Tag: ಪತ್ತೆ

  • ಒಂದೂವರೆ ವರ್ಷದ ಹಿಂದೆ ಕಳವಾಗಿದ್ದ 1.70 ಲಕ್ಷ ಮೌಲ್ಯದ 2 ಸೀಮೆ ಹಸುಗಳು ಪತ್ತೆ!

    ಒಂದೂವರೆ ವರ್ಷದ ಹಿಂದೆ ಕಳವಾಗಿದ್ದ 1.70 ಲಕ್ಷ ಮೌಲ್ಯದ 2 ಸೀಮೆ ಹಸುಗಳು ಪತ್ತೆ!

    ಕೋಲಾರ: ಹಸುಗಳನ್ನು ಕದ್ದಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ ಜಾರಕಲ ಹಟ್ಟಿ ಗ್ರಾಮದ ಎ.ಮುನಿರಾಜು ಎಂಬುದಾಗಿ ಗುರುತಿಸಲಾಗಿದೆ.

    ಒಂದೂವರೆ ವರ್ಷಗಳ ಹಿಂದೆ ಈ ಘಟನೆ ಬೂದಿಕೋಟೆ ಸಮೀಪದ ಶ್ರೀರಂಗಬಂ- ಡಹಳ್ಳಿಯಲ್ಲಿ ನಡೆದಿತ್ತು. ಚನ್ನಕೇಶವ ಎಂಬವರ ಶೆಡ್‌ನಲ್ಲಿದ್ದ ಸುಮಾರು 1.70 ಲಕ್ಷ ಮೌಲ್ಯದ ಎರಡು ಸೀಮೆ ಹಸುಗಳು ಕಳವಾಗಿದ್ದವು. ಈ ಸಂಬಂಧ ಹಸುಗಳ ಮಾಲೀಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಜೊತೆಗೆ ಕಳವಾಗಿದ್ದ ಹಸುಗಳನ್ನು ಹುಡುಕಿ ಕೊಡುವಂತೆ ಮನವಿ ಮಾಡಿದ್ದರು.

    ಮಾಲೀಕನ ದೂರು ಸ್ವೀಕರಿಸಿದ ಬೂದಿಕೋಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳವು ಮಾಡಿದ ಆರೋಪಿ ಹಾಗೂ ಹಸುಗಳನ್ನು ಪತ್ತೆ ಮಾಡಿದ್ದಾರೆ.

  • ಬೆಂಗಳೂರಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ!

    ಬೆಂಗಳೂರಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ!

    ಮಂಗಳೂರು: ಸಿಲಿಕಾನ್ ಸಿಟಿಯ 7 ಮಂದಿ ನಾಪತ್ತೆ ಪ್ರಕರಣ ಸಂಬಂದ ಈಗಾಗಲೇ ಮೂವರು ನಿನ್ನೆಯೇ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಇದೀಗ ಇಂದು ಉಳಿದ ನಾಲ್ವರು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಈ ಮೂಲಕ ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

    21 ವರ್ಷದ ಯುವತಿ ಸೇರಿದಂತೆ ನಾಲ್ವರು ಇಂದು ಮಂಗಳೂರಿನ ಅತ್ತಾವರದಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಎಲ್ಲರೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿದ್ದಾರೆ. ಚಿಂತನ್, ಭೂಮಿ, ಅಮೃತವರ್ಷಿಣಿ ಹಾಗೂ ರಾಯನ್ ಇಂದು ಪತ್ತೆಯಾಗಿರುವ ಮಕ್ಕಳು. ಇವರು ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಒಂದೇ ಅಪಾರ್ಟ್ ಮೆಂಟ್  ನಿವಾಸಿಗಳು. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇದನ್ನೂ ಓದಿ: ಚಿಂದಿ ಆಯುವ ವ್ಯಕ್ತಿ ಮಾಹಿತಿ – ಬಾಗಲಗುಂಟೆಯಿಂದ ನಾಪತ್ತೆಯಾಗಿದ್ದ ಮೂವರು ಮಕ್ಕಳು ಪತ್ತೆ

    ಈ ನಾಲ್ವರು ರೈಲಿನ ಮೂಲಕ ಮಂಗಳೂರಿಗೆ ತಲುಪಿದ್ದಾರೆ. ರೈಲು ನಿಲ್ದಾಣ ಸುತ್ತಮುತ್ತ ತಿರುಗಾಟುತ್ತಿದ್ದ ವರನ್ನು ನೋಡಿ ಅನುಮಾಗೊಂಡ ಆಟೋ ಚಾಲಕ, ವಿಶ್ವಾಸಕ್ಕೆ ತಗೆದುಕೊಂಡಿದ್ದಾರೆ. ನಂತರ ಆಟೋದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಗೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಸದ್ಯ ಯುವತಿ ಹಾಗೂ ಮಕ್ಕಳು ಎಲ್ಲರೂ ಸುರಕ್ಷಿತವಾಗಿದ್ದು, ಡಿಸಿಪಿ ಹರಿರಾಮ ಶಂಕರ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.

