Tag: ಪತ್ರ

  • ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಪತ್ರ

    ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಪತ್ರ

    ಬೆಳಗಾವಿ: ಬೆಳಗಾವಿಯ (Belagavi) ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ (SDA Rudresh) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಅಧಿಕಾರಿಗಳ ಕಚೇರಿಗೆ ಬಂದಿದ್ದು ಬಿರುಗಾಳಿ ಸೃಷ್ಟಿಸಿದೆ.

    ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣದ ಆರೋಪಿಗಳಾಗಿರುವ ಎ1 ತಹಶೀಲ್ದಾರ್ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಎ3 ಹೆಬ್ಬಾಳ್ಕರ್ ಪಿಎ ಸೋಮುಗೆ ಜಾಮೀನು ಸಿಕ್ಕಿತ್ತು. ಜಾಮೀನು ಸಿಕ್ಕ ಬೆನ್ನಲ್ಲೇ ಅನಾಮಧೇಯ ಪತ್ರವೊಂದು ಅಧಿಕಾರಿಗಳ ಕಚೇರಿ ತಲುಪಿದೆ.

    ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿ ಸೇರಿದಂತೆ ಪ್ರಕರಣದ ತನಿಖಾಧಿಕಾರಿಗಳಿಗೆ ಪೋಸ್ಟ್ ಮೂಲಕ ಅನಾಮಧೇಯ ಪತ್ರ ತಲುಪಿದೆ.ಇದನ್ನೂ ಓದಿ: ದನ ಮೇಯಿಸಲು ಹೋಗಿ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕರು – ಓರ್ವನ ಶವ ಪತ್ತೆ

    ಪತ್ರದಲ್ಲೇನಿದೆ?
    ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಇದು ಕೊಲೆ. ತಹಶೀಲ್ದಾರ್ ಆಪ್ತ ಡ್ರೈವರ್ ಯಲ್ಲಪ್ಪ ಬಡಸದ ಈ ಕೊಲೆಯ ಸೂತ್ರಧಾರ. ತಹಶೀಲ್ದಾರ್ ಜೀಪ್ ಚೆಕ್ ಮಾಡಿದರೆ ಎಲ್ಲಾ ಸತ್ಯ ಹೊರಬರುತ್ತದೆ. ಅದು ಸೂಸೈಡ್ ಎಂದು ಹೇಳುತ್ತಿದ್ದಾರೆ ಆದರೆ ಅದು ಸೂಸೈಡ್ ಅಲ್ಲ. ಯಲ್ಲಪ್ಪನ ಹೆಂಡತಿ ಅನೈತಿಕ ಸಂಬಂಧ ಇಟ್ಟುಕೊಂಡು ಅವನ ಎಲ್ಲ ದುಡ್ಡು ಹೊಡೆದಿರುತ್ತಾಳೆ. ಡ್ರೈವರ್ ಯಲ್ಲಪ್ಪನನ್ನು ವಿಚಾರಣೆ ಮಾಡಿದರೆ ಕೊಲೆ ರಹಸ್ಯ ಹೊರಗೆ ಬರುತ್ತದೆ. ಸತ್ತವನಿಗೆ ನ್ಯಾಯ ಸಿಗಬೇಕು ಕೇಸ್ ಮುಚ್ಚಿ ಹಾಕಬಾರದು ಎಂದು ಉಲ್ಲೇಖಿಸಲಾಗಿದೆ.

    ಅನಾಮಧೇಯ ಪತ್ರದಲ್ಲಿನ ಅಂಶಗಳನ್ನು ಕಂಡು ಖಾಕಿಯೇ ಶಾಕ್ ಆಗಿದ್ದು, ಪತ್ರದಲ್ಲಿನ ಎಲ್ಲ ಅಂಶಗಳ ಕುರಿತು ಖಡೇಬಜಾರ್ ಪೊಲೀಸರು ತನಿಖೆ ನಡೆಸುತ್ತಾರಾ? ಮುಂದೆ ಈ ಪ್ರಕರಣ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ

    ಏನಿದು ಪ್ರಕರಣ?
    ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ (ದ್ವಿತೀಯ ದರ್ಜೆ ಸಹಾಯಕ) ರುದ್ರೇಶ್ (ರುದ್ರಣ್ಣ) ಯಡಣ್ಣನವರ್ ನವೆಂಬರ್ 5 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಅವರು, ತನ್ನ ಸಾವಿಗೆ ಇವರೇ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು, ತಹಶಿಲ್ದಾರ್ ಬಸವರಾಜ ನಾಗರಾಳ, ಸಹೊದ್ಯೋಗಿ ಅಶೋಕ ಕಬ್ಬಲಿಗೇರ್ ಹೆಸರು ಉಲ್ಲೇಖಿಸಿ ವಾಟ್ಸಪ್ ಗ್ರೂಪಿನಲ್ಲಿ ಸಂದೇಶ ಕಳುಹಿಸಿದ್ದರು.ಇದನ್ನೂ ಓದಿ: ಕೌಟುಂಬಿಕ ಜಗಳ- ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದು ಕೊಲೆಗೈದ ಮೈದುನ

  • ವಕ್ಫ್ ಆಸ್ತಿ ವಿವಾದ – ವರ್ಷದ ಹಿಂದೆಯೇ ಪ್ರಧಾನಿ ಗಮನ ಸೆಳೆಯಲು ಯತ್ನ

    ವಕ್ಫ್ ಆಸ್ತಿ ವಿವಾದ – ವರ್ಷದ ಹಿಂದೆಯೇ ಪ್ರಧಾನಿ ಗಮನ ಸೆಳೆಯಲು ಯತ್ನ

    ಧಾರವಾಡ: ಒಂದು ವರ್ಷದ ಹಿಂದೆಯೇ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ವಿಚಾರವಾಗಿ ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಧಾನಿ ಮೋದಿ (PM Narendra Modi) ಗಮನ ಸೆಳೆಯಲು ಯತ್ನಿಸಿರುವ ಸನ್ನಿವೇಶ ತಡವಾಗಿ ಬೆಳಿಕಿಗೆ ಬಂದಿದೆ.

    ಹೌದು. ಧಾರವಾಡದ (Dharwad) ಉಪ್ಪಿನಬೆಟಗೇರಿ (Uppinbetageri) ಗ್ರಾಮದ ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ಪ ಬುದ್ನಿ ಎಂಬುವವರು ಕಳೆದ ವರ್ಷ ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಬರುವುದನ್ನು ತಡೆಯುವಂತೆ ಆಗ್ರಹಿಸಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು.ಇದನ್ನೂ ಓದಿ: ಆರ್‌.ಆರ್‌ ನಗರ ದರ್ಶನ್ ನಿವಾಸದ ಬಳಿ ಪೊಲೀಸರ ಬಿಗಿ ಭದ್ರತೆ – ನಾಳೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ

    ಉಪ್ಪಿನಬೆಟಗೇರಿ ಗ್ರಾಮದ ಅನೇಕ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಹೆಸರು ಉಲ್ಲೇಖಿಸಲಾಗಿತ್ತು. ಇದಕ್ಕಾಗಿ ರೈತರು ಕಚೇರಿಯಿಂದ ಕಚೇರಿಗೆ ಅಲೆದಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದಾಗಿ ಕೃಷ್ಣಪ್ಪ ಪ್ರಧಾನಿ ಮೋದಿ ಗಮನಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು.

    ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಬರುವುದನ್ನು ತಡೆಯುವಂತೆ ಆಗ್ರಹಿಸಿ ಹಾಗೂ ಯಾವ ಮಾನದಂಡದ ಮೇಲೆ ಹೀಗೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿ ಕೃಷ್ಣಪ್ಪ ಪತ್ರ ಬರೆದಿದ್ದರು. 2023ರ ನ.28ರಂದು ಪ್ರಧಾನಿಗೆ ಪತ್ರ ಕಳುಹಿಸಿದ್ದರು. ಡಿ.2ರಂದು ಪತ್ರ ಪ್ರಧಾನಿ ಕಚೇರಿ ತಲುಪಿದ್ದು, ಡಿ.8ರಂದು ಕೃಷ್ಣಪ್ಪಗೆ ಪಿಎಂ ಕಚೇರಿಯಿಂದ ಕರೆ ಬಂದಿತ್ತು. ಪತ್ರ ಬರೆದು, ದೂರು ಕೊಡುತ್ತಿರುವುದು ನೀವೆನಾ? ಎಂದು ಸಿಬ್ಬಂದಿ ಪ್ರಶ್ನಿಸಿ, ಖಚಿತಪಡಿಸಿಕೊಂಡಿದ್ದರು. ಜೊತೆಗೆ ನಿಮ್ಮ ದೂರು ಪ್ರಧಾನಿಗಳ ಗಮನಕ್ಕೆ ತರುವುದಾಗಿ ಸಿಬ್ಬಂದಿ ತಿಳಿಸಿದ್ದರು.

    ಇದೀಗ ಮತ್ತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ವಿವಾದ ಬುಗಿಲೆದ್ದಿದೆ.ಇದನ್ನೂ ಓದಿ: 2 ದಿನಗಳಿಂದ ನಾಪತ್ತೆಯಾಗಿದ್ದ 50ರ ಮಹಿಳೆಯ ಮೃತದೇಹ 6 ತುಂಡುಗಳಾಗಿ ಪತ್ತೆ

  • ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಸದ ಡಾ.ಮಂಜುನಾಥ್ ವಿರೋಧ – ಸಿಎಂಗೆ ಪತ್ರ

    ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಸದ ಡಾ.ಮಂಜುನಾಥ್ ವಿರೋಧ – ಸಿಎಂಗೆ ಪತ್ರ

    ರಾಮನಗರ: ಜಿಲ್ಲೆಯ ಹೆಸರು ಮರುನಾಮಕರಣ ವಿಚಾರಕ್ಕೆ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್ ಮಂಜುನಾಥ್ (Dr CN Manjunath) ವಿರೋಧ ವ್ಯಕ್ತಪಡಿಸಿದ್ದಾರೆ. ಹೆಸರು ಬದಲಿಸದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿದ್ದಾರೆ.

    ರಾಮನಗರಕ್ಕೆ (Ramanagara) ಭಾವನಾತ್ಮಕ, ಐತಿಹಾಸಿಕ ಹಿನ್ನೆಲೆಯಿದೆ. ಅಭಿವೃದ್ಧಿ ಮಾಡಬೇಕಾದರೆ ಮರುನಾಮಕರಣ ಮಾಡುವ ಬದಲು ರಾಮನಗರವನ್ನೇ ಬ್ರ್ಯಾಂಡ್ ರಾಮನಗರವನ್ನಾಗಿ ಮಾಡಿ. ಹಾಗಿದ್ದಾಗ ಮಾತ್ರ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಬಹುದಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ; ತೆಂಡೂಲ್ಕರ್‌, ಜಾನ್‌ ಸೀನಾ ಭಾಗಿ

     

    ಈಗಾಗಲೇ ಬೆಂಗಳೂರು ಮಹಾನಗರವು ಬಹಳಷ್ಟು ವಿಸ್ತಾರವಾಗಿ ಬೆಳೆದಿದೆ. ಇಲ್ಲಿ ವಾಸಿಸುತ್ತಿರುವ ನಾಗರೀಕರಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದೇ ದುಸ್ತರವಾಗಿದೆ. ಈ ಪರಿಸ್ಥಿತಿಯಲ್ಲಿ ಸುಂದರವಾಗಿ ಬೆಳೆಯುತ್ತಿರುವ ರಾಮನಗರವನ್ನು ನಗರ ಪ್ರದೇಶಕ್ಕೆ ಸೇರ್ಪಡೆ ಮಾಡುವ ನಿರ್ಧಾರ ಅವೈಜ್ಞಾನಿಕ ಎಂದಿದ್ದಾರೆ. ಇದನ್ನೂ ಓದಿ: ಅದಿರು ಕೊರತೆ ಆಗದಿರಲಿ; NMDC ಅಧಿಕಾರಿಗಳಿಗೆ ಕೇಂದ್ರ ಸಚಿವ ಹೆಚ್‌ಡಿಕೆ ನಿರ್ದೇಶನ

    ರಾಮನಗರ ಜಿಲ್ಲೆ ರೈತರ ಜಿಲ್ಲೆಯಾಗಿ ಉಳಿಯಬೇಕು. ಅದನ್ನ ಬಿಟ್ಟು ರಿಯಲ್ ಎಸ್ಟೇಟ್ ಬಿಲ್ಡರ್‌ಗಳ ತಾಣವಾಗಬಾರದು. ರೈತರ ಬಾಳು ಹಸನಾಗಬೇಕಾದರೆ ಭೂಮಿ ಬೆಲೆ ಅಧಿಕಕ್ಕಿಂತ ರೈತರ ಬೆಳೆಯ ಬೆಲೆ ಅಧಿಕವಾಗಬೇಕು. ಈ ಪ್ರಸ್ತಾವನೆಯನ್ನು ತಿರಸ್ಕರಿಸುವಂತೆ ಸಿಎಂಗೆ ಪತ್ರದ ಮೂಲಕ ಮಂಜುನಾಥ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮುಡಾ ಅಕ್ರಮ: ಸಿಎಂ ರಾಜೀನಾಮೆ ಕೊಡುವವರೆಗೂ ಬಿಜೆಪಿಯಿಂದ ಹೋರಾಟ – ವಿಜಯೇಂದ್ರ

  • ಇಂಡಿಯಾ ಒಕ್ಕೂಟದ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳಿದ ಸ್ವಾತಿ ಮಲಿವಾಲ್

    ಇಂಡಿಯಾ ಒಕ್ಕೂಟದ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳಿದ ಸ್ವಾತಿ ಮಲಿವಾಲ್

    ನವದೆಹಲಿ: ಆಪ್ ನಾಯಕಿ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಇಂಡಿಯಾ (INDIA) ಒಕ್ಕೂಟದ ಪ್ರಮುಖ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಖುದ್ದು ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ನಾನು ಕಳೆದ 18 ವರ್ಷಗಳಿಂದ ತಳಹಂತದಲ್ಲಿ ಜನರ ನಡುವೆ ಕೆಲಸ ಮಾಡಿದ್ದೇನೆ. ಕಳೆದ ಒಂಬತ್ತು ವರ್ಷಗಳಲ್ಲಿ ಮಹಿಳಾ ಆಯೋಗದಲ್ಲಿ 1.7 ಲಕ್ಷ ಪ್ರಕರಣಗಳನ್ನು ಆಲಿಸಿದ್ದೇನೆ. ಮಹಿಳಾ ಆಯೋಗವನ್ನು ಅತ್ಯಂತ ಉನ್ನತ ಸ್ಥಾನಕ್ಕೆ ಏರಿಸಿದೆ. ಮುಂದೆಯೂ ನಾನು ಯಾರಿಗೂ ಹೆದರುವುದಿಲ್ಲ, ಯಾರ ಮುಂದೆಯೂ ತಲೆಬಾಗುವುದಿಲ್ಲ ಎಂದರು. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ: ರಾಬರ್ಟ್ ವಾದ್ರಾ

    ಆದರೆ ನನಗೆ ಮುಖ್ಯಮಂತ್ರಿಗಳ ಮನೆಯಲ್ಲಿ ಮೊದಲು ಕೆಟ್ಟದಾಗಿ ಥಳಿಸಲಾಯಿತು. ನಂತರ ನನ್ನ ಚಾರಿತ್ರ್ಯಹರಣ ಮಾಡಿರುವುದು ತುಂಬಾ ದುಃಖಕರವಾಗಿದೆ. ಇಂದು ನಾನು ಈ ವಿಷಯದ ಬಗ್ಗೆ ಮಾತನಾಡಲು ಇಂಡಿಯಾ ಒಕ್ಕೂಟದ ಎಲ್ಲಾ ದೊಡ್ಡ ನಾಯಕರಿಗೆ ಪತ್ರ ಬರೆದಿದ್ದೇನೆ. ನಾನು ಎಲ್ಲರಿಗೂ ಭೇಟಿಗೆ ಸಮಯ ಕೇಳಿದ್ದೇನೆ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆಯಿದೆ: ರಚಿತಾ ರಾಮ್

    ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಆಪ್ತ ಸಹಾಯಕ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದ ಸ್ವಾತಿ ಮಲಿವಾಲ್ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ಆರಂಭಿಸಿರುವ ದೆಹಲಿ ಪೊಲೀಸರು ಬಿಭವ್ ಕುಮಾರ್ ಬಂಧಿಸಿದ್ದು, ನ್ಯಾಯಂಗ ಬಂಧನಕ್ಕೆ ನೀಡಿದ್ದಾರೆ. ಈ ನಡುವೆ ಆಪ್ ನಾಯಕರು ಸ್ವಾತಿ ಮಲಿವಾಲ್ ವಿರುದ್ಧ ತಿರುಗಿ ಬಿದಿದ್ದಾರೆ. ಇದನ್ನೂ ಓದಿ: ರೀಲ್ಸ್‌ಗಾಗಿ ಡ್ರೈವಿಂಗ್ ಮಾಡಲು ಹೋಗಿ ಆಕ್ಸಿಲರೇಟರ್ ಒತ್ತಿದ ಯುವತಿ- ಮುಂದೇನಾಯ್ತು..?

  • ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

    ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

    ಬಾಗಲಕೋಟೆ: ಪ್ರಧಾನಿ ಮೋದಿ (Narendra Modi) ತಮ್ಮ ಭಾಷಣದ ವೇಳೆ ಫೋಟೋ (Photo) ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ ತರಿಸಿಕೊಂಡು, ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದೀಗ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಯುವತಿಗೆ ಪತ್ರ (Letter) ಬರೆದಿದ್ದಾರೆ.

    ಪ್ರಧಾನಿ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಅವರ ಚಿತ್ರ ಬಿಡಿಸಿ, ಸ್ಕೆಚ್ ನೀಡಿದ್ದ ಯುವತಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಬಾಗಲಕೋಟೆಯ (Bagalkote) ಯುವತಿ ನಾಗರತ್ನ ಮೇಟಿ ಎಂಬ ಯುವತಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಏ.29 ರಂದು ಪ್ರಧಾನಿ ಮೋದಿ ಲೋಕಸಭಾ ಚುನವಣಾ (Lok Sabha Election) ಪ್ರಚಾರಾರ್ಥವಾಗಿ ಬಾಗಲಕೋಟೆಗೆ ಆಗಮಿಸಿದ್ದರು. ಭಾಷಣ ಮಾಡುವ ವೇಳೆಗೆ ವೇದಿಕೆ ಎದುರಿಗೆ ತಮ್ಮ (ಮೋದಿ) ಹಾಗೂ ತಾಯಿಯ ಚಿತ್ರ ಬಿಡಿಸಿದ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಗಮನಿಸಿದ ಮೋದಿ, ಭಾಷಣದ ಮಧ್ಯೆಯೇ ಎಸ್‌ಪಿಜಿ ಸಿಬ್ಬಂದಿಗೆ ಹೇಳಿ ಆ ಫೋಟೋವನ್ನು ತರಿಸಿಕೊಂಡಿದ್ದರು. ಅಲ್ಲದೇ ಅದರಲ್ಲಿ ನಿನ್ನ ಹೆಸರು, ವಿಳಾಸ ಬರೆದು ಕಳುಹಿಸು ಮಗಳೇ, ನಾನು ನಿನಗೆ ಖಂಡಿತವಾಗಿಯೂ ಪತ್ರ ಕಳುಹಿಸುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ದೇವರಾಜೇಗೌಡ, ಪೀತಂ ಗೌಡ ಆಪ್ತರ ಮನೆ ಸೇರಿದಂತೆ ಹಾಸನದ 6 ಕಡೆ ಎಸ್‌ಐಟಿ ದಾಳಿ

    ಯುವತಿಗೆ ಕೊಟ್ಟ ಮಾತಿನಂತೆ ಮೇ 5 ರಂದು ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಯುವತಿಗೆ ಮೋದಿಯವರ ಪತ್ರ ಪೋಸ್ಟ್ ಮೂಲಕ ತಲುಪಿದೆ. ಮೋದಿಯವರ ಪತ್ರದಲ್ಲಿ ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ. ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳು. ಇಂತಿ, ನಿಮ್ಮ ನರೇಂದ್ರ ಮೋದಿ ಎಂದು ಉಲ್ಲೇಖ ಮಾಡಿ ಮೋದಿ ಪತ್ರ ಬರೆದಿದ್ದಾರೆ. ಸದ್ಯ ಈ ಯುವತಿಗೆ ಮೋದಿ ಬರೆದಿರುವ ಪತ್ರ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಇದನ್ನೂ ಓದಿ: ಪಿಒಕೆಯಲ್ಲಿ ಹಿಂಸಾಚಾರ, ಗುಂಡಿನ ದಾಳಿಗೆ ಮೂವರು ಬಲಿ – ಮದರಸಾದ ಒಳಗಡೆ ಟಿಯರ್‌ ಗ್ಯಾಸ್‌ ಸಿಡಿಸಿದ ಸೇನೆ

  • ಪಶ್ಚಿಮ ಬಂಗಾಳ ಉಳಿಸಿ- ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಕೌಸ್ತವ್ ಬಾಗ್ಚಿ

    ಪಶ್ಚಿಮ ಬಂಗಾಳ ಉಳಿಸಿ- ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಕೌಸ್ತವ್ ಬಾಗ್ಚಿ

    ಕೋಲ್ಕತ್ತಾ: ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ಕಾಂಗ್ರೆಸ್ ನಾಯಕ ಕೌಸ್ತವ್ ಬಾಗ್ಚಿಯವರು (Kaustav Bagchi)  ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ

    ಕೌಸ್ತವ್ ಬಾಗ್ಚಿ ಅವರು ಶನಿವಾರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ತಮ್ಮ ರಕ್ತದಿಂದ ಬರೆದ ಪತ್ರವನ್ನು ಪ್ರಧಾನಿ ಅವರಿಗೆ ಹಸ್ತಾಂತರಿಸಿದರು. ಪತ್ರದಲ್ಲಿ, ಪ್ರಧಾನಿ ಮೋದಿಯವರೇ (Narendra Modi) ದಯವಿಟ್ಟು ಪಶ್ಚಿಮ ಬಂಗಾಳವನ್ನು ಕಳ್ಳರಿಂದ ರಕ್ಷಿಸಿ ಎಂದು ಬರೆಯಲಾಗಿದೆ. ಈ ಪತ್ರವನ್ನು ಸ್ವೀಕರಿಸಿದ ಮೋದಿಯವರು ಮತ್ತೆ ಇಂತಹ ಕೆಲಸಗಳನ್ನು ಮಾಡಬೇಡಿ ಎಂದು ಬಾಗ್ಚಿಗೆ ಬುದ್ಧಿ ಹೇಳಿದರು.

    ಇತ್ತೀಚೆಗಷ್ಟೇ ಕಾಂಗ್ರೆಸ್ (Congress) ತೊರೆದು ಬಿಜೆಪಿಗೆ (BJP) ಸೇರಿದ್ದ ಬಾಗ್ಚಿ, 2023ರಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಮಾತನಾಡಿದ್ದಕ್ಕೆ ಬಾಗ್ಚಿ ಕೋಲ್ಕತ್ತಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ನಂತರ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರ ಉರುಳಿಸುವವರೆಗೂ ತಲೆ ಕೂದಲು ಬೆಳೆಸುವುದಿಲ್ಲ ಎಂದು ಶಪಥ ಮಾಡಿ ತಲೆ ಬೋಳಿಸಿಕೊಂಡಿದ್ದರು. ಇದನ್ನೂ ಓದಿ: ದೀದಿ ಸರ್ಕಾರ ಉರುಳಿಸೋ ವರೆಗೂ ತಲೆ ಕೂದಲು ಬೆಳೆಸಲ್ಲ: ಶಪಥ ಮಾಡಿದ್ದ ‘ಕೈ’ ನಾಯಕ ಬಿಜೆಪಿ ಸೇರ್ಪಡೆ

    ಪಕ್ಷದೊಳಗಿನ ಗೌರವದ ಕೊರತೆಯನ್ನು ಉಲ್ಲೇಖಿಸಿ ಬಾಗ್ಚಿ, ಫೆಬ್ರವರಿ 28 ರಂದು ಕಾಂಗ್ರೆಸ್ ತೊರೆದಿದ್ದರು. ಕಾಂಗ್ರೆಸ್ ಉನ್ನತ ನಾಯಕತ್ವವು ಪಶ್ಚಿಮ ಬಂಗಾಳ ಘಟಕಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ. ಹಾಗಾಗಿ ನನ್ನ ಸ್ವಾಭಿಮಾನವನ್ನು ರಾಜಿ ಮಾಡಿಕೊಳ್ಳಲು ಮತ್ತು ಅದರಲ್ಲಿ ಉಳಿಯಲು ನಾನು ಬಯಸುವುದಿಲ್ಲ ಎಂದು ಅವರು ಪಕ್ಷವನ್ನು ತೊರೆದ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದರು. 2024ರ ಫೆಬ್ರವರಿ 29 ರಂದು ಬಿಜೆಪಿ ಸೇರಿದ್ದರು.

    ಪ್ರಧಾನಿ ಮೋದಿ ಅವರು ಶನಿವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದು, ಈ ವೇಳೆ 4,500 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ಅನಾವರಣಗೊಳಿಸಿದರು.

  • ಜೈಲಿನಿಂದ ಜಾಕ್ವೆಲಿನ್ ಗೆ ಪತ್ರ ಬರೆದಿಲ್ಲ: ಉಲ್ಟಾ ಹೊಡೆದ ಸುಕೇಶ್

    ಜೈಲಿನಿಂದ ಜಾಕ್ವೆಲಿನ್ ಗೆ ಪತ್ರ ಬರೆದಿಲ್ಲ: ಉಲ್ಟಾ ಹೊಡೆದ ಸುಕೇಶ್

    ಹುಕೋಟಿ ವಂಚನೆ ಆರೋಪಿ ಸುಕೇಶ್ ಚಂದ್ರಶೇಖರ್ ತಮಗೆ ಜೈಲಿನಿಂದ ಪತ್ರ ಹಾಗೂ ವಾಟ್ಸಪ್ ಸಂದೇಶ ಕಳುಹಿಸುತ್ತಿದ್ದಾನೆ ಎಂದು ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪ ಮಾಡಿದ್ದರು. ಈ ಕುರಿತಂತೆ ಕೋರ್ಟಿಗೆ ಮೊರೆ ಹೋಗುವುದಾಗಿ ತಿಳಿಸಿದ್ದರೆ. ಈ ಘಟನೆಯ ಬೆನ್ನಲ್ಲೇ ಸುಕೇಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಾವು ಯಾವುದೇ ಕಾರಣಕ್ಕೂ ಪತ್ರವನ್ನು ಮತ್ತು ಸಂದೇಶವನ್ನು ಕಳುಹಿಸಿಲ್ಲ. ಯಾರೂ ಈ ಕೃತ್ಯ ಮಾಡುತ್ತಿದ್ದಾರೆ. ನಾನು ಈ ಕುರಿತಂತೆ ಯಾವುದೇ ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ.

    ಸುಕೇಶ್ ಚಂದ್ರಶೇಖರ್ ಜೈಲಿನಿಂದಲೇ (Jail) ತಮಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಜಾಕ್ವೆಲಿನ್ ಆರೋಪ ಮಾಡಿದ್ದರು. ಜೈಲಿನಿಂದ ಪ್ರೇಮ ಪತ್ರ ಕಳುಹಿಸುತ್ತಿದ್ದರು, ಇದೀಗ ಬೆದರಿಕೆಯ ಪತ್ರ ಬರೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಕುರಿತಂತೆ ಸುಕೇಶ್ ತನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

    ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.

    ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

     

    ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.

  • ಕೊರಿಯರ್‌ಗಳು ಅಂಚೆ ಕಚೇರಿ ಕಾಯ್ದೆ ವ್ಯಾಪ್ತಿಗೆ – ಇನ್ಮುಂದೆ ಸರ್ಕಾರವೂ ನಿಮ್ಮ ಪತ್ರಗಳನ್ನು ತೆರೆದು ನೋಡ್ಬೋದು

    ಕೊರಿಯರ್‌ಗಳು ಅಂಚೆ ಕಚೇರಿ ಕಾಯ್ದೆ ವ್ಯಾಪ್ತಿಗೆ – ಇನ್ಮುಂದೆ ಸರ್ಕಾರವೂ ನಿಮ್ಮ ಪತ್ರಗಳನ್ನು ತೆರೆದು ನೋಡ್ಬೋದು

    ನವದೆಹಲಿ: ದೇಶದ ಭದ್ರತೆಯ ದೃಷ್ಟಿಯಿಂದ ಅಂಚೆ ಕಚೇರಿಗೆ (Post Office) ಬರುವ ಪತ್ರಗಳನ್ನು (Letters) ಯಾವುದೇ ಸರ್ಕಾರಿ ಅಧಿಕಾರಿಗಳು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕುವ ಅಧಿಕಾರ ನೀಡುವ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿದೆ.

    ಪತ್ರಗಳು ಮಾತ್ರವಲ್ಲದೇ ಖಾಸಗಿ ಕೊರಿಯರ್‌ಗಳನ್ನೂ (Courier) ಇದೇ ಮೊದಲ ಬಾರಿಗೆ ಮಸೂದೆ ವ್ಯಾಪ್ತಿಗೆ ತರಲಾಗಿದೆ. ಇದರ ಪ್ರಕಾರ ಕೊರಿಯರ್ ಅಂಗಡಿಗೆ ಬರುವ ಶಾಂಕಾಸ್ಪದ ಪತ್ರಗಳನ್ನು ಅಥವಾ ಯಾವುದೇ ವಸ್ತುಗಳನ್ನು ತೆರೆದು ನೋಡಿ ಮುಟ್ಟುಗೋಲು ಹಾಕುವ ಅಧಿಕಾರ ಇದೀಗ ಸರ್ಕಾರಕ್ಕೆ ಲಭಿಸಿದೆ.

    ಈ ಮಸೂದೆಗೆ ರಾಜ್ಯಸಭೆಯಲ್ಲಿ ಡಿಸೆಂಬರ್ 4 ರಂದೇ ಅಂಗೀಕಾರ ದೊರೆತಿದೆ. ಸಂಸತ್‌ನಲ್ಲಿ ಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಉತ್ತರ ನೀಡಬೇಕು ಎಂದು ವಿಪಕ್ಷಗಳು ಗದ್ದಲ ನಡೆಸಿದ ಸಂದರ್ಭದಲ್ಲಿಯೇ ಈ ಮಸೂದೆಯನ್ನು ಅಂಗೀಕರಿಸಲಾಗಿದೆ. ಈ ಹೊಸ ಕಾಯ್ದೆ 125 ವರ್ಷಗಳಷ್ಟು ಹಳೆಯ ಪೋಸ್ಟಾಫೀಸ್ ಕಾಯ್ದೆಯನ್ನು (1898) ಬದಲಿಸಿದೆ. ಇದನ್ನೂ ಓದಿ: ಇವಿಎಂ ಬಗ್ಗೆ ಮತ್ತೆ ವಿಪಕ್ಷಗಳಿಗೆ ಅನುಮಾನ – ವಿವಿಪ್ಯಾಟ್‌ ಸ್ಲಿಪ್‌ ಮತದಾರರ ಕೈಗೆ ನೀಡಬೇಕು

    ಈ ಮಸೂದೆಯಿಂದಾಗಿ ಸರ್ಕಾರಿ ಅಧಿಕಾರಿಗಳಿಗೆ ಅಂಚೆ ಕಚೇರಿ ಹಾಗೂ ಖಾಸಗಿ ಕೊರಿಯರ್ ಕಚೇರಿಗೆ ಬರುವ ಪತ್ರಗಳನ್ನು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕುವ ಅಧಿಕಾರವನ್ನು ನೀಡುತ್ತದೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ಬ್ಯಾನರ್ ಪ್ರೇಮ – ಪಂಚಾಯತ್‌ನಿಂದ ರಸ್ತೆ ದುರಸ್ತಿ, ಬ್ಯಾನರ್ ಶಾಸಕರದ್ದು

  • ಬಿಗ್ ಬಾಸ್ ಕನ್ನಡ: ಪತ್ರ ಪಡೆಯಲು ಪರದಾಡಿದ ಸ್ಪರ್ಧಿಗಳು

    ಬಿಗ್ ಬಾಸ್ ಕನ್ನಡ: ಪತ್ರ ಪಡೆಯಲು ಪರದಾಡಿದ ಸ್ಪರ್ಧಿಗಳು

    ದೀಪಾವಳಿ ಹಬ್ಬದ ಖುಷಿಗಾಗಿ ಬಿಗ್‌ಬಾಸ್‌ (Big Boss Kannada) ಸ್ಪರ್ಧಿಗಳಿಗೆ ಮನೆಯಡುಗೆ ಕೊಟ್ಟು ಕಳಿಸಿದ್ದರು. ಇದೀಗ ಮನೆಯವರಿಂದ ಬಂದ ಪತ್ರಗಳನ್ನೂ ಕೊಡುತ್ತಿದ್ದಾರೆ. ಆದರೆ ಮನೆಯಡುಗೆ ತಿಂದಷ್ಟು ಸುಲಭವಾಗಿ ಪತ್ರಗಳು ಸ್ಪರ್ಧಿಗಳ ಕೈಗೆ ಸಿಗುತ್ತಿಲ್ಲ. ಒಂದೊಂದು ಪತ್ರಕ್ಕೂ  (Letter) ಒಂದಿಷ್ಟು ಟಾಸ್ಕ್‌ಗಳನ್ನು ಕೊಟ್ಟು ಅದರಲ್ಲಿ ಗೆದ್ದವರಿಗೆ ಮಾತ್ರವೇ ಪತ್ರ ಕೊಡುವುದಾಗಿ ಹೇಳಿದ್ದಾರೆ.

    ಈಗಾಗಲೇ ವಿನಯ್ ಗೌಡ ಮತ್ತು ನಮ್ರತಾ ಮನೆಯಿಂದ ಬಂದ ಪತ್ರಗಳನ್ನು ಪಡದುಕೊಳ್ಳಲು ಯಶಸ್ವಿಯಾಗಿದ್ದಾರೆ. ಕೆಲವು ಸದಸ್ಯರು ಪತ್ರಗಳನ್ನು ಪಡೆದುಕೊಳ್ಳಲು ವಿಫಲರಾಗಿದ್ದಾರೆ. ಇನ್ನುಳಿದ ಸದಸ್ಯರ ಅದೃಷ್ಟಪರೀಕ್ಷೆ ಇನ್ನಷ್ಟೇ ನಡೆಯಬೇಕಿದೆ.

    ಇಂದು ಬಿಗ್‌ಬಾಸ್‌ ಮನೆಯಲ್ಲಿ ಇನ್ನಷ್ಟು ಜನರಿಗೆ ಪತ್ರ ಪಡೆದುಕೊಳ್ಳಲು ಟಾಸ್ಕ್ (Task) ನೀಡಿದ್ದಾರೆ. ಟಾಸ್ಕ್‌ ಏನೋ ತುಂಬ ಸಿಂಪಲ್ ಆಗಿ ಕಾಣಿಸುತ್ತಿದೆ. ಕನ್‌ಫೆಷನ್ ರೂಮಲ್ಲಿ ಕೂತ ಇಬ್ಬರು, ಬಿಗ್‌ಬಾಸ್‌ ಮನೆಯ ಕುರಿತಾಗಿಯೇ ಕೇಳುವ ಸರಳವಾದ ಪ್ರಶ್ನೆಗಳಿಗೆ ಉತ್ತರಿಸಬೇಕು. ಆ ಪ್ರಶ್ನೆಗಳು ಎಷ್ಟು ಸರಳವಾಗಿವೆಯೆಂದರೆ, ಪ್ರತಿದಿನವೂ ಅದನ್ನು ನೋಡುತ್ತ, ಬಳಸುತ್ತಲೇ ಇದ್ದರೂ ಅದು ಸ್ಪರ್ಧಿಗಳ ಗಮನಕ್ಕೆ ಬಂದಿಲ್ಲ. ಹಾಗಾಗಿಯೇ ಉತ್ತರ ಕೊಡುವುದೂ ಕಷ್ಟವಾಗಿದೆ.

     

    ಈ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಯಾರು ಗೆಲ್ಲುತ್ತಾರೆ? ಯಾರ ಮನೆಯಿಂದ ಬಂದ ಪತ್ರ ಸ್ಪರ್ಧಿಗಳ ಕೈಸೇರುತ್ತದೆ? ಯಾರು ನಿರಾಸೆಯಲ್ಲಿ ಮುಳುಗಬೇಕಾಗುತ್ತದೆ?  ವೀಕ್ಷಿಸಲು JioCinemaದಲ್ಲಿ ಬಿಗ್‌ಬಾಸ್ ಕನ್ನಡ ವೀಕ್ಷಿಸುತ್ತಿರಿ.

  • ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ

    ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ

    – ಬರ ಪರಿಹಾರ ಕೋರಿ ಮತ್ತೊಮ್ಮೆ ಕೇಂದ್ರಕ್ಕೆ ರಾಜ್ಯದಿಂದ ಪತ್ರ

    ಮೈಸೂರು: ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಬರ (Drought) ಪರಿಸ್ಥಿತಿಯ ಅಧ್ಯಯನ ಹಾಗೂ ಜನರನ್ನು ಭೇಟಿ ಮಾಡಿ ವರದಿ (Report) ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಮೈಸೂರಿನಲ್ಲಿ (Mysuru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ವರಿಷ್ಠರೇ ಎಲ್ಲಾ ಮಾಡೋದಾದ್ರೆ ನೀವೇನು ಬೆರಳು ಚೀಪ್ತಿದ್ರಾ – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

    ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 600 ಕೋಟಿ ರೂ. ಬಿಡುಗಡೆ:
    ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಶನಿವಾರ ಬಿಡುಗಡೆ ಮಾಡಿದ್ದಾರೆ. 33 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರಿಗೂ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರು ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದರು.

    ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ಕೇಂದ್ರ ಸರ್ಕಾರ ತೋರಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ಬಿಜೆಪಿ ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು. ಕೇಂದ್ರಕ್ಕೆ ಪುನಃ ಪತ್ರ ಬರೆಯಲಾಗಿದೆ. ಪರಿಹಾರಕ್ಕಾಗಿ ಒತ್ತಾಯ ಮಾಡಲು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಪುನಃ ಪತ್ರ ಬರೆಯಲಾಗಿದೆ ಎಂದು ನುಡಿದರು. ಇದನ್ನೂ ಓದಿ: ಭಯಾನಕ ಹವಾಮಾನ ಘಟನೆ, ಭಯೋತ್ಪಾದಕ ದಾಳಿಗಳಲ್ಲಿ ಹೆಚ್ಚಳ: 2024 ಕ್ಕೆ ಬಾಬಾ ವಂಗಾ ಭವಿಷ್ಯವಾಣಿ

    ಬಿಜೆಪಿಗೆ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ:
    ಬಿಜೆಪಿ ಅವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಇಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ? ಅವರಿಗೆ ಕರ್ನಾಟಕದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ ಎಂದರು.

    ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ:
    ಇಲ್ಲಿಯ ತನಕ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಮೋದಿ ಅವರು ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಶ್ವಾಸನೆ ಕೊಡುತ್ತಿರುವ ಬಗ್ಗೆ ಮಾತನಾಡಿ ರಾಜಕೀಯವಾಗಿ ಟೀಕೆ ಮಾಡಿದ್ದಾರೆ. ರಾಜ್ಯ ದಿವಾಳಿಯಾಗುತ್ತದೆ, ಕೊಡಲಾಗುವುದಿಲ್ಲ ಎಂದು ರಾಜಕೀಯವಾಗಿ ಹೇಳಿದ್ದಾರೆ. ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ. ಅವರು ಗ್ಯಾರಂಟಿಗಳನ್ನು ಕೊಟ್ಟರೆ ಅದು ಬಡವರ ಕಾರ್ಯಕ್ರಮ. ನಾವು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎನ್ನುತ್ತಾರೆ. ಅವರೇನೇ ಹೇಳಿದರೂ ನಾವು ಬಡವರ, ಸಾಮಾನ್ಯ ಜನರ, ಹಳ್ಳಿಗಾಡಿನ, ಎಲ್ಲಾ ಜಾತಿಯ ಬಡವರ ಪರವಾಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ತೀವ್ರ ಸ್ಥಿತಿಯಲ್ಲಿ ಗಾಳಿ ಗುಣಮಟ್ಟ – ನ.10 ರವರೆಗೆ ದೆಹಲಿಯ ಪ್ರಾಥಮಿಕ ಶಾಲೆಗಳು ಕ್ಲೋಸ್

    ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ:
    ಮುಖ್ಯಮಂತ್ರಿಗಳ ಕುರ್ಚಿ ಇವತ್ತು ನಾಳೆ ಬೀಳಲಿದೆ ಎಂದು ಬಿಜೆಪಿ, ಜೆಡಿಎಸ್ ಹೇಳಿಕೆ ನೀಡುತ್ತಿರುವ ಬಗ್ಗೆ ಮಾತನಾಡಿ, ಅವರು ಹತಾಶರಾಗಿದ್ದಾರೆ. ಅವರು ಸರ್ಕಾರ ರಚಿಸುವುದಾಗಿ ಭಾವಿಸಿದ್ದರು. ಅದಾಗದೆ ಇದ್ದುದರಿಂದ ಹತಾಶರಾಗಿದ್ದಾರೆ ಎಂದರು.

    ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಲು ಮಂತ್ರಿಗಳಿಗೆ ಸೂಚನೆ:
    ಸಿಎಂ ಕುರ್ಚಿ ಬಗ್ಗೆ ಬಿಜೆಪಿ ಚರ್ಚೆ ಮಾಡುತ್ತಿದ್ದಾರೆ. ನಮ್ಮ ಶಾಸಕರು, ಸಚಿವರು ಈ ಬಗ್ಗೆ ಮಾತನಾಡಕೂಡದು ಎಂದು ತಿಳಿಸಲಾಗಿದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಬಾರದು. ಏನಿದ್ದರೂ ನಿಮ್ಮ ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

    ನಾಳೆಯೇ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾದರೆ ತಮ್ಮ 17 ಶಾಸಕರ ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದು ವ್ಯಂಗ್ಯವಾಗಿ ಹೇಳಿರುವುದು. ಕುಮಾರಸ್ವಾಮಿ ಅವರಿಗೆ ವ್ಯಂಗ್ಯವಾಗಿ ಹೇಳುವುದೂ ಬರುತ್ತದೆ ಎನ್ನುವುದೇ ನಮಗೆ ಖುಷಿ ಎಂದರು. ಮೊದಲು ಎನ್‌ಡಿಎ ಬಿಟ್ಟು ಹೊರಬರಲಿ ಎಂದಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಆಗಿ ಹುಟ್ಟಿದ್ದೇನೆ ಹಿಂದೂ ಆಗೇ ಸಾಯುತ್ತೇನೆ: ಸಿ.ಟಿ ರವಿ

    ಈಶ್ವರಪ್ಪ ಸವಕಲು ನಾಣ್ಯ:
    ಕಾಂತರಾಜು ವರದಿ ಸುಟ್ಟುಹಾಕಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾಂತರಾಜು ವರದಿ ಜಾರಿಮಾಡಿ ಎಂದು ಈಶ್ವರಪ್ಪ ಭಾಷಣ ಮಾಡಿದ್ದರು. ಅವರ ಮಾತಿಗೆ ಬೆಲೆ ಇದೆಯೇ? ಅವರೆಲ್ಲಾ ಸವಕಲು ನಾಣ್ಯಗಳು. ಬಿಜೆಪಿಯಲ್ಲಿಯೇ ಅವರು ಸವಕಲು ನಾಣ್ಯ ಎಂದು ಟಿಕೆಟ್ ನೀಡಿಲ್ಲ. ಅವರ ಮಾತುಗಳಿಗೆ ಏನು ಬೆಲೆ ಇದೆ? ವರದಿ ನೀಡಿದರೆ ಅದನ್ನು ಸ್ವೀಕರಿಸುತ್ತೇವೆ ಎಂದರು. ವರದಿಯಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ ಎಂದರು. ಇದನ್ನೂ ಓದಿ: ಡಿಕೆಶಿ ಸಿಎಂ ಆಗೋಕೆ ಕುಮಾರಸ್ವಾಮಿ ಬೆಂಬಲ ಕೊಡೋದಾದ್ರೆ ಕೊಡಲಿ: ಪರಮೇಶ್ವರ್ ಲೇವಡಿ