Tag: ಪತ್ನಿ

  • ಪತ್ನಿಗೆ ಗುಂಡಿಕ್ಕಿದ ಉದ್ಯಮಿ ಪ್ರಕರಣ- ಬಂಧನವಾಗುವ ಮೊದ್ಲೇ ಮಕ್ಳನ್ನೂ ಮುಗಿಸಲು ಸ್ಕೆಚ್ ಹಾಕಿದ್ದ!

    ಪತ್ನಿಗೆ ಗುಂಡಿಕ್ಕಿದ ಉದ್ಯಮಿ ಪ್ರಕರಣ- ಬಂಧನವಾಗುವ ಮೊದ್ಲೇ ಮಕ್ಳನ್ನೂ ಮುಗಿಸಲು ಸ್ಕೆಚ್ ಹಾಕಿದ್ದ!

    ಬೆಂಗಳೂರು: ಜಯನಗರದಲ್ಲಿ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಸಹನಾ(42) ಪತಿ ಗಣೇಶ್ ನಿಂದಲೇ ಕೊಲೆಯಾದ ದುರ್ದೈವಿಯಾಗಿದ್ದು, ಈ ಘಟನೆ ಜಯನಗರದ ನಾಲ್ಕನೇ ಬ್ಲಾಕ್ ನಲ್ಲಿ ನಡೆದಿತ್ತು. ಆರೋಪಿ ಮಕ್ಕಳ ಮೇಲೂ ಶೂಟ್ ಮಾಡಿದ್ದು, ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಘಟನೆ ವಿವರ:
    ಉದ್ಯಮಿ ಗಣೇಶ್ ಮೂಲತಃ ಸಕಲೇಶಪುರದವನಾಗಿದ್ದಾನೆ. ಅಲ್ಲಿ ಕಾಫಿ ತೋಟ ಮಾರಿ ಬೆಂಗಳೂರಿಗೆ ಬಂದಿದ್ದು, ನಗರದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದನು. ಕನಕಪುರ ರಸ್ತೆಯಲ್ಲಿ ರೆಸಾರ್ಟ್ ನಿರ್ಮಾಣ ಮಾಡಿದ್ದನು. ಆದ್ರೆ ಕಳೆದ ಎರಡು ವರ್ಷದಿಂದ ರೆಸಾರ್ಟ್ ನಲ್ಲಿ ನಷ್ಟ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದನು. ಇತ್ತೀಚೆಗೆ ಸಾಲಗಾರರ ಕಾಟ ಜಾಸ್ತಿಯಾಗಿತ್ತು. ಹೀಗಾಗಿ ಗಣೇಶ್ ಹಾಗೂ ಪತ್ನಿ ಸಹಾನ ನಡುವೆ ಆಗಾಗ ಸಾಲದ ವಿಚಾರಕ್ಕೆ ಜಗಳವಾಗುತ್ತಿತ್ತು. ಗುರುವಾರ ರಾತ್ರಿಯೂ ಇದೇ ವಿಚಾರಕ್ಕೆ ಸಂಬಂಧಿಸಿ ಗಂಡ-ಹೆಂಡತಿ ನಡುವೆ ಜಗಳವಾಗಿತ್ತು. ಜಗಳ ತಾರಕಕ್ಕೇರಿದ್ದು ಗಣೇಶ್ ತನ್ನ ಲೈಸೆನ್ಸ್ ಗನ್ ನಿಂದ ಪತ್ನಿ ಸಹಾನಾಗೆ ಶೂಟ್ ಮಾಡಿದ್ದನು. ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಗಣೇಶ್ ತನ್ನ ಪತ್ನಿಗೆ ಶೂಟ್ ಮಾಡಿ ಮುಗಿಸಿದ್ದನು.

    ಅರೆಸ್ಟ್ ಆಗಿದ್ದು ಹೇಗೆ?:
    ಮನೆಯಲ್ಲೇ ಪತ್ನಿ ಸಹಾನ ಸಾವನ್ನಪ್ಪಿದ್ದ ಬಳಿಕ ಮೂರು ಮಕ್ಕಳನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿದ್ದು, ಬಿಡದಿಯ ಫಾರ್ಮ್ ಹೌಸ್ ನಲ್ಲಿ ತಲೆಮರೆಸಿಕೊಂಡಿದ್ದನು. ಫಾರ್ಮ್ ಹೌಸ್ ನಲ್ಲಿ ಮಕ್ಕಳಿಗೆ ಶೂಟ್ ಮಾಡಿದ್ದಾನೆ. ಪರಿಣಾಮ ಹೆಣ್ಣು ಮಗಳ ಹೊಟ್ಟೆಗೆ ಹಾಗೂ ಮಗನ ಕೈ ಹಾಗೂ ತೊಡೆ ಭಾಗಕ್ಕೆ ಗಾಯಗಳಾಗಿವೆ. ಬಳಿಕ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗ್ತಿದ್ದನು.

    ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಮಕ್ಕಳು, ಗಣೇಶ್ ಬಳಿ ನೀರು ಕೇಳಿದ್ದಾರೆ. ಹೀಗಾಗಿ ನೀರು ಕುಡಿಸಲೆಂದು ಆತ ಕಾರಿನಲ್ಲೇ ಮುಖ್ಯ ರಸ್ತೆಗೆ ಬಂದಿದ್ದಾನೆ. ಇತ್ತ ಗಣೇಶ್ ಗಾಗಿ ಹುಡುಕುತ್ತಿದ್ದ ಪೊಲೀಸರಿಗೆ ಆತನ ಕಾರ್ ನಂಬರ್ ಮಾಹಿತಿ ಸಿಕ್ಕಿದೆ. ಹೀಗಾಗಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿ ಗಣೇಶ್ ನನ್ನು ಬೆನ್ನಟ್ಟಿದ್ದು, ಅಂಚೆ ಪಾಳ್ಯದ ಬಳಿ ಬಂಧಿಸಿದ್ದಾರೆ. ಇನ್ನು ಗಾಯಗೊಂಡ ಮಕ್ಕಳಿಬ್ಬರನ್ನ ಕೋಣನಕುಂಟೆಯ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಕ್ಕಳಿಬ್ಬರ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಪೊಲೀಸರು ತನ್ನನ್ನು ಬಂಧಿಸೋ ಮುಂಚೆ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ಳುವ ಪ್ಲಾನ್ ಮಾಡಿದ್ದೆ. ಅದಕ್ಕಾಗಿಯೇ ಮಕ್ಕಳ ಮೇಲೆ ಗುಂಡು ಹಾರಿಸಿದ್ದೆ. ನನಗೆ ತುಂಬಾ ಸಾಲ ಇತ್ತು. ಅದಕ್ಕಾಗಿ ಆಸ್ತಿ ಮಾರಾಟ ಮಾಡಲು ಪ್ರಯತ್ನ ಮಾಡ್ತಿದ್ದೆ. ಆಸ್ತಿ ಮಾರಾಟ ಮಾಡಲು ಪತ್ನಿ ಅನುಮತಿ ನೀಡುತ್ತಿರಲಿಲ್ಲ. ಆಸ್ತಿ ಮಾರಾಟ ಮಾಡಿದ್ದರೆ ಮಕ್ಕಳು ಬೀದಿಗೆ ಬರುತ್ತಾರೆ ಎಂದು ಹೇಳುತ್ತಿದ್ದಳು. ಮಕ್ಕಳಿಗಾಗಿ ನಾನು ಜೀವ ಕಳೆದುಕೊಳ್ಳುವ ರೀತಿ ಇರಲಿಲ್ಲ. ಅದಕ್ಕಾಗಿ ನಾನು ಈ ಕೃತ್ಯ ಮಾಡಿದೆ ಅಂತ ಗಣೇಶ್ ತಪ್ಪೊಪ್ಪಿಕೊಂಡಿದ್ದಾನೆ.

    https://www.youtube.com/watch?v=FtP56UNZo1w

     

  • ಆತ್ಮಹತ್ಯೆ ಮಾಡ್ಕೊಂಡ ಪತ್ನಿ – ಕಾರಿನಲ್ಲಿ ಮೃತದೇಹವನ್ನು ಇಟ್ಟು 8 ಗಂಟೆ ಸುತ್ತಾಡಿದ!

    ಆತ್ಮಹತ್ಯೆ ಮಾಡ್ಕೊಂಡ ಪತ್ನಿ – ಕಾರಿನಲ್ಲಿ ಮೃತದೇಹವನ್ನು ಇಟ್ಟು 8 ಗಂಟೆ ಸುತ್ತಾಡಿದ!

    ಮುಂಬೈ: ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ಪತ್ನಿಯ ಮೃತದೇಹವನ್ನು ವ್ಯಕ್ತಿಯೊಬ್ಬ ತನ್ನ ಕಾರಿನಲ್ಲಿ ಇಟ್ಟುಕೊಂಡು ಸುಮಾರು 8 ಗಂಟೆ ಸುತ್ತಾಡಿರುವ ಘಟನೆ ನಗರದಲ್ಲಿ ನಡೆದಿದೆ.

    28 ವರ್ಷದ ಸೋಕ್ಲಾರಾಮ್ ಪುರೋಹಿತ್ ಪತ್ನಿ ಮಣಿ ಬೆನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ ಗೃಹಿಣಿ. ಜೂನ್ 7 ರಂದು ಮುಂಬೈನ ಸಕಿ ನಕಾದಲ್ಲಿ ಈ ಘಟನೆ ನಡೆದಿದೆ. ಪುರೋಹಿತ್ ಜೂನ್ 7 ರಂದು ಮಧ್ಯರಾತ್ರಿ ಮನೆಗೆ ಬಂದಾಗ ಪತ್ನಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ನಂತರ ಆತ ತನ್ನ ಕಾರಿನಲ್ಲಿ ದೇಹವನ್ನು ಇಟ್ಟುಕೊಂಡು ಸಕಿ ನಕಾದಲ್ಲಿನ ಖಾಸಗಿ ಆಸ್ಪತ್ರೆಗೆ ಹೋಗಿದ್ದಾನೆ. ಅಲ್ಲಿನ ವೈದ್ಯರು ನಿಮ್ಮ ಪತ್ನಿ ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