  • ಪೊಲೀಸ್ ಇಲಾಖೆ ದಂತಕತೆ- ನಾಪತ್ತೆಯಾಗಿದ್ದ ‘ದಂತ’ ದಿಢೀರ್ ಪ್ರತ್ಯಕ್ಷ

    ಪೊಲೀಸ್ ಇಲಾಖೆ ದಂತಕತೆ- ನಾಪತ್ತೆಯಾಗಿದ್ದ ‘ದಂತ’ ದಿಢೀರ್ ಪ್ರತ್ಯಕ್ಷ

    ಶಿವಮೊಗ್ಗ: ಎಸ್.ಪಿ ಕಚೇರಿಯಿಂದ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದ ಆನೆ ದಂತ ಕೊನೆಗೂ ಅನುಮಾನಾಸ್ಪದವಾಗಿ ಸಿಕ್ಕಿದೆ.

    ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕೊಠಡಿಯೊಂದನ್ನು ಸ್ವಚ್ಛಗೊಳಿಸುವ ವೇಳೆಯಲ್ಲಿ ಇದು ಪತ್ತೆಯಾಗಿದೆ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಮುತ್ತುರಾಜ್ ಹೇಳಿದ್ದಾರೆ. ಆದರೆ, ದಂತದ ತಳಭಾಗದಲ್ಲಿ ಒಂದಷ್ಟು ಕತ್ತರಿಸಲಾಗಿದ್ದು, ಕತ್ತರಿಸಿರುವ ಗುರುತು ಸಹ ಹೊಸದಾಗಿದೆ. ಈ ದಂತ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರವು ಕಳೆದ ಜನವರಿಯಲ್ಲಿ ಸಿಐಡಿ ತನಿಖೆ ಒಪ್ಪಿಸಿದೆ.

    ಸಿಐಡಿ ತನಿಖೆ ಆರಂಭಗೊಳ್ಳುವ ಹಂತದಲ್ಲೇ ಎಸ್‍ಪಿ ಕಚೇರಿಯಲ್ಲೇ ದಂತ ಮೊಟಕು ದಂತ ಪತ್ತೆಯಾಗಿದ್ದು, ಇಲಾಖೆ ದಂತಕತೆ ಹೇಳುತ್ತಿದೆ ಎಂಬ ಶಂಕೆಗೆ ಕಾರಣವಾಗಿದೆ. 2011ರ ಫೆಬ್ರವರಿವರೆಗೂ ಎಸ್‍ಪಿ ಚೇಂಬರ್ ನಲ್ಲೇ ದಂತ ಇದ್ದ ಬಗ್ಗೆ ಪುರಾವೆಗಳಿವೆ. ನಂತರ ಇದೂವರೆಗೂ ಐವರು ಎಸ್‍ಪಿಗಳು ಬದಲಾಗಿದ್ದಾರೆ.

    ಎಸ್‍ಪಿ ಕಚೇರಿ ಆವರಣದಲ್ಲಿ ಇದ್ದ ಪುರಾತನ ಶಿಲ್ಪಗಳನ್ನು ಕುವೆಂಪು ವಿವಿ ಪ್ರಾಕ್ತನ ವಿಭಾಗಕ್ಕೆ ಕಳೆದ ವರ್ಷ ಒಪ್ಪಿಸುವ ಹಂತದಲ್ಲಿ ಈ ದಂತ ನಾಪತ್ತೆ ಆಗಿರುವುದು ಬೆಳಕಿಗೆ ಬಂದಿತ್ತು. ಇಲಾಖೆ ತನಿಖೆ ನಡೆದು ನಂತರ ಹೆಚ್ಚುವರಿ ಪೊಲೀಸ್ ಅಧೀಕ್ಷಕರಿಂದಲೂ ತನಿಖೆ ನಡೆಯಿತು. ಆಗ ಪೊಲೀಸ್ ಇಲಾಖೆಗೆ ಸೇರಿದ ಎಲ್ಲಾ ಕಟ್ಟಡಗಳಲ್ಲೂ ಸಂಪೂರ್ಣ ಶೋಧ ನಡೆಸಲಾಗಿತ್ತು.

