Tag: ಪತ್ರಕರ್ತೆ ಗೌರಿ ಲಂಕೇಶ್

  • ವಾಗ್ಮೋರೆ ಖುಲಾಸೆಯಾದ್ರೂ ಆಶ್ಚರ್ಯವಿಲ್ಲ: ಪ್ರಗತಿಪರ ಚಿಂತಕ ಸಂಶಯ

    ವಾಗ್ಮೋರೆ ಖುಲಾಸೆಯಾದ್ರೂ ಆಶ್ಚರ್ಯವಿಲ್ಲ: ಪ್ರಗತಿಪರ ಚಿಂತಕ ಸಂಶಯ

    ಉಡುಪಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿಯನ್ನು ಕೋರ್ಟ್ ತಾಂತ್ರಿಕ ಕಾರಣ ಕೊಟ್ಟು ಬಿಡುಗಡೆ ಮಾಡಿದ್ರೂ ಆಶ್ಚರ್ಯವಿಲ್ಲ ಅಂತ ವಿಮರ್ಷಕ, ಪ್ರಗತಿಪರ ಚಿಂತಕ ಜಿ ರಾಜಶೇಖರ್ ಸಂಶಯ ವ್ಯಕ್ತಗೊಳಿಸಿದರು.

    ಶನಿವಾರ ನಗರದಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಸಂಸ್ಮರಣೆ ನಡೆಯಿತು. ಕೋಮು ಸೌಹಾರ್ದ ವೇದಿಕೆ ಮತ್ತು ದಲಿತ ಸಂಘಟನೆ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ವೇಳೆ ಮಾತನಾಡಿದ ವಿಚಾರವಾದಿ ಜಿ.ರಾಜಶೇಖರ್, ಗಾಂಧಿಯನ್ನು ಕೊಂದವರು ಗೌರಿಯನ್ನು ಕೊಂದಿದ್ದಾರೆ. ಆರೋಪಿ ಪರಶುರಾಮ ವಾಗ್ಮೋರೆ ಓರ್ವ ಗಲಭೆಕೋರ. ಸಿಂಧಗಿಯಲ್ಲಿ ಪಾಕ್ ಧ್ವಜದ ವಿಚಾರದಲ್ಲಿ ಘರ್ಷಣೆಗೆ ಕಾರಣವಾಗಿದ್ದವ ಎಂದರು.

    ಧ್ವಜದ ಪ್ರಕರಣದಿಂದ ವಾಗ್ಮೋರೆ ಖುಲಾಸೆಯಾಗಿದ್ದಾನೆ. ಮುಂದಿನ ದಿನಗಳಲ್ಲಿ ಗೌರಿ ಕೊಲೆಯ ಆರೋಪಿಗಳು ಬಿಡುಗಡೆಯಾಗಬಹುದು. ತಾಂತ್ರಿಕ ಕಾರಣ ಕೊಟ್ಟು ಕೋರ್ಟ್ ಬಿಡುಗಡೆ ಮಾಡಿದ್ರೂ ಆಶ್ಚರ್ಯವಿಲ್ಲ ಎಂದು ಸಂಶಯ ವ್ಯಕ್ತಪಡಿಸಿ, ಆ ಪ್ರಕರಣ ಕೂಡ ಹೀಗೆಯೇ ಬಿದ್ದೋಯ್ತು ಎಂದರು.

    ಮಹಾತ್ಮಾ ಗಾಂಧಿಯನ್ನು ಕೊಂದವರೇ ದಾಬೋಲ್ಕರ್, ಪನ್ಸಾರೆ, ಕಲ್ಬುರ್ಗಿ ಮುಂತಾದ ವಿಚಾರವಾದಿಗಳನ್ನು ಕೊಂದಿದ್ದಾರೆ ಎಂದು ಅಭಿಪ್ರಾಯಪಟ್ಟರು. ಆರ್ ಎಸ್ ಎಸ್ ಸಿದ್ಧಾಂತ ದೇಶದಲ್ಲಿ ಮುಸ್ಲಿಮರ ಹತ್ಯೆಗೆ ಕಾರಣವಾಗಿದೆ. ಗೌರಿ ಸೇರಿದಂತೆ ಎಲ್ಲಾ ಹತ್ಯೆಗಳು ಆರ್‍ಎಸ್‍ಎಸ್‍ನ ಸರಣಿ ಹತ್ಯೆಯೆಂದು ನಾವು ಭಾವಿಸುತ್ತೇವೆ ಎಂದು ಗಂಭೀರ ಆರೋಪ ಮಾಡಿದರು.

    ಹಿಂದುತ್ವದ ಅಮಲು ದೇಶವನ್ನು ಹಾಳುಗೆಡವುತ್ತಿದೆ. ಆರ್ ಎಸ್ ಎಸ್ ಎಸ್ ಒಂದು ದೇಶದ್ರೋಹಿ ಸಂಘಟನೆ ಅದನ್ನು ನಿಷೇಧ ಮಾಡಬೇಕಹ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆಯಲ್ಲಿ ಸ್ಫೋಟಕ ಸುದ್ದಿ ಬಹಿರಂಗ!

    ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆಯಲ್ಲಿ ಸ್ಫೋಟಕ ಸುದ್ದಿ ಬಹಿರಂಗ!

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಎಸ್‍ಐಟಿ ಶಂಕಿತ ಆರೋಪಿಯೊಬ್ಬನನ್ನು ವಶಪಡಿಸಿಕೊಂಡು ವಿಚಾರಣೆ ಮಾಡಲಾಗುತ್ತಿದೆ. ಆದರೆ ವಿಚಾರಣೆಯಲ್ಲಿ ಶಂಕಿತ ಆರೋಪಿ ಪದೇ ಪದೇ ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಿದ್ದಾರೆ. ಹೀಗಾಗಿ ಆರೋಪಿಯ ಮಂಪರು ಪರೀಕ್ಷೆಗೆ ಕೋರ್ಟ್ ಆದೇಶಿಸಿದೆ.

    ವಿಚಾರಣೆಯಲ್ಲಿ ಮತ್ತೊಂದು ಸ್ಫೋಟಕ ಸ್ಟೋರಿ ಹೊರಗೆ ಬರುತ್ತಿದ್ದು, ಸಾಹಿತಿ ಕೆ.ಎಸ್.ಭಗವಾನ್ ಬಚಾವಾಗಿದ್ದು ಹೇಗೆ ಎಂದು ಬಾಯಿ ಬಿಟ್ಟಿದ್ದಾನೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಆದ್ರೆ ಭಗವಾನ್ ಕೊಲೆ ಮಾಡಲು ಸಾಧ್ಯವಾಗಿಲ್ಲ ಅಂತಾ ಹೇಳಿದ್ದಾನೆ ಎಂದು ತಿಳಿದು ಬಂದಿದೆ.

    ಭಗವಾನ್ ಅವರನ್ನು ಕೊಲೆ ಮಾಡಲು ಶ್ರೀರಂಗಪಟ್ಟಣದ ಅನಿಲ್ ಎಂಬುವನ ಮನೆಯಲ್ಲಿ ಟ್ರೈನಿಂಗ್ ಆಗಿತ್ತು. ಆದರೆ ಟ್ರೈನಿಂಗ್ ಮುಗಿಸಿಕೊಂಡಿದ್ದ ಆರೋಪಿಗಳು ಬೇರೊಂದು ವೆಪನ್ ಕೇಳಿದ್ದರು. ಭಗವಾನ್ ಕೊಲೆ ಮಾಡೋದಕ್ಕೆ ಈ ರಿವಾಲ್ವರ್ ಸೂಕ್ತ ಅಲ್ಲ ಎಂದು ಹೇಳಿ ಬೇರೆ ರಿವಾಲ್ವರ್ ಗಳನ್ನು ತರೋದಕ್ಕೆ ಸೂಚನೆ ನೀಡಿದ್ದರು. ಸರಿಯಾದ ಸಮಯದಲ್ಲಿ ರಿವಾಲ್ವರ್ ಅನ್ನು ಒದಗಿಸೋದಕ್ಕೆ ಆಗದೆ ಭಗವಾನ್ ಬಚಾವ್ ಆಗಿ ಹೋದ್ದರು. ಇನ್ನೂ ಗೋವಾದಲ್ಲಿ ಹಂತಕನನ್ನು ಸೆಲೆಕ್ಟ್ ಮಾಡಲಾಗಿತ್ತು ಎನ್ನಲಾಗಿದೆ.

  • ಗೌರಿ ಲಂಕೇಶ್ ಹಂತಕರ ಸುಳಿವು ಕೊಟ್ಟವರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್!

    ಗೌರಿ ಲಂಕೇಶ್ ಹಂತಕರ ಸುಳಿವು ಕೊಟ್ಟವರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್!

    ಬೆಂಗಳೂರು: ವಿಚಾರವಾದಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಇಂದಿಗೆ ನಾಲ್ಕು ದಿನಗಳಾಗಿದ್ದು, ಹಂತಕರ ಪತ್ತೆಗೆ ತೀವ್ರ ಶೋಧ ನಡೆಯುತ್ತಿದೆ. ಹಂತಕರನ್ನು ಪತ್ತೆ ಹಚ್ಚಿಕೊಟ್ಟವರಿಗೆ 10 ಲಕ್ಷ ರೂ. ಬಹುಮಾನವಾಗಿ ನೀಡಲಾಗುವುದು ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

    ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಭೇಟಿ ಮಾಡಿ ತನಿಖೆ ಬಗ್ಗೆ ವಿವರ ನೀಡಿದ್ದೇನೆ. ತನಿಖೆ ಚುರುಕುಗೊಳಿಸಿ ಅಂತ ಸಿಎಂ ಸೂಚನೆ ನೀಡಿದ್ದಾರೆ. ಈಗಾಗಲೇ ಅಧಿಕಾರಿಗಳ ತಂಡ ಕೆಲಸ ಪ್ರಾರಂಭ ಮಾಡಿದೆ. ಕೇಳಿದಷ್ಟು ಅಧಿಕಾರಿಗಳನ್ನ ಈಗಾಗಲೇ ನೀಡಿದ್ದೇವೆ. ಮತ್ತಷ್ಟು ಪೆÇಲೀಸರು ಬೇಕು ಅಂದ್ರೆ ಇಲಾಖೆ ನೀಡುತ್ತೆ. ಹತ್ಯೆಯ ಕಾರಣ ಏನು ಅನ್ನೊ ಬಗ್ಗೆ ತನಿಖೆ ನಡೆಯುತ್ತಿದೆ. ಎಡ, ಬಲ ನಕ್ಸಲ್ ಎಲ್ಲಾ ಆಯಾಮದ ಬಗ್ಗೆ ತನಿಖೆ ನಡೆಯುತ್ತಿದ್ದು, ತನಿಖೆ ನಡೆದ ಮೇಲೆ ಎಲ್ಲಾ ಗೊತ್ತಾಗಲಿದೆ. ಹಂತಕರ ಬಗ್ಗೆ ಸುಳಿವು ನೀಡಿದವರಿಗೆ ಈಗಾಗಲೇ ಸರ್ಕಾರ ಬಹುಮಾನ ಘೋಷಣೆ ಮಾಡಿದೆ ಅಂದ್ರು.

    ತನಿಖೆ ಬಗ್ಗೆ ಈಗಲೇ ಏನು ಹೇಳಲು ಸಾಧ್ಯವಿಲ್ಲ. ಆದಷ್ಟು ಬೇಗ ಎಲ್ಲಾ ಗೊತ್ತಾಗಲಿದೆ ಅನ್ನೊ ವಿಶ್ವಾಸ ಇದೆ. ಗೌರಿ ಲಂಕೇಶ್ ಕುಟುಂಬದವರ ಆತಂಕ ನಮಗೂ ತಿಳಿದಿದೆ. ಇದಕ್ಕಾಗಿಯೇ ವಿಶೇಷ ತಂಡ ರಚನೆ ಮಾಡಿದ್ದೇವೆ. ಅವರ ಕುಟುಂಬದಷ್ಟೆ ನಮಗೂ ಬೇಗ ಮುಗಿಯಬೇಕು ಅಂತ ಆಸೆ ಇದೆ. ಅಗತ್ಯ ಬಿದ್ರೆ ತನಿಖೆಗೆ ಮತ್ತಷ್ಟು ಅಧಿಕಾರಿಗಳನ್ನ ನೇಮಕ ಮಾಡ್ತೀವಿ ಅಂದ್ರು.

    ನಾಳೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತನಿಖೆಯ ಪ್ರಗತಿಯ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಸ್‍ಐಟಿ ಮುಖ್ಯಸ್ಥರು, ಡಿಜಿ ರೂಪಕ್ ಕುಮಾರ್ ದತ್ತ, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಅಂತ ಹೇಳಿದ್ರು.

    ಸಚಿವ ವಿನಯ್ ಕುಲಕರಣಿ ಭದ್ರತೆ ಬೇಕು ಅಂತ ಕೇಳಿದ್ರು ಹೀಗಾಗಿ ಭದ್ರತೆ ನೀಡಲಾಗಿದೆ. ಜಾಮಾಂದಾರ್ ಅವರಿಗೂ ಬೆದರಿಕೆ ಬಂದಿದೆ ಅಂತ ಗೊತ್ತಾಗಿದೆ ಅವರಿಗೂ ಭದ್ರತೆ ನೀಡಲಾಗುತ್ತೆ. ವಿಚಾರವಾದಿಗಳಿಗೆ ಹಾಗೂ ಯಾರಿಗೆ ಬೆದರಿಕೆ ಇದೆಯೋ ಅವರೆಲ್ಲರಿಗೂ ಸರ್ಕಾರ ಭದ್ರತೆ ನೀಡುತ್ತೆ ಅಂತ ತಿಳಿಸಿದ್ರು.

    ಬಿಜೆಪಿ ಶಾಸಕ ಜೀವರಾಜ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜೀವರಾಜ್ ಅವರನ್ನು ತನಿಖೆ ಮಾಡುವಂತೆ ಎಸ್‍ಐಟಿಗೆ ಸೂಚನೆ ನೀಡಲಾಗಿದೆ. ಈ ಹೇಳಿಕೆ ಹಿಂದಿನ ಮರ್ಮವೇನು? ಯಾಕೆ ಹೇಳಿಕೆ ನೀಡಿದ್ರು ಅನ್ನೋದನ್ನ ಕೇಳಲು ತಿಳಿಸಿದ್ದೇವೆ. ಬಹಿರಂಗವಾಗಿ ಇಂತಹ ಹೇಳಿಕೆ ನೀಡೋದು ಸರಿಯಲ್ಲ. ಎಸ್ ಐಟಿ ತನಿಖೆ ಬಳಿಕ ಹೇಳಿಕೆ ಬಗ್ಗೆ ಮತ್ತಷ್ಟು ಸ್ಪಷ್ಟತೆ ಸಿಗುತ್ತೆ ಅಂದ್ರು.

    ಮಂಗಳೂರು ಚಲೋ: ಬಿಜೆಪಿಯವರ ಮಂಗಳೂರು ಚಲೋ ವಿಫಲವಾಗಿದೆ. 3 ಸಾವಿರ ಜನ ಸೇರಿದ್ದು ಅಂತ ಮಾಧ್ಯಮಗಳಲ್ಲಿ ನೋಡಿದ್ದೇನೆ. ಬಿಜೆಪಿ ಪರ ಜನ ಇಲ್ಲ ಅನ್ನೋದು ನಿನ್ನೆಯ ರ್ಯಾಲಿಯಿಂದ ಗೊತ್ತಾಗಿದೆ. ನಾವು ಕೇಳಿದ ಮಾಹಿತಿ ಅವರು ನೀಡಿಲ್ಲ. ಹೀಗಾಗಿ ರ್ಯಾಲಿಗೆ ಅನುಮತಿ ನಿರಾಕರಿಸಿದ್ದೇವು. ಶಾಂತಿಕದಡುವ ಯಾವುದೇ ಹೋರಾಟಕ್ಕೆ ಸರ್ಕಾರ ಅವಕಾಶ ಕೊಡಲ್ಲ. ರಮಾನಾಥ್ ರೈಗೆ ಸಾಮರಸ್ಯ ನಡಿಗೆ ಕೈ ಬಿಡುವಂತೆ ಮನವಿ ಮಾಡಿದ್ದೇನೆ. ಒಂದು ವೇಳೆ ನಡೆಸೋದೆ ಆದ್ರೆ ಸಮಾಜದ ಎಲ್ಲ ವರ್ಗದ ಜನರನ್ನ ಸೇರಿಸಿಕೊಂಡು ಸಾಮರಸ್ಯ ನಡೆಗೆ ಮಾಡಿದ್ರೆ ಅಭ್ಯಂತರವಿಲ್ಲ ಎಂದ್ರು.