Tag: ಪತ್ರ

  • ಇಸ್ರೇಲ್‌ನಲ್ಲಿರುವ ಕರಾವಳಿಗರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ: ನಳಿನ್ ಕುಮಾರ್ ಕಟೀಲ್

    ಇಸ್ರೇಲ್‌ನಲ್ಲಿರುವ ಕರಾವಳಿಗರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ: ನಳಿನ್ ಕುಮಾರ್ ಕಟೀಲ್

    ಮಂಗಳೂರು: ಇಸ್ರೇಲ್‌ನಲ್ಲಿ (Israel) ಕರಾವಳಿಯ (Karavali) ಐದು ಸಾವಿರಕ್ಕೂ ಅಧಿಕ ಮಂದಿ ಇದ್ದಾರೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ (Minister of External Affairs) ಪತ್ರ (Letter) ಬರೆದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿಕೆ ನೀಡಿದ್ದಾರೆ.

    ಮಂಗಳೂರಿನಲ್ಲಿ (Mangaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರೊಂದಿಗೂ ಮಾತನಾಡಿದ್ದೇನೆ. ಯುದ್ಧದ ಪರಿಸ್ಥಿತಿ ಇರುವಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತದೆ. ಈಗಲೂ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ ಎಂದು ಹೇಳಿದರು. ಇದನ್ನೂ ಓದಿ: ಎಮರ್ಜೆನ್ಸಿ ಅಲರ್ಟ್- ಲಕ್ಷಾಂತರ ಫೋನ್‌ಗಳಿಗೆ ಸರ್ಕಾರದಿಂದ ಬಂತು ಮೆಸೇಜ್

    ರಷ್ಯಾ-ಉಕ್ರೇನ್ ಯುದ್ಧ ಆದಾಗಲೂ ಇದೇ ಪರಿಸ್ಥಿತಿ ಇತ್ತು. ಆಗಲೂ ಎಲ್ಲರ ಮನೆಗೆ ತೆರಳಿ ಸಮಾಧಾನ ಹೇಳಿದ್ದೇವೆ. ಮೋದಿ ಸರ್ಕಾರ ಆಗಲೂ ಅಲ್ಲಿದ್ದವರ ರಕ್ಷಣೆ ಮಾಡಿತ್ತು. ಈಗಲೂ ನಾನು ರಾಯಭಾರಿ ಕಚೇರಿ ಜೊತೆಗೆ ಸಂಪರ್ಕದಲ್ಲಿದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಏನೇ ಆತಂಕ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಿ ಎಂದರು. ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ದಂಪತಿ ಸಾವು- ಅನಾಥವಾದ ವೃದ್ಧಾಶ್ರಮ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆತ್ಮಹತ್ಯೆಗೆ ಶರಣಾದ ಮಗಳ ಬಗ್ಗೆ ಭಾವುಕ ಪತ್ರ ಬರೆದ ನಟ ವಿಜಯ್

    ಆತ್ಮಹತ್ಯೆಗೆ ಶರಣಾದ ಮಗಳ ಬಗ್ಗೆ ಭಾವುಕ ಪತ್ರ ಬರೆದ ನಟ ವಿಜಯ್

    ರಡ್ಮೂರು ದಿನಗಳ ಹಿಂದೆಯಷ್ಟೇ ಮಗಳನ್ನು ಕಳೆದುಕೊಂಡಿರುವ ನಟ ವಿಜಯ್ ಆಂಥೋನಿ ಭಾವುಕ ಪತ್ರವೊಂದನ್ನು (Letter) ಬರೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅದನ್ನು ಶೇರ್ ಮಾಡಿದ್ದು, ಮಗಳನ್ನು ತಾವು ಎಷ್ಟು ಇಷ್ಟಪಡುತ್ತಿದ್ದರು ಎನ್ನುವುದನ್ನು ಹೇಳಿಕೊಂಡಿದ್ದಾರೆ. ಮಗಳು ಮೀರಾ ಸತ್ತ ದಿನವೇ ನಾನೂ ಕೂಡ ನನ್ನೊಳಗೆ ಸುತ್ತು ಹೋಗಿದ್ದೇನೆ ಎಂದು ಕಂಬನಿ ಮಿಡಿದಿದ್ದಾರೆ.

    ನನ್ನ ಮಗಳು ಮೀರಾ ಧೈರ್ಯಶಾಲಿ, ಕರುಣಾಮಯಿ. ಹಣ, ಅಸೂಯೆ, ಜಾತಿ, ಧರ್ಮಗಳೇ ಇಲ್ಲದ ಪ್ರಶಾಂತ ಸ್ಥಳಕ್ಕೆ ಆಕೆ ಹೋಗಿದ್ದಾಳೆ. ಇನ್ನೂ ಆಕೆ ನನ್ನೊಂದಿಗೆ ಮಾತನಾಡುತ್ತಾಳೆ. ನನ್ನ ಯಾವುದೇ ಶುಭ ಕಾರ್ಯಗಳು ಇದ್ದರೂ, ಆಕೆಗೆ ಅರ್ಪಿಸುವ ಮೂಲಕ ಕೆಲಸ ಶುರು ಮಾಡುತ್ತೇನೆ. ನನ್ನ ಜೊತೆ ಆಕೆ ಯಾವತ್ತಿಗೂ ಇರುತ್ತಾಳೆ’ ಎಂದು ವಿಜಯ್ ಬರೆದುಕೊಂಡಿದ್ದಾರೆ.

    ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಜಯ್ ಆಂಟೋನಿ (Vijay Antony) ಪುತ್ರಿ ಮೀರಾ (Meera) ಮೊನ್ನೆಯಷ್ಟೇ ಬೆಳಗ್ಗೆ ಆತ್ಮಹತ್ಯೆಗೆ (Suicide) ಶರಣಾಗಿದ್ದರು. ಹನ್ನೆರಡನೇ ತರಗತಿ ಓದುತ್ತಿದ್ದ ಮೀರಾ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ಅವರು ಚಿಕಿತ್ಸೆಯನ್ನೂ ಪಡೆದುಕೊಳ್ಳುತ್ತಿದ್ದರು. 16ರ ವಯಸ್ಸಿನ ಮೀರಾ ಬೆಳಗ್ಗೆ ತಮ್ಮ ಮಲಗುವ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದರು.

    ಬೆಳಗ್ಗೆ ಆಕೆಯ ಕೋಣೆಯ ಬಾಗಿಲು ತುಂಬಾ ಹೊತ್ತಾದರೂ ತೆರೆಯದೇ ಇರುವ ಕಾರಣಕ್ಕಾಗಿ, ಬಾಗಿಲು ತೆರೆದು ನೋಡಿದಾಗ, ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೀರಾ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಷ್ಟರಲ್ಲಿ ಮೀರಾ ಪ್ರಾಣಬಿಟ್ಟಿದ್ದರು.

     

    ಶಾಲೆಯಲ್ಲಿ ಉತ್ತಮ ಅಂಕಗಳನ್ನೇ ಪಡೆಯುತ್ತಿದ್ದ ಮೀರಾ, ಮಾನಸಿಕ ಖಿನ್ನತೆಗೆ ಜಾರುವುದಕ್ಕೆ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ. ವಿಜಯ್ ಆಂಟೋನಿ ಮತ್ತು ಫಾತಿಮಾ ದಂಪತಿಯ ಮೊದಲ ಮಗು ಮೀರಾ. ಈ ದಂಪತಿಗೆ ಮತ್ತೊಬ್ಬ ಮಗನಿದ್ದಾನೆ. ವಿಜಯ್ ಆಂಟೋನಿ ತಮಿಳು ಚಿತ್ರರಂಗದಲ್ಲಿ ನಟ, ಸಂಗೀತ ನಿರ್ದೇಶಕ, ನಿರ್ಮಾಪಕರಾಗಿ ಪ್ರಸಿದ್ಧಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಲಶ್ರೀ ಮಠಕ್ಕೆ 54 ಲಕ್ಷ ಹಣ ತಂದಿಟ್ಟ ಮೈಸೂರಿನ ವಕೀಲ

    ಹಾಲಶ್ರೀ ಮಠಕ್ಕೆ 54 ಲಕ್ಷ ಹಣ ತಂದಿಟ್ಟ ಮೈಸೂರಿನ ವಕೀಲ

    ಬೆಂಗಳೂರು: ಉದ್ಯಮಿಗೆ ವಂಚನೆ ಪ್ರಕರಣದಲ್ಲಿ (Fraud Case) ಅಭಿನವ ಹಾಲಶ್ರೀ (Abhinava Halashree) ಸ್ವಾಮೀಜಿ ಅರೆಸ್ಟ್ ಬೆನ್ನಲ್ಲೇ, ಮೈಸೂರಿನ (Mysuru) ವಕೀಲರೊಬ್ಬರು (Lawyer) ಹಿರೇಹಡಗಲಿಯ ಮಠಕ್ಕೆ (Mutt) 56 ಲಕ್ಷ ರೂ. ಹಣ ತಂದಿಟ್ಟಿದ್ದಾರೆ. ಈ ಹಣದ ಮೂಲ ಯಾವುದು? ಎಲ್ಲಿಂದ ಬಂತು ಎನ್ನುವ ಬಗ್ಗೆ ವಕೀಲ ಪ್ರಣವ್ ಪ್ರಸಾದ್ ಡಿಸಿಪಿಯವರಿಗೆ (DCP) ಪತ್ರ ಬರೆದಿದ್ದಾರೆ.

    ಇಷ್ಟು ಮಾತ್ರವಲ್ಲದೇ ಹಣದ ಕುರಿತು ಪ್ರಣವ್ ಪ್ರಸಾದ್ ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಡಿಸಿಪಿಯವರಿಗೆ ಪ್ರಣವ್ ಪ್ರಸಾದ್ ಬರೆದ ಪತ್ರದಲ್ಲಿ (Letter) ಮಠಕ್ಕೆ ಹಣ ಬಂದ ಬಗ್ಗೆ ಉಲ್ಲೇಖವಾಗಿದ್ದು, ಪತ್ರದಲ್ಲಿನ ಸಂಪೂರ್ಣ ಸಾರಾಂಶ ಇಲ್ಲಿದೆ. ಇದನ್ನೂ ಓದಿ: ಕಾಂತರಾಜು ವರದಿ ಸರ್ಕಾರ ಸ್ವೀಕಾರ ಮಾಡುತ್ತದೆ: ಶಿವರಾಜ್ ತಂಗಡಗಿ

    ಪತ್ರದಲ್ಲಿ ಏನಿದೆ?
    ಪ್ರಣವ್ ಪುಸಾದ್ 53 ವರ್ಷ, ಆದ ನಾನು ಮೈಸೂರಿನನಲ್ಲಿ ನೆಲೆಸಿದ್ದು ವಕೀಲ ವೃತ್ತಿ ಮಾಡಿಕೊಂಡಿರುತ್ತೇನೆ. ಚೈತ್ರ ಕುಂದಾಪುರ ಪಕರಣದಲ್ಲಿ ಸುದ್ದಿಯಲ್ಲಿರುವ ಅಭಿನವ ಹಾಲಶ್ರೀ ಸ್ವಾಮಿಜಿಗಳು ನನಗೂ ಮತ್ತು ನನ್ನ ಕುಟುಂಬಸ್ಥರಿಗೂ ಪರಿಚಯವಿದ್ದು, ಕಳೆದ ಎಂಟು ತಿಂಗಳಿನಿಂದ ನಮ್ಮ ಒಡನಾಟದಲ್ಲಿ ಇದ್ದರು. ಇದನ್ನೂ ಓದಿ: ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದು ಮಾಡಿ ರೈತರ ಹಿತ ಕಾಪಾಡಬೇಕು: ರಾಜೂ ಗೌಡ

    ಇವರು ನಮ್ಮ ಮನೆಗೆ ಬರುವುದು, ಆಶೀರ್ವಚನ ನೀಡುವುದು, ಪ್ರಸಾದ ಸ್ವೀಕರಿಸುವುದು ಮಾಡುತ್ತಾ ಬಂದಿದ್ದರು. ಹೀಗಾಗಿ ಇವರ ಬಗ್ಗೆ ನನಗೆ ವಿಶ್ವಾಸ ಹಾಗೂ ಗೌರವ ಇತ್ತು. ಇವರು ನಿಜವಾದ ಧರ್ಮಭೀರು ಸ್ವಾಮೀಜಿ ಎಂದು ನಾವು ಇದುವರೆಗೆ ನಂಬಿದ್ದೆವು. ಆದರೆ, ಮಾಧ್ಯಮಗಳಲ್ಲಿ ವರದಿಯಾದ ವಿಚಾರ ನೋಡಿ ನಮಗೆ ಆಘಾತವಾಯಿತು. ಇದಕ್ಕೂ ಮುನ್ನ ಕೆಲ ದಿನಗಳ ಹಿಂದೆ ಸದಾ ಸ್ವಾಮೀಜಿಯ ಜೊತೆಗೆ ನಮ್ಮ ಮನೆಗೆ ಬರುತ್ತಿದ್ದ ಚಾಲಕ ರಾಜು ಎಂಬಾತ ನಾಲ್ಕು ದಿನಗಳ ಹಿಂದೆ ನಮ್ಮ ಕಚೇರಿಗೆ ಬಂದಿದ್ದ. ಅಂದು ಅವನು ಒಂದು ಬ್ಯಾಗನ್ನು ಬಿಟ್ಟು ಹೋಗಿದ್ದ. ಯಾವುದೋ ಲಗೇಜ್ ಇರಬೇಕೆಂದು ನಾವು ಸುಮ್ಮನಾಗಿದ್ದೆವು. ಇದನ್ನೂ ಓದಿ: ಶಿವಕುಮಾರ್ ಒಬ್ಬ ನೀರಿನ ಕಳ್ಳ, ಆಯೋಗ್ಯ: ಈಶ್ವರಪ್ಪ ಕಿಡಿ

    ಅದಾದ ನಂತರ ಕರೆ ಮಾಡಿದ ಚಾಲಕ ರಾಜು, ಆ ಬ್ಯಾಗನ್ನು ಮೈಸೂರಿನ ಯಾರಿಗೋ ಕೊಡಲು ಹೇಳಿದ್ದರು. ಜೊತೆಗೆ ವಕೀಲರಿಗೆ ಒಂದಷ್ಟು ಬ್ಯಾಗ್ ತಲುಪಿಸಲು ಹೇಳಿದ್ದರು. ಆದರೆ ಆ ವಕೀಲರು ನನಗೆ ಸಿಗದ ಕಾರಣ ಆ ಬ್ಯಾಗನ್ನು ನಿಮ್ಮ ಕಚೇರಿಯಲ್ಲಿ ಇಟ್ಟಿದ್ದೇನೆ ಎಂದರು. ಕೂಡಲೇ ಅವನನ್ನು ಗದರಿಸಿ ಆ ಬ್ಯಾಗನ್ನು ತೆಗೆದುಕೊಂಡು ಹೋಗಲು ಸೂಚನೆ ಕೊಟ್ಟೆ. ಅದಾದ ನಂತರ ಆ ಬ್ಯಾಗ್‌ನಿಂದ ನಾಲ್ಕು ಲಕ್ಷ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದೇನೆ. ಉಳಿದ ಹಣವನ್ನು ದಯಮಾಡಿ ನಮ್ಮ ಮಠದ ಪೂಜಾರಿ ಹಾಲಸ್ವಾಮಿಯವರಿಗೆ ತಲುಪಿಸಿ ಎಂದು ಸ್ವಾಮೀಜಿಯವರು ಹೇಳಿದ್ದಾರೆ ಎಂದು ಹೇಳಿದ. ಆ ಬ್ಯಾಗನ್ನು ತೆಗೆದುಕೊಂಡು ಹೋಗಲು ಅವರಿಗೆ ಹಲವು ಬಾರಿ ಹೇಳಿದ. ಮೂರ್ನಾಲ್ಕು ದಿನವಾದರೂ ಅವರು ಯಾರು ಈ ಕಡೆ ತಲೆಹಾಕಲಿಲ್ಲ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಕೆಶಿ

    ಸ್ವಾಮೀಜಿ ಹೇಳಿದಂತೆ ಮಠದಲ್ಲಿ ಹಾಲಸ್ವಾಮಿ ಎಮಬವರಿಗೆ ಈ ಹಣವನ್ನು ಇಂದು ಬೆಳಗ್ಗೆ ತಲುಪಿಸಿ ಬಂದಿರುತ್ತೇನೆ. ಈ ಸ್ವಾಮೀಜಿಯವರ ವ್ಯವಹಾರಗಳಿಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧ ಇರುವುದಿಲ್ಲ. ತಮ್ಮ ಗಮನಕ್ಕೆ ಈ ವಿಚಾರಗಳನ್ನು ತರುತ್ತಿದ್ದು, ಈ ವಿಚಾರಗಳು ಮುಂದಿನ ತನಿಖೆಗೆ ಅನುಕೂಲವಾಗುವುದು ಎಂಬ ಉದ್ದೇಶದಿಂದ ಹಂಚಿಕೊಳ್ಳುತ್ತಿದ್ದೇನೆ. ನನಗೆ ಜೀವ ಭಯವಿದ್ದು ರಕ್ಷಣೆ ನೀಡಬೇಕೆಂದು ಡಿಸಿಪಿಯವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆ.18-22 ವಿಶೇಷ ಸಂಸತ್ ಅಧಿವೇಶನ- ಪ್ರಮುಖ 9 ವಿಷಯಗಳ ಚರ್ಚೆಗೆ ಸೋನಿಯಾ ಗಾಂಧಿ ಆಗ್ರಹ

    ಸೆ.18-22 ವಿಶೇಷ ಸಂಸತ್ ಅಧಿವೇಶನ- ಪ್ರಮುಖ 9 ವಿಷಯಗಳ ಚರ್ಚೆಗೆ ಸೋನಿಯಾ ಗಾಂಧಿ ಆಗ್ರಹ

    ನವದೆಹಲಿ: ಸೆಪ್ಟೆಂಬರ್ 18ರಿಂದ 22ರವರೆಗೆ ನಡೆಯಲಿರುವ ವಿಶೇಷ ಸಂಸತ್ ಅಧಿವೇಶನದಲ್ಲಿ (Special Parliament Session) ಪ್ರಮುಖ ಒಂಬತ್ತು ವಿಷಯಗಳ ಬಗ್ಗೆ ಚರ್ಚೆಗೆ ಸಮಯಾವಕಾಶ ನೀಡಬೇಕು ಎಂದು ಪ್ರಧಾನಿಯವರಿಗೆ (Narendra Modi) ಸೋನಿಯಾ ಗಾಂಧಿ (Sonia Gandhi) ಒತ್ತಾಯಿಸಿದ್ದಾರೆ.

    ಕಾಂಗ್ರೆಸ್ ಸಂಸದೀಯ ಸಭೆ ಬಳಿಕ ಈ ಪತ್ರವನ್ನು (Letter) ಬರೆಯಲಾಗಿದೆ. ಇತರ ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆ ಮಾಡದೇ ನೀವು ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನವನ್ನು ಕರೆದಿರುವಿರಿ. ವಿರೋಧ ಪಕ್ಷಗಳಲ್ಲಿ ನಮ್ಮಲ್ಲಿ ಯಾರಿಗೂ ಅದರ ಕಾರ್ಯಸೂಚಿಯ ಬಗ್ಗೆ ಯಾವುದೇ ಕಲ್ಪನೆ ಇಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ವಿರುದ್ಧ ಉ.ಪ್ರದೇಶದಲ್ಲಿ FIR ದಾಖಲು

    ಅದಾಗ್ಯೂ ಕೂಡಾ ಅಧಿವೇಶನದಲ್ಲಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಯಾಗಬೇಕಿದೆ. ಮುಖ್ಯವಾಗಿ ಪ್ರಸ್ತುತ ಆರ್ಥಿಕ ಪರಿಸ್ಥಿತಿ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ (MSME) ಸಮಸ್ಯೆಗಳು, ಎಂಎಎಸ್‌ಪಿಗೆ (MASP) ಸಂಬಂಧಿಸಿದ ರೈತರ ಬೇಡಿಕೆಗಳ ಬಗ್ಗೆ ಚರ್ಚೆಯಾಗಬೇಕು ಎಂದಿದ್ದಾರೆ. ಇದನ್ನೂ ಓದಿ: ಕಾವೇರಿ ಅರ್ಜಿ ವಿಚಾರಣೆ ಸೆ.21ಕ್ಕೆ ಮುಂದೂಡಿಕೆ

    ಅದಾನಿ ವ್ಯಾಪಾರ ಸಮೂಹದ ವಹಿವಾಟುಗಳನ್ನು ತನಿಖೆ ಮಾಡಲು ಜಂಟಿ ಸಂಸದೀಯ ಸಮಿತಿಗೆ (JPC) ಬೇಡಿಕೆ, ಮಣಿಪುರದ ಜನರು ಎದುರಿಸುತ್ತಿರುವ ನಿರಂತರ ಸಂಕಟ, ರಾಜ್ಯದಲ್ಲಿ ಸಾಂವಿಧಾನಿಕ ಯಂತ್ರಗಳು ಮತ್ತು ಸಾಮಾಜಿಕ ಸಾಮರಸ್ಯದ ಕುಸಿತ, ಹರಿಯಾಣದಂತಹ ವಿವಿಧ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ, ಚೀನಾದಿಂದ ಭಾರತೀಯ ಭೂಪ್ರದೇಶದಲ್ಲಿ ಮುಂದುವರಿದ ಆಕ್ರಮಣ ಮತ್ತು ಲಡಾಖ್ ಮತ್ತು ಅರುಣಾಚಲ ಪ್ರದೇಶದ ನಮ್ಮ ಗಡಿಗಳಲ್ಲಿ ನಮ್ಮ ಸಾರ್ವಭೌಮತ್ವಕ್ಕೆ ಸವಾಲುಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಭಾರತ ಎಂಬ ಹೆಸರೇಕೆ ಬಂತು? ಇಂಡಿಯಾ ಹೆಸರು ಹೇಗೆ ಬಂತು?

    ಜಾತಿ ಗಣತಿಯ ತುರ್ತು ಅಗತ್ಯ, ಕೇಂದ್ರ-ರಾಜ್ಯ ಸಂಬಂಧಗಳ ಮೇಲೆ ಆಗುತ್ತಿರುವ ಹಾನಿ, ಹಾಗೂ ಕೆಲವು ರಾಜ್ಯಗಳಲ್ಲಿ ಅತಿವೃಷ್ಟಿ ಮತ್ತು ಇತರ ರಾಜ್ಯಗಳಲ್ಲಿ ಅನಾವೃಷ್ಟಿಯಿಂದ ಉಂಟಾದ ನೈಸರ್ಗಿಕ ವಿಕೋಪಗಳ ಪರಿಣಾಮಗಳ ಬಗ್ಗೆ ವಿಶೇಷ ಅಧಿವೇಶನದಲ್ಲಿ ಚರ್ಚಿಸಬೇಕು ಎಂದು ಸೋನಿಯಾ ಗಾಂಧಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ

    ರಚನಾತ್ಮಕ ಸಹಕಾರದ ಉತ್ಸಾಹದಲ್ಲಿ ಈ ಸಮಸ್ಯೆಗಳನ್ನು ಮುಂಬರುವ ವಿಶೇಷ ಅಧಿವೇಶನದಲ್ಲಿ ತೆಗೆದುಕೊಳ್ಳಲಾಗುವುದು ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ. ಭಾರತ ಮೈತ್ರಿಕೂಟದ ವಿರೋಧ ಪಕ್ಷಗಳು ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿಯಲ್ಲಿ ಚರ್ಚೆಯಲ್ಲಿ ಭಾಗವಹಿಸಬೇಕು. ಜೊತೆಗೆ ಮಹಿಳಾ ಮೀಸಲಾತಿಯನ್ನು ಶೀಘ್ರವಾಗಿ ಅಂಗೀಕರಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ದಿಲ್ಲಿಯಲ್ಲಿ ಜಿ20 ಶೃಂಗಸಭೆ: ಯಾವ ನಾಯಕರು ಬರ್ತಾರೆ, ಯಾರು ಬರಲ್ಲ? – ಹಿಂದಿನ ಸಭೆಗಳಲ್ಲಿ ಏನೇನಾಗಿತ್ತು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈಲಿನಿಂದಲೇ ನಟಿ ಜಾಕ್ವೆಲಿನ್ ಗೆ ಭರ್ಜರಿ ಗಿಫ್ಟ್ ಕೊಟ್ಟ ಸುಕೇಶ್: ಇದು 25 ಕೋಟಿ ರೂ. ಕಥೆ

    ಜೈಲಿನಿಂದಲೇ ನಟಿ ಜಾಕ್ವೆಲಿನ್ ಗೆ ಭರ್ಜರಿ ಗಿಫ್ಟ್ ಕೊಟ್ಟ ಸುಕೇಶ್: ಇದು 25 ಕೋಟಿ ರೂ. ಕಥೆ

    ಹುಕೋಟಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ಜೈಲಿನಲ್ಲಿ ಇದ್ದುಕೊಂಡೇ ಗೆಳತಿ, ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಗೆ ಪತ್ರ ಬರೆಯುತ್ತಲೇ ಇರುತ್ತಾನೆ. ಪ್ರೇಮಿಗಳ ದಿನಕ್ಕೊಂದು ಪತ್ರ ಬರೆದಿದ್ದ ಸುಕೇಶ್ ಆನಂತರ ಜಾಕ್ವೆಲಿನ್ ಹುಟ್ಟು ಹಬ್ಬಕ್ಕೂ ಒಂದು ಪತ್ರ ಕಳುಹಿಸಿದ್ದ. ಇದೀಗ ಜೈಲಿನಿಂದ (Jail) ಮತ್ತೊಂದು ಪತ್ರ (Letter) ಬರೆದಿದ್ದು, ಅದರಲ್ಲಿ ಕೋಟಿ ಕೋಟಿ ಬಜೆಟ್ ನ ಯೋಜನೆಯನ್ನು ಪ್ರಸ್ತಾಪ ಮಾಡಿದ್ದಾರೆ.

    ಜಾಕ್ವೆಲಿನ್ ಗೆ ಪ್ರಾಣಿಗಳ (Animal) ಮೇಲೆ ಅಪಾರ ಪ್ರೀತಿಯಂತೆ. ಅದರಲ್ಲೂ ನಾಯಿ, ಬೆಕ್ಕು, ಕುದುರೆಗಳು ಅಂದರೆ ಪ್ರಾಣವಂತೆ. ತನ್ನ ಗೆಳತಿಯ ಪ್ರಾಣಿ ಮೇಲಿನ ಪ್ರೀತಿಗಾಗಿ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸುವುದಾಗಿ ಹೇಳಿದ್ದಾನೆ. ಇದೇ ಸೆಪ್ಟಂಬರ್ 11 ರಿಂದ ಕಟ್ಟಡ ನಿರ್ಮಾಣ ಕಾಮಗಾರಿ ಶುರುವಾಗಲಿದ್ದು, ಮುಂದಿನ ವರ್ಷ ಆಗಸ್ಟ್ 11ಕ್ಕೆ ಲೋಕಾರ್ಪಣೆ ಮಾಡುವುದಾಗಿ ತಿಳಿಸಿದ್ದಾನೆ. ಇದು ಗೆಳತಿ ಹುಟ್ಟುಹಬ್ಬಕ್ಕಾಗಿ ಕೊಡುತ್ತಿರುವ ಉಡುಗೊರೆ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ:ಸರ್ಜರಿಗೆ ಮೊರೆ ಹೋಗಿದ್ರಾ ಬಸಣ್ಣಿ? ತುಟಿ ಮೇಲೆ ಕಣ್ಣಿಟ್ಟವರಿಗೆ ತಾನ್ಯಾ ಗರಂ

    ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಬೆಂಗಳೂರಿನಲ್ಲಿ ನಿರ್ಮಾಣವಾಗಲಿದ್ದು, ಒಟ್ಟು 25 ಸಾವಿರ ಚದರಡಿ ವಿಸ್ತೀರ್ಣದಲ್ಲಿ ತಯಾರಾಗಲಿದೆ. ಈ ಆಸ್ಪತ್ರೆಗಾಗಿ ಸುಕೇಶ್ 25 ಕೋಟಿ ರೂಪಾಯಿ ವೆಚ್ಚ ಮಾಡಲಿದ್ದಾನೆ. ಈ ಆಸ್ಪತ್ರೆಯು ಉಚಿತವಾಗಿ ಕೆಲಸ ಮಾಡಲಿದೆಯಂತೆ. ನುರಿತು ವೈದ್ಯರು ಮತ್ತು ಅತ್ಯಾಧುನಿಕ ಉಪಕರಣಗಳನ್ನು ಹೊಂದಿರಲಿದೆ ಎಂದು ಪತ್ರದಲ್ಲಿ ಬರೆದಿದ್ದಾನೆ.

     

    ಸುಕೇಶ್ ವಿರುದ್ಧವಾಗಿಯೇ ಜಾಕ್ವೆಲಿನ್ ಹಲವು ಬಾರಿ ಮಾತನಾಡಿದ್ದರೂ, ಸುಕೇಶ್ ಗೂ ನನಗೂ ಯಾವುದೇ ಸಂಬಂಧವಿಲ್ಲ. ಅವನಿಂದ ಯಾವುದೇ ಉಡುಗೊರೆಯನ್ನು ಪಡೆದಿಲ್ಲ ಎಂದು ತನಿಖಾಧಿಕಾರಿಗಳಿಗೆ ಜಾಕ್ವೆಲಿನ್ ಹೇಳಿದ್ದರೂ, ಪದೇ ಪದೇ ಈ ರೀತಿ ಪತ್ರವನ್ನು ಬರೆಯುವ ಮೂಲಕ ಜಾಕ್ವೆಲಿನ್ ನಿದ್ದೆ ಹಾಳು ಮಾಡುತ್ತಿದ್ದಾನೆ ಸುಕೇಶ್. ನಿಜಕ್ಕೂ ಈ ಆಸ್ಪತ್ರೆ ನಿರ್ಮಾಣ ಆಗಲಿದೆಯಾ ಎಂದು ಕಾದು ನೋಡಬೇಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಲಿಕಾನ್ ಸಿಟಿ ಪಬ್, ಹುಕ್ಕಾಬಾರ್‌ಗಳಲ್ಲಿ ಅಪ್ರಾಪ್ತರ ಮೋಜು-ಮಸ್ತಿ; ಗೃಹಸಚಿವರಿಗೆ ಖಾಸಗಿ ಶಾಲೆಗಳ ಒಕ್ಕೂಟ ಪತ್ರ

    ಸಿಲಿಕಾನ್ ಸಿಟಿ ಪಬ್, ಹುಕ್ಕಾಬಾರ್‌ಗಳಲ್ಲಿ ಅಪ್ರಾಪ್ತರ ಮೋಜು-ಮಸ್ತಿ; ಗೃಹಸಚಿವರಿಗೆ ಖಾಸಗಿ ಶಾಲೆಗಳ ಒಕ್ಕೂಟ ಪತ್ರ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ (Bengaluru) ಪಬ್, ಹುಕ್ಕಾಬಾರ್‌ಗಳಲ್ಲಿ ಅಪ್ರಾಪ್ತರ ಮೋಜು-ಮಸ್ತಿ ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ದುಶ್ಚಟಗಳಿಗೆ ಕಡಿವಾಣ ಹಾಕಿ ಎಂದು ಖಾಸಗಿ ಶಾಲೆಗಳ ಒಕ್ಕೂಟ (Union of Private Schools) ಗೃಹಸಚಿವರಿಗೆ (Home Minister) ಪತ್ರ ಬರೆದಿದೆ.

    ನಗರದಲ್ಲಿ ವಿದ್ಯಾರ್ಥಿಗಳು (Students) ಶಾಲಾ-ಕಾಲೇಜಿಗೆ ಚಕ್ಕರ್ ಹಾಕಿ ಪಬ್ (Pub) , ಬಾರ್ ಹಾಗೂ ಹುಕ್ಕಾಬಾರ್‌ಗಳಿಗೆ ಹಾಜರಾಗುತ್ತಿರುವ ಸಂಖ್ಯೆ ಹೆಚ್ಚಳವಾಗಿದೆ. ಅಪ್ರಾಪ್ತರಿಗೆ (Minors) ಪ್ರವೇಶ ಕೊಡುವ ಪಬ್, ಹುಕ್ಕಾಬಾರ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಯಾಮ್ಸ್ ಸಂಘಟನೆಯಿಂದ ಗೃಹಸಚಿವರಿಗೆ ಪತ್ರ (Letter) ಬರೆಯಲಾಗಿದೆ. ಇದನ್ನೂ ಓದಿ: ಸಂಸದ ಸ್ಥಾನದಿಂದ ಪುತ್ರ ಅನರ್ಹತೆ ಬೆನ್ನಲ್ಲೇ ಶಾಸಕ ಹೆಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಸಮನ್ಸ್‌

    ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಪಬ್, ರೆಸ್ಟ್ರೋ ಬಾರ್, ಹುಕ್ಕಾ ಬಾರ್‌ಗಳು ಮದ್ಯಪಾನ, ಧೂಮಪಾನ ಸೇವಿಸುವ ತಾಣಗಳಾಗಿವೆ ಎಂದು ಕೆಲ ಶಿಕ್ಷಣ ಸಂಸ್ಥೆಗಳಿಂದ ಹಾಗೂ ಪೋಷಕರಿಂದ ಕ್ಯಾಮ್ಸ್‌ಗೆ ನಿರಂತರ ದೂರು ಬರುತ್ತಿತ್ತು. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ ಇನ್ನೂ ಬಚ್ಚ – ಮುತಾಲಿಕ್ ಕಿಡಿ

    ಈ ಹಿನ್ನೆಲೆ ಖಾಸಗಿ ಶಾಲೆಗಳ ಒಕ್ಕೂಟ ಗೃಹಸಚಿವರಿಗೆ ಪತ್ರ ಬರೆದಿದ್ದು, ಅಪ್ರಾಪ್ತ ವಯಸ್ಸಿನವರಿಗೆ ಮದ್ಯಪಾನ, ಧೂಮಪಾನ ಮಾರಾಟ ಮಾಡುವುದು ನಿಷೇಧ. ಹೀಗಿದ್ದರೂ ನಗರದ ಪಬ್, ಬಾರ್‌ಗಳಿಗೆ ಮಕ್ಕಳಿಗೆ ಎಂಟ್ರಿ ಸಿಗುತ್ತಿದೆ. ಈ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಆಕ್ರೋಶ; ಆನ್‌ಲೈನ್ ಮೂಲಕ ದೂರು ದಾಖಲಿಸಲು ಮುಂದಾದ ಹಿಂದೂ ಸಂಘಟನೆಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ-3 ಸಕ್ಸಸ್ – ಇಸ್ರೋ ಅಧ್ಯಕ್ಷರಿಗೆ ಸೋನಿಯಾ ಗಾಂಧಿ ಪತ್ರ

    ಚಂದ್ರಯಾನ-3 ಸಕ್ಸಸ್ – ಇಸ್ರೋ ಅಧ್ಯಕ್ಷರಿಗೆ ಸೋನಿಯಾ ಗಾಂಧಿ ಪತ್ರ

    ನವದೆಹಲಿ: ಚಂದ್ರಯಾನ-3ರ ಯಶಸ್ಸಿನ ಕುರಿತು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ (S Somanath) ಅವರಿಗೆ ಕಾಂಗ್ರೆಸ್‌ನ (Congress) ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) ಗುರುವಾರ ಪತ್ರ (Letter) ಬರೆಯುವ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

    ಬಾಹ್ಯಾಕಾಶ ಸಂಸ್ಥೆಯ ಅತ್ಯುತ್ತಮ ಸಾಮರ್ಥ್ಯಗಳನ್ನು ದಶಕಗಳಿಂದ ನಿರ್ಮಿಸಲಾಗಿದೆ ಮತ್ತು 1960ರ ದಶಕದಿಂದ ಆರಂಭಗೊಂಡ ಇಸ್ರೋ (ISRO) ಈಗ ಸ್ವಾವಲಂಬನೆ ಸಾಧಿಸಿರುವುದು ಅದರ ಯಶಸ್ಸಿಗೆ ಕೊಡುಗೆ ನೀಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲೆ ನಡೆದಾಡಿದ ಪ್ರಗ್ಯಾನ್‌ ರೋವರ್‌ – ವಿಕ್ರಮ್‌ ಲ್ಯಾಂಡರ್‌ನಿಂದ ಹೊರಬರಲು ತಡವಾಗಿದ್ಯಾಕೆ?

    ಪತ್ರದಲ್ಲಿ ಏನಿದೆ?
    ಬುಧವಾರ ಸಂಜೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅದ್ಭುತ ಸಾಧನೆಯಿಂದ ನಾನು ಎಷ್ಟು ರೋಮಾಂಚನಗೊಂಡಿದ್ದೇನೆ ಎಂಬುದನ್ನು ತಿಳಿಸಲು ಪತ್ರ ಬರೆದಿದ್ದು, ಇದು ಎಲ್ಲಾ ಭಾರತೀಯರಿಗೆ, ವಿಶೇಷವಾಗಿ ಯುವ ಪೀಳಿಗೆಗೆ ಬಹಳ ಹೆಮ್ಮೆ ಮತ್ತು ಉತ್ಸಾಹದ ವಿಷಯವಾಗಿದೆ. ಇದನ್ನೂ ಓದಿ: ಚಂದ್ರಯಾನ-3 ರಾಷ್ಟ್ರದ ಮೆರವಣಿಗೆಯಲ್ಲಿ ಒಂದು ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ: ಡಿ.ವೈ ಚಂದ್ರಚೂಡ್

    ಇಡೀ ಇಸ್ರೋ ಭ್ರಾತೃತ್ವಕ್ಕೆ ನಾನು ಶುಭ ಹಾರೈಸುತ್ತೇನೆ ಮತ್ತು ಈ ಮಹತ್ವದ ಸಂದರ್ಭದಲ್ಲಿ ಅದರ ಪ್ರತಿಯೊಬ್ಬ ಸದಸ್ಯರಿಗೂ ನನ್ನ ಆತ್ಮೀಯ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ಬರೆಯುವ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಯುವ ಕನಸುಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ- ಚಂದ್ರಯಾನ ಯಶಸ್ಸಿಗೆ ರಾಗಾ ಶ್ಲಾಘನೆ

    ಭಾರತದ ಚಂದ್ರಯಾನ-3 ಮಿಷನ್ ಬುಧವಾರ ಸಂಜೆ 6:04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಮಾಡಿದ ಮೊದಲ ದೇಶ ಭಾರತ ಎಂಬ ಹೆಗ್ಗಳಿಕೆ ಗಳಿಸಿದೆ. ರಷ್ಯಾದ ಲ್ಯಾಂಡರ್ ಅಪಘಾತಕ್ಕೀಡಾದ ಒಂದು ವಾರದ ಬಳಿಕ ವಿಕ್ರಂ ಲ್ಯಾಂಡರ್ (Vikram Lander) ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಚಂದ್ರನ ಮೇಲೆ ಕಾಲಿಟ್ಟ ನಾಲ್ಕನೇ ದೇಶ ಭಾರತವಾಗಿದೆ. ಇದನ್ನೂ ಓದಿ: ಚಂದ್ರಯಾನದ ಯಶಸ್ಸು ಸಂಭ್ರಮಿಸಿದ ಟೀಂ ಇಂಡಿಯಾ

    ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಬಳಿಕ ಹಲವು ಗಂಟೆಗಳ ನಂತರ ವಿಕ್ರಮ್ ಲ್ಯಾಂಡರ್‌ನಿಂದ ರೋವರ್ ಹೊರಬಂದಿದ್ದು, ಚಂದ್ರನ ಮೇಲೆ ವೈಜ್ಞಾನಿಕ ಅಧ್ಯಯನ ಆರಂಭಿಸಿದೆ. ಇದನ್ನೂ ಓದಿ: Chandrayaan-3: ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆ ಇಟ್ಟ ಮೊದಲ ದೇಶ ಭಾರತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ – ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ

    ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ – ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ

    ಬೆಂಗಳೂರು: ತಮಿಳುನಾಡು (Tamil Nadu) ಸರ್ಕಾರ ಕಾವೇರಿ ನೀರಿನ (Kaveri Water) ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ (Letter) ಬರೆದಿದ್ದಾರೆ.

    ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿರುವುದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ ಹಾಗೂ ತಮಿಳುನಾಡು ಸುಪ್ರಿಂ ಕೋರ್ಟ್‌ಗೆ (Supreme Court) ಹೋಗಬಹುದೆಂದು ಮಾಧ್ಯಮದಲ್ಲಿ ನಾವು ನೋಡಿದ್ದೇವೆ. ಈ ವಿಚಾರದಲ್ಲಿ ಕೆಳಕಂಡ ಮಹತ್ವದ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ನಾನು ಈ ಪತ್ರ ಬರೆಯುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ನಾನು ಸಹಕಾರ ಕ್ಷೇತ್ರದಲ್ಲಿ ಬೆಳೆಯಲು ನನ್ನ ಗುರುಗಳಾದ ಡಿಕೆಶಿ ಕಾರಣ: ಎಸ್‌.ಟಿ.ಸೋಮಶೇಖರ್‌

    ಪತ್ರದಲ್ಲಿ ಏನಿದೆ?
    ಜೂನ್ 1 ರಂದು ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಜಲಾಶಯದಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯದಲ್ಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ ಆಗಸ್ಟ್ 6ಕ್ಕೆ 14.054 ಟಿಎಂಸಿ ನೀರು ಬಿಡುಗಡೆಯಾಗಿರುವುದು ಮಾಧ್ಯಮಗಳಿಂದ ತಿಳಿದಿದೆ. ಒಟ್ಟು ತಮಿಳುನಾಡಿನ ಮೆಟ್ಟೂರು ಡ್ಯಾಂನಲ್ಲಿ ಈ ವರ್ಷ 83.831 ಟಿಎಂಸಿ ನೀರು ಬಂದಿರುತ್ತದೆ. ತಮಿಳುನಾಡು ಕುರುವೈ ಬೆಳೆಗೆ 32 ಟಿಎಂಸಿ ನೀರು ಬಳಸಬೇಕು. ಆದರೆ ತಮಿಳುನಾಡು ಆಗಸ್ಟ್ 7ಕ್ಕೆ 60.97 ಟಿಎಂಸಿ ನೀರು ಕುರುವೈ ಬೆಳೆಗೆ ಬಳಕೆ ಮಾಡಿದ್ದು, ಸಿಡಬ್ಲ್ಯುಡಿಟಿ ಆದೇಶದ ಎರಡು ಪಟ್ಟು ಹೆಚ್ಚಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಅಸ್ಥಿರತೆ ಕಾಡುತ್ತಿದೆ: ಯಡಿಯೂರಪ್ಪ

    ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ಲೆಕ್ಕಿಸದೇ  ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಟು ಕುರುವೈ ಏರಿಯಾ ಬೆಳೆಗೆ ನೀರನ್ನು ಒದಗಿಸಿದೆ. ಇದನ್ನು ನಮ್ಮ ಸಿಡಬ್ಲ್ಯುಡಿಟಿ ಅಧಿಕಾರಿಗಳು ಸಿಡಬ್ಲ್ಯುಎಂಎದಲ್ಲಿ ಪ್ರತಿಭಟಿಸದೇ ಸುಮ್ಮನಿದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ. ಈಗಿರುವ ನಮ್ಮ ನಾಲ್ಕು ಡ್ಯಾಮ್‌ಗಳ ನೀರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ತದೆ. ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದ ಖಾರೀಫ್ ಬೆಳೆಗಳಿಗೆ ನೀರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ. ಇದನ್ನೂ ಓದಿ: ಗುದ್ದಲಿ ಪೂಜೆನೇ ಆಗಿಲ್ಲ, ಕಮಿಷನ್ ಎಲ್ಲಿಂದ?- ಬಿಜೆಪಿಗೆ ಹೆಬ್ಬಾಳ್ಕರ್ ತಿರುಗೇಟು

    ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್ ಈಸ್ಟ್ ಮಾನ್ಸೂನ್ ಮಳೆ ಆಗುತ್ತಿರುವುದರಿಂದ ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕೆಂದು ನಾನು ತಮ್ಮಲ್ಲಿ ಆಗ್ರಹ ಮಾಡುತ್ತೇನೆ. ತಾವು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಸರ್ಕಾರ ಇದ್ದಾಗಲೆಲ್ಲಾ ಭ್ರಷ್ಟಾಚಾರ ಇತ್ತು: ಡಾ.ಶರಣ ಪ್ರಕಾಶ್ ಪಾಟೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಜಾಕ್ವೆಲಿನ್ ಹುಟ್ಟುಹಬ್ಬಕ್ಕೆ ಜೈಲಿನಿಂದಲೇ ಭಾವುಕ ಪತ್ರ ಬರೆದ ಆರೋಪಿ ಸುಕೇಶ್

    ನಟಿ ಜಾಕ್ವೆಲಿನ್ ಹುಟ್ಟುಹಬ್ಬಕ್ಕೆ ಜೈಲಿನಿಂದಲೇ ಭಾವುಕ ಪತ್ರ ಬರೆದ ಆರೋಪಿ ಸುಕೇಶ್

    ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez)ಇವತ್ತು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಹುಟ್ಟು ಹಬ್ಬಕ್ಕೆ ಬಹುಕೋಟಿ ವಂಚಕ ಆರೋಪಿ ಹಾಗೂ ಜಾಕ್ವೆಲಿನ್ ಬಾಯ್ ಫ್ರೆಂಡ್ ಆಗಿದ್ದ ಸುಕೇಶ್ ಚಂದ್ರಶೇಖರ್ (Sukesh Chandrasekhar) ಜೈಲಿನಿಂದಲೇ (Jail) ಪತ್ರವೊಂದನ್ನು ಬರೆದಿದ್ದಾನೆ. ಕೈ ಬರಹದಿಂದಲೇ ಪತ್ರ ರೆಡಿಯಾಗಿದ್ದು, ಅತೀ ಶೀಘ್ರದಲ್ಲೇ ಬರುವುದಾಗಿ ತಿಳಿಸಿದ್ದಾನೆ.

    ವಂಚನೆಯ ಕಾರಣದಿಂದಾಗಿ ಸದ್ಯ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್, ಆಗಾಗ್ಗೆ ಜಾಕ್ವೆಲಿನ್ ಗೆ ಪತ್ರಗಳನ್ನು ಬರೆಯುತ್ತಲೇ ಇದ್ದಾನೆ. ಇನ್ನೂ ಜಾಕ್ವೆಲಿನ್ ಮೇಲೆ ಪ್ರೀತಿ ಉಳಿಸಿಕೊಂಡಿರುವ ವಿಚಾರವನ್ನೂ ಅವನು ಹಂಚಿಕೊಂಡಿದ್ದಾನೆ. ಇಂದು ಕೂಡ ಜೈಲಿನಿಂದಲೇ ಒಂದು ಪತ್ರವನ್ನು ಬರೆದಿದ್ದಾನೆ. ಶೀಘ್ರದಲ್ಲೇ ಕಷ್ಟಗಳು ಕರಗಿ, ಮತ್ತೆ ನಾನು ಆಚೆ ಬರುವೆ. ಮುಂದಿನ ಸಲ ಮತ್ತೆ ಒಟ್ಟಿಗೆ ಹುಟ್ಟು ಹಬ್ಬ (Birthday) ಆಚರಿಸೋಣ ಎಂದು ಪತ್ರದಲ್ಲಿ ತಿಳಿಸಿದ್ದಾನೆ.

    ಸುಕೇಶ್ ನನ್ನ ಜೀವನ ನಾಶ ಮಾಡಿದ ಎಂದಿದ್ದ ಜಾಕ್ವೆಲಿನ್

    ಕರ್ನಾಟಕ ಮೂಲದ ಸುಖೇಶ್ ಚಂದ್ರಶೇಖರ್ (Sukhesh Chandrasekhar) ಸ್ನೇಹದಿಂದಾಗಿ ನಾನು ನೆಮ್ಮದಿ ಕಳೆದುಕೊಂಡೆ ಎಂದಿದ್ದಾರೆ ಬಾಲಿವುಡ್ ನಟಿ ಹಾಗೂ ಕನ್ನಡದ ವಿಕ್ರಾಂತ್ ರೋಣ ಚಿತ್ರದ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez). ಬಹುಕೋಟಿ ವಂಚನೆಯ ಆರೋಪಿ ಆಗಿರುವ ಸುಖೇಶ್ ಚಂದ್ರಶೇಖರ್ ಕಡೆಯಿಂದ ದುಬಾರಿ ಬೆಲೆಯ ಗಿಫ್ಟ್ ಪಡೆದುಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಜಾಕ್ವೆಲಿನ್ ಇಡಿ ವಿಚಾರಣೆಯನ್ನು ಎದುರಿಸಿದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ಮುಂದೆ ಹಾಜರಾಗಿದ್ದ ಜಾಕ್ವೆಲಿನ್ ಕಣ್ಣೀರಿಟ್ಟಿದ್ದಾರೆ. ಆತನ ಸ್ನೇಹದಿಂದಾಗಿ ನೆಮ್ಮದಿ ಕಳೆದುಕೊಂಡೆ ಹಾಗೂ ಅವನು ನನ್ನ ಭಾವನೆಗಳೊಂದಿಗೆ ಆಟವಾಡಿ, ಜೀವನವನ್ನೇ ನರಕ ಮಾಡಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ. ಜೀವನವನ್ನು ಮಾತ್ರವಲ್ಲ, ವೃತ್ತಿ ಜೀವನವನ್ನೇ ಅವನು ಹದಗೆಡಿಸಿಬಿಟ್ಟಿದ್ದಾನೆ ಎಂದು ದೂರಿದ್ದಾರೆ. ಸುಖೇಶ್ ತಮಗೆ ಪರಿಚಯವಾಗಿದ್ದು ಪಿಂಕಿ ಇರಾನಿ ಎನ್ನುವ ಮಹಿಳೆಯಿಂದ ಎಂದು ಅವರು ಹೇಳಿಕೆ ಕೊಟ್ಟಿದ್ದಾರೆ.

    ಪಿಂಕಿ ಇರಾನಿ (Pinky Irani) ಎನ್ನುವ ಹೆಣ್ಣುಮಗಳು ಸುಖೇಶ್ ನನ್ನು ಗೃಹ ಸಚಿವಾಲಯದ ಅಧಿಕಾರಿ ಎಂದು ಪರಿಚಯಿಸಿದರು. ಈ ಪರಿಚಯ ಸ್ನೇಹವಾಯಿತು. ಆತ್ಮೀಯತೆ ಬೆಳೆಯಿತು. ಸುಖೇಶ್ ನಿಂದ ಕೆಲವು ಗಿಫ್ಟ್ ಗಳು ಬಂದಿದ್ದು ಪಿಂಕಿ ಇರಾನಿ ಕಡೆಯಿಂದ. ಸುಖೇಶ್ ಬಗ್ಗೆ ವಿಷಯ ಗೊತ್ತಿದ್ದರೂ, ಆಕೆ ನನ್ನಿಂದ ಎಲ್ಲವನ್ನೂ ಮುಚ್ಚಿಟ್ಟರು. ಅವನು ನನ್ನ ದೊಡ್ಡ ಅಭಿಮಾನಿ ಎಂದು ಸುಳ್ಳು ಹೇಳಿದ್ದರು ಎಂದು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

     

    ಸುಖೇಶ್ ಪ್ರಕರಣದಿಂದಾಗಿ ಜಾಕ್ವೆಲಿನ್ ಹೈರಾಣಾಗಿದ್ದಾರೆ. ಈ ಕಡೆ ಜಾರಿ ನಿರ್ದೇಶನಾಲಯದ ತನಿಖೆ, ಆ ಕಡೆ ಮರ್ಯಾದೆ ಎರಡನ್ನೂ ಕಳೆದುಕೊಂಡಿದ್ದು ಸುಸ್ತಾಗಿದ್ದಾರಂತೆ. ಪಾಸ್ಟ್ ಪೋರ್ಟ್ ಪೊಲೀಸ್ ವಶದಲ್ಲಿ ಇರುವುದರಿಂದ ನೆಮ್ಮೆಯಿಂದ ಹೊರದೇಶಕ್ಕೂ ಅವರಿಗೆ ಹೋಗಲು ಆಗುತ್ತಿಲ್ಲವಂತೆ. ಒಟ್ನಲ್ಲಿ ಸುಖೇಶ್ ಪ್ರಕರಣ ಅವರನ್ನು ನಿದ್ದೆಗೆಡಿಸಿದ್ದಂತೂ ನಿಜ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಾಯಿ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು – ದೇವರಲ್ಲಿ ಭಕ್ತನ ವಿಚಿತ್ರ ಕೋರಿಕೆ

    ತಾಯಿ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು – ದೇವರಲ್ಲಿ ಭಕ್ತನ ವಿಚಿತ್ರ ಕೋರಿಕೆ

    ಚಿಕ್ಕಮಗಳೂರು: ಸಾಮಾನ್ಯವಾಗಿ ಒಳ್ಳೆ ವಿದ್ಯೆ, ಬುದ್ಧಿ, ಆರೋಗ್ಯ ಕೊಡು ಎಂಬಿತ್ಯಾದಿ ಹಲವು ಬೇಡಿಕೆಗಳನ್ನು (Demand) ಭಕ್ತರು (Devotees) ದೇವರ ಮುಂದೆ ಇಡುತ್ತಾರೆ. ಆದರೆ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು ಎಂಬ ವಿಚಿತ್ರ ಕೋರಿಕೆಯನ್ನು ಭಕ್ತರೊಬ್ಬರು ದೇವರ ಮುಂದೆ ಇಟ್ಟಿರುವ ಘಟನೆ ಚಿಕ್ಕಮಗಳೂರಿನ (Chikkamagaluru) ಕಳಸ  (Kalasa) ತಾಲೂಕಿನಲ್ಲಿ ನಡೆದಿದೆ.

    ಕೇಳಲು ಆಶ್ಚರ್ಯವಾಗಿದ್ದರೂ ಇದು ನಿಜ. ಭಕ್ತರೊಬ್ಬರು ಕಳಸದ ಕಳಸೇಶ್ವರ ಸ್ವಾಮಿಯ ಕಾಣಿಕೆ ಹುಂಡಿಯಲ್ಲಿ ಈ ರೀತಿಯಾಗಿ ಪತ್ರ ಬರೆದು ಹುಂಡಿಯಲ್ಲಿ ಹಾಕಿದ್ದಾನೆ. ಗಿರಿಜಾದೇವಿಗೆ ಭಕ್ತರೊಬ್ಬರು ಪತ್ರ (Letter) ಬರೆದಿದ್ದು, ಭಕ್ತರ ವಿಚಿತ್ರ ಬೇಡಿಕೆಯನ್ನು ಓದಿದ ಹುಂಡಿ ಎಣಿಕೆ ಅಧಿಕಾರಿಗಳು ನಕ್ಕು ನಕ್ಕು ಸುಸ್ತಾಗಿದ್ದಾರೆ. ಇದನ್ನೂ ಓದಿ: Gruhajyothi Scheme: ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಿಎಂ

    ಪತ್ರದಲ್ಲಿ ಏನಿದೆ?
    ತಾಯಿ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು. ನನ್ನ ಸೌಂದರ್ಯದ ಹೊಣೆ ನಿಮ್ಮ ಜವಾಬ್ದಾರಿ. ನಾನು ಜಗತ್ತಿನಲ್ಲೇ ಸುಂದರ ಎಂಬ ಖ್ಯಾತಿ ಗಳಿಸಬೇಕು. ನಾನು ಖ್ಯಾತ ನಟ, ಫ್ಯಾಷನ್ ಮಾಡೆಲ್ ಆಗಬೇಕು. ಸರ್ವ ಸುಂದರಿಯಾದ ಗಿರಿಜಾ ದೇವಿಯಿಂದ ಆಶೀರ್ವಾದ ಬಯಸುತ್ತೇನೆ. ನನ್ನ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮದು. ಈ ನಿನ್ನ ಭಕ್ತನ ಬೇಡಿಕೆ, ಪ್ರಾರ್ಥನೆಯನ್ನು ಈಡೇರಿಸು ತಾಯಿ ಎಂದು ಪತ್ರದಲ್ಲಿ ಬರೆದು ಕಾಣಿಕೆ ಹುಂಡಿಯಲ್ಲಿ ಭಕ್ತ ಹಾಕಿದ್ದಾನೆ.  ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಲಿ: ಅಮರನಾಥ ಯಾತ್ರೆ ಮಾಡಿ ಶೋಭಾ ಕರಂದ್ಲಾಜೆ ವಿಶೇಷ ಪೂಜೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]