    ಆಗಲೂ ದಂತ ಪತ್ತೆ ಆಗದಿದ್ದಾಗ 22-5-2018ರಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈ ದಂತ ಕಳವು ಪ್ರಕರಣದ ಕುರಿತು ಅಧಿಕೃತವಾಗಿ ದೂರು ದಾಖಲಿಸಿ, ತನಿಖಾಧಿಕಾರಿಯನ್ನೂ ನೇಮಿಸಲಾಗಿತ್ತು. ಇಂತಹ ಯಾವ ತನಿಖೆ ವೇಳೆಯೂ ದೊರಕದ ದಂತ ಈಗ ದಿಢೀರನೇ ಎಸ್‍ಪಿ ಕಚೇರಿಯ ಹಳೆ ಸಾಮಗ್ರಿಗಳ ನಡುವೆ ಬಂದದ್ದಾರೂ ಹೇಗೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

    ದಂತ ನಾಪತ್ತೆ ಪ್ರಕರಣದಲ್ಲಿ ಅಮಾಯಕ ಪೊಲೀಸ್ ಪೇದೆಗಳ ಮೇಲೂ ಕ್ರಮ ಜರುಗಿಸಲಾಗಿತ್ತು. ಈ ದಂತ ನಾಪತ್ತೆ- ಪತ್ತೆ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳ ಕೈವಾಡ ಇದೆ ಎಂಬ ಶಂಕೆ ವ್ಯಾಪಕವಾಗಿದೆ. ಕಳೆದು ಹೋದ ದಂತ ಪತ್ತೆಯಾಗಿದ್ದು, ಮಂಗಳವಾರ ಪತ್ತೆ ಆಗಿದ್ದು, ಹೇಗೆ ಎಂಬ ಬಗ್ಗೆಯೇ ಮತ್ತೊಂದು ತನಿಖೆ ಅಗತ್ಯವಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯುವ ನಿರ್ದೇಶಕಿ ಮನೆಯಲ್ಲಿ ಶವವಾಗಿ ಪತ್ತೆ

    ಯುವ ನಿರ್ದೇಶಕಿ ಮನೆಯಲ್ಲಿ ಶವವಾಗಿ ಪತ್ತೆ

    ತಿರುವನಂತಪುರಂ: ಮಲೆಯಾಳಂನ ಯುವ ನಿರ್ದೇಶಕಿ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸೋಮವಾರ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.

    ನಯನಾ ಸೂರ್ಯನ್(28) ಶವವಾಗಿ ಪತ್ತೆಯಾದ ನಿರ್ದೇಶಕಿ. ನಯನಾ ಮೂಲತಃ ಕೇರಳದ ಅಲಾಪಡ್‍ನವರಾಗಿದ್ದು, ತನ್ನ ಪೋಷಕರು ಹಾಗೂ ಒಡಹುಟ್ಟಿದವರ ಜೊತೆ ವಾಸಿಸುತ್ತಿದ್ದರು. ಬಳಿಕ ತಿರುವನಂತಪುರಂನ ಅಪಾರ್ಟ್‍ಮೆಂಟ್‍ವೊಂದರಲ್ಲಿ ವಾಸಿಸುತ್ತಿದ್ದರು.

    ಸೋಮವಾರ ನಯನಾ ತಾಯಿ ಆಕೆಗೆ ಫೋನ್ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ನಯನಾ ಫೋನ್ ಸ್ವೀಕರಿಸಲಿಲ್ಲ. ಹಾಗಾಗಿ ಅವರ ತಾಯಿ ಆಕೆಯ ಸ್ನೇಹಿತರಿಗೆ ಕರೆ ಮಾಡಿ ತನ್ನ ಮಗಳನ್ನು ಬಗ್ಗೆ ವಿಚಾರಿಸಿದ್ದಾರೆ. ಆಗ ನಯನಾ ಸ್ನೇಹಿತರು ಆಕೆಯ ಮನೆ ಬಳಿ ಹೋಗಿದ್ದಾಗ ಆಕೆ ತನ್ನ ಬೆಡ್‍ರೂಮಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

    ನಯನಾ ಕೆಲವು ದಿನಗಳ ಹಿಂದೆ ಡಯಾಬಿಟಿಸ್‍ಗೆ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಮರಣೋತ್ತರ ಪರೀಕ್ಷೆ ಬಳಿಕ ಅವರ ಸಾವಿನ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ನಯನಾ ‘ಕ್ರಾಸ್‍ವಲ್ಡ್’ ಚಿತ್ರದ ಮೂಲಕ ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಈ ಮೊದಲು ಅವರು ದಿ. ಲೇನಿನ್ ರಾಜೇಂದ್ರನ್, ಕಮಾಲ್, ಜೀತು ಜೋಸೆಫ್ ಹಾಗೂ ಡಾ. ಬಿಜು ಅವರ ಜೊತೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೋಷಕರ ಜೊತೆ ಇದ್ದು ನಾಪತ್ತೆಯಾಗಿದ್ದ ಮಗು ಈಗ ಪತ್ತೆ

    ಪೋಷಕರ ಜೊತೆ ಇದ್ದು ನಾಪತ್ತೆಯಾಗಿದ್ದ ಮಗು ಈಗ ಪತ್ತೆ

    ಮೈಸೂರು: ಪೋಷಕರ ಜೊತೆಯಲ್ಲೇ ಇದ್ದ ಮಗು ನಾಪತ್ತೆ ಆದ ಪ್ರಕರಣ ಈಗ ಸುಖಾಂತ್ಯಗೊಂಡಿದೆ. ಮೈಸೂರಿನ ಹುಣಸೂರು ಪೊಲೀಸರು ಕಾರ್ಯಾರಣೆ ನಡೆಸಿ ಮಗು ಅಪಹರಿಸಿದವನನ್ನು ಬಂಧಿಸಿದ್ದಾರೆ.

