಮರೆಸಿಕೊಂಡಿದ್ದನು. ಆದರೆ ಕೊಲೆ ಪ್ರಕರಣ ಬೆಳಕಿಗೆ ಬಂದ 48 ಗಂಟೆಯೊಳಗೆ ಭರಮಸಾಗರ ಪೊಲೀಸರು ಆರೋಪಿ ನಾರಪ್ಪನನ್ನು ದಾವಣಗೆರೆ ಬಸ್ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಸಿಂಗಲ್ ಡಿಜಿಟ್‍ನಲ್ಲಿದ್ದ ಸೋಂಕು 78ಕ್ಕೆ ಏರಿಕೆ – ಆತಂಕದಲ್ಲಿ ಕಾಫಿನಾಡಿಗರು

    ಈ ಪ್ರಕರಣದಿಂದ ದಾಂಪತ್ಯ ಜೀವನ ಚೆನ್ನಾಗಿರಲಿ ಅಂತ ಪತಿಗೆ ಬುದ್ಧಿಮಾತು ಹೇಳಿದ ಹಿನ್ನೆಲೆಯಲ್ಲಿ ಅಮಾಯಕ ಪತ್ನಿ ಕೊಲೆಯಾಗಿರೋದು ಮಾತ್ರ ದುರಂತ ಎನಿಸಿದೆ. ಆದರೆ ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಲೆಗೈದ ಆರೋಪಿ ನಾರಪ್ಪ ಜೈಲು ಸೇರಿದ್ದಾನೆ. ಈ ಪ್ರಕರಣದಿಂದಾಗಿ ಪತ್ನಿಯರು ಕುಡುಕ ಗಂಡಂದಿರಿಗೆ ಬುದ್ಧಿ ಹೇಳುವ ಮುನ್ನ ಒಂದು ಕ್ಷಣ ಯೋಚಿಸುವ ಪರಿಸ್ಥಿತಿ ಆ ಗ್ರಾಮದಲ್ಲಿ ನಿರ್ಮಾಣವಾಗಿದೆ.