Tag: ಪದಕ

  • ಮುಂದುವರಿದ ಕಂಬಳದ ಉಸೇನ್ ಬೋಲ್ಟ್ ಪದಕದ ಬೇಟೆ

    ಮುಂದುವರಿದ ಕಂಬಳದ ಉಸೇನ್ ಬೋಲ್ಟ್ ಪದಕದ ಬೇಟೆ

    ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಪದಕಗಳ ಸರದಾರ ಶ್ರೀನಿವಾಸ್‍ಗೌಡ ಅವರ ಕಂಬಳದ ಓಟದಲ್ಲಿ ಪದಕದ ಬೇಟೆ ಮುಂದುವರಿದಿದೆ.

    ಕಾಸರಗೋಡು ಜಿಲ್ಲೆಯ ಪೈವಳಿಕೆಯಲ್ಲಿ ಎರಡು ದಿನಗಳ ಕಾಲ ನಡೆದ ಹೊನಲು ಬೆಳಕಿನ ಅಣ್ಣ-ತಮ್ಮ ಜೋಡುಕೆರೆ ಕಂಬಳದಲ್ಲಿ ಮತ್ತೆ ನಾಲ್ಕು ಪದಕವನ್ನು ಶ್ರೀನಿವಾಸ್ ಗೌಡ ಗಳಿಸಿದ್ದಾರೆ. ಈ ಮೂಲಕ ಹಿಂದಿನ ಎಲ್ಲಾ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

    ಹಗ್ಗ ಕಿರಿಯ, ನೇಗಿಲು ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ, ನೇಗಿಲು ಹಿರಿಯ, ಹಗ್ಗ ಹಿರಿಯ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಮತ್ತೆ ಕಂಬಳದಲ್ಲಿ ಕಮಾಲ್ ಮಾಡಿದ್ದಾರೆ. ಅವರ ದಾಖಲೆಯನ್ನು ಇಂದು ಮತ್ತೆ ಅವರೇ ಮುರಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ವರ್ಷದ 13ನೇ ಕಂಬಳ ಇದಾಗಿದ್ದು, ಈವರೆಗಿನ 13 ಕಂಬಳದಲ್ಲಿ 30 ಚಿನ್ನ ಹಾಗೂ 5 ಬೆಳ್ಳಿ ಪದಕ ಸಹಿತ ಒಟ್ಟು 35 ಪದಕಗಳನ್ನು ಪಡೆದ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಶ್ರೀನಿವಾಸ ಗೌಡ ಮುರಿದಿದ್ದಾರೆ.

  • 62 ಲಕ್ಷ  ಫೋನ್‍ಗಳಿಂದ ಒಲಿಂಪಿಕ್ಸ್ ಪದಕ ತಯಾರಿ

    62 ಲಕ್ಷ ಫೋನ್‍ಗಳಿಂದ ಒಲಿಂಪಿಕ್ಸ್ ಪದಕ ತಯಾರಿ

    ಟೋಕಿಯೋ: ಮುಂದಿನ ವರ್ಷ ಜಪಾನಿನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಪರಿಸರ ಸ್ನೇಹಿ ಪದಕಗಳನ್ನು ಅನಾವರಣಗೊಳಿಸಲಾಗಿದೆ. 1976ರಲ್ಲಿ ಒಲಿಂಪಿಕ್ ಕೂಟದ  ಕತ್ತಿವರಸೆ(ಫೆನ್ಸಿಂಗ್​) ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದ ಜರ್ಮನಿಯ ಕ್ರೀಡಾಪಟು ಹಾಗೂ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷ ಥಾಮಸ್ ಬಚ್ ಪದಕಗಳನ್ನು ಅನಾವರಣಗೊಳಿಸಿದರು.

    ಎಲೆಕ್ಟ್ರಾನಿಕ್ಸ್ ತ್ಯಾಜ್ಯಗಳನ್ನು ಬಳಸಿ ಪದಕಗಳನ್ನು ತಯಾರಿಸಿದ್ದು ಟೋಕಿಯೋ ಒಲಿಂಪಿಕ್ಸ್  ವಿಶೇಷತೆಗಳಲ್ಲಿ ಒಂದು. 1 ವರ್ಷದ ಮೊದಲೇ ಪಂದ್ಯದ ಆಯೋಜಕರ ಸಮಿತಿ ಪದಕಗಳ ವಿನ್ಯಾಸವನ್ನು ಬಿಡುಗಡೆಗೊಳಿಸಿತ್ತು. ಅದೇ ವಿನ್ಯಾಸದಲ್ಲಿ ಪದಕಗಳನ್ನು 62 ಲಕ್ಷದ  ಹಳೆಯ ಎಲೆಕ್ಟ್ರಾನಿಕ್ಸ್ ವಸ್ತುಗಳಿಂದ (ಮೊಬೈಲ್ ಮತ್ತು ಟ್ಯಾಬ್ಲೆಟ್ಸ್) ತಯಾರಿಸಲಾಗಿದೆ.

    2017 ಏಪ್ರಿಲ್ ನಲ್ಲಿ ಟೋಕಿಯೋ ಒಲಿಂಪಿಕ್ ಆಯೋಜಕ ಸಮಿತಿ ಹಳೆಯ ಇಲೆಕ್ಟ್ರಾನಿಕ್ ಉತ್ಪನ್ನಗಳ ಸಂಗ್ರಹಣೆಯ ಅಭಿಯಾನವನ್ನು ಆರಂಭಿಸಿತ್ತು. ಈ ವಿಶೇಷ ಅಭಿಯಾನದಲ್ಲಿ ಸಮಿತಿಗೆ 78,895 ಟನ್ ಹಳೆಯ ಎಲೆಕ್ಟ್ರಾನಿಕ್ಸ್ ತ್ಯಾಜ್ಯಗಳು  ಸಿಕ್ಕಿತ್ತು. ಇವುಗಳಲ್ಲಿ 62.1 ಲಕ್ಷ ಮೊಬೈಲ್ ಫೋನ್ ಒಳಗೊಂಡಿದ್ದವು. ವಿಶೇಷ ಅಭಿಯಾನದಲ್ಲಿ ಲಭ್ಯವಾದ ಲೋಹಗಳಿಂದಲೇ ಒಲಿಂಪಿಕ್ ಪಂದ್ಯದಲ್ಲಿ ವಿಜೇತರಿಗೆ ನೀಡಲಾಗುವ ಪದಕಗಳ ತಯಾರಿಕೆಗೆ ಸಮಿತಿ ಸೂಚಿಸಿತ್ತು.

    ಈ ಹಳೆಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳಲ್ಲಿ 32 ಕೆಜಿ ಬಂಗಾರ, 3,500 ಕೆಜಿ ಬೆಳ್ಳಿ ಮತ್ತು 2,200 ಕೆಜಿ ಕಂಚು ಲಭ್ಯವಾಗಿತ್ತು. ಶುದ್ಧ ಬೆಳ್ಳಿಗೆ 6 ಗ್ರಾಂಗಿಂತ ಹೆಚ್ಚಿನ ಚಿನ್ನದ ಲೇಪನವನ್ನು ಬಳಸಿ ಚಿನ್ನದ ಪದಕವನ್ನು ತಯಾರಿಸಲಾಗಿದ್ದರೆ, ಬೆಳ್ಳಿ ಪದಕವನ್ನು ಶುದ್ಧ ಬೆಳ್ಳಿಯಿಂದ ತಯಾರಿಸಲಾಗಿದೆ. ಶೇ.95ರಷ್ಟು ತಾಮ್ರ ಹಾಗೂ ಶೇ.5ರಷ್ಟು ಸತುವನ್ನು ಬಳಸಿ ಕಂಚಿನ ಪದಕ ತಯಾರಿಸಲಾಗಿದೆ.

    ಪದಕದ ವಿನ್ಯಾಸ:
    ಅಂತರರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ(ಐಒಸಿ) ನಿಯಮಾವಳಿಯಲ್ಲಿ ಇರುವಂತೆ ಪದಕದ ಮುಂಭಾಗದಲ್ಲಿ ಒಲಿಂಪಿಕ್ ಲಾಂಛನವಾದ ಐದು ರಿಂಗ್​ಗಳು, ಗೇಮ್ಸ್​ನ ಅಧಿಕೃತ ಹೆಸರು ಹಾಗೂ ಪಂಥಾನಿಯಕ್ ಸ್ಟೇಡಿಯಂನ ಮುಂಭಾಗದಲ್ಲಿರುವ ಗ್ರೀಕ್ ವಿಜಯ ದೇವತೆ, ಪದಕದ ಹಿಂಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್​ನ ಲಾಂಛನವಿದೆ. ಹೊಸ ವಿನ್ಯಾಸಕ್ಕಾಗಿ ಕರೆದ ಸ್ಪರ್ಧೆಯಲ್ಲಿ 400 ವೃತ್ತಿಪರರು ಮತ್ತು ವಿದ್ಯಾರ್ಥಿಗಳು ಹೊಸ ಹೊಸ ಡಿಸೈನ್ ಸಮಿತಿಗೆ ನೀಡಿದ್ದರು. ಇವುಗಳಲ್ಲಿ ಜುನಿಚಿ ಕಾವಾನಿಶಿ ಅವರ ವಿನ್ಯಾಸವನ್ನು ಪಂದ್ಯದ ಆಯೋಜಕ ಸಮಿತಿ ಅಂತಿಮಗೊಳಿಸಿದೆ.

     85 ಎಂಎಂ ಸುತ್ತಳತೆಯಲ್ಲಿರುವ ಪದಕದ ಅತ್ಯಂತ ತೆಳವಾದ ಭಾಗ 7.7ಎಂಎಂ ಇದ್ದು, ಗರಿಷ್ಠ ದಪ್ಪ 12.1 ಎಂಎಂ ಇದೆ. ಬ್ರೆಜಿಲ್ ದೇಶದ ರಿಯೋ ಡಿ ಜನೈರೋದಲ್ಲಿ ಕಳೆದ ಬಾರಿ ನಡೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲೂ  ಮರು ಬಳಕೆಯಾದ ಲೋಹವನ್ನು ಬಳಸಿ ಪದಕಗಳನ್ನು ತಯಾರಿಸಲಾಗಿತ್ತು. ಟೋಕಿಯೋ ಒಲಿಂಪಿಕ್ ಕ್ರೀಡಾಕೂಟ 2020ರ ಜುಲೈ 24 ರಿಂದ ಆರಂಭವಾಗಿ ಆಗಸ್ಟ್ 9 ರವರೆಗೆ ನಡೆಯಲಿವೆ.

  • ಕೆಸರು ಗದ್ದೆಯ ಉಸೇನ್ ಬೋಲ್ಟ್ ಇನ್ನಿಲ್ಲ – `ರಾಕೆಟ್ ಮೋಡ’ ಕಂಬಳದ ಕೋಣ ನೆನಪು ಮಾತ್ರ

    ಕೆಸರು ಗದ್ದೆಯ ಉಸೇನ್ ಬೋಲ್ಟ್ ಇನ್ನಿಲ್ಲ – `ರಾಕೆಟ್ ಮೋಡ’ ಕಂಬಳದ ಕೋಣ ನೆನಪು ಮಾತ್ರ

    ಉಡುಪಿ: ವೀರ ಜಾನಪದ ಕ್ರೀಡೆ ಕಂಬಳ ಕ್ಷೇತ್ರದಲ್ಲಿ ಪದಕಗಳ ಮೇಲೆ ಪದಕ ಬಾಚಿ ಸಾಧನೆ ಮಾಡಿದ್ದ `ರಾಕೆಟ್ ಮೋಡ’ ಹೆಸರಿನ ಕಂಬಳದ ಕೋಣ ಮೃತಪಟ್ಟಿದ್ದು, ಕರಾವಳಿಯ ಕಂಬಳಪ್ರಿಯರಿಗೆ ದುಃಖ ತಂದಿದೆ.

    ಕಂಬಳ ಕ್ಷೇತ್ರದಲ್ಲಿ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ನೂರಾರು ಬಹುಮಾನಗಳನ್ನು ಗೆದ್ದ ಹೆಗ್ಗಳಿಕೆ ರಾಕೆಟ್ ಮೋಡ ಕೋಣದ್ದಾಗಿತ್ತು. ಮೂರು ಮನೆತನದ ಪರವಾಗಿ ಓಡಿದ್ದ ಮೋಡ ಕಡೆಯದಾಗಿ ನಂದಳಿಕೆ ಶ್ರೀಕಾಂತ ಭಟ್ಟರ ಕೊಟ್ಟಿಗೆಯ ಅರಸನಾಗಿತ್ತು. ಆತನ ಸ್ಪೀಡ್ ರಾಕೆಟ್ ಗಿಂತ ತುಸು ಹೆಚ್ಚಾಗಿದ್ದು, ಜಿದ್ದಿಗೆ ಬಿದ್ದು ಜಿಗಿಯಲು ಶುರು ಮಾಡಿದರೆ ಎದುರಾಳಿ ಸೋಲು ಖಚಿತವಾಗಿತ್ತು.

    ಎಣ್ಣೆ ಹಚ್ಚಿಸಿಕೊಂಡು, ಬಿಸಿನೀರು ಸ್ನಾನ ಮಾಡಿ ನೊಗ ಕಟ್ಟಿ ಕೆಸರು ಗದ್ದೆಗೆ ಇಳಿದರೆ `ಕುಟ್ಟಿ’ ಮತ್ತು `ಮೋಡ’ನೇ ಆ ಕೂಟಕ್ಕೆ ರಾಜರು. ಕಂಬಳ ಗದ್ದೆಯಲ್ಲಿ ಇವರಿಬ್ಬರ ಜೋಡಿಯನ್ನು ಕಳೆದ 15 ವರ್ಷದಲ್ಲೇ ಸೋಲಿಸಿರಲಿಲ್ಲ. ಕಂಬಳಪ್ರಿಯರು ಈ ಕೋಣದ ಹೆಸರಿನಲ್ಲಿ ಅಳುಕಿಲ್ಲದೆ ಬಾಜಿ ಕಟ್ಟುತ್ತಿದ್ದರು. ಇಂತಹ ಕೋಣ ಸದ್ಯ ಇಹಲೋಹದ ಓಟ ಮುಗಿಸಿ ಎಲ್ಲರ ಕಣ್ಣು ತೇವ ಮಾಡಿಸಿದ್ದಾನೆ.

    ಕಂಬಳದಲ್ಲಿ ಎಂದು ಕಂಬಳ ಪ್ರಿಯರಿಗೆ ನಿರಾಸೆ ಮಾಡಿಸದ ಈತ ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್, ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ ಹಾಗೂ ನಂದಳಿಕೆ ಶ್ರೀಕಾಂತ್ ಭಟ್ ಆರೈಕೆಯಲ್ಲಿತ್ತು. ರಾಜ್ಯದ ಜನರಿಗೆ ಕಂಬಳ ಎಂಬುದು ಕೇವಲ ಕೋಣಗಳ ಓಟದ ಅಖಾಡ ಆಗಿರಬಹುದು. ಆದರೆ ಕರಾವಳಿಯ ಜನರಿಗೆ ಕಂಬಳ ಎನ್ನುವುದು ಮನುಷ್ಯ ಮತ್ತು ಕೋಣಗಳ ನಡುವೆ ಸಂಬಂಧವಿದೆ. ಅತ್ಯಂತ ಪ್ರೀತಿ ಮತ್ತು ಕಾಳಜಿಯಿಂದ ವರ್ಷಕ್ಕೆ ಲಕ್ಷಾಂತರ ರುಪಾಯಿ ಖರ್ಚು ಮಾಡಿ ಕಾಳಜಿ ಮಾಡಿದ್ದ ಕೋಣವನ್ನು ಕಳೆದುಕೊಂಡ ಶ್ರೀಕಾಂತ್ ಭಟ್ ಕುಟುಂಬ ಮತ್ತು ಕಂಬಳಾಭಿಮಾನಿಗಳು ಬಹಳ ನೋವಿನಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv 

  • ದುಬೈನಲ್ಲಿ ನಡೆದ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನ ಗೆದ್ದ ಬೆಂಗ್ಳೂರು ಹುಡುಗಿ

    ದುಬೈನಲ್ಲಿ ನಡೆದ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನ ಗೆದ್ದ ಬೆಂಗ್ಳೂರು ಹುಡುಗಿ

    ಬೆಂಗಳೂರು: ದುಬೈನಲ್ಲಿ ನಡೆಯುತ್ತಿರುವ ಏಷ್ಯನ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ನಲ್ಲಿ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹುಡುಗಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಪತಾಕೆಯನ್ನು ಹಾರಿಸಿದ್ದಾರೆ.

    ಆನೇಕಲ್ ತಾಲೂಕಿನ ತಮಿಳುನಾಡಿನ ಗಡಿಗೆ ಹೊಂದಿಕೊಂಡಿರುವ ಸೋಲೂರೂ ಗ್ರಾಮದ ನಿವಾಸಿಗಳಾದ ಗುರುಮೂರ್ತಿ ಮತ್ತು ವನಜಾಕ್ಷಿ ದಂಪತಿಯ ಪುತ್ರಿ ಶಾಲಿನಿ ಚಿನ್ನ ಗೆದ್ದ ಹುಡುಗಿ. ದುಬೈನಲ್ಲಿ ನಡೆಯುತ್ತಿರುವ ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿರುವ ಶಾಲಿನಿ ಬುಧವಾರ ನಡೆದ 63 ಕೆಜಿ ವಿಭಾಗದ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ನಲ್ಲಿ ಮೊದಲ ಸ್ಥಾನಗಳಿಸಿ ಶಾಲಿನಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

    ಮಗಳು ಚಿನ್ನದ ಪದಕ ಗೆಲ್ಲುತ್ತಿದ್ದಂತೆ ಪೋಷಕರ ಹರ್ಷ ಮುಗಿಲು ಮುಟ್ಟಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ತುಂಬಿಕೊಂಡಿದೆ. ಶಾಲಿನಿ ತಂದೆ ತಾಯಿ ಹಾಗೂ ಸಹೋದರ ಪರಸ್ಪರ ಸಿಹಿ ತಿನಿಸುವ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ. ಶಾಲಿನಿ ವಿಡಿಯೋ ಕಾಲ್ ಮಾಡುವ ಮೂಲಕ ಪೋಷಕರೊಂದಿಗೆ ಹರ್ಷ ಹಂಚಿಕೊಂಡು ತನ್ನ ಸಾಧನೆಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

    ಬಡತನದಲ್ಲಿ ಬೆಳೆದಿದ್ದ ಶಾಲಿನಿಯ ಪ್ರತಿಭೆಯನ್ನು ಗುರುತಿಸಿ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಈಕೆಗೆ ಉಚಿತ ಶಿಕ್ಷಣ ಮತ್ತು ತರಬೇತಿ ನೀಡುತ್ತಿತ್ತು. ಇದೇ ಸಂದರ್ಭದಲ್ಲಿ ಶಾಲಿನಿ ತಂದೆ ಮಾತನಾಡಿ, ಶಾಲಿನಿಯ ಸಾಧನೆಯಿಂದ ತನ್ನ ಜನ್ಮ ಸಾರ್ಥಕವಾಗಿದೆ ಎಂದು ಆಕೆಯ ಬೆಳವಣಿಗೆಗೆ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ಅರ್ಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಪೊಲೀಸ್ ಪದಕ ವಿತರಣೆಯಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯ!

    ಪೊಲೀಸ್ ಪದಕ ವಿತರಣೆಯಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯ!

    – ಮೈಸೂರು ಭಾಗದತ್ತ ಹೆಚ್ಚು ಒಲವು

    ಬೆಂಗಳೂರು: ಬಜೆಟ್‍ನಲ್ಲಿ ಉತ್ತರ ಕರ್ನಾಟಕ ಕಡೆಗಣಿಸಿದ್ದ ಸರ್ಕಾರ ಈಗ ಮತ್ತೆ ಅನ್ಯಾಯ ಮಾಡಲು ಹೊರಟಿದೆ. 2017ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡುವಲ್ಲಿಯೂ ತಾರತಮ್ಯ ಮಾಡಿದೆ.

    ಮುಖ್ಯಮಂತ್ರಿ ಪದಕ ನೀಡಿಕೆಯಲ್ಲಿ ಉತ್ತರ ಕರ್ನಾಟಕವನ್ನ ಕಡೆಣಿಸಿರುವ ಸಮ್ಮಿಶ್ರ ಸರ್ಕಾರ ಬೆಂಗಳೂರು, ಮೈಸೂರು ಭಾಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಬೆರಳೆಣಿಕೆಯಷ್ಟು ಪದಕ ನೀಡಿದ್ದು, ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಹೆಚ್ಚಿನ ಪದಕ ನೀಡಲಾಗಿದೆ. ಇದನ್ನೂ ಓದಿ: ಇದು ಫೈನಲ್ ಬಜೆಟಲ್ಲ, ಸಪ್ಲಿಮೆಂಟರಿಯಲ್ಲಿ ಉ.ಕ.ಕ್ಕೆ ನ್ಯಾಯ ಒದಗಿಸೋಣ- ಸಚಿವ ಶಿವಶಂಕರ್ ರೆಡ್ಡಿ

    2017ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆಯಲ್ಲಿ ಅನ್ಯಾಯ ಮಾಡಲಾಗಿದ್ದು, 122 ಜನ ಪೊಲೀಸರಿಗೆ ನೀಡಿರುವ ಮುಖ್ಯಮಂತ್ರಿ ಪದಕದಲ್ಲಿ ಬೆಂಗಳೂರು ಪೊಲೀಸರಿಗೆ ಹೆಚ್ಚಿನ ಪದಕಗಳನ್ನು ನೀಡಲಾಗಿದೆ. 10 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಕೇವಲ ಒಂದು ಪದಕವನ್ನು ನೀಡಲಾಗಿದೆ. ಬೆಂಗಳೂರು – 57, ಮೈಸೂರು – 12, ಶಿವಮೊಗ್ಗ – 6, ಉತ್ತರ ಕರ್ನಾಟಕದ 13 ಜಿಲ್ಲೆಗಳಿಗೆ – 20 ಆಗಿದ್ದು, ಇನ್ನು ಹಾಸನ, ಕೊಡಗು, ಮಂಡ್ಯ, ರಾಮನಗರ, ಮಂಗಳೂರು – 11 ಪದಕಗಳನ್ನು ನೀಡಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕ ಪೊಲೀಸರು ಕೆಲಸ ಮಾಡೋಲ್ವಾ..? ಮುಖ್ಯಮಂತ್ರಿ ಪದಕದಲ್ಲೂ ಲಾಬಿ ನಡೆದಿದ್ಯಾ..? ಅನ್ನೋ ಅನುಮಾನ ಗೃಹ ಇಲಾಖೆ ಮೇಲೆ ಮೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=zBoDEsic00o

  • ಏಷ್ಯನ್ ಗೇಮ್ಸ್ – ಭಾರತಕ್ಕೆ ಮೊದಲ ಪದಕ ತಂದ ಶೂಟರ್ಸ್

    ಏಷ್ಯನ್ ಗೇಮ್ಸ್ – ಭಾರತಕ್ಕೆ ಮೊದಲ ಪದಕ ತಂದ ಶೂಟರ್ಸ್

    ಜರ್ಕಾತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಖಾತೆ ತೆರೆದಿದ್ದು, ಶೂಟರ್ ಅಪೂರ್ವಿ ಚಾಂಡೇಲಾ, ರವಿ ಕುಮಾರ್ ಕಂಚಿನ ಪದಕ ಗಳಿಸಿದ್ದಾರೆ.

    ಮಿಶ್ರ ಶೂಟಿಂಗ್ ವಿಭಾಗದ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಭಾಗವಹಿಸಿದ್ದ ಅಪೂರ್ವಿ ಚಾಂಡೇಲಾ, ರವಿ ಕುಮಾರ್ ಜೋಡಿ ಕಂಚಿನ ಪದಕ ಜಯಿಸಿದೆ. ಇಬ್ಬರ ಜೋಡಿ 429.9 ಅಂಕ ಗಳಿಸುವ ಮೂಲಕ ಮೂರನೇ ಸ್ಥಾನ ಪಡೆದು ಫೈನಲ್ ತಲುಪಲು ವಿಫಲವಾದರು. ಉಳಿದಂತೆ ಸ್ಪರ್ಧೆಯಲ್ಲಿ 494 ಅಂಕ ಪಡೆದ ಚೀನಾ-ತೈಪೆ ತಂಡ ಮೊದಲ ಸ್ಥಾನ ಪಡೆಯಿತು.

    ಪಟ್ಟಿಯಲ್ಲಿ ದಕ್ಷಿಣ ಕೊರಿಯಾ ಪ್ರಥಮ ಸ್ಥಾನದಲ್ಲಿದ್ದರೆ, ಚೀನಾ ದ್ವಿತೀಯ ಸ್ಥಾನದಲ್ಲಿದ್ದು ಭಾರತ 9ನೇ ಸ್ಥಾನದಲ್ಲಿದೆ. ಉಳಿದಂತೆ ಇಂದು ಭಾರತ ಮಹಿಳಾ ಹಾಕಿ ತಂಡ ಇಂಡೋನೇಷ್ಯಾ ತಂಡವನ್ನು ಎದುರಿಸಲಿದ್ದು, ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಮನ್‍ವೆಲ್ತ್ ಗೇಮ್ಸ್ ಪದಕ ವಿಜೇತೆ ಅಶ್ವಿನಿ ಪೊನ್ನಪ್ಪಗೆ ಡಿಸಿಎಂ ಪರಮೇಶ್ವರ್ ಸನ್ಮಾನ

    ಕಾಮನ್‍ವೆಲ್ತ್ ಗೇಮ್ಸ್ ಪದಕ ವಿಜೇತೆ ಅಶ್ವಿನಿ ಪೊನ್ನಪ್ಪಗೆ ಡಿಸಿಎಂ ಪರಮೇಶ್ವರ್ ಸನ್ಮಾನ

    ಬೆಂಗಳೂರು: ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಬ್ಯಾಡ್ಮಿಟನ್ ತಾರೆ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೆ ಡಿಸಿಎಂ ಪರಮೇಶ್ವರ್ ಸನ್ಮಾನ ಮಾಡಿ ಗೌರವಿಸಿದ್ದಾರೆ.

    ವಿಧಾನಸೌಧದ ಕಚೇರಿಯಲ್ಲಿ ಅಶ್ವಿನಿ ಪೊನ್ನಪ್ಪಗೆ ಶಾಲು ಪೇಟ ತೊಡಿಸಿ ಸನ್ಮಾನಿಸಿದ್ದಾರೆ. ಅಶ್ವಿನಿ ಚಿನ್ನ ಹಾಗೂ ಕಂಚಿನ ಪದಕ ಗೆದ್ದಿದ್ದಕ್ಕೆ ಸರ್ಕಾರ 25 ಲಕ್ಷ ರೂ. ಹಾಗೂ 8 ಲಕ್ಷ ರೂ. ನೀಡಿ ಗೌರವಿಸಿದೆ. ಪರಮೇಶ್ವರ್ ಜೊತೆ ಕರ್ನಾಟಕ ಒಲಿಂಪಿಕ್ ಅಧ್ಯಕ್ಷ ಗೋವಿಂದ್ ರಾಜ್ ಕೂಡ ಭಾಗಿಯಾಗಿದ್ದರು.

    ಅಶ್ವಿನಿ ಪೊನ್ನಪ್ಪ ಕಾಮನ್‍ವೆಲ್ತ್ ಗೇಮ್ ನಲ್ಲಿ ಚಿನ್ನ ಹಾಗೂ ಕಂಚಿನ ಪದಕ ಪಡೆದಿದ್ದಾರೆ. ಸರ್ಕಾರ ಅವರಿಗೆ ಒಟ್ಟು 33 ಲಕ್ಷ ರೂ. ಪುರಸ್ಕಾರ ನೀಡಿದೆ. ಅವರ ಸಾಧನೆ ಇನ್ನಷ್ಟು ಬೆಳೆಯಲಿ. ರಾಜ್ಯಕ್ಕೆ ತಂದಿರುವ ಗೌರವಕ್ಕೆ ಅವರಿಗೆ ಈ ಪುರಸ್ಕಾರ ನೀಡಲಾಗಿದೆ. ಮುಂದಿನ ಪಂದ್ಯಗಳಲ್ಲಿ ಚಿನ್ನದ ಪದಕ ಪಡೆಯಲಿ ಎಂದು ಪರಮೇಶ್ವರ್ ಹೇಳಿದರು.

    ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದವರಿಗೆ ಗೆದ್ದವರಿಗೆ 5 ಕೋಟಿ ರೂ. ಪುರಸ್ಕಾರ ಘೋಷಣೆ ಮಾಡಲಾಗಿದೆ. ಬೆಳ್ಳಿಗೆ 3 ಕೋಟಿ ರೂ. ಹಾಗೂ ಕಂಚಿಗೆ 2 ಕೋಟಿ ರೂ. ನೀಡಲು ಸರ್ಕಾರ ನಿರ್ಧಾರ ಮಾಡಲಾಗಿದೆ. ಅಶ್ವಿನಿ ಪೊನ್ನಪ್ಪ ಒಲಂಪಿಕ್ಸ್ ನಲ್ಲಿ ಪದಕ ಪಡೆಯಲಿ ಎಂದು ಡಿಸಿಎಂ ಪರಮೇಶ್ವರ್ ಹಾರೈಸಿದರು.

  • 60 ಪ್ರಯಾಣಿಕರ ಪ್ರಾಣ ಉಳಿಸಿದ್ದ ಚಾಲಕನಿಗೆ ಸಿಕ್ತು ಚಿನ್ನದ ಪದಕ!

    60 ಪ್ರಯಾಣಿಕರ ಪ್ರಾಣ ಉಳಿಸಿದ್ದ ಚಾಲಕನಿಗೆ ಸಿಕ್ತು ಚಿನ್ನದ ಪದಕ!

    ಚಾಮರಾಜನಗರ: ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರಪಾತಕ್ಕೆ ಬೀಳಬೇಕಾಗಿದ್ದ ಬಸ್ ಮತ್ತು ಅದರಲ್ಲಿದ್ದ 60 ಮಂದಿ ಪ್ರಯಾಣಿಕರ ಪ್ರಾಣ ಉಳಿಸಿದ್ದ ಚಾಲಕನಿಗೆ ಚಿನ್ನದ ಪದಕ ಸಿಕ್ಕಿದೆ.

    ಅಕ್ಟೋಬರ್ 8 ರಂದು ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಹಾದಿಯಲ್ಲಿ ಈ ಘಟನೆ ನಡೆದಿತ್ತು. ಅಂದು ಚಾಲಕ ಚಿನ್ನಸ್ವಾಮಿ ಅವರ ಸಮಯ ಪ್ರಜ್ಞೆಯಿಂದ 60 ಪ್ರಯಾಣಿಕರ ಪ್ರಾಣ ಉಳಿಸಿದ್ದರು. ಆದ್ದರಿಂದ ಮಂಗಳವಾರ ಅವರಿಗೆ ಕೆಎಸ್‍ಆರ್‍ಟಿಸಿ ಇಲಾಖೆ ಚಿನ್ನದ ಪದಕವನ್ನು ನೀಡಿದೆ.

    ಇಲಾಖೆಯ ನಿಯಮದ ಪ್ರಕಾರ, ಗ್ರಾಮೀಣ ಪ್ರದೇಶದಲ್ಲಿ 15 ವರ್ಷ ಹಾಗೂ ನಗರ ಪ್ರದೇಶದಲ್ಲಿ 5 ವರ್ಷ ಯಾವುದೇ ಅಪಾಯ ಸಂಭವಿಸಿದೆ ಬಸ್ ಚಲಾಯಿಸಿದ್ದರೆ ಮಾತ್ರ ಅಂತಹವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಆದರೆ ಚಿನ್ನಸ್ವಾಮಿ ಕೇವಲ 5 ವರ್ಷ ಚಾಲಕರಾಗಿ ಕಾರ್ಯನಿರ್ವಹಿಸಿದ್ದರು. ಆದರೆ 60 ಜನರ ಪ್ರಾಣ ಉಳಿಸಿದ್ದರಿಂದ ಅವರ ಸಾಧನೆಯನ್ನು ಗುರುತಿಸಿ ಈಗ ಚಿನ್ನದ ಪದಕವನ್ನು ಕೊಟ್ಟು ಗೌರವಿಸಲಾಗಿದೆ.

    ನಾನು ಅಂದು ಬ್ರೇಕ್ ಫೇಲ್ ಆಗಿದ್ದಾಗ ಪ್ರಯಾಣಿಕರು ಭಯ ಪಡುತ್ತಾರೆ ಎಂದು ಹೇಳಿರಲಿಲ್ಲ. ನಾನೇ ಬಸ್ ನಿಲ್ಲಿಸಲು ನಿರ್ಧಾರ ಮಾಡಿ ನಿಧಾನವಾಗಿ ಬಸ್ ಚಲಾಯಿಸಿ ಹ್ಯಾಂಡ್‍ಬ್ರೇಕ್ ಹಾಕಿ ಕಬ್ಬಿಣದ ತಡೆಗೋಡೆಗೆ ತಂದು ನಿಲ್ಲಿಸಿದೆ. ಬಳಿಕ ಎಲ್ಲರನ್ನು ನಿಧಾನವಾಗಿ ಬಸ್‍ನಿಂದ ಕೆಳಗಿಳಿಸಿದೆ ಎಂದು ಚಾಲಕ ಚಿನ್ನಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

    ಇಲಾಖೆ ಈ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ ನನಗೆ ಚಿನ್ನದ ಪದಕ ನೀಡಿದೆ. ಇದರಿಂದ ನನಗೆ ತುಂಬಾ ಸಂತೋಷವಾಗಿದೆ. ನನ್ನ ಕೆಲಸವನ್ನು ಮುಂದುವರಿಸಲು ನನಗೆ ಪ್ರೋತ್ಸಾಹ ನೀಡಿದ್ದಾರೆ ಎಂದು ಅವರು ಹೇಳಿದರು.

    ನಡೆದಿದ್ದೇನು?
    ಅಕ್ಟೋಬರ್ 8 ರಂದು ಗುಂಡ್ಲುಪೇಟೆಯಿಂದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಜಾತ್ರೆಗಾಗಿ ಕೆಎಸ್‍ಆರ್ ಟಿಸಿ ಬಸ್ ತೆರಳುತಿತ್ತು. ಆದರೆ ಬೆಟ್ಟದಿಂದ ವಾಪಸ್ ಬರುವಾಗ ಬಸ್‍ನ ಬ್ರೇಕ್ ಫೇಲ್ ಆಗಿದ್ದರಿಂದ ಪ್ರಪಾತಕ್ಕೆ ಬೀಳುವ ಹಂತದಲ್ಲಿತ್ತು. ಆದರೆ ಈ ಸಂದರ್ಭದಲ್ಲಿ ಬಸ್ ಚಾಲಕ ಚಿನ್ನಸ್ವಾಮಿ ಸಮಯ ಪ್ರಜ್ಞೆಯಿಂದ ಬಸ್ಸನ್ನು ಯಾವುದೇ ರೀತಿಯಲ್ಲಿ ಅಪಾಯವಿಲ್ಲದಂತೆ ಕಬ್ಬಿಣದ ತಡೆಗೋಡೆಗೆ ತಂದು ನಿಲ್ಲಿಸಿ ಎಲ್ಲಾ ಪ್ರಯಾಣಿಕರ ಪ್ರಾಣ ಉಳಿಸಿದ್ದರು.

    ಚಿನ್ನಸ್ವಾಮಿ ಅವರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಕೆಟ್ಟ ರಸ್ತೆಯಿಂದಾಗಿ ಈ ಅಪಘಾತ ಸಂಭವಿಸಿದೆ. ದೊಡ್ಡ ಬಸ್ ಗಳು ಈ ರಸ್ತೆಯಲ್ಲಿ ಸಂಚರಿಸುವುದು ಕಷ್ಟ ಹೀಗಾಗಿ ಮುಂದೆ ಗುಂಡ್ಲುಪೇಟೆ ಮತ್ತು ಹಿಮವದ್ ಗೋಪಾಲಸ್ವಾಮಿ ಬೆಟ್ಟದ ನಡುವೆ ಕೇವಲ ಮಿನಿ ಬಸ್ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗುವುದು ಎಂದು ಕೆಎಸ್‍ಆರ್ ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.