Tag: ಪದಕ

  • ಗಂಗಾ ನದಿಯಲ್ಲಿ ಪದಕ ವಿಸರ್ಜಿಸಲು ಮುಂದಾದ ಕುಸ್ತಿಪಟುಗಳನ್ನು ತಡೆದ ರೈತ ಹೋರಾಟಗಾರ

    ಗಂಗಾ ನದಿಯಲ್ಲಿ ಪದಕ ವಿಸರ್ಜಿಸಲು ಮುಂದಾದ ಕುಸ್ತಿಪಟುಗಳನ್ನು ತಡೆದ ರೈತ ಹೋರಾಟಗಾರ

    ನವದೆಹಲಿ: ಸರ್ಕಾರ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ ಹಾಗೂ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಬೇಸತ್ತ ಕುಸ್ತಿಪಟುಗಳು (Wrestlers) ತಮ್ಮ ಪದಕಗಳನ್ನು (Medals) ಗಂಗಾ ನದಿಯಲ್ಲಿ (Ganga River) ವಿಸರ್ಜಿಸಲು ಮುಂದಾಗಿದ್ದರು. ಕುಸ್ತಿಪಟುಗಳ ಈ ನಡೆಯನ್ನು ಸದ್ಯ ತಡೆಯಲಾಗಿದ್ದು, ಸಿಂಗ್ ಬಂಧನಕ್ಕೆ 5 ದಿನಗಳ ಕಾಲಾವಕಾಶ ನೀಡಲು ಒಪ್ಪಿಕೊಂಡಿದ್ದಾರೆ.

    ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಹೊರಿಸಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ತಮ್ಮ ಪದಕಗಳನ್ನು ಸಂಜೆ 6 ಗಂಟೆಗೆ ಹರಿದ್ವಾರದ ಬಳಿ ಗಂಗಾ ನದಿಯಲ್ಲಿ ಎಸೆಯುವುದಾಗಿ ಪ್ರಕಟಿಸಿದ್ದರು. ಗಂಗೆಯಲ್ಲಿ ಪದಕಗಳನ್ನು ವಿಸರ್ಜಿಸಲು ಮುಂದಾದಾಗ ರೈತ ಹೋರಾಟಗಾರ ನರೇಶ್ ಟಿಕಾಯತ್ ಕುಸ್ತಿಪಟುಗಳ ಮೆಡಲ್‌ಗಳನ್ನು ಪಡೆದುಕೊಂಡಿದ್ದಾರೆ.

    ಬಳಿಕ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿದ ನರೇಶ್ ಟಿಕಾಯತ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರೆ. ಮುಂದಿನ 5 ದಿನಗಳೊಳಗೆ ಬ್ರಿಜ್ ಭೂಷಣ್ ಬಂಧನವಾಗದಿದ್ದರೆ ಮತ್ತೆ ಹರಿದ್ವಾರಕ್ಕೆ ಬಂದು ಪದಕಗಳನ್ನು ವಿಸರ್ಜಿಸುವುದಾಗಿ ಕುಸ್ತಿಪಟುಗಳು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ Vs ಡಿಎಂಕೆ – ಬಿಜೆಪಿ ಕಾರ್ಯಕರ್ತ ಜಡೇಜಾ ಆಟದಿಂದ ಚೆನ್ನೈಗೆ ಜಯ ಎಂದ ಅಣ್ಣಾಮಲೈ

    ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಹಲವು ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದರು. ನೂತನ ಸಂಸತ್ ಭವನದತ್ತವೂ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದರು. ಇದನ್ನೂ ಓದಿ: ಮನೆಗೆ ಅತ್ತೆಯೇ ಸಿನಿಯರ್, ಅತ್ತೆ ಒಪ್ಪಿದ್ರಷ್ಟೇ ಸೊಸೆಗೆ 2,000 – ಲಕ್ಷ್ಮಿ ಹೆಬ್ಬಾಳ್ಕರ್

  • ಮಾದನಾಯಕನಹಳ್ಳಿ ಇನ್ಸ್‌ಪೆಕ್ಟರ್‌ ಮಂಜುನಾಥ್‌ಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ

    ಮಾದನಾಯಕನಹಳ್ಳಿ ಇನ್ಸ್‌ಪೆಕ್ಟರ್‌ ಮಂಜುನಾಥ್‌ಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ

    ನೆಲಮಂಗಲ: ಗಣರಾಜ್ಯೋತ್ಸವ (Republic Day) ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ್ಕೆ ಬೆಂಗಳೂರು ಹೊರವಲಯ ನೆಲಮಂಗಲ (Nelamangala) ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಸುಪರ್ ಸಿಂಗಂ ಎಂದೇ ಜನರಿಂದ ಪ್ರಶಂಸೆ ಪಡೆದಿರುವ ಇನ್ಸ್‌ಪೆಕ್ಟರ್‌ ಮಂಜುನಾಥ್ (CPI Manjunath) ಆಯ್ಕೆಯಾಗಿದ್ದಾರೆ.

    ಸೇವಾ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಬೆನ್ನತ್ತಿ ಸಮಾಜ ಘಾತುಕರಿಗೆ ಬಿಸಿ ಮುಟ್ಟಿಸಿ ಜನಸಾಮಾನ್ಯರ ಅಚ್ಚುಮೆಚ್ಚಿನ ಪೊಲೀಸ್‌ ಅಧಿಕಾರಿಯಾಗಿ ಮಂಜುನಾಥ್ ಗುರುತಿಸಿಕೊಂಡಿದ್ದಾರೆ. ನೆಲಮಂಗಲ ಹಾಗೂ ಮಾದನಾಯಕನಹಳ್ಳಿ ಭಾಗದ ಜನರು ಇವರ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಸ್.ಎಂ. ಕೃಷ್ಣ, ಎಸ್‍ಎಲ್ ಭೈರಪ್ಪ, ಸುಧಾಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ

    ಜನರ ನಾಡಿ ಮಿಡಿತ, ಕುಂದುಕೊರತೆಗಳು, ಜನಸಾಮಾನ್ಯರ ಪ್ರೀತಿ ವಿಶ್ವಾಸ, ಸ್ನೇಹ ಜೀವಿಯಂತೆ ಕೆಲಸ ಮಾಡಿ  ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಪ್ರತಿ ವರ್ಷ ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ನೀಡಿ ಪುರಸ್ಕರಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • CWG 2022: 61 ಪದಕ ಬಾಚಿದ ಭಾರತಕ್ಕೆ 4 ನೇ ಸ್ಥಾನ

    CWG 2022: 61 ಪದಕ ಬಾಚಿದ ಭಾರತಕ್ಕೆ 4 ನೇ ಸ್ಥಾನ

    ಲಂಡನ್: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ 2022 ಕೊನೆಗೂ ಮುಕ್ತಾಯಗೊಂಡಿದೆ. ಭಾರತದ ಕ್ರೀಡಾಪಟುಗಳು ಅದ್ಭುತ ಪ್ರದರ್ಶನಗಳನ್ನು ನೀಡಿ ಒಟ್ಟು 61 ಪದಕಗಳನ್ನು ಗೆದ್ದು, ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್ ವೇದಿಕೆಯಲ್ಲಿ 4ನೇ ಸ್ಥಾನ ಗಳಿಸುವಂತೆ ಮಾಡಿದ್ದಾರೆ.

    ಈ ಬಾರಿ ಭಾರತ 22 ಚಿನ್ನ, 16 ಬೆಳ್ಳಿ ಹಾಗೂ 23 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದು, ಇದು ಭಾರತದ ಕಾಮನ್‌ವೆಲ್ತ್‌ನ 5ನೇ ಅತ್ಯುತ್ತಮ ಪ್ರದರ್ಶನವಾಗಿದೆ. ಈ ಹಿಂದೆ 2010ರಲ್ಲಿ ಭಾರತ 38 ಚಿನ್ನ ಸೇರಿದಂತೆ 101 ಪದಕಗಳನ್ನು ಗೆದ್ದು ಅತ್ಯುತ್ತಮ ಪ್ರದರ್ಶನ ನೀಡಿತ್ತು. ಮ್ಯಾಂಚೆಸ್ಟರ್-2002ರಲ್ಲಿ 69 ಪದಕ, ಗೋಲ್ಡ್ ಕೋಸ್ಟ್-2018ರಲ್ಲಿ 66 ಪದಕ ಹಾಗೂ ಗ್ಲಾಸ್ಗೋ-2014ರಲ್ಲಿ 64 ಪದಕಗಳನ್ನು ಭಾರತ ಪಡೆದಿತ್ತು.

    ಈ ಬಾರಿ ಆಸ್ಟ್ರೇಲಿಯಾ 67 ಚಿನ್ನದೊಂದಿಗೆ ಒಟ್ಟು 178 ಪದಕಗಳನ್ನು ಪಡೆದು ಪ್ರಥಮ ಸ್ಥಾನಕ್ಕೇರಿದೆ. ಇಂಗ್ಲೆಂಡ್ 57 ಚಿನ್ನದೊಂದಿಗೆ 176 ಪದಕಗಳನ್ನು ಪಡೆದರೆ, ಕೆನಡಾ 26 ಚಿನ್ನದೊಂದಿಗೆ ಒಟ್ಟು 92 ಪದಕಗಳನ್ನು ಪಡೆದಿದೆ. ಇದನ್ನೂ ಓದಿ: CWG 2022: 40ರ ಹುಮ್ಮಸ್ಸಿನಲ್ಲೂ TTಯಲ್ಲಿ ಚಿನ್ನ ಗೆದ್ದ ಅಚಂತ ಶರತ್

    ಈ ಹಿಂದೆ ಶೂಟಿಂಗ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುತ್ತಿದ್ದು, ಈ ಬಾರಿ ಕಾಮನ್‌ವೆಲ್ತ್‌ನಿಂದ ಅದನ್ನು ಕೈ ಬಿಡಲಾಗಿತ್ತು. ಆದರೂ ಭಾರತ ಇತರ ಆಟಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅಗ್ರ 5 ಸ್ಥಾನಗಳಲ್ಲೊಂದಾಗಲು ಸಾಧ್ಯವಾಯಿತು. ಕುಸ್ತಿಯಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆದ್ದಿದ್ದು, 12 ಪದಕಗಳನ್ನು ಬಾಚಿಕೊಂಡಿದೆ. ವೇಟ್‌ಲಿಫ್ಟಿಂಗ್‌ನಲ್ಲಿ 10 ಪದಕಗಳನ್ನು ಗೆದ್ದರೆ, ಟೇಬಲ್ ಟೆನ್ನಿಸ್‌ನಲ್ಲಿ 7 ಪದಕಗಳು ಭಾರತದ ಪಾಲಾಗಿದೆ.

    ಒಟ್ಟು ಪದಕಗಳು:
    ಕುಸ್ತಿಯಲ್ಲಿ 6 ಚಿನ್ನ, 1 ಬೆಳ್ಳಿ, 5 ಕಂಚು. ಟೇಬಲ್ ಟೆನ್ನಿಸ್‌ನಲ್ಲಿ 4 ಚಿನ್ನ, 1 ಬೆಳ್ಳಿ, 2 ಕಂಚು. ವೈಟ್‌ಲಿಫ್ಟಿಂಗ್‌ನಲ್ಲಿ 3 ಚಿನ್ನ, 3 ಬೆಳ್ಳಿ, 4 ಕಂಚು. ಬಾಕ್ಸಿಂಗ್‌ನಲ್ಲಿ 3 ಚಿನ್ನ, 1 ಬೆಳ್ಳಿ, 3 ಕಂಚು. ಬ್ಯಾಡ್ಮಿಂಟನ್‌ನಲ್ಲಿ 3 ಚಿನ್ನ, 1 ಬೆಳ್ಳಿ, 2 ಕಂಚು. ಅಥ್ಲೆಟಿಕ್ಸ್ನಲ್ಲಿ 1 ಚಿನ್ನ, 4 ಬೆಳ್ಳಿ, 3 ಕಂಚು. ಲಾನ್ ಬೌಲ್ಸ್‌ನಲ್ಲಿ 1 ಚಿನ್ನ, 1 ಬೆಳ್ಳಿ. ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ 1 ಚಿನ್ನ. ಜುಡೋದಲ್ಲಿ 2 ಬೆಳ್ಳಿ, 1 ಕಂಚು. ಹಾಕಿಯಲ್ಲಿ 1 ಬೆಳ್ಳಿ, 1 ಕಂಚು. ಕ್ರಿಕೆಟ್‌ನಲ್ಲಿ 1 ಬೆಳ್ಳಿ. ಸ್ಕ್ವಾಷ್‌ನಲ್ಲಿ 2 ಕಂಚು. ಇದನ್ನೂ ಓದಿ: ಕೈಜಾರಿದ ಚಿನ್ನ – ಹಾಕಿಯಲ್ಲಿ ಬೆಳ್ಳಿಗೆ ತೃಪ್ತಿಪಟ್ಟ ಭಾರತ

    Live Tv
    [brid partner=56869869 player=32851 video=960834 autoplay=true]

  • ಆರ್ಚರಿ ಕಂಚಿನ ಪದಕ ಗೆದ್ದ ಹರ್ವಿಂದರ್ ಸಿಂಗ್

    ಆರ್ಚರಿ ಕಂಚಿನ ಪದಕ ಗೆದ್ದ ಹರ್ವಿಂದರ್ ಸಿಂಗ್

    ಟೋಕಿಯೋ: ಪ್ಯಾರಾಲಂಪಿಕ್ಸ್ ಭಾರತದ ಹರ್ವಿಂದರ್ ಸಿಂಗ್ ಆರ್ಚರಿಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಕೂಟದಲ್ಲಿ 13ನೇ ಪದಕ ಗೆದ್ದುಕೊಂಡಿದೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ- ಜಾವೆಲಿನ್ ಎಸೆದು ಚಿನ್ನ ಪಡೆದ ಸುಮಿತ್

    ಕಂಚಿನ ಪದಕದ ಹೋರಾಟದಲ್ಲಿ ದಕ್ಷಿಣ ಕೊರಿಯಾದ ಕಿಮ್ ಮಿನ್ ಸು ವಿರುದ್ಧ ಹರ್ವಿಂದರ್ ಸಿಂಗ್ 6-5 ಅಂತರದ ರೋಚಕ ಜಯದೊಂದಿಗೆ ಕಂಚಿನ ಪದಕದ ಪಡೆದುಕೊಂಡರು. ಈ ಮೂಲಕ ಇಂದು ಭಾರತ ಮೂರು ಪದಕಗಳನ್ನು ಗೆದ್ದಂತಾಗಿದೆ. ಇದನ್ನೂ ಓದಿ: ಶೂಟಿಂಗ್‍ನಲ್ಲಿ ಕಂಚು – ಭಾರತದ ಪರ ದಾಖಲೆ ಬರೆದ ಅವನಿ

    ಇಂದು ಬೆಳಗ್ಗೆ ಹೈಜಂಪ್ ವಿಭಾಗದಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಬಳಿಕ ಮಹಿಳಾ ವಿಭಾಗದ 50 ಮೀಟರ್ ಏರ್ ರೈಫಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಕಂಚಿನ ಪದಕ ಪಡೆದಿದ್ದರು. ಇದೀಗ ಆರ್ಚರಿಯಲ್ಲಿ ಹರ್ವಿಂದರ್ ಸಿಂಗ್ ಕಂಚಿನ ಪದಕದೊಂದಿಗೆ ಭಾರತದ ಪದಕಗಳ ಸಂಖ್ಯೆ 13ಕ್ಕೆ ಏರಿಕೆ ಕಂಡಿದೆ. ಇದನ್ನೂ ಓದಿ: ಬೆಳ್ಳಿ ಪದಕ ಗೆದ್ದ ಪ್ರವೀಣ್ ಕುಮಾರ್‌ಗೆ ಮೋದಿ ವಿಶ್

  • ಶೂಟಿಂಗ್‍ನಲ್ಲಿ ಚಿನ್ನ ಗೆದ್ದ ಅವನಿ ಲೇಖರಾ

    ಶೂಟಿಂಗ್‍ನಲ್ಲಿ ಚಿನ್ನ ಗೆದ್ದ ಅವನಿ ಲೇಖರಾ

    ಟೋಕಿಯೋ: ಪ್ಯಾರಾಲಂಪಿಕ್ಸ್ ಮಹಿಳಾ ವಿಭಾಗದ 100 ಮೀಟರ್ ಏರ್ ರೈಫಲ್ ಶೂಟಿಂಗ್‍ನಲ್ಲಿ ಭಾರತದ ಅವನಿ ಲೇಖರಾ ಚಿನ್ನದ ಪದಕ ಗೆದ್ದಿದ್ದಾರೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಬೆಳ್ಳಿ ಪದಕ – ಇತಿಹಾಸ ನಿರ್ಮಿಸಿದ ಭವಿನಾಬೆನ್ ಪಟೇಲ್

    ಅವನಿ ಲೇಖರಾ 100ಮೀಟರ್ ಏರ್ ರೈಫಲ್ ಶೂಟಿಂಗ್ ಫೈನಲ್‍ನಲ್ಲಿ 249.6 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದಲ್ಲದೆ ವಿಶ್ವದಾಖಲೆ ಸರಿದೂಗಿಸಿದ್ದಾರೆ. ಇದನ್ನೂ ಓದಿ: ಡಿಸ್ಕಸ್ ಥ್ರೋ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥುನಿಯಾ

    ಅವನಿ ಲೇಖರಾ ಈ ಮೊದಲು 617.7 ಅಂಕಗಳೊಂದಿಗೆ 7ನೇ ಸ್ಪರ್ಧಿಯಾಗಿ ಫೈನಲ್‍ಗೆ ಲಗ್ಗೆ ಇಟ್ಟಿದ್ದರು. ಇವರ ಚಿನ್ನದ ಪದಕದೊಂದಿಗೆ ಭಾರತ ಈ ವರೆಗೆ 1 ಚಿನ್ನ, 2 ಬೆಳ್ಳಿ ಮತ್ತು 1 ಕಂಚಿನ ಪದಕದೊಂದಿಗೆ ಒಟ್ಟು 4 ಪದಕ ಗೆದ್ದಂತಾಗಿದೆ. ಇದನ್ನೂ ಓದಿ: ಡಿಸ್ಕಸ್ ಥ್ರೋ ವಿನೋದ್ ಕುಮಾರ್ ಕಂಚಿನ ಪದಕಕ್ಕೆ ತಡೆ

    ಭಾರತದ ಭಾವಿನಬೆನ್ ಪಟೇಲ್ ಅವರು ಭಾನುವಾರ ಟೇಬಲ್ ಟೆನಿಸ್ (ಟಿಟಿ) ನಲ್ಲಿ ಭಾರತದ ಮೊದಲ ಪ್ಯಾರಾಲಿಂಪಿಕ್ಸ್ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.

  • ಚಿನ್ನದ ಪದಕಕ್ಕೆ ಕನ್ನ – ಟ್ರೋಲ್ ಆಯ್ತು ಚೀನಾ

    ಚಿನ್ನದ ಪದಕಕ್ಕೆ ಕನ್ನ – ಟ್ರೋಲ್ ಆಯ್ತು ಚೀನಾ

    ಬೀಜಿಂಗ್: ಟೋಕಿಯೋ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಚೀನಾ ಎರಡನೇ ಸ್ಥಾನ ಪಡೆದಿದ್ದರೂ ಚೀನಾದಲ್ಲಿ ಮಾತ್ರ ಮೊದಲ ಸ್ಥಾನ ಪಡೆದಿದೆ.

    ಚೀನಾ ಸೆಂಟ್ರಲ್ ಟೆಲಿವಿಶನ್(ಸಿಸಿಟಿವಿ) ಟೋಕಿಯೋ ಒಲಿಂಪಿಕ್ಸ್ ಪದಕ ಪಟ್ಟಿಯನ್ನು ತಿರುಚಿ ಸುದ್ದಿಯನ್ನು ಪ್ರಕಟಿಸಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದೆ.

    ಒಲಿಂಪಿಕ್ಸ್ ನಲ್ಲಿ ಅಮೆರಿಕ 39 ಚಿನ್ನ, 41 ಬೆಳ್ಳಿ, 33 ಕಂಚಿನ ಪದಕದೊಂದಿಗೆ ಒಟ್ಟು 113 ಪದಕ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದೆ. ಚೀನಾ 38 ಚಿನ್ನ, 32 ಬೆಳ್ಳಿ, 18 ಕಂಚಿನ ಪದಕ ಸೇರಿ ಒಟ್ಟು 88 ಪದಕ ಪಡೆಯುವ ಮೂಲಕ ಎರಡನೇ ಸ್ಥಾನ ಪಡೆದುಕೊಂಡಿದೆ. ಆದರೆ ಸಿಸಿಟಿವಿ 42 ಚಿನ್ನ, 37 ಬೆಳ್ಳಿ, 27 ಕಂಚಿನ ಪದಕ ಸೇರಿ ಒಟ್ಟು 16 ಪದಕ ಪಡೆಯುವ ಮೂಲಕ ಚೀನಾ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಹೇಳಿ ವರದಿ ಪ್ರಕಟಿಸಿದೆ.

    ಹಾಂಕಾಂಗ್ ಮತ್ತು ಚೈನೀಸ್ ತೈಪೆ(ತೈವಾನ್) ಚೀನಾದ ಭಾಗವಾಗಿರುವ ಈ ದೇಶಗಳು ಪಡೆದಿರುವ ಪದಕಗಳನ್ನು ಸಿಸಿಟಿವಿ ಚೀನಾಗೆ ಸೇರಿಸಿದೆ. ಹೀಗಾಗಿ ಪದಕ ಪಟ್ಟಿಯಲ್ಲಿ ಚೀನಾ ಮೊದಲ ಸ್ಥಾನ ಪಡೆದಿದೆ ಎಂದು ಬಿಂಬಿಸಿ ವರದಿ ಮಾಡಿದೆ.

    ಒಲಿಂಪಿಕ್ಸ್ ನಲ್ಲಿ ಹಾಂಕಾಂಗ್ 1 ಚಿನ್ನ, 2 ಬೆಳ್ಳಿ, 3 ಕಂಚಿನ ಪದಕ ಪಡೆಯುವ ಮೂಲಕ 49ನೇ ಸ್ಥಾನ ಪಡೆದರೆ, 2 ಚಿನ್ನ, 4 ಬೆಳ್ಳಿ, 6 ಚಿನ್ನ ಪಡೆಯುವ ಮೂಲಕ ಚೈನೀಸ್ ತೈಪೆ ಪಟ್ಟಿಯಲ್ಲಿ 34ನೇ ಸ್ಥಾನ ಪಡೆದಿದೆ. ಇದನ್ನೂ ಓದಿ: ಕ್ರೀಡೆಯಲ್ಲಿ ಅಲ್ಲ, ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ‘ಚಿನ್ನ’ 

    ಸಿಸಿಟಿವಿ ಈ ತಿರುಚಿನ ವರದಿ ಪ್ರಕಟಗೊಂಡ ಬೆನ್ನಲ್ಲೇ ಭಾರೀ ಟ್ರೋಲ್ ಆಗುತ್ತಿದೆ. ಕೊರೊನಾ ವಿಚಾರದಲ್ಲೂ ವಿಶ್ವಕ್ಕೆ ಸುಳ್ಳು ಹೇಳಿದ ಚೀನಾ ಈಗ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲೂ ಸುಳ್ಳು ಹೇಳಿ ಚೀನಾ ಜನರನ್ನು ವಂಚಿಸುತ್ತಿದೆ ಎಂದು ನೆಟ್ಟಿಗರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

  • 200 ರಿಂದ 4ನೇ ಸ್ಥಾನಕ್ಕೆ ಜಿಗಿತ – ಕೊನೆ ಕ್ಷಣದಲ್ಲಿ ಅದಿತಿಗೆ ತಪ್ಪಿತು ಪದಕ

    200 ರಿಂದ 4ನೇ ಸ್ಥಾನಕ್ಕೆ ಜಿಗಿತ – ಕೊನೆ ಕ್ಷಣದಲ್ಲಿ ಅದಿತಿಗೆ ತಪ್ಪಿತು ಪದಕ

    ಟೋಕಿಯೋ: ವಿಶ್ವದಲ್ಲಿ 200ನೇ ಸ್ಥಾನ ಪಡೆದಿದ್ದ ಗಾಲ್ಫರ್, ಕನ್ನಡತಿ ಅದಿತಿ ಅಶೋಕ್ ಒಲಿಂಪಿಕ್ಸ್ ನಲ್ಲಿ ನಾಲ್ಕನೇಯ ಸ್ಥಾನ ಪಡೆಯುವ ಮೂಲಕ ಭಾರತಕ್ಕೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ.

    ನಿನ್ನೆ ನಡೆದ ಮೂರನೇ ಸುತ್ತಿನ ಬಳಿಕ ಪದಕದ ನಿರೀಕ್ಷೆ ಮೂಡಿಸಿದ್ದ ಗಾಲ್ಫರ್ ಅದಿತಿ ಅಶೋಕ್ ಇಂದು ಕೂದಲೆಳೆಯ ಅಂಚಿನಲ್ಲಿ ಪದಕವನ್ನು ಕಳೆದುಕೊಂಡು ನಾಲ್ಕನೇಯ ಸ್ಥಾನವನ್ನು ಪಡೆದರು.

    ಇಂದು ನಡೆದ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದರು. ಆದರೆ ಬಳಿಕ ಜಂಟಿ ಮೂರನೇ ಸ್ಥಾನವನ್ನು ನ್ಯೂಜಿಲೆಂಡ್​ನ ಲೈಡಿಯಾ ಕೊ ಜೊತೆ ಗಳಿಸಿಕೊಂಡ ಕಾರಣ ಟೈ ಆಗಿತ್ತು. ಈ ವೇಳೆ ಮಳೆ ಬಂದ ಕಾರಣ ಪಂದ್ಯ ಸ್ಥಗಿತಗೊಳಿಸಲಾಗಿತ್ತು. ಬಳಿಕ ಪುನಃ ಆರಂಭಗೊಂಡು ಫೈನಲ್ ರೌಂಡ್ ನಡೆಯಿತು. ಈ ಸುತ್ತಿನಲ್ಲಿ ಅದಿತಿ 2 ಸ್ಥಾನ ಕುಸಿತಗೊಂಡು ಅಂತಿಮವಾಗಿ 4ನೇ ಸ್ಥಾನ ಪಡೆದುಕೊಂಡರು. ಇದನ್ನೂ ಓದಿ: ಗಾಲ್ಫ್ ನಲ್ಲಿ ಅದಿತಿ ಮಿಂಚು – ಭಾರತಕ್ಕೆ ಮತ್ತೊಂದು ಪದಕ?

    ಒಟ್ಟು 71 ಯತ್ನಗಳಲ್ಲಿ ಎಲ್ಲ 18 ಗುಂಡಿಗಳಿಗೆ ಬಾಲನ್ನು ಹಾಕಬೇಕು. ಅದಿತಿ ಮೊದಲ ಸುತ್ತಿನಲ್ಲಿ 67, ಎರಡನೇ ಸುತ್ತಿನಲ್ಲಿ 66, ಮೂರನೇ ಸುತ್ತಿನಲ್ಲಿ 68, ಇಂದು ನಡೆದ 4 ನೇ ಸುತ್ತಿನಲ್ಲಿ 68 ಯತ್ನಗಳಲ್ಲಿಗುಂಡಿಗೆ ಚೆಂಡನ್ನು ಹಾಕಿದರು.

    ಒಟ್ಟು 4 ಸುತ್ತುಗಳ ಬಳಿಕ ವಿಶ್ವದ ನಂಬರ್ ಒನ್ ಆಟಗಾರ್ತಿ ಅಮೆರಿಕದ ನೆಲ್ಲಿ ಕೊರ್ಡಾ ಮೊದಲ ಸ್ಥಾನ ಪಡೆದರು. ನೆಲ್ಲಿ 267 ಯತ್ನ, ಜಪಾನ್ ಮತ್ತು ನ್ಯೂಜಿಲೆಂಡ್ ಆಟಗಾರ್ತಿಯರು 268 ಯತ್ನ, ಅದಿತಿ 269 ಯತ್ನಗಳಲ್ಲಿ ಗುಂಡಿಗೆ ಚೆಂಡನ್ನು ಹಾಕಿದ್ದರು. ಎರಡನೇ ಸ್ಥಾನಕ್ಕೆ ಟೈ ಆದ ಹಿನ್ನೆಲೆಯಲ್ಲಿ ಮತ್ತೆ ಪಂದ್ಯ ಆಡಿಸಲಾಯಿತು. ಇದರಲ್ಲಿ ಜಪಾನ್ ಆಟಗಾರ್ತಿ ಜಯಗಳಿಸಿದರು.

     ಕಳೆದ 2016ರ ರಿಯೋ ಒಲಿಂಪಿಕ್ಸ್ ನಲ್ಲಿ ದೇಶವನ್ನು ಪ್ರತಿನಿಧಿಸಿದ್ದ  ಅದಿತಿ ಎರಡನೇ ಬಾರಿ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

  • ಒಲಿಂಪಿಕ್ಸ್ ಕ್ರೀಡಾಪಟುಗಳು ಗೆದ್ದ ಪದಕವನ್ನು ಕಚ್ಚಲು ಇದು ಅಸಲಿ ಕಾರಣ!

    ಒಲಿಂಪಿಕ್ಸ್ ಕ್ರೀಡಾಪಟುಗಳು ಗೆದ್ದ ಪದಕವನ್ನು ಕಚ್ಚಲು ಇದು ಅಸಲಿ ಕಾರಣ!

    ಟೋಕಿಯೋ: ಒಲಿಂಪಿಕ್ಸ್ ಅಥವಾ ಬೇರೆ ಯಾವುದೇ ಕ್ರೀಡಾಕೂಟದಲ್ಲೂ ಕೂಡ ಆಥ್ಲೀಟ್ಸ್ ಗಳು ತಾವು ಪದಕ ಗೆದ್ದರೆ ಅದನ್ನು ಕಚ್ಚುವ ಫೋಟೋ ನಾವು ನೋಡಿರುತ್ತೇವೆ. ಹಾಗಾದರೆ ಈ ರೀತಿ ಪದಕ ಕಚ್ಚಲು ಕಾರಣವೇನು? ಈ ಕುರಿತು ಅಸಲಿ ಕಾರಣ ಕೇಳಿದರೆ ನೀವು ಕೂಡ ಒಂದು ಕ್ಷಣ ನಗುತ್ತೀರಿ.

    ಹೌದು, ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಆಥ್ಲೀಟ್ಸ್ ಗಳು ಕಷ್ಟ ಪಟ್ಟು ತಮ್ಮ ದೇಶಕ್ಕಾಗಿ, ರಾಜ್ಯಕ್ಕಾಗಿ, ಚಿನ್ನ, ಬೆಳ್ಳಿ ಅಥವಾ ಕಂಚಿನ ಪದಕ ಗೆದ್ದರೆ ಆ ಪದಕವನ್ನು ಕಚ್ಚಿಕೊಂಡು ನಿಂತಿರುವ ಫೋಟೋವನ್ನು ಸಾಕಷ್ಟು ಬಾರಿ ನಾವೆಲ್ಲರೂ ನೋಡಿದ್ದೇವೆ. ಪದಕ ಕಚ್ಚುವುದು ಇತಿಹಾಸದಿಂದಲೂ ನಡೆದುಕೊಂಡು ಬರುತ್ತಿದೆ. ಈ ಹಿಂದೆ ಚಿನ್ನದ ವ್ಯಾಪಾರಿಗಳು ಅಸಲಿ ಚಿನ್ನವನ್ನು ತಿಳಿಯಲು ಕಚ್ಚುತ್ತಿದ್ದರಂತೆ. ಅಸಲಿ ಚಿನ್ನ ಮೃದು ಲೋಹವಾಗಿರುವುದರಿಂದ ಕಚ್ಚಿದ ಭಾಗದಲ್ಲಿ ಹಲ್ಲಿನ ಗುರುತು ಕಾಣಿಸಿಕೊಳ್ಳುತ್ತಿತ್ತು. ಈ ಮೂಲಕ ಅಸಲಿ ಮತ್ತು ನಕಲಿ ಚಿನ್ನವನ್ನು ಪತ್ತೆ ಹಚ್ಚುತ್ತಿದ್ದರಂತೆ. ಇದನ್ನೂ ಓದಿ: ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿದ್ದು ಅತೀವ ಆನಂದ ನೀಡಿದೆ: ಮೀರಾಬಾಯಿ ಚಾನು

    ಆದರೆ ಕ್ರೀಡಾಪಟುಗಳು ಕೂಡ ಈ ರೀತಿ ಚಿನ್ನವನ್ನು ಪರೀಕ್ಷಿಸುತ್ತಿದ್ದಾರ ಎಂಬ ಅನುಮಾನ ಮೂಡಿದರೆ ಅದು ತಪ್ಪು. ಒಲಿಂಪಿಕ್ಸ್‍ನಲ್ಲಿ ನೀಡುವ ಪದಕ ಪೂರ್ತಿ ಚಿನ್ನದಾಗಿರುವುದಿಲ್ಲ ಅಲ್ಪ ಪ್ರಮಾಣದ ಚಿನ್ನದ ಲೇಪಣ ಇರುತ್ತದೆ. ಇದು ಕ್ರೀಡಾಪಟುಗಳಿಗು ತಿಳಿದಿದೆ. ಆದರೂ ಕೂಡ ಆಥ್ಲೀಟ್ಸ್‍ಗಳು ಮಾತ್ರ ಆತನ ಕಣ್ಣಿಗೆ ಸುಂದರವಾಗಿ ಕಾಣಲು ಪದಕವನ್ನು ಕಚ್ಚುತ್ತಾರೆ ಎಂಬುದು ಬಯಲಾಗಿದೆ.

    ಹಾಗಾದರೆ ಆತ ಯಾರು ಗೊತ್ತ ಆತ ಬೇರೆಯಾರು ಅಲ್ಲ ಫೋಟೋಗ್ರಾಫರ್. ಹೌದು ಪದಕ ಗೆದ್ದ ಕ್ರೀಡಾಪಟುಗಳು ಪದಕ ಗೆದ್ದ ಖುಷಿಯನ್ನು ಬೇರೆ ಬೇರೆ ರೀತಿಯಾಗಿ ಕ್ಯಾಮೆರಾ ಕಣ್ಣಿನಲ್ಲಿ ಸೆರೆ ಹಿಡಿಯಲು ಈ ಹಿಂದೆ ಫೋಟೋಗ್ರಾಫರ್ ಒಬ್ಬರು ಪದಕವನ್ನು ಕಚ್ಚಿ ಫೋಸ್ ನೀಡುವಂತೆ ಕ್ರೀಡಾಪಟುವಿಗೆ ಸೂಚಿಸಿದ್ದರಂತೆ. ಅದು ಮುಂದುವರಿದಿದ್ದು, ಇದೀಗ ಕೂಡ ಪದಕ ಗೆದ್ದವರು ಈ ರೀತಿ ಪದಕ ಕಚ್ಚಿಕೊಂಡು ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ.

  • ಮೀರಾಬಾಯಿ ಗೆದ್ದಿರುವ ಬೆಳ್ಳಿ ಪದಕ ಚಿನ್ನದ್ದಾಗುವ ಸಾಧ್ಯತೆ

    ಮೀರಾಬಾಯಿ ಗೆದ್ದಿರುವ ಬೆಳ್ಳಿ ಪದಕ ಚಿನ್ನದ್ದಾಗುವ ಸಾಧ್ಯತೆ

    ಟೋಕಿಯೋ: ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ವೇಟ್‍ಲಿಫ್ಟರ್ ಮೀರಾಬಾಯಿ ಅವರ ಬೆಳ್ಳಿ ಪದಕ ಇದೀಗ ಚಿನ್ನದ ಪದಕವಾಗುವ ಸಾಧ್ಯತೆಯೊಂದು ದಟ್ಟವಾಗಿದೆ.

    ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49 ಕೆ.ಜಿ ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ ಚೀನಾದ ಹೊ ಜಿಹೂಹು ಒಟ್ಟು 210 ಕೆಜಿ (94+116 ಕೆಜಿ) ಭಾರ ಎತ್ತಿ ಚಿನ್ನದ ಪದಕ ಬೇಟೆಯಾಡಿದರೆ, ಮೀರಾಬಾಯಿ ಚಾನು 202 ಕೆಜಿ (87+115 ಕೆಜಿ) ಭಾರ ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದರು. ಇಂಡೋನೇಷ್ಯಾದ ಐಸಾಹ್ ವಿಂಡಿ ಕಾಂಟಿಕಾ ವಿಂಡಿ 194 ಕೆಜಿ (84+110ಕೆಜಿ) ಕಂಚಿನ ಪದಕ ಪಡೆದಿದ್ದರು. ಆದರೆ ಇದೀಗ ಚೀನಾದ ಹೊ ಜಿಹೂಹು ಡೋಪಿಂಗ್ ಪರೀಕ್ಷೆಯಲ್ಲಿ ಫೈಲ್ ಆಗಿರುವುದರಿಂದಾಗಿ ಅವರು ಅನರ್ಹರಾಗಿ ಅವರ ಬಳಿಕ ದ್ವೀತಿಯ ಸ್ಥಾನ ಪಡೆದ ಮೀರಾಬಾಯಿಗೆ ಚಿನ್ನದ ಪದಕ ಸಿಗುವ ಕುರಿತು ವರದಿಯಾಗಿದೆ.

    ಟೋಕಿಯೋ ಒಲಿಂಪಿಕ್ಸ್ ಸಮಿತಿ ತಿಳಿಸಿರುವಂತೆ, ಹೊ ಜಿಹೂಹು ಮೊದಲ ಡೋಪಿಂಗ್ ಪರೀಕ್ಷೆಯಲ್ಲಿ ಫೈಲ್ ಆಗಿದ್ದು, ಅವರು ಸ್ಪರ್ಧೆಗು ಮುಂಚೆ ಯಾವುದಾದರು ಔಷಧಿಯನ್ನು ತೆಗೆದುಕೊಂಡಿದ್ದಾರಾ ಎಂದು ತಿಳಿಯಲು ಎರಡನೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

    ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49 ಕೆ.ಜಿ ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ 26 ವರ್ಷದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದರು. ಈ ಮೂಲಕ ಯಶಸ್ವಿಯಾಗಿ ತನ್ನ ಸ್ಪರ್ಧೆ ಮುಗಿಸಿರುವ ಮೀರಾಬಾಯಿ ಚಾನು ಇಂದು ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರು ಬರುತ್ತಿದ್ದಂತೆ ದೇಶದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಇದನ್ನೂ ಓದಿ: ಬೆಳ್ಳಿ ಪದಕ ಗೆದ್ದ ಮೀರಾಬಾಯಿಗೆ ಡೊಮಿನೊಸ್ ಕಡೆಯಿಂದ ಜೀವನ ಪೂರ್ತಿ ಪಿಜ್ಜಾ

    49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿ ಕೊಟ್ಟ ಕೀರ್ತಿಗೆ ಭಾಜನರಾಗಿದ್ದಾರೆ. 84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತಿದ ಮಿರಾಬಾಯ್ ಚಾನು 89 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಆದರೆ ಚೀನಾದ ಸ್ಪರ್ಧಿ ಜಿಹೂಹು 94 ಕೆಜಿ ಭಾರ ಎತ್ತಿ ಒಲಿಂಪಿಕ್ ದಾಖಲೆ ಬರೆದರು. ಇದು ಒಲಿಂಪಿಕ್ಸ್‍ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದರು. 69 ಕೆಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಅವರು ಕಂಚಿನ ಪದಕ ಗಳಿಸಿದ್ದರು.

  • ನಾಳೆ ಭಾರತಕ್ಕೆ ಹಿಂದಿರುಗಲಿದ್ದಾರೆ ಮೀರಾಬಾಯಿ ಚಾನು

    ನಾಳೆ ಭಾರತಕ್ಕೆ ಹಿಂದಿರುಗಲಿದ್ದಾರೆ ಮೀರಾಬಾಯಿ ಚಾನು

    ಟೋಕಿಯೋ: ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದು ಕೊಟ್ಟ ವೇಟ್‍ಲಿಫ್ಟರ್ ಮೀರಾಬಾಯಿ ಚಾನು ಜುಲೈ 26ಕ್ಕೆ ಭಾರತಕ್ಕೆ ಹಿಂದಿರುಗಲಿದ್ದಾರೆ.

    ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49 ಕೆ.ಜಿ ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ 26 ವರ್ಷದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದರು. ಈ ಮೂಲಕ ಯಶಸ್ವಿಯಾಗಿ ತನ್ನ ಸ್ಪರ್ಧೆ ಮುಗಿಸಿರುವ ಮೀರಾಬಾಯಿ ಚಾನು ನಾಳೆ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ ವೇಳೆಗೆ ಬಂದಿಳಿಯಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬೆಳ್ಳಿ ಪದಕ ಗೆದ್ದ ಮೀರಾಬಾಯಿಗೆ ಡೊಮಿನೊಸ್ ಕಡೆಯಿಂದ ಜೀವನ ಪೂರ್ತಿ ಪಿಜ್ಜಾ

    49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿ ಕೊಟ್ಟ ಕೀರ್ತಿಗೆ ಭಾಜನರಾಗಿದ್ದಾರೆ. ಚೀನಾದ ಹೊ ಜಿಹೂಹು ಒಟ್ಟು 210 ಕೆಜಿ (94+116 ಕೆಜಿ) ಭಾರ ಎತ್ತಿ ಚಿನ್ನದ ಪದಕ ಬೇಟೆಯಾಡಿದರೆ, ಮೀರಾಬಾಯಿ ಚಾನು 202 ಕೆಜಿ (87+115 ಕೆಜಿ) ಭಾರ ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇಂಡೋನೇಷ್ಯಾದ ಐಸಾಹ್ ವಿಂಡಿ ಕಾಂಟಿಕಾ ವಿಂಡಿ 194 ಕೆಜಿ (84+110ಕೆಜಿ) ಕಂಚಿನ ಪದಕ ಪಡೆದರು.

    84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತಿದ ಮಿರಾಬಾಯ್ ಚಾನು 89 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಆದರೆ ಚೀನಾದ ಸ್ಪರ್ಧಿ ಜಿಹೂಹು 94 ಕೆಜಿ ಭಾರ ಎತ್ತಿ ಒಲಿಂಪಿಕ್ ದಾಖಲೆ ಬರೆದರು. ಇದು ಒಲಿಂಪಿಕ್ಸ್‍ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದರು. 69 ಕೆಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಅವರು ಕಂಚಿನ ಪದಕ ಗಳಿಸಿದ್ದರು.