Tag: ಪತಿ

  • ಕೌಟುಂಬಿಕ ಕಲಹದ ಮಧ್ಯೆ ಪತ್ನಿಯ ಮೂಗು ಕಚ್ಚಿದ ಪತಿ

    ಕೌಟುಂಬಿಕ ಕಲಹದ ಮಧ್ಯೆ ಪತ್ನಿಯ ಮೂಗು ಕಚ್ಚಿದ ಪತಿ

    ಭೋಪಾಲ್: ಕೌಟುಂಬಿಕ ಕಲಹದ ಮಧ್ಯೆ ಕೋಪಗೊಂಡ ಪತಿ ಪತ್ನಿಯ ಮೂಗು ಕಚ್ಚಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ನಡೆದಿದೆ.

     

    ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡ ಅಲೋಟೆ ಪೊಲೀಸ್ ಠಾಣೆಯ ನೀರಜ್ ಸರ್ವಾನ್, ದಿನೇಶ್ ಹಾಗೂ ಟೀನಾ 2008ರಲ್ಲಿ ಉಜ್ಜನಿಯಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ನಡೆದರೂ ಚಿಕ್ಕಬಳ್ಳಾಪುರದಲ್ಲಿ KSRTC ಬಸ್ಸುಗಳಿಗೆ ಇಲ್ಲ ಬಂದ್

    ವಿಚಾರಣೆ ವೇಳೆ ಟೀನಾ, ನನ್ನ ಪತಿ ನಿರುದ್ಯೋಗಿ ಮತ್ತು ಮದ್ಯವ್ಯಸನನಾಗಿದ್ದು, ಮದುವೆಯಾದ ತಕ್ಷಣ ನಾನು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದೆ. ದಿನೇಶ್ ಕಿರುಕುಳ ತಾಳಾಲಾರದೇ ನನ್ನ ಹೆಣ್ಣುಮಕ್ಕಳೊಂದಿಗೆ ತಾಯಿಯ ಮನೆಗೆ ಹೋಗಿ ಅಡುಗೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದೆ. 2019ರಲ್ಲಿ ನನ್ನ ಪತಿಯಿಂದ ವಿಚ್ಛೇದನೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದೆ.

    ಆದರೆ ಇತ್ತೀಚೆಗಷ್ಟೇ ದಿನೆಶ್ ತನ್ನ ಪೋಷಕರ ಮನೆಗೆ ಭೇಟಿ ನೀಡಿ ಈ ವಿಚಾರವಾಗಿ ಚರ್ಚೆ ನಡೆಸಿದರು. ಈ ವೇಳೆ ಮಾತಿಗೆ ಮಾತು ಬೆಳೆದು ತೀವ್ರ ವಾಗ್ವಾದದಿಂದ ದಿನೇಶ್ ಪುತ್ರಿಯರ ಮುಂದೆಯೇ ನನ್ನ ಮೇಲೆ ಹಲ್ಲೆ ನಡೆಸಿ ಹಲ್ಲಿನಿಂದ ಮೂಗನ್ನು ಕಚ್ಚಿದ್ದಾರೆ. ನಂತರ ತೀವ್ರವಾಗಿ ರಕ್ತಸ್ರಾವವಾಗುತ್ತಿರುವುದನ್ನು ಕಂಡು ಸ್ಥಳದಿಂದ ಪಾರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತರಕಾರಿ ಸುರಿದು ರೈತರ ಆಕ್ರೋಶ – ಜಿಲ್ಲೆಗಳಲ್ಲಿ ಪ್ರತಿಭಟನೆ ಆರಂಭ 

    ಈ ವೇಳೆ ಮಕ್ಕಳು ಕಿರುಚಾಡಿದ್ದನ್ನು ಕೇಳಿಸಿಕೊಂಡ ನೆರೆಹೊರೆಯವರು ಟೀನಾರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದೀಗ ಟೀನಾಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಮತ್ತು ಟೀನಾ ಪತಿ ದಿನೇಶ್‍ರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಕ್ರೂರವಾಗಿ ಹತ್ಯೆಗೈದ ಪತಿ, ಸಹೋದರ

    ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಕ್ರೂರವಾಗಿ ಹತ್ಯೆಗೈದ ಪತಿ, ಸಹೋದರ

    ಹಾವೇರಿ: ಪತ್ನಿಯ ಅನೈತಿಕ ಸಂಬಂಧದಿಂದ ರೋಸಿ ಹೋಗಿದ್ದ ಪತಿ ಆಕೆಯ ತಮ್ಮನೊಂದಿಗೆ ಸೇರಿ ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಹಾವೇರಿ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಪಂಜಾಬ್‍ನಲ್ಲಿ ನೂತನ ಸಚಿವ ಸಂಪುಟ ರಚನೆ ಕಸರತ್ತು- ಐವರು ಹಳೆ ಸಚಿವರಿಗೆ ಕೊಕ್

    ಶಕುಂತಲಾ ಉಪ್ಪಾರ್(32) ಮೃತದುರ್ದೈವಿ ಎಂದು ಗುರುತಿಸಲಾಗಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ಗ್ರಾಮದವರಾಗಿದ್ದಾರೆ. ಕಳೆದ 15 ವರ್ಷಗಳ ಹಿಂದೆ ಶಕುಂತಲಾರನ್ನು ಹಾವೇರಿ ತಾಲೂಕಿನ ಕೆರೆಕೊಪ್ಪ ಗ್ರಾಮದ ಹನುಮಂತಪ್ಪರಿಗೆ ಮದುವೆ ಮಾಡಿಕೊಡಲಾಗಿತ್ತು. ಶಕುಂತಲಾ ಮತ್ತು ಹನುಮಂತಪ್ಪ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ಮದುವೆ ನಂತರದ ಕೆಲವು ವರ್ಷಗಳಿಂದ ಶಕುಂತಲಾ ಪರಪುರುಷರ ಸಂಗ ಬೆಳೆಸಿದ್ದು, ಕೆಲವು ವರ್ಷಗಳ ಹಿಂದೆ ಪರಪುರುಷನ ಜೊತೆ ಮನೆಬಿಟ್ಟು ಹೋಗಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿ- ಡ್ರೈವರ್ ಗ್ರೇಟ್ ಎಸ್ಕೇಪ್

    ಆಗ ಶಕುಂತಲಾರ ತಂದೆ, ತಾಯಿ ಪೊಲೀಸರ ನೆರವಿನಿಂದ ಆಕೆಯನ್ನು ಪತ್ತೆ ಮಾಡಿ ಬುದ್ಧಿವಾದ ಹೇಳಿ ಪತಿಯ ಮನೆ ಸೇರಿಸಿದರು. ಆದರೆ ಶಕುಂತಲಾ ಮಾತ್ರ ಪರಪುರುಷರ ಸಂಗವನ್ನ ಬಿಡಲೇ ಇಲ್ಲ. ಹೀಗಾಗಿ ಶಕುಂತಲಾ ಪತಿ ಹನುಮಂತಪ್ಪ ಹಾಗೂ ಆಕೆಯ ತಮ್ಮ ಬಸವರಾಜ್ ಜೊತೆ ಸೇರಿಕೊಂಡು ಕೊಲೆ ಮಾಡಿದ್ದಾರೆ. ಇದೀಗ ಇಬ್ಬರು ಆರೋಪಿಗಳನ್ನು ಗುತ್ತಲ ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಹಾವೇರಿ ಎಸ್‍ಪಿ ಹನುಮಂತರಾಯ ಹಾಗೂ ಬೆರಳಚ್ಚು ತಜ್ಞರು ಆಗಮಿನಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರಕರಣ ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

  • ಗದ್ದೆಗೆ ಹೋಗೋ ನೆಪದಲ್ಲಿ ಬಾವಿಗೆ ತಳ್ಳಿ ಹೆಂಡ್ತಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ

    ಗದ್ದೆಗೆ ಹೋಗೋ ನೆಪದಲ್ಲಿ ಬಾವಿಗೆ ತಳ್ಳಿ ಹೆಂಡ್ತಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ

    ಚಾಮರಾಜನಗರ:  ಪತ್ನಿಯನ್ನು ಕೊಲೆಗೈದ ಪತಿಗೆ ಚಾಮರಾಜನಗರ  ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

    2017 ರ ಫೆಬ್ರವರಿ 22ರಂದು ಗದ್ದೆ ನೋಡಲು ಹೋಗೋಣ ಬಾ ಎಂದು ಪತ್ನಿಯನ್ನು ಕರೆದೊಯ್ದು ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆ ಆತನಿಗೆ ಜೀವಾವಧಿ ಶಿಕ್ಷೆ ಹಾಗೂ 45 ಸಾವಿರ ರೂ. ದಂಡವನ್ನು ನ್ಯಾಯಾಧೀಶ ಲೋಕಪ್ಪ ವಿಧಿಸಿದ್ದಾರೆ. ಈ ಸಂಬಂಧ ಮೃತಳ ತಾಯಿ ಸಾವಿತ್ರಮ್ಮ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸರ್ಕಾರಿ ಅಭಿಯೋಜಕರಾಗಿ ಉಷಾ ವಾದ ಮಂಡಿಸಿದ್ದರು.

    ವಿವಾಹವಾದ ಕೇವಲ 9 ದಿನಕ್ಕೆ ವರದಕ್ಷಿಣೆ ಕೊಡಲಿಲ್ಲವೆಂದು ಪತ್ನಿ ಕೊಂದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಅಪರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಲೋಕಪ್ಪ ಜೀವಾವಧಿ ಶಿಕ್ಷೆ ವಿಧಿಸಲು ಆದೇಶಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳ ದುಬಾರಿ ಶುಲ್ಕ- ರಮೇಶ್ ಕುಮಾರ್ ಉಪಸ್ಥಿತಿಯಲ್ಲಿ ಚಿಂತನ ಮಂಥನ

    ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮದ ವೆಂಕಟೇಶ್ ಶಿಕ್ಷೆಗೊಳಗಾದ ಅಪರಾಧಿ. ಈತ ವೃತ್ತಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ ಆಗಿದ್ದು, ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದ ಸಾವಿತ್ರಮ್ಮರವರ ಪುತ್ರಿ ದಿವ್ಯಾರನ್ನು 2017ರ ಫೆಬ್ರವರಿ 2ರಂದು ವಿವಾಹ ಮಾಡಿಕೊಂಡಿದ್ದ. ಮದುವೆಗೂ ಮುನ್ನ ಹುಡುಗಿಗೆ ಮಾಂಗಲ್ಯ ಸರ, ಹುಡುಗನಿಗೆ ಚಿನ್ನದ ಉಂಗುರ, 2.5 ಲಕ್ಷ ವರದಕ್ಷಿಣೆ ಕೊಡಲು ಒಪ್ಪಂದ ಮಾಡಿಕೊಂಡು ಅದರಂತೆ ವಿವಾಹಕ್ಕೂ ಮುನ್ನ ಮದುಮಗನಿಗೆ 2 ಲಕ್ಷ ಹಣ, ಚಿನ್ನದ ಉಂಗುರ ನೀಡಲಾಗಿತ್ತು. ಇದನ್ನೂ ಓದಿ: ಸರ್ಕಾರ ಕೊಟ್ಟ ಮಾತಿನಂತೆ ನಡೆಯದಿದ್ದರೇ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗಲಿದೆ: ಕಾಶಪ್ಪನವರ್

    chamarajanagara

    ಮದುವೆಯಾದ ಮೂರೇ ದಿನಕ್ಕೆ ಮಾಂಗಲ್ಯ ಸರ, ಉಳಿದ ಹಣ 50 ಸಾವಿರ ರೂ. ಹಣವನ್ನು ತರುವಂತೆ ಕಿರುಕುಳ ಕೊಟ್ಟು ಫೆಬ್ರವರಿ 20ರಂದು ಹೆಂಡತಿಯನ್ನು ತವರಿಗೆ ಕಳುಹಿಸಿದ್ದ. ಆದರೆ ಫೆಬ್ರವರಿ 22ರಂದು ಗದ್ದೆ ನೋಡಲು ಹೋಗೋಣ ಬಾ ಎಂದು ಪತ್ನಿಯನ್ನು ಕರೆದೊಯ್ದು ಬಾವಿಗೆ ತಳ್ಳಿ ಕೊಲೆ ಮಾಡಿದ್ದ. ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

  • ಪ್ರೀತಿಸಿ ಮದ್ವೆಯಾದವಳು ನೆರೆ ಮನೆಯವನೊಂದಿಗೆ ಎಸ್ಕೇಪ್- ವೀಡಿಯೋ ಮಾಡಿ ಪತಿ ಆತ್ಮಹತ್ಯೆ

    ಪ್ರೀತಿಸಿ ಮದ್ವೆಯಾದವಳು ನೆರೆ ಮನೆಯವನೊಂದಿಗೆ ಎಸ್ಕೇಪ್- ವೀಡಿಯೋ ಮಾಡಿ ಪತಿ ಆತ್ಮಹತ್ಯೆ

    ವಿಜಯಪುರ: ಪ್ರೀತಿಸಿ ಮದುವೆಯಾದವಳು ಪಕ್ಕದ ಮನೆಯವನ ಜೊತೆಗೆ ಎಸ್ಕೇಪ್ ಆದ ಘಟನೆ ವಿಜಯಪುರದ  ಜಿ. ತಾಳಿಕೋಟೆ ತಾ. ಬೊಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಇದರಿಂದ ಮನನೊಂದು ಗಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ಫೇಸ್ ಬುಕ್‍ನಲ್ಲಿ ವೀಡಿಯೋ ಹರಿಬಿಟ್ಟು ನೇಣಿಗೆ ಶರಣಾಗಿದ್ದಾನೆ.

    ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಎರಡು ವರ್ಷಗಳ ಹಿಂದೆ ವೆಂಕಟೇಶ್ ಪ್ರೀತಿಸಿ ಮದುವೆಯಾಗಿದ್ದ. ಈತನ ಪಕ್ಕದ ಮನೆಯ ಸಹೋದರ ಸಂಬಂಧಿ ಶ್ರೀಶೈಲ್ ಎಂಬವನ ಜೊತೆಗೆ ಸದ್ಯ ಪತ್ನಿ ಎಸ್ಕೇಪ್ ಆಗಿದ್ದಾಳೆ. ತಾಳಿಕೋಟೆ ಪೊಲೀಸ್ ಠಾಣೆಗೆ ಇದರ ಬಗ್ಗೆ ವೆಂಕಟೇಶ್ ದೂರು ಕೂಡ ನೀಡಿದ್ದ. ಆದರೆ ವೆಂಕಟೇಶ್ ಜೊತೆಗೆ ಇರೊಲ್ಲ,  ಪ್ರಿಯಕರ ಶ್ರೀಶೈಲ್ ಜೊತೆಗೆ ಇರುವುದಾಗಿ ಪತ್ನಿ ಹೇಳಿದ್ದಳು. ಕಾರಣ ಆಕೆಯ ಹಕ್ಕುಗಳ ಬಗ್ಗೆ ಗಂಡ ವೆಂಕಟೇಶ್ ಗೆ ಪೊಲೀಸರು ಮನವರಿಕೆ ಮಾಡಿದ್ದರು. ಇದರಿಂದ ಮನನೊಂದು ವೆಂಕಟೇಶ್ ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಸಿನಿಮಾ ಸ್ಟೈಲ್‍ನಲ್ಲಿ ಪತ್ನಿ ಕೊಲೆಗೆ ಸ್ಕೆಚ್- ವಿಫಲವಾದ ನಂತ್ರ ಚಾಕುವಿಂದ ಇರಿದು ಕೊಂದ!

    ಆತ್ಮಹತ್ಯೆಗೂ ಮುನ್ನ ‘ತನ್ನ ಸಾವಿಗೆ ಶ್ರೀಶೈಲ್ ಹೊಣೆ’ ಎಂದು ಹೇಳಿ ಫೇಸ್ ಬುಕ್ ಲೈವ್ ಮಾಡಿ ನೇಣಿಗೆ ಶರಣಾಗಿದ್ದಾನೆ. ಫೇಸ್ ಬುಕ್ ನಲ್ಲಿ ಈ ವೀಡಿಯೋ ಕಂಡು ಜಮೀನಿನಲ್ಲಿ ನೇಣು ಬಿಗಿದುಕೊಂಡು ಒದ್ದಾಡುತ್ತಿದ್ದ ವೆಂಕಟೇಶ್ ಪ್ರಾಣ ಉಳಿಸಲು, ಸ್ಥಳೀಯರು ಯತ್ನಿಸಿದ್ದಾರೆ. ಆದರೆ ತಾಳಿಕೋಟೆ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆಯೆ ವೆಂಕಟೇಶ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ತಂದೆಯನ್ನೇ ಹತ್ಯೆಗೈದ ಬಾಲಕಿ

    ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಿನಿಮಾ ಸ್ಟೈಲ್‍ನಲ್ಲಿ ಪತ್ನಿ ಕೊಲೆಗೆ ಸ್ಕೆಚ್- ವಿಫಲವಾದ ನಂತ್ರ ಚಾಕುವಿಂದ ಇರಿದು ಕೊಂದ!

    ಸಿನಿಮಾ ಸ್ಟೈಲ್‍ನಲ್ಲಿ ಪತ್ನಿ ಕೊಲೆಗೆ ಸ್ಕೆಚ್- ವಿಫಲವಾದ ನಂತ್ರ ಚಾಕುವಿಂದ ಇರಿದು ಕೊಂದ!

    – ಕನ್ನಡದ 2 ಸೂಪರ್ ಹಿಟ್ ಸಿನಿಮಾಗಳೇ ಪ್ರೇರಣೆ

    ಬೆಂಗಳೂರು: ಪತಿ ತನ್ನ ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಘಟನೆ ಸೆ.22ರ ಸಂಜೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

    ರೂಪಾ ಮೃತಳಾಗಿದ್ದಾಳೆ. ಈಕೆ ಪತಿ ಕಾಂತರಾಜ್ ಆರೋಪಿಯಾಗಿದ್ದಾನೆ. ಫೈನಾಶ್ಸಿಯರ್ ಆಗಿರುವ ಕಾಂತ್‍ರಾಜ್ ಪತ್ನಿಯೊಂದಿಗೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ವಾಸವಾಗಿದ್ದರು. ಆದರೆ ಕಾಂತರಾಜ್‍ಗೆ ಹೆಂಡತಿ ರೂಪಾ ಮೇಲೆ ಅನುಮಾನವಿತ್ತು. ಪತ್ನಿ ಅಪರಿಚಿತ ವ್ಯಕ್ತಿಯೊಬ್ಬನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನವಿತ್ತು. ಇದರಿಂದ ತೀವ್ರ ಖಿನ್ನೆತೆಗೆ ಒಳಗಾಗಿದ್ದ ಪತಿ ಕಾಂತರಾಜ್, ಪತ್ನಿಯನ್ನು ಹತ್ಯೆಗೈದಿದ್ದಾನೆ. ಇದನ್ನೂ ಓದಿ: 90 ವರ್ಷದ ಅಜ್ಜಿಯ ಕಾರು ಡ್ರೈವಿಂಗ್ ಶ್ಲಾಘಿಸಿದ ಮಧ್ಯಪ್ರದೇಶದ ಸಿಎಂ

    ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಕೊಲೆಗೆ ಸಂಬಂಧಿಸಿದ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಪಕ್ಕಾ ಸಿನಿಮಾ ಸ್ಟೈಲ್‍ನಲ್ಲಿ ಕೊಲೆಗೆ ಸ್ಕೆಚ್ ನಡೆದಿತ್ತು. ಹೆಂಡತಿಯ ಕೊಲೆಗೆ ಮನೆಯಲ್ಲೇ ಸ್ಕೆಚ್ ರೆಡಿಯಾಗಿತ್ತು ಅಂತ ವಿಚಾರಣೆ ನಡೆಸಿದ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.

    ಹೆಂಡತಿ ರೂಪಾಳನ್ನು ಕೊಲೆ ಮಾಡಬೇಕು ಅಂತಾ ನಿರ್ಧರಿಸಿದ್ದ ಕಾಂತರಾಜ್, ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ನೋಡಿ ಅದೇ ಶೈಲಿಯಲ್ಲಿ ಕೊಲೆಗೆ ಸ್ಕೇಚ್ ಹಾಕಿದ್ದನು. ಟ್ರಿಪ್ ಹೋಗೋಣ ಅಂತಾ ಪತ್ನಿಯೊಂದಿಗೆ ಕರಾವಳಿ ಭಾಗಕ್ಕೆ ಹೋಗಿದ್ದ. ಪ್ರಕೃತಿ ಸೌಂದರ್ಯ ತೋರಿಸುವ ನೆಪದಲ್ಲಿ ಎತ್ತರಕ್ಕೆ ಕರೆದುಕೊಂಡು ಹೋಗಿದ್ದ. ನಂತರ ಕೆಳಗೆ ತಳ್ಳಿ ಕೊಲೆ ಮಾಡಲು ಸ್ಕೇಚ್ ಹಾಕಿದ್ದ. ಆದರೆ ಇದು ಸಾಧ್ಯವಾಗಿಲ್ಲ. ಬಳಿಕ ಕಾಂತರಾಜ್, ‘ಯುಗಪುರುಷ’ ಸಿನಿಮಾದಲ್ಲಿ ಕಾರಿನಿಂದ ಡಿಕ್ಕಿ ಹೊಡೆಸಿ ಕೊಲೆ ಮಾಡುವ ದೃಶ್ಯ ನೋಡಿದ್ದ. ಅದೇ ರೀತಿ ತನ್ನ ಹೆಂಡತಿಯನ್ನು ಕಾರಿನಿಂದ ಡಿಕ್ಕಿ ಹೊಡೆಸಿ ಕೊಲೆ ಮಾಡಲು ಪ್ಲಾನ್ ಮಾಡಿದ್ದ. ಆದರೆ ಆ ಪ್ಲಾನ್ ಕೂಡ ಸಕ್ಸಸ್ ಆಗಿಲ್ಲ. ಈ ಎರಡು ಪ್ಲಾನ್‍ಗಳಲ್ಲೂ ಪತ್ನಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಳು.

    ಕೊನೆಗೆ ಕೋಪದಲ್ಲಿ ಕಾಂತರಾಜ್ ಮನೆಗೆ ಬಂದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆ ನಂತರ ಮನೆಯ ಬಾಗಿಲು ಹಾಕಿಕೊಂಡು ಗಂಡ ಎಸ್ಕೇಪ್ ಆಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಎಪಿ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವಿಚಾರಣೆ ವೇಳೆ ಸಿನಿಮಾ ರೀತಿ ಪತ್ನಿಯ ಕೊಲೆಗೆ ಸ್ಕೇಚ್ ಹಾಕಿದ್ದು ತಿಳಿದು ಬಂದಿದೆ.

  • ಸ್ನಾನ ಮಾಡಲ್ಲವೆಂದು ಪತಿ ತಲಾಖ್ ನೀಡಿದ್ದಕ್ಕೆ ಠಾಣೆ ಮೆಟ್ಟಿಲೇರಿದ ಪತ್ನಿ!

    ಸ್ನಾನ ಮಾಡಲ್ಲವೆಂದು ಪತಿ ತಲಾಖ್ ನೀಡಿದ್ದಕ್ಕೆ ಠಾಣೆ ಮೆಟ್ಟಿಲೇರಿದ ಪತ್ನಿ!

    ಲಕ್ನೋ: ತನ್ನ ಹೆಂಡತಿ ದಿನವೂ ಸ್ನಾನ ಮಾಡುವುದಿಲ್ಲ. ಸ್ವಚ್ಛತೆಯ ಬಗ್ಗೆ ಜ್ಞಾನವಿಲ್ಲದ ಆಕೆಯೊಂದಿಗೆ ಸಂಸಾರ ನಡೆಸಲು ಸಾಧ್ಯವಿಲ್ಲ ಎಂದು ತ್ರಿವಳಿ ತಲಾಖ್ ನೀಡಿರುವ ಘಟನೆ ಉತ್ತರ ಪ್ರದೇಶದ ಅಲಿಘಡದಲ್ಲಿ ಈ ಘಟನೆ ನಡೆದಿದೆ.

    ಮುಸ್ಲಿಂ ಸಮುದಾಯದ ವ್ಯಕ್ತಿಯೋರ್ವ ತನ್ನ ಹೆಂಡತಿ ದಿನವೂ ಸ್ನಾನ ಮಾಡುವುದಿಲ್ಲ. ಸ್ವಚ್ಛತೆಯ ಬಗ್ಗೆ ಜ್ಞಾನವಿಲ್ಲದ ಆಕೆಯೊಂದಿಗೆ ಸಂಸಾರ ನಡೆಸಲು ಸಾಧ್ಯವಿಲ್ಲ ಎಂದು ತ್ರಿವಳಿ ತಲಾಖ್ ನೀಡಿದ್ದಾರೆ. ತ್ರಿವಳಿ ತಲಾಖ್‍ಗೆ ನಿಷೇಧವಿದ್ದರೂ ನನಗೆ ತಲಾಖ್ ನೀಡಿದ್ದಾರೆ ಎಂದು ಆನ ಹೆಂಡತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ. ಆ ಗಂಡ-ಹೆಂಡತಿ ಇಬ್ಬರಿಗೂ ಕೌನ್ಸಿಲಿಂಗ್ ನಡೆಸಲಾಗುತ್ತಿದೆ.

    ದಿನವೂ ಸ್ನಾನ ಮಾಡುತ್ತಿಲ್ಲ ಎಂಬ ನೆಪವೊಡ್ಡಿ ಗಂಡ ತಲಾಖ್ ನೀಡಿರುವುದಾಗಿ ಮಹಿಳೆ ದೂರು ನೀಡಿದ್ದಾಳೆ. ಆ ದಂಪತಿಗೆ ನಾವೇ ಕೌನ್ಸಿಲಿಂಗ್ ಕೊಡಿಸುತ್ತಿದ್ದೇವೆ. ಅವರ ಪೋಷಕರ ಜೊತೆಯೂ ಈ ಬಗ್ಗೆ ಮಾತನಾಡಿದ್ದೇವೆ. ಆ ಮಹಿಳೆಗೆ ತನ್ನ ಗಂಡನ ಜೊತೆ ಬದುಕಬೇಕೆಂಬ ಆಸೆಯಿದೆ. ಹೀಗಾಗಿ ಅವರ ಮದುವೆಯನ್ನು ಉಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:  ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ

    2 ವರ್ಷಗಳ ಹಿಂದೆ ಕ್ವಾರ್ಸಿ ಗ್ರಾಮದ ಆ ಮಹಿಳೆ ಚಂದೌಸ್ ಗ್ರಾಮದ ಪುರುಷನೊಂದಿಗೆ ಮದುವೆಯಾಗಿದ್ದಳು. ಸಣ್ಣ ಪುಟ್ಟ ವಿಷಯಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಅವರಿಬ್ಬರಿಗೂ ಮಗು ಕೂಡ ಇದ್ದು, ವಿಚ್ಛೇದನವಾದರೆ ಆ ಮಗುವಿನ ಭವಿಷ್ಯ ಹಾಳಾಗಲಿದೆ ಎಂದು ಅವರಿಗೆ ಅರ್ಥ ಮಾಡಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೆಲವೊಮ್ಮೆ ಕೌಟುಂಬಿಕ, ಮಾನಸಿಕ, ದೈಹಿಕ ಹಿಂಸೆಗಳು ಹೆಚ್ಚಾದಾಗ ತಮಗೆ ಮುಕ್ತಿ ಕೊಡಿಸಬೇಕೆಂದು ಕಾನೂನಿನ ಮೊರೆ ಹೋಗುವುದು ಸಾಮಾನ್ಯ. ಆದರೆ ಇತ್ತೀಚೆಗೆ ಗೊರಕೆ ಹೊಡೆಯುವುದು, ಸ್ನಾನ ಮಾಡಿಲ್ಲ ಎಂದು ದಂಪತಿ ದೂರವಾಗುತ್ತಿರುವ ಘಟನೆ ನಡೆದಿದೆ.

  • ವಿಚ್ಛೇದನ ಜೀವನಾಂಶ ಹಣ ಹೊಂದಿಸಲಾಗಿಲ್ಲ ಅಂತ ಪತಿ ಆತ್ಮಹತ್ಯೆ

    ವಿಚ್ಛೇದನ ಜೀವನಾಂಶ ಹಣ ಹೊಂದಿಸಲಾಗಿಲ್ಲ ಅಂತ ಪತಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ವಿಚ್ಛೇದನದ ನಂತರ ಪತ್ನಿಗೆ ಜೀವನಾಂಶದ ಹಣ ನೀಡಲಾಗದೇ ಜೈಲಿಗೆ ಹೋಗುವ ಭಯದಿಂದ ಪತಿಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.  ಇದನ್ನೂ ಓದಿ: ಸೊಸೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಲವಂತವಾಗಿ ಕೋಳಿ ರಕ್ತ ಕುಡಿಸಿದ ಮಾವ!

    ದೊಡ್ಡಬಳ್ಳಾಪುರ ನಗರದ ಪ್ರಿಯದರ್ಶಿನಿ ಬಡವಾಣೆಯ ಅಮೀರ್(30) ಮೃತ ವ್ಯಕ್ತಿ. ಮೃತ ಅಮೀರ್ ಶಿಡ್ಲಘಟ್ಟ ಮೂಲದ ನೂರ್ ಜಾನ್ ಜೊತೆ ವಿವಾಹವಾಗಿದ್ದು, ಕೌಟುಂಬಿಕ ಕಲಹದ ಹಿನ್ನಲೆ ನ್ಯಾಯಾಲಯದ ಮೆಟ್ಟಿಲೇರಿ ವಿಚ್ಛೇದನ ಪಡೆದಿದ್ದರು. ಪತ್ನಿಗೆ 1 ಲಕ್ಷ ಜೀವನಾಂಶ ಹಣ ಪಾವತಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಆದರೆ ಅಮೀರ್  ಗೆ 1 ಲಕ್ಷ ಹಣ ಹೊಂದಿಸಲಾಗಲಿಲ್ಲ.

    ಇದರಿಂದ ಜೀವನಾಂಶದ ಹಣ ಕೊಡದಿದ್ದರೆ ಜೈಲಿಗೆ ಹೋಗುವ ಭೀತಿ ಕಾಡಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಮೀರ್‌‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಅಮೀರ್ ಸಾವನ್ನಪ್ಪಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಪೆಗಾಸಸ್ ಮೂಲಕ ಗೂಢಚರ್ಯೆ ಪ್ರಕರಣ – ತನಿಖೆಗೆ ತಜ್ಞರ ಸಮಿತಿ ರಚಿಸಲಿರುವ ಸುಪ್ರೀಂ

  • ಮನೆಯ ಹಂಚು ತೆಗೆದು ಚಿನ್ನ, ಟಿವಿ ಕದ್ದೊಯ್ದ ಖತರ್ನಾಕ್ ಕಳ್ಳರು

    ಮನೆಯ ಹಂಚು ತೆಗೆದು ಚಿನ್ನ, ಟಿವಿ ಕದ್ದೊಯ್ದ ಖತರ್ನಾಕ್ ಕಳ್ಳರು

    ಹಾಸನ: ಮನೆಯ ಹಂಚು ತೆಗೆದು ಕೆಳಗಿಳಿದ ಕಳ್ಳರು ಚಿನ್ನ ಮತ್ತು ಟಿವಿ ಕದ್ದೊಯ್ದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.  ಇದನ್ನೂ ಓದಿ: 100 ರೂ.ಗೆ ಉಗಾಂಡ ಪ್ರಜೆಗಳ ಕಿರಿಕ್ – ಕ್ಯಾಬ್ ಚಾಲಕನಿಗೆ ಅಂಗಾಂಗ ತೋರಿಸಿ ಯುವತಿಯರ ವಿಕೃತಿ

    ಬೇಲೂರು ತಾಲೂಕಿನ ಬೊಮ್ಮಡಿಹಳ್ಳಿ ಗ್ರಾಮದ ಶಿವಣ್ಣಗೌಡ ಅಂಗಡಿಯಲ್ಲಿ ಮಲಗಿದ್ದರು. ಇನ್ನೂ ಅಂಗಡಿಗೆ ಹೊಂದಿಕೊಂಡಿದ್ದ ಮನೆಯಲ್ಲಿ ಅವರ ಪತ್ನಿ ಪ್ರೇಮ(58) ಮಲಗಿಕೊಳ್ಳುತ್ತಾರೆ. ಈ ವೇಳೆ ಭಾನುವಾರ ಮಧ್ಯರಾತ್ರಿ ಸುಮಾರು 2 ಅಥವಾ 3 ಗಂಟೆಯ ಸಮಯದಲ್ಲಿ ಪ್ರೇಮ ಒಬ್ಬರೆ ಮಲಗಿದ್ದಾಗ, ಮನೆಯ ಮೇಲ್ಛಾವಣಿಯ ಹಂಚುಗಳನ್ನು ಇಳಿಸಿ ಕಳ್ಳರು ಮನೆಯೊಳಗೆ ಪ್ರವೇಶಿಸಿದ್ದಾರೆ. ಇದನ್ನೂ ಓದಿ: ನಂದಿನಿ ಹಾಲಿನ ಲಾರಿ, ಅಂಬುಲೆನ್ಸ್ ನಡುವೆ ಭೀಕರ ಅಪಘಾತ- ಉರುಳಿ ಬಿದ್ದ ಈಚರ್

    ನಂತರ ಮಲಗಿದ್ದ ಪ್ರೇಮರವರ ಕುತ್ತಿಗೆಯಲ್ಲಿದ್ದ 30 ಗ್ರಾಂ ತಾಳಿಯೊಂದಿಗಿದ್ದ ಚಿನ್ನದ ಸರ ಕಟ್ ಮಾಡಿಕೊಂಡು, ಮನೆಯಲ್ಲಿದ್ದ ಟಿವಿಯೊಂದನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಇದೀಗ ಸ್ಥಳಕ್ಕೆ ಬೇಲೂರು ಪೊಲೀಸರು ಆಗಮಿಸಿ ಪರಿಶೀಲಿಸುತ್ತಿದ್ದಾರೆ.  ಇದನ್ನೂ ಓದಿ: ಬಾಳೆಹಣ್ಣು ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಲಾಭಗಳೆನು ಗೊತ್ತಾ?

  • ಅತ್ತೆ ಮಗನ ಮೆಸೇಜ್‍ನಿಂದ ಆರಂಭವಾದ ಕಲಹ – ದಂಪತಿ ಆತ್ಮಹತ್ಯೆಯಲ್ಲಿ ಅಂತ್ಯ

    ಅತ್ತೆ ಮಗನ ಮೆಸೇಜ್‍ನಿಂದ ಆರಂಭವಾದ ಕಲಹ – ದಂಪತಿ ಆತ್ಮಹತ್ಯೆಯಲ್ಲಿ ಅಂತ್ಯ

    ಚಿತ್ರದುರ್ಗ: ಅತ್ತೆ ಮಗನೋರ್ವ ವಿವಾಹಿತ ಮಹಿಳೆಗೆ ಮೊಬೈಲ್ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಆರಂಭವಾದ ಕೌಟಂಬಿಕ ಕಲಹ, ದಂಪತಿಯ ಆತ್ಮಹತ್ಯೆಯಿಂದ ಅಂತ್ಯವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನಯಾದಲಗಟ್ಟ ಗ್ರಾಮದಲ್ಲಿ ನಡೆದಿದೆ.

    ಯಾದಲಗಟ್ಟೆ ಗ್ರಾಮದಲ್ಲಿ ಪತ್ನಿ ಶೈಲ ಮತ್ತು ಪತಿ ಮಹಂತೇಶ್ ಇಬ್ಬರು 9 ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಗೆ 4 ವರ್ಷದ ಹಾಗೂ 6 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ಕಳೆದ ಆರೇಳು ತಿಂಗಳಿಂದ ಶೈಲ ಅವರ ಮೊಬೈಲ್ ಗೆ ಪತಿ ಕರೆ ಮಾಡಿದಾಗ ಅವರ ಮೊಬೈಲ್ ಸದಾ ಎಂಗೇಜ್ ಬರುತ್ತಿತ್ತು. ಅಲ್ಲದೇ ಪ್ರತಿದಿನ ಸಾಕಷ್ಟು ಮೆಸೇಜ್ ಗಳು ಸಹ ಶೈಲ ಅವರ ಮೊಬೈಲ್ ಗೆ ಬರುತ್ತಿದ್ದವಂತೆ. ಹೀಗಾಗಿ ಮೊಬೈಲ್ ಗಮನಿಸಿದ ಪತಿ ಮಹಂತೇಶ್, ಪತ್ನಿ ಶೈಲ ಜೊತೆ ಜಗಳವಾಡಿದ್ದಾನೆ. ಅಲ್ಲದೆ ಪತ್ನಿಗೆ ಎಚ್ಚರಿಕೆ ನೀಡಿದ್ದನು. ಬಳಿಕ ಎಲ್ಲಾ ವಿಚಾರದಲ್ಲೂ ಅನುಮಾನಿಸುತ್ತಿದ್ದನು. ಇದನ್ನೂ ಓದಿ: ಮಹಿಳೆಯನ್ನು ನಗ್ನ ಮಾಡಿ ಪೈಶಾಚಿಕ ಹಲ್ಲೆ ನಡೆಸಿದ ಕಿರಾತಕರು

    ಗಂಡನ ಅನುಮಾನ ಹಾಗೂ ಗಲಭೆಯಿಂದ ಮನನೊಂದ ಪತ್ನಿ ಶೈಲ ಭಾನುವಾರ ರಾತ್ರಿ ನೇಣಿಗೆ ಶರಣಾಗಿದ್ದಾಳೆ. ಆಗ ಪತ್ನಿಯ ಸಾವಿನಿಂದ ಮನನೊಂದ ಪತಿ ಮಹಂತೇಶ್ ಕೂಡ ಗಾಬರಿಯಾಗಿ ಸೋಮವಾರ ಬೆಳಗ್ಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಇದಿರಿಂದಾಗಿ ಏನು ಅರಿಯದ ಕಂದಮ್ಮಗಳು ಅನಾಥರಾಗಿದ್ದಾರೆ.

    ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಎಸ್ಪಿ ಜಿ.ರಾಧಿಕಾ ತಿಳಿಸಿದ್ದಾರೆ. ಇದನ್ನೂ ಓದಿ: ಯಾದಗರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿದ ನಾಲ್ವರು ಅರೆಸ್ಟ್

  • ಪೆಟ್ರೋಲ್ ಸುರಿದು ಪತಿಯನ್ನು ಹತ್ಯೆಗೈದು ಚರಂಡಿಗೆ ಶವ ಎಸೆದ್ಳು

    ಪೆಟ್ರೋಲ್ ಸುರಿದು ಪತಿಯನ್ನು ಹತ್ಯೆಗೈದು ಚರಂಡಿಗೆ ಶವ ಎಸೆದ್ಳು

    ತುಮಕೂರು: ಮಹಿಳೆಯೊಬ್ಬರು ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಕೊಂದು ಶವವನ್ನು ಚರಂಡಿಗೆ ಎಸೆದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.

    ನಾರಾಯಣ್(52) ಮೃತ ದುರ್ದೈವಿ. ನಾರಾಯಣ್ ಪತ್ನಿ ಅನ್ನಪೂರ್ಣ ಈ ಗಂಭೀರ ಕೊಲೆ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಮೋದಿ ಸರ್ಕಾರದಿಂದ ಲವ್ ಲೆಟರ್ ಬಂದಿದೆ – ಆಪ್ ನಾಯಕ

    ಅನ್ನಪೂರ್ಣ ಅವರಿಗೆ ಅಕ್ರಮ ಸಂಬಂಧ ಇತ್ತು. ಇದೇ ವಿಚಾರಕ್ಕೆ ನಾರಾಯಣ್ ಮತ್ತು ಅನ್ನಪೂರ್ಣ ಅವರ ನಡುವೆ ಪ್ರತಿನಿತ್ಯ ಜಗಳ ಆಗುತ್ತಲೇ ಇತ್ತು. ಅನ್ನಪೂರ್ಣ ಇದೇ ವಿಚಾರಕ್ಕೆ ಗಂಡನನ್ನು ಹತ್ಯೆ ಮಾಡಿದ್ದಾಳೆ ಎಂಬ ಆರೋಪ ಬಂದಿದೆ.  ಇದನ್ನೂ ಓದಿ: ವೈಟ್ ಬೋರ್ಡ್ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸೋದು ಅಕ್ಷಮ್ಯ ಅಪರಾಧ: ಸುಧಾಕರ್

    ಮೃತ ನಾರಾಯಣ್ ನೆಲಮಂಗಲ ಬಳಿಯ ಟೋಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ತುಮಕೂರು ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನ್ನಪೂರ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.