Tag: ಪತ್ನಿ

  • ಫಸ್ಟ್‌ನೈಟ್‌ನಲ್ಲಿ ಸೆಕ್ಸ್‌ಗೆ ಗಂಡ ನಿರಾಕರಿಸಿದ್ದಕ್ಕೆ ಪತ್ನಿಯಿಂದ 2 ಕೋಟಿ ಹಣಕ್ಕೆ ಡಿಮ್ಯಾಂಡ್ ಆರೋಪ

    ಫಸ್ಟ್‌ನೈಟ್‌ನಲ್ಲಿ ಸೆಕ್ಸ್‌ಗೆ ಗಂಡ ನಿರಾಕರಿಸಿದ್ದಕ್ಕೆ ಪತ್ನಿಯಿಂದ 2 ಕೋಟಿ ಹಣಕ್ಕೆ ಡಿಮ್ಯಾಂಡ್ ಆರೋಪ

    ಬೆಂಗಳೂರು: ಫಸ್ಟ್‌ನೈಟ್‌ನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗದಿದ್ದಕ್ಕೆ ಪತ್ನಿ ಹಾಗೂ ಕುಟುಂಬದವರು 2 ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆಂದು ಆರೋಪಿಸಿ ಗಂಡ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ನೊಂದ ಪತಿ ಪ್ರವೀಣ್ ಎಂಬಾತ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪತ್ನಿ ಹಾಗೂ ಪತ್ನಿ ಸಂಬಂಧಿಕರ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ ಜೀವನಾಂಶಕ್ಕೆ ಪತ್ನಿ ಬರೋಬ್ಬರಿ ಎರಡು ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಡಿಕೇರಿ | ನೇಣು ಬಿಗಿದು 20ರ ಯುವತಿ ಆತ್ಮಹತ್ಯೆ

    ಪ್ರವೀಣ್ ಕಳೆದ ಮೇ ತಿಂಗಳಲ್ಲಿ ಚಿಕ್ಕಮಗಳೂರು ಮೂಲದ ಯುವತಿಯನ್ನ ವಿವಾಹವಾಗಿದ್ದ. ಮದುವೆಯಾಗಿ ಫಸ್ಟ್‌ನೈಟ್ ವೇಳೆ ಪತ್ನಿಯನ್ನು ಮುಟ್ಟಲು ಗಂಡ ಪ್ರವೀಣ್ ಹಿಂದೇಟು ಹಾಕಿದ್ದಾರೆಂದು ಆರೋಪ ಮಾಡಲಾಗಿದೆ. ಮದುವೆ ಆದ ಗಂಡ ನಪುಂಸಕ ಎಂದು ಪತ್ನಿಯಿಂದ ಗಲಾಟೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

    ಗಂಡನ ಬಗ್ಗೆ ಅನುಮಾನಗೊಂಡು ಪತ್ನಿ ಕುಟುಂಬಸ್ಥರು ವೈದ್ಯಕೀಯ ಪರೀಕ್ಷೆ ಮಾಡಿಸಿದ್ದರು. ಪರೀಕ್ಷೆಯಲ್ಲಿ ಲೈಂಗಿಕ ಕ್ರಿಯೆ ನಡೆಸಲು ಸಮರ್ಥನಾಗಿದ್ದಾನೆಂದು ವೈದ್ಯರು ದೃಢಪಡಿಸಿದ್ದರು. ಆದರೆ, ‘ಮಾನಸಿಕ ಒತ್ತಡದಿಂದ ಸ್ಬಲ್ಪ ಹಿಂದೇಟು ಹಾಕಿರಬಹುದು. ಸ್ವಲ್ಪ ತಾಳ್ಮೆಯಿಂದಿರುವಂತೆ’ ವೈದ್ಯರು ಸಲಹೆ ನೀಡಿದ್ದರು. ತಾಳ್ಮೆ ಕಳೆದುಕೊಂಡ ಪತ್ನಿ ಹಾಗೂ ಕುಟುಂಬಸ್ಥರಿಂದ ದಾಂದಲೆ ನಡೆಸಲಾಗಿದೆ. ಆ.17 ರಂದು ಪ್ರವೀನ್‌ನ ಗೋವಿಂದರಾಜನಗರ ಮನೆಗೆ‌ ನುಗ್ಗಿ ಪತ್ನಿ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆಂಬ ಆರೋಪವಿದೆ. ಇದನ್ನೂ ಓದಿ: ಕಾರವಾರ| ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

    ಬಂದು ಗಲಾಟೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಇತ್ತ ಘಟನೆ ಸಂಬಂಧ ಗಂಡ ಹಾಗೂ ಸಂಬಂಧಿಕರ ವಿರುದ್ಧ ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ನಿಯಿಂದ ವರದಕ್ಷಿಣೆ ಕಿರುಕುಳ ಕೇಸ್ ಕೂಡ ದಾಖಲಾಗಿದೆ.

  • ನನ್ನ ಪತಿ ಸುಳ್ಳು ಹೇಳ್ತಿದ್ದಾನೆ, ಇಟ್ಟುಕೊಂಡವಳ ಜೊತೆ ಸಂಸಾರ ಮಾಡಲು ನನ್ನನ್ನು ಓಡಿಸಿದ್ದ: ಅನಾಮಿಕನ ಮೊದಲ ಪತ್ನಿ

    ನನ್ನ ಪತಿ ಸುಳ್ಳು ಹೇಳ್ತಿದ್ದಾನೆ, ಇಟ್ಟುಕೊಂಡವಳ ಜೊತೆ ಸಂಸಾರ ಮಾಡಲು ನನ್ನನ್ನು ಓಡಿಸಿದ್ದ: ಅನಾಮಿಕನ ಮೊದಲ ಪತ್ನಿ

    ಮಂಡ್ಯ: ನನ್ನ ಪತಿ ಹೇಳುತ್ತಿರುವುದು ಬರೀ ಸುಳ್ಳು. ದುಡ್ಡಿನ ಆಮಿಷಕ್ಕೆ ಹೀಗೆ ಮಾಡುತ್ತಿರಬಹುದು ಎಂದು ಧರ್ಮಸ್ಥಳ (Dharmasthala) ಬುರುಡೆ ಪ್ರಕರಣದ ಸಾಕ್ಷಿದಾರ ಅನಾಮಿಕನ ಮೊದಲ ಪತ್ನಿ (Mask Man Wife) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, 1999ರಲ್ಲಿ ಮದುವೆ, 7 ವರ್ಷ ಸಂಸಾರ ಮಾಡಿದ್ದೆವು‌. ಆತನ ಗುಣ ಸರಿ ಇರಲಿಲ್ಲ. ಬರೀ ಸುಳ್ಳು ಹೇಳುತ್ತಿದ್ದ. ನನಗೆ ಹೊಡೆಯುವುದು, ಕೆಟ್ಟ ಮಾತುಗಳಿಂದ ಬೈಯುತ್ತಿದ್ದ. ದೇವಸ್ಥಾನಕ್ಕೆ ಆ ರೀತಿ ಮೋಸ ಮಾಡಬಾರದು. ಆತ ಬೇರೊಬ್ಬಳ ಜೊತೆ ಸಂಸಾರ ಮಾಡಲು ನನ್ನನ್ನೇ ಓಡಿಸಿದ್ದ ಎಂದು ತಿಳಿಸಿದರು.

    ಮೊದಲ ಪತ್ನಿ ಹೇಳಿದ್ದೇನು?
    1999 ರಲ್ಲಿ ನಮಗೆ ಮದುವೆಯಾಗಿತ್ತು. 7 ವರ್ಷ ನಾನು ಆತನ ಜೊತೆ ಸಂಸಾರ ಮಾಡಿದ್ದೆ. ನಮಗೆ ಒಂದು ಹೆಣ್ಣು, ಒಂದು ಗಂಡು ಮಕ್ಕಳಿದ್ದಾರೆ. ವಿಚ್ಚೇದನ ವೇಳೆ ಜೀವನಾಂಶ ಕೊಡಲು ನಾನು ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಸುಳ್ಳು ಹೇಳಿದ್ದ. ನನಗೆ ಅಲ್ಲೂ ನನಗೆ ನ್ಯಾಯ ಸಿಗಲಿಲ್ಲ. ನನ್ನ ತಾಯಿಯೇ ನನ್ನ ಮಕ್ಕಳನ್ನ ಸಾಕಿದ್ದರು. ಇದನ್ನೂ ಓದಿ: ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್‌

     

    ಮದುವೆ ಬಳಿಕ ಧರ್ಮಸ್ಥಳದ ನೇತ್ರಾವತಿಯಲ್ಲಿ 7 ವರ್ಷ ಅವರ ಜೊತೆಗಿದ್ದೆ. ಧರ್ಮಸ್ಥಳದಲ್ಲಿ ಕಸ ಗುಡಿಸುವುದು, ಬಾತ್‌ರೂಂ ತೊಳೆಯುವುದು ಮಾಡುತ್ತಿದ್ದರು. ಧರ್ಮಸ್ಥಳ ಎಂದರೆ ನಮ್ಮ ತವರು ಮನೆಯವರಿಗೆ ಬಹಳ ಪ್ರೀತಿ. ಗುಂಡಿ ತೋಡಿದರೂ ಏನು ಸಿಕ್ಕಿಲ್ಲ ಅಂದರೆ ಏನೋ‌ ಕಿತಾಪತಿ ಮಾಡ್ತಿದ್ದಾನೆ ಎನಿಸುತ್ತದೆ. ಇದನ್ನೂ ಓದಿ: ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

    ನನ್ನ ಬಳಿ ಅತ್ಯಾಚಾರ, ಕೊಲೆಯಾದ ಶವಗಳನ್ನು ಹೂತ ಬಗ್ಗೆ ಯಾವತ್ತೂ ಹೇಳಿಲ್ಲ. ಯಾವಾಗಲೂ ಅಹಂಕಾರದಲ್ಲೇ ಮರೆಯುತ್ತಿದ್ದ. ಅವನ ಸ್ವಂತ ಅಣ್ಣ, ತಮ್ಮಂದಿರಿಗೂ ಬಾಯಿಗೆ ಬಂದಹಾಗೇ ಬೈಯ್ಯುತ್ತಿದ್ದ. ಅವನು ಮೋಸಗಾರ, ಸುಳ್ಳುಗಾರ. ಅವನನ್ನು ಬಿಟ್ಟು ಬಂದದ್ದು ಒಳ್ಳೆಯದಾಯಿತು. ಇಟ್ಟುಕೊಂಡವಳನ್ನು ಮದುವೆ ಮಾಡಿಕೊಳ್ಳಲು ನನಗೆ ಚಿತ್ರಹಿಂಸೆ ಕೊಟ್ಟು ಓಡಿಸಿದ್ದ.

    ವೀರೇಂದ್ರ ಹೆಗ್ಗಡೆಯವರು (Veerendra Heggade) ತುಂಬಾ ಒಳ್ಳೆಯವರು. ಕೆಲಸ‌ಕೊಟ್ಟ, ಅನ್ನ ಕೊಟ್ಟ ಜಾಗಕ್ಕೆ ಅನ್ಯಾಯ ಮಾಡಬಾರದು. ಮದುವೆ ಮಾಡಿಕೊಂಡು ನಮಗೆ ಏನ್ ಮಾಡಿದ್ಯ ಎಂದು 2ನೇ ಹೆಂಡ್ತಿ ಬೈತ್ತಿದ್ದಳಂತೆ. ಅವಳ ಒತ್ತಡಕ್ಕೆ, ಆಮಿಷಕ್ಕೆ ಒಳಗಾಗಿ ಹೀಗೆ ಮಾಡುತ್ತಿರಬೇಕು. ದೇವಸ್ಥಾನದ ಹೆಸರು ಕೆಡಿಸುತ್ತಿರುವ ಅವನು ಹಾಳಾಗಬೇಕು. ಅವನು ಸತ್ತು, ಹೆಣ ಆದರೂ ನಾನು ಹೋಗಿ ನೋಡುವುದಿಲ್ಲ.

    ಅನಾಮಿಕನ ಅಣ್ಣ ಮತ್ತು ಮನೆಯವರೆಲ್ಲ ಒಳ್ಳೆಯವರು. ಆತ ತನಗೆ ಹೊಡೆದಾಗಲೂ ಅವರು ತನ್ನ ಪರವಾಗಿ ನಿಂತಿದ್ದರು. ಅವನನ್ನು ನೋಡಿದ ತಕ್ಷಣವೇ ಅವನ ದೇಹದ ಆಕಾರ ಮತ್ತು ನೇತ್ರಾವತಿಯಲ್ಲಿ ಕೆಲಸ ಮಾಡಿದ್ದನ್ನು ಹೇಳಿದಾಗ ಆತ ತನ್ನ ಮಾಜಿ ಪತಿ ಎನ್ನುವುದು ಖಚಿತವಾಯಿತು.

  • 9ನೇ ತರಗತಿಯ ಪುತ್ರಿ ಜೊತೆ ಸೇರಿಕೊಂಡು ಪತಿ ಕೊಂದ ಮಹಿಳೆ ಅರೆಸ್ಟ್‌

    9ನೇ ತರಗತಿಯ ಪುತ್ರಿ ಜೊತೆ ಸೇರಿಕೊಂಡು ಪತಿ ಕೊಂದ ಮಹಿಳೆ ಅರೆಸ್ಟ್‌

    ದಿಸ್ಪುರ: ಅಸ್ಸಾಂ ಮಹಿಳೆಯೊಬ್ಬರು ತನ್ನ ಪುತ್ರಿ ಮತ್ತು ಆಕೆಯ ಸ್ನೇಹಿತರ ಜೊತೆ ಸೇರಿಕೊಂಡು ಪತಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.

    ಉತ್ತಮ್‌ ಗೊಗೊಯ್‌ ಕೊಲೆಯಾದ ವ್ಯಕ್ತಿ. ಆತನ ಪತ್ನಿ ಸೋನೋವಾಲ್‌ ಗೊಗೊಯ್‌ ಹತ್ಯೆ ಮಾಡಿದ ಪತ್ನಿ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಹಿಳೆಯ 9ನೇ ತರಗತಿ ಓದುತ್ತಿರುವ ಪುತ್ರಿ ಮತ್ತು ಆಕೆಯ ಸ್ನೇಹಿತರು ಕೂಡ ಆರೋಪಿಗಳಾಗಿದ್ದಾರೆ.

    ಜು.25 ರಂದು ದಿಬ್ರುಗಢದ ಲಹೋನ್ ಗಾಂವ್‌ನಲ್ಲಿರುವ ಬೊರ್ಬರುವಾ ಪ್ರದೇಶದ ನಿವಾಸದಲ್ಲಿ ಉತ್ತಮ್ ಗೊಗೊಯ್ ಶವವಾಗಿ ಪತ್ತೆಯಾಗಿದ್ದರು. ತನ್ನ ಗಂಡ ಪಾರ್ಶ್ವವಾಯುವಿನಿಂದ ಮೃತಪಟ್ಟಿದ್ದಾರೆಂದು ಸೋನೋವಾಲ್‌ ನಂಬಿಸಲು ಯತ್ನಿಸಿದ್ದಳು. ಆದರೆ, ವಿಚಾರಣೆ ವೇಳೆ ಈಕೆಯ ನಿಜಬಣ್ಣ ಬಯಲಾಗಿದೆ.

    ಉತ್ತಮ್‌ ಅವರ ಸಹೋದರ ಪ್ರತಿಕ್ರಿಯಿಸಿ, ನನ್ನ ಅಣ್ಣ ಪಾರ್ಶ್ವವಾಯುವಿನಿಂದ ಮೃತಪಟ್ಟಿದ್ದಾನೆಂದು ಆತನ ಪತ್ನಿ ಹಾಗೂ ಪುತ್ರಿ ನನಗೆ ಕರೆ ಮಾಡಿ ತಿಳಿಸಿದರು. ನಾನು ತಕ್ಷಣ ಮನೆಗೆ ದೌಡಾಯಿಸಿದೆ. ಆಗ ಮನೆಯಲ್ಲಿ ದರೋಡೆಯಾಗಿದೆ. ನಿಮ್ಮ ಅಣ್ಣನಿಗೆ ಪಾರ್ಶ್ವವಾಯು ಆಯಿತು ಎಂದು ಹೇಳಿದರು. ಆದರೆ, ಅಣ್ಣನ ಕಿವಿ ಕತ್ತರಿಸಿರುವುದು ಕಂಡುಬಂತು. ನನಗೆ ಅನುಮಾನ ಬಂದು ಪೊಲೀಸ್‌ ಠಾಣೆಗೆ ದೂರು ನೀಡಿದೆ ಎಂದು ತಿಳಿಸಿದ್ದಾರೆ.

    ನಾವು ಪೊಲೀಸರನ್ನು ಸಂಪರ್ಕಿಸಿದೆವು. ಇಂದು ಅವರ ಪತ್ನಿ, ಮಗಳು ಮತ್ತು ಇತರ ಇಬ್ಬರನ್ನು ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ನಮಗೆ ತಿಳಿದುಬಂದಿದೆ. ಈ ಇಬ್ಬರು ಹುಡುಗರು ನನ್ನ ಅತ್ತಿಗೆ ಮತ್ತು ಅವರ ಮಗಳೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆಂದು ವರದಿಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ಪತ್ನಿಗೆ ಅಕ್ರಮ ಸಂಬಂಧ – ಎರಡು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ

    ಪತ್ನಿಗೆ ಅಕ್ರಮ ಸಂಬಂಧ – ಎರಡು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ

    ಗಾಂಧಿನಗರ: ಪತ್ನಿ ಇನ್ನೊಬ್ಬನೊಂದಿಗೆ ಅಕ್ರಮ ಸಂಬಂಧ (Affair) ಹೊಂದಿದ್ದ ಹಿನ್ನೆಲೆ ಗಂಡ ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೂರತ್‌ನಲ್ಲಿ (Surat) ನಡೆದಿದೆ.

    ಘಟನೆ ಸಂಬಂಧ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ. ಸೂರತ್ ನಗರದ ದಿಂಡೋಲಿಯ (Dindoli) ಶಾಲೆಯೊಂದರಲ್ಲಿ ಶಿಕ್ಷಕನಾಗಿದ್ದ ಅಲ್ಪೇಶ್‌ಭಾಯ್ (41) ತನ್ನ 7 ವರ್ಷ ಹಾಗೂ 2 ವರ್ಷದ ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವರ್ತೂರ್‌ ಪ್ರಕಾಶ್‌ ಕಿಡ್ನ್ಯಾಪ್‌ ಕೇಸಲ್ಲಿ ಆರೋಪಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರ ಬಂಧನ

    ಪತ್ನಿ ಫಲ್ಗುಣಿ ಭಾಯಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗುಮಾಸ್ತಳಾಗಿದ್ದಳು. ಫಲ್ಗುಣಿ ಪತಿಗೆ ಫೋನ್ ಮಾಡಿದ ವೇಳೆ ಅಲ್ಪೇಶ್ ಉತ್ತರಿಸಿರಲಿಲ್ಲ. ಈ ಹಿನ್ನೆಲೆ ಮನೆಗೆ ಬಂದು ನೋಡಿದಾಗ ಬಾಗಿಲುಗಳು ಲಾಕ್ ಆಗಿತ್ತು. ನಂತರ ಪತ್ನಿ ಸಂಬಂಧಿಕರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾಳೆ. ಮನೆಗೆ ಬಂದ ಸಂಬಂಧಿಕರು ಮನೆಯ ಬಾಗಿಲು ಒಡೆದು ಒಳಗೆ ಹೋದಾಗ ಹಾಸಿಗೆಯ ಮೇಲೆ ಇಬ್ಬರು ಮಕ್ಕಳು ಹಾಗೂ ಪಕ್ಕದಲ್ಲೇ ಪತಿ ಕೂಡ ಶವವಾಗಿ ಬಿದ್ದಿದ್ದರು ಎಂದು ಎಂದು ಸೂರತ್‌ನ ಉಪ ಪೊಲೀಸ್ ಆಯುಕ್ತ (ಡಿಸಿಪಿ) ವಿಜಯ್ ಸಿಂಗ್ ಗುರ್ಜರ್ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸಲ್ಲಿ ತೀರ್ಪು ವಿಳಂಬಕ್ಕೆ ಶತಪ್ರಯತ್ನ ನಡೆದಿತ್ತು: ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್

    ಮೃತ ಅಲ್ಪೇಶ್ ಮೊಬೈಲ್‌ನಲ್ಲಿ ಡೆತ್ ನೋಟ್ ಹಾಗೂ ಕೆಲವು ವೀಡಿಯೋಗಳು ಲಭಿಸಿವೆ. ಅಲ್ಲದೇ ರೂಮ್‌ನಲ್ಲಿ ಎರಡು ಡೈರಿಗಳು ಕೂಡ ಸಿಕ್ಕಿದೆ. ಘಟನೆ ಸಂಬಂಧ ಅಲ್ಪೇಶ್ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಅಲ್ಪೇಶ್ ಪತ್ನಿ ಫಲ್ಗುಣಿ ಭಾಯಿ, ನರೇಶ್ ಕುಮಾರ್ ರಾಥೋಡ್ ಎಂಬ ಇನ್ನೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧದಿಂದಾಗಿ ಅಲ್ಪೇಶ್ ತೀವ್ರ ಒತ್ತಡದಲ್ಲಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ಹೇಳಿದ್ದಾರೆ. ಇದನ್ನೂ ಓದಿ: ದೊಡ್ಡಗಾಜನೂರಿನಲ್ಲಿ ಈಡಿಗ ಸಂಪ್ರದಾಯದಂತೆ ನೆರವೇರಿದ ಡಾ.ರಾಜ್ ಸಹೋದರಿ ಅಂತ್ಯಕ್ರಿಯೆ

    ಡೈರಿಯಲ್ಲಿ ಅಕ್ರಮ ಸಂಬಂಧದಿಂದ ಮನನೊಂದಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ತನಿಖೆಗಾಗಿ ಡೈರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಕಸಿತ ಭಾರತ್ @ 2047: ಹೂಡಿಕೆದಾರರ ದುಂಡುಮೇಜಿನ ಸಮ್ಮೇಳನ

  • ಅಕ್ರಮ ಸಂಬಂಧಕ್ಕೆ ಅಡ್ಡಿ – ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೆರೆಗೆ ತಳ್ಳಿ ಕೊಂದ ಪತ್ನಿ

    ಅಕ್ರಮ ಸಂಬಂಧಕ್ಕೆ ಅಡ್ಡಿ – ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೆರೆಗೆ ತಳ್ಳಿ ಕೊಂದ ಪತ್ನಿ

    ಹಾವೇರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆ ಪ್ರಿಯಕರ ಜೊತೆ ಸೇರಿ ಪತಿಯನ್ನೇ ಪತ್ನಿ ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಹಾವೇರಿಯ ರಟ್ಟಿಹಳ್ಳಿ ತಾಲೂಕಿನಲ್ಲಿ ನಡೆದಿದೆ.

    ಹರಿಹರ ಮೂಲದ ಶಫಿವುಲ್ಲಾ ಅಬ್ದುಲ್ ಮಹೀಬ್ (38) ಕೊಲೆಯಾದ ಪತಿ ಎಂದು ಗುರುತಿಸಲಾಗಿದೆ. ಆರೋಪಿಗಳಾದ ಪತ್ನಿ ಶಹೀನಾಬಾನು ಹಾಗೂ ಆಕೆಯ ಪ್ರಿಯಕರ ಮುಬಾರಕ್ ಖಲಂದರಸಾಬ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ತಾಯಿಯನ್ನು ಕೊಂದ ಪಾಪಿಯಿಂದ ತಂದೆಯ ಮೇಲೂ ಮೃಗೀಯ ವರ್ತನೆ – ಚರ್ಮ ಸುಲಿಯುವಂತೆ ಹಲ್ಲೆ

    ಮುಬಾರಕ್ ಖಲಂದರಸಾಬ್ ಮತ್ತು ಶಹೀನಾಬಾನು ಮಧ್ಯೆ ಅನೈತಿಕ ಸಂಬಂಧ ಇತ್ತು. ಮುಬಾರಕ್ ಖಲಂದರಸಾಬ್‌ನನ್ನು ಮದುವೆ ಆಗುವಂತೆ ಶಹೀನಾಬಾನು ಪೀಡಿಸುತ್ತಿದ್ದಳು. ನಮ್ಮಿಬ್ಬರ ಮದುವೆಗೆ ನಿನ್ನ ಪತಿ ಅಡ್ಡಿಯಾಗ್ತಾನೆ ಎಂದು ಹೇಳಿದ್ದ. ಇದನ್ನೂ ಓದಿ: 10,000 ಕೊಡ್ತೀನಿ ಬಾ – ಯುವತಿಯನ್ನು ಮಂಚಕ್ಕೆ ಕರೆದ ಕಾಮುಕ ಪ್ರಿನ್ಸಿಪಾಲ್ ಅರೆಸ್ಟ್

    ಹೀಗಾಗಿ ಇಬ್ಬರೂ ಸೇರಿ ಶಫೀವುಲ್ಲಾ ಕೊಲೆಗೆ ಸಂಚು ರೂಪಿಸಿದ್ದರು. ಬಳಿಕ ಮುಬಾರಕ್ ಖಲಂದರಸಾಬ್, ಶಫೀವುಲ್ಲಾ ಜೊತೆ ಗೆಳೆತನ ಬೆಳಸಿ ಮನೆಗೆ ಬಂದು ಹೋಗಿ ಮಾಡುತ್ತಿದ್ದ. ಜು. 27ರಂದು ಕೆರೆ ನೋಡಲು ಹೋಗೋಣ ಎಂದು ಪುಸಲಾಯಿಸಿ ಶಫೀವುಲ್ಲಾನನ್ನು ಕೆರೆ ಕಡೆ ಕರೆದುಕೊಂಡು ಹೋಗಿದ್ದ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರಳಿದ ಸಾರಿಗೆ ಬಸ್ – ಪ್ರಯಾಣಿಕರು ಸೇಫ್

    ಮದಗಮಾಸೂರು ಕೆರೆ ಬಳಿ ಎಣ್ಣೆ ಪಾರ್ಟಿ ಮಾಡಿ, ಬಳಿಕ ಶಫೀವುಲ್ಲಾನನ್ನು ಕೆರೆಗೆ ತಳ್ಳಿದರು. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಿದ್ದರು. ಮೃತದೇಹ ಪತ್ತೆಯಾದ ಬಳಿಕ, ದೇಹದಲ್ಲಿ ಗಾಯಗಳಿರುವುದು ಕಂಡು ಅನುಮಾನ ಮೂಡಿತ್ತು. ಪೊಲೀಸರು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಆರೋಪಿಗಳು ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಇದೀಗ ಹಿರೇಕೆರೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ʻದೃಶ್ಯಂʼ ಸಿನಿಮಾ ಸ್ಟೈಲ್‌ನಲ್ಲಿ ಕೊಲೆ – ಪ್ರಿಯಕರನ ಜೊತೆಗೂಡಿ ಗಂಡನನ್ನ ಕೊಂದು ಟೈಲ್ಸ್‌ ಕೆಳಗೆ ಹೂತಿದ್ದ ಪತ್ನಿ

    ʻದೃಶ್ಯಂʼ ಸಿನಿಮಾ ಸ್ಟೈಲ್‌ನಲ್ಲಿ ಕೊಲೆ – ಪ್ರಿಯಕರನ ಜೊತೆಗೂಡಿ ಗಂಡನನ್ನ ಕೊಂದು ಟೈಲ್ಸ್‌ ಕೆಳಗೆ ಹೂತಿದ್ದ ಪತ್ನಿ

    ಮುಂಬೈ: ಪ್ರೀತಿ ಎಂಬುದು ಮಾಯೆ.. ಈ ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ, ಆದ್ರೆ ಕೆಲವೊಮ್ಮೆ ಪ್ರೀತಿಗೆ ಹೃದಯವೂ ಇರೋದಿಲ್ಲ, ಅದು ತನ್ನ ಪ್ರೇಮಿಯನ್ನ (Lovers) ಬಿಟ್ಟು ಉಳಿದವರಿಗಾಗಿ ಕಲ್ಲಿನಷ್ಟೇ ಕಠೋರವಾಗಿರುತ್ತೆ. ಇದಕ್ಕೆ ಮಹಾರಾಷ್ಟ್ರದಲ್ಲಿ ನಡೆದಿರುವ ಮತ್ತೊಂದು ಪ್ರಕರಣ ಸಾಕ್ಷಿಯಾಗಿದೆ.

    ಯೆಸ್.‌ ʻದೃಶ್ಯಂʼ ಸಿನಿಮಾ ಶೈಲಿಯಲ್ಲಿ ಮಹಾರಾಷ್ಟ್ರದ (Maharashtr) ಪಾಲ್ಘರ್ ಜಿಲ್ಲೆಯ ಖತರ್ನಾಕ್‌ ಮಹಿಳೆ, ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಂದು ಶವವನ್ನ ತನ್ನ ಮನೆಯೊಳಗೆ ಹೂತಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದೆ. 35 ವರ್ಷದ ವಿಜಯ್‌ ಚವಾಣ್‌ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಯುಎಇ ಅಪಾರ್ಟ್‌ಮೆಂಟ್‌ನಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆ – ವರದಕ್ಷಿಣೆ ಕಿರುಕುಳ ಆರೋಪ

    ವರದಿಗಳ ಪ್ರಕಾರ, ವಿಜಯ್‌ ಚವಾಣ್‌ ಮುಂಬೈನಿಂದ (Mumbai) ಸುಮಾರು 70 ಕಿಮೀ ದೂರದಲ್ಲಿರುವ ನಲಸೋಪರ ಪೂರ್ವದ ಗಡ್ಗಪದ ಪ್ರದೇಶದಲ್ಲಿ ಪತ್ನಿ ಕೋಮಲ್ ಚವಾಣ್ (28) ಜೊತೆಗೆ ವಾಸವಿದ್ದ. ಆದ್ರೆ ಕಳೆದ 15 ದಿನಗಳಿಂದ ವಿಜಯ್‌ ನಾಪತ್ತೆಯಾಗಿದ್ದ. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

    ಸೋಮವಾರ ಚವಾಣ್‌ನನ್ನ ಹುಡುಕುತ್ತಿದ್ದ ಅವನ ಸಹೋದರರು ಕೋಮಲ್‌ ಮನೆಗೆ ಬಂದಿದ್ದರು. ಅಲ್ಲಿ ನೆಲಕ್ಕೆ ಹಾಕಿದ್ದ ಕೆಲ ಟೈಲ್ಸ್‌ಗಳ ಬಣ್ಣದಲ್ಲಿ ವ್ಯತ್ಯಾಸ ಕಂಡುಬಂದಿತ್ತು. ಇದರಿಂದ ಅನುಮಾನಗೊಂಡ ವಿಜಯ್‌ ಸಹೋದರರು ವ್ಯತ್ಯಾಸ ಕಂಡುಬಂದ ಟೈಲ್ಸ್‌ಗಳನ್ನ ನೆಲದಿಂದ ಕಿತ್ತರು. ಅದರ ಕೆಳಗೆ ಹೂತಿಟ್ಟಿದ್ದ ವೇಸ್ಟೇಜ್‌ನಿಂದ ಕೆಟ್ಟ ದುರ್ವಾಸನೆ ಬರುತಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಗಂಡನ ಶವ ಹೂತಿಟ್ಟಿದ್ದ ರಹಸ್ಯ ಬೆಳಕಿಗೆ ಬಂದಿತು.

    ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪತ್ನಿಯನ್ನ ಬಂಧಿಸಿದ್ದಾರೆ. ಈ ಬೆನ್ನಲ್ಲೇ ಕೋಮಲ್‌ ತನ್ನ ನೆರೆಯ ಮೋನು ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವಿಷಯ ತಿಳಿದುಬಂದಿದೆ. ಈತನ ಜೊತೆಗೂಡಿಯೇ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ SIT ಹೆಗಲಿಗೆ – ನಿಷ್ಪಕ್ಷಪಾತ ತನಿಖೆ ಬಗ್ಗೆ ಗೃಹ ಸಚಿವ ಪರಂ ಭರವಸೆ

  • Tamil Nadu | ಪತಿಯೊಂದಿಗೆ ಜಗಳ – ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ಇರಿದು ಕೊಂದ ಗಂಡ

    Tamil Nadu | ಪತಿಯೊಂದಿಗೆ ಜಗಳ – ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ಇರಿದು ಕೊಂದ ಗಂಡ

    ಚೆನ್ನೈ: ಪತಿಯೊಂದಿಗೆ (Husband) ನಡೆದ ಜಗಳದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು (Wife) ಪತಿ ಇರಿದು ಕೊಂದ ಘಟನೆ ತಮಿಳುನಾಡಿನ (Tamil Nadu) ಕರೂರ್ (Karur) ಜಿಲ್ಲೆಯಲ್ಲಿ ನಡೆದಿದೆ.

    ಶ್ರುತಿ ಮೃತ ಪತ್ನಿ. ಶ್ರುತಿ ಪಟ್ಟವರ್ತಿಯ ವಿಶ್ರುತ್‌ನನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದರು. ಶನಿವಾರ ಶ್ರುತಿ ಗಂಡನೊಂದಿಗೆ ಜಗಳವಾಡಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದನ್ನೂ ಓದಿ: ನಾನು ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು.. ನನಗೆ ಪಾಪಪ್ರಜ್ಞೆ ಕಾಡುತ್ತಿದೆ: ದೂರುದಾರ ಹೇಳಿದ್ದೇನು?

    ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ಬಂದ ಪತಿ ವಿಶ್ರುತ್, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪತ್ನಿಗೆ ಮೂರು ಬಾರಿ ಇರಿದು ಹತ್ಯೆಮಾಡಿದ್ದಾನೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಘಟನೆ ಸಂಬಂಧ ಕುಳಿತಲೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕರೆಂಟ್ ಶಾಕ್ ನೀಡಿ ಮಾವನ ಕೊಲೆ – ಗಾಯ ಮರೆಮಾಚಲು ರೋಸ್ ವಾಟರ್, ಅರಶಿಣ ಪುಡಿ ಹಚ್ಚಿದ ಸೊಸೆ

  • Ramanagara | ಅಡುಗೆ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    Ramanagara | ಅಡುಗೆ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    ರಾಮನಗರ: ಅಡುಗೆ (Cooking) ಮಾಡುವ ವಿಚಾರಕ್ಕೆ ಪತಿ- ಪತ್ನಿಯ (Husband-Wife) ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಾಗಡಿ (Magadi) ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ ನಡೆದಿದೆ.

    ತಿಮ್ಮಮ್ಮ (65) ಮೃತ ಮಹಿಳೆ. ಪತಿ ರಂಗಯ್ಯ (75) ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಕಾಯಿ ತುರಿಯುವ ಮಣೆಯಿಂದ ಹೊಡೆದು ರಂಗಯ್ಯ ಪತ್ನಿ ತಿಮ್ಮಮ್ಮಳನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಪತ್ನಿ ಹತ್ಯೆ ಮಾಡಿದ ನಂತರ ತಿರುಪತಿಗೆ ಎಸ್ಕೇಪ್ ಆಗಲು ರಂಗಯ್ಯ ಮುಂದಾಗಿದ್ದ ಎನ್ನಲಾಗಿದೆ. ತಕ್ಷಣವೇ ಮಾಹಿತಿ ಪಡೆದ ಪೊಲೀಸರು ರಾಮನಗರದಲ್ಲಿ ರಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: NASA Axiom-4 Mission | ಸ್ಪೇಸ್‌ ಎಕ್ಸ್‌ ಡ್ರ್ಯಾಗನ್‌ ನೌಕೆ ಡಾಕಿಂಗ್‌ ಯಶಸ್ವಿ

    ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಡ್ರಗ್ಸ್ ಸೇವನೆ: ನಟ ಶ್ರೀಕಾಂತ್ ಬಳಿಕ ಮತ್ತೋರ್ವ ನಟನ ಬಂಧನ

  • ಲವ್ವರ್ ಜೊತೆ ಸಿಕ್ಕಿಬಿದ್ದ ಪತ್ನಿ – ಸಿಟ್ಟಿಗೆದ್ದ ಪತಿಯಿಂದ ಡಬಲ್ ಮರ್ಡರ್

    ಲವ್ವರ್ ಜೊತೆ ಸಿಕ್ಕಿಬಿದ್ದ ಪತ್ನಿ – ಸಿಟ್ಟಿಗೆದ್ದ ಪತಿಯಿಂದ ಡಬಲ್ ಮರ್ಡರ್

    ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿಯು ಪರ ಪುರುಷನೊಂದಿಗೆ ಒಟ್ಟಿಗೆ ಇದ್ದುದನ್ನು ಕಣ್ಣಾರೆ ಕಂಡ ಪತಿ ಮಾರಕಾಸ್ತ್ರಗಳಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಚ್ಚಿ ಕೊಂದಿರುವ ಘಟನೆ ಕಲಬುರಗಿಯ (Kalaburagi) ಆಳಂದ ತಾಲೂಕಿನ ಮಾದನಹಿಪ್ಪರಗಾ (Madanahipparaga) ಗ್ರಾಮದಲ್ಲಿ ನಡೆದಿದೆ.

    ಸೃಷ್ಟಿ(22), ಖಾಜಪ್ಪ(23) ಮೃತರು. ಆರೋಪಿ ಶ್ರೀಮಂತ ಕೊಲೆ ಮಾಡಿ, ಮಾದನಹಿಪ್ಪರಗಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮೂವರಿಗೆ ಚಾಕು ಇರಿತ

    2 ವರ್ಷಗಳ ಹಿಂದೆ ಸೃಷ್ಟಿಯು ಶ್ರೀಮಂತನನ್ನು ಮದುವೆಯಾಗಿದ್ದಳು. ಗುರುವಾರ ಊರಿಗೆ ತೆರಳಿದ್ದ ಶ್ರೀಮಂತ, ರಾತ್ರಿ ಮನೆಗೆ ಹಿಂದಿರುಗಿದ್ದ. ಮನೆಯಲ್ಲಿ ಪತ್ನಿಯು ಅದೇ ಗ್ರಾಮದ ಖಾಜಪ್ಪನ ಜೊತೆ ಇರುವುದನ್ನು ಕಣ್ಣಾರೆ ಕಂಡು ಕೋಪಗೊಂಡ ಶ್ರೀಮಂತ ತಕ್ಷಣ ಮಾರಕಾಸ್ತ್ರಗಳಿಂದ ಇಬ್ಬರನ್ನೂ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಫಾಜಿಲ್ ಫೋಟೊ ಜೊತೆಗೆ ಸುಹಾಸ್ ಫೋಟೊ ಹಾಕಿ ಟಾರ್ಗೆಟ್ ಫಿಕ್ಸ್ ಮಾಡಿದ್ದ ಹಂತಕರು!

    ಘಟನಾ ಸ್ಥಳಕ್ಕೆ ಮಾದನ ಹಿಪ್ಪರಗಾ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಶ್ರೀಮಂತನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಹಾಸನ | ಕೌಟುಂಬಿಕ ಕಲಹ – ಮನನೊಂದು ಮಹಿಳೆ ನೇಣಿಗೆ ಶರಣು

    ಹಾಸನ | ಕೌಟುಂಬಿಕ ಕಲಹ – ಮನನೊಂದು ಮಹಿಳೆ ನೇಣಿಗೆ ಶರಣು

    ಹಾಸನ: ಕೌಟುಂಬಿಕ ಕಲಹದಿಂದ (Family Feud) ಮನನೊಂದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆ ಬೇಲೂರು (Belur) ತಾಲೂಕಿನ ಲಿಂಗಾಪುರ (Lingapura) ಗ್ರಾಮದಲ್ಲಿ ನಡೆದಿದೆ.

    ಹರಿಣಾಕ್ಷಿ (40) ಆತ್ಮಹತ್ಯೆಗೆ ಶರಣಾದ ಮಹಿಳೆ. ಹರಿಣಾಕ್ಷಿ 16 ವರ್ಷಗಳ ಹಿಂದೆ ಲಿಂಗಾಪುರ ಗ್ರಾಮದ ಶೇಖರ್ ಜೊತೆ ವಿವಾಹವಾಗಿದ್ದರು. ಪತಿ ತನ್ನ ಪತ್ನಿಯನ್ನು ಸದಾ ಅನುಮಾನದಿಂದ ನೋಡುತ್ತಿದ್ದ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಎರಡೂ ಕುಟುಂಬಗಳ ಹಿರಿಯರು ಹಲವು ಬಾರಿ ರಾಜಿ ಸಂಧಾನ ಕೂಡ ಮಾಡಿದ್ದರು. ಆದರೂ ಪತಿ-ಪತ್ನಿ ನಡುವೆ ಜಗಳ ನಡೆಯುತ್ತಲೇ ಇತ್ತು. ಇದನ್ನೂ ಓದಿ: ಸರ್ಕಾರಿ ಬಸ್, ಆಟೋರಿಕ್ಷಾ ನಡುವೆ ಭೀಕರ ಅಪಘಾತ – 6 ಮಂದಿ ದುರ್ಮರಣ

    ಇದರಿಂದ ಮನನೊಂದಿದ್ದ ಹರಿಣಾಕ್ಷಿ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಟಾಯ್ಲೆಟ್‌ಗೆ ಹೋಗಿದ್ದವಳು ಕೊನೆ ಕ್ಷಣದಲ್ಲಿ ಹಾಜರ್ – ಸಿಇಟಿಯಲ್ಲಿ ನಕಲಿ ವಿದ್ಯಾರ್ಥಿ, ತನಿಖೆಗೆ ಆದೇಶ