    ಅಡಗೂರು ಮಾರಗೌಡನಹಳ್ಳಿ ಪ್ರವೀಣ್ ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆ ಹುಣಸೂರು ಬಸ್ ನಿಲ್ದಾಣದಲ್ಲಿ ಆರೋಪಿ ಮಗುವನ್ನು ಅಪಹರಿಸಿದ್ದಾನೆ. ಆರೋಪಿ ಪ್ರವೀಣ್ ಸುರೇಶ್-ನೀಲಕಲಾ ದಂಪತಿಯ ಹೆಣ್ಣು ಮಗುವನ್ನು ಪೋಷಕರಿಗೆ ಗೊತ್ತಾಗದಂತೆ ಕರೆದುಕೊಂಡು ಹೋಗಿದ್ದ.

    ಪ್ರವೀಣ್ ಮಗುವನ್ನು ಅಪಹರಿಸಿ ಬಳಿಕ ಆಕೆಯನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದನು. ಮಗು ನಾಪತ್ತೆ ಬಗ್ಗೆ ಮಾಧ್ಯಮದಲ್ಲಿ ವರದಿ ನೋಡಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ ಪೊಲೀಸರು ಗ್ರಾಮಕ್ಕೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ. ಪೊಲೀಸರು ಆರೋಪಿ ಪ್ರವೀಣ್‍ನನ್ನು ವಶಕ್ಕೆ ಪಡೆದಿದ್ದು, ಮತ್ತೊಬ್ಬ ಆರೋಪಿ ಗುರು ಬಸವ ಪರಾರಿ ಆಗಿದ್ದಾನೆ.

    ಏನಿದು ಪ್ರಕರಣ?
    ಶ್ರೇಯಾ(3) ನಾಪತ್ತೆಯಾದ ಮಗು. ಸುರೇಶ್ ಹಾಗೂ ನೀಲಕಲಾ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾಗಿದ್ದು, ಸೋಮವಾರ ಮಧ್ಯಾಹ್ನ ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದಲ್ಲಿ ಹೆಣ್ಣು ಮಗು ನಾಪತ್ತೆ ಆಗಿತ್ತು. ಕೊಪ್ಪದಿಂದ ಮೈಸೂರಿನ ಹೂಟಗಳ್ಳಿಗೆ ಹೋಗುವ ವೇಳೆ ಈ ಘಟನೆ ನಡೆದಿತ್ತು. ಸುರೇಶ್ ಹಾಗೂ ನೀಲಕಲಾ ಮೂವರು ಮಕ್ಕಳ ಜೊತೆ ಹೋಗುತ್ತಿದ್ದರು. ಹುಣಸೂರು ಬಸ್ ನಿಲ್ದಾಣದಿಂದ ಪೋಷಕರಿಗೆ ಗೊತ್ತಾಗದಂತೆ ಯಾರೋ ಮಗುವನ್ನು ಕರೆದುಕೊಂಡು ಹೋಗಿದ್ದರು ಎಂದು ಶಂಕಿಸಲಾಗಿತ್ತು.

    ಈ ಬಗ್ಗೆ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೈಕಾಲು ಕಟ್ಟಿ, ಗೋಣಿ ಚೀಲದಲ್ಲಿ ಮಹಿಳೆಯ ಶವ ಪತ್ತೆ!

    ಕೈಕಾಲು ಕಟ್ಟಿ, ಗೋಣಿ ಚೀಲದಲ್ಲಿ ಮಹಿಳೆಯ ಶವ ಪತ್ತೆ!

    ಬೆಳಗಾವಿ: ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರ ಮೃತದೇಹವು ನೆರೆಯ ಮಹಾರಾಷ್ಟ್ರದ ನದಿಯಲ್ಲಿ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ತಾಯವ್ವ ಶಿವಾಜಿ ಕದಮ(60) ಮೃತ ದುರ್ದೈವಿ. ಬೆಳಗಾವಿ ಸಮೀಪದ ಕೆ.ಕೆ ಕೊಪ್ಪ ಗ್ರಾಮದಿಂದ ಜನವರಿ 19ರಂದು ತಾಯವ್ವ ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ತಾಯವ್ವ ಮೃತದೇಹ ಮಹಾರಾಷ್ಟ್ರದ ನದಿಯಲ್ಲಿ ಪತ್ತೆಯಾಗಿದೆ.

    ಕೊಲ್ಹಾಪೂರ ಜಿಲ್ಲೆಯ ಮುರಗುಡ ಪ್ರದೇಶದಲ್ಲಿರುವ ವೇದಗಂಗಾ ನದಿಯಲ್ಲಿ ಜ.24 ರಂದು ಗೋಣಿ ಚೀಲದಲ್ಲಿ ಕೈಕಾಲು ಕಟ್ಟಿದ್ದ ಸ್ಥಿತಿಯಲ್ಲಿ ತಾಯವ್ವ ಅವರ ಶವ ಪತ್ತೆಯಾಗಿತ್ತು. ಆದರೆ ಮಹಿಳೆಯ ಗುರುತು ಸ್ಥಳಿಯ ಪೊಲೀಸರಿಗೆ ಸಿಕ್ಕಿರಲಿಲ್ಲ. ಈ ವಿಚಾರವಾಗಿ ತನಿಖೆ ನಡೆಸಿದ ಬಳಿಕ ನೆರೆಯ ರಾಜ್ಯದಲ್ಲಿ ಪತ್ತೆಯಾದ ಮೃತದೇಹ ಕಾಣೆಯಾದ ತಾಯವ್ವ ಅವರದ್ದು ಎಂದು ತಿಳಿದುಬಂದಿದೆ.

    ತಾಯವ್ವ ಜೀವನ ನಡೆಸಲು ತರಕಾರಿ ವ್ಯಾಪಾರ ಮಾಡಿಕೊಂಡು ಇದ್ದರು. ಹೀಗೆ ಜ. 16ರಂದು ಕೆಲಸದ ಹಿನ್ನೆಲೆ ತಾಯವ್ವ ಬೆಳಗಾವಿಗೆ ಹೋದವರು ಮನೆಗೆ ಹಿಂತಿರುಗಿರಲಿಲ್ಲ. ಈ ವಿಚಾರವಾಗಿ ತಾಯವ್ವ ಕಾಣೆಯಾಗಿದ್ದಾರೆ ಎಂದು ಮನೆಯವರು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರಿಂದ ಪೊಲೀಸರು ಮಹಿಳೆಯನ್ನು ಪತ್ತೆ ಮಾಡಲು ಹುಡುಕಾಟ ನಡೆಸಿದ್ದರು. ಈಗ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆ ಬಳಿ ಇದ್ದ ಹಣಕ್ಕಾಗಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೀನುಗಾರರ ಪತ್ತೆಗೆ ಇಸ್ರೋ, ಗೂಗಲ್ ನೆರವು: ಸಚಿವ ವೆಂಕಟರಾವ್ ನಾಡಗೌಡ

    ಮೀನುಗಾರರ ಪತ್ತೆಗೆ ಇಸ್ರೋ, ಗೂಗಲ್ ನೆರವು: ಸಚಿವ ವೆಂಕಟರಾವ್ ನಾಡಗೌಡ

    ಕಾರವಾರ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಇಸ್ರೋ ನೆರವು ಕೋರಲಾಗಿದೆ ಎಂದು ಪಶು ಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

    ವೀನುಗಾರಿಕೆ ಬೋಟ್ ನಲ್ಲಿದ್ದ ಕುಮಟಾ ತಾಲೂಕು ಮಾದನಗೆರೆ ಸತೀಶ್, ಈಶ್ವರ, ಹರಿಕಂತ್ರ ಮನೆಗೆ ಸಚಿವರು ಇಂದು ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿಸೆಂಬರ್ 13ರಂದು ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿರುವ ಏಳು ಮೀನುಗಾರರಿದ್ದ ಬೋಟ್ 2018ರ ಡಿ.15ರ ರಾತ್ರಿ ಒಂದು ಗಂಟೆವರೆಗೆ ಸಂಪರ್ಕದಲ್ಲಿದ್ದು, ನಂತರ ಸಂಪರ್ಕಕ್ಕೆ ಸಿಗುತ್ತಿಲ್ಲ. ಮೀನುಗಾರರ ಪತ್ತೆಗೆ ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಈ ಸಂಬಂಧ ಉಪಗ್ರಹ ಮೂಲಕ ಪತ್ತೆಗೆ ಇಸ್ರೋಗೂ ಮನವಿ ಮಾಡಲಾಗಿದೆ” ಎಂದು ಹೇಳಿದರು.

    ಈ ಪ್ರಕರಣ ಸಂಬಂಧ ಡಿ. 22ರಂದು ದೂರು ದಾಖಲಿಸಿಕೊಳ್ಳಲಾಗಿದೆ. ಮೀನುಗಾರರ ಪತ್ತೆಗಾಗಿ ನೆರೆ ರಾಜ್ಯಗಳಾದ ಗೋವಾ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಆದರೆ ಈವರೆಗೆ ಯಾವುದೇ ಪ್ರತಿಫಲ ಸಿಕ್ಕಿಲ್ಲ. ರಾಜ್ಯ ಸರ್ಕಾರದಿಂದ ಸ್ಥಳೀಯ ಮೀನುಗಾರರ ಸಹಕಾರ ಪಡೆದು ಎಲ್ಲ ಬಂದರುಗಳೂ ಸೇರಿದಂತೆ ಶಂಕಾಸ್ಪದ ಸ್ಥಳಗಳಲ್ಲಿ ಪತ್ತೆ ಕಾರ್ಯ ನಡೆಸಲಾಗಿದೆ. ಸಮುದ್ರದಲ್ಲೂ ಕೂಡ ಹೆಲಿಕಾಪ್ಟರ್ ಮತ್ತು ತಟ ರಕ್ಷಣಾ ಪಡೆಗಳ ಮೂಲಕ ಪತ್ತೆಗೆ ಪ್ರಯತ್ನಿಸಲಾಗಿದೆ ಎಂದರು.  ಇದನ್ನೂ ಓದಿ: ನಾಪತ್ತೆಯಾದ ಮೀನುಗಾರರನ್ನು ಹುಡುಕಲು ನಾವೇನು ಸಮುದ್ರಕ್ಕೆ ಹಾರ್ಬೇಕಾ- ಸಚಿವ ನಾಡಗೌಡ ಪ್ರಶ್ನೆ

    ಈಗಾಗಲೇ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ನೌಕಾದಳವನ್ನು ಬಳಸಿಕೊಳ್ಳಲು ಕೋರಲಾಗಿದೆ. ಅಲ್ಲದೇ ಗೂಗಲ್ ಸೇರಿದಂತೆ ಉಪಗ್ರಹ ಸಂಸ್ಥೆಗಳ ನೆರವು ಪಡೆಯಲಾಗಿದೆ ಎಂದರು. ಗುಜರಾತ್ ಗಡಿದಾಟಿ ಪಾಕಿಸ್ತಾನ ಗಡಿ ಪ್ರವೇಶಿಸುವ ಸಾಧ್ಯತೆ ಕಡಿಮೆ ಇದೆ. ಬೋಟ್ ನಲ್ಲಿ ಅಷ್ಟು ಪ್ರಮಾಣದ ಇಂಧನ ಇರಲಿಲ್ಲ ಎಂದು ಹೇಳಲಾಗಿದೆ. ಈ ಹಿಂದಿನ ಕೆಲವು ಪ್ರಕರಣಗಳ ಆಧಾರದಂತೆ ಬೇರೆ ರಾಜ್ಯದ ಮೀನುಗಾರರು ನಮ್ಮ ಮೀನುಗಾರರನ್ನು ಅಪಹರಿಸಿರುವ ಸಂಶಯ ಇದೆ. ಈ ವಿಚಾರದಲ್ಲೂ ನೆರೆ ರಾಜ್ಯಗಳ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

    ವೀನುಗಾರರು ಜೀವಂತವಾಗಿರುತ್ತಾರೆ ಎಂಬ ಅಚಲ ವಿಶ್ವಾಸ ನಮ್ಮ ಸರ್ಕಾರದ್ದು. ಅವರ ಪತ್ತೆಗೆ ಅವಿರತ ಪ್ರಯತ್ನಗಳ ನಡೆದಿದ್ದು, ಶೀಘ್ರವೇ ನಿರೀಕ್ಷಿತ ಫಲಶೃತಿಗೆ ಎದುರು ನೋಡುತ್ತಿದ್ದೇವೆ ಅಂದ್ರು. ಸಚಿವರಿಗೆ ಸ್ಥಳೀಯ ಶಾಸಕ ದಿನಕರ್ ಶೆಟ್ಟಿ, ಮಾಜಿ ಶಾಸಕಿ ಶಾರದಾ ಶೆಟ್ಟಿ, ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಎಸ್. ಪಾಟೀಲ್ ಸೇರಿದಂತೆ ವಿವಿಧ ಪ್ರಮುಖರು ಈ ಸಂದರ್ಭದಲ್ಲಿ ಸಾಥ್ ನೀಡಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೂತ್ರ ವಿಸರ್ಜನೆ ತೆರಳಿದ್ದ ಭಿಕ್ಷುಕ ಅನುಮಾನಸ್ಪದ ಸಾವು – ಪತ್ತೆಯಾಯ್ತು ಕಂತೆ ಕಂತೆ ನೋಟು

    ಮೂತ್ರ ವಿಸರ್ಜನೆ ತೆರಳಿದ್ದ ಭಿಕ್ಷುಕ ಅನುಮಾನಸ್ಪದ ಸಾವು – ಪತ್ತೆಯಾಯ್ತು ಕಂತೆ ಕಂತೆ ನೋಟು

    ಬೆಂಗಳೂರು: ಮೂತ್ರ ವಿಸರ್ಜನೆಗೆ ತೆರಳಿದ್ದ ಭಿಕ್ಷುಕ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

    ಷರೀಫ್ ಸಾಬ್ (75) ಮೃತ ಪಟ್ಟ ಭಿಕ್ಷುಕ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಷರೀಫ್ ಸಾಬ್ ಮೂತ್ರ ವಿಸರ್ಜನೆಗೆ ತೆರಳಿದ್ದು, ಆ ವೇಳೆ ಅಲ್ಲೇ ಸಾವ್ನಪ್ಪಿದ್ದಾರೆ. ಸ್ಥಳೀಯರು ಷರೀಫ್ ಸಾಬ್ ದೇಹವನ್ನು ಗಮನಿಸಿದ ಕೆಲ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಷರೀಫ್ ಸಾಬ್ ಮೃತ ಪಟ್ಟಿರುವುದು ಖಚಿತವಾಗಿದೆ. ಅಲ್ಲದೇ ಅವರ ಬಳಿ ಕಂತೆ ಕಂತೆ ಹಣ ಇರುವುದು ಕೂಡ ಪತ್ತೆಯಾಗಿದೆ.

    ಕಳೆದ 15 ವರ್ಷಗಳಿಂದ ರೈಲ್ವೆ ಕಂಟೋನ್ಮೆಂಟ್ ನಿಲ್ದಾಣದ ಬಳಿಯೇ ಷರೀಫ್ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದರು. ಆದರೆ ಅವರಿಗೆ ಕಾಲಿಗೆ 5 ವರ್ಷಗಳ ಹಿಂದೆ ಗ್ಯಾಗ್ರೀನ್ ನಿಂದ ಕಾಲು ತೆಗೆಯಲಾಗಿತ್ತು. ಬಳಿಕ ಅವರಿಗೆ ಕೃತಕ ಕಾಲು ಅಳವಡಿಸಲಾಗಿತ್ತು. ಸದ್ಯ ಕೃತಕವಾಗಿ ಅಳವಡಿಸಿದ್ದ ಕಾಲಿನಲ್ಲಿ ಹಣ ಪತ್ತೆಯಾಗಿದೆ. ಷರೀಫ್ ಸಾಬ್ ಬಳಿ ಬರೋಬ್ಬರಿ 96 ಸಾವಿರ ರೂ. ಪತ್ತೆಯಾಗಿದ್ದಾಗಿ ಮಾಹಿತಿ ಲಭಿಸಿದ್ದು, ಸ್ಥಳದ ಪಂಚನಾಮೆ ನಡೆಸಿದ ಪೊಲೀಸರು ಹಣ ವಶಕ್ಕೆ ಪಡೆದಿದ್ದಾರೆ.

    ಈ ಘಟನೆ ಕುರಿತು ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಂದು ತಿಂಗಳ ಶಿಶುವನ್ನು ಕೊಂದು ಮಂಚದ ಕೆಳಗೆ ಬಚ್ಚಿಟ್ಟಿದ್ದಳು ಅಜ್ಜಿ

    ಒಂದು ತಿಂಗಳ ಶಿಶುವನ್ನು ಕೊಂದು ಮಂಚದ ಕೆಳಗೆ ಬಚ್ಚಿಟ್ಟಿದ್ದಳು ಅಜ್ಜಿ

    -ಮೊಮ್ಮಗನನ್ನು ಕೊಂದಿದ್ದು ಯಾಕೆ? ಬೆಚ್ಚಿ ಬೀಳಿಸುತ್ತೆ ರಾಕ್ಷಸಿ ಅಜ್ಜಿಯ ಉತ್ತರ

    ಬೆಂಗಳೂರು: ನಾಪತ್ತೆಯಾಗಿದ್ದ ಒಂದು ತಿಂಗಳ ಹಸುಗೂಸೊಂದು ಮಂಚದ ಕೆಳಗೆ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

    ಡಿಸೆಂಬರ್ 21ರ ರಾತ್ರಿ ನಗರದ ನೀಲಸಂದ್ರದಲ್ಲಿ ಇಡೀ ಮಾನವ ಕುಲವೇ ತಲೆತಗ್ಗಿಸುವ ಹೀನ ಕೃತ್ಯ ನಡೆದುಹೋಗಿತ್ತು. ಕೇವಲ 29 ದಿನಗಳ ಹಸುಗೂಸನ್ನು ನರ ರೂಪದ ರಾಕ್ಷಸರು ಉಸಿರು ಗಟ್ಟಿಸಿ ಕೊಂದು ಹಾಕಿದ್ದರು. ಅಲ್ಲದೇ ಕೊಲೆ ಮಾಡಿ ಟವಲ್ ನಲ್ಲಿ ಆ ಮುದ್ದು ಮಗುವಿನ ಶವ ಸುತ್ತಿ, ಮಂಚದ ಕೆಳಗೆಬಿಟ್ಟು ಹೋಗಿದ್ದರು. ಸದ್ಯ ಈ ಕೇಸ್‍ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಗುವಿನ ಪ್ರಾಣ ತೆಗೆದಿದ್ದು ಬೇರೆ ಯಾರು ಅಲ್ಲ ಆ ಮಗುವಿನ ಅಜ್ಜಿಯೇ ಮೊಮ್ಮಗನ ಕೊಂದು ಹಾಕಿರುವ ವಿಷಯ ಬೆಳಕಿಗೆ ಬಂದಿದೆ.

    ಅಜ್ಜಿಯೇ ತನ್ನ ಸ್ವಂತ ಮೊಮ್ಮಗುವಿನ ಕೊಂದು ಹಾಕಿದ್ದಾಳೆ. ಮಗ ಕಾರ್ತಿಕ್ ಪತ್ನಿಗೆ ಎರಡು ಅವಳಿ ಗಂಡು ಮಕ್ಕಳಾಗಿತ್ತು. ಒಂದು ಮಗುವಿಗೆ ಹುಟ್ಟಿದಾಗಿನಿಂದಲೂ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿತ್ತು. ಕಾರ್ತಿಕ್ ಕೂಡ ಇತ್ತೀಚೆಗೆ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇದ್ದನು.

    ಪ್ರತಿ ಬಾರಿ ಮಗುವಿನ ಚಿಕಿತ್ಸೆಗೆ ಹೆಚ್ಚಿನದಾಗಿ ಹಣ ಖರ್ಚಾಗುತ್ತಿದೆ. ಹೇಗಿದ್ದರೂ ಒಂದು ಗಂಡು ಮಗು ಇದೆ. ಇನ್ನೊಂದು ಮಗುವಿನ ಅನಾರೋಗ್ಯದಿಂದ ಆರ್ಥಿಕವಾಗಿಯೂ ಸಮಸ್ಯೆ ಉಂಟಾಗುತ್ತದೆ ಎನ್ನುವ ಕಾರಣಕ್ಕೆ ಹಸುಗೂಸಿನ ಅಜ್ಜಿ ವಿಜಯಲಕ್ಷ್ಮಿಯೇ ಉಸಿರುಗಟ್ಟಿಸಿ ಕೊಲೆ ಗೈದಿದ್ದಾಳೆ ಎನ್ನುವುದು ವಿಚಾರಣೆಯ ವೇಳೆಯಲ್ಲಿ ತಿಳಿದು ಬಂದಿದೆ.

    ಸದ್ಯ ಅಶೋಕ್ ನಗರ ಪೊಲೀಸರು ಆರೋಪಿ ಅಜ್ಜಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 7 ತಿಂಗಳ ಹಿಂದೆಯಷ್ಟೇ ಮದ್ವೆಯಾಗಿದ್ದ ಗೃಹಿಣಿ ಶವ ನಾಲೆಯಲ್ಲಿ ಪತ್ತೆ

    7 ತಿಂಗಳ ಹಿಂದೆಯಷ್ಟೇ ಮದ್ವೆಯಾಗಿದ್ದ ಗೃಹಿಣಿ ಶವ ನಾಲೆಯಲ್ಲಿ ಪತ್ತೆ

    ಮಂಡ್ಯ: 7 ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಗೃಹಿಣಿ ಶವ ನಾಲೆಯಲ್ಲಿ ಪತ್ತೆಯಾಗಿದೆ. ಅಂಜಲಿ(22) ಶವವಾಗಿ ಪತ್ತೆಯಾದ ಗೃಹಿಣಿ. ಇವರು ಆನೆಗೊಳ ಗ್ರಾಮದವರಾಗಿದ್ದಾರೆ.

    ಇವರ ಶವ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನ್ನಹಟ್ಟಿ ಬಳಿಯ ವಿಸಿ ನಾಲೆಯಲ್ಲಿ ಪತ್ತೆಯಾಗಿದೆ. ಅಂಜಲಿಯನ್ನು 7 ತಿಂಗಳ ಹಿಂದೆ ಎಲೆಕೆರೆ ಗ್ರಾಮದ ಮಧು ಜೊತೆ ಮದುವೆ ಮಾಡಲಾಗಿತ್ತು. ಇದೇ ತಿಂಗಳ 20ರಿಂದ ಅಂಜಲಿ ಗಂಡನ ಮನೆಯಿಂದ ನಾಪತ್ತೆಯಾಗಿದ್ದಳು. ಶುಕ್ರವಾರ ಪಾಂಡವಪುರ ಠಾಣೆಯಲ್ಲಿ ಅಂಜಲಿ ಪೋಷಕರು ನಾಪತ್ತೆ ದೂರು ದಾಖಲಿಸಿದ್ದರು.

    ಇಂದು ಬನ್ನಹಟ್ಟಿ ಬಳಿ ನಾಲೆಯಲ್ಲಿ ಅಂಜಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv