Tag: ಪತ್ನಿ

  • ಗಂಡ ಬೇಕೆಂದು ಇಬ್ಬರು ಹೆಣ್ಣು ಮಕ್ಕಳೊಂದಿಗೆ ಧರಣಿ ಕುಳಿತ ಪತ್ನಿ!

    ಗಂಡ ಬೇಕೆಂದು ಇಬ್ಬರು ಹೆಣ್ಣು ಮಕ್ಕಳೊಂದಿಗೆ ಧರಣಿ ಕುಳಿತ ಪತ್ನಿ!

    ದಾವಣಗೆರೆ: ಗಂಡ ಬೇಕು ಎಂದು ಮಕ್ಕಳೊಂದಿಗೆ ಪತ್ನಿ ಧರಣಿ ಕುಳಿತ ಘಟನೆ ದಾವಣಗೆರೆ (Davanagere) ಜಿಲ್ಲೆಯಲ್ಲಿ ನಡೆದಿದೆ.

    ನಗರದ ರಾಮನಗರದ ಎಸ್‍ಓಜಿ ಕಾಲೋನಿ ಮನೆ ಮುಂದೆ ಪತ್ನಿ ಸೌಮ್ಯಾ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ರಾತ್ರಿಯಿಂದ ಗಂಡನಿಗಾಗಿ ಕಾಯುತ್ತಿದ್ದಾರೆ. ಕಾನ್ಸ್ ಟೇಬಲ್ ಆಗಿರುವ ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಅಂತ ಸೌಮ್ಯಾ ಗಂಭೀರ ಆರೋಪ ಮಾಡಿದ್ದಾರೆ.

    ಗಂಡ ಗೋಣಿ ಬಸಪ್ಪ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ನಮ್ಮ ಮನೆಗೆ ಬರುತ್ತಿಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೆ ಪತ್ನಿ ಸೌಮ್ಯ ಒಡವೆ ಅಡ ಇಟ್ಟಿದ್ದಾರೆ. ಸದ್ಯ ಅಕ್ರಮ ಸಂಬಂಧ ಹೊಂದಿರುವ ಮಹಿಳೆ ಮನೆ ಮುಂದೆ ರಾತ್ರಿ ಇಡೀ ಇಬ್ಬರು ಮಕ್ಕಳೊಂದಿಗೆ ಗಂಡನಿಗಾಗಿ ಹೆಂಡತಿ ಕಾದು ಕುಳಿತಿದ್ದಾರೆ.

    ಸೌಮ್ಯ ಗೋಣಿ ಬಸಪ್ಪ 2013 ರಲ್ಲಿ ವಿವಾಹವಾಗಿದ್ದರು. ಗಂಡ ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ಮನೆ ಖರೀದಿಸಿ ಕೊಟ್ಟಿದ್ದಾನೆ. ನಮ್ಮ ಮನೆಗೆ ಬರುತ್ತಿಲ್ಲ, ಎರಡು ಮಕ್ಕಳ ನಿರ್ವಹಣೆ ಕಷ್ಟ ಆಗಿದೆ. ಈ ಹಿಂದೆ ಕಂಪ್ಲೆಂಟ್ ಕೊಟ್ಟಿದ್ದೆ ಮನವೊಲಿಸಿ ಕೇಸ್ ವಾಪಸ್ ತೆಗೆಸಲಾಗಿತ್ತು. ಇದೀಗ ನನಗೆ ನನ್ನ ಗಂಡ ಬೇಕು ಎಂದು ಪತ್ನಿ ಸೌಮ್ಯ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಡಿಕೆಶಿ ಮುಖ್ಯಮಂತ್ರಿ ಆಗ್ಲೇಬೇಕು, ಆಗಿಯೇ ಆಗ್ತಾರೆ: ಶಾಸಕ ಶಿವಗಂಗಾ ಬಸವರಾಜ್ ವಿಶ್ವಾಸ

  • ಅತ್ತಿಗೆಯಿಂದ ದೂರ ಇರಿ ಅಂದಿದ್ದಕ್ಕೆ ಮೈದುನನ ಕಲ್ಲಿನಿಂದ ಜಜ್ಜಿ ಕೊಲೆಗೈದ್ರು!

    ಅತ್ತಿಗೆಯಿಂದ ದೂರ ಇರಿ ಅಂದಿದ್ದಕ್ಕೆ ಮೈದುನನ ಕಲ್ಲಿನಿಂದ ಜಜ್ಜಿ ಕೊಲೆಗೈದ್ರು!

    ಕಲಬುರಗಿ: ಅತ್ತಿಗೆಯಿಂದ ದೂರ ಇರುವುದಕ್ಕೆ ಹೇಳಿದಕ್ಕೆ ಮೈದುನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ಮುನ್ನೊಳ್ಳಿ ಗ್ರಾಮದಲ್ಲಿ ನಡೆದಿದೆ.

    ಹೀರಾಲಾಲ್ ಲದಾಫ್ (35) ಕೊಲೆಯಾದವ. ಕೊಲೆಯಾದ ಹೀರಾಲಾಲ್ ಅತ್ತಿಗೆ ಜೊತೆ ರವಿ ಎಂಬಾತ ಅಕ್ರಮ ಸಂಬಂಧ ಹೊಂದಿದ್ದನು. ಈ ವಿಚಾರವನ್ನು ಹೀರಾಲಾಲ್ ತನ್ನ ಅಣ್ಣ ಬಾಬು ಲದಾಫ್ಗೆ ತಿಳಿಸಿದ್ದನು. ಇತ್ತ ಅನೈತಿಕ ಸಂಬಂಧ ತಿಳಿದ ಕೂಡಲೇ ರವಿಯಿಂದ ದೂರ ಇರುವಂತೆ ಬಾಬು ತನ್ನ ಪತ್ನಿಗೆ ಹೇಳಿದ್ದರು. ಆದರೆ ಆಕೆ ತನ್ನ ಪ್ರಿಯಕರನ ಜೊತೆ ಸೇರಿ ಪತಿ ಬಾಬು ಲದಾಫ್ ಮೇಲೆಯೇ ಹಲ್ಲೆ ಮಾಡಿದ್ದಾಳೆ.

    ಪತ್ನಿಯ ಅನೈತಿಕ ಸಂಬಂಧದಿಂದ ಮಾನಸಿಕವಾಗಿ ನೊಂದು ಬಾಬು ಲದಾಫ್ ಊರನ್ನೇ ಬಿಟ್ಟಿದ್ದರು. ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿ ಅನೈತಿಕ ಸಂಬಂಧ ಬಿಟ್ಟು ಬಿಡುವಂತೆ ರವಿಗೆ ಹಿರಾಲಾಲ್ ಹೇಳಿದ್ದರು. ಇದೇ ವಿಚಾರವಾಗಿ ಹೀರಾಲಾಲ್ ರವಿ ಮಧ್ಯೆ ಆಗಾಗ ಗಲಾಟೆ ಕೂಡ ಆಗಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಅಪಘಾತಕ್ಕೆ ಒಂದೇ ದಿನ 51 ಬಲಿ- ಸಂಚಾರಿ ನಿಯಮ ಪಾಲನೆಗೆ ಅಲೋಕ್ ಕುಮಾರ್ ಮನವಿ

    ಮೊನ್ನೆ ಕುಡಿದ ನಶೆಯಲ್ಲಿ ಗಲಾಟೆ ಮಾಡಿಕೊಂಡ ಬಳಿಕ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ್ರು. ಭಾನುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಹೀರಾಲಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪತ್ನಿಯ ಗುಪ್ತಾಂಗದಲ್ಲಿ ರಂಧ್ರ ಮಾಡಿ ಬೀಗ ಜಡಿದು ವಿಕೃತಿ ಮೆರೆದ ಪತಿ!

    ಪತ್ನಿಯ ಗುಪ್ತಾಂಗದಲ್ಲಿ ರಂಧ್ರ ಮಾಡಿ ಬೀಗ ಜಡಿದು ವಿಕೃತಿ ಮೆರೆದ ಪತಿ!

    ಪುಣೆ: ವ್ಯಕ್ತಿಯೊಬ್ಬ ತನ್ನ ಪತ್ನಿಯ ಗುಪ್ತಾಂಗವನ್ನು ಡ್ರಿಲ್‌ ಮಾಡಿ ಬಳಿಕ ಬೀಗ ಹಾಕಿದ ವಿಚಿತ್ರ ಪ್ರಸಂಗವೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಅಚ್ಚರಿ ಎನಿಸಿದರೂ ಸತ್ಯವಾಗಿರುವ ಈ ಘಟನೆ ಮಹಾರಾಷ್ಟ್ರದ (Maharastra) ಪಿಂಪ್ರಿ ಚಿಂಚ್ವಾಡದಲ್ಲಿ ನಡೆದಿದೆ. ವ್ಯಕ್ತಿಯನ್ನು ಉಪೇಂದ್ರ ಹುಡಕೆ ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಈತ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಮನೆಯಲ್ಲಿಯೇ ಇರುತ್ತಿದ್ದಳು. ಸದ್ಯ ಪ್ರಕರಣ ಸಂಬಂಧ ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

    ಪತ್ನಿಗೆ ಬೇರೊಬ್ಬನ ಜೊತೆ ಸಂಬಂಧ ಇರುವ ಬಗ್ಗೆ ಉಪೇಂದ್ರ ಅನುಮಾನಗೊಂಡಿದ್ದನು. ಹೀಗಾಗಿ ಮೇ 11 ರಂದು ಕಂಠಪೂರ್ತಿ ಕುಡಿದು ಬಂದಿದ್ದ ಉಪೇಂದ್ರ, ಪತ್ನಿಗೆ ಮನಬಂದಂತೆ ಥಳಿಸಿ, ಒದ್ದಿದ್ದಾನೆ. ಬಳಿಕ ಆಕೆಯನ್ನು ಚೂಡಿದಾರದ ಶಾಲಿನಿಂದ ಕಟ್ಟಿಹಾಕಿ ಹೇಯ ಕೃತ್ಯ ಎಸಗಿದ್ದಾನೆ.

    ಹರಿತವಾದ ಬ್ಲೇಡ್‌ನಿಂದ ಗುಪ್ತಾಂಗದ ಎರಡೂ ಕಡೆ ರಂಧ್ರಗಳನ್ನು ಮಾಡಿದ್ದಾನೆ. ಕಬ್ಬಿಣದ ಸ್ಕ್ರೂಗಳನ್ನು ಹಾಕಿ ನಂತರ ಆಕೆಯ ಜನನಾಂಗದ ಪ್ರದೇಶಕ್ಕೆ ಬೀಗ ಹಾಕಿದ್ದಾನೆ. ಇತ್ತ ಪತಿಯ ನೀಚ ಕೃತ್ಯದಿಂದ ನೋವು ತಾಳಲಾರದೆ 28 ವರ್ಷದ ಪತ್ನಿ ಜೋರಾಗಿ ಕಿರುಚಾಡಿದ್ದಾಳೆ. ಆದರೂ ಪತಿ ಆಕೆಯ ಮೇಲೆ ಕಿಂಚಿತ್ತೂ ಅನುಕಂಪ ತೋರಿಸಲಿಲ್ಲ. ಇದನ್ನೂ ಓದಿ: ಅಕ್ರಮ ಮರಳು ಅಡ್ಡಾದ ಮೇಲೆ ಅಧಿಕಾರಿಗಳ ದಾಳಿ – 1.58 ಕೋಟಿ ರೂ. ಮೌಲ್ಯದ ಮರಳು ಜಪ್ತಿ

    ಮಹಿಳೆಯ ಕಿರುಚಾಟ ಕೇಳಿಸಿಕೊಂಡ ಅಕ್ಕಪಕ್ಕದ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದ ಒದ್ದಾಡುತ್ತಿರುವುದನ್ನು ಕಂಡು ಗಾಬರಿಗೊಂಡಿದ್ದಾರೆ. ಅಲ್ಲದೇ ಕೂಡಲೇ ಆಕೆಯನ್ನು ಹತ್ತಿರದಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ವೈದ್ಯರು ತುರ್ತು ಸರ್ಜರಿ ಮೂಲಕ ಸ್ಕ್ರೂ ಹಾಗೂ ಲಾಕ್‌ ಅನ್ನು ತೆಗೆಯುವಲ್ಲಿ ಯಶಸ್ವಿಯಾದರು.

    ಪ್ರಕರಣ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

  • ಪತ್ನಿಯನ್ನು ಕಾಡಿಗೆ ಕರೆದೊಯ್ದು ಮೊಣಕಾಲುಗಳಿಗೆ ಸುತ್ತಿಗೆಯಿಂದ ಹಲ್ಲೆಗೈದು, ಮಚ್ಚು ಬೀಸಿದ ಪತಿ!

    ಪತ್ನಿಯನ್ನು ಕಾಡಿಗೆ ಕರೆದೊಯ್ದು ಮೊಣಕಾಲುಗಳಿಗೆ ಸುತ್ತಿಗೆಯಿಂದ ಹಲ್ಲೆಗೈದು, ಮಚ್ಚು ಬೀಸಿದ ಪತಿ!

    ತಿರುವನಂತಪುರಂ: ಪತಿ ಮಹಾಶಯನೊಬ್ಬ ತನ್ನ ಪತ್ನಿಯನ್ನು ಕಾಡಿಗೆ ಕರೆದುಕೊಂಡು ಹೋಗಿ ಗಂಭೀರವಾಗಿ ಗಾಯಗೊಳಿಸಿ ಬಳಿಕ ಆಕೆಯನ್ನು ಅಲ್ಲಿಯೇ ಬಿಟ್ಟು ಎಸ್ಕೇಪ್‌ ಆಗಿರುವ ಅಮಾನುಷ ಘಟನೆಯೊಂದು ಕೆರಳದಲ್ಲಿ (Kerala) ನಡೆದಿದೆ.

    ತಿರುವನಂತಪುರಂನ ಪಲೋಡ್ ಬಳಿ ಪತಿ ತನ್ನ ಪತ್ನಿಯ ಮೇಲೆ ಈ ದುಷ್ಕೃತ್ಯ ಎಸಗಿದ್ದಾನೆ. ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೈಲಮೂಡಿನ ಗಿರಿಜಾ ಶಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಪತಿ ಪಾಳೋಡ್ ಪಾಚ ಮೂಲದ ಸೋಜಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಪ್ರಕರಣದ ವಿವರ: ಕಳೆದ ಒಂದೂವರೆ ವರ್ಷದಿಂದ ಗಿರಿಜಾ ಹಾಗೂ ಸೋಜಿ ಪ್ರತ್ಯೇಕವಾಗಿದ್ದರು. ಇದೀಗ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಆರೋಪಿ ಸೋಜಿ ತನ್ನ ಪತ್ನಿಯನ್ನು ಸಂಪರ್ಕಿಸಿದ್ದಾನೆ. ಅಲ್ಲದೇ ಈ ಬಗ್ಗೆ ಇಬ್ಬರು ಕುಳಿತು ಮಾತಾಡೋಣ ಎಂದು ಪತ್ನಿಯನ್ನು ಕರೆದಿದ್ದಾನೆ. ಪತಿಯ ಮಾತು ನಂಬಿದ್ದ ಗಿರಿಜಾ ಪತಿ ಹೇಳಿದ ಸ್ಥಳಕ್ಕೆ ಬಂದಿದ್ದಾಳೆ. ಇದನ್ನೂ ಓದಿ: ಆಟೋದಲ್ಲಿ ಬಂದು ಅಂಜಲಿ ಕೊಲೆಗೈದು ಹಂತಕ ಎಸ್ಕೇಪ್- ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಈ ವೇಳೆ ಸೋಜಿ ನಿನ್ನ ಜೊತೆ ಮಾತಾಡೋಕೆ ತುಂಬಾ ಇದೆ ಎಂದು ಆಕೆಯನ್ನು ಪಕ್ಕದ ಕಾಡಿಗೆ ಕರೆದುಕೊಂಡು ಹೋಗಿದ್ದಾನೆ. ಹೀಗೆ ಕರೆದೊಯ್ದವನೇ ಬಚ್ಚಿಟ್ಟಿದ್ದ ಸುತ್ತಿಗೆಯನ್ನು ತೆಗೆದುಕೊಂಡು ಬಂದು ಮೊದಲು ಪತ್ನಿಯ ಎರಡೂ ಮೊಣಕಾಲುಗಳಿಗೆ ಹಲ್ಲೆ ಮಾಡಿದ್ದಾನೆ. ಬಳಿಕ ಹರಿತವಾದ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಆಕೆಯನ್ನು ಕಾಡಿನಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

    ಇತ್ತ ಕಾಡಿಗೆ ಕಟ್ಟಿಗೆ ಸಂಗ್ರಹಿಸಲು ಬಂದ ಸ್ಥಳಿಯರಿಗೆ ಗಿರಿಜಾ ಚೀರಾಟ- ಕಿರುಚಾಟ ಕೇಳಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗಿರಿಜಾಳನ್ನು ತಿರುವನಂತಪುರಂ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಿರಿಜಾ ಕಾಲುಗಳು ಮತ್ತು ತಲೆಗೆ ಗಂಭೀರ ಗಾಯಗಳಾಗಿವೆ.

    ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರೋಪಿ ಸೋಜಿಯನ್ನು ಪಾಂಗೋಡು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಪತ್ನಿಯ ಮೇಲಿನ ಈ ಕ್ರೂರ ದಾಳಿಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ವಿಚಾರಣೆ ಬಳಿಕವಷ್ಟೇ ಸ್ಪಷ್ಟನೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ತಂದೆ!

    ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ತಂದೆ!

    ಕೋಲಾರ: ಸಾಲ ತೀರಿಸುವ ಸಲುವಾಗಿ ತಂದೆಯೊಬ್ಬ ತನ್ನ ಗಂಡು ಮಗುವನ್ನೇ ಮಾರಿದ ಅಮಾನವೀಯ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ.

    ಬಂಗಾರಪೇಟೆ ನಗರ ನಿವಾಸಿಗಳಾದ ಮುನಿರಾಜು ಹಾಗೂ ಪವಿತ್ರ ದಂಪತಿಯ ಮೂರು ತಿಂಗಳ ಮಗು ಇದಾಗಿದೆ. ಬಂಗಾರಪೇಟೆಯ ಕೆರೆಕೋಡಿ ನಿವಾಸಿಯಾದ ವಲ್ಲಿ ಎನ್ನುವ ಮಹಿಳೆ ಮೂಲಕ ಮುನಿರಾಜು, ಮಗು ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ.

    ಹಣದಾಸೆಗೆ ಬಿದ್ದ ಪತಿ ಮುನಿರಾಜು 3 ತಿಂಗಳ ಗಂಡು ಮಗು ಮಾರಾಟ ಮಾಡಿದ್ದಾನೆ. ತನಗೆ ಮಗು ಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಆಯೋಗ ಹಾಗೂ ಬಂಗಾರಪೇಟೆ ಪೊಲೀಸ್ ಠಾಣೆಗೆ ಪತ್ನಿ ಪವಿತ್ರ ದೂರು ನೀಡಿದ್ದಾರೆ. ಮಗು ಅಪಹರಣ ಮಾಡಿದ್ದಾರೆಂದು ಪತಿ ಮುನಿರಾಜು ಹಾಗೂ ವಲ್ಲಿ ವಿರುದ್ದ ದೂರು ನೀಡಿರುವ ಪವಿತ್ರಾ, ಮಗುವನ್ನ ವಾಪಾಸ್ ಕೊಡಿಸುವಂತೆ  ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

  • ಎದೆ ಮೇಲೆ ಕಲ್ಲು ಎತ್ತಾಕಿ ಪತ್ನಿಯ ಕೊಂದ ಪತಿ!

    ಎದೆ ಮೇಲೆ ಕಲ್ಲು ಎತ್ತಾಕಿ ಪತ್ನಿಯ ಕೊಂದ ಪತಿ!

    ಕೋಲಾರ: ಕುಡಿದ ಅಮಲಿನಲ್ಲಿ ಪತಿ ಮಹಾಶಯನೋರ್ವ ಪತ್ನಿಯನ್ನೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕು ದುಡ್ಡಿಗಾನಹಳ್ಳಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ಲಕ್ಷ್ಮಮ್ಮ (55) ಕೊಲೆಯಾದ ದುರ್ದೈವಿಯಾಗಿದ್ದು, ಈಕೆಯನ್ನು ಪತಿ ರಾಮಪ್ಪ (60) ಕೊಲೆ ಮಾಡಿದ್ದಾನೆ.

    ರಾಮಪ್ಪ ಕುಡಿದು ಬಂದು ಪತ್ನಿಯೊಂದಿಗೆ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ. ಅಲ್ಲದೆ ಇಬ್ಬರು ಸಹ ಆಗಾಗ ಕುಡಿದು ಗಲಾಟೆ ಮಾಡಿಕೊಳ್ಳುತ್ತಿದ್ದರು. ಆದರೆ ಕಳೆದ ರಾತ್ರಿ ಗಲಾಟೆ ತಾರಕಕ್ಕೇರಿ ಪತ್ನಿಯ ಎದೆಯ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಾನೆ.

    ಈ ಸಂಬಂಧ ಮುಳಬಾಗಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ – ಮಲಗಿದ್ದಲ್ಲೇ 7 ಕಾರ್ಮಿಕರು ಸಾವು

  • ಮೂಕಿಯಾಗಿರೋ ಪತ್ನಿ- ಶಿವನಿಗೆ ತನ್ನ ನಾಲಿಗೆಯನ್ನೇ ಅರ್ಪಿಸಿದ ಪತಿ!

    ಮೂಕಿಯಾಗಿರೋ ಪತ್ನಿ- ಶಿವನಿಗೆ ತನ್ನ ನಾಲಿಗೆಯನ್ನೇ ಅರ್ಪಿಸಿದ ಪತಿ!

    ರಾಯ್ಪುರ: ಮೂಢನಂಬಿಕೆಗೆ ಮಾರು ಹೋದ 33 ವರ್ಷದ ಯುವಕನೊಬ್ಬ ತನ್ನ ನಾಲಿಗೆಯನ್ನು ಕತ್ತರಿಸಿದ ದೇವರಿಗೆ ಅರ್ಪಿಸಿದ ವಿಚಿತ್ರ ಘಟನೆ ಛತ್ತೀಸ್‌ಗಢದ ದುರ್ಗ್ (Chhattisgarh’s Durg) ಜಿಲ್ಲೆಯಲ್ಲಿ ನಡೆದಿದೆ.

    ಅಂಜೋರಾ ಪೊಲೀಸ್ ಚೌಕಿ ವ್ಯಾಪ್ತಿಯ ತಾನಾಡು ಗ್ರಾಮದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ, ಸಹೋದರನ ಬರ್ಬರ ಹತ್ಯೆ – ಯುವತಿ ತಂದೆಯಿಂದಲೇ ಡಬಲ್ ಮರ್ಡರ್!

    ಮಾಹಿತಿಗಳ ಪ್ರಕಾರ, ರಾಜೇಶ್ವರ್ ನಿಶಾದ್ ಗ್ರಾಮದ ಕೆರೆಗೆ ತೆರಳಿ ಕೆಲ ಮಂತ್ರಗಳನ್ನು ಪಠಿಸಿ ಬಳಿಕ ಚಾಕುವಿನಿಂದ ನಾಲಿಗೆಯನ್ನು ಕೊಯ್ದು ದಡದಲ್ಲಿರುವ ಕಲ್ಲಿನ ಮೇಲೆ ಇಟ್ಟಿದ್ದಾನೆ. ಇತ್ತ ದೇವಸ್ಥಾನದಲ್ಲಿ ರಕ್ತಸ್ರಾವವಾಗುತ್ತಿದ್ದುದನ್ನು ಕಂಡ ಗ್ರಾಮಸ್ಥರು ಕೂಡಲೇ ಅಂಬುಲೆನ್ಸ್‌ಗೆ ಕರೆ ಮಾಡಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ.

    ಗ್ರಾಮಸ್ಥರ ಪ್ರಕಾರ, ನಿಶಾದ್ ಅವರ ಪತ್ನಿ ಮೂಕಿಯಾಗಿದ್ದಾರೆ. ಹೀಗಾಗಿ ನನ್ನ ಕೆಲವೊಂದು ಆಸೆಗಳನ್ನು ಪೂರೈಸಲು ಶಿವನಿಗೆ ತನ್ನ ನಾಲಿಗೆಯನ್ನು ಅರ್ಪಿಸಿದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

    ನಿಶಾದ್ ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಘಟನೆಯು ಮೂಢನಂಬಿಕೆಯ ಪ್ರಕರಣವೆಂದು ತೋರುತ್ತದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

  • ಪತಿಯ ಮರ್ಮಾಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ ಕೊಟ್ಟ ಪತ್ನಿ!

    ಪತಿಯ ಮರ್ಮಾಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ ಕೊಟ್ಟ ಪತ್ನಿ!

    ಲಕ್ನೋ: ಅಚ್ಚರಿಯ ಪ್ರಕರಣವೊಂದರಂತೆ ಪತ್ನಿಯೊಬ್ಬಳು ತನ್ನ ಪತಿಗೆ ಚಿತ್ರಹಿಂಸೆ ಕೊಟ್ಟ ಆಘಾತಕಾರಿ ಘಟನೆಯೊಂದು ಉತ್ತರಪ್ರದೇಶದ (Uttar Pradesh) ಸಿಯೋಹರಾ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಪತ್ನಿ ಮೆಹರ್‌ (30) ಹಾಗೂ ಪತಿಯನ್ನು ಮನ್ನನ್ ಜೈದಿ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದಾಗಿ ಪತ್ನಿ ತನ್ನ ಪತಿಯ ಮೇಲೆ ಈ ರೀತಿಯ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ. ಸದ್ಯ ಪತಿಯ ಮೇಲೆ ಕ್ರೌರ್ಯ ಮೆರೆದ ಪತ್ನಿಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್‌ ಆಗುತ್ತಿದೆ.

    ಮೆಹರ್‌ ಹಾಗೂ ಮುನ್ನನ್‌ ಜೈದಿ ಪ್ರತ್ಯೇಕವಾಗಿ ವಾಸವಾಗಿದ್ದರು. ಇವರಿಬ್ಬರ ದಾಂಪತ್ಯದ ನಡುವೆ ಬಿರುಕು ಮೂಡಿದ ಬಳಿಕ ಮೆಹರ್‌ ಮದ್ಯಪಾನ ಹಾಗೂ ಸಿಗರೇಟ್‌ ಸೇದಲು ಆರಂಭಿಸಿದ್ದಾಳೆ. ಅಲ್ಲದೇ ಮೆಹರ್ ತನ್ನನ್ನು ದೈಹಿಕವಾಗಿ ನಿಂದಿಸಿದ್ದಾಳೆ. ತನ್ನ ಮೇಲೆ ಸುಳ್ಳು ಆರೋಪ ಹೊರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ತನ್ನ ಖಾಸಗಿ ಅಂಗಗಳನ್ನು ಸಿಗರೇಟಿನಿಂದ ಸುಡುವ ಮುನ್ನ ಪತ್ನಿ ತನ್ನ ಕೈಕಾಲುಗಳನ್ನು ಕಟ್ಟಿ ಹಾಕಿದ್ದಾಳೆ ಎಂದು ಸಂತ್ರಸ್ತ ಆರೋಪಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಭ್ರೂಣಹತ್ಯೆ ದಂಧೆ: ದಂಪತಿ ಅರೆಸ್ಟ್

    ತನ್ನ ಸುರಕ್ಷತೆಯ ಬಗ್ಗೆ ಕಳವಳ ವ್ಯ ಕ್ತಪಡಿಸಿದ ಮನ್ನನ್ ತಮ್ಮ ಮನೆಯಲ್ಲಿ ಸಿಸಿಕ್ಯಾಮೆರಾ ಅಳವಡಿಸಿದ್ದಾರೆ ಈ ಕ್ಯಾಮೆರಾದಲ್ಲಿ ಮೆಹರ್‌ ಕ್ರೂರ ಕೃತ್ಯ ಸೆರೆಯಾಗಿದ್ದು, ಮುನ್ನನ್‌ ಪೊಲೀಸರಿಗೆ ಈ ದೃಶ್ಯವನ್ನು ನೀಡಿದ್ದಾರೆ. ಪತಿ ದೂರು ಮತ್ತು ಸಿಸಿಟಿವಿ ದೃಶ್ಯಾ ವಳಿಗಳನ್ನು ಸಲ್ಲಿಸಿದ ನಂತರ ಸಿಯೋಹರಾ ಜಿಲ್ಲಾ ಪೊಲೀಸರು ಕ್ರಮ ಕೈಗೊಂಡಿದ್ದು, ಭಾನುವಾರ ಮಹಿಳೆಯನ್ನು ಬಂಧಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯ ವಿರುದ್ಧ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಿಕೊಂಡಿದ್ದಾರೆ ಎಂದು ಎಸ್‌ಪಿ ಪೂರ್ವ ಧರಂಪಾಲ್ ಸಿಂಗ್ ತಿಳಿಸಿದ್ದಾರೆ.

  • ಸಹೋದರಿಗೆ ಚಿನ್ನದ ಉಂಗುರ, ಟಿವಿ ಗಿಫ್ಟ್‌ ಕೊಡ್ತೀನಿ ಎಂದ ಪತಿಯನ್ನೇ ಮುಗಿಸಿದ ಪತ್ನಿ!

    ಸಹೋದರಿಗೆ ಚಿನ್ನದ ಉಂಗುರ, ಟಿವಿ ಗಿಫ್ಟ್‌ ಕೊಡ್ತೀನಿ ಎಂದ ಪತಿಯನ್ನೇ ಮುಗಿಸಿದ ಪತ್ನಿ!

    ಲಕ್ನೋ: ಮದುವೆ ಉಡುಗೊರೆಗೆ ಸಂಬಂಧಿಸಿದಂತೆ ಗಂಡ- ಹೆಂಡತಿ ಜಗಳ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆಯೊಂದು ಉತ್ತರಪ್ರದೇಶದಲ್ಲಿ (Uttarpradesh) ನಡೆದಿದೆ.

    ಮೃತನನನು ಚಂದ್ರಪ್ರಕಾಶ್‌ (35) ಎಂದು ಗುರುತಿಸಲಾಗಿದೆ. ಈತನನ್ನು ಪತ್ನಿ ಚಾಬಿ ತನ್ನ ಸಹೋದರರ ಸಹಾಯದಿಂದ ಕೊಲೆ ಮಾಡಿದ್ದಾಳೆ. ಈ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಸಮೀಪದ ಹಳ್ಳಿಯೊಂದರಲ್ಲಿ ನಡೆದಿದೆ.

    ನಡೆದಿದ್ದೇನು?: ಚಂದ್ರಪ್ರಕಾಶ್‌ ಸಹೋದರಿಗೆ ಮದುವೆ ನಿಗದಿಯಾಗಿತ್ತು. ಅಂತೆಯೇ ಏಪ್ರಿಲ್‌ 26 ರಂದು ಮದುವೆ ಕಾರ್ಯಕ್ರಮ ನಡೆಯುವುದಿತ್ತು. ಹೀಗಾಗಿ ಸಹೋದರಿಗೆ ಏನಾದರೂ ಗಿಫ್ಟ್‌ ಕೊಡಬೇಕು ಎಂದು ಯೋಚಿಸುತ್ತಿರುವಾಗ ಚಂದ್ರಶೇಖರ್‌ಗೆ ಚಿನ್ನದ ಉಂಗುರ ಮತ್ತು ಟಿವಿ ಕೊಡಿಸುವ ಯೋಚನೆ ಬಂತು. ಅಂತೆಯೇ ಈ ವಿಚಾರವನ್ನು ಪತ್ನಿಯ ಮುಂದೆ ಪ್ರಸ್ತಾಪಿಸಿದ್ದಾನೆ. ಇದನ್ನೂ ಓದಿ; 6 ವರ್ಷದ ಮಗಳ ಮುಂದೆಯೇ ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ!

    ಈ ವೇಳೆ ಪತಿಯ ನಿರ್ಧಾರಕ್ಕೆ ಪತ್ನಿ ಚಾಬಿ ವಿರೋಧ ವ್ಯಕ್ತಪಡಿಸಿದ್ದಾಳೆ. ಅಲ್ಲದೇ ಇದೇ ವಿಚಾರವಾಗಿ ಪತಿ- ಪತ್ನಿಯ ನಡುವೆ ವಾಗ್ವಾದವೂ ನಡೆದಿದೆ. ಆದರೆ ಚಂದ್ರಶೇಖರ್‌ ಈ ಎರಡು ವಸ್ತುಗಳನ್ನು ಉಡುಗೊರೆಯಾಗಿ ನೀಡುವುದಾಗಿ ಹೇಳುತ್ತಾನೆ. ಇದರಿಂದ ಮತ್ತಷ್ಟು ಕೋಪಗೊಂಡ ಪತ್ನಿ ಚಾಬಿ ತನ್ನ ಸಹೋದರರಿಗೆ ಈ ವಿಷಯ ಮುಟ್ಟಿಸುತ್ತಾಳೆ. ಅಲ್ಲದೇ ಪತಿಗೆ ತಕ್ಕ ಬುದ್ಧಿ ಕಲಿಸುವಂತೆ ಹೇಳುತ್ತಾಳೆ.

    ಸಹೋದರಿ ಚಾಬಿ ಮಾತು ಕೇಳಿ ಮನೆಗೆ ಬಂದು ಚಂದ್ರಶೇಖರ್‌ಗೆ ದೊಣ್ಣೆಗಳಿಂದ ಮನಬಂದಂತೆ ಥಳಿಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಥಳಿಸಿದ್ದರಿಂದ ಗಂಭೀರ ಗಾಯಗೊಂಡು ಚಂದ್ರಶೇಕರ್‌ ಕುಸಿದು ಬಿದ್ದಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರು ಚಂದ್ರಶೇಖರ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಸದೇ ಚಂದ್ರಶೇಖರ್‌ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

    ಇತ್ತ ಪ್ರಕರಣ ಸಂಬಂಧ ಚಾಬಿ ಮತ್ತು ಆಕೆಯ ಸಹೋದರರು ಸೇರಿದಂತೆ ಐವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

  • ಲೋ ಬಿಪಿಯಿಂದ ಪತ್ನಿ ಸಾವೆಂದ ದರ್ಶನ್-‌ ಪತಿಯಿಂದ್ಲೇ ಕೊಲೆ ಅಂತಾ ಪೋಷಕರ ಆರೋಪ

    ಲೋ ಬಿಪಿಯಿಂದ ಪತ್ನಿ ಸಾವೆಂದ ದರ್ಶನ್-‌ ಪತಿಯಿಂದ್ಲೇ ಕೊಲೆ ಅಂತಾ ಪೋಷಕರ ಆರೋಪ

    ಹಾಸನ: ವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ (Hassan Woman Death) ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಸುರಭಿ (24) ಮೃತ ಮಹಿಳೆ. ಪತಿಯೇ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಗಂಭೀರ ಆರೋಪ ಮಾಡುತ್ತಿದ್ದಾರೆ. ಜೊತೆಗೆ ಸುರಭಿ ಸಾವಿಗೆ ಪತಿ ದರ್ಶನ್ ಕಾರಣವಾಗಿದ್ದು, ಆತನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

    ಪ್ರಕರಣದ ವಿವರ: ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ಹುಣಸೂರಿನ ಸುರಭಿಯನ್ನು ಅದ್ಧೂರಿಯಾಗಿ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಒಂದು ವರ್ಷದ ಹೆಣ್ಣುಮಗುವಿದ್ದು, ಪತಿ ದರ್ಶನ್‌ಗೆ ಬೇರೊಬ್ಬ ಮಹಿಳೆ ಜೊತೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ‌. ಇದೇ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಇದನ್ನೂ ಓದಿ: 6 ವರ್ಷ ಪ್ರೀತಿಸಿ ಕೈಕೊಟ್ಟ, ಸಪ್ತಪದಿ ತುಳಿದವನೂ ಬೇಡವೆಂದ- ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿ ಕಂಗಾಲು

    ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾಳೆ ಎಂದು ದರ್ಶನ್ ಗುರುವಾರ ಸುರಭಿ ಪೋಷಕರಿಗೆ ಕರೆ ಮಾಡಿದ್ದಾನೆ. ನಂತರ ನಾಗಯ್ಯನಕೊಪ್ಪಲಿಗೆ ಬಂದ ಪೋಷಕರು, ಸುರಭಿ ಲೋಬಿಪಿಯಿಂದ ಸತ್ತಿಲ್ಲ. ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಸುರಭಿಯನ್ನು ನೇಣುಬಿಗಿದು ಕೊಲೆ ಮಾಡಿ ನಾಟವಾಡುತ್ತಿದ್ದಾರೆ. ಸುರಭಿ ಕುತ್ತಿಗೆಯ ಮೇಲೆ ಗಾಯದ ಗುರುತುಗಳಿವೆ ಎಂದು ಆರೋಪಿಸಿದ್ದಾರೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.