    ಪುರೋಹಿತ್ ಬಳಿಕ ಮತ್ತೊಂದು ಆಸ್ಪತ್ರೆಗೆ ಹೋಗಿದ್ದಾನೆ. ಅಲ್ಲೂ ಕೂಡ ವೈದ್ಯರು ಇದನ್ನೇ ಹೇಳಿದ್ದಾರೆ. ಕೊನೆಗೆ ಅವನು ನಗರದೆಲ್ಲೆಡೆ ಸುತ್ತಾಡಿ ಮೃತದೇಹದ ಜೊತೆಗೆ ಮನೆಗೆ ಹಿಂದಿರುಗಿದ್ದಾನೆ. ಬಳಿಕ ಪುರೋಹಿತ್ ಬೆಳಗ್ಗೆ ಸಮುದಾಯ ಆಸ್ಪತ್ರೆಗೆ ಮೃತದೇಹವನ್ನು ತೆಗೆದುಕೊಂಡು ಹೋಗಲು ನಿರ್ಧರಿಸಿದ್ದಾನೆ. ಆದರೆ ಸ್ನೇಹಿತನ ಸಲಹೆಯ ಮೇರೆಗೆ ಕೊನೆಗೆ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ಅಲ್ಲಿ ವೈದ್ಯರು ನಮಗೆ ಮಾಹಿತಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಸಕಿ ನಕಾ ಪೊಲೀಸರು ಆರಂಭದಲ್ಲಿ ಇದೊಂದು ಆಕಸ್ಮಿಕ ಸಾವು ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಬಳಿಕ ಪತಿಯ ವಿರುದ್ಧ ದೂರು ದಾಖಲಿಸಿಕೊಂಡಿದ್ದರು. ಮೃತದೇಹವನ್ನು ರಾಜವಾಡಿ ಆಸ್ಪತೆಗೆ ರವಾನಿಸಲಾಗಿದ್ದು, ಮೃತ ಸಂಬಂಧಿಕರ ಅನುಮಾನದ ಆಧಾರದ ಮೇಲೆ ತನಿಖೆ ನಡೆಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಇದು ಕೊಲೆಯೋ ಅಥವಾ ಆತ್ಮಹತ್ಯೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವನ್ನು ದಾಖಲಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ನವೀನ್ ಸಿ.ರೆಡ್ಡಿ ತಿಳಿಸಿದರು.

    ನಾವು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಈ ದಂಪತಿ ಮದುವೆಯಾಗಿ ಐದು ವರ್ಷಗಳಾಗಿದೆ. ಈ ದಂಪತಿಗೆ ಮಕ್ಕಳಿಲ್ಲ. ಆದ್ದರಿಂದ ಈ ವಿಚಾರದ ಬಗ್ಗೆ ಆಗಾಗ ದಂಪತಿ ಮಧ್ಯೆ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

  • ಬೆಂಗ್ಳೂರಲ್ಲಿ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಉದ್ಯಮಿ!

    ಬೆಂಗ್ಳೂರಲ್ಲಿ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಉದ್ಯಮಿ!

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಬಂದಿದೆ. ಈ ಬಾರಿ ಪೊಲೀಸರಿಂದ ಅಲ್ಲ, ರೌಡಿಗಳಿಂದಲೂ ಅಲ್ಲ. ಉದ್ಯಮಿಯೊಬ್ಬ ತನ್ನ ಪತ್ನಿ ಮೆಲೆಯೇ ಫೈರಿಂಗ್ ಮಾಡಿದ್ದಾನೆ.

    ಕಳೆದ ರಾತ್ರಿ ಉದ್ಯಮಿ ಗಣೇಶ್ ಎಂಬಾತ ತನ್ನ ಪತ್ನಿಗೆ ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಜಯನಗರದ ನಾಲ್ಕನೆ ಬ್ಲಾಕ್‍ನಲ್ಲಿ ನಡೆದಿದೆ.

    ಹಣಕಾಸು ವಿಚಾರವಾಗಿ ದಂಪತಿ ಮಧ್ಯೆ ಕಲಹ ಏರ್ಪಟ್ಟು, ಕೋಪದ ಭರದಲ್ಲಿ ಪತ್ನಿ ಸಹನಾಳನ್ನು ಗಣೇಶ್ ಗುಂಡಿಟ್ಟು ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಘಟನೆ ನಡೆದ ಬಳಿಕ ಗಣೇಶ್ ಸ್ಥಳದಿಂದ ಪರಾರಿಯಾಗಿದ್ದಾನೆ.

    ಜಯನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಎಸ್ಕೇಪ್ ಆಗಿರೋ ಗಣೇಶ್‍ಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

  • ಬೆಂಗ್ಳೂರಲ್ಲಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆಗೈದು ಪತಿ ಪರಾರಿ!

    ಬೆಂಗ್ಳೂರಲ್ಲಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆಗೈದು ಪತಿ ಪರಾರಿ!

    ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪಾಪಿ ಪತಿ ಪತ್ನಿಯ ಉಸಿರುಗಟ್ಟಿಸಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.

    ಓರಿಸ್ಸಾ ಮೂಲದ ಮಾಲತಿ(38) ಕೊಲೆಗೀಡಾದ ಮಹಿಳೆ. ಆರೋಪಿ ಬಾಪಿ ಮತ್ತು ಮಾಲತಿ ಮೂಲತಃ ಓರಿಸ್ಸಾ ಮೂಲದವರಾಗಿದ್ದು, ಕಳೆದ ಕೆಲ ವರ್ಷಗಳಿಂದ ಈ ದಂಪತಿ ಬೆಂಗಳೂರಿನಲ್ಲೇ ನೆಲೆಸಿದ್ದಾರೆ.

    ಈ ದಂಪತಿ ಕಳೆದ 9 ತಿಂಗಳ ಹಿಂದೆ ಕಾವೇರಿಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆರೋಪಿ ಪತಿ ಬಾಪಿ ಕೈ ಮಗ್ಗದಲ್ಲಿ ಕೆಲಸ ಮಾಡುತ್ತಿದ್ದರೆ, ಪತ್ನಿ ಮಾಲತಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿದ್ದರು.

    ಇತ್ತೀಚೆಗೆ ಆರೋಪಿ ಬಾಪಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಜಗಳವಾಡಿದ್ದಾನೆ. ಇದೇ ಕಾರಣಕ್ಕೆ ಮನೆ ಮಾಲೀಕರು ಮನೆ ಖಾಲಿ ಮಾಡಲು ಸೂಚಿಸಿದ್ದರು. ಅದರಂತೆ ಮಂಗಳವಾರ ಮಧ್ಯಾಹ್ನ ಪತಿ-ಪತ್ನಿ ಇಬ್ಬರೂ ಚರ್ಚೆ ನಡೆಸಿದ್ದಾರೆ. ಈ ವೇಳೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಪತ್ನಿ ಮಾಲತಿಯನ್ನು ಬಾಪಿ ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ.

    ಬಳಿಕ ಆಕೆ ಮಲಗಿದ್ದಾರೆ ಎನ್ನುವಂತೆ ಆಕೆಯ ಮೇಲೆ ಬೆಡ್ ಶೀಟ್ ಹೊದಿಸಿ, ಮನೆಗೆ ಬೀಗ ಹಾಕಿಕೊಂಡು ಎಸ್ಕೇಪ್ ಆಗಿದ್ದಾನೆ. ಸೋಮವಾರ ರಾತ್ರಿ ಸ್ಥಳೀಯ ವ್ಯಕ್ತಿ ಆರೋಪಿ ಬಾಪಿ ಮನೆ ಬಳಿ ಹೋದಾಗ ಈ ವಿಚಾರ ಬೆಳಕಿಗೆ ಬಂದಿದೆ.

    ಘಟನೆ ಬಳಿಕ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದ್ದು, ಶೋಧಕಾರ್ಯ ಮುಂದುವರೆದಿದೆ.

  • ಪತ್ನಿಗೆ ಗಡ್ಡ ಬಂದಿದ್ದಕ್ಕೆ ಪತಿಯಿಂದ ಡಿವೋರ್ಸ್ ಅರ್ಜಿ!

    ಪತ್ನಿಗೆ ಗಡ್ಡ ಬಂದಿದ್ದಕ್ಕೆ ಪತಿಯಿಂದ ಡಿವೋರ್ಸ್ ಅರ್ಜಿ!

    ಅಹಮದಾಬಾದ್: ಪತಿಯೊಬ್ಬ ತನ್ನ ಪತ್ನಿಗೆ ಗಡ್ಡ ಬೆಳೆದಿದೆ ಎಂದು ಹೇಳಿ ಗುಜರಾತ್‍ನ ಅಹಮದಾಬಾದ್‍ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾನೆ.

    ತನ್ನ ಪತ್ನಿಯ ಮುಖದಲ್ಲಿ ಗಡ್ಡ ಬೆಳೆಯುತ್ತಿದೆ ಹಾಗೂ ಆಕೆ ಪುರುಷರ ಧ್ವನಿಯಲ್ಲಿ ಮಾತನಾಡುತ್ತಾಳೆ ಎಂದು ಹೇಳಿ ಪತಿ ವಿಚ್ಛೇದನ ಅರ್ಜಿ ಹಾಕಿದ್ದನು. ಆದರೆ ಕೌಟುಂಬಿಕ ನ್ಯಾಯಾಲಯ ಆತನ ಅರ್ಜಿಯನ್ನು ತಿರಸ್ಕರಿಸಿದೆ.

    ಆರೋಪ ಏನು?
    ಪತ್ನಿಯ ಕುಟುಂಬದವರು ನನಗೆ ಮೋಸ ಮಾಡಿದ್ದಾರೆ. ಮದುವೆ ಮುಂಚೆ ಪತ್ನಿಯ ಮುಖದಲ್ಲಿ ಕೂದಲು ಇದ್ದಿದ್ದು ನನಗೆ ಗೊತ್ತಿರಲಿಲ್ಲ ಹಾಗೂ ಆಕೆ ಪುರುಷರ ಧ್ವನಿಯಲ್ಲಿ ಮಾತನಾಡುತ್ತಾಳೆ ಎಂದು ನನಗ ತಿಳಿದಿರಲಿಲ್ಲ ಎಂದು ಪತಿ ಅರ್ಜಿಯಲ್ಲಿ ಉಲ್ಲೇಖಿಸಿದ್ದನು.

    ನಾನು ಮೊದಲು ಬಾರಿ ಭೇಟಿಯಾದಾಗ ಆಕೆ ದುಪ್ಪಟ್ಟಾ ಧರಿಸಿದ್ದಳು. ಆಗ ನನಗೆ ಆಕೆಯ ಮುಖ ನೋಡಲಿಲ್ಲ. ನಮ್ಮ ಸಂಪ್ರಾದಾಯದ ಪ್ರಕಾರ ಮದುವೆ ಮೊದಲು ಪತ್ನಿಯ ಮುಖವನ್ನು ನೋಡುವ ಹಾಗೇ ಇಲ್ಲ ಎಂದು ಪತಿ ಅರ್ಜಿಯಲ್ಲಿ ಮಾಹಿತಿ ನೀಡಿದ್ದ.

    ಪತ್ನಿ ಕೊಟ್ಟ ಉತ್ತರ ಏನು?
    ಪತಿಯ ಅರ್ಜಿಗೆ ಪತ್ನಿ ಪರ ವಕೀಲರು, ಹಾರ್ಮೋನ್ ಸಮಸ್ಯೆಯಿಂದ ನನ್ನ ಕಕ್ಷೀದಾರರ ಮುಖದ ಮೇಲೆ ಕೂದಲು ಬೆಳೆದಿದೆ. ಆದರೆ ಚಿಕಿತ್ಸೆ ಪಡೆದು ಈ ಗಡ್ಡವನ್ನು ತೆಗೆಯಿಸಬಹುದು. ಆದರೆ ಮನೆಯಿಂದ ಹೊರಹಾಕಲು ಪತಿ ಈ ಆರೋಪ ಮಾಡಿ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

    ಪತ್ನಿ ಕಡೆಯ ವಕೀಲರು ಅರ್ಜಿ ಸಲ್ಲಿಸಿದ ನಂತರ ಪತಿ ಕೋರ್ಟ್ ಕಡೆ ತಿರುಗಿಯೂ ನೋಡಿಲ್ಲ. ಮುಂದಿನ ವಿಚಾರಣೆಗೆ ಪತಿ ಕೋರ್ಟ್‍ಗೆ ಹಾಜರಾಗಲಿಲ್ಲ. ಹಾಗಾಗಿ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ.

  • ಪತ್ನಿಗಾಗಿ ದೇವಾಲಯ ನಿರ್ಮಿಸಿದ ಪತಿ!

    ಪತ್ನಿಗಾಗಿ ದೇವಾಲಯ ನಿರ್ಮಿಸಿದ ಪತಿ!

    ಹೈದರಾಬಾದ್: ಪತ್ನಿಗಾಗಿ ಪರ್ವತವನ್ನೇ ಒಡೆದು ರಸ್ತೆ ನಿರ್ಮಿಸಿದ ಬಿಹಾರದ ದಶರಥ್ ಅವರ ಬಗ್ಗೆ ಎಲ್ಲರಿಗೂ ತಿಳಿದ ಸಂಗತಿ. ಈಗ ಪತ್ನಿಯ ಮೇಲಿನ ಪ್ರೀತಿಗಾಗಿ ತೆಲಂಗಾಣ ವ್ಯಕ್ತಿಯೊಬ್ಬರು ಪತ್ನಿಗಾಗಿ ದೇವಾಲಯವನ್ನೇ ನಿರ್ಮಿಸಿ ಸುದ್ದಿಯಾಗಿದ್ದಾರೆ.

    ಚಂದ್ರ ಗೌಡ ಎಂಬವರು ಪತ್ನಿಗಾಗಿ ದೇವಾಲಯ ನಿರ್ಮಿಸಿದ್ದಾರೆ. ನಿವೃತ್ತ ಸರ್ಕಾರಿ ಅಧಿಕಾರಿಯಾಗಿರುವ ಇವರು ಮೃತ ಪತ್ನಿ ರಾಜಮಣಿ ಅವರಿಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ.

    ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಗೋಸನಪಲ್ಲಿ ಗ್ರಾಮದ ತನ್ನ ಜಮೀನಿನಲ್ಲಿ ಪತ್ನಿಯ ವಿಗ್ರಹ ಸ್ಥಾಪಿಸಿ ಚಂದ್ರ ಅವರು ದೇವಾಲಯ ನಿರ್ಮಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ರಾಜಮಣಿ ಅವರು ಅನಾರೋಗ್ಯದ ಸಮಸ್ಯೆಯಿಂದ ಮೃತಪಟ್ಟಿದ್ದರು. ಪತ್ನಿಯ ಮೇಲಿನ ಪ್ರೀತಿಯ ನೆನಪಿಗಾಗಿ ಈ ದೇವಾಲಯ ನಿರ್ಮಿಸಿದ್ದಾಗಿ ಚಂದ್ರ ಅವರು ತಿಳಿಸಿದ್ದಾರೆ.

    ಭಾರತದ ಭವ್ಯ ಇತಿಹಾಸದಲ್ಲಿ ಪತ್ನಿ ಮಮ್ತಾಜ್ ಮೇಲಿನ ಪ್ರೀತಿಗೆ ತಾಜ್ ಮಹಲ್ ನಿಮಿಸಿದ್ದು, ಈಗ ಪ್ರೇಮಿಗಳ ಸ್ಮಾರಕವಾಗಿದೆ. ಸದ್ಯ ಚಂದ್ರ ಅವರು ಪತ್ನಿಯ ಮೇಲಿನ ಪ್ರೀತಿಗಾಗಿ ದೇವಾಲಯ ನಿರ್ಮಿಸಿದ್ದನ್ನು ಕಂಡ ಹಲವು ಮಂದಿ ಮೆಚ್ಚುಗೆ ಸೂಚಿಸಿದ್ದಾರೆ.

  • ಆತ್ಮಹತ್ಯೆ ಮಾಡಿಕೊಳ್ಳಬೇಕೆಂದ ಪತ್ನಿಯನ್ನು ಕಾರಿನಲ್ಲಿ ಕರ್ಕೊಂಡು ಹೋಗಿ ಬಿಟ್ಟ ಪತಿ!

    ಆತ್ಮಹತ್ಯೆ ಮಾಡಿಕೊಳ್ಳಬೇಕೆಂದ ಪತ್ನಿಯನ್ನು ಕಾರಿನಲ್ಲಿ ಕರ್ಕೊಂಡು ಹೋಗಿ ಬಿಟ್ಟ ಪತಿ!

    ಮುಂಬೈ: ತಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದ ಪತ್ನಿಯನ್ನು ತನ್ನ ಕಾರಿನಲ್ಲೇ ಆಕೆಯನ್ನು ಪತಿ ಬಿಟ್ಟು ಬಂದ ಘಟನೆ ಮಹಾರಾಷ್ಟ್ರದ ವಾಜರೆಯಲ್ಲಿರುವ ತಪೋಘಾಮ್ ನಲ್ಲಿ ನಡೆದಿದೆ.

    ರುಕ್ಮಣಿ ವಿಜಯ್(22) ಆತ್ಮಹತ್ಯೆ ಮಾಡಿಕೊಂಡ ಪತ್ನಿ. ರುಕ್ಮಣಿ ತಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ತನ್ನ ಪತಿ ವಿಜಯ್ ಬಿರೂ ಬಳಿ ಹೇಳಿದ್ದಾಳೆ. ಪತ್ನಿ ಮಾತನ್ನು ಕೇಳಿದ ವಿಜಯ್ ಆಕೆಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಆತ್ಮಹತ್ಯೆ ಮಾಡಿಕೊಳ್ಳಲು ಸುಲಭವಾಗುವಂತೆ ಮಾಡಿದ್ದಾನೆ.

    ಸದ್ಯ ಪತಿ ವಿಜಯ್ ವಿರುದ್ಧ ರುಕ್ಮಣಿ ತಂದೆ ವಿಠಲ್ ಸರ್ವಾಡೆ ಅವರು ಲಾತೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಪೊಲೀಸರು 27 ವರ್ಷದ ವಿಜಯ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

    ವಿಜಯ್ ನನ್ನ ಮಗಳು ರುಕ್ಮಣಿ ಶೀಲ ಶಂಕಿಸುತ್ತಿದ್ದನು. ಆತ ನನ್ನ ಮಗಳ ಮೇಲೆ ಅನುಮಾನಗೊಂಡು ದೈಹಿಕ ಹಾಗೂ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದನು ಎಂದು ರುಕ್ಮಣಿ ತಂದೆ ವಿಠಲ್ ಸರ್ವಾಡೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ವಿಜಯ್ ಹಾಗೂ ರುಕ್ಮಣಿ 2016ರಂದು ಮದುವೆಯಾಗಿದ್ದರು. ಮದುವೆಯಾಗಿ 2 ವರ್ಷಗಳ ನಂತರ 11 ಜೂನ್‍ರಂದು ರುಕ್ಮಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪತ್ರಿಕೆಯೊಂದರಲ್ಲಿ ವರದಿಯಾಗಿದೆ.

    ಸದ್ಯ ದೂರು ದಾಖಲಿಸಿಕೊಂಡ ಪೊಲೀಸರು ವಿಜಯ್ ವಿರುದ್ಧ 498, 306, 323 ಹಾಗೂ 504 ಕೇಸನ್ನು ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

  • ಇಷ್ಟಲಿಂಗ ದೀಕ್ಷೆ ಪಡೆದ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ

    ಇಷ್ಟಲಿಂಗ ದೀಕ್ಷೆ ಪಡೆದ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ

    ಬಳ್ಳಾರಿ: ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮಿ ಅರುಣಾ ಕಾಶಿ ಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರಿಂದ ಇಷ್ಟಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ.

    ವಾರಣಾಸಿಯಲ್ಲಿ ಇಷ್ಟಲಿಂಗ ದೀಕ್ಷೆ ಸ್ವೀಕಾರ ಪಡೆಯುವ ವೇಳೆ ಪತಿ ಜನಾರ್ದನ ರೆಡ್ಡಿ, ಪುತ್ರ ಹಾಗೂ ಅರುಣಾ ತಂದೆ-ತಾಯಿ ಜೊತೆಗಿದ್ದರು. ಈ ಹಿಂದೆ ಜನಾರ್ದನ ರೆಡ್ಡಿ ಆಪ್ತ ಶ್ರೀರಾಮುಲು ಅವರು ಕಾಶಿ ಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ಕಳೆದ 2014 ರ ಮಾರ್ಚ್ ತಿಂಗಳಲ್ಲಿ ಶಿವಲಿಂಗ ದೀಕ್ಷೆ ಪಡೆದಿದ್ದರು. ಈಗ ಲಕ್ಷ್ಮಿ ಅರುಣಾ ದೀಕ್ಷೆ ಪಡೆದುಕೊಂಡಿದ್ದಾರೆ.

    ದೀಕ್ಷೆ ಪಡೆದವರು ಮಾಂಸ ಮತ್ತಿತರ ಪದಾರ್ಥಗಳನ್ನು ಬಿಟ್ಟು, ನಿತ್ಯ ಶಿವಪೂಜೆ, ಗೋಪೂಜೆ ಮತ್ತು ಗಣಾರಾಧನೆ ಮಾಡಬೇಕು. ಶ್ರೀರಾಮುಲು ದೀಕ್ಷೆ ಪಡೆದ ಬಳಿಕ ನಿತ್ಯ ಎರಡು ಗಂಟೆಗಳ ಕಾಲ ಶಿವ ಪೂಜೆ ಮಾಡುತ್ತಾರೆ. ಇಷ್ಟಲಿಂಗ ಪೂಜೆಗೂ ಮುನ್ನ ಗೋಪೂಜೆ, ಶಿವಪೂಜೆ, ಗಣಾರಾಧನೆ, ಪಂಚಾಮೃತ ಅಭಿಷೇಕದ ವಿತರಣೆ ನಂತರವೇ ಉಪಹಾರ ಸೇವನೆ ಮಾಡುತ್ತಾರೆ.

    ದೆಹಲಿ, ಬೆಂಗಳೂರು, ಗದಗ, ರಾಯಚೂರು ಮತ್ತು ಕಲಬುರಗಿಗೆ ತೆರಳಿದರೆ ಅಲ್ಲಿ ಶಿವಪೂಜೆಗಾಗಿ ಒಂದು ತಂಡವನ್ನು ಸಿದ್ಧಮಾಡಿಕೊಂಡಿದ್ದರು. ಇನ್ನೂ ಶ್ರೀರಾಮುಲು ಅವರಂತೆ ಅವರ ಪತ್ನಿಯೂ ಮಾಂಸ ಆಹಾರವನ್ನು ತ್ಯಜಿಸಿದ್ದು, ಮನೆಯಲ್ಲಿ ಈ ಆಹಾರಕ್ಕೆ ನಿಷೇಧ ಮಾಡಿದ್ದಾರೆ.

    ಇಷ್ಟಲಿಂಗ ದೀಕ್ಷೆಯನ್ನು ಯಾರಾದರೂ ತೆಗೆದುಕೊಳ್ಳಬಹುದಾಗಿದೆ. ಇದಕ್ಕೆ ಯಾವುದೇ ನಿಯಮಗಳಿಲ್ಲ ಅನ್ನೊದು ಧಾರ್ಮಿಕ ಪಂಡಿತರ ಅಭಿಪ್ರಾಯವಾಗಿದೆ.

  • ನಿರ್ಮಾಪಕರ ಪತ್ನಿ ತಮ್ಮ ಪತಿಯೊಂದಿಗೆ ಮಲಗಲು ಹೇಳಿದ್ರು : ಕಾಸ್ಟಿಂಗ್ ಕೌಚ್ ಬಗ್ಗೆ ಗೀತ ಸಾಹಿತಿ ಮಾತು

    ನಿರ್ಮಾಪಕರ ಪತ್ನಿ ತಮ್ಮ ಪತಿಯೊಂದಿಗೆ ಮಲಗಲು ಹೇಳಿದ್ರು : ಕಾಸ್ಟಿಂಗ್ ಕೌಚ್ ಬಗ್ಗೆ ಗೀತ ಸಾಹಿತಿ ಮಾತು

    ಹೈದರಾಬಾದ್: ಕಳೆದ ಕೆಲ ದಿನಗಳ ಹಿಂದೆ ಟಾಲಿವುಡ್‍ನಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ನಟಿ ಶ್ರೀ ರೆಡ್ಡಿ ಶಾಕಿಂಗ್ ಹೇಳಿಕೆ ನೀಡಿದ ಬಳಿಕ ಮತ್ತೊಬ್ಬ ಕಲಾವಿದೆ ಟಾಲಿವುಡ್ ಕೆಟ್ಟ ಅನುಭವದ ಬಗ್ಗೆ ಮಾತನಾಡಿದ್ದಾರೆ.

    ಟಾಲಿವುಡ್ ನಲ್ಲಿ ಬಿಗ್ ಹಿಟ್ ಆಗಿದ್ದ `ಅರ್ಜುನ್ ರೆಡ್ಡಿ’ ಹಾಗೂ `ಪೆಳ್ಳಿ ಚೂಪುಲು’ ಸಿನಿಮಾಗಳಿಗೆ ಸಾಹಿತ್ಯ ಬರೆದಿದ್ದ ಶ್ರೇಷ್ಠ ಈ ಕುರಿತು ಆರೋಪ ಮಾಡಿದ್ದು, ನಿರ್ಮಾಪರೊಬ್ಬರ ಪತ್ನಿ ತಮ್ಮ ಪತಿಯ ಕೋರಿಕೆಗಳ್ನು ಪೂರೈಸಲು ಹೇಳಿದ್ದರು ಎಂದು ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿದ್ದಾರೆ.

    ಸಿನಿಮಾ ಉದ್ಯಮದಿಂದ ಕೆಲ ತಿಂಗಳು ಬ್ರೇಕ್ ಪಡೆದಿದ್ದ ಕಾರಣ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸಿನಿಮಾ ರಂಗದಲ್ಲಿ ಕೆಲವರು ನೇರವಾಗಿಯೇ ಈ ಕುರಿತು ಕೇಳಿದ್ದಾರೆ. ಆದರೆ ನಾನು ನನ್ನ ಬರವಣಿಗೆ ಮೂಲಕ ಉತ್ತಮ ಅವಕಾಶಗಳನ್ನು ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

    ಇದೇ ವೇಳೆ ತಮ್ಮ ಮುಂದೆಯೇ ಮಹಿಳಾ ನಿರ್ದೇಶಕರೊಬ್ಬರಿಗೆ ನಡೆದ ಘಟನೆಯನ್ನು ಹಂಚಿಕೊಂಡಿರುವ ಅವರು, ಒಬ್ಬ ವ್ಯಕ್ತಿ ಮಹಿಳಾ ನಿರ್ದೇಶಕರಿಗೆ ಪ್ರಪೋಸ್ ಮಾಡಲು ಗೋವಾದಲ್ಲಿ ಪಾರ್ಟಿ ಏರ್ಪಡಿಸಿದ್ದ. ಆದರೆ ಈ ಪಾರ್ಟಿಗೆ ತೆರಳಲು ಆಕೆ ನಿರಾಕರಿಸಿದ ವೇಳೆ ಹಲ್ಲೆ ನಡೆಸಿದ್ದರು. ಈ ವೇಳೆ ತಾನು ಅಸಹಾಯಕಳಾಗಿ ನಿಂತಿದ್ದೆ. ಇದರಿಂದ ತಾನು ಸಿನಿಮಾ ರಂಗ ಕೆಲ ತಿಂಗಳು ಬ್ರೇಕ್ ಪಡೆದಿದ್ದೆ ಎಂದು ತಿಳಿಸಿದ್ದಾರೆ.

    ಟಾಲಿವುಡ್ ಜನಪ್ರಿಯ ಗೀತಾ ಸಾಹಿತಿಯಾಗಿರುವ ಶ್ರೇಷ್ಠ ಅವರು, ಇದುವರೆಗೂ `ಮಧುರಂ ಮಧುರಂ’, `ಯುದ್ಧ ಶರಣಂ’, `ಪೆಳ್ಳಿ ಚೂಪುಲು’ ಮತ್ತು `ಅರ್ಜುನ್ ರೆಡ್ಡಿ’ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಹಿಂದೆ ಟಾಲಿವುಡ್ ನಲ್ಲಿ ಶ್ರೀ ರೆಡ್ಡಿ ಆರೋಪಗಳ ಬಳಿಕ ಹಲವರು ಕಾಸ್ಟಿಂಗ್ ಕೌಚ್ ಬಗ್ಗೆ ಆರೋಪ ಪ್ರತ್ಯಾರೋಪ ಮಾಡಿದ್ದರು.

  • ವಿಚ್ಛೇದನಕ್ಕೆ ಮೊದ್ಲೇ 2ನೇ ಮದ್ವೆಗೆ ತಯಾರು- ಕಲ್ಯಾಣ ಮಂಟಪಕ್ಕೆ ಪತ್ನಿ ಬರುತ್ತಿದ್ದಂತೆಯೇ ಪತಿ ಪೊಲೀಸರಿಗೆ ಶರಣು!

    ವಿಚ್ಛೇದನಕ್ಕೆ ಮೊದ್ಲೇ 2ನೇ ಮದ್ವೆಗೆ ತಯಾರು- ಕಲ್ಯಾಣ ಮಂಟಪಕ್ಕೆ ಪತ್ನಿ ಬರುತ್ತಿದ್ದಂತೆಯೇ ಪತಿ ಪೊಲೀಸರಿಗೆ ಶರಣು!

    ದಾವಣಗೆರೆ: ಎರಡನೇ ಮದುವೆಯಾಗಲು ಮುಂದಾದ ಪತಿಯ ವಿವಾಹ ತಡೆಯಲು ಮೊದಲ ಪತ್ನಿ ಕಲ್ಯಾಣ ಮಂಟಪದತ್ತ ಧಾವಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ದಾವಣಗೆರೆ ನಗರದ ನಿವಾಸಿ ಶ್ರೀದೇವಿ ಮತ್ತು ತೊಳಹುಣಸೆ ಗ್ರಾಮದ ಜಗದೀಶ್ ನಾಯ್ಕ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಶ್ರೀದೇವಿಯೇ ಹಣ ಕೊಟ್ಟು ಜಗದೀಶ್ ಗೆ ಓದಿಸಿದ್ದರು. ಆದ್ರೆ, ಜಗದೀಶ್ ಶ್ರೀದೇವಿ ಜೊತೆ ವಿಚ್ಛೇದನ ಕೋರಿ ಕೋರ್ಟ್ ಗೆ ಹೋಗಿದ್ದನು.

    ಆದ್ರೆ ಇದೀಗ ಮೊದಲ ಪತ್ನಿಯಿಂದ ವಿಚ್ಛೇದನ ಸಿಗುವುದಕ್ಕಿಂತ ಮುಂಚೆಯೇ ಮತ್ತೊಂದು ವಿವಾಹಕ್ಕೆ ಮಾಡಿಕೊಳ್ಳಲು ಸಜ್ಜಾಗಿದ್ದಾನೆ. ಜಗದೀಶ್ ತನ್ನ ಅಕ್ಕನ ಮಗಳನ್ನು ವಿವಾಹವಾಗಲು ಮುಂದಾಗಿದ್ದಾನೆ. ಹೀಗಾಗಿ ದಾವಣಗೆರೆ ನಗರದ ಆರ್.ಎಚ್.ಕಲ್ಯಾಣ ಮಂಟಪದಲ್ಲಿ ಇಂದು ವಿವಾಹ ನಡೆಯುತ್ತಿದ್ದು, ಈ ವಿಚಾರ ತಿಳಿದು ಪತ್ನಿ ನೇರವಾಗಿ ಮಂಟಪಕ್ಕೆ ತೆರಳಿದ್ದಾರೆ.

    ಮೊದಲ ಪತ್ನಿ ಶ್ರೀದೇವಿ ಕಲ್ಯಾಣ ಮಂಟಪಕ್ಕೆ ಬಂದು ವಿವಾಹ ನಿಲ್ಲಿಸಲು ಮುಂದಾಗಿದ್ದಾರೆ. ಕಲ್ಯಾಣ ಮಂಟಪಕ್ಕೆ ಮೊದಲ ಪತ್ನಿ ಬರುತ್ತಿದ್ದಂತೆ ಜಗದೀಶ್ ಪೊಲೀಸರಿಗೆ ಶರಣಾಗಿದ್ದಾನೆ. ಅಲ್ಲದೇ ತನಗೆ ರಕ್ಷಣೆ ನೀಡುವಂತೆ ಕೋರಿ ಜಗದೀಶ್ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾನೆ.