Tag: ಪತಿ

  • ನೀನು ನನ್ನ ಪತ್ನಿಯಲ್ಲ, ಅಮ್ಮ- ಮಾವನಿಂದ ರೇಪ್‍ಗೊಳಗಾದ ಪತ್ನಿಯನ್ನು ಹೊರಗಾಕಿದ ಪತಿ!

    ನೀನು ನನ್ನ ಪತ್ನಿಯಲ್ಲ, ಅಮ್ಮ- ಮಾವನಿಂದ ರೇಪ್‍ಗೊಳಗಾದ ಪತ್ನಿಯನ್ನು ಹೊರಗಾಕಿದ ಪತಿ!

    ಲಕ್ನೋ: ಸೊಸೆಯ ಮೇಲೆ ಮಾವನೇ (Father In  Law) ಅತ್ಯಾಚಾರ ಎಸಗುತ್ತಾನೆ. ಈ ವಿಚಾರ ತಿಳಿದ ಪತಿ, ನೀನು ನನಗೆ ಪತ್ನಿ ಅಲ್ಲ, ಅಮ್ಮ ಎಂದು ಹೇಳಿ ಆಕೆಯನ್ನು ಮನೆಯಿಂದ ಹೊರಗಡೆ ಹಾಕಿದ ಪ್ರಸಂಗವೊಂದು ಉತ್ತರಪ್ರದೇಶದಲ್ಲಿ (UttarPradesh) ನಡೆದಿದೆ.

    ಈ ಘಟನೆ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ. 26 ವರ್ಷದ ತನ್ನ ಪತ್ನಿಯನ್ನು ಹೊರಗೆ ಹಾಕುವ ವೇಳೆ, ನನ್ನ ತಂದೆ ನಿನ್ನೊಂದಿಗೆ ಬಲವಂತವಾಗಿ ಸಂಬಂಧವನ್ನು ಹೊಂದಿದ್ದರಿಂದ ನೀನು ನನ್ನ ತಂದೆಯ ಪತ್ನಿಯಾಗಿರುತ್ತಿ ಮತ್ತು ನನ್ನ ‘ಅಮ್ಮಿ’ (ತಾಯಿ) ಆಗಿರುವುದರಿಂದ ನಿನ್ನನ್ನು ನನ್ನೊಂದಿಗೆ ಇರಲು ಬಿಡುವುದಿಲ್ಲ ಎಂದು ಹೇಳಿದ್ದಾನೆ.

    ಈ ಸಂಬಂಧ ಮಹಿಳೆ ಸೆಪ್ಟೆಂಬರ್ 7 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ತನಗೆ ಕಳೆದ ವರ್ಷ ಮದುವೆಯಾಗಿದೆ. ಆದರೆ ಆಗಸ್ಟ್ 5ರಂದು ಪತಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಮಾವ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಹೆಂಡ್ತಿ ಕಾಟ- ಅಣ್ಣನಿಗೆ ಆಡಿಯೋ ಮೆಸೇಜ್ ಮಾಡಿ Metro ಎಂಜಿನಿಯರ್ ಸೂಸೈಡ್

    ಅತ್ತೆಯನ್ನು ನನ್ನ ಪತಿ ಔಷಧಿಗೆಂದು ಹೊರಗಡೆ ಕರೆದುಕೊಂಡು ಹೋಗಿದ್ದರು. ಇದೇ ಸಮಯವನ್ನು ಸದುಪಯೋಗ ಪಡಿಸಿಕೊಂಡ ಮಾವ ನನ್ನ ಮೇಲೆ ರೇಪ್ ಮಾಡಿದ್ದಾರೆ. ಅಲ್ಲದೆ ಈ ಬಗ್ಗೆ ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿ, ನನಗೆ ಥಳಿಸಿದ್ದಾರೆ. ಇನ್ನು ಈ ವಿಚಾರವನ್ನು ಪತಿ ಬಳಿ ವಿವರಿಸಿದೆ. ಆದರೆ ಅವರು ಸಿಟ್ಟಿಗೆದ್ದು, ನೀನು ನನಗೆ ಅಮ್ಮನಾಗುತ್ತೀಯಾ.. ಪತ್ನಿ ಅಲ್ಲ ಎಂದು ಹೇಳಿ ಮನೆಯಿಂದ ಹೊರಗಡೆ ಹಾಕಿದ್ದಾರೆ. ಸದ್ಯ ಪೋಷಕರ ಜೊತೆ ವಾಸವಾಗಿರುವುದಾಗಿ ಮಹಿಳೆ ತಿಳಿಸಿದ್ದಾಳೆ.

    ಮಹಿಳೆ ಈಗಾಗಲೇ 7 ತಿಂಗಳ ಗರ್ಭಿಣಿಯಾಗಿದ್ದಾಳೆ. ಆದರೆ ಈ ವಿಚಾರವನ್ನು ಆಕೆ ದೂರಿನಲ್ಲಿ ತಿಳಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಮಹಿಳೆಯ ದೂರಿನಂತೆ ಪೊಲೀಸರು ಐಪಿಸಿ ಸೆಕ್ಷನ್ 376 (ಲೈಂಗಿಕ ದೌರ್ಜನ್ಯ), 323 (ಉದ್ದೇಶಪೂರ್ವಕವಾಗಿ ಘಾಸಿ) ಮತ್ತು 506 (ಬೆದರಿಕೆ) ಅಡಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

    ಇತ್ತ ಸೊಸೆ ಮಾಡಿರುವ ಆರೋಪಗಳನ್ನು ತಳ್ಳಿ ಹಾಕಿರುವ ಮಾವ, ಹಣದ ಲಾಭಕ್ಕಾಗಿ ಅವರು ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತಿಯಿಂದ್ಲೇ ಸುಪ್ರೀಂಕೋರ್ಟ್ ವಕೀಲೆಯ ಬರ್ಬರ ಹತ್ಯೆ

    ಪತಿಯಿಂದ್ಲೇ ಸುಪ್ರೀಂಕೋರ್ಟ್ ವಕೀಲೆಯ ಬರ್ಬರ ಹತ್ಯೆ

    ನವದೆಹಲಿ: ಸುಪ್ರೀಂಕೋರ್ಟ್ (SupremeCourt) ವಕೀಲೆಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿ ಅಜಯ್ ನಾಥ್ ಎಂಬವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಆರೋಪಿಯ ಪತ್ನಿ ರೇಣು ಸಿನ್ಹಾ (61) ಎಂದು ಗುರುತಿಸಲಾಗಿದೆ.

    ರೇಣು ಸಿನ್ಹಾ (Renu Sinha) ತನ್ನ ಸಹೋದರನ ಕರೆಗಳಿಗೆ ಸ್ಪಂದಿಸದ ಹಿನ್ನೆಲೆ ಆತಂಕಗೊಡು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ತನಿಖೆ ಆರಂಭಿಸಿದ ಪೊಲೀಸರು, ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಬಂಗಲೆಯಲ್ಲಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಪೊಲೀಸ್ ಮಾಹಿತಿ ಪ್ರಕಾರ, ಬಂಗಲೆಯನ್ನು ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಪ್ರವೇಶ ಮಾಡಿದಾಗ ರೇಣು ಸಿನ್ಹಾ ಶವ ಬಾತ್ ರೂಂನಲ್ಲಿ ಬಿದ್ದಿತ್ತು. ಹತ್ಯೆ ಮಾಡಿದ ಆರೋಪಿ ಅಜಯ್ ನಾಥ್ ಬಂಗಲೆಯ ಸ್ಟೋರ್ ರೂಂನಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಅವರನ್ನು ಬಂಧಿಸಲಾಗಿದೆ. ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಸಹೋದರ ಬಹಿರಂಗಪಡಿಸಿದ್ದಾನೆ. ಇದನ್ನೂ ಓದಿ: ಮಾಲಿನ್ಯ ನಿಯಂತ್ರಣಕ್ಕೆ ಪಟಾಕಿ ನಿಷೇಧಿಸಿದ ದೆಹಲಿ ಸರ್ಕಾರ

    ತಮ್ಮ ಬಂಗಲೆಯನ್ನು 4 ಕೋಟಿ ರೂಪಾಯಿಗೆ ಮಾರಾಟ ಮಾಡಲು ಯೋಜಿಸಿದ್ದರು ಮತ್ತು ಮುಂಗಡವನ್ನೂ ತೆಗೆದುಕೊಂಡಿದ್ದರು ಎಂದು ಒಪ್ಪಿಕೊಂಡರು. ಆದರೆ ತಮ್ಮ ನಿರ್ಧಾರಕ್ಕೆ ಪತ್ನಿ ವಿರುದ್ಧವಾಗಿದ್ದರು. ಮೃತ ವಕೀಲರು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು ಮತ್ತು ಇತ್ತೀಚೆಗಷ್ಟೇ ಒಂದು ತಿಂಗಳ ಹಿಂದೆ, ಕ್ಯಾನ್ಸರ್ ಮುಕ್ತವಾಗಿದ್ದರು ಎಂದು ವಿಚಾರಣೆ ವೇಳೆ ಅಜಯ್ ನಾಥ್ ಹೇಳಿದ್ದಾರೆ.

    ಪ್ರಾಥಮಿಕ ತನಿಖೆಯ ವೇಳೆ ಅತಿಯಾದ ರಕ್ತ ಸೋರಿಕೆಯಿಂದ ರೇಣು ಸಾವನ್ನಪ್ಪಿರಬಹುದು ಎಂದು ತಿಳಿದು ಬಂದಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಪೊಲೀಸರು ಅಪರಾಧ ನಡೆದ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಿದ್ದಾರೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಪೇಚಿಗೆ ಸಿಲುಕಿದ ಪತ್ನಿ!

    ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಪೇಚಿಗೆ ಸಿಲುಕಿದ ಪತ್ನಿ!

    ಬೆಂಗಳೂರು: ಪತಿಗೆ ಬುದ್ಧಿ ಕಲಿಸಲು ಹೋಗಿ ಪತ್ನಿ ಪೇಚಿಗೆ ಸಿಲುಕಿದ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಪತಿಗೆ ಬುದ್ಧಿ ಕಲಿಸಲೆಂದು ಪತ್ನಿಯು ತನ್ನ ಚಿನ್ನವನ್ನ ಸ್ನೇಹಿತನಿಂದ ಕಳವು ಮಾಡಿಸಿ ನಾಟಕ ಮಾಡಿದ್ದಾಳೆ. ಬಳಿಕ ತಾನೇ ಠಾಣೆಗೆ ತೆರಳಿ ಚಿನ್ನ ಕಳೆದು ಹೋಗಿರುವ ಬಗ್ಗೆ ದೂರು ನೀಡಿದ್ದಾಳೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಾಗ ಮಹಿಳೆಯ ಅಸಲಿ ಕಹಾನಿ ಬಯಲಾಗಿದೆ.

    ಏನಿದು ಘಟನೆ..?: ಪತ್ನಿಯು ಬ್ಯಾಂಕ್‍ನಿಂದ (Bank) ಚಿನ್ನವನ್ನ ಬಿಡಿಸಿಕೊಂಡು ಬಂದಿದ್ದಾಳೆ. ಈ ಚಿನ್ನವನ್ನು ಸ್ಕೂಟಿಯ ಫೂಟ್ ಮ್ಯಾಟ್‍ನಲ್ಲಿ ಇರಿಸಿದ್ದಾಳೆ. ಅಲ್ಲದೆ ಸ್ಕೂಟಿಯನ್ನು ಒಂದು ಕಡೆ ಇಟ್ಟು ತನ್ನ ಸ್ನೇಹಿತನಿಗೆ ಕರೆ ಮಾಡಿದ್ದಾಳೆ. ಅಂತೆಯೇ ಸ್ಥಳಕ್ಕೆ ಬಂದ ಸ್ನೇಹಿತ ಅಲ್ಲಿಂದ ಸ್ಕೂಟಿಯನ್ನ ತೆಗೆದುಕೊಂಡು ಹೋಗಿದ್ದಾನೆ.

    ಇತ್ತ ಇಷ್ಟೆಲ್ಲಾ ಆದ ಬಳಿಕ ಚಿನ್ನ (Gold) ಕಳ್ಳತನವಾಗಿರುವ ಬಗ್ಗೆ ಪತ್ನಿ ಠಾಣೆಗೆ ದೂರು ಕೊಟ್ಟಿದ್ದಾಳೆ. ಪೊಲೀಸರು ತನಿಖೆ ಮಾಡಿದಾಗ ಧನರಾಜ್ ಬೈಕ್ ತೆಗೆದುಕೊಂಡು ಹೋಗಿರೋದು ಬೆಳಕಿಗೆ ಬಂದಿದೆ. ಅತನ ನಂಬರ್ ಪರಿಶೀಲನೆ ಮಾಡಿದಾಗ ಈಕೆಯ ಜೊತೆ ಮೊಬೈಲ್ ನಲ್ಲಿ ಮಾತಾಡಿರೋದು ಕೂಡ ಬಯಲಾಗಿದೆ. ಇಬ್ಬರನ್ನ ಕರೆದು ವಿಚಾರಣೆ ಮಾಡಿದಾಗ ಗಂಡನಿಗೆ ಬುದ್ಧಿ ಕಲಿಸಲು ಮಾಡಿದ್ದಾಗಿ ಹೇಳಿದ್ದಾರೆ. ಇದನ್ನೂ ಓದಿ: ಯಾರನ್ನು ಬೆಳೆಸಿದ್ದೇನೋ ಅವರೇ ಮೋಸ ಮಾಡಿದ್ರು: ಜನಾರ್ದನ ರೆಡ್ಡಿ ಗುಡುಗು

    ಸದ್ಯ ಅವಳದ್ದೇ ಚಿನ್ನವಾಗಿರೋದ್ರಿಂದ ಪೊಲೀಸರು ಕಾನೂನು ಸಲಹೆಗೆ ಮುಂದಾಗಿದ್ದಾರೆ. ಈ ಸಂಬಂಧ ಮಲ್ಲೆಶ್ವರಂ ಪೊಲೀಸ್ ಠಾಣೆಯಲ್ಲಿ (Malleshwaram Police Station) ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೊಂದು ಪ್ರೇಮ ಕಥನ- ಪತಿ ಭೇಟಿಯಾಗಲು ಭಾರತಕ್ಕೆ ಬಂದ ಬಾಂಗ್ಲಾ ಮಹಿಳೆಗೆ ಶಾಕ್!

    ಮತ್ತೊಂದು ಪ್ರೇಮ ಕಥನ- ಪತಿ ಭೇಟಿಯಾಗಲು ಭಾರತಕ್ಕೆ ಬಂದ ಬಾಂಗ್ಲಾ ಮಹಿಳೆಗೆ ಶಾಕ್!

    ನೋಯ್ಡಾ: ಇತ್ತೀಚೆಗೆ ಗಡಿಯಾಚೆಯ ಪ್ರೇಮ ಕಥನಗಳು ಹೆಚ್ಚಾಗುತ್ತಿದೆ. ಸಾಮಾಜಿಕ ಜಾಲತಾಣಗಳ (Social Media) ಮೂಲಕ ಪರಿಚಯವಾಗಿ ನಂತರ ಗಡಿ ದಾಟಿ ಬಂದು ಪ್ರೀತಿಸಿದವನ ಕೈಹಿಡಯುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿದೆ. ಈ ಲಿಸ್ಟ್ ಗೆ ಇದೀಗ ಮತ್ತೊಂದು ಸ್ಟೋರಿ ಸೇರಿಕೊಂಡಿದೆ.

    ಹೌದು. ಬಾಂಗ್ಲಾದೇಶದ (Bangladesh) ಮಹಿಳೆಯೊಬ್ಬರು ತನ್ನ 1 ವರ್ಷದ ಪುಟ್ಟ ಕಂದಮ್ಮನೊಂದಿಗೆ ಗಡಿ ದಾಟಿ ಭಾರತಕ್ಕೆ ಬಂದಿದ್ದಾರೆ. ಆದರೆ ಇಲ್ಲಿ ಬಂದು ನೋಡಿದಾಗ ಪತಿಯ ಸ್ಟೋರಿ ಕೇಳಿ ಆಕೆ ಕಂಗಾಲಾಗಿದ್ದಾರೆ. ಈ ಬಗ್ಗೆ ಮಹಿಳೆಯ 20 ಸೆಕೆಂಡ್ ಗಳ ವೀಡಿಯೋ ಮಾಡಿದ್ದು, ಇದರಲ್ಲಿ ತನ್ನ ಅಳಲು ತೋಡಿಕೊಂಡಿದ್ದಾರೆ.

    ಏನಿದು ಪ್ರಕರಣ..?: ಬಾಂಗ್ಲಾ ಮಹಿಳೆಯು ಭಾರತ ಮೂಲದ ಸೌರಭ್ ಕಾಂತ್ ತಿವಾರಿ ಎಂಬಾತನನ್ನು ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದಾರೆ. ಆದರೆ ಮದುವೆಯಾಗಿ ಜೊತೆಗಿದ್ದ ಕೆಲ ತಿಂಗಳ ನಂತರ ಪತಿ ಸೌರಭ ಭಾರತಕ್ಕೆ ಮರಳಿದ್ದು, ಬಳಿಕ ವಾಪಸ್ ಆಗಿಲ್ಲ. ಹೀಗಾಗಿ ನಾನು ಪತಿಯನ್ನು ಹುಡುಕಿಕೊಂಡು ಭಾರತಕ್ಕೆ ಬಂದಿದ್ದೇನೆ ಎಂದು ಮಹಿಳೆ ವೀಡಿಯೋದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ:‌ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ ಭಾರತದಲ್ಲೇ ಇರಲು ಅವಕಾಶ ಕೊಡಿ – ರಾಷ್ಟ್ರಪತಿಗೆ ಸೀಮಾ ಹೈದರ್‌ ಪತ್ರ

    ಮಹಿಳೆಯ ದೂರಿನಲ್ಲೇನಿದೆ..?: ಮಹಿಳೆಯು ಇದೀಗ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಸಿಪಿ ಮಹಿಳಾ ಭದ್ರತಾ ಸಿಬ್ಬಂದಿ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ದೂರಿನಲ್ಲಿ ಬಾಂಗ್ಲಾದೇಶದ ಢಾಕಾದ ಮಹಿಳೆಯೊಬ್ಬರು ಸೌರಭ್ ಕಾಂತ್ ತಿವಾರಿ ಎಂಬ ಯುವಕ ತನ್ನನ್ನು 14 ಏಪ್ರಿಲ್ 2021ರಂದು ಬಾಂಗ್ಲಾದೇಶದಲ್ಲಿ ವಿವಾಹವಾಗಿದ್ದರು ಎಂದು ಹೇಳಿದ್ದಾರೆ. ಈಗ ಸೌರಭ್ ಕಾಂತ್ ಅವರನ್ನು ಬಿಟ್ಟು ಭಾರತಕ್ಕೆ ವಾಪಸ್ ಆಗಿದ್ದಾರೆ. ಈ ನಡುವೆ ಮಹಿಳೆ ಮತ್ತು ಸೌರಭ್ ಗೆ ಒಬ್ಬ ಮಗ ಕೂಡ ಇದ್ದಾನೆ. ಆದರೆ ಸೌರಭ್ ಈಗಾಗಲೇ ಮದುವೆಯಾಗಿದ್ದು, ಈ ವಿಚಾರವನ್ನು ತನ್ನಿಂದ ಮುಚ್ಚಿಟ್ಟಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಸದ್ಯ ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟಿಕ್‌ಟಾಕ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು – ಪ್ರೀತಿಸಿ ಮದ್ವೆಯಾಗಿದ್ದ ಮಡದಿಯನ್ನೇ ಕೊಂದ ಪತಿ

    ಟಿಕ್‌ಟಾಕ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು – ಪ್ರೀತಿಸಿ ಮದ್ವೆಯಾಗಿದ್ದ ಮಡದಿಯನ್ನೇ ಕೊಂದ ಪತಿ

    -ಶವ ಸಾಗಿಸಲು ಅಳಿಯನಿಗೆ ಮಾವನಿಂದಲೇ ಸಾಥ್

    ಮಂಡ್ಯ: ಪರಪುರುಷರೊಂದಿಗೆ ಅನೈತಿಕ ಸಂಬಂಧ (Immoral Relationship) ಹೊಂದಿರುವ ಶಂಕೆಯ ಮೇಲೆ ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನೇ (Wife) ಗಂಡ (Husband) ಕೊಲೆ ಮಾಡಿದ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಮಂಡ್ಯಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಪೂಜಾ (26) ಪತಿಯಿಂದ ಕೊಲೆಯಾದ ಮಹಿಳೆಯಾಗಿದ್ದು, ಶ್ರೀನಾಥ್ (33) ವೇಲ್‌ನಿಂದ ತನ್ನ ಪತ್ನಿಯ ಕುತ್ತಿಗೆ ಬಿಗಿದು ಕೊಲೆಗೈದಿದ್ದಾನೆ. ಪೂಜಾ ಹಾಗೂ ಶ್ರೀನಾಥ್ 9 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿಗೆ ಒಂದು ಹೆಣ್ಣುಮಗು ಇದೆ. ಕಳೆದ ಕೆಲವು ವರ್ಷಗಳಿಂದ ಪೂಜಾ ಟಿಕ್‌ಟಾಕ್ (TikTok) ಗೀಳು ಬೆಳೆಸಿಕೊಂಡಿದ್ದಳು. ರೀಲ್ಸ್ (Reels) ಮಾಡುವ ಜೊತೆಗೆ ಸ್ನೇಹಿತರೊಂದಿಗೆ ಚಾಟಿಂಗ್ ಹುಚ್ಚನ್ನೂ ಬೆಳೆಸಿಕೊಂಡಿದ್ದಳು. ಅತಿಯಾದ ಮೊಬೈಲ್ ಬಳಕೆಯಿಂದಾಗಿ ಗಂಡನಿಗೆ ಅನುಮಾನ ಶುರುವಾಗಿದ್ದು, ದಂಪತಿ ಮಧ್ಯೆ ಪದೇ ಪದೇ ಜಳವಾಗುತ್ತಿತ್ತು. ಇದನ್ನೂ ಓದಿ: ಟಿವಿ ನೋಡ್ತಿದ್ದ ವೇಳೆ ಹೃದಯಾಘಾತದಿಂದ ಉಪನ್ಯಾಸಕ ಸಾವು

    ಪರಪುಷರೊಂದಿಗೆ ಸಂಬಂಧದ ಶಂಕೆಯಿಂದ ಜಗಳ ತೆಗೆಯುತ್ತಿದ್ದ ಶ್ರೀನಾಥ್ ಪೂಜಾಳ ಕುತ್ತಿಗೆಗೆ ವೇಲ್‌ನಿಂದ ಬಿಗಿದು ಹತ್ಯೆಮಾಡಿದ್ದಾನೆ. ಕೊಲೆಗೈದ ಬಳಿಕ ಶ್ರೀನಾಥ್ ಮಾವ ಶೇಖರ್‌ಗೆ ಕರೆ ಮಾಡಿ ಕೊಲೆ ಮಾಡಿರುವುದಾಗಿ ಹೇಳಿದ್ದು, ಮಗಳ ಹತ್ಯೆಯ ಬಗ್ಗೆ ತಿಳಿದರೂ ಮಾವ ಪೊಲೀಸರಿಗೆ ಹೇಳದೆ ಅಳಿಯನಿಗೆ ಸಾಥ್ ನೀಡಿದ್ದಾರೆ. ಪೂಜಾಳ ತಂದೆ ಅಳಿಯನೊಂದಿಗೆ ಸೇರಿ ಆಕೆಯ ಮೃತದೇಹವನ್ನು ಮನೆಯಿಂದ ಬೈಕ್‌ನಲ್ಲಿ ಸಾಗಿಸಿ ಬಳಿಕ ಮೃತದೇಹಕ್ಕೆ ಭಾರವಾದ ಕಲ್ಲನ್ನು ಕಟ್ಟಿ ಕಾವೇರಿ ನದಿಗೆ (Kaveri River) ಎಸೆದಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆಯರ ಅಶ್ಲೀಲ ವೀಡಿಯೋ ಅಪ್ಲೋಡ್ – ಆರೋಪಿ ಅರೆಸ್ಟ್

    ಪತ್ನಿಯನ್ನು ಕೊಲೆಗೈದು ಶ್ರೀನಾಥ್ ಮನೆಯಲ್ಲಿಯೇ ಇದ್ದ. ಮಗಳ ಶವವನ್ನು ನದಿಗೆಸೆದ ಬಳಿಕ ಮಾವ ರಾಜಶೇಖರ್ ಹೊಟೇಲ್ ಕೆಲಸದಲ್ಲಿ ತೊಡಗಿದ್ದ. ಶ್ರೀನಾಥ್ ನಿಮಿಷಾಂಬ ದೇವಸ್ಥಾನಕ್ಕೆ ಹೋಗಿಬರುವುದಾಗಿ ತೆರಳಿದ್ದು, ದೇವರ ದರ್ಶನದ ಬಳಿಕ ಪೊಲೀಸರಿಗೆ ಕರೆ ಮಾಡಿ ಶರಣಾಗಿದ್ದಾನೆ. ಅಲ್ಲದೇ ಶವ ಸಾಗಿಸಲು ಸಾಥ್ ನೀಡಿದ ಮಾವನ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಸದ್ಯ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅರಕೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಪಾರ್ಟ್‍ಮೆಂಟ್ ಹೊರಗೆ ನಡೆದುಕೊಂಡು ಹೋಗ್ತಿದ್ದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹನಿಮೂನ್‍ಗೆ ಬಂದು ಪತಿಯನ್ನು ಹೋಟೆಲ್‍ನಲ್ಲೇ ಬಿಟ್ಟು ಹೋದ ಪತ್ನಿ!

    ಹನಿಮೂನ್‍ಗೆ ಬಂದು ಪತಿಯನ್ನು ಹೋಟೆಲ್‍ನಲ್ಲೇ ಬಿಟ್ಟು ಹೋದ ಪತ್ನಿ!

    ಜೈಪುರ: ಹೊಸದಾಗಿ ಮದುವೆಯಾದ ಜೋಡಿಯೊಂದು ಹನಿಮೂನ್ (Honeymoon) ಬಂದು, ಪತಿಯನ್ನು ಹೋಟೆಲ್‍ನಲ್ಲಿಯೇ ಪತ್ನಿ ಬಿಟ್ಟು ಹೋಗಿರುವ ಅಚ್ಚರಿಯ ಪ್ರಕರಣವೊಂದು ರಾಜಸ್ಥಾನದ ಜೈಪುರದಿಂದ ಬೆಳಕಿಗೆ ಬಂದಿದೆ.

    ಪತಿಯೊಂದಿಗೆ ಹೋಟೆಲ್ (Hotel) ವಿಚಾರವಾಗಿ ಈಕೆ ಪತಿ ಜೊತೆ ಮುನಿಸಿಕೊಂಡಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ರಿಂಗಾಸ್‍ನಲ್ಲಿರುವ ಬಾಬಾ ಖತುಶ್ಯಾಮ್ ಜಿ ದೇವಸ್ಥಾನಕ್ಕೆ ಭೇಟಿ ನೀಡಲೆಂದು ವಾಹನ ಬುಕ್ ಮಾಡಲು ಪತಿ ಹೋದಾಗ ಆತನನ್ನು ಕೋಪದಿಂದ ಪತ್ನಿ ಬಿಟ್ಟು ಹೋಗಿದ್ದಾಳೆ.

    ಮಧ್ಯಪ್ರದೇಶದ (Madhyapradesh) ಭೋಪಾಲ್ ಮೂಲದ ದಂಪತಿ ಜುಲೈ 29 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಬಳಿಕ ಹನುಮೂನಿಗೆಂದು ಆಗಸ್ಟ್ 5 ರಂದು ಜೈಪುರಕ್ಕೆ ಬಂದಿದ್ದು, ಚೌಮು ಪುಲಿಯಾ ಸಮೀಪದ ಹೋಟೆಲ್‍ನಲ್ಲಿ ತಂಗಿದ್ದರು. ಮರುದಿನ ಬೆಳಗ್ಗೆ ದಂಪತಿ ಜೈಪುರ ಸುತ್ತಾಡಿ ನಂತರ ಅಮೇರ್ ಫೋರ್ಟ್‍ಗೆ ಭೇಟಿ ನೀಡಿದರು.

    ಸಂಜೆ 3 ಗಂಟೆ ಸುಮಾರಿಗೆ ಹೋಟೆಲ್‍ಗೆ ಹಿಂದಿರುಗಿದರು. ಇದಾದ ಬಳಿಕ ಅವರು ಬಾಬಾ ಖತುಶ್ಯಾಮ್ ಜಿ ದೇವಸ್ಥಾನಕ್ಕೆ ಭೇಟಿ ನೀಡಲು ಯೋಜಿಸಿದ್ದರು. ಅಂತೆಯೇ ಪತಿ ವಾಹನ ಬುಕ್ ಮಾಡಲು ತೆರಳಿದರು. ಹೀಗೆ ಹೋದವನು ವಾಪಸ್ ರೂಮಿಗೆ ಬರುವಾಗ ಪತ್ನಿ ತನ್ನ ಲಗೇಜ್‍ನೊಂದಿಗೆ ಕಾಣೆಯಾಗಿದ್ದಳು. ಇದನ್ನು ಕಂಡ ಪತಿ ದಿಗ್ಭ್ರಮೆಗೊಂಡನು. ಇದನ್ನೂ ಓದಿ: ಪೈಗಂಬರ್ ಬಗ್ಗೆ ಅವಹೇಳನ ಮಾಡಿದವರ ತಲೆ ತೆಗೆಯಿರಿ – ಪೋಸ್ಟ್ ಹಾಕಿದ ಯುವಕರು ಅರೆಸ್ಟ್

    ಆಕೆಗಾಗಿ ಇಡೀ ಹೋಟೆಲ್‍ನಲ್ಲಿ ಹುಡುಕಾಟ ನಡೆಸಿದನು. ಎಲ್ಲಯೂ ಸಿಗದೇ ಇದ್ದಾಗ ಆಕೆಯ ಮೊಬೈಲ್ ನಂಬರಿಗೆ ಕರೆ ಮಾಡಿದ್ದಾನೆ. ಆದರೆ ಆಕೆ ಕರೆ ಸ್ವೀಕರಿಸುತ್ತಿರಲಿಲ್ಲ. ಬಳಿಕ ಅವರು ಹೋಟೆಲ್‍ನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಆಕೆ ಫೋನ್‍ನಲ್ಲಿ ಮಾತನಾಡುತ್ತಾ ಹೋಟೆಲ್‍ನಿಂದ ಹೊರಟು ಹೋಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪತಿ ಝೋತ್ವಾರಾ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆಯಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

    ಈ ಸಂಬಂಧ ಅಲ್ಲಿನ ಎಎಸ್‍ಐ ಬಜರಂಗಲಾಲ್ ಶರ್ಮಾ ಮಾತನಾಡಿ, ಹನಿಮೂನ್‍ಗೆ ಭೋಪಾಲ್ ಮೂಲದ ದಂಪತಿ ಆಗಸ್ಟ್ 5ರಂದು ಬಂದಿದ್ದರು. ಕೆಲ ವಿಚಾರಗಳಿಗೆ ಹೊಟೇಲ್‍ನಲ್ಲಿ ಪತಿ-ಪತ್ನಿ ನಡುವೆ ವಾಗ್ವಾದ ನಡೆದಿದೆ. ಬಳಿಕ ಪತಿ ಕ್ಯಾಬ್ ಬುಕ್ ಮಾಡಲು ಕೆಳಗಿಳಿದಿದ್ದು, ಕೋಪಗೊಂಡ ಪತ್ನಿ ಹೋಟೆಲ್‍ನಿಂದ ಹೊರಟು ಹೋಗಿದ್ದಾರೆ.

    ಸದ್ಯ ಕಾಣೆಯಾದ ಪತ್ನಿಯನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ. ಪತಿ-ಪತ್ನಿಯರ ನಡುವೆ ಜಗಳ ನಡೆದ ಬಳಿಕವೇ ಪತ್ನಿ ಕೋಪಗೊಂಡು ಹೋಟೆಲ್ ತೊರೆದಿದ್ದು, ನಾವು ಅವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದು, ಮತ್ತು ಶೀಘ್ರದಲ್ಲೇ ಹುಡಕುತ್ತೇವೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಳ್ಳಿ, ಕಳ್ಳಿ ಅಂತಾ ವ್ಯಂಗ್ಯವಾಡ್ತಾರೆಂದು ಪತ್ನಿಯನ್ನೇ ಮುಗಿಸಿದ!

    ಕಳ್ಳಿ, ಕಳ್ಳಿ ಅಂತಾ ವ್ಯಂಗ್ಯವಾಡ್ತಾರೆಂದು ಪತ್ನಿಯನ್ನೇ ಮುಗಿಸಿದ!

    ಬೆಂಗಳೂರು: ಕಳ್ಳಿ, ಕಳ್ಳಿ ಎಂದು ಎಲ್ಲರೂ ವ್ಯಂಗ್ಯ ಮಾಡುವುದರಿಂದ ಬೇಸತ್ತ ಪತಿ ಮಹಾಶಯನೊನ್ನ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಸರಿತಾ (35) ಕೊಲೆಯಾದ ಪತ್ನಿ. ಈಕೆಯನ್ನು ಪತಿ ತಾರಾನಾಥ್ ಕೊಲೆ ಮಾಡಿದ್ದಾನೆ. ಈ ದಂಪತಿ ಮೂಲತಃ ಮಂಗಳೂರಿನವರು (Mangaluru). ಇದನ್ನೂ ಓದಿ: ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥಿಸಿಕೊಳ್ಳೋ ಲಜ್ಜೆಗೇಡಿ ಸಿಎಂ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ: ಹೆಚ್‍ಡಿಕೆ

    ಕೊಲೆ ಯಾಕೆ..?: ಪತ್ನಿ ಸರಿತಾ ಮೇಲೆ ಕಳ್ಳತನದ ಆರೋಪ ಕೇಳಿಬಂದಿತ್ತು. ನಂತರ ಬೆಂಗಳೂರಿನ ವೈಟ್ ಫೀಲ್ಡ್ ಗೆ ಶಿಫ್ಟ್ ಆಗಿದ್ರು. ಬಳಿಕ ಕೂಡ ಸಂಬಂಧಿಕರು, ಪರಿಚಿತರು ಸರಿತಾಳನ್ನು ಕಳ್ಳಿ ಕಳ್ಳಿ ಅಂತ ವ್ಯಂಗ್ಯ ಮಾಡುತ್ತಿದ್ದರು. ಇದರಿಂದ ಬೇಸತ್ತ ಪತಿ ತರಾನಾಥ್ ಪತ್ನಿಯನ್ನು ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.

    ನಂತರ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿ ವಿಫಲವಾಗಿ ತಾನೇ ಪೊಲೀಸರ ಮುಂದೆ ಶರಣಾಗಿದ್ದಾನೆ. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಪತಿ

    ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಪತಿ

    ಬೆಂಗಳೂರು: ಜಗಳದ ವೇಳೆ ಪತ್ನಿಯ (Wife) ಎಡಗೈ ಬೆರಳನ್ನೇ (Finger) ಪತಿ (Husband) ಕಚ್ಚಿ ತಿಂದಿರುವ ಘಟನೆ ಬೆಂಗಳೂರಿನ (Bengaluru) ಕೋಣನಕುಂಟೆ (Konanakunte) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪುಷ್ಪಾ (40) ಎಂಬ ಮಹಿಳೆ 23 ವರ್ಷಗಳ ಹಿಂದೆ ವಿಜಯ್‌ಕುಮಾರ್ ಎಂಬಾತನನ್ನು ಮದುವೆಯಾಗಿದ್ದರು. ಮದುವೆಯಾದ ಕೆಲ ವರ್ಷಗಳಿಂದ ವಿಜಯ್‌ಕುಮಾರ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಪತ್ನಿ ಆರೋಪಿಸಿದ್ದಾರೆ. ವಿವಾಹದ ಬಳಿಕ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದು, ದಂಪತಿಗೆ ಒಬ್ಬ ಮಗನೂ ಇದ್ದಾನೆ. ಇದನ್ನೂ ಓದಿ: ಜಾಮೀನಿಗಾಗಿ ವಕೀಲನ ಕಿಡ್ನಾಪ್ – ರಾತ್ರಿ ಇಡೀ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ರೌಡಿಶೀಟರ್

    ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ಬೇರೆಡೆ ಮನೆ ಮಾಡಿ ಪತಿಯಿಂದ ದೂರವಿದ್ದರು. ಜುಲೈ 28ನೇ ತಾರೀಕು ಪತಿ ವಿಜಯ್‌ಕುಮಾರ್ ಪತ್ನಿ ಇದ್ದ ಮನೆಗೆ ತೆರಳಿ ಜಗಳ ತೆಗೆದಿದ್ದ. ಈ ವೇಳೆ ಪತ್ನಿಯ ಬೆರಳನ್ನು ಪತಿ ಕಚ್ಚಿ ತಿಂದಿದ್ದು, ನಿನ್ನನ್ನು ಕೂಡಾ ಕೊಂದು ಇದೇ ರೀತಿ ತಿನ್ನುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ರೌಡಿಶೀಟರ್‌ಗಳನ್ನು ಬಿಟ್ಟು ಕೊಲೆ ಮಾಡಿಸುವುದಾಗಿ ಹೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 3 ಸಾವಿರಕ್ಕಾಗಿ ಯುವಕನನ್ನು ಹಾಡಹಗಲೇ ಚುಚ್ಚಿ ಚುಚ್ಚಿ ಕೊಂದ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುಪ್ತಾಂಗಕ್ಕೆ ವಿಕೆಟ್‍ನಿಂದ ಚುಚ್ಚಿದ ಪತಿ- ಪತ್ನಿ ಸ್ಥಿತಿ ಗಂಭೀರ

    ಗುಪ್ತಾಂಗಕ್ಕೆ ವಿಕೆಟ್‍ನಿಂದ ಚುಚ್ಚಿದ ಪತಿ- ಪತ್ನಿ ಸ್ಥಿತಿ ಗಂಭೀರ

    ಚಿತ್ರದುರ್ಗ: ಗಂಡ-ಹೆಂಡ್ತಿ ನಡುವೆ ಜಗಳಗಳು ಸಾಮಾನ್ಯ. ಈ ಕೋಪ-ತಾಪಗಳು ಕೇವಲ ನಿಮಿಷಗಳಷ್ಟೇ ಇರುತ್ತವೆ. ಆದರೆ ಇಲ್ಲೊಬ್ಬ ಪತಿಮಹಾಶಯ ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಆಘಾತಕಾರಿ ಘನೆಯೊಂದು ನಡೆದಿದೆ. ಈ ಘಟನೆ ನಡೆದಿರುವುದು ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ.

    ಹೌದು. ಪತ್ನಿಯ (Husband- Wife Fight) ಶೀಲ ಶಂಕಿಸಿರುವ ಪತಿ ಆಕೆಯ ಗುಪ್ತಾಂಗಕ್ಕೆ ವಿಕೆಟ್‍ನಿಂದ ಹಲ್ಲೆ ನಡೆಸಿ ಅಮಾನವೀಯತೆ ತೋರಿದ್ದಾನೆ. ಚಳ್ಳಕೆರೆಯ ಆರೋಗ್ಯ ಇಲಾಖೆಯಲ್ಲಿ ಫಾರ್ಮಸಿಸ್ಟ್ ಆಗಿರುವ ಭಾಸ್ಕರ್ ಹಾಗೂ ರೇಖಾ ಎಂಬ ದಂಪತಿ ಪಾವಗಡ ರಸ್ತೆಯ ಮನೆಯಲ್ಲಿ ವಾಸವಾಗಿದ್ದಾರೆ. ಭಾಸ್ಕರ್ ತನ್ನ ಪತ್ನಿ ರೇಖಾ ಶೀಲ ಶಂಕಿಸಿ ಗಲಾಟೆ ಆರಂಭಿಸಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದು ಕೋಪಗೊಂಡ ಭಾಸ್ಕರ್ ಪತ್ನಿಯ ಗುಪ್ತಾಂಗಕ್ಕೆ ವಿಕೆಟ್ ನಿಂದ ಹಲ್ಲೆ ನಡೆಸಿದ್ದಾನೆ.

    ಗುಪ್ತಾಂಗಕ್ಕೆ ಮನಬಂದಂತೆ ವಿಕೆಟ್ ನಿಂದ ಚುಚ್ಚಿರುವ ಆಸಾಮಿ, ಮನೆಯೊಳಗೆಲ್ಲಾ ರಕ್ತ ಚಿಮ್ಮಿದರು ಸಹ ಹಲ್ಲೆಯನ್ನು ನಿಲ್ಲಿಸದೇ ಥಳಿಸಿ ಗಂಭೀರವಾಗಿ ಗಾಯಗೊಳಿಸಿದ್ದಾನೆ. ಹೀಗಾಗಿ ಆಕೆಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯ್ತು. ಆದರೆ ಗುಪ್ತಾಂಗದ ಸಮೀಪದಲ್ಲಿ ಗಂಭೀರವಾದ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಆಕೆಯ ಸ್ಥಿತಿ ಶೋಚನೀಯವಾಗಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

    ಸ್ಥಳೀಯರ ಮಾಹಿತಿ ಪ್ರಕಾರ, ಪತಿ ಭಾಸ್ಕರ್ ಮಾನಸಿಕ ಖಿನ್ನತೆಗೊಳಗಾಗಿ ಈ ರೀತಿ ವಿಕೃತಿ ಮೆರೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಆರೋಪಿ ಭಾಸ್ಕರ್ ಪೊಲೀಸರ ವಶದಲ್ಲಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಂಡನ ಮೊಬೈಲ್‌ಗೆ ಪತ್ನಿಯ ಅಕ್ರಮ ಸಂಬಂಧ ವಿಡಿಯೋ – ಮಾರಕಾಸ್ತ್ರಗಳಿಂದ ಹೊಡೆದು ಹೆಂಡತಿಯ ಹತ್ಯೆ

    ಗಂಡನ ಮೊಬೈಲ್‌ಗೆ ಪತ್ನಿಯ ಅಕ್ರಮ ಸಂಬಂಧ ವಿಡಿಯೋ – ಮಾರಕಾಸ್ತ್ರಗಳಿಂದ ಹೊಡೆದು ಹೆಂಡತಿಯ ಹತ್ಯೆ

    ಬೆಂಗಳೂರು: ಹೆಂಡತಿಯ ಅಕ್ರಮ ಸಂಬಂಧದ (Illicit Relationship) ವಿಡಿಯೋ (Video) ಮೊಬೈಲ್‌ನಲ್ಲಿ ನೋಡಿದ ಪತಿ ಮಾರಕಾಸ್ತ್ರಗಳಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಘಟನೆ ಬೆಂಗಳೂರಿನ (Bengaluru) ಮೂಡಲಪಾಳ್ಯದ ಶಿವಾನಂದ ನಗರದಲ್ಲಿ ನಡೆದಿದೆ.

    ಶಂಕರ್ ಕೊಲೆ ಮಾಡಿದ ಆರೋಪಿಯಾಗಿದ್ದು, ಪತ್ನಿ ಗೀತಾಳನ್ನು ಹತ್ಯೆ ಮಾಡಿದ ಬಳಿಕ ಆಕೆಯ ತಾಯಿಗೆ ಕರೆ ಮಾಡಿ ಮಗಳನ್ನು ಕೊಲೆ ಮಾಡಿರುವ ವಿಚಾರ ತಿಳಿಸಿದ್ದಾನೆ ಎನ್ನಲಾಗಿದೆ. ವೃತ್ತಿಯಲ್ಲಿ ಗುತ್ತಿಗೆದಾರನಾಗಿದ್ದ ಆರೋಪಿ ಶಂಕರ್ 13 ವರ್ಷಗಳ ಹಿಂದೆ ಗೀತಾಳನ್ನು ಮದುವೆ ಆಗಿದ್ದ. ಇಬ್ಬರ ಸಂಸಾರಕ್ಕೆ ಸಾಕ್ಷಿ ಎಂಬಂತೆ ಒಂದು ಗಂಡು ಮಗು ಇದೆ. ಆರೋಪಿ ಶಂಕರ್‌ ಪತ್ನಿ ಗೀತಾ ಬೇರೋಬ್ಬನ ಜೊತೆ ಸಂಬಂಧ ಇಟ್ಟುಕೊಂಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು. ಇದನ್ನೂ ಓದಿ: ಸಾಲ ವಾಪಸ್ ಕೊಟ್ಟಿಲ್ಲ ಅಂತ ಪತಿಯೆದುರೇ ಮಹಿಳೆಯ ಅತ್ಯಾಚಾರ

    ಹೆಂಡತಿಯ ಮೇಲೆ ಗಂಡನಿಗಿದ್ದ ಅನುಮಾನಕ್ಕೆ ಸಾಕ್ಷಿಯೆಂಬಂತೆ ಒಂದು ವಿಡಿಯೋ ಆತನಿಗೆ ಸಿಗುತ್ತದೆ. ಅಲ್ಲಿಗೆ ಗಂಡ ಶಂಕರ್‌ಗೆ ಹೆಂಡತಿಯ ಮೇಲಿದ್ದ ಅನುಮಾನ ಸ್ಪಷ್ಟವಾಗಿದೆ. ಮರ್ಯಾದೆ ಹೋಗುತ್ತದೆ ಎನ್ನುವ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ್ದಾಗಿ ಆರೋಪಿ ಹೇಳಿದ್ದಾನೆ. ಪತ್ನಿಯ ಅಕ್ರಮ ಸಂಬಂಧ ವಿಡಿಯೋ ಪತಿಯ ಮೊಬೈಲ್‌ಗೆ ಪತ್ನಿ ಕಳುಹಿಸಿದ್ದು ಮಾತ್ರವಲ್ಲದೇ ಪತ್ನಿ ಜೊತೆ ಅಕ್ರಮ ಸಂಬಂದ ಇಟ್ಟುಕೊಂಡಿದ್ದ ವ್ಯಕ್ತಿ ಕೂಡ ಶಂಕರ್‌ಗೆ ಪತ್ನಿಯ ವಿಡಿಯೋವನ್ನು ಕಳುಹಿಸಿದ್ದ. ಈ ವಿಚಾರವಾಗಿ ಕಳೆದ 15 ದಿನದಿಂದ ನಿರಂತರವಾಗಿ ಗಲಾಟೆ ನಡೆಯುತ್ತಿತ್ತು. ಇದನ್ನೂ ಓದಿ: ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್ – ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ!

    ಪತ್ನಿ ಗೀತಾಳಿಗೆ ಇವೆಲ್ಲಾ ಬಿಟ್ಟು ಸರಿಯಾಗುವಂತೆ ಪತಿ ಶಂಕರ್ ಎಷ್ಟೇ ಹೇಳಿದರು ಕಿವಿಗೆ ಹಾಕಿಕೊಳ್ಳದೆ ಆಕೆ ಚಾಳಿ ಮುಂದುವರೆಸಿದ್ದಳು. ಇದರಿಂದ ರೊಚ್ಚಿಗೆದ್ದ ಪತಿ ಶಂಕರ್ ತನ್ನ ತಾಯಿಗೆ ಕರೆ ಮಾಡಿ ಮಗನನ್ನು ನೋಡಿಕೋ, ನಾನು ಪತ್ನಿಯನ್ನು ಕೊಲೆ ಮಾಡಿ ಜೈಲಿಗೆ ಹೋಗುವುದಾಗಿ ಹೇಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಚಂದ್ರಲೇಔಟ್ (Chandra Layout) ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಬಿಇ ಪದವೀಧರೆ